Tag: ಕಾನ್ ಫೆಸ್ಟಿವೆಲ್

  • ಕನ್ನಡದ ಹುಡುಗನ ಚಿತ್ರಕ್ಕೆ ಕಾನ್‍ ಚಿತ್ರೋತ್ಸವದಲ್ಲಿ ಮೊದಲ ಬಹುಮಾನ

    ಕನ್ನಡದ ಹುಡುಗನ ಚಿತ್ರಕ್ಕೆ ಕಾನ್‍ ಚಿತ್ರೋತ್ಸವದಲ್ಲಿ ಮೊದಲ ಬಹುಮಾನ

    ವಿಶ್ವದ ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಒಂದಾದ ಕಾನ್ ಫಿಲ್ಮ್ ಫೆಸ್ಟಿವೆಲ್ (Cannes Festival) ಗೆ ಮೈಸೂರಿನ ಹುಡುಗ ಚಿದಾನಂದ ನಾಯಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ’ (sunflowers were the first ones to know) ಕಿರುಚಿತ್ರ ಆಯ್ಕೆಯಾಗಿತ್ತು. ಇಂಥದ್ದೊಂದು ಫೆಸ್ಟಿವೆಲ್ ಗೆ ಆಯ್ಕೆಯಾದ ಮೊದಲ ಕನ್ನಡಿಗರ ಕಿರುಚಿತ್ರ ಇದಾಗಿತ್ತು. ಇದೀಗ ಮೊದಲ ಅತ್ಯುತ್ತಮ ಕಿರುಚಿತ್ರ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ ನಿರ್ದೇಶಕರು.

    ರಚನೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಚಿದಾನಂದ (Chidananda Nayak) ಹೊತ್ತಿದ್ದರೆ, ವಿ. ಮನೋಜ್ ಅವರ ಸಂಕಲನವಿದೆ. ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ ಸ್ಟಿಟ್ಯೂಟ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಅಲ್ಲದೇ ಕನ್ನಡದ ಅನೇಕ ಕಲಾವಿದರು ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.

     

    ಕಾನ್ ಚಿತ್ರೋತ್ಸವಕ್ಕೆ ತಮ್ಮ ಕಿರುಚಿತ್ರ ಆಯ್ಕೆಯಾಗಿರುವುದು ಸಹಜವಾಗಿಯೇ ಚಿದಾನಂದ್ ಅವರಿಗೆ ಸಂಭ್ರಮ ತಂದಿತ್ತು. ಕಾನ್ ನೋಡುಗರು ಈ ಕಿರುಚಿತ್ರವನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಕೊನೆಗೂ ಕನ್ನಡದ ಹುಡುಗ ಗೆದ್ದಿದ್ದಾನೆ. ಈ ಮೂಲಕ ಕನ್ನಡದ ಹಿರಿಮೆಯನ್ನು ಎತ್ತಿ ಹಿಡಿದಿದ್ದಾನೆ.

  • ಕಾನ್ ಚಿತ್ರೋತ್ಸವಕ್ಕೆ ಮೈಸೂರು ಹುಡುಗನ ಕಿರುಚಿತ್ರ ಆಯ್ಕೆ

    ಕಾನ್ ಚಿತ್ರೋತ್ಸವಕ್ಕೆ ಮೈಸೂರು ಹುಡುಗನ ಕಿರುಚಿತ್ರ ಆಯ್ಕೆ

    ವಿಶ್ವದ ಪ್ರತಿಷ್ಠಿತ ಚಿತ್ರೋತ್ಸವಗಳಲ್ಲಿ ಒಂದಾದ ಕಾನ್ ಫಿಲ್ಮ್ ಫೆಸ್ಟಿವೆಲ್ ಗೆ ಮೈಸೂರಿನ ಹುಡುಗ ಚಿದಾನಂದ ನಾಯಕ್ ನಿರ್ದೇಶನದಲ್ಲಿ ಮೂಡಿ ಬಂದಿರುವ ‘ಸನ್ ಫ್ಲವರ್ಸ್ ವರ್ ದ ಫಸ್ಟ್ ಒನ್ಸ್ ಟು ನೋ’ (sunflowers were the first ones to know) ಕಿರುಚಿತ್ರ ಆಯ್ಕೆಯಾಗಿದೆ. ಇಂಥದ್ದೊಂದು ಫೆಸ್ಟಿವೆಲ್ ಗೆ ಆಯ್ಕೆಯಾದ ಮೊದಲ ಕನ್ನಡಿಗರ ಕಿರುಚಿತ್ರ ಇದಾಗಿದೆ.

    ರಚನೆ ಮತ್ತು ನಿರ್ದೇಶನದ ಜವಾಬ್ದಾರಿಯನ್ನು ಚಿದಾನಂದ (Chidananda Nayak) ಹೊತ್ತಿದ್ದರೆ, ವಿ. ಮನೋಜ್ ಅವರ ಸಂಕಲನವಿದೆ. ಪುಣೆಯ ಫಿಲ್ಮ್ ಅಂಡ್ ಟೆಲಿವಿಷನ್ ಇನ್ ಸ್ಟಿಟ್ಯೂಟ್ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಅಲ್ಲದೇ ಕನ್ನಡದ ಅನೇಕ ಕಲಾವಿದರು ಈ ಕಿರುಚಿತ್ರದಲ್ಲಿ ನಟಿಸಿದ್ದಾರೆ.

     

    ಕಾನ್ ಚಿತ್ರೋತ್ಸವಕ್ಕೆ ತಮ್ಮ ಕಿರುಚಿತ್ರ ಆಯ್ಕೆಯಾಗಿರುವುದು ಸಹಜವಾಗಿಯೇ ಚಿದಾನಂದ್ ಅವರಿಗೆ ಸಂಭ್ರಮ ತಂದಿದೆ. ಕಾನ್ ನೋಡುಗರು ಈ ಕಿರುಚಿತ್ರವನ್ನು ಹೇಗೆ ಸ್ವೀಕರಿಸುತ್ತಾರೆ ಎನ್ನುವ ಕುತೂಹಲ ಎಲ್ಲರದ್ದು.

  • ‘ಕಾಸ್ಟ್ಯೂಮ್ ಗುಲಾಮರು’ ಎಂದು ಐಶ್ವರ್ಯಾ ರೈ ಟೀಕಿಸಿದ ವಿವೇಕ್ ಅಗ್ನಿಹೋತ್ರಿ

    ‘ಕಾಸ್ಟ್ಯೂಮ್ ಗುಲಾಮರು’ ಎಂದು ಐಶ್ವರ್ಯಾ ರೈ ಟೀಕಿಸಿದ ವಿವೇಕ್ ಅಗ್ನಿಹೋತ್ರಿ

    ಕಾನ್ ಫೆಸ್ಟಿವಲ್ (Cannes Film Festival) ನಲ್ಲಿ ವಿಚಿತ್ರ ಕಾಸ್ಟ್ಯೂಮ್ ಮೂಲಕ ಸದ್ದು ಮಾಡಿರುವ ಬಾಲಿವುಡ್ ನಟಿ ಐಶ್ವರ್ಯಾ ರೈ (Aishwarya Rai) ಅವರನ್ನು ದಿ ಕಾಶ್ಮೀರ್ ಸ್ಟೋರಿ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ (Vivek Agnihotri) ಬಲವಾಗಿ ಟೀಕಿಸಿದ್ದಾರೆ. ಅವರ ಕಾಸ್ಟ್ಯೂಮ್ ಎತ್ತಿಕೊಂಡು ಬರುವ ವ್ಯಕ್ತಿಗಳ ಕುರಿತು ‘ಕಾಸ್ಟ್ಯೂಮ್ ಗುಲಾಮರು’ ಎಂದು ಅವರು ಕರೆದಿದ್ದಾರೆ. ಈ ಸಂಸ್ಕೃತಿ ಸರಿಯಲ್ಲ ಎಂದೂ ಅವರು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    ‘ಕಾಸ್ಟ್ಯೂಮ್ (Costume) ಗುಲಾಮರು ಎನ್ನುವ ಪದವನ್ನು ನೀವು ಕೇಳಿದ್ದೀರಾ? ಈ ರೀತಿಯ ಗುಲಾಮರು ಹೆಚ್ಚಾಗಿ ಮಹಿಳೆಯರೇ ಇರುತ್ತಾರೆ. ಹೊಂದಿಕೆ ಆಗದೇ ಇರುವ ಕಾಸ್ಟ್ಯೂಮ್ ಏನನ್ನು ಸೂಚಿಸುತ್ತದೆ? ಆ ರೀತಿಯ ಕಾಸ್ಟ್ಯೂಮ್ ಗಳಿಗೆ ಯಾಕೆ ನಾವು ಮೂರ್ಖರಾಗುತ್ತಿದ್ದೇವೆ. ಬಾಲಿವುಡ್ ನಲ್ಲೂ ಇಂತಹ ಘಟನೆಗಳು ನಡೆಯುತ್ತವೆ’ ಎಂದು ಅವರು ಬರೆದಿದ್ದಾರೆ. ವಿವೇಕ್ ಅಗ್ನಿಹೋತ್ರಿ ಈ ರೀತಿ ಬರೆದುಕೊಂಡರೆ, ಐಶ್ವರ್ಯಾ ರೈ ಫ್ಯಾನ್ಸ್ ವಿವೇಕ್ ಅವರಿಗೆ ತಿರುಗೇಟು ಕೂಡ ನೀಡಿದ್ದಾರೆ.

    76ನೇ ಕಾನ್ ಫೆಸ್ಟಿವಲ್ ಫ್ಯಾನ್ಸ್‌ನಲ್ಲಿ ಗ್ರ್ಯಾಂಡ್ ಆಗಿ ನಡೆಯುತ್ತಿದೆ. ಮೇ 16ರಿಂದ ಶುರುವಾಗಿರುವ ಈ ಕಾರ್ಯಕ್ರಮ ಮೇ 27ಕ್ಕೆ ಅಂತ್ಯವಾಗಲಿದೆ. ಕಾನ್ ಚಿತ್ರೋತ್ಸವದಲ್ಲಿ ಐಶ್ವರ್ಯ ರೈ, ಊರ್ವಶಿ ರೌಟೇಲಾ, ಮೃಣಾಲ್ ಠಾಕೂರ್ (Mrunal Thakur), ಪಾಲ್ಗೊಂಡಿದ್ದಾರೆ. ಇದನ್ನೂ ಓದಿ:‘ಸಿದ್ದರಾಮಯ್ಯ ಎಂಬ ನಾನು’: ಸಿದ್ದರಾಮಯ್ಯ ಕುರಿತು ಮತ್ತೊಂದು ಸಿನಿಮಾ ಘೋಷಣೆ

    ಕರಾವಳಿ ಬೆಡಗಿ ಐಶ್ವರ್ಯಾ ರೈ (Aishwarya Rai) ಅವರು ಗ್ರೀನ್ ಬಣ್ಣದ ಡ್ರೆಸ್ ಮತ್ತು ಕಪ್ಪು- ಸಿಲ್ವರ್ ಮಿಶ್ರಿತ ಕಲರ್ ಗೌನ್‌ನಲ್ಲಿ ಸ್ಟೈಲ್ ಆಗಿ ಕಾಣಿಸಿಕೊಂಡಿದ್ದಾರೆ. ನಟಿ ಲುಕ್ ಮತ್ತು ಕಣ್ಣಿನ ನೋಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ.

    ಊರ್ವಶಿ ರೌಟೇಲಾ (Urvashi Rautela) ಅವರು ಬಾದಮ್ ಮತ್ತು ನೀಲಿ ಕಲರ್ ಮಿಕ್ಸ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ತುಟಿಗೆ ನೀಲಿ ಬಣ್ಣದ ಲಿಪ್‌ಸ್ಟಿಕ್ ಹಾಕಿದ್ದಾರೆ. ಕ್ಯಾಮೆರಾ ಕಣ್ಣಿಗೆ ಬೋಲ್ಡ್ ಆಗಿ ಪೋಸ್ ನೀಡಿದ್ದಾರೆ. ‘ಸೀತಾ ರಾಮಂ’ ಸುಂದರಿ ಮೃಣಾಲ್ ಠಾಕೂರ್ ಅವರು ಬಿಳಿ ಬಣ್ಣದ ಉಡುಗೆಯಲ್ಲಿ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ.