Tag: ಕಾರ್ಮಿಕರ ಮುಷ್ಕರ

  • ಬಂದ್ ಹೆಸ್ರಲ್ಲಿ ಕಲಬುರಗಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ

    ಬಂದ್ ಹೆಸ್ರಲ್ಲಿ ಕಲಬುರಗಿಯಲ್ಲಿ ಪುಡಿ ರೌಡಿಗಳ ಅಟ್ಟಹಾಸ

    ಕಲಬುರಗಿ: ಬುಧವಾರ ಜಿಲ್ಲೆಯಲ್ಲಿ ಕಾರ್ಮಿಕರ ಮುಷ್ಕರದ ಹೆಸರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಗಳು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಬಲವಂತವಾಗಿ ಅಂಗಡಿಗಳನ್ನು ಮುಚ್ಚುವಂತೆ ಮಾಲೀಕರಿಗೆ ಅವಾಜ್ ಹಾಕಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆ.

    ಭಾರತ ಬಂದ್ ಹಿನ್ನಲೆ ಕಲಬುರಗಿಯಲ್ಲಿ ಮೊದಲು ಕಾರ್ಮಿಕರು ಮುಷ್ಕರಕ್ಕೆ ಇಳಿದಿದ್ದರು. ಆದರೆ ಈ ಮುಷ್ಕರ ಬಳಿಕ ಸಿಎಎ ವಿರೋಧಿ ಪ್ರತಿಭಟನೆಗೆ ತಿರುಗಿದ್ದು, 10 ಸಾವಿರಕ್ಕೂ ಹೆಚ್ಚು ಪೌರತ್ವ ವಿರೋಧಿಗಳು ಹೋರಾಟ ನಡೆಸಿದರು. ಈ ವೇಳೆ ನಗರದ ಸೂಪರ್ ಮಾರ್ಕೆಟ್ ಬಳಿಯ ಖಾದಿ ಬಂಡಾರಕ್ಕೆ ಕೆಲ ಕಿಡಗೇಡಿಗಳು ನುಗ್ಗಿ ಅಲ್ಲಿರುವ ಜರ್ಕಿನ್‍ಗಳನ್ನು ಹರಿದು, ಅಂಗಡಿಗಳನ್ನು ಬಂದ್ ಮಾಡುವಂತೆ ಮಾಲೀಕರಿಗೆ ಅವಾಜ್ ಹಾಕಿ ರೌಡಿತನವನ್ನ ಪ್ರದರ್ಶಿಸಿದ್ದಾರೆ.

    ಈ ವೇಳೆ ಪೊಲೀಸರು ಸ್ಥಳಕ್ಕೆ ಬಂದು ಆ ಕಿಡಿಗೇಡಿಗಳನ್ನು ಅಲ್ಲಿಂದ ಕಳುಹಿಸಿದ್ದು, ಈ ಪುಂಡರ ವೀಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ. ವಿಡಿಯೋದಲ್ಲಿ ಕಿಡಿಗೇಡಿಗಳು ಕೈಯಲ್ಲಿ ರಾಡ್ ಹಿಡಿದು ಅಂಗಡಿ ಮಾಲೀಕರಿಗೆ ಅವಾಜ್ ಹಾಕಿರುವ ದೃಶ್ಯ, ಬಲವಂತವಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿರುವ ದೃಶ್ಯಗಳು ಸೆರೆಯಾಗಿದೆ. ವಿಡಿಯೋ ನೋಡಿದವರು ಈ ಪುಡಿ ರೌಡಿಗಳ ಮೇಲೆ ಪೊಲೀಸರು ಯಾವಾಗ ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಪ್ರಶ್ನಿಸುತ್ತಿದ್ದಾರೆ.

  • ಗೊಂದಲದಲ್ಲಿ ಆರಂಭವಾದ ಕಾರ್ಮಿಕರ ಮುಷ್ಕರ ಗಲಾಟೆಯಲ್ಲಿ ಅಂತ್ಯ

    ಗೊಂದಲದಲ್ಲಿ ಆರಂಭವಾದ ಕಾರ್ಮಿಕರ ಮುಷ್ಕರ ಗಲಾಟೆಯಲ್ಲಿ ಅಂತ್ಯ

    – ಕಾರ್ಮಿಕರ ಗಲಾಟೆಗೆ ಕಾರಣವಾಯ್ತು ಸಿಎಎ ವಿರೋಧಿ ಹೇಳಿಕೆ

    ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಇಂದು ವಿವಿಧ ಕಾರ್ಮಿಕ ಸಂಘಟನೆಗಳು ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದ್ದವು. ಟೌನ್ ಹಾಲ್‍ನಿಂದ ರ‍್ಯಾಲಿಗೆ ಅವಕಾಶ ಕೊಡದ ಹಿನ್ನೆಲೆ ಎಲ್ಲಿ ಹೋಗಬೇಕು ಎನ್ನುವ ಗೊಂದಲದಲ್ಲಿ ಕಾರ್ಮಿಕರು ಇದ್ದರು. ಕೊನೆಗೆ ಎಲ್ಲಾ ಸಂಘಟನೆಗಳ ಕಾರ್ಮಿಕರು ಬೃಹತ್ ಬಹಿರಂಗ ಸಮಾವೇಶ ನಡೆಸಿದರು. ಈ ವೇಳೆ ಕಾರ್ಮಿಕ ಮುಖಂಡರು ಸಿಎಎ ಹಾಗೂ ಎನ್​ಆರ್​ಸಿ ಬಗ್ಗೆ ಮಾತನಾಡಿದ್ದಕ್ಕೆ ಆಕ್ಷೇಪ ಕೂಡ ವ್ಯಕ್ತವಾಯಿತು.

    ಸಮಾವೇಶದಲ್ಲಿ ಕಾರ್ಮಿಕ ವಿರೋಧಿ ನೀತಿಗಳ ಕುರಿತು ಮುಖಂಡರು ಮಾತನಾಡುತ್ತಿದ್ದರು. ಈ ವೇಳೆ ಎಐಟಿಯುಸಿ ಮುಖಂಡ ವಿಜಯ್ ಭಾಸ್ಕರ್ ಮಾತನಾಡುತ್ತಿದ್ದ ಭರದಲ್ಲಿ ಸಿಎಎ ಹಾಗೂ ಎನ್​ಆರ್​ಸಿ ಕುರಿತು ವಿರೋಧ ವ್ಯಕ್ತಪಡಿಸಿದರು. ಇದಕ್ಕೆ ಸ್ಥಳದಲ್ಲಿ ನೆರೆದಿದ್ದ ಟೊಯೋಟಾ ಕಂಪನಿಯ ಕಾರ್ಮಿಕರು ಆಕ್ಷೇಪ ವ್ಯಕ್ತಪಡಿಸಿದರು. ಇದು ಕಾರ್ಮಿಕರ ಹಕ್ಕುಗಳನ್ನ ಕೇಳುವ ಮುಷ್ಕರ. ಇಲ್ಲಿ ಸಿಎಎ ಹಾಗೂ ಎನ್​ಆರ್​ಸಿ ಬಗ್ಗೆ ಮಾತನಾಡಬೇಡಿ. ಬೇರೆ ವೇದಿಕೆಯಲ್ಲಿ ಮಾತನಾಡಿಕೊಳ್ಳಿ ಎಂದರು. ಇದಕ್ಕೆ ಅಲ್ಲಿದ್ದ ಕೆಲವರು ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಕಾರ್ಮಿಕರು ಕೈ, ಕೈ ಮಿಲಾಯಿಸಿದರು. ಒಬ್ಬರನ್ನೊಬ್ಬರು ತಳ್ಳಾಡಿದರು. ಒಂದು ಹಂತದಲ್ಲಿ ಆಕ್ಷೇಪ ವ್ಯಕ್ತಪಡಿಸಿದ ಕಾರ್ಮಿಕರನ್ನು ಇತರೆ ಕಾರ್ಮಿಕರು ಸಮಾವೇಶದಿಂದ ಹೊರ ದಬ್ಬಿದ್ದರು. ಆಗ ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

    ಬಹಿರಂಗ ಸಮಾವೇಶದಲ್ಲಿ ಕಾರ್ಮಿಕರು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರು ಮೆರವಣಿಗೆಗೆ ಅವಕಾಶ ನೀಡದಿದ್ದಕ್ಕೂ ಆಕ್ರೋಶ ವ್ಯಕ್ತಪಡಿಸಿದರು. ಕಾನೂನು ಓದಿದವರು ಯಾರೂ ಈ ರೀತಿ ಮಾಡುವುದಿಲ್ಲ. ಬೆಂಗಳೂರು ಪೊಲೀಸ್ ಆಯುಕ್ತರು ಐಪಿಎಸ್ ನಿಜವಾಗಿಯೂ ಓದಿದ್ದಾರೆಯೇ ಎಂಬ ಅನುಮಾನ ಇದೆ ಎಂದು ವ್ಯಂಗ್ಯವಾಡಿದರು. ಸಮಾವೇಶದ ಕೊನೆಯಲ್ಲಿ ಹಿರಿಯೂರಿನ ಬಿಸಿಯೂಟ, ಕಾರ್ಮಿಕರ ಮೇಲೆ ಲಾಠಿ ಜಾರ್ಚ್ ಖಂಡಿಸುವ ನಿರ್ಣಯ ಮೆರವಣಿಗೆಗೆ ಅವಕಾಶ ನೀಡದೇ ಇರುವ ಆಯುಕ್ತರ ವಿರುದ್ಧ ಖಂಡನಾ ನಿರ್ಣಯಗಳನ್ನು ತೆಗೆದುಕೊಂಡರು.

    ಈ ವೇಳೆ ನಾವು ಕರೆಕೊಟ್ಟಿದ್ದು ಸಾರ್ವತ್ರಿಕ ಮುಷ್ಕರಕ್ಕಷ್ಟೇ, ಬಂದ್‍ಗೆ ಅಲ್ಲ ಅನ್ನೋ ಸ್ಪಷ್ಟನೆಯೂ ಕೇಳಿ ಬಂತು. ಬಂದ್ ಅನ್ನೋದು ಮಾಧ್ಯಮಗಳ ಸೃಷ್ಟಿ ಅನ್ನೋ ಗೂಬೆ ಕೂರಿಸುವ ಕೆಲಸವೂ ನಡೆಯಿತು. ಬಂದ್ ಯಶಸ್ವಿಯಾಗದೇ ಇದ್ದರೂ ಸಮಾವೇಶ ಮಾತ್ರ ಯಶಸ್ವಿಯಾಗಿ ನೆರವೇರಿತು.

    ಇತ್ತ ಬೆಳಗ್ಗೆ ಪೀಣ್ಯ ಸೆಕೆಂಡ್ ಸ್ಟೇಜ್‍ನಲ್ಲಿ ಒಟ್ಟುಗೂಡಿದ ಪ್ರತಿಭಟನಾಕಾರರು ಸಿಐಟಿಯು ಬಾವುಟ ಹಿಡಿದು ರಸ್ತೆಯಲ್ಲಿ ಪ್ರತಿಭಟನೆಗೆ ಕೂತಿದ್ದರು. ಸಾವಿರಕ್ಕೂ ಹೆಚ್ಚು ಪ್ರತಿಭಟನಾಕಾರರು ಭಾಗವಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಪೀಣ್ಯ ಸೆಕೆಂಡ್ ಸ್ಟೇಜ್‍ನಿಂದ ಜಾಲಹಳ್ಳಿ ಕ್ರಾಸ್‍ವರೆಗೆ ಐದು ಕಿ.ಮೀವರೆಗೆ ಕಾಲ್ನಡಿಗೆಯಲ್ಲಿ ಮೆರವಣಿಗೆ ನಡೆಸಿದರು. ಜಾಲಹಳ್ಳಿ ಕ್ರಾಸ್‍ನಲ್ಲಿ ಎನ್.ಎಚ್ 4ಕ್ಕೆ ಹೋಗದಂತೆ ಪೊಲೀಸರು ಬ್ಯಾರಿಕೇಡ್ ಹಾಕಿ ಪ್ರತಿಭಟನಾಕಾರರನ್ನು ನಿಯಂತ್ರಿಸಿದರು.

    ಗಾರ್ಮೆಂಟ್ಸ್ ಗಳಲ್ಲಿ ಮಹಿಳೆಯರು ಮ್ಯಾನೇಜರ್ ಗಳಿಂದ ಲೈಂಗಿಕ ಕಿರುಕುಳ ಅನುಭವಿಸ್ತಿದ್ದಾರೆ. ಹೀಗಾಗಿ ಸಾವಿರಾರು ಮಹಿಳೆಯರು ಉದ್ಯೋಗ ಕಳೆದುಕೊಂಡು ಮನೆ ಸೇರಿದ್ದಾರೆ. ಕೇಂದ್ರ ಈ ಕೂಡಲೇ ಕಾರ್ಮಿಕರ ಬೇಡಿಕೆಗಳನ್ನ ಈಡೇರಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಸದ್ಯ ಕಾರ್ಮಿಕ ಮುಷ್ಕರ ಮಿಶ್ರ ಪ್ರತಿಕ್ರಿಯೆ, ಗೊಂದಲ, ಆಕ್ರೋಶ, ಜಟಾಪಟಿಯಲ್ಲಿ ಮುಕ್ತಾಯವಾಗಿದೆ. ಕಾರ್ಮಿಕರ ಬೇಡಿಕೆಗಳನ್ನು ಕೇಂದ್ರ ಸರ್ಕಾರ ಮುಂದಿನ ದಿನಗಳಲ್ಲಿ ಪರಿಶೀಲಿಸಿ ನ್ಯಾಯ ಒದಗಿಸುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.

  • ಪ್ರತಿಭಟನಾಕಾರರಿಗೆ ದಾವಣಗೆರೆ ಡಿಸಿ ಖಡಕ್ ಎಚ್ಚರಿಕೆ

    ಪ್ರತಿಭಟನಾಕಾರರಿಗೆ ದಾವಣಗೆರೆ ಡಿಸಿ ಖಡಕ್ ಎಚ್ಚರಿಕೆ

    – ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿಲ್ಲ

    ದಾವಣಗೆರೆ: ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳಿಂದ ಒಂದು ದಿನದ ಮುಷ್ಕರ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರಿಗೆ ದಾವಣಗೆರೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಖಡತ್ ಎಚ್ಚರಿಕೆ ನೀಡಿದ್ದಾರೆ.

    ಮುಷ್ಕರದ ಬಿಗಿ ಭದ್ರತೆಯ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಪ್ರತಿಭಟನೆ ಸಾಂವಿಧಾನಿಕ ಹಕ್ಕು, ಅದನ್ನು ಶಾಂತಿಯುತವಾಗಿ ನಡೆಸಬೇಕು. ಅದು ಬಿಟ್ಟು ಸಾರ್ವಜನಿಕ ಆಸ್ತಿ-ಪಾಸ್ತಿಗಳಿಗೆ ಏನಾದರೂ ನಷ್ಟವಾದರೆ ಹಾಗೂ ಅಹಿತಕರ ಘಟನೆ ನಡೆದರೆ ಅಂಥವರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

    ಈಗಾಗಲೇ ಎಲ್ಲಾ ಕಾರ್ಮಿಕ ಮುಖಂಡರ ಜೊತೆ ಚರ್ಚಿಸಲಾಗಿದೆ. ಜಯದೇವ ಸರ್ಕಲ್ ನಿಂದ ನಗರದ ಪ್ರಮುಖ ರಸ್ತೆಗಳಲ್ಲಿ ರ್ಯಾಲಿ ಹಮ್ಮಿಕೊಂಡು ಗಡಿಯಾರ ಕಂಬದ ಬಳಿ ಸಮಾವೇಶ ಹಮ್ಮಿಕೊಂಡಿದ್ದಾರೆ. ಇದೆಲ್ಲ ಶಾಂತಿಯುತವಾಗಿ ನಡೆಸಲು ಸೂಚಿಸಲಾಗಿದೆ. ಪೊಲೀಸ್ ಬಿಗಿ ಭದ್ರತೆಯನ್ನು ನೀಡಲಾಗಿದ್ದು, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿಲ್ಲ. ಸಾರಿಗೆಯಲ್ಲಿ ಕೂಡ ಯಥಾಸ್ಥಿತಿ ಇರುತ್ತದೆ ಎಂದು ಡಿಸಿ ಸ್ಪಷ್ಟಪಡಿಸಿದರು.

  • ಎರಡನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಮುಷ್ಕರ

    ಎರಡನೇ ದಿನಕ್ಕೆ ಕಾಲಿಟ್ಟ ಕಾರ್ಮಿಕರ ಮುಷ್ಕರ

    -ಇಂದು ಏನಿರುತ್ತೆ? ಏನಿರಲ್ಲ?

    ಬೆಂಗಳೂರು: ಕಾರ್ಮಿಕರ ಮುಷ್ಕರ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಎಂದಿನಂತೆ ಸಾರಿಗೆ ಬಸ್ ಗಳು ರಸ್ತೆಗೆ ಇಳಿದಿವೆ. ಎಂದಿನಂತೆ ಬಸ್ ಗಳ ಸಂಚಾರ ಅರಂಭಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಮಂಗಳವಾರ ಬಂದ್ ಹಿನ್ನೆಲೆಯಲ್ಲಿ ಕೆಲ ಬಸ್ ಗಳು ಸಂಚಾರ ಆರಂಭಿಸಿದ್ದರೂ., ಪ್ರಯಾಣಿಕರಿಲ್ಲದೇ ಬಿಕೋ ಎನ್ನುತ್ತಿದ್ದವು. ಇಂದು ಬೆಳಗ್ಗೆಯಿಂದಲೇ ಸಾರ್ವಜನಿಕರು ತಮ್ಮ ದಿನನಿತ್ಯದ ಕೆಲಸಗಳಿಗಾಗಿ ಹೊರ ಬಂದಿದ್ದಾರೆ.

    ಮಂಗಳವಾರದ ಮುಷ್ಕರಕ್ಕೆ ನೀರಸ ಪ್ರತಿಕ್ರಿಯೆ ವ್ಯಕ್ತವಾದ ಹಿನ್ನೆಲೆಯಲ್ಲಿ ಇಂದು ಬಸ್‍ಗಳನ್ನು ರಸ್ತೆಗಿಳಿಸಲು ಬಿಎಂಟಿಸಿ, ಕೆಎಸ್‍ಆರ್‍ಟಿಸಿ ನಿರ್ಧರಿಸಿದೆ. ಮೆಜೆಸ್ಟಿಕ್‍ನಿಂದ ಬಸ್‍ಗಳು ಆಟೋ, ಓಲಾ, ಊಬರ್ ಎಲ್ಲಾ ಸೌಲಭ್ಯಗಳು ಲಭ್ಯವಿದೆ. ರಾಯಚೂರು, ಬಳ್ಳಾರಿ ಹೊರತುಪಡಿಸಿ ಶಾಲಾ-ಕಾಲೇಜುಗಳಿಗಿಲ್ಲ ರಜೆ. ಎಂದಿನಂತೆ ಎಲ್ಲ ಶಾಲಾ-ಕಾಲೇಜುಗಳು ತೆರೆಯಲಿದ್ದು, ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.

    ಇಂದು ಏನಿರುತ್ತೆ?
    ಸರ್ಕಾರಿ ಶಾಲೆ ಕಾಲೇಜು, ಸರ್ಕಾರಿ ಕಚೇರಿಗಳು, ಚಿತ್ರಪ್ರದರ್ಶನ, ಶಾಪಿಂಗ್ ಮಾಲ್, ಕ್ಯಾಬ್ ಸೇವೆ, ಮೆಟ್ರೋ ಸೇವೆ, ಹೋಟೆಲ್, ಎಪಿಎಂಸಿ ಮಾರುಕಟ್ಟೆ, ಬೀದಿಬದಿ ವ್ಯಾಪಾರ, ಆಸ್ಪತ್ರೆ, ಮೆಡಿಕಲ್ ಶಾಪ್, ಆ್ಯಂಬುಲೆನ್ಸ್, ಹಾಲು, ತರಕಾರಿ ಸಿಗಲಿದೆ.

    ಇಂದು ಏನಿರಲ್ಲ?
    ಬಿಎಂಟಿಸಿ-ಕೆಎಸ್‍ಆರ್ ಟಿಸಿ ವಿರಳ ಸಂಚಾರ, ಆಟೋ ಸಂಚಾರದಲ್ಲಿ ವ್ಯತ್ಯಯ ಸಾದ್ಯತೆ, ಕೆಲ ಖಾಸಗಿ ಶಾಲಾ ಕಾಲೇಜುಗಳು, ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ, ಕೆಲ ಗಾರ್ಮೆಂಟ್ಸ್, ಫ್ಯಾಕ್ಟರಿಗಳು ಕ್ಲೋಸ್.

    ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಎರಡು ದಿನಗಳ ಮುಷ್ಕರ ನಡೆಸುತ್ತಿರುವ ಕಾರ್ಮಿಕರು ಗದಗ, ವಿಜಯಪುರ, ಕಲಬುರಗಿಯಲ್ಲಿ ಅಹೋರಾತ್ರಿ ಧರಣಿ ನಡೆಸಿದರು.ಸ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿಯೇ ಹೋರಾಟಗಾರರು ಅಡುಗೆ ಮಾಡಿ ಪ್ರತಿಭಟನೆ ನಡೆಸಿದರು. ಇಂದು ಸಹ ಹೋರಾಟ ಮುಂದುವರೆಯಲ್ಲಿದ್ದು, ಬೆಳಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿ ಕಚೇರಿಯಿಂದ ರೈಲು ನಿಲ್ದಾಣದವರಗೆ ಪಾದಯಾತ್ರೆ ನಡೆಯಲಿದೆ. ನಂತರ ರೈಲು ತಡೆದು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದ್ದಾರೆ. ಬಾಗಲಕೋಟೆಯ ಎಪಿಎಂಸಿ ಬಳಿ ಎರಡು ಬಸ್‍ಗಳಿಗೆ ಕಲ್ಲು ತೂರಿದರು. ಹುಬ್ಬಳ್ಳಿಯಲ್ಲಿ ಇವತ್ತು ಕೂಡ ಸಾರಿಗೆ ಸ್ತಬ್ಧವಾಗಲಿದೆ. ಬ್ಯಾಂಕ್ ಸೇವೆ ಕೂಡ ಸ್ಥಗಿತವಾಗಲಿದೆ. ಬ್ಯಾಂಕ್, ಅಂಚೆ, ವಾಯುವ್ಯ ಸಾರಿಗೆ ಸೇರಿದಂತೆ ಹಲವಾರು ಇಲಾಖೆಯ ಕಾರ್ಮಿಕರು ಇಂದು ಸಾಮೂಹಿಕ ಪ್ರತಿಭಟನೆ ನಡೆಸಲಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಸ್ ಚಾಲಕ, ನಿರ್ವಾಹಕರಿಗೆ ಸಂಚಾರಿ ನಿಯಂತ್ರಕ ಖಡಕ್ ವಾರ್ನಿಂಗ್..!

    ಬಸ್ ಚಾಲಕ, ನಿರ್ವಾಹಕರಿಗೆ ಸಂಚಾರಿ ನಿಯಂತ್ರಕ ಖಡಕ್ ವಾರ್ನಿಂಗ್..!

    ಚಿಕ್ಕಬಳ್ಳಾಪುರ: ಇಂದು ಮತ್ತು ನಾಳೆ ಎರಡು ದಿನಗಳ ಕಾಲ ನಡೆಯುವ ಕಾರ್ಮಿಕರ ಮುಷ್ಕರ ಹಿನ್ನೆಲೆಯಲ್ಲಿ ಬಸ್ ನಿಲ್ದಾಣಕ್ಕೆ ಬಸ್ ತರಬೇಡಿ ಎಂದು ಚಾಲಕ ಹಾಗೂ ನಿರ್ವಾಹಕರಿಗೆ ಜಿಲ್ಲೆಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಸಂಚಾರಿ ನಿಯಂತ್ರಕ ವಾರ್ನಿಂಗ್ ನೀಡಿದ್ದಾರೆ.

    ಬೆಳಗ್ಗೆ ಜಿಲ್ಲೆಯ ಕೆಎಸ್‌ಆರ್‌ಟಿಸಿ ನಿಲ್ದಾಣಕ್ಕೆ ಬಸ್ ತಂದು ಕರ್ತವ್ಯ ನಿರ್ವಹಿಸಲು ಬಂದ ಚಾಲಕ ಹಾಗೂ ನಿರ್ವಾಹಕರಿಗೆ ಸಂಚಾರಿ ನಿಯಂತ್ರಕ ಆವಲಪ್ಪ ವಾರ್ನಿಂಗ್ ನೀಡಿದ್ದಾರೆ. ಇಂದು ಬಂದ್, ನಿಲ್ದಾಣಕ್ಕೆ ಬಸ್ ತರಬೇಡಿ ವಾಪಾಸ್ ಡಿಪೋಗೆ ತೆಗೆದುಕೊಂಡು ಹೋಗಿ ಎಂದು ತಾಕೀತು ಮಾಡಿದ್ದಾರೆ. ಅಲ್ಲದೆ ಯಾರೂ ಕೂಡ ಇಂದು ಕರ್ತವ್ಯ ನಿರ್ವಹಿಸುವಂತಿಲ್ಲ ಅಂತ ನಿಲ್ದಾಣಕ್ಕೆ ಬಂದ ಚಾಲಕರು ಹಾಗೂ ನಿರ್ವಾಹಕರನ್ನು ಹಿಂದಿರುಗುವುದಕ್ಕೆ ಹೇಳಿದ್ದಾರೆ.

    ಪ್ರಯಾಣಿಕರ ಅನುಕೂಲಕ್ಕೆ ಕೆಲಸ ಮಾಡಬೇಕಾದ ಅಧಿಕಾರಿಯಿಂದಲೇ ಸರ್ಕಾರದ ವಿರೋಧಿ ಕೆಲಸ ನಡೆಯುತ್ತಿದೆ. ಆದ್ರೆ ಮುಷ್ಕರಕ್ಕೆ ಬೆಂಬಲ ನೀಡದಿರಲು ನಿರ್ಧರಿಸಿರುವ ಸಿಬ್ಬಂದಿ ಬಸ್ ನಿಲ್ದಾಣಕ್ಕೆ ಕೆಲ ಬಸ್‍ಗಳನ್ನು ತರುತ್ತಿದ್ದಾರೆ. ಹೀಗಾಗಿ ಮುಷ್ಕರಕ್ಕೆ ಬೆಂಬಲ ಕೊಡಬೇಕು. ಬಸ್ ಸ್ಟಾಂಡ್‍ನಲ್ಲಿ ಬಸ್ ಕಾಣಿಸಬಾರದು ಎಂದು ಸಿಬ್ಬಂದಿಗೆ ಸಂಚಾರಿ ನಿಯಂತ್ರಕ ಅವಾಜ್ ಹಾಕಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv