Tag: ಕಾರ್ಪೋರೇಷನ್ ಬ್ಯಾಂಕ್

  • ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚು ಬೀಸಿದ ಗ್ರಾಹಕ

    ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚು ಬೀಸಿದ ಗ್ರಾಹಕ

    ಚಿಕ್ಕಬಳ್ಳಾಪುರ: ಬ್ಯಾಂಕ್ ಸಿಬ್ಬಂದಿ ಮೇಲೆ ಗ್ರಾಹಕನೋರ್ವ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಕಾರ್ಪೋರೇಷನ್ ಬ್ಯಾಂಕಿನಲ್ಲಿ ಘಟನೆ ನಡೆದಿದೆ.

    ದುರ್ಗೆನಹಳ್ಳಿ ಗ್ರಾಮದ ಕುಮಾರ್ ಎಂಬವ ವ್ಯಕ್ತಿ ಕಾರ್ಪೋರೇಷನ್ ಬ್ಯಾಂಕ್ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಲು ಮುಂದಾಗಿದ್ದಾನೆ. ಕ್ಷಣಾರ್ಧದಲ್ಲಿ ಸಿಬ್ಬಂದಿ ಮಚ್ಚಿನ ಏಟಿನಿಂದ ಪಾರಾಗಿದ್ದಾರೆ. ತನ್ನ ಖಾತೆಯಲ್ಲಿರುವ 268 ರೂಪಾಯಿಗಳನ್ನು ನೀಡಲೇಬೇಕೆಂದು ಬ್ಯಾಂಕಿನ ಸಿಬ್ಬಂದಿಯನ್ನು ಕೇಳಿದ್ದಾನೆ. ಬ್ಯಾಂಕ್ ಸಿಬ್ಬಂದಿ ಹಣ ನೀಡಲ್ಲ ಎಂದಾಗ ಹಲ್ಲೆಗೆ ಮುಂದಾಗಿದ್ದಾನೆ.

    ಇದಕ್ಕೆ ಪ್ರತಿಕ್ರಿಯಿಸಿದ ಬ್ಯಾಂಕಿನ ಸಿಬ್ಬಂದಿ, ಕಳೆದೊಂದು ವರ್ಷದಿಂದ ಬ್ಯಾಂಕಿನಲ್ಲಿ ವ್ಯವಹಾರ ನಡೆಸದಿರುವ ಕಾರಣ ಅಕೌಂಟ್ ಲಾಕ್ ಆಗಿದೆಯೆಂದು ತಿಳಿಸಿದ್ದಾರೆ. ಇದರಿಂದ ಕುಪಿತಗೊಂಡ ಕುಮಾರ ಕೂಡಲೇ ಬ್ಯಾಂಕಿನ ಸಿಬ್ಬಂದಿ ಮಚ್ಚಿನಿಂದ ಹಲ್ಲೆ ಮಾಡಲು ಯತ್ನಿಸಿದ್ದನೆ. ಇದನ್ನು ಕಂಡ ಬ್ಯಾಂಕಿನಲ್ಲಿದ್ದ ಸ್ಥಳೀಯರು ಕುಮಾರನನ್ನು ಕೂಡಲೇ ಹಿಡಿದು, ಮಚ್ಚನ್ನು ಕಸಿದುಕೊಂಡು ಥಳಿಸಿ ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.

    ಈ ಸಂಬಂಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ಪ್ರಕರಣ- ಆರೋಪಿ ಕೋರ್ಟ್ ಗೆ ಹಾಜರ್

    ಎಟಿಎಂನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ಪ್ರಕರಣ- ಆರೋಪಿ ಕೋರ್ಟ್ ಗೆ ಹಾಜರ್

    – ನನಗೆ ಇವತ್ತೇ ಶಿಕ್ಷೆ ಕೊಟ್ಟುಬಿಡಿ – ಎಟಿಎಂ ಹಲ್ಲೆಕೋರ ಮನವಿ
    – ನನ್ನ ಪರ ವಾದ ಮಂಡಿಸಲು ಯಾವ ವಕೀಲರು ಬೇಡಾ ಎಂದ ಆರೋಪಿ

    ಬೆಂಗಳೂರು: ನಗರದ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಎಂಬವರ ಮೇಲೆ ಮಾರಾಣಾಂತಿಕ ಹಲ್ಲೆ ನಡೆಸಿದ್ದ ಪ್ರಕರಣದ ಆರೋಪಿ ಮಧುಕರ್ ರೆಡ್ಡಿಯನ್ನು ಎಸ್.ಜೆ.ಪಾರ್ಕ್ ಪೊಲೀಸರು ಇಂದು ಕೋರ್ಟ್ ಗೆ ಹಾಜರಿಪಡಿಸಿದ್ದಾರೆ.

    ಆಂಧ್ರ ಪ್ರದೇಶ ಮೂಲದ ಮಧುಕರ್ ರೆಡ್ಡಿ ವಿರುದ್ಧ ದೋಷಾರೋಪಣೆ ಹೊರೆಸಲು ಇಂದು ಸಿಸಿಎಚ್ 65 ಕೋರ್ಟ್ ಗೆ ಕರೆತರಲಾಗಿತ್ತು. ಈ ಮೂಲಕ ಚಾರ್ಚ್ ಶೀಟ್ ಸಲ್ಲಿಸಿದ ನಂತರ ಮೊದಲ ಬಾರಿಗೆ ಆರೋಪಿಯನ್ನು ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಪ್ರಕರಣದ ಕುರಿತು ನ್ಯಾಯಾಧೀಶರಾದ ರಾಜೇಶ್ವರ ವಿಚಾರಣೆ ನಡೆಸಿದರು.

    ನಾನು ಜ್ಯೋತಿ ಉದಯ್ ಮೇಲೆ ಹಲ್ಲೆ ಮಾಡಿರುವುದು ಸತ್ಯ. ತಪ್ಪು ಒಪ್ಪಿಕೊಳ್ಳುತ್ತೇನೆ. ನನ್ನ ಪರ ವಾದ ಮಂಡಿಸಲು ಯಾವ ವಕೀಲರೂ ಬೇಡ ಹಾಗೂ ವಿಚಾರಣೆಯೂ ಬೇಡ. ಮದನಪಲ್ಲಿ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದೇನೆ. ಈಗ ಇಲ್ಲಿ ಕೂಡ ಶಿಕ್ಷೆ ಅನುಭವಿಸುತ್ತೇನೆ. ನನಗೆ ಹೆಂಡತಿ ಮಕ್ಕಳು ಇದ್ದಾರೆ ಬಿಡುಗಡೆಯಾಗಬೇಕು. ಇವತ್ತೆ ಶಿಕ್ಷೆ ನೀಡಿ ಎಂದು ಮಧುಕರ್ ರೆಡ್ಡಿ ನ್ಯಾಯಾಧೀಶರಿಗೆ ಬೇಡಿಕೊಂಡಿದ್ದಾನೆ.

    ಮಧುಕರ್ ರೆಡ್ಡಿ ಮನವಿಗೆ ಪ್ರತಿಕ್ರಿಯೆ ನೀಡಿದ ನ್ಯಾಯಾಧೀಶರು, ನಿಮ್ಮ ಮೇಲಿರುವ ಆರೋಪಕ್ಕೆ ಜೀವಾವಧಿ ಶಿಕ್ಷೆ ಇದೆ. ತಪ್ಪೊಪ್ಪಿಗೆ ಹೇಳಿಕೆ ನೀಡಿದರೂ ಶಿಕ್ಷೆ ಕಡಿಮೆ ಆಗುತ್ತೆ ಅನ್ನೋದು ಗೊತ್ತಿಲ್ಲ. ನಿಮಗೆ ವಕೀಲರನ್ನು ನೇಮಕ ಮಾಡಲಾಗಿದೆ. ಅವರ ಜೊತೆಗೆ ಚರ್ಚಿಸಿ ತಿಳಿಸಿ ಎಂದು ಸೂಚನೆ ನೀಡಿದರು.

    ಏನಿದು ಪ್ರಕರಣ?:
    ನಗರದ ಕಾರ್ಪೋರೇಷನ್ ಬ್ಯಾಂಕ್ ಎಟಿಎಂನಲ್ಲಿ ಜ್ಯೋತಿ ಉದಯ್ ಎಂಬವರು 2013, ನವೆಂಬರ್ 19ರಂದು ಹಣ ಪಡೆಯುತ್ತಿದ್ದರು. ಈ ವೇಳೆ ಜ್ಯೋತಿ ಉದಯ್ ಅವರ ಮೇಲೆ ಆಂಧ್ರ ಪ್ರದೇಶ ಮೂಲದ ಮಧುಕರ್ ರೆಡ್ಡಿ ಮಾರಣಾಂತಿಕ ಹಲ್ಲೆ ಮಾಡಿ, ಹಣ ಕಿತ್ತುಕೊಂಡು ಪರಾರಿಯಾಗಿದ್ದ. ಎಟಿಎಂ ಕೇಂದ್ರದಲ್ಲಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಆರೋಪಿಯ ಕೃತ್ಯ ಸೆರೆಯಾಗಿತ್ತು. ಕರ್ನಾಟಕ ಅಷ್ಟೇ ಅಲ್ಲದೆ ಆಂಧ್ರ ಪ್ರದೇಶದಲ್ಲಿ ನಾಲ್ಕು ಪ್ರಕರಣ ಹಾಗೂ ಕೇರಳದಲ್ಲಿ ಎರಡು ಪ್ರಕರಣದ ಪ್ರಮುಖ ಆರೋಪಿಯಾಗಿದ್ದ.

    ಎಲ್ಲೆಲ್ಲಿ ಅಪರಾಧಗಳು:
    ಆಂಧ್ರ ಪ್ರದೇಶ:
    > 2005 ರ ಆನಂದ ರೆಡ್ಡಿ ಕೊಲೆ ಪ್ರಕರಣ ( ನೀರಿನ ವಿಚಾರಕ್ಕೆ ಬಾಂಬ್ ಇಟ್ಟು ಕೊಲೆ ಮಾಡಿದ್ದ)
    > 2011ರಲ್ಲಿ ಕಡಪ ಜೈಲಿನಿಂದ ಎಸ್ಕೇಪ್ ಆಗಿದ್ದ ಪ್ರಕರಣ
    > 2013, ನ. 10 ಧರ್ಮಾವರಂ ಕೊಲೆ ಪ್ರಕರಣ ( ಪ್ರಮೀಳಮ್ಮ)
    > ಹೈದ್ರಾಬಾದ್ ಮತ್ತು ಗುಂಟೂರಿನಲ್ಲಿ ಕೊಲೆ ಯತ್ನ ಪ್ರಕರಣಗಳು

    ಕರ್ನಾಟಕ:
    > 2013, ನ.19 ರಂದು ಎಟಿಎಂನಲ್ಲಿ ಜ್ಯೋತಿ ಉದಯ್ ಕೊಲೆ ಯತ್ನ ಪ್ರಕರಣ

    ಕೇರಳ:
    > ಎರ್ನಾಕುಲಂನಲ್ಲಿ ನಡೆದ ಎರಡು ಸರ ಅಪಹರಣ ಪ್ರಕರಣ
    > ಎಟಿಎಂನಲ್ಲಿ ನಡೆದ ಕೊಲೆ ಯತ್ನ ಪ್ರಕರಣ

    https://youtu.be/RXXpBObVE1Q

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಎಟಿಎಂ ಸೆಕ್ಯೂರಿಟಿ ಗಾರ್ಡ್ ಕೊಂದಿದ್ದ ದೋಷಿಗೆ ಜೀವಾವಧಿ ಶಿಕ್ಷೆ

    ಎಟಿಎಂ ಸೆಕ್ಯೂರಿಟಿ ಗಾರ್ಡ್ ಕೊಂದಿದ್ದ ದೋಷಿಗೆ ಜೀವಾವಧಿ ಶಿಕ್ಷೆ

    ಬೆಂಗಳೂರು: ಎಟಿಎಂ ಸೆಕ್ಯೂರಿಟಿ ಗಾರ್ಡ್ ಒಬ್ಬರನ್ನು ಕೊಲೆ ಮಾಡಿದ ಪ್ರಕರಣದ ದೋಷಿಗೆ ಸೆಷನ್ಸ್ ಕೋರ್ಟ್ ಜೀವಾವಧಿ ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಿದೆ.

    2011ರಲ್ಲಿ ಕಾರ್ಪೋರೇಷನ್ ಬ್ಯಾಂಕ್ ನ ಎಟಿಎಂನನಲ್ಲಿ ಹಣ ದೋಚಲು ಸೈಮನ್ ಬಂದಿದ್ದ. ಈ ವೇಳೆ ಸೆಕ್ಯೂರಿಟಿ ಆಗಿದ್ದ ಚಂದ್ರಪ್ಪ ಅವರನ್ನು ಕೊಲೆ ಮಾಡಿದ್ದ. ಬಳಿಕ ಆರೋಪಿಯನ್ನು ಸುಬ್ರಹ್ಮಣ್ಯಪುರ ಪೊಲೀಸರು ಬಂಧಿಸಿದ್ದರು.

    7 ವರ್ಷಗಳ ಕಾಲ ಪ್ರಕರಣದ ವಿಚಾರಣೆ ನಡೆದು ಸೆಷನ್ಸ್ ಕೋರ್ಟ್ ಸೋಮವಾರ ದೋಷಿ ಸೈಮನ್ ಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶ ಪ್ರಕಟಿಸಿದೆ.

     ಇದನ್ನೂ ಓದಿ: ಎಟಿಎಂಗಳಲ್ಲಿ 200 ರೂ. ನೋಟ್‍ಗಳು ಸಿಗಲು ಇನ್ನೂ 3 ತಿಂಗಳಾಗ್ಬಹುದು

    ಇದನ್ನೂ ಓದಿ: ವಿಡಿಯೋ: ಎಟಿಎಂ ಯಂತ್ರವನ್ನೇ ಕದ್ದು ಟ್ರಕ್‍ನಲ್ಲಿ ಎಳೆದುಕೊಂಡು ಹೋದ್ರು!

    ಇದನ್ನೂ ಓದಿ: ಎಟಿಎಂ ತೆರೆಯದೇ, ಒಡೆಯದೇ 20 ಲಕ್ಷ ರೂ. ಕದ್ದ ಖದೀಮರು!

  • ಊಟದ ದುಡ್ಡಿಗಾಗಿ ಎಟಿಎಂನಲ್ಲಿ ಮಚ್ಚು ಬೀಸಿದ್ನಂತೆ ಮಧುಕರ್!

    ಬೆಂಗಳೂರು: ನಗರದ ಎಟಿಎಂನಲ್ಲಿ ಜ್ಯೋತಿ ಎಂಬವರ ಮೇಲೆ ಹಲ್ಲೆ ಮಾಡಿದ್ದ ಸೈಕೋ ಮಧುಕರ್ ರೆಡ್ಡಿ ಪೊಲೀಸರ ಮುಂದೆ ಒಂದೊಂದೇ ಮಾಹಿತಿ ಬಾಯ್ಬಿಡ್ತಿದ್ದಾನೆ. ಈತ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಲು ಕಾರಣ ಊಟಕ್ಕಾಗಿ ಅಂತೆ. ಹೌದು, ಪೊಲೀಸರ ಮುಂದೆ ಅವನೇ ಹೇಳಿರೋ ಪ್ರಕಾರ ಹಣವಿಲ್ಲದೆ ಎರಡು ದಿನದಿಂದ ಊಟ ಮಾಡಿರಲಿಲ್ಲವಂತೆ.

    ಮೂರು ವರ್ಷಗಳ ಹಿಂದೆ ಆಂಧ್ರದಲ್ಲಿ ಕೊಲೆ ಮಾಡಿ, ಬೆಂಗಳೂರಿಗೆ ಓಡಿ ಬಂದೆ. ಇದ್ದ ಬದ್ದ ದುಡ್ಡು ಮುಗಿದ ಮೇಲೆ ಎರಡು ದಿನ ಊಟ ಇಲ್ಲದೇ ಹಾಗೆ ಇದ್ದೆ. ಕೊನೆಗೆ ಊಟಕ್ಕೆ ದುಡ್ಡು ಪಡೆಯೋ ಉದ್ದೇಶದಿಂದ ಹಲವಾರು ಎಟಿಎಂಗಳ ಮುಂದೆ ವಾಚ್ ಮಾಡಿದ್ದೆ. ಆದ್ರೆ ಜನ ದಟ್ಟಣೆಯ ಕಾರಣಕ್ಕೆ ಭಯ ಆಗಿತ್ತು. ಕೊನೆಗೆ ಕಾರ್ಪೊರೇಷನ್ ಎಟಿಎಂಗೆ ಮಹಿಳೆಯೊಬ್ಬರು ಹೋಗಿದ್ದನ್ನು ನೋಡಿ ಅಂದು ಬೆಳಗ್ಗೆ ಯಾರೂ ಇಲ್ಲದಿದ್ದಾಗ ಎಟಿಎಂಗೆ ನುಗ್ಗಿದೆ. ಎಟಿಎಂ ಕಾರ್ಡ್ ಕಸಿದುಕೊಂಡು ಪಿನ್ ನಂಬರ್ ಕೇಳಿದೆ. ಆದ್ರೆ ಅವರು ಹೇಳಲಿಲ್ಲ. ಹಾಗಾಗಿ ಮಹಿಳೆ ಮೇಲೆ ಹಲ್ಲೆ ಮಾಡಿದೆ ಅಂತ ಪೊಲೀಸರ ಮುಂದೆ ಹೇಳಿದ್ದಾನೆ.

    ಆಂಧ್ರದಲ್ಲಿ ಕೊಲೆ ಮಾಡಿ ಬಂದಿದ್ದ ಮಧುಕರ್, ದುಡ್ಡು ಮುಗಿದ ಮೇಲೆ ಕಬ್ಬನ್‍ಪಾರ್ಕ್‍ನಲ್ಲಿ ಎರಡು ದಿನ ಕಾಲ ಕಳೆದಿದ್ದ. ಅದೆಲ್ಲಿಂದಲೋ ಒಂದು ಮಚ್ಚನ್ನು ಕದ್ದಿದ್ದ. ಇದೇ ಮಚ್ಚನ್ನು ಎಟಿಎಂನಲ್ಲಿ ಬಳಸಿದೆ ಅಂತ ಹೇಳಿದ್ದಾನೆ. ಸದ್ಯ ಬೆಂಗಳೂರಿನ ಕ್ರೈಂ ಬ್ರಾಂಚ್ ಪೊಲೀಸರು ಮದನಪಲ್ಲಿಯಲ್ಲಿ ಬೀಡು ಬಿಟ್ಟು ಮತ್ತಷ್ಟು ಮಾಹಿತಿ ಕಲೆ ಹಾಕ್ತಿದ್ದಾರೆ.