Tag: `ಕಾಲಾಪತ್ಥರ್’

  • ‘ಕಾಲಾಪತ್ಥರ್’ ಸಾಂಗ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

    ‘ಕಾಲಾಪತ್ಥರ್’ ಸಾಂಗ್ ರಿಲೀಸ್ ಮಾಡಿದ ಅಶ್ವಿನಿ ಪುನೀತ್ ರಾಜಕುಮಾರ್

    ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗೂ ನಟಿಸಿರುವ ‘ಕಾಲಾಪತ್ಥರ್’ (Kalapathar) ಚಿತ್ರದ ‘ಗೋರುಕನ ಗಾನ’ ಎಂಬ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ (Ashwini Puneeth Rajkumar) ಹಾಗೂ ನಟಿ ತಾರಾ ಅನುರಾಧ ಬಿಡುಗಡೆ ಮಾಡಿ ಶುಭ ಕೋರಿದರು. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು (Song) ಖ್ಯಾತ ಚಿತ್ರ ಸಾಹಿತಿ ವಿ.ನಾಗೇಂದ್ರಪ್ರಸಾದ್ ಬರೆದಿದ್ದಾರೆ. ಸರಿಗಮಪ ಖ್ಯಾತಿಯ ಶಿವಾನಿ ಹಾಡಿದ್ದಾರೆ. ಹಾಡು ಬಿಡುಗಡೆ ಸಾಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು.

    ಗೋರುಕನ ಹಾಡು ನಮ್ಮ ಚಿತ್ರದ ಮೊದಲ ಹಾಡು ಎಂದು ಮಾತು ಅರಂಭಿಸಿದ ನಾಯಕ ಹಾಗೂ ನಿರ್ದೇಶಕ ವಿಕ್ಕಿ ವರುಣ್, ಈ ಹಾಡಿನ ಮೂಲಕ ಮಂಗಳಮುಖಿಯರು ನಮ್ಮ ಚಿತ್ರದ ಕಥೆ ಹೇಳುತ್ತಾರೆ. ಇದು ಚಿತ್ರದ ಕಥೆ ಹೇಳುವ ಗೀತೆಯಾಗಿರುವುದರಿಂದ ಇಂದು ಲಿರಿಕಲ್ ಸಾಂಗ್ ಮಾತ್ರ ರಿಲೀಸ್ ಮಾಡಿದ್ದೇವೆ.

    ವಿ.ನಾಗೇಂದ್ರ ಪ್ರಸಾದ್ ಅವರು ಬರೆದಿರುವ ಹಾಡಿಗೆ ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಶಿವಾನಿ ಈ ಹಾಡನ್ನು ಹಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ಗಾಯಕಿಯಾಗಿ ಪಾದಾರ್ಪಣೆ ಮಾಡಿದ್ದಾರೆ. ಹಾಡು ಬಿಡುಗಡೆ ಮಾಡಿಕೊಟ್ಟ ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ತಾರಾ ಅವರಿಗೆ ಧನ್ಯವಾದಗಳು ಎಂದರು. ಇದನ್ನೂ ಓದಿ:ನಾನು ಮದುವೆಯಾಗುವ ಹುಡುಗ ಅದಿತಿ ಪ್ರಭುದೇವ ಗಂಡನ ಥರ ಇರಬೇಕು- ಸೋನು

    2.0 ಹೊಸ ವರ್ಷನ್ ನಲ್ಲಿ ಬಿಡುಗಡೆಯಾಗಿರುವ ಮೊದಲ ಹಾಡು ಇದು. ನಾಗೇಂದ್ರ ಪ್ರಸಾದ್ ಅದ್ಭುತವಾಗಿ ಗೀತರಚನೆ ಮಾಡಿದ್ದಾರೆ. ಹದಿನಾರು ವರ್ಷದ ಶಿವಾನಿ ಅವರ ಗಾಯನ ಈ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು ಸಂಗೀತ ನಿರ್ದೇಶಕ ಅನೂಪ್ ಸೀಳಿನ್. ದೇಸಿ ಶೈಲಿಯಲ್ಲಿ ಸಂಗೀತ ಸಂಯೋಜಿಸುವುದರಲ್ಲಿ ಅನೂಪ್ ಸೀಳಿನ್ ಸಹ ಪ್ರಮುಖರು. ಗೋರುಕನ ಎಂದರೆ ಸುವ್ವಿ ಎಂಬ ಅರ್ಥ ಬರುತ್ತದೆ. ಹೆಚ್ಚಾಗಿ ಸೋಲಿಗರು ಈ ಪದವನ್ನು ಬಳಸುತ್ತಾರೆ ಎಂದು ಗೀತರಚನೆಕಾರ ವಿ.ನಾಗೇಂದ್ರಪ್ರಸಾದ್ ಮಾಹಿತಿ ನೀಡಿದರು.

    ತಾವು ಗಂಗಾ ಎಂಬ ಪಾತ್ರ ನಿರ್ವಹಿಸಿರುವುದಾಗಿ ನಾಯಕಿ ಧನ್ಯ ರಾಮಕುಮಾರ್ ತಿಳಿಸಿದರು. ನಿರ್ದೇಶಕರಾದ ಸಿಂಪಲ್ ಸುನಿ, ಮಹೇಶ್ ಕುಮಾರ್(ಮದಗಜ), ಜಿ.ಟಿ.ಮಾಲ್ ನ ಮಾಲೀಕರಾದ ಆನಂದ್, ಉದ್ಯಮಿ ಜಗದೀಶ್ ಚೌಧರಿ ಮುಂತಾದವರು ಹಾಡು ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರತಂಡಕ್ಕೆ ಶುಭ ಕೋರಿದರು.  ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲನಕೋಟೆ, ಆಗಮಿಸಿದ ಗಣ್ಯರಿಗೆ ಹಾಗೂ ಚಿತ್ರತಂಡಕ್ಕೆ ಧನ್ಯವಾದ ತಿಳಿಸಿದರು.

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಕ್ಕಿ ವರುಣ್ ನಟಿಸಿ, ನಿರ್ದೇಶನ ಮಾಡಿರುವ ‘ಕಾಲಾಪತ್ಥರ್’ ಸಾಂಗ್ ರಿಲೀಸ್

    ವಿಕ್ಕಿ ವರುಣ್ ನಟಿಸಿ, ನಿರ್ದೇಶನ ಮಾಡಿರುವ ‘ಕಾಲಾಪತ್ಥರ್’ ಸಾಂಗ್ ರಿಲೀಸ್

    ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ (Vicky Varun) ನಿರ್ದೇಶಿಸಿ ನಾಯಕನಾಗಿ ನಟಿಸಿರುವ ‘ಕಾಲಾಪತ್ಥರ್’ (Kalapathar) ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಚಿತ್ರದ ಐದು ಹಾಡುಗಳನ್ನು (Song) ಸೇರಿಸಿ ‘ಸೌಂಡ್ಸ್ ಆಫ್ ಕಾಲಾಪತ್ಥರ್’ ಎಂಬ ಹಾಡುಗಳ ಗುಚ್ಛವನ್ನು ಕೆಲವೇ ನಿಮಿಷಗಳಲ್ಲಿ ತೋರಿಸುವ ವಿಭಿನ್ನ ಪ್ರಯತ್ನಕ್ಕೆ ಚಿತ್ರತಂಡ ಮುಂದಾಯಿತು. ಸಮಾರಂಭದ ನಂತರ ಚಿತ್ರತಂಡದ ಸದಸ್ಯರು ಸಿನಿಮಾ ಕುರಿತು ಮಾಹಿತಿ ನೀಡಿದರು.

    ನಿರ್ದೇಶನ ನನ್ನ ಕನಸು. ಆ ಕನಸನ್ನು ನನಸು ಮಾಡಿದ ನಿರ್ಮಾಪಕರಿಗೆ ನಾನು ಆಭಾರಿ. ಸೂರಿ ಅವರ ಬಳಿ ಹತ್ತು ವರ್ಷ ಕೆಲಸ ಮಾಡಿರುವ ಅನುಭವದಿಂದ ನಿರ್ದೇಶನ ನನಗೆ ಅಷ್ಟು ಕಷ್ಟವಾಗಲಿಲ್ಲ. ನಿರ್ದೇಶನ ಹಾಗೂ ನಟನೆ ಎರಡು ಒಟ್ಟಿಗೆ ಮಾಡುವುದು ಸ್ವಲ್ಪ ಕಷ್ಟ. ಆದರೆ ನಮ್ಮ ಚಿತ್ರತಂಡದ ಸಹಕಾರದಿಂದ  ‘ಕಾಲಾಪತ್ಥರ್’ ನಾವು ಅಂದುಕೊಂಡ ಹಾಗೆ ಅದ್ಭುತವಾಗಿ ಮೂಡಿಬಂದಿದೆ. ಏನಾದರೂ ಹೊಸತು ಮಾಡಬೇಕು ಎಂದೆನಿಸಿ ‘ಸೌಂಡ್ಸ್ ಆಫ್ ಕಾಲಾಪತ್ಥರ್’ ವಿಡಿಯೋವನ್ನು ಇಂದು ಬಿಡುಗಡೆ ಮಾಡಿದ್ದೇವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ‘ಕಾಲಾಪತ್ಥರ್’ ಶೀರ್ಷಿಕೆ ಬಗ್ಗೆ ಹೇಳಿದರೆ, ಕಥೆ ಹೇಳಿದಂತೆ. ಹಾಗಾಗಿ ಅದರ ಬಗ್ಗೆ ಸಿನಿಮಾ ನೋಡಿದ ಮೇಲೆ ತಿಳಿಯುವುದು ಎಂದು ನಾಯಕ ಹಾಗೂ ನಿರ್ದೇಶಕ ವಿಕ್ಕಿವರುಣ್ ತಿಳಿಸಿದರು. ಇದನ್ನೂ ಓದಿ:ಅಣ್ಣ ಚಿರು ಸಮಾಧಿ ಬಳಿ ನಿದ್ದೆ ಮಾಡಿದ ಧ್ರುವ ಸರ್ಜಾ

    ಚಿತ್ರದಲ್ಲಿ ಐದು ಹಾಡುಗಳಿವೆ. ವಿ.ನಾಗೇಂದ್ರ ಪ್ರಸಾದ್ ಹಾಗೂ ಪ್ರಮೋದ್ ಮರವಂತೆ ಗೀತರಚನೆ ಮಾಡಿದ್ದಾರೆ. ವಿಜಯ್ ಪ್ರಕಾಶ್, ಸಾಯಿ ವಿಘ್ನೇಶ್, ಅಭಿಷೇಕ್, ಐಶ್ವರ್ಯ ರಂಗರಾಜನ್, ಶಿವಾನಿ ಹಾಗೂ ಸಿದ್ದಾರ್ಥ್ ಬೆಳ್ಮಣ್ಣು ಹಾಡುಗಳನ್ನು ಹಾಡಿದ್ದಾರೆ. ಇಂದು ಬಿಡುಗಡೆಯಾದ ‘ಸೌಂಡ್ಸ್ ಆಫ್ ಕಾಲಾಪತ್ಥರ್’ ವಿಕ್ಕಿ ವರುಣ್ ಅವರ ಕಾನ್ಸೆಪ್ಟ್ ಎಂದು ಸಂಗೀತ ನಿರ್ದೇಶಕ. ಅನೂಪ್ ಸೀಳಿನ್ ತಿಳಿಸಿದರು.

    ನಾನು ಮೊದಲ ಬಾರಿಗೆ ಹಳ್ಳಿ ಹುಡುಗಿಯಾಗಿ ಕಾಣಿಸಿಕೊಳ್ಳುತ್ತಿದ್ದೇನೆ ಎಂದು ಮಾತನಾಡಿದ ನಾಯಕಿ ಧನ್ಯ ರಾಮಕುಮಾರ್ (Dhanya Kumar), ಗಂಗಾ ಎಂಬ ಹೆಸರಿನ ಶಿಕ್ಷಕಿ ಪಾತ್ರ ನನ್ನದು ಎಂದು ಹೇಳಿದರು. ಕಾಲಾಪತ್ಥರ್ ಚಿತ್ರ ಚೆನ್ನಾಗಿ ಬಂದಿದೆ. ಸದ್ಯದಲ್ಲೇ ಬಿಡುಗಡೆ ದಿನಾಂಕ ತಿಳಿಸುತ್ತೇವೆ . ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕರಾದ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಡಾ.ರಾಜ್ ಮೊಮ್ಮಗಳ `ಕಾಲಾಪತ್ಥರ್’ ಚಿತ್ರದ ಫಸ್ಟ್ ಲುಕ್ ರಿವೀಲ್: ಗಂಗಾ ಪಾತ್ರದಲ್ಲಿ ಧನ್ಯ ಮಿಂಚಿಂಗ್

    ಡಾ.ರಾಜ್ ಮೊಮ್ಮಗಳ `ಕಾಲಾಪತ್ಥರ್’ ಚಿತ್ರದ ಫಸ್ಟ್ ಲುಕ್ ರಿವೀಲ್: ಗಂಗಾ ಪಾತ್ರದಲ್ಲಿ ಧನ್ಯ ಮಿಂಚಿಂಗ್

    `ನಿನ್ನ ಸನಿಹಕೆ’ ಚಿತ್ರದ ಮೂಲಕ ಚಂದನವನಕ್ಕೆ ನಾಯಕಿಯಾಗಿ ಎಂಟ್ರಿ ಕೊಟ್ಟ ನಟಿ ಧನ್ಯ ರಾಮ್‌ಕುಮಾರ್. ಮೊದಲ ಚಿತ್ರದಲ್ಲೇ ಭರವಸೆಯ ನಟಿಯಾಗಿ ತಾನೆಂತಹ ಕಲಾವಿದೆ ಅನ್ನೋದನ್ನ ಪ್ರೂವ್ ಮಾಡಿದ್ದಾರೆ. ಬಳಿಕ ಧನ್ಯ ರಾಮ್‌ಕುಮಾರ್ ಮುಂದೆ ಅದ್ಯಾವ ಚಿತ್ರದಲ್ಲಿ ಅಭಿನಯಿಸುತ್ತಾರೆ ಎಂಬ ಪ್ರಶ್ನೆಗೆ ಡಾ.ರಾಜ್‌ಕುಮಾರ್ ಅವರ ಹುಟ್ಟುಹಬ್ಬದಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ.

    ವಿಕ್ಕಿ ವರುಣ್ ನಿರ್ದೇಶಿಸಿ, ನಟಿಸುತ್ತಿರುವ `ಕಾಲಾಪತ್ಥರ್’ ಚಿತ್ರದಲ್ಲಿ ಧನ್ಯ ರಾಮ್‌ಕುಮಾರ್ ನಾಯಕಿಯಾಗಿ ನಟಿಸಿದ್ದಾರೆ. ವರನಟ ಡಾ.ರಾಜ್‌ಕುಮಾರ್ ಅವರ ಹುಟ್ಟು ಹಬ್ಬದ ಶುಭಸಂದರ್ಭದಲ್ಲಿ ನಟಿ ಧನ್ಯ ಅವರ ಎರಡನೇ ಚಿತ್ರ `ಕಾಲಾಪತ್ಥರ್’ ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ.

    ಶ್ರೀಮತಿ ಗೀತಾ ಶಿವರಾಜ್‌ಕುಮಾರ್ ಅರ್ಪಣೆಯಲ್ಲಿ, ಭುವನ್ ಮೂವೀಸ್ ಪರ್ಪಲ್ ಫೆದರ್ಸ್ ನಿರ್ಮಾಣದಲ್ಲಿ `ಕಾಲಾಪತ್ಥರ್’ ಸಿನಿಮಾ ಮೂಡಿ ಬಂದಿದ್ದು, ಡಾ.ರಾಜ್‌ಕುಮಾರ್ ಹುಟ್ಟುಹಬ್ಬದಂದು ನಾಯಕಿ ಧನ್ಯ ಅವರ ಗಂಗಾ ಪಾತ್ರದ ಲುಕ್ ರಿವೀಲ್ ಮಾಡಿದೆ ಚಿತ್ರತಂಡ. ಹಳ್ಳಿ ಹುಡುಗಿಯ ಗಂಗಾ ಪಾತ್ರದಲ್ಲಿ ಧನ್ಯ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.

    ಇದೊಂದು ಪಕ್ಕಾ ಕರ್ಮಷಿಯಲ್ ಆಕ್ಷನ್ ಕಂಟೆಂಟ್ ಜತೆ ಮುದ್ದಾದ ಲವ್ ಸ್ಟೋರಿಯಿರೋ `ಕಾಲಾಪತ್ಥರ್’ ಚಿತ್ರದಲ್ಲಿ ಧನ್ಯ ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಾಯಕನ ಬದುಕಿನಲ್ಲಿ ಗಂಗಾ ಪಾತ್ರ ಎನೆಲ್ಲಾ ತಿರುವು ತಂದು ಕೊಡುತ್ತೆ ಜತೆಗೆ ಮಧ್ಯಮ ವರ್ಗದ ಗಟ್ಟಿ ಹೆಣ್ಣು ಮಗಳಾಗಿ ಧನ್ಯ ರಾಮ್‌ಕುಮಾರ್ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ: ಯಾಕಣ್ಣ ನನ್ನೊಬ್ಬಳನ್ನೇ ಬಿಟ್ಟು ಹೋದೆ: ರಾಜ್‌ ನೆನೆದು ತಂಗಿ ಕಣ್ಣೀರು

    `ಕಾಲಾಪತ್ಥರ್’ ಸಿನಿಮಾದ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದ್ದು, ಇದೇ ಜೂನ್‌ಗೆ ತೆರೆಗೆ ಅಬ್ಬರಿಸಲಿದೆ. ಸತ್ಯಪ್ರಕಾಶ್ ಬರೆದಿರುವ ಗಟ್ಟಿ ಕಥೆಯ ಮೂಲಕ ಕಮಾಲ್ ಮಾಡಲು ವಿಕ್ಕಿ ವರುಣ್ ಮತ್ತು ಸ್ಯಾಂಡಲ್‌ವುಡ್ ಬ್ಯೂಟಿ ಧನ್ಯ ರಾಮ್‌ಕುಮಾರ್ ಬರುತ್ತಿದ್ದಾರೆ. ಈ ಹೊಸ ಜೋಡಿಯ ಕಥೆ ನೋಡಲು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.

  • ಡಾ.ರಾಜ್ ಮೊಮ್ಮಗಳಿಗೆ `ಕೆಂಡಸಂಪಿಗೆ’ ಹೀರೋ ಆ್ಯಕ್ಷನ್ ಕಟ್

    ಡಾ.ರಾಜ್ ಮೊಮ್ಮಗಳಿಗೆ `ಕೆಂಡಸಂಪಿಗೆ’ ಹೀರೋ ಆ್ಯಕ್ಷನ್ ಕಟ್

    `ಕೆಂಡಸಂಪಿಗೆ’ ಮತ್ತು `ಕಾಲೇಜ್ ಕುಮಾರ’ ಚಿತ್ರದ ಯಶಸ್ಸಿನ ನಂತರ ನಟ ವಿಕ್ಕಿ ವರುಣ್ `ಕಾಲಾಪತ್ಥರ್’ ಔಟ್ ಆಂಡ್ ಔಟ್ ಕರ್ಮಷಿಯಲ್ ಚಿತ್ರವನ್ನ ಕೈಗೆತ್ತಿಕೊಂಡಿದ್ದಾರೆ. ವಿಶೇಷ ಅಂದ್ರೆ ಈ ಚಿತ್ರದ ಮೂಲಕ ವಿಕ್ಕಿ ವರುಣ್ ನಿರ್ದೇಶಕನಾಗಿ ಭಡ್ತಿ ಪಡೆದಿದ್ದಾರೆ. ಇದೀಗ ಚಿತ್ರದ ಫಸ್ಟ್ ಲುಕ್ ರಿವೀಲ್ ಆಗಿದೆ.

    ಇವರೆಗೂ ನಾಯಕನಾಗಿ ಗುರುತಿಸಿಕೊಂಡಿದ್ದ ವಿಕ್ಕಿ ವರುಣ್ ನಿರ್ದೇಶಕನಾಗಿ `ಕಾಲಾಪತ್ಥರ್’ ಚಿತ್ರದ ಮೂಲಕ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ. ಇದೀಗ ಈ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ರಿವೀಲ್ ಆಗಿದೆ. ಡಿಫರೆಂಟ್ ಗೆಟಪ್‌ನಲ್ಲಿ ವಿಕ್ಕಿ ವರುಣ್ ಕಾಣಿಸಿಕೊಂಡಿದ್ದಾರೆ. ವಿಕ್ಕಿ ವರುಣ್ ಸಖತ್ ಮಾಸ್ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಚಿತ್ರದ ಟೈಟಲ್ ಮತ್ತು ವಿಕ್ಕಿ ಲುಕ್ ನೋಡಿದ್ರೆ ಮತ್ತಷ್ಟು ಕುತೂಹಲ ಹೆಚ್ಚಿಸುತ್ತಿದೆ.

    ಶ್ರೀಮತಿ ಗೀತಾ ಶಿವರಾಜ್ ಕುಮಾರ್ ಅರ್ಪಣೆಯಲ್ಲಿ, ಭುವನ್ ಮೂವೀಸ್ ಪರ್ಪಲ್ ಫೆದರ್ಸ್ ನಿರ್ಮಾಣದಲ್ಲಿ `ಕಾಲಾಪತ್ಥರ್’ ಚಿತ್ರ ಮೂಡಿ ಬರುತ್ತಿದ್ದು, ಇದೊಂದು ಪಕ್ಕಾ ಕರ್ಮಷಿಯಲ್ ಆಕ್ಷನ್ ಕಂಟೆAಟ್ ಜತೆ ಮುದ್ದಾದ ಲವ್ ಸ್ಟೋರಿಯನ್ನ ನೋಡಬಹುದಾಗಿದೆ. ಮಧ್ಯಮ ವರ್ಗದ ಹುಡುಗನೊಬ್ಬ ಸಡನ್ ಆಗಿ ಸ್ಟಾರ್ ಆಗಿ ಮಿಂಚಿದ್ರೆ, ಆ ಸ್ಟಾರ್ ಗಿರಿ ಹೇಗೆ ನಿರ್ವಹಿಸುತ್ತಾನೆ ಏನೆಲ್ಲಾ ಕಷ್ಟಗಳನ್ನ ಎದುರಿಸುತ್ತಾನೆ ಎಂಬುದೇ ಕಥೆಯಾಗಿದ್ದು, ವಿಕ್ಕಿ ವರುಣ್ ನಾಯಕಿಯಾಗಿ ಧನ್ಯ ರಾಮ್‌ಕುಮಾರ್ ಭಿನ್ನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನು ವರನಟ ಡಾ. ರಾಜ್‌ಕುಮಾರ್ ಅವರ ಹುಟ್ಟು ಹಬ್ಬದಂದು ನಾಯಕಿ ಧನ್ಯ ಪಾತ್ರದ ಲುಕ್ ಕೂಡ ರಿವೀಲ್ ಆಗಲಿದೆ. ಇದನ್ನೂ ಓದಿ: ಶೂಟಿಂಗ್ ವೇಳೆ ಅವಘಡ, ನಟ ಧನ್ವೀರ್ ಗೌಡ ಕೈಗೆ ಪೆಟ್ಟು

    `ಕಾಲಾಪತ್ಥರ್’ ಸಿನಿಮಾದ ಚಿತ್ರೀಕರಣ ಪೂರ್ಣಗೊಂಡಿದ್ದು, ಇದೇ ಜೂನ್‌ಗೆ ತೆರೆಗೆ ಅಬ್ಬರಿಸಲಿದೆ. ಸತ್ಯಪ್ರಕಾಶ್ ಬರೆದಿರುವ ಗಟ್ಟಿ ಕಥೆಯ ಮೂಲಕ ಕಮಾಲ್ ಮಾಡಲು ವಿಕ್ಕಿ ವರುಣ್ ಮತ್ತು ಸ್ಯಾಂಡಲ್‌ವುಡ್ ಬ್ಯೂಟಿ ಧನ್ಯ ರಾಮ್‌ಕುಮಾರ್ ಬರುತ್ತಿದ್ದಾರೆ. ಈ ಹೊಸ ಜೋಡಿಯ ಕಥೆ ನೋಡಲು ಅಭಿಮಾನಿಗಳು ಥ್ರಿಲ್ ಆಗಿದ್ದಾರೆ.