Tag: ಕಾಲುವೆ

  • Kolar | ಮದುವೆ ಮುಗಿಸಿ ವಾಪಸ್ ಹೋಗುತ್ತಿದ್ದ ಬಸ್ ಪಲ್ಟಿ – 30ಕ್ಕೂ ಹೆಚ್ಚು ಮಂದಿಗೆ ಗಾಯ

    Kolar | ಮದುವೆ ಮುಗಿಸಿ ವಾಪಸ್ ಹೋಗುತ್ತಿದ್ದ ಬಸ್ ಪಲ್ಟಿ – 30ಕ್ಕೂ ಹೆಚ್ಚು ಮಂದಿಗೆ ಗಾಯ

    ಕೋಲಾರ: ಮದುವೆ ಆರತಕ್ಷತೆ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದ ಬಸ್ (Bus) ನಿಯಂತ್ರಣ ತಪ್ಪಿ ಕಾಲುವೆಗೆ (Canal) ಬಿದ್ದ ಪರಿಣಾಮ ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಕೋಲಾರ (Kolar) ತಾಲೂಕು ಸುಗಟೂರು (Sugatur) ಗ್ರಾಮದ ಬಳಿ ನಡೆದಿದೆ.

    ಕೋಲಾರದ ವಧು ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ವರನ ಮದುವೆ ಆರತಕ್ಷತೆ ಕೋಲಾರ ಹೊರವಲಯದ ರತ್ನ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿತ್ತು. ಆರತಕ್ಷತೆಗೆ ಮೂರು ಖಾಸಗಿ ಬಸ್‌ಗಳಲ್ಲಿ ಬಂದಿದ್ದ ಜನರು ಆರತಕ್ಷತೆ ಮುಗಿಸಿಕೊಂಡು ಸಂಭ್ರಮದಿಂದ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕು ದಿಬ್ಬೂರಹಳ್ಳಿ ಗ್ರಾಮಕ್ಕೆ ವಾಪಸ್ಸಾಗುತ್ತಿದ್ದರು. ಈ ವೇಳೆ ಅವಘಡ ಸಂಭವಿಸಿದೆ. ಬಸ್‌ನಲ್ಲಿ ಸುಮಾರು 55 ಜನರಿದ್ದು, ಆ ಪೈಕಿ 30 ಜನರಿಗೆ ಗಾಯಗಳಾಗಿದೆ. ಹತ್ತು ಜನರಿಗೆ ಗಂಭೀರ ಗಾಯಗಳಾಗಿವೆ. ಈ ಪೈಕಿ 15 ಜನ ಮಹಿಳೆಯರು ಸೇರಿದ್ದಾರೆ. ಭೀಕರ ಅಪಘಾತದಲ್ಲಿ ಬಸ್ ಕಾಲುವೆಗೆ ಉರುಳಿದ ಪರಿಣಾಮ ಬಸ್ ನಲ್ಲಿದ್ದ ಜನರೆಲ್ಲರೂ ಬಹುತೇಕ ನೀರಿಗೆ ಬಿದ್ದಿದ್ದಾರೆ. ಇದನ್ನೂ ಓದಿ: ಇನ್ಮುಂದೆ ಬುಕ್ ಆದ ರೈಲ್ವೆ ಟಿಕೆಟ್ ದಿನಾಂಕ ಬದಲಿಸಲು ಅವಕಾಶ

    ಘಟನೆ ನಡೆದ ವೇಳೆ ಬಸ್‌ನಲ್ಲಿದ್ದ ಜನರು ಗಾಬರಿಯಾಗಿ ಕಿರುಚಾಡಿದ್ದಾರೆ. ಕೂಡಲೇ ಸ್ಥಳೀಯರು ಹಾಗೂ ಬಸ್‌ನಲ್ಲಿದ್ದ ಜನರನ್ನು ರಕ್ಷಣೆ ಮಾಡಿ ಕೂಡಲೇ ಗಾಯಳುಗಳನ್ನು ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ಸ್ಥಳಕ್ಕೆ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೆಲವು ಮಹಿಳೆಯರು ಮದುವೆಗೆಂದು ಹಾಕಿಕೊಂಡು ಬಂದಿದ್ದ ಚಿನ್ನದ ಒಡವೆ ಹಾಗೂ ಮೊಬೈಲ್‌ಗಳು ನೀರಿನಲ್ಲಿ ಬಿದ್ದಿವೆ ಎನ್ನಲಾಗಿದೆ. ಸದ್ಯ ಅಪಘಾತದಿಂದ ಮದುವೆ ಮನೆಯಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಮದುವೆಯ ಸಂಭ್ರಮದಲ್ಲಿದ್ದ ಸಂಬಂಧಿಗಳು ಆಸ್ಪತ್ರೆಗೆ ಬಂದು ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: LPG ತುಂಬಿದ್ದ ಟ್ರಕ್‌ಗೆ ಟ್ಯಾಂಕರ್ ಡಿಕ್ಕಿ – ಸಿಲಿಂಡರ್‌ಗಳ ಸರಣಿ ಸ್ಫೋಟ, ಕಿ.ಮೀಗಟ್ಟಲೇ ಕಾಣಿಸಿದ ಜ್ವಾಲೆ

  • ವಿಜಯಪುರ| ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ

    ವಿಜಯಪುರ| ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ

    ವಿಜಯಪುರ: ನಾಲ್ಕು ಮಕ್ಕಳನ್ನು (Childrens) ಕಾಲುವೆಗೆ ಎಸೆದು ತಾಯಿ (Mother) ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ನಾಲ್ವರು ಮಕ್ಕಳು ಜಲಸಮಾಧಿಯಾದ ಘಟನೆ ವಿಜಯಪುರ (Vijayapura) ಜಿಲ್ಲೆ ನಿಡಗುಂದಿ (Nidagundi) ತಾಲೂಕಿನ ಬೇನಾಳ ಬಳಿಯ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಯಲ್ಲಿ ನಡೆದಿದೆ.

    ಕೊಲ್ಹಾರ ತಾಲೂಕಿನ ತೆಲಗಿ ಗ್ರಾಮದ ತನು ನಿಂಗರಾಜ ಭಜಂತ್ರಿ (5), ರಕ್ಷಾ ನಿಂಗರಾಜ ಭಜಂತ್ರಿ (3), ಹಸನ್ ನಿಂಗರಾಜ ಭಜಂತ್ರಿ ಹಾಗೂ ಹುಸೇನ್ ನಿಂಗರಾಜ ಭಜಂತ್ರಿ (13 ತಿಂಗಳು) ಮೃತ ಮಕ್ಕಳು. ನಾಲ್ವರು ಮಕ್ಕಳ ತಾಯಿ ಭಾಗ್ಯ ಭಜಂತ್ರಿಯನ್ನ ಸ್ಥಳಿಯರು ಕಾಪಾಡಿದ್ದಾರೆ. ಕೌಟುಂಬಿಕ ಕಾರಣವೇ ಘಟನೆಗೆ ಕಾರಣ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ನಡುವೆ ಭಿನ್ನಾಭಿಪ್ರಾಯ ಇಲ್ಲ – ಸುರ್ಜೇವಾಲ ಸ್ಪಷ್ಟನೆ

    ಬಹುದಿನಗಳಿಂದ ಭಾಗ್ಯಳ ಪತಿ ನಿಂಗರಾಜ ಅಣ್ಣತಮ್ಮಂದಿರ ಮಧ್ಯೆ ಆಸ್ತಿಗಾಗಾಗಿ ಕಲಹ ನಡೆದಿತ್ತು. ಆಸ್ತಿಯಲ್ಲಿ ಬಿಡಿಗಾಸು ಕೊಡಲ್ಲ ಅಂತಾ ಲಿಂಗರಾಜ್‌ಗೆ ಅಣ್ಣತಮ್ಮಂದಿರು ಹೇಳಿದ್ದರು. ಅದೆ ರೀತಿ ಇಂದು ಕೂಡ ಪರಸ್ಪರ ಗಲಾಟೆ ನಡೆದಿತ್ತು. ಗಲಾಟೆಯ ನಂತರ ಮನೆಯಿಂದ ತೆಲಗಿಗೆ ಹೊರಟಾಗ ಕಾಲುವೆ ಹತ್ತಿರ ನಿಂಗರಾಜನ ದ್ವಿಚಕ್ರ ವಾಹನದ ಪೆಟ್ರೋಲ್ ಖಾಲಿ ಆಗಿದೆ. ಆಗ ಪೆಟ್ರೋಲ್ ತರಲೆಂದು ನಿಂಗರಾಜ ಸ್ವಲ್ಪ ದೂರ ಹೋಗುತ್ತಿದ್ದಂತೆ ಭಾಗ್ಯ ಮಕ್ಕಳೊಂದಿಗೆ ಕಾಲುವೆಗೆ ಹಾರಿದ್ದಾಳೆ ಎಂದು ಪತಿ ನಿಂಗರಾಜ ಕಣ್ಣೀರು ಹಾಕುತ್ತಿದ್ದಾನೆ. ಇದನ್ನೂ ಓದಿ: ಜಮೀರ್ ನೂರು ಹಸು ಕೊಡಿಸಿದ್ರೂ ಪಾಪ ಪರಿಹಾರ ಆಗಲ್ಲ – ಛಲವಾದಿ ಸಿಡಿಮಿಡಿ

    ಸದ್ಯ ಇಬ್ಬರು ಹೆಣ್ಣು ಮಕ್ಕಳ ಮೃತದೇಹವನ್ನು ಮೀನುಗಾರರು ಹೊರತೆಗೆದಿದ್ದಾರೆ. ಇಬ್ಬರು ಗಂಡು ಮಕ್ಕಳ ಶವಕ್ಕಾಗಿ ಶೋಧಕಾರ್ಯ ನಡೆಯುತ್ತಿದೆ. ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿದ್ದು, ಶವ ಶೋಧಕಾರ್ಯ ಮುಂದುವರಿದಿದೆ. ನಿಡಗುಂದಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

    ನಿಂಗರಾಜ ಹಾಲಿ ತೆಲಗಿ ಗ್ರಾಮ ಪಂ ಸದಸ್ಯನಾಗಿದ್ದು, ಮೊಹರಂನಲ್ಲಿ ದೇವರನ್ನು ಹೊರುತ್ತಿದ್ದರು. ಈ ಕಾರಣದಿಂದ ಗಂಡು ಮಕ್ಕಳಿಗೆ ಹಸೇನ್‌ ಹಾಗೂ ಹುಸೇನ್‌ ಎಂದು ಹೆಸರಿಡಲಾಗಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರ | ವರ್ಷಪೂರ್ತಿ ಸಂಪರ್ಕ ಕಲ್ಪಿಸುವ ಝಡ್-ಮೋರ್ಹ್ ಸುರಂಗ ಮಾರ್ಗ ಉದ್ಘಾಟಿಸಿದ ಮೋದಿ

  • ತುಂಬಿ ಹರಿಯುತ್ತಿದ್ದ ಕಾಲುವೆಗೆ ಇಳಿದ ಗೂಡ್ಸ್ ಆಟೋ – ಕೂಲಿ ಕಾರ್ಮಿಕರು ಪಾರು

    ತುಂಬಿ ಹರಿಯುತ್ತಿದ್ದ ಕಾಲುವೆಗೆ ಇಳಿದ ಗೂಡ್ಸ್ ಆಟೋ – ಕೂಲಿ ಕಾರ್ಮಿಕರು ಪಾರು

    ರಾಯಚೂರು: ಕೃಷಿ ಕೂಲಿ ಕಾರ್ಮಿಕರನ್ನ ಹೊತ್ತೊಯ್ಯುತ್ತಿದ್ದ ಗೂಡ್ಸ್ ಆಟೋ ಚಾಲಕನ ನಿಯಂತ್ರಣ ತಪ್ಪಿ ತುಂಬಿ ಹರಿಯುತ್ತಿದ್ದ ಕಾಲುವೆಗೆ ಇಳಿದ ಘಟನೆ ರಾಯಚೂರು (Raichuru) ಜಿಲ್ಲೆಯಲ್ಲಿ ನಡೆದಿದೆ.ಇದನ್ನೂ ಓದಿ: ವೆಂಬರ್ ಅಂತ್ಯದಿಂದ ಡಿಸೆಂಬರ್‌ವರೆಗೂ ಅಧಿಕ ಚಳಿ: ಹವಾಮಾನ ತಜ್ಞ ಸಿ.ಎಸ್. ಪಾಟೀಲ್

    ಜಿಲ್ಲೆಯ ದೇವದುರ್ಗ (Devadurga) ತಾಲ್ಲೂಕಿನ ಮಸರಕಲ್ ಬಳಿಯಿರುವ ಎನ್‌ಆರ್‌ಬಿಸಿ ಕಾಲುವೆಯಲ್ಲಿ ಈ ಘಟನೆ ನಡೆದಿದೆ. ಕಾಲುವೆ ದಡದ ಸರ್ವೀಸ್ ರಸ್ತೆಯಲ್ಲಿ ಹೋಗುವಾಗ ಚಾಲಕನ ನಿಯಂತ್ರಣ ತಪ್ಪಿ ಕಾಲುವೆಗೆ ಗೂಡ್ಸ್ ಆಟೋ ಬಿದ್ದಿದೆ. ಕಾಲುವೆಗೆ ಬಿದ್ದ ಬಳಿಕ ಚಾಲಕ ಸೇರಿ ಹತ್ತು ಜನ ಪ್ರಯಾಣಿಕರು ಪರದಾಟ ನಡೆಸಿದ್ದಾರೆ. ಅದೃಷ್ಟವಶಾತ್ ಕೂದಲೆಳೆ ಅಂತರದಲ್ಲಿ ಭಾರಿ ಅನಾಹುತ ತಪ್ಪಿದೆ. ಈ ವೇಳೆ ಸ್ಥಳೀಯರು ಕೂಡಲೇ ಆಟೋದಲ್ಲಿ ಪ್ರಯಾಣಿಸುತ್ತಿದ್ದವರ ರಕ್ಷಣೆಗೆ ಬಂದಿದ್ದು, ಜಮೀನುಗಳಲ್ಲಿದ್ದ ಹಗ್ಗಗಳ ಮೂಲಕ ಎಲ್ಲರನ್ನ ರಕ್ಷಿಸಿದ್ದಾರೆ.

    ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಗೂಡ್ಸ್ ವಾಹನಗಳಲ್ಲಿ ಪ್ರಯಾಣಿಕರನ್ನ ಕರೆದೊಯ್ಯುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.ಇದನ್ನೂ ಓದಿ: ಕೊಲೆ ಯತ್ನ ಕೇಸ್; ನಟ ತಾಂಡವೇಶ್ವರ್ ಅರೆಸ್ಟ್- ಕಮಿಷನರ್ ದಯಾನಂದ್ ಹೇಳೋದೇನು?

  • ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಕಾಲುವೆಗೆ ಉರುಳಿದ ಲಾರಿ – 7 ಮಂದಿ ದುರ್ಮರಣ

    ರಸ್ತೆಯಲ್ಲಿದ್ದ ಗುಂಡಿ ತಪ್ಪಿಸಲು ಹೋಗಿ ಕಾಲುವೆಗೆ ಉರುಳಿದ ಲಾರಿ – 7 ಮಂದಿ ದುರ್ಮರಣ

    ಅಮರಾವತಿ: ರಸ್ತೆಯಲ್ಲಿದ್ದ ಗುಂಡಿ (Pothole) ತಪ್ಪಿಸಲು ಹೋಗಿ ಲಾರಿಯೊಂದು (Lorry) ಕಾಲುವೆಗೆ (Canal) ಉರುಳಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಆಂಧ್ರಪ್ರದೇಶದ (Andhra Pradesh) ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.

    ಗೋಡಂಬಿ ಹಾಗೂ ಎಂಟು ಮಂದಿ ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಲಾರಿ ದೇವರಪಲ್ಲಿ (Devarapalli) ಗ್ರಾಮದ ಬಳಿ ರಸ್ತೆ ಗುಂಡಿ ತಪ್ಪಿಸಲು ಹೋಗಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಲಾರಿಯ ಮೇಲೆ ಕುಳಿತಿದ್ದ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. 8 ಮಂದಿಯ ಪೈಕಿ ಓರ್ವ ಮಾತ್ರ ಬದುಕುಳಿದಿದ್ದು, ಚಿಕಿತ್ಸೆಗಾಗಿ ಸಮೀಪದ ಆಸ್ಪತ್ರೆಗೆ ದಾಖಲಿಸಾಗಿದೆ. ಇದನ್ನೂ ಓದಿ: ರಾಹುಲ್‌ ಹೇಳಿಕೆಯಿಂದ ಕಾಂಗ್ರೆಸ್‌ ಮೀಸಲಾತಿ ವಿರೋಧಿ ನೀತಿ ಬಯಲಾಗಿದೆ: ಅಮಿತ್‌ ಶಾ

    ಗುಂಡಿ ತಪ್ಪಿಸಲು ಯತ್ನಿಸಿದ ಸಂದರ್ಭ ಚಾಲಕನ ನಿಯಂತ್ರಣ ತಪ್ಪಿ ವಾಹನ ಕಾಲುವೆಗೆ ಉರುಳಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರ ಶವಗಳನ್ನು ಕೊವ್ವೂರು ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಜಿ ದೇವಕುಮಾರ್ ತಿಳಿಸಿದ್ದಾರೆ. ಇದನ್ನೂ ಓದಿ: ಸಿಎಂ ರೇಸ್‌ನಲ್ಲಿ ಯಾರೂ ಇಲ್ಲ, ಸಿದ್ದರಾಮಯ್ಯನವರೇ ಮುಂದುವರಿಯುತ್ತಾರೆ: ದಿನೇಶ್ ಗುಂಡೂರಾವ್

  • ಎನ್‌ಆರ್‌ಬಿಸಿ ಕಾಲುವೆಗೆ ಬಿದ್ದು ಇಬ್ಬರು ಯುವಕರು ಸಾವು

    ಎನ್‌ಆರ್‌ಬಿಸಿ ಕಾಲುವೆಗೆ ಬಿದ್ದು ಇಬ್ಬರು ಯುವಕರು ಸಾವು

    ರಾಯಚೂರು: ಎನ್‌ಆರ್‌ಬಿಸಿ ಕಾಲುವೆಯಲ್ಲಿ (Canal) ಬಿದ್ದು ಇಬ್ಬರು ಯುವಕರು ಸಾವನ್ನಪ್ಪಿದ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು (Lingasuguru) ತಾಲೂಕಿನ ಬೆಂಡೋಣಿ ಗ್ರಾಮದಲ್ಲಿ ನಡೆದಿದೆ.

    ಊರ ಜಾತ್ರೆ ನಿಮಿತ್ತ ಮನೆಯಲ್ಲಿನ ಬಟ್ಟೆ ಹಾಸಿಗೆ ತೊಳೆಯಲು ಪಾಲಕರೊಂದಿಗೆ ಕಾಲುವೆಗೆ ಹೋದಾಗ ಘಟನೆ ನಡೆದಿದೆ. ಲಿಂಗಸುಗೂರು ತಾಲೂಕಿನ ಬೆಂಡೋಣಿ ಗ್ರಾಮದ ಲಕ್ಕಣ್ಣ (22) ಹಾಗೂ ಬಸವಂತ (25) ಮೃತ ಯುವಕರು. ಬಟ್ಟೆ ತೊಳೆಯೋ ಮೊದಲು ಓರ್ವ ಯುವಕ ಕಾಲು ಜಾರಿ ನೀರಿಗೆ ಬಿದ್ದಿದ್ದ. ಅವನನ್ನು ಕಾಪಾಡಲು ಮತ್ತೋರ್ವ ಯುವಕ ನೀರಿಗೆ ಧುಮುಕಿದ್ದ. ಆದರೆ ಇಬ್ಬರಿಗೂ ಈಜು ಬಾರದ ಹಿನ್ನೆಲೆ ಕಾಲುವೆಯಲ್ಲಿ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ದೇವೇಗೌಡರು ಪ್ಲಾನ್ ಮಾಡಿ ಪ್ರಜ್ವಲ್‌ನನ್ನು ವಿದೇಶಕ್ಕೆ ಕಳುಹಿಸಿದ್ದಾರೆ: ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

    ಸ್ಥಳೀಯರು ರಕ್ಷಣೆಗೆ ಪ್ರಯತ್ನ ಪಟ್ಟರೂ ಯಶಸ್ವಿಯಾಗಿಲ್ಲ. ಬಳಿಕ ಯುವಕರ ಶವಗಳನ್ನು ಸ್ಥಳೀಯರು ಹೊರತೆಗೆದಿದ್ದಾರೆ. ಈ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಸ್ಲಿಮರು ಮಾತ್ರ ಹೆಚ್ಚು ಮಕ್ಕಳನ್ನು ಹೊಂದುತ್ತಾರೆಯೇ? ನನಗೂ ಐದು ಜನ ಮಕ್ಕಳು: ಮೋದಿ ವಿರುದ್ಧ ಖರ್ಗೆ ವಾಗ್ದಾಳಿ

  • ಕಾಲುವೆಗೆ ಉರುಳಿದ ಕಾರು – ಮೂವರು ಸಾವು, ಮೂವರು ನಾಪತ್ತೆ

    ಕಾಲುವೆಗೆ ಉರುಳಿದ ಕಾರು – ಮೂವರು ಸಾವು, ಮೂವರು ನಾಪತ್ತೆ

    – ಮೃತ ಕುಟುಂಬಕ್ಕೆ 4 ಲಕ್ಷ ರೂ. ಆರ್ಥಿಕ ಪರಿಹಾರ ಘೋಷಿಸಿದ ಯುಪಿ ಸಿಎಂ

    ಲಕ್ನೋ: ಉತ್ತರ ಪ್ರದೇಶದ (Uttar Pradesh) ಬುಲಂದ್‌ಶಹರ್ (Bulandshahr) ಜಿಲ್ಲೆಯಲ್ಲಿ ಭಾನುವಾರ ರಾತ್ರಿ ಕಾರು ಕಾಲುವೆಗೆ (Canal) ಬಿದ್ದ ಪರಿಣಾಮ ಕಾರಿನಲ್ಲಿದ್ದ ಎಂಟು ಮಂದಿಯ ಪೈಕಿ ಮೂವರು ಸಾವನ್ನಪ್ಪಿದ್ದು, ಮೂವರು ನಾಪತ್ತೆಯಾಗಿದ್ದಾರೆ.

    ಜಹಾಂಗೀರ್‌ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ (Car) ಐವರನ್ನು ಕಾಲುವೆಯಿಂದ ಮೇಲೆತ್ತಲಾಗಿದೆ. ಅದರಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ತಂಡವು ಘಟನಾ ಸ್ಥಳಕ್ಕೆ ತೆರಳಿದ್ದು, ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ನಡೆಸುತ್ತಿದೆ. ಇದನ್ನೂ ಓದಿ: ಸೋಶಿಯಲ್ ‌ಮೀಡಿಯಾದಲ್ಲಿ ಬರೆದು ದೇಶದ ಮಾನ ಕಳೀಬೇಡಿ – ಮಹಿಳಾ ಆಯೋಗದ ಮುಖ್ಯಸ್ಥೆ ತೀವ್ರ ಆಕ್ಷೇಪ

    ಘಟನೆಯಲ್ಲಿ ಮೃತಪಟ್ಟ ಮೂವರು 18-22 ವರ್ಷದೊಳಗಿನವರಾಗಿದ್ದು, ಒಡಹುಟ್ಟಿದವರು ಎಂದು ತಿಳಿದುಬಂದಿದೆ. ಇನ್ನು ಘಟನೆಯಲ್ಲಿ ಐದು ವರ್ಷದ ಮಗು ಹಾಗೂ ಇಬ್ಬರು ಪುರುಷರು ನಾಪತ್ತೆಯಾಗಿದ್ದಾರೆ. ಸದ್ಯ ಇಬ್ಬರು ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ. ಇದನ್ನೂ ಓದಿ: ಮಸೀದಿ ಬಳಿಯಿರುವ ಭಗವಾಧ್ವಜ ತೆರವುಗೊಳಿಸಲು ಪ್ಲ್ಯಾನ್ ಆರೋಪ; ಮಾಜಿ ಶಾಸಕನ ವಿರುದ್ಧ ಕೇಸ್

    ಮದುವೆ ಸಮಾರಂಭವೊಂದರಲ್ಲಿ ಪಾಲ್ಗೊಳ್ಳುವ ಸಲುವಾಗಿ ಇಕೋ ಕಾರಿನಲ್ಲಿ ಒಟ್ಟು ಮಂದಿ ಅಲಿಗಢ್ ಪಿಸಾವಾಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಾರು ಪಲ್ಟಿಯಾಗಿ ಕಾಲುವೆಗೆ ಉರುಳಿ ದುರಂತ ಸಂಭವಿಸಿದೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬ್ಲಾಸ್ಟ್‌ನಲ್ಲಿ ವಿಶೇಷ ಟೀಂನಿಂದ 1,000 ಕ್ಕೂ ಅಧಿಕ ಸಿಸಿಟಿವಿ ಪರಿಶೀಲನೆ

    ಈ ಕುರಿತು ಪ್ರತಿಕ್ರಿಯಿಸಿರುವ ಬುಲಂದ್‌ಶಹರ್ ಎಸ್‌ಎಸ್‌ಪಿ ಶ್ಲೋಕ್ ಕುಮಾರ್, ಕಾರು ಜಹಾಂಗೀರ್‌ಪುರ ಪೊಲೀಸ್ ಠಾಣೆಯ ಕಪ್ನಾ ಕಾಲುವೆಗೆ ಬಿದ್ದಿದೆ. ನಾಪತ್ತೆಯಾಗಿರುವ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ಎನ್‌ಡಿಆರ್‌ಎಫ್ ತಂಡ ಸೇರಿದಂತೆ ಎಲ್ಲಾ ಪೊಲೀಸ್ ಮತ್ತು ಆಡಳಿತ ಅಧಿಕಾರಿಗಳು ಸ್ಥಳದಲ್ಲಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾತ್ರೋರಾತ್ರಿ ಇತಿಹಾಸ ಪ್ರಸಿದ್ಧ ಪಿಲಿಚಾಮುಂಡಿ ದೈವಸ್ಥಾನದ ನಿರ್ಮಾಣ ಹಂತದ ಭಂಡಾರಮನೆ ಧ್ವಂಸ

    ಘಟನೆಯ ಕುರಿತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಸಂತಾಪ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಮೃತ ಕುಟುಂಬಗಳಿಗೆ 4 ಲಕ್ಷ ರೂ. ಆರ್ಥಿಕ ನೆರವು ಘೋಷಿಸಿದ್ದಾರೆ.  ಇದನ್ನೂ ಓದಿ: ಹಣಕ್ಕಾಗಿ ತಾಯಿಯನ್ನು ಹತ್ಯೆಗೈದು ನೇಣಿಗೆ ಶರಣಾದ ಮಗ

  • ಸಹೋದರಿಯನ್ನು ಉಸಿರುಗಟ್ಟಿಸಿ ಕೊಂದು ದೇಹವನ್ನು ಕಾಲುವೆಗೆ ಎಸೆದ್ರು!

    ಸಹೋದರಿಯನ್ನು ಉಸಿರುಗಟ್ಟಿಸಿ ಕೊಂದು ದೇಹವನ್ನು ಕಾಲುವೆಗೆ ಎಸೆದ್ರು!

    ನವದೆಹಲಿ: ಅನ್ಯ ಸಮುದಾಯದ ವ್ಯಕ್ತಿಯೊಂದಿಗೆ  ಸಂಬಂಧ ಹೊಂದಿರುವ ಆರೋಪ ಹೊರಿಸಿ ಇಬ್ಬರು ವ್ಯಕ್ತಿಗಳು ತಮ್ಮ ಸಹೋದರಿಯನ್ನು (Sister Murder) ಉಸಿರುಗಟ್ಟಿಸಿ ಕೊಂದು ಆಕೆಯ ದೇಹವನ್ನು ಕಾಲುವೆಗೆ ಎಸೆದಿರುವ ಘಟನೆ ಗಾಜಿಯಾಬಾದ್‌ನಲ್ಲಿ (Ghaziabad) ನಡೆದಿದೆ.

    ಪೊಲೀಸ್ ಗಸ್ತು ತಂಡದ ತಪಾಸಣೆಯ ವೇಳೆ ಈ ಕೃತ್ಯ ಬೆಳಕಿಗೆ ಬಂದಿದೆ. ಶನಿವಾರ ಸಂಜೆ ಗಸ್ತು ತಿರುಗುತ್ತಿದ್ದ ಪೊಲೀಸರು, ಮುರಾದ್‌ನಗರದಲ್ಲಿ (Muradnagar) ಇಬ್ಬರನ್ನು ಗುರುತಿಸಿದ್ದಾರೆ. ಅಲ್ಲದೇ ಎಲ್ಲಿಂದ ಬಂದಿದ್ದೀರಿ ಎಂದು ಕೇಳಿದ್ದಾರೆ. ಆಗ ವೇಳೆ ಅವರು ನೀಡಿರುವ ಉತ್ತರ ಅನುಮಾನ ಹುಟ್ಟುಹಾಕಿದೆ. ಕೂಡಲೇ ಪೊಲೀಸರು ಅವರನ್ನು ಹಿಡಿದರು. ಇದನ್ನೂ ಓದಿ: ಇಸ್ಪಿಟ್ ಆಡುತ್ತಿದ್ದ ನಗರಸಭೆ ಸದಸ್ಯ ಸಹಿತ 14 ಜನರ ಬಂಧನ

    ಸುಫಿಯಾನ್ ಮತ್ತು ಅವರ ಸೋದರ ಸಂಬಂಧಿ ಮಹತಾಬ್ ಎಂದು ಗುರುತಿಸಲಾದ ಇಬ್ಬರು ವ್ಯಕ್ತಿಗಳು ತಮ್ಮ ಸಹೋದರಿಯನ್ನು ಉಸಿರುಗಟ್ಟಿಸಿ ಕೊಂದ ನಂತರ ಶವವನ್ನು ಗಂಗ್ನಾಹರ್ ಕಾಲುವೆಯಲ್ಲಿ ಎಸೆದಿದ್ದಾರೆ ಎಂದು ಬಹಿರಂಗಪಡಿಸಿದರು. ಪೊಲೀಸರು ಕಾರ್ಯಪ್ರವೃತ್ತರಾಗಿ ಕಾಲುವೆಯಲ್ಲಿ ಹುಡುಕಾಟ ಆರಂಭಿಸಿದ್ದಾರೆ. ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

    ತಮ್ಮ ಸಹೋದರಿ ಶೀಬಾ ದೆಹಲಿಯಲ್ಲಿ ಸಂಬಂಧಿಕರೊಂದಿಗೆ ತಂಗಿದ್ದರು ಎಂದು ಆರೋಪಿಗಳು ಪೊಲೀಸರಿಗೆ ತಿಳಿಸಿದ್ದಾರೆ. ಸೂಫಿಯಾನ್ ಉತ್ತರಾಖಂಡದ ರೂರ್ಕಿಯವರು ಮತ್ತು ಅವರ ಚಿಕ್ಕಪ್ಪನ ಮಗ ಮಹತಾಬ್ ಮುಜಾಫರ್‌ನಗರದವರು. ಇತ್ತೀಚೆಗಷ್ಟೇ ಶೀಬಾಗೆ ಬೇರೊಂದು ಸಮುದಾಯದ ವ್ಯಕ್ತಿ ಜೊತೆಗಿನ ಸಂಬಂಧ ಇಬ್ಬರಿಗೆ ಗೊತ್ತಾಗಿದೆ. ಈ ಸಂಬಂಧವನ್ನು ವಿರೋಧಿಸಿದ ಇಬ್ಬರು ವ್ಯಕ್ತಿಗಳು ಆಕೆಯನ್ನು ಗಾಜಿಯಾಬಾದ್ ಕಾಲುವೆ ಬಳಿ ಕರೆದೊಯ್ದು ಉಸಿರುಗಟ್ಟಿಸಿ ಕೊಲೆ ಮಾಡಿ ಶವವನ್ನು ನೀರಿಗೆ ಎಸೆದಿದ್ದಾರೆ.

    ಶೀಬಾಳ ಬಟ್ಟೆಗಳು, ಚಪ್ಪಲಿಗಳು ಮತ್ತು ಆಕೆಯನ್ನು ಉಸಿರುಗಟ್ಟಿಸಲು ಬಳಸಿದ ವಸ್ತುವನ್ನು ಕಾಲುವೆಯಿಂದ ವಶಪಡಿಸಿಕೊಳ್ಳಲಾಗಿದೆ. ಸದ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ಸ್ಥಳೀಯ ಡೈವರ್‌ಗಳ ತಂಡವು ಕಾಲುವೆಯಲ್ಲಿ ಶೋಧ ನಡೆಸುತ್ತಿದೆ. ಆದರೆ ಮೃತದೇಹ ಇನ್ನೂ ಪತ್ತೆಯಾಗಿಲ್ಲ.

  • ಬೆಚ್ಚಿ ಬೀಳಿಸಿದ ಮಹಿಳೆಯರ ಕೊಲೆ – ದೇಹವನ್ನು ತುಂಡರಿಸಿ ಕಾಲುವೆಗೆ ಎಸೆದ ಕಟುಕರು

    ಬೆಚ್ಚಿ ಬೀಳಿಸಿದ ಮಹಿಳೆಯರ ಕೊಲೆ – ದೇಹವನ್ನು ತುಂಡರಿಸಿ ಕಾಲುವೆಗೆ ಎಸೆದ ಕಟುಕರು

    ಮಂಡ್ಯ: ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ದಿನೇ ದಿನೇ ಕೊಲೆಗಳ ಸಂಖ್ಯೆ ಹೆಚ್ಚುತ್ತಿವೆ. ಇದೀಗ ಮಂಡ್ಯ ಜಿಲ್ಲೆಯಲ್ಲಿ ಇಬ್ಬರು ಮಹಿಳೆಯರನ್ನು ಕೊಲೆಘಾತುಕರು ಬರ್ಬರವಾಗಿ ಕೊಲೆ ಮಾಡಿದ್ದಾರೆ. ಇದನ್ನೂ ಓದಿ: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನು ಕೊಂದ ಪೋಷಕರು

    ಮಂಡ್ಯ ಜಿಲ್ಲೆಯ ಪಾಂಡವಪುರ ಮತ್ತು ಶ್ರೀರಂಗಪಟ್ಟಣ ತಾಲೂಕಿನ ವ್ಯಾಪ್ತಿಯಲ್ಲಿ ಪ್ರತ್ಯೇಕವಾಗಿ ಎರಡು ಮಹಿಳೆಯರ ಮೃತ ಶವ ಪತ್ತೆಯಾಗಿದೆ. ಈ ಅಪರಿಚಿತ ಮಹಿಳೆಯರನ್ನು ಕೊಲೆಘಾತುಕರು ಕೊಲೆ ಮಾಡಿದ ನಂತರ ದೇಹವನ್ನು ಎರಡು ತುಂಡುಗಳನ್ನಾಗಿ ಮಾಡಿ ಕಾಲಿಗೆ ಹಗ್ಗ ಕಟ್ಟಿ ಕಾಲುವೆಗೆ ಎಸೆದಿದ್ದಾರೆ. ಇದೀಗ ಆ ಮಹಿಳೆಯರ ಸೊಂಟದ ಕೆಳಭಾಗ ಕತ್ತರಿಸಿದ ದೇಹದ ತುಂಡು ಮಾತ್ರ ಬೆಳಕಿಗೆ ಬಂದಿದೆ.

    ಪಾಂಡವಪುರ ತಾಲೂಕಿನ ಬೇಬಿ ಗ್ರಾಮದ ಕೆರೆಯ ಕಾಲುವೆಯಲ್ಲಿ ತೇಲಿ ಬಂದ 30 ರಿಂದ 31 ವರ್ಷ ಮಹಿಳೆಯ ಕತ್ತರಿಸಿದ ಅರ್ಧ ದೇಹ ನಿನ್ನೆ ಸಂಜೆ ಗದ್ದೆಗೆ ಹೋಗಿದ್ದ ರೈತರ ಕಣ್ಣಿಗೆ ಬಿದ್ದಿದೆ. ಇದನ್ನು ಕಂಡ ರೈತರು ಬೆಚ್ಚಿ ಬಿದ್ದಿದ್ದಾರೆ. ಇದೇ ಮಾದರಿಯಲ್ಲಿ ಕೊಲೆಯಾಗಿರುವ 40 ರಿಂದ 45 ವರ್ಷದ ಮಹಿಳೆಯ ತುಂಡರಿಸಿದ ಅರ್ಧ ದೇಹ ಶ್ರೀರಂಗಪಟ್ಟಣ ತಾಲೂಕಿನ ಅರಕೆರೆ ಗ್ರಾಮದ ಗದ್ದೆಯ ಹಳ್ಳದಲ್ಲಿ ಪತ್ತೆಯಾಗಿದೆ. ಅರಕೆರೆಯ ಚಿಕ್ಕ ದೇವರಾಜ ನಾಲೆಯಿಂದ ಈ ಅರ್ಧ ದೇಹ ಹಳ್ಳಕ್ಕೆ ತೇಲಿ ಬಂದಿದೆ. ಇಂದು ಬೆಳಗ್ಗೆ ಈ ಹಳ್ಳಕ್ಕೆ ವ್ಯಕ್ತಿಯೋರ್ವ ಮೀನು ಹಿಡಿಯಲು ಹೋದ ಸಂದರ್ಭದಲ್ಲಿ ಈ ದೃಶ್ಯಕಂಡು ಹೆದರಿಕೊಂಡು ಓಡಿ ಬಂದಿದ್ದಾನೆ. ನಂತರ ಸ್ಥಳೀಯರಿಗೆ ಈ ಬಗ್ಗೆ ಹೇಳಿದ್ದಾನೆ. ಬಳಿಕ ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಪಾಂಡವಪುರ ಮತ್ತು ಅರಕೆರೆ ಪೊಲೀಸ್ ಠಾಣೆಗಳಲ್ಲಿ ಪ್ರತ್ಯೇಕವಾಗಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬಾಲಕಿಯರಿಗೆ ರೈಫಲ್, ಸೂಸೈಡ್ ಬಾಂಬ್ ತರಬೇತಿ ನೀಡಿದ್ದೆ – ಐಸಿಸ್ ಸೇರಿದ್ದ ಶಿಕ್ಷಕಿಯಿಂದ ತಪ್ಪೊಪ್ಪಿಗೆ

    ಒಟ್ಟಾರೆ ಈ ಇಬ್ಬರು ಮಹಿಳೆಯರ ಬರ್ಬರ ಕೊಲೆಯಿಂದ ಸಕ್ಕರೆ ನಾಡು ಮಂಡ್ಯದ ಜನರು ಬೆಚ್ಚಿ ಬಿದ್ದಿದ್ದಾರೆ. ಇದೀಗ ಪೊಲೀಸರು ಉಳಿದ ದೇಹದ ತುಂಡು, ಕೊಲೆಯಾದ ಮಹಿಳೆಯರು ಯಾರು, ಈ ರೀತಿ ಭಯಾನಕವಾಗಿ ಕೊಲೆ ಮಾಡಿರುವ ಕೊಲೆಗಾರರು ಯಾರು ಎಂದು ಮಂಡ್ಯ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

  • ಕಾಲುವೆಗೆ ಈಜಲು ಹೋದ ಬಾಲಕಿಯರು ನೀರುಪಾಲು

    ಕಾಲುವೆಗೆ ಈಜಲು ಹೋದ ಬಾಲಕಿಯರು ನೀರುಪಾಲು

    ರಾಯಚೂರು: ತಾಲೂಕಿನ ಮಿರ್ಜಾಪುರ ಗ್ರಾಮದ ಬಳಿ ರಾಜಲಬಂಡಾ ಕಾಲುವೆಯಲ್ಲಿ ಈಜಲು ಹೋದ ಇಬ್ಬರು ಬಾಲಕಿಯರು ನೀರುಪಾಲಾಗಿದ್ದಾರೆ.

    ಇಂದೂ(14) ಮತ್ತು ಸುಜಾತ(13) ಮೃತ ದುರ್ದೈವಿಗಳು. ಕಾಲುವೆಯಲ್ಲಿ ನೀರು ಕಡಿಮೆ ಇದೇ ಎಂದು ತಿಳಿದು ನಾಲ್ಕು ಬಾಲಕಿಯರು ನೀರಿಗೆ ಇಳಿದಿದ್ದರು. ಆದರೆ ನೀರಿನ ಸೆಳೆತ ಹೆಚ್ಚಾಗಿದ್ದರಿಂದ ಈಜು ಬಾರದ ಹಿನ್ನೆಲೆ ಇಬ್ಬರು ಬಾಲಕಿಯರು ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಬಾಲಕಿಯರು ಈಜಿ ದಡ ಸೇರಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಗೆ ಮುಂಬೈ ನಂಟು!

    ಬೇಸಿಗೆ ಹಿನ್ನೆಲೆ ಬಾಲಕಿಯರು ಈಜಾಡಲು ಹೋಗಿ ಮೃತಪಟ್ಟಿದ್ದಾರೆ. ಇದೀಗ ಮೃತ ದೇಹಗಳನ್ನು ಗ್ರಾಮಸ್ಥರು ಹೊರತೆಗೆದಿದ್ದಾರೆ. ಇಡಪನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮೃತ ಬಾಲಕಿಯರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯ ರಾತ್ರಿ ದಾಖಲೆಯ 18 ಸಾವಿರ ಫೋನ್ ಕರೆಗಳ ವಿನಿಮಯ

  • ಹಿಂದೂಗಳು 4 ಮಕ್ಕಳು ಹೊಂದಬೇಕು ಎಂದಿದ್ದ ಸಾಧ್ವಿ ಆಶ್ರಮದ ನಾಲ್ವರು ಬಾಲಕಿಯರು ಕಾಲುವೆಯಲ್ಲಿ ಮುಳುಗಿ ಸಾವು

    ಹಿಂದೂಗಳು 4 ಮಕ್ಕಳು ಹೊಂದಬೇಕು ಎಂದಿದ್ದ ಸಾಧ್ವಿ ಆಶ್ರಮದ ನಾಲ್ವರು ಬಾಲಕಿಯರು ಕಾಲುವೆಯಲ್ಲಿ ಮುಳುಗಿ ಸಾವು

    ಭೋಪಾಲ್: ಹಿಂದುತ್ವ ಪ್ರತಿಪಾದಕಿ ಸಾಧ್ವಿ ರಿತಂಬರ ನಡೆಸುತ್ತಿರುವ ರೆಸಿಡೆನ್ಷಿಯಲ್‌ ಆಶ್ರಮ ಶಾಲೆಯಲ್ಲಿ ಓದುತ್ತಿದ್ದ ನಾಲ್ವರು ಬಾಲಕಿಯರು ಕಾಲುವೆಯಲ್ಲಿ ಮುಳುಗಿ ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ ನಡೆಯುತ್ತಿದೆ.

    ವೈಶಾಲಿ, ಪ್ರತಿಗ್ಯಾ, ದಿವ್ಯಶ್ರೀ, ಅಂಜಲಿ ಮೃತ ವಿದ್ಯಾರ್ಥಿನಿಯರು. ಕೋಥಿ ಗ್ರಾಮದ ಮಾಂಧತ್‌ (ಓಂಕಾರೇಶ್ವರ) ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಬುಧವಾರ ಈ ಘಟನೆ ನಡೆದಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಇಲ್ಲಿ ಮಸೀದಿ, ಮಂದಿರಗಳೆಲ್ಲವೂ ನಮ್ಮ ದೇಹದಂತೆ ಒಟ್ಟಿಗೆ ಇರುತ್ತವೆ: ಮಮತಾ

    SADHVI

    ಕಾಲುವೆಯಲ್ಲಿ ಮುಳುಗಿ ಮೃತಪಟ್ಟ ಬಾಲಕಿಯರು 10, 11 ವಯಸ್ಸಿನವರಾಗಿದ್ದಾರೆ. ಅವರು ಆಶ್ರಯಮದಲ್ಲಿ ಐದನೇ ತರಗತಿ ಓದುತ್ತಿದ್ದರು ಎಂದು ತಿಳಿದುಬಂದಿದೆ.

    ಒಬ್ಬ ವಿದ್ಯಾರ್ಥಿನಿ ಸ್ನಾನಕ್ಕೆಂದು ಕಾಲುವೆಗೆ ತೆರಳಿದ್ದಾರೆ. ಸ್ನಾನ ಮಾಡುವಾಗ ಕಾಲು ಜಾರಿ ಕಾಲುವೆಯಲ್ಲಿ ಮುಳುಗುತ್ತಿದ್ದಾಗ ಆಕೆಯನ್ನು ರಕ್ಷಿಸಲು ಇತರೆ ವಿದ್ಯಾರ್ಥಿನಿಯರು ತೆರಳಿದ್ದಾರೆ. ಈ ವೇಳೆ ಎಲ್ಲರೂ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸ್‌ ಅಧಿಕಾರಿ ಬಲರಾಮ್‌ ಸಿಂಗ್‌ ತಿಳಿಸಿದ್ದಾರೆ. ಇದನ್ನೂ ಓದಿ: ಬಸವಣ್ಣನಂತೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ: ದೇಶಿಕೇಂದ್ರ ಮಹಾಸ್ವಾಮಿಜೀ

    ಪೊಲೀಸರು ಶವಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಮಕ್ಕಳ ದುರಂತ ಸಾವಿಗೆ ಸಂತಾಪ ಸೂಚಿಸಿದ್ದಾರೆ.