Tag: ಕಾರ್ಯಕ್ರಮ

  • ಉಡುಪಿ ಗಣರಾಜ್ಯೋತ್ಸವದಲ್ಲಿ ಸುಲ್ತಾನ್ ಕಮಾಲ್..!

    ಉಡುಪಿ ಗಣರಾಜ್ಯೋತ್ಸವದಲ್ಲಿ ಸುಲ್ತಾನ್ ಕಮಾಲ್..!

    ಉಡುಪಿ: 70ನೇ ಗಣರಾಜ್ಯೋತ್ಸವವನ್ನು ಉಡುಪಿಯಲ್ಲೂ ಸಂಭ್ರಮದಿಂದ ಆಚರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವೆ ಜಯಮಾಲಾ ಧ್ವಜಾರೋಹಣ ಮಾಡಿದ್ದಾರೆ. ಗಣರಾಜ್ಯೋತ್ಸವ ಮೈದಾನದಲ್ಲಿ ಸುಲ್ತಾನನ ರಾಜನಡೆ ಎಲ್ಲರ ಗಮನ ಸೆಳೆಯಿತು.

    ಉಡುಪಿ ಉಸ್ತುವಾರಿ ಸಚಿವೆ ಜಯಮಾಲಾ ತಿರಂಗ ಧ್ವಜ ಹಾರಿಸುವ ಮೂಲಕ ಉಡುಪಿಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು. ವಿವಿಧ ತಂಡಗಳ ಶಿಸ್ತು ಬದ್ಧ ಆಕರ್ಷಕ ಪಥಸಂಚಲನ ನಡೆಯಿತು. ಸಚಿವರು ತೆರೆದ ವಾಹನದಲ್ಲಿ ನಿಂತು ಗೌರವ ಸ್ವೀಕರಿಸಿದರು. ಈ ಸಂದರ್ಭ ರಾಯಚೂರಿನಲ್ಲಿ ನಡೆದ ಪಶುಮೇಳದ ಚಾಂಪಿಯನ್ ಒಂಗೋಲ್ ತಳಿಯ ಹೋರಿಯ ಪ್ರದರ್ಶನ ನಡೆಯಿತು.

    ದಷ್ಟ ಪುಷ್ಟ ಹೋರಿ, ಅದರ ಮೇಲೆ ಕುಳಿತು ಬಂದ ಪುಟ್ಟ ಪೋರ ಫೈಜಾನ್ ಎಲ್ಲರ ಗಮನ ಸೆಳೆದರು. ಮೈದಾನಕ್ಕೆ ತ್ರಿವರ್ಣ ಧ್ವಜ ಹಿಡಿದು ಒಂದು ಸುತ್ತು ಬಂದ ಮನಾಮಾ ಫಾರ್ಮ್ ಹೌಸ್ ತಂಡ, ಚಾಂಪಿಯನ್ ಪಟ್ಟ ಸಿಕ್ಕ ಸಂದರ್ಭದ ಮೆಡಲ್ ಮತ್ತು ಟ್ರೋಫಿಯನ್ನು ಪ್ರದರ್ಶನ ಮಾಡಿತು.

    ಆರು ವರ್ಷ ವಯಸ್ಸಿನ ಸುಲ್ತಾನ 1,462 ಕಿಲೋ ತೂಗುತ್ತಾನೆ. ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ 3,000 ಜಾನುವಾರುಗಳು, 200 ಗೂಳಿಗಳನ್ನು ಹಿಂದಿಕ್ಕಿ ಚಾಂಪಿಯನ್ ಪಟ್ಟ ಪಡೆದುಕೊಂಡಿತ್ತು. ಉಡುಪಿಯ ಉಪ್ಪಿನ ಕೋಟೆಯ ಮನಮ ಫಾರ್ಮ್ ಹೌಸ್ ನ ಇರ್ಷಾದ್ ಮಾತನಾಡಿ, ಫಾರ್ಮ್ ಹೌಸ್ ನಲ್ಲಿ ಮೂವತ್ತು ತಳಿಗಳು ನಮ್ಮಲ್ಲಿದೆ. ನಾಲ್ಕು ಭಾರತೀಯ ತಳಿಗಳನ್ನು ಬೆಳೆಸುತ್ತಿದ್ದೇವೆ. ಸುಲ್ತಾನ್ ನೋಡಲು ಮಾತ್ರ ದೈತ್ಯ ಆದ್ರೆ ಬಹಳ ಸಾಧು ಸ್ವಭಾವದವ ಎಂದು ಹೇಳಿದರು.

    ಇಂದಿನ ಗಣರಾಜ್ಯೋತ್ಸವದ ಆಕರ್ಷಣೆ ಕೇಂದ್ರಬಿಂದುವಾಗಿದ್ದ ಸುಲ್ತಾನನ ಜೊತೆ ನೂರಾರು ಜನ ಸೆಲ್ಫಿ ಕ್ಲಿಕ್ಕಿಸಿಕೊಂಡರು. 9ರ ಬಾಲಕ ಫೈಜಾನ್ ಸುಲ್ತಾನನಿಗೆ ಮೂಗುದಾರ ಹಾಕಿ ಸುತ್ತಾಡಿಸುತ್ತಿದ್ದುದನ್ನು ಕಂಡು ಜನ ಮೂಗಿನ ಮೇಲೆ ಬೆರಳಿಟ್ಟರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 70ನೇ ಗಣರಾಜ್ಯೋತ್ಸವ ಸಂಭ್ರಮ- ಸಕಲ ರೀತಿಯಲ್ಲೂ ರಾಜಪಥ್ ರೆಡಿ

    70ನೇ ಗಣರಾಜ್ಯೋತ್ಸವ ಸಂಭ್ರಮ- ಸಕಲ ರೀತಿಯಲ್ಲೂ ರಾಜಪಥ್ ರೆಡಿ

    ನವದೆಹಲಿ: ಇಂದು 70ನೇ ಗಣರಾಜ್ಯೋತ್ಸವದ ಸಂಭ್ರಮ. ರಾಷ್ಟ್ರ ರಾಜಧಾನಿ ನವದೆಹಲಿಯ ರಾಜಪಥ್ ರಸ್ತೆ ಕಾರ್ಯಕ್ರಮಕ್ಕೆ ಸಕಲ ರೀತಿಯಲ್ಲೂ ಸಜ್ಜಾಗಿದೆ.

    ದಟ್ಟ ಮಂಜು ಹಿನ್ನೆಲೆಯಲ್ಲಿ ಬೆಳಗ್ಗೆ 10ರಿಂದ ಕಾರ್ಯಕ್ರಮಗಳು ಆರಂಭವಾಗಲಿದೆ. ಈ ಬಾರಿ ದಕ್ಷಿಣ ಆಫ್ರಿಕಾ ಅಧ್ಯಕ್ಷ ಸಿರಿಲ್ ರಾಮಾಫೋಸಾ ಗಣರಾಜೋತ್ಸವದ ಅತಿಥಿ ಆಗಿದ್ದಾರೆ. ಇಂಡಿಯಾ ಗೇಟ್‍ನಲ್ಲಿರುವ ಅಮರ್ ಜವಾನ್ ಜ್ಯೋತಿ ಬಳಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಬಳಿಕ ಪ್ರಧಾನಿ, ಅತಿಥಿ, ಗಣ್ಯರ ಸಮ್ಮುಖದಲ್ಲಿ ರಾಷ್ಟ್ರಪತಿ ಕೋವಿಂದ್ ಧ್ವಜಾರೋಹಣ ಮಾಡಲಿದ್ದಾರೆ. ಇದನ್ನೂ ಓದಿ: ದೇಶದ ಹಬ್ಬಕ್ಕೆ ಕ್ಷಣಗಣನೆ : ಸಿಂಗಾರಗೊಂಡಿದೆ ರಾಜಪಥ್: ಈ ಬಾರಿಯ ಪರೇಡ್ ವಿಶೇಷತೆ ಏನು?

    ಈ ಬಾರಿ 16 ರಾಜ್ಯಗಳ ಮತ್ತು 6 ಇಲಾಖೆಗಳ ಒಟ್ಟು 22 ಸ್ತಬ್ಧ ಚಿತ್ರಗಳು ಪ್ರದರ್ಶನವಾಗುತ್ತಿದೆ. ಗಾಂಧೀಜಿ 150ನೇ ಜನ್ಮದಿನದ ಹಿನ್ನೆಲೆ ಸ್ತಬ್ಧ ಚಿತ್ರಗಳಲ್ಲಿ ವಿಶೇಷ ಗೌರವ ಸಲ್ಲಿಸಲಾಗುತ್ತಿದೆ. ಬೆಂಗಳೂರಿನ ಗೋಕುಲ್ ಎಕ್ಸ್ ಟೆನ್ಷನ್‍ನ ನಾವ್ಕೀಸ್ ಶಾಲೆಯ ವಿದ್ಯಾರ್ಥಿನಿ ದೇವಿಕಾ ಸಂತೋಷ್‍ಗೆ ಪ್ರ್ರಧಾನ ಮಂತ್ರಿ ಬಾಕ್ಸ್ ನಲ್ಲಿ ಕುಳಿತು ಪರೇಡ್ ವೀಕ್ಷಿಸುವ ಅವಕಾಶ ಸಿಕ್ಕಿದೆ.

    ಕಳೆದ ವರ್ಷದ ಸಿಬಿಎಸ್‍ಇ 10ನೇ ತರಗತಿಯಲ್ಲಿ ದೇವಿಕಾ ದೇಶಕ್ಕೇ ಅತೀ ಹೆಚ್ಚು ಅಂಕಗಳನ್ನು ಪಡೆದಿದ್ದರು. ಉಗ್ರರ ಕರಿನೆರಳಿನ ಭೀತಿಯಿಂದ ಎಲ್ಲೆಡೆ ಹದ್ದಿನ ಕಣ್ಣಿಡಲಾಗಿದೆ. ಇದನ್ನೂ ಓದಿ: ಫಸ್ಟ್ ಟೈಂ ಆರ್‌ಡಿಯಲ್ಲಿ ಪುರುಷ ದಳವನ್ನು ಮುನ್ನಡೆಸಲಿದ್ದಾರೆ ಮಹಿಳಾ ಅಧಿಕಾರಿ

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸಚಿವ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ಕ್ಲಾಸ್!

    ಸಚಿವ ಪ್ರಿಯಾಂಕ್ ಖರ್ಗೆಗೆ ವೇಣುಗೋಪಾಲ್ ಕ್ಲಾಸ್!

    ಬೆಂಗಳೂರು: ರಾಜ್ಯ ಸರ್ಕಾರ ಮೂರು ದಿನ ಶೋಕಾಚರಣೆಯ ಆದೇಶ ಹೊರಡಿಸಿದರೂ ಖಾಸಗಿ ಹೋಟೆಲಿನಲ್ಲಿ ಅದ್ಧೂರಿ ಕಾರ್ಯಕ್ರಮ ಆಯೋಜಿಸಿದ ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಅವರನ್ನು ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ತರಾಟೆಗೆ ತೆಗೆದುಕೊಂಡಿದ್ದಾರೆ.

    ಪ್ರಿಯಾಂಕ್ ಖರ್ಗೆ ಕಾರ್ಯಕ್ರಮಕ್ಕೆ ಭಾರೀ ಟೀಕೆ ಕೇಳಿ ಬಂದ ಹಿನ್ನೆಲೆಯಲ್ಲಿ ಈ ವಿಚಾರ ಹೈಕಮಾಂಡ್ ಅಂಗಳಕ್ಕೆ ತಲುಪಿತ್ತು. ಹೀಗಾಗಿ ಬೆಳ್ಳಂಬೆಳಗ್ಗೆ ಪ್ರಿಯಾಂಕ್ ಖರ್ಗೆಗೆ ಕರೆ ಮಾಡಿ ಕೆ.ಸಿ.ವೇಣುಗೋಪಾಲ್ ಕ್ಲಾಸ್ ತೆಗೆದುಕೊಂಡಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಸರ್ಕಾರದಿಂದ ರಜೆ ಘೋಷಣೆ – ಸಮಾಜ ಕಲ್ಯಾಣ ಇಲಾಖೆಯಿಂದ ಫೈವ್‍ಸ್ಟಾರ್ ಹೋಟೆಲ್‍ನಲ್ಲಿ ಕಾರ್ಯಕ್ರಮ!

    ಯಾವ ಸಂದರ್ಭದಲ್ಲಿ ಹೇಗೆ ನಡೆದುಕೊಳ್ಳಬೇಕು ಎಂಬ ಸಾಮಾನ್ಯ ಜ್ಞಾನ ನಿಮಗೆ ಇಲ್ಲದೇ ಹೋಯ್ತೇ? ಸಿದ್ದಗಂಗಾ ಶ್ರೀಗಳಂತ ಸಾಧಕರು ಅಗಲಿದಾಗ ಈ ಕಾರ್ಯಕ್ರಮ ನಡೆಸಿ ವಿವಾದ ಮಾಡಿಕೊಳ್ಳಬೇಕಾದ ಅವಶ್ಯಕತೆ ಏನಿತ್ತು? ಈ ವಿಚಾರಗಳು ಭಾವನಾತ್ಮಕವಾದ ವಿಷಯಗಳು ಎನ್ನುವುದು ನಿಮಗೆ ಗೊತ್ತಾಗುದಿಲ್ಲವೇ? ಇದರಿಂದ ಆಗುವ ಪರಿಣಾಮಗಳೇನು ಅಂತ ಯೋಚಿಸುವ ಶಕ್ತಿಯು ನಿಮಗಿಲ್ಲವೇ ಎಂದು ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅಷ್ಟೇ ಅಲ್ಲದೇ ಈ ವಿಚಾರವಾಗಿ ಬಹಿರಂಗವಾಗಿ ಕ್ಷಮೆ ಯಾಚಿಸುವಂತೆ ಪ್ರಿಯಾಂಕ್ ಖರ್ಗೆಗೆ ಸೂಚನೆಯನ್ನು ಕೂಡ ವೇಣುಗೋಪಾಲ್ ನೀಡಿದ್ದಾರೆ.

    ಸಮಾಜ ಕಲ್ಯಾಣ ಇಲಾಖೆ ಸಮಾನತೆ ಅನ್ವೇಷಣೆ ಸಂವಿಧಾನ ಸಂಭಾಷಣೆ ಕಾರ್ಯಕ್ರಮವನ್ನು ಬೆಂಗಳೂರಿನ ಅಶೋಕ ಹೋಟೆಲ್‍ನಲ್ಲಿ ಆಯೋಜಿಸಿದೆ. ಮಂಗಳವಾರ ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಲಿಂಗೈಕ್ಯರಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಬಳಿಕ ಕಾರ್ಯಕ್ರಮವನ್ನು ಮುಂದುವರಿಸಲಾಯಿತು. ಇಡೀ ರಾಜ್ಯವೇ ಶೋಕಾಚರಣೆ ಮಾಡುತ್ತಿರುವಾಗ ಈ ಕಾರ್ಯಕ್ರಮವನ್ನು ಆಯೋಜಿಸಿದ್ದು ತಪ್ಪು ಎಂದು ಬಿಜೆಪಿ ಆಕ್ಷೇಪಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲೂ ಪ್ರಿಯಾಂಕ್ ಖರ್ಗೆ ವಿರುದ್ಧ ಕಟು ಟೀಕೆ ವ್ಯಕ್ತವಾಗಿತ್ತು.

    https://www.youtube.com/watch?v=kX1PUyGudYg

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಕಾಫಿನಾಡಲ್ಲಿ ಸಿದ್ದಗಂಗಾ ಶ್ರೀಗಳ ಹೆಜ್ಜೆ ಗುರುತು

    ಕಾಫಿನಾಡಲ್ಲಿ ಸಿದ್ದಗಂಗಾ ಶ್ರೀಗಳ ಹೆಜ್ಜೆ ಗುರುತು

    ಚಿಕ್ಕಮಗಳೂರು: ಬದುಕೇ ಒಂದು ಸಂದೇಶದಂತೆ 111 ವರ್ಷ ಸಾರ್ಥಕ ಬದುಕು ನಡೆಸಿದ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಹೆಜ್ಜೆ ಗುರುತುಗಳು ಕಾಫಿನಾಡಲ್ಲೂ ಸಾಕಷ್ಟಿವೆ.

    ಶೃಂಗೇರಿ ಮಠದ 35ನೇ ಗುರುಗಳಾದ ಅಭಿನವ ವಿದ್ಯಾತೀರ್ಥರ ವರ್ಧಂತ್ಯುತ್ಸವ ಅಂಗವಾಗಿ 1973ರಲ್ಲಿ ನಡೆದ ಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನದಲ್ಲಿ ಸಿದ್ದಗಂಗಾ ಶ್ರೀಗಳು ಭಾಗವಹಿಸಿದ್ದರು. ಅದೇ ರೀತಿ 2003ರಲ್ಲಿ ರಂಭಾಪುರಿ ಪೀಠದಲ್ಲಿ ನಡೆದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ರಥೋತ್ಸವದ ಅಂಗವಾಗಿ ಆಯೋಜಿಸಿದ್ದ ಗುರುವಿರಕ್ತರ ಸಮಾವೇಶದಲ್ಲೂ ಸಿದ್ದಗಂಗಾ ಶ್ರೀಗಳು ಪಾಲ್ಗೊಂಡಿದ್ದರು.

    1995ರಲ್ಲಿ ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದ ವೀರಶೈವ ಸಮುದಾಯದವರು ಮಾಡಿಕೊಂಡಿದ್ದ ಬಸವ ಸಮಿತಿ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಶ್ರೀಗಳು ಉಪಸ್ಥಿತರಿದ್ದರು. ಇದೇ ವೇಳೆ ಕುದುರೆಮುಖದಲ್ಲಿ ಸ್ವಾಮೀಜಿ ಗಿಡವೊಂದನ್ನು ನೆಟ್ಟು, ಇಡೀ ಕುದುರೆಮುಖ ಕಂಪನಿಯನ್ನು ವೀಕ್ಷಣೆ ಮಾಡಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಸರ್ಕಾರದಿಂದ ರಜೆ ಘೋಷಣೆ – ಸಮಾಜ ಕಲ್ಯಾಣ ಇಲಾಖೆಯಿಂದ ಫೈವ್‍ಸ್ಟಾರ್ ಹೋಟೆಲ್‍ನಲ್ಲಿ ಕಾರ್ಯಕ್ರಮ!

    ಸರ್ಕಾರದಿಂದ ರಜೆ ಘೋಷಣೆ – ಸಮಾಜ ಕಲ್ಯಾಣ ಇಲಾಖೆಯಿಂದ ಫೈವ್‍ಸ್ಟಾರ್ ಹೋಟೆಲ್‍ನಲ್ಲಿ ಕಾರ್ಯಕ್ರಮ!

    – ಸಮಾನತೆ, ಅನ್ವೇಷಣೆ, ಸಂವಿಧಾನ, ಸಂಭಾಷಣೆ ಕಾರ್ಯಕ್ರಮ
    – ಅತಿಥಿಗಳಾಗಲಿದ್ದಾರೆ ಕನ್ಹಯ್ಯ ಕುಮಾರ್, ಓವೈಸಿ
    – ಪ್ರಿಯಾಂಕ್ ಖರ್ಗೆ ವಿರುದ್ಧ ಭಾರೀ ಟೀಕೆ

    ಬೆಂಗಳೂರು: ಸಿದ್ದಗಂಗಾ ಶ್ರೀಗಳು ಶಿವೈಕ್ಯರಾದ ಹಿನ್ನೆಲೆಯಲ್ಲಿ ಇಂದು ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದೆ. ಆದರೆ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮವನ್ನು ಆಯೋಜಿಸಿರುವುದಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಭಾರೀ ಟೀಕೆ ವ್ಯಕ್ತವಾಗಿದೆ.

    ಸಮಾಜ ಕಲ್ಯಾಣ ಇಲಾಖೆ ಎರಡು ದಿನಗಳ ಕಾಲ ಸಮಾನತೆ ಅನ್ವೇಷಣೆ ಸಂವಿಧಾನ ಸಂಭಾಷಣೆ ಕಾರ್ಯಕ್ರಮಕ್ಕೆ ಬೆಂಗಳೂರಿನ ಅಶೋಕ ಹೋಟೆಲ್ ನಲ್ಲಿ ಇಂದು ಚಾಲನೆ ಸಿಕ್ಕಿದೆ. ಮಾಜಿ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿರಿಂದ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದು, ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಲಿಂಗೈಕ್ಯರಾದ ಸಿದ್ದಗಂಗಾ ಶ್ರೀ ಶಿವಕುಮಾರ ಸ್ವಾಮೀಜಿ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಒಂದು ನಿಮಿಷ ಶ್ರೀಗಳಿಗೆ ಮೌನಾಚರಣೆ ಸಲ್ಲಿಸಿದ್ದಾರೆ.

    ಸಂವಿಧಾನದ ಸಂವಾದದ ಸಭೆಗೆ ಸಂಬಂಧಪಟ್ಟ ಅಧಿಕಾರಿ ಮತ್ತು ಸಿಬ್ಬಂದಿ ಹಾಜರಿರಬೇಕು ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಖಡಕ್ ಸೂಚನೆ ಕೊಟ್ಟಿದ್ದಾರೆ. ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ, ಮಾಜಿ ಕೇಂದ್ರ ಸಚಿವೆ ಅಂಬಿಕಾ ಸೋನಿ ಸೇರಿ ಹಲವರು ಭಾಗಿಯಾಗಿದ್ದಾರೆ.

    ಇತ್ತ ಅಶೋಕ ಹೊಟೇಲ್ ಮುಂದೆ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮಕ್ಕೆ ಕರುನಾಡ ಸೇವಕರು ಸಂಘಟನೆಯಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಕಾರ್ಯಕ್ರಮವನ್ನು ರದ್ದು ಮಾಡುವಂತೆ ಆಗ್ರಹಿಸಿದ್ದು, ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ.

    ಕನ್ನಯ್ಯ ಕುಮಾರ್, ಓವೈಸಿ ಕಾರ್ಯಕ್ರಮಕ್ಕೆ ಆಗಮನ ಹಿನ್ನೆಲೆಯಲ್ಲಿ ಕಾರ್ಯಕ್ರಮದಿಂದ ಬಿಜೆಪಿ ಗೋ ಮಧುಸೂದನ್ ವಾಪಸ್ ಆಗಿದ್ದಾರೆ. ಆದರೆ ಓವೈಸಿ ಆಗಮನಕ್ಕೆ ಕರುನಾಡ ಸೇನೆ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಶ್ರೀ ಶಿವಕುಮಾರ್ ಸ್ವಾಮೀಜಿ ಲಿಂಗೈಕ್ಯ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮವನ್ನು ಮಾಡಬಾರದಿತ್ತು ಆಗ್ರಹಿಸಿದ್ದಾರೆ.

    ಈ ಬಗ್ಗೆ ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಕರುನಾಡ ಸೇವಕರು ಮತ್ತು ಸಂಘಟನೆ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಸದ್ಯಕ್ಕೆ ಅಶೋಕ ಹೊಟೇಲ್ ಗೆ ಪೊಲೀಸ್ ಬಿಗಿ ಭದ್ರತೆ ಒದಗಿಸಲಾಗಿದೆ. ಇನ್ನೂ ಸಮಾಜ ಕಲ್ಯಾಣ ಇಲಾಖೆ ಕಾರ್ಯಕ್ರಮಕ್ಕೆ ಬಿಜೆಪಿ ಬಹಿಷ್ಕಾರ ಸೂಚಿಸಿದೆ.

    ಗೋ ಮಧುಸೂದನ್, ಲೆಹರ್ ಸಿಂಗ್ ಕಾರ್ಯಕ್ರಮದಿಂದ ವಾಪಸ್ಸಾಗಿದ್ದು, ಸರ್ಕಾರದ ವಿರುದ್ಧ ಇಬ್ಬರು ವಾಗ್ದಾಳಿ ಮಾಡಿದ್ದಾರೆ. ದೇಶದ ವಿರುದ್ಧ ಘೋಷಣೆ ಕೂಗಿದವರನ್ನ ಕಾರ್ಯಕ್ರಮಕ್ಕೆ ಕರೆದಿದ್ದಾರೆ. ಓವೈಸಿಯಂತಹ ದೇಶ ವಿರೋಧಿಗಳು ಭಾಗವಹಿಸುವ ಕಾರ್ಯಕ್ರಮದಲ್ಲಿ ನಾವು ಭಾಗವಹಿಸುವುದಿಲ್ಲ. ಸಿದ್ದಗಂಗಾ ಶ್ರೀಗಳ ಅಂತಿಮ ಯಾತ್ರೆ ನಡೆಯುತ್ತಿದ್ದರೂ ಸರ್ಕಾರ ಈ ಕಾರ್ಯಕ್ರಮವನ್ನು ಮಾಡುತ್ತಿದೆ. ಇದು ಸರಿಯಾದ ಪದ್ಧತಿ ಅಲ್ಲ ಎಂದು ಗೋ ಮಧುಸೂದನ್ ಹೇಳಿದರು.

    ಲೆಹರ್ ಸಿಂಗ್ ಕಿಡಿ: ಸಂವಿಧಾನದ ಬಗ್ಗೆ ಗೊತ್ತಿಲ್ಲದ ಜುಜುಬಿಗಳನ್ನ ಕರೆದುಕೊಂಡು ಕಾರ್ಯಕ್ರಮ ಮಾಡುತ್ತಿದ್ದಾರೆ. ಹಣ ಮಾಡಲು ಈ ಕಾರ್ಯಕ್ರಮವನ್ನು ಫೈವ್ ಸ್ಟಾರ್ ಹೋಟೆಲ್‍ನಲ್ಲಿ ಮಾಡುತ್ತಿದ್ದಾರೆ. ಈ ಕಾರ್ಯಕ್ರಮ ಒಂದು ಸ್ಕ್ಯಾಮ್ ಆಗಿದ್ದು, ನಾವು ಆರ್ ಟಿಐನಲ್ಲಿ ಮಾಹಿತಿ ಪಡೆದು ಈ ಹಗರಣ ಹೊರಗೆ ಹಾಕುತ್ತೇವೆ. ಸಂವಿಧಾನ ಗೊತ್ತಿಲ್ಲದವರು ಕಾರ್ಯಕ್ರಮ ಮಾಡುತ್ತಿದ್ದಾರೆ. ಕೂಡಲೇ ಈ ಬಗ್ಗೆ ಸರ್ಕಾರ ತನಿಖೆ ನಡೆಯಬೇಕು. ನಾಡಿನ ಜನ ಶೋಕದಲ್ಲಿ ಇದ್ರೆ, ಸಚಿವರು ಕಾರ್ಯಕ್ರಮ ಮಾಡಿ ಮಜಾ ಮಾಡುತ್ತಿದ್ದಾರೆ. ಸರ್ಕಾರದ ಈ ವರ್ತನೆಗೆ ಯಾವ ಪದ ಬಳಕೆ ಮಾಡಬೇಕು ಗೊತ್ತಾಗುತ್ತಿಲ್ಲ ಎಂದು ಸರ್ಕಾರದ ವಿರುದ್ಧ ಪರಿಷತ್ ಸದಸ್ಯ ಲೆಹರ್ ಸಿಂಗ್ ವಾಗ್ದಾಳಿ ಮಾಡಿದ್ದಾರೆ.

    ಕಾರ್ಯಕ್ರಮ ಮಾಡಲು ಇಂತಹ ಫೈವ್ ಸ್ಟಾರ್ ಹೋಟೆಲ್ ಬೇಕಾ? ಅಂಬೇಡ್ಕರ್ ಭವನ, ಇನ್ನಿತರ ಸರ್ಕಾರದ ಸ್ಥಳ ಇದ್ದರೂ ಇಂತಹ ಕಡೆ ಕಾರ್ಯಕ್ರಮ ಮಾಡಿದ್ದಾರೆ. ರೈತರು ಆತ್ಮಹತ್ಯೆ ಮಾಡಿಕೊಳುತ್ತಿದ್ದಾರೆ. ಅವರಿಗೆ ಕೊಡುವುದಕ್ಕೆ ಹಣ ಇಲ್ಲ. ಇಂತಹ ಕಾರ್ಯಕ್ರಮ ಮಾಡಿ ದುಡ್ಡು ಹೊಡೆಯೋದು ಸಚಿವರ ಪ್ಲಾನ್. ರೆಸಾರ್ಟ್ ನಲ್ಲಿ ಹೊಡೆದಾಡಿಕೊಂಡ ಕಾಂಗ್ರೆಸ್ ನವರು ಸಂವಿಧಾನದ ಬಗ್ಗೆ ಕಾರ್ಯಕ್ರಮ ಮಾಡುತ್ತಿರುವುದು ಹಾಸ್ಯಾಸ್ಪದ ಎಂದು ಲೆಹರ್ ಸಿಂಗ್ ಕಿಡಿಕಾರಿದರು.

    ಕನ್ನಯ್ಯ, ಓವೈಸಿ ಕಾರ್ಯಕ್ರಮ ರದ್ದಿಲ್ಲ ಏಕೆ? ಸಮಾಜ ಕಲ್ಯಾಣ ಎಂಬ ಈ ಇಲಾಖೆಯ ಅಜೆಂಡಾ ಏನು? ಎಂದು ಬಿಜಪಿ ಶಾಸಕ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನಿಸಿದ್ದಾರೆ.

    https://www.youtube.com/watch?v=8iVnMTXiYcI

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಯುಗಾದಿಗೆ ಸರ್ಕಾರ ಉಳಿಯುತ್ತೋ, ಉರುಳುತ್ತೋ ಗೊತ್ತಿಲ್ಲ: ಗೊಂದಲದ ಹೇಳಿಕೆ ಕೊಟ್ಟ ಡಿ.ಕೆ ಸುರೇಶ್

    ಯುಗಾದಿಗೆ ಸರ್ಕಾರ ಉಳಿಯುತ್ತೋ, ಉರುಳುತ್ತೋ ಗೊತ್ತಿಲ್ಲ: ಗೊಂದಲದ ಹೇಳಿಕೆ ಕೊಟ್ಟ ಡಿ.ಕೆ ಸುರೇಶ್

    ಬೆಂಗಳೂರು: ಮುಂಬರುವ ಯುಗಾದಿಗೆ ಸರ್ಕಾರ ಉಳಿಯುತ್ತೋ ಉರುಳುತ್ತೋ ಗೊತ್ತಿಲ್ಲ ಎಂಬ ಗೊಂದಲದ ಹೇಳಿಕೆಯನ್ನು ಸಂಸದ ಡಿಕೆ ಸುರೇಶ್ ಕಾರ್ಯಕರ್ತರ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದಾರೆ.

    ಬೆಂಗಳೂರು ಹೊರವಲಯ ಬನ್ನೇರುಘಟ್ಟ ಸಮೀಪದ ಮಂಟಪ ಗ್ರಾಮ ಪಂಚಾಯತ್ ಸಭೆಯಲ್ಲಿ ಮಾತನಾಡಿದ ಸಂಸದ ಡಿಕೆ ಸುರೇಶ್, ಮುಂದಿನ ಲೋಕಸಭಾ ಚುನಾವಣೆಗೆ ಎದುರಾಳಿ ಸ್ಪರ್ಧಿ ಆರ್ ಅಶೋಕ್ ಎಂದು ಯಾರೋ ಕೇಳಿದ್ದರು. ಆರ್. ಅಶೋಕ್ ಗೆ ಏಕೆ ಕಾಯೋದು ನರೇಂದ್ರ ಮೋದಿಯವರನ್ನೇ ಮೀಟ್ ಮಾಡುತ್ತೇನೆ. ಅವರೇ ಎದುರಾಳಿ ಅಭ್ಯರ್ಥಿ ಆದರೆ ಒಳ್ಳೆಯದು ಎಂದು ವ್ಯಂಗ್ಯವಾಡಿದರು.

    ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಗೂ ಬಿಜೆಪಿಯ ಆನೇಕರು ಹೇಳುತ್ತಿದ್ದರು ಹೊಸ ವರ್ಷಕ್ಕೆ ಸರ್ಕಾರ ಬೀಳುತ್ತೆ, ಸಂಕ್ರಾಂತಿಗೆ ಬೀಳುತ್ತೆ ಎಂದು. ನೋಡೋಣ ಮುಂಬರುವ ಯುಗಾದಿಗೆ ಸರ್ಕಾರ ಇರುತ್ತೋ ಬಿಡುತ್ತೋ ಗೊತ್ತಿಲ್ಲ. ಒಟ್ಟಿನಲ್ಲಿ ಈಗ ಸರ್ಕಾರ ಸುಭದ್ರವಾಗಿದೆ. ಮುಂದಿನ ಲೋಕಸಭಾ ಚುನಾವಣೆಗೆ ಕಾರ್ಯಕರ್ತರು ತಯಾರಾಗಿ ಎಂದು ತಿಳಿಸಿದ್ದಾರೆ.

    ಪ್ರತಾಪ್ ಸಿಂಹ ಹೇಳಿದ್ದೇನು?
    ಜಗತ್ತಿನಲ್ಲಿ ಒಳ್ಳೆಯ ಬದಲಾವಣೆಗಳು ಆಗಬೇಕಿದೆ. ಚುನಾವಣೆಯಲ್ಲಿ ಅಲ್ಪ ಮತಗಳ ಹಿನ್ನಡೆಯಲ್ಲಿ ಸರ್ಕಾರ ರಚಿಸುವಲ್ಲಿ ನಾವು ವಿಫಲರಾಗಿದ್ದೇವೆ. ಯಡಿಯೂರಪ್ಪನವರು ಮುಖ್ಯಮಂತ್ರಿ ಆಗುವುದು ಖಚಿತ, ಸಂಕ್ರಾಂತಿ ಅಲ್ಲದಿದ್ದರೂ, ಯುಗಾದಿಯಾದ್ರೂ ಆಗ್ತಾರೆ ಎಂದು ಮೈಸೂರು ಸಂಸದ ಪ್ರತಾಪ್ ಸಿಂಹ ಈ ಹಿಂದೆ ಹೇಳಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹಾರ್ದಿಕ್ ಪಾಂಡ್ಯ ಹೇಳಿಕೆಗೆ ಟಾಂಗ್ ಕೊಟ್ಟ ರಾಖಿ ಸಾವಂತ್

    ಹಾರ್ದಿಕ್ ಪಾಂಡ್ಯ ಹೇಳಿಕೆಗೆ ಟಾಂಗ್ ಕೊಟ್ಟ ರಾಖಿ ಸಾವಂತ್

    ಮುಂಬೈ: ಭಾರತ ಕ್ರಿಕೆಟ್ ತಂಡದ ಅಲ್‍ರೌಂಡರ್ ಹಾರ್ದಿಕ್ ಪಾಂಡ್ಯ ಕಾರ್ಯಕ್ರಮವೊಂದರಲ್ಲಿ ನೀಡಿದ್ದ ಹೇಳಿಕೆಗೆ ಬಾಲಿವುಡ್ ಡ್ರಾಮಾ ಕ್ವೀನ್ ರಾಖಿ ಸಾವಂತ್ ಟಾಂಗ್ ನೀಡಿದ್ದಾರೆ.

    ಬಾಲಿವುಡ್ ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ ‘ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಭಾರತ ತಂಡದ ಕ್ರಿಕೆಟ್ ಆಟಗಾರರಾದ ಕೆ.ಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಭಾಗವಹಿಸಿದ್ದರು. ಈ ವೇಳೆ ಹಾರ್ದಿಕ್ ಮಹಿಳೆಯರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಈಗ ರಾಖಿ ಸಾವಂತ್ ಟಾಂಗ್ ಕೊಟ್ಟಿದ್ದಾರೆ.

    ಇತ್ತೀಚೆಗೆ ರಾಖಿ ಸಾವಂತ್ ‘ಬಿ ವಿತ್ ಭೇಟಿ’ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಮಾಧ್ಯಮದ ಜೊತೆ ಮಾತನಾಡಿದ ಅವರು, “ಇತ್ತೀಚೆಗೆ ನಮ್ಮ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅವರು ನಾನು ಹುಡುಗಿರನ್ನು ಹಿಂದೆ ಕಡೆಯಿಂದ ನೋಡುತ್ತೇನೆ. ನನಗೆ ಇಷ್ಟ ಆದರೆ ಆಗ ನಾನು ನನ್ನ ತಾಯಿ ಬಳಿ ಹೋಗಿ ನಾನು ಇಂದು ಮಾಡಿ ಬಂದಿದ್ದೇನೆ ಎಂದು ಹೇಳುತ್ತೇನೆ” ಎಂದು ಅವರು ಕಾರ್ಯಕ್ರಮದಲ್ಲಿ ಹೇಳಿದ್ದರು.

    ಹಾರ್ದಿಕ್ ಅವರ ಈ ಹೇಳಿಕೆ ನನಗೆ ತುಂಬಾ ಬೇಸರವಾಯಿತು. ಈಗ ನಾನು ಹಾರ್ದಿಕ್ ಅವರಿಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ. “ಹಾರ್ದಿಕ್ ಅವರೇ ಕೆಲವು ಬಾರಿ ಹುಡುಗರು ಹಿಂದಿನಿಂದ ಚೆನ್ನಾಗಿ ಕಾಣಿಸುತ್ತಾರೆ. ನೀವು ನೋಡುವಾಗ ಹುಡುಗಿ ಬದಲು ಅದು ಹುಡುಗ ಆಗುತ್ತಿದ್ದರೆ, ಆಗ ನೀವು ಏನು ಮಾಡುತ್ತೀದ್ದೀರಿ?” ಎಂದು ಪ್ರಶ್ನಿಸುವ ಮೂಲಕ ರಾಖಿ ಸಾವಂತ್ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಅವರಿಗೆ ಟಾಂಗ್ ಕೊಟ್ಟಿದ್ದಾರೆ.

    ಕರಣ್ ಜೋಹರ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಹಾರ್ದಿಕ್ ಪಾಂಡ್ಯ ಹಾಗೂ ಕೆಎಲ್ ರಾಹುಲ್ ಅವರಿಗೆ ಕೇಳಿದ ಪ್ರಶ್ನೆಗಳಿಗೆ ಮನಸ್ಸಿಗೆ ಬಂದಂತೆ ಹಿಂದೆ ಮುಂದೆ ನೋಡದೆ ಇಬ್ಬರು ಆಟಗಾರರು ಉತ್ತರಿಸಿದ್ದರು. ಅಲ್ಲದೇ ಸಚಿನ್ ಹಾಗೂ ಕೊಹ್ಲಿ ಇಬ್ಬರಲ್ಲಿ ಯಾರು ಬೆಟರ್ ಎಂಬ ಪ್ರಶ್ನೆಗೆ ಉತ್ತರಿಸಿದ್ದ ಹಾರ್ದಿಕ್ ಹಾಗೂ ಕೆಎಲ್ ರಾಹುಲ್ ಹಿಂದು ಮುಂದು ನೋಡದೇ ಕೊಹ್ಲಿ ಎಂದು ಉತ್ತರಿಸಿದ್ದರು. ಅಲ್ಲದೇ ಮಹಿಳೆಯರು ಹಾಗೂ ಸೆಕ್ಸ್ ಜೀವನದ ಬಗ್ಗೆ ಕೇಳಿದ ಪ್ರಶ್ನೆಯ ಬಗ್ಗೆ ಕ್ಷಣ ಕಾಲ ಕೂಡ ಯೋಚಿಸದೇ ಹಾರ್ದಿಕ್ ಉತ್ತರಿಸಿದ್ದರು. ಇದರಿಂದ ಹಲವು ಕ್ರಿಕೆಟ್ ಅಭಿಮಾನಿಗಳು ಹಾಗೂ ಸಾರ್ವಜನಿಕರು ಹಾರ್ದಿಕ್ ವಿರುದ್ಧ ಟೀಕೆ ಮಾಡಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • 3 ದಿನ ನಡೆದ ಪ್ರವಾಸಿ ಉತ್ಸವಕ್ಕೆ ತೆರೆ- ಅರ್ಜುನ್ ಜನ್ಯ, ಅನುರಾಧ ಭಟ್ ಕಾರ್ಯಕ್ರಮಕ್ಕೆ ಹುಚ್ಚೆದ್ದು ಕುಣಿದ ಪ್ರೇಕ್ಷಕರು

    3 ದಿನ ನಡೆದ ಪ್ರವಾಸಿ ಉತ್ಸವಕ್ಕೆ ತೆರೆ- ಅರ್ಜುನ್ ಜನ್ಯ, ಅನುರಾಧ ಭಟ್ ಕಾರ್ಯಕ್ರಮಕ್ಕೆ ಹುಚ್ಚೆದ್ದು ಕುಣಿದ ಪ್ರೇಕ್ಷಕರು

    ಮಡಿಕೇರಿ: ಭಾನುವಾರ ನಗರದ ಗಾಂಧಿ ಮೈದಾನದಲ್ಲಿ ಕೊಡಗು ಪ್ರವಾಸಿ ಉತ್ಸವ ಕಾರ್ಯಕ್ರಮಕ್ಕೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ, ಗಾಯಕಿ ಅನುರಾಧ ಭಟ್ ಮತ್ತು ತಂಡ ನಡೆಸಿಕೊಟ್ಟ ರಸಸಂಜೆ ಕಾರ್ಯಕ್ರಮ ಪ್ರೇಕ್ಷಕರನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು.

    ಇದೇ ಮೊದಲ ಬಾರಿಗೆ ಪ್ರವಾಸೋದ್ಯಮ ಇಲಾಖೆ ಕೊಡಗು ಜಿಲ್ಲಾಡಳಿತ ವತಿಯಿಂದ ನಡೆಸಿದ ಪ್ರವಾಸಿ ಉತ್ಸವಕ್ಕೆ ನೀರಿಕ್ಷೆಗೂ ಮೀರಿ ಕೊಡಗಿನ ಜನತೆ ಸೇರಿದಂತೆ ದೇಶ ವಿದೇಶದ ಜನರು ಭಾಗವಹಿಸಿ ಸಖತ್ ಎಂಜಾಯ್ ಮಾಡಿದ್ದಾರೆ. ಇದನ್ನೂ ಓದಿ: ಇಂದಿನಿಂದ 3 ದಿನ ಮಂಜಿನ ನಗರಿಯಲ್ಲಿ ಪ್ರವಾಸಿ ಉತ್ಸವ- ಕಿರುತೆರೆ ಕಲಾವಿದರು ಭಾಗಿ

    ವೇದಿಕೆ ಮೇಲೆ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಆಗಮಿಸುತ್ತಿದ್ದಂತೆ ಪ್ರೇಕ್ಷಕರ ಮೊಗದಲ್ಲಿ ಮಂದಹಾಸ ಮೂಡಿತ್ತು. ಅರ್ಜುನ್ ಜನ್ಯ ಅವರ ತಂಡ ಕಾರ್ಯಕ್ರಮ ನೀಡಿ ಮಡಿಕೇರಿ ಜನತೆಯ ಮೆಚ್ಚುಗೆಗೆ ಪಾತ್ರರಾದರು. ಇದನ್ನೂ ಓದಿ: ಕೊಡಗು ಉತ್ಸವ- ರಾಜಾಸೀಟ್‍ನಲ್ಲಿ ಫಲಪುಷ್ಪಗಳ ಕಲರವ

    ಮೂರು ದಿನಗಳ ಕಾಲ ನಡೆದ ಈ ಕೊಡಗು ಉತ್ಸವಕ್ಕೆ ರಾಜಾಸೀಟ್‍ನಲ್ಲಿ ಬಗೆ ಬಗೆಯ ಹೂಗಳಿಂದ ಹೂಗಳಿಂದ ಕಲಾಕೃತಿಗಳನ್ನು ಮಾಡಲಾಗಿತ್ತು. ಬಗೆ ಬಗೆಯ ಹೂಗಳಿಂದ ರಾಜಾಸೀಟ್ ಭೂ ಲೋಕದ ಸ್ವರ್ಗದಂತೆ ಕಂಗೊಳಿಸುತ್ತಿದ್ದು, ಪ್ರವಾಸಿಗರನ್ನು ತನ್ನತ್ತ ಆಕರ್ಷಿಸುತ್ತಿತ್ತು.

    ಪ್ರವಾಸೋದ್ಯಮ ಇಲಾಖೆ, ತೋಟಗಾರಿಕೆ ಹಾಗೂ ಪಶುಸಂಗೋಪನಾ ಇಲಾಖೆ ಆಶ್ರಯದಲ್ಲಿ ಶುಕ್ರವಾರದಿಂದ ಮೂರು ದಿನಗಳ ಕಾಲ ಮಂಜಿನ ನಗರಿ ಮಡಿಕೇರಿಯಲ್ಲಿ ಪ್ರವಾಸಿ ಉತ್ಸವ ನಡೆಸಿತ್ತು. ಆಗಸ್ಟ್ ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದ ಕಹಿ ನೆನಪಿನಿಂದ ಜಿಲ್ಲೆಯ ಜನತೆಯನ್ನು ಹೊರತರಲು ಹಾಗೂ ಕುಸಿದು ಬಿದ್ದಿರುವ ಪ್ರವಾಸೋದ್ಯಮವನ್ನು ಪುನಶ್ಚೇತನಗೊಳಿಸಲು ಕೊಡಗು ಜಿಲ್ಲೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರವಾಸಿ ಉತ್ಸವವನ್ನು ಆಯೋಜಿಸಲಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಹೊಸ ವರ್ಷ ಸ್ವಾಗತಿಸಲು ಸಜ್ಜಾಗಿದೆ ಸಾಂಸ್ಕೃತಿಕ ನಗರಿ- ಚಾಮುಂಡಿ ಬೆಟ್ಟಕ್ಕೆ ರಾತ್ರಿ ಸಂಚಾರ ನಿಷೇಧ

    ಹೊಸ ವರ್ಷ ಸ್ವಾಗತಿಸಲು ಸಜ್ಜಾಗಿದೆ ಸಾಂಸ್ಕೃತಿಕ ನಗರಿ- ಚಾಮುಂಡಿ ಬೆಟ್ಟಕ್ಕೆ ರಾತ್ರಿ ಸಂಚಾರ ನಿಷೇಧ

    ಮೈಸೂರು: ಹೊಸ ವರ್ಷವನ್ನು ಅದ್ಧೂರಿಯಾಗಿ ಆಚರಿಸಲು ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗಿದೆ. ಇಂದು ಸಂಜೆಯಿಂದಲೇ ಅರಮನೆಯಲ್ಲಿ ಸಾಂಸ್ಕೃತಿಕ ವೈಭವ ಆರಂಭವಾಗಲಿದೆ.

    ಹೊಸ ವರ್ಷವನ್ನು ಖುಷಿಯಿಂದ ಸ್ವಾಗತಿಸಲು ಮೈಸೂರು ಸಿಂಗಾರಗೊಂಡಿದೆ. ಇಂದು ರಾತ್ರಿ 10 ಗಂಟೆಯಿಂದ ಮಧ್ಯರಾತ್ರಿ 12 ರವರೆಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಅರಮನೆ ಆವರಣದಲ್ಲಿ ನಡೆಯಲಿವೆ. 12 ಗಂಟೆಗೆ ಸರಿಯಾಗಿ ಪಟಾಕಿ, ಬಾಣಬಿರುಸುಗಳನ್ನು ಸಿಡಿಸಲು ಎಲ್ಲಾ ತಯಾರಿಯನ್ನು ಕೂಡ ಮಾಡಿಕೊಳ್ಳಲಾಗಿದೆ. ಈ ಸಂತೋಷದ ಮಧ್ಯೆ ಯಾವುದೇ ಅಹಿತಕರ ಘಟನೆಗಳು ನಡೆಯಬಾರದೆಂದು ಇಂದು ರಾತ್ರಿ ಚಾಮುಂಡಿ ಬೆಟ್ಟಕ್ಕೆ ಸಂಚಾರ ನಿಷೇಧಿಸಲಾಗಿದೆ.

    ಚಾಮುಂಡಿ ಬೆಟ್ಟಕ್ಕೆ ರಾತ್ರಿ 10ರಿಂದ ಬೆಳಗಿನ ಜಾವ 6ರವರೆಗೆ ವಾಹನ ಸಂಚಾರಕ್ಕೆ ಬ್ರೇಕ್ ಹಾಕಲಾಗಿದೆ. ಹಾಗೆಯೇ ಹಿನಕಲ್ ಫ್ಲೈಓವರ್‌ನಲ್ಲೂ ಕೂಡ ಹೊಸ ವರ್ಷ ಆಚರಣೆ ಹಿನ್ನೆಲೆ ವಾಹನ ಸಂಚಾರ ನಿಷೇಧಿಸಲಾಗಿದೆ. ಈ ಮಾರ್ಗವಾಗಿ ಇಂದು ರಾತ್ರಿ 8ರಿಂದ ಬೆಳಗ್ಗೆ 6ರವರೆಗೆ ಎಲ್ಲಾ ರೀತಿಯ ವಾಹನಗಳಿಗೆ ನಿರ್ಬಂಧ ಹೇರಲಾಗಿದೆ. ಅಷ್ಟೇ ಅಲ್ಲದೆ ನಗರದ ಹೋಟೆಲ್, ಕ್ಲಬ್, ರೆಸ್ಟೋರೆಂಟ್, ರೆಸಾರ್ಟ್, ಬಾರ್ ಗಳಲ್ಲಿ ಮಧ್ಯರಾತ್ರಿ 1ರವರೆಗೆ ಮದ್ಯ ಸರಬರಾಜು ಮಾಡಬೇಕಾದರೆ ಅಬಕಾರಿ ಇಲಾಖೆ ಅನುಮತಿ ಕಡ್ಡಾಯವಾಗಿ ಪಡೆದಿರಬೇಕು. ಇಲ್ಲವಾದಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಅಬಕಾರಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಅನುಷ್ಕಾ ಬಗ್ಗೆ ಯಾರೂ ಊಹಿಸಲಾಗದ ಹೇಳಿಕೆ ಕೊಟ್ಟ ಪ್ರಭಾಸ್

    ಅನುಷ್ಕಾ ಬಗ್ಗೆ ಯಾರೂ ಊಹಿಸಲಾಗದ ಹೇಳಿಕೆ ಕೊಟ್ಟ ಪ್ರಭಾಸ್

    ಮುಂಬೈ: ಬಾಹುಬಲಿ ಪ್ರಭಾಸ್ ಅವರು ನಟಿ ಅನುಷ್ಕಾ ಬಗ್ಗೆ ಯಾರೂ ಊಹಿಸಲಾಗದ ಹೇಳಿಕೆಯೊಂದನ್ನು ಕಾರ್ಯಕ್ರಮದಲ್ಲಿ ನೀಡಿದ್ದಾರೆ.

    ನಿರ್ದೇಶಕ ಕರಣ್ ಜೋಹರ್ ನಡೆಸಿಕೊಡುವ `ಕಾಫಿ ವಿತ್ ಕರಣ್’ ಕಾರ್ಯಕ್ರಮದಲ್ಲಿ ಪ್ರಭಾಸ್ ಅತಿಥಿಯಾಗಿ ಭಾಗವಹಿಸಿದ್ದರು. ಪ್ರಭಾಸ್ ಜೊತೆ ಬಾಹುಬಲಿ ಚಿತ್ರದ ನಿರ್ದೇಶಕ ರಾಜಮೌಳಿ ಹಾಗೂ ನಟ ರಾಣಾ ದಗ್ಗುಬಾಟಿ ಕೂಡ ಪಾಲ್ಗೊಂಡಿದ್ದರು.

    ಈ ಕಾರ್ಯಕ್ರಮದಲ್ಲಿ ನಿರೂಪಕ ಕರಣ್ ಜೋಹರ್ ಅನುಷ್ಕಾ ಬಗ್ಗೆ ಮಾತನಾಡಿದ್ದರು. ಈ ವೇಳೆ ಪ್ರಭಾಸ್, “ನಾನು ಮತ್ತು ಅನುಷ್ಕಾ ಒಳ್ಳೆಯ ಗೆಳೆಯ-ಗೆಳತಿ ಅಷ್ಟೇ. ಆಕೆ ಜೊತೆ ನಾನು ಯಾವತ್ತೂ ಡೇಟಿಂಗ್ ಮಾಡಿಲ್ಲ. ಬಾಹುಬಲಿಯಲ್ಲಿ ಆಕೆ ನನಗೆ ತಾಯಿಯಾಗಿದ್ದಾಳೆ, ಪ್ರೇಯಸಿಯೂ ಆಗಿದ್ದಾಳೆ. ಈಗ ನೀವೇ ಹೇಳಿ ತಾಯಿಯನ್ನು ಯಾರಾದರೂ ಮದುವೆ ಆಗೋಕೆ ಸಾಧ್ಯವಾ? ಎಂದು ಹೇಳಿದ್ದಾರೆ.

    ಕರಣ್ ಜೋಹರ್ ರಾಣಾ ಅವರನ್ನು ಕೆಲವು ಪ್ರಶ್ನೆಗಳನ್ನು ಕೇಳಿದರು. ಬಳಿಕ ಪ್ರಭಾಸ್ ಅವರನ್ನು ಪ್ರಶ್ನೆ ಕೇಳಿದರು. ಈ ವೇಳೆ ತೆಲುಗು ಚಿತ್ರರಂಗದ ಸೆಕ್ಸಿಯೆಷ್ಟ್ ನಟಿ ಯಾರು ಎಂದು ಪ್ರಶ್ನಿಸಿದ್ದಕ್ಕೆ, ಪ್ರಭಾಸ್ ಅನುಷ್ಕಾ, ಸ್ವೀಟಿ ಎಂದು ಉತ್ತರಿಸಿದ್ದಾರೆ. ಬಳಿಕ ನೀವು ಸೆಕ್ಸ್ ಹಾಗೂ ಊಟದಲ್ಲಿ ಏನು ಆಯ್ಕೆ ಮಾಡಿಕೊಳ್ಳುತ್ತಿದ್ದಾರಾ ಎಂದು ಹೇಳಿದ್ದಕ್ಕೆ ಊಟ ಎಂದು ಉತ್ತರಿಸಿದ್ದಾರೆ.

    ಅನುಷ್ಕಾ, ಕಾಜಲ್ ಅಥವಾ ತಮನ್ನಾ ಇವರಲ್ಲಿ ಯಾರ ಜೊತೆ ನಟಿಸಲು ಇಷ್ಟಪಡುತ್ತೀರಾ ಎಂದು ಕೇಳಿದ್ದಕ್ಕೆ ಅವರು ಅನುಷ್ಕಾ ಎಂದು ಉತ್ತರಿಸಿ, ಇದಕ್ಕೂ ನನ್ನ ಬಗ್ಗೆ ಹರಿದಾಡುತ್ತಿರುವ ಗಾಸಿಪ್‍ಗೂ ಯಾವುದೇ ಸಂಬಂಧ ಇಲ್ಲ. ಅನುಷ್ಕಾ ಹಾಗೂ ನನ್ನ ಸ್ನೇಹ 8 ವರ್ಷದ್ದು, ಆಕೆ ಬೆಸ್ಟ್ ಫ್ರೆಂಡ್ ಎಂದು ಪ್ರಭಾಸ್ ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv