Tag: ಕಾಫಿ ಡೇ

  • ಸೋಮನಹಳ್ಳಿಯ ಕಾಫಿಡೇ ಬಳಿಯೇ ಎಸ್‌ಎಂ ಕೃಷ್ಣ ಅಂತ್ಯಸಂಸ್ಕಾರ ಯಾಕೆ?

    ಸೋಮನಹಳ್ಳಿಯ ಕಾಫಿಡೇ ಬಳಿಯೇ ಎಸ್‌ಎಂ ಕೃಷ್ಣ ಅಂತ್ಯಸಂಸ್ಕಾರ ಯಾಕೆ?

    ಮಂಡ್ಯ: ಮಂಡ್ಯ (Mandya) ಜಿಲ್ಲೆಯ ಮದ್ದೂರು (Maddur) ತಾಲೂಕಿನ ಸೋಮನಹಳ್ಳಿಯಲ್ಲಿ (Somanahalli) ಇಂದು (ಡಿ.11) ಮಾಜಿ ಸಿಎಂ ಎಸ್‌ಎಂ ಕೃಷ್ಣ (SM Krishna) ಅವರ ಅಂತ್ಯಸಂಸ್ಕಾರ ನಡೆಯಲಿದೆ.

    ಎಸ್‌ಎಂಕೆ ಅವರ ಇಷ್ಟದ ಸ್ಥಳ ಸೋಮನಹಳ್ಳಿ ಹೊರವಲಯದ ಕಾಫಿ ಡೇ (Cafe Coffee Day) ಆವರಣದಲ್ಲಿ ಅಂತ್ಯಸಂಸ್ಕಾರಕ್ಕೆ ಸಕಲ ಸಿದ್ಧತೆಗಳು ನಡೆದಿದ್ದು ಸಂಜೆ 4 ಗಂಟೆಯ ನಂತರ ಅಂತ್ಯಸಂಸ್ಕಾರ ನಡೆಯಲಿದೆ.ಇದನ್ನೂ ಓದಿ: ಯಾರನ್ನೂ ದ್ವೇಷಿಸಲಿಲ್ಲ – ಎಸ್.ಎಂ ಕೃಷ್ಣ ಅಗಲಿಕೆಯ‌ ಕುರಿತು ನೋವು ಹಂಚಿಕೊಂಡ ನಟಿ ರಮ್ಯಾ

    ಕೆಫೆ ಡೇ ಅವರಣದಲ್ಲಿಯೇ ಅಂತ್ಯಸಂಸ್ಕಾರ ಯಾಕೆ?
    ಎಸ್‌ಎಂ ಕೃಷ್ಣ ಅವರ ಮೂಲ ಮನೆ ಸೋಮನಹಳ್ಳಿ ಒಳಗಡೆ ಇದೆ. ಕೃಷ್ಣ ಅವರು ರಾಜ್ಯ ಸಚಿವರಾಗಿದ್ದ ವೇಳೆ ತಮ್ಮ ಪಿತ್ರಾರ್ಜಿತ ಆಸ್ತಿಯಲ್ಲಿ ಒಂದು ಗೆಸ್ಟ್ ಹೌಸ್ ನಿರ್ಮಿಸಿದ್ದರು.

    ಬೆಂಗಳೂರಿನಲ್ಲಿ (Bengaluru) ನೆಲೆಸಿದ್ದ ಕಾರಣ ಈ ಮನೆಯನ್ನು ಹೆಚ್ಚಾಗಿ ಕೃಷ್ಣ ಬಳಸುತ್ತಿರಲಿಲ್ಲ. ಆದರೆ ಆ ಮನೆಯ ಒಂದು ಕೋಣೆ ಎಸ್‌ಎಂಕೆ ಅವರ ನೆಚ್ಚಿನ ಜಾಗವಾಗಿತ್ತು. ಮಂಡ್ಯ, ಮೈಸೂರಿಗೆ ಭೇಟಿ ಕೊಟ್ಟಾಗ ಇದೇ ಮನೆಗೆ ಬಂದು ಆ ಕೋಣೆಯಲ್ಲಿಯೇ ಉಳಿದುಕೊಳ್ಳುತ್ತಿದ್ದರು.

    ಅದೇ ನೆಚ್ಚಿನ ಮನೆಯನ್ನು ತಮ್ಮ ಅಳಿಯ ಸಿದ್ದಾರ್ಥ ಅವರಿಗೆ ಕಾಫಿ ಡೇಗಾಗಿ ಬಿಟ್ಟುಕೊಟ್ಟಿದ್ದರು. ಕಾಫಿ ಡೇಗೆ ನವೀಕರಣ ಮಾಡಿದ್ದರೂ ಕೃಷ್ಣ ಅವರ ಪ್ರೀತಿಯ ಕೊಠಡಿಯನ್ನು ಅವರಿಗಾಗಿಯೇ ಬಿಡಲಾಗಿತ್ತು. ಮೈಸೂರು, ಮಂಡ್ಯ ಕಡೆಗೆ ಹೋದಾಗ ಕಾಫಿ ಡೇಯಲ್ಲಿರುವ ಆ ಒಂದು ಕೋಣೆಯಲ್ಲಿ ಕಾಲ ಕಳೆದು ಬಳಿಕ ಮನೆಗೆ ತೆರಳುತ್ತಿದ್ದರು. ಇದೀಗ ಅದೇ ಕಾಫಿ ಡೇ ಆವರಣದಲ್ಲಿ ಅಂತಿಮ ದರ್ಶನ ಹಾಗೂ ಅಂತ್ಯ ಸಂಸ್ಕಾರಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3ರ ವರೆಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದ್ದು, ಜಿಲ್ಲಾಡಳಿತ ಅಂತ್ಯ ಸಂಸ್ಕಾರಕ್ಕೆ ಸಕಲ ಸಿದ್ಧತೆ ನಡೆಸಿದೆ.ಇದನ್ನೂ ಓದಿ: ಯುದ್ಧಪೀಡಿತ ಸಿರಿಯಾದಿಂದ 75 ಭಾರತೀಯರು ಸ್ಥಳಾಂತರ

  • ಇಂದು ಸಂಜೆ ಹುಟ್ಟೂರಿನಲ್ಲಿ ಎಸ್‌ಎಂಕೆ ಅಂತ್ಯಕ್ರಿಯೆ – ಏನೇನು ಸಿದ್ಧತೆ ನಡೆದಿದೆ?

    ಇಂದು ಸಂಜೆ ಹುಟ್ಟೂರಿನಲ್ಲಿ ಎಸ್‌ಎಂಕೆ ಅಂತ್ಯಕ್ರಿಯೆ – ಏನೇನು ಸಿದ್ಧತೆ ನಡೆದಿದೆ?

    ಬೆಂಗಳೂರು/ಮಂಡ್ಯ: ರಾಜ್ಯ ರಾಜಕಾರಣದ ಧೀಮಂತ ನಾಯಕ, ಕರುನಾಡು ಕಂಡ ಅದಮ್ಯ ಚೇತನ, ಸೌಮ್ಯ ಸ್ವಭಾವದ ಅಜಾತಶತ್ರು, ದೂರದೃಷ್ಟಿಯ ಕನಸುಗಾರ, ಕಲಾಪ್ರೇಮಿ, ಮಾಜಿ ಸಿಎಂ ಸೋಮನಹಳ್ಳಿ ಮಲ್ಲಯ್ಯ ಕೃಷ್ಣ (SM Krishna) ತಮ್ಮ ಬದುಕಿನ ಪಯಣ ಮುಗಿಸಿದ್ದು ಇಂದು ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಸೋಮನಹಳ್ಳಿಯಲ್ಲಿ (Somanahalli) ನಡೆಯಲಿದೆ.

    ಬೆಳಗ್ಗೆ 8 ಗಂಟೆಗೆ ಕೃಷ್ಣ ಪಾರ್ಥಿವ ಶರೀರವನ್ನು ಮದ್ದೂರಿಗೆ ಕೊಂಡೊಯ್ಯಲಾಗುತ್ತದೆ. ಮಾರ್ಗಮಧ್ಯೆ ಕೆಂಗೇರಿ, ರಾಮನಗರ, ಚನ್ನಪಟ್ಟಣದಲ್ಲಿ ಕೆಲಹೊತ್ತು ಸಾರ್ವಜನಿಕ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುತ್ತದೆ.

    ಸಂಜೆ 3 ಗಂಟೆ ಸುಮಾರಿಗೆ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನೆರವೇರಲಿದೆ. ಸಿಎಂ ಸಿದ್ದರಾಮಯ್ಯ, ಸಚಿವರು, ಕೇಂದ್ರದ ಪರವಾಗಿ ಪ್ರಹ್ಲಾದ್‌ ಜೋಶಿ, ಕುಮಾರಸ್ವಾಮಿ ಸೇರಿ ರಾಜಕೀಯ ಗಣ್ಯರು, ಸ್ವಾಮೀಜಿಗಳು, ಅಪಾರ ಅಭಿಮಾನಿಗಳು ಭಾಗವಹಿಸಲಿದ್ದಾರೆ. ಇಂದು ಅಗತ್ಯ ತಯಾರಿಗಳು ನಡೆದಿವೆ. ಡಿಸಿಎಂ ಶಿವಕುಮಾರ್‌ ಸೇರಿ ಪ್ರಮುಖರು ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ. ಇದನ್ನೂ ಓದಿ: ಶಾಸಕನಿಂದ ಮುಖ್ಯಮಂತ್ರಿವರೆಗೆ…. ಎಸ್‌ಎಂಕೆ ರಾಜಕೀಯ ಜೀವನದ ಏಳುಬೀಳು!

    3 ಗಂಟೆಯವರೆಗೆ ಅಂತಿಮ ದರ್ಶನ:
    ಸೋಮನಹಳ್ಳಿಗೆ 10 ಗಂಟೆ ಬರಲಿರುವ ಕೃಷ್ಣರ ಪಾರ್ಥಿವ ಶರೀರವನ್ನು ಕಾಫಿ ಡೇ (Cafe Coffee Day) ಆವರಣದಲ್ಲಿ ಇಡಲಾಗುತ್ತದೆ. ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

     

    ಒಕ್ಕಲಿಗ ಸಂಪ್ರದಾಯದಂತೆ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ 15 ಕ್ಕೂ ಹೆಚ್ಚು ವೈದಿಕರಿಂದ ವಿಧಿ ವಿಧಾನ ಕಾರ್ಯಗಳು ನಡೆಯಲಿದೆ. ಗಂಧದ ಕಟ್ಟಿಗೆಳಿಂದ ಮೃತ ದೇಹವನ್ನು ಸುಡುವ ಮೂಲಕ ಅಂತ್ಯ ಸಂಸ್ಕಾರ ಮಾಡಲಾಗುತ್ತದೆ.

    ಮೃತದೇಹ ಇಡಲಾಗುವ ಜಾಗದಲ್ಲಿ ಜರ್ಮನ್ ಟೆಂಟ್ ಹಾಕಲಾಗಿದ್ದು ಬ್ಯಾರೀಕೇಡ್ ಅಳವಡಿಕೆ ಮಾಡಲಾಗಿದೆ. ಮೂರು ಸರತಿ ಮೂಲಕ ದರ್ಶನಕ್ಕೆ ಅಧಿಕಾರಿಗಳು ವ್ಯವಸ್ಥೆ ಮಾಡಿದ್ದಾರೆ. ವಿಐಪಿಗಳಿಗೆ ಜಿಲ್ಲಾಡಳಿತ ವಿಶೇಷ ಗ್ಯಾಲರಿ ನಿರ್ಮಾಣ ಮಾಡಿದೆ. ಎಸ್.ಎಂ.ಕೃಷ್ಣರ ಕುಟುಂಬಸ್ಥರಿಗೆ ಕಾಫಿ ಡೇ ಕಟ್ಟಡದ ಪಕ್ಕದಲ್ಲೇ ಆಸನದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾಹ್ನ 3 ಗಂಟೆಯಿಂದ ಅಂತ್ಯಕ್ರಿಯೆ ಪ್ರಕ್ರಿಯೆ ಆರಂಭವಾಗಲಿದ್ದು 5 ಗಂಟೆ ಒಳಗೆ ಮುಕ್ತಾಯವಾಗಲಿದೆ.

  • ಸಿನಿಮಾವಾಗಲಿದೆ ಕಾಫಿ ಡೇ ಸಂಸ್ಥಾಪಕ, ಕಾಫಿ ಕಿಂಗ್ ಸಿದ್ಧಾರ್ಥ್ ಬಯೋಪಿಕ್

    ಸಿನಿಮಾವಾಗಲಿದೆ ಕಾಫಿ ಡೇ ಸಂಸ್ಥಾಪಕ, ಕಾಫಿ ಕಿಂಗ್ ಸಿದ್ಧಾರ್ಥ್ ಬಯೋಪಿಕ್

    ಕಾಫಿ ಉದ್ಯಮದಿಂದಲೇ ಹೆಚ್ಚು ಫೇಮಸ್ ಆಗಿದ್ದ, ಪ್ರತಿ ವರ್ಷವೂ 160 ಕೋಟಿ ಕಪ್ ಕಾಫಿ ಮಾರುತ್ತಿದ್ದ ಕೆಫೆ ಕಾಫಿ ಡೇ ಸಂಸ್ಥಾಪಕ, ಕಾಫಿ ಕಿಂಗ್ ಎಂದೇ ಫೇಮಸ್ ಆಗಿದ್ದ ವಿ.ಜಿ ಸಿದ್ಧಾರ್ಥ್ ಅವರ ಬಯೋಪಿಕ್ ಸದ್ಯದಲ್ಲೇ ಸೆಟ್ಟೇರಲಿದೆ. ಕಾಫಿ ಉದ್ಯಮಕ್ಕೆ ಒಂದು ಘನತೆ ತಂದುಕೊಟ್ಟು, ರಾಷ್ಟ್ರೀಯ ಹೆದ್ದಾರಿ 66ನೇ ಮಂಗಳೂರು ನಗರದಿಂದ ಉಳ್ಳಾಲ ಕಡೆಗೆ ಹೋಗುವ ಮಾರ್ಗದಲ್ಲಿನ ನೇತ್ರಾವತಿ ಸೇತುವೆ ಬಳಿ ನಾಪತ್ತೆಯಾಗಿ, ಆನಂತರ ಶವವಾಗಿ ಸಿಕ್ಕ ಸಿದ್ಧಾರ್ಥ ಅವರ ಬದುಕು ಮತ್ತು ಸಾವಿನ ನಿಗೂಢತೆ ಹೀಗೆ ಎಲ್ಲ ವಿಷಯವನ್ನು ಇದು ಒಳಗೊಂಡಿರಲಿದೆ.

    ಸಿದ್ದಾರ್ಥ ಅವರ ಜೀವನವೇ ರೋಚಕ. ತಮ್ಮ 24ನೇ ವಯಸ್ಸಿನಲ್ಲೇ ಮುಂಬೈನಲ್ಲಿ ಪೋರ್ಟ್ಪೊಲಿಯೋ ಮ್ಯಾನೇಜ್ ಮೆಂಟ್ ತರಬೇತಿ ಪಡೆದರು. ನಂತರ ತಂದೆಯ ಸಹಾಯ ಪಡೆದುಕೊಂಡು ಸ್ವಂತ ಉದ್ಯಮ ಆರಂಭಿಸಿದರು. ಟ್ರೆಡಿಂಗ್, ಮ್ಯೂಚುಯಲ್ ಫಂಡ್ಸ್, ರಿಯಲ್ ಎಸ್ಟೇಟ್, ಸ್ಟಾರ್ಟ್ ಅಪ್ ಕಂಪೆನಿ, ಹೀಗೆ ಒಂದೊಂದೆ ಉದ್ಯಮ ಆರಂಭಿಸಿದರು. ಎಲ್ಲದರಲ್ಲೂ ಗೆಲುವು ಕಂಡರು.

    1993ರಲ್ಲಿ ಕಾಫಿ ಉದ್ಯಮಕ್ಕೆ ಕಾಲಿಟ್ಟ ಸಿದ್ಧಾರ್ಥ ಅವರು, ಮೊದ ಮೊದಲು ಕಾಫಿ ಬೀಜಗಳ ವ್ಯಾಪಾರ ಮತ್ತು ರಫ್ತು ಆರಂಭಿಸಿದರು. ಕಾಫಿ ಕ್ಯೂರಿಂಗ್ ಘಟಕವನ್ನೂ ಶುರು ಮಾಡಿದರು. 1948ರಲ್ಲಿ ಹ್ಯಾಮ್ ಬರ್ಗ್ ನ ಚಿಬೊದಲ್ಲಿ ಚಿಕ್ಕದೊಂದು ಮಳಿಗೆಯಲ್ಲಿ ಕಾಫಿ ಉದ್ಯಮ ಪ್ರಾರಂಭ ಮಾಡಿ, 1996ರಲ್ಲಿ ಕಾಫಿ ಡೇ ಶುರು ಮಾಡಿದರು. ಕೇವಲ ಐದೇ ಐದು ವರ್ಷಗಳಲ್ಲಿ ಐದು ಸಾವಿರಕ್ಕೂ ಹೆಚ್ಚು ಕೆಫೆ ಕಾಡಿ ಡೇ ಸ್ಥಾಪಿಸಿ ಕಾಫಿ ಕಿಂಗ್ ಆದರು. ಇದನ್ನೂ ಓದಿ: ಶಿವಣ್ಣ – ತಲೈವಾ ಸಿನಿಮಾಗೆ `ಜೈಲರ್’ ಟೈಟಲ್ ಫಿಕ್ಸ್

    ನಂತರ ಹಲವು ಹಗರಣಗಳಲ್ಲಿ ಇವರ ಹೆಸರು ಕೇಳಿ ಬಂತು, ಅವುಗಳೇ ಇವರನ್ನು ಹೈರಾಣು ಮಾಡಿದವು. ಇವೆಲ್ಲವನ್ನೂ ಒಳಗೊಂಡಂತೆ ರುಕ್ಮಿನಿ ರಾವ್ ಮತ್ತು ದತ್ತ ಎನ್ನುವವರು ಜಂಟಿಯಾಗಿ ಸಿದ್ಧಾರ್ಥ ಕುರಿತು ಪುಸ್ತಕವೊಂದನ್ನು ಬರೆದಿದ್ದಾರೆ. ಆ ಪುಸ್ತಕವನ್ನು ಆಧರಿಸಿ ಟಿ ಸೀರಿಸ್ ಫಿಲ್ಮ್ಸ್ ಮತ್ತು ಕರ್ಮ ಮೀಡಿಯಾ ಎಂಟರ್ ಟ್ಮೇನೆಂಟ್ ಜಂಟಿಯಾಗಿ ಇವರ ಬಯೋಪಿಕ್ ಅನ್ನು ತೆರೆಗೆ ತರಲು ಹೊರಟಿದ್ದಾರೆ. ಸದ್ಯ ಸಿನಿಮಾ ಮಾಡಲು ಹಕ್ಕುಗಳನ್ನು ಪಡೆದಿದ್ದಾರೆ. ಸಿದ್ಧಾರ್ಥ ಪಾತ್ರವನ್ನು ಯಾರು ಮಾಡಲಿದ್ದಾರೆ ಎನ್ನುವುದೇ ಸದ್ಯಕ್ಕಿರುವ ಕುತೂಹಲ.

    Live Tv

  • ರಾಜೀನಾಮೆ ನೀಡಲು ಸಿದ್ಧಾರ್ಥ್ ಅಣ್ಣನೇ ಗೈಡ್ ಮಾಡಿದ್ದು: ಅಣ್ಣಾಮಲೈ

    ರಾಜೀನಾಮೆ ನೀಡಲು ಸಿದ್ಧಾರ್ಥ್ ಅಣ್ಣನೇ ಗೈಡ್ ಮಾಡಿದ್ದು: ಅಣ್ಣಾಮಲೈ

    ಚಿಕ್ಕಮಗಳೂರು: ಹತ್ತು ವರ್ಷ ಪೊಲೀಸ್ ಇಲಾಖೆಯಲ್ಲಿ ಕೆಲಸ ಮಾಡಿದ್ದೇನೆ. ಆಮೇಲೆ ಡಿಐಜಿ, ಐಜಿ ಆಗಿ ಎಸಿ ರೂಮಲ್ಲಿ ಕೂತು ಕೆಲಸ ಮಾಡುಲು ಆಸಕ್ತಿ ಇಲ್ಲ ಎಂದಾಗ, ಸಿದ್ಧಾರ್ಥ್ ಅಣ್ಣಾ ಮಾತ್ರ ಧೈರ್ಯವಾಗಿ ಹೇಳಿದ್ದು, ರಾಜೀನಾಮೆ ಕೊಡಿ ನಾನಿದ್ದೇನೆ ಎಂದಿದ್ದರು. ನನ್ನ ರಾಜೀನಾಮೆಯನ್ನ ನಾವಿಬ್ಬರೂ ಸೇರಿ ಡಿಸೈಡ್ ಮಾಡಿದ್ದು ಎಂದು ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಕಾಫಿ ಡೇ ಮಾಲೀಕ ದಿ.ಸಿದ್ಧಾರ್ಥ್ ಹೆಗ್ಡೆ ಬಗ್ಗೆ ಭಾವನಾತ್ಮಕವಾಗಿ ಮಾತನಾಡಿದ್ದಾರೆ.

    ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಬಳಿ ಕಾಫಿ ಡೇ ಮಾಲೀಕ ದಿವಂಗತ ಸಿದ್ಧಾರ್ಥ್ ಹೆಗ್ಡೆ ಅವರ ಪುತ್ಥಳಿ ನಿರ್ಮಾಣದ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ಈ ವೇಳೆ ಮಾತನಾಡಿದ ಅವರು, ನಾನು ಸಿದ್ಧಾರ್ಥ್ ಹೆಗ್ಡೆ ಅವರ ಕೆಫೆ ಡೇ ಚೇಂಬರ್ ರೂಂನಲ್ಲಿ ಕೂತು ಮೂರೂವರೆ ಗಂಟೆ ಮಾತನಾಡಿದ್ದೆವು ಎಂದು ತಿಳಿಸಿದರು.

    ಎರಡು ಜನ ಕಾರ್ ಡೋರ್ ಓಪನ್ ಮಾಡಿ ಬಿಡುತ್ತಾರೆ. ನಾಲ್ಕು ಜನ ಸೆಲ್ಯೂಟ್ ಮಾಡುತ್ತಾರೆ. ನನಗೆ ಅದರಿಂದ ಸಂತೋಷವಿಲ್ಲ. ಕೃಷಿ ಮಾಡಬೇಕು, ಊರಿಗೆ ಹೋಗಬೇಕು. ಸಾಧಾರಣ ಮನುಷ್ಯನಂತೆ ಬದುಕಬೇಕು ಹಾಗೂ ಸಾಮಾನ್ಯ ಮನುಷ್ಯನ ಜೀವನವನ್ನ ಬದಲಾವಣೆ ಮಾಡಬೇಕೆಂಬ ಆಸೆ ಸರ್ ಎಂದು ಅವರಿಗೆ ಹೇಳಿದ್ದೆ. ಆಗ ಅವರು, ಧೈರ್ಯವಾಗಿ ಹೇಳಿದ್ದರು. ರಾಜೀನಾಮೆ ಕೊಡಿ ನಾನಿದ್ದೇನೆ ಎಂದಿದ್ದರು ಎಂದು ಸಿದ್ಧಾರ್ಥ್ ಹೆಗ್ಡೆಯವರನ್ನ ನೆನಪಿಸಿಕೊಂಡರು.

    ಯಾವ ಡೇಟ್‍ನಲ್ಲಿ ಪೇಪರ್ ಟೈಪ್ ಮಾಡಬೇಕು ಎಂದು ನಾವಿಬ್ಬರು ಡಿಸೈಡ್ ಮಾಡಿದ್ದೆವು. ರಾಜೀನಾಮೆ ಕೊಟ್ಟ ಬಳಿಕ ಬಾಂಬೆಯಿಂದ ಫೋನ್ ಮಾಡಿದ್ದರು. ಬಹಳ ಕಷ್ಟದ ಕೆಲಸ ಯಾರೂ ಮಾಡಲ್ಲ. ಜನ ನಿಮಗೆ ಮೂರ್ಖ ಎನ್ನಬಹುದು, ಫೂಲ್ ಎನ್ನಬಹುದು. ಆದರೆ ನನಗೆ ನಿಮ್ಮ ಉದ್ದೇಶ ಏನೆಂದು ಗೊತ್ತು ಎಂದಿದ್ದರು. ನಾನು ಏನು ಮಾಡಿದರು ಅವರು ಮೇಲಿಂದ ನೋಡುತ್ತಿದ್ದಾರೆ, ಅವರು ಯಾವಾಗಲು ನನ್ನೊಂದಿಗೆ ಇರುತ್ತಾರೆ. ನನಗೆ ಗೈಡ್ ಮಾಡಿದ್ದರು, ಮುಂದೆಯೂ ಅವರು ನನ್ನೊಂದಿಗೆ ನಿಂತು ಗೈಡ್ ಮಾಡುತ್ತಿರುತ್ತಾರೆ ಎಂದರು.

  • ಕಾಫಿ ಡೇ ಸಿದ್ಧಾರ್ಥ್ ಹೆಗ್ಡೆ ಪುಣ್ಯಸ್ಮರಣೆ- ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ

    ಕಾಫಿ ಡೇ ಸಿದ್ಧಾರ್ಥ್ ಹೆಗ್ಡೆ ಪುಣ್ಯಸ್ಮರಣೆ- ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ

    ಚಿಕ್ಕಮಗಳೂರು: ಕಾಫಿನಾಡಿನ ಕಾಫಿಯ ಘಮಲನ್ನ ವಿಶ್ವವ್ಯಾಪ್ತಿ ಹರಡಿಸಿ ಖ್ಯಾತಿ ಗಳಿಸಿದ್ದ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗ್ಡೆ ಆತ್ಮಹತ್ಯೆಗೆ ಶರಣಾಗಿ ಇಂದಿಗೆ ಒಂದು ವರ್ಷ. ಅವರ ಅಗಲಿಕೆಯನ್ನ ಇಂದಿಗೂ ಮರೆಯಲಾಗದ ಅವರ ಅಭಿಮಾನಿಗಳು ಅವರ ನೆನಪಿನಾರ್ಥ ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿದ್ದಾರೆ.

    ಜಿಲ್ಲೆಯ ಮೂಡಿಗೆರೆ ತಾಲೂಕಿನ ಕುದುರೆಗುಂಡಿ ಸಮೀಪದ ಭಾವನಿ ಎಸ್ಟೇಟ್‍ನಲ್ಲಿ ಅವರ ಪ್ರತಿಮೆ ನಿರ್ಮಾಣಕ್ಕೆ ಶಿಲಾನ್ಯಾಸ ನೆರವೇರಿಸಿದ್ದಾರೆ. ಇದೇ ವೇಳೆ ಮಾತನಾಡಿದ ಗೃಹ ಮಂಡಳಿ ಮಾಜಿ ಅಧ್ಯಕ್ಷ ಹಾಗೂ ಸಿದ್ಧಾರ್ಥ್ ಅವರ ಅಭಿಮಾನಿ ಹಾಲಪ್ಪ ಗೌಡ, ಅವರು ನಮ್ಮನ್ನ ಅಗಲಿರಬಹುದು. ಆದರೆ ನಾಡಿನ ಕೊಟ್ಯಂತರ ಮನೆ-ಮನಗಳಲ್ಲಿ ಅವರು ಎಂದೆಂದಿಗೂ ಅಜರಾಮರ. ನೀವು ಆತ್ಮವನ್ನ ಬಿಟ್ಟಿದ್ದರೂ ನಮಗೆಲ್ಲಾ ಆತ್ಮಸ್ಥೈರ್ಯವನ್ನ ತುಂಬಿ ಹೋಗಿದ್ದೀರಾ. ನೀವು ನಮ್ಮೊಂದಿಗೆ ಸದಾ ಇರುತ್ತೀರಾ. ಮತ್ತೆ ಹುಟ್ಟಿ ಬನ್ನಿ ಎಂದು ಪಾರ್ಥಿಸಿದ್ದಾರೆ.

    1996ರಲ್ಲಿ ಬೆಂಗಳೂರಿನ ಎಂ.ಜಿ.ರಸ್ತೆಯಲ್ಲಿ ಮೊದಲ ಕಾಫಿ ಡೇ ಆರಂಭಿಸಿದ್ದ ಸಿದ್ಧಾರ್ಥ್, ಒಂದು ನೂರಾಗಿ, ನೂರು ಐನೂರಾಗಿ ವಿಶ್ವದಾದ್ಯಂತ 10ಕ್ಕೂ ಹೆಚ್ಚು ದೇಶಗಳಲ್ಲಿ 1772 ಕಾಫಿ ಡೇ ಔಟ್ ಲೇಟ್‍ನ ಮಾಲೀಕರಾಗಿದ್ದರು. ವಾರ್ಷಿಕ ಸಾವಿರಾರು ಟನ್ ಕಾಫಿ ರಪ್ತು ಮಾಡುವ ಮೂಲಕ ಜಗತ್ತನ್ನೇ ಕರ್ನಾಟಕದತ್ತ ತಿರುಗಿ ನೋಡಿಸಿದ್ದು ಸಿದ್ಧಾರ್ಥ್ ಹೆಗ್ಡೆ ಹೆಗ್ಗಳಿಕೆ. ಕಾಫಿಯ ಜೊತೆ ಹತ್ತಕ್ಕೂ ಹೆಚ್ಚು ವಿವಿಧ ಕಂಪನಿಗಳನ್ನ ಆರಂಭಿಸಿ ಲಕ್ಷಾಂತರ ಜನರಿಗೆ ಉದ್ಯೋಗ ನೀಡಿ ನಡೆದಾಡುವ ದೈವವೂ ಆಗಿದ್ದರು. ಹಸಿರ ಪ್ರೇಮಿ ಸಿದ್ಧಾರ್ಥ್ ಹೆಗ್ಡೆ, ಉಳಿಸೋದೆ ಹಸಿರು. ಹಸಿರನ್ನ ಬೆಳೆಸಿ ಎಂದು ಎಲ್ಲರಿಗೂ ಹೇಳುತ್ತಿದ್ದರು ಎಂದು ಅವರ ಅಭಿಮಾನಿಗಳು ಅವರನ್ನ ನೆನೆದು ಕಣ್ಣೀರಿಟ್ಟರು.

    ಅಪ್ಪನ ಬಳಿ ಎರಡು ಲಕ್ಷ ಪಡೆದು ಮುಂಬೈನಲ್ಲಿ ಬ್ಯಸಿನೆಸ್ ಆರಂಭಿಸಿದ್ದ ಸಿದ್ಧಾರ್ಥ್ ನಷ್ಟವಾದ ಬಳಿಕ ಅಪ್ಪನ ಬಳಿ ಮತ್ತೆ ಹಣ ಕೇಳಿದ್ದರು. ಅಪ್ಪ ಎರಡು ಲಕ್ಷ ಹಣ ಹಾಳು ಮಾಡಿದ್ದೀಯಾ ಎಂದು ಬ್ಯಾಂಕಿನಲ್ಲಿ ಸಾಲ ಮಾಡಿ ಜೊತೆಗೆ ಕಾಫಿ ತೋಟವನ್ನ ಮಾರಿ ಐದು ಲಕ್ಷ ಹಣ ನೀಡಿದ್ದರು. ಅಲ್ಲಿಂದ ಸಿದ್ಧಾರ್ಥ್ ಹೆಗ್ಡೆ ಮತ್ತೆಂದೂ ಹಿಂದೆ ತಿರುಗಿ ನೋಡಿರಲಿಲ್ಲ. ಆ ಹಣ ಅವರ ಬದುಕಿನ ದಿಕ್ಕನ್ನೇ ಬದಲಿಸಿತ್ತು. ಆದರೆ ದೇಶ-ವಿದೇಶಗಳಲ್ಲಿ ಕಾಫಿನಾಡ ಕಾಫಿಯ ಘಮಲನ್ನ ಪಸರಿಸಿದ್ದ ಕಾಫಿಯ ಹರಿಕಾರ ವಿಧಿಯ ಕರೆಗೆ ಓಗೊಟ್ಟು ನಮ್ಮನ್ನ ಅಗಲಿ ಇಂದಿಗೆ ಒಂದು ವರ್ಷವಾಯಿತು ಎಂದು ಬೆಳೆಗಾರರು ಹಾಗೂ ಅಭಿಮಾನಿಗಳು ಭಾವುಕರಾದರು.

    ಅವರಿಂದ ಸಹಾಯ ಪಡೆದವರು ಅವರ ಋಣ ತೀರಿಸಲು ಅಸಾಧ್ಯ ಎಂದಿದ್ದಾರೆ. ಅಂತಹ ಅಪ್ರತಿಮ ವ್ಯಕ್ತಿತ್ವದ ಸಿದ್ಧಾರ್ಥ್ ಹೆಗ್ಡೆಗೆ ಇಂದು ಅವರ ಅಭಿಮಾನಿಗಳು ಪ್ರತಿಮೆ ನಿರ್ಮಾಣಕ್ಕೆ ಮುಂದಾಗಿ ಶಿಲಾನ್ಯಾಸ ನೆರವೇರಿಸಿ, ಎರಡರಿಂದ ಮೂರು ತಿಂಗಳಲ್ಲಿ ಪ್ರತಿಮೆ ನಿರ್ಮಾಣವಾಗುತ್ತೆ ಎಂದರು.

    ಕಾರ್ಯಕ್ರಮದಲ್ಲಿ ಗೃಹ ಮಂಡಳಿ ಮಾಜಿ ಅಧ್ಯಕ್ಷ ಹಾಲಪ್ಪ ಗೌಡ, ತೀರ್ಥಹಳ್ಳಿ ರತ್ನಾಕರ್, ಮಾಜಿ ಸಚಿವ ಬಿ.ಬಿ.ನಿಂಗಯ್ಯ, ಒಕ್ಕಲಿಗರ ಸಂಘದ ನಿರ್ದೇಶಕ ಮುಗ್ರವಳ್ಳಿ ಪ್ರದೀಪ್, ದುಂದುಗ ಸುಬ್ಬೇಗೌಡ್ರು ಸೇರಿದಂತೆ ಕಾಫಿ ಬೆಳೆಗಾರರ ಸಂಘ ಹಾಗೂ ಒಕ್ಕಲಿಗರ ಸಂಘದ ಮುಖಂಡರು ಪಾಲ್ಗೊಂಡು ಅವರ ಪ್ರತಿಮೆ ನಿರ್ಮಾಣದ ಶಿಲಾನ್ಯಾಸ ಕಾರ್ಯಕ್ರಮವನ್ನ ಯಶಸ್ವಿಗೊಳಿಸಿದರು.

  • ಕಾಫಿ ಡೇ ಸಿದ್ಧಾರ್ಥ್ ಹೆಗ್ಡೆ ಸರ್ಕಲ್ ಚಿಕ್ಕಮಗಳೂರಲ್ಲಿ ಅನಾವರಣ

    ಕಾಫಿ ಡೇ ಸಿದ್ಧಾರ್ಥ್ ಹೆಗ್ಡೆ ಸರ್ಕಲ್ ಚಿಕ್ಕಮಗಳೂರಲ್ಲಿ ಅನಾವರಣ

    ಚಿಕ್ಕಮಗಳೂರು : ಕಾಫಿ ಡೇ ಮಾಲೀಕ ಸಿದ್ದಾರ್ಥ್ ಹೆಗ್ಡೆ ಆತ್ಮಹತ್ಯೆಗೆ ಶರಣಾದಾಗ ಇಡೀ ರಾಜ್ಯ ಕಂಬನಿ ಮಿಡಿದಿತ್ತು. ವಿಷಯ ಕೇಳಿ ಬೆಳೆಗಾರರಿಗೆ ಹಾಗೂ ಉದ್ಯಮಕ್ಕೆ ಸಿಡಿಲು ಬಡಿದಂತಾಗಿತ್ತು. ದೇಶದ ಕಾಫಿಗೆ ಅಂತರಾಷ್ಟ್ರಿಯ ಮಟ್ಟದ ಖ್ಯಾತಿ ತಂದಿದ್ದು ಸಿದ್ಧಾರ್ಥ್ ಹೆಗ್ಡೆ. ಲಕ್ಷಾಂತರ ಜನರಿಗೆ ಅನ್ನದಾತರಾಗಿದ್ದ ಅವರ ಅಗಲಿಕೆಯನ್ನ ಇಂದಿಗೂ ಜನಸಾಮಾನ್ಯರಿಗೆ ಅರಗಿಸಿಕೊಳ್ಳಲಾಗ್ತಿಲ್ಲ. ಕಾಫಿಯ ದರ ಏರಿಳಿತ ಕಂಡಾಗ ಸಿದ್ಧಾರ್ಥ್ ಹೆಗ್ಡೆ ಇರಬೇಕಿತ್ತು ಅನ್ನೋರು ಇಂದಿಗೂ ಸಾವಿರಾರು ಜನ. ವಿಧಿಲಿಖಿತ ಅವರಿಂದು ನಮ್ಮೊಂದಿಗಿಲ್ಲ. ಆದ್ರೆ ಅವರು ದೈಹಿಕವಾಗಿ ನಮ್ಮ ಜೊತೆ ಇಲ್ಲದಿದ್ರು ಮಾನಸಿಕವಾಗಿ ಪ್ರತಿಯೊಬ್ಬ ಕೂಲಿ ಕಾರ್ಮಿಕನ ಹೃದಯದಲ್ಲೂ ಚಿರಸ್ಥಾಯಿ. ಹಾಗಾಗಿಯೇ ಅವರ ನೆನಪಿಗಾಗಿ ವಿಶ್ವದ ಮೊದಲ ಜಿ.ವಿ.ಸಿದ್ಧಾರ್ಥ್ ಹೆಗ್ಡೆ ಸರ್ಕಲ್ ಕಾಫಿನಾಡಲ್ಲಿ ಅನಾವರಣಗೊಂಡಿದೆ.

    ಬದುಕಿದ್ದಾಗಲೇ ಸತ್ತಿರೋ ಕೊಟ್ಯಾಂತರ ಜನರ ಮಧ್ಯೆ, ಸತ್ತ ಮೇಲೂ ಬದುಕಿರೋರಲ್ಲಿ ಸಿದ್ಧಾರ್ಥ್ ಹೆಗ್ಡೆ ಕೂಡ ಒಬ್ರು. ಅವರ ಸರಳತೆ ಬೆರಗಾಗದವರೇ ಇಲ್ಲ. ಕಾಫಿಯ ಬಗ್ಗೆ ಅವರಿಗಿದ್ದ ಜ್ಞಾನ. ಕೊಡುತ್ತಿದ್ದ ಸಲಹೆಗಳನ್ನ ಕಾಫಿನಾಡಿನ ಜನ ಇಂದಿಗೂ ಮರೆತಿಲ್ಲ. ಹಾಗಾಗಿ ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರು ಬಳಿಯ ಸಿಗೋಡು ಹಾಗೂ ದೇವಗೋಡು ಗ್ರಾಮಸ್ಥರು ತಮ್ಮೂರಿನ ಸರ್ಕಲ್ ಸಿದ್ಧಾರ್ಥ್ ಹೆಗ್ಡೆ ಸರ್ಕಲ್ ಎಂದು ನಾಮಫಲಕ ನೆಟ್ಟು ನಾಮಕರಣ ಮಾಡಿಕೊಂಡಿದ್ದಾರೆ. ಸಿದ್ಧಾರ್ಥ್ ಹೆಗ್ಡೆ ಎಂದೇ ನಾಮಕರಣಗೊಂಡ ದೇಶದ ಮೊದಲ ವೃತ್ತ ಇದು. ಅವರಿಂದ ಪ್ರತ್ಯಕ್ಷವಾಗಿ-ಪರೋಕ್ಷವಾಗಿ ಲಕ್ಷಾಂತರ ಜನರಿಗೆ ಉಪಯೋಗವಾಗಿದೆ. ಅವರ ಮೇಲಿನ ಅಭಿಮಾನ, ಗೌರವಕ್ಕೆ ಕೊನೆ ಇಲ್ಲ. ಹಾಗಾಗಿ ಅವರ ಹೆಸರು ಶಾಶ್ವತವಾಗಿರಲೆಂದು ನಮ್ಮೂರಿನ ಸರ್ಕಲ್‍ಗೆ ಅವರ ಹೆಸರಿಟ್ಟಿದ್ದೇವೆ ಎಂದು ಕಾಫಿ ಬೆಳೆಗಾರರು ಹೇಳುತ್ತಾ ಭಾವುಕರಾಗುತ್ತಾರೆ. ಇದನ್ನೂ ಓದಿ:  ಯೋಧನಾಗುವ ಆಸೆ ಕಂಡಿದ್ದ ಸಿದ್ಧಾರ್ಥ್ ಕಾಫಿ ಕಿಂಗ್ ಆದ ಕಹಾನಿ

    ಪ್ರಿಯದರ್ಶಿನಿ ಎಸ್ಟೇಟ್ ಅಚ್ಚುಮೆಚ್ಚು : ಪ್ರಿಯದರ್ಶಿನಿ ಎಸ್ಟೇಟ್ ಅಂದ್ರೆ ಸಿದ್ಧಾರ್ಥ್ ಹೆಗ್ಡೆ ಅವರಿಗೆ ಎಲ್ಲಿಲ್ಲದ ಪ್ರೀತಿ. ಯಾಕಂದ್ರೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ಚೇತನಹಳ್ಳಿಯಲ್ಲಿದ್ದ ಅವರ ಸ್ವಂತ ತೋಟ ಬಿಟ್ಟು ಅವರೇ ಖರೀದಿಸಿದ ಮೊದಲ ತೋಟ ಅಂದ್ರೆ ಬಾಳೆಹೊನ್ನೂರು ಬಳಿಯ ಪ್ರಿಯದರ್ಶಿನಿ ಎಸ್ಟೇಟ್. ಅವರಿಗೆ ಈ ತೋಟದ ಮೇಲೆ ಒಲವು ಜಾಸ್ತಿ. ಇಲ್ಲಿ ತೋಟ ಮಾಡಿದಾಗ ಸ್ಥಳೀಯರ ಜೊತೆ ಸಾಮಾನ್ಯನಂತೆ ಬೆರೆಯುತ್ತಿದ್ದರು. ಸ್ಥಳೀಯ ನೂರಾರು ಜನರಿಗೆ ಕೆಲಸ ಕೊಟ್ಟಿದ್ದರು. ಕೂಲಿ ಜೊತೆ ಕೂಲಿಯಾಗೇ ಮಾತನಾಡುತ್ತಿದ್ದರು. ಸರಳತೆಗೆ ಮತ್ತೊಂದು ಹೆಸರೇ ಸಿದ್ಧಾರ್ಥ್ ಹೆಗ್ಡೆ. ಅವರಿಂದ ನಮಗೆ ಸಾಕಷ್ಟು ಸಹಾಯವಾಗಿದೆ. ಹಾಗಾಗಿ, ಅವರ ಋಣ ತೀರಿಸಲು ನಮ್ಮೂರಿನ ಸರ್ಕಲ್‍ಗೆ ಅವರ ಹೆಸರಿಟ್ಟಿದ್ದೇವೆ ಅನ್ನೋದು ಸ್ಥಳೀಯರ ಮಾತು. ಇದನ್ನೂ ಓದಿ: ಸಿದ್ಧಾರ್ಥ್ ‘ಕಾಫಿರಾಜ’ನಾದ ಕಥೆಯನ್ನು ಓದಿ

     

    ಸಹ್ಯಾದ್ರಿ ಬೆಳೆಗಾರರ ಸಂಘದ ಅಧ್ಯಕ್ಷ ರಂಗನಾಥ್ ನಾಮಫಲಕವನ್ನ ಅನಾವರಣಗೊಳಿಸಿದರು. ಉಪಾಧ್ಯಕ್ಷ ಕೆ.ಟಿ.ವೆಂಕಟೇಶ್ ಸ್ವಾಗತಿಸಿದರು. ಸಂಘದ ಕಾರ್ಯಕಾರಿಣಿ ನಿರ್ದೇಶಕ ಸಂತೋಷ್ ಅರೆನೂರು ಪ್ರಾಸ್ತಾವಿಕ ಭಾಷಣ ಮಾಡಿದರು. ಕಾರ್ಯಕ್ರಮದಲ್ಲಿ ಸೀಗೋಡು-ದೇವಗೋಡು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳ ಗ್ರಾಮಸ್ಥರು ಹಾಗೂ ಕಾಫಿ ಬೆಳೆಗಾರರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಸಿದ್ಧಾರ್ಥ್ ಸಾವಿಗೆ ಸಂತಾಪ ಸೂಚಿಸಿ, ಕೇಂದ್ರದ ವಿರುದ್ಧ ಹರಿಹಾಯ್ದ ದೀದಿ

  • ಮೈಂಡ್ ಟ್ರೀಯಲ್ಲಿ ಸಿದ್ಧಾರ್ಥ್ ಷೇರು ಎಷ್ಟಿತ್ತು? ಕೋಕಾ ಕೋಲಾ ಡೀಲ್ ಎಲ್ಲಿಯವರೆಗೆ ಬಂದಿತ್ತು? ಸಾಲ ಎಷ್ಟಿತ್ತು?

    ಮೈಂಡ್ ಟ್ರೀಯಲ್ಲಿ ಸಿದ್ಧಾರ್ಥ್ ಷೇರು ಎಷ್ಟಿತ್ತು? ಕೋಕಾ ಕೋಲಾ ಡೀಲ್ ಎಲ್ಲಿಯವರೆಗೆ ಬಂದಿತ್ತು? ಸಾಲ ಎಷ್ಟಿತ್ತು?

    ಬೆಂಗಳೂರು: ಕಾಫಿ ಡೇ ಮಾಲೀಕ ಸಿದ್ಧರ್ಥ್ ಅವರು ಮಂಗಳೂರು ಸಮೀಪ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಆದರೆ ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲವಾದರೂ ಅವರು ಸಾಲದ ಸುಳಿಗೆ ಸಿಲುಕಿ ಈ ನಿರ್ಧಾರ ತೆಗೆದುಕೊಂಡಿರಬಹುದಾ ಎನ್ನುವ ಪ್ರಶ್ನೆ ಎದ್ದಿದೆ.

    ಮಾಧ್ಯಮಗಳ ವರದಿ ಪ್ರಕಾರ 2019ರ ಮಾರ್ಚ್ ವೇಳೆ ಸಿದ್ಧಾರ್ಥ್ ಅವರು ಒಟ್ಟು 6,500 ಕೋಟಿ ರೂ. ಸಾಲದಲ್ಲಿದ್ದರು. ಈ ಸಾಲ ತೀರಿಸಲು ಮೈಂಡ್ ಟ್ರೀ ಕಂಪನಿಯಲ್ಲಿದ್ದ ಷೇರನ್ನು ಲಾರ್ಸನ್ ಆಂಡ್ ಟ್ಯಾಬ್ರೋ ಕಂಪನಿಗೆ ಮಾರಾಟ ಮಾಡಿದ್ದರು. ತನ್ನ ಬಳಿಯಿದ್ದ ಒಟ್ಟು ಶೇ.20.32 ಷೇರನ್ನು 3,200 ಕೋಟಿ ರೂ.ಗೆ ಮಾರಾಟ ಮಾಡಿ ಕೆಲ ಸಾಲವನ್ನು ತೀರಿಸಿದ್ದರು.

    ಮತ್ತಷ್ಟು ಸಾಲ ಬಾಕಿ ಇದ್ದ ಹಿನ್ನೆಲೆಯಲ್ಲಿ ಸಿದ್ಧಾರ್ಥ್ ಅವರು ತಮ್ಮ ಕನಸಿನ ‘ಕೆಫೆ ಕಾಫಿ ಡೇ’ಯನ್ನು ಬಹು ರಾಷ್ಟ್ರೀಯ ಕೋಕಾ ಕೋಲಾ ಕಂಪನಿಗೆ ಮಾರಾಟ ಮಾಡಲು ಮುಂದಾಗಿದ್ದರು. ಈಗಾಗಲೇ ಅಮೆರಿಕದಿಂದ ಕೋಕಾ ಕೋಲಾ ಅಧಿಕಾರಿಗಳು ಸಿದ್ಧಾರ್ಥ ಒಡೆತನದ ಕಂಪನಿಗೆ ಭೇಟಿ ನೀಡಿ ಖರೀದಿ ಸಂಬಂಧ ಮಾತುಕತೆ ನಡೆಸಿದ್ದರು.

    ಅಂದಾಜು 10 ಸಾವಿರ ಕೋಟಿ ರೂ.ಗೆ ತನ್ನ ಕಂಪನಿಯನ್ನು ಮಾರಾಟ ಮಾಡುವ ಸಂಬಂಧ ಮಾತುಕತೆ ನಡೆದಿದ್ದರೂ ಇಲ್ಲಿಯವರೆಗೆ ಯಾವುದೂ ಅಂತಿಮವಾಗಿರಲಿಲ್ಲ. ಕಂಪನಿಯನ್ನು ಮಾರಾಟ ಮಾಡಿದರೂ, ಅದರಲ್ಲಿ ಒಂದಷ್ಟು ಪ್ರಮಾಣದ ಷೇರು ಉಳಿಸಿಕೊಳ್ಳಲು ಸಿದ್ಧಾರ್ಥ್ ಅವರು ಮುಂದಾಗಿದ್ದರು. ಇದು ಕೋಕಾ ಕೋಲಾಗೆ ತೊಡಕಾಗಿತ್ತು ಎಂದು ವರದಿಯಾಗಿತ್ತು.

    ಮೈಂಡ್ ಟ್ರೀ ಷೇರು ಎಷ್ಟಿತ್ತು?
    2011ರಲ್ಲಿ ಒಂದು ಷೇರಿಗೆ 87 ರೂ. ನೀಡಿ ಶೇ.6.95 ಅಥವಾ 28 ಲಕ್ಷ ಮೈಂಡ್ ಟ್ರೀ ಷೇರುಗಳನ್ನು 24.36 ಕೋಟಿ ರೂ. ನೀಡಿ ಸಿದ್ಧಾರ್ಥ್ ಖರೀದಿ ಮಾಡಿದ್ದರು. ಇದಾದ ನಂತರ 2012 ರಲ್ಲಿ ಒಂದು ಷೇರಿಗೆ 122.3 ರೂ. ನೀಡಿ ಶೇ.3.27 ಅಥವಾ 13.47 ಲಕ್ಷ ಷೇರುಗಳನ್ನು 122.33 ಕೋಟಿ ರೂ. ನೀಡಿ ಖರೀದಿಸಿದ್ದರು. 2017 ರಲ್ಲಿ ಶೇ. 0.23 ಅಥವಾ 4.41 ಷೇರುಗಳನ್ನು ಖರೀದಿಸಿದ್ದರು. ಒಂದು ಷೇರನ್ನು 529 ರೂ. ನೀಡಿ ಖರೀದಿಸಿದ್ದ ಪರಿಣಾಮ ಸಿದ್ಧಾರ್ಥ್ ಅವರು ಒಟ್ಟು ಮೈಂಡ್ ಟ್ರೀಯಲ್ಲಿ ಶೇ.19.94 ಪಾಲು ಷೇರನ್ನು ಹೊಂದಿದ್ದರು. ಈ ಮಧ್ಯೆ ಮೈಂಡ್ ಟ್ರೀ ಕಂಪನಿ ಬೋನಸ್ ರೂಪದಲ್ಲಿ ಸಿದ್ಧಾರ್ಥ್ ಅವರಿಗೆ ಷೇರುಗಳನ್ನು ನೀಡಿತ್ತು.

    2018ರಲ್ಲಿ ಸಿದ್ಧಾರ್ಥ್ ಅವರು ಮೈಂಡ್ ಟ್ರೀ ಕಂಪನಿಯಲ್ಲಿ ಒಟ್ಟು ಶೇ.20.41 ರಷ್ಟು ಷೇರುಗಳನ್ನು ಹೊಂದಿದ್ದರು. ಇದರಲ್ಲಿ ಶೇ.3.33 ಅಥವಾ 54.69 ಲಕ್ಷ ಷೇರುಗಳು ನೇರವಾಗಿ ಸಿದ್ಧಾರ್ಥ್ ಅವರ ಹೆಸರಿನಲ್ಲಿದ್ದರೆ ಶೇ.10.63 ಅಥವಾ 1.74 ಷೇರುಗಳು ಕಾಫಿ ಡೇ ಎಂಟರ್‍ಪ್ರೈಸ್ ಹೆಸರಿನಲ್ಲಿತ್ತು. ಉಳಿದ ಶೇ.6.45 ಷೇರುಗಳು ಅಥವಾ 1.05 ಕೋಟಿ ಷೇರುಗಳು ಕಾಫಿ ಡೇ ಟ್ರೇಡಿಂಗ್ ಲಿಮಿಟೆಡ್ ಕಂಪನಿಯ ಹೆಸರಿನಲ್ಲಿತ್ತು.

    ಷೇರು ಬೆಲೆ ಇಳಿಕೆ: ವಿಜಿ ಸಿದ್ಧಾರ್ಥ್ ನಾಪತ್ತೆಯಾದ ಬೆನ್ನಲ್ಲೇ ಕೆಫೆ ಕಾಫಿ ಡೇ ಕಂಪನಿಯ ಷೇರು ಮೌಲ್ಯ ಶೇ.20ರಷ್ಟು ಇಳಿಕೆಯಾಗಿದೆ. 2018ರ ಸಪ್ಟೆಂಬರ್ ತಿಂಗಳಿನಲ್ಲಿ ಒಂದು ಷೇರಿನ ಮೌಲ್ಯ ಗರಿಷ್ಟ 325 ರೂ.ಗೆ ಏರಿಕೆಯಾಗಿದ್ದರೆ ಮಂಗಳವಾರ ಬೆಳಗ್ಗೆ 154.05 ರೂ. ಬೆಲೆಯಲ್ಲಿ ಮಾರಾಟವಾಗುತ್ತಿದೆ. ಸೋಮವಾರದ ಮುಕ್ತಾಯಕ್ಕೆ 192 ರೂ. ಬೆಲೆಯಲ್ಲಿ ಮಾರಾಟವಾಗುತ್ತಿದ್ದ ಷೇರು ಇಂದು 38 ರೂ.ಗೆ ಕುಸಿದಿದೆ.

    ಕೆಫೆ ಕಾಫಿ ಡೇ 2018ರ ಹಣಕಾಸು ವರ್ಷದಲ್ಲಿ 1,777 ಕೋಟಿ ರೂ. ಆದಾಯ ಗಳಿಸಿದ್ದರೆ, 2019ರ 1,814 ಕೋಟಿ ರೂ. ಆದಾಯ ಗಳಿಸಿತ್ತು. 2020ರ ಮಾರ್ಚ್ ವೇಳೆಗೆ 2,250 ಕೋಟಿ ರೂ. ಆದಾಯ ಗಳಿಸುವ ಗುರಿಯನ್ನು ಹಾಕಿಕೊಂಡಿತ್ತು.

    ದೇಶದೆಲ್ಲೆಡೆ ಒಟ್ಟು 1,752 ಕೆಫೆಗಳನ್ನು ಹೊಂದಿದ್ದ ಕಂಪನಿ ಒಟ್ಟು 60 ಸಾವಿರಕ್ಕೂ ಅಧಿಕ ಕಾಫಿ ವೆಂಡಿಂಗ್ ಮಷೀನ್‍ಗಳನ್ನು ಹೊಂದಿದೆ. ಭಾರತ ಅಲ್ಲದೆ ವಿಯೆನ್ನಾ, ಝೆಕ್ ರಿಪಬ್ಲಿಕ್, ಮಲೇಷ್ಯಾ, ನೇಪಾಳ ಮತ್ತು ಈಜಿಪ್ಟ್ ನಲ್ಲೂ ಕಂಪನಿ ವ್ಯವಹಾರ ನಡೆಸುತಿತ್ತು.

    https://www.youtube.com/watch?v=S8AvtIh5VB8

  • ಚನ್ನಪಟ್ಟಣದ ಮುದುಗೆರೆಯಲ್ಲಿದೆ ಸಿದ್ಧಾರ್ಥರ ಅಚ್ಚುಮೆಚ್ಚಿನ ಕಾಫಿ ಡೇ

    ಚನ್ನಪಟ್ಟಣದ ಮುದುಗೆರೆಯಲ್ಲಿದೆ ಸಿದ್ಧಾರ್ಥರ ಅಚ್ಚುಮೆಚ್ಚಿನ ಕಾಫಿ ಡೇ

    ರಾಮನಗರ: ಖ್ಯಾತ ಉದ್ಯಮಿ ಹಾಗೂ ಮಾಜಿ ಸಿಎಂ ಎಸ್.ಎಂ ಕೃಷ್ಣರವರ ಅಳಿಯ ಸಿದ್ದಾರ್ಥ್ ಉಳ್ಳಾಲದ ನೇತ್ರಾವತಿ ನದಿಯ ಬ್ರಿಡ್ಜ್ ಬಳಿ ನಾಪತ್ತೆಯಾಗಿದ್ದು, ಅವರ ಒಡೆತನದ ಕಾಫಿ ಡೇಗಳ ಸಿಬ್ಬಂದಿಗಳಲ್ಲಿ ಆತಂಕ ಮನೆ ಮಾಡಿದೆ. ನಾಪತ್ತೆಯಾಗಿರುವ ಉದ್ಯಮಿ ಸಿದ್ಧಾರ್ಥರ ಅಚ್ಚುಮೆಚ್ಚಿನ ಕಾಫಿ ಡೇಗಳಲ್ಲಿ ಚನ್ನಪಟ್ಟಣ ತಾಲೂಕಿನ ಮುದುಗೆರೆ ಸಮೀಪದಲ್ಲಿನ ಕಾಫಿ ಡೇ ಕೂಡ ಒಂದಾಗಿತ್ತು.

    ಕಾಫಿ ಡೇ ಆರಂಭವಾದಾಗಿನಿಂದ ಇಂದಿನ ತನಕ ಸಾಕಷ್ಟು ಬಾರಿ ಉದ್ಯಮಿ ಸಿದ್ಧಾರ್ಥ್ ಅವರು ಈ ಕಾಫಿ ಡೇಗೆ ಭೇಟಿ ನೀಡಿದ್ದಾರೆ. ಅಲ್ಲದೇ ಬೆಂಗಳೂರಿನಿಂದ ಮೈಸೂರು ಇಲ್ಲವೇ ಮೈಸೂರಿನಿಂದ ಬೆಂಗಳೂರು ಕಡೆಗೆ ಪ್ರಯಾಣಿಸುವ ವೇಳೆ ಈ ಕಾಫಿ ಡೇಗೆ ಭೇಟಿ ನೀಡಿ ಕೆಲ ಕಾಲ ಸಮಯ ಕಳೆಯುತ್ತಿದ್ದರು.

    ಇತ್ತೀಚೆಗೆ ಮಾಜಿ ಸಿಎಂ ಎಸ್‍ಎಂ ಕೃಷ್ಣ ಅವರ ಸೋದರ ಎಸ್.ಎಂಶಂಕರ್ ನಿಧನದ ಹಾಗೂ ಅವರ ಪುಣ್ಯತಿಥಿಯ ದಿನ ಕೂಡ ಈ ಕಾಫಿ ಡೇಗೆ ಭೇಟಿ ನೀಡಿ ಕಾಫಿ ಕುಡಿದು ಕಾಫಿ ಡೇ ಸಿಬ್ಬಂದಿಯನ್ನು ಆತ್ಮೀಯವಾಗಿ ಮಾತನಾಡಿಸಿದ್ದರು.

    ತಮ್ಮ ಕುಟುಂಬದ ಜೊತೆ ಹೊರಗೆ ಹೋಗುವ ವೇಳೆಯೂ ಕೂಡ ತಪ್ಪದೇ ಈ ಕಾಫಿ ಡೇಗೆ ಭೇಟಿ ನೀಡುತ್ತಿದ್ದರು ಎಂದು ಸಿಬ್ಬಂದಿಗಳು ತಿಳಿಸಿದ್ದಾರೆ. ಜೊತೆಗೆ ನಾಪತ್ತೆಯಾಗಿರುವ ತಮ್ಮ ಯಜಮಾನ ಸೇಫ್ ಆಗಿ ಬರಲಿ ಎಂದು ಹಾರೈಸುತ್ತಿದ್ದಾರೆ. ಆದರೆ ಸಿದ್ಧಾರ್ಥ್ ಅವರು ನಾಪತ್ತೆಯಾಗಿ ಸುಮಾರು 21 ಗಂಟೆಯಾದರೂ ಇನ್ನೂ ಪತ್ತೆಯಾಗಿಲ್ಲ. ಪೊಲೀಸ್, ಅಗ್ನಿಶಾಮಕ ದಳ ಸೇರಿದಂತೆ ಅನೇಕರು ಹುಡುಕಾಟ ಮಾಡುತ್ತಿದ್ದಾರೆ.

  • ಉದ್ಯಮಿ ಸಿದ್ಧಾರ್ಥ್ ನಾಪತ್ತೆ – ಸೇತುವೆಯಿಂದ ಹಾರಿದ್ದನ್ನು ಕಂಡ ಪ್ರತ್ಯಕ್ಷದರ್ಶಿ ಹೇಳಿದ್ದೇನು?

    ಉದ್ಯಮಿ ಸಿದ್ಧಾರ್ಥ್ ನಾಪತ್ತೆ – ಸೇತುವೆಯಿಂದ ಹಾರಿದ್ದನ್ನು ಕಂಡ ಪ್ರತ್ಯಕ್ಷದರ್ಶಿ ಹೇಳಿದ್ದೇನು?

    ಮಂಗಳೂರು: ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಅನುಮಾನದ ಬೆನ್ನಲ್ಲೇ ಪ್ರತ್ಯಕ್ಷದರ್ಶಿಯೊಬ್ಬರು ನೀಡಿದ ಹೇಳಿಕೆ ಈಗ ಮಹತ್ವ ಪಡೆದುಕೊಂಡಿದೆ. ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಸ್ಥಳೀಯ ವ್ಯಕ್ತಿ ಸೈಮನ್ ತಾವು ನೋಡಿದ ದೃಶ್ಯಗಳ ಬಗ್ಗೆ ವಿವರಿಸಿದ್ದಾರೆ.

    ಸೈಮನ್ ಹೇಳಿದ್ದೇನು?
    ಸೋಮವಾರ ಸಂಜೆ 5.30ರ ವೇಳೆಗೆ ನಾನು ನದಿ ಬಳಿ ಮೀನು ಹಿಡಿಯಲು ಹೋಗಿದ್ದೆ. ರಾತ್ರಿ 7.30ರ ವೇಳೆಗೆ ಸೇತುವೆ ಬಳಿ ಶಬ್ದ ಕೇಳಿ ಬಂತು. ತಕ್ಷಣ ನೋಡಿದ ಕೂಡಲೇ ವ್ಯಕ್ತಿಯೊಬ್ಬರು ನದಿಗೆ ಹಾರಿದ್ದು, ಅಲ್ಲಿಂದ ಸ್ವಲ್ಪ ದೂರ ಸಾಗಿದ್ದು ಕಂಡು ಬಂತು. ನಾನು 6ನೇ ಪಿಲ್ಲರ್ ಬಳಿ ಇದ್ದೆ, ಅವರು 8ನೇ ಪಿಲ್ಲರ್ ಬಳಿ ಹಾರಿದ್ದರು.

    ಕೂಡಲೇ ಅವರನ್ನು ರಕ್ಷಣೆ ಮಾಡುವ ಪ್ರಯತ್ನ ನಡೆಸಿದೆ. ಒಬ್ಬನೇ ಇದ್ದ ಕಾರಣ ನನಗೆ ಅವರು ಸಿಗಲಿಲ್ಲ. ಆದ್ದರಿಂದ ನನ್ನ ಪ್ರಯತ್ನ ವಿಫಲವಾಯಿತು. ಮೋಟರ್ ಇಲ್ಲದ ದೋಣಿಯಲ್ಲಿ ತೆರಳಿದ್ದೆ. ಬೇಗ ಹೋಗುವ ಪ್ರಯತ್ನ ಸಾಧ್ಯವಾಗಲಿಲ್ಲ. ಅವರು ಯಾವ ರೀತಿ ಇದ್ದರು, ಯಾವ ಬಟ್ಟೆ ಧರಿಸಿದ್ದರು ಎಂಬ ಬಗ್ಗೆ ನನಗೆ ಮಾಹಿತಿ ಇಲ್ಲ. ಈ ಹಿಂದೆ ಇಂತಹದ್ದೆ ಸಂದರ್ಭದಲ್ಲಿ 6 ಮಂದಿಯನ್ನ ರಕ್ಷಣೆ ಮಾಡಿದ್ದೆ. ನಮಗೂ ಜೀವದ ಕುರಿತು ಆಸೆ ಇರುವುದರಿಂದ ನದಿಗೆ ಹಾರದೇ ದೋಣಿ ಮೂಲಕವೇ ಸಾಗುತ್ತೇವೆ. ಏಕೆಂದರೆ ನೀರಿನ ರಭಸ ಹೆಚ್ಚಾಗಿರುತ್ತದೆ.

    ಇದಕ್ಕೂ ಮುನ್ನ ಸಾಕಷ್ಟು ಮಂದಿ ಇಲ್ಲಿಯೇ ಬಂದು ಹಾರಿದ್ದರು. ಆದ್ದರಿಂದ ನಾನು ಸ್ಥಳೀಯವಾಗಿ ಮಾಹಿತಿ ನೀಡಿದ್ದೆ ಅಷ್ಟೇ. ಮಳೆ ಪ್ರಮಾಣ ಕಡಿಮೆ ಇರುವುದರಿಂದ ದೇಹ ಸಿಗುವ ಸಾಧ್ಯತೆ ಇದೆ. ಯಾವುದೇ ಮೃತ ದೇಹವಾದರೂ 24 ಗಂಟೆ ಬಳಿಕ ನೀರಿನಿಂದ ಮೇಲೆ ಬರುತ್ತದೆ. ಸಮುದ್ರಕ್ಕೆ ಕೊಚ್ಚಿ ಹೋಗುವ ಸಾಧ್ಯತೆ ಕಡಿಮೆ ಇದ್ದು, ನದಿಯಲ್ಲೇ ಸಿಗುವ ವಿಶ್ವಾಸ ಇದೆ. ಈ ಬಗ್ಗೆ ಬೆಳಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದೇನೆ. ಕಾರ್ಯಾಚರಣೆ ನಡೆಯುತ್ತಿದ್ದು, ಎಲ್ಲರ ನಿರೀಕ್ಷೆ ಒಂದೇ ಇದೆ ಎಂದರು.

    https://www.youtube.com/watch?v=S8AvtIh5VB8

  • ಸಿದ್ಧಾರ್ಥ್ ಆದಷ್ಟು ಬೇಗ ನಮ್ಮ ಕಣ್ಮುಂದೆ ಬರಲಿ – ಕಾಫಿ ಡೇ ಸಿಬ್ಬಂದಿ

    ಸಿದ್ಧಾರ್ಥ್ ಆದಷ್ಟು ಬೇಗ ನಮ್ಮ ಕಣ್ಮುಂದೆ ಬರಲಿ – ಕಾಫಿ ಡೇ ಸಿಬ್ಬಂದಿ

    ಬೆಂಗಳೂರು: ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಹೆಗಡೆ ನಾಪತ್ತೆಯಾಗಿದ್ದು, ಇದೀಗ ಅವರ ಸುರಕ್ಷಿತವಾಗಿ ವಾಪಸ್ ಬರಲಿ ಎಂದು ಸಿಬ್ಬಂದಿ ದೇವರಲ್ಲಿ ಪ್ರಾರ್ಥಿಸಿಕೊಳ್ಳುತ್ತಿದ್ದಾರೆ.

    ನಗರದ ಮಲ್ಲೇಶ್ವರಂ ಕಾಫಿ ಡೇಯ ಮಹಿಳಾ ಸಿಬ್ಬಂದಿಯೊಬ್ಬರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಸಾಮಾನ್ಯವಾಗಿ ಸಿದ್ಧಾರ್ಥ್ ಅವರು ಒಳ್ಳೆಯ ವ್ಯಕ್ತಿತ್ವದವರು. ಅವರು ನಮ್ಮ ಜೊತೆ ಚೆನ್ನಾಗಿದ್ದರು. ಅಂಥವರು ಇದೀಗ ಕಾಣೆಯಾಗಿದ್ದಾರೆ ಎಂದರೆ ನಮಗೆ ನಂಬಲು ಸಾಧ್ಯವಾಗುತ್ತಿಲ್ಲ. ಅವರು ಆದಷ್ಟು ಬೇಗ ಅವರು ನಮ್ಮ ಕಣ್ಣ ಮುಂದೆ ಬರಲಿ ಎಂದು ನಾವು ದೇವರಲ್ಲಿ ಬೇಡಿಕೊಳ್ಳುವುದಾಗಿ ತಿಳಿಸಿದರು.

    ತುಂಬಾ ಸರಳ ವ್ಯಕ್ತಿಯಾಗಿದ್ದಾರೆ. ತನ್ನ ಸಿಬ್ಬಂದಿಯನ್ನು ಅವರು ತುಂಬಾನೇ ಚೆನ್ನಾಗಿಯೇ ಉಪಚರಿಸುತ್ತಿದ್ದರು. ಆದರೆ ಇದೀಗ ಅವರು ದಿಢೀರ್ ನಾಪತ್ತೆಯಾಗಿರುವುದು ನಮಗೆಲ್ಲ ಬೇಸರ ತಂದಿದೆ. ಹೀಗಾಗಿ ನಮಗೆ ಏನು ಹೇಳಬೇಕು ಎಂದು ಗೊತ್ತಾಗುತ್ತಿಲ್ಲ ಎಂದು ಅವರು ಬೇಸರ ವ್ಯಕ್ತಪಡಿಸಿದರು.

    ಸಿದ್ಧಾರ್ಥ್ ಅವರು ನಾಪತ್ತೆಯಾಗಿರುವ ಸುದ್ದಿ ನಮಗೆ ನಮ್ಮ ವಾಟ್ಸಪ್ ಗ್ರೂಪಿನಿಂದಾಗಿ ಬೆಳಗ್ಗೆ ಗೊತ್ತಾಯಿತು. ಈ ವಿಚಾರ ತಿಳಿದ ತಕ್ಷಣವೇ ನನಗೆ ತುಂಬಾನೆ ದುಃಖವಾಯಿತು. ಯಾಕೆಂದರೆ ಅವರು ತುಂಬಾನೆ ಚೆನ್ನಾಗಿ ಸಿಬ್ಬಂದಿಯನ್ನು ನೋಡಿಕೊಳ್ಳುತ್ತಾರೆ ಹಾಗೆಯೇ ಮಾತನಾಡಿಸುತ್ತಾರೆ. ಹೀಗಾಗಿ ಅವರು ಆದಷ್ಟು ಬೇಗ ಅವರು ಸುರಕ್ಷಿತವಾಗಿ ಬರಲಿ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸುತ್ತಿದ್ದೇವೆ.

    ಅವರು ಹೆಣ್ಣು- ಗಂಡು ಎಂಬ ಬೇಧ-ಭಾವವಿಲ್ಲದೆ ಎಲ್ಲರಿಗೂ ಕಾಫಿ ಡೇಯಲ್ಲಿ ಕೆಲಸ ಮಾಡಲು ಅವಕಾಶ ಮಾಡಿಕೊಡುತ್ತಾರೆ. ಚಿಕ್ಕಮಗಳೂರಲ್ಲಿ ಅವರ ಸಂಸ್ಥೆಯೊಂದಿದೆ. ಅಲ್ಲಿ ನಮಗೆ ತರಬೇತಿ ಕೊಡುತ್ತಾರೆ ಎಂದರು.

    ತರಬೇತಿ ಪಡೆದು ಬಂದು ಸುಮಾರು 6 ತಿಂಗಳು ಆಯ್ತು. ಮಲ್ಲೇಶ್ವರಂನಲ್ಲಿರುವ ಇನ್ನೊಂದು ಕಾಫಿ ಡೇಗೆ ಒಂದು ಬಾರಿ ಅವರು ಬಂದಿದ್ದರು. ತುಂಬಾ ಸರಳವಾಗಿರುವ ಅವರು ನಗುನಗುತ್ತಾ ಸಿಬ್ಬಂದಿಯನ್ನು ಮಾತನಾಡಿಸಿದ್ದರು. ದೊಡ್ಡ ವ್ಯಕ್ತಿಯೆಂಬ ಅಹಂಕಾರ ಅವರಲ್ಲಿ ಇಲ್ಲ. ಹೀಗಾಗಿ ಅವರನ್ನು ನೋಡಿದ್ದರೆ ನಮಗೆ ಪಾಸಿಟಿವ್ ಥಿಂಕಿಂಗ್ ಬರುತ್ತದೆ ಎಂದು ತಮ್ಮ ಬಾಸ್ ಬಗ್ಗೆ ಹೇಳಿಕೊಂಡರು.

    https://www.youtube.com/watch?v=UN-UV3nFFwo