Tag: ಕಾರ್ಯಕ್ರಮ

  • ನಾಗಸಾಧು ಮೊರೆ ಹೋದ ಮಾಜಿ ಸಚಿವ ಜರ್ನಾದನ ರೆಡ್ಡಿ

    ನಾಗಸಾಧು ಮೊರೆ ಹೋದ ಮಾಜಿ ಸಚಿವ ಜರ್ನಾದನ ರೆಡ್ಡಿ

    ಬಳ್ಳಾರಿ: ಮಾಜಿ ಸಚಿವ, ಗಣಿದಣಿ ಜನಾರ್ದನ ರೆಡ್ಡಿ ನಾಗಸಾಧು ಮೊರೆ ಹೋಗಿದ್ದಾರೆ.

    ಜನಾರ್ದನ ರೆಡ್ಡಿ ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ದೇವರಕೊಳ್ಳದ ನಾಗಸಾಧು ದಿಗಂಬರ ರಾಜಭಾರತಿ ಸ್ವಾಮೀಜಿ ಅವರನ್ನು ಮನೆಗೆ ಕರೆಸಿಕೊಂಡಿದ್ದಾರೆ. ದಿಗಂಬರ ರಾಜಭಾರತಿ ಸ್ವಾಮೀಜಿ ವರ್ಷದಲ್ಲಿ ಆರು ತಿಂಗಳು ಮಾತನಾಡುತ್ತಾರೆ ಹಾಗೂ ಉಳಿದ ಆರು ತಿಂಗಳು ಮೌನದಲ್ಲಿರುತ್ತಾರೆ.

    ಜನಾರ್ದನ ರೆಡ್ಡಿ ನಾಗಸಾಧುವನ್ನು ಮನೆಗೆ ಕರೆಸಿಕೊಂಡು ತನಗಿರುವ ಕಷ್ಟದ ಬಗ್ಗೆ ಅವರ ಬಳಿ ಹೇಳಿಕೊಂಡಿದ್ದಾರೆ. ಜನಾರ್ದನ ರೆಡ್ಡಿ ಅವರ ಕಷ್ಟ ಕೇಳಿ ಶೀಘ್ರದಲ್ಲೇ ಎಲ್ಲ ಕಷ್ಟ ನಿವಾರಣೆಯಾಗುತ್ತದೆ ಎಂದು ನಾಗಸಾಧು ಆಶೀರ್ವಾದ ಮಾಡಿದ್ದಾರೆ.

    ಹೊಸಪೇಟೆ ತಾಲೂಕಿನ ಸಂಕ್ಲಾಪುರದಲ್ಲಿರುವ ಶಾಲೆಯಲ್ಲಿ ಇದೇ ತಿಂಗಳು 15ರಂದು ನಾಗಸಾಧು ಶಾಲೆಯಲ್ಲಿ ಪಠ್ಯಪುಸ್ತಕ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಜನಾರ್ದನ ರೆಡ್ಡಿ ಅವರನ್ನು ನಾಗಸಾಧು ಆಹ್ವಾನಿಸಿದ್ದಾರೆ.

  • ಮೊಬೈಲ್‍ನಲ್ಲೇ ಮುಳುಗಿದ ನೂತನ ಸಂಸದ ತೇಜಸ್ವಿ ಸೂರ್ಯ

    ಮೊಬೈಲ್‍ನಲ್ಲೇ ಮುಳುಗಿದ ನೂತನ ಸಂಸದ ತೇಜಸ್ವಿ ಸೂರ್ಯ

    ಬೆಂಗಳೂರು: ರಾಜ್ಯ ಸರ್ಕಾರದ ಅರಣ್ಯ ಇಲಾಖೆ ವತಿಯಿಂದ ಆಯೋಜನೆಗೊಂಡಿದ್ದ ಪರಿಸರ ಕಾರ್ಯಕ್ರಮದಲ್ಲಿ ನೂತನ ಸಂಸದ ತೇಜಸ್ವಿ ಸೂರ್ಯ ಮೊಬೈಲಿನಲ್ಲಿ ಮುಳುಗಿದ್ದು ಚರ್ಚೆಗೆ ಗ್ರಾಸವಾಗಿದೆ.

    ಮಲ್ಲೇಶ್ವರಂನ ಚೌಡಯ್ಯ ಮೆಮೋರಿಯಲ್ ಹಾಲ್‍ನಲ್ಲಿ ಪರಿಸರ ದಿನಾಚರಣೆ ಕಾರ್ಯಕ್ರಮ ವೇಳೆ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ವೇದಿಕೆ ಮೇಲೆ ಇದ್ದರೂ ಮೊಬೈಲ್ ಚಾಟಿಂಗ್ ನಲ್ಲಿ ಬ್ಯುಸಿಯಾಗಿದ್ದರು.

    ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕಾರದ ಬಳಿಕ ವೇದಿಕೆ ಮೇಲೆ ಕುಳಿತು ಮೊಬೈಲ್‍ನಲ್ಲಿ ಚಾಟ್ ಮಾಡುತ್ತಾ ಕುಳಿತ್ತಿದ್ದರು. ವೇದಿಕೆಯಲ್ಲಿ ಗಣ್ಯರು ಮಾತನಾಡುತ್ತಿದ್ದರೂ ತೇಜಸ್ವಿ ಸೂರ್ಯ ಮೊಬೈಲ್ ನೋಡುತ್ತಾ ಮಗ್ನರಾಗಿದ್ದರು.

    ಈ ಕಾರ್ಯಕ್ರಮಕ್ಕೆ ಉಪ ಸಭಾಪತಿ ಧರ್ಮೇಗೌಡ, ಶಾಸಕ ಅಶ್ವಥ್ ನಾರಾಯಣ ಅವರು ಗಿಡಕ್ಕೆ ನೀರು ಹಾಕುವ ಮೂಲಕ ಚಾಲನೆ ನೀಡಿದ್ದರು.

  • ರಾಜಕೀಯದಲ್ಲಿ ಕುಸ್ತಿ, ಕಾರ್ಯಕ್ರಮದಲ್ಲಿ ದಳ, ಕಮಲ ದೋಸ್ತಿ – ಒಂದೇ ಕಾರಿನಲ್ಲಿ ನಾಯಕರು

    ರಾಜಕೀಯದಲ್ಲಿ ಕುಸ್ತಿ, ಕಾರ್ಯಕ್ರಮದಲ್ಲಿ ದಳ, ಕಮಲ ದೋಸ್ತಿ – ಒಂದೇ ಕಾರಿನಲ್ಲಿ ನಾಯಕರು

    ಮೈಸೂರು: ರಾಜಕೀಯದಲ್ಲಿ ಕುಸ್ತಿ ಆಡುವ ಜೆಡಿಎಸ್, ಬಿಜೆಪಿ ನಾಯಕರು ಕಾರ್ಯಕ್ರಮಗಳಲ್ಲಿ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಜಿಲ್ಲೆಯಲ್ಲಿ ನಡೆಯುತ್ತಿರುವ ಹಲವು ಕಾರ್ಯಕ್ರಮಗಳಲ್ಲಿ ಒಂದೇ ಕಾರಿನಲ್ಲಿ ಬಿಜೆಪಿ, ಜೆಡಿಎಸ್ ನಾಯಕರು ಓಡಾಡಿದ್ದಾರೆ.

    ಹೌದು. ಮೈಸೂರು- ಕೊಡಗು ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಗೂ ಸಚಿವ ಜಿ.ಟಿ ದೇವೇಗೌಡ, ಸಚಿವ ಸಾ.ರಾ.ಮಹೇಶ್ ಜೊತೆಯಾಗಿ ಓಡಾಟ ನಡೆಸಿದ್ದಾರೆ. ಅದರಲ್ಲೂ ಒಂದೇ ಕಾರಿನಲ್ಲಿ ಜೆಡಿಎಸ್, ಬಿಜೆಪಿ ನಾಯಕರು ಪ್ರಯಾಣಿಸುತ್ತಿರುವುದು ವಿಶೇಷವಾಗಿದೆ. ಮೈಸೂರಿನಲ್ಲಿ ಇಂದು ಹಲವು ಕಾರ್ಯಕ್ರಮದಲ್ಲಿ ನಾಯಕರು ಒಟ್ಟಿಗೆ ಪಾಲ್ಗೊಂಡಿರುವುದು ರಾಜಕೀಯ ವಲಯದಲ್ಲಿ ಹುಬ್ಬೇರುವಂತೆ ಮಾಡಿದೆ.

    ಬೆಳಗ್ಗೆ ಚಾಮುಂಡೇಶ್ವರಿ ಕ್ಷೇತ್ರದ ಕಾರ್ಯಕ್ರಮದಲ್ಲಿ ಜಿಟಿಡಿ ಹಾಗೂ ಪ್ರತಾಪ್ ಸಿಂಹ ಭಾಗಿಯಾಗಿದ್ದರು. ನಂತರ ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ ಕಾರ್ಯಕ್ರಮದಲ್ಲೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕರಾದ ರಾಮದಾಸ್, ನಾಗೇಂದ್ರ ಅವರು ಸಹ ನಾಯಕರಿಗೆ ಸಾಥ್ ನೀಡಿದ್ದರು.

    ಲೋಕಸಭಾ ಚುನಾವಣೆಯ ಸಮಯದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಮೈಸೂರಿನಿಂದ ಕಾಂಗ್ರೆಸ್ಸಿನ ವಿಜಯಶಂಕರ್ ಕಣಕ್ಕೆ ಇಳಿದಾಗ ಸಿಂಹ ವಿರುದ್ಧ ಜೆಡಿಎಸ್ ನಾಯಕರು ಪ್ರಚಾರ ನಡೆಸಿದ್ದರು. ಈಗ ಒಂದೇ ಕಾರಿನಲ್ಲಿ ಪ್ರಯಾಣ ಬೆಳೆಸಿರುವುದು ಅಚ್ಚರಿ ಮೂಡಿಸಿದೆ.

    ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಹೆಚ್.ವಿಶ್ವನಾಥ್ ರಾಜೀನಾಮೆ ವಿಚಾರವಾಗಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಜಿ.ಟಿ.ದೇವೆಗೌಡ ಅವರು, ವಿಶ್ವನಾಥ್ ರಾಜೀನಾಮೆ ಬಗ್ಗೆ ನನಗೆ ಮಾಹಿತಿ ಇಲ್ಲ. ಇವತ್ತು ಜೆಡಿಎಸ್ ಪಕ್ಷದ ಸಭೆ ಇದೆ. ಮೈಸೂರು ಕಾರ್ಯಕ್ರಮಗಳನ್ನು ಮುಗಿಸಿ ಬೆಂಗಳೂರಿಗೆ ತೆರಳುತ್ತೇನೆ. ವಿಶ್ವನಾಥ್ ಹಾಗೂ ಪಕ್ಷದ ವರಿಷ್ಠರ ಜೊತೆ ಮಾತನಾಡುತ್ತೇನೆ. ನಂತರ ಈ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡುತ್ತೇನೆ ಎಂದರು.

    ಇದೇ ವಿಚಾರವಾಗಿ ಸಚಿವ ಸಾ.ರಾ.ಮಹೇಶ್ ಮಾತನಾಡಿ, ನಾನು ದೂರವಾಣಿಯಲ್ಲಿ ವಿಶ್ವನಾಥ್ ಜೊತೆ ಮಾತನಾಡಿದ್ದೇನೆ. ನೀವು ಬಂದ ಮೇಲೆ ಪಕ್ಷ ಸಂಘಟನೆ ಚೆನ್ನಾಗಿ ನಡೆದಿದೆ. ನೀವು ರಾಜೀನಾಮೆ ಕೊಡಬಾರದು ಎಂದು ಮನವಿ ಮಾಡಿದ್ದೇನೆ. ನಿಮ್ಮ ಮಾರ್ಗದರ್ಶನದಲ್ಲಿ ಜೆಡಿಎಸ್ ಮುನ್ನಡೆಸಬೇಕು ಎಂದು ಕೇಳಿದ್ದೇನೆ. ಅವರು ರಾಜ್ಯಾಧ್ಯಕ್ಷರಾಗಿ ಮುಂದುವರೆಯುವ ವಿಶ್ವಾಸವಿದೆ ಎಂದು ಹೇಳಿದರು.

  • ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ

    ಪಬ್ಲಿಕ್ ಟಿವಿ ‘ವಿದ್ಯಾಪೀಠ’ಕ್ಕೆ ಚಾಲನೆ

    ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ಪಬ್ಲಿಕ್ ಟಿವಿ ಆಯೋಜಿಸಿರುವ ಮೂರು ದಿನಗಳ ಕಾಲ ನಡೆಯಲಿರುವ ವಿದ್ಯಾಪೀಠ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದೆ.

    ಈ ಸಂದರ್ಭದಲ್ಲಿ ಮಾತನಾಡಿದ ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್.ರಂಗನಾಥ್, ಕಾರ್ಯಕ್ರಮದಿಂದ ಎಲ್ಲರಿಗೂ ಲಾಭ ಆಗಬೇಕು ಹಾಗೂ ಒಳ್ಳೆಯದಾಗಬಹುದು ಎಂದು ಬಯಸುತ್ತೇನೆ. ಲಾಭ ಆಗುವ ಮೊದಲು ಒಳ್ಳೆಯ ದಾರಿ ಕಾಣಿಸಲಿ ಎಂದು ಹೇಳುತ್ತೇನೆ. ಏಕೆಂದರೆ ಒಳ್ಳೆಯ ದಾರಿ ಕಾಣಿಸಿದರೆ ಲಾಭ ಆಗುತ್ತದೆ. ಬಹಳ ಮಕ್ಕಳಿಗೆ ಹಾಗೂ ತಂದೆ-ತಾಯಿಗೆ ಆ ಒಳ್ಳೆಯ ದಾರಿ ಕಾಣಿಸಿದರೆ ಆ ದಿನ ನನಗೆ ತುಂಬಾ ಖುಷಿ ಆಗುತ್ತದೆ. ಮಕ್ಕಳು ಅವರಿಗೆ ಬೇಕಾದ್ದನ್ನು ಆಯ್ಕೆ ಮಾಡಿಕೊಳ್ಳಲಿ. ಪೋಷಕರು ಇದರ ಬಗ್ಗೆ ಚಿಂತಿಸಬೇಡಿ ಎಂದರು.

    ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರೇವಾ ವಿಶ್ವವಿದ್ಯಾಲಯದ ಕುಲಪತಿ ಶ್ಯಾಮರಾಜು, ಗಾರ್ಡನ್ ಸಿಟಿ ವಿವಿಯ ಕುಲಪತಿ ಡಾ. ವಿ.ಜಿ ಜೋಸೆಫ್, ಕೇಂಬ್ರಿಡ್ಜ್ ಗ್ರೂಪ್ ಆಫ್ ಇನ್‍ಸ್ಟಿಟ್ಯೂಷನ್ ಮುಖ್ಯಸ್ಥ ಡಿ.ಕೆ ಮೋಹನ್, ಗೀತಂ ವಿವಿಯ ಡೈರೆಕ್ಟರ್ ಆಫ್ ಅಡ್ಮಿಶನ್ ವಂಶಿ ದತ್ಲ ಹಾಗೂ ಶ್ರೀ ವೆಂಕಟೇಶ್ವರ್ ಕಾಲೇಜ್ ಆಫ್ ಎಂಜಿನಿಯರಿಂಗ್‍ನ ಕಾರ್ಯದರ್ಶಿ ಶಶಿಧರ್ ಅತಿಥಿಯಾಗಿ ಆಗಮಿಸಿದ್ದರು.

    ಈ ಕಾರ್ಯಕ್ರಮದಲ್ಲಿ ಪದವಿ, ಸ್ನಾತಕೋತ್ತರ ಪದವಿ ಮತ್ತು ವೃರ್ತಿ ಪರ ಕೋರ್ಸಗಳ ಬಗ್ಗೆ ಮಾಹಿತಿ ನೀಡಲಾಗುತ್ತದೆ. ಅಲ್ಲದೆ ಸಿಇಟಿ, ನೀಟ್ ಮತ್ತು ಔದ್ಯೋಗಿಕ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ನುರಿತ ಶಿಕ್ಷಣ ತಜ್ಞರು ಹಾಗೂ ಆರ್ಥಿಕ ಸಲಹೆಗಾರರು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಿದ್ದಾರೆ.

    ಈ ಹಿಂದಿನ ಎರಡು ಕಾರ್ಯಕ್ರಮ 2 ದಿನಗಳ ಕಾಲ ನಡೆದಿತ್ತು. ಎರಡು ದಿನಕ್ಕೆ ಭಾರೀ ಸ್ಪಂದನೆ ಸಿಕ್ಕಿದ ಹಿನ್ನೆಲೆಯಲ್ಲಿ ಈ ಬಾರಿ ಮೂರು ದಿನಗಳ ಕಾಲ ವಿದ್ಯಾಪೀಠ ವಿಶೇಷ ಕಾರ್ಯಕ್ರಮ ನಡೆಯಲಿದೆ.

    ಯಾವೆಲ್ಲ ಸ್ಪರ್ಧೆ?
    ಇಂದು ಮಧ್ಯಾಹ್ನ 3 ಗಂಟೆಯಿಂದ 5 ಗಂಟೆಯವರೆಗೆ ಚರ್ಚಾ ಸ್ಪರ್ಧೆಯ ಮೊದಲ ಸುತ್ತು ನಡೆಯಲಿದೆ. ಶನಿವಾರ ಮಧ್ಯಾಹ್ನ 2 ರಿಂದ 3:30ರವರೆಗೆ ಪೇಟಿಂಗ್ ಸ್ಪರ್ಧೆ ನಡೆಯಲಿದೆ. ಈ ಅವಧಿಯಲ್ಲೇ ಕ್ವಿಜ್ ಲಿಖಿತ ಪರೀಕ್ಷೆ ಸಹ ನಡೆಯಲಿದೆ. ಶನಿವಾರವೇ ಚರ್ಚಾ ಸ್ಪರ್ಧೆಯ ಅಂತಿಮ ಸುತ್ತು ಮಧ್ಯಾಹ್ನ 3:30 ರಿಂದ 5 ಗಂಟೆಯವರೆಗೆ ನಡೆಯಲಿದೆ.

    ಭಾನುವಾರ ಮಧ್ಯಾಹ್ನ 2:30 ರಿಂದ 3:30ರವರೆಗೆ ಕ್ವಿಜ್ ಫೈನಲ್ ನಡೆಯಲಿದ್ದು, 3:30 ರಿಂದ 4:30ರವರೆಗೆ ಗಾಯನ ಸ್ಪರ್ಧೆ ನಡೆಯಲಿದೆ. ಸಂಜೆ 5 ಗಂಟೆಯ ನಂತರ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಲಾಗುತ್ತದೆ.

    11 ಮತ್ತು 12 ರಂದು ಬೆಳಗ್ಗೆ 10 ಗಂಟೆಯಿಂದ 5 ಗಂಟೆಯವರೆಗೆ ವಿದ್ಯಾರ್ಥಿಗಳು ತಮ್ಮ ಪ್ರೊಜೆಕ್ಟ್ ಗಳನ್ನು ಪ್ರದರ್ಶನ ಮಾಡಲಿದ್ದಾರೆ. ಈ ಎಲ್ಲ ಸ್ಪರ್ಧೆಗಳಿಗೆ ಪ್ರವೇಶ ಉಚಿತವಾಗಿದ್ದು, 17 ರಿಂದ 22 ವರ್ಷ ವಯಸ್ಸಿನ ಒಳಗಿನ ವಿದ್ಯಾರ್ಥಿಗಳು ಭಾಗವಹಿಸಬಹುದು.

    ಬೆಂಗಳೂರು ನಗರದಲ್ಲಿರುವ ಅರಮನೆ ಮೈದಾನದಲ್ಲಿ ಮೇ 10 ರಿಂದ 12 ರವರೆಗೆ ಮೂರು ದಿನಗಳ ಕಾಲ ಮೂರನೇ ವರ್ಷದ ವಿದ್ಯಾಪೀಠ ಕಾರ್ಯಕ್ರಮ ನಡೆಯಲಿದೆ.

  • ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟಿ ಎಂಟ್ರಿ?

    ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ದಕ್ಷಿಣ ಭಾರತದ ಸ್ಟಾರ್ ನಟಿ ಎಂಟ್ರಿ?

    ಬೆಂಗಳೂರು: ಕನ್ನಡದ ಜನಪ್ರಿಯ ಟಿವಿ ಕಾರ್ಯಕ್ರಮ ‘ವೀಕೆಂಡ್ ವಿತ್ ರಮೇಶ್’ ಕಳೆದ ವಾರದಿಂದ ಆರಂಭವಾಗಿದೆ. ಈಗ ಈ ಕಾರ್ಯಕ್ರಮಕ್ಕೆ ದಕ್ಷಿಣ ಭಾರತದ ಸ್ಟಾರ್ ನಟಿ ಅನುಷ್ಕಾ ಶೆಟ್ಟಿ ಬರಲಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿದೆ.

    ಇತ್ತೀಚೆಗೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ತಂಡ ಸುದ್ದಿಗೋಷ್ಠಿ ನಡೆಸಿತ್ತು. ಈ ವೇಳೆ ಮಾತನಾಡಿದ ಖಾಸಗಿ ವಾಹಿನಿಯ ಬಿಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಅವರು, ನಮ್ಮ ನಾಡಿನಲ್ಲಿ ಹುಟ್ಟಿ ಬೇರೆ ಕಡೆ ಹೆಸರು ಮಾಡಿದ ಸಾಧಕರನ್ನು ಕರೆ ತರುವ ಯೋಚನೆ ಮಾಡುತ್ತಿದ್ದೇವೆ. ಅವರನ್ನು ಕಾರ್ಯಕ್ರಮಕ್ಕೆ ಕರೆತರುವ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದ್ದರು.

    ರಾಜ್ಯದಲ್ಲಿ ಹುಟ್ಟಿ ಬೇರೆ ಕಡೆ ಹೆಸರು ಮಾಡಿದ ವ್ಯಕ್ತಿಗಳು ಈ ಶೋನಲ್ಲಿ ಭಾಗವಹಿಸಲಿದ್ದಾರೆ ಎನ್ನುವ ವಿಚಾರ ಹೊರಬರುತ್ತಿದ್ದಂತೆ ಅನುಷ್ಕಾ ಶೆಟ್ಟಿ, ಐಶ್ವರ್ಯಾ ರೈ, ಸುನಿಲ್ ಶೆಟ್ಟಿ ಬರುತ್ತಾರಾ ಎನ್ನುವ ಪ್ರಶ್ನೆ ಎದ್ದಿದೆ.

    ಮೂಲಗಳ ಪ್ರಕಾರ ವೀಕೆಂಡ್ ವಿತ್ ರಮೇಶ್ ತಂಡ ಅನುಷ್ಕಾ ಶೆಟ್ಟಿ ಅವರನ್ನು ಈ ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಅನುಷ್ಕಾ ಶೆಟ್ಟಿ ಅವರು ಇದಕ್ಕೆ ಒಪ್ಪಿದ್ದಾರಾ, ಇಲ್ಲವಾ ಎನ್ನುವುದರ ಬಗ್ಗೆ ಖಚಿತ ಮಾಹಿತಿ ಸಿಕ್ಕಿಲ್ಲ. ಅನುಷ್ಕಾ ಶೆಟ್ಟಿ ಅಲ್ಲದೇ ರಜನಿಕಾಂತ್, ಐಶ್ವರ್ಯ ರೈ ಬಚ್ಚನ್, ಎಸ್.ಎಸ್ ರಾಜಮೌಳಿ, ರಾಹುಲ್ ಡ್ರಾವಿಡ್ ಅವರನ್ನು ಕರೆ ತರಲು ವೀಕೆಂಡ್ ವಿತ್ ರಮೇಶ್ ತಂಡ ಮುಂದಾಗುತ್ತಿದೆ.

    4ನೇ ಸೀಸನ್‍ನ ಮೊದಲ ಸಂಚಿಕೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ.ವೀರೇಂದ್ರ ಹೆಗ್ಗಡೆಯವರು ಅತಿಥಿಯಾಗಿ ಭಾಗವಹಿಸಿದ್ದರು. ಇದುವರೆಗೆ ವೀಕೆಂಡ್ ವಿತ್ ರಮೇಶ್ ತಂಡ ನಡೆಸಿದ ಅವಿರತ ಪ್ರಯತ್ನದ ಫಲವಾಗಿ ವೀರೇಂದ್ರ ಹೆಗಡೆಯವರು ಬಂದಿದ್ದಾರೆ. ಮುಂದಿನ ಸಂಚಿಕೆಗಳಲ್ಲಿ ನಟಿ ಪ್ರೇಮ, ಮಾಲಾಶ್ರೀ, ರಾಘಣ್ಣ ಬರಲಿದ್ದಾರೆ.

  • ಸುಧಾ ಮೂರ್ತಿ ಸರಳತೆಗೆ ರಮೇಶ್ ಅರವಿಂದ್ ಫಿದಾ!

    ಸುಧಾ ಮೂರ್ತಿ ಸರಳತೆಗೆ ರಮೇಶ್ ಅರವಿಂದ್ ಫಿದಾ!

    ಬೆಂಗಳೂರು: ಇನ್‍ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿ ಅವರ ಸರಳತೆಗೆ ನಟ ರಮೇಶ್ ಅರವಿಂದ್ ಫಿದಾ ಆಗಿದ್ದಾರೆ.

    ಇತ್ತೀಚೆಗೆ ಜೀ ವಾಹಿನಿಯ “ಹೆಮ್ಮೆಯ ಕನ್ನಡಿಗ 2019” ಕಾರ್ಯಕ್ರಮದಲ್ಲಿ ಇನ್‍ಫೋಸಿಸ್ ಅಧ್ಯಕ್ಷೆ ಸುಧಾ ಮೂರ್ತಿ ಅವರಿಗೆ ಹೆಮ್ಮೆಯ ಕನ್ನಡತಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಈ ವೇಳೆ ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಜನಸಾಮಾನ್ಯರಂತೆ ಜೀವಿಸುವ ಸುಧಾ ಮೂರ್ತಿಯವರ ಸರಳತೆ ಕಂಡು ನಟ ರಮೇಶ್ ಮೆಚ್ಚಿಕೊಂಡರು.

    ಕಾರ್ಯಕ್ರಮದಲ್ಲಿ ಸುಧಾಮೂರ್ತಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದ ಮೇಲೆ, ನಿರೂಪಕರಾದ ನಟ ರಮೇಶ್ ಅರವಿಂದ್ ಹಾಗೂ ನಟಿ ವಿನಯಾ ಪ್ರಕಾಶ್ ಅವರು `ಮೇಡಂ, ನಿಮ್ಮ ಸರಳ ಹಾಗೂ ಅನುಕರಣೀಯ ವ್ಯಕ್ತಿತ್ವದ ಮೂಲಕ ನೀವು ನಮಗೆ ತುಂಬಾ ಇಷ್ಟವಾಗುತ್ತಿದ್ದೀರಿ’ ಎಂದು ಹೇಳಿದ್ದಾರೆ. ಇದೇ ವೇಳೆ ಅವರು ಜನಸಾಮಾನ್ಯರಂತೆ ಕೆಲಸ ಮಾಡುತ್ತಿದ್ದಾಗ ತೆಗೆದ ಫೋಟೋವನ್ನು ತೋರಿಸಿದ್ದಾರೆ. ಅದನ್ನು ನೋಡಿದ ಸುಧಾ ಮೂರ್ತಿಯವರು ಆ ಫೋಟೋ ಯಾವಾಗ ತೆಗೆದಿದ್ದು ಎಂಬುದರ ಬಗ್ಗೆ ವೇದಿಕೆಯಲ್ಲೇ ಹಂಚಿಕೊಂಡಿದ್ದಾರೆ.

    ನಾನು ತಿರುಪತಿ ವೆಂಕಟರಮಣ ದೇವಸ್ಥಾನದಲ್ಲಿ ಹೂ ಕಟ್ಟಲೆಂದು ಹೋಗಿದ್ದೆನು. ವರ್ಷದಲ್ಲಿ ಒಮ್ಮೆ ಅಲ್ಲಿ ಅವಕಾಶ ಸಿಗುತ್ತದೆ. ನಾನು ಅಲ್ಲಿಗೆ ಹೋಗಿ ಎಲ್ಲರೊಂದಿಗೆ ಕುಳಿತು ಹೂ ಕಟ್ಟಿದ್ದು ತುಂಬಾ ಖುಷಿಯಾಯ್ತು ಅಂದ್ರು. ಇನ್ನೊಂದು ಫೋಟೋ ಬೆಂಗಳೂರಿನ ರಾಜಾಜಿನಗರದ 6ನೇ ಬ್ಲಾಕ್‍ನಲ್ಲಿರುವ ರಾಯರ ಮಠದಲ್ಲಿ ನಾನು ತರಕಾರಿ ಹೆಚ್ಚುತ್ತಿರುವಾಗ ಕ್ಲಿಕ್ಕಿಸಿದ ಫೋಟೋ ಎಂದು ಸಂತೋಷದ ನಗು ಬೀರಿದರು.

    ಸುಧಾ ಮೂರ್ತಿ ಅವರು ಕನ್ನಡಿಗರ ಹೆಮ್ಮೆ. ಅವರು ಎಷ್ಟೇ ದೊಡ್ಡ ಸ್ಥಾನದಲ್ಲಿದ್ದರೂ ಕೊಂಚ ಕೂಡ ಅಹಂ ಇಲ್ಲದೆ ಸರಳವಾಗಿ ಬದುಕಿ ಎಲ್ಲರ ಮನ ಗೆದ್ದವರು. ಇತ್ತೀಚೆಗೆ, ಪ್ರಶಸ್ತಿಯೊಂದನ್ನು ಸ್ವೀಕರಿಸಿ ಮಾತನಾಡಿದ ಸುಧಾ ಮೂರ್ತಿ, ಮನುಷ್ಯನಿಗೆ ದುಡ್ಡು ಬಂದಾಗ ಮಾನವೀಯತೆ ಮರೆತು ಹೋಗಬಾರದು ಎಂದು ನನಗೆ ನನ್ನ ಹೆಮ್ಮೆಯ ಹಿರಿಯರು ಹೇಳಿಕೊಟ್ಟಿದ್ದಾರೆ ಎಂದು ಹೇಳಿದ್ದಾರೆ. ಸುಧಾಮೂರ್ತಿ ಈ ರೀತಿ ಹೇಳುತ್ತಿದ್ದಂತೆಯೇ ಕಾರ್ಯಕ್ರಮದಲ್ಲಿ ನೆರೆದವರ ಚಪ್ಪಾಳೆಯ ಸದ್ದು ಮುಗಿಲು ಮುಟ್ಟಿತ್ತು.

  • ಲಿಂಗೈಕ್ಯ ಶ್ರೀಗಳ, ಹುತಾತ್ಮ ಯೋಧರ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಹನುಮಂತ – ಫೋಟೋಗೆ ಮುಗಿಬಿದ್ದ ವಿದ್ಯಾರ್ಥಿಗಳು

    ಲಿಂಗೈಕ್ಯ ಶ್ರೀಗಳ, ಹುತಾತ್ಮ ಯೋಧರ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಹನುಮಂತ – ಫೋಟೋಗೆ ಮುಗಿಬಿದ್ದ ವಿದ್ಯಾರ್ಥಿಗಳು

    ಬೆಂಗಳೂರು: ತನ್ನ ಕಂಠ ಸಿರಿಯಿಂದ ಇಡೀ ಕರ್ನಾಟಕದ ಮನೆ ಮಾತಾಗಿರುವ ಸರಿಗಮಪ ಖ್ಯಾತಿಯ ಹನುಮಂತಣ್ಣ ಭಾನುವಾರ ಖಾಸಗಿ ಶಾಲೆಯೊಂದು ಆಯೋಜನೆ ಮಾಡಿದ್ದ ಲಿಂಗೈಕ್ಯ ಶಿವಕುಮಾರ ಸ್ವಾಮಿಗಳ ಹಾಗೂ ಹುತಾತ್ಮ ವೀರ ಯೋಧರ ಸ್ಮರಣಾರ್ಥ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

    ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಖಾಸಗಿ ಶಾಲೆಯ ವತಿಯಿಂದ ಶಿವಕುಮಾರ ಸ್ವಾಮಿಗಳ ಹಾಗೂ ಹುತಾತ್ಮ ಯೋಧರ ಸ್ಮರಣಾರ್ಥವಾಗಿ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮಕ್ಕೆ ಸರಿಗಮಪ ಖ್ಯಾತಿಯ ಹನುಮಂತ ಆಗಮಿಸಿ ಕಾರ್ಯಕ್ರಮಕ್ಕೆ ಮತ್ತಷ್ಟು ಮೆರಗು ತಂದು ಕೊಟ್ಟಿತ್ತು.

    ಶಾಲಾ ಮಕ್ಕಳ ಹಾಗೂ ಶಿಕ್ಷಕರ ಜೊತೆ ಯೋಧರ ಮತ್ತು ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಹಾಡುಗಳನ್ನು ಹಾಡುವ ಮೂಲಕ ಹನುಮಂತಣ್ಣ ನೆರೆದಿದ್ದ ಶಾಲಾ ಮಕ್ಕಳು ಹಾಗೂ ಪೋಷಕರಿಗೆ ಮನರಂಜನೆ ನೀಡಿದರು. ನಂತರ ಹನುಮಂತಣ್ಣನ ಜೊತೆ ಫೋಟೋ ಕ್ಲಿಕ್ಕಿಸಿಕೊಳ್ಳಲು ವಿದ್ಯಾರ್ಥಿಗಳು ಮತ್ತು ಪೋಷಕರು ಮೂಗಿ ಬಿದ್ದಿದ್ದು, ಆಗ ಕೆಲ ಕಾಲ ಗೊಂದಲದ ವಾತಾವರಣ ಉಂಟಾಗಿತ್ತು. ಕೊನೆಗೆ ಹನುಮಂತಣ್ಣ ಜನಗಳ ನುಕುನುಗ್ಗಲು ಮಧ್ಯೆ ಕಾರನ್ನು ಹತ್ತಿ ಹೊರಟು ಹೋದರು.

  • ಗುತ್ತಿಗೆ ಸಿಕ್ಕಿದ್ದಕ್ಕೆ ಹಣ ಕೊಡಿ – ಸಚಿವರ ಬೆಂಬಲಿಗರಿಂದ ಪರ್ಸಂಟೇಜ್  ಗೂಂಡಾಗಿರಿ!

    ಗುತ್ತಿಗೆ ಸಿಕ್ಕಿದ್ದಕ್ಕೆ ಹಣ ಕೊಡಿ – ಸಚಿವರ ಬೆಂಬಲಿಗರಿಂದ ಪರ್ಸಂಟೇಜ್ ಗೂಂಡಾಗಿರಿ!

    – ವೆಂಕಟರಾವ್ ಬೆಂಬಲಿಗರಿಂದ ಹಲ್ಲೆ
    – ಶಾಮಿಯಾನ ಗುತ್ತಿಗೆದಾರನಿಂದ ದೂರು

    ರಾಯಚೂರು: ಪಶುಸಂಗೋಪನೆ ಹಾಗೂ ಮೀನುಗಾರಿಕೆ ಸಚಿವ ವೆಂಕಟರಾವ್ ನಾಡಗೌಡರ ಬೆಂಬಲಿಗರು ಪರ್ಸಂಟೇಜ್ ಕಲೆಕ್ಷನ್‍ಗೆ ಮುಂದಾಗಿ, ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸಚಿವರ ಮೇಲೆ ಗಂಭೀರ ಆರೋಪ ಕೇಳಿಬಂದಿದೆ.

    ಜನವರಿ 5 ರಿಂದ 7 ರವರೆಗೆ ರಾಯಚೂರಿನ ಸಿಂಧನೂರಿನಲ್ಲಿ ರಾಜ್ಯಮಟ್ಟದ ಮತ್ಸ್ಯ ಹಾಗು ಪಶು ಮೇಳ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ಮೇಳದಲ್ಲಿ ಶಾಮಿಯಾನ ಹಾಕಿದ್ದ ಗುತ್ತಿಗೆದಾರ ಮೆಹಬೂಬ್ ಮುಲ್ಲಾ ಅವರಿಗೆ ಪರ್ಸಂಟೇಜ್ ಕೊಡಬೇಕು ಅಂತ ಸಚಿವ ನಾಡಗೌಡರ ಬೆಂಬಲಿಗರು ಹಲ್ಲೆ ಮಾಡಿದ್ದಾರೆ.

    ವೆಂಕಟರಾವ್ ನಾಡಗೌಡರ ಬೆಂಬಲಿಗರಾದ ವೆಂಕಟೇಶ್, ಹನುಮನಗೌಡ, ಮಹಾಲಿಂಗಸ್ವಾಮಿ, ವಿಶ್ವ ಎಂಬುವವರು ಶಾಮಿಯಾನ ಮಾಲೀಕರ ಸಂಘದ ಅಧ್ಯಕ್ಷ ಮೆಹಬೂಬ್ ಮುಲ್ಲಾ ಮೇಲೆ ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆಸಿ ಸಚಿವರ ಸ್ವಗ್ರಾಮ ಜವಳಗೇರಾಕ್ಕೆ ಕಾರಿನಲ್ಲಿ ಬಲವಂತವಾಗಿ ಕುಳ್ಳಿರಿಸಿ ಕರೆದುಕೊಂಡು ಹೋಗಿದ್ದಾರೆ. ಆಗ ಸಚಿವರು ಸಹ ಹಣ ನೀಡದ್ದಕ್ಕೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಅಂತ ಮೆಹಬೂಬ್ ಮುಲ್ಲಾ ಆರೋಪಿಸಿದ್ದಾರೆ.

    ಮೇಳದ ಶಾಮಿಯಾನ ಗುತ್ತಿಗೆಯನ್ನು ಶರಣಬಸವೇಶ್ವರ ಶಾಮಿಯಾನ ಸಪ್ಲೇಯರ್ಸ್ ಪಡೆದಿದ್ದರು. ಅವರಿಂದ ಮೆಹಬೂಬ್ ಅವರು ಉಪಗುತ್ತಿಗೆ ಪಡೆದಿದ್ದರು. 16 ಲಕ್ಷ ರೂ. ಚೆಕ್ ಡ್ರಾ ಮಾಡಿಕೊಳ್ಳಲು ಆಕ್ಸಿಸ್ ಬ್ಯಾಂಕ್‍ಗೆ ಹೋದಾಗ ಈ ಘಟನೆ ನಡೆದಿದೆ. ಬ್ಯಾಂಕ್ ಮ್ಯಾನೆಜರ್ ಸಹ ಇದರಲ್ಲಿ ಭಾಗಿಯಾಗಿದ್ದಾರೆ ಎಂದು ಮೆಹಬೂಬ್ ಅವರು ಆರೋಪಿಸಿದ್ದಾರೆ. ಸಿಂಧನೂರು ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ಮೆಹಬೂಬ್ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.

  • ಕೊನೆಗೂ ಬೆಂಗಳೂರಿಗೆ ಬಂದ್ರು ರಮ್ಯಾ ಮೇಡಂ

    ಕೊನೆಗೂ ಬೆಂಗಳೂರಿಗೆ ಬಂದ್ರು ರಮ್ಯಾ ಮೇಡಂ

    ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರ ಸಂವಾದ ಕಾರ್ಯಕ್ರಮಕ್ಕಾಗಿ ಮಾಜಿ ಸಂಸದೆ, ಕಾಂಗ್ರೆಸ್ ಸಾಮಾಜಿಕ ಜಾಲತಾಣದ ವಿಭಾಗದ ಮುಖ್ಯಸ್ಥೆ ರಮ್ಯಾ ಅವರು ಬಹುದಿನಗಳ ಬಳಿಕ ಸಿಲಿಕಾನ್ ಸಿಟಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ.

    ಇಂದು ಸಂಜೆ ರಾಜಧಾನಿಯ ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ಟೆಕ್ಕಿಗಳ ಜೊತೆ ನಡೆಯಲಿರುವ ರಾಹುಲ್ ಗಾಂಧಿ ಅವರ ಸಂವಾದ ಕಾರ್ಯಕ್ರಮದಲ್ಲಿ ರಮ್ಯಾ ಕಾಣಿಸಿಕೊಂಡಿದ್ದಾರೆ.

    ರಾಹುಲ್ ಗಾಂಧಿ ಅವರ ಸಂವಾದ ಕಾರ್ಯಕ್ರಮಕ್ಕೆ ಬೆಂಗಳೂರಿಗೆ ಬಂದಿಳಿದಿರುವ ರಮ್ಯಾ, ಕಾರ್ಯಕ್ರಮದ ಉಸ್ತುವರಿಯನ್ನು ನೋಡಿಕೊಳ್ಳುತ್ತಾ ಬ್ಯುಸಿಯಾಗಿದ್ದಾರೆ.

    ಕರ್ನಾಟಕ ವಿಧಾನಸಭಾ ಚುನಾವಣೆಯ ಸಮಯದಲ್ಲಿ ರಮ್ಯಾ ಮಂಡ್ಯಕ್ಕೆ ಬರಲಿಲ್ಲ. ನಂತರ ಅಂಬರೀಶ್ ಅವರು ಮೃತಪಟ್ಟ ಸಮಯದಲ್ಲೂ ರಮ್ಯಾ ರಾಜ್ಯಕ್ಕೆ ಬಂದಿರಲಿಲ್ಲ. ರಮ್ಯಾ ಆಗಮಿಸಿದ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ರಮ್ಯಾ ವಿರುದ್ಧ ಕಾಂಗ್ರೆಸ್ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು.

  • ರಾಯರ ಗುರು ವೈಭವೋತ್ಸವದ ಸಂಭ್ರಮಕ್ಕೆ ತೆರೆ

    ರಾಯರ ಗುರು ವೈಭವೋತ್ಸವದ ಸಂಭ್ರಮಕ್ಕೆ ತೆರೆ

    ರಾಯಚೂರು: ಗುರು ರಾಯರ ಸನ್ನಿಧಿ ಮಂತ್ರಾಲಯದಲ್ಲಿ ಕಳೆದ 6 ದಿನಗಳಿಂದ ನಡೆಯುತ್ತಿರುವ ರಾಯರ ಗುರು ವೈಭವೋತ್ಸವದ ಸಂಭ್ರಮಕ್ಕೆ ಬುಧವಾರ ವಿದ್ಯುಕ್ತ ತೆರೆ ಬಿದ್ದಿದೆ. ಗುರು ರಾಘವೇಂದ್ರ ಸ್ವಾಮಿಗಳ 398ನೇ ಪಟ್ಟಾಭಿಷೇಕ ಹಾಗೂ 424ನೇ ವರ್ಧಂತಿ ಉತ್ಸವ ಅಂಗವಾಗಿ ಆಚರಣೆಗೆ ಬಂದಿರುವ ಗುರು ವೈಭವೋತ್ಸವ ಅದ್ಧೂರಿಯಾಗಿ ನಡೆಯಿತು. ಬೇಸಿಗೆ ಹಾಗೂ ಬರಗಾಲದಿಂದ ಭಕ್ತರ ಸಂಖ್ಯೆಯಲ್ಲಿ ಇಳಿಮುಖವಾದ್ರು ಗುರು ವೈಭವೋತ್ಸವದ ವೈಭವ ಪ್ರತಿವರ್ಷದಂತೆ ನಡೆದಿದೆ.

    ಕಲಿಯುಗ ಕಾಮಧೇನು ಅಂತಲೇ ಕರೆಯಿಸಿಕೊಳ್ಳುವ ಮಂತ್ರಾಲಯದ ಗುರು ರಾಘವೇಂದ್ರ ಸ್ವಾಮಿಗಳ ಅವರ ಬುಧವಾರ 424ನೇ ಹುಟ್ಟುಹಬ್ಬ. ಈ ದಿನವನ್ನು ರಾಯರ ಭಕ್ತರು ವರ್ಧಂತೋತ್ಸವವಾಗಿ ಸಂಭ್ರಮದಿಂದ ಮಂತ್ರಾಲಯ ಸೇರಿದಂತೆ ಎಲ್ಲೆಡೆ ಆಚರಿಸಿದ್ದಾರೆ. ಮಾರ್ಚ್ 8 ರಂದು ರಾಯರ 396ನೇ ಪಟ್ಟಾಭಿಷೇಕ ಕಾರ್ಯಕ್ರಮ ಅದ್ಧೂರಿಯಾಗಿ ಜರುಗಿತು.

    ರಾಯರ ಪಟ್ಟಾಭಿಷೇಕ ಹಾಗೂ ವರ್ಧಂತಿ ಉತ್ಸವ ಹಿನ್ನೆಲೆ ಮಂತ್ರಾಲಯದಲ್ಲಿ 6 ದಿನ ಕಾಲ ಗುರು ವೈಭವೋತ್ಸವವನ್ನು ಆಚರಿಸಲಾಗಿದೆ. ಈ 6 ದಿನ ಕಾಲ ಬೆಳಗ್ಗೆಯಿಂದಲೇ ಸುಪ್ರಭಾತ, ನಿರ್ಮಾಲ್ಯ ವಿಸರ್ಜನೆ, ಮೂಲ ರಾಮದೇವರ ಪೂಜೆ ನಡೆಯಿತು. ಬುಧವಾರ ರಾಯರ ಪಾದುಕೆಗಳನ್ನು ನವರತ್ನಖಚಿತ ರಥದಲ್ಲಿಟ್ಟು ಮೆರವಣಿಗೆ ಮಾಡಲಾಯಿತು. ಹಿಂದಿನಿಂದ ಬಂದ ಪರಂಪರೆಯನ್ನು ಮಠದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

    ಪ್ರತಿ ಬಾರಿಯಂತೆ ಈ ಬಾರಿಯೂ ವರ್ಧಂತಿ ಉತ್ಸವಕ್ಕೆ ವಿಶೇಷವಾಗಿ ತಿರುಪತಿ ತಿರುಮಲ ದೇವಾಲಯದಿಂದ ರಾಯರಿಗೆ ಪಟ್ಟವಸ್ತ್ರಗಳ ಸಮರ್ಪಣೆ ನಡೆಯಿತು. ತಮಿಳುನಾಡಿನ ಚೆನೈನ ನಾದಹಾರ ಸೇವಾ ಟ್ರಸ್ಟ್ ನ 450ಕ್ಕೂ ಹೆಚ್ಚು ಕಲಾವಿದರು ಒಟ್ಟಿಗೆ ಹಾಡುವ ಮೂಲಕ ನಾದಸೇವೆಯನ್ನು ಮಾಡಿದರು. ಕಳೆದ 15 ವರ್ಷಗಳಿಂದ ನಾದಹಾರ ಸೇವೆಯನ್ನ ಈ ಭಕ್ತರು ನೆರವೇರಿಸತ್ತಾ ಬಂದಿದ್ದಾರೆ.

    ಗುರುವೈಭವೋತ್ಸವ ಹಿನ್ನೆಲೆ ಮಠದಲ್ಲಿ ಪ್ರತಿದಿನ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳ ಜೊತೆ ಪ್ರವಚನ ಹಾಗೂ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದ ಗಣ್ಯರಿಗೆ ಸನ್ಮಾನ ಮಾಡಲಾಗುತ್ತದೆ. ಬುಧವಾರ ಉತ್ಸವಕ್ಕೆ ತೆರೆಬಿದ್ದಿದ್ದು, ನಾನಾ ರಾಜ್ಯಗಳಿಂದ ಸಾವಿರಾರು ಸಂಖ್ಯೆಯಲ್ಲಿ ಮಠಕ್ಕೆ ಆಗಮಿಸಿದ ಭಕ್ತರು ಗುರುವೈಭವೋತ್ಸವದ ಸಂಭ್ರಮಕ್ಕೆ ಸಾಕ್ಷಿಯಾಗಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv