Tag: ಕಾರ್ಯಕ್ರಮ

  • ನಂಜನಗೂಡು ಕಾರ್ಯಕ್ರಮದ ಮಧ್ಯದಲ್ಲೇ ದಿಢೀರ್ ದೆಹಲಿಗೆ ತೆರಳಿದ ಬಿಎಸ್‍ವೈ!

    ನಂಜನಗೂಡು ಕಾರ್ಯಕ್ರಮದ ಮಧ್ಯದಲ್ಲೇ ದಿಢೀರ್ ದೆಹಲಿಗೆ ತೆರಳಿದ ಬಿಎಸ್‍ವೈ!

    ಮೈಸೂರು: ನಂಜನಗೂಡಿನ ಆಯೋಜನೆಗೊಂಡಿದ್ದ ಬಿಜೆಪಿ ವಿಜಯೋತ್ಸವ ಕಾರ್ಯಕ್ರಮದ ಮಧ್ಯದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ದಿಢೀರ್ ದೆಹಲಿ ಪ್ರಯಾಣ ಕೈಗೊಂಡಿದ್ದಾರೆ.

    ಪಟ್ಟಣದ ವಿದ್ಯಾವರ್ಧಕ ಶಾಲಾ ಮೈದಾನದಲ್ಲಿ ಬಿಜೆಪಿ ವಿಜಯೋತ್ಸವ ಸಮಾರಂಭ ಆಯೋಜಿಸಲಾಗಿದ್ದು, ಇಂದು ಸಂಜೆಯವರೆಗೆ ಮೈಸೂರಿನಲ್ಲಿ ವಿವಿಧ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿತ್ತು. ಅಷ್ಟೇ ಅಲ್ಲದೇ ಕಾರ್ಯಕರ್ತರ ಜೊತೆ ಸಭೆ ನಡೆಸಬೇಕಿತ್ತು.

    ವಿಜಯೋತ್ಸವದಲ್ಲಿ ಭಾಗಿಯಾಗಿದ್ದ ಬಿಎಸ್‍ವೈ ಎಲ್ಲಾ ಕಾರ್ಯಕ್ರಮಗಳನ್ನು ರದ್ದು ಮಾಡಿಕೊಂಡು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು ದೆಹಲಿ ಪ್ರಯಾಣವನ್ನು ಕೈಗೊಂಡಿದ್ದಾರೆ.

    ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ವಿ ಶ್ರೀನಿವಾಸ ಪ್ರಸಾದ್, ಶಾಸಕರಾದ ಶ್ರೀರಾಮುಲು, ಎಸ್ ಎ ರಾಮದಾಸ್, ಎಲ್ ನಾಗೇಂದ್ರ, ನಿರಂಜನಕುಮಾರ್, ಹರ್ಷವರ್ಧನ್ ಭಾಗಿಯಾಗಿದ್ದರು.

    ದೆಹಲಿ ಪ್ರಯಾಣ ಯಾಕೆ?
    ಅಡಿಕೆ ಬೆಳೆಗಾರರ ಸಮಸ್ಯೆಯ ಪರಿಹಾರ ಸಂಬಂಧ ನಾಳೆ ಕೇಂದ್ರ ಸಚಿವರ ಭೇಟಿಗೆ ಸಮಯ ನಿಗದಿಯಾಗಿದ್ದು, ಬಿಎಸ್ ವೈ ನೇತೃತ್ವದ ನಿಯೋಗಕ್ಕೂ ಸಮಯ ನಿಗದಿಯಾಗಿದೆ. ಈ ಕಾರಣಕ್ಕೆ ಬಿಎಸ್‍ವೈ ತೆರಳಿದ್ದಾರೆ ಎನ್ನಲಾಗಿದೆ. ಇದರ ಜೊತೆಯಲ್ಲೇ ರಾಜ್ಯ ರಾಜಕೀಯದಲ್ಲಿ ಬಿರುಸಿನ ಚಟುವಟಿಕೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿಯಾಗುವ ಸಾಧ್ಯತೆಯಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

  • ಸ್ಯಾಂಡಲ್‍ವುಡ್ ಲೆಜೆಂಡ್‍ನ ಕಂಡರೆ ಸ್ವಾಭಾವಿಕವಾಗಿ ತಲೆ ಬಾಗುತ್ತಾರೆ ಕಿಚ್ಚ!

    ಸ್ಯಾಂಡಲ್‍ವುಡ್ ಲೆಜೆಂಡ್‍ನ ಕಂಡರೆ ಸ್ವಾಭಾವಿಕವಾಗಿ ತಲೆ ಬಾಗುತ್ತಾರೆ ಕಿಚ್ಚ!

    ಬೆಂಗಳೂರು: ಸ್ಯಾಂಡಲ್‍ವುಡ್ ಹಿರಿಯ ನಟ, ಲೆಜೆಂಡ್ ಅನಂತ್ ನಾಗ್ ಅವರನ್ನು ಕಂಡರೆ ನಾನು ಸ್ವಾಭಾವಿಕವಾಗಿ ತಲೆ ಬಾಗುತ್ತೇನೆ ಎಂದು ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ತಿಳಿಸಿದ್ದಾರೆ.

    ರಿಷಬ್ ಶೆಟ್ಟಿ ನಿರ್ದೇಶನದ ‘ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು’ ಚಿತ್ರದ ಆಡಿಯೋ ಬಿಡುಗಡೆ ಸಮಾರಂಭದಲ್ಲಿ ಕಿಚ್ಚ ಸುದೀಪ್ ಭಾಗವಹಿಸಿದ್ದರು. ನಾನು ಚಿತ್ರರಂಗದಲ್ಲಿ ತುಂಬಾ ಕಡಿಮೆ ಜನರ ಮುಂದೆ ಸ್ವಭಾವಿಕವಾಗಿ ತಲೆ ಬಾಗುತ್ತೇನೆ. ಅದರಲ್ಲಿ ಅನಂತ್ ನಾಗ್ ಸರ್ ಕೂಡ ಒಬ್ಬರು. ಅನಂತ್‍ನಾಗ್ ಅವರನ್ನು ನೋಡಿದಾಗೊಮ್ಮೆ ಒಂದು ರೀತಿ ಖುಷಿ ನನ್ನಲ್ಲಿ ಆಗುತ್ತದೆ. ಆ ಖುಷಿಗೆ ಕಾರಣ ಏನೆಂದು ಮಾತ್ರ ನನಗೆ ಗೊತ್ತಿಲ್ಲ. ನೇರ ನುಡಿ ಹಾಗೂ ಸ್ವಭಾವಗಳ ವಿಚಾರದಲ್ಲಿ ಅವರು ನನಗೆ ಟೀಚರ್ ಎಂದು ಕಿಚ್ಚ ತಿಳಿಸಿದ್ದಾರೆ.

    ಅನಂತ್ ನಾಗ್ ಅವರು ಕೂಡ ಸುದೀಪ್ ಜೊತೆಯಲ್ಲಿ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಸುದೀಪ್ ನನ್ನನ್ನು ಹೆಚ್ಚು ಇಷ್ಟಪಡುತ್ತಾರೆ. ನನಗೆ ಅವರ ಸ್ವಭಾವ ನೋಡಿ ತುಂಬಾ ಖುಷಿಯಾಗುತ್ತೆ ಎಂದು ಅನಂತ್ ನಾಗ್ ತಮ್ಮ ಖುಷಿಯನ್ನು ವ್ಯಕ್ತಪಡಿಸಿದ್ದಾರೆ.

    ಈ ಹಿಂದೆ ಕಿಚ್ಚ ಸುದೀಪ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ನಾನು ಚಿತ್ರರಂಗದಲ್ಲಿ ಸಾಹಸ ಸಿಂಹ ಡಾ. ವಿಷ್ಣುವರ್ಧನ್ ಹಾಗೂ ಪ್ರಕಾಶ್ ರೈಗೆ ಶರಣಾಗಿದ್ದಾನೆ ಎಂದು ಹೇಳಿದ್ದರು. ನಾನು ವಿಷ್ಣುವರ್ಧನ್ ಸರ್ ಮೇಲೆ ಅಪಾರ ಅಭಿಮಾನ ಹೊಂದಿದ್ದೇನೆ. ‘ಮಾತಾಡ್ ಮಾತಾಡ್ ಮಲ್ಲಿಗೆ’ ಚಿತ್ರೀಕರಣದ ವೇಳೆ ವಿಷ್ಣು ಸರ್ ಅವರಿಗೆ ನಾನು ಶರಣಾದೆ ಎಂದು ಸುದೀಪ್ ತಮ್ಮ ಅನುಭವವನ್ನು ಹಂಚಿಕೊಂಡಿದ್ದರು.

    ವಿಷ್ಣುವರ್ಧನ್ ಅವರನ್ನು ಬಿಟ್ಟರೆ ನಾನು ಪ್ರಕಾಶ್ ರೈ ಅವರಿಗೆ ಶರಣಾದೆ. ಪ್ರಕಾಶ್ ರೈ ಮಾತನಾಡುವಾಗ ಎಕೋ ಹೊಡೆಯುತ್ತೆ. ಅವರು ಎದುರಿಗಿದ್ದರೆ ನನಗೆ ನಟಿಸುವುದ್ದಕ್ಕೆ ಕಷ್ಟ ಆಗುತ್ತದೆ. ನಾನು ಅವರ ಜೊತೆ ರನ್ನ ಚಿತ್ರದಲ್ಲಿ ನಟಿಸಿದೆ. ರನ್ನ ಚಿತ್ರದಲ್ಲಿ ಅವರು ನಟಿಸುವಾಗ ನಾನು ಮಾತನಾಡುತ್ತಿರಲಿಲ್ಲ. ನಾನು ಹಾಗೂ ಪ್ರಕಾಶ್ ರೈ ಹಾರ್ಡ್ ಡಿಸ್ಕ್ ಇದ್ದ ಹಾಗೆ. ಅವರೊಳಗೆ ತುಂಬಾ ವಿಷಯವಿದೆ. ನಾನು ಪ್ರತಿಸಲ ಅವರನ್ನು ಭೇಟಿ ಆಗುವಾಗ ಅವರಿಂದ ಸ್ಫೂರ್ತಿಗೊಳ್ಳುತ್ತೇನೆ ಎಂದು ಪ್ರಕಾಶ್ ರೈ ಬಗ್ಗೆ ಸುದೀಪ್ ಮಾತನಾಡಿದ್ದರು.

  • ರಾಜ್ಯ ಯುವ ಬ್ರಿಗೇಡ್ ವತಿಯಿಂದ ಭೀಮಾ ನದಿ ಸ್ವಚ್ಛತಾ ಕಾರ್ಯಕ್ರಮ

    ರಾಜ್ಯ ಯುವ ಬ್ರಿಗೇಡ್ ವತಿಯಿಂದ ಭೀಮಾ ನದಿ ಸ್ವಚ್ಛತಾ ಕಾರ್ಯಕ್ರಮ

    ಕಲಬುರಗಿ: ನಿರುಪಯುಕ್ತ ವಸ್ತುಗಳಿಂದ ಕಲುಷಿತಗೊಂಡಿರುವ ಭೀಮಾ ನದಿಯನ್ನ ಸ್ವಚ್ಛ ಮಾಡಲು ರಾಜ್ಯ ಯುವ ಬ್ರಿಗೇಡ್ ವತಿಯಿಂದ ಸ್ವಚ್ಚತಾ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳಲಾಗಿತ್ತು.

    ಜಿಲ್ಲೆಯ ಅಫಜಲಪುರ ತಾಲೂಕಿನ ಸುಕ್ಷೇತ್ರ ಘತ್ತರಗಿಯಲ್ಲಿರುವ ಭೀಮಾ ನದಿಯ ಸ್ವಚ್ಛತೆಯನ್ನು ಕೈಗೊಳ್ಳಲಾಗಿತ್ತು. ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಭಾಗವಹಿಸಿ ಕಾರ್ಯಕ್ರಮಕ್ಕೆ ಚಾಲನೆಯನ್ನ ನೀಡಿದರು. ಚಕ್ರವರ್ತಿ ಸೂಲಿಬೆಲೆ ನೇತೃತ್ವದ ರಾಜ್ಯ ಯುವ ಬ್ರಿಗೇಡ್ ಸಂಘಟನೆಯೂ, ಈಗಾಗಲೇ ರಾಜ್ಯದ ವಿವಿಧಡೆ ಆರು ನದಿಗಳನ್ನ ಕ್ಲಿನ್ ಮಾಡಿದೆ.

    ಇದೀಗ ಸ್ವಚ್ಚತಾ ಕಾರ್ಯಕ್ರಮವನ್ನ ಮುಂದುವರೆಸಿಕೊಂಡು ಹೋಗಲು ಭೀಮಾ ನದಿಯನ್ನ ಆಯ್ಕೆ ಮಾಡಿಕೊಂಡಿದ್ದು, ನದಿ ಸಂಪೂರ್ಣ ಸ್ವಚ್ಚಗೊಳ್ಳುವರೆಗೂ ಪ್ರತಿ ಭಾನುವಾರ ಯುವ ಬ್ರಿಗೇಡ್ ಪಡೆ ಸ್ವಚ್ಚತಾ ಕಾರ್ಯದಲ್ಲಿ ತೊಡಗಿಸಿಕೊಳ್ಳಲ್ಲಿದ್ದಾರೆ.

  • ಸುದ್ದಿವಾಹಿನಿಯ ನೇರ ಪ್ರಸಾರದ ಕಾರ್ಯಕ್ರಮದಲ್ಲೆ ಬಡಿದಾಡಿಕೊಂಡ ಅತಿಥಿಗಳು

    ಸುದ್ದಿವಾಹಿನಿಯ ನೇರ ಪ್ರಸಾರದ ಕಾರ್ಯಕ್ರಮದಲ್ಲೆ ಬಡಿದಾಡಿಕೊಂಡ ಅತಿಥಿಗಳು

    ನವದೆಹಲಿ: ನೊಯ್ಡಾದ ಖಾಸಗಿ ಸುದ್ದಿವಾಹಿನಿಯ ನೇರ ಪ್ರಸಾರದ ಚರ್ಚಾ ಕಾರ್ಯಕ್ರಮದಲ್ಲೇ ಮೌಲಾನಾ ಹಾಗೂ ಮಹಿಳಾ ವಕೀಲೆ ಬಡಿದಾಡಿಕೊಂಡಿದ್ದಾರೆ.

    ಮಂಗಳವಾರ ಸಂಜೆ ತ್ರಿವಳಿ ತಲಾಖ್‍ಗೆ ಸಂಬಂಧಿಸಿದಂತೆ ಸ್ಥಳೀಯ ಖಾಸಗಿ ಸುದ್ದಿವಾಹಿನಿಯಲ್ಲಿ ನೇರ ಪ್ರಸಾರ ಕಾರ್ಯಕ್ರಮ ಪ್ರಸಾರವಾಗುತ್ತಿತ್ತು. ಈ ವೇಳೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮೌಲಾನ ಇಜಾಜ್ ಅರ್ಷದ್ ಕಜ್ಮಿ ಹಾಗೂ ಸುಪ್ರಿಂಕೋರ್ಟ್ ನ ಮಹಿಳಾ ವಕೀಲೆಯಾದ ಫರ್ಹಾ ಫೈಯಾಜ್ ನಡುವೆ ಮಾತುಕತೆ ತಾರಕ್ಕೇರಿದೆ. ನೇರಪ್ರಸಾರದ ಕಾರ್ಯಕ್ರಮವನ್ನು ಲೆಕ್ಕಿಸದೆ ಇವರಿಬ್ಬರು ಪರಸ್ಪರ ಬಡಿದಾಡಿಕೊಂಡಿದ್ದಾರೆ. ಇದೇ ವೇಳೆ ಕೋಪಗೊಂಡ ಮೌಲನಾ ಮಹಿಳೆಯ ಮೇಲೆ ಕೈ ಮಾಡಿದ್ದಾರೆ.

    ಘಟನೆ ಸಂಬಂಧ ಎಚ್ಚೆತ್ತ ಸುದ್ದಿವಾಹಿನಿಯು ಮೌಲಾನನ್ನು ತಡೆದು, ಮಹಿಳಾ ವಕೀಲೆಯನ್ನು ರಕ್ಷಿಸಿದ್ದಾರೆ. ಘಟನೆ ಸಂಬಂಧ ಮೌಲಾನ ಇಜಾಜ್ ಅರ್ಷದ್ ಕಜ್ಮಿ ವಿರುದ್ಧ ಸುದ್ದಿವಾಹಿನಿಯು ದೂರು ನೀಡಿದ ಹಿನ್ನೆಲೆಯಲ್ಲಿ ಬುಧವಾರ ಮೌಲಾನನ್ನು ಪೊಲೀಸರು ಬಂಧಿಸಿದ್ದಾರೆ.

    ಏನಿದು ಗಲಾಟೆ?
    ತ್ರಿವಳಿ ತಲಾಖ್ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸುಪ್ರೀಂ ಕೋರ್ಟ್‍ನ ಮಹಿಳಾ ವಕೀಲೆ ಫರ್ಹಾ ಫಯಾಜ್‍ರವರು ತ್ರಿವಳಿ ತಲಾಕ್ ಕುರಿತು ಕುರಾನ್ ನಲ್ಲಿ ಉಲ್ಲೇಖವಿಲ್ಲ, ಮುಸ್ಲಿಂ ಸಮುದಾಯ ಮಹಿಳೆಯ ಮೂಲಭೂತ ಹಕ್ಕಿಗೆ ಧಕ್ಕೆಮಾಡುತ್ತಿದ್ದು, ಮದುವೆಯ ಸಮಯದಲ್ಲಿ ಲಿಂಗ ತಾರತಮ್ಯ ನಡೆಸುತ್ತದೆ. ಇದರಿಂದಾಗಿ ಮಹಿಳೆಯರು ಬಲಿಪಶುಗಳಾಗಿದ್ದಾರೆ. ತಲಾಖ್ ನಿಂದಾಗಿ ಮಹಿಳೆಗೆ ಸರಿಯಾದ ಪರಿಹಾರಗಳು ಸಹ ಸಿಗುವುದಿಲ್ಲ ಎಂದು ತಮ್ಮ ಅಭಿಪ್ರಾಯ ತಿಳಿಸಿದ್ದರು. ಇದರಿಂದ ರೊಚ್ಚಿಗೆದ್ದ ಮೌಲಾನಾ ಕಜ್ಮಿ ಮಹಿಳಾ ವಕೀಲೆ ಮೇಲೆ ಹಲ್ಲೆ ನಡೆಸಿದ್ದಾನೆ.

  • ಮೋದಿ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗದಿದ್ದಕ್ಕೆ ಪೊಲೀಸರ ಮೇಲೆಯೇ ದಾಳಿ- ವಿಡಿಯೋ

    ಮೋದಿ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗದಿದ್ದಕ್ಕೆ ಪೊಲೀಸರ ಮೇಲೆಯೇ ದಾಳಿ- ವಿಡಿಯೋ

    ಕೋಲ್ಕತ್ತಾ: ಪೊಲೀಸರ ಮೇಲೆ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ ಘಟನೆ ಪಶ್ಚಿಮ ಬಂಗಾಳದ ಪಶ್ಚಿಮ ಮಿಡ್ನಾಪುರ್ ನಲ್ಲಿ ನಡೆದಿದೆ.

    ಈ ಘಟನೆ ಸೋಮವಾರ ಖರ್ಗಾಪುರ ಚೌರಿಂಗಿಯಲ್ಲಿ ನಡೆದಿದ್ದು, ಮೋದಿ ಕಾರ್ಯಕ್ರಮಕ್ಕೆ ಹೋಗಲು ಸಾಧ್ಯವಾಗಿಲ್ಲ ಅಂತ ಸಿಟ್ಟುಗೊಂಡ ಬಿಜೆಪಿ ಕಾರ್ಯಕರ್ತರು ಪೊಲೀಸರ ಮೇಲೆಯೇ ದಾಳಿ ನಡೆಸಿದ್ದಾರೆ.

    ಸೋಮವಾರ ಮಿಡ್ನಾಪುರದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ರ್ಯಾಲಿಯಿತ್ತು. ಹೀಗಾಗಿ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸಲೆಂದು ತೆರಳುತ್ತಿದ್ದರು. ಈ ವೇಳೆ ಕಾರ್ಯಕರ್ತರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡಿದ್ದು, ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಅಸಾಧ್ಯವಾಯಿತು. ಹೀಗಾಗಿ ಸಿಟ್ಟಗೊಂಡ ಕಾರ್ಯಕರ್ತರು ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಪೊಲೀಸರು ಅಲ್ಲಿಂದ ಪಲಾಯನ ಮಾಡಲು ಯತ್ನಿಸಿದ್ದಾರೆ. ಇದರಿಂದ ಮತ್ತಷ್ಟು ಸಿಟ್ಟುಗೊಂಡ ಕಾರ್ಯಕರ್ತರು ಅವರ ಮೇಲೆ ದಾಳಿ ನಡೆಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸೋಮವಾರ ನಡೆದ ಮೋದಿ ಕಾರ್ಯಕ್ರಮದ ವೇಳೆ ಟೆಂಟ್ ಕುಸಿದು 90 ಮಂದಿ ಗಾಯಗೊಂಡಿದ್ದರು. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಕಾರ್ಯಕ್ರಮದ ಬಳಿಕ ಪ್ರಧಾನಿಯವರು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದರು.

  • ಕುಮಾರಣ್ಣ ಬಂದಾಗ್ಲೇ ಎಲ್ರಿಗೂ ಹೊಟ್ಟೆ ನೋವು ಪ್ರಾರಂಭವಾಗುತ್ತೆ: ಎಚ್‍ಡಿಕೆ

    ಕುಮಾರಣ್ಣ ಬಂದಾಗ್ಲೇ ಎಲ್ರಿಗೂ ಹೊಟ್ಟೆ ನೋವು ಪ್ರಾರಂಭವಾಗುತ್ತೆ: ಎಚ್‍ಡಿಕೆ

    ರಾಮನಗರ: ಕುಮಾರಣ್ಣ ಬಂದಾಗಲೇ ಎಲ್ಲರಿಗೂ ಹೊಟ್ಟೆ ನೋವು ಪ್ರಾರಂಭವಾಗುತ್ತೆ ಎಂದು ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ.

    ಇಂದು ಸಿಎಂ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿ ರಾಮನಗರ ಜಿಲ್ಲೆಗೆ ಪ್ರಪ್ರಥಮವಾಗಿ ಭೇಟಿ ನೀಡಿದ್ದಾರೆ. ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿವಿಧ ಕಾಮಗಾರಿಗಳ ಶಿಲಾನ್ಯಾಸ ಹಾಗೂ ಸಾರ್ವಜನಿಕರ ಕುಂದು-ಕೊರತೆಯ ಸಭೆಯಲ್ಲಿ ಪಾಲ್ಗೊಂಡಿದ್ದರು.

    ಜಿಲ್ಲಾಡಳಿತ ಭವನದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಎಲ್ಲರಿಗೂ ಕುಮಾರಣ್ಣ ಬಂದ ಮೇಲೆ ಹೊಟ್ಟೆ ನೋವು ಪ್ರಾರಂಭವಾಗುತ್ತದೆ ಎಂದು ಹೇಳಿಕೆ ನೀಡಿದರು. ಅಲ್ಲದೇ ನಾನೂ ಈಗ ತಾನೇ ಸಾಲಮನ್ನಾ ಮಾಡಿದ್ದೇನೆ. ಇದಾದ ನಂತರ ಒಂದರ ಮೇಲೆ ಒಂದೊಂದು ಸಮಸ್ಯೆ ಬರುತ್ತಿದೆ. ಇಷ್ಟು ದಿನ ಸಮಸ್ಯೆಗಳನ್ನು ಹೇಳಿಕೊಳ್ಳಲು ಯಾರು ಇಲ್ಲವೇ ಎಂದು ಪ್ರಶ್ನಿಸಿದರು.

    ಮುಂದಿನ ದಿನಗಳಲ್ಲಿ ಮಾವು ಬೆಳಗಾರರಿಗೂ ಹಾಗೂ ರೇಷ್ಮೆ ಬೆಳೆಗಾರರಿಗೂ ಬೆಂಬಲ ಬೆಲೆ ನೀಡಬೇಕು ಎಂದು ಕೇಳಿ ಬರುತ್ತಿದೆ. ಯಾವುದೇ ಸಮಸ್ಯೆಗಳಿಗೆ ಶೀಘ್ರವೇ ಪರಿಹಾರ ತೆಗೆದುಕೊಳ್ಳುಲು ಸಾಧ್ಯವಾಗುವುದಿಲ್ಲ. ಸಮಸ್ಯೆ ಕುರಿತು ಅಧಿಕಾರಿಗಳ ಜೊತೆಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇನೆ. ರಾಜ್ಯದಲ್ಲಿ ಹಾಲು ಉತ್ಪಾದನೆಯೂ ಹೆಚ್ಚಾಗಿರುವುದರಿಂದ ಮಾರಾಟ ಮಾಡಲು ಕಷ್ಟವಾಗಿದೆ ಎಂದು ತಿಳಿಸಿದರು.

    ರೇಷ್ಮೆಗೆ ಬೆಂಬಲ ಬೆಲೆ ನೀಡುವ ಕುರಿತು ತಿರ್ಮಾನ ಕೈಗೊಳ್ಳಲಾಗುವುದು. ರೇಷ್ಮೆಗೆ ಬೆಂಬಲ ಬೆಲೆ ನೀಡಲು ಕೇವಲ ರಾಮನಗರ ಜಿಲ್ಲೆ ಮಾತ್ರ ಸೀಮಿತವಿಲ್ಲ ರಾಜ್ಯಾದ್ಯಂತ ಇರುವ ರೇಷ್ಮೆ ಬೆಳಗಾರರ ಪರಿಸ್ಥಿತಿಯನ್ನು ಸಹ ನಾವು ಅರ್ಥಮಾಡಿಕೊಳ್ಳಬೇಕು ಎಂದು ತಿಳಿಸಿದರು.

    ಸಭೆಗೂ ಮೊದಲು ಅನೇಕ ಕಾರ್ಯಕ್ರಮಗಳನ್ನು ಉದ್ಘಾಟಿಸಿದ ಸಿಎಂ ಕುಮಾರಸ್ವಾಮಿಯವರು ಬಿಜಿಎಸ್ ಅಂಧರ ಶಾಲೆಯಲ್ಲಿ ಏರ್ಪಡಿಸಿದ್ದ ಭೋಜನ ಕೂಟದಲ್ಲಿ ಪಾಲ್ಗೊಂಡರು. ಭೋಜನ ಕೂಟದಲ್ಲಿ ಸಿಎಂ ಕುಮಾರಸ್ವಾಮಿಯರು ಆದಿ ಚುಂಚನಗಿರಿ ಕ್ಷೇತ್ರದ ಮಠಾಧೀಶ ಶ್ರೀ ನಿರ್ಮಲಾನಂದ ಸ್ವಾಮೀಜಿ ಹಾಗೂ ಸಚಿವರಾದ ಡಿ.ಕೆ ಶಿವಕುಮಾರ್, ಎಚ್ ಎಂ ರೇವಣ್ಣಜೊತೆಗೆ ಭೋಜನ ಮಾಡಿದ್ದಾರೆ.

  • ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಭಾರತ ಹಿಂದೂ-ಪಾಕಿಸ್ತಾನ ಆಗಲಿದೆ: ಶಶಿ ತರೂರ್

    ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಭಾರತ ಹಿಂದೂ-ಪಾಕಿಸ್ತಾನ ಆಗಲಿದೆ: ಶಶಿ ತರೂರ್

    ತಿರುವನಂತಪುರಂ: ಭಾರತೀಯ ಜನತಾ ಪಕ್ಷ (ಬಿಜೆಪಿ) `ಹಿಂದೂತ್ವ ಸಿದ್ಧಾಂತ’ ವನ್ನು ಹೊಂದಿದೆ. 2019ರ ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲವು ಸಾಧಿಸಿದರೆ, ಭಾರತವನ್ನು ಹಿಂದೂ ಪಾಕಿಸ್ತಾನವಾಗಿ ಬದಲಿಸುತ್ತದೆ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.

    ಬುಧವಾರ ತಿರುವನಂತಪುರಂ ನಲ್ಲಿ ನಡೆದ ಕಾರ್ಯಕ್ರದಲ್ಲಿ ಮಾತನಾಡಿದ ಶಶಿ ತರೂರ್, ಬಿಜೆಪಿ ಹೊಸ ಸಂವಿಧಾನವನ್ನು ರಚಿಸಿ, ಅಲ್ಪಸಂಖ್ಯಾತರಿಗೆ ಹಕ್ಕು ನೀಡದ ಪಾಕಿಸ್ತಾನದ ರೀತಿ ಭಾರತವನ್ನು ಮಾರ್ಪಾಡಿಸಿ ಹಿಂದೂ ರಾಷ್ಟ್ರದ ಹಾದಿಯನ್ನು ಸುಗಮಗೊಳಸಲಿದೆ ಎಂದು ಹೇಳಿದ್ದಾರೆ.

    ಬಿಜೆಪಿಯು ಬರುವ ಲೋಕಸಭಾ ಚುನಾವಣೆಯಲ್ಲಿ ಮರು ಆಯ್ಕೆಯಾಗಿ ಅಧಿಕಾರಕ್ಕೆ ಬಂದರೆ, ನಮ್ಮ ಪ್ರಜಾಪ್ರಭುತ್ವದ ಎಲ್ಲ ಅಂಶಗಳನ್ನು ಭಾರತದ ಸಂವಿಧಾನದಿಂದ ತೆಗೆದು ಹಾಕುತ್ತಾರೆ. ತಮಗೆ ಬೇಕಾದಂತೆ ಮುಂದಿನ ದಿನಗಳಲ್ಲಿ ಹೊಸ ಸಂವಿಧಾನವನ್ನು ಸೃಷ್ಟಿಸುತ್ತಾರೆ ಎಂದು ಶಶಿ ತರೂರ್ ಭವಿಷ್ಯ ನುಡಿದರು.

    ಪಾಕಿಸ್ತಾನದಲ್ಲಿ ಭಯೋತ್ಪಾದನೆ ಹೇಗೆ ಉಗ್ರ ಸ್ವರೂಪ ಪಡೆದಿದೆಯೋ, ಅದೇ ರೀತಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದರೆ ದೇಶದಲ್ಲಿ ಧರ್ಮ ಭಯೋತ್ಪಾದನೆಯನ್ನು ನಡೆಸುತ್ತದೆ. ಹಿಂದೂಗಳನ್ನು ಮಾತ್ರ ಪರಿಗಣಿಸಿ ಇತರೇ ಅಲ್ಪಸಂಖ್ಯಾತ ಪ್ರಜೆಗಳನ್ನು ನಿರ್ಲಕ್ಷಿಸುತ್ತದೆ ಎಂಬ ಅರ್ಥದಲ್ಲಿ `ಹಿಂದೂ ಪಾಕಿಸ್ತಾನ’ ಎಂದು ವ್ಯಂಗ್ಯವಾಗಿ ಶಶಿ ತರೂರ್ ಮಾತನಾಡಿದ್ದಾರೆ.

    ಶಶಿ ತರೂರು ಈ ನಿಲುವಿಗೆ ಬಿಜೆಪಿ ಸದಸ್ಯರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಗೆಯೇ ಬಿಜೆಪಿ ಪಕ್ಷವನ್ನು ಅವಮಾನಿಸಿದ್ದಕ್ಕೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕ್ಷಮೆ ಕೇಳಬೇಕು ಎಂದು ಬಜೆಪಿ ಸದಸ್ಯರು ಆಗ್ರಹಿಸಿದ್ದಾರೆ.

  • ಪ್ರಣಬ್ ಬಳಿಕ ಮೋಹನ್ ಭಾಗವತ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ರತನ್ ಟಾಟಾ!

    ಪ್ರಣಬ್ ಬಳಿಕ ಮೋಹನ್ ಭಾಗವತ್ ಜೊತೆ ವೇದಿಕೆ ಹಂಚಿಕೊಳ್ಳಲಿದ್ದಾರೆ ರತನ್ ಟಾಟಾ!

    ಮುಂಬೈ: ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ನಂತರ ದೇಶದ ಪ್ರಮುಖ ಉದ್ಯಮಿಗಳಲ್ಲಿ ಒಬ್ಬರಾಗಿರುವ ರತನ್ ಟಾಟಾರವರು ಆರ್ ಎಸ್‍ಎಸ್‍ ಮುಖ್ಯಸ್ಥ ಮೋಹನ್ ಭಾಗವತ್ ಅವರ ಜತೆ ವೇದಿಕೆಯನ್ನು ಹಂಚಿಕೊಳ್ಳಲಿದ್ದಾರೆ.

    ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಅಂಗಸಂಸ್ಥೆಯಾಗಿರುವ `ನಾನಾ ಪಾಲ್ಕರ್ ಸಮಿತಿ’ಯು ಮುಂದಿನ ತಿಂಗಳು ಪುಣೆಯಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ರತನ್ ಟಾಟಾ ಭಾಗವಹಿಸಲಿದ್ದಾರೆ ಎಂದು ಸಂಘದ ಮೂಲಗಳು ತಿಳಿಸಿವೆ. ಆದರೆ ಈ ಕಾರ್ಯಕ್ರಮದ ಬಗ್ಗೆ ಅಧಿಕೃತ ಘೋಷಣೆಯಾಗಬೇಕಿದ್ದು, ಆಗಸ್ಟ್ 24ರಂದು ಕಾರ್ಯಕ್ರಮ ನಡೆಯುವ ಸಾಧ್ಯತೆಗಳು ಹೆಚ್ಚಾಗಿವೆ. ಇದನ್ನೂ ಓದಿ: #PranabAtRSS: ರಾಷ್ಟ್ರ, ರಾಷ್ಟ್ರೀಯತೆ, ರಾಷ್ಟ್ರಭಕ್ತಿ ಬಗ್ಗೆ ಮಾತನಾಡಿದರು ಪ್ರಣಬ್ ದಾದಾ!

    ಕಳೆದ ತಿಂಗಳು ನಾಗ್ಪುರದಲ್ಲಿ ನಡೆದ ಆರ್ ಎಸ್‍ಎಸ್‍ ಕಾರ್ಯಕ್ರಮದಲ್ಲಿ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಪಾಲ್ಗೊಂಡು ದೇಶಾದ್ಯಂತ ಸಂಚಲನ ಮೂಡಿಸಿದ್ದರು. ಪ್ರಣಬ್ ಮುಖರ್ಜಿಯವರ ಭೇಟಿಯಿಂದ ಆರ್ ಎಸ್‍ಎಸ್‍ಗೆ ಸೇರ್ಪಡೆಯಾಗುವ ಕಾರ್ಯಕರ್ತರ ಸಂಖ್ಯೆ ಹೆಚ್ಚಾಗಿದೆ ಸಂಘ ತಿಳಿಸಿತ್ತು.

  • ನೀವೆಂದೂ ನೋಡಿರದ ಶ್ರದ್ಧಾಂಜಲಿ ಕಾರ್ಯಕ್ರಮ-ವಿಡಿಯೋ

    ನೀವೆಂದೂ ನೋಡಿರದ ಶ್ರದ್ಧಾಂಜಲಿ ಕಾರ್ಯಕ್ರಮ-ವಿಡಿಯೋ

    ನವದೆಹಲಿ: ವೃದ್ಧ ದಂಪತಿಯ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಯುವತಿಯನ್ನು ಕರೆಸಿ ಡ್ಯಾನ್ಸ್ ಮಾಡಿಸಿದ ವಿಡಿಯೋವೊಂದು ವೈರಲ್ ಆಗಿದೆ.

    ಈ ಘಟನೆ ಎಲ್ಲಿ, ಯಾವಾಗ ನಡೆದಿದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಆದರೆ ಈ ವಿಡಿಯೋ ನೋಡಿದಾಗ ಯುವತಿ ಬಾಲಿವುಡ್ ‘ವಾಂಟೆಡ್’ ಚಿತ್ರದ ಹಾಡಿಗೆ ಡ್ಯಾನ್ಸ್ ಮಾಡುತ್ತಿದ್ದಾಳೆ. ಈ ಸಂದರ್ಭದಲ್ಲಿ ಅಲ್ಲಿದ್ದ ಜನರು ಯುವತಿಯ ಡ್ಯಾನ್ಸ್ ನೋಡಿ ಎಂಜಾಯ್ ಮಾಡಿದ್ದಾರೆ.

    ವೇದಿಕೆ ಮೇಲೆ ಯುವತಿ ಡ್ಯಾನ್ಸ್ ಮಾಡುತ್ತಿದ್ದು, ಆಕೆ ಹಿಂದೆಯೇ ವೃದ್ಧ ದಂಪತಿಯ ಶ್ರದ್ಧಾಂಜಲಿ ಪೋಸ್ಟರ್ ಹಾಕಲಾಗಿತ್ತು. ಆ ಬ್ಯಾನರ್ ನೋಡಿದ ಮೇಲೆ ಇದೊಂದು ಶ್ರದ್ಧಾಂಜಲಿ ಕಾರ್ಯಕ್ರಮವಾಗಿದ್ದು, ಯುವತಿ ಅಲ್ಲಿ ಡ್ಯಾನ್ಸ್ ಮಾಡುತ್ತಿದ್ದಳು.

    ವಿಡಿಯೋದಲ್ಲಿ ಕೆಲವು ಮಂದಿ ಯುವತಿಯ ಡ್ಯಾನ್ಸ್ ನೋಡುತ್ತಾ ತಿರುಗಾಡುತ್ತಿದ್ದರೆ, ಇನ್ನೂ ಕೆಲವು ಮಂದಿ ಸ್ಟೇಜ್ ಮುಂದೆಯೇ ಚೇರ್ ಹಾಕಿ ಅಲ್ಲಿ ಕುಳಿತುಕೊಂಡು ಡ್ಯಾನ್ಸ್ ವೀಕ್ಷಿಸಿದ್ದಾರೆ. ಈ ವಿಡಿಯೋದಲ್ಲಿ ಬ್ಯಾನರ್ ನಲ್ಲಿರುವ ದಿವಂಗತ ವೃದ್ಧ ದಂಪತಿಯ ಮುಖವೂ ಕಾಣಿಸುತ್ತದೆ.

    ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಯುವತಿ ಬಾಲಿವುಡ್ ಹಾಡಿಗೆ ಡ್ಯಾನ್ಸ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ. ಈ ವಿಡಿಯೋವನ್ನು ನೋಡಿದ ಜನರು ಪರ ಹಾಗೂ ವಿರುದ್ಧ ಬಗ್ಗೆ ಮಾತನಾಡುತ್ತಿದ್ದಾರೆ.

    ಮೃತಪಟ್ಟವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥನೆ ಮಾಡುವುದಕ್ಕೆ ಜನರು ಶ್ರದ್ಧಾಂಜಲಿ ಕಾರ್ಯಕ್ರಮ ಆಯೋಜಿಸುತ್ತಾರೆ. ಆದರೆ ಈ ಕಾರ್ಯಕ್ರಮದ ಆಯೋಜಕರು ವೇದಿಕೆಯಲ್ಲಿ ಯುವತಿಗೆ ಬಾಲಿವುಡ್ ಹಾಡಿಗೆ ಡ್ಯಾನ್ಸ್ ಮಾಡಿಸಿ ಒಂದು ಹೊಸ ಪರಂಪರೆಯನ್ನು ಶುರು ಮಾಡಿದ್ದಾರೆ. ಈ ವಿಡಿಯೋದಲ್ಲಿ ಯಾರು ಶ್ರದ್ಧಾಂಜಲಿ ಅಥವಾ ಪ್ರಾರ್ಥನೆ ಮಾಡುವುದು ಕಂಡು ಬಂದಿಲ್ಲ. ಆದರೆ ಈ ಕಾರ್ಯಕ್ರಮದಲ್ಲಿ ಶ್ರದ್ಧಾಂಜಲಿ ಕಾರ್ಯಕ್ರಮದ ಬ್ಯಾನರ್ ಮುಂದೆ ಯುವತಿ ಬಾಲಿವುಡ್ ಹಾಡಿಗೆ ಹೆಜ್ಜೆ ಹಾಕುತ್ತಿರುವುದು ಮಾತ್ರ ಕಂಡು ಬಂದಿದೆ.

  • ಅಕ್ಕಿ ಕಡಿತ ಮಾಡಿದ್ಯಾಕೆ, ನನಗೆ ಈಗ 2 ಕೆ.ಜಿ. ಅಕ್ಕಿ ಬೇಕು: ಕಾರ್ಯಕ್ರಮದಲ್ಲೇ ಸಚಿವರಿಗೆ ವ್ಯಕ್ತಿಯಿಂದ ಬೇಡಿಕೆ

    ಅಕ್ಕಿ ಕಡಿತ ಮಾಡಿದ್ಯಾಕೆ, ನನಗೆ ಈಗ 2 ಕೆ.ಜಿ. ಅಕ್ಕಿ ಬೇಕು: ಕಾರ್ಯಕ್ರಮದಲ್ಲೇ ಸಚಿವರಿಗೆ ವ್ಯಕ್ತಿಯಿಂದ ಬೇಡಿಕೆ

    ಚಿಕ್ಕಬಳ್ಳಾಪುರ: ಅನ್ನಭಾಗ್ಯ ಪಡಿತರದಲ್ಲಿ ಎರಡು 2 ಕೆ.ಜಿ. ಅಕ್ಕಿಯನ್ನು ಕಡಿತ ಮಾಡಿದ್ದು ಯಾಕೆ? ನನಗೆ 2 ಕೆಜಿ ಅಕ್ಕಿ ಬೇಕು ಕೊಡಿ ಎಂದು ಖಾಲಿ ಚೀಲ ಹಿಡಿದು ಸರ್ಕಾರಿ ಕಾರ್ಯಕ್ರಮಕ್ಕೆ ಬಂದ ವ್ಯಕ್ತಿಯೊಬ್ಬರು ಕೃಷಿ ಸಚಿವರಿಗೆ ಪ್ರಶ್ನೆ ಮಾಡಿದ್ದಾರೆ.

    ಗೌರಿಬಿದನೂರು ತಾಲೂಕಿನ ಕಾಚಮಾಚೇನಹಳ್ಳಿ ಗ್ರಾಮದ ಬೊಮ್ಮಲಿಂಗೇಶ್ವರ ದೇವಾಲಯದ ಆವರಣದಲ್ಲಿ 2018-19 ನೇ ಸಾಲಿನ ಸಮಗ್ರ ಕೃಷಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ ಸಚಿವ ಶಿವಶಂಕರ್ ರೆಡ್ಡಿ ಉದ್ಘಾಟಿಸಿದರು. ಈ ವೇಳೆ ಕಾರ್ಯಕ್ರಮದ ಬಳಿ ಬಂದ ಸ್ಥಳೀಯ ವ್ಯಕ್ತಿಯೊರ್ವ ಏಕೆ ಎರಡು ಕೆ.ಜಿ. ಅಕ್ಕಿ ಕಡಿತ ಮಾಡಿದ್ದೀರಿ ಹೇಳಿ ಅಂತ ಪ್ರಶ್ನೆ ಮಾಡಿದ್ರು. ಅಷ್ಟೇ ಅಲ್ಲದೇ ನನಗೆ 2 ಕೆ.ಜಿ ಅಕ್ಕಿ ಕೊಡಲೇ ಬೇಕು ಅಂತಾ ಖಾಲಿ ಚೀಲ ತಂದು ಪ್ರದರ್ಶನ ಮಾಡಿದರು.

    ಕಾಯಕ್ರಮದ ಧ್ವನಿವರ್ಧಕದ ಧ್ವನಿಯಿಂದ ವ್ಯಕ್ತಿಯ ಮಾತು ಸಚಿವರ ಕಿವಿಗೆ ಬೀಳಲಿಲ್ಲ. ಅಷ್ಟರಲ್ಲಿಯೇ ಅಲ್ಲೇ ಇದ್ದ ಸ್ಥಳೀಯರು ವ್ಯಕ್ತಿಯನ್ನು ಸಮಾಧಾನ ಪಡಿಸಲು ಯತ್ನಿಸಿದರು. ಕೊನೆಗೆ ಯಾರ ಮಾತನ್ನು ಕೇಳದ ಸ್ಥಿತಿಯಲ್ಲಿದ್ದ ಅವರನ್ನು ಪೊಲೀಸರು ಕಾರ್ಯಕ್ರಮದಿಂದ ಹೊರಗೆ ಕರೆದುಕೊಂಡರು.

    https://youtu.be/IdCjm6_9ABA