ಡಿಬಾಸ್ ಹೀರೋಯಿನ್ ಆರಾಧನಾ ರಾಮ್ (Aradhanaa Ram) ಇದೀಗ ಹೊಸ ಫೋಟೋಶೂಟ್ನಲ್ಲಿ ಮಿಂಚಿದ್ದಾರೆ. ಬೋಲ್ಡ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ನೀಡಿದ್ದಾರೆ. ಆರಾಧನಾ ನಯಾ ಲುಕ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:2ನೇ ಮದುವೆ ಬಗ್ಗೆ ಮಾತಾಡಿದ ನಟಿ ಸಮಂತಾ

ಮಾಲಾಶ್ರೀ (Malashree) ಪುತ್ರಿ ಆರಾಧನಾ ರಾಮ್ ಅವರು ಕೆಂಪು ಬಣ್ಣದ ಮಾಡ್ರನ್ ಡ್ರೆಸ್ನಲ್ಲಿ ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಆರಾಧನಾ ಮಾದಕ ನೋಟಕ್ಕೆ ಪಡ್ಡೆಹುಡುಗರು ಫಿದಾ ಆಗಿದ್ದಾರೆ. ಡಿಬಾಸ್ (Darshan) ನಾಯಕಿ ಪಸಂದಾಗವ್ಳೆ ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡಿದ್ದಾರೆ.

ನಿರ್ಮಾಪಕ ರಾಮು- ಮಾಲಾಶ್ರೀ ದಂಪತಿ ಪುತ್ರಿ ಆರಾಧನಾ ರಾಮ್ ಅವರು ದರ್ಶನ್ಗೆ ನಾಯಕಿಯಾಗುವ ಮೂಲಕ ಸ್ಯಾಂಡಲ್ವುಡ್ಗೆ ಪರಿಚಯವಾಗುತ್ತಿದ್ದಾರೆ. ಸದ್ಯ ಕಾಟೇರ (Katera Film) ಚಿತ್ರದ ‘ಪಸಂದಾಗವ್ನೆ’ ಎಂಬ ಸಾಂಗ್ನಲ್ಲಿ ಆರಾಧನಾ ಸಖತ್ ಆಗಿ ಡಿಬಾಸ್ ಜೊತೆ ಹೆಜ್ಜೆ ಹಾಕಿದ್ದಾರೆ. ಚಿತ್ರದ ಟ್ರೈಲರ್ ಕೂಡ ಫ್ಯಾನ್ಸ್ ಮೆಚ್ಚುಗೆಗೆ ಪಾತ್ರವಾಗಿದೆ.
‘ಟಗರು ಪಲ್ಯ’ ಚಿತ್ರದ ಮೂಲಕ ಪ್ರೇಮ್ ಪುತ್ರಿ ಅಮೃತಾ ನಾಯಕಿಯಾಗಿ ನಟಿಸಿ ಗೆದ್ದರು. ಈಗ ಆರಾಧನಾ ರಾಮ್ ಕಾಟೇರ ಚಿತ್ರದ ಮೂಲಕ ನಾಯಕಿಯಾಗಿ ಗೆಲ್ಲುತ್ತಾರಾ? ಡಿ.29ಕ್ಕೆ ‘ಕಾಟೇರ’ ಸಿನಿಮಾ ರಿಲೀಸ್ ಆಗ್ತಿದೆ. ಅಂದು ಆರಾಧನಾ ಸಿನಿಮಾ ಭವಿಷ್ಯಕ್ಕೆ ಉತ್ತರ ಸಿಗಲಿದೆ.


ಎಲ್ಲರೂ ಯಾರನ್ನೋ ಮೆಚ್ಚಿಸೋಕೆ ಮಾತಾಡಿಲ್ಲ. ಪ್ರತಿಯೊಬ್ಬರು ಪ್ರೀತಿಯಿಂದ ಟೀಮ್ ವರ್ಕ್ನಿಂದ ಸಿನಿಮಾ ಮಾಡಿದ್ವಿ. ಈ ಥರ ಸ್ಟ್ರೈಟ್ ಸಬ್ಜೆಕ್ಟ್ ಮಾಡೋದೇ ರಿಸ್ಕ್ ಎಂದಿದ್ದಾರೆ. ಸಿನಿಮಾ ಬಗ್ಗೆ ನಮ್ಮ ನಿರ್ಮಾಪಕರಿಗೆ ಫ್ಯಾಷನ್ ಇದೆ. ಕಥೆ ಕೂಡಲೇ ಇಷ್ಟವಾಯ್ತು ಎಂದು ದರ್ಶನ್ ಮಾಹಿತಿ ಬಿಚ್ಚಿಟ್ಟರು. ಎಲ್ಲರಿಗೂ ಸಿನಿಮಾ ಮೇಲಿನ ಪ್ರೀತಿ ಇಲ್ಲಿಗೆ ಕರೆದುಕೊಂಡು ಬಂದಿದೆ. ಬೀರಾದಾರ್ ಸರ್ ಪಾತ್ರ ತುಂಬಾ ಚೆನ್ನಾಗಿದೆ ಎಂದು ದರ್ಶನ್ ಹೊಗಳಿದ್ದಾರೆ.


ತರುಣ್ ಸುಧೀರ್ ನಿರ್ದೇಶನದಲ್ಲಿ 70 ದಶಕದ ಕಥೆ ಮೂಡಿ ಬಂದಿದ್ದು, ದರ್ಶನ್ಗೆ ನಾಯಕಿಯಾಗಿ ಮಾಲಾಶ್ರೀ ಪುತ್ರಿ ಆರಾಧನಾ ರಾಮ್ ನಟಿಸಿದ್ದಾರೆ. ಸಿನಿಮಾ ರಿಲೀಸ್ ಮುನ್ನವೇ ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಚಿತ್ರದ ಬಗ್ಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:
ಒಂದು ಸಂತೋಷದ ಸುದ್ದಿ ಹಂಚಿಕೊಳ್ಳಲು ನಾವೆಲ್ಲರೂ ಇಂದು ಇಲ್ಲಿ ಸೇರಿದ್ದೀವಿ. ಡಿ.16ಕ್ಕೆ ‘ಕಾಟೇರ’ ಚಿತ್ರದ ಟ್ರೈಲರ್ ರಿಲೀಸ್ ಆಗ್ತಿದೆ. ಇದೇ ತಿಂಗಳು 29ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ನಿರ್ಮಾಪಕನಾಗಿ ಚಿತ್ರ ಹಿಟ್ ಆಗಬೇಕು ಅನ್ನೋ ಆಸೆಯೊಂದಿಗೆ ಚಿತ್ರ ಮಾಡಿದ್ದೇನೆ. ಸಾಕಷ್ಟು ಹಿರಿಯ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ.