Tag: ಕಾರ್ತಿಕ್ ಅದ್ವೈತ್

  • ‘ಟಾಕ್ಸಿಕ್’ ಸಿನಿಮಾ ಕೆಲಸದ ನಡುವೆ ಶಿವಣ್ಣರನ್ನು ಭೇಟಿಯಾದ ಯಶ್

    ‘ಟಾಕ್ಸಿಕ್’ ಸಿನಿಮಾ ಕೆಲಸದ ನಡುವೆ ಶಿವಣ್ಣರನ್ನು ಭೇಟಿಯಾದ ಯಶ್

    ನ್ಯಾಷನಲ್ ಸ್ಟಾರ್ ಯಶ್ (Yash) ‘ಟಾಕ್ಸಿಕ್’ (Toxic) ಸಿನಿಮಾದ ಕೆಲಸ ನಡುವೆ ನಟ ಶಿವಣ್ಣರನ್ನು ಭೇಟಿಯಾಗಿದ್ದಾರೆ. ಹಲವು ಸಮಯದ ನಂತರ ಯಶ್ ಮತ್ತು ಶಿವಣ್ಣ ಭೇಟಿಯಾಗಿರುವ ವಿಡಿಯೋ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ರಕುಲ್ ದಾಂಪತ್ಯ ಮುರಿದು ಬೀಳಲಿದೆ- ಭವಿಷ್ಯ ನುಡಿದ ಸೆಲೆಬ್ರಿಟಿ ಜ್ಯೋತಿಷಿ

    ಶಿವಣ್ಣ (Shivarajkumar) ಸದ್ಯ ತಮಿಳು ನಿರ್ದೇಶಕ ಕಾರ್ತಿಕ್ ಅದ್ವೈತ್ ಜೊತೆ ಸಿನಿಮಾ ಮಾಡುತ್ತಿದ್ದಾರೆ. ಬೆಂಗಳೂರಿನ HMT ಗ್ರೌಂಡ್‌ನಲ್ಲಿ ಚಿತ್ರೀಕರಣ ನಡೆಯುತ್ತಿದೆ. ಈ ಸಿನಿಮಾದ ಸೆಟ್‌ಗೆ ತೆರಳಿ ಶಿವಣ್ಣರನ್ನು ಯಶ್ ಭೇಟಿಯಾಗಿ ಕುಶಲೋಪರಿ ವಿಚಾರಿಸಿದ್ದಾರೆ.  ಬಳಿಕ ಚಿತ್ರತಂಡಕ್ಕೆ ಯಶ್‌ ವಿಶ್‌ ಮಾಡಿದ್ದಾರೆ. ಸಖತ್‌ ಸ್ಟೈಲಿಶ್‌ ಆಗಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ಸಂಗಾತಿ ಇಲ್ಲದೆ ಬದುಕೋದು ಕಷ್ಟ- ಮದುವೆ ಬಗ್ಗೆ ಮಾತನಾಡಿದ ಕಂಗನಾ

    ಇನ್ನೂ ಶಿವಣ್ಣನ 131ನೇ ಸಿನಿಮಾಗೆ ಇತ್ತೀಚೆಗೆ ಚಾಲನೆ ನೀಡಲಾಗಿತ್ತು. ವರಮಹಾಲಕ್ಷ್ಮೀ ಹಬ್ಬದ ಶುಭದಿನದಂದು (ಆ.16) ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಚಿತ್ರಕ್ಕೆ ಚಾಲನೆ ಸಿಕ್ಕಿದ್ದು, ನಿರ್ಮಾಪಕ ಎಸ್ ಎನ್ ರೆಡ್ಡಿ ಕ್ಲ್ಯಾಪ್ ಮಾಡಿದರು. ಅದ್ಧೂರಿಯಾಗಿ ಮುಹೂರ್ತ ಆಚರಿಸಿಕೊಂಡರು.

    ಮುಹೂರ್ತದ ಬಳಿಕ ಸುದ್ದಿಗೋಷ್ಠಿಯಲ್ಲಿ ಚಿತ್ರದ ಬಗ್ಗೆ ಮಾತನಾಡಿದ ಶಿವಣ್ಣ, 2 ವರ್ಷಗಳ ಹಿಂದೆ ಚಿತ್ರತಂಡ ಕಥೆ ಹೇಳಿದ್ದರು. ಯಾಕೆ ಇಷ್ಟು ಲೇಟ್ ಎಂದು ಕೇಳಬೇಡಿ. ಮೊದಲ ಬಾರಿಗೆ ಸ್ಕ್ರೀಪ್ಟ್ ಕೇಳಿದಾಗ ತುಂಬಾ ಚೆನ್ನಾಗಿ ಇತ್ತು. ಅಲ್ಲಿ ಏನೋ ಬೇಕಾಗಿತ್ತು ಎಂದು ಹೇಳುತ್ತಿದ್ದೆ. ಆದರೆ ಇಂಟರೆಸ್ಟಿಂಗ್ ಇತ್ತು. ಈ ಚಿತ್ರದಲ್ಲಿ ಎಲ್ಲರಿಗೂ ಕೆಲಸವಿದೆ. ಡೈಲಾಗ್ ರೈಟರ್, ಕ್ಯಾಮೆರಾ ಮೆನ್‌ಗೆ ತುಂಬಾ ಕೆಲಸವಿದೆ. ಮ್ಯೂಸಿಕ್ ಡೈರೆಕ್ಟರ್‌ಗೂ ತುಂಬಾ ಕೆಲಸವಿದೆ. ಎಲ್ಲಾ ಆರ್ಟಿಸ್ಟ್‌ಗಳು ಕೆಲಸವಿದೆ. ಒಂದು ಸಿನಿಮಾವೆಂದರೆ ಟೆಕ್ನಿಕಲ್ ಅಂತಾರೆ ಇಲ್ಲ ಆಕ್ಟರ್ಸ್ ಸಿನಿಮಾ ಎಂದು ಕರೆಯುತ್ತಾರೆ. ಇದು ಎಲ್ಲರ ಸಿನಿಮಾ. ಕಲಾವಿದರು, ತಂತ್ರಜ್ಞನರ ಸಿನಿಮಾ. ಜನ ಕುತೂಹಲದಿಂದ ಸಿನಿಮಾ ನೋಡಬೇಕು. ನಾನು ನವೀನ್ ಜೊತೆ ಮೊದಲ ಬಾರಿಗೆ ಕೆಲಸ ಮಾಡುತ್ತಿದ್ದೇನೆ. ಈ ಚಿತ್ರದಲ್ಲಿ ಇನ್ನೊಂದು ಸರ್ಪ್ರೈಸ್ ಕ್ಯಾರೆಕ್ಟರ್ ಇದೆ. ಪ್ರತಿಯೊಂದು ಕೆಲಸದಲ್ಲಿ ದೇವರು ನಂಬುತ್ತೇವೆ. ಆದರೆ ಮನುಷ್ಯರೇ ದೇವರನ್ನು ನಂಬುತ್ತಾರೆ. ಇದು ಚಿತ್ರದ ಕಥೆಯ ಎಳೆ ಎಂದು ಮಾತನಾಡಿದ್ದರು.

    ನಿರ್ದೇಶಕ ಕಾರ್ತಿಕ್ ಅದ್ವೈತ್ ಮಾತನಾಡಿ, ನನಗೆ ಕನ್ನಡ ಮಾತನಾಡಲು ಬರುವುದಿಲ್ಲ. ಚಿತ್ರ ಬಿಡುಗಡೆಯಾಗುವಷ್ಟರಲ್ಲಿ ಕನ್ನಡ ಮಾತನಾಡುತ್ತೇನೆ ಎಂದು ಪ್ರಾಮಿಸ್ ಮಾಡುತ್ತೇನೆ. ಶಿವಣ್ಣ ಕಥೆ, ಕ್ಯಾರೆಕ್ಟರ್ ಮೇಲೆ ನಂಬಿಕೆ ಇಟ್ಟು ನನಗೆ ಸಿನಿಮಾ ನಿರ್ದೇಶನಕ್ಕೆ ಅವಕಾಶ ಕೊಟ್ಟಿದ್ದಾರೆ. ಅವರಿಗೆ ಧನ್ಯವಾದ. ನನ್ನ ಇಬ್ಬರು ನಿರ್ಮಾಪಕರು ಚಿತ್ರದ ಮುಖ್ಯ ಪಿಲ್ಲರ್ ಎಂದು ತಿಳಿಸಿದರು.

  • ವರಮಹಾಲಕ್ಷ್ಮಿ ಹಬ್ಬದಂದು ಸೆಟ್ಟೇರಿತು ಶಿವರಾಜ್‌ಕುಮಾರ್ ನಟನೆಯ 131ನೇ ಸಿನಿಮಾ

    ವರಮಹಾಲಕ್ಷ್ಮಿ ಹಬ್ಬದಂದು ಸೆಟ್ಟೇರಿತು ಶಿವರಾಜ್‌ಕುಮಾರ್ ನಟನೆಯ 131ನೇ ಸಿನಿಮಾ

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್ (Shivarajkumar) ನಟನೆಯ 131ನೇ ಸಿನಿಮಾಗೆ ತಮಿಳಿನ ನಿರ್ದೇಶಕ ಕಾರ್ತಿಕ್ ಅದ್ವೈತ್ ಆ್ಯಕ್ಷನ್ ಕಟ್ ಹೇಳ್ತಿದ್ದಾರೆ. ವರಮಹಾಲಕ್ಷ್ಮಿ ಹಬ್ಬದಂದು (ಆ.16) ನಟ ಶಿವಣ್ಣ ನಟನೆಯ ಹೊಸ ಚಿತ್ರ ಸೆಟ್ಟೇರಿದೆ.

    ಇಂದು (ಆ.16) ಸರಳವಾಗಿ ಕಂಠೀರವ ಸ್ಟುಡಿಯೋದಲ್ಲಿ ಶಿವಣ್ಣ ನಟನೆಯ 131ನೇ ಚಿತ್ರಕ್ಕೆ ಮುಹೂರ್ತ ಸಮಾರಂಭ ಜರುಗಿದೆ. ಶಿವಣ್ಣಗೆ ಕ್ಲ್ಯಾಪ್‌ ಮಾಡುವ ಮೂಲಕ ಚಿತ್ರಕ್ಕೆ ಚಾಲನೆ ನೀಡಲಾಗಿದೆ.ಇನ್ನೂ ಎಂದೂ ಕಾಣಿಸಿಕೊಂಡಿರದ ವಿಭಿನ್ನ ರೋಲ್‌ನಲ್ಲಿ ಶಿವರಾಜ್‌ಕುಮಾರ್ ನಟಿಸಲಿದ್ದಾರೆ. ಈ ಚಿತ್ರವನ್ನು ನಿರ್ದೇಶನ ಮಾಡಲೆಂದೇ ತಮಿಳಿನಿಂದ ಕಾರ್ತಿಕ್ ಅದ್ವೈತ್ ಕನ್ನಡಕ್ಕೆ ಬಂದಿದ್ದಾರೆ.

    ಇದೊಂದು ಪಕ್ಕಾ ರೌಡಿಸಂ ಕಥೆಯಾಗಿದ್ದು, ಈ ಚಿತ್ರವನ್ನು ಎಸ್‌ ಎನ್ ರೆಡ್ಡಿ, ಮತ್ತು ಸುಧೀರ್ ಪಿ ಅವರು ಈ ಸಿನಿಮಾದ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಇದನ್ನೂ ಓದಿ:ನಾಗಚೈತನ್ಯ, ಶೋಭಿತಾ ನಿಶ್ಚಿತಾರ್ಥ- ತಿರುಗೇಟು ಕೊಟ್ಟ ಸಮಂತಾ

    ಇನ್ನೂ ಭೈರತಿ ರಣಗಲ್, ಭೈರವನ ಕೊನೆ ಪಾಠ, ಘೋಸ್ಟ್ 2, 45 ಸಿನಿಮಾ, ರಾಮ್ ಚರಣ್ ಮತ್ತು ಜಾನ್ವಿ ಕಪೂರ್ ಜೊತೆ ತೆಲುಗು ಸಿನಿಮಾ ಸೇರಿದಂತೆ ಅನೇಕ ಚಿತ್ರಗಳಲ್ಲಿ ಶಿವಣ್ಣ ಬ್ಯುಸಿಯಾಗಿದ್ದಾರೆ.

  • ಶಿವರಾಜ್‌ಕುಮಾರ್‌ಗೆ ತೆಲುಗು ನಿರ್ದೇಶಕ ಆ್ಯಕ್ಷನ್ ಕಟ್

    ಶಿವರಾಜ್‌ಕುಮಾರ್‌ಗೆ ತೆಲುಗು ನಿರ್ದೇಶಕ ಆ್ಯಕ್ಷನ್ ಕಟ್

    ಹ್ಯಾಟ್ರಿಕ್ ಹೀರೋ ಶಿವರಾಜ್‌ಕುಮಾರ್‌ (Shivarajkumar) ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಈ ಚಿತ್ರಗಳ ಪೈಕಿ ನಿರೀಕ್ಷೆ ಹೆಚ್ಚಿಸಿರುವುದು ಈ ಸಿನಿಮಾ. ಈ ಚಿತ್ರದ ಕುರಿತ ಹೊಸ ಅಪ್‌ಡೇಟ್ ಸಿಕ್ಕಿದೆ. ಇಂದು ಶಿವಣ್ಣನ ಮಡದಿ ಗೀತಾ ಶಿವರಾಜ್ ಕುಮಾರ್ ಹುಟ್ಟುಹಬ್ಬದ ವಿಶೇಷವಾಗಿ ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿ ಶುಭ ಕೋರಿದೆ. ಇದನ್ನೂ ಓದಿ:ಇಂದಿನಿಂದ ಬಿಗ್ ಬಾಸ್ ಒಟಿಟಿ ಸ್ಟಾರ್ಟ್- ಸ್ಪರ್ಧಿಗಳ ಲಿಸ್ಟ್ ಔಟ್

    ಶಿವರಾಜ್ ಕುಮಾರ್‌ಗೆ ಆ್ಯಕ್ಷನ್ ಕಟ್ ಹೇಳ್ತಿರುವುದು ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್. ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ಪಾಯುಮ್ ಒಲಿ ನೀ ಎನಕ್ಕು ಚಿತ್ರ ನಿರ್ದೇಶಿಸಿದ್ದಾರೆ. ಇದೀಗ ಸ್ಯಾಂಡಲ್ವುಡ್ (Sandalwood) ಅಂಗಳಕ್ಕೆ ಎಂಟ್ರಿ ಕೊಡ್ತಿರುವ ಇವರಿಗೆ ನಿರ್ದೇಶಕನಾಗಿ ಎರಡನೇ ಸಿನಿಮಾ.

    ಇದೊಂದು ಆ್ಯಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫೆರೆಂಟ್ ಲುಕ್‌ನಲ್ಲಿ ಕಾಣಸಿಕೊಳ್ಳಲಿದ್ದಾರೆ. ಸ್ಕ್ರಿಪ್ಟ್ ಕೆಲಸ ಮುಗಿದಿದ್ದು, ಸದ್ಯ ಮ್ಯೂಸಿಕ್ ವರ್ಕ್ ಭರದಿಂದ ಸಾಗುತ್ತಿದೆ. ಆಗಸ್ಟ್ ತಿಂಗಳಲ್ಲಿ ಮುಹೂರ್ತ ನಡೆಯಲಿದೆ. ಸದ್ಯಕ್ಕೆ ಬೇರೆ ಕಲಾವಿದರ ಆಯ್ಕೆ ಪ್ರಕ್ರಿಯೆ ಮುಗಿದಿದ್ದು, ಚಿತ್ರೀಕರಣಕ್ಕೆ ತೆರಳಲು ಸಜ್ಜಾಗಿದೆ ಚಿತ್ರತಂಡ. ಸ್ಯಾಮ್ ಸಿ.ಎಸ್ ಸಂಗೀತ, ಎಜೆ ಶೆಟ್ಟಿ ಛಾಯಾಗ್ರಹಣ, ದೀಪು S ಕುಮಾರ್ ಸಂಕಲನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಚಿತ್ರಕ್ಕಿದೆ.

  • ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ‘ವಿಕ್ರಂ ವೇದ’ ಮ್ಯೂಸಿಕ್ ಡೈರೆಕ್ಟರ್

    ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟ ‘ವಿಕ್ರಂ ವೇದ’ ಮ್ಯೂಸಿಕ್ ಡೈರೆಕ್ಟರ್

    ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರ ಹುಟ್ಟುಹಬ್ಬಕ್ಕೆ ಸಾಲು ಸಾಲು ಸಿನಿಮಾಗಳು ಘೋಷಣೆಯಾಗಿವೆ. ಏಕಕಾಲಕ್ಕೆ ಹತ್ತಕ್ಕೂ ಹೆಚ್ಚು ಚಿತ್ರಗಳು ಅನೌನ್ಸ್ ಆಗಿವೆ. ಈ ಪೈಕಿ ಶಿವಣ್ಣ ‘SCFC01’ ಎಂಬ ತಾತ್ಕಾಲಿಕ ಶೀರ್ಷಿಕೆಯಡಿ ಹೊಸ ಸಿನಿಮಾದ ಪೋಸ್ಟರ್ ಬಿಡುಗಡೆ ಮಾಡಲಾಗಿದೆ‌. ಈ ಚಿತ್ರದ ಮೂಲಕ ಖ್ಯಾತ ಸಂಗೀತ ನಿರ್ದೇಶಕರಾದ ಸ್ಯಾಮ್ ಸಿ.ಎಸ್ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡುತ್ತಿದ್ದಾರೆ.

    ವಿಕ್ರಂ ವೇದ ಸೇರಿದಂತೆ ಹಲವು ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳಿಗೆ ಟ್ಯೂನ್ ಹಾಕಿರುವ ಸ್ಯಾಮ್, ಇದೀಗ ಕರುನಾಡ ಚಕ್ರವರ್ತಿ ಶಿವಣ್ಣ ಬಣ್ಣ ಹಚ್ಚಲಿರುವ ಅಪ್ ಕಮ್ಮಿಂಗ್ ಪ್ರಾಜೆಕ್ಟ್ ಗೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.  ಸುಧೀರ್ ಚಂದ್ರ ಪದ್ರಿ ನಿರ್ಮಿಸುತ್ತಿರುವ ಈ ಚಿತ್ರವನ್ನು ಕಾರ್ತಿಕ್ ಅದ್ವೈತ್ ನಿರ್ದೇಶನದಲ್ಲಿ ಮಾಡಲಿದ್ದಾರೆ. ಇದನ್ನೂ ಓದಿ:ಕೊನೆಗೂ ಮಗುವಿನ ತಂದೆ ಯಾರೆಂದು ಗುಟ್ಟು ಬಿಟ್ಟು ಕೊಟ್ಟ ಇಲಿಯಾನಾ

    ಇದು ಪ್ಯಾನ್ ಇಂಡಿಯಾ ಸಿನಿಮಾ ಆಗಿದ್ದು, ಕನ್ನಡ, ತೆಲುಗು, ಮಲಯಾಳಂ ಹಾಗೂ ತಮಿಳು ಭಾಷೆಯಲ್ಲಿ ಬಿಡುಗಡೆಯಾಗಲಿದೆ. ಆಕ್ಷನ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಪ್ರಾಜೆಕ್ಟ್ ಮೂಲಕ ಸ್ಯಾಮ್ ಸಿ ಎಸ್ ಪ್ಯಾನ್ ಇಂಡಿಯಾ ಮ್ಯೂಸಿಕಲ್ ಐಕಾನ್ ಆಗಲಿದ್ದಾರೆ.

     

    ಈ ಸಿನಿಮಾದ ಹೆಚ್ಚಿನ ಮಾಹಿತಿ ಇರದೇ ಇದ್ದರೂ, ಮುಂದಿನ ದಿನಗಳಲ್ಲಿ ತಾರಾಗಣ ಮತ್ತು ಇತರ ವಿಷಯಗಳನ್ನು ಹಂಚಿಕೊಳ್ಳುವುದಾಗಿ ಚಿತ್ರತಂಡ ತಿಳಿಸಿದೆ. ಈ ಮೂಲಕ ಕನ್ನಡಕ್ಕೆ ಮತ್ತೋರ್ವ ಪ್ರತಿಭಾವಂತ ಸಂಗೀತ ನಿರ್ದೇಶಕರನ್ನು ಚಿತ್ರತಂಡ ಪರಿಚಯಿಸುತ್ತಿದೆ. ಅಲ್ಲದೇ, ಮುಂದಿನ ದಿನಗಳಲ್ಲಿ ಮತ್ತಷ್ಟು ಅಪ್ ಡೇಟ್ ನೀಡುವುದಾಗಿಯೂ ತಿಳಿಸಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಶಿವಣ್ಣನ ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಕಾನ್ಸೆಪ್ಟ್ ಪೋಸ್ಟರ್ ಬಿಡುಗಡೆ

    ಶಿವಣ್ಣನ ಹುಟ್ಟುಹಬ್ಬಕ್ಕೆ ಹೊಸ ಚಿತ್ರದ ಕಾನ್ಸೆಪ್ಟ್ ಪೋಸ್ಟರ್ ಬಿಡುಗಡೆ

    ರುನಾಡ ಚಕ್ರವರ್ತಿ ಶಿವರಾಜಕುಮಾರ್ (Shivaraj Kumar) ಇಂದು ತಮ್ಮ ಹುಟ್ಟುಹಬ್ಬವನ್ನು (Birthday)  ಆಚರಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ಹೊಸದೊಂದು ಚಿತ್ರವನ್ನು ಅವರು ಒಪ್ಪಿಕೊಂಡಿದ್ದು, ಹುಟ್ಟುಹಬ್ಬದ ಈ ಸಂದರ್ಭದಲ್ಲಿ ಈ ಚಿತ್ರದಲ್ಲಿನ ಅವರ ಪಾತ್ರದ ಕಾನ್ಸೆಪ್ಟ್ ಪೋಸ್ಟರ್ (Concept Poster) ಬಿಡುಗಡೆ ಮಾಡಲಾಗಿದೆ.

    ಈ ಹಿಂದೆ ತಮಿಳಿನಲ್ಲಿ ವಿಕ್ರಮ್ ಪ್ರಭು ಅಭಿನಯದ ‘ಪಾಯುಮ್ ಒಳಿ ನೀ ಎನಕ್ಕು’ ಎಂಬ ಚಿತ್ರವನ್ನು ನಿರ್ದೇಶಿಸಿದ್ದ ಕಾರ್ತಿಕ್ ಅದ್ವೈತ್ (Karthik Advait) ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಸುಧೀರ್ ಚಂದ್ರ ಫಿಲಂ ಕಂಪನಿ ಮೂಲಕ ಸುಧೀರ್ ಚಂದ್ರ ಪದಿರಿ ನಿರ್ಮಿಸುತ್ತಿದ್ದಾರೆ. ಇದು ಅವರು ಕನ್ನಡದಲ್ಲಿ ನಿರ್ಮಿಸುತ್ತಿರುವ ಮೊದಲ ಚಿತ್ರವಾಗಿದೆ. ‘ವಿಕ್ರಮ್ ವೇದ’ ಮತ್ತು ‘ಕೈದಿ’ ಚಿತ್ರಗಳಿಗೆ ಸಂಗೀತ ಸಂಯೋಜಿಸಿದ್ದ ಸ್ಯಾಮ್ ಸಿ.ಎಸ್ ಈ ಚಿತ್ರಕ್ಕೆ ಸಂಗೀತ ಸಂಯೋಜಿಸುವ ಮೂಲಕ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಡುತ್ತಿದ್ದಾರೆ. ಇದನ್ನೂ ಓದಿ:ಅಮೆರಿಕಾದಲ್ಲಿ ಅವಳಿ ಮಕ್ಕಳಿಗೆ ಕೇಶ ಮುಂಡನ ಮಾಡಿಸಿದ ಪ್ರೀತಿ ಜಿಂಟಾ

    ಇದೊಂದು ಆಕ್ಷನ್ ಚಿತ್ರವಾಗಿದ್ದು, ದಕ್ಷಿಣ ಭಾರತದ ಜನಪ್ರಿಯ ನಟ-ನಟಿಯರು ಈ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಚಿತ್ರವು ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂನಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಸದ್ಯದಲ್ಲೇ ಈ ಚಿತ್ರದ ಹೆಚ್ಚಿನ ವಿವರಗಳು ಹೊರಬೀಳಲಿವೆ.

    ಶಿವರಾಜ್ ಕುಮಾರ್ ಹುಟ್ಟು ಹಬ್ಬದಂದು ಅವರ ನಟನೆಯ ಸಿನಿಮಾಗಳ ಪೋಸ್ಟರ್, ಟೀಸರ್ ಇಂದು ಬಿಡುಗಡೆ ಆಗುತ್ತಿವೆ. ಬೆಳಗ್ಗೆಯಿಂದಲೇ ಶಿವರಾಜ್ ಕುಮಾರ್ ಮನೆ ಮುಂದೆ ಅಭಿಮಾನಿಗಳು ನೆರೆದಿದ್ದು, ನೆಚ್ಚಿನ ನಟನ ಹುಟ್ಟು ಹಬ್ಬವನ್ನು ಸಡಗರದಿಂದ ಆಚರಿಸುತ್ತಿದ್ದಾರೆ. ನಾನಾ ರೀತಿಯ ಕಾರ್ಯಕ್ರಮಗಳನ್ನೂ ಇಂದು ಹಮ್ಮಿಕೊಂಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಶಿವಣ್ಣ

    ತೆಲುಗು ನಿರ್ದೇಶಕ ಕಾರ್ತಿಕ್ ಅದ್ವೈತ್ ಚಿತ್ರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ಶಿವಣ್ಣ

    ಹ್ಯಾಟ್ರಿಕ್ ಹೀರೋ, ಅಭಿಮಾನಿಗಳ ಪ್ರೀತಿಯ ಶಿವಣ್ಣ (Shivaraj Kumar) ಸ್ಯಾಂಡಲ್ ವುಡ್ ಬ್ಯುಸಿಯೆಸ್ಟ್ ನಟ. ಸದ್ಯ ಶಿವಣ್ಣ 125ನೇ ಸಿನಿಮಾ ‘ವೇದ’ ಡಿಸೆಂಬರ್ ನಲ್ಲಿ ತೆರೆ ಕಾಣಲು ಸಜ್ಜಾಗಿ ನಿಂತಿದೆ. ಘೋಸ್ಟ್, ನೀ ಸಿಗೋವರೆಗೂ, ಫಾರ್ಟಿಫೈವ್, ಕರಟಕ ದಮನಕ ಸಿನಿಮಾಗಳಲ್ಲೂ ಬ್ಯುಸಿಯಾಗಿದ್ದಾರೆ. ಇದರ ನಡುವೆ ಮತ್ತೊಂದು ಹೊಸ ಚಿತ್ರಕ್ಕೆ ಶಿವಣ್ಣ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ತೆಲುಗು ನಿರ್ದೇಶಕರೊಬ್ಬರು ಹೇಳಿರೋ ಕಥೆ ಕೇಳಿ ಇಂಪ್ರೆಸ್ ಆಗಿರೋ ಶಿವಣ್ಣ ಅವರೊಂದಿಗೆ ಸಿನಿಮಾ ಮಾಡಲು ರೆಡಿಯಾಗಿದ್ದಾರೆ.

    ಅಂದ್ಹಾಗೆ ಶಿವರಾಜ್ ಕುಮಾರ್ ಗೆ ಆಕ್ಷನ್ ಕಟ್ ಹೇಳ್ತಿರೋ ನಿರ್ದೇಶಕ ತೆಲುಗಿನ ಕಾರ್ತಿಕ್ ಅದ್ವೈತ್ (Karthik Advaith). ತಮಿಳಿನಲ್ಲಿ ವಿಕ್ರಂ ಪ್ರಭು ಅಭಿನಯದ ‘ಪಾಯುಮ್ ಒಲಿ ನೀ ಎನಕ್ಕು’ ಚಿತ್ರ ನಿರ್ದೇಶಿಸಿದ್ದಾರೆ. ಇದೀಗ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಡ್ತಿರೋ ಇವರಿಗೆ ನಿರ್ದೇಶಕನಾಗಿ ಇದು ಎರಡನೇ ಸಿನಿಮಾ. ಇದನ್ನೂ ಓದಿ:ಜ್ಯೂ.ಎನ್‌ಟಿಆರ್ ಭೇಟಿ ಮಾಡಿ ಕಣ್ಣೀರಿಟ್ಟ ಜಪಾನ್ ಫ್ಯಾನ್ಸ್

    ಇದೊಂದು ಆಕ್ಷನ್ ಥ್ರಿಲ್ಲರ್ ಸಿನಿಮಾವಾಗಿದ್ದು, ಶಿವಣ್ಣ ಡಿಫ್ರೆಂಟ್ ಲುಕ್ ನಲ್ಲಿ, ಡಿಫ್ರೆಂಟ್ ರೋಲ್ ನಲ್ಲಿ ಕಾಣಸಿಗಲಿದ್ದಾರೆ. ಸಿನಿಮಾ ಕಥೆ ಕೇಳಿ ಶಿವಣ್ಣ ಕೂಡ ಎಕ್ಸೈಟ್ ಆಗಿದ್ದಾರೆ. ಸ್ಕ್ರಿಪ್ಟ್ ಕೆಲಸಗಳು ಮುಗಿದಿದ್ದು ಪ್ರಿಪ್ರೊಡಕ್ಷನ್ ಕೆಲಸದಲ್ಲಿ ಸಿನಿಮಾ ತಂಡ ಬ್ಯುಸಿಯಾಗಿದೆ. ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭವಾಗಲಿದೆ. ಬಹಳ ದೊಡ್ಡ ಮೊತ್ತದಲ್ಲಿ ಸಿನಿಮಾ ನಿರ್ಮಾಣ ಮಾಡಲು ಪ್ಲ್ಯಾನ್ ಮಾಡಿಕೊಳ್ಳಲಾಗಿದೆ.  ಚಿತ್ರದ ಟೈಟಲ್, ನಾಯಕಿ, ತಾರಾಬಳಗ, ತಾಂತ್ರಿಕ ವರ್ಗ ಇದೆಲ್ಲದರ ಬಗ್ಗೆ ಮುಂಬರುವ ದಿನಗಳಲ್ಲಿ ಮಾಹಿತಿ ಹಂಚಿಕೊಳ್ಳೊದಾಗಿ ನಿರ್ದೇಶಕ ಕಾರ್ತಿಕ್ ಅದ್ವೈತ್  ತಿಳಿಸಿದ್ದಾರೆ.

    ಶಿವಣ್ಣ ಅಭಿನಯದ‌ ‘ಕಿಲ್ಲಿಂಗ್ ವೀರಪ್ಪನ್’ ಚಿತ್ರಕ್ಕೆ ಕಾರ್ಯಕಾರಿ ನಿರ್ಮಾಪಕರಾಗಿದ್ದ ಹಾಗೂ ತೆಲುಗಿನಲ್ಲಿ ‘ಆಫೀಸರ್’, ‘ಗುಡ್ ಲಕ್ ಸಖಿ’ ಸಿನಿಮಾ ನಿರ್ಮಿಸಿರುವ  ನಿರ್ಮಾಪಕ ಸುಧೀರ್ ಚಂದ್ರ ಪಡಿರಿ  ‘ಸುಧೀರ್ ಚಂದ್ರ ಫಿಲಂ ಕಂಪನಿ’ ಬ್ಯಾನರ್ ನಡಿ  ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.

    Live Tv
    [brid partner=56869869 player=32851 video=960834 autoplay=true]