Tag: ಕಾರ್ಯಕ್ರಮ

  • ಮದುವೆಯ ಎಲ್ಲ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ಮೇಘನಾ ರಾಜ್

    ಮದುವೆಯ ಎಲ್ಲ ಸಿದ್ಧತೆ ಬಗ್ಗೆ ಮಾಹಿತಿ ನೀಡಿದ ಮೇಘನಾ ರಾಜ್

    ಬೆಂಗಳೂರು: ಸ್ಯಾಂಡಲ್‍ವುಡ್ ಮತ್ತೊಂದು ಮದುವೆ ಸಂಭ್ರಮಕ್ಕೆ ಸಜ್ಜಾಗುತ್ತಿದೆ. ಮೇ2 ರಂದು ನಟಿ ಮೇಘನಾ ರಾಜ್ ನಟ ಚಿರಂಜೀವಿ ಸರ್ಜಾ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

    ಅರಮನೆ ಮೈದಾನದ ವೈಟ್ ಪೆಟಲ್ಸ್ ಹಾಲ್‍ನಲ್ಲಿ ನಡೆಯುವ ಮದುವೆ ಸಂಭ್ರಮಕ್ಕೆ ಸ್ಯಾಂಡಲ್‍ವುಡ್‍ನ ಗಣ್ಯಾತಿಗಣ್ಯರು ಸಾಕ್ಷಿಯಾಗಲಿದ್ದಾರೆ. ನಾಳೆಯಿಂದ ಚಪ್ಪರ ಶಾಸ್ತ್ರ, ಅರಿಶಿಣ ಶಾಸ್ತ್ರ ಶುರುವಾಗಲಿದೆ. ಹಿಂದೂ ಮತ್ತು ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ಮದುವೆ ನಡೆಯಲಿದ್ದು, ಇದೇ ತಿಂಗಳು 29ಕ್ಕೆ ಕೋರಮಂಗಲದ ಚರ್ಚ್‍ನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದ ಪ್ರಕಾರ ವಿವಾಹ ನಡೆಯಲಿದೆ.

    ಮೇ 2ರ ಬೆಳಗ್ಗೆ 10.30ರಿಂದ 11 ಗಂಟೆಗೆ ಮದುವೆ ಮುಹೂರ್ತವಿದ್ದು, ಸಂಜೆ 7 ಗಂಟೆಗೆ ಆರತಕ್ಷತೆ ನಡೆಯಲಿದೆ. ನಾಳೆಯಿಂದ ಎಲ್ಲ ಕಾರ್ಯಕ್ರಮಗಳು ಶುರುವಾಗುತ್ತಿದ್ದು, ನಾಳೆಯಿಂದ ನಾನು ಮನೆಯಲ್ಲೇ ಬಂಧಿ ಆಗಿರುತ್ತೇನೆ. ನಿಮ್ಮ ಪ್ರಶ್ನೆಗಳಿಗೆ ನಾನು ಉತ್ತರಿಸಲು ಆಗುವುದಿಲ್ಲ. ಫೋನಿನಲ್ಲೂ ಮಾತನಾಡುವುದ್ದಕ್ಕೆ ಸಾಧ್ಯವಾಗುವುದ್ದಿಲ್ಲ. ಹಾಗಾಗಿ ಇಂದೇ ಎಲ್ಲ ಕಾರ್ಯಕ್ರಮಗಳ ಬಗ್ಗೆ ತಿಳಿಸುತ್ತಿದ್ದೇನೆ ಎಂದು ಮೇಘನಾ ಮಾಧ್ಯಮಗಳಿಗೆ ತಿಳಿಸಿದರು.

    ಮೊದಲು ಎಂದರೆ ನಾಳೆ ಚಪ್ಪರ ಪೂಜೆ ನಡೆಯಲಿದೆ. ನಂತರ ಹಳದಿ ಶಾಸ್ತ್ರ, ಬಳೆ ಶಾಸ್ತ್ರ ನಡೆಯಲಿದೆ. ಹಳದಿ ಶಾಸ್ತ್ರಕ್ಕೆ ಇಂಡೋ ವೆಸ್ಟ್ರನ್ ಲುಕ್, ಮೆಹೆಂದಿಗೆ ನಾರ್ಥ್ ಇಂಡಿಯನ್ ಲುಕ್‍ನಲ್ಲಿ ಕಾಣಿಸಿಕೊಳ್ಳುತ್ತೇನೆ. ಸ್ಯಾಂಡಲ್‍ವುಡ್‍ನಲ್ಲಿ ಮೊದಲ ಬಾರಿಗೆ ರೋಮನ್ ಕ್ಯಾಥೋಲಿಕ್ ಸಂಪ್ರದಾಯದಂತೆ ನಮ್ಮ ಮದುವೆ ಬೆಂಗಳೂರಿನ ಸೇಂಟ್ ಆಂಟೋನಿಸ್ ಚರ್ಚ್‍ನಲ್ಲಿ ನಡೆಯಲಿದೆ. ಇದಾದ ಬಳಿಕ ಮೆಹಂದಿ ಶಾಸ್ತ್ರ ಮನೆಯಲೇ ನಡೆಯಲಿದೆ. ಇದೆಲ್ಲಾ ಮುಗಿದ ಮೇಲೆ ಮುಹೂರ್ತ ಹಾಗೂ ಆರತಕ್ಷತೆ ನಡೆಯಲಿದೆ.

    ಒಂದು ವಾರದಿಂದ ಕಾರ್ಯಕ್ರಮಗಳೆಲ್ಲ ನಡೆಯಲಿದ್ದು, ಕೆಲವು ಕಾರ್ಯಕ್ರಮ ಪ್ರೈವೆಟ್ ಆಗಿ ನಡೆಯಲಿದೆ. ಚರ್ಚ್‍ಯೊಳಗೆ ನಡೆಯುವ ಎಲ್ಲಾ ಕಾರ್ಯಕ್ರಮಗಳು ಪ್ರೈವೆಟ್ ಆಗಿ ನಡೆಯಲಿದೆ. ಹೀಗೆ ಒಂದರ ಮೇಲೊಂದು ಕಾರ್ಯಕ್ರಮಗಳು ನಡೆಯಲಿವೆ. ಮೇ 2ರಂದು ಮಾಧ್ಯಮದವರಿಗೆ ಚಿತ್ರೀಕರಿಸಲು ಅವಕಾಶವಿದ್ದು, ಚರ್ಚ್‍ನಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಅವಕಾಶವಿರುವುದಿಲ್ಲ. ಏಕೆಂದರೆ ಅಲ್ಲಿ ಮಾಧ್ಯಮದವರಿಗೆ ಪ್ರವೇಶವಿರುವುದ್ದಿಲ್ಲ. ನಾವೇ ನಮ್ಮ ಮದುವೆಯ ಫೂಟೇಜ್ ಕೋಡುತ್ತೇವೆ ಎಂದು ತಿಳಿಸಿದರು.

    ಏ. 26ರಂದು ಕೋರಮಂಗಲದಲ್ಲಿರುವ ಸೆಂಟ್ ಆಂಟೋನಿಸ್ ಚರ್ಚ್‍ನಲ್ಲಿ 3-4 ಗಂಟೆ ಕಾರ್ಯಕ್ರಮ ನಡೆಯಲಿದೆ. ನಾನು ಹಿಂದೂ ಆಗಿದ್ದು, ನನ್ನ ಪತ್ನಿ ಪ್ರಮೀಳಾ ಜೋಷಾಯ್ ಕ್ರಿಶ್ಚಿಯನ್ ಆಗಿದ್ದಕ್ಕೆ ಈ ಮದುವೆ ಹಿಂದೂ ಹಾಗೂ ಕ್ರಿಶ್ಚಿಯನ್ ಸಂಪ್ರದಾಯದಂತೆ ನಡೆಯಲಿದೆ ಎಂದು ಹಿರಿಯ ನಟ ಸುಂದರ್ ರಾಜ್ ತಿಳಿಸಿದ್ದಾರೆ.

    ಕನ್ನಡ, ತಮಿಳು, ತೆಲುಗು, ಮಲೆಯಾಳಂ ಚಿತ್ರ ರಂಗದ ಖ್ಯಾತ ಕಲಾವಿದರನ್ನು ಮದುವೆಗೆ ಆಹ್ವಾನಿಸಲಾಗಿದೆ.

  • ಕಾರ್ಯಕ್ರಮದಲ್ಲಿ ರಕ್ಷಿತಾ ಪ್ರೇಮ್ ಮೇಲೆ ಕೋಪಗೊಂಡು ಸಿಡಿದ ಶಿವಣ್ಣ!

    ಕಾರ್ಯಕ್ರಮದಲ್ಲಿ ರಕ್ಷಿತಾ ಪ್ರೇಮ್ ಮೇಲೆ ಕೋಪಗೊಂಡು ಸಿಡಿದ ಶಿವಣ್ಣ!

    ಬೆಂಗಳೂರು: ಕಾರ್ಯಕ್ರಮವೊಂದರಲ್ಲಿ ಕ್ರೇಜಿ ಕ್ವೀನ್ ರಕ್ಷಿತಾ ಪ್ರೇಮ್ ಮೇಲೆ ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಕೋಪಗೊಂಡಿದ್ದಾರೆ.

    ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಕ್ಷಿತಾ ಪ್ರೇಮ್, ಶಿವಣ್ಣನಿಗೆ ‘ಫಾದರ್ ಫಿಗರ್’ ಎಂದು ಹೇಳಿದ್ದಾರೆ. ಈ ಹೇಳಿಕೆಯನ್ನು ಕೇಳಿ, ಇದು ನನಗೆ ಅವಮಾನ ಎಂದು ಶಿವಣ್ಣ ಕೋಪಗೊಂಡರು.

    ಖಾಸಗಿ ಚಾನೆಲ್‍ನಲ್ಲಿ ಪ್ರಸಾರವಾಗುವ ಕಾರ್ಯಕ್ರಮವೊಂದರಲ್ಲಿ ನಟಿ ರಕ್ಷಿತಾ ಪ್ರೇಮ್ ಹಾಗೂ ರಾಗಿಣಿ ಪಾಲ್ಗೊಂಡಿದ್ದರು. ಆ ಕಾರ್ಯಕ್ರಮದಲ್ಲಿ ನಿರೂಪಕರಾಗಿರುವ ಶಿವರಾಜ್ ಕುಮಾರ್ ಸತ್ಯ ಅಥವಾ ಧೈರ್ಯ(ಟ್ರೂತ್ ಆರ್ ಡೇರ್) ಸೆಗ್ಮೆಂಟ್ ಶುರು ಮಾಡಿದ್ದರು.

    ಸತ್ಯ ಅಥವಾ ಧೈರ್ಯದಲ್ಲಿ ಸತ್ಯವನ್ನು ಆಯ್ಕೆ ಮಾಡಿಕೊಂಡ ರಕ್ಷಿತಾ ಅವರಿಗೆ ಶಿವರಾಜ್ ಕುಮಾರ್ ನೀವು ಯಾರ ಜೊತೆ ಮತ್ತೆ ಸಿನಿಮಾ ಮಾಡಲು ಇಷ್ಟಪಡುತ್ತೀರಿ ಎಂದು ಕೇಳಿದ್ದಕ್ಕೆ ಚಾಲೆಜಿಂಗ್ ಸ್ಟಾರ್ ದರ್ಶನ್ ಹೆಸರನ್ನು ಹೇಳಿದ್ದಾರೆ.

    ಶಿವಣ್ಣ ಇದ್ದಕ್ಕೆ ಪ್ರತಿಕ್ರಿಯಿಸಿ ನಿಮ್ಮ ಜೋಡಿ ಚೆನ್ನಾಗಿದೆ ಎಂದು ಹೇಳಿದ್ದಾರೆ. ನಂತರ ನನ್ನ ಜೊತೆ ಸಿನಿಮಾ ಮಾಡಲ್ವಾ ಎಂದು ಕೇಳಿದಾಗ, ನೀವು ನನಗೆ ಫಾದರ್ ಫಿಗರ್ ಎಂದು ರಕ್ಷಿತಾ ಉತ್ತರಿಸಿದ್ದಾರೆ.

    ರಕ್ಷಿತಾ ಅವರ ಉತ್ತರ ಕೇಳಿ ಶಿವಣ್ಣ ಶಾಕ್ ಆಗಿ ಇದು ಅನ್ಯಾಯ. ಇದು ನನಗೆ ಅವಮಾನ. ಇವತ್ತಿನ ಶೂಟಿಂಗ್ ಕ್ಯಾನ್ಸಲ್ ಮಾಡಿ, ಲೈಟ್ ಆಫ್ ಎಂದು ಶಿವಣ್ಣ ತಮ್ಮ ಜಾಗದಿಂದ ಎದ್ದುಬಿಟ್ಟರು. ಆಗ ರಕ್ಷಿತಾ, ಅಣ್ಣ ಓಕೆ ಅಣ್ಣ. ನೀವು ನನ್ನ ಬಾಯ್‍ಫ್ರೆಂಡ್ ಕೂತ್ಕೊಳ್ಳಿ, ಕಾಲಿಗೆ ಬೀಳ್ತೀನಿ ಎಂದು ಹೇಳಿದ್ದರು. ಆಗ ಲೈಟ್ಸ್ ಆನ್ ಮಾಡಿದ್ದರು.

    ನಾನು ಫಾದರ್ ಫಿಗರ್ ಹೇಗೆ ಹೇಳಿದೆ ಎಂದು ಶಿವಣ್ಣ ಪ್ರಶ್ನಿಸಿದ್ದಾಗ ಸ್ಕ್ರೀನ್ ಮೇಲೆ ರೋಮ್ಯಾನ್ಸ್ ಮಾಡಬೇಕು ಎಂದಾಗ ನನಗೆ ಆ ಭಾವನೆ ಬರುವುದಿಲ್ಲ ಎಂದು ರಕ್ಷಿತಾ ತಿಳಿಸಿದ್ದರು. ಇದನ್ನು ಕೇಳಿ ಶಿವರಾಜ್‍ಕುಮಾರ್ ಖುಷಿಯಾದರು.

  • ಸ್ಯಾಂಡಲ್‌ವುಡ್‌ ನಟನಿಗೆ ಕಿಸ್ ಮಾಡಲು ಕಾಯುತ್ತಿದ್ದಾರಂತೆ ನಟಿ ರಾಗಿಣಿ!

    ಸ್ಯಾಂಡಲ್‌ವುಡ್‌ ನಟನಿಗೆ ಕಿಸ್ ಮಾಡಲು ಕಾಯುತ್ತಿದ್ದಾರಂತೆ ನಟಿ ರಾಗಿಣಿ!

    ಬೆಂಗಳೂರು: ತುಪ್ಪದ ಬೆಡಗಿ ನಟಿ ರಾಗಿಣಿ ದ್ವಿವೇದಿ ಇತ್ತೀಚೆಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಆ ಕಾರ್ಯಕ್ರಮದಲ್ಲಿ ರಾಗಿಣಿ ಸ್ಯಾಂಡಲ್‌ವುಡ್‌ ನಟನಿಗೆ ಕಿಸ್ ಮಾಡಬೇಕೆಂದು ಹೇಳಿದ್ದಾರೆ.

    ಖಾಸಗಿ ಚಾನೆಲ್‍ನಲ್ಲಿ ಪ್ರಸಾರವಾಗುವ ಕಾರ್ಯಕ್ರಮವೊಂದರಲ್ಲಿ ನಟಿ ರಾಗಿಣಿ ಹಾಗೂ ರಕ್ಷಿತಾ ಪ್ರೇಮ್ ಪಾಲ್ಗೊಂಡಿದ್ದರು. ಆ ಕಾರ್ಯಕ್ರಮದಲ್ಲಿ ನಿರೂಪಕರಾಗಿರುವ ಶಿವರಾಜ್ ಕುಮಾರ್ ಸತ್ಯ ಅಥವಾ ಧೈರ್ಯ(ಟ್ರೂತ್ ಆರ್ ಡೇರ್) ಸೆಗ್ಮಂಟ್‍ನನ್ನು ಶುರು ಮಾಡಿದ್ದರು.

    ಸತ್ಯ ಅಥವಾ ಧೈರ್ಯದಲ್ಲಿ ಸತ್ಯವನ್ನು ಆಯ್ಕೆ ಮಾಡಿಕೊಂಡ ರಾಗಿಣಿ ಅವರಿಗೆ ಶಿವರಾಜ್ ಕುಮಾರ್ ನೀವು ಯಾವ ಕನ್ನಡದ ನಟನಿಗೆ ಕಿಸ್ ಮಾಡಲು ಕಾಯುತ್ತಿದ್ದೀರ ಎಂದು ಪ್ರಶ್ನೆ ಕೇಳಿದ್ದರು.

    ಈ ಪ್ರಶ್ನೆಗೆ ಉತ್ತರಿಸಿದ ರಾಗಿಣಿ ಎಲ್ಲರ ಜೊತೆ ಕಿಸ್ ಮಾಡುವ ಆಸೆ ಇದೆ ನನಗೆ ಎಂದು ಉತ್ತರಿಸಿದ್ದಾರೆ. ಆದರೆ ಯಾವುದಾದ್ದರೂ ಒಬ್ಬ ನಟನ ಹೆಸರು ಹೇಳಿ ಎಂದು ಕೇಳಿದ್ದಾಗ ಸುದೀಪ್ ಅವರೊಂದಿಗೆ ಆನ್‍ಸ್ಕ್ರೀನ್ ಕಿಸ್ ಮಾಡಬೇಕೆಂಬ ಆಸೆಯನ್ನು ರಾಗಿಣಿ ಹೇಳಿಕೊಂಡಿದ್ದಾರೆ.

    ರಾಗಿಣಿ ಸುದೀಪ್ ಅವರ ಜೊತೆ ವೀರ ಮದಕರಿ ಹಾಗೂ ಕೆಂಪೇಗೌಡ ಚಿತ್ರದಲ್ಲಿ ನಟಿಸಿದ್ದರು. ಅಷ್ಟೇ ಅಲ್ಲದೇ ಕಿಚ್ಚ ಸುದೀಪ್ ನನಗೆ ರೋಲ್ ಮಾಡಲ್ ಎಂದು ಕಾರ್ಯಕ್ರಮದಲ್ಲೇ ತಿಳಿಸಿದ್ದಾರೆ.

  • ದರ್ಶನ್ ಎದುರಲ್ಲೇ ಸಿಕ್ಕಿದ್ದರೂ ಮಾತನಾಡಿಸದೆ ಹೊರಟ ಈ ಸ್ಯಾಂಡಲ್‍ವುಡ್ ನಟಿ!

    ದರ್ಶನ್ ಎದುರಲ್ಲೇ ಸಿಕ್ಕಿದ್ದರೂ ಮಾತನಾಡಿಸದೆ ಹೊರಟ ಈ ಸ್ಯಾಂಡಲ್‍ವುಡ್ ನಟಿ!

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಎದುರಲ್ಲೇ ಸಿಕ್ಕಿದ್ದರೂ ನಟಿಯೊಬ್ಬರು ಮಾತನಾಡಿಸದೆ ಹೊರಟುಹೋಗಿದ್ದಾರೆ. ಆಕೆ ಬೇರೆ ಯಾರೂ ಅಲ್ಲ ಸ್ಯಾಂಡಲ್‍ವುಡ್ ಕೆಂಡಸಂಪಿಗೆ ಮಾನ್ವಿತಾ ಹರೀಶ್.

    ಮಾನ್ವಿತಾ ಈಗ ನಟಿಯಾಗಿದ್ದು, ಚೌಕ ಚಿತ್ರದಲ್ಲಿ ಅಭಿನಯಿಸಿದ್ದರು ದರ್ಶನ್ ಜೊತೆ ತೆರೆಹಂಚಿಕೊಂಡಿರಲಿಲ್ಲ. ಆದರೆ ಮೈಸೂರಿನಲ್ಲೊಮ್ಮೆ ದರ್ಶನ್‍ರನ್ನು ಮಾನ್ವಿತಾ ನೋಡಿಯೂ ನೋಡದೆ, ಮಾತನಾಡಿಸದೆ ಹೋಗಿದ್ದಾರೆ.

    ಮಾನ್ವಿತಾಗೆ ಅಚಾನಕ್ ಆಗಿ ದರ್ಶನ್‍ರನ್ನು ಖಾಸಗಿಯಾಗಿ ಮೀಟ್ ಮಾಡುವ ಅವಕಾಶ ಸಿಕ್ಕಿತ್ತು. ಆದರೂ ಮಾನ್ವಿತಾ ದರ್ಶನ್‍ರನ್ನ ಗುರುತಿಸೋದರಲ್ಲಿ ವಿಫಲರಾಗಿದ್ದಾರೆ.

    ಕಳೆದ ಬಾರಿಯ ದಸರಾ ಹಬ್ಬದ ಯುವ ದಸರಾಕ್ಕಾಗಿ ತಾರೆಗಳೆಲ್ಲಾ ಮೈಸೂರಿನ ಸಂದೇಶ್ ಪ್ರಿನ್ಸ್ ಹೊಟೇಲ್‍ನಲ್ಲಿ ವಾಸ್ತವ್ಯ ಹೂಡಿದ್ದರು. ದರ್ಶನ್ ಅದೇ ಹೊಟೇಲ್‍ನಲ್ಲಿ ತಂಗಿರೋದು ಮಾನ್ವಿತಾಗೆ ಗೊತ್ತಿರಲಿಲ್ಲ. ಕಾರ್ಯಕ್ರಮಕ್ಕೆ ಹೋಗುವಾಗ ಹೊಟೇಲ್ ಹೊರಗಡೆಯ ಮೆಟ್ಟಿಲಿನಲ್ಲಿ ದರ್ಶನ್ ತಮ್ಮ ಒಂದಿಷ್ಟು ಸ್ನೇಹಿತರ ಜೊತೆ ಕುಳಿತಿದ್ದರು. ಆಗ ಮಾನ್ವಿತಾ ಯಾರೋ ಕುಳಿತಿರಬಹುದು ಎಂದು ಅಲ್ಲಿ ಗಮನಿಸದೆ ಕಾರ್ ಹತ್ತಿದ್ದಾರೆ.

    ನಂತರ ಅಲ್ಲಿಯೇ ಒಬ್ಬರು ಮಾನ್ವಿತಾಗೆ ದರ್ಶನ್ ಇರುವ ವಿಚಾರ ಹೇಳಿದ್ದರು. ಆ ಕೂಡಲೇ ಮಾನ್ವಿತಾ ತಬ್ಬಿಬ್ಬಾಗಿ ಸುತ್ತಲೂ ನೋಡಿದ್ದು, ಕೊನೆಗೆ ಮಾನ್ವಿತಾ, ದರ್ಶನ್‍ರನ್ನು ಹುಡುಕೋದರಲ್ಲಿ ವಿಫಲರಾದಾಗ ಮತ್ತೊಬ್ಬರು ಬಂದು ದರ್ಶನ್ ಮೆಟ್ಟಿಲ ಮೇಲೆ ಕುಳಿತಿದ್ದಾರೆ ಎಂದು ಹೇಳಿದ್ದರು.

    ಒಬ್ಬ ಬಿಗ್ ಸ್ಟಾರ್ ನೆಲದ ಮೇಲೆ ಸರಳತೆಯಿಂದ ಕುಳಿತಿದ್ದನ್ನು ನೋಡಿ ಮಾನ್ವಿತಾಗೆ ಆಶ್ಚರ್ಯವಾಗಿತ್ತು. ದರ್ಶನ್ ಬಳಿ ಬಂದು ಒಬ್ಬ ಬಿಗ್ ಸ್ಟಾರ್ ಮೆಟ್ಟಿಲ ಮೇಲೆ ಹೀಗೆ ಕುಳಿತುಕೊಂಡರೆ, ಯಾರ್ ಗುರುತು ಹಿಡೀತಾರೆ. ಯಾಕೆ ಹೀಗೆ ಕುಳಿತ್ತಿದೀರಿ ಎಂದು ಕೇಳಿದ್ದಾರೆ. ಅದಕ್ಕೆ ದರ್ಶನ್, ನಾನು ಹೀಗೇ ಇರೋದು ಎಂದು ಹೇಳಿದ್ದಾರೆ. ನಂತರ ಮಾನ್ವಿತಾ ಮಾತನಾಡಿಸದೇ ಹೋಗಿದ್ದಕ್ಕೆ ಕ್ಷಮೆ ಕೇಳಿ ಅಲ್ಲಿಂದ ಹೊರಟರು. ಈ ವಿಚಾರವನ್ನ ಮಾನ್ವಿತಾ ಇತ್ತೀಚೆಗಷ್ಟೇ ಫೇಸ್‍ಬುಕ್ ಲೈವ್‍ನಲ್ಲಿ ಹಂಚಿಕೊಂಡಿದ್ದಾರೆ.

    https://www.youtube.com/watch?v=1au1H9SA_2I

  • ಕಾರ್ಯಕ್ರಮದಲ್ಲಿ ಕುಣಿಯುವಾಗ ಮೈ-ಕೈ ತಾಗಿದ್ದಕ್ಕೆ ಉಪನ್ಯಾಸಕರೆದುರೇ ವಿದ್ಯಾರ್ಥಿಗಳ ಮಾರಾಮಾರಿ

    ಕಾರ್ಯಕ್ರಮದಲ್ಲಿ ಕುಣಿಯುವಾಗ ಮೈ-ಕೈ ತಾಗಿದ್ದಕ್ಕೆ ಉಪನ್ಯಾಸಕರೆದುರೇ ವಿದ್ಯಾರ್ಥಿಗಳ ಮಾರಾಮಾರಿ

    ಚಿಕ್ಕಮಗಳೂರು: ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳು ಉಪನ್ಯಾಸಕರ ಎದುರೇ ಹೊಡೆದಾಡಿಕೊಂಡ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನಲ್ಲಿ ನಡೆದಿದೆ.

    ಕೊಪ್ಪಾ ಡಿಗ್ರಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದ ವೇಳೆ ವಿದ್ಯಾರ್ಥಿಗಳ ಮಾರಾಮಾರಿ ನಡೆದಿದೆ. ಕಾರ್ಯಕ್ರಮದಲ್ಲಿ ಕುಣಿಯುವಾಗ ಮೈ-ಕೈ ತಾಗಿದ್ದಕ್ಕೆ ಗಲಾಟೆಯಾಗಿದ್ದು, ಮಾತಿಗೆ ಮಾತು ಬೆಳೆದು ವಿದ್ಯಾರ್ಥಿಗಳು ಹೊಡೆದಾಡಿಕೊಂಡಿದ್ದಾರೆ.

    ಉಪನ್ಯಾಸಕರ ಎದುರೇ ವಿದ್ಯಾರ್ಥಿಗಳ ಹೊಡೆದಾಟ ನಡೆದಿದ್ದು, ಬಿಡಿಸಲು ಹೋದ ಕೆಲ ಉಪನ್ಯಾಸಕರಿಗೂ ಧರ್ಮದೇಟು ಬಿದ್ದಿದೆ. ವಿದ್ಯಾರ್ಥಿಗಳು ಹೊಡೆದಾಡುವ ದೃಶ್ಯ ಮೊಬೈಲ್‍ನಲ್ಲಿ ಸೆರೆಯಾಗಿದೆ.

  • ತುಮಕೂರಿನಲ್ಲಿ ಅಭಿಮಾನಿಗಳ ವಿರುದ್ಧ ಗರಂ ಆದ ಶಿವರಾಜ್ ಕುಮಾರ್!

    ತುಮಕೂರಿನಲ್ಲಿ ಅಭಿಮಾನಿಗಳ ವಿರುದ್ಧ ಗರಂ ಆದ ಶಿವರಾಜ್ ಕುಮಾರ್!

    ತುಮಕೂರು: ನಟ ಶಿವರಾಜ್ ಕುಮಾರ್ ಅವರು ತಮ್ಮ ಅಭಿಮಾನಿಗಳ ವಿರುದ್ಧ ತುಮಕೂರಿನಲ್ಲಿ ಗರಂ ಆಗಿದ್ದಾರೆ.

    ನಗರದ ಉಡುಪಿ ಡಿಲಕ್ಸ್ ನಲ್ಲಿ ಸಿದ್ಧಗಂಗಾ ಮಠ ಆಧರಿಸಿದ ಭೂ ಸ್ವರ್ಗ ಚಿತ್ರದ ಧ್ವನಿ ಸುರುಳಿ ಬಿಡುಗಡೆಗೆಂದು ಶಿವರಾಜ್ ಕುಮಾರ್ ಹೋಗಿದ್ದರು. ಈ ವೇಳೆ ಅಭಿಮಾನಿಗಳಿಂದ ಕಿರಿಕಿರಿಯಿಂದ ಅವರ ಮೇಲೆ ರೇಗಿದ್ದಾರೆ.

    ಚಿತ್ರದ ಧ್ವನಿ ಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯುತ್ತಿದ್ದಾಗ ಅಭಿಮಾನಿಗಳು ಮೊಬೈಲ್ ನಿಂದ ವಿಡಿಯೋ ಮಾಡುತ್ತಿದ್ದರು. ಇದರಿಂದ ಕಿರಿಕಿರಿ ಅನುಭವಿಸಿದ ನಟ, ಪ್ಲೀಸ್ ಸೈಲೆನ್ಸ್ ಸೈಲೆನ್ಸ್ ಎಂದು ಒಂದೇ ಸಮನೇ ಕೂಗಿದ್ದಾರೆ. ಅಲ್ಲದೇ ಮೊಬೈಲ್ ಯಾವ ಪುಣ್ಯಾತ್ಮ ಕಂಡು ಹಿಡಿದಿದ್ದಾನೋ ಎಂದು ಶಿವಣ್ಣ ರೇಗಿದ್ದಾರೆ. ಶಿವರಾಜ್ ಕುಮಾರ್ ರನ್ನು ಸುತ್ತುವರಿದು ಅಭಿಮಾನಿಗಳು ಕಿರಿಕಿರಿ ಉಂಟು ಮಾಡಿದ್ದರಿಂದ ಅವರ ಮೇಲೆ ರೇಗಿದ್ದಾರೆ ಎಂದು ಹೇಳಲಾಗಿದೆ.

  • ಪವರ್ ಸ್ಟಾರ್ ರನ್ನು ನೋಡಿ ಓಡಾಡಲು ಪ್ರಯತ್ನಿಸುತ್ತಾರೆ ವಿಕಲಚೇತನ ಅಕ್ಕ- ತಮ್ಮ!

    ಪವರ್ ಸ್ಟಾರ್ ರನ್ನು ನೋಡಿ ಓಡಾಡಲು ಪ್ರಯತ್ನಿಸುತ್ತಾರೆ ವಿಕಲಚೇತನ ಅಕ್ಕ- ತಮ್ಮ!

    ತುಮಕೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಸಿನಿಮಾ ನೋಡಿ ವಿಕಲಚೇತನರಾದ ಅಕ್ಕ-ತಮ್ಮ ಓಡಾಡಲು ಪ್ರಯತ್ನಿಸುತ್ತಿದ್ದು, ಒಮ್ಮೆಯಾದರು ಪುನಿತ್ ರಾಜಕುಮಾರ್ ಅವರನ್ನು ಭೇಟಿ ಮಾಡಲು ಕಾತುರದಿಂದ ಕಾಯುತ್ತಿದ್ದಾರೆ.

    ತುಮಕೂರು ಜಿಲ್ಲೆಯ ತಿಪಟೂರಿನ ಶೃತಿ ಹಾಗೂ ತೇಜಸ್ ಒಂದು ಬಾರಿಯಾದರೂ ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿ ಮಾಡಬೇಕೆಂಬ ಆಸೆಯಲ್ಲಿದ್ದಾರೆ.

    ಹುಟ್ಟಿದಾಗ ಎಲ್ಲರಂತೆ ಚೆನ್ನಾಗಿದ್ದ ಶೃತಿ ಹಾಗೂ ತೇಜಸ್ ನಾಲ್ಕನೇ ತರಗತಿ ನಂತರ ಬೆಳೆಯುತ್ತಾ ಅಂಗವಿಕಲರಾಗಿದ್ದಾರೆ. ತಿಪಟೂರಿನಲ್ಲಿ ಪೇಟಿಂಗ್ ಕೆಲಸ ಮಾಡುತ್ತಿರುವ ರಾಜಶೇಖರ್ ಹಾಗೂ ಜಯಮ್ಮ ದಂಪತಿಯ ಮಕ್ಕಳಿಗೆ ಪುನೀತ್ ಎಂದರೆ ಚಿಕ್ಕಂದಿನಿಂದಲೂ ಪಂಚಪ್ರಾಣ. ಈ ಇಬ್ಬರೂ ಮಕ್ಕಳಿಗೂ ಮಾತು ನಿಂತಿದ್ದು, ಓಡಾಡಲೂ ಆಗುತ್ತಿಲ್ಲ. ಹಾಸಿಗೆಯಲ್ಲೇ ಕಾಲಕಳೆಯುತ್ತಾರೆ.

    ಈ ಇಬ್ಬರೂ ಮಕ್ಕಳು ಪುನೀತ್ ರಾಜಕುಮಾರ್ ಅವರ ಸಿನಿಮಾ, ಕಾರ್ಯಕ್ರಮ ವಾಹಿನಿಗಳಲ್ಲಿ ಪ್ರಸಾರವಾದರೇ ಕಣ್ಣ ರೆಪ್ಪೆ ಮುಚ್ಚದೆ ನೋಡುತ್ತಾರೆ. ಪುನೀತ್ ಸಿನಿಮಾ ನೋಡುತ್ತಿದ್ದಂತೆ ಈ ವಿಕಲಚೇತನರಲ್ಲಿ ಒಂದು ಚೈತನ್ಯ ಬಂದು ಕಾಲನ್ನು ಬಡಿಯುವ ಮೂಲಕ ಓಡಾಡಲು ಪ್ರಯತ್ನಿಸುತ್ತಾರೆ ಎಂದು ಪೋಷಕರು ಹೇಳಿದ್ದಾರೆ. ಈ ಕಾರಣಕ್ಕಾಗಿ ಒಮ್ಮೆಯಾದರೂ ಪುನೀತ್ ರಾಜಕುಮಾರ್ ಅವರನ್ನು ಭೇಟಿ ಮಾಡಿದರೆ ತಮ್ಮ ಮಕ್ಕಳ ಬಾಳಲ್ಲಿ ಹೊಸ ಬೆಳಕು ಮೂಡಬಹುದು ಎಂದು ರಾಜಶೇಖರ್-ಜಯಮ್ಮ ದಂಪತಿ ಆಸೆಯನ್ನು ವ್ಯಕ್ತಪಡಿಸಿದ್ದಾರೆ.

  • ವಿದೇಶದಲ್ಲೂ ಕನ್ನಡದ ಕಂಪು ಪಸರಿಸಲು ಹೊರಟ ಚಂದನ್ ಶೆಟ್ಟಿ!

    ವಿದೇಶದಲ್ಲೂ ಕನ್ನಡದ ಕಂಪು ಪಸರಿಸಲು ಹೊರಟ ಚಂದನ್ ಶೆಟ್ಟಿ!

    ಬೆಂಗಳೂರು: ಚಂದನ್ ಶೆಟ್ಟಿ ತಮ್ಮ ರ‍್ಯಾಪ್ ಹಾಡುಗಳ ಮೂಲಕವೇ ಕನ್ನಡದ ಜನತೆಯಿಂದ ಮೆಚ್ಚುಗೆ ಪಡೆದಿದ್ದಾರೆ. ಈಗಾಗಲೇ ಕರ್ನಾಟಕದಲ್ಲಿ ರ‍್ಯಾಪ್ ಸ್ಟಾರ್ ಆಗಿ ಮಿಂಚುತ್ತಿರುವ ಚಂದನ್, ಮೊದಲ ಬಾರಿಗೆ ಹೊರದೇಶದಲ್ಲಿ ಕಾರ್ಯಕ್ರಮವನ್ನು ಮಾಡಲಿದ್ದಾರೆ.

    ಬಿಗ್ ಬಾಸ್-5 ಗೆದ್ದ ನಂತರ ಚಂದನ್ ಶೆಟ್ಟಿ ಕರ್ನಾಟಕದಲ್ಲಿ ಹಲವು ಕಾರ್ಯಕ್ರಮವನ್ನು ಮಾಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಚಂದನ್ ಆಸ್ಟ್ರೇಲಿಯಾದಲ್ಲಿ ಲೈವ್ ಕಾರ್ಯಕ್ರಮ ನೀಡುತ್ತಿದ್ದಾರೆ. ಈ ಬಗ್ಗೆ ಸ್ವತಃ ಚಂದನ್ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಮೂಲಕ ಪ್ರೇಕ್ಷಕರಿಗೆ ತಿಳಿಸಿದ್ದಾರೆ.

    ಕರ್ನಾಟಕದಲ್ಲಿ ಶೋ ಮಾಡುತ್ತಿದ್ದ ಚಂದನ್ ಈಗ ಆಸ್ಟ್ರೇಲಿಯಾದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಮಾರ್ಚ್ 16ರಂದು ಸಿಡ್ನಿ, ಮಾರ್ಚ್ 17ರಂದು ಮೆಲ್ಬರ್ನ್ ಹಾಗೂ ಮಾರ್ಚ್ 18ರಂದು ಅಡಿಲೇಡ್ ನಲ್ಲಿ ಕಾರ್ಯಕ್ರಮ ಮಾಡಲಿದ್ದಾರೆ. ಇದನ್ನೂ ಓದಿ: ಕಷ್ಟದಲ್ಲಿದ್ದಾಗ ಯಾರೂ ಇರಲಿಲ್ಲ ಅಂದ್ರು ಚಂದನ್ ಶೆಟ್ಟಿ

    ನಾನು ಮೊದಲ ಬಾರಿಗೆ ನಮ್ಮ ದೇಶ ಬಿಟ್ಟು ಆಸ್ಟ್ರೇಲಿಯಾದಲ್ಲಿ ಕಾರ್ಯಕ್ರಮ ಮಾಡುತ್ತಿರುವುದಕ್ಕೆ ನಾನು ಕಾತುರದಿಂದ ಕಾಯುತ್ತಿದ್ದೇನೆ. ನಿಮ್ಮಲ್ಲರ ಪ್ರೀತಿ ಹಾಗೂ ಆಶೀರ್ವಾದ ನನಗೆ ಬೇಕಿದೆ. ನಿಮ್ಮನ್ನು ಭೇಟಿ ಮಾಡುವುದಕ್ಕೆ ನಾನು ತುಂಬಾ ಖುಷಿಯಾಗಿದ್ದೀನಿ ಎಂದು ಚಂದನ್ ಶೆಟ್ಟಿ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಇದನ್ನೂ ಓದಿ: ಮಂಗ್ಳೂರು ಸಮುದ್ರದಲ್ಲಿ ಸ್ನೇಹಿತರ ಜೊತೆ ಸಂಭ್ರಮ: ಜಾಲಿಮೂಡಲ್ಲಿ ಬಿಗ್ ಬಾಸ್ ಚಂದನ್ ಶೆಟ್ಟಿ

    ಚಂದನ್ ಶೆಟ್ಟಿ ಬಿಗ್ ಬಾಸ್ ಶೋ ಗೆದ್ದಿದ್ದು ಮಾತ್ರವಲ್ಲದೆ, ಕನ್ನಡದಲ್ಲಿ ರ‍್ಯಾಪ್ ಹಾಡುಗಳ ಮೂಲಕ ಜಗತ್ತಿನಾದ್ಯಂತ ಜನಪ್ರಿಯರಾಗಿದ್ದಾರೆ. 3ಪೆಗ್ ಹಾಡು ಚಂದನ್ ಗೆ ಬೇರೆ ಲೆವೆಲ್ಲಿನ ವರ್ಚಸ್ಸು ತಂದುಕೊಟ್ಟಿದೆ.

  • ಶಿವಣ್ಣ ಕೇಳಿದ ಒಂದು ಪ್ರಶ್ನೆಗೆ ಕಣ್ಣೀರಿಟ್ಟ ತರುಣ್ ಸುಧೀರ್

    ಶಿವಣ್ಣ ಕೇಳಿದ ಒಂದು ಪ್ರಶ್ನೆಗೆ ಕಣ್ಣೀರಿಟ್ಟ ತರುಣ್ ಸುಧೀರ್

    ಬೆಂಗಳೂರು: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ಕಾರ್ಯಕ್ರಮವೊಂದರಲ್ಲಿ ಹಿರಿಯ ಖಳ ನಟ ಅವರ ಸುಧೀರ್ ಮಗ ನಟ ಮತ್ತು ನಿರ್ದೇಶಕ ತರುಣ್ ಸುಧೀರ್ ಕಣ್ಣೀರಿಟ್ಟಿದ್ದಾರೆ.

    ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ `ನಂ 1 ಯಾರಿ ವಿತ್ ಶಿವಣ್ಣ’ ಕಾರ್ಯಕ್ರಮದ ಎರಡನೇ ಸಂಚಿಕೆ ಭಾನುವಾರ ಪ್ರಸಾರವಾಗಿದೆ. ಈ ಎರಡನೇ ಸಂಚಿಕೆಯಲ್ಲಿ ನಟ ಶರಣ್, ಚಿಕ್ಕಣ್ಣ ಮತ್ತು ನಿರ್ದೇಶಕ ತರುಣ್ ಸುಧೀರ್ ಭಾಗಿಯಾಗಿದ್ದರು. ಶರಣ್, ಚಿಕ್ಕಣ್ಣ, ತರುಣ್ ಸುಧೀರ್ ಅವರ ಸಂಚಿಕೆ ತುಂಬ ನಗು ಇತ್ತು. ಆದರೆ ಕೊನೆಯ ಸುತ್ತಿನಲ್ಲಿ ಶಿವಣ್ಣನ ಒಂದು ಪ್ರಶ್ನೆಗೆ ಉತ್ತರಿಸುತ್ತ ತರುಣ್ ಸುಧೀರ್ ಕಣ್ಣೀರು ಹಾಕಿದ್ದಾರೆ.

    ಕಾರ್ಯಕ್ರಮದಲ್ಲಿ `ನಿಮ್ಮ ಜೀವನದ ದೊಡ್ಡ ಮಿಸ್ಟೇಕ್ ಏನು?’ ಎಂದು ಶಿವಣ್ಣ ಅತಿಥಿಯಾಗಿ ಬಂದಿದ್ದ ತರುಣ್ ಸುಧೀರ್‍ಗೆ ಪ್ರಶ್ನೆಯನ್ನು ಕೇಳಿದ್ದಾರೆ. ಆಗ ಆ ಪ್ರಶ್ನೆಗೆ ಉತ್ತರಿಸಲು ಶುರು ಮಾಡಿದ ತರುಣ್ ಭಾವುಕರಾಗಿ, “ನಮ್ಮ ತಂದೆ ಇರಬೇಕಾದರೆ ಅವರ ಬೆಲೆ ನಮಗೆ ಗೊತ್ತಿರಲಿಲ್ಲ” ಎಂದು ಹೇಳಿ ಮುಂದೆ ಏನು ಮಾತನಾಡಲಾಗದೆ ತಂದೆಯನ್ನು ನೆನೆದು ಕಣ್ಣೀರು ಹಾಕಿದರು.

    “ನಮಗೆ ಅವರು ತುಂಬ ಹತ್ತಿರ ಆದವರು. ನಾನು ಅವರ ಜೊತೆಗೆ ಸಿನಿಮಾ ಸಹ ಮಾಡಿದ್ದೇನೆ. ಅಪ್ಪಾಜಿಗೆ ಅವರು ಆಪ್ತರಾಗಿದ್ದರು. ಯಾವಾಗಲೂ ಊಟ ಮಾಡುವಾಗ ಅವರನ್ನು ಕರೆಯುತ್ತಿದ್ದರು. ಅವರು ಈಗ ಇದ್ದಿದ್ದರೆ ನಿಮ್ಮನ್ನು ನೋಡಿ ತುಂಬ ಖುಷಿ ಪಡುತ್ತಿದ್ದರು” ಎಂದು ತರುಣ್ ರನ್ನು ಶಿವಣ್ಣ ಸಮಾಧಾನ ಮಾಡಿದ್ದಾರೆ. ಈ ವೇಳೆ ಶಿವಣ್ಣ ನಮ್ಮ ಹುಡುಗಾಟದಲ್ಲಿ ಏನೋ ಮಾಡಿರುತ್ತೇವೆ. ನಮಗೂ ಹಾಗೆ ಆಗಿದೆ. ಆದರೆ ಬರುತ್ತಾ ಬುರತ್ತಾ ಅವರ ಬೆಲೆ ಗೊತ್ತಾಯಿತು ಎಂದು ಹೇಳಿ ತಮ್ಮ ತಂದೆ ರಾಜ್ ಕುಮಾರ್ ಅವರನ್ನು ನೆನೆದರು.

    “ನೀವು ಸಾಯುವುದಕ್ಕೂ ಮುಂಚೆ ಏನನ್ನು ಸಾಧಿಸಬೇಕು?” ಎಂದು ಶಿವಣ್ಣ ಮತ್ತೆ ಒಂದು ಪ್ರಶ್ನೆ ಕೇಳಿದ್ದಾರೆ. ಆಗ ತರುಣ್ ಸಿನಿಮಾ ಬಗ್ಗೆ ಅಲ್ಲ. ವೈಯಕ್ತಿಕವಾಗಿ ಅಂದರೆ ನನಗೆ ಒಂದೇ ಒಂದು ಆಸೆ ಇದೆ. ನಾನು ಇರುವಷ್ಟು ದಿನ ಯಾವುದೇ ಕಷ್ಟ ಆಗದಂತೆ ನಮ್ಮ ತಾಯಿಯನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಹೇಳಿದ್ದಾರೆ.

    ಖ್ಯಾತ ಖಳ ನಟ ಸುಧೀರ್ ಅವರ ಮಗನಾಗಿರುವ ತರುಣ್ ಸುಧೀರ್ ಇಂದು ಒಬ್ಬ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದಾರೆ. ಸುಧೀರ್ ಅವರ ಇಬ್ಬರು ಮಕ್ಕಳಾದ ತರುಣ್ ಸುಧೀರ್ ಮತ್ತು ನಂದಕಿಶೋರ್ ಅಪ್ಪನ ಹೆಸರನ್ನು ಉಳಿಸಿದ್ದಾರೆ. ಆದರೆ ತಂದೆ ಇದ್ದಾಗ ಅವರ ಬೆಲೆ ನಮಗೆ ತಿಳಿಯಲಿಲ್ಲ ಎನ್ನುವ ನೋವು ತರುಣ್ ಅವರಿಗೆ ಇಂದಿಗೂ ಕಾಡುತ್ತಿದೆ.

  • ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಮೈದಾನದಲ್ಲೇ ಕುಸಿದು ಬಿದ್ದ ಪರೇಡ್ ಮುಖ್ಯಸ್ಥ!

    ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಮೈದಾನದಲ್ಲೇ ಕುಸಿದು ಬಿದ್ದ ಪರೇಡ್ ಮುಖ್ಯಸ್ಥ!

    ಹಾವೇರಿ: 69 ನೇ ಗಣರಾಜ್ಯೋತ್ಸವ ಕಾರ್ಯಕ್ರಮದ ವೇಳೆ ಪರೇಡ್ ಮುಖ್ಯಸ್ಥರೊಬ್ಬರು ಮೈದಾನದಲ್ಲಿಯೇ ಕುಸಿದು ಬಿದ್ದ ಘಟನೆ ಹಾವೇರಿಯಲ್ಲಿ ನಡೆದಿದೆ.

    ಅಸ್ವಸ್ಥಗೊಂಡ ಪರೇಡ್ ಮುಖ್ಯಸ್ಥರನ್ನು ಆರ್ ಪಿಐ ಮಾರುತಿ ಹೆಗಡೆ (35) ಎಂದು ಗುರುತಿಸಲಾಗಿದೆ. ಇಂದು ಗಣರಾಜ್ಯೋತ್ಸವದ ಅಂಗವಾಗಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಸಂದರ್ಭದಲ್ಲಿ ಮಾರುತಿ ಅವರು ಮೈದಾನದಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅಲ್ಲೇ ಇದ್ದ ಅಧಿಕಾರಿಗಳು ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ತಹಶೀಲ್ದಾರರ ವಾಹನದಲ್ಲಿ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಯಿತು. ಸದ್ಯ ಮಾರುತಿ ಅವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ

    ಕಳೆದ ಎರಡು ವರ್ಷಗಳಿಂದ ಮಾರುತಿ ಜಿಲ್ಲಾ ಮೀಸಲು ಪೊಲೀಸ್ ಪಡೆಯ ಇನ್ಸ್ ಪೆಕ್ಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಬೆಳಗ್ಗೆ ಗಣರಾಜ್ಯೋತ್ಸವ ಪರೇಡ್ ಇರೋ ಹಿನ್ನಲೆಯಲ್ಲಿ ಬೇಗನೇ ಆಗಮಿಸಿದ್ದರು. ಬಿಸಿಲಿನ ತಾಪಕ್ಕೆ ಆರ್‍ಪಿಐ ಕುಸಿದು ಬಿದ್ದಿದ್ದಾರೆ ಎಂಬುದಾಗಿ ತಿಳಿದುಬಂದಿದೆ.