Tag: ಕಾರ್ಮಿಕ ಸಂಘಟನೆ

  • ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ- ಪೊಲೀಸರ ಜೊತೆ ಪ್ರತಿಭಟನಾಕಾರರ ವಾಗ್ವಾದ

    ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ- ಪೊಲೀಸರ ಜೊತೆ ಪ್ರತಿಭಟನಾಕಾರರ ವಾಗ್ವಾದ

    ಉಡುಪಿ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ಕಾರ್ಮಿಕ ಸಂಘಟನೆಗಳು ಉಡುಪಿ ಜಿಲ್ಲಾಧಿಕಾರಿ ಕಚೇರಿ ಮುತ್ತಿಗೆ ಹಾಕಲು ಯತ್ನಿಸಿದೆ. ಮಣಿಪಾಲ ಪೊಲೀಸರು ಮತ್ತು ಸಾವಿರಾರು ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದು ಗೊಂದಲದ ವಾತಾವರಣ ನಿರ್ಮಾಣವಾಯಿತು.

    ಕಾರ್ಮಿಕ ವಿರೋಧಿ ಕಾನೂನುಗಳ ರದ್ಧತಿಗಾಗಿ, ಬೆಲೆ ಏರಿಕೆ ನಿಯಂತ್ರಣಕ್ಕಾಗಿ,ಅಡುಗೆ ಅನಿಲ,ಪೆಟ್ರೋಲ್, ಡೀಸಲ್ ಬೆಲೆ ಇಳಿಸಲು ಎಡಪಕ್ಷಗಳು ಮತ್ತು ಕಾರ್ಮಿಕ ಸಂಘಟನೆಗಳು ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿತ್ತು. ಮಾರುತಿ 28ಕ್ಕೆ ಜಿಲ್ಲೆಯ ಏಳು ತಾಲೂಕಿನಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಗಿತ್ತು ಅಲ್ಲಲ್ಲಿ ವಾಹನ ಜಾಥಾ ರಸ್ತೆ ಜಾಥಾ ಮಾಡಿ ಕೇಂದ್ರ ಸರ್ಕಾರದ ವಿರುದ್ಧ ಕಾರ್ಮಿಕ ಸಂಘಟನೆಗಳು ಅಸಮಾಧಾನವನ್ನು ಹೊರ ಹಾಕಿತ್ತು. ಇದನ್ನೂ ಓದಿ: ಟಿಪ್ಪು ಬಗ್ಗೆ ಶೃಂಗೇರಿ ಮಠಕ್ಕೆ ಹೋಗಿ ಕೇಳಲಿ ಕೊಲ್ಲೂರಿನಲ್ಲಿ ತಿಳಿದುಕೊಳ್ಳಲಿ: ಡಿಕೆಶಿ

    ಸಿಮೆಂಟ್, ಕಬ್ಬಿಣ, ಪೆಯಿಂಟ್ ಬೆಲೆ ನಿಯಂತ್ರಣಕ್ಕಾಗಿ ಉಡುಪಿ ಜಿಲ್ಲಾ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘ(ಸಿಐಟಿಯು) ಸಂಪೂರ್ಣ ಬೆಂಬಲ ವ್ಯಕ್ತ ಪಡಿಸಿದೆ. ಗ್ರಾಮ ಪಂಚಾಯತ್, ಪುರಸಭೆಗಳ ಮೂಲಕ ಪ್ರಧಾನಿಗಳಿಗೆ ಮನವಿ ಸಲ್ಲಿಸಲಾಗಿದೆ. ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿಯಿಂದ ಹೊರಟ ಸಾವಿರಾರು ಜನ ಕಾರ್ಮಿಕರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ರಜತಾದ್ರಿ ಸಮೀಪದ ಆಚಾರ್ಯ ಸರ್ಕಲ್ ಬಳಿ ಪ್ರತಿಭಟನಾಕಾರರು ಆಕ್ರೋಶ ಮುಗಿಲು ಮುಟ್ಟಿತ್ತು.

    ಎರಡು ದಿನ ಜಿಲ್ಲೆಯ 13 ಸಾವಿರಕ್ಕೂ ಹೆಚ್ಚು ಕಟ್ಟಡ ಕಾರ್ಮಿಕರು ಕೆಲಸಕ್ಕೆ ಹಾಜರಾಗದೆ ಮುಷ್ಕರದಲ್ಲಿ ಭಾಗವಹಿಸಿದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಮಣಿಪಾಲ ಪೊಲೀಸರು ಹರಸಾಹಸ ಪಟ್ಟರು. ಕೊನೆಗೆ ಅಪರ ಜಿಲ್ಲಾಧಿಕಾರಿ ವೀಣಾ ಸ್ಥಳಕ್ಕೆ ಆಗಮಿಸಿ ಮನವಿಯನ್ನು ಪಡೆದುಕೊಳ್ಳುವುದರ ಮೂಲಕ ಕಾರ್ಮಿಕ ಸಂಘಟನೆಗಳ ಕಡಿಮೆಯಾಯಿತು. ಉಡುಪಿ ಜಿಲ್ಲೆಯ ಸ್ಥಳೀಯ ಸಮಸ್ಯೆಗಳ ಬಗ್ಗೆ ಪ್ರತಿಭಟನಾಕಾರರು ರಾಜ್ಯ ಸರ್ಕಾರದದ ಗಮನ ಸೆಳೆದರು.

     

  • MESಗೆ ಪಾಠ ಕಲಿಸಲು ಕಾರ್ಮಿಕ ಸಂಘಟನೆ ಪ್ಲ್ಯಾನ್- ಇಂದಿನಿಂದ್ಲೇ ಮಹಾರಾಷ್ಟ್ರ ವಸ್ತುಗಳು ಬ್ಯಾನ್

    MESಗೆ ಪಾಠ ಕಲಿಸಲು ಕಾರ್ಮಿಕ ಸಂಘಟನೆ ಪ್ಲ್ಯಾನ್- ಇಂದಿನಿಂದ್ಲೇ ಮಹಾರಾಷ್ಟ್ರ ವಸ್ತುಗಳು ಬ್ಯಾನ್

    ಬೆಂಗಳೂರು: ಎಂಇಎಸ್(MES) ಪುಂಡರ ವಿರುದ್ಧ ಕನ್ನಡಿಗರು ಸಮರ ಸಾರಲು ಮುಂದಾಗಿದ್ದಾರೆ. ರಾಜ್ಯದ ಮೂಲೆ ಮೂಲೆಯಲ್ಲೂ ಕನ್ನಡಿಗರ ಆಕ್ರೋಶ ಕಟ್ಟೆಯೊಡೆದಿದೆ. ಅತ್ತ ಪುಂಡರ ವಿರುದ್ಧ ಕನ್ನಡ ಪರ ಸಂಘಟನೆಗಳು ಎದ್ದು ನಿಂತರೆ, ಇತ್ತ ಅದೇ ಪುಂಡರ ವಿರುದ್ಧ ಎಪಿಎಂಸಿ ಕಾರ್ಮಿಕ ಸಂಘಟನೆ ವಿಭಿನ್ನವಾಗಿ ತೊಡೆ ತಟ್ಟಿ ನಿಂತಿದೆ.

    ಹೌದು. ಇಂದಿನಿಂದ ಬೆಂಗಳೂರು ಎಪಿಎಂಸಿಯಲ್ಲಿ ಮಹಾರಾಷ್ಟ್ರ ವಸ್ತುಗಳಿಗೆ ನಿರ್ಬಂಧ ಹೇರಲು ಮುಂದಾಗಿದೆ. ಇಂದಿನಿಂದ ಬೆಂಗಳೂರಿನ ಎಪಿಎಂಸಿಯಲ್ಲಿ ಮಹಾರಾಷ್ಟ್ರ ವಸ್ತುಗಳು ನೋ ಲೋಡ್, ನೋ ಅನ್ ಲೋಡ್‍ಗೆ ನಿರ್ಧಾರ ಮಾಡಲಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

    ಮಹಾರಾಷ್ಟ್ರ ವಸ್ತುಗಳ ಆಮದು ಮತ್ತು ಸಾಗಾಟಕ್ಕೆ ಬ್ರೇಕ್ ಹಾಕುವ ಮೂಲಕ ಮಹಾರಾಷ್ಟ್ರಕ್ಕೆ ಶಾಕ್ ನೀಡಲು ಸಂಘಟನೆ ತಯಾರಿ ನಡೆಸಿದೆ. ಎಂಇಎಸ್ ಪುಂಡರು ಪುಂಡಾಟಿಕೆ ನಿಲ್ಲಿಸದಿದ್ದರೆ ಇನ್ನಷ್ಟು ತಕ್ಕ ಪ್ರತಿಫಲ ಅನುಭವಿಸುತ್ತೀರಿ ಎಂದು ಎಪಿಎಂಸಿ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅರುಣ್ ಪರಮೇಶ್ ಅವರು ಪುಂಡರಿಗೆ ನೇರ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ದಾಂಧಲೆ – ರಾತ್ರಿ ಏನೇನು ಮಾಡಿದ್ದಾರೆ?

    ನಾವು ಎಂಇಎಸ್ ಪುಂಡರ ಹಾಗೇ ಕಲ್ಲು ಹೊಡೆಯುವುದಿಲ್ಲ. ನಮ್ಮ ಹೊಡೆತದ ಏಟಿನ ಶೈಲಿಯೇ ಬೇರೆ. ಇಂದಿನಿಂದ ಬೆಂಗಳೂರು ಎಪಿಎಂಸಿಯಲ್ಲಿ ಮಹಾರಾಷ್ಟ್ರ ಲಾರಿಗಳ ಲೋಡಿಂಗ್ ಅನ್ ಲೋಡಿಂಗ್ ಮಾಡುವುದಿಲ್ಲ. ಆ ಭಾಗದಿಂದ ಸಕ್ಕರೆ ಮತ್ತು ಬೆಳೆ ಆಮದು ಆಗುತ್ತಿತ್ತು. ನಮ್ಮಿಂದ ಕಾಳುಗಳ ಸಾಗಣೆ ಆಗುತ್ತಿತ್ತು. ಇಂದಿನಿಂದ ಇವೆಲ್ಲ ಬಂದ್ ಆಗಲಿದೆ. ನಾವು ಕನ್ನಡ ಸ್ವಾಭಿಮಾನಿಗಳು. ಇಷ್ಟಕ್ಕೆ ಪುಂಡರು ಎಚ್ಚೆತ್ತುಕೊಳ್ಳದ್ದಿದ್ದರೆ ಎಪಿಎಂಸಿ ಆವರಣಕ್ಕೆ ಲಾರಿಗಳಿಗೆ ಪ್ರವೇಶವನ್ನೇ ನಿರ್ಬಂಧ ಹೇರುತ್ತೇವೆ. ಕೇವಲ ಬೆಂಗಳೂರು ಮಾತ್ರ ಅಲ್ಲ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲೂ ಹೀಗೆ ಮಾಡುತ್ತೇವೆ ಎಂದು ವಾರ್ನ್ ಮಾಡಿದ್ದಾರೆ.

  • ಕೃಷಿ ಬಿಲ್, ವಿದ್ಯುತ್ ಬಿಲ್ ಹಿಂಪಡೆಯುವ ಒತ್ತಾಯ – ಕಾರ್ಮಿಕ ಸಂಘಟನೆ ಉಡುಪಿ ತಹಶಿಲ್ದಾರ್ ಕಚೇರಿ ಮುತ್ತಿಗೆ ಎಚ್ಚರಿಕೆ

    ಕೃಷಿ ಬಿಲ್, ವಿದ್ಯುತ್ ಬಿಲ್ ಹಿಂಪಡೆಯುವ ಒತ್ತಾಯ – ಕಾರ್ಮಿಕ ಸಂಘಟನೆ ಉಡುಪಿ ತಹಶಿಲ್ದಾರ್ ಕಚೇರಿ ಮುತ್ತಿಗೆ ಎಚ್ಚರಿಕೆ

    ಉಡುಪಿ: ದೇಶಾದ್ಯಂತ ಕಾರ್ಮಿಕ ಸಂಘಟನೆಗಳು 13 ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪ್ರತಿಭಟನೆಗೆ ಕರೆ ನೀಡಿದ್ದು, ಅದಕ್ಕೆ ಬೆಂಬಲ ಸೂಚಿಸಿ ಉಡುಪಿಯಲ್ಲಿ ಕಾರ್ಮಿಕ ಸಂಘಟನೆಗಳಾದ ಸಿಐಟಿಯು, ಎಐಕೆಎಸ್ ಜಂಟಿಯಾಗಿ ಇವತ್ತು ಪ್ರತಿಭಟನೆ ನಡೆಸಿತು.

    ಉಡುಪಿಯ ಬನ್ನಂಜೆಯಲ್ಲಿರುವ ತಾಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ಸಂಹಿತೆಗಳು ಹಾಗೂ ಜನವಿರೋಧಿ ಕೃಷಿ ಕಾನೂನುಗಳು ಮತ್ತು ವಿದ್ಯುತ್ ತಿದ್ದುಪಡಿಯನ್ನು ರದ್ದುಪಡಿಸಬೇಕು. ರೈತರ ಎಲ್ಲ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನೀಡಬೇಕು ಎಂದು ಒತ್ತಾಯಿಸಲಾಯ್ತು.

    ರಾಜ್ಯ ಸರ್ಕಾರ ಶ್ರೀಮಂತರಿಗೆ ಅನುಕೂಲವಾಗುವಂತೆ ಭೂ ಸುಧಾರಣೆ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಹಿಂಪಡೆಯಬೇಕು ಎಂಬ ಮುಖ್ಯ ಬೇಡಿಕೆಗಳನ್ನು ಕಾರ್ಮಿಕ ಸಂಘಟನೆಗಳು ಮುಂದಿಟ್ಟಿವೆ. ಕಾರ್ಮಿಕರ ಪರವಾಗಿ ನಮ್ಮ ಸಂಘಟನೆ ಪ್ರತಿಭಟನೆ ಮಾಡುತ್ತಿದೆ. ಅಧಿಕಾರದಲ್ಲಿರುವ ನೀವು ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣಬೇಕು. ಕಾರ್ಮಿಕರ ಹಿತ ಕಾಪಾಡುವುದು ಸರ್ಕಾರದ ಪ್ರಮುಖ ಉದ್ದೇಶ ಆಗಬೇಕು ಎಂದು ಒತ್ತಾಯಿಸಲಾಯಿತು. ಸರ್ಕಾರ ಕ್ರಮ ಕೈಗೊಳ್ಳದಿದ್ದರೆ ತಹಶೀಲ್ದಾರ್ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಇದನ್ನೂ ಓದಿ: ಲವ್ ಯೂ ರಚ್ಚು’ ಸಿನಿಮಾ ಶೂಟಿಂಗ್ ವೇಳೆ ದುರಂತ – ಹೈಟೆನ್ಷನ್ ವೈರ್ ತಗುಲಿ ಫೈಟರ್ ಸಾವು

  • ಭಾಸ್ಕರ್ ರಾವ್ ಕಾಪಿ ಹೊಡೆದು ಐಪಿಎಸ್ ಪಾಸ್ ಮಾಡಿರಬೇಕು: ಆಯುಕ್ತರ ವಿರುದ್ಧ ಕಾರ್ಮಿಕರ ಕಿಡಿ

    ಭಾಸ್ಕರ್ ರಾವ್ ಕಾಪಿ ಹೊಡೆದು ಐಪಿಎಸ್ ಪಾಸ್ ಮಾಡಿರಬೇಕು: ಆಯುಕ್ತರ ವಿರುದ್ಧ ಕಾರ್ಮಿಕರ ಕಿಡಿ

    ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ಭಾರತ್ ಬಂದ್ ಮಾಡಲು ಕಾರ್ಮಿಕ ಸಂಘಟನೆಯವರು ಕರೆಕೊಟ್ಟಿದ್ದರು. ಆದರೆ ರ‍್ಯಾಲಿಗೆ ಅವಕಾಶ ಕೊಡದ ನಗರ ಪೊಲೀಸ್ ಆಯುಕ್ತರ ವಿರುದ್ಧ ಕಾರ್ಮಿಕ ಸಂಘಟನೆಯ ಸದಸ್ಯರು ಸಿಡಿದೆದ್ದಾರೆ.

    ಸಿಲಿಕಾನ್ ಸಿಟಿಯಲ್ಲಿ ಪ್ರತಿಭಟನೆ ಕಿಚ್ಚು ಜಾಸ್ತಿ ಇಲ್ಲದ ಕಾರಣ ಭಾರತ್ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಮಧ್ಯೆ ಈ ಬಾರಿ ರ‍್ಯಾಲಿಗೆ ಅವಕಾಶ ಕೊಡದ ನಗರ ಪೊಲೀಸ್ ಆಯುಕ್ತರ ವಿರುದ್ಧ ಕಾರ್ಮಿಕರು ಸಿಡಿದೆದಿದ್ದಾರೆ. ಕೇಂದ್ರ ಸರ್ಕಾರದ ಬದಲಾಗಿ ಕಮೀಷನರ್ ಮೇಲೆ ವಾಗ್ದಾಳಿ ನಡೆಸಿದರು.

    ಕಾರ್ಮಿಕ ಸಂಘಟನೆ ಮುಖಂಡ ಮೀನಾಕ್ಷಿ ಸುಂದರಂ ಮಾತನಾಡಿ, ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಕಾಪಿ ಹೊಡೆದು ಐಪಿಎಸ್ ಪಾಸ್ ಮಾಡಿರಬೇಕು. ಅಧಿಕಾರದಲ್ಲಿರುವವರ ಬೂಟ್ ನೆಕ್ಕಿ ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ. ಯಡಿಯೂರಪ್ಪ ಚೇಲಾ ಆಗಿರುವ ಭಾಸ್ಕರ್ ರಾವ್. ನಾವ್ ಮನಸ್ಸು ಮಾಡಿದರೆ ಠಾಣೆಗೆ ಮುತ್ತಿಗೆ ಹಾಕುತ್ತೇವೆ ಎಂದು ಕಿಡಿಕಾರಿದರು.

  • ಕೆ.ಆರ್ ಮಾರ್ಕೆಟ್ ಮೇಲೆ ಬಂದ್ ಎಫೆಕ್ಟ್ – ವ್ಯಾಪಾರಿಗಳ ಅಳಲು

    ಕೆ.ಆರ್ ಮಾರ್ಕೆಟ್ ಮೇಲೆ ಬಂದ್ ಎಫೆಕ್ಟ್ – ವ್ಯಾಪಾರಿಗಳ ಅಳಲು

    ಬೆಂಗಳೂರು: ಇಂದು ದೇಶವ್ಯಾಪಿ ವಿವಿಧ ಕಾರ್ಮಿಕ ಸಂಘಗಳು ಮುಷ್ಕರಕ್ಕೆ ಕರೆ ನೀಡಿವೆ. ಈ ಬಂದ್ ಎಫೆಕ್ಟ್ ಕೆ.ಆರ್ ಮಾರ್ಕೆಟ್ ಮೇಲೆ ಬಿದ್ದಿದೆ. ಪ್ರತಿದಿನಕ್ಕಿಂತ ಕಡಿಮೆ ಮಟ್ಟದಲ್ಲಿ ಹೂವು, ಹಣ್ಣು, ತರಕಾರಿಗಳ ಮಾರಾಟವಾಗುತ್ತಿದ್ದು, ವ್ಯಾಪಾರ ಡಲ್ ಆಗಿದೆ.

    ಬೆಳ್ಳಂಬೆಳಗ್ಗೆ 3 ಗಂಟೆಗೆ ರಾಜ್ಯದ ವಿವಿಧ ಭಾಗಗಳಿಂದ ಬಂದ ರೈತರು ಹಾಗೂ ವ್ಯಾಪಾರಿಗಳು ವ್ಯಾಪಾರ ಆರಂಭಿಸಿದ್ದಾರೆ. ಆದರೇ ಗ್ರಾಹಕರು ಬರುತ್ತಿಲ್ಲ, ಬೋಣಿಯೇ ಆಗಿಲ್ಲ ಎಂದು ತಲೆ ಮೇಲೆ ಕೈ ಹೊತ್ತು ಕುಳಿತುಕೊಳ್ಳುವ ಸ್ಥಿತಿ ಉಂಟಾಯಿತು. ಅಲ್ಲದೆ ಉಳಿದಿರುವ ಹೂವು ಮಾರಾಟ ಮಾಡಬೇಕು ಇಲ್ಲವೆಂದರೆ ನಾಳೆಗೆ ಇಡಬೇಕಾಗುತ್ತೆ ಎಂದು ಬೇಸರ ವ್ಯಕ್ತಪಡಿಸಿದರು.

    ಭಾರತ ಬಂದ್‍ಗೆ ಕೆ.ಆರ್ ಮಾರ್ಕೆಟ್‍ನಲ್ಲಿ ಕರುನಾಡ ಸಂಘಟನೆಗಳ ಒಕ್ಕೂಟ ವಿರೋಧ ವ್ಯಕ್ತಪಡಿಸಿತ್ತು. ಮಾರ್ಕೆಟ್‍ಗೆ ಬರುವ ಜನರಿಗೆ, ವಾಹನ ಸವಾರರಿಗೆ, ಗ್ರಾಹಕರಿಗೆ, ವ್ಯಾಪಾರಿಗಳಿಗೆ ಗುಲಾಬಿ ಹೂ ಕೊಟ್ಟು ಸ್ವಾಗತ ನೀಡಿದರು. ಬಂದ್ ಜನವಿರೋಧಿ ಸಾವಿರಾರು ಕೋಟಿ ನಷ್ಟವಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸದ್ಯ ಕೆ.ಆರ್ ಮಾರ್ಕೆಟ್ ಜನಗಳಿಲ್ಲದೇ ಬೀಕೋ ಎನ್ನುತ್ತಿದೆ.

  • ನಾಳೆ ಕೊಡಗಿನಲ್ಲಿ ಬಂದ್ ಇಲ್ಲ, ಪ್ರತಿಭಟನೆಗೆ ಮಾತ್ರ ಸೀಮಿತ

    ನಾಳೆ ಕೊಡಗಿನಲ್ಲಿ ಬಂದ್ ಇಲ್ಲ, ಪ್ರತಿಭಟನೆಗೆ ಮಾತ್ರ ಸೀಮಿತ

    ಮಡಿಕೇರಿ: ದೇಶಾದ್ಯಂತ ನಾಳೆ ಕಾರ್ಮಿಕ ಸಂಘಟನೆಗಳು ಕರೆ ನೀಡಿರೊ ಭಾರತ್ ಬಂದ್ ಗೆ ಕೊಡಗು ಜಿಲ್ಲೆಯಲ್ಲಿ ಹತ್ತಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳು ಬೆಂಬಲ ನೀಡಿವೆ. ಹೀಗಾಗಿ ಸಿಐಟಿಯು, ಎಐಟಿಯುಸಿ ಕಾರ್ಮಿಕ ಸಂಘಟನೆಯಿಂದ ನಾಳೆ ಬೃಹತ್ ಪ್ರತಿಭಟನೆ ಮಡಿಕೇರಿ ನಗರದಲ್ಲಿ ನಡೆಯಲಿದೆ.

    ಕೆಎಸ್‌ಆರ್‌ಟಿಸಿ ಸಿಬ್ಬಂದಿ, ಸರ್ಕಾರಿ ಆಸ್ಪತ್ರೆ ಸಿಬ್ಬಂದಿ, ಅಂಗನವಾಡಿ, ಬಿಸಿಯೂಟ ಸಿಬ್ಬಂದಿ, ಬಿಎಸ್‍ಎನ್‍ಎಲ್ ಗುತ್ತಿಗೆ ನೌಕರರು, ಎಲ್‍ಐಸಿ ಸಿಬ್ಬಂದಿ, ಕಟ್ಟಡ ಕಾರ್ಮಿಕರು, ಕಾಫಿ ತೋಟದ ಕಾರ್ಮಿಕರು, ಅಮಾಲಿ ನೌಕರರ ಸಂಘದಿಂದ ಈಗಾಗಲೇ ಬಂದ್‍ಗೆ ಬೆಂಬಲ ಘೋಷಣೆಯಾಗಿದೆ. ಆದರೆ ನಾಳೆ ಎಂದಿನಂತೆ ಶಾಲಾ ಕಾಲೇಜುಗಳು ಇರಲಿದ್ದು, ಪೆಟ್ರೋಲ್ ಬಂಕ್, ಹಾಲಿನ ಬೂತ್, ಮೆಡಿಕಲ್ ಸ್ಟೋರ್ ಎಲ್ಲವೂ ಎಂದಿನಂತೆ ಕಾರ್ಯನಿರ್ವಹಿಸಲಿವೆ.

    ಖಾಸಗಿ ಬಸ್ ಮಾಲೀಕರ ಸಂಘದವರು ಎಂದಿನಂತೆ ಬಸ್ಸು ಸಂಚಾರ ನಡೆಸಲಿದ್ದಾರೆ. ಆದರೆ ಅಟೋ ಚಾಲಕರು ಪರಿಸ್ಥಿತಿ ನೋಡಿಕೊಂಡು ಆಟೋ ಚಾಲನೆ ಮಾಡುತ್ತೇವೆ ಎಂದಿದ್ದಾರೆ. ಇತ್ತ ವಿರಾಜಪೇಟೆ ತಾಲೂಕಿನಲ್ಲಿ ಕಾರ್ಮಿಕ ವಲಯಗಳು ಜಾಸ್ತಿ ಇರುವ ಕಾರಣ ಗ್ರಾಮೀಣ ಭಾಗಗಳಿಂದ ಸಿದ್ದಾಪುರ ಕರಡಿಗೋಡು, ನೆಲ್ಲಿಹುದಿಕೇರಿ ಕುಟ್ಟ ಭಾಗದಲ್ಲಿ ಅಲ್ಲಿಯ ಪರಿಸ್ಥಿತಿಯನ್ನು ಅರಿತು ಆಟೋ ಚಾಲಕರು ನಿಲ್ಲಸಬಹುದು ಎಂದು ಆಟೋ ಚಾಲಕ ಜಿಲ್ಲಾಧ್ಯಕ್ಷ ಮೇದಪ್ಪ ಅವರು ತಿಳಿಸಿದ್ದಾರೆ.

  • ಬುಧವಾರ ಭಾರತ್ ಬಂದ್ – ಏನು ಇರುತ್ತೆ? ಏನು ಇರಲ್ಲ?

    ಬುಧವಾರ ಭಾರತ್ ಬಂದ್ – ಏನು ಇರುತ್ತೆ? ಏನು ಇರಲ್ಲ?

    ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ 10 ಕಾರ್ಮಿಕ ಸಂಘಟನೆಗಳು ಬುಧವಾರ ದೇಶವ್ಯಾಪಿ ಬಂದ್‍ಗೆ ಕರೆ ನೀಡಿವೆ.

    ನಮ್ಮ ಬೇಡಿಕೆ ಮತ್ತು ಸಾಮಾಜಿಕ ಭದ್ರತೆಯ ಬಗ್ಗೆ ಪದೇ ಪದೇ ಸಂಘಟನೆಗಳು ದನಿ ಎತ್ತಿದ್ದರೂ, ಸರ್ಕಾರ ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ ಎಂದು ಆರೋಪಿಸಿ ಎಐಟಿಯುಸಿ, ಎಚ್‍ಎಂಎಸ್, ಸಿಐಟಿಯು, ಎಐಯುಟಿಯುಸಿ, ಎಸ್‍ಇಡಬ್ಲ್ಯುಎ, ಎಐಸಿಸಿಟಿಯು, ಎಲ್‍ಪಿಎಫ್ ಮತ್ತು ಯುಟಿಯುಸಿ ಸಂಘಟನೆಗಳು ಪ್ರತಿಭಟನೆ ನಡೆಸಲಿವೆ. ಆದರೆ ನಾಳೆ ನಡೆಯಲಿರುವ ಬಂದ್ ಕರ್ನಾಟಕದಲ್ಲಿ ಹಳ್ಳ ಹಿಡಿದಿದೆ. ಯಾವ ಸಂಘಟನೆಗಳು ಕೂಡ ಬಂದ್‍ಗೆ ಬೆಂಬಲಿಸಿಲ್ಲ.

    ಎಸ್ಮಾ ಅಸ್ತ್ರ ಪ್ರಯೋಗಿಸುತ್ತಿದ್ದಂತೆ, ಸಾರಿಗೆ ನೌಕರರು ಕೂಡ ಬಂದ್ ಕೈ ಬಿಟ್ಟಿದ್ದಾರೆ. ಪೊಲೀಸ್ ಆಯುಕ್ತ ಭಾಸ್ಕರ್ ರಾವ್, ಪ್ರತಿಭಟನಾ ನಿರತ ಸಂಘಟನೆಗಳಿಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಜನವರಿ 8ಕ್ಕೆ ಮುಷ್ಕರ ಅಥವಾ ಮೆರವಣಿಗೆಗೆ ಅನುಮತಿ ಇಲ್ಲ. ಮೆರವಣಿಗೆ ನಡೆಸಿ ಸಾರ್ವಜನಿಕರಿಗೆ ತೊಂದರೆ ನೀಡಿದರೆ ಸೆಕ್ಷನ್ 107(ಅನುಮತಿ ಪಡೆಯದೇ ಮೆರವಣಿಗೆ ನಡೆಸುವುದು) ಅಡಿ ಕೇಸ್ ದಾಖಲಿಸುತ್ತೇವೆ. ಮೆರವಣಿಗೆ ಬದಲಿಗೆ ಫ್ರೀಡಂ ಪಾರ್ಕ್‍ನಲ್ಲಿ ಪ್ರತಿಭಟನೆ ನಡೆಸಬೇಕೆಂದು ಆದೇಶ ಹೊರಡಿಸಿದ್ದಾರೆ.

    ಬಂದ್‍ಗೆ ಯಾವುದೇ ಸಂಘಟನೆಗಳಿಂದ ಬೆಂಬಲ ಸಿಗದಿದ್ದರಿಂದ ಸಿಐಟಿಯು ಅಧ್ಯಕ್ಷ ಅನಂತ ಸುಬ್ಬಾರಾವ್ ಉಲ್ಟಾ ಹೊಡೆದಿದ್ದಾರೆ. ನಾವು ಬಂದ್ ಮಾಡುತ್ತಿಲ್ಲ. 13 ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ. ಕಾರ್ಖಾನೆಗಳು, ಬ್ಯಾಂಕ್‍ಗಳು ಇರುವುದಿಲ್ಲ. ಸಾರಿಗೆ ನಿಗಮಗಳು ಸ್ಟ್ರೈಕ್ ಮಾಡುತ್ತಿಲ್ಲ. ಡಿಪೋ ಮಟ್ಟದಲ್ಲಿ ಧರಣಿಗಳು ನಡೆಯಲಿವೆ. ಜನ ಇರುವುದಿಲ್ಲ. ಜಾಸ್ತಿ ಬಸ್ ಓಡಿಸಿ ಲಾಸ್ ಮಾಡಿಕೊಳ್ಳಬೇಡಿ ಅಂದಿದ್ದಾರೆ. ಹೀಗಾಗಿ, ಕರ್ನಾಟಕದಲ್ಲಿ ಭಾರತ್ ಬಂದ್ ಠುಸ್ ಆಗುವ ಸಾಧ್ಯತೆ ಇದೆ.  ಇದನ್ನೂ ಓದಿ: ಬುಧವಾರ ಕಾರ್ಮಿಕರ ಪ್ರತಿಭಟನೆ – ಭಾರತ್ ಬಂದ್ ಯಾಕೆ? ಬೇಡಿಕೆ ಏನು?

    ಬಸ್ ಇರುತ್ತೆ:
    ಮುಷ್ಕರದಲ್ಲಿ ಭಾಗಿಯಾಗದಂತೆ ಸಾರಿಗೆ ನೌಕರರ ಮೇಲೆ ಎಸ್ಮಾ(ಅಗತ್ಯ ಸೇವೆ ನಿರ್ವಹಣಾ ಕಾಯ್ದೆ) ಅಸ್ತ್ರವನ್ನು ಪ್ರಯೋಗಿಸಲು ಸರ್ಕಾರ ಮುಂದಾಗಿದೆ. ಎಸ್ಮಾ ಜಾರಿಗೆ ಹೆದರಿದ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ನೌಕರರು ಎಂದಿನಂತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಕೆಲ ನೌಕರರು ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಂಚ ವ್ಯತ್ಯಯವಾಗುವ ಸಾಧ್ಯತೆಯಿದೆ.

    ಶಾಲೆ ಇರುತ್ತೆ:
    ಖಾಸಗಿ ಶಾಲಾ-ಕಾಲೇಜುಗಳು ಬಂದ್ ಬೆಂಬಲಿಸದ ಕಾರಣ ಶಾಲಾ -ಕಾಲೇಜುಗಳಿಗೆ ರಜೆ ಘೋಷಣೆ ಇಲ್ಲ. ಆಯಾ ಶಾಲಾ ಆಡಳಿತ ಮಂಡಳಿಗೆ ರಜೆ ನೀಡುವ ಅಧಿಕಾರವನ್ನು ನೀಡಲಾಗಿದೆ ಎಂದು ಕ್ಯಾಮ್ಸ್ ಕಾರ್ಯದರ್ಶಿ ಶಶಿಕುಮಾರ್ ತಿಳಿಸಿದ್ದಾರೆ.

    ರಿಕ್ಷಾ ಇರುತ್ತೆ:
    ಸಿಐಟಿಯು ಅಡಿ ಬರುವ ಆಟೋ ಚಾಲಕರ ಸಂಘಟನೆಗಳ ಮಾತ್ರ ಬೆಂಬಲ ನೀಡಿದ್ದು ಬೆಂಗಳೂರು ನಗರ ಆಟೋ ಚಾಲಕರ ಸಂಘದಿಂದ ಬೆಂಬಲ ಇಲ್ಲ. ಆದರ್ಶ ಆಟೋ ಯೂನಿಯನ್‍ನಿಂದ ಬೆಂಬಲ ನೀಡಿಲ್ಲ. ಎಂದಿನಂತೆ ಆಟೋ, ಊಬರ್, ಟ್ಯಾಕ್ಸಿ ಸಂಚಾರ ಇರಲಿದೆ.

    ಖಾಸಗಿ ಪ್ರವಾಸ ವಾಹನಗಳ ಸೇವೆ ಎಂದಿನಂತೆ ಇರಲಿದ್ದು, ಲಾರಿ ಮಾಲೀಕರ ಸಂಘವ ಬೆಂಬಲ ಇಲ್ಲ. ಎಪಿಎಂಸಿ ಮಾರುಕಟ್ಟೆ ವಹಿವಾಟು ಎಂದಿನಂತೆ ನಡೆಸಲಿದೆ. ಕನ್ನಡ ಪರ ಸಂಘಟನೆಗಳಿಗೆ ಭಾರತ್ ಬಂದ್ ಮಾಹಿತಿಯೇ ಇಲ್ಲ. ಸಂಬಂಧಪಟ್ಟವರು ಬೆಂಬಲ ಕೇಳಿದರೆ ನೋಡೋಣ ಎಂದು ಕರವೇ ತಿಳಿಸಿದೆ.

    ಭಾರತ್ ಬಂದ್‍ಗೆ ಹೋಟೆಲ್ ಸಂಘ ಬೆಂಬಲ ಇಲ್ಲ. ಮಾಲ್‍ಗಳು ಕೂಡ ನಾಳೆ ತೆರೆದಿರುತ್ತವೆ. ಬಂದ್‍ಗೆ ಟ್ಯಾಕ್ಸಿ ಮಾಲೀಕರ ಬೆಂಬಲ ನೀಡಿಲ್ಲ. ಲಾರಿ ಸಂಚಾರ ಕೂಡ ಇರಲಿದ್ದು ಅಗತ್ಯ ವಸ್ತುಗಳ ಸಾಗಾಣೆ ಎಂದಿನಂತಿರಲಿವೆ.

    ಯಾರೆಲ್ಲ ಬೆಂಬಲ?
    ಎಸ್‍ಬಿಐ ಹೊರತು ಪಡಿಸಿ ಉಳಿದ ಎಲ್ಲಾ ಬ್ಯಾಂಕ್‍ಗಳ ಸೇವೆ ಸ್ಥಗಿತವಾಗುವ ಸಾಧ್ಯತೆಯಿದೆ. ಉಳಿದ ಬ್ಯಾಂಕ್ ನೌಕರರು ಮುಷ್ಕರದಲ್ಲಿ ಭಾಗಿಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದೇ ಬ್ಯಾಂಕ್ ಕೆಲಸ ಮಾಡುವುದು ಉತ್ತಮ. ಭಾರತ್ ಬಂದ್‍ಗೆ ರೈತರಿಂದ ಬೆಂಬಲ ವ್ಯಕ್ತವಾಗಿದ್ದು ಬಂದ್ ದಿನ ಯಾವುದೇ ಉತ್ಪನ್ನದ ಮಾರಾಟವೂ ಇಲ್ಲ, ಖರೀದಿಯೂ ಇಲ್ಲ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ.

  • ಬ್ಯಾಂಡ್ ಬಾರಿಸಿ ಅಂಚೆ ಸಿಬ್ಬಂದಿಯಿಂದ ವಿನೂತನ ಪ್ರತಿಭಟನೆ

    ಬ್ಯಾಂಡ್ ಬಾರಿಸಿ ಅಂಚೆ ಸಿಬ್ಬಂದಿಯಿಂದ ವಿನೂತನ ಪ್ರತಿಭಟನೆ

    ಉಡುಪಿ: ಕಾರ್ಮಿಕರ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ಇಂದು ಮತ್ತು ನಾಳೆ ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ವೇಳೆ ಉಡುಪಿಯ ಅಂಚೆ ಸಿಬ್ಬಂದಿ ವಿಭಿನ್ನವಾಗಿ ತಮ್ಮ ಆಕ್ರೋಶ ಹೊರಹಾಕಿದರು. ಬ್ಯಾಂಡ್ ಬಾರಿಸಿ ಕೇಂದ್ರದ ವಿರುದ್ಧ ಅಸಮಾಧಾನ ಹೊರಹಾಕಿದರು.

    ಉಡುಪಿ ನಗರದ ಪ್ರಧಾನ ಅಂಚೆ ಕಚೇರಿ ಎದುರು ಡೋಲು ಬಾರಿಸಿ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಯಿತು. ಅಂಚೆ ಕಾರ್ಮಿಕರು ಬ್ಯಾಂಡ್ ಬಡಿದು ಆಕ್ರೋಶ ವ್ಯಕ್ತಪಡಿಸಿದರು. ಅಂಚೆ ಕಚೇರಿ ಸಿಬ್ಬಂದಿ ಬ್ಯಾಂಡ್ ಬಾರಿಸುತ್ತಾ ತಮ್ಮ ಬೇಡಿಕೆಗಳನ್ನು ಸರಕಾರದ ಮುಂದಿಟ್ಟರು. ಸಿಬ್ಬಂದಿ ಬ್ಯಾಂಡ್ ಬಾರಿಸೋದನ್ನು ನೋಡಲು ಸಾರ್ವಜನಿಕರೂ ಸ್ಥಳದಲ್ಲಿ ಜಮಾಯಿಸಿದರು.

    ಕಾರ್ಮಿಕ ಸಂಘಟನೆಯ ಸದಸ್ಯರು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಿದರು. ಎಲ್‍ಐಸಿ ಕಚೇರಿ, ಬ್ಯಾಂಕುಗಳ ಮುಂಭಾಗ, ಬಿಎಸ್ ಎನ್ ಎಲ್ ಕಚೇರಿಗಳ ಮುಂದೆ ಕೆಲಕಾಲ ಪ್ರತಿಭಟನೆ ಮಾಡಿದರು.

    ಇದನ್ನು ಹೊರತುಪಡಿಸಿ ಉಡುಪಿಯಲ್ಲಿ ಆಸ್ಪತ್ರೆ, ಮೆಡಿಕಲ್, ಪೆಟ್ರೋಲ್ ಬಂಕ್, ಚಿತ್ರ ಮಂದಿರ ಎಂದಿನಂತೆ ತೆರೆದಿವೆ. ಒಟ್ಟಾರೆ ಉಡುಪಿ ಮಾತ್ರವಲ್ಲದೆ ಗಂಗೊಳ್ಳಿ, ಕುಂದಾಪುರ, ಕಾರ್ಕಳ, ಕಾಪು ತಾಲೂಕಿನಲ್ಲೂ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲಲ್ಲಿ ಪ್ರತಿಭಟನೆಗಳು ನಡೆದಿವೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv