Tag: ಕಾರ್ಯಕರ್ತ

  • ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಕೊಲೆ- ನಾಲ್ವರ ಬಂಧನ

    ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಕೊಲೆ- ನಾಲ್ವರ ಬಂಧನ

    ಮಂಗಳೂರು: ಪುತ್ತೂರಿನಲ್ಲಿ ಹಿಂದೂ ಜಾಗರಣಾ ವೇದಿಕೆ ಕಾರ್ಯಕರ್ತನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ಪುತ್ತೂರಿನ ಆರ್ಯಾಪು ನಿವಾಸಿಗಳಾದ ಕಿರಣ್(36), ಚರಣ್(26), ಉಳ್ಳಾಲ ನಿವಾಸಿ ಪ್ರೀತೇಶ್(28) ಹಾಗೂ ಆರೋಪಿಗಳಿಗೆ ಆಶ್ರಯ ನೀಡಿದ್ದ ಅತ್ತಾವರ ನಿವಾಸಿ ಸ್ಟೀವನ್ ಮೊಂತೇರೊನನ್ನು ಪುತ್ತೂರು ಪೊಲೀಸರು ಬಂಧಿಸಿದ್ದಾರೆ. ಹಿಂಜಾವೇ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ(30) ಅವರನ್ನು ಹಣಕಾಸು ವಿಚಾರದಲ್ಲಿ ಕಿರಣ್ ಮತ್ತು ಸೋದರ ಚರಣ್ ಹಾಗೂ ಪ್ರೀತೇಶ್ ಕೊಲೆ ಮಾಡಿದ್ದರು.

    ಮಂಗಳವಾರ ಸಂಪ್ಯ ಪೊಲೀಸ್ ಠಾಣೆ ಮುಂಭಾಗ ಗಣೇಶೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಸಾರ್ವಜನಿಕರ ಎದುರಲ್ಲೇ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದರು.

    ಕಾರ್ತಿಕ್ ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ಹಣವನ್ನು ಪಡೆದಿದ್ದರು. ಈ ವಿಚಾರಕ್ಕೆ ಕಾರ್ತಿಕ್ ಜೊತೆ ಕಿರಣ್ ಮತ್ತು ಸೋದರ ಚರಣ್ ಹಾಗೂ ಪ್ರೀತೇಶ್ ಜಗಳಕ್ಕಿಳಿದಿದ್ದರು. ಆಗ ಮಾತಿಗೆ ಮಾತು ಬೆಳೆದು ಜಗಳ ತಾರಕ್ಕಕ್ಕೇರಿ ಕೋಪಗೊಂಡ ಮೂವರು ಆರೋಪಿಗಳು ಕಾರ್ತಿಕ್‍ಗೆ ಚೂರಿಯಿಂದ ಇರಿದು ಕೊಲೆ ಮಾಡಿದ್ದರು. ಬಳಿಕ ಸ್ಥಳದಿಂದ ಪರಾರಿಯಾಗಿದ್ದರು.

    ಈ ಸಂಬಂಧ ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರೋಪಿಗಳಿಗಾಗಿ ಬಲೆ ಬೀಸಿದ್ದರು. ಸುತ್ತಮುತ್ತಲ ಠಾಣೆಗಳಿಗೆ ಈ ಬಗ್ಗೆ ಮಾಹಿತಿ ನೀಡಿದ್ದರು.

  • ಸಾರ್ವಜನಿಕರ ಎದುರೇ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಬರ್ಬರ ಹತ್ಯೆ

    ಸಾರ್ವಜನಿಕರ ಎದುರೇ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಬರ್ಬರ ಹತ್ಯೆ

    ಮಂಗಳೂರು: ದಕ್ಷಿಣ ಕನ್ನಡದ ಪುತ್ತೂರು ತಾಲೂಕಿನ ಸಂಪ್ಯ ಪೊಲೀಸ್ ಠಾಣೆ ಎದುರಲ್ಲಿ ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನನ್ನು ದುಷ್ಕರ್ಮಿಗಳು ಬರ್ಬರ ಹತ್ಯೆಗೈದಿದ್ದಾರೆ.

    ಹಿಂಜಾವೇ ತಾಲೂಕು ಕಾರ್ಯದರ್ಶಿ ಕಾರ್ತಿಕ್ ಮೇರ್ಲ(30) ಕೊಲೆಯಾದ ದುರ್ದೈವಿ. ಸಂಪ್ಯ ಪೊಲೀಸ್ ಠಾಣೆ ಮುಂಭಾಗ ಗಣೇಶೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ಈ ವೇಳೆ ಸಾರ್ವಜನಿಕರ ಎದುರಲ್ಲೇ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾರೆ.

    ಯುವಕ ಖಾಸಗಿ ಫೈನಾನ್ಸ್ ಸಂಸ್ಥೆಯಿಂದ ಹಣವನ್ನು ಪಡೆದಿದ್ದನು. ಈ ವಿಚಾರಕ್ಕೆ ಕೆಲ ಯುವಕರು ಕಾರ್ತಿಕ್ ಜೊತೆ ಜಗಳಕ್ಕಿಳಿದಿದ್ದರು. ಮಾತಿಗೆ ಮಾತು ಬೆಳೆದು ಜಗಳ ತಾರಕ್ಕಕ್ಕೇರಿ ಕೋಪಗೊಂಡ ಯುವಕರ ಗುಂಪು ಕಾರ್ತಿಕ್‍ಗೆ ಚೂರಿಯಿಂದ ಇರಿದು ಕೊಲೆ ಮಾಡಿದೆ.

    ಈ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಪೊಲೀಸರು ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದು, ಸಂಪ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕೇರಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ – ಓರ್ವನ ಬರ್ಬರ ಹತ್ಯೆ

    ಕೇರಳದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ – ಓರ್ವನ ಬರ್ಬರ ಹತ್ಯೆ

    ತಿರುವನಂತಪುರಂ: ಕೇರಳದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ತಡ ರಾತ್ರಿ ದಾಳಿ ನಡೆದಿದ್ದು, ಓರ್ವ ಕಾರ್ಯಕರ್ತನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ.

    ಈ ಘಟನೆ ತ್ರಿಶ್ಯೂರಿನ ಚವಕ್ಕಾಡ್ ಎಂಬ ಪಟ್ಟಣದಲ್ಲಿ ನಡೆದಿದ್ದು, ಕೊಲೆಯಾದ ಕಾಂಗ್ರೆಸ್ ಕಾರ್ಯಕರ್ತನನ್ನು 43 ವರ್ಷದ ನೌಶಾದ್ ಎಂದು ಗುರುತಿಸಲಾಗಿದೆ. ನೌಶಾದ್ ಮತ್ತು ಇನ್ನಿಬ್ಬರು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದಾಳಿ ನಡೆದಿದೆ.

    ತಡರಾತ್ರಿ ಬೈಕಿನಲ್ಲಿ ಬಂದ 8 ಜನ ದುಷ್ಕರ್ಮಿಗಳು ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಏಕಾಏಕಿ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಹಲವಾರು ಬಾರಿ ಇರಿತಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ, ನೌಶಾದ್ ಇಂದು ಬೆಳಗ್ಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಈ ದಾಳಿಯ ಹಿಂದೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‍ಡಿಪಿಐ) ಕೈವಾಡವಿದೆ ಎಂದು ಪೊಲೀಸರು ಶಂಕಿಸಿದ್ದಾರೆ.

  • ಕಾಂಗ್ರೆಸ್ ಕಚೇರಿ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ‘ಕೈ’ ಕಾರ್ಯಕರ್ತ

    ಕಾಂಗ್ರೆಸ್ ಕಚೇರಿ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ‘ಕೈ’ ಕಾರ್ಯಕರ್ತ

    – ರಾಜೀನಾಮೆ ನಿರ್ಧಾರ ಕೈಬಿಡಿ ರಾಹುಲ್ ಗಾಂಧಿಗೆ ಒತ್ತಾಯ

    ನವದೆಹಲಿ: ರಾಜೀನಾಮೆ ನಿರ್ಧಾರ ಕೈಬಿಡುವಂತೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಒತ್ತಾಯಿಸಿ ಕಾರ್ಯಕರ್ತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದೆಹಲಿಯಲ್ಲಿ ನಡೆದಿದೆ.

    ದೆಹಲಿಯ ಕಾಂಗ್ರೆಸ್ ಕಚೇರಿಯ ಎದುರಿಗೆ ಇದ್ದ ಮರಕ್ಕೆ ಕಾಂಗ್ರೆಸ್ ಕಾರ್ಯಕರ್ತ ನೇಣು ಹಾಕಿಕೊಳ್ಳಲು ಮುಂದಾಗಿದ್ದ. ಇದನ್ನು ನೋಡಿದ ಪೊಲೀಸರು ತಕ್ಷಣವೇ ರಕ್ಷಣೆಗೆ ಮುಂದಾಗಿದ್ದಾರೆ. ಆದರೆ ಕಾರ್ಯಕರ್ತ ಮರವನ್ನು ಹಿಡಿದು ಜೋತು ಬಿದ್ದಿದ್ದ. ಹೀಗಾಗಿ ಸ್ಥಳೀಯರ ಸಹಾಯದಿಂದ ಆತನನ್ನು ಪೊಲೀಸರು ರಕ್ಷಿಸಿದ್ದಾರೆ.

    ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ಗಾಂಧಿ ಅವರ ರಾಜೀನಾಮೆ ವಿರೋಧಿಸಿ ಕಾಂಗ್ರೆಸ್‍ನ ಪ್ರಧಾನ ಕಾರ್ಯದರ್ಶಿ ಹಾಗೂ ರಾಜಸ್ಥಾನದ ಸಹ-ಉಸ್ತುವಾರಿ ತರುಣ್ ಕುಮಾರ್ ಅವರು ಶನಿವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು.

    ಪಕ್ಷವು ನನಗೆ 2017ರಲ್ಲಿಯೇ ಎಐಸಿಸಿ ಪ್ರಧಾನ ಕಾರ್ಯದರ್ಶಿ ಸ್ಥಾನ ನೀಡಿದೆ. ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ಭಾರೀ ಮುನ್ನಡೆ ಸಾಧಿಸಿ, ಸರ್ಕಾರ ರಚನೆ ಮಾಡಿದ್ದೇವೆ. ಲೋಕಸಭಾ ಚುನಾವಣೆ ವೇಳೆಯೂ ಉತ್ತಮ ರೀತಿಯಲ್ಲಿ ಪ್ರಚಾರ ಹಾಗೂ ಪಕ್ಷ ಸಂಘಟನೆ ಮಾಡಿದ್ದೇವು. ಆದರೆ ಫಲಿತಾಂಶ ನಮ್ಮ ನಿರೀಕ್ಷೆಯನ್ನು ಹುಸಿಗೊಳಿಸಿದೆ. ಪಕ್ಷದ ಸೋಲನ್ನು ಸಂಪೂರ್ಣವಾಗಿ ನೀವು ಹೊತ್ತು ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿರುವಿರಿ. ಈ ಸೋಲಿಗೆ ನಾವು ಕೂಡ ಜವಾಬ್ದಾರರಾಗಿದ್ದೇವೆ. ಹೀಗಾಗಿ ನಿಮಗೆ ರಾಜೀನಾಮೆ ಪತ್ರ ನೀಡುತ್ತಿರುವೆ ಎಂದು ತರುಣ್ ಕುಮಾರ್, ರಾಹುಲ್ ಗಾಂಧಿ ಅವರಿಗೆ ತಿಳಿಸಿದ್ದರು.

    ರಾಹುಲ್ ಗಾಂಧಿ ಅವರೇ ಪಕ್ಷವನ್ನು ಮುನ್ನಡೆಸಬೇಕು ಎಂದು ಅನೇಕ ಯುವಕರು ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ಹುದ್ದೆಗಳಿಗೆ ರಾಜೀನಾಮೆ ನೀಡುವ ಮೂಲಕ ಕಾಂಗ್ರೆಸ್‍ನ ಹಿರಿಯ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ.

    ಕಾಂಗ್ರೆಸ್‍ನ ಮಧ್ಯಪ್ರದೇಶ ಘಟಕದ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ದೀಪಕ್ ಬಬಾರಿಯಾ ಮತ್ತು ಗೋವಾ ಕಾಂಗ್ರೆಸ್ ಘಟಕ ಅಧ್ಯಕ್ಷ ಗಿರೀಶ್ ಚೊಡನ್‍ಕರ್ ಅವರು ಈಗಾಗಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಎಐಸಿಸಿ ಪ್ರಧಾನ ಕಚೇರಿಗೆ ಭೇಟಿ ನೀಡಿದ 300ಕ್ಕೂ ಹೆಚ್ಚು ಯುವ ನಾಯಕರು ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.

  • ಪಶ್ಚಿಮ ಬಂಗಾಳದಲ್ಲಿ ಗುಂಡಿಕ್ಕಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ

    ಪಶ್ಚಿಮ ಬಂಗಾಳದಲ್ಲಿ ಗುಂಡಿಕ್ಕಿ ಬಿಜೆಪಿ ಕಾರ್ಯಕರ್ತನ ಬರ್ಬರ ಕೊಲೆ

    ಕೊಲ್ಕತ್ತಾ: ಲೋಕಸಭಾ ಚುನಾವಣೆ ಮುಗಿದರೂ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಇನ್ನು ಕೊನೆಗೊಂಡಿಲ್ಲ. ಭಾನುವಾರ ರಾತ್ರಿ ಬಿಜೆಪಿ ಕಾರ್ಯಕರ್ತನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ.

    ಪಶ್ಚಿಮ ಬಂಗಾಳದ ಪರ್ಗನಾಸ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಹತ್ಯೆ ಮಾಡಲಾದ ಬಿಜೆಪಿ ಕಾರ್ಯಕರ್ತನನ್ನು 24 ವರ್ಷದ ಚಂದನ್ ಶಾ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಚಂದನ್ ಶಾನನ್ನು ಯಾರೋ ಅಪರಿಚಿತರು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ಲೋಕಸಭಾ ಚುನಾವಣಾ ಸಮಯದಿಂದಲೂಸ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆಯುತಿತ್ತು. ಲೋಕಸಭಾ ಭಾನುವಾರ ರಾತ್ರಿ ಮನೆಗೆ ಬೈಕಿನಲ್ಲಿ ಬರುತ್ತಿದ್ದ ಚಂದನ್ ಶಾ ಅವರನ್ನು ಯಾರೋ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

    ಈ ಘಟನೆ ನಡೆಯುದಕ್ಕೂ ಮುನ್ನ ತೃಣಮೂಲ ಕಾಂಗ್ರೆಸ್ ಪಕ್ಷದ ಅರಣ್ಯ ಸಚಿವ ಬಿನಾಯ್ ಕೃಷ್ಣ ಬರ್ಮನ್ ಅವರ ಬೆಂಗಾವಲು ವಾಹನದ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ಮಾಡಿದ್ದರು. ಜೊತೆಯಲ್ಲೇ ಇದ್ದ ಪೊಲೀಸರು ಅವರನ್ನು ರಕ್ಷಣೆ ಮಾಡಿದ್ದರು. ಈ ಎರಡು ಘಟನೆಗಳಿಂದ ಅ ಭಾಗದಲ್ಲಿ ಅತಂಕದ ವಾತಾವರಣ ಸೃಷ್ಟಿಯಾಗಿತ್ತು.

    ಪಶ್ಚಿಮಾ ಬಂಗಾಳದ ಕೊಚ್ಬೀಹರ್, ಜಲ್ಪೈಗುರಿ, ಪಹಾರ್ಪುರ್, ಗಂಗರಮ್‍ಪುರ್, ದಿನ್ಹಾಟ ಈ ಎಲ್ಲಾ ಕಡೆಯಲ್ಲಿ ಹಿಂಚಾಚಾರ ಹೆಚ್ಚಾಗಿದ್ದು, ಟಿಎಂಸಿ ಮತ್ತು ಬಿಜೆಪಿ ಕಾರ್ಯಕರ್ತರ ಮಾರಾಮಾರಿ ಇನ್ನೂ ನಿಂತಿಲ್ಲ. ಅದ್ದರಿಂದ ಭಟ್ಪಾರ, ಕಂಕಿನಾರ ಮತ್ತು ಪರ್ಗನಾಸ್ ಜಿಲ್ಲೆಯಲ್ಲಿ ಹೆಚ್ಚುವರಿ ಪೊಲೀಸ್ ಪಡೆಗಳನ್ನು ಕಳುಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

    ಒಟ್ಟು 42 ಲೋಕಸಭಾ ಕ್ಷೇತ್ರಗಳನ್ನು ಹೊಂದಿರುವ ಪಶ್ಚಿಮ ಬಂಗಾಳದಲ್ಲಿ 22 ಸ್ಥಾನಗಳನ್ನು ಟಿಎಂಸಿ ಪಕ್ಷ ಗೆದ್ದರೆ 18 ಸ್ಥಾನಗಳನ್ನು ಬಿಜೆಪಿ ಗೆದ್ದುಕೊಂಡಿದೆ.

  • ಕಾಂಗ್ರೆಸ್ ಕಾರ್ಯಕರ್ತನಿಂದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಲ್ಲೆ

    ಕಾಂಗ್ರೆಸ್ ಕಾರ್ಯಕರ್ತನಿಂದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಲ್ಲೆ

    ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತನಿಂದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

    ಕಾಂಗ್ರೆಸ್ ಕಾರ್ಯಕರ್ತ ಮಂಜು ಅಲಿಯಾಸ್ ಮಂಜುನಾಥ್ ಹಲ್ಲೆ ನಡೆಸಿದ್ದಾನೆ. ತಂದೆ ಮಂಜು ನೀಚ ಕೆಲಸಕ್ಕೆ ಮಗ ಕಿರಣ್ ಕುಮಾರ್ ಸಾಥ್ ನೀಡಿದ್ದಾನೆ. ರಿಯಲ್ ಎಸ್ಟೇಟ್ ಉದ್ಯಮಿ ಮಲ್ಲಿಕಾರ್ಜುನ್ ಮೇಲೆ ಹಲ್ಲೆ ಮಾಡಿ ಕಿಡ್ನ್ಯಾಪ್ ಗೆ ಯತ್ನಿಸಲಾಗಿದೆ.

    ಕಳೆದ 7ರಂದು ಬೆಂಗಳೂರಿನ ಬಿಟಿಎಂ ಲೇಔಟ್‍ನ ಕೃಷ್ಣ ಭವನ್ ಹೋಟೆಲ್ ಬಳಿ ಈ ಘಟನೆ ನಡೆದಿದೆ. ಹಲ್ಲೆಗೊಳಗಾದ ವೇಳೆ ತಕ್ಷಣ ಮಲ್ಲಿಕಾರ್ಜುನ್ ಮೈಕೋ ಲೇಔಟ್ ಠಾಣೆಗೆ ಕರೆ ಮಾಡಿದ್ದಾರೆ. ಹೊಯ್ಸಳ ಸಿಬ್ಬಂದಿ ಸ್ಥಳಕ್ಕಾಗಮಿಸಿದ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

    ಕಾರು ಹಾಗೂ ಬೈಕ್‍ನಲ್ಲಿ ಬಂದ ಏಳೆಂಟು ಜನ ಸಹಚರರಿಂದ ಕಿಡ್ನ್ಯಾಪ್‍ಗೆ ಯತ್ನ ನಡೆದಿದೆ. ಹಣಕಾಸು ವಿಚಾರಕ್ಕಾಗಿ ಹಲ್ಲೆ ನಡೆಸಿರುವ ಬಗ್ಗೆ ಶಂಕೆ ವ್ಯಕ್ತವಾಗಿದ್ದು, ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಈ ಗಲಾಟೆಯ ಸಂಪೂರ್ಣ ಚಿತ್ರ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

  • ಮಂಡ್ಯದವರನ್ನು ದಡ್ಡರನ್ನಾಗಿ ಮಾಡ್ಬೇಡಿ, ಮುದಿ ಎತ್ತುಗಳನ್ನು ಸಂತೆಗೆ ಕಳಿಸ್ತೀವಿ: ಸಿಎಂಗೆ ಟಾಂಗ್ ವಿಡಿಯೋ

    ಮಂಡ್ಯದವರನ್ನು ದಡ್ಡರನ್ನಾಗಿ ಮಾಡ್ಬೇಡಿ, ಮುದಿ ಎತ್ತುಗಳನ್ನು ಸಂತೆಗೆ ಕಳಿಸ್ತೀವಿ: ಸಿಎಂಗೆ ಟಾಂಗ್ ವಿಡಿಯೋ

    ಮಂಡ್ಯ: ದರ್ಶನ್ ಹಾಗೂ ಯಶ್ ಜೋಡೆತ್ತಲ್ಲ ನಾನು, ಡಿಕೆಶಿ ಜೋಡೆತ್ತುಗಳು ಎಂಬ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಬಿಜೆಪಿ ಕಾರ್ಯಕರ್ತ ವ್ಯಂಗ್ಯವಾಗಿ ಮಾತನಾಡಿದ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ಎರಡು ಎತ್ತುಗಳ ಮಧ್ಯೆ ನಿಂತು ಸಿಎಂ ಹೇಳಿಕೆಗೆ ತಿರುಗೇಟು ನೀಡಿದ್ದಾರೆ. ನಾವೂ ಒಂಟಿ ಒಂಟಿ ಎತ್ತುಗಳನ್ನು ಜೊತೆ ಹಾಕಿದ್ದೇವೆ, ಆದರೆ ಅವು ಕೂಡಲೇ ಇಲ್ಲ. ಒಂದು ಕನಕಪುರದ ಬಿಳಿ ಎತ್ತು, ಇನ್ನೊಂದು ಹಾಸನದ ಕರಿ ಎತ್ತು. ಕರಿ ಎತ್ತಿನ ಜೊತೆ ಸೇರಿ ಬಿಳಿ ಎತ್ತು ಹಾಳಾಗಿದೆ. ಕರಿ ಎತ್ತಿನ ಜೊತೆ ಸೇರಿ ಹಾಳಾಗಬೇಡ ಎಂದು ಬಿಳಿ ಎತ್ತಿಗೆ ಕಿವಿಮಾತು ಹೇಳಿದ್ದೇನೆ ಎಂದು ಕಾರ್ಯಕರ್ತ ವ್ಯಂಗ್ಯವಾಡಿದ್ದಾರೆ.

    ಅಲ್ಲದೆ ಮುದಿ ಎತ್ತುಗಳು ಕೆಲಸ ಮಾಡಲ್ಲ, ಮೇ 23ರಂದು ಈ ಮುದಿ ಎತ್ತುಗಳನ್ನು ಸಂತೆಗೆ ಕೊಟ್ಟು ಬಿಡುತ್ತೀವಿ. ಮಂಡ್ಯ ಜನರನ್ನು ದಡ್ಡರು ಮಾಡಬೇಡಿ. ಮುದಿ ಎತ್ತುಗಳನ್ನು ಮಂಡ್ಯ ಜನರು ಸಂತೆಗೆ ಕಳುಹಿಸಲಿದ್ದಾರೆ ಎಂದು ಸಿಎಂ ವಿರುದ್ಧ ಕಿಡಿಕಾರಿದ್ದಾರೆ.

    ಖಾಸಗಿ ಹೋಟೆಲ್‍ನಲ್ಲಿ ಸುಮಲತಾ ನಡೆಸಿದ ಸುದ್ದಿಗೋಷ್ಠಿ ವೇಳೆ, ದರ್ಶನ್ ಇರುವಾಗ ಅಲ್ಲಿ ನಾನ್ಯಾಕೆ ಎಂಬ ಕಿಚ್ಚ ಸುದೀಪ್ ಹೇಳಿಕೆಗೆ ದರ್ಶನ್ ಪ್ರತಿಕ್ರಿಯಿಸಿ, ನಾನೊಬ್ನೇ ಇಲ್ಲ. ನಮ್ ಹೀರೋ ಯಶ್ ಸಹಾ ಇದ್ದಾರೆ. ನಮ್ಮದು ಒಂಟಿ ಎತ್ತಲ್ಲ. ನಮ್ಮದು ಜೋಡಿ ಎತ್ತು. ಸುದೀಪ್ ಪ್ರಚಾರ ಮಾಡುವ ಬಗ್ಗೆ ಗೊತ್ತಿಲ್ಲ. ಅವರನ್ನೇ ಕೇಳಬೇಕು ಎಂದು ಪ್ರತಿಕ್ರಿಯಿಸಿದ್ದರು.

    ಸಿಎಂ ಕುಮಾರಸ್ವಾಮಿ ಒಹೋ ಇವು ಜೋಡೆತ್ತುಗಳಂತೆ, ಇವು ಉಳುವ ಎತ್ತುಗಳಲ್ಲ. ರೈತರು ಬೆಳೆದ ಪೈರನ್ನು ಅರ್ಧ ರಾತ್ರಿ ಹೋಗಿ ತಿನ್ನುವ ಎತ್ತುಗಳು. ಜಿಲ್ಲೆಯಲ್ಲಿ ಹಲವು ದುರಂತಗಳು ನಡೆದಾಗ ಎಲ್ಲಿದ್ದರು? ಅಮ್ಮನ ಮೇಲಿನ ಪ್ರೀತಿಯಿಂದ ಅವರನ್ನು ಉಳಿಸಲು ಬಂದಿದ್ದಾರಲ್ಲ. ಅಂದು ನಡೆದ ದುರಂತದಲ್ಲಿ ನೀರಲ್ಲಿ ಬಿದ್ದಿದ್ದ ಶವಗಳನ್ನು ತೆಗೆಯಲು ಅವರು ಬಂದಿದ್ದರ ಎಂದು ಪ್ರಶ್ನಿಸಿ ಸಿಎಂ ದರ್ಶನ್ ಮತ್ತು ಯಶ್ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು.

  • ಅಧಿಕಾರ ಮುಖ್ಯವಲ್ಲ, ನಂಬಿದ ಕಾರ್ಯಕರ್ತರು ಮುಖ್ಯ: ಡಿಸಿಎಂಗೆ ಪತ್ರ

    ಅಧಿಕಾರ ಮುಖ್ಯವಲ್ಲ, ನಂಬಿದ ಕಾರ್ಯಕರ್ತರು ಮುಖ್ಯ: ಡಿಸಿಎಂಗೆ ಪತ್ರ

    ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರ ಜೆಡಿಎಸ್‍ಗೆ ಬಿಟ್ಟು ಕೊಟ್ಟ ಹಿನ್ನೆಲೆಯಲ್ಲಿ ಡಿಸಿಎಂ ಪರಮೇಶ್ವರ್ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರ ಬೇಸರ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಡಿಸಿಎಂಗೆ, ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟದ ಅಧ್ಯಕ್ಷ ಎಂ.ಡಿ.ಲಕ್ಷ್ಮಿ ನಾರಾಯಣ ಪತ್ರ ಬರೆದಿದ್ದಾರೆ.

    ಪತ್ರದಲ್ಲಿ ಏನಿದೆ?
    ಮಾನ್ಯ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ.ಜಿ. ಪರಮೇಶ್ವರ್ ರವರಿಗೆ ನಮ್ಮ ಜನರ ನಾಡಿ ಮಿಡಿತವನ್ನು ತಮ್ಮ ಅವಗಾನೆಗೆ ತಿಳಿಸುವೆ. ಮಾನ್ಯರೇ, ತಮಗೆ ರಾಜಕೀಯ ಅನುಭವ ಹಾಗೂ ಸತತ 7 ವರ್ಷಗಳ ಕಾಲ ರಾಜಾಧ್ಯಕ್ಷರಾಗಿ ಅಪಾರ ಅನುಭವ ಹೊಂದಿದ್ದೀರಿ. ತುಮಕೂರು ಲೋಕಸಭಾ ಸ್ಥಾನ ಹಾಲಿ ಸಂಸದರಿಗೆ ನೀಡದಿರುವ ಬಗ್ಗೆ ಗೊಂದಲ ಸೃಷ್ಟಿಯಾಗಿದೆ. ಇಡೀ ಜಿಲ್ಲೆಯಲ್ಲಿ ಹಾಗೂ ರಾಜ್ಯಾದ್ಯಂತ ಚರ್ಚೆಯಾಗುತ್ತಿದ್ದು, ತಾವು ಪಕ್ಷದ ಮೇಲೆ ಮುನಿಸು ಎಂಬ ಮಾಧ್ಯಮ ವರದಿ ನಗೆ ಪಾಟೀಲಗುವ ಹಂತದಲ್ಲಿ ಬಂದಿದೆ.

    ತಾವು ಉಪ ಮುಖ್ಯಮಂತ್ರಿಗಳಾಗಿ ಸರ್ಕಾರದ ಭಾಗಿಗಳಾಗಿ ಹೈಕಮಾಂಡ್‍ಗೆ ತುಂಬಾ ಹತ್ತಿರಾಗಿದ್ದೀರಿ. ತಾವು ನಿರ್ವಹಿಸುವ ಜಿಲ್ಲೆಗೆ ಲೋಕಸಭಾ ಸೀಟು ಕೊಡಿಸಲು ಸಾಧ್ಯವಾಗಲಿಲ್ಲ ಎಂದರೆ ನಗೆಪಾಟಲು ಆಗುವ ಸಾಧ್ಯತೆಗಳು ಜಾಸ್ತಿಯಾಗಿದೆ. ಆದ ಕಾರಣ ತಕ್ಷಣವೇ ತುಮಕೂರು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಸಭೆ ಕರೆದು ಮುಂದಿನ ನಿರ್ಣಯದ ಬಗ್ಗೆ ತೀರ್ಮಾನ ತೆಗೆದುಕೊಳ್ಳಿ. ಅಧಿಕಾರ ಮುಖ್ಯವಲ್ಲ ಕೇವಲ ಮುಂದಿನ ಎರಡು ತಿಂಗಳಲ್ಲಿ ನಿಮ್ಮ ಅಧಿಕಾರ ಇರುತ್ತೋ ಇಲ್ಲವೋ ತಿಳಿಯದು, ನಂಬಿದ ಜಿಲ್ಲೆಯ ಜನರಿಗೆ ಕಾರ್ಯಕರ್ತರಿಗೆ ಆಗಿರುವ ಅವಮಾನ ಅಷ್ಟಿಷ್ಟಲ್ಲ. ಇದಕ್ಕೆ ತಾವೇ ಉತ್ತರ ಕೊಡಬೇಕಾಗುತ್ತದೆ.

    ಈಗಲೂ ಕಾಲ ಮಿಂಚಿಲ್ಲ ತಡ ಮಾಡದೇ ಮಾನ್ಯ ಸಂಸದರಾದ ಮುದ್ದ ಹನುಮೇಗೌಡರಿಗೆ ಸೀಟು ಕೊಡಿಸುವ ಜವಾಬ್ದಾರಿ ನಿಮ್ಮ ಮೇಲಿದೆ. ಇಲ್ಲದಿದ್ದರೆ ಮುಂದಿನ ರಾಜಕೀಯ ಭವಿಷ್ಯ ಕತ್ತಲಾದೀತು. ಉಪ ಮುಖ್ಯಮಂತ್ರಿಗಳ ಸ್ಥಾನ ಮುಖ್ಯವಲ್ಲ ನಂಬಿದ ಕಾರ್ಯಕರ್ತರು ಮುಖ್ಯ ಎಂಬುದು ಮರೆಯಬೇಡಿ. ಮುಂದೆ ನುಗ್ಗಿ ನಿಮ್ಮ ಜೊತೆ ಸದಾ ನಾವಿದ್ದೇವೆ. ನನಗೆ ರಾಜಕಾರಣದ ಕುತಂತ್ರದ ಅರಿವಿದೆ. ಆದರೆ ನಾನು ಮಾತನಾಡುವ ಹಾಗಿಲ್ಲ. ಪಕ್ಷದ ಪ್ರಾಮಣಿಕ ಕಾರ್ಯಕರ್ತನಾಗಿ ಮುಂದಿನ ರಾಜಕೀಯ ಸೂಚನೆ ತಿಳಿಸಿರುವೆ.

    ತಾವು ತುಂಬಾ ಬಿಡುವು ಇಲ್ಲದಿರುವ ಹಾಗೂ ಅನೇಕ ಬಾರಿ ತಮ್ಮ ಮನೆಗೆ ಹಾಗೂ ಕಛೇರಿಗೆ ಬಂದರೂ ಭೇಟಿ ಮಾಡಲು ಸಾಧ್ಯವಾಗದಿರುವ ಕಾರಣ ಈ ಮೂಲಕ ತಮಗೆ ವಿನಂತಿಸುವೆ. ದಿಟ್ಟ ಹೆಜ್ಜೆ ಇಡಿ. ಧನ್ಯವಾದಗಳು. ಎಂ.ಡಿ.ಲಕ್ಷ್ಮಿನಾರಾಯಣ (ಅಣ್ಣಯ್ಯ) ಮಾಜಿ ಶಾಸಕರು, ಅಧ್ಯಕ್ಷರು ಹಿಂದುಳಿದ ವರ್ಗಗಳ ವಿಭಾಗ. ಪ್ರದೇಶ ಕಾಂಗ್ರೆಸ್ ಸಮಿತಿ. ಕರ್ನಾಟಕ ಅಧ್ಯಕ್ಷರು ರಾಜ್ಯ ನೇಕಾರ ಸಮುದಾಯಗಳ ಒಕ್ಕೂಟ.

  • ಸಂಸದ ನಳಿನ್​ಕುಮಾರ್​ಗೆ ಟಿಕೆಟ್ ನೀಡಿದ್ರೆ ಆತ್ಮಹತ್ಯೆ..!

    ಸಂಸದ ನಳಿನ್​ಕುಮಾರ್​ಗೆ ಟಿಕೆಟ್ ನೀಡಿದ್ರೆ ಆತ್ಮಹತ್ಯೆ..!

    – ಪಕ್ಷದ ಕಾರ್ಯಕರ್ತನಿಂದ ಬೆದರಿಕೆ

    ಮಂಗಳೂರು: ಸಂಸದ ನಳಿನ್ ಕುಮಾರ್ ಗೆ ಈ ಬಾರಿ ಬಿಜೆಪಿ ಟಿಕೆಟ್ ನೀಡಿದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪಕ್ಷದ ಕಾರ್ಯಕರ್ತನೊಬ್ಬ ಬೆದರಿಕೆ ಹಾಕಿದ್ದಾನೆ.

    ಶಕ್ತಿಕೇಂದ್ರ ಕಾರ್ಯಕರ್ತರ ಸಮಾವೇಶಕ್ಕೆ ಬರುವಂತೆ ಕಾರ್ಯಕರ್ತನೊಬ್ಬ ಕರೆ ಮಾಡಿದಾಗ, ಈ ಮಾತು ಹೇಳಿದ್ದು ತುಳುವಿನಲ್ಲಿರುವ ಆಡಿಯೋ ಈಗ ಭಾರೀ ವೈರಲ್ ಆಗಿದೆ.

    ಈ ಬಾರಿ ಯಾವುದೇ ಕಾರಣಕ್ಕೂ ನಳಿನ್ ಪರವಾಗಿ ಮತ ಯಾಚನೆಗೆ ಬರುವುದಿಲ್ಲ. ಗಲಾಟೆ, ಕೇಸ್ ಗಳಾದಾಗ ಹತ್ತಿರ ಸುಳಿಯದ ನಳಿನ್ ಯಾಕೆ ಬೇಕು. ಠಾಣೆಗೂ ಬರಲಾಗದವನು ಮತ್ತೆ ಆಯ್ಕೆಯಾಗಬಾರದು ಎಂದು ಆಕ್ರೋಶ ವ್ಯಕ್ತಪಡಿಸುತ್ತಾ ಈ ಬಾರಿ ಟಿಕೆಟ್ ನೀಡಿದರೆ ಬಿಜೆಪಿ ಕಚೇರಿ ಮುಂದೆ ಆತ್ಮಹತ್ಯೆ ಮಾಡಿಕೊಳ್ತೇನೆ ಅನ್ನುವ ಬೆದರಿಕೆ ಒಡ್ಡಿದ್ದಾನೆ.

    ಸಂಭಾಷಣೆ ನಡೆಸಿರುವ ಇಬ್ಬರೂ, ಪುತ್ತೂರಿನ ಬಿಜೆಪಿ ಕಾರ್ಯಕರ್ತರಾಗಿದ್ದು ಈ ಬಾರಿ ನಳಿನ್ ಪರ ಕೆಲಸ ಮಾಡುವುದಿಲ್ಲ ಎಂದು ಹೇಳಿಕೊಂಡಿದ್ದಾರೆ. ಅಲ್ಲದೆ, ತಮ್ಮ ಒಟ್ಟಿಗಿರುವ ಹುಡುಗರನ್ನೂ ಕಳಿಸಿಕೊಡಲ್ಲ ಎಂದು ಹೇಳುತ್ತಾರೆ.

    ಸುಳ್ಯ, ಪುತ್ತೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗದ ಬಿಜೆಪಿ ಕಾರ್ಯಕರ್ತರು ನಳಿನ್ ಬಗ್ಗೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ನಳಿನ್ ಬದಲಾವಣೆ ಬಯಸಿ ಪೋಸ್ಟ್ ಮಾಡಿದ್ದಾರೆ. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸರ್ವೆಯಲ್ಲೂ ನಳಿನ್ ಬಗ್ಗೆ ನೆಗೆಟಿವ್ ಬಂದಿದ್ದು ಈ ಬಾರಿ ಅಭ್ಯರ್ಥಿ ಬದಲಾಯಿಸಲು ಬಯಸಿದ್ದಾರೆ ಅನ್ನುವುದು ತಿಳಿದುಬಂದಿತ್ತು.

  • ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಅಕ್ರಮ ಸೀಮೆಎಣ್ಣೆ ಸಾಗಾಟ ಮಾಡ್ತಿದ್ದ ಕ್ಯಾಂಪ್ ಮೇಲೆ ಅಧಿಕಾರಿಗಳು ದಾಳಿ

    ಪಬ್ಲಿಕ್ ಟಿವಿ ಇಂಪ್ಯಾಕ್ಟ್- ಅಕ್ರಮ ಸೀಮೆಎಣ್ಣೆ ಸಾಗಾಟ ಮಾಡ್ತಿದ್ದ ಕ್ಯಾಂಪ್ ಮೇಲೆ ಅಧಿಕಾರಿಗಳು ದಾಳಿ

    ಕೊಪ್ಪಳ: ಬಡವರ ಮನೆ ಸೆರಬೇಕಿದ್ದ ಸರ್ಕಾರದ ಸೀಮೆ ಎಣ್ಣೆ ಜೆ.ಡಿ.ಎಸ್ ಕಾರ್ಯಕರ್ತನೊಬ್ಬನ ಮನೆ ಸೇರುತ್ತಿರುವ ಕುರಿತು ಪಬ್ಲಿಕ್ ಟಿವಿ ನಡೆಸಿದ ರಿಯಾಲಿಟಿ ಚೆಕ್‍ನಲ್ಲಿ ಕಾರ್ಯಕರ್ತನ ಬಂಡವಾಳ ಬಯಲು ಮಾಡಿದ್ದು, ಇದೀಗ ಆಹಾರ ಇಲಾಖೆಯ ಅಧಿಕಾರಿಗಳು ಅಂಗಡಿ ಸಂಗಣ್ಣ ಕ್ಯಾಂಪ್ ಮೇಲೆ ದಾಳಿ ನಡೆಸಿದ್ದಾರೆ.

    ಈ ವೇಳೆ ಅಧಿಕಾರಿ ಎಸ್.ಐ. ಬಾಗಲಿಯವರು 9 ತುಂಬಿದ ಬ್ಯಾರಲ್, 30 ಖಾಲಿ ಬ್ಯಾರಲ್ ಮತ್ತು 50 ಖಾಲಿ ಸೀಮೆ ಎಣ್ಣೆ ಡಬ್ಬಗಳನ್ನು ವಶಕ್ಕೆ ಪಡೆದಿದ್ದಾರೆ. ಆಕ್ರಮ ಮಾಡುವವರನ್ನು ಬಿಟ್ಟು ಮನೆ ಬಾಡಿಗೆ ಕೊಟ್ಟವರ ಮೇಲೆ ಅಧಿಕಾರಿಗಳು ಪ್ರಕರಣ ದಾಖಲಿಲಿಸಿದ್ದಾರೆ. ಗಂಗಾವತಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

    ಘಟನೆ ವಿವರ:
    ಕೊಪ್ಪಳದ ಗಂಗಾವತಿ ನಿವಾಸಿ ಆಗಿರುವ ಶೇಖ್ ನಭಿಸಾಭ ಗಂಗಾವತಿ ನಗರ ಸಭೆಯ ಮಾಜಿ ಸದಸ್ಯ. ಈಗ ರಾಜ್ಯದಲ್ಲಿ ಅಧಿಕಾರದಲ್ಲಿರೋ ಜೆಡಿಎಸ್ ಪಕ್ಷದ ನಗರಘಟಕದ ಅಧ್ಯಕ್ಷನೂ ಆಗಿದ್ದಾನೆ. ಈತನಿಗೆ ಸಹೋದರರಾದ ಉಮರ್ ಮತ್ತು ಅಮೀದ್ ಸಾಥ್ ನೀಡುತ್ತಿದ್ದರು. ಪ್ರತಿ ತಿಂಗಳು ತಾಲೂಕಿನ ಹಳ್ಳಿಗಳ ಸೊಸೈಟಿಗೆ ಹೋಗಬೇಕಾದ ಸೀಮೆಎಣ್ಣೆ, ನೇರವಾಗಿ ಗಂಗಾವತಿಯಲ್ಲಿ ಇರುವ ಈತನ ಮನೆ ಸೇರುತ್ತಿದೆ. ಈತ ಅದೆಷ್ಟು ಪ್ರಭಾವಿ ಅಂದರೆ, ಗಂಗಾವತಿಯ ಮುರಾರಿ ನಗರದಲ್ಲಿರುವ ಗುರುರಾಜ್ ಮತ್ತು ಶ್ರೀನಿವಾಸ್ ಎಂಬ ಬಂಕ್‍ಗಳ ಮಾಲೀಕರ ಜೊತೆ ಸೆಟ್ಲ್ ಮೆಂಟ್ ಮಾಡ್ಕೊಂಡು ಅಲ್ಲಿಂದ ನೇರವಾಗಿ ತಮ್ಮ ಮನೆಗೆ ಬ್ಯಾರಲ್‍ಗಳಲ್ಲಿ ಹಾಕಿಸಿಕೊಳ್ತಾನೆ ಎಂದು ಸ್ಥಳೀಯರಾದ ಮೊಹಮ್ಮದ್ ಜಾಕೀರ್ ಆರೋಪಿಸಿದ್ದರು.

    ಹೀಗೆ ಅಕ್ರಮವಾಗಿ ಸಂಗ್ರಹಿಸಿದ ಸೀಮೆಎಣ್ಣೆ ಕ್ಯಾನ್‍ಗಳನ್ನು ಆಟೋಗಳ ಮೂಲಕ ಬೇರೆಡೆಗೆ ರಾತ್ರೊರಾತ್ರಿ ಸಾಗಿಸ್ತಾನೆ. ಇದನ್ನು ಪ್ರಶ್ನೆ ಮಾಡಲು ಹೋದ್ರೆ ಬೆದರಿಕೆ ಹಾಕಿ ಅಲ್ಲಿಂದ ಜಾಗ ಖಾಲಿ ಮಾಡಿಸುತ್ತಾನೆ. ಸಿಟಿ ಮಧ್ಯಭಾಗದಲ್ಲೆ ಇಷ್ಟೆಲ್ಲ ಅಕ್ರಮ ನಡೆಯುತ್ತಿರೋ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರೆ ಯಾವೊಬ್ಬ ಅಧಿಕಾರಿಗಳು ಕ್ಯಾರೆ ಅಂದಿಲ್ಲ ಎಂದು ಜಾಕೀರ್ ಗರಂ ಆಗಿದ್ದರು. ಈ ಕುರಿತು ಇಂದು ಬೆಳಗ್ಗೆ ಪಬ್ಲಿಕ್ ಟಿವಿ ಸುದ್ದಿ ಪ್ರಸಾರ ಮಾಡಿತ್ತು. ಈ ಬೆನ್ನಲ್ಲೇ ಎಚ್ಚೆತ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv