ಜೈಪುರ: ಉತ್ತರ ಪ್ರದೇಶದ (Uttar Pradesh) ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಬಸ್ನ ಮೇಲ್ಭಾಗವು ಹೈಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ ಸ್ಥಳದಲ್ಲೇ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಸುಮಾರು 12 ಮಂದಿಗೆ ಗಂಭೀರ ಸುಟ್ಟು ಗಾಯಗಳಾಗಿವೆ.
ಮನೋಹರಪುರದ ಹಳ್ಳಿಯೊಂದರ ಬಳಿಯ ರಸ್ತೆಯಿಂದ ಬಸ್ ಹಾದು ಹೋಗುವಾಗ ಬಸ್ನ ಮೇಲ್ಭಾಗದಲ್ಲಿ ಇರಿಸಲಾಗಿದ್ದ ಗ್ಯಾಸ್ ಸಿಲಿಂಡರ್ಗಳು ಮತ್ತು ಇತರ ಗೃಹೋಪಯೋಗಿ ವಸ್ತುಗಳು ಹೈಟೆನ್ಷನ್ ವಿದ್ಯುತ್ ತಂತಿಗೆ ತಾಗಿವೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತೇಜ್ಪಾಲ್ ಸಿಂಗ್ ತಿಳಿಸಿದ್ದಾರೆ.
ಬಸ್ನ ಮೇಲ್ಭಾಗವು ಹೈಟೆನ್ಷನ್ ಲೈನ್ಗೆ ತಗುಲುತ್ತಿದ್ದಂತೆ, ಜೋರಾದ ಸ್ಫೋಟ ಸದ್ದು ಕೇಳಿತ್ತು. ಕಾರ್ಮಿಕರ ಕಿರುಚಾಟ ಸದ್ದು ಕೇಳಿ ಹತ್ತಿರದ ನಿವಾಸಿಗಳು ಸ್ಥಳಕ್ಕೆ ಧಾವಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಮನೋಹರ್ಪುರ ಪೊಲೀಸರು ಸ್ಥಳಕ್ಕೆ ಆಗಮಿಸಿ, ಗಾಯಾಳುಗಳನ್ನು ತಕ್ಷಣವೇ ಶಹಪುರ ಉಪ-ಜಿಲ್ಲಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಿದ್ದಾರೆ.
ಬೆಂಗಳೂರು: 1961ರ ಕರ್ನಾಟಕ ಅಂಗಡಿ ಮತ್ತು ಸ್ಥಾಪನೆ ಕಾಯ್ದೆಗೆ ತಿದ್ದುಪಡಿ ತರುವ ಹಾಗೂ ಕಾರ್ಮಿಕರ (Workers) ಕೆಲಸದ ಅವಧಿಯನ್ನ 9 ಗಂಟೆಯಿಂದ 10 ಗಂಟೆಗೆ ಹೆಚ್ಚಿಸುವ ಕೇಂದ್ರ ಸರ್ಕಾರದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಲು ಮುಂದಾಗಿದೆ.
ಪ್ರಸ್ತಾವನೆಗೆ ಕಾರ್ಮಿಕ ಸಂಘಟನೆಗಳಿಂದ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಈ ಹಿನ್ನೆಲೆ ಕೇಂದ್ರ ಕಾರ್ಮಿಕ ಇಲಾಖೆಯ (Centger Labour Department) ಪ್ರಸ್ತಾವನೆಯನ್ನ ರಾಜ್ಯ ಸರ್ಕಾರ ತಿರಸ್ಕಾರ ಮಾಡಲು ನಿರ್ಧರಿಸಿದೆ ಎಂದು ಉನ್ನತ ಮೂಲಗಳು ತಿಳಿಸಿವೆ. ದಿನದಲ್ಲಿ 10 ಗಂಟೆ ಕೆಲಸಕ್ಕೆ ರಾಜ್ಯ ಸರ್ಕಾರ ಸಮ್ಮತಿ ನೀಡದ ಹಿನ್ನೆಲೆ ರಾಜ್ಯ ಕಾರ್ಮಿಕ ಇಲಾಖೆಯಿಂದ ಪ್ರಸ್ತಾವನೆ ತಿರಸ್ಕಾರ ಮಾಡುವ ಸಾಧ್ಯತೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪೊಲೀಸ್ ಕಮಿಷನರ್ಗೆ ದೂರು ನೀಡಿದ ರಮ್ಯಾ – ದರ್ಶನ್ ಅಭಿಮಾನಿಗಳ ವಿರುದ್ಧ FIR
ಪ್ರಸ್ತಾವನೆ ತಿರಸ್ಕರಿಸಲು ಕಾರಣ ಏನು?
ಕೇಂದ್ರ ಕಾರ್ಮಿಕ ಇಲಾಖೆ ಎಲ್ಲಾ ರಾಜ್ಯಗಳಿಗೂ ಈ ಪ್ರಸ್ತಾವನೆಯನ್ನ ಕಳುಹಿಸಿದೆ. ಆದ್ರೆ ಕರ್ನಾಟಕ ಎರಡು ಕಾರಣಗಳಿಗಾಗಿ ಪ್ರಸ್ತಾವನೆಯನ್ನ ತಿರಸ್ಕರಿಸಲು ನಿರ್ಧರಿಸಿದೆ. ರಾಜ್ಯ ಸರ್ಕಾರವು ಸಮಾನ ನೀತಿ ಅವಕಾಶವನ್ನು ಹೊಂದಿದೆ. ಈಗಾಗಲೇ ಕಾರ್ಮಿಕರು ದಿನಕ್ಕೆ 9 ಗಂಟೆ ಮತ್ತು ವಾರದಲ್ಲಿ 48 ಗಂಟೆಗಳ ಕಾಲ ಕೆಲಸ ಮಾಡ್ತಿದ್ದಾರೆ. ಜೊತೆಗೆ ಹೆಚ್ಚುವರಿ ಅಗತ್ಯಕ್ಕನುಗುಣವಾಗಿ ಹೆಚ್ಚುವರಿ ಅವಧಿ ಕಾರ್ಯದ ನಿಬಂಧನೆ ಕೂಡ ಇದೆ. ನಿತ್ಯ 10 ಗಂಟೆ ಕೆಲಸಕ್ಕೆ ಅವಧಿಗೆ ಈಗಾಗಲೇ ಕಾರ್ಮಿಕ ಸಂಘಟನೆಗಳ ತೀವ್ರ ವಿರೋಧ ಇದೆ. ಹೀಗಾಗಿ ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ – ಸಾರಿಗೆ ಸಂಘಟನೆಯಿಂದ ಅನಿರ್ಧಿಷ್ಟಾವಧಿ ಉಪವಾಸ ಧರಣಿ
ಕಾರ್ಮಿಕ ಇಲಾಖೆಯ ಅಧಿಕಾರಿಗಳ ಪ್ರಕಾರ, ಕೇಂದ್ರದ ಪ್ರಸ್ತಾವನೆ ಬಂದ ನಂತರ ರಾಜ್ಯವು ತಿದ್ದುಪಡಿಯನ್ನ ತಿರಸ್ಕರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಸಂಪುಟ ಸಭೆಯಲ್ಲಿ ಸಿಎಂ ಹಾಗೂ ಸಚಿವರು ಪ್ರಸ್ತಾವನೆಯನ್ನ ವಿರೋಧಿಸಿದ್ದಾರೆ. ಆದ್ರೆ ಇನ್ನೂ ಅಧಿಕೃತವಾಗಿ ಕೇಂದ್ರಕ್ಕೆ ತಿಳಿಸಿಲ್ಲ. ಸಮಗ್ರ ಚರ್ಚೆ ಬಳಿಕ ಈ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ ಎಂದು ತಿಳಿದುಬಂದಿದೆ.
ಚಿತ್ರದುರ್ಗ: ಕಬ್ಬಿಣದ ಕಂಬ ನೆಡುವ ವೇಳೆ ವಿದ್ಯುತ್ ತಂತಿಗೆ ತಗುಲಿ ಮೂವರು ದಾರುಣವಾಗಿ ಸಾವನ್ನಪ್ಪಿದ ಘಟನೆ ಚಿತ್ರದುರ್ಗ (Chitradurga) ಜಿಲ್ಲೆ ಹೊಳಲ್ಕೆರೆ (Holalkere) ತಾಲೂಕಿನ ಕಾಳಘಟ್ಟ ಗ್ರಾಮದಲ್ಲಿ ನಡೆದಿದೆ.
ಈ ಗ್ರಾಮದ ಶ್ರೀನಿವಾಸ್ ಎಂಬವರ ತೋಟದಲ್ಲಿ ಅಡಿಕೆ ಶೆಡ್ ನಿರ್ಮಾಣ ವೇಳೆ ಘಟನೆ ನಡೆದಿದೆ. ಶೆಡ್ ನಿರ್ಮಾಣ ಮಾಡಲು ಆಗಮಿಸಿದ್ದ ಗ್ಯಾರೆಹಳ್ಳಿಯ ರೈತ ಶ್ರೀನಿವಾಸ್ (35), ದಾವಣಗೆರೆ ಮೂಲದ ಕಾರ್ಮಿಕ ನಜೀರ್ (30), ಫಾರುಕ್ (30) ಮೃತ ಕಾರ್ಮಿಕರು. ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳಿಂದ ಹೆಚ್ಚಾದ ತಲಾದಾಯ – ಶರಣ್ ಪ್ರಕಾಶ್ ಪಾಟೀಲ್
ನವದೆಹಲಿ: ಕೇಂದ್ರದ ಕಾರ್ಮಿಕ-ರೈತ ವಿರೋಧಿ ಕ್ರಮಗಳು ಹಾಗೂ ಕಾರ್ಪೊರೇಟ್ ಪರ ನಿಲುವು ಖಂಡಿಸಿ ಇಂದು (ಬುಧವಾರ) ಭಾರತ್ ಬಂದ್ಗೆ (Bharat Bandh) 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ.
ಬ್ಯಾಂಕಿಂಗ್, ಇನ್ಶುರೆನ್ಸ್, ಪೋಸ್ಟ್, ಗಣಿ, ಹೆದ್ದಾರಿ ಕಾರ್ಮಿಕರು ಸೇರಿದಂತೆ 25 ಕೋಟಿಗೂ ಅಧಿಕ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಬಂದ್ನಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಆದರೆ, ರಾಜ್ಯಕ್ಕೆ ಭಾರತ್ ಬಂದ್ ಬಿಸಿ ತಟ್ಟುವ ಸಾಧ್ಯತೆ ಕಡಿಮೆ ಇದೆ. ರಾಜ್ಯದಲ್ಲಿ ಶಾಲಾ ಕಾಲೇಜುಗಳು, ಮೆಟ್ರೋ, ಬಸ್ ಸಂಚಾರ, ಖಾಸಗಿ ಕಂಪನಿಗಳು ಇರಲಿವೆ. ಆದರೆ, ಬ್ಯಾಂಕಿಂಗ್ ಸೇವೆಯಲ್ಲಿ ಸ್ವಲ್ಪ ವ್ಯತ್ಯಯವಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಆಪರೇಷನ್ ಸಿಂಧೂರದಲ್ಲಿ ಭಾರತೀಯ ಸೇನೆ ರಫೇಲ್ ಯುದ್ಧ ವಿಮಾನ ಕಳೆದುಕೊಂಡಿಲ್ಲ: ಡಸಾಲ್ಟ್ ಏವಿಯೇಷನ್ ಸ್ಪಷ್ಟನೆ
ಕಳೆದ ವರ್ಷ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ವಿವರವಾದ 17 ಅಂಶಗಳ ಬೇಡಿಕೆ ಪಟ್ಟಿಯನ್ನು ಸಲ್ಲಿಸಿದ್ದರೂ, ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಕಂಡುಬಂದಿಲ್ಲ ಎಂದು ಒಕ್ಕೂಟಗಳು ಹೇಳಿವೆ. ಸರ್ಕಾರ ದೇಶದ ಕಲ್ಯಾಣ ರಾಜ್ಯ ಸ್ಥಾನಮಾನವನ್ನು ಕೈಬಿಟ್ಟಿದೆ. ಅದು ವಿದೇಶಿ ಮತ್ತು ಭಾರತೀಯ ಕಾರ್ಪೊರೇಟ್ಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಇದು ತೀವ್ರವಾಗಿ ಅನುಸರಿಸುತ್ತಿರುವ ನೀತಿಗಳಿಂದ ಸ್ಪಷ್ಟವಾಗಿದೆ ಎಂದು ಯೂನಿಯನ್ ಫೋರಂ ಹೇಳಿಕೆಯಲ್ಲಿ ತಿಳಿಸಿದೆ.
ಬೆಂಗಳೂರಿನಲ್ಲಿ ಪ್ರತಿಭಟನೆಗೆ ಕೆರೆ
ಇನ್ನೂ ದೇಶವ್ಯಾಪಿ ಪ್ರತಿಭಟನೆ ಹಿನ್ನೆಲೆ ಬೆಂಗಳೂರಿನಲ್ಲೂ AITUC, CITU, HMS, INTUC, SEWA ಸೇರಿ ವಿವಿಧ ಕಾರ್ಮಿಕ ಸಂಘಟನೆಗಳು ಪ್ರತಿಭಟನೆಗೆ ಕರೆ ನೀಡಿವೆ. ಅದರಂತೆ ಫ್ರೀಡಂ ಪಾರ್ಕ್ ನಲ್ಲಿ ಕಾರ್ಮಿಕ ಸಂಘಟನೆಗಳಿಂದ ಪ್ರತಿಭಟನೆ ನಡೆಲಿದೆ. ರಾಮನಗರ, ಬೆಂಗಳೂರು ಗ್ರಾಮಾಂತರ ಭಾಗದ ಕಾರ್ಮಿಕರೂ ಪ್ರತಿಭಟನೆಯಲ್ಲಿ ಭಾಗಿಯಾಗಲಿದ್ದಾರೆ.
ಬಿಹಾರದಲ್ಲಿ ಆರ್ಜೆಡಿ ಕಾರ್ಯಕರ್ತರಿಂದ ರೈಲು ತಡೆ
ಬಿಹಾರ ಮತ್ತು ಬಂಗಾಳದಲ್ಲಿ ಭಾರತ್ ಬಂದ್ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿವೆ. ಆರ್ಜೆಡಿ ವಿದ್ಯಾರ್ಥಿ ಸಂಘಟನೆಗಳು ರೈಲು ತಡೆದು ಪ್ರತಿಭಟನೆ ನಡೆಸಿದ್ದಾರೆ. ಇನ್ನೂ ಬಂಗಾಳದಲ್ಲಿ ರಸ್ತೆ ತಡೆ, ಅಂಗಡಿ ಮುಂಗಟ್ಟುಗಳನ್ನ ಹಲವೆಡೆ ಬಂದ್ ಮಾಡಲಾಗಿದ್ದು, ಸಾರ್ವಜನಿಕ ಸೇವೆಗಳಲ್ಲಿ ಭಾರೀ ವ್ಯತ್ಯಯ ಕಂಡುಬಂದಿದೆ. ಇದನ್ನೂ ಓದಿ: ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು `ಮುರ್ಮಾಜೀ’ ಎಂದು ಉಚ್ಛರಿಸಿ ಅಪಮಾನ ಮಾಡಿದ ಖರ್ಗೆ
ಬೇಡಿಕೆಗಳೇನು?
* ನಾಲ್ಕು ಕಾರ್ಮಿಕ ಸಂಹಿತೆ ರದ್ದುಗೊಳಿಸಬೇಕು
* ಕೇಂದ್ರ ಸರ್ಕಾರ ತಂದಿರುವ ನಾಲ್ಕು ಸಂಹಿತೆಗಳನ್ನು ತಿರಸ್ಕರಿಸಬೇಕು
* ಕನಿಷ್ಠ ವೇತನ ಜಾರಿಗೊಳಿಸಬೇಕು
* ಕೇಂದ್ರ ತಂದಿರುವ ನಿಯಮದಲ್ಲಿ ಸಂಘ ರಚಿಸುವ ಹಕ್ಕು ಕಸಿದುಕೊಳ್ಳಲಾಗಿದೆ
* ಇದನ್ನು ರಾಜ್ಯ ಸರ್ಕಾರ ವಾಪಾಸ್ ಪಡೆಯಬೇಕು
* ಹೊಸ ಸಂಘ ರಚಿಸಲು ಅನುಮತಿ ನೀಡಬೇಕು
* ಕೆಲಸದ ಅವಧಿಯನ್ನು 12 ಗಂಟೆಯಿಂದ 8ಗಂಟೆಗೆ ಕಡಿತಗೊಳಿಸಬೇಕು
* ಗುತ್ತಿಗೆ ನೌಕರಿ ರದ್ದುಗೊಳಿಸಿ ಖಾಯಂ ನೌಕರಿ ಜಾರಿಯಾಗಬೇಕು
ಏನಿರುತ್ತೆ? ಏನಿರಲ್ಲ?
– ಕೈಗಾರಿಕೆಗಳು ಬಹುತೇಕ ಬಂದ್ .
– ಕೆಲ ಬ್ಯಾಂಕ್ ಗಳಲ್ಲಿ ಸೇವೆ ವ್ಯತ್ಯಯ
– ಎಲ್ಲಾ ಬ್ಯಾಂಕ್ ಗಳು ಕ್ಲೋಸ್ ಇರಲ್ಲ.
– ಬ್ಯಾಂಕ್ ಒಟ್ಟು 8 ಯೂನಿಯನ್ ಇದೆ, ಅದ್ರಲ್ಲಿ 3 ಟ್ರೇಡ್ ಯೂನಿಯನ್ ಬೆಂಬಲ ಇದೆ.
– ವಿಮೆ ಕಚೇರಿ ಬಂದ್ ಸಾಧ್ಯತೆ.
– ಬಾಷ್, ಟೊಯೋಟಾ ಸೇರಿದಂತೆ ಪ್ರಮುಖ ಕೈಗಾರಿಕೆಗಳು ಬಂದ್.
– ಪೋಸ್ಟ್ ಆಫೀಸ್ ಇರಲಿದೆ.
ನವದೆಹಲಿ: ಕೇಂದ್ರದ ಕಾರ್ಮಿಕ-ರೈತ ವಿರೋಧಿ ಕ್ರಮಗಳು ಹಾಗೂ ಕಾರ್ಪೊರೇಟ್ ಪರ ನಿಲುವು ಖಂಡಿಸಿ ನಾಳೆ (ಬುಧವಾರ) ಭಾರತ್ ಬಂದ್ಗೆ (Bharat Bandh) 10ಕ್ಕೂ ಹೆಚ್ಚು ಸಂಘಟನೆಗಳು ಕರೆ ನೀಡಿವೆ.
ಬ್ಯಾಂಕಿಂಗ್, ಇನ್ಶುರೆನ್ಸ್, ಪೋಸ್ಟ್, ಗಣಿ, ಹೆದ್ದಾರಿ ಕಾರ್ಮಿಕರು ಸೇರಿದಂತೆ 25 ಕೋಟಿಗೂ ಅಧಿಕ ಸಂಘಟಿತ ಹಾಗೂ ಅಸಂಘಟಿತ ಕಾರ್ಮಿಕರು ಬಂದ್ನಲ್ಲಿ ಭಾಗಿಯಾಗುವ ಸಾಧ್ಯತೆ ಇದೆ. ಆದರೆ, ರಾಜ್ಯಕ್ಕೆ ಭಾರತ್ ಬಂದ್ ಬಿಸಿ ತಟ್ಟುವ ಸಾಧ್ಯತೆ ಕಡಿಮೆ ಇದೆ. ರಾಜ್ಯದಲ್ಲಿ ಶಾಲಾ ಕಾಲೇಜುಗಳು, ಮೆಟ್ರೋ, ಬಸ್ ಸಂಚಾರ, ಖಾಸಗಿ ಕಂಪನಿಗಳು ಇರಲಿವೆ. ಆದರೆ, ಬ್ಯಾಂಕಿಂಗ್ ಸೇವೆಯಲ್ಲಿ ಸ್ವಲ್ಪ ವ್ಯತ್ಯಯವಾಗುವ ಸಾಧ್ಯತೆ ಇದೆ.
ಕಳೆದ ವರ್ಷ ಕಾರ್ಮಿಕ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ವಿವರವಾದ 17 ಅಂಶಗಳ ಬೇಡಿಕೆ ಪಟ್ಟಿಯನ್ನು ಸಲ್ಲಿಸಿದ್ದರೂ, ಸರ್ಕಾರದಿಂದ ಯಾವುದೇ ಪ್ರತಿಕ್ರಿಯೆ ಕಂಡುಬಂದಿಲ್ಲ ಎಂದು ಒಕ್ಕೂಟಗಳು ಹೇಳುತ್ತವೆ. ಸರ್ಕಾರ ದೇಶದ ಕಲ್ಯಾಣ ರಾಜ್ಯ ಸ್ಥಾನಮಾನವನ್ನು ಕೈಬಿಟ್ಟಿದೆ. ಅದು ವಿದೇಶಿ ಮತ್ತು ಭಾರತೀಯ ಕಾರ್ಪೊರೇಟ್ಗಳ ಹಿತಾಸಕ್ತಿಗಾಗಿ ಕೆಲಸ ಮಾಡುತ್ತಿದೆ. ಇದು ತೀವ್ರವಾಗಿ ಅನುಸರಿಸುತ್ತಿರುವ ನೀತಿಗಳಿಂದ ಸ್ಪಷ್ಟವಾಗಿದೆ ಎಂದು ಯೂನಿಯನ್ ಫೋರಂ ಹೇಳಿಕೆಯಲ್ಲಿ ತಿಳಿಸಿದೆ.
ಕರ್ನಾಟಕದಲ್ಲಿ ಭಾರತ ಬಂದ್ ಎಫೆಕ್ಟ್ ಇಲ್ಲದಿದ್ದರೂ ಉತ್ತರ ಭಾರತದ ಹಲವೆಡೆ ಬಂದ್ ಆಗುವ ಸಾಧ್ಯತೆ ಇದೆ. ಇನ್ನು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಾಳೆ ಕಾರ್ಮಿಕ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆಯಲಿದೆ.
ಏನಿರುತ್ತೆ? ಏನಿರಲ್ಲ?
– ನಾಳೆ ಕೈಗಾರಿಕೆಗಳು ಬಹುತೇಕ ಬಂದ್ .
– ಕೆಲ ಬ್ಯಾಂಕ್ ಗಳಲ್ಲಿ ಸೇವೆ ವ್ಯತ್ಯಯ ಆಗಬಹುದು.
– ಎಲ್ಲಾ ಬ್ಯಾಂಕ್ ಗಳು ಕ್ಲೋಸ್ ಇರಲ್ಲ.
– ಬ್ಯಾಂಕ್ ಒಟ್ಟು 8 ಯೂನಿಯನ್ ಇದೆ, ಅದ್ರಲ್ಲಿ 3 ಟ್ರೇಡ್ ಯೂನಿಯನ್ ಬೆಂಬಲ ಇದೆ.
– ವಿಮೆ ಕಚೇರಿ ಬಂದ್ ಸಾಧ್ಯತೆ.
– ಬಾಷ್, ಟೊಯೋಟಾ ಸೇರಿದಂತೆ ಪ್ರಮುಖ ಕೈಗಾರಿಕೆಗಳು ಬಂದ್.
– ಪೋಸ್ಟ್ ಆಫೀಸ್ ಇರಲಿದೆ.
ಡೆಹ್ರಾಡೂನ್: ಉತ್ತರಾಖಂಡದಲ್ಲಿ (Uttarakhand) ಮೇಘಸ್ಫೋಟಗೊಂಡು (Cloudburst) ಹಠಾತ್ ಪ್ರವಾಹ ಉಂಟಾದ ಪರಿಣಾಮ ಉತ್ತರಕಾಶಿ (Uttarkashi) ಬಳಿ ನಿರ್ಮಾಣ ಹಂತದ ಹೋಟೆಲ್ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ.
ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದೆ. ಕಾರ್ಮಿಕರು ಪ್ರಹಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ. ಇದನ್ನೂ ಓದಿ: Koppal | ಬುರ್ಖಾ ಧರಿಸಿದ ಕಳ್ಳಿಯರಿಂದ ಗೃಹಬಳಕೆಯ ವಸ್ತು ಕಳ್ಳತನ
ಇನ್ನು ಭಾರೀ ಮೇಘಸ್ಫೋಟದಿಂದ ಚಾರ್ಧಾಮ್ (Char Dham Yatra) ಯಾತ್ರೆ ಸ್ಥಗಿತಗೊಳಿಸಲಾಗಿದೆ. ಗಂಗೋತ್ರಿ, ಯಮುನೋತ್ರಿ, ಕೇದಾರನಾಥ, ಭದ್ರಿನಾಥ ಯಾತ್ರೆ ಸ್ಥಗಿತಗೊಂಡಿದೆ. ಭಾರೀ ಮಳೆಯಿಂದಾಗಿ ಯಮುನಾ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ರುದ್ರಪ್ರಯಾಗ ಜಿಲ್ಲೆಯ ಸೋನ್ಪ್ರಯಾಗ್-ಮುಂಕಟಿಯಾ ರಸ್ತೆ ಬಂದ್ ಆಗಿದೆ. ಅಲ್ಲದೇ ಕೇದಾರನಾಥಕ್ಕೆ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ಮಾರ್ಗ ಬಂದ್ ಮಾಡಲಾಗಿದೆ. ಇದನ್ನೂ ಓದಿ: ಪುರಿ ಜಗನ್ನಾಥ ರಥಯಾತ್ರೆಯಲ್ಲಿ ಕಾಲ್ತುಳಿತ – ಮೂವರು ಸಾವು, 10 ಮಂದಿಗೆ ಗಾಯ
ಬೆಂಗಳೂರು: ಕಾರ್ಮಿಕರ ಕೆಲಸದ ಅವಧಿಯ (10 Hour Workday For Labourers) ಗರಿಷ್ಠ ಮಿತಿಯನ್ನು ದಿನಕ್ಕೆ 9 ರಿಂದ 10 ಗಂಟೆಗೆ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ (Karnataka Government) ಚಿಂತನೆ ನಡೆಸಿದೆ.
ಸದ್ಯ ಕರ್ನಾಟಕ ಅಂಗಡಿಗಳು ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆ 1961ರ ಸೆಕ್ಷನ್ 7ರ ಪ್ರಕಾರ ಕೆಲಸದ ಅವಧಿ ದಿನಕ್ಕೆ ಒಂಬತ್ತು ಗಂಟೆ ಮೀರಬಾರದು ಮತ್ತು ಗರಿಷ್ಠ ಒಟಿ 10 ಗಂಟೆಗಳನ್ನು ಮೀರಬಾರದು ಎಂಬ ನಿಯಮವಿದೆ.
ಈಗ ಈ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಕೆಲಸದ ಅವಧಿಯನ್ನು ದಿನಕ್ಕೆ ಗರಿಷ್ಠ 10 ಗಂಟೆ ಮತ್ತು ಹೆಚ್ಚುವರಿ ಕೆಲಸದ ಅವಧಿಯನ್ನು ದಿನಕ್ಕೆ ಗರಿಷ್ಠ 12 ಗಂಟೆಗಳಿಗೆ ವಿಸ್ತರಿಸಲು ಚಿಂತನೆ ನಡೆಸಿದೆ. ಇದನ್ನೂ ಓದಿ: ಜನರಿಗೆ ಗುಡ್ ನ್ಯೂಸ್ – 3 ಸಾವಿರಕ್ಕೆ ವಾರ್ಷಿಕ ಟೋಲ್ ಪಾಸ್!
ಕಾನೂನು ತಿದ್ದುಪಡಿ ವಿಚಾರ ಈಗ ಚರ್ಚಾ ಹಂತದಲ್ಲಿದ್ದು ಈ ಸಂಬಂಧ ರಾಜ್ಯ ಸರ್ಕಾರ ವಿಕಾಸ ಸೌಧದಲ್ಲಿ ಕೈಗಾರಿಕಾ ಮತ್ತು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸುತ್ತಿದೆ. ಈ ಸಭೆಯಲ್ಲಿ ಕಾರ್ಮಿಕ ಇಲಾಖೆ ಅಧಿಕಾರಿಗಳು, ಕಾರ್ಖಾನೆಗಳ ಮಾಲೀಕರು, ಕಾರ್ಮಿಕ ಸಂಘಟನೆಗಳು ಸದಸ್ಯರು ಭಾಗಿಯಾಗಿದ್ದಾರೆ. ಇದನ್ನೂ ಓದಿ: ಇರಾನ್ ಸರ್ವೋಚ್ಛ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಇಸ್ರೇಲ್ ತಯಾರಿ
ಈಗಾಗಲೇ ಕೇಂದ್ರ ಹಾಗೂ ಖಾಸಗಿ ಉದ್ಯೋಗಿಗಳ ಸಂಘದಿಂದಲೂ ಪ್ರಸ್ತಾವನೆ ಬಂದಿದೆ. ನಿತ್ಯ 10 ಗಂಟೆ ಕೆಲಸ ಮಾಡಿದರೆ ಶನಿವಾರ ಭಾನುವಾರ ಎರಡು ದಿನದ ರಜೆ ನೀಡಲಾಗುತ್ತದೆ.
ಚಂದ್ರಬಾಬು ನಾಯ್ಡು ನೇತೃತ್ವದ ಆಂಧ್ರ ಸರ್ಕಾರ ಕೆಲ ದಿನಗಳ ಹಿಂದೆ ನಡೆಸಿದ ಸಂಪುಟ ಸಭೆಯಲ್ಲಿ ಕಾರ್ಮಿಕರ ಕೆಲಸದ ಅವಧಿಯನ್ನು 10 ಗಂಟೆಗೆ ಹೆಚ್ಚಿಸುವ ತಿದ್ದುಪಡಿ ಮಸೂದೆಗೆ ಅನುಮೋದನೆ ನೀಡಿತ್ತು.
– ಕಾರು ಹತ್ತಿಸಿ ಯಾರಾದ್ರೂ ಸತ್ತಿದ್ದಾರಾ ಅಂತ ಕೇಳಿದ ಚಾಲಕ
ಲಕ್ನೋ: ಉತ್ತರ ಪ್ರದೇಶದ ನೋಯ್ಡಾದಲ್ಲಿ ಗಂಟೆಗೆ 300 ಕಿಮೀ ವೇಗದಲ್ಲಿ ಬಂದ ಲ್ಯಾಂಬೋರ್ಗಿನಿ ಕಾರು (Lamborghini Car) ಚಾಲಕನ ನಿಯಂತ್ರಣ ತಪ್ಪಿ ಪಾದಚಾರಿ ಮಾರ್ಗಕ್ಕೆ ನುಗ್ಗಿದೆ. ಈ ವೇಳೆ ಫುಟ್ಪಾತ್ನಲ್ಲಿದ್ದ ಛತ್ತೀಸ್ಗಢದ ಇಬ್ಬರು ಕಾರ್ಮಿಕರಿಗೆ (Labourers) ಡಿಕ್ಕಿಯಾಗಿ ಗಾಯಗೊಂಡಿದ್ದಾರೆ. ಈ ವೇಳೆ ಕಾರು ಚಾಲಕ ತೋರಿದ ವರ್ತನೆ, ನೀಡಿದ ಹೇಳಿಕೆ ಭಾರೀ ಚರ್ಚೆ ಹುಟ್ಟುಹಾಕಿದೆ.
ನೋಯ್ಡಾದ ಸೆಕ್ಟರ್ 94ರಲ್ಲಿ (Noida’s sector 94) ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಬಳಿ ಈ ಘಟನೆ ನಡೆದಿದೆ. ಆದ್ರೆ ವೇಗವಾಗಿ ಕಾರು ಚಲಾಯಿಸಿಕೊಂಡ ಬಂದ ವ್ಯಕ್ತಿ ಅಪಘಾತ ಮಾಡಿ, ಏನೂ ನಡೆದಿಲ್ಲ ಅನ್ನುವಂತೆ ಕೂಲಾಗಿ ಇಳಿದು ಯಾರಾದ್ರು ಸತ್ತಿದ್ದಾರಾ? ಅಂತ ಕೇಳಿದ್ದಾನೆ. ಈ ಅಮಾನವೀಯ ಪ್ರತಿಕ್ರಿಯೆ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ಚರ್ಚೆ ಹುಟ್ಟುಹಾಕಿದೆ. ಸದ್ಯ ಕಾರು ಚಾಲಕನಾದ ಅಜ್ಮೀರ್ ನಿವಾಸಿ ದೀಪಕ್ನನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಮೀರತ್ ಮಾದರಿ ಪೀಸ್ ಪೀಸ್ ಮಾಡಿ ಡ್ರಮ್ಗೆ ತುಂಬಿಬಿಡ್ತೀನಿ – ಮಚ್ಚು ಹಿಡಿದು ಗಂಡನಿಗೆ ಎಚ್ಚರಿಕೆ ಕೊಟ್ಟ ʻಮಚ್ಚೇಶ್ವರಿʼ!
ದೀಪಕ್ ಅಜ್ಮೀರ್ ಮೂಲತಃ ಕಾರು ಮಾರಾಟಗಾರ. ಈತ ಕಾರಿನ ಟೆಸ್ಟ್ ಡ್ರೈವ್ಗಾಗಿ ನೊಯ್ಡಾಗೆ ಬಂದಿದ್ದ. ಕಾರಿನ ಮಾಲೀಕ ಮೃದುಲ್, ಸೆಕ್ಟರ್ 94 ರ ಸೂಪರ್ನೋವಾದ ನಿವಾಸಿ. ಅವರು ಯೂಟ್ಯೂಬರ್ (YouTuber) ಆಗಿದ್ದು, 18.7 ಮಿಲಿಯನ್ ಫಾಲೋವರ್ಸ್ ಹೊಂದಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ಬೇಸಿಗೆ ಅವಧಿಯಲ್ಲಿ ಮುಂಬೈ-ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ
ಪೊಲೀಸರ ಪ್ರಕಾರ, ದೀಪಕ್ ಒಬ್ಬನೇ ಕಾರು ಚಲಾಯಿಸುತ್ತಿದ್ದಾಗ ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ಪ್ರಾಥಮಿಕ ತನಿಖೆಯಿಂದ ಪ್ರಕಾರ ದೀಪಕ್ ಭಾನುವಾರ ಬೆಳಗ್ಗೆ ಕಾರು ಟೆಸ್ಟ್ ಡ್ರೈವ್ ,ಮಾಡಲು ನೊಯ್ಡಾಗೆ ಬಂದಿದ್ದ. ಆತ ಕಾರನ್ನು ಟೆಸ್ಟ್ ಡ್ರೈವ್ಗೆ ತೆಗೆದುಕೊಂಡು ಹೋಗಿ, ಸ್ವಲ್ಪ ಶಾಪಿಂಗ್ ಕೂಡಾ ಮಾಡಿ, ವಾಪಸ್ ಕಾರನ್ನು ಮಾಲೀಕರಿಗೆ ಹಿಂದಿರುಗಿಸುವಾಗ ಕಾರಿನ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆ. ಇದನ್ನ ಅಲ್ಲಿನ ಜನ ಪ್ರಶ್ನೆ ಮಾಡಿದಾಗ ಯಾರಾದ್ರೂ ಸತ್ತಿದ್ದಾರಾ? ಅಂತ ವಿಚಿತ್ರವಾಗಿ ಪ್ರಶ್ನೆ ಮಾಡಿದ್ದಾನೆ. ಜೊತೆಗೆ ಇದು ನನ್ನ ತಪ್ಪಲ್ಲ, ಕಾರಿನ ತಪ್ಪು ಅಂತ ಉದ್ಧಟತನ ಮೆರೆದಿದ್ದಾನೆ. ಚಾಲಕನ ಹೇಳಿಕೆ ವಿಡಿಯೋ ಜಾಲತಾಣದಲ್ಲಿ ಸಖತ್ ಸದ್ದು ಮಾಡ್ತಿದ್ದು, ಸಾರ್ವಜನಿಕರು ಕ್ರಮಕ್ಕೆ ಆಗ್ರಹಿಸಿದ್ದಾರೆ.
ಹೈದರಾಬಾದ್: ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (Srisailam Left Bank Canal) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದ್ದು, ಇದೀಗ ಉತ್ತರಾಖಂಡದ ರ್ಯಾಟ್ ಮೈನರ್ಗಳ ಸ್ಥಳಕ್ಕೆ ಆಗಮಿಸಿವೆ.
ಇದೀಗ 2023ರಲ್ಲಿ ಉತ್ತರಾಖಂಡದ ಸಿಲ್ಕ್ಯಾರಾ ಬೆಂಡ್-ಬಾರ್ಕೋಟ್ ಸುರಂಗದಲ್ಲಿ ಸಿಲುಕಿದ್ದ ನಿರ್ಮಾಣ ಕಾರ್ಮಿಕರನ್ನು ರಕ್ಷಿಸಿದ್ದ ಇಲಿ ಗಣಿಗಾರಿಕೆಗಾರರ ತಂಡವು ಸ್ಥಳಕ್ಕೆ ಆಗಮಿಸಿದ್ದು, ಶ್ರೀಶೈಲಂ ಎಡದಂಡೆ ಕಾಲುವೆ ಕುಸಿತದಲ್ಲಿ ಸಿಲುಕಿರುವ ಕಾರ್ಮಿಕರನ್ನು ಹೊರತೆಗೆಯಲು ಕಾರ್ಯನಿರ್ವಹಿಸಲಿದೆ. ಆದರೆ ಸುರಂಗದೊಳಗೆ ಸಿಲುಕಿರುವ ಕಾರ್ಮಿಕರನ್ನು ರಕ್ಷಿಸಲು ಕನಿಷ್ಠ ಮೂರರಿಂದ ನಾಲ್ಕು ದಿನಗಳು ಬೇಕಾಗಿದ್ದು, ಸುರಂಗವು ಕೆಸರು ಮತ್ತು ಅವಶೇಷಗಳಿಂದ ತುಂಬಿಕೊಂಡಿದೆ. ಹೀಗಾಗಿ ರಕ್ಷಣಾ ಕಾರ್ಯಾಚರಣೆಗೆ ತೊಂದರೆಯಾಗಿದೆ.
ಕಳೆದ 48 ಗಂಟೆಗಳಿಂದ ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದರೂ ಕೂಡ ಪ್ರಯೋಜನವಾಗಿಲ್ಲ. ರಕ್ಷಣಾ ತಂಡವು ಭಾನುವಾರ ರಾತ್ರಿ ಲೋಕೋಮೋಟಿವ್ನ ಸಹಾಯದಿಂದ 11 ಕಿ.ಮೀ ಹಾಗೂ ಕನ್ವೇಯರ್ ಬೆಲ್ಟ್ನ ನೆರವಿನಿಂದ 2 ಕಿ.ಮೀ ಕ್ರಮಿಸಿದ್ದರು. ಈ ವೇಳೆ ಕಾರ್ಮಿಕರ ಹೆಸರಿನಿಂದ ಕೂಗಿದ್ದು, ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿರಲಿಲ್ಲ. ಇನ್ನೂ ಸುರಂಗದ ಕೊನೆಯ 2 ಕಿ.ಮೀ ಪ್ರದೇಶವು ನೀರಿನಿಂದ ತುಂಬಿದ್ದು, ಅದನ್ನು ಸ್ವಚ್ಛಗೊಳಿಸಿದ ಬಳಿಕ ಮುಂದೆ ಸಾಗಲು ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದ್ದರು.
ಕುಸಿದಿದ್ದು ಹೇಗೆ?
ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು 8 ಮಂದಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಲಾಗಿದೆ. ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್ಗಳಷ್ಟು ಕುಸಿದಿದ್ದರಿಂದ ಅವಘಢ ಸಂಭವಿಸಿದೆ.ಇದನ್ನೂ ಓದಿ: ಮಾಣಿ-ಸಂಪಾಜೆ ಹೈವೇ ಚತುಷ್ಪಥಕ್ಕೆ ಡಿಪಿಆರ್ ತಯಾರಿಸಲು ಸರ್ಕಾರ ಅನುಮೋದನೆ
ಹೈದರಾಬಾದ್: ತೆಲಂಗಾಣದ ನಾಗರ್ಕರ್ನೂಲ್ (Nagarkurnool) ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ (Srisailam Left Bank Canal) ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.
ದೋಮಲಪೆಂಟಾ ಬಳಿಯ ಶ್ರೀಶೈಲಂ ಅಣೆಕಟ್ಟಿನ ಹಿಂಭಾಗದ ಸುರಂಗದಲ್ಲಿ ಸೋರಿಕೆ ಉಂಟಾಗಿದ್ದು, ಸೋರಿಕೆ ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಛಾವಣಿ ಕುಸಿದಿತ್ತು. ಈ ವೇಳೆ ಕುಸಿತದಲ್ಲಿ 8 ಮಂದಿ ಕಾರ್ಮಿಕರು ಸಿಲುಕಿದ್ದು, ಈಗಾಗಲೇ 48 ಕಾರ್ಮಿಕರನ್ನು ರಕ್ಷಿಸಲಾಗಿದೆ.ಇದನ್ನೂ ಓದಿ: ತಲೆ ಬುರುಡೆ ಛಿದ್ರ, ಕಿವಿ ಕಟ್ – 56 ಕಡೆ ಕೊಚ್ಚಿ ಕಾಂಗ್ರೆಸ್ ಮುಖಂಡನ ಭೀಕರ ಹತ್ಯೆ
ಈ ಕುರಿತು ಎನ್ಡಿಆರ್ಎಫ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಕುಸಿತದಿಂದಾಗಿ ಸುರಂಗದ ಪ್ರವೇಶದ್ವಾರ ಮುಚ್ಚಿಕೊಂಡಿದ್ದು, ಪರ್ಯಾಯ ಸುರಂಗ ಮಾರ್ಗದ ಮೂಲಕ ಕಾರ್ಮಿಕರನ್ನು ರಕ್ಷಿಸಲು ಚಿಂತಿಸಲಾಗಿದೆ. ಸದ್ಯ ಸ್ಥಳಕ್ಕೆ ಸುರಂಗ ಕೊರೆಯುವ ಯಂತ್ರಗಳನ್ನು ಕರೆತರಲಾಗಿದ್ದು, ಇನ್ನಷ್ಟು ಯಂತ್ರಗಳನ್ನು ತರಲು ಸಿದ್ಧತೆ ನಡೆಸಿದೆ ಅಧಿಕಾರಿಯೊಬ್ಬರು ಮಾಹಿತಿ ನಿಡಿದ್ದಾರೆ.
ರಕ್ಷಣಾ ತಂಡವು ಭಾನುವಾರ ರಾತ್ರಿ ಲೋಕೋಮೋಟಿವ್ನ ಸಹಾಯದಿಂದ 11 ಕಿ.ಮೀ ಹಾಗೂ ಕನ್ವೇಯರ್ ಬೆಲ್ಟ್ನ ನೆರವಿನಿಂದ 2 ಕಿ.ಮೀ ಕ್ರಮಿಸಿದ್ದೇವೆ. ಈ ವೇಳೆ ಕಾರ್ಮಿಕರ ಹೆಸರಿನಿಂದ ಕೂಗಿದ್ದು, ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ. ಇನ್ನೂ ಸುರಂಗದ ಕೊನೆಯ 2 ಕಿ.ಮೀ ಪ್ರದೇಶವು ನೀರಿನಿಂದ ತುಂಬಿದ್ದು, ಅದನ್ನು ಸ್ವಚ್ಛಗೊಳಿಸಿದ ಬಳಿಕ ಮುಂದೆ ಸಾಗಲು ಸಾಧ್ಯವಾಗುತ್ತದೆ ಎಂದು ಮಾಹಿತಿ ನೀಡಿದರು.
ಸದ್ಯ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವ ಉದ್ದೇಶದೊಂದಿಗೆ ವಿಪತ್ತು ನಿರ್ವಹಣಾ ಪಡೆಗಳು ಕಾರ್ಯನಿರ್ವಹಿಸುತ್ತಿದ್ದು, ಸುರಂಗದೊಳಗೆ ಸಿಲುಕಿರುವವರನ್ನು ಹೊರತರುವುದು ರಾಜ್ಯ ವಿಪತ್ತು ನಿರ್ವಹಣಾ ಪಡೆ (SDRF) ಮತ್ತು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡಗಳಿಗೆ ಸವಾಲಾಗಿ ಪರಿಣಮಿಸಿದೆ.
ಸುರಂಗದ ಒಳಗಿನ ಸ್ಥಳಕ್ಕೆ ಹೋಗಲು ಯಾವುದೇ ಅವಕಾಶವಿಲ್ಲ. ಅದು ಸಂಪೂರ್ಣವಾಗಿ ಕುಸಿದಿದ್ದು, ಮಣ್ಣು ತುಂಬಿಕೊಂಡಿದೆ. ಎಸ್ಡಿಆರ್ಎಫ್, ಎನ್ಡಿಆರ್ಎಫ್ ಮತ್ತು ಇತರ ರಕ್ಷಣಾ ತಂಡಗಳು, ಸಿಂಗರೇಣಿ ಕಾಲಿಯರೀಸ್ನ ಅಧಿಕಾರಿಗಳು ಕುಸಿದು ಬಿದ್ದ ಭಾಗದ ಸುರಂಗವನ್ನು ಪರಿಶೀಲಿಸಿದ್ದು, ಮುಂದಿನ ಕಾರ್ಯಾಚರಣೆಗೆ ಯೋಜನೆ ರೂಪಿಸುವತ್ತ ಗಮನ ಹರಿಸಿದ್ದಾರೆ.
ಘಟನೆ ಏನು?
ತೆಲಂಗಾಣದ ನಾಗರ್ಕರ್ನೂಲ್ ಜಿಲ್ಲೆಯ ಶ್ರೀಶೈಲಂ ಎಡದಂಡೆ ಕಾಲುವೆಯ ನಿರ್ಮಾಣ ಹಂತದಲ್ಲಿದ್ದ ಸುರಂಗದಲ್ಲಿ ಮೇಲ್ಛಾವಣಿ ಕುಸಿದು 8 ಮಂದಿ ಕಾರ್ಮಿಕರು ಸಿಲುಕಿದ್ದು, ಘಟನೆಯಲ್ಲಿ 48 ಕಾರ್ಮಿಕರನ್ನು ರಕ್ಷಿಸಿದ್ದಾರೆ. ಸುರಂಗ ನಿರ್ಮಾಣ ಕಂಪನಿ ನೀಡಿದ ಮಾಹಿತಿಯ ಪ್ರಕಾರ, ಸುರಂಗದಲ್ಲಿ 12-13 ಕಿಮೀ ಒಳಗೆ ಸೋರಿಕೆ ಉಂಟಾಗಿತ್ತು. ಅದನ್ನು ಸರಿಪಡಿಸಲು ಕಾರ್ಮಿಕರು ಒಳಗೆ ಹೋದಾಗ ಎಡಭಾಗದಲ್ಲಿರುವ ಸುರಂಗದ ಮೇಲ್ಛಾವಣಿ ಮೂರು ಮೀಟರ್ಗಳಷ್ಟು ಕುಸಿದಿತ್ತು.ಇದನ್ನೂ ಓದಿ: ಕಲಬುರಗಿ | ಜಿಮ್ಸ್ ಆಸ್ಪತ್ರೆಯ ವೈದ್ಯರ ಎಡವಟ್ಟು – ಬಾಣಂತಿ ಹೊಟ್ಟೆಯಲ್ಲೇ ಬಟ್ಟೆ ಉಂಡೆ, ಹತ್ತಿ ಬಿಟ್ಟು ಹೊಲಿಗೆ