Tag: ಕಾರ್ಪೋರೇಟರ್ ಪತಿ

  • ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ಮಿಡ್‍ನೈಟ್ ಆಪರೇಷನ್ – ಕಾರ್ಪೊರೇಟರ್ ಪತಿ ಖಲೀಂ ಪಾಷಾ ಅರೆಸ್ಟ್

    ಡಿಜೆ ಹಳ್ಳಿ, ಕೆಜಿ ಹಳ್ಳಿಯಲ್ಲಿ ಮಿಡ್‍ನೈಟ್ ಆಪರೇಷನ್ – ಕಾರ್ಪೊರೇಟರ್ ಪತಿ ಖಲೀಂ ಪಾಷಾ ಅರೆಸ್ಟ್

    – 53ಕ್ಕೂ ಹೆಚ್ಚು ಕ್ರಿಮಿಗಳು ಅಂದರ್

    ಬೆಂಗಳೂರು: ಡಿಜೆ ಮತ್ತು ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಮತ್ತೊಬ್ಬ ಆರೋಪಿ ಖಲೀಂ ಪಾಷಾನನ್ನು ಪೊಲೀಸರು ಮಧ್ಯರಾತ್ರಿ ಬಂಧಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಗಲಭೆ – ಟಿಪ್ಪು ಆರ್ಮಿ ಸಂಘಟನೆಯ ಮುಖಂಡ ಅರೆಸ್ಟ್

    ಕೆಜಿ ಹಳ್ಳಿ ಕಾರ್ಪೊರೇಟರ್ ಪತಿ ಖಲೀಂ ಪಾಷಾನನ್ನು ಬಂಧಿಸಿದ್ದಾರೆ. ಆರೋಪಿ ಖಲೀಂ ಪಾಷಾ ಗಲಭೆಯ ಉದ್ರಿಕ್ತರಿಗೆ ಪ್ರಚೋದನೆ ನೀಡುತ್ತಿದ್ದನು. ಅಂದರೆ ಗಲಭೆಕೋರರಿಗೆ ಪ್ರಚೋದನಕಾರಿ ಭಾಷಣ ಮಾಡುತ್ತಿದ್ದನು ಎಂಬುದು ತನಿಖೆ ವೇಳೆ ತಿಳಿದು ಬಂದಿದೆ. ಹೀಗಾಗಿ ಮಧ್ಯರಾತ್ರಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.

    ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ, ಡಿಜೆ ಹಳ್ಳಿ ಪೊಲೀಸರು ಮಧ್ಯರಾತ್ರಿ ಅಂದರೆ ಸುಮಾರು 15 ಗಂಟೆಗೆ ಆಪರೇಷನ್ ಕಾರ್ಯಾಚರಣೆ ಮಾಡಲು ಶುರು ಮಾಡಿದ್ದರು. ಅದೇ ರೀತಿ ಡಿಜೆ ಹಳ್ಳಿ, ಕೆಜಿ ಹಳ್ಳಿಯ ಗಲ್ಲಿಗಲ್ಲಿಯಲ್ಲೂ ಪೊಲೀಸ್ ಸುತ್ತಾಡಿದ್ದಾರೆ. ರಾತ್ರಿ 12ರಿಂದ ಬೆಳಗಿನ ಜಾವ 4 ಗಂಟೆವರೆಗೆ ಮಿಡ್‍ನೈಟ್ ಆಪರೇಷನ್ ಮಾಡಿದ್ದಾರೆ.

    ಕಿಡಿಕೇಡಿಗಳು ಗಲಭೆ ಮಾಡಿದ ವಿಡಿಯೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದರು. ಕೊನೆಗೆ ಸಿಸಿಬಿ, ಡಿಜೆ ಪೊಲೀಸರು ವಿಡಿಯೋಗಳನ್ನು ಪರಿಶೀಲನೆ ಮಾಡಿದ್ದಾರೆ. ಆಗ ಆರೋಪಿಗಳನ್ನು ಗುರುತಿಸಿ ಅವರ ಮನೆಗೆ ಮಧ್ಯರಾತ್ರಿ ಹೋಗಿ ಬಂಧಿಸಿದ್ದಾರೆ.

    100ಕ್ಕೂ ಹೆಚ್ಚು ಪೊಲೀಸರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, 50ಕ್ಕೂ ಕಿಡಿಗೇಡಿಗಳನ್ನು ಬಂಧಿಸಿದ್ದಾರೆ. ಇಲ್ಲಿವರೆಗೆ 200ಕ್ಕೂ ಹೆಚ್ಚು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

  • ಐಎಂಎ ವಂಚನೆ – ಶಿವಾಜಿನಗರದ ಕಾರ್ಪೋರೇಟರ್ ಪತಿ ಬಂಧನ

    ಐಎಂಎ ವಂಚನೆ – ಶಿವಾಜಿನಗರದ ಕಾರ್ಪೋರೇಟರ್ ಪತಿ ಬಂಧನ

    ಬೆಂಗಳೂರು: ಐಎಂಎ ವಂಚನೆ ಪ್ರಕರಣದ ಸಂಬಂಧ ಬಿಬಿಎಂಪಿ ಪಾಲಿಕೆಯ ಸದಸ್ಯರೊಬ್ಬರ ಪತಿಯನ್ನು ವಿಶೇಷ ತನಿಖಾ ತಂಡ(ಎಸ್‍ಐಟಿ) ಅಧಿಕಾರಿಗಳು ಬಂಧಿಸಿದ್ದಾರೆ.

    ಶಿವಾಜಿನಗರದ ಕಾರ್ಪೋರೇಟರ್ ಪರೀಧಾ ಅವರ ಪತಿ ಇಸ್ತಿಯಾಕ್ ಅಹಮದ್ ಬಂಧಿತ ಆರೋಪಿ. ಇಸ್ತಿಯಾಕ್ ಅಹಮದ್ ಶಿವಾಜಿನಗರದ ರೌಡಿಶೀಟರ್ ಹಾಗೂ ಶಾಸಕ ರೋಷನ್ ಬೇಗ್ ಆಪ್ತನಾಗಿದ್ದ. ಐಎಂಎ ಕಂಪನಿ ಮಾಲೀಕ ಮನ್ಸೂರ್ ಖಾನ್‍ನಿಂದ ಎರಡು ಕೋಟಿ ರೂ. ಪಡೆದಿದ್ದ. ಈ ಕುರಿತು ಮಾಹಿತಿ ಸಿಗುತ್ತಿದ್ದಂತೆ ಆರೋಪಿಯನ್ನು ಬಂಧಿಸಿದ ಎಸ್‍ಐಟಿ ಅಧಿಕಾರಿಗಳು, ತೀವ್ರ ವಿಚಾರಣೆಗೆ ಒಳಪಡಿಸಿದ್ದರು.

    ಎಸ್‍ಐಟಿ ಅಧಿಕಾರಿಗಳು ಕಳೆದ ನಾಲ್ಕು ದಿನಗಳಿಂದ ಇಸ್ತಿಯಾಕ್ ಅಹಮದ್‍ನನ್ನು ವಿಚಾರಣೆಗೆ ಒಳಪಡಿಸಿದ್ದರು. ಇದರಿಂದಾಗಿ ಆರೋಪಿ, ತಾನು ಮನ್ಸೂರ್ ಖಾನ್‍ನಿಂದ 2 ಕೋಟಿ ರೂ. ಹಣ ಪಡೆದಿದ್ದೆ ಎಂದು ಒಪ್ಪಿಕೊಂಡಿದ್ದಾನೆ.

    ಈ ಪ್ರಕರಣದ ಮುಖ್ಯ ಆರೋಪಿ, ಐಎಂಎ ಮಾಲೀಕ ಮನ್ಸೂರ್ ಖಾನ್, ಬೆಂಗಳೂರು ಜಿಲ್ಲಾಧಿಕಾರಿ ವಿಜಯಶಂಕರ್, ಬೆಂಗಳೂರು ಉತ್ತರ ಉಪವಿಭಾಗಾಧಿಕಾರಿ ಎಲ್.ಸಿ.ನಾಗರಾಜ್ ಸೇರಿದಂತೆ ಅನೇಕರನ್ನು ಎಸ್‍ಐಟಿ ಅಧಿಕಾರಿಗಳು ಬಂಧಿಸಿದ್ದಾರೆ.

    ಮನ್ಸೂರ್ ಖಾನ್ ಜಾರಿ ನಿರ್ದೇಶನಾಲಯದ ವಶದಲ್ಲಿದ್ದು ವಿಚಾರಣೆ ನಡೆಯುತ್ತಿದೆ. ವಿಚಾರಣೆ ವೇಳೆ 15 ರಾಜಕೀಯ ನಾಯಕರ ಹೆಸರನ್ನು ಮನ್ಸೂರ್ ಹೇಳಿದ್ದ ಎಂದು ಮೂಲಗಳು ತಿಳಿಸಿದ್ದವು.