Tag: ಕಾಬೂಲ್ ವಿಮಾನ ನಿಲ್ದಾಣ

  • ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು

    ಕಾಬೂಲ್ ತೊರೆಯುವ ಮುನ್ನ 73 ಏರ್​​ಕ್ರಾಫ್ಟ್ ನಿಷ್ಕ್ರಿಯಗೊಳಿಸಿದ ಅಮೆರಿಕ ಸೈನಿಕರು

    ಕಾಬೂಲ್: ತಾಲಿಬಾನಿಗಳು ನೀಡಿದ ಎಚ್ಚರಿಕೆಯಂತೆ ಅಮೆರಿಕ ಸೇನೆ ಸೋಮವಾರ ಕಾಬೂಲ್ ನಿಂದ ತೆರಳಿದ್ದಾರೆ. ಆದ್ರೆ ತೆರಳುವ ಮುನ್ನ ಕಾಬೂಲ್ ವಿಮಾನ ನಿಲ್ದಾಣದಲ್ಲಿ 73 ಏರ್ ಕ್ರಾಫ್ಟ್ ಗಳನ್ನು ಬಳಕೆ ಬರದಂತೆ ಮಾಡಿ ಹೋಗಿದ್ದಾರೆ. ಇತ್ತ ಅಮೆರಿಕ ಸೈನಿಕರ ವಿಮಾನ ಟೇಕಾಫ್ ಆಗುತ್ತಿದ್ದಂತೆ ತಾಲಿಬಾನಿಗಳು ಕಾಬೂಲ್ ಏರ್ ಪೋರ್ಟ್ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

    73 ಏರ್ ಕ್ರಾಫ್ಟ್ ಗಳನ್ನು ಹಮಿದ್ ಕರ್ಜಾಯಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿದೆ. ಆದ್ರೆ ಇನ್ಮುಂದೆ ಈ ಏರ್ ಕ್ರಾಫ್ಟ್ ಬಳಕೆಗೆ ಬರದಂತೆ ನಿಷ್ಕ್ರಿಯಗೊಳಿಸಲಾಗಿದೆ. ಈ ವಿಮಾನಗಳು ಮುಂದೆ ಹಾರಾಡುವ ಸ್ಥಿತಿಯಲ್ಲಿಲ್ಲ. ಇವುಗಳನ್ನು ಮತ್ತೆ ರಿಪೇರಿ ಮಾಡಲು ಸಹ ಸಾಧ್ಯವಿಲ್ಲ ಎಂದು ಸೆಂಟ್ರಲ್ ಕಮಾಂಡ್ ಮುಖ್ಯಸ್ಥ ಜನರಲ್ ಕೆನೆಥ್ ಮೌಕೆಂಜಿ ಹೇಳಿದ್ದಾರೆ.

    ಅಮೆರಿಕ ಸೇನೆ ಸುಮಾರು 70 ಮೇನ್ ರಿಜಿಸ್ಟೆಂಟ್ ಆಂಬುಶ್ ಪ್ರೊಟೆಕ್ಷನ್ (MRAP) ವೆಹಿಕಲ್ ಗಳನ್ನು ಕಾಬೂಲ್ ವಿಮಾನನಿಲ್ದಾಣದಲ್ಲಿ ಬಿಟ್ಟು ತೆರಳಿದೆ. ಈ ವೆಹಿಕಲ್ ಗಳು ಐಇಡಿ ದಾಳಿ ಮತ್ತು ಶತ್ರುಗಳ ದಾಳಿ ಸಮರ್ಥವಾಗಿ ಎದುರಿಸುವ ಸಾಮರ್ಥ್ಯ ಹೊಂದಿವೆ. ಒಂದು ವೆಹಿಕಲ್ ಬೆಲೆ ಸುಮಾರು 10 ಲಕ್ಷ ಡಾಲರ್ ಗೂ ಅಧಿಕವಾಗಿದೆ. ಆದ್ರೆ ಇವುಗಳನ್ನು ಸಹ ಅಮೆರಿಕ ಬಳಕೆ ಬಾರದಂತೆ ನಿಷ್ಕ್ರಿಯ ಮಾಡಿದೆ. ಇದನ್ನೂ ಓದಿ: ಕಾರಿನಿಂದ ರಾಕೆಟ್ ಉಡಾಯಿಸ್ತಿದ್ದ ಉಗ್ರರು- ಫೋಟೋಗಳು ಔಟ್

    ಅಮೆರಿಕ ಸೇನೆ ತೆರಳುತ್ತಿದ್ದಂತೆ ರಾತ್ರಿ 12 ಗಂಟೆಗೆ ಕಾಬೂಲ್ ವಿಮಾನ ನಿಲ್ದಾಣ ಪ್ರವೇಶಿಸಿದ ತಾಲಿಬಾನಿಗಳು, ಇದೊಂದು ಐತಿಹಾಸಿಕ ಕ್ಷಣವಾಗಿದ್ದು, ಇನ್ಮುಂದೆ ಸಂಪೂರ್ಣ ಅಫ್ಘಾನಿಸ್ತಾನ ನಮ್ಮದು. ಇದು ನಮ್ಮೆಲ್ಲರ ಗೆಲುವು, ಇದುವೆ ಸ್ವತಂತ್ರ ದಿನ. ಅಮೆರಿಕ ಸೇರಿದಂತೆ ಎಲ್ಲ ದೇಶಗಳ ಜೊತೆ ಉತ್ತಮ ಬಾಂಧವ್ಯ ಬೆಳೆಸಿಕೊಳ್ಳೋಣ ಎಂದು ತಾಲಿಬಾನಿಗಳು ಘೋಷಿಸಿ ಸಂಭ್ರಮಾಚರಣೆ ಮಾಡಿದ್ದಾರೆ. ಇದನ್ನೂ ಓದಿ: ತಾಲಿಬಾನಿಗಳ ಮುಂದಿನ ಪ್ರಧಾನಿ ಅಫ್ರಿದಿ – ನೆಟ್ಟಿಗರಿಂದ ಫುಲ್ ಟ್ರೋಲ್

  • ಕಾರಿನಿಂದ ರಾಕೆಟ್ ಉಡಾಯಿಸ್ತಿದ್ದ ಉಗ್ರರು- ಫೋಟೋಗಳು ಔಟ್

    ಕಾರಿನಿಂದ ರಾಕೆಟ್ ಉಡಾಯಿಸ್ತಿದ್ದ ಉಗ್ರರು- ಫೋಟೋಗಳು ಔಟ್

    ಕಾಬೂಲ್: ಇಂದು ಬೆಳಗ್ಗೆ ಕಾಬೂಲ್ ವಿಮಾನ ನಿಲ್ದಾಣದ ವ್ಯಾಪ್ತಿಯಲ್ಲಿ ಐದು ರಾಕೆಟ್ ಗಳ ದಾಳಿ ನಡೆದಿದ್ದು, ಆದ್ರೆ ಈ ಯತ್ನ ವಿಫಲವಾಗಿದೆ ಎಂದು ಹೇಳಲಾಗುತ್ತಿದೆ. ಅಮೆರಿಕ ಸೇನೆ ಮಿಸೈಲ್ ಸಿಸ್ಟಂ (ರಾಕೆಟ್ ಉಡಾವಣೆ ಮಾಡುತ್ತಿದ್ದ ಕಾರ್)ನ್ನು ಸ್ಫೋಟಗೊಳಿಸಿದೆ.

    ಐಸಿಸ್-ಕೆ ಉಗ್ರ ಸಂಘಟನೆ ಅಮೆರಿಕಾ ನಡೆಸಿದ ಏರ್ ಸ್ಟ್ರೈಕ್ ಗೆ ಪ್ರತ್ಯುತ್ತರ ನಡೆಸಲು ಈ ರಾಕೆಟ್ ದಾಳಿ ನಡೆಸಿದೆ ಎನ್ನಲಾಗಿದೆ. ಭಾನುವಾರ ಸಹ ಕಾಬೂಲ್ ವಿಮಾನ ನಿಲ್ದಾಣದ ಬಳಿಯ ಜನವಸತಿ ಪ್ರದೇಶದ ಮೇಲೆ ರಾಕೆಟ್ ಬಿದ್ದು ಸ್ಫೋಟಗೊಂಡಿತ್ತು. ಅಮೆರಿಕ ಸೇನಾ ತುಕಡಿಯನ್ನು ಗುರಿಯಾಗಿಸಿಯೇ ಈ ದಾಳಿ ನಡೆದಿತ್ತು. ಆದ್ರೆ ಗುರಿ ತಪ್ಪಿದ ರಾಕೆಟ್ ಜನವಸತಿ ಪ್ರದೇಶದ ಮೇಲೆ ಪತನಗೊಂಡಿತ್ತು. ಸದ್ಯ ಕಾಬೂಲ್ ಏರ್ ಪೋರ್ಟ್ ಮೇಲಿನ ದಾಳಿ ನಡೆಸಿದ ಕಾರ್ ಫೋಟೋಗಳು ಹೊರ ಬಂದಿವೆ.

    ಸೋಮವಾರ ಬೆಳಗ್ಗೆ ಕಾಬೂಲ್‍ನ ಸಲೀಂ ಕರ್ವಾನ್ ಬಳಿ ರಾಕೆಟ್ ದಾಳಿ ನಡೆಸಲಾಗಿದ್ದು, ಜೊತೆಗೆ ಗುಂಡಿನ ದಾಳಿ ಕೂಡ ನಡೆಸಲಾಗಿದೆ. ಆದರೆ ಘಟನೆ ವೇಳೆ ಗುಂಡು ಹಾರಿಸಿದವರು ಯಾರು ಎಂಬುದರ ಬಗ್ಗೆ ಪತ್ತೆಯಾಗಿಲ್ಲ. ಅಲ್ಲದೇ 3 ಬಾರಿ ಸ್ಫೋಟಗೊಂಡ ಶಬ್ಧ ಮತ್ತು ಆಕಾಶದಲ್ಲಿ ಏನೋ ಮಿಂಚಿದಂತೆ ಕಂಡಿದೆ. ಈ ಸ್ಫೋಟಗಳ ನಂತರ ಜನರು ಸ್ಥಳ ತೊರೆದು ಹೋಗಿರುವುದಾಗಿ ಎಂದು ಅಲ್ಲಿನ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾಬೂಲ್ ಏರ್ ಪೋರ್ಟ್ ಬಳಿ ಐಸಿಸ್-ಕೆ ರಾಕೆಟ್ ದಾಳಿ – ಇಬ್ಬರ ಸಾವು.

    ರಾಕೆಟ್ ದಾಳಿಯನ್ನು ವಿಫಲಗೊಸುವಲ್ಲಿ ನಮ್ಮ ಸೇನೆ ಯಶಸ್ವಿಯಾಗಿದೆ ಎಂದು ಶ್ವೇತ ಭವನ ಅಧಿಕೃತ ಹೇಳಿಕೆ ನೀಡಿದೆ. ದಾಳಿಯ ಎಚ್ಚರಿಕೆಯನ್ನು ಮೊದಲೇ ನೀಡಿ, ಅಫ್ಘಾನಿಸ್ತಾನದಲ್ಲಿರುವ ಅಮೆರಿಕನ್ನರಿಗೆ ವಿಮಾನ ನಿಲ್ದಾಣದತ್ತ ಬರಬಾರದು ಎಂದು ಸಂದೇಶ ರವಾನಿಸಿತ್ತು. ಗುರುವಾರ ನಡೆದ ದಾಳಿಯಲ್ಲಿ 13 ಸೈನಿಕರು ಸೇರಿದಂತೆ 170 ಜನರು ಸಾವನ್ನಪ್ಪಿದ್ದರು. ಇದನ್ನೂ ಓದಿ: ತಾಲಿಬಾನಿಗಳ ಹೊಸ ಆದೇಶ- ಹುಡುಗ, ಹುಡುಗಿ ಜೊತೆಯಾಗಿ ಓದುವಂತಿಲ್ಲ

  • ಕಾಬೂಲ್ ಏರ್ ಪೋರ್ಟ್ ಬಳಿ ಐಸಿಸ್-ಕೆ ರಾಕೆಟ್ ದಾಳಿ – ಇಬ್ಬರ ಸಾವು

    ಕಾಬೂಲ್ ಏರ್ ಪೋರ್ಟ್ ಬಳಿ ಐಸಿಸ್-ಕೆ ರಾಕೆಟ್ ದಾಳಿ – ಇಬ್ಬರ ಸಾವು

    – ಅಮೆರಿಕ ಸೇನೆ ಗುರಿಯಾಗಿಸಿ ನಡೆದ ದಾಳಿ

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ನೆತ್ತರ ಕೋಡಿ ಮುಂದುವರಿದಿದ್ದು, ಇಂದು ನಡೆದ ರಾಕೆಟ್ ದಾಳಿಯಲ್ಲಿ ಇಬ್ಬರು ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಗುರುವಾರ ನಡೆದ ಬಾಂಬ್ ಸ್ಫೋಟದಲ್ಲಿ 13 ಅಮೆರಿಕ ಸೈನಿಕರು ಸೇರಿದಂತೆ 170 ಜನರು ಸಾವನ್ನಪ್ಪಿದ್ದರು.

    ಇಂದು ಸಂಜೆ ಕಾಬೂಲ್ ವಿಮಾನ ನಿಲ್ದಾಣದ ಪಶ್ಚಿಮ ರಿಹಾಯಶಿ ಇಲಾಖೆಯ ಖಾಜಾ-ಏ-ಬುಗಾರದಲ್ಲಿ ಈ ದಾಳಿ ನಡೆದಿದೆ. ಐಸಿಸ್-ಕೆ ಉಗ್ರ ಸಂಘಟನೆ ಕಾಬೂಲ್ ವಿಮಾನ ನಿಲ್ದಾಣದಲ್ಲಿರುವ ಅಮೆರಿಕ ಸೇನೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಲು ಮುಂದಾಗಿತ್ತು. ಆದ್ರೆ ಗುರಿ ತಪ್ಪಿದ ರಾಕೆಟ್ ಜನವಸತಿ ಪ್ರದೇಶದಲ್ಲಿ ಬಿದ್ದು ಸ್ಫೋಟಗೊಂಡಿದೆ. ಆದ್ರೆ ಇದರಲ್ಲಿ ಯಾವುದೇ ಸೂಸೈಡ್ ಬಾಂಬರ್ ಗಳು ಇರಲಿಲ್ಲ ಎಂಬುದರ ಬಗ್ಗೆ ಖಚಿತ ಮಾಹಿತಿ ಪ್ರಕಟವಾಗಿಲ್ಲ.

    ಕಾಬೂಲ್ ಸ್ಥಳೀಯ ಮಾಧ್ಯಮಗಳ ಪ್ರಕಾರ ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿ, ಮೂವರು ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ ಮಕ್ಕಳು ಮತ್ತು ಮಹಿಳೆಯರಿದ್ದಾರೆ ಎಂದು ಹೇಳಲಾಗುತ್ತಿದೆ. ಇತ್ತ ಅಫ್ಘಾನ್ ಪೊಲೀಸರ ಪ್ರಕಾರ ರಾಕೆಟ್ ವಿಮಾನ ನಿಲ್ದಾಣದಲ್ಲಿ ಪತನಗೊಂಡಿದೆ ಎಂದು ಹೇಳಲಾಗುತ್ತಿದೆ. . ಇದನ್ನೂ ಓದಿಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್

    ಅಮೆರಿಕ ಅಧ್ಯಕ್ಷ ಜೋ ಬೈಡನ್ ಶುಕ್ರವಾರವೇ ಕಾಬೂಲ್ ಏರ್ ಪೋರ್ಟ್ ಮೇಲೆ ಉಗ್ರರ ದಾಳಿ ನಡೆಸುವ ಸಾಧ್ಯತೆಗಳಿವೆ. ಹಾಗಾಗಿ ತಮ್ಮ ದೇಶದ ಜನರು ವಿಮಾನ ನಿಲ್ದಾಣದತ್ತ ಬರಬಾರದು ಎಂದು ಹೇಳಿದ್ದರು. ಇತ್ತ ತಾಲಿಬಾನಿಗಳು ಸಹ ಐಸಿಸ್-ಕೆ ದಾಳಿ ನಡೆಸುವ ಸಾಧ್ಯತೆಗಳಿದ್ದು, ಜನರು ವಿಮಾನ ನಿಲ್ದಾಣದತ್ತ ಬರಕೂಡದು ಎಂದು ಹೇಳಿ, ಏರ್ ಪೋರ್ಟಿಗೆ ಸಂಪರ್ಕಿಸುವ ರಸ್ತೆಗಳಿಗೆ ತನ್ನ ಜನರನ್ನು ನಿಯೋಜಿಸಿತ್ತು. ಇದನ್ನೂ ಓದಿ: ಟಿವಿ, ರೇಡಿಯೋಗಳಲ್ಲಿ ಮಹಿಳೆಯ ಧ್ವನಿ ಬ್ಯಾನ್- ತಾಲಿಬಾನ್ ಆದೇಶ

    ಐಎಸ್‍ಕೆಪಿ ಉಗ್ರರು ಯಾವುದೇ ಕ್ಷಣದಲ್ಲಿ ಮತ್ತಷ್ಟು ದಾಳಿಗಳನ್ನು ನಡೆಸಬಹುದು ಎನ್ನಲಾಗಿದೆ. ಈ ದಾಳಿ ನಡುವೆಯೂ ಕಾಬೂಲ್ ಏರ್ ಪೋರ್ಟ್ ನಿಂದ ಜನರ ಏರ್‍ಲಿಫ್ಟ್ ಮುಂದುವರಿದಿದೆ. ಈ ಮಧ್ಯೆ ಕಾಬೂಲ್ ಸೇರಿ ಎಲ್ಲಾ ಕಡೆ, ಬ್ಯಾಂಕ್ ಮತ್ತು ಎಟಿಎಂಗಳಿಗೆ ಜನ ಮುಗಿಬಿದ್ದಿದ್ದಾರೆ. ತಮ್ಮ ಖಾತೆಯಲ್ಲಿನ ಹಣ ಬಿಡಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಆದ್ರೆ ಬ್ಯಾಂಕ್‍ನಲ್ಲಿ ದುಡ್ಡಿಲ್ಲ. ಎಟಿಎಂನಲ್ಲಿಯೂ ದುಡ್ಡಿಲ್ಲದೇ ಜನ ಪರದಾಡುತ್ತಿದ್ದಾರೆ. ಜನ ಆಕ್ರೋಶಗೊಳ್ಳುತ್ತಿದ್ದಂತೆ ಅವರನ್ನು ಚೆದುರಿಸಲು ತಾಲಿಬಾನ್ ಉಗ್ರರು ಬ್ಯಾಂಕ್ ಬಳಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಇದನ್ನೂ ಓದಿ: ಕಾಬೂಲ್‍ನಲ್ಲಿ ಮತ್ತೊಂದು ಪ್ರಬಲ ಬಾಂಬ್ ಸ್ಫೋಟ

    ಈ ನಡುವೆ ಭಾರತದೊಂದಿಗೆ ತಾಲಿಬಾನ್ ಉತ್ತಮ ಬಾಂದವ್ಯ ಬಯಸುತ್ತಿದೆ ಅಂತ ತಾಲಿಬಾನ್ ಮುಖಂಡ ಮೊಹಮ್ಮದ್ ಅಬ್ಬಾಸ್ ಸಂದೇಶ ನೀಡಿದ್ದಾರೆ. ಈ ಎಲ್ಲದರ ಮಧ್ಯೆ, ಭಾರತ-ಅಫ್ಘಾನ್ ಸ್ನೇಹದ ಭಾಗವಾಗಿ ಹೆರಾತ್‍ನಲ್ಲಿ ಭಾರತ ಕಟ್ಟಿಸಿರುವ ಬೃಹತ್ ಅಣೆಕಟ್ಟಿಗೆ ಭೇಟಿಗೆ ತಾಲಿಬಾನಿಗಳು ಭೇಟಿ ನೀಡಿದ್ದಾರೆ. ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿದ ರಕ್ಷಣಾ ಸಚಿವ ರಾಜನಾಥ್, ಬದಲಾದ ಪರಿಸ್ಥಿತಿಯಲ್ಲಿ ನಾವೂ ವ್ಯೂಹಗಳನ್ನು ಬದಲಿಸುತ್ತಿದ್ದೇವೆ. ಎಂಥಹ ಪರಿಸ್ಥಿತಿ ಬಂದರೂ ಎದುರಿಸಲು ಸಿದ್ಧ ಇದ್ದೇವೆ ಎಂದು ಘೋಷಿಸಿದ್ದಾರೆ.

  • ಕಾಬೂಲ್‍ನಲ್ಲಿ ಎಟಿಎಂಗಳ ಮುಂದೆ ಜನಸಾಗರ – ಬ್ಯಾಂಕ್ ಸಿಬ್ಬಂದಿಯಿಂದ ಪ್ರತಿಭಟನೆ

    ಕಾಬೂಲ್‍ನಲ್ಲಿ ಎಟಿಎಂಗಳ ಮುಂದೆ ಜನಸಾಗರ – ಬ್ಯಾಂಕ್ ಸಿಬ್ಬಂದಿಯಿಂದ ಪ್ರತಿಭಟನೆ

    ಕಾಬೂಲ್: ತಾಲಿಬಾನ್ ಉಗ್ರರ ದಾಳಿಯಿಂದ ಈಗಾಗಲೇ ತತ್ತರಿಸಿ ಹೋಗಿದ್ದ ಜನರು ಈಗ ಹಣಕ್ಕಾಗಿ ಪರದಾಡುವಂತೆ ಆಗಿದೆ.

    ಮೂರು ದಿನಗಳ ಹಿಂದೆಯಷ್ಟೇ ಬ್ಯಾಂಕ್ ವಹಿವಾಟು ಪ್ರಾರಂಭವಾಗಿದ್ದು, ಇದರ ಮಧ್ಯೆ ‘ನ್ಯೂ ಕಾಬೂಲ್ ಬ್ಯಾಂಕ್’ ಸಿಬ್ಬಂದಿ ಸೇರಿದಂತೆ ಇತರೆ ಸರ್ಕಾರಿ ಉದ್ಯೋಗಿಗಳು ತಮ್ಮ ಐದಾರು ತಿಂಗಳ ವೇತನ ನೀಡುವಂತೆ ಪ್ರತಿಭಟನೆಯನ್ನು ಮಾಡುತ್ತಿದ್ದಾರೆ. ಜನರು ಎಟಿಎಂ ಮುಂದೆ ಕ್ಯೂ ನಿಂತು ಹಣವಿಲ್ಲದೇ ದಿಕ್ಕಿತೋಚದ ಪರಿಸ್ಥಿತಿಯಲ್ಲಿದ್ದಾರೆ.ಇದನ್ನೂ ಓದಿ:ಮಹಿಳೆಯರಿಗೆ ಹೇಗೆ ಗೌರವ ಕೊಡಬೇಕು ಎಂಬುದನ್ನು ಗಂಡು ಮಕ್ಕಳಿಗೆ ಮನೆಯಲ್ಲಿ ಹೇಳಬೇಕು: ಪೂಜಾಗಾಂಧಿ

    ಇತ್ತೀಚೆಗಷ್ಟೇ ಬ್ಯಾಂಕ್ ಪ್ರಾರಂಭಿಸಿದ್ದರೂ ಸಹ ಎಟಿಎಂನಲ್ಲಿ ಹಣವಿಲ್ಲವೆಂದು ಜನರು ಪೇಚಾಡುತ್ತಿದ್ದಾರೆ. ಕೆಲವು ಎಟಿಎಂಗಳು ಕಾರ್ಯನಿರ್ವಹಿಸುತ್ತಿದ್ದರೂ, ಸಹ ಅವುಗಳಲ್ಲಿ ದಿನಕ್ಕೆ 200 ಡಾಲರ್ ಅಷ್ಟೇ ಹಣ ತೆಗೆಯಲು ಸಾಧ್ಯವಾಗುತ್ತಿದೆ. ಈ ಕಾರಣಕ್ಕೆ ಎಟಿಎಂ ಮುಂದೆ ಜನರ ಕ್ಯೂ ನಿಂತಿದ್ದಾರೆ.

    ಗುರುವಾರ ಬಾಂಬ್ ದಾಳಿ ಬಳಿಕ ದೇಶ ತೊರೆಯುವವರ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ತಾಲಿಬಾನಿಗಳನ್ನು ವಿಮಾನ ನಿಲ್ದಾಣದ ಸಮೀಪ ಮತ್ತು ಸಂಪರ್ಕಿಸುವ ಕಲ್ಪಿಸುವ ಮಾರ್ಗಗಳಲ್ಲಿ ಜನರನ್ನು ನೇಮಿಸಿದೆ. ಇತ್ತ ಬ್ರಿಟನ್, ಜರ್ಮನಿ ಸೇರಿದಂತೆ ಹಲವು ದೇಶಗಳು ಏರ್ ಲಿಫ್ಟ್ ಮಾಡೋದನ್ನ ಸ್ಥಗಿತಗೊಳಿಸಿವೆ. ಇತ್ತ ಆಗಸ್ಟ್ 31ರೊಳಗೆ ರಕ್ಷಣಾ ಕಾರ್ಯ ಪೂರ್ಣವಾಗದಿದ್ರೆ ನಮ್ಮ ಕಾರ್ಯಚರಣೆ ಮುಂದುವರಿಯಲಿದೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ. ಆಗಸ್ಟ್ 31ರೊಳಗೆ ತಮ್ಮ ಸೇನೆಯನ್ನು ಹಿಂಪಡೆಯುವಂತೆ ಅಮೆರಿಕಾಗೆ ತಾಲಿಬಾನಿಗಳು ಎಚ್ಚರಿಕೆ ನೀಡಿದ್ದಾರೆ.ಇದನ್ನೂ ಓದಿ:ಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್

     

  • ಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್

    ಕಾಬೂಲ್ ವಿಮಾನ ನಿಲ್ದಾಣದ ಎಂಟ್ರಿ ಗೇಟ್ ಬಳಿ ಮತ್ತೆ ಫೈರಿಂಗ್

    ಕಾಬೂಲ್: ಅಮೆರಿಕ ಎಚ್ಚರಿಕೆ ನಡುವೆಯೂ ಮತ್ತೆ ಕಾಬೂಲ್ ವಿಮಾನ ನಿಲ್ದಾಣದ ಪ್ರವೇಶದ್ವಾರದ ಬಳಿ ಗುಂಡಿನ ಸದ್ದು ಕೇಳಿದೆ. ಗುಂಡಿನ ಸದ್ದು ಕೇಳುತ್ತಿದ್ದಂತೆ ಭಯಗೊಂಡ ಜನರು ಚದುರಿದ್ದಾರೆ. ಗುಂಡಿನ ದಾಳಿ ಜೊತೆ ಅಶ್ರುವಾಯು ಪ್ರಯೋಗಿಸಲಾಗಿದೆ ಎಂದು ವರದಿಯಾಗಿದೆ.

    ಗುಂಡಿನ ದಾಳಿ ಯಾರು ನಡೆಸಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ಇದುವರೆಗೂ ಯಾವುದೇ ಉಗ್ರ ಸಂಘಟನೆಗಳು ಘಟನೆ ಹೊಣೆಯನ್ನು ಹೊತ್ತುಕೊಂಡಿಲ್ಲ. ಗುರುವಾರ ನಡೆದ ಬಾಂಬ್ ಸ್ಫೋಟದಲ್ಲಿ 13 ಅಮೆರಿಕ ಸೈನಿಕರು ಸೇರಿದಂತೆ 170 ಜನರು ಪ್ರಾಣ ಕಳೆದುಕೊಂಡಿದ್ದರು.

    ಒಂದು ದಿನ ಮುಂಚೆಯೇ ಅಮೆರಿಕ ಉಗ್ರರ ದಾಳಿಯ ಸುಳಿವು ನೀಡಿತ್ತು. ಆದ್ದರಿಂದ ತನ್ನ ದೇಶದ ಜನರಿಗೆ ಕಾಬೂಲ್ ವಿಮಾನ ನಿಲ್ದಾಣದತ್ತ ತೆರಳದಂತೆ ಸೂಚನೆ ನೀಡಿತ್ತು. ಕಾಬೂಲ್ ವಿಮಾನ ನಿಲ್ದಾಣದ ಅಬ್ಬೆ ಗೇಟ್, ಈಸ್ಟ್ ಗೇಟ್ ಮತ್ತು ನಾರ್ಥ್ ಗೇಟ್ ಬಳಿ ದಾಳಿ ನಡೆಯುವ ಸಾಧ್ಯತೆಗಳಿವೆ ಎಂದು ಅಮೆರಿಕ ಎಚ್ಚರಿಕೆ ಸಂದೇಶ ನೀಡಿತ್ತು. ಇದನ್ನೂ ಓದಿ: ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

    ಕಾಬೂಲ್ ನಿಂದ ಅಮೆರಿಕ ಸೇನೆ ಹಿಂದಿರುಗುವ ಮೊದಲೇ ಐಎಸ್‍ಐಎಸ್ ದಾಳಿ ನಡೆಸುವ ಎಚ್ಚರಿಕೆಯನ್ನು ಅಧ್ಯಕ್ಷ ಜೋ ಬೈಡನ್ ಎಚ್ಚರಿಸಿದ್ದರು. ಈ ಕುರಿತು ಮಾಹಿತಿ ನೀಡಿರುವ¸ ಶ್ವೇತ ಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಸಾಕಿ, ಕಾಬೂಲ್ ಏರ್ ಪೋರ್ಟ್ ರಕ್ಷಣೆಗೆ ವ್ಯವಸ್ಥೆ ಕಲ್ಪಿಸಲಾಗಿದ್ದು, ಎಲ್ಲ ಆತಂಕಗಳ ನಡುವೆಯೂ ನಮ್ಮ ಸೈನಿಕರು ಸಂತ್ರಸ್ತರನ್ನು ಏರ್ ಲಿಫ್ಟ್ ಮಾಡುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಆದ್ರೆ ಈ ಕಾರ್ಯಾಚರಣೆ ಮುಂದಿನ ದಿನಗಳು ಅಪಾಯಕಾರಿಯಾಗಿರಲಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆದ ಅಫ್ಘಾನ್ ಮಾಜಿ ಸಚಿವ!

    ಗುರುವಾರ ಬಾಂಬ್ ದಾಳಿ ಬಳಿಕ ದೇಶ ತೊರೆಯುವವರ ಸಂಖ್ಯೆ ಹೆಚ್ಚಳವಾಗಿದೆ. ಆದ್ದರಿಂದ ತಾಲಿಬಾನಿಗಳನ್ನು ವಿಮಾನ ನಿಲ್ದಾಣದ ಸಮೀಪ ಮತ್ತು ಸಂಪರ್ಕಿಸುವ ಕಲ್ಪಿಸುವ ಮಾರ್ಗಗಳಲ್ಲಿ ಜನರನ್ನು ನೇಮಿಸಿದೆ. ಇತ್ತ ಬ್ರಿಟನ್, ಜರ್ಮನಿ ಸೇರಿದಂತೆ ಹಲವು ದೇಶಗಳು ಏರ್ ಲಿಫ್ಟ್ ಮಾಡೋದನ್ನ ಸ್ಥಗಿತಗೊಳಿಸಿವೆ. ಇತ್ತ ಆಗಸ್ಟ್ 31ರೊಳಗೆ ರಕ್ಷಣಾ ಕಾರ್ಯ ಪೂರ್ಣವಾಗದಿದ್ರೆ ನಮ್ಮ ಕಾರ್ಯಚರಣೆ ಮುಂದುವರಿಯಲಿದೆ ಎಂದು ಅಮೆರಿಕ ಸ್ಪಷ್ಟಪಡಿಸಿದೆ. ಆಗಸ್ಟ್ 31ರೊಳಗೆ ತಮ್ಮ ಸೇನೆಯನ್ನು ಹಿಂಪಡೆಯುವಂತೆ ಅಮೆರಿಕಾಗೆ ತಾಲಿಬಾನಿಗಳು ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ:  ಐಸಿಸ್-ಕೆ ಉಗ್ರರ ವಿರುದ್ಧ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುಡುಗು

  • ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ – 11 ಮಂದಿ  ಸಾವು

    ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಫೋಟ – 11 ಮಂದಿ ಸಾವು

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಒಂದು ಕಡೆ ತಾಲಿಬಾನಿಗಳ ಹಿಂಸೆ ನಡುವೆ, ಕಾಬೂಲ್ ವಿಮಾನ ನಿಲ್ದಾಣದ ಪ್ರವೇಶದ್ವಾರವೊಂದರಲ್ಲಿ ಆತ್ಮಾಹುತಿ ದಾಳಿ ಸಂಭವಿಸಿದೆ.

    ಪ್ರಾಥಮಿಕ ವರದಿಗಳ ಪ್ರಕಾರ 11 ಮಂದಿ ಮೃತಪಟ್ಟಿದ್ದಾರೆ. ಸಾವು, ನೋವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.ತಾಲಿಬಾನಿ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎಂದು ಬ್ರಿಟನ್ ಎಚ್ಚರಿಕೆ ನೀಡಿತ್ತು. ಅಮೆರಿಕ ಕೂಡ ಕಾಬೂಲ್ ಏರ್‍ಪೋರ್ಟ್‍ನಿಂದ ದೂರ ಇರುವಂತೆ ಎಚ್ಚರಿಸಿತ್ತು. ಈ ಬೆನ್ನಲ್ಲೇ ಆತ್ಮಾಹುತಿ ದಾಳಿ ನಡೆದಿದೆ.  ಇದನ್ನೂ ಓದಿ :ಜರ್ಮನಿಯಲ್ಲಿ ಪಿಜ್ಜಾ ಡೆಲಿವರಿ ಬಾಯ್ ಆದ ಅಫ್ಘಾನ್ ಮಾಜಿ ಸಚಿವ! 

    ಯಾರೂ ದೇಶಬಿಟ್ಟು ಹೋಗಬೇಡಿ. ಮುಂದಿನ ದಿನಗಳಲ್ಲಿ ನಮ್ಮ ಸರ್ಕಾರ ರಚನೆಯಾಗಲಿದೆ ಎಂದು ತಾಲಿಬಾನಿಗಳು ಆಫ್ಘನ್ ಪ್ರಜೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

    ಸಾವಿರಾರು ಜನರು ವಿದೇಶಕ್ಕೆ ತೆರಳಲು ಕಾಬೂಲ್ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಿದ್ದಾರೆ. ಭಾರೀ ಸಂಖ್ಯೆಯಲ್ಲಿ ಜನ ಸೇರುತ್ತಿರುವ ಹಿನ್ನೆಲೆಯಲ್ಲಿ ಭಯ ಹುಟ್ಟಿಸಲು ಉಗ್ರರು ಈ ಬಾಂಬ್ ದಾಳಿ ನಡೆಸಿದ್ದಾರೆ.

    https://twitter.com/BarzanSadiq/status/1430901687544279043

    ಕಾಬೂಲ್ ವಿಮಾನ ನಿಲ್ದಾಣದಲ್ಲಿ ಬಾಂಬ್ ದಾಳಿ ಆಗಿರುವುದನ್ನು ಅಮೆರಿಕ ದೃಢಪಡಿಸಿದೆ. ಈ ಸಮಯದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎನ್ನುವುದು ತಿಳಿದು ಬಂದಿಲ್ಲ ಎಂದು ಪೆಂಟಗನ್ ತಿಳಿಸಿದೆ.

  • ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

    ಕಾಬೂಲ್‍ನಲ್ಲಿ 3 ಸಾವಿರ ರೂ.ಗೆ ಒಂದು ಬಾಟೆಲ್ ನೀರು, ಪ್ಲೇಟ್ ರೈಸ್‍ಗೆ 7,500 ರೂ.

    ಕಾಬೂಲ್: ಅಫ್ಘಾನಿಸ್ತಾನ ರಾಜಧಾನಿ ತಾಲಿಬಾನಿಗಳ ವಶವಾಗುತ್ತಿದ್ದಂತೆ ಆರ್ಥಿಕ ಚಟುವಟಿಕೆಗಳ ಮೇಲೆ ನೇರ ಪರಿಣಾಮ ಬೀರಿದೆ. ದೇಶ ತೊರೆಯಲು ಮುಂದಾಗಿ ಕಾಬೂಲ್ ವಿಮಾನನಿಲ್ದಾಣ ತಲುಪಿರುವ ಜನರಿಗೆ ಮೂರು ಸಾವಿರ ರೂಪಾಯಿ ನೀಡಿ ಒಂದು ಬಾಟೆಲ್ ನೀರು ಖರೀದಿಸುವ ಕಠಿಣ ಪರಿಸ್ಥಿತಿ ಎದುರಾಗಿದೆ. ಇತ್ತ ಒಂದು ಪ್ಲೇಟ್ ರೈಸ್‍ಗೆ 7,500 ರೂ. ನೀಡಲಾಗುತ್ತಿದೆ. ಹೇಗಾದ್ರೂ ಮಾಡಿ ಇಲ್ಲಿಂದ ಹೋದ್ರೆ ಸಾಕು ಅಂತಿರುವ ಜನರು ಅನಿವಾರ್ಯವಾಗಿ ಇಷ್ಟು ಹಣ ನೀಡಿ ಅನ್ನಾಹಾರ ಖರೀದಿಸುತ್ತಿದ್ದಾರೆ. ಆದ್ರೆ ಮಧ್ಯಮ ವರ್ಗದ ಜನರ ಸ್ಥಿತಿ ಆ ದೇವರಿಗೆ ಪ್ರೀತಿ ಎಂಬಂತಾಗಿದೆ.

    ಈ ರೀತಿಯ ಕಷ್ಟಗಳು ಎದುರಾದ್ರೂ ಜನ ಮತ್ತೆ ತಮ್ಮ ಮನೆಗಳಿಗೆ ಹಿಂದಿರುಗುವ ಬಗ್ಗೆ ಆಲೋಚನೆಯೂ ಮಾಡುತ್ತಿಲ್ಲ. ಮತ್ತೊಂದು ಕಡೆ ವಿಮಾನ ಏರುವ ತಮ್ಮ ಸರದಿಗಾಗಿ ಕಾಯುತ್ತಿರುವ ಜನರ ಸಹಾಯಕ್ಕೆ ಅಮೆರಿಕ ಸೈನಿಕರು ಮುಂದಾಗಿದ್ದು, ಆಹಾರದ ಪೊಟ್ಟಣಗಳನ್ನು ವಿತರಿಸುತ್ತಿದ್ದಾರೆ. ಕಾಬೂಲ್ ವಿಮಾನ ನಿಲ್ದಾಣದ ಹೊರಗಡೆ ನೀರು ಮತ್ತು ಆಹಾರ ಮಾರಾಟ ಮಾಡಲಾಗುತ್ತಿದೆ. ಆರ್ಥಿಕವಾಗಿ ಸಶಕ್ತರಾಗಿರುವವರು ಹಣ ನೀಡಿ ಖರೀದಿಸುತ್ತಿದ್ದಾರೆ.

    kabul

    ಇನ್ನು ಕೆಲ ಮಾರಾಟಗಾರರು ಡಾಲರ್ ನೀಡಿದ್ರೆ ಮಾತ್ರ ಆಹಾರ ನೀಡುತ್ತಿದ್ದಾರೆ. ಕೆಲವರು ಆಹಾರವಿಲ್ಲದೇ ಕುಳಿತಲ್ಲಿಯೇ ಕುಸಿದು ಬೀಳುತ್ತಿರುವ ಬಗ್ಗೆ ವರದಿಯಾಗಿವೆ. ದೇಶವನ್ನು ವಶಕ್ಕೆ ಪಡೆದ ತಾಲಿಬಾನಿಗಳು ಪ್ರಜೆಗಳ ಮೇಲೆ ಹಲ್ಲೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

    ತಾಲಿಬಾನಿಗಳು ಕಾಬೂಲ್ ವಶಕ್ಕೆ ಪಡೆದ ನಂತರ ಸುಮಾರು 75,900 ಜನರನ್ನು ಏರ್ ಲಿಫ್ಟ್ ಮಾಡಲಾಗಿದೆ. ಇದರಲ್ಲಿ ಅಮೆರಿಕ 70,700 ಜನರನ್ನು ರಕ್ಷಣೆ ಮಾಡಿದೆ. ಕಾಬೂಲ್ ವಿಮಾನ ನಿಲ್ದಾಣದತ್ತ ಬರುವ ಜನರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿಲ್ಲ. ಇನ್ನು ಸುಮಾರು 2 ಲಕ್ಷಕ್ಕೂ ಅಧಿಕ ಜನರು ಅಫ್ಘಾನಿಸ್ತಾನಕ್ಕೆ ಗುಡ್ ಬೈ ಹೇಳಲು ಸಿದ್ಧರಾಗಿದ್ದಾರೆ ಎಂದು ಅಂದಾಜಿಸಲಾಗಿದೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

  • ಕಾಬೂಲ್‍ನಿಂದ ಉಕ್ರೇನ್ ವಿಮಾನ ಹೈಜಾಕ್

    ಕಾಬೂಲ್‍ನಿಂದ ಉಕ್ರೇನ್ ವಿಮಾನ ಹೈಜಾಕ್

    ಕಾಬೂಲ್: ಅಫ್ಘಾನಿಸ್ತಾನದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ತೆರಳಿದ್ದ ಉಕ್ರೇನ್ ವಿಮಾನ ಹೈಜಾಕ್ ಮಾಡಲಾಗಿದೆ. ತಮ್ಮ ವಿಮಾನವನ್ನು ಇರಾನ್ ಗೆ ತೆಗೆದುಕೊಂಡು ಹೋಗಲಾಗಿದೆ ಎಂದು ಉಕ್ರೇನ್ ಸರ್ಕಾರದ ಸಚಿವರು ಹೇಳಿದ್ದಾರೆ. ಭಾನುವಾರವೇ ವಿಮಾನವೇ ಹೈಜಾಕ್ ಆಗಿದ್ದು, ಕೆಲ ಅಪರಿಚಿತರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ ಉಕ್ರೇನ್ ಸರ್ಕಾರ ಹೇಳಿದೆ.

    ಉಕ್ರೇನ್ ಡೆಪ್ಯುಟಿ ವಿದೇಶಾಂಗ ಮಂತ್ರಿ ಯೆವ್ಗೆನಿ ಯೆನಿನ್, ಭಾನುವಾರ ಕೆಲ ಅಪರಿಚಿತರು ವಿಮಾನ ಹೈಜಾಕ್ ಮಾಡಿದ್ದು, ಇರಾನ್ ನತ್ತ ತೆಗೆದುಕೊಂಡು ಹೋಗಿದ್ದಾರೆ. ನಮ್ಮ ಜನರು ಏರ್ ಪೋರ್ಟ್ ತಲುಪದ ಕಾರಣ ವಿಮಾನವನ್ನು ನಿಗದಿತ ಪ್ಲಾನ್ ನಂತೆ ಮೂರು ಸ್ಥಳಗಳಿಗೆ ತೆಗೆದುಕೊಂಡು ಹೋಗಲು ವಿಫಲವಾಗಿದ್ದೇವೆ ಎಂದು ಹೇಳಿದ್ದಾರೆ.

    ವಿಮಾನ ಈಶಾನ್ಯ ಇರಾನಿನ ಮಶಹದ್ ಏರ್ ಪೋರ್ಟ್ ಗೆ ಬಂದಿತ್ತು. ಅಲ್ಲಿ ರೀಪ್ಯೂಲಿಂಗ್ ಬಳಿಕ ಉಕ್ರೇನ್ ನತ್ತ ಟೇಕಾಫ್ ಆಗಿತ್ತು. ನಂತರ ಕಿವ್ ವಿಮಾನ ನಿಲ್ದಾಣದಲ್ಲಿ ಅದು ಲ್ಯಾಂಡ್ ಆಗಿತ್ತು ಎಂದು ಇರಾನ್ ಮಂತ್ರಿ ಅಬ್ಬಾಸ್ ಅಸ್ಲಾನಿ ಮಾಹಿತಿ ನೀಡಿದ್ದಾರೆ.

    ವಿಮಾನ ಹೈಜಾಕ್ ಮಾಡಿದವರು ಶಸ್ತ್ರಸಜ್ಜಿತರಾಗಿದ್ದರು. ಆದ್ರೆ ಇದುವರೆಗೂ ಈ ವಿಮಾನ ಹೈಜಾಕ್ ಮಾಡಿದವರು ಯಾರು ಎಂಬುದರ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಅಫ್ಘಾನಿಸ್ತಾನ ತಾಲಿಬಾನಿಗಳ ವಶವಾಗುತ್ತಿದ್ದಂತೆ ಉಕ್ರೇನ್ ನಿರಂತರವಾಗಿ ತನ್ನ ಜನರನ್ನು ಏರ್ ಲಿಫ್ಟ್ ಮಾಡುತ್ತಿದೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

    ಕೆಲ ವರದಿಗಳ ಪ್ರಕಾರ, ಕಾಬೂಲ್ ನಿಂದ ಕಿವ್ ವರೆಗೂ 83 ಜನರನ್ನು ಕರೆದುಕೊಂಡು ಬರಲಾಗಿತ್ತು. ಇದರಲ್ಲಿ 31 ಉಕ್ರೇನ್ ಪ್ರಜೆಗಳಿದ್ದಾರೆ ಎಂದು ಹೇಳಲಾಗುತ್ತಿದೆ. ಸದ್ಯ ಅಫ್ಘಾನಿಸ್ತಾದಲ್ಲಿ 100 ಉಕ್ರೇನ್ ಪ್ರಜೆಗಳಿದ್ದು, ಅವರನ್ನ ವಾಪಸ್ ಕರೆಸಿಕೊಳ್ಳುವ ಕೆಲಸ ತ್ವರಿತಗತಿಯಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಪಂಜಶೀರ್ ವಶಕ್ಕೆ ಮುಂದಾಗಿದ್ದ 300 ತಾಲಿಬಾನಿಗಳು ಮಟಾಷ್!

    ತಾಲಿಬಾನಿಗಳು ಕಾಬೂಲ್ ನಗರ ವಶಕ್ಕೆ ಪಡೆದುಕೊಳ್ಳುತ್ತಿದ್ದಂತೆ ಭಾರತ, ಫ್ರಾನ್ಸ್, ಉಕ್ರೇನ್, ಜರ್ಮನಿ, ಬ್ರಿಟನ್, ಅಮೆರಿಕ ತನ್ನ ಪ್ರಜೆಗಳನ್ನು ಕರೆಸಿಕೊಳ್ಳುತ್ತಿದೆ. ನಾಟೋ ದೇಶಗಳ ಜೊತೆ ಸೇರಿ ಕಾಬೂಲ್ ವಿಮಾನ ನಿಲ್ದಾಣವನ್ನು ಅಮೆರಿಕ ತನ್ನ ನಿಯಂತ್ರಣದಲ್ಲಿರಿಸಿಕೊಂಡಿದೆ. ಅಮೆರಿಕದ ಸಹಾಯದಿಂದ ಇನ್ನಿತರ ದೇಶಗಳು ಪ್ರಜೆಗಳ ರಕ್ಷಣಾ ಕಾರ್ಯದಲ್ಲಿ ತೊಡಗಿಕೊಂಡಿವೆ. ಇದನ್ನೂ ಓದಿ: ಯುದ್ಧದಲ್ಲಿ ಸಹಾಯ ಮಾಡಿದ ಅಫ್ಘನ್ನರಿಗೆ ಅಮೆರಿಕದಲ್ಲಿ ಆಶ್ರಯ: ಜೋ ಬೈಡನ್ ಘೋಷಣೆ

  • ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

    ಅಫ್ಘಾನಿಸ್ತಾನದಲ್ಲಿ ಅಮ್ಮನಿಂದ ದೂರವಾದ ಕಂದಮ್ಮನನ್ನ ರಕ್ಷಿಸಿದ ಟರ್ಕಿ ಸೈನಿಕರು

    – ಸ್ನಾನ ಮಾಡಿಸಿ ಹಾಲು ನೀಡಿದ್ರು

    ಕಾಬೂಲ್: ಕಾಬೂಲ್ ವಿಮಾನನಿಲ್ದಾಣದ ಬಳಿ ಅಮ್ಮನಿಂದ ದೂರವಾಗಿದ್ದ ಮಗುವಿಗೆ ಟರ್ಕಿ ಸೈನಿಕರು ಆಹಾರ ನೀಡಿ ರಕ್ಷಿಸಿರುವ ಫೋಟೋ ಮತ್ತು ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಫ್ಘಾನಿಸ್ತಾನ ನರಹಂತಕರ ಕೈವಶಗೊಂಡು ಆರು ದಿನಗಳು ಕಳೆದಿದ್ದು, ಪ್ರತಿನಿತ್ಯ ಹೃದಯವಿದ್ರಾವಕ ದೃಶ್ಯಗಳು ಬೆಳಕಿಗೆ ಬರುತ್ತಿವೆ.

    ಟರ್ಕಿ ಸೈನಿಕರನ್ನು ಶುಕ್ರವಾರ ಕಾಬೂಲ್ ವಿಮಾನ ನಿಲ್ದಾಣದ ಬಳಿ ನಿಯೋಜಿಸಲಾಗಿತ್ತು. ಫರಿಶ್ತಾ ರಹಮಾನಿ ಎಂಬಾತ ಎರಡು ತಿಂಗಳ ಮಗುವನ್ನು ತೆಗೆದುಕೊಂಡು ಓಡಾಡುತ್ತಿದ್ದನು. ಮಗುವನ್ನು ಕಂಡು ಸೈನಿಕರು ಆತನನ್ನು ಕರೆದು ವಿಚಾರಿಸಿದ್ದಾರೆ. ಈ ವೇಳೆ ಮಗುವಿನ ತಾಯಿ ಹಿಂದೆ ಉಳಿದುಕೊಂಡರು. ಈಗ ಮಗು ಹಸಿವಿನಿಂದ ಅಳುತ್ತಿದೆ ಎಂದು ಕಣ್ಣೀರು ಹಾಕಿದ್ದಾನೆ.

    ಮಗುವಿನ ಆಕ್ರಂದನಕ್ಕೆ ಕರಗಿದ ಟರ್ಕಿ ಸೈನಿಕರು ಕಂದಮ್ಮನ ತಂದೆಯನ್ನು ಸುರಕ್ಷಿತ ಸ್ಥಳದಲ್ಲಿರಲು ಅವಕಾಶ ಮಾಡಿಕೊಟ್ಟಿದ್ದಾರೆ. ನಂತರ ಮಗುವಿಗೆ ಸ್ನಾನ ಮಾಡಿಸಿ ಹಾಲುಣಿಸಿ ಆರೈಕೆ ಮಾಡಿದ್ದಾರೆ. ಅಲ್ಲಿದ್ದ ಮಹಿಳಾ ಸೈನಿಕ ಸಿಬ್ಬಂದಿ ಮಗುವಿಗೆ ಜೋಗುಳ ಹಾಡಿ ಸಮಾಧಾನ ಮಾಡುತ್ತಿರುವ ವೀಡಿಯೋ ವೈರಲ್ ಆಗಿದೆ. ಇದನ್ನೂ ಓದಿ: ಷರಿಯತ್ ಕಾನೂನು ಎಂದರೇನು? ಅಫ್ಘಾನ್ ತಾಲಿಬಾನ್ ಹೇಗೆ ಅರ್ಥೈಸುತ್ತದೆ?

    ಅಫ್ಘಾನರ ಕಷ್ಟಕ್ಕೆ ಸ್ಪಂದಿಸುತ್ತಿರುವ ಅಮೆರಿಕ ಸೈನಿಕರು:
    ಜನರನ್ನ ಏರ್ ಲಿಫ್ಟ್ ಮಾಡಲಾಗ್ತಿದೆ ಎಂದು ಸುದ್ದಿ ತಿಳಿದು ಅಫ್ಘನ್ನರು ವಿಮಾನ ನಿಲ್ದಾಣದತ್ತ ದೌಡಾಯಿಸುತ್ತಿದ್ದಾರೆ. ತಾಲಿಬಾನಿಗಳಿಂದಾಗಿ ವಿಮಾನ ನಿಲ್ದಾಣದ ಹೊರಗಡೆ ಕಾಯುತ್ತಾ, ತಮ್ಮನ್ನು ದೇಶದಿಂದ ಹೊರಗೆ ಕರೆದುಕೊಂಡು ಹೋಗುವಂತೆ ಅಮೆರಿಕ ಸೈನಿಕರಲ್ಲಿ ಮನವಿ ಮಾಡಿಕೊಳ್ಳುತ್ತಿದ್ದಾರೆ. ಊಟ, ನೀರು ಇಲ್ಲದೇ ಕುಳಿತ ಅಫ್ಘನ್ನರಿಗೆ ಅಮೆರಿಕ ಸೈನಿಕರು ಆಹಾರ ನೀಡಿ ಮಾನವೀಯತೆ ಮೆರೆಯುತ್ತಿದ್ದಾರೆ. ಇದನ್ನೂ ಓದಿ: ನಮ್ಮ ಸೈನಿಕರ ಮೇಲೆ ದಾಳಿಯಾದ ಮರು ಕ್ಷಣವೇ ಪ್ರತಿದಾಳಿ – ಅಮೆರಿಕ ಅಧ್ಯಕ್ಷ ಬೈಡನ್ ಎಚ್ಚರಿಕೆ

  • ಕಾಬೂಲ್‍ನಲ್ಲಿ ಸುರಕ್ಷಿತವಾಗಿದ್ದೇನೆ: ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಸಂದೇಶ

    ಕಾಬೂಲ್‍ನಲ್ಲಿ ಸುರಕ್ಷಿತವಾಗಿದ್ದೇನೆ: ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ಸಂದೇಶ

    ಬೆಂಗಳೂರು: ಅಫ್ಘಾನಿಸ್ತಾನದಲ್ಲಿರುವ ಸಿಲುಕಿರುವ ಮಂಗಳೂರು ಮೂಲದ ಸಿಸ್ಟರ್ ಥೆರೆಸಾ ಕ್ರಾಸ್ತಾ ತಾವು ಕಾಬೂಲ್ ನಗರದ ಕಾನ್ವೆಂಟಿಯಲ್ಲಿ ಸುರಕ್ಷಿತವಾಗಿರುವ ಬಗ್ಗೆ ಆಡಿಯೋ ಸಂದೇಶ ಕಳುಹಿಸಿದ್ದಾರೆ.

    ಸಿಸ್ಟರ್ ಥೆರೆಸಾ ಕ್ರಾಸ್ಟಾ ಆಡಿಯೋ ಮೆಸೇಜ್
    ನಾನು ಸಿಸ್ಟರ್ ಥೆರೇಸಾ… ಕಾಬೂಲ್ ಕಾನ್ವೆಂಟಿನಲ್ಲಿ ಸುರಕ್ಷಿತವಾಗಿದ್ದೇನೆ. ನಾನು ಕೆಲಸ ಮಾಡುವ ಸಂಸ್ಥೆಯು ಪಿಪಿಕೆ ಇಟಾಲಿಯನಾ ಅವರು ನನ್ನ ಸುರಕ್ಷತೆಗೆ ಇಟಾಲಿಯನ್ ಕೌನ್ಸಲೆಂಟ್ ರೋಮ್ ನಿಂದ ಇಟಲಿಗೆ ಹೋಗಲು ಎಲ್ಲಾ ವ್ಯವಸ್ಥೆಯನ್ನು ಮಾಡಿದೆ. ಸದ್ಯಕ್ಕೆ ಕಾಬೂಲ್ ವಿಮಾನ ನಿಲ್ದಾಣದಲ್ಲಿ ಗೊಂದಲ ಇರುವುದರಿಂದ ಒಳಗೆ ಪ್ರವೇಶವಿಲ್ಲ. ಆದ್ದರಿಂದ ನಮ್ಮ ಪ್ರಯಾಣವನ್ನು ಮುಂದೂಡಲಾಗಿದೆ. ಏರ್ಪೋರ್ಟ್ ಗೆ ಪ್ರವೇಶ ನೀಡುವಾಗ ನಮ್ಮನ್ನು ಕರೆದುಕೊಂಡು ಹೋಗುವರು. ಇಂಡಿಯನ್ ಎಂಬೆಸಿಗೆ ನಾನು ರಿಜಿಸ್ಟರ್ ಮಾಡಿರೋದ್ರಿಂದ ಸುರಕ್ಷತೆಗೆ ಎಲ್ಲಾ ವ್ಯವಸ್ಥೆ ಮಾಡುತ್ತಿದ್ದಾರೆ. ನಿಮ್ಮ ಸಹಕಾರಕ್ಕೆ ನನ್ನ ತುಂಬು ಹೃದಯದ ವಂದನೆಗಳು ಎಂದು ಹೇಳಿದ್ದಾರೆ.

    ಬೈಡನ್ ಎಚ್ಚರಿಕೆ:
    ಶುಕ್ರವಾರ ತಡರಾತ್ರಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಅಫ್ಘಾನಿಸ್ತಾನದ ವಿಷಯದ ಕುರಿತು ಮಾತನಾಡಿದ್ದಾರೆ. ಈ ವೇಳೆ ಇದು ಜಗತ್ತಿನಲ್ಲಿ ಅತಿ ದೊಡ್ಡ ಸಮಸ್ಯೆ. ಭಯೋತ್ಪಾದನೆಗೆ ಅಫ್ಘನ್ ನೆಲೆ ಬಳಸಲು ಬಿಡಲ್ಲ ಎಂದು ಹೇಳಿದ್ದಾರೆ. ನಮ್ಮ ಸೈನಿಕರ ಮೇಲೆ ದಾಳಿಯಾದ ಮರುಕ್ಷಣವೇ ಪ್ರತಿದಾಳಿ ನಡೆಸುತ್ತೇವೆ ಎಂದು ಅಮೆರಿಕ ಅಧ್ಯಕ್ಷ ಜೋ ಬೈಡನ್ ತಾಲಿಬಾನಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಅಫ್ಘಾನಿಸ್ತಾನದಲ್ಲಿ ಶಾಲೆ, ಕಾಲೇಜು ಬಂದ್ – ಬುರ್ಖಾ ಅಂಗಡಿ ಓಪನ್

    ಬೈಡನ್ ಭರವಸೆ:
    ನಾವು ಜುಲೈನಿಂದ ಇಲ್ಲಿಯವರೆಗೆ 18 ಸಾವಿರಕ್ಕೂ ಹೆಚ್ಚು ಮತ್ತು ಆಗಸ್ಟ್ 14ರ ನಂತರ 13 ಸಾವಿರ ಜನರನ್ನು ಕಾಬೂಲ್ ನಿಂದ ಸ್ಥಳಾಂತರ ಮಾಡಿದ್ದೇವೆ. ಇದು ಇತಿಹಾಸದಲ್ಲಿ ಕಂಡು ಕೇಳರಿಯದ ದೊಡ್ಡ ಸಮಸ್ಯೆಯಾಗಿದ್ದು, ದೊಡ್ಡ ಮಟ್ಟದಲ್ಲಿಯೇ ಜನರ ಏರ್ ಲಿಫ್ಟ್ ಕಾರ್ಯ ನಡೆಯುತ್ತಿದೆ. ಇದೇ ವೇಳೆ ಕಾಬೂಲ್ ನಲ್ಲಿಯ ಜನರ ಏರ್ ಲಿಫ್ಟ್ ಮಾಡಲು ಅಮೆರಿಕದ ಸರ್ಕಾರ ಬದ್ಧವಾಗಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಷರಿಯತ್ ಕಾನೂನು ಎಂದರೇನು? ಅಫ್ಘಾನ್ ತಾಲಿಬಾನ್ ಹೇಗೆ ಅರ್ಥೈಸುತ್ತದೆ?