Tag: ಕಾಡಾನೆ ದಾಳಿ

  • ಕಾಡಾನೆ ದಾಳಿ – ಮನೆ ಮೇಲೆ ತೆಂಗಿನ ಮರ ಬಿದ್ದು ಲಕ್ಷಾಂತರ ರೂ. ನಷ್ಟ

    ಕಾಡಾನೆ ದಾಳಿ – ಮನೆ ಮೇಲೆ ತೆಂಗಿನ ಮರ ಬಿದ್ದು ಲಕ್ಷಾಂತರ ರೂ. ನಷ್ಟ

    ಮಡಿಕೇರಿ: ಕೊಡಗು (Kodagu) ಜಿಲ್ಲೆಯ ಮಡಿಕೇರಿ ತಾಲೂಕಿನ ಕಕ್ಕಬೆ ಕುಂಜಿಲ ಗ್ರಾಮ ಪಂಚಾಯಿತಿಯ ಯವಕಪಾಡಿ ಗ್ರಾಮದ ಕುಡಿಯರ ಕಾಲೋನಿಯಲ್ಲಿ ಕಳೆದ ರಾತ್ರಿ ಕಾಡಾನೆ (Wiled Elephant) ದಾಂಧಲೆ ನಡೆಸಿದೆ. ಈ ವೇಳೆ ತೆಂಗಿನ ಮರವೊಂದು ಗ್ರಾಮದ ನಿವಾಸಿ ಕುಡಿಯರ ಗಣೇಶ್ ಅವರ ಮನೆಯ ಮೇಲೆ ಬಿದ್ದು ಭಾರೀ ನಷ್ಟ ಸಂಭವಿಸಿದೆ.

    ಅಲ್ಲದೇ ಮನೆಯ ಸುತ್ತಮುತ್ತ ಆಡ್ಡಾಡಿ ಕೃಷಿ ಬೆಳೆಯನ್ನು ತಿಂದು ನಷ್ಟ ಉಂಟುಮಾಡಿದೆ. ಕುಟುಂಬದ ಮಂದಿ ಕಾರ್ಯನಿಮಿತ್ತ ಬೇರೆಡೆ ತೆರಳಿದ್ದರಿಂದ ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಇದನ್ನೂ ಓದಿ: ಬೆಂಕಿ ಹಚ್ಚಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಕೇಸ್‌ – ಒಡಿಶಾ ವಿಧಾನಸೌಧ ಬಳಿ ಭುಗಿಲೆದ್ದ ಆಕ್ರೋಶ

    ಈ ಕುರಿತು ಮಡಿಕೇರಿ ತಾಲೂಕು ಬುಡಕಟ್ಟು ಕೃಷಿಕರ ಸಂಘದ (Farmers’ Association) ಅಧ್ಯಕ್ಷ ಕುಡಿಯರ ಮುತ್ತಪ್ಪ ಮಾತನಾಡಿ, ಕಳೆದ ಎರಡು ವರ್ಷಗಳಲ್ಲಿ ಕಾಡಾನೆ ದಾಳಿಯಿಂದಲೇ ಈ ಭಾಗದಲ್ಲಿ ವಾಸಿಸುವ ಸಾಕಷ್ಟು ಮನೆಗಳು ಹಾನಿಗೀಡಾಗಿವೆ. ಲಕ್ಷಾಂತರ ರುಪಾಯಿ ನಷ್ಟ ಸಂಭವಿಸಿದೆ ಎಂದು ಬೇಸರ ಹೊರಹಾಕಿದ್ದಾರೆ. ಇದನ್ನೂ ಓದಿ: ಹೆಣ್ಣು ಅಂತ 7 ವರ್ಷದ ಮಗಳನ್ನು ಕಾಲುವೆಗೆ ತಳ್ಳಿ ಕೊಂದ ಪಾಪಿ ತಂದೆ

    ಯವಕಪಾಡಿ, ಮರಂದೋಡ, ಕುಂಜಿಲ ಸೇರಿದಂತೆ ವಿವಿಧ ಗ್ರಾಮಗಳಲ್ಲಿನ ತೋಟಗಳು ಹಾನಿಯಾಗಿವೆ. ಇಲ್ಲಿ ಒಂಟಿ ಸಲಗ ಒಂದು ಅಡ್ಡಾಡುತ್ತಿದ್ದು ಪ್ರತಿವರ್ಷ ಸಮಸ್ಯೆ ಆಗುತ್ತಿದೆ. ಒಂಟಿ ಸಲಗವನ್ನ ಹಿಡಿಯಲು ಕೇಂದ್ರ ಸರ್ಕಾರದಿಂದ ಆದೇಶವಾಗಿದ್ದರೂ ಅರಣ್ಯ ಇಲಾಖೆ ಆನೆ ಸೆರೆಹಿಡಿಯಲು ವಿಫಲವಾಗಿದೆ. ಆನೆ ದಾಳಿಯಿಂದ ಹಾನಿಗೊಳಗಾದ ಮನೆಯನ್ನ ಪುನಃ ನಿರ್ಮಿಸಲು ಕುಟುಂಬಕ್ಕೆ ಆರ್ಥಿಕ ನೆರವು ನೀಡುವ ಅಗತ್ಯವಿದೆ. 10 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ತಪ್ಪಿತು ದೊಡ್ಡ ದುರಂತ – ಮತ್ತೆ ಟೇಕಾಫ್ ಆಗಿ ಇಂಡಿಗೋ ಸೇಫ್ ಲ್ಯಾಂಡಿಂಗ್

  • ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದ ಕಾಡಾನೆ – ಸ್ಥಳದಲ್ಲೇ ಮಹಿಳೆ ಸಾವು

    ಸೊಂಡಿಲಿನಿಂದ ಎತ್ತಿ ಬಿಸಾಡಿ ತುಳಿದ ಕಾಡಾನೆ – ಸ್ಥಳದಲ್ಲೇ ಮಹಿಳೆ ಸಾವು

    – ರಸ್ತೆ ತಡೆದು ಗ್ರಾಮಸ್ಥರಿಂದ ಪ್ರತಿಭಟನೆ

    ಹಾಸನ: ಕಾಡಾನೆ ದಾಳಿಗೆ ಮಹಿಳೆಯೊಬ್ಬರು ಬಲಿಯಾಗಿರುವ ಘಟನೆ ಜಿಲ್ಲೆಯ ಬೇಲೂರು (Beluru) ತಾಲೂಕಿನ ಕೋಗೋಡು ಗ್ರಾಮದಲ್ಲಿ ನಡೆದಿದೆ. ಇದು ಕಳೆದ 2 ತಿಂಗಳಿನಲ್ಲಿ ನಡೆದ ನಾಲ್ಕನೇ ಸಾವಿನ ಪ್ರಕರಣವಾಗಿದೆ.

    ಸುಶೀಲಮ್ಮ (63) ಕಾಡಾನೆ ದಾಳಿಗೆ ಮೃತಪಟ್ಟ ಮಹಿಳೆ. ಭಾನುಪ್ರಕಾಶ್ ಎಂಬುವವರ ಕಾಫಿ ತೋಟದಲ್ಲಿ ಕೆಲಸ ಮುಗಿಸಿ ಸುಶೀಲಮ್ಮ ವಾಪಸ್ ಆಗುತ್ತಿದ್ದಾಗ ದಿಢೀರ್ ಕಾಡಾನೆಯೊಂದು ಪ್ರತ್ಯಕ್ಷವಾಗಿ ದಾಳಿ ನಡೆಸಿದೆ. ಸುಶೀಲಮ್ಮನನ್ನ ಸೊಂಡಿಲಿನಿಂದ ಎತ್ತಿ ಬಿಸಾಡಿ, ತಲೆ ಭಾಗವನ್ನು ತುಳಿದು ಸಾಯಿಸಿದೆ. ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು, ಅರೇಹಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದನ್ನೂ ಓದಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಮಹೀಂದ್ರಾ ಥಾರ್

    ಅರಣ್ಯ ಸಚಿವರು ಆಗಮಿಸುವಂತೆ ಪಟ್ಟು:
    ಮಹಿಳೆ ಸಾವಿನಿಂದ ರೊಚ್ಚಿಗೆದ್ದ ಗ್ರಾಮಸ್ಥರು ಚೀಕನಹಳ್ಳಿ-ಬೇಲೂರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಟೈರ್‌ಗೆ ಬೆಂಕಿ ಹಚ್ಚಿ ರಸ್ತೆಯಲ್ಲಿ ಧರಣಿ ಕುಳಿತು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಸ್ಥಳಕ್ಕೆ ಅರಣ್ಯ ಸಚಿವರು ಆಗಮಿಸುವಂತೆ ಆಗ್ರಹಿಸಿದರಲ್ಲದೇ, ಅರಣ್ಯ ಸಚಿವರು ಬರುವವರೆಗೂ ಶವ ಮೇಲೆತ್ತಲು ಬಿಡುವುದಿಲ್ಲ ಎಂದು ಪಟ್ಟು ಹಿಡಿದರು. ಪ್ರತಿಭಟನೆ ವೇಳೆ ಸಾರಿಗೆ ಬಸ್ ಚಾಲನೆಗೆ ಮುಂದಾದ ಚಾಲಕನ ವಿರುದ್ಧ ಹರಿಹಾಯ್ದ ಪ್ರತಿಭಟನಾಕಾರರು ಬಸ್ ಮುಂದೆ ಹೋಗದಂತೆ ತಡೆದರು. ಇದನ್ನೂ ಓದಿ: ಮಗಳ ಫೋಟೋ ತೆಗೆದರೆ ಕಾನೂನು ಕ್ರಮ: ಆಲಿಯಾ ಭಟ್ ವಾರ್ನಿಂಗ್

    ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆಯಿತು. ರಸ್ತೆಯಲ್ಲೇ ಕುಳಿತು ನೂರಾರು ಮಂದಿ ಪ್ರತಿಭಟನೆ ನಡೆಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ.

     

    ಡಿಸಿ ವಿರುದ್ಧವೂ ಆಕ್ರೋಶ:
    ಅಲ್ಲದೇ ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಆಗಮಿಸುತ್ತಿದ್ದಂತೆ ಪ್ರತಿಭಟನಾಕಾರರು ಡಿಸಿ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರಹಾಕಿದರು. ಡಿಸಿಗೆ ಮಾತನಾಡಲು ಅವಕಾಶ ನೀಡದೇ ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದ್ರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರ ಹರಸಾಹಸಪಟ್ಟರು. ಸ್ಥಳದಲ್ಲಿದ್ದ ಸಿಸಿಎಫ್ ಏಡುಕುಂಡಲ, ಡಿಎಫ್‌ಓ ಸೌರಭ್‌ಕುಮಾರ್, ತಹಶೀಲ್ದಾರ್ ಮಮತಾ ಅವರು ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು. ಇದನ್ನೂ ಓದಿ: ಗ್ಯಾರಂಟಿಗಳಿಗೆ SCSP – TSP ಹಣ ಬಳಕೆ – ದಲಿತರ ಎಷ್ಟು ಕೋಟಿ ಹಣ ಬಳಕೆ? ಇಲ್ಲಿದೆ ಲೆಕ್ಕ..

    ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿದ್ದಂತೆ ಸ್ಥಳಕ್ಕೆ ಸಂಸದ ಶ್ರೇಯಸ್ ಪಟೇಲ್ ಆಗಮಿಸಿದ್ದು, ಪ್ರತಿಭಟನಾಕಾರರ ಮನವಿ ಆಲಿಸಲು ಮುಂದಾದರು. ಈ ವೇಳೆ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

  • ಕಾಡಾನೆ ದಾಳಿ – ಕೂದಲೆಳೆ ಅಂತರದಲ್ಲಿ ಪಾರಾದ ರೈತ

    ಕಾಡಾನೆ ದಾಳಿ – ಕೂದಲೆಳೆ ಅಂತರದಲ್ಲಿ ಪಾರಾದ ರೈತ

    ಮಡಿಕೇರಿ: ಹೊಲಕ್ಕೆ ನೀರು ಹಾಯಿಸಲು ಪೈಪ್ ಜೋಡಣೆ ಮಾಡುವ ಸಂದರ್ಭದಲ್ಲಿ ಏಕಾಏಕಿ ಕಾಡಾನೆಯೊಂದು ದಾಳಿ (Wild Elephant Attack) ಮಾಡಲು ಮುಂದಾಗಿದ್ದು ರೈತರೊಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರ (Kushalnagar) ತಾಲೂಕಿನ ಅರಿಸಿಗುಪ್ಪೆ ಗ್ರಾಮದಲ್ಲಿಂದು ನಡೆದಿದೆ.

    ಗ್ರಾಮದ ನಿವಾಸಿ ಪುಟ್ಟರಾಜು (ವಿಜಯ್) ಕಾಡಾನೆ ದಾಳಿಯಿಂದ ಪಾರದ ರೈತರಾಗಿದ್ದಾರೆ (Farmers). ಶನಿವಾರ ಬೆಳಗ್ಗೆ ಸಿದ್ದಲಿಂಗಾಪುರ ಸಮೀಪದ ಅರಿಸಿಣ ಗುಪ್ಪೆ ಗ್ರಾಮದ ಪುಟ್ಟರಾಜು ತಮ್ಮ ಹೊಲಕ್ಕೆ ನಿರು ಹಾಯಿಸಲು ಪೈಪ್ ಜೋಡಿಸುತಿದ್ದರು, ಈ ವೇಳೆ ಕಾಡಾನೆ ಏಕಾಏಕಿ ದಾಳಿಗೆ ಮುಂದಾಗಿದೆ. ಕೂಡಲೇ ಅಲ್ಲಿಂದ ಕಾಲ್ಕಿತ್ತ ಪುಟ್ಟರಾಜು ಮನೆಯೊಳಗೆ ಅವಿತುಕೊಂಡಿದ್ದಾರೆ. ಬಳಿ ಮನೆಯುತ್ತ ಹೆಜ್ಜೆ ಹಾಕಿದ ಕಾಡಾನೆ ಅಲ್ಲಿಂದ ತೆರಳಿದೆ.

    ಮನೆಯೊಳಗೇ ಪುಟ್ಟರಾಜು ಅವರ ಪತ್ನಿ ಮತ್ತು ತಾಯಿ ಇದ್ದರು. ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದ್ರೆ ಮನೆಯ ಮುಂಭಾಗ ನಿಲ್ಲಿಸಿದ್ದ ಬೈಕ್ ಪುಡಿ ಪುಡಿ ಮಾಡಿ ನಂತರ ಬಾಣಾವರ ಅರಣ್ಯ ಎರಪರೇ ಭಾಗಕ್ಕೆ ಕಾಡಾನೆ ತೆರಳಿದೆ. ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

  • ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 15 ಲಕ್ಷ ಪರಿಹಾರ ವಿತರಣೆ

    ಕಾಡಾನೆ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 15 ಲಕ್ಷ ಪರಿಹಾರ ವಿತರಣೆ

    ಮಡಿಕೇರಿ: ಇತ್ತೀಚೆಗೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದ ಸೋಮವಾರಪೇಟೆ ತಾಲ್ಲೂಕಿನ ಯಡವನಾಡು ಮೀಸಲು ಅರಣ್ಯದ ಕೂಪಾಡಿ ಗಿರಿಜನರ ಹಾಡಿಯ ತಮ್ಮಣ್ಣ (67) ಅವರ ಕುಟುಂಬಕ್ಕೆ ಅರಣ್ಯ ಇಲಾಖೆಯಿಂದ (Kodagu Forest Department) 15 ಲಕ್ಷ ರೂ. ಪರಿಹಾರದ ಚೆಕ್‌ ಅನ್ನು ವಿತರಿಸಲಾಯಿತು.

    ಮೃತರ ತಾಯಿ ಬೋಜಿ ಅವರಿಗೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಎ.ಎ ಗೋಪಾಲ್ ಚೆಕ್ ವಿತರಿಸಿದರು. ಶಾಸಕ ಡಾ.ಮಂತರ್‌ಗೌಡ ಅವರ ಸೂಚನೆಯಂತೆ ಚೆಕ್ ವಿತರಿಸಲಾಗಿದೆ. ಪರಿಹಾರ ಹಣವನ್ನು ಉತ್ತಮ ಕಾರ್ಯಕ್ಕೆ ಉಪಯೋಗಿಸಿಕೊಳ್ಳುವಂತೆ ಸಲಹೆ ನೀಡಿದರು. ಇದನ್ನೂ ಓದಿ: ವಿಜಯೇಂದ್ರ ಸಿಎಂ ಆಗೋದನ್ನ ಯಾರಿಂದಲೂ ತಪ್ಪಿಸಲು ಸಾಧ್ಯವಿಲ್ಲ – ಕೆ.ಶಿವನಗೌಡ ನಾಯಕ್

    ಹಾಡಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವುದರಿಂದ ಕಾಡಾನೆಗಳ ಬಗ್ಗೆ ಎಚ್ಚರ ವಹಿಸಬೇಕು. ಮೀಸಲು ಅರಣ್ಯದೊಳಗೆ ತಿರುಗಾಡಬಾರದು. ಕಾಡಾನೆ ಕಂಡಾಗ ಕೂಡಲೇ ಅರಣ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಬೇಕು ಎಂದು ಮನವಿ ಮಾಡಿದರು.

    ಮಾನವರ ಮೇಲೆ ದಾಳಿ ಮಾಡುವ ಕಾಡಾನೆಗಳನ್ನು ಹಿಡಿದು ಪಳಗಿಸಲಾಗುವುದು. ಅಂತಹ ಆನೆಗಳನ್ನು ಕಂಡು ಹಿಡಿದು ಸೆರೆಹಿಡಿಯಲಾಗುವುದು ಎಂದು ಹೇಳಿದರು. ಇದನ್ನೂ ಓದಿ:  ಬಿಜೆಪಿಯಲ್ಲಿ ತೀವ್ರಗೊಂಡ ಬಣ ಕಚ್ಚಾಟ – ವಸ್ತುಸ್ಥಿತಿ ವರದಿ ಪಡೆಯಲು ರಾಜ್ಯಕ್ಕೆ ಬಿಎಲ್ ಸಂತೋಷ್ ಎಂಟ್ರಿ

    ಚೆಕ್ ವಿತರಣೆ ಸಂದರ್ಭ ಸೋಮವಾರಪೇಟೆ ವಲಯ ಅರಣ್ಯಾಧಿಕಾರಿ ಶೈಲೇಂದ್ರ ಕುಮಾ‌ರ್, ಮೃತರ ಸಹೋದರ ಅಣ್ಣಯ್ಯ ಮತ್ತು ಹಾಡಿಯ ನಿವಾಸಿಗಳು ಇದ್ದರು.

  • ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ – 2 ದಶಕಗಳಿಂದ ಬಗೆಹರಿಯದ ಸಮಸ್ಯೆ!

    ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರ ಮೇಲೆ ಕಾಡಾನೆ ದಾಳಿ – 2 ದಶಕಗಳಿಂದ ಬಗೆಹರಿಯದ ಸಮಸ್ಯೆ!

    ಮಡಿಕೇರಿ: ಬೈಕ್‌ನಲ್ಲಿ ತೆರಳುತ್ತಿದ್ದ ಸಹೋದರರಿಬ್ಬರ ಮೇಲೆ ಕಾಡಾನೆ ದಾಳಿ (Elephant Attack) ಮಾಡಿದ ಪ್ರಕರಣ ದಕ್ಷಿಣ ಕೊಡಗಿನ ಪೊನ್ನಂಪೇಟೆ ಬಳಿಯ ಹಳ್ಳಿಗಟ್ಟು ಗ್ರಾಮದಲ್ಲಿ ನಡೆದಿದೆ.

    ಮೊಹಮ್ಮದ್ ಫೈಜನ್ ಹಾಗೂ ಅಬುರ್ ಉವೈಸ್ ಸಹೋದರರು ಕಾಡಾನೆ ದಾಳಿಯಿಂದ ಗಾಯಗೊಂಡಿದ್ದು, ಕೊಡಗು ಜಿಲ್ಲಾ ಆಸ್ಪತ್ರೆಯಲ್ಲಿ (Kodagu Hospital) ಚಿಕಿತ್ಸೆ ನೀಡಲಾಗುತ್ತಿದೆ. ಶುಕ್ರವಾರ (ಜ.3) ಬೆಳಗ್ಗಿನ ಜಾವ ಬೈಕ್‌ನಲ್ಲಿ ತೆರಳುತ್ತಿದ್ದ ಇಬ್ಬರ ಮೇಲೆ ಕಾಡಾನೆ ದಾಳಿ ಮಾಡಿದೆ. ಈ ಸಂದರ್ಭ ಸಹೋದರರು ಬಿದ್ದು ಗಂಭೀರ ಸ್ವರೂಪದ ಗಾಯಗಳಾಗಿದೆ. ಇಬ್ಬರಿಗೂ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಇದನ್ನೂ ಓದಿ: ದೂರು ಕೊಡಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಮಧುಗಿರಿ ಡಿವೈಎಸ್ಪಿ ಬಂಧನ

    ಬಗೆಹರಿಯದ ಸಮಸ್ಯೆ:
    ಕಳೆದ 2 ದಶಕಗಳಿಂದ ಜಿಲ್ಲಾ ವ್ಯಾಪ್ತಿಯಲ್ಲಿ ಕಾಡಾನೆಗಳ ಉಪಟಳ ನಿರಂತರವಾಗಿ ಹೆಚ್ಚುತ್ತಿದೆ. ಅದರಲ್ಲೂ ನಾಗರಹೊಳೆ ಅರಣ್ಯದ ಅಂಚಿನ ದಕ್ಷಿಣ ಕೊಡಗಿನ ಗ್ರಾಮಗಳು ಕಾಡಾನೆ ಹಾವಳಿಯಿಂದ ನಲುಗಿಹೋಗಿವೆ. ಇಲ್ಲಿನ ಗ್ರಾಮೀಣರು ಕಾಡಾನೆ ಹಾವಳಿಯಿಂದ ಒಂದೆಡೆ ಜೀವ, ಮತ್ತೊಂದೆಡೆ ಕೃಷಿ ಫಸಲನ್ನು ಕಳೆದುಕೊಳ್ಳುತ್ತಿದ್ದಾರೆ. ನೂರಾರು ಕಾಡಾನೆಗಳು ದಕ್ಷಿಣ ಕೊಡಗಿನ ಕಾಫಿ ತೋಟಗಳನ್ನೇ ತಮ್ಮ ನೆಲೆಯನ್ನಾಗಿಸಿಕೊಂಡಿವೆ. ಇವುಗಳನ್ನು ಅರಣ್ಯಕ್ಕೆ ಅಟ್ಟುವ ಸಾಕಷ್ಟು ಪ್ರಯತ್ನಗಳನ್ನು ಅರಣ್ಯ ಇಲಾಖೆ ನಡೆಸಿದೆ. ಆದರೂ ಕಾಡಾನೆಗಳು ಮರಳಿ ತೋಟಕ್ಕೆ ದಾಂಗುಡಿ ಇಡುತ್ತಿವೆ.

    ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಭೇಟಿ:
    ರಾಜ್ಯ ವನ್ಯಜೀವಿ ಮಂಡಳಿ ಸದಸ್ಯ ಸಂಕೇತ್ ಪೂವಯ್ಯ ಅವರು ಆಸ್ಪತ್ರೆಗೆ ಭೇಟಿ ನೀಡಿ ಕಾಡಾನೆ ದಾಳಿಯಿಂದ ಗಾಯಗೊಂಡ ಸಂತ್ರಸ್ತರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ, ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ. ಇದನ್ನೂ ಓದಿ: Kodagu | ವಿರಾಜಪೇಟೆ ರಸ್ತೆಯಲ್ಲಿ ಹುಲಿ ಪ್ರತ್ಯಕ್ಷ – ಜನರಲ್ಲಿ ಢವ ಢವ!

    ಅಲ್ಲದೇ ಜೀವ ಮತ್ತು ಬೆಳೆಹಾನಿಗೆ ಕಾರಣವಾಗುತ್ತಿರುವ ಕಾಡಾನೆಗಳನ್ನು ಸ್ಥಳಾಂತರಿಸುವ ಪ್ರಯತ್ನ ಸರ್ಕಾರದ ಮೂಲಕ ನಡೆಯುತ್ತಿದೆ. ಕೊಡಗು, ಚಿಕ್ಕಮಗಳೂರು, ಹಾಸನ ವ್ಯಾಪ್ತಿಯಲ್ಲಿ ಉಪಟಳ ನೀಡುತ್ತಿರುವ ಕಾಡಾನೆಗಳನ್ನು ಗುರುತಿಸಿ ಅವುಗಳಿಗೆ ಪುನರ್ವಸತಿ ಒದಗಿಸಬೇಕಾಗಿದೆ. ಇದಕ್ಕೆ ಅಗತ್ಯ ಜಾಗ ಗುರುತಿಸುವ ನಿಟ್ಟಿನಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ ಅವರು ಈಗಾಗಲೇ ಅರಣ್ಯ ಇಲಾಖಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಲು 2-3 ವರ್ಷಗಳಷ್ಟು ಕಾಲಾವಕಾಶ ಬೇಕಾಗುತ್ತದೆ ಎಂದು ಸಂಕೇತ್‌ ಹೇಳಿದ್ದಾರೆ.  ಇದನ್ನೂ ಓದಿ: ಕಲಬುರಗಿ | ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ನೀಡುವಂತೆ ಬೈರತಿ ಸುರೇಶ್‌ಗೆ ಮನವಿ

  • Shivamogga | ಕಾಡಾನೆ ದಾಳಿಗೆ ಕೃಷಿ ಕಾರ್ಮಿಕ ಬಲಿ

    Shivamogga | ಕಾಡಾನೆ ದಾಳಿಗೆ ಕೃಷಿ ಕಾರ್ಮಿಕ ಬಲಿ

    ಶಿವಮೊಗ್ಗ: ಕಾಡಾನೆ ದಾಳಿಗೆ (Elephant Attack) ಕೃಷಿ ಕಾರ್ಮಿಕ ಮೃತಪಟ್ಟ ಘಟನೆ ಶಿವಮೊಗ್ಗ (Shivamogga) ನಗರ ಸಮೀಪದ ಆಲದೇವರ ಹೊಸೂರು ಬಳಿ ಸಂಭವಿಸಿದೆ. ಮೃತ ಕಾರ್ಮಿಕನನ್ನು ಹನುಮಂತಪ್ಪ ಎಂದು ಗುರುತಿಸಲಾಗಿದೆ.

    ಮೃತ ಹನುಮಂತಪ್ಪ ಜಮೀನಿಗೆ ಹೋಗಿ ಮನೆಗೆ ಮರಳುವಾಗ ಘಟನೆ ಸಂಭವಿಸಿದೆ ಎಂದು ಹೇಳಲಾಗುತ್ತಿದೆ. ಇನ್ನೂ ಈ ಕುರಿತು ಪ್ರತಿಕ್ರಿಯೆ ನೀಡಿರುವ ಅರಣ್ಯ ಇಲಾಖೆ ವನ್ಯಜೀವಿ ವಿಭಾಗದ ಡಿಎಫ್‌ಒ ಪ್ರಸನ್ನ ಕೃಷ್ಣ ಪಟಗಾರ್‌, ತೋಟಕ್ಕೆ ಕೂಲಿ ಕೆಲಸಕ್ಕೆ ಹೋಗಿ ಮನೆಗೆ ಹಿಂತಿರುಗುವಾಗ ಆನೆ ದಾಳಿಯಾಗಿದೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ ಎಂದು ತಿಳಿಸಿದ್ದಾರೆ.

    ಹನುಮಂತಪ್ಪ ಅವರು ಸಂಪತ್‌ ಕುಮಾರ್‌ ಎಂಬುವವರ ತೋಟದ ಮನೆಯಲ್ಲಿ ವಾಸವಾಗಿದ್ದರು. ಆಶ್ಫಾಕ್‌ ಅಹಮದ್‌ ಖಾನ್‌ ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಇವರು ಮೂಲತಃ ಗದಗ ಜಿಲ್ಲೆಯ ಲಕ್ಷ್ಮೇಶ್ವರದವರು. ಹನುಂತಪ್ಪಗೆ ಪತ್ನಿ, ನಾಲ್ವರು ಮಕ್ಕಳು ಇದ್ದಾರೆ.

  • ಆನೇಕಲ್‌ನಲ್ಲಿ ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್ ಬಲಿ

    ಆನೇಕಲ್‌ನಲ್ಲಿ ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್ ಬಲಿ

    ಬೆಂಗಳೂರು: ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್‌ವೊಬ್ಬರು (Forest Guard) ಮೃತಪಟ್ಟಿರುವ ಘಟನೆ ಆನೇಕಲ್‌ನಲ್ಲಿ (Anekal) ನಡೆದಿದೆ. ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಪ್ರತಿಭಟನೆ ನಡೆಸುತ್ತಿದ್ದಾರೆ.

    ಮಾದಪ್ಪ (45) ಆನೆ ದಾಳಿಗೆ ಮೃತಪಟ್ಟ ಪಾರೆಸ್ಟ್ ಗಾರ್ಡ್. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಸಮೀಪದ ಹಕ್ಕಿಪಿಕ್ಕಿ ಕಾಲೋನಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮದ ಹಗರಣ – ರಾಯಚೂರಿನಲ್ಲಿ ಇಡಿ ವಿಚಾರಣೆ ಅಂತ್ಯ

    ರಾತ್ರಿ 11 ಗಂಟೆ ಸುಮಾರಿಗೆ ಕಾಡಾನೆ ಬಂದಿತ್ತು. ಆನೆ ಬಂದಿರುವುದನ್ನು ನೋಡಿ ಫಾರೆಸ್ಟ್ ಗಾರ್ಡ್ ಓಡಿಸಲು ಹೋಗಿದ್ದರು. ಆಗ ಮಾದಪ್ಪನ ಮೇಲೆ ಆನೆ ದಾಳಿ ಮಾಡಿದೆ. ತೀವ್ರವಾಗಿ ಗಾಯಗೊಂಡಿದ್ದ ಮಾದಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

    ಕಳೆದ ಆರು ತಿಂಗಳಲ್ಲಿ ಒಂದೇ ಗ್ರಾಮದ ಮೂವರು ಆನೆ ದಾಳಿಗೆ ಬಲಿಯಾಗಿದ್ದಾರೆ. ಇದಕ್ಕೆ ಗ್ರಾಮಸ್ಥರು ಅರಣ್ಯ ಇಲಾಖೆ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಗುರುವಾರ ರಾತ್ರಿ 11 ಗಂಟೆಯಿಂದ ನಿರಂತರವಾಗಿ ಪ್ರತಿಭಟನೆ ಮಾಡುತ್ತಿದ್ದಾರೆ. ಪರಿಣಾಮವಾಗಿ ಪೊಲೀಸರು ಸ್ಥಳದಲ್ಲೇ ಮೊಕ್ಕಂ ಹೂಡಿದ್ದಾರೆ. ಇದನ್ನೂ ಓದಿ: ಹಟ್ಟಿ ಚಿನ್ನದ ಗಣಿಯಲ್ಲಿ ಭೂಕುಸಿತ – ಕಾರ್ಮಿಕ ದುರ್ಮರಣ

    ಪದೇ ಪದೆ ಆನೆ ದಾಳಿಗೆ ಜನ ಬಲಿಯಾಗುತ್ತಿದ್ದಾರೆ. ಆದರೆ ಅರಣ್ಯ ಇಲಾಖೆ ದುಡಿಸಿಕೊಂಡು ಯಾವುದೇ ಪರಿಹಾರ ನೀಡುತ್ತಿಲ್ಲ. ಜೀವಕ್ಕೆ ಬೆಲೆ ಇಲ್ಲದಾಗಿದೆ ಎಂದು ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ.

  • ಮೊದಲು ಕ್ಷಮೆ ಕೇಳಿ ನಂತರ ನಿಮ್ಮ ಸಮಜಾಯಿಷಿ ನೀಡಿ: ಡಿಸಿಎಫ್ ವಿರುದ್ಧ ರೈತರ ಆಕ್ರೋಶ

    ಮೊದಲು ಕ್ಷಮೆ ಕೇಳಿ ನಂತರ ನಿಮ್ಮ ಸಮಜಾಯಿಷಿ ನೀಡಿ: ಡಿಸಿಎಫ್ ವಿರುದ್ಧ ರೈತರ ಆಕ್ರೋಶ

    ಹಾಸನ: ಯಾಕೆ ತಡವಾಗಿ ಬಂದ್ರಿ. ಮೊದಲು ನಮ್ಮ ಕ್ಷಮೆ ಕೇಳಿ ನಂತರ ನಿಮ್ಮ ಸಮಜಾಯಿಷಿ ನೀಡಿ ಎಂದು ಹಾಸನ ಡಿಸಿಎಫ್‍ನ ಬಸವರಾಜ್ ವಿರುದ್ಧ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಜಿಲ್ಲೆಯ, ಸಕಲೇಶಪುರ ತಾಲೂಕಿನ, ಬಾಗೆ ಗ್ರಾಮದಲ್ಲಿ ನಡೆದಿದೆ.

    ನಗರದ ಸಕಲೇಶಪುರ ತಾಲೂಕಿನ ಆಲೂರು ಭಾಗದಲ್ಲಿ ಕಾಡಾನೆ ದಾಳಿ ಮಿತಿಮೀರಿದೆ. ಹಗಲು ವೇಳೆಯಲ್ಲೇ ಕಾಡಾನೆಗಳು ಗ್ರಾಮಕ್ಕೆ ಬರುತ್ತಿವೆ. ಎದುರು ಬಂದವರ ಮೇಲೆ ದಾಳಿ ಮಾಡುತ್ತಾ, ಬೆಳೆ ನಾಶ ಮಾಡುತ್ತಾ ತಿರುಗುತ್ತಿವೆ. ಹೀಗಾಗಿ ಆನೆ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹಿಸಿ, ಬಾಗೆ ಗ್ರಾಮದಲ್ಲಿ ಶಾಸಕ ಹೆಚ್‍ಕೆ ಕುಮಾರಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಐಟಿ ಪಾರ್ಕ್ ಸ್ಥಾಪನೆಗೆ ಪರಿಸರವಾದಿಗಳ ತೀವ್ರ ವಿರೋಧ

    ಬೆಳಗ್ಗೆಯಿಂದ ಪ್ರತಿಭಟನೆ ನಡೆದರೂ ಮಧ್ಯಾಹ್ನ ಒಂದೂವರೆ ನಂತರ ಅಧಿಕಾರಿ ಬಸವರಾಜ್ ಆಗಮಿಸಿದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು, ನಾವು ಬೆಳಗ್ಗೆಯಿಂದ ಹೋರಾಟ ಮಾಡುತ್ತಿದ್ದು, ನೀವು ಈಗ ಬಂದಿದ್ದೀರಿ. ನಮ್ಮ ಪ್ರತಿಭಟನೆಗೆ ಬೆಲೆಯಿಲ್ಲವಾ? ತಡವಾಗಿ ಬಂದವರನ್ನ ಯಾಕೆ ಚೇರ್ ಹಾಕಿ ಕೂರಿಸಿದ್ದೀರಿ ಕ್ಷಮೆ ಕೇಳಿ ನಂತರ ಏನು ಮಾಡಿದ್ದೀರಿ ಹೇಳಿ ಎಂದು ಆಕ್ರೋಶ ಹೊರಹಾಕಿದರು. ನಂತರ ಅಧಿಕಾರಿ, ನಾನು ಉದ್ದೇಶಪೂರ್ವಕವಾಗಿ ತಡವಾಗಿ ಬಂದಿಲ್ಲ ಎಂದು ಹೇಳಿ, ರೈತರ ಕ್ಷಮೆ ಕೇಳಿ ತಾವು ಕೈಗೊಂಡ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಇದನ್ನೂ ಓದಿ: ಯುವತಿಯರೊಂದಿಗೆ ಕುಣಿದು ಕುಪ್ಪಳಿಸಿದ MLA ಗೋಪಾಲ್ ಮಂಡಲ್ – ವೀಡಿಯೋ ವೈರಲ್

  • ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್ ಸಾವು

    ಕಾಡಾನೆ ದಾಳಿಗೆ ಫಾರೆಸ್ಟ್ ಗಾರ್ಡ್ ಸಾವು

    ಚಿಕ್ಕಮಗಳೂರು: ಕಾಡಾನೆ ಓಡಿಸಲು ಹೋದ ಫಾರೆಸ್ಟ್ ಗಾರ್ಡ್ ಕಾಡಾನೆ ದಾಳಿಯಿಂದ ಸಾವನ್ನಪ್ಪಿರುವ ಘಟನೆ ತಾಲೂಕಿನ ಆಲ್ದೂರು ಸಮೀಪದ ಚಿತ್ತುವಳ್ಳಿ ಗ್ರಾಮದಲ್ಲಿ ನಡೆದಿದೆ.

    ಪುಟ್ಟರಾಜು(38) ಮೃತರಾಗಿದ್ದಾರೆ. ಚಿತ್ತುವಳ್ಳಿಯಲ್ಲಿ ಆನೆ ಹಾವಳಿ ಹೊಸತೇನಲ್ಲ. ಇಂದು ಕೂಡ ಗ್ರಾಮಕ್ಕೆ ಲಗ್ಗೆ ಇಟ್ಟಿದ್ದ ಕಾಡಾನೆ ಬೆಳೆಗಳನ್ನ ಹಾಳು ಮಾಡುತ್ತಿತ್ತು. ವಿಷಯ ತಿಳಿದ ಗ್ರಾಮಸ್ಥರು ಅರಣ್ಯ ಇಲಾಖೆಗೆ ವಿಷಯ ಮುಟ್ಟಿಸಿದ್ದರು. ಆನೆ ಓಡಿಸಲು ಪುಟ್ಟರಾಜು ಸೇರಿದಂತೆ ಅರಣ್ಯ ಇಲಾಖೆ ತಂಡ ಚಿತ್ತುವಳ್ಳಿಗೆ ತೆರಳಿತ್ತು.

    ಆನೆ ಕಾರ್ಯಚರಣೆಯಲ್ಲಿ ತೊಡಗಿದ್ದ ಅಧಿಕಾರಿಗಳ ಮೇಲೆ ಕಾಡಾನೆ ದಾಳಿಗೆ ಮುಂದಾಗಿದೆ. ಅಲ್ಲಿಂದ ಓಡಿ ಹೋಗುವಾಗ ಪುಟ್ಟರಾಜು ಆನೆ ದಾಳಿಯಿಂದ ಸಾವನ್ನಪ್ಪಿದ್ದಾರೆ. ಆನೆಯಿಂದ ತಪ್ಪಿಸಿಕೊಳ್ಳಲು ಓಡಿ ಹೋಗುವಾಗ ಕೆಳಗೆ ಬಿದ್ದ ಪುಟ್ಟರಾಜು ಮತ್ತೆ ಮೇಲೆದ್ದು ಓಡಲು ಸಾಧ್ಯವಾಗಿಲ್ಲ. ಆಗ ಹಿಂದಿನಿಂದ ಬಂದ ಕಾಡಾನೆ ಪುಟ್ಟರಾಜು ಮೇಲೆ ಕಾಲಿಟ್ಟು ಹೋಗಿದೆ.

    ಆನೆ ದಾಳಿಯಿಂದ ತೀವ್ರ ಅಸ್ವಸ್ಥರಾಗಿದ್ದ ಪುಟ್ಟರಾಜುರನ್ನ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲು ಮುಂದಾದರು. ಆದರೆ, ಆಸ್ಪತ್ರೆ ಬಾಗಿಲಿಗೆ ತೆರಳುತ್ತಿದ್ದಂತೆ ಫಾರೆಸ್ಟ್ ಗಾರ್ಡ್ ಪುಟ್ಟರಾಜು ಸಾವಿಗೀಡಾಗಿದ್ದಾರೆ. ಕಳೆದ 08 ವರ್ಷಗಳಿಂದ ಪುಟ್ಟರಾಜು ಅರಣ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿದ್ದು. ಮೃತ ಪುಟ್ಟರಾಜುಗೆ ಇಬ್ಬರು ಮಕ್ಕಳಿದ್ದಾರೆ. ಸಿಬ್ಬಂದಿಗೆ ಸಾವಿಗೆ ಅರಣ್ಯ ಇಲಾಖೆ ಕೂಡ ಕಂಬನಿ ಮಿಡಿದಿದೆ.

  • ಮರದ ಕೆಳಗಿದ್ದವನನ್ನು ಎತ್ತಿ ಎಸೆದ ಕಾಡಾನೆ- ಕರುಳು ಹೊರಗೆ ಬಂದು ವ್ಯಕ್ತಿ ನರಳಾಟ

    ಮರದ ಕೆಳಗಿದ್ದವನನ್ನು ಎತ್ತಿ ಎಸೆದ ಕಾಡಾನೆ- ಕರುಳು ಹೊರಗೆ ಬಂದು ವ್ಯಕ್ತಿ ನರಳಾಟ

    ರಾಮನಗರ: ಮೇಕೆ ಮೇಯಿಸಲು ಕಾಡಿಗೆ ಹೋಗಿದ್ದ ವ್ಯಕ್ತಿಯ ಮೇಲೆ ಆನೆ ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿರುವ ಘಟನೆ ಕನಕಪುರ ತಾಲೂಕಿನ ಕೆಂಚೇಗೌಡನ ದೊಡ್ಡಿ ಗ್ರಾಮದಲ್ಲಿ ನಡೆದಿದೆ.

    ಕೆಂಚೇಗೌಡನ ದೊಡ್ಡಿ ಗ್ರಾಮದ ನಿವಾಸಿ ಲಿಂಗರಾಜು(45) ಗಂಭೀರ ಗಾಯಗೊಂಡ ರೈತ. ಬೆಳಗ್ಗೆ ಮೇಕೆಗಳನ್ನ ಮೇಯಿಸಲು ಗ್ರಾಮದಿಂದ ಕಾಡಿಗೆ ಹೋಗಿದ್ದ ಲಿಂಗರಾಜು ಮರದ ಕೆಳಗೆ ಕುಳಿತ್ತಿದ್ದರು. ಈ ವೇಳೆ ಹಿಂಬದಿಯಿಂದ ದಾಳಿ ನಡೆಸಿದ ಕಾಡಾನೆ ಎತ್ತಿ ಬಿಸಾಡಿದೆ. ಕೆಳಗೆ ಬಿದ್ದು ನರಳಾಡುತ್ತಿದ್ದ ಲಿಂಗರಾಜುವಿನ ಮೇಲೆ ಮತ್ತೆ ದಾಳಿ ಮಾಡಲು ಮುಂದಾಗಿತ್ತು. ಇದನ್ನು ನೋಡಿದ ಸ್ಥಳೀಯರು ಕೂಗಿದ್ದಾರೆ.

    ಜನರು ಜೋರಾಗಿ ಕೂಗುತ್ತಿದ್ದಂತೆ ಆನೆ ಘಟನಾ ಸ್ಥಳದಿಂದ ಓಡಿ ಹೋಗಿದೆ. ತಕ್ಷಣವೇ ಲಿಂಗರಾಜು ಅವರ ಬಳಿಗೆ ಬಂದ ಜನರು, ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ ಆನೆ ದಾಳಿ ಮಾಡಿದ್ದ ಪರಿಣಾಮ ಲಿಂಗರಾಜು ಅವರ ಕರುಳು ಹೊರಬಂದಿದ್ದು, ಗಂಭೀರ ಗಾಯಗೊಂಡಿದ್ದಾರೆ.

    ಲಿಂಗರಾಜು ಅವರನ್ನು ಮೊದಲು ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಘಟನೆ ಸಂಬಂಧ ಸಾತನೂರು ಅರಣ್ಯ ಇಲಾಖೆ ಅಧಿಕಾರಿಗಳಿಂದ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.