Tag: ಕಾಮಿಡಿ ಶೋ

  • ಕಪಿಲ್ ಶರ್ಮಾ ಶೋನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

    ಕಪಿಲ್ ಶರ್ಮಾ ಶೋನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್

    ಹಿಂದಿಯ ಪ್ರತಿಷ್ಠಿತ ಟಾಕ್ ಶೋ ‘ಕಪಿಲ್ ಶರ್ಮಾ ಶೋ’ ನಲ್ಲಿ ಕನ್ನಡದ ಹೆಸರಾಂತ ನಟ ಗೋಲ್ಡನ್ ಸ್ಟಾರ್ ಗಣೇಶ್ ಭಾಗಿಯಾಗಿದ್ದಾರೆ. ಕಪಿಲ್ ಜೊತೆಗಿನ ಫೋಟೋವನ್ನು ಹಾಗೂ ಆ ಕಾರ್ಯಕ್ರಮಕ್ಕೆ ತಯಾರಿಯಾಗಿ ಕಾರು ಏರಿದ ವಿಡಿಯೋವನ್ನು ಗಣೇಶ್ ಹಂಚಿಕೊಂಡಿದ್ದಾರೆ. ಕಾಮಿಡಿ ಕಾರ್ಯಕ್ರಮದ ಮೂಲಕವೇ ಫೇಮಸ್ ಆಗಿರುವ ಗಣೇಶ್, ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದು ಮನರಂಜನೆಗೆ ಯಾವುದೇ ಕೊರತೆ ಆಗದು ಎನ್ನುತ್ತಿದ್ದಾರೆ ಅಭಿಮಾನಿಗಳು.

    ಕಪಿಲ್ ಜೊತೆಗಿನ ಶೋನಲ್ಲಿ ಈಗಾಗಲೇ ಕನ್ನಡದ ಹೆಸರಾಂತ ನಟ ಸುದೀಪ್ ಎರಡು ಬಾರಿ ಕಾಣಿಸಿಕೊಂಡಿದ್ದರು. ಈ ಶೋನಲ್ಲಿ ಎರಡು ಬಾರಿ ಕಾಣಿಸಿಕೊಂಡ ಮೊದಲ ಕನ್ನಡದ ನಟ ಎನ್ನುವ ಹೆಗ್ಗಳಿಕೆ ಸುದೀಪ್ ಅವರಿಗಿದೆ. ಸಲ್ಮಾನ್ ಖಾನ್ ಜೊತೆ ಒಂದು ಬಾರಿ ಸುದೀಪ್ ಕಾಣಿಸಿಕೊಂಡಿದ್ದರೆ, ಮತ್ತೊಂದು ಬಾರಿ ಸುನೀಲ್ ಶೆಟ್ಟಿ ಜೊತೆಯೂ ಅವರು ಕಪಿಲ್ ಶೋನಲ್ಲಿ ಭಾಗಿಯಾಗಿದ್ದರು. ಇದನ್ನೂ ಓದಿ: ಆಸ್ಕರ್ ವೇದಿಕೆಯಲ್ಲಿ `ನಾಟು ನಾಟು’ ಸಾಂಗ್ ಹಾಡಲಿದ್ದಾರೆ ಎಂ.ಎಂ ಕ್ಷೀರವಾಣಿ

    ಇದೀಗ ಗಣೇಶ್ ಕೂಡ ಆ ಶೋನಲ್ಲಿ ಪಾಲ್ಗೊಂಡಿದ್ದು, ಹೆಚ್ಚಿನ ವಿವರಗಳನ್ನು ಸದ್ಯದಲ್ಲೇ ನೀಡುವುದಾಗಿ ಅವರು ತಿಳಿಸಿದ್ದಾರೆ. ಗಣೇಶ್ ನಟನೆಯ ‘ಬಾನದಾರಿಯಲ್ಲಿ’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ಸಿನಿಮಾದ ಪ್ರಮೋಷನ್ ನಲ್ಲಿ ಅವರು ಭಾಗಿಯಾಗಲಿದ್ದಾರಾ ಅಥವಾ ಬೇರೆ ಯಾವುದಾದರೂ ಕಾರ್ಯಕ್ರಮದ ಸಲುವಾಗಿ ಅವರು ಅತಿಥಿಯಾಗಿ ಹೋಗಿದ್ದಾರಾ ಎನ್ನುವುದು ಗೊತ್ತಾಗಿಲ್ಲ. ಈ ವಿಷಯವನ್ನು ಅವರೇ ಸದ್ಯದಲ್ಲೇ ತಿಳಿಸುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾಮಿಡಿ ಶೋಗಾಗಿ ಕಿರುತೆರೆಗೆ ಬಂದ ಶ್ರುತಿ ಹರಿಹರನ್

    ಕಾಮಿಡಿ ಶೋಗಾಗಿ ಕಿರುತೆರೆಗೆ ಬಂದ ಶ್ರುತಿ ಹರಿಹರನ್

    ಮೀಟೂ ಪ್ರಕರಣದ ನಂತರ ಕೆಲ ವರ್ಷಗಳ ಕಾಲ ಸಿನಿಮಾ ರಂಗದಿಂದ ದೂರವಿದ್ದ ನಟಿ ಶ್ರುತಿ ಹರಿಹರನ್, ಇದೀಗ ಸಿಕ್ಕಾಪಟ್ಟೆ ಬ್ಯುಸಿಯಾಗಿದ್ದಾರೆ. ಪರಮ್ ವಾ ಸ್ಪಾಟ್ ಲೈನ್ ‍ಬ್ಯಾನರ್ ಅಡಿಯಲ್ಲಿ ಮೂಡಿ ಬರುತ್ತಿರುವ, ಅರ್ಜುನ್ ಲೂವಿಸ್ ನಿರ್ದೇಶನದ ಸ್ಟ್ರಾಬರಿ ಚಿತ್ರಕ್ಕೆ ಇವರೇ ನಾಯಕಿ. ಈಗಾಗಲೇ ‘ಸಾಲುಗಾರ’ ಹೆಸರಿನ ಸಿನಿಮಾದ ಶೂಟಿಂಗ್ ಅನ್ನು ಕಂಪ್ಲೀಟ್ ಮಾಡಿದ್ದಾರೆ. ಧನಂಜಯ್ ಮುಖ್ಯ ಭೂಮಿಕೆಯ ‘ಹೆಡ್ ಬುಷ್’ ಚಿತ್ರದಲ್ಲೂ ಶ್ರುತಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ನಡುವೆ ಅವರು ಕಿರುತೆರೆಗೂ ಕಾಲಿಟ್ಟಿದ್ದಾರೆ. ಇದನ್ನೂ ಓದಿ : ನವೀನ್ ಸಜ್ಜು ಹೀರೋ: ಯಾರಿವ ಮುತ್ತು ವಿತ್? Exclusive Photos

    ಶ್ರುತಿ ಹರಿಹರನ್ ಕಿರುತೆರೆಗೆ ಕಾಲಿಡುತ್ತಿರುವುದು ಹೊಸದೇನೂ ಅಲ್ಲ. ಆದರೆ, ಈ ಬಾರಿ ಆಯ್ಕೆ ಮಾಡಿಕೊಂಡಿರುವ ವೇದಿಕೆ ಮಾತ್ರ ಹೊಸದು. ಶ್ರುತಿ ಸಿನಿಮಾ ರಂಗಕ್ಕೂ ಬರುವ ಮುನ್ನ ನೃತ್ಯ ಕಲಾವಿದೆ. ಈ ವೃತ್ತಿಯೇ ಅವರನ್ನು ‘ಲೂಸಿಯಾ’ ಚಿತ್ರಕ್ಕೆ ಆಯ್ಕೆ ಆಗುವಂತೆ ಮಾಡಿತ್ತು. ಆನಂತರ ಅವರು ಸ್ಟಾರ್ ನಟಿಯಾಗಿ ಬೆಳೆದರು. ಹಾಗಾಗಿ ಅವರನ್ನು ಖಾಸಗಿ ಮನರಂಜನಾ ವಾಹಿನಿಯೊಂದು ಡಾನ್ಸ್ ರಿಯಾಲಿಟಿ ಶೋ ಜಡ್ಜ್ ಆಗಿ ಆಯ್ಕೆ ಮಾಡಿಕೊಂಡಿತ್ತು. ಈ ಬಾರಿ ಅದೇ ವಾಹಿನಿಯೇ ಕಾಮಿಡಿ ಶೋಗೆ ತೀರ್ಪುಗಾರರಾಗಿ ಶ್ರುತಿ ಹೋಗಿದ್ದಾರೆ.

    ಈಗಾಗಲೇ ವಾಹಿನಿಯು ಪ್ರೊಮೋ ಬಿಡುಗಡೆ ಮಾಡಿದ್ದು, ಶ್ರುತಿ ಅವರ ಜತೆ ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ಕಾಮಿಡಿ ಕಲಾವಿದ ಕುರಿ ಪ್ರತಾಪ್ ತೀರ್ಪುಗಾರರ ಸ್ಥಾನವನ್ನು ಅಲಂಕರಿಸಲಿದ್ದಾರೆ. ಈ ಕಾಮಿಡಿ ಕಾರ್ಯಕ್ರಮಕ್ಕೆ ಶಿವರಾಜ್ ಕೆ.ಆರ್ ಪೇಟೆ ಅವರ ನಿರೂಪಣೆ ಇರಲಿದೆ. ಇದನ್ನೂ ಓದಿ : ‘ದಿ ಕಾಶ್ಮೀರ್ ಫೈಲ್ಸ್’ ಕುರಿತು ಪ್ರಕಾಶ್ ರೈ ಮಾಡಿದ ಟ್ವೀಟ್ ಗೆ ಜಗ್ಗಾಟ ಶುರು

    ಮುಖ್ಯಮಂತ್ರಿ ಚಂದ್ರ ಎಲ್ಲ ರೀತಿಯ ಪಾತ್ರವನ್ನೂ ಮಾಡಿದವರು. ಕಾಮಿಡಿ ಶೋಗಳಲ್ಲೂ ತೀರ್ಪುಗಾರರಾದವರು. ಕುರಿ ಪ್ರತಾಪ್ ಮಜಾ ಟಾಕೀಸ್ ಮೂಲಕ ಫೇಮಸ್ ಮತ್ತು ಕಾಮಿಡಿ ಕಲಾವಿದರು. ಆದರೆ, ಶ್ರುತಿ ಅವರು ಈ ಕಾರ್ಯಕ್ರಮದಲ್ಲಿ ಹೇಗೆ ಇರಲಿದ್ದಾರೆ ಎನ್ನುವ ಕುತೂಹಲ ಅವರ ಅಭಿಮಾನಿಗಳದ್ದು.

  • ಕಪಿಲ್ ಶರ್ಮಾ ಶೋಗೆ ಸಿಧು ರೀ ಎಂಟ್ರಿ!

    ಕಪಿಲ್ ಶರ್ಮಾ ಶೋಗೆ ಸಿಧು ರೀ ಎಂಟ್ರಿ!

    ಮುಂಬೈ: ಖಾಸಗಿ ವಾಹಿನಿ ಖ್ಯಾತ ಕಾಮಿಡಿ ಶೋನಿಂದ ಹೊರ ಉಳಿದಿದ್ದ ಪಂಜಾಬ್ ಸಚಿವ ನವಜೋತ್ ಸಿಂಗ್ ಸಿಧು ಕಮ್ ಬ್ಯಾಕ್ ಮಾಡಲಿದ್ದಾರೆ ಎಂದು ಕಾರ್ಯಕ್ರಮದ ನಿರೂಪಕ ಕಪಿಲ್ ಶರ್ಮಾ ಸುಳಿವು ನೀಡಿದ್ದಾರೆ.

    ಸುನಿಲ್ ಗ್ರೋವರ್ ಶೋನಿಂದ ಹೊರ ನಡೆದ ಬಳಿಕ ಕಾಮಿಡಿ ಶೋನಿಂದ ಬಹುತೇಕ ಕಲಾವಿದರು ಕಾರ್ಯಕ್ರಮದಿಂದ ಅಂತರ ಕಾಯ್ದುಕೊಂಡಿದ್ದರು. ಆದರೂ ಕಪಿಲ್ ಶರ್ಮಾ ತಮ್ಮ ಶೋ ನಡೆಸಿದ್ದರು. ನಾಲ್ಕೈದು ಸಂಚಿಕೆಗಳ ಬಳಿಕ ಕಲಾವಿದರ ಕೊರತೆಯಿಂದಾಗಿ ಶೋ ನಿಂತಿತ್ತು. ಕಪಿಲ್ ಶರ್ಮಾ ಮದುವೆ ಬಳಿಕ ಹೊಸ ಕಲಾವಿದರೊಂದಿಗೆ ಮತ್ತೊಮ್ಮೆ ಕಾಮಿಡಿ ಶೋ ಆರಂಭಿಸಿದ್ದರು. ನವಜೋತ್ ಸಿಂಗ್ ಸಿಧು ಸಹ ಕಾರ್ಯಕ್ರಮದ ಮುಖ್ಯ ಭಾಗವಾಗಿದ್ದರು. ಪುಲ್ವಾಮಾ ದಾಳಿ ಬಳಿಕ ನವಜೋತ್ ಸಿಂಗ್ ಸಿಧು ಹೇಳಿಕೆಗೆ ದೇಶದೆಲ್ಲಡೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮದಿಂದ ಸಿಧು ಅವರನ್ನು ಕೈ ಬಿಡಲಾಗಿತ್ತು.

    ನವಜೋತ್ ಸಿಂಗ್ ಸಿಧು ಕಾರ್ಯಕ್ರಮದಿಂದ ಹೊರ ಬಂದ ಬಳಿಕ ಶೋ ಟಿಆರ್ ಪಿ ಕಳೆದುಕೊಳ್ಳುತ್ತಿದೆ ಎನ್ನಲಾಗುತ್ತಿದೆ. ಟಾಪ್ 5ರಲ್ಲಿ ಸ್ಥಾನ ಪಡೆಯುತ್ತಿದ್ದ ಕಪಿಲ್ ಶೋ ಕೆಲ ವಾರ ಟಿಆರ್‍ಪಿ ಕಳೆದುಕೊಂಡಿದೆ. ಸಿಧು ಬದಲಾಗಿ ಅರ್ಚನಾ ಪೂರ್ಣ ಸಿಂಗ್ ಕಾರ್ಯಕ್ರಮದಲ್ಲಿದ್ದಾರೆ. ಸಿಧು ರೀ ಎಂಟ್ರಿ ಬಗ್ಗೆ ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾಧ್ಯಮಗಳ ಜೊತೆ ಮಾತನಾಡುವ ವೇಳೆ ಕಪಿಲ್ ಶರ್ಮಾ ತಿಳಿಸಿದ್ದಾರೆ.

    ನವಜೋತ್ ಸಿಂಗ್ ಸಿಧು ಸದ್ಯ ಲೋಕಸಭಾ ಚುನಾವಣೆಯ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಚುನಾವಣೆ ಮುಗಿಯವರೆಗೂ ಕಾರ್ಯಕ್ರಮಕ್ಕೆ ಬರುವ ಬಗ್ಗೆ ಮಾತನಾಡಿಲ್ಲ. ಚುನಾವಣೆಯ ಬಳಿಕ ನವಜೋತ್ ಸಿಂಗ್ ಸಿಧು ಕಾರ್ಯಕ್ರಮಕ್ಕೆ ಬರ ಮಾಡಿಕೊಳ್ಳುವ ಕುರಿತು ಚಿಂತನೆ ನಡೆಸಲಾಗುವುದು ಎಂದು ಕಪಿಲ್ ಶರ್ಮಾ ಹೇಳಿದ್ದಾರೆ.

  • ಸಚಿವನಾದ್ರೂ ನಾನು ಕಾಮಿಡಿ ಶೋ ಬಿಡಲ್ಲ: ಸಿಧು

    ಸಚಿವನಾದ್ರೂ ನಾನು ಕಾಮಿಡಿ ಶೋ ಬಿಡಲ್ಲ: ಸಿಧು

    ಚಂಡೀಗಢ: ಸಚಿವನಾದ್ರೂ ನಾನು ಟಿವಿಯಲ್ಲಿ ಮಾಡ್ತಿರೋ ಕಾಮಿಡಿ ಶೋ ಬಿಡಲ್ಲ ಎಂದು ಮಾಜಿ ಕ್ರಿಕೆಟಿಗ ಹಾಗೂ ಪಂಜಾಬ್‍ನ ನೂತನ ಸಚಿವ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

    ನಿನ್ನೆಯಷ್ಟೇ ಸಿಧು ಪಂಜಾಬ್‍ನ ನೂತನ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದರು. ಈ ಹಿಂದೆ ಬಿಜೆಪಿಯಲ್ಲಿದ್ದ ಸಿಧು ಅವರು ಕಳೆದ ವಿಧಾನಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಕೈ ಹಿಡಿದಿದ್ದರು. ಜೊತೆಗೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು.

    ಆದರೆ ಈ ಎಲ್ಲ ಕೆಲಸಗಳ ನಡುವೆ ಸಿಧು ಅವರು ದಿ ಕಪಿಲ್ ಶರ್ಮಾ ಶೋನಲ್ಲೂ ಭಾವಹಿಸುತ್ತಿದ್ದರು. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಒಂದು ದಿನದ ಬಳಿಕ ಮಾತನಾಡಿದ ಅವರು, ನಾನು ಬೆಳಗ್ಗೆ ಸಚಿವನಾಗಿ ಕೆಲಸ ಮಾಡುತ್ತೇನೆ. ರಾತ್ರಿ ಕಾಮಿಡಿ ಶೋ ಶೂಟಿಂಗ್‍ನಲ್ಲಿ ಭಾಗಿಯಾಗುತ್ತೇನೆ. ಯಾವುದೇ ಕಾರಣಕ್ಕೂ ಕೆಲಸದ ವಿಚಾರದಲ್ಲಿ ರಾಜಿ ಮಾಡಿಕೊಳ್ಳಲ್ಲ ಎಂದು ಹೇಳಿದ್ದಾರೆ. ಇದೊಂದು ಕಷ್ಟದ ಕೆಲಸ ಎನ್ನುವುದು ಗೊತ್ತು. ಆದರೂ ನಾನು ಕಾಮಿಡಿ ಶೋ ಬಿಡಲ್ಲ. ಪಂಜಾಬಿಗರ ಸಂಪೂರ್ಣ ಸೇವೆಗೂ ನಾನು ಸಿದ್ಧ. ಇದುವೇ ನನ್ನ ಪ್ರಮುಖ ಕೆಲಸ ಎಂದು ಹೇಳಿದರು.

    ಇದೇ ವೇಳೆ ನನಗೆ ಸಿಕ್ಕಿರುವ ಸಚಿವ ಸ್ಥಾನದ ಬಗ್ಗೆ ನನಗೆ ಯಾವುದೇ ಬೇಸರವಿಲ್ಲ ಎಂದೂ ಸಿಧು ಸ್ಪಷ್ಟಪಡಿಸಿದ್ದಾರೆ. ಈ ಹಿಂದೆ ಸಿಧು ಅವರನ್ನು ಪಂಜಾಬ್ ಡಿಸಿಎಂ ಮಾಡುತ್ತಾರೆ ಎಂಬ ವದಂತಿ ಹರಡಿತ್ತು. ಆದರೆ ಸಿಧುಗೆ ಪ್ರವಾಸೋದ್ಯಮ ಮತ್ತು ಸಾಂಸ್ಕೃತಿಕ ಸಚಿವಾಲಯವನ್ನು ಮಾತ್ರ ನೀಡಿದ್ದಾರೆ. ಇದರಿಂದ ಅವರು ಅಸಮಾಧಾನಗೊಂಡಿದ್ದಾರೆ ಎನ್ನಲಾಗಿತ್ತು. ಆದರೆ ಈ ಎಲ್ಲಾ ವಿಚಾರಗಳನ್ನು ಸಿಧು ಅವರು ಅಲ್ಲಗಳೆದಿದ್ದಾರೆ. ನನಗೆ ಯಾವುದೇ ಸಿಟ್ಟಿಲ್ಲ. ನನಗೆ ಕೊಟ್ಟಿರುವ ಜವಾಬ್ದಾರಿಯನ್ನು ಸಿಪಾಯಿಯಂತೆ ನಿರ್ವಹಿಸುತ್ತೇನೆ ಎಂದು ಸಿಧು ಹೇಳಿದರು.