Tag: ಕಾರ್ಯಕ್ರಮ

  • ಮೈಕ್ ಇಲ್ಲದ್ದಕ್ಕೆ ಗರಂ ಆಗಿ ವೇದಿಕೆಯಿಂದ ಹೊರ ನಡೆದ ಸಚಿವ ಹೆಗಡೆ

    ಮೈಕ್ ಇಲ್ಲದ್ದಕ್ಕೆ ಗರಂ ಆಗಿ ವೇದಿಕೆಯಿಂದ ಹೊರ ನಡೆದ ಸಚಿವ ಹೆಗಡೆ

    ಕಾರವಾರ: ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಕಾರವಾರದ ಮೂಡಲಮಕ್ಕಿ ಗ್ರಾಮದಲ್ಲಿ ಕೇಂದ್ರ ಕೌಶಲ್ಯಾಭಿವೃದ್ಧಿ ರಾಜ್ಯ ಸಚಿವ ಅನಂತಕುಮಾರ್ ಹೆಗಡೆ ಗ್ಯಾಸ್ ವಿತರಣಾ ಕಾರ್ಯಕ್ರಮಕ್ಕೆ ಮಳೆಯ ಅವಾಂತರದಿಂದ ಭಾಷಣ ಮಾಡಲು ಮೈಕ್ ಇಲ್ಲದೇ ಸಚಿವರು ಗರಂ ಆಗಿ ಕಾರ್ಯಕ್ರಮದಿಂದ ಹೊರನಡೆದ ಘಟನೆ ನಡೆದಿದೆ.

    ಇತ್ತ ತಮಗೆ ಗ್ಯಾಸ್ ಸಿಗಲಿಲ್ಲ ಎಂದು ಜನ ಮಳೆಯಲ್ಲಿಯೇ ಕಾರವಾರದ ಶಾಸಕಿ ರೂಪಾಲಿ ನಾಯ್ಕ ಹಾಗೂ ಸಚಿವರ ಮುಂದೆಯೇ ಕೈ ಕೈ ಮಿಲಾಯಿಸಿ ಹೊಡೆದಾಡಿಕೊಂಡ ಘಟನೆ ಕೂಡ ನಡೆದಿದೆ.

    ಇಂದು ಕಾರವಾರದ ಮೂಡಲಮಕ್ಕಿನಲ್ಲಿ ಬಡವರಿಗೆ ಪ್ರಧಾನಮಂತ್ರಿ ಉಜ್ವಲ ಯೋಜನೆಯಡಿ ಗ್ಯಾಸ್ ವಿತರಣಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಳೆ ಸುರಿದಿದೆ. ಹೀಗಾಗಿ ಸರತಿಯಲ್ಲಿ ನಿಂತಿದ್ದ ಜನರು ಕೊಡೆ ಹಿಡಿದು ಕೂತಿದ್ದರು. ಆದರೆ ತಮಗಾಗಿ ಮಳೆಯಲ್ಲಿಯೂ ಕುಳಿತ ಜನರನ್ನು ಲೆಕ್ಕಿಸದೇ ಸಚಿವರು ಮೈಕ್ ವ್ಯವಸ್ಥೆಯಿಲ್ಲ ಎಂದು ಗರಂ ಆಗಿದ್ದಾರೆ.

    ಸಚಿವರು ಕೇವಲ ನಾಲ್ಕು ಜನರಿಗೆ ಗ್ಯಾಸ್ ಕಿಟ್ ವಿತರಿಸಿ ಹೊರನಡೆದಿದ್ದರಿಂದ ಅಸಮಧಾನಗೊಂಡ ಯೋಜನೆಯ ಫಲಾನುಭವಿಗಳಿಬ್ಬರು ತಮಗೆ ಸಿಗಲಿಲ್ಲ ಎಂದು ಬಡಿದಾಡಿಕೊಂಡಿದ್ದಾರೆ. ಅಲ್ಲೇ ಇದ್ದ ಬಿಜೆಪಿ ಮುಖಂಡರು ಅವರನ್ನು ಸಮಾಧಾನಪಡಿಸಿ ಅಸಮಧಾನಕ್ಕೆ ತೆರೆ ಎಳೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಚಾಮುಂಡಿಬೆಟ್ಟದ ಮೆಟ್ಟಿಲುಗಳನ್ನ ಹತ್ತಿ ದೇವಿಯ ದರ್ಶನ ಪಡೆದ ನಟಿ ಹರಿಪ್ರಿಯಾ

    ಚಾಮುಂಡಿಬೆಟ್ಟದ ಮೆಟ್ಟಿಲುಗಳನ್ನ ಹತ್ತಿ ದೇವಿಯ ದರ್ಶನ ಪಡೆದ ನಟಿ ಹರಿಪ್ರಿಯಾ

    ಮೈಸೂರು: ಸ್ಯಾಂಡಲ್‍ವುಡ್ ನಟಿ ಹರಿಪ್ರಿಯಾ ಚಾಮುಂಡಿ ಬೆಟ್ಟವನ್ನು ಹತ್ತಿ ದೇವಿಯ ದರ್ಶನ ಪಡೆದಿದ್ದಾರೆ.

    ಸೋಮವಾರ ಯುವದಸರಾ ಕಾರ್ಯಕ್ರಮಕ್ಕಾಗಿ ಮೈಸೂರಿಗೆ ಆಗಮಿಸಿದ್ದ ನಟಿ ಹರಿಪ್ರಿಯಾ ಮಂಗಳವಾರ ಚಾಮುಂಡಿಬೆಟ್ಟದ ತಪ್ಪಲಿನಿಂದ 1,001 ಮೆಟ್ಟಿಲುಗಳನ್ನ ಹತ್ತಿ ತಾಯಿಯ ದರ್ಶನ ಪಡೆದರು. ನಾನು ಎರಡನೇ ಬಾರಿ ಬೆಟ್ಟವನ್ನು ಹತ್ತಿದ್ದೇನೆ. ಮೈಸೂರೆಂದರೆ ನನಗೆ ಇಷ್ಟದ ಊರು. ಬೆಟ್ಟ ಹತ್ತವುದು ನನಗೆ ಇಷ್ಟ ಎಂದು ಹೇಳಿದರು.

    ದಸರೆಯ ಅಂಗವಾಗಿ ಸೋಮವಾರ ರಾತ್ರಿಯ ಯುವ ದಸರಾ ಕಾರ್ಯಕ್ರಮ ಅಕ್ಷರಶಃ ಸ್ಯಾಂಡಲ್‍ವುಡ್ ಬೆಡಗಿಯರಿಂದ ಹಾಗೂ ಸಂಗೀತ ಗಾಯಕರಿಂದ ರಂಗೇರಿತ್ತು. ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ರಾತ್ರಿ ನಡೆದ ನಾಲ್ಕನೇ ದಿನದ ಯುವ ದಸರಾ ಕಾರ್ಯಕ್ರಮದಲ್ಲಿ ಸ್ಯಾಂಡಲ್ ವುಡ್ ಬೆಡಗಿಯರು ಮಾಡಿದ ಡ್ಯಾನ್ಸ್‍ಗೆ ಪಡ್ಡೆ ಹೈಕಳಂತು ಹುಚ್ಚೆದ್ದು ಕುಣಿದರು. ನಟಿಯರಾದ ಹರಿಪ್ರಿಯಾ, ಶುಭಾಪುಂಜಾ, ಸೋನುಗೌಡ ಹಾಗೂ ಇನ್ನಿತರ ನಟಿಯರ ಡ್ಯಾನ್ಸ್ ಯುವ ದಸರೆಯ ಸಂಭ್ರಮವನ್ನು ಇಮ್ಮಡಿಗೊಳಿಸಿತ್ತು.

    ಸ್ಯಾಂಡಲ್‍ವುಡ್ ಬೆಡಗಿಯರ ನೃತ್ಯವಲ್ಲದೇ ಗಾಯಕರ ಕಂಠ ಸಿರಿಯಿಂದ ಮೂಡಿ ಬಂದ ಗಾಯನವೂ ನೆರದಿದ್ದವರ ಮನಕ್ಕೆ ತಂಪೆರೆದಿತ್ತು. ಸಂಜೀತ್ ಹೆಗ್ಡೆ, ಅನುರಾಧ ಭಟ್, ಸಂತೋಷ್, ಚಿನ್ಮಯ್ ಸೇರಿದಂತೆ ಇನ್ನಿತರ ಹಿನ್ನೆಲೆ ಗಾಯಕರು ಹಾಡಿದ ಟಪ್ಪಾಂಗ್ ಗುಚ್ಚಿ ಮೆಲೊಡಿ ಹಾಡುಗಳಿಗಂತೂ ಜನ ಹುಚ್ಚೆದ್ದು ಕುಣಿದರು. ಕುಣಿದು ಸುಸ್ತಾದ ಯುವಸ್ತೋಮವನ್ನು ಕಾಮಿಡಿ ಕಿಲಾಡಿ ಖ್ಯಾತಿ ಶಿವರಾಜ್ ಕೆ.ಆರ್.ಪೇಟೆ ಹಾಗೂ ನಯನ ತಮ್ಮ ಕಾಮಿಡಿಯಿಂದ ಹೊಟ್ಟೆ ಹುಣ್ಣಾಗುವಷ್ಟು ನಗಿಸಿದರು. ಇಷ್ಟೇ ಅಲ್ಲದೇ ಕಾಲೇಜು ವಿದ್ಯಾರ್ಥಿಗಳು ಪ್ರಸ್ತುತಪಡಿಸಿದ ನೃತ್ಯಗಳು ಪ್ರೇಕ್ಷಕರ ಚಪ್ಪಾಳೆ ಗಿಟ್ಟಿಸಿದವು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸ್ಯಾಂಡಲ್‍ವುಡ್ ಆಯ್ತು ಈಗ ಬಾಲಿವುಡ್‍ನಲ್ಲಿ ಸಂಯುಕ್ತ ಕಿರಿಕ್!

    ಸ್ಯಾಂಡಲ್‍ವುಡ್ ಆಯ್ತು ಈಗ ಬಾಲಿವುಡ್‍ನಲ್ಲಿ ಸಂಯುಕ್ತ ಕಿರಿಕ್!

    ಬೆಂಗಳೂರು: ಸ್ಯಾಂಡಲ್‍ವುಡ್ ಬಳಿಕ ಬಿಗ್ ಬಾಸ್ ಮನೆಯಲ್ಲಿ ಕಿರಿಕ್ ಮಾಡಿಕೊಂಡಿದ್ದ `ಕಿರಿಕ್ ಪಾರ್ಟಿ’ ಚಿತ್ರದ ನಟಿ ಸಂಯುಕ್ತ ಹೆಗ್ಡೆ ಈಗ ಬಾಲಿವುಡ್ ನಲ್ಲೂ ಕಿರಿಕ್ ಮಾಡಿಕೊಂಡಿದ್ದಾರೆ. ಎಂಟಿವಿಯ `ಸ್ಪ್ಲಿಟ್ಸ್ ವಿಲ್ಲಾ’ ಡೇಟಿಂಗ್ ರಿಯಾಲಿಟಿ ಶೋನಲ್ಲಿ ಸಂಯುಕ್ತ ಇತರೇ ಸ್ಪರ್ಧಿಗಳೊಂದಿಗೆ ಕಿರಿಕ್ ಮಾಡಿಕೊಂಡಿದ್ದಾರೆ.

    ಸಂಯುಕ್ತ ವೈಲ್ಡ್ ಕಾರ್ಡ್ ಎಂಟ್ರಿ ಕೊಟ್ಟ ಒಂದೇ ದಿನಕ್ಕೆ ಇತರ ಸ್ಪರ್ಧಿಗಳು ಅವರನ್ನು ಶೋದಿಂದ ಹೊರ ಕಳುಹಿಸಲು ಪ್ಲಾನ್ ಮಾಡುತ್ತಿದ್ದಾರೆ. ಸಂಯುಕ್ತ ಬಿಳಿ ಮತ್ತು ಕಪ್ಪು ಬಣ್ಣದ ಬಿಕಿನಿ ತೊಟ್ಟು ಕಾರ್ಯಕ್ರಮಕ್ಕೆ ಎಂಟ್ರಿಕೊಟ್ಟಿದ್ದರು. ಈ ಕಾರ್ಯಕ್ರಮದಲ್ಲಿ ಸಿಂಬಾ ಹಾಗೂ ಮೈರಾ ನಡುವೆ ಲ್ವವಿಡವಿ ನಡೆಯುತ್ತಿತ್ತು. ಇದೀಗ ಸಂಯುಕ್ತ ಅವರ ಎಂಟ್ರಿಯಿಂದ ಸಿಂಬಾ ಕಣ್ಣು ಸಂಯುಕ್ತ ಕಡೆಗೆ ಜಾರಿದೆ. ಇದರಿಂದಾಗಿ ಮೈರಾ ಸಿಟ್ಟು ಮಾಡಿಕೊಂಡಿದ್ದಾರೆ.

    ಇದೀಗ ಸಿಂಬಾ ಮತ್ತು ಸಂಯುಕ್ತ ನಡುವೆ ಸಂಥಿಂಗ್ ಸಂಥಿಂಗ್ ನಡೆಯುತ್ತಿದ್ದು, ಟೆಸ್ಟ್ ಯುವರ್ ಬಾಂಡ್ ಚಾಲೆಂಜ್‍ನಲ್ಲಿ ಸೋಲನ್ನು ಅನುಭವಿಸಿದ್ದರು. ಕಾರ್ಯಕ್ರಮಕ್ಕೆ ಎಂಟ್ರಿಕೊಟ್ಟ ಒಂದೇ ದಿನಕ್ಕೆ ಸಂಯುಕ್ತ ಹಲವು ಸ್ಪರ್ಧಿಗಳ ಕೆಂಗಣ್ಣಿಗೆ ಗುರಿಯಾಗಿದ್ದು, ಶೋನಿಂದ ಹೋರಬರುತ್ತಾರಾ ಇಲ್ಲ ಅಲ್ಲೇ ಉಳಿಯುತ್ತಾರಾ ಎಂಬುದು ಮುಂದಿನ ಎಫಿಸೋಡ್‍ನಲ್ಲಿ ಗೊತ್ತಾಗಲಿದೆ. ಬಾಲಿವುಡ್ ನಟಿ ಸನ್ನಿಲಿಯೋನ್ ಮತ್ತು ರಣ್‍ವಿಜಯ್ ಸಿಂಗಾ ಈ ಕಾರ್ಯಕ್ರಮವನ್ನ ನಿರೂಪಿಸುತ್ತಿದ್ದಾರೆ.

    ಕನ್ನಡ ಬಿಗ್‍ಬಾಸ್ 5ನೇ ಆವೃತ್ತಿಯಲ್ಲಿ ಸಂಯುಕ್ತಾ ವೈಲ್ಡ್ ಕಾರ್ಡ್ ಎಂಟ್ರಿ ಪಡೆದು ಮನೆಯನ್ನು ಪ್ರವೇಶಿಸಿದ್ದರು. ಅಲ್ಲೂ ಕೂಡ ಪ್ರತಿ ಸ್ಪರ್ಧಿಯಾಗಿದ್ದ ಸಮೀರ್ ಆಚಾರ್ಯ ಮೇಲೆ ಹಲ್ಲೆ ಮಾಡಿ ಕಿರಿಕ್ ಮಾಡಿ ಸುದ್ದಿಯಾಗಿದ್ದರು.

    https://www.facebook.com/mtvindia/videos/2188718738122121/

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹಳೆ ಫೋನ್ ದೂರ ಎಸೆದವರಿಗೆ ಹೊಸ ಸ್ಮಾರ್ಟ್ ಫೋನ್- ಸ್ಪರ್ಧೆಯಲ್ಲಿ ಭಾಗವಹಿಸಲು ಮುಗಿಬಿದ್ದ ಜನ!

    ಹಳೆ ಫೋನ್ ದೂರ ಎಸೆದವರಿಗೆ ಹೊಸ ಸ್ಮಾರ್ಟ್ ಫೋನ್- ಸ್ಪರ್ಧೆಯಲ್ಲಿ ಭಾಗವಹಿಸಲು ಮುಗಿಬಿದ್ದ ಜನ!

    ಉಡುಪಿ: ಮೊಬೈಲ್ ಜಮಾನಾದಲ್ಲಿ ನಾವಿದ್ದೇವೆ. ಬೆಳಗ್ಗೆ ಎದ್ದು ರಾತ್ರಿ ಮಲಗೋ ತನಕ ಮೊಬೈಲ್ ಇಲ್ಲದೆ ಯಾವುದೂ ಆಗುವುದಿಲ್ಲ. ಆದರೆ ಜಿಲ್ಲೆಯ ಕುಂದಾಪುರದಲ್ಲಿ ಜನಕ್ಕೆಲ್ಲ ಮೊಬೈಲ್ ಮೇಲೆ ಜಿಗುಪ್ಸೆ ಬಂದಂತೆ ಇತ್ತು. ತಮ್ಮ ಬಳಿಯಿದ್ದ ಮೊಬೈಲನ್ನು ಜೇಬಿಂದ ತೆಗೆದು ಜನ ಎತ್ತಿ ಎತ್ತಿ ಬಿಸಾಕುತ್ತಿದ್ದರು. ನಾ ಮುಂದು ತಾ ಮುಂದು ಅಂತ ಬಂದು ದೂರ ದೂರ ಮೊಬೈಲನ್ನು ಎಸೆಯುತ್ತಿದ್ದರು.

    ಕುಂದಾಪುರ ತಾಲೂಕಿನ ಗೋಳಿಯಂಗಡಿಯಲ್ಲಿ ನಡೆದ ವಿಶೇಷ ಸ್ಪರ್ಧೆ ಇದು. ಪ್ರಗತಿ ಎಂಟರ್‍ಪ್ರೈಸಸ್ ಮೊಬೈಲ್ ಅಂಗಡಿ ಈ ಸ್ಪರ್ಧೆಯನ್ನು ಆಯೋಜನೆ ಮಾಡಿತ್ತು. ತಮ್ಮ ಬಳಿಯಿದ್ದ ಹಳೆಯ ಅಥವಾ ಕಾರ್ಯನಿರ್ವಹಿಸದೇ ಇರುವ ಮೊಬೈಲನ್ನು ಯಾರು ದೂರಕ್ಕೆ ಎಸೆಯುತ್ತಾರೋ ನಿಯಮಗಳ ಪ್ರಕಾರ ಅವರು ಗೆದ್ದಂತೆ.

    ತಮ್ಮ ಹಳೆಯ ಮೊಬೈಲನ್ನು ದೂರ ಎಸೆದು ಗೆದ್ದವರಿಗೆ ಹೊಸದೊಂದು ಸ್ಮಾರ್ಟ್ ಫೋನ್ ಮೊಬೈಲ್ ನೀಡುವುದಾಗಿ ಆಯೋಜಕರು ಘೋಷಿಸಿದ್ದರು. ಹೀಗಾಗಿ ಸುತ್ತ ಹತ್ತೂರಿನ ನೂರಾರು ಮಂದಿ ಮೊಬೈಲ್ ಎಸೆಯೋ ಸ್ಪರ್ಧೆಯಲ್ಲಿ ಪಾಲ್ಗೊಂಡಿದ್ದರು. ಮೈದಾನದಲ್ಲಿ ಕ್ರಿಕೆಟ್ ಆಟದ ಸಂದರ್ಭ ಫೀಲ್ಡರ್ ಬಾಲ್ ಎಸೆಯುವಂತೆ ಯುವಕರು ತಮ್ಮ ತಮ್ಮ ಮೊಬೈಲ್‍ಗಳನ್ನು ಎಸೆದಿದ್ದಾರೆ. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಮೊಬೈಲ್ ಅಂಗಡಿಯ ಪ್ರಚಾರ. ಅಲ್ಲದೇ ಜನರಿಗೆ ಮನರಂಜನೆಯ ಜೊತೆ ಮೊಬೈಲ್ ಅಂಗಡಿಯ ಪ್ರಚಾರದ ಐಡಿಯಾವನ್ನು ಗೋಳಿಯಂಗಡಿ ಗೆಳಯರಬಳಗೆ ನೀಡಿದೆ.

    ಆಯೋಜಕ ರೂಪೇಶ್ ಕುಮಾರ್, ಪಬ್ಲಿಕ್ ಟಿವಿ ಜೊತೆ ಮಾತಾಡಿ, ನಮ್ಮ ಮಳಿಗೆಯ ಪ್ರಚಾರದ ಜೊತೆ ಜನರ ಮನೋರಂಜನೆಗಾಗಿ ಈ ಕಾರ್ಯಕ್ರಮ ಆಯೋಜಿಸಿದ್ದೇವೆ. ರಾಜ್ಯಾದ್ಯಂತ ರೆಸ್ಪಾನ್ಸ್ ಇತ್ತು. ಆದರೆ ಎಲ್ಲರನ್ನೂ ಕರೆಸಿಲ್ಲ. ಮುಂದೆ ದೊಡ್ಡ ಮಟ್ಟದ ಕಾರ್ಯಕ್ರಮ ಆಯೋಜಿಸುತ್ತೇವೆ ಎಂದು ಹೇಳಿದರು.

    ಹಳೇ ಫೋನ್ ರೇಡಿಯೇಷನ್ ನಿಂದ ಆರೋಗ್ಯ ಸಮಸ್ಯೆ ಬರಬಹುದು. ಬ್ಯಾಟರಿ ಕೂಡ ಬ್ಲಾಸ್ಟ್ ಆಗಬಹುದು. ಹಳೇ ಮೊಬೈಲ್ ಮನೆಯಲ್ಲಿ ಇಟ್ಟುಕೊಳ್ಳಬೇಡಿ ಎನ್ನುವ ಸಂದೇಶ ಈ ಕಾರ್ಯಕ್ರಮದಲ್ಲಿ ಇದೆ ಎಂದು ಸ್ಥಳೀಯರಾದ ಗಣೇಶ್ ಗೋಳಿಯಂಗಡಿ ತಿಳಿಸಿದರು.

    ಆಯೋಜಕರು ಮೊಬೈಲ್ ಎಸೆತ ಸಂದರ್ಭ ಒಟ್ಟಾದ ನೂರಾರು ಹಳೆಯ ಕೆಲವು ಮೊಬೈಲ್ ಗಳ ಬಿಡಿಭಾಗಗಳನ್ನು ತೆಗೆದು ಮುಂದೆ ಉಪಯೋಗ ಮಾಡುತ್ತಾರೆ. ಅಲ್ಲದೇ ಗ್ರಾಹಕರಿಗೆ ಕಡಿಮೆ ಬೆಲೆಗೆ ಬಿಡಿಭಾಗ ಅಳವಡಿಸಿಕೊಡುತ್ತಾರೆ. ಇದಲ್ಲದೇ ಇ-ವೇಸ್ಟ್ ಖರೀದಿ ಕಂಪೆನಿಯನ್ನು ಸಂಪರ್ಕಿಸಿದ್ದು, ಎಲ್ಲಾ ಮೊಬೈಲ್ ಖರೀದಿ ಮಾಡುವ ಭರವಸೆಯನ್ನು ಕಂಪೆನಿ ನೀಡಿದೆ.

    ಕಾರ್ಯಕ್ರಮದಲ್ಲಿ ಶೇಖರ್ ಸೆಟ್ಟೊಳ್ಳಿ ಎಂಬವರು 77.90 ಮೀಟರ್ ದೂರ ಮೊಬೈಲ್ ಎಸೆಯುವ ಮೂಲಕ ಪ್ರಥಮ ಸ್ಥಾನ ಪಡೆದುಕೊಂಡು 4ಜಿ ಸ್ಮಾರ್ಟ್ ಫೋನನ್ನು ತಮ್ಮದಾಗಿಸಿಕೊಂಡರು. 72.70 ಮೀ ದೂರ ಎಸೆಯುವ ಮೂಲಕ ದ್ವಿತೀಯ ಸ್ಥಾನವನ್ನು ರಾಜೇಶ್ ಸೆಟ್ಟೊಳ್ಳಿ ಪಡೆದುಕೊಂಡು ಆ್ಯಂಡ್ರಾಯ್ಡ್ ಸ್ಮಾರ್ಟ್ ಫೋನನ್ನು ಗೆದ್ದಿದ್ದಾರೆ.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ವಿದ್ಯಾರ್ಥಿನಿಯರ ಜೊತೆ ಹೆಜ್ಜೆ ಹಾಕಿದ ನಿಪ್ಪಾಣಿ ಶಾಸಕಿ – ವಿಡಿಯೋ ನೋಡಿ

    ವಿದ್ಯಾರ್ಥಿನಿಯರ ಜೊತೆ ಹೆಜ್ಜೆ ಹಾಕಿದ ನಿಪ್ಪಾಣಿ ಶಾಸಕಿ – ವಿಡಿಯೋ ನೋಡಿ

    ಬೆಳಗಾವಿ: ಜಿಲ್ಲೆಯ ನಿಪ್ಪಾಣಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ ಶಶಿಕಲಾ ಜೊಲ್ಲೆಯವರು ಕಾಲೇಜು ವಿದ್ಯಾರ್ಥಿನಿಯರ ಜೊತೆ ಸಖತ್ ಡ್ಯಾನ್ಸ್ ಮಾಡಿ ನೋಡುಗರನ್ನು ರಂಜಿಸಿದ್ದಾರೆ.

    ಚಿಕ್ಕೋಡಿ ತಾಲೂಕಿನ ಯಡೂರ ಗ್ರಾಮದ ಮೌಲಾನ ಆಜಾದ್ ಎಂಎಸ್‍ಡಬ್ಲ್ಯೂ ಮಹಾವಿದ್ಯಾಲಯ ನಣದಿಯವರ ಸಂಯುಕ್ತಾಶ್ರಯದಲ್ಲಿ ಗ್ರಾಮದಲ್ಲಿ ಕಳೆದ ಐದು ದಿನಗಳಿಂದ ಗ್ರಾಮೀಣ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಭಾನುವಾರ ಶಿಬಿರದ ಸಮಾರೋಪ ಸಮಾರಂಭದಲ್ಲಿ ಶಾಸಕಿಯಾದ ಶಶಿಕಲಾ ಜೊಲ್ಲೆಯವರು ಸಹ ಪಾಲ್ಗೊಂಡಿದ್ದರು.

    ಈ ವೇಳೆ ಮನರಂಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿದ ಅವರು ಮರಾಠಿ ಹಾಡೊಂದಕ್ಕೆ ವಿದ್ಯಾರ್ಥಿಗಳ ಜೊತೆಯಲ್ಲೆ ಹೆಜ್ಜೆಹಾಕಿದರು. ಅವರು ಡ್ಯಾನ್ಸ್ ಮಾಡಿದ ಶೈಲಿ ವಿದ್ಯಾರ್ಥಿಗಳನ್ನೇ ನಾಚಿಸುವಂತೆ ಕುಣಿದು ಎಲ್ಲರ ಗಮನ ಸೆಳೆದರು. ಸಾಂಸ್ಕೃತಿಕ ಕಾರ್ಯಕ್ರಮಗಳ ಅಭಿರುಚಿಯನ್ನು ಹೊಂದಿರುವ ಶಾಸಕಿ ಮತ್ತೊಮ್ಮೆ ಡ್ಯಾನ್ಸ್ ಮಾಡುವ ಮೂಲಕ ನೋಡುಗರನ್ನು ರಂಜಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

    https://www.youtube.com/watch?v=AVMv_SuOLMw

  • ಹಾಡು ಹೇಳಲು ಬಂದ 7 ತಿಂಗ್ಳ ಗರ್ಭಿಣಿ – ವೇದಿಕೆಯಲ್ಲೇ ಸೀಮಂತ

    ಹಾಡು ಹೇಳಲು ಬಂದ 7 ತಿಂಗ್ಳ ಗರ್ಭಿಣಿ – ವೇದಿಕೆಯಲ್ಲೇ ಸೀಮಂತ

    ಬೆಂಗಳೂರು: ಹಾಡು ಹಾಡಲು ಏಳು ತಿಂಗಳ ಗರ್ಭಿಣಿ ಆಗಮಿಸಿದ್ದು, ಅವರಿಗೆ ವೇದಿಕೆಯ ಮೇಲೆಯೇ ಸೀಮಂತ ಮಾಡಿರುವ ಅಪರೂಪದ ಘಟನೆ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’ ಕಾರ್ಯಕ್ರಮದಲ್ಲಿ ನಡೆದಿದೆ.

    ಭಾನುವಾರ ‘ಸರಿಗಮಪ ಸೀಸನ್ 15’ ರ ಮೆಗಾ ಆಡಿಷನ್ ಪ್ರಸಾರವಾಗಿತ್ತು. ಈ ಆಡಿಷನ್ ನಲ್ಲಿ 7 ತಿಂಗಳ ಗರ್ಭಿಣಿ ಸಂಧ್ಯಾ ಸ್ಪರ್ಧಿಯಾಗಿ ಭಾಗಿಯಾಗಿದ್ದರು. ಇದೇ ಮೊದಲ ಬಾರಿ ಈ ಕಾರ್ಯಕ್ರಮದಲ್ಲಿ ಗರ್ಭಿಣಿ ಬಂದು ಹಾಡು ಹಾಡಿದ್ದಾರೆ. ಗರ್ಭಿಣಿ ಸಂಧ್ಯಾ ಅವರ ಆತ್ಮಸ್ಥೈರ್ಯ ನೋಡಿ ಎಲ್ಲರು ಮೆಚ್ಚುಗೆಯನ್ನು ಸೂಚಿಸಿದ್ದಾರೆ.

    ಸಂಧ್ಯಾ ಅವರು ಮೊದಲ ಆಡಿಷನ್ ನಲ್ಲಿ ಆಯ್ಕೆಯಾಗಿದ್ದರು. ಮೆಗಾ ಆಡಿಷನ್ ನಲ್ಲಿ ಸಂಧ್ಯಾ ‘ನಮ್ಮೂರ ಮಂದಾರ ಹೂವೆ’ ಸಿನಿಮಾದ ‘ಓಂಕಾರದಿ’ ಹಾಡನ್ನು ಹಾಡಿದ್ದಾರೆ. ನಂತರ ತುಂಬು ಗರ್ಭಿಣಿ ಸಂಧ್ಯಾ ಅವರಿಗೆ ವಾಹಿನಿ ಕಡೆಯಿಂದ ಸೀಮಂತ ಮಾಡಲಾಗಿದೆ.

    ”ಸರಿಗಮಪದ ಶೋದ ಎಲ್ಲ ಎಪಿಸೋಡ್ ಗಳನ್ನು ನೋಡು, ಕೇಳಿ ಆನಂದಪಡು. ಅದನ್ನು ನಿನ್ನ ಮಗುವಿಗೆ ಧಾರೆ ಏರಿ. ದೇವಭಾಷೆಯನ್ನು ಅನುವಾದಿಸಿ ಕರ್ನಾಟಕಕ್ಕೆ ಕೊಡು. ಆಲ್ ದಿ ಬೆಸ್ಟ್” ಎಂದು ಮಹಾಗುರುಗಳಾದ ಹಂಸಲೇಖ ಅವರು ಹೇಳಿ ಹಾರೈಸಿದ್ದಾರೆ.

    “ಒಂದು ಗಾಯನದ ದೃಷ್ಟಿಕೋನದಿಂದ ನೋಡಿದರೆ ಇನ್ನು ಸ್ವಲ್ಪ ಸಾಧನೆ ಬೇಕು. ಆದರೆ ಹಾಡಿಗಿಂತ ಬಹು ಮುಖ್ಯವಾದ ಕೆಲಸವನ್ನು ಭಗವಂತ ನಿಮಗೆ ನೀಡಿದ್ದಾನೆ. ನಿಮಗೆ ಆಯಸ್ಸು, ಆರೋಗ್ಯ ಎಲ್ಲವನ್ನು ದೇವರು ನೀಡಲಿ ಅಂತ ಕೇಳಿಕೊಳ್ಳುತ್ತೇನೆ” ಎಂದು ವಿಜಯ್ ಪ್ರಕಾಶ್ ಶುಭಾಶಯವನ್ನು ತಿಳಿಸಿದ್ದಾರೆ. ಇನ್ನು ಅರ್ಜುನ್ ಜನ್ಯ ಅವರು ನಿಮ್ಮ ಜೊತೆಗೆ ನಿಮ್ಮ ಮಗು ಕೂಡ ವೇದಿಕೆ ಮೇಲೆ ಬಂದಿದೆ. ಅದು ತುಂಬ ದೊಡ್ಡ ವಿಷಯ ಎಂದಿದ್ದಾರೆ.

    ನಿಮ್ಮ ಹಾಡು ಕೇಳಿ ನನಗೆ ನಮ್ಮ ತಾಯಿ ನೆನಪಾದರು. ನಾನು ನಮ್ಮ ತಾಯಿಯ ಹೊಟ್ಟೆಯಲ್ಲಿ ಇದ್ದಾಗ ಎಂಟು ತಿಂಗಳವರೆಗೆ ಅವರು ಸಂಗೀತ ಕಾರ್ಯಕ್ರಮಗಳನ್ನು ನೋಡುತ್ತಿದ್ದರು. ಆ ನೆನಪು ನನಗೆ ಮೂಡುವಂತೆ ಮಾಡಿದ್ದೀರಾ. ನಿಮ್ಮ ಉತ್ಸಾಹವನ್ನು ಮೆಚ್ಚಬೇಕು ಎಂದು ರಾಜೇಶ್ ಕೃಷ್ಣನ್ ಅವರು ಹೇಳಿದ್ದಾರೆ.

    ಸಂಧ್ಯಾ ಅವರು ಮೆಗಾ ಆಡಿಷನ್ ನಲ್ಲಿ ಆಯ್ಕೆ ಆಗಲಿಲ್ಲ. ವೇದಿಕೆಯ ಮೇಲೆ ಪತ್ನಿಯ ಸೀಮಂತ ಮಾಡಿದಕ್ಕೆ ಅವರ ಪತಿ ವಿಷ್ಣು ಕೂಡ ಸಂತಸ ವ್ಯಕ್ತಪಡಿಸಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಗಾಂಧಿ ಜಯಂತಿ ಆಚರಣೆ: ಬಹಿರಂಗವಾಗಿಯೇ ಶಾಸಕರ ವಿರುದ್ಧ ಭಿನ್ನಮತ ಹೊರಹಾಕಿದ ಸಚಿವ ಶಿವಶಂಕರರೆಡ್ಡಿ

    ಗಾಂಧಿ ಜಯಂತಿ ಆಚರಣೆ: ಬಹಿರಂಗವಾಗಿಯೇ ಶಾಸಕರ ವಿರುದ್ಧ ಭಿನ್ನಮತ ಹೊರಹಾಕಿದ ಸಚಿವ ಶಿವಶಂಕರರೆಡ್ಡಿ

    ಚಿಕ್ಕಬಳ್ಳಾಪುರ: ಕಾಲ್ನಡಿಗೆಯ ಮೂಲಕವೇ ಗಿರಿಧಾಮವನ್ನು ಏರಿ ಗಾಂಧಿ ಜಯಂತಿಯನ್ನು ಆಚರಿಸಿದ ಕೃಷಿ ಸಚಿವ ಶಿವಶಂಕರರೆಡ್ಡಿ ಅವರು ಸ್ಥಳೀಯ ಶಾಸಕರ ವಿರುದ್ಧ ಬಹಿರಂಗವಾಗಿಯೇ ಭಿನ್ನಮತ ಹೊರಹಾಕಿದ್ದಾರೆ.

    ವಿಶ್ವವಿಖ್ಯಾತ ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮದ ತಪ್ಪಲಿನ ಸುಲ್ತಾನ ಪೇಟೆಯ ಕಲ್ಲಿನ ಮೆಟ್ಟಿಲುಗಳ ಮಾರ್ಗದ ಬಳಿ ಗಾಂಧೀಜಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಮೂಲಕ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಎನ್ ಎಚ್ ಶಿವಶಂಕರರೆಡ್ಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

    ಈ ವೇಳೆ ಸಭೆಯನ್ನು ಉದ್ದೇಶಿಸಿ ಮಾತನಾಡಿ ಅವರು, ಜಿಲ್ಲೆಯ ಯಾವುದೇ ಸಭೆ ಸಮಾರಂಭ-ಕಾರ್ಯಕ್ರಮಗಳಿಗೆ ನಾನು ಆಹ್ವಾನ ಮಾಡಿದ್ದರೂ ಕೂಡ ಶಾಸಕ ಸುಧಾಕರ್ ಬರಲ್ಲ ಅಂತ ಸಚಿವ ಶಿವಶಂಕರರೆಡ್ಡಿ ಶಾಸಕ ಸುಧಾಕರ್ ವಿರುದ್ಧ ತಮ್ಮ ಅಸಮಾಧಾನ ಹೊರಹಾಕುವ ಮೂಲಕ ಚಿಕ್ಕಬಳ್ಳಾಪುರ ಜಿಲ್ಲೆಯ ಕಾಂಗ್ರೆಸ್ ನಲ್ಲಿನ ಭಿನ್ನಮತವಿರುವುದಾಗಿ ಬಹಿರಂಗವಾಗಿಯೇ ಹೇಳಿಕೊಂಡಿದ್ದಾರೆ.

    ಗಾಂಧಿ ಜಯಂತಿ ಕಾರ್ಯಕ್ರಮಕ್ಕೆ ಸುಧಾಕರ್ ಗೈರು ಆಗಿದ್ದು, ಈ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾನೇ ಸ್ವತಃ ಕೆಲ ಸಭೆ-ಕಾರ್ಯಕ್ರಮಗಳಿಗೆ ಕರೆದಿದ್ದೇನೆ. ಆದರೆ ಸುಧಾಕರ್ ಬಂದಿಲ್ಲ, ಅವರು ಬಂದಿಲ್ಲ ಅಂದರೆ ನಾನು ಏನು ಮಾಡೋಕು ಆಗಲ್ಲ. ಮಂತ್ರಿಯಾಗಿ ನನ್ನ ಜವಾಬ್ದಾರಿಯನ್ನ ನಾನು ನಿಭಾಯಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರು ಹೆಚ್ಚು ಅಲ್ಲ ಕಡಿಮೆ ಅಲ್ಲ. ಪಾಳೇಗಾರಿಕೆನೂ ಇಲ್ಲ, ಪಾಳೇಗಾರಿಕೆ ಕಾಲ ಮುಗಿದು ಹೋಗಿದೆ ಎಂದು ಹೇಳಿದರು.

    ಜನಪ್ರತಿನಿಧಿಗಳಾದ ಮಾತ್ರಕ್ಕೆ ಯಾರಿಗೇನು ಕೊಂಬುಗಳಿಲ್ಲ. ಜನ ನಮ್ಮನ್ನ ಆಯ್ಕೆ ಮಾಡಿದ್ದಾರೆ, ಒಂದು ವೇಳೆ ಜನ ಮನಸ್ಸು ಮಾಡಿದ್ರೇ ನಮ್ಮನ್ನ ಕೆಳಗಿಳಿಸ್ತಾರೆ. ಜನರ ಭಾವನೆಗಳನ್ನು ಅರ್ಥ ಮಾಡಿಕೊಂಡು ಜಿಲ್ಲೆಯ ಅಭಿವೃದ್ದಿಗೆ ಸಹಕರಿಸಬೇಕೇ ಹೊರತು, ಯಾರು ಹೆಚ್ಚೇನು ಅಲ್ಲ ಕಡಿಮೆ ಅಲ್ಲ. ಇದನ್ನ ಶಾಸಕ ಸುಧಾಕರ್ ಅರ್ಥ ಮಾಡಿಕೊಳ್ಳಬೇಕಿದೆ. ಇಲ್ಲ ಅಂತ ದೂರ ಹೋದರೆ, ಯಾವುದು ನಿಲ್ಲಲ್ಲ. ಹೀಗಾಗಿ ನಾನು ಏನೂ ಮಾಡಕ್ಕಾಗಲ್ಲ ಅಂತ ಶಾಸಕ ಸುಧಾಕರ್ ವಿರುದ್ದ ಸಚಿವ ಶಿವಶಂಕರರೆಡ್ಡಿ ಬಹಿರಂಗವಾಗಿಯೇ ತಮ್ಮ ಬೇಸರ ಹೊರಹಾಕಿದ್ದಾರೆ.

    ಗಾಂಧೀಜಿ ನಂಧಿಗಿರಿಧಾಮವನ್ನು ಕಾಲ್ನಡಿಗೆ ಮೂಲಕವೇ ಏರಿದ್ದರು. ಹೀಗಾಗಿ ಗಾಂಧಿ ಜಯಂತಿಯ ಅಂಗವಾಗಿ ಇಂದು ಸಹ ವಿವಿಧ ಶಾಲೆಯ ಎನ್‍ಎಸ್‍ಎಸ್ ನ ವಿದ್ಯಾರ್ಥಿಗಳು ನಂದಿಬೆಟ್ಟದ ಕಲ್ಲಿನ ಮೆಟ್ಟಿಲುಗಳನ್ನು ಮೂಲಕ ಬೆಟ್ಟು ಹತ್ತುವುದರ ಜೊತೆಗೆ ಶ್ರಮದಾನ ಮಾಡಿ ಗಾಂಧಿ ಜಯಂತಿ ಆಚರಿಸಿದರು. ಕಾರ್ಯಕ್ರಮಕ್ಕೆ ಆಗಮಿಸಿದ್ದ ಸಚಿವ ಶಿವಶಂಕರರೆಡ್ಡಿ ಹಾಗೂ ಜಿಲ್ಲಾಧಿಕಾರಿ ಸೇರಿದಂತೆ ಅಧಿಕಾರಿಗಳು ಸಹ ಸ್ವಲ್ಪ ನಂದಿಬೆಟ್ಟ ಏರಿ ಗಾಂಧೀಜಿಯನ್ನ ನೆನೆದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಸಿಎಂ ಕಾರ್ಯಕ್ರಮಕ್ಕೆ ಬಾರದ ಶಾಸಕರಿಗೆ ಸಚಿವ ರೇವಣ್ಣ ಕ್ಲಾಸ್

    ಸಿಎಂ ಕಾರ್ಯಕ್ರಮಕ್ಕೆ ಬಾರದ ಶಾಸಕರಿಗೆ ಸಚಿವ ರೇವಣ್ಣ ಕ್ಲಾಸ್

    ಹಾಸನ: ಗಾಂಧಿ ಜಯಂತಿ ಪ್ರಯುಕ್ತ ಸಿಎಂ ಕುಮಾರಸ್ವಾಮಿ ಅವರ ಕಾರ್ಯಕ್ರಮಕ್ಕೆ ಶಾಸಕರು ಬರದಿದ್ದಕ್ಕೆ ರೇವಣ್ಣ ಕ್ಲಾಸ್ ತೆಗೆದುಕೊಂಡಿದ್ದಾರೆ.

    ಗಾಂಧಿ ಜಯಂತಿಗೆ ಆಗಮಿಸಿದ್ದ ಬಿಜೆಪಿ ಶಾಸಕ ಪ್ರೀತಂಗೌಡ ಅವರನ್ನು ಸಚಿವ ರೇವಣ್ಣ ಪ್ರಶ್ನಿಸಿದ್ದಾರೆ. ರೀ ಕಾರ್ಯಕ್ರಮಕ್ಕೆ ಏಕೆ ಬಂದಿರಲಿಲ್ಲ. ನಾನೇ ಖುದ್ದಾಗಿ ಫೋನ್ ಮಾಡಿದ್ದೆ. ಲೆಟರ್ ಕೂಡ ಕಳಿಸಿದ್ದೆ. ಆದರೂ ಏಕೆ ಬರಲಿಲ್ಲ ಎಂದು ರೇವಣ್ಣ ಪ್ರಶ್ನಿಸಿದ್ದಾರೆ.

    ಕಳೆದ ತಿಂಗಳು 23ರಂದು ಹಾಸನದಲ್ಲಿ ಸಾವಿರಾರು ಕೋಟಿ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕರು ಬಾರದೆ ಗೈರಾಗಿದ್ದರು. ಇಂದು ಈ ಬಗ್ಗೆ ನೇರವಾಗಿ ಸಚಿವರು, ಶಾಸಕರನ್ನು ಪ್ರಶ್ನೆ ಮಾಡಿದ್ದಾರೆ ಎನ್ನಲಾಗುತ್ತಿದೆ.

    ರೇವಣ್ಣ ಈ ಕುರಿತು ಸ್ವತಃ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿಗೆ ಹೇಳಿದ್ದಾರೆ. ನೋಡಿ ಮೇಡಂ ನಾನೇ ಫೋನ್ ಮಾಡಿ ಸ್ವತಃ ಕರೆದಿದ್ದೇನೆ. ಆದರೂ ಯಾರೂ ಬಂದಿಲ್ಲ ಎಂದು ಸಚಿವರು ದೂರಿದ್ದಾರೆ. ಆಗ ಶಾಸಕ ಪ್ರೀತಂಗೌಡ ಆಹ್ವಾನ ಪತ್ರಿಕೆ ನನಗೆ ಹಿಂದಿನ ದಿನ ಬಂತು ನಿಮ್ಮಿಂದ ನನಗೆ ಯಾವುದೇ ಫೋನ್ ಬಂದಿಲ್ಲ. ಅಲ್ಲದೇ ನೀವು ಕರೆ ಮಾಡಿದ್ದು ಈ ಹಿಂದೆ ಗುದ್ದಲಿ ಪೂಜೆಗಾಗಿಯೇ ಎಂದು ಶಾಸಕ ನಾಜೂಕಾಗಿಯೇ ಸಚಿವರಿಗೆ ತಿರುಗೇಟು ನೀಡಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv 

  • ಧರ್ಮಸ್ಥಳಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿ

    ಧರ್ಮಸ್ಥಳಕ್ಕೆ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೇಟಿ

    ಮಂಗಳೂರು: ಪುಣ್ಯಕ್ಷೇತ್ರ ಧರ್ಮಸ್ಥಳದಲ್ಲಿ ನಡೆದ 20ನೇ ವರ್ಷದ ಭಜನಾ ಕಮ್ಮಟದ ಸಮಾರೋಪದಲ್ಲಿ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಪಾಲ್ಗೊಂಡಿದ್ದಾರೆ.

    ಏಳು ದಿನಗಳ ಕಾರ್ಯಕ್ರಮದಲ್ಲಿ 300 ಭಜನಾ ತಂಡಗಳು ಭಾಗವಹಿಸಿದ್ದವು. ಸಮಾರೋಪದ ಅಂಗವಾಗಿ ಭಜನಾ ತಂಡಗಳ 3 ಸಾವಿರಕ್ಕೂ ಹೆಚ್ಚು ಭಜನಾ ಪಟುಗಳಿಂದ ಭಜನೆಯೊಂದಿಗೆ ನಡೆದ ಶೋಭಾಯಾತ್ರೆ ಅಮೋಘವಾಗಿತ್ತು.

    ಈ ಕಾರ್ಯಕ್ರಮದಲ್ಲಿ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಮುಖ್ಯ ಆಕರ್ಷಣೆಯಾಗಿದ್ದರು. ಭಜನಾ ತಂಡಗಳ ಜೊತೆ ಪುನೀತ್ ರಾಜ್‍ಕುಮಾರ್, ರಾಘವೇಂದ್ರ ಸ್ವಾಮಿಗಳ ಕೀರ್ತನೆಯನ್ನು ಹಾಡಿದರು. ಅಲ್ಲದೇ ಪುನೀತ್ ತಮ್ಮ ತಂದೆ ರಾಜಕುಮಾರ್ ಜೊತೆ ಧರ್ಮಸ್ಥಳಕ್ಕೆ ಬಂದ ನೆನಪುಗಳನ್ನು ಹಂಚಿಕೊಂಡರು.

    ಧರ್ಮಸ್ಥಳದ ನನ್ನ ಹಾಗೂ ನನ್ನ ತಂದೆಯ ನಂಟು, ನೆನೆಪು ಸಾಕಷ್ಟು ಇದೆ. ಇಲ್ಲಿ ಚಿತ್ರೀಕರಣ ಮಾಡುವಾಗ ನನ್ನ ತಂದೆ ಜೊತೆ ಬಂದ ನೆನೆಪಿದೆ ಹಾಗೂ ಮಂಜುನಾಥನ ಆಶೀರ್ವಾದ ಪಡೆಯೋಕೆ ಪ್ರತಿ ಎರಡು ವರ್ಷಕ್ಕೊಮ್ಮೆ ಬರುತ್ತೇನೆ. ಆದರೆ ಸಾಂಸ್ಕೃತಿಕ, ಭಜನಾ ಕಾರ್ಯಕ್ರಮಕ್ಕೆ ಬಂದಿದ್ದು ಇದೇ ಮೊದಲ ಬಾರಿ ಬಂದಿದ್ದು ಎಂದು ಹೇಳಿದರು.

    ಅಷ್ಟೇ ಅಲ್ಲದೇ ಪುನೀತ್ ರಾಜ್‍ಕುಮಾರ್ ಧರ್ಮಸ್ಥಳ ಹಾಗೂ ಧರ್ಮಧಿಕಾರಿ ವೀರೇಂದ್ರ ಹೆಗ್ಡೆ ಬಗ್ಗೆ ಮಾತನಾಡಿದರು. ಅಲ್ಲದೇ ಕಾರ್ಯಕ್ರಮದಲ್ಲಿ ಪುನೀತ್ ತಮ್ಮ ತಂದೆ ಅವರ ಚಿತ್ರದ ‘ಹಾಲಲ್ಲಾದರು ಹಾಕು ನೀರಲ್ಲಾದರೂ ಹಾಕು ರಾಘವೇಂದ್ರ..’ ಹಾಡನ್ನು ಕಾರ್ಯಕ್ರಮದಲ್ಲಿ ಹಾಡಿದರು. ಪುನೀತ್ ಹಾಡಿಗೆ ನೆರೆದಿದ್ದರವರು ಕೂಡ ದನಿಗೂಡಿಸಿರುವುದು ವಿಶೇಷವಾಗಿತ್ತು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಪ್ರಶ್ನೆ ಕೇಳುವುದು ನನ್ನ ಹಕ್ಕು: ಪ್ರಕಾಶ್ ರೈ

    ಪ್ರಶ್ನೆ ಕೇಳುವುದು ನನ್ನ ಹಕ್ಕು: ಪ್ರಕಾಶ್ ರೈ

    ಚಾಮರಾಜನಗರ: ನನ್ನನ್ನು ಹಿಂದೂ ಧರ್ಮದ ವಿರೋಧಿ ಎಂದು ಬಿಂಬಿಸಲಾಗುತ್ತಿದೆ. ನಾನು ಹಿಂದೂ ವಿರೋಧಿಯಲ್ಲ. ಇವತ್ತು ಮೋದಿಯಷ್ಟೆ ಅಲ್ಲ, ನಾಳೆ ರಾಹುಲ್ ಗಾಂಧಿ ಪ್ರಧಾನಿಯಾದರೂ ಕೇಳಿದ ಪ್ರಶ್ನೆಗೆ ಉತ್ತರಕೊಡಿ ಎನ್ನುತ್ತೇನೆ. ಪ್ರಶ್ನೆ ಕೇಳುವುದು ನನ್ನ ಹಕ್ಕು ಎಂದು ಬಹುಭಾಷಾನಟ ಪ್ರಕಾಶ್ ರೈ ಹೇಳಿದ್ದಾರೆ.

    ನಗರದ ಅಮೃತಭೂಮಿಯಲ್ಲಿ ರಾಜ್ಯ ರೈತ ಸಂಘ ಆಯೋಜಿಸಿದ್ದ ಯುವ ರೈತರ ಅಧ್ಯಯನ ಶಿಬಿರದಲ್ಲಿ ಮಾತನಾಡಿದ ರೈ, ಇನ್ನು 20 ವರ್ಷ ಕಳೆದರೆ ಸರ್ಕಾರವೇ ಸ್ಟೈಪಂಡ್ ನೀಡಿ, ನೀವು ರೈತರಾಗಿ ಅನ್ನೋ ಪರಿಸ್ಥಿತಿ ಬಂದರೂ ಅಚ್ಚರಿಯಿಲ್ಲ. ರೈತ ಚಳುವಳಿಯನ್ನು ಯಾರೋ ಹೈಜಾಕ್ ಮಾಡಲು ಬಿಡಬಾರದು ಎಂದು ಕರೆ ನೀಡಿದ ಅವರು ತಾವು ರೈತ ಚಳುವಳಿಗೆ ಬೆಂಬಲವಾಗಿ ನಿಲ್ಲುವುದಾಗಿ ಹೇಳಿದರು.

    ಇತ್ತೀಚೆಗೆ ಭೂಮಿಯಲ್ಲಿ ಹೆಚ್ಚೆಚ್ಚು ಬೆಳೆಯಬೇಕೆಂಬ ದುರಾಸೆ ಹೆಚ್ಚಾಗಿದೆ. ಹೆಚ್ಚು ಒತ್ತಡದಿಂದಾಗಿ ಭೂಮಿ ಹಾಳಗತೊಡಗಿದ್ದು, ರೈತರು ನಷ್ಟ ಅನುಭವಿಸುವಂತಾಗಿದೆ. ಹೀಗಾಗಿಯೇ ರೈತರಿಗೆ ಸಾಲ ಮನ್ನಾ ಮಾಡಿ ಎಂದು ಭಿಕ್ಷೆ ಬೇಡುವ ಪರಿಸ್ಥಿತಿ ಎದುರಾಗಿದೆ ಎಂದು ಅಸಮಧಾನ ಹೊರ ಹಾಕಿದರು. ಇದೇ ವೇಳೆ ನಟ ದುನಿಯಾ ವಿಜಯ್ ಹಲ್ಲೆ ಪ್ರಕರಣದ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv