Tag: ಕಾರುಣ್ಯ ರಾಮ್

  • ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯ ರಾಮ್ ಭೇಟಿ

    ಕಾಮಾಕ್ಯ ದೇಗುಲಕ್ಕೆ ನಟಿ ಕಾರುಣ್ಯ ರಾಮ್ ಭೇಟಿ

    ಸ್ಯಾಂಡಲ್‌ವುಡ್ ನಟಿ ಕಾರಣ್ಯ ರಾಮ್ ಅವರು ಕಾಮಾಕ್ಯ ದೇಗುಲಕ್ಕೆ (Kamakhya Temple) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳನ್ನು ನಟಿ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ:‘ಜಾವಾ’ ಸಿನಿಮಾದಲ್ಲಿ ರಾಗಿಣಿ ಬೋಲ್ಡ್ ಅವತಾರ- ಪೋಸ್ಟರ್ ರಿವೀಲ್

    51 ಶಕ್ತಿಪೀಠಗಳಲ್ಲಿ ಒಂದಾಗಿರುವ ಗುವಾಹಟಿಯ (Guwahati) ಕಾಮಾಕ್ಯ ದೇಗುಲಕ್ಕೆ ಕಾರುಣ್ಯ ಭೇಟಿ ಕೊಟ್ಟಿದ್ದಾರೆ. ಕೆಲ ಕಾಲ ದೇವಸ್ಥಾನದಲ್ಲಿ ನಟಿ ಸಮಯ ಕಳೆದಿದ್ದಾರೆ. ಕೆಂಪು ಸೀರೆಯುಟ್ಟು ದೇವರ ಪೂಜೆಯಲ್ಲಿ ನಟಿ ಭಾಗಿಯಾಗಿದ್ದಾರೆ. ಇದನ್ನೂ ಓದಿ:‘ಚೌಕಿದಾರ್’ ಚಿತ್ರದ ಟೀಸರ್ ರಿಲೀಸ್- ರಕ್ತಸಿಕ್ತ ಅವತಾರದಲ್ಲಿ ಪೃಥ್ವಿ ಅಂಬರ್ ಅಬ್ಬರ

     

    View this post on Instagram

     

    A post shared by Karunya Ram 🧿 (@ikarunya)

    ವಜ್ರಕಾಯ, ಕಿರಗೂರಿನ ಗಯ್ಯಾಳಿಗಳು, ಪೆಟ್ರೋಮ್ಯಾಕ್ಸ್ ಚಿತ್ರಗಳಲ್ಲೂ ಕಾರುಣ್ಯ ನಟಿಸಿದ್ದಾರೆ.

  • ದರ್ಶನ್‌ ಸರ್‌ ನಿರಪರಾಧಿಯಾಗಿ ಆಚೆ ಬರಲಿ: ಕಾರುಣ್ಯ ರಾಮ್‌

    ದರ್ಶನ್‌ ಸರ್‌ ನಿರಪರಾಧಿಯಾಗಿ ಆಚೆ ಬರಲಿ: ಕಾರುಣ್ಯ ರಾಮ್‌

    ನ್ನಡದ ಸ್ಟಾರ್ ನಟ ದರ್ಶನ್ (Darshan) ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣವಾಗಿ ಆರೋಪಿಯಾಗಿ ಕಂಬಿ ಹಿಂದಿದ್ದಾರೆ. ಈ ಪ್ರಕರಣದ ವಿಚಾರವಾಗಿ ಸುದೀಪ್, ಶಿವಣ್ಣ, ಜಗ್ಗೇಶ್ ಬಳಿಕ ಸ್ಯಾಂಡಲ್‌ವುಡ್ ನಟಿ ಕಾರುಣ್ಯ ರಾಮ್ (Karunya Ram) ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ದರ್ಶನ್‌ ಪ್ರಕರಣದ ಬಗ್ಗೆ ನಾನು ಮಾತನಾಡಲ್ಲ: ನಟ ಜಗ್ಗೇಶ್‌

    ದರ್ಶನ್ ಸರ್ ತುಂಬನೇ ಒಳ್ಳೆಯ ವ್ಯಕ್ತಿ. ರೇಣುಕಾಸ್ವಾಮಿಗೆ ಏನು ಅನ್ಯಾಯ ಆಗಿದೆ. ಅವರ ಕುಟುಂಬಕ್ಕೂ ನ್ಯಾಯ ಸಿಗಬೇಕು. ಇದರ ತನಿಖೆ ನಡೆಯುತ್ತಿದೆ. ಪ್ರಕರಣದ ಬಗ್ಗೆ ಕಾದುನೋಡೋಣ. ನಮ್ಮೆಲ್ಲರ ಆಸೆ ಏನೆಂದರೆ ದರ್ಶನ್ ಸರ್ ನಿರಾಪರಾಧಿಯಾಗಿ ಆಚೆ ಬರಲಿ ಎಂದು ಕಾರುಣ್ಯ ರಾಮ್ ಮಾತನಾಡಿದ್ದಾರೆ.

    ನಾನು ಚಿಕ್ಕ ವಯಸ್ಸಿನಿಂದ ದರ್ಶನ್ ಸಿನಿಮಾಗಳನ್ನು ನೋಡುತ್ತಲೇ ಬಂದಿದ್ದೇನೆ. ಅವರು ಯಾವಾಗ ಸಿಕ್ಕಿದ್ರು ತುಂಬಾ ಪ್ರೀತಿಯಿಂದ ಮಾತನಾಡಿಸುತ್ತಿದ್ದರು. ಪ್ರತಿ ವರ್ಷ ಅವರ ಹುಟ್ಟುಹಬ್ಬಕ್ಕೆ ಭೇಟಿಯಾಗುತ್ತಿದ್ದೆ ಎಂದು ನಟಿ ಮಾತನಾಡಿದ್ದಾರೆ. ರೇಣುಕಾಸ್ವಾಮಿ ಪ್ರಕರಣದ ಬಗ್ಗೆ ಟಿವಿಯಲ್ಲಿ ನೋಡಿದಾಗ ಬೇಸರ ಆಯಿತು. ಕಾನೂನಿಗಿಂತ ಯಾರು ದೊಡ್ಡವರಿಲ್ಲ ಎಂದಿದ್ದಾರೆ. ಈ ವೇಳೆ, ನಾನು ಕೆಟ್ಟ ಕಾಮೆಂಟ್‌ಗಳ ಎಂದು ತಲೆ ಕೆಡಿಸಿಕೊಳ್ಳುವುದಿಲ್ಲ ಎಂದು ನಟಿ ಮಾತನಾಡಿದ್ದಾರೆ.

    ಅಂದಹಾಗೆ, ಪೆಟ್ರೋಮ್ಯಾಕ್ಸ್‌, ಎರಡು ಕನಸು, ವಜ್ರಕಾಯ (Vajrakaya) ಸೇರಿದಂತೆ ಕನ್ನಡದ ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ.

  • ‘ಕಾಂತಾರ’ದಲ್ಲಿ ನಟಿಸೋಕೆ ಅವಕಾಶ ಕೇಳಿದ ನಟಿಯರು

    ‘ಕಾಂತಾರ’ದಲ್ಲಿ ನಟಿಸೋಕೆ ಅವಕಾಶ ಕೇಳಿದ ನಟಿಯರು

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಲಿರುವ ಕಾಂತಾರ ಚಾಪ್ಟರ್ 1 ಸಿನಿಮಾಗೆ ಕಲಾವಿದರು ಬೇಕಾಗಿದ್ದಾರೆ ಎಂದು ಚಿತ್ರತಂಡ ಪೋಸ್ಟರ್ ರಿಲೀಸ್ ಮಾಡಿತ್ತು. ಹಲವಾರು ಪಾತ್ರಗಳು ಇರುವುದರಿಂದ ಕಲಾವಿದರ ವಯಸ್ಸನ್ನೂ ನಿಗದಿ ಪಡಿಸಿ, ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಸಾಕಷ್ಟು ರೆಸ್ಪಾನ್ಸ್ ಬರುತ್ತದೆ. ಸಾಮಾನ್ಯ ಕಲಾವಿದರು ಮಾತ್ರವಲ್ಲ, ಈಗಾಗಲೇ ಸಾಕಷ್ಟು ಚಿತ್ರಗಳಲ್ಲಿ ನಟಿಸಿರುವ ನಾಯಕಿಯರು ಅವಕಾಶ ಕೇಳಿದ್ದಾರೆ.

    ಕಾಂತಾರ ಸಿನಿಮಾದಲ್ಲಿ ನಟಿಸೋಕೆ ಆಸೆ ಇರುವುದಾಗಿ ಪಾಯಲ್ ರಜಪೂತ್ (Payal Rajput) ಮತ್ತು ಕನ್ನಡದ ನಟಿ ಕಾರುಣ್ಯ ರಾಮ್ (Karunya Ram) ಕೂಡ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಆಸೆಯನ್ನು ವ್ಯಕ್ತಪಡಿಸಿರುವ ಕಾರುಣ್ಯ ರಾಮ್, ನನಗೂ ಕಾಂತಾರ ಸಿನಿಮಾದಲ್ಲಿ ನಟಿಸಲು ಅವಕಾಶ ಕೊಡಿ ಎಂದು ಅವರು ಕೇಳಿಕೊಂಡಿದ್ದಾರೆ.

    ಕಾಂತಾರ್ ಚಾಪ್ಟರ್ 1ರ ಚಿತ್ರೀಕರಣದ ಸಿದ್ಧತೆ ಭರ್ಜರಿಯಾಗಿಯೇ ನಡೆಯುತ್ತಿದೆ. ಮೊನ್ನೆಯಷ್ಟೇ ಟೀಸರ್ ವೊಂದನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ರಿಷಬ್ ಕೈಯಲ್ಲಿ ಒಂದು ಕಡೆ ತ್ರಿಶೂಲ ಮತ್ತೊಂದು ಕಡೆ ಪರಶುರಾಮನ ಕೊಡಲಿ (Kodali) ಇತ್ತು. ಈ ಕೊಡಲಿ ಕುತೂಹಲಕ್ಕೂ ಕಾರಣವಾಗಿತ್ತು. ಇದರ ಕುರಿತಾಗಿಯೇ ಇದೀಗ ಹೊಸದೊಂದು ಸುದ್ದಿ ಸಿಕ್ಕಿದೆ.

    ಕೇರಳದ ಕಾಸರಗೋಡು ಜಿಲ್ಲೆಯ ಚಿಪ್ಪಾರುವಿನಲ್ಲಿ ರಾಜರ ಮನೆತನವೊಂದು ಇದ್ದು, ಇಲ್ಲಿಯೇ ಪರಶುರಾಮ (Parasurama) ಅವರು ಬಳಸಿರುವ 450 ವರ್ಷಗಳ ಇತಿಹಾಸವಿರುವ ಕೊಡಲಿ ಇದೆಯಂತೆ. ಈ ಕೊಡಲಿಯನ್ನು ರಿಷಬ್ ಬಯಸಿದರೆ ಶೂಟಿಂಗ್ ಗೆ ಕೊಡುವುದಾಗಿ ಅವರು ಹೇಳಿಕೊಂಡಿದ್ದಾರೆ. ಈ ಕೊಡಲಿಗೆ ಸಾಕಷ್ಟು ಮಹತ್ವವಿದ್ದು, ಅದನ್ನು ಪಡೆದುಕೊಂಡು ರಿಷಬ್ ಶೂಟ್ ಮಾಡ್ತಾರಾ ಕಾದು ನೋಡಬೇಕು.

     

    ಮೊನ್ನೆಯಷ್ಟೇ ರಿಲೀಸ್ ಆಗಿರುವ ಕಾಂತಾರ (Kantara) ಚಾಪ್ಟರ್ 1 ಸಿನಿಮಾದ ಟೀಸರ್ (Teaser) ಕೋಟಿ ಕೋಟಿ ವೀವ್ಸ್‌ ಪಡೆದಿದೆ. ಟೀಸರ್ ನೋಡಿದ ಭಾರತವೇ ಬೆಚ್ಚಿ ಬಿದ್ದಿದೆ. ಟೀಸರ್ ನಲ್ಲಿ ತೋರಿಸಲಾದ ಆಶಯ ಮತ್ತು ರಿಷಬ್ ಶೆಟ್ಟಿ ಕಂಡು ದಕ್ಷಿಣದ ಬಹುತೇಕ ಸ್ಟಾರ್ ನಟರು ಫಿದಾ ಆಗಿದ್ದಾರೆ. ಪ್ರಭಾಸ್, ಪೃಥ್ವಿರಾಜ್ ಸುಕುಮಾರನ್ ಸೇರಿದಂತೆ ಅನೇಕ ಕಲಾವಿದರು ಮೆಚ್ಚಿ ಶುಭ ಹಾರೈಸಿದ್ದಾರೆ.

  • ನಟಿ ಕಾರುಣ್ಯ ಆಲೋಚನೆ:  ಅಂಗಾಂಗ ದಾನ ಶಿಬಿರಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್

    ನಟಿ ಕಾರುಣ್ಯ ಆಲೋಚನೆ: ಅಂಗಾಂಗ ದಾನ ಶಿಬಿರಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಸಾಥ್

    ನೇಕ ವರ್ಷಗಳಿಂದ ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಂಡಿರುವ ನಟಿ ಕಾರುಣ್ಯ ರಾಮ್ (Karunya Ram) ಸದ್ಯ ಸಮಾಜಮುಖಿ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ಹಾಗೂ ಕಿಮ್ಸ್ ಆಸ್ಪತ್ರೆಯ ಸಹಯೋಗದಲ್ಲಿ ಅಂಗಾಂಗ ದಾನ (Organ Donation) ಶಿಬಿರ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಹಾಗೂ ಧ್ರುವ ಸರ್ಜಾ (Dhruva Sarja) ಮುಖ್ಯ ಅತಿಥಿಗಳಾಗಿ ಭಾಗಿಯಾಗಿದ್ದರು.

    ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ನಟಿ ಕಾರುಣ್ಯ ರಾಮ್, ‘ಅಂಗಾಂಗ ದಾನ ಮಾಡುವುದರಿಂದ ನಾವು ಸತ್ತ ಬಳಿಕವೂ ನಮ್ಮ ಉಪಯೋಗ ಆಗುತ್ತದೆ. ಅಂಗಾಂಗ ದಾನದಿಂದ ಪುಣ್ಯ ಸಿಗುತ್ತೆ, ಎಲ್ಲರೂ ಅಂಗಾಂಗ ದಾನ ಮಾಡಿ’ ಎಂದು ಮನವಿ ಮಾಡಿದರು. ಇದನ್ನೂ ಓದಿ:ಯಾವ ಬಾಲಿವುಡ್ ಹೀರೋಯಿನ್‌ಗೂ ಕಮ್ಮಿಯಿಲ್ಲದಂತೆ ಮಿಂಚಿದ ಮೇಘಾ ಶೆಟ್ಟಿ

    ನಂತರ ಮಾತನಾಡಿದ ಧ್ರುವ ಸರ್ಜಾ, ‘ಅನೇಕರಿಗೆ ನಾವು ಯೂಸ್ ಲೆಸ್ ಅಂತ ಹೇಳುತ್ತಿರುತ್ತೇವೆ. ಆದರೆ ಯಾರು ಯೂಸ್ ಲೆಸ್ ಅಲ್ಲ. ಯೂಸ್ಡ್ ಲೆಸ್ ಅಷ್ಟೇ. ಅಂಗಾಂಗ ದಾನ ಮಾಡಿ ಇನ್ನೊಬ್ಬರಿಗೆ ಉಪಯೋಗ ಆಗುತ್ತೆ. ನಾವು ಸತ್ತ ಮೇಲೂ ಇನ್ನೊಬ್ಬರಿಗೆ ಉಪಯೋಗ ಆಗುತ್ತೆ ಎಂದರೆ ಯಾಕೆ ಮಾಡಬಾರದು. ಎಲ್ಲರೂ ದಯವಿಟ್ಟು ಇದಕ್ಕೆ ಕೈ ಜೋಡಿಸಿ. ನಿಮ್ಮ ಪಕ್ಕದವರಿಗೂ ಹೇಳಿ. ಇಂಥ ಶಿಬಿರಗಳನ್ನು ಎಲ್ಲಾ ಕಡೆ ಮಾಡಬೇಕು, ಹೆಚ್ಚು ಹೆಚ್ಚು ಆಗಬೇಕು’ ಎಂದರು.

    ಕಾರ್ಯಕ್ರಮದಲ್ಲಿ ಸುಮಾರು 700 ರಿಂದ 1000 ಮಂದಿ ಅಂಗಾಂಗ ದಾನ ಪ್ರತಿಗೆ ಸಹಿ ಮಾಡಿದರು. ಈ ಕಾರ್ಯಕ್ರಮದಲ್ಲಿ ಹೆಲ್ತ್ ಅಂಡ್ ವೆಲ್ತ್ ಜಾಯಿಂಟ್ ಡೈರೆಕ್ಟರ್, ಕಿಮ್ಸ್ ಅಧ್ಯಕ್ಷರು, ಆರ್ಗನ್ ಡೊನೇಷನ್ ಡಿಪಾರ್ಟ್ಮೆಂಟ್  ಭಾಗಿಯಾಗಿತ್ತು. ಕರ್ನಾಟಕ ಸಿಂಡಿಕೇಟ್ ಫೌಂಡೇಶನ್ ನ ಫೌಂಡರ್ ಸಂತೋಷ್  ಕೂಡ ಭಾಗಿಯಾಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೋಲ್ಡ್ ಅಂಡ್ ಬ್ಯೂಟಿಫುಲ್ ಲುಕ್‌ನಲ್ಲಿ ಕಾರುಣ್ಯ ರಾಮ್

    ಬೋಲ್ಡ್ ಅಂಡ್ ಬ್ಯೂಟಿಫುಲ್ ಲುಕ್‌ನಲ್ಲಿ ಕಾರುಣ್ಯ ರಾಮ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಬೋಲ್ಡ್ ಅಂಡ್ ಬ್ಯೂಟಿಫುಲ್ ಲುಕ್ ನಲ್ಲಿ ಕಾರುಣ್ಯ ರಾಮ್

    ಬೋಲ್ಡ್ ಅಂಡ್ ಬ್ಯೂಟಿಫುಲ್ ಲುಕ್ ನಲ್ಲಿ ಕಾರುಣ್ಯ ರಾಮ್

    ಸಿನಿಮಾ, ಪ್ರವಾಸ, ಸಮಾಜಸೇವೆ ಎನ್ನುತ್ತಾ ಸದಾ ಚಟುವಟಿಕೆಯಲ್ಲಿರುವ ಕಾರುಣ್ಯ ರಾಮ್, ಆಗಾಗ್ಗೆ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಲೇ ಇರುತ್ತಾರೆ.  ಳೆದ ದಸರಾದಲ್ಲಿ ಕಾರುಣ್ಯ ರಾಮ್ (Karunya Ram) ರಾಜಕುಮಾರಿ ಲುಕ್ ನಲ್ಲಿ ಫೋಟೋಶೂಟ್ (Photoshoot) ಮಾಡಿಸಿಕೊಂಡಿದ್ದರು. ಆ ಫೋಟೋಗಳು ಸಖತ್ ವೈರಲ್ ಆಗಿದ್ದವು ಇದೀಗ ಮತ್ತೆ ಕಾರುಣ್ಯ ಹೊಸ ಫೋಟೋಶೂಟ್ ನಲ್ಲಿ ಮಿಂಚಿದ್ದಾರೆ. ಸಖತ್ ಹಾಟ್ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ.

    ಆಗ್ಗಾಗ್ಗೆ ಲುಕ್ ಟೆಸ್ಟ್ ಅನ್ನುವಂತೆ ಕಾರುಣ್ಯ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಲೇ ಇರುತ್ತಾರೆ. ಈ ಬಾರಿಯ ಫೋಟೋಶೂಟ್ ಮತ್ತಷ್ಟು ಅಂದವನ್ನು ಹೆಚ್ಚಿಸಿದೆ. ರೆಡ್ ಮತ್ತು ಬ್ಲ್ಯಾಕ್ ಕಲರ್ ಕಾಂಬಿನೇಷನ್ ನಲ್ಲಿ ಅವರು ಸಖತ್ ಬೋಲ್ಡ್ ಅಂಡ್ ಬ್ಯೂಟಿಫುಲ್ ಆಗಿ ಕಂಡಿದ್ದಾರೆ. ಆ ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾದಲ್ಲೂ ಹಂಚಿಕೊಂಡಿದ್ದಾರೆ.

    ನೀನಾಸಂ ಸತೀಶ್ ಜೊತೆ ನಟಿಸಿದ್ದ ಪೆಟ್ರೊಮ್ಯಾಕ್ಸ್ ಸಿನಿಮಾದಲ್ಲಿ ಕಾರುಣ್ಯ ಬೋಲ್ಡ್ ಆಗಿ ನಟಿಸಿದ್ದರು. ಅವರ ಡೈಲಾಗ್ ಮಾಸ್ ಆಗಿದ್ದವು. ಕಾರುಣ್ಯ ನಿರ್ವಹಿಸಿದ ಆ ಪಾತ್ರಕ್ಕೆ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಅಲ್ಲದೇ, ಪವನ್ ಒಡೆಯರ್ ನಿರ್ದೇಶನದ ರೆಮೋ ಸಿನಿಮಾದ ಪ್ರಿಯಾ ಪಾತ್ರ ಕೂಡ ಅಭಿಮಾನಿಗಳಿಗೆ ಇಷ್ಟವಾಗಿತ್ತು.

    ನಾನಾ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ಕಾರುಣ್ಯ ಕಿರಗೂರಿನ ಗಯ್ಯಾಳಿಗಳು, ಮನೆ ಮಾರಾಟಕ್ಕಿದೆ ಸೇರಿದಂತೆ ಪ್ರಯೋಗಾತ್ಮಕ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಮನೆ ಮಾರಾಟಕ್ಕಿದೆ ಸಿನಿಮಾದ ನಟನೆಗಾಗಿ ಇವರು ಸೈಮಾ ಪ್ರಶಸ್ತಿ ಕೂಡ ದೊರೆತಿದೆ. ಸಿನಿಮಾಗಳಲ್ಲಿ ಮಾತ್ರವಲ್ಲ, ಕಿರುತೆರೆ ಹಲವಾರು ಶೋಗಳಲ್ಲಿ ಕಾರುಣ್ಯ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಕೂಡ ಇವರಾಗಿದ್ದಾರೆ.

    ಕನ್ನಡ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ತಮಿಳಿನ ಎರಡು ಚಿತ್ರಗಳಲ್ಲೂ ಕಾರುಣ್ಯ ನಟಿಸಿದ್ದಾರೆ. ಆ ಮೂಲಕ ತಮಿಳು ಪ್ರೇಕ್ಷಕರಿಗೂ ಇವರು ಹತ್ತಿರವಾಗಿದ್ದಾರೆ. ಸದಾ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಸಂವಾದಿಸುವ ಇವರು, ಟ್ರಾವೆಲ್ ಪ್ರಿಯೆ. ಸದಾ ದೇಶಗಳನ್ನು ಸುತ್ತುತ್ತಲೇ ಇರುತ್ತಾರೆ. ಅವುಗಳ ಮಾಹಿತಿಯನ್ನೂ ಹಂಚಿಕೊಳ್ಳುತ್ತಾರೆ.

    ಕೇವಲ ನಟನೆ ಮಾತ್ರವಲ್ಲ ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ ಕಾರುಣ್ಯ. ಸಾಕಷ್ಟು ಜನ ಮೆಚ್ಚುವಂತಹ ಕೆಲಸ ಮಾಡಿದ್ದಾರೆ. ಈ ಹಿಂದೆ ತಾವು ವಾಸವಿರುವ ರಾಜರಾಜೇಶ್ವರಿ ನಗರ (Rajarajeshwari Nagar) ಏರಿಯಾ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು (Potholes) ಮುಚ್ಚುವ ಮೂಲಕ ಪ್ರಶಂಸೆಗೆ ಕಾರಣರಾಗಿದ್ದರು. ರಾತ್ರಿ ಹನ್ನೊಂದು ಗಂಟೆಯ ಹೊತ್ತಲ್ಲಿ ತಮ್ಮ ಸ್ನೇಹಿತರು ಮತ್ತು ಸಹೋದರಿಯ ಜೊತೆ ರಸ್ತೆಗಳಿಗೆ ಇಳಿದಿದ್ದ ಕಾರುಣ್ಯ ಹತ್ತಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಿದ್ದರು. ಅವರ ಈ ಕೆಲಸಕ್ಕೆ ಅನೇಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದರು.

    ಕಾರುಣ್ಯ ಕೇವಲ ಗುಂಡಿಗಳನ್ನು ಮಾತ್ರ ಮುಚ್ಚಿಲ್ಲ. ತಮ್ಮದೇ ಆದ ಸಂಸ್ಕಾರ ಟ್ರಸ್ಟ್ (Sanskara Trust) ಮೂಲಕ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಮೊನ್ನೆಯಷ್ಟೇ ರಾಜರಾಜೇಶ್ವರಿ ನಗರದಲ್ಲಿ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದರು. ಆ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಿದರು. ಅಲ್ಲದೇ ಕೋವಿಡ್ ವೇಳೆಯಲ್ಲೂ ಅವರು ಫುಡ್ ಕಿಟ್ ಹಂಚಿದ್ದರು. ತಮ್ಮ ಹುಟ್ಟು ಹಬ್ಬದಂದು ಅನಾಥ ಮಕ್ಕಳಿಗೆ ನೆರವಾಗುತ್ತಾ ಬಂದಿದ್ದಾರೆ.

    2021ರಲ್ಲಿ ಕಾರುಣ್ಯ ರಾಮ್ ತಮ್ಮ ಕೇಶರಾಶಿಯನ್ನು 14 ಇಂಚು ಕಟ್ ಮಾಡಿ ಕ್ಯಾನ್ಸರ್ ರೋಗಿಗಳಿಗಾಗಿ ದಾನ ಮಾಡುವ ಮೂಲಕ ಮೆಚ್ಚುಗೆಗೆ ಪಾತ್ರರಾಗಿದ್ದರು. 2021ರ ಹೊಸ ವರ್ಷದಲ್ಲಿ ಏನನ್ನಾದರೂ ಮಾಡಬೇಕು ಎಂದುಕೊಂಡಿದ್ದ ಕಾರುಣ್ಯ ರಾಮ್, ಅದರಂತೆ ಅವರ ಕೂದಲನ್ನು 14 ಇಂಚು ಕಟ್ ಮಾಡಿ ಕ್ಯಾನ್ಸರ್ ರೋಗಿಗಳಿಗೆ ನೀಡಿದ್ದರು.

    ಮೈಸೂರಿನಲ್ಲಿ ನಡೆಯುತ್ತಿರುವ ತಮ್ಮ ಸಿನಿಮಾ ಶೂಟಿಂಗ್ ಮುಗಿಸಿ ಬೆಂಗಳೂರಿಗೆ ಮರಳಿದ ಕಾರುಣ್ಯ ರಾಮ್ ಕೂದಲಿಗೆ ಕತ್ತರಿ ಹಾಕಿದ್ದರು. ಬೆಂಗಳೂರಿನ ಹೇರ್ ಡೊನೇಷನ್ ಸಂಸ್ಥೆಯ ಮೂಲಕವಾಗಿ ಕ್ಯಾನ್ಸರ್ ರೋಗಿಗಳಿಗೆ ತಲೆಕೂದಲನ್ನು ದಾನ ಮಾಡಿದ್ದರು.

     

    ಪ್ರತಿಯೊಬ್ಬ ಭಾರತೀಯ ಮಹಿಳೆಗೂ ಕೂದಲು ಸ್ತ್ರೀಯತ್ವದ ಬಹುಮುಖ್ಯ ಭಾಗವಾಗಿದೆ. ಹೆಣ್ಣಿನ ಸೌಂದರ್ಯವನ್ನು ಎದ್ದು ಕಾಣುವಂತೆ ಕೇಶರಾಶಿ ಮಾಡುತ್ತದೆ ಎಂದು ನಮಗೆಲ್ಲರಿಗೂ ತಿಳಿದಿದೆ. ನಾನು ಕೂದಲಿನ ಪ್ರತಿಯೊಂದು ಎಳೆಯನ್ನು ಪ್ರೀತಿಸುತ್ತೇನೆ. ಕ್ಯಾನ್ಸರ್ ರೋಗಿಗಳಿಗಾಗಿ ಕೂದಲು ನೀಡುತ್ತಿದ್ದೇನೆ. ಇದು ಅಗತ್ಯವಿರುವವರನ್ನು ತಲುಪುತ್ತದೆ ಎಂದು ನಾನು ಭಾವಿಸುತ್ತೇನೆ. ಅವರ ಆರೋಗ್ಯದ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ . ಇದರಿಂದ ಸಾಕಷ್ಟು ಮಹಿಳೆಯರು ಮುಂದೆ ಬಂದು ತಾವೂ ನನ್ನೊಂದಿಗೆ ಕೈ ಜೋಡಿಸಲಿದ್ದಾರೆ ಎನ್ನುವ ಭರವಸೆ ಇದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡು ಇತರರನ್ನು ಪ್ರೇರೇಪಿಸಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮತ್ತೊಂದು ಫೋಟೋಶೂಟ್ ನಲ್ಲಿ ನಟಿ ಕಾರುಣ್ಯ: ಸಖತ್ ಹಾಟ್ ಅಂಡ್ ಕೂಲ್

    ಮತ್ತೊಂದು ಫೋಟೋಶೂಟ್ ನಲ್ಲಿ ನಟಿ ಕಾರುಣ್ಯ: ಸಖತ್ ಹಾಟ್ ಅಂಡ್ ಕೂಲ್

    ಳೆದ ದಸರಾದಲ್ಲಿ ಸ್ಯಾಂಡಲ್ ವುಡ್ ನಟಿ ಕಾರುಣ್ಯ ರಾಮ್ (Karunya Ram) ರಾಜಕುಮಾರಿ ಲುಕ್ ನಲ್ಲಿ ಫೋಟೋಶೂಟ್ (Photoshoot) ಮಾಡಿಸಿಕೊಂಡಿದ್ದರು. ಆ ಫೋಟೋಗಳು ಸಖತ್ ವೈರಲ್ ಆಗಿದ್ದು, ಇದೀಗ ಮತ್ತೆ ಕಾರುಣ್ಯ ಹೊಸ ಫೋಟೋಶೂಟ್ ನಲ್ಲಿ ಮಿಂಚಿದ್ದಾರೆ. ಸಖತ್ ಹಾಟ್ ಹಾಟ್ ಆಗಿಯೇ ಕಾಣಿಸಿಕೊಂಡಿದ್ದಾರೆ.

     

    ಆಗ್ಗಾಗ್ಗೆ ಲುಕ್ ಟೆಸ್ಟ್ ಅನ್ನುವಂತೆ ಕಾರುಣ್ಯ ಫೋಟೋ ಶೂಟ್ ಮಾಡಿಸಿಕೊಳ್ಳುತ್ತಲೇ ಇರುತ್ತಾರೆ. ಈ ಬಾರಿಯ ಫೋಟೋಶೂಟ್ ಮತ್ತಷ್ಟು ಅಂದವನ್ನು ಹೆಚ್ಚಿಸಿದೆ. ಪಿಂಕ್ ಮತ್ತು ವೈಟ್ ಕಲರ್ ಕಾಂಬಿನೇಷನ್ ನಲ್ಲಿ ಅವರು ಸಖತ್ ಬೋಲ್ಡ್ ಅಂಡ್ ಬ್ಯೂಟಿಫುಲ್ ಆಗಿ ಕಂಡಿದ್ದಾರೆ.

    ಮೊನ್ನೆಯಷ್ಟೇ ಕಾರುಣ್ಯ ರಾಮ್ ನಟನೆಯ ಪೆಟ್ರೊಮ್ಯಾಕ್ಸ್ ಸಿನಿಮಾ ರಿಲೀಸ್ ಆಗಿದೆ. ಕಾರುಣ್ಯ ನಿರ್ವಹಿಸಿದ ಪಾತ್ರಕ್ಕೆ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಅಲ್ಲದೇ, ಪವನ್ ಒಡೆಯರ್ ನಿರ್ದೇಶನದ ರೆಮೋ ಸಿನಿಮಾದಲ್ಲಿ ಕಾರುಣ್ಯ ನಟಿಸಿದ್ದರು, ಈ ಸಿನಿಮಾದಲ್ಲಿ ಅವರು ಪ್ರಿಯಾ ಹೆಸರಿನ ಪಾತ್ರವನ್ನು ನಿರ್ವಹಿಸಿದ್ದರು.

    ನಾನಾ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ಕಾರುಣ್ಯ ಕಿರಗೂರಿನ ಗಯ್ಯಾಳಿಗಳು, ಮನೆ ಮಾರಾಟಕ್ಕಿದೆ ಸೇರಿದಂತೆ ಪ್ರಯೋಗಾತ್ಮಕ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಮನೆ ಮಾರಾಟಕ್ಕಿದೆ ಸಿನಿಮಾದ ನಟನೆಗಾಗಿ ಇವರು ಸೈಮಾ ಪ್ರಶಸ್ತಿ ಕೂಡ ದೊರೆತಿದೆ. ಸಿನಿಮಾಗಳಲ್ಲಿ ಮಾತ್ರವಲ್ಲ, ಕಿರುತೆರೆ ಹಲವಾರು ಶೋಗಳಲ್ಲಿ ಕಾರುಣ್ಯ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಕೂಡ ಇವರಾಗಿದ್ದಾರೆ.

    ಕನ್ನಡ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ತಮಿಳಿನ ಎರಡು ಚಿತ್ರಗಳಲ್ಲೂ ಕಾರುಣ್ಯ ನಟಿಸಿದ್ದಾರೆ. ಆ ಮೂಲಕ ತಮಿಳು ಪ್ರೇಕ್ಷಕರಿಗೂ ಇವರು ಹತ್ತಿರವಾಗಿದ್ದಾರೆ. ಸದಾ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಸಂವಾದಿಸುವ ಇವರು, ಟ್ರಾವೆಲ್ ಪ್ರಿಯೆ. ಸದಾ ದೇಶಗಳನ್ನು ಸುತ್ತುತ್ತಲೇ ಇರುತ್ತಾರೆ. ಅವುಗಳ ಮಾಹಿತಿಯನ್ನೂ ಹಂಚಿಕೊಳ್ಳುತ್ತಾರೆ.

  • ಜೋರ್ಡನ್ ಪ್ರವಾಸದಲ್ಲಿ ಕಾರುಣ್ಯ : ಮೃತಸಮುದ್ರ ದಂಡೆ ಮೇಲೆ ಬಿಂದಾಸ್ ಪೋಸ್

    ಜೋರ್ಡನ್ ಪ್ರವಾಸದಲ್ಲಿ ಕಾರುಣ್ಯ : ಮೃತಸಮುದ್ರ ದಂಡೆ ಮೇಲೆ ಬಿಂದಾಸ್ ಪೋಸ್

    ಕಾಲಿಗೆ ಚಕ್ರಕಟ್ಟಿಕೊಂಡು ಸದಾ ದೇಶಗಳನ್ನು ಸುತ್ತುವ (Travel) ನಟಿ ಕಾರುಣ್ಯ ರಾಮ್ (Karunya Ram), ಸದ್ಯ ಜೋರ್ಡನ್ (Jordan) ಪ್ರವಾಸದಲ್ಲಿದ್ದಾರೆ. ಸಹೋದರಿ ಜೊತೆ ಟೂರ್ ಮಾಡುತ್ತಿರುವ ಅವರು, ಅಲ್ಲಿನ ಸಂಗತಿಗಳನ್ನು ಅಭಿಮಾನಿಗಳಿಗೆ ತಿಳಿಸುತ್ತಲೇ ಇರುತ್ತಾರೆ. ಜೋರ್ಡನ್ ಮೃತಸಮುದ್ರ ದಂಡೆ ಮೇಲೆ ಬಿಂದಾಸ್ ಆಗಿ ಪೋಸ್ ಕೊಟ್ಟಿರುವ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ.

    ಜೋರ್ಡನ್ ಪ್ರವಾಸ ಮಾಡಬೇಕು ಎನ್ನುವುದು ಹಲವು ವರ್ಷಗಳ ಕನಸಾಗಿತ್ತಂತೆ. ಇದೀಗ ಆ ಕನಸನ್ನು ಕಾರುಣ್ಯ ಈಡೇರಿಸಿಕೊಂಡಿದ್ದಾರೆ. ಅಲ್ಲದೇ, ಜೋರ್ಡನ್ ಇತರ ಸ್ಥಳಗಳ ಬಗ್ಗೆ ಅಭಿಮಾನಿಗಳಿಗೆ ತಿಳಿಸುತ್ತಾರಂತೆ. ಜೋರ್ಡನ್ ಪ್ರವಾಸದ ಹಲವು ಫೋಟೋಗಳನ್ನು ಅವರು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಬಾಲಿವುಡ್ ನಂತರ ತಮಿಳಿನಲ್ಲೂ ಹವಾ ಸೃಷ್ಟಿಸಿದ ‘ಕಬ್ಜ’ ಸಿನಿಮಾ

    ಸಿನಿಮಾ, ರಿಯಾಲಿಟಿ ಶೋಗಳನ್ನು ಮಾಡುತ್ತಲೇ ಇರುವ ಕಾರುಣ್ಯ ರಾಮ್, ಕಾರ್ಯಕ್ರಮಗಳ ಮಧ್ಯ ಬಿಡುವು ತಗೆದುಕೊಂಡು ಪ್ರವಾಸ ಮಾಡುತ್ತಾರೆ. ಪ್ರವಾಸದಲ್ಲಿ ಸಹೋದರಿ ಇರಲೇಬೇಕು ಎನ್ನುವುದು ಅವರ ಕಡ್ಡಾಯಗಳಲ್ಲಿ ಒಂದು. ಹಾಗಾಗಿ ಸಹೋದರಿಯರಿಬ್ಬರೂ ಅನೇಕ ದೇಶಗಳನ್ನು ಸುತ್ತಿದ್ದಾರೆ.

    ಇತ್ತೀಚೆಗಷ್ಟೇ ಕಾರುಣ್ಯ ರಾಮ್ ನಟನೆ ಪೆಟ್ರೋಮ್ಯಾಕ್ಸ್ ಸಿನಿಮಾ ರಿಲೀಸ್ ಆಗಿದೆ. ಸತೀಶ್ ನೀನಾಸಂ ನಾಯಕನಾಗಿ ನಟಿಸಿರುವ ಈ ಸಿನಿಮಾದಲ್ಲಿ ಕಾರುಣ್ಯ ಹೊಸ ಬಗೆಯ ಪಾತ್ರ ಮಾಡಿದ್ದರು. ನಾಟಿ ನಾಟಿ ಡೈಲ್ ಕೂಡ ಹೊಡೆದಿದ್ದರು. ಬೋಲ್ಡ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದರಿಂದ ಅದೊಂದು ಸವಾಲಿನ ಪಾತ್ರ ಕೂಡ ಆಗಿತ್ತು.

  • ನಡುರಾತ್ರಿ ರಸ್ತೆ ಗುಂಡಿಗಳ ಮುಚ್ಚಿದ ನಟಿ : ಕಾರುಣ್ಯ ರಾಮ್ ಕೆಲಸಕ್ಕೆ ಮೆಚ್ಚುಗೆ

    ನಡುರಾತ್ರಿ ರಸ್ತೆ ಗುಂಡಿಗಳ ಮುಚ್ಚಿದ ನಟಿ : ಕಾರುಣ್ಯ ರಾಮ್ ಕೆಲಸಕ್ಕೆ ಮೆಚ್ಚುಗೆ

    ಟಿ ಕಾರುಣ್ಯ ರಾಮ್ (Karunya Ram) ಜನ ಮೆಚ್ಚುವಂತಹ ಕೆಲಸ ಮಾಡಿದ್ದಾರೆ. ತಮ್ಮ ರಾಜರಾಜೇಶ್ವರಿ ನಗರ (Rajarajeshwari Nagar) ಏರಿಯಾ ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು (Potholes) ಮುಚ್ಚುವ ಮೂಲಕ ಪ್ರಶಂಸೆಗೆ ಕಾರಣರಾಗಿದ್ದಾರೆ. ನಿನ್ನೆ ರಾತ್ರಿ ಹನ್ನೊಂದು ಗಂಟೆಯ ಹೊತ್ತಲ್ಲಿ ತಮ್ಮ ಸ್ನೇಹಿತರು ಮತ್ತು ಸಹೋದರಿಯ ಜೊತೆ ರಸ್ತೆಗಳಿಗೆ ಇಳಿದ ಕಾರುಣ್ಯ ಹತ್ತಕ್ಕೂ ಹೆಚ್ಚು ಗುಂಡಿಗಳನ್ನು ಮುಚ್ಚಿದ್ದಾರೆ. ಅವರ ಈ ಕೆಲಸಕ್ಕೆ ಅನೇಕರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ.

    ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಕಾರುಣ್ಯ, ‘ಎರಡು ಘಟನೆಗಳಿಂದಾಗಿ ನಾನು ರಸ್ತೆಯಲ್ಲಿ ಬಿದ್ದಿದ್ದ ಗುಂಡಿಗಳನ್ನು ಮುಚ್ಚಲು ಹೊರಟೆ. ನನ್ನ ಸ್ನೇಹಿತರೊಬ್ಬರ ತಂದೆ ತಾಯಿ ವಾಹನ ಓಡಿಸುವಾಗ ರಸ್ತೆಗುಂಡಿಗೆ ಬಿದ್ದು ಆಸ್ಪತ್ರೆ ಸೇರಿದರು. ಅದರಲ್ಲಿ ಒಬ್ಬರು ಮೃತರಾದರು. ಅಲ್ಲದೇ, ನನ್ನ ಕಣ್ಣಾರೆ ಹುಡುಗಿಯೊಬ್ಬಳು ರಸ್ತೆ ಗುಂಡಿಯಲ್ಲಿ ಬಿದ್ದದ್ದು ನೋಡಿದೆ. ಹಣಕ್ಕಿಂತಲೂ ಜೀವ ಅಮೂಲ್ಯ. ಈ ರೀತಿಯಲ್ಲಿ ಪ್ರಾಣ ಕಳೆದುಕೊಳ್ಳಬಾರದು ಎನ್ನುವ ಕಾರಣಕ್ಕೆ ಗುಂಡಿ ಮುಚ್ಚಲು ಮುಂದಾದೆ’ ಎನ್ನುತ್ತಾರೆ.

    ‘ಸರಕಾರ ಅಥವಾ ಜನಪ್ರತಿನಿಧಿಗಳನ್ನು ಬೈಯುತ್ತಾ ಕೂರುವ ಬದಲು, ನಮ್ಮ ಮನೆ, ಏರಿಯಾ ಸುತ್ತಲೂ ಇರುವ ಒಂದೊಂದು ಗುಂಡಿಯನ್ನು ಮುಚ್ಚಿದರೆ ಸಾಕು. ಗುಂಡಿ ಮುಕ್ತ ಬೆಂಗಳೂರು ಮಾಡಬಹುದು. ಜನರು ಮನಸ್ಸು ಮಾಡಬೇಕು ಅಷ್ಟೆ. ಜೀವ ನಮ್ಮದೆ. ಹಾಗಾಗಿ ನಮ್ಮ ಜೀವವನ್ನು ನಾವೇ ಕಾಪಾಡಿಕೊಳ್ಳಬೇಕು. ಇದು ನಾನು ಕಂಡುಕೊಂಡ ಸತ್ಯ. ಈ ಸೂತ್ರವೇ ನನ್ನನ್ನು ಪ್ರೇರೇಪಿಸಿತು’ ಎನ್ನುವುದು ಕಾರುಣ್ಯ ಮಾತು.

    ರಾತ್ರಿ ಹನ್ನೊಂದರ ಹೊತ್ತಿಗೆ ಗುಂಡಿಗಳನ್ನು ಮುಚ್ಚುವುದಕ್ಕೆ ಶುರು ಮಾಡಿದ ಕಾರುಣ್ಯ ಮತ್ತು ಟೀಮ್ ಗೆ ಆ ರಸ್ತೆಯಲ್ಲಿ ಸಂಚರಿಸುತ್ತಿದ್ದವರು ಅಭಿನಂದನೆ ಸಲ್ಲಿಸಿದ್ದಾರೆ. ‘ಆ ರಸ್ತೆಯಲ್ಲಿ ಹೋಗುತ್ತಿದ್ದವರು ವಾಹನ ನಿಲ್ಲಿಸಿ, ನಮ್ಮನ್ನು ಮಾತನಾಡಿಸುತ್ತಿದ್ದರು. ಒಳ್ಳೆಯ ಕೆಲಸ ಮಾಡುತ್ತಿದ್ದೀರಿ ಎಂದು ಬೆನ್ನುತಟ್ಟಿದರು. ನಿಮಗೆ ಒಳ್ಳೆಯದಾಗಲಿ ಎಂದು ಹಾರೈಸಿದರು. ಇದಕ್ಕಿಂತ ಬೇರೆ ಮೆಚ್ಚುಗೆ ಬೇಕಿಲ್ಲ’ ಎನ್ನುತ್ತಾರೆ ಕಾರುಣ್ಯ. ಇದನ್ನೂ ಓದಿ: ಅನುಷ್ಕಾಳೇ ನನ್ನ ಸ್ಫೂರ್ತಿ ಎಂದು ಪತ್ನಿಯನ್ನು ಹಾಡಿ ಹೊಗಳಿದ ವಿರಾಟ್ ಕೊಹ್ಲಿ

    ಕಾರುಣ್ಯ ಕೇವಲ ಗುಂಡಿಗಳನ್ನು ಮಾತ್ರ ಮುಚ್ಚಿಲ್ಲ. ತಮ್ಮದೇ ಆದ ಸಂಸ್ಕಾರ ಟ್ರಸ್ಟ್ (Sanskara Trust) ಮೂಲಕ ಹಲವಾರು ಸಮಾಜಮುಖಿ ಕೆಲಸಗಳನ್ನು ಮಾಡುತ್ತಾ ಬಂದಿದ್ದಾರೆ. ಮೊನ್ನೆಯಷ್ಟೇ ರಾಜರಾಜೇಶ್ವರಿ ನಗರದಲ್ಲಿ ಆರೋಗ್ಯ ಶಿಬಿರವನ್ನು ಹಮ್ಮಿಕೊಂಡಿದ್ದರು. ಆ ಭಾಗದ ಜನರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಮಾಡಿಸಿದರು. ಅಲ್ಲದೇ ಕೋವಿಡ್ ವೇಳೆಯಲ್ಲೂ ಅವರು ಫುಡ್ ಕಿಟ್ ಹಂಚಿದ್ದರು. ತಮ್ಮ ಹುಟ್ಟು ಹಬ್ಬದಂದು ಅನಾಥ ಮಕ್ಕಳಿಗೆ ನೆರವಾಗುತ್ತಾ ಬಂದಿದ್ದಾರೆ.

  • ‘ರಾಜಕುಮಾರಿ’ಯ ಲುಕ್ ನಲ್ಲಿ ಮಿಂಚಿದ ಖ್ಯಾತ ನಟಿ ಕಾರುಣ್ಯ ರಾಮ್

    ‘ರಾಜಕುಮಾರಿ’ಯ ಲುಕ್ ನಲ್ಲಿ ಮಿಂಚಿದ ಖ್ಯಾತ ನಟಿ ಕಾರುಣ್ಯ ರಾಮ್

    ನಾಡಿನಾದ್ಯಂತ ದಸರಾ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸ್ಯಾಂಡಲ್ ವುಡ್ ನಲ್ಲೂ ದಸರಾ ಹಬ್ಬವನ್ನು ನಾನಾ ರೀತಿಯಲ್ಲಿ ಆಚರಿಸುತ್ತಿದ್ದಾರೆ. ನಟಿ ಕಾರುಣ್ಯ ರಾಮ್ (Karunya Ram) ಇದೇ ಸಂದರ್ಭದಲ್ಲಿ ಫೋಟೋ ಶೂಟ್ ಮಾಡಿಸಿದ್ದು, ರಾಜಕುಮಾರಿ ಲುಕ್ ನಲ್ಲಿ ಅವರು ಕಾಣಿಸಿಕೊಂಡಿದ್ದಾರೆ. ದಸರಾಗೂ ಮತ್ತು ಅರಮನೆಗೂ ನಂಟಿರುವ ಕಾರಣದ ಕಾನ್ಸೆಪ್ಟ್ ನಲ್ಲಿ ಈ ಫೋಟೋ ಶೂಟ್ (Photoshoot) ನಡೆದಿದೆ. ಅಂಥದ್ದೇ ಲೋಕೇಶ್ ಹುಡುಕಿ ಅಲ್ಲಿಯೇ ಫೋಟೋಗಳನ್ನು ಸೆರೆ ಹಿಡಿದಿರುವುದು ವಿಶೇಷ.

    ಇದು ವಿಶೇಷವಾಗಿ ನವರಾತ್ರಿಗೆಂದೇ ಮಾಡಲಾದ ಫೋಟೋ ಶೂಟ್. ಕಾನ್ಸೆಪ್ಟ್ ಹಾಗೂ ಡಿಸೈನ್ ಬಿಂದು ರೆಡ್ಡಿ (Bindu Reddy) ಅವರು ಮಾಡಿದ್ದು, ಮಧುರಾ (Madhura) ಅವರ ಫೋಟೋಗ್ರಫಿ ಹಾಗೂ  ನಿಖಿತಾ ಆನಂದ್ (Nikita Anand) ಮೇಕಪ್  ಮಾಡಿದ್ದಾರೆ. ಇದೊಂದು ನನ್ನ ಜೀವನದ ಸುಂದರ ಕ್ಷಣ. ಎಲ್ಲ ಫೋಟೋಗಳು ತುಂಬಾ ಚೆನ್ನಾಗಿ ಮೂಡಿ ಬಂದಿವೆ ಅಂತಾರೆ ಕಾರುಣ್ಯ. ಇದನ್ನೂ ಓದಿ:ರಿಷಬ್ ಶೆಟ್ಟರ ‘ಕಾಂತಾರ’ ಸಿನಿಮಾ ಹೇಗಿದೆ? ಸ್ಯಾಂಡಲ್ ವುಡ್ ಕ್ವೀನ್ ರಮ್ಯಾ ಬರೆದ ಸುದೀರ್ಘ ರಿವ್ಯೂ

    ಮೊನ್ನೆಯಷ್ಟೇ ಕಾರುಣ್ಯ ರಾಮ್ ನಟನೆಯ ಪೆಟ್ರೊಮ್ಯಾಕ್ಸ್ ಸಿನಿಮಾ ರಿಲೀಸ್ ಆಗಿದೆ. ಕಾರುಣ್ಯ ನಿರ್ವಹಿಸಿದ ಪಾತ್ರಕ್ಕೆ ಮೆಚ್ಚುಗೆ ಕೂಡ ವ್ಯಕ್ತವಾಗಿತ್ತು. ಅಲ್ಲದೇ, ಪವನ್ ಒಡೆಯರ್ ನಿರ್ದೇಶನದ ರೆಮೋ ಸಿನಿಮಾದಲ್ಲಿ ಕಾರುಣ್ಯ ನಟಿಸಿದ್ದು, ಈ ಸಿನಿಮಾದಲ್ಲಿ ಅವರು ಪ್ರಿಯಾ ಹೆಸರಿನ ಪಾತ್ರವನ್ನು ನಿರ್ವಹಿಸಿದ್ದಾರೆ. ಆ ಸಿನಿಮಾ ಇನ್ನಷ್ಟೇ ರಿಲೀಸ್ ಆಗಬೇಕಿದೆ.

    ನಾನಾ ಪಾತ್ರಗಳ ಮೂಲಕ ಗುರುತಿಸಿಕೊಂಡಿರುವ ಕಾರುಣ್ಯ ಕಿರಗೂರಿನ ಗಯ್ಯಾಳಿಗಳು, ಮನೆ ಮಾರಾಟಕ್ಕಿದೆ ಸೇರಿದಂತೆ ಪ್ರಯೋಗಾತ್ಮಕ ಸಿನಿಮಾಗಳಲ್ಲೂ ಅವರು ನಟಿಸಿದ್ದಾರೆ. ಮನೆ ಮಾರಾಟಕ್ಕಿದೆ ಸಿನಿಮಾದ ನಟನೆಗಾಗಿ ಇವರು ಸೈಮಾ ಪ್ರಶಸ್ತಿ ಕೂಡ ದೊರೆತಿದೆ. ಸಿನಿಮಾಗಳಲ್ಲಿ ಮಾತ್ರವಲ್ಲ, ಕಿರುತೆರೆ ಹಲವಾರು ಶೋಗಳಲ್ಲಿ ಕಾರುಣ್ಯ ಕಾಣಿಸಿಕೊಂಡಿದ್ದಾರೆ. ಬಿಗ್ ಬಾಸ್ ಮಾಜಿ ಸ್ಪರ್ಧಿ ಕೂಡ ಇವರಾಗಿದ್ದಾರೆ.

    ಕನ್ನಡ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ತಮಿಳಿನ ಎರಡು ಚಿತ್ರಗಳಲ್ಲೂ ಕಾರುಣ್ಯ ನಟಿಸಿದ್ದಾರೆ. ಆ ಮೂಲಕ ತಮಿಳು ಪ್ರೇಕ್ಷಕರಿಗೂ ಇವರು ಹತ್ತಿರವಾಗಿದ್ದಾರೆ. ಸದಾ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳ ಜೊತೆ ಸಂವಾದಿಸುವ ಇವರು, ಟ್ರಾವೆಲ್ ಪ್ರಿಯೆ. ಸದಾ ದೇಶಗಳನ್ನು ಸುತ್ತುತ್ತಲೇ ಇರುತ್ತಾರೆ. ಅವುಗಳ ಮಾಹಿತಿಯನ್ನೂ ಹಂಚಿಕೊಳ್ಳುತ್ತಾರೆ.

    Live Tv
    [brid partner=56869869 player=32851 video=960834 autoplay=true]