Tag: ಕಾಲು

  • ಬಳ್ಳಾರಿಯಲ್ಲಿ ತೇರು ಎಳೆಯುವಾಗ ಅವಘಡ

    ಬಳ್ಳಾರಿಯಲ್ಲಿ ತೇರು ಎಳೆಯುವಾಗ ಅವಘಡ

    ಬಳ್ಳಾರಿ: ದೇವರ ಜಾತ್ರೆಯ ತೇರು ಎಳೆಯುವಾಗ ಅವಘಡ ಸಂಭವಿಸಿದ್ದು, ತೇರಿನ ಚಕ್ರದಡಿ ಸಿಲುಕಿ ಮಗು ಒಂದು ಕಾಲು ಕಳೆದುಕೊಂಡಿರುವ ಘಟನೆ ಜಿಲ್ಲೆಯ ಸಂಡೂರು ತಾಲೂಕಿನ ಒಡ್ಡೂರ ಗ್ರಾಮದಲ್ಲಿ ನಡೆದಿದೆ.

    ಒಡ್ಡೂರ ಗ್ರಾಮದಲ್ಲಿ ಶನಿವಾರ ಹಳ್ಳದ ದೇವರ ಜಾತ್ರೆ ನಡೆದಿದೆ. ಸಂಜೆ ಸುಮಾರು 6 ಗಂಟೆಗೆ ದೇವರ ತೇರನ್ನು ಎಳೆಯಲಾಯಿತು. ಆದರೆ ಜಾತ್ರೆಯಲ್ಲಿ ಎಂದಿನಂತೆ ಈ ಬಾರಿ ಹೆಚ್ಚಿನ ಜನ ಸೇರಿದ್ದರು. ಹೀಗಾಗಿ ಜಾತ್ರೆಯ ತೇರನ್ನು ಎಳೆಯುವ ಬರದಲ್ಲಿ ಬೇರೆಡೆಗೆ ತೇರು ಜಲಿಸಿದೆ. ಆಗ ಮೂರು ಮಕ್ಕಳ ಕಾಲಿನ ಮೇಲೆ ತೇರಿನ ಚಕ್ರ ಹರಿದಿದ್ದು, ಹಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

    ತೊರನಗಲ್ ನಿವಾಸಿ ಕವನ (12) ರಾಹುಲ್ (10) ಆಯುಷ್ಯ (8) ಮೂರು ಮಕ್ಕಳ ಕಾಲ ಮೇಲೆ ತೇರಿನ ಚಕ್ರ ಹರಿದಿದೆ. ಅದರಲ್ಲಿ ಬಾಲಕಿ ಕವನ ಪಾದ ನಚ್ಚುಗುಚ್ಚಾಗಿದೆ. ಉಳಿದ ಮಕ್ಕಳಿಗೆ ಕಾಲಿಗೆ ಸಣ್ಣಪುಟ್ಟ ಗಾಯಗಳಾಗಿದ್ದು. ತಕ್ಷಣ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಜನರು ತೇರನ್ನು ಬೇಕಾಬಿಟ್ಟಿಯಾಗಿ ಎಳೆದಿದ್ದು ಈ ಘಟನೆಗೆ ಕಾರಣ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಈ ಸಂಬಂಧ ಪೊಲೀಸ್ ಠಾಣೆಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.

  • ಎಐಎಡಿಎಂಕೆ ಧ್ವಜಸ್ತಂಭದಿಂದಾಗಿ ಟ್ರಕ್ ಹರಿದು ಎಡಗಾಲನ್ನು ಕಳೆದುಕೊಂಡ ಮಹಿಳೆ

    ಎಐಎಡಿಎಂಕೆ ಧ್ವಜಸ್ತಂಭದಿಂದಾಗಿ ಟ್ರಕ್ ಹರಿದು ಎಡಗಾಲನ್ನು ಕಳೆದುಕೊಂಡ ಮಹಿಳೆ

    ಚೆನ್ನೈ: ಎಐಎಡಿಎಂಕೆ ಧ್ವಜಸ್ತಂಭಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋದ ಮಹಿಳೆಯ ಬೈಕಿಗೆ ಟ್ರಕ್‍ವೊಂದು ಡಿಕ್ಕಿ ಹೊಡೆದಿದ್ದು ಈಗ ಮಹಿಳೆಯ ಎಡಗಾಲು ಕತ್ತರಿಸಲಾಗಿದೆ.

    ಈ ಅಪಘಾತದಲ್ಲಿ ತನ್ನ ಕಾಲನ್ನು ಕಳೆದುಕೊಂಡ ಮಹಿಳೆಯನ್ನು 30 ವರ್ಷದ ರಾಜೇಶ್ವರಿ ಎಂದು ಗುರುತಿಸಲಾಗಿದೆ. ಈಕೆ ಶುಕ್ರವಾರ ಕೊಯಮತ್ತೂರಿನಲ್ಲಿ ಕೆಲಸಕ್ಕೆ ತೆರಳುತ್ತಿದ್ದಾಗ ರಸ್ತೆಗೆ ನಿರ್ಮಿಸಲಾಗಿದ್ದ ಎಐಎಡಿಎಂಕೆ ಧ್ವಜಸ್ತಂಭವನ್ನು ತಪ್ಪಿಸಲು ಹೋಗಿ ಈ ಅಪಘಾತ ಸಂಭವಿಸಿದೆ.

    ಬೈಕಿನಲ್ಲಿ ಬರುತ್ತಿದ್ದ ರಾಜೇಶ್ವರಿ ರಸ್ತೆಗೆ ಅಡ್ಡಲಾಗಿ ಹಾಕಲಾಗಿದ್ದ ಎಐಎಡಿಎಂಕೆ ಧ್ವಜಸ್ತಂಭವನ್ನು ತಪ್ಪಿಸಲು ಹೋದಾಗ ನಿಯಂತ್ರಣ ಕಳೆದುಕೊಂಡಿದ್ದಾರೆ. ಈ ವೇಳೆ ಅವರ ಹಿಂದೆ ಬರುತ್ತಿದ್ದ ಲಾರಿ ಅವರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ರಾಜೇಶ್ವರಿ ಅವರು ಎರಡು ಕಾಲುಗಳಿಗೆ ಗಂಭೀರವಾದ ಗಾಯಗಳಾಗಿತ್ತು. ಅವರನ್ನು ತಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲು ಮಾಡಿದ್ದು, ಎಡಗಾಲಿಗೆ ಜಾಸ್ತಿ ಪೆಟ್ಟಾಗಿ ಅದು ನುಜ್ಜಾಗಿದೆ. ಆದ್ದರಿಂದ ಅದನ್ನು ಮೊಣಕಾಲಿನಿಂದ ಕೆಳಗೆ ಕತ್ತರಿಸಲಾಗಿದೆ ಎಂದು ವೈದ್ಯರು ಹೇಳಿದ್ದಾರೆ.

    ಒಬ್ಬಳೇ ದುಡಿದು ಕುಟುಂಬವನ್ನು ಸಾಕುತ್ತಿದ್ದ ರಾಜೇಶ್ವರಿ ಮೊದಲು ಚೆನ್ನೈನಲ್ಲಿ ಕೆಲಸ ಮಾಡುತ್ತಿದ್ದರು. ಆದರೆ ಹಣದ ಸಮಸ್ಯೆಯ ಕಾರಣಕ್ಕೆ ಕೆಲವು ದಿನದ ಹಿಂದೆ ಕೊಯಮತ್ತೂರಿಗೆ ಬಂದು ಗೋಕುಲಮ್ ಪಾರ್ಕ್ ಎಂಬ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದರು.

  • ರಸ್ತೆ ಗುಂಡಿಯಲ್ಲಿ ಕಾಲಿಟ್ಟು ತನ್ನ ಎರಡು ಕಾಲು ಕಳೆದುಕೊಂಡ ಎತ್ತು

    ರಸ್ತೆ ಗುಂಡಿಯಲ್ಲಿ ಕಾಲಿಟ್ಟು ತನ್ನ ಎರಡು ಕಾಲು ಕಳೆದುಕೊಂಡ ಎತ್ತು

    ಧಾರವಾಡ: ಹೊಲದಲ್ಲಿ ಉಳುಮೆ ಮಾಡಿ ವಾಪಸ್ ಬರುವಾಗ ರಸ್ತೆ ಗುಂಡಿಗೆ ಕಾಲಿಟ್ಟ ಎತ್ತಿನ ಎರಡು ಕಾಲುಗಳು ಮುರಿದ ಘಟನೆ ಧಾರವಾಡ ನಗರದ ಮುರುಘಾಮಠದ ಬಳಿ ನಡೆದಿದೆ.

    ನಗರದ ಗಾಂಧಿಚೌಕದ ನಿವಾಸಿಯಾದ ಶಂಕರ ಉಳ್ಳಾಗಡ್ಡಿ ಎಂಬವರಿಗೆ ಸೇರಿದ ಎತ್ತು ರಸ್ತೆ ಗುಂಡಿಗೆ ಬಿದ್ದು ತನ್ನ ಎರಡು ಕಾಲುಗಳನ್ನು ಕಳೆದುಕೊಂಡಿದೆ. ನಗರದ ಹೊರವಲಯದ ಕವಲಗೇರಿ ಗ್ರಾಮದ ರಸ್ತೆಯಲ್ಲಿ ಇವರ ಹೊಲಗಳಿವೆ. ಅಲ್ಲಿ ಎತ್ತಿನ ಮಾಲೀಕ ಉಳುಮೆ ಮುಗಿಸಿಕೊಂಡು ವಾಪಸ್ ಬರುವಾಗ ಈ ಘಟನೆ ನಡೆದಿದೆ.

    ಕಳೆದ ಹಲವು ದಿನಗಳಿಂದ ರಸ್ತೆಯಲ್ಲಿ ಗುಂಡಿಗಳು ಬಿದ್ದಿವೆ ಎಂದು ಜನಪ್ರತಿನಿಧಿಗಳಿಗೆ ದೂರು ನೀಡಿದರೂ ಯಾರೂ ಕ್ಯಾರೇ ಎಂದಿರಲಿಲ್ಲ. ಎತ್ತಿನ ಕುಟುಂಬದವರು ಸ್ಥಳಕ್ಕೆ ಬಂದು ಕಣ್ಣೀರು ಹಾಕಿದ್ದು ಎಲ್ಲರಿಗೆ ನೋವು ತಂದಿದೆ. ಎತ್ತಿನ ಮಾಲೀಕ ಶಂಕರ ಎರಡು ಎತ್ತುಗಳನ್ನು ಮಹಾರಾಷ್ಟ್ರ ದಿಂದ ತಂದಿದ್ದರು. ಒಟ್ಟು 1 ಲಕ್ಷ 40 ಸಾವಿರ ರೂಪಾಯಿ ಕೊಟ್ಟು ಖರೀದಿ ಮಾಡಿದ್ದರು. ಅದರಲ್ಲಿ ಒಂದು ಎತ್ತು ಕಾಲು ಕಳೆದುಕೊಂಡಿದ್ದು, ರೈತನಿಗೆ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ.

    ಮೊದಲೇ ಅಕಾಲಿಕ ಮಳೆಗೆ ಸಾಕಷ್ಟು ನಷ್ಟದಲ್ಲಿರುವ ರೈತನಿಗೆ ಇದು ಕೂಡಾ ಸಾಕಷ್ಟು ನೋವು ತಂದಿದೆ. ಸದ್ಯ ಈ ಎತ್ತಿಗೆ ಎಷ್ಟೇ ಖರ್ಚು ಮಾಡಿದರೂ ಅದು ಎದ್ದು ಓಡಾಡದ ಸ್ಥಿತಿಯಲ್ಲಿದ್ದು, ಇದಕ್ಕೆ ಇಲ್ಲಿಯ ಜನಪ್ರತಿನಿಧಿಗಳೇ ಪರಿಹಾರ ನೀಡಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

  • ವಿಡಿಯೋ ಶೇರ್ ಮಾಡಿ ಅಳು ತಡೆಯಲಾಗಲಿಲ್ಲ ಎಂದ ಆನಂದ್ ಮಹೀಂದ್ರಾ

    ವಿಡಿಯೋ ಶೇರ್ ಮಾಡಿ ಅಳು ತಡೆಯಲಾಗಲಿಲ್ಲ ಎಂದ ಆನಂದ್ ಮಹೀಂದ್ರಾ

    ನವದೆಹಲಿ: ಮಹೀಂದ್ರ ಮೋಟರ್ ಮಾಲೀಕ ಆನಂದ್ ಮಹೀಂದ್ರಾ ಅವರು ಸಾಮಾಜಿಕ ಜಾಲತಾಣಗಳಲ್ಲಿ ಸದಾ ಆ್ಯಕ್ಟೀವ್ ಆಗಿರುತ್ತಾರೆ. ಟ್ವಿಟ್ಟರ್ ಮೂಲಕ ಅವರು ಸಾಕಷ್ಟು ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ವಿಡಿಯೋವೊಂದನ್ನು ಶೇರ್ ಮಾಡಿ ನನಗೆ ಅಳು ತಡೆಯಲಾಗಲಿಲ್ಲ ಎಂದು ಬರೆದುಕೊಂಡಿದ್ದಾರೆ.

    ಹೌದು. ರಷ್ಯಾ ದೇಶದ ಪುಟ್ಟ ಬಾಲಕಿ ಹುಟ್ಟುವಾಗಲೇ ತನ್ನ ಕೈಗಳನ್ನು ಕಳೆದುಕೊಂಡಿದ್ದಾಳೆ. ಹೀಗಾಗಿ ಕಾಲುಗಳ ಮೂಲಕವೇ ಆಹಾರ ಸೇವಿಸುತ್ತಿರುವ ವಿಡಿಯೋವನ್ನು ಆನಂದ್ ಅವರು ಶೇರ್ ಮಾಡಿಕೊಂಡಿದ್ದಾರೆ. 2 ವರ್ಷದ ಬಾಲಕಿಯ ಈ ವಿಡಿಯೋ ಮನಕಲಕುವಂತಿದೆ.

    ವಿಡಿಯೋದಲ್ಲೇನಿದೆ?
    ಪುಟ್ಟ ಬಾಲಕಿಯೊಬ್ಬಳು ಫೋರ್ಕ್ ಮೂಲಕ ಆಹಾರ ಸೇವಿಸುತ್ತಾಳೆ. ಫೋರ್ಕನ್ನು ತನ್ನ ಕಾಲಿನ ಬೆರಳುಗಳ ಮಧ್ಯೆ ಇಟ್ಟುಕೊಂಡು ಕಾಲನ್ನು ಮೇಲಕ್ಕೆತ್ತಿ ತಿನ್ನಲು ಪ್ರಯತ್ನಿಸುತ್ತಿದ್ದಾಳೆ. ಇದು ಸಾಧ್ಯವಾಗದಿದ್ದಾಗ ಮತ್ತೆ ಪೋರ್ಕನ್ನು ಇನ್ನೊಂದು ಕಾಲಿನಲ್ಲಿ ಸರಿಪಡಿಸಿಕೊಂಡು ನಂತರ ತಾನೇ ಬಗ್ಗಿ ಆಹಾರ ಸೇವಿಸಿದ್ದಾಳೆ. 17 ನಿಮಿಷಗಳ ಈ ವಿಡಿಯೋವನ್ನು ನೋಡಿದರೆ ನಿಜಕ್ಕೂ ಕಣ್ಣೀರು ತರಿಸುತ್ತದೆ.

    ಟ್ವೀಟ್‍ನಲ್ಲೇನಿದೆ..?
    ಇತ್ತೀಚೆಗಷ್ಟೇ ನಾನು ನನ್ನ ಮೊಮ್ಮಗನನ್ನು ನೋಡಿದ್ದೇನೆ. ಈ ಮಧ್ಯೆ ವಾಟ್ಸಾಪ್ ನಲ್ಲಿ ಬಂದಂತಹ ಈ ವಿಡಿಯೋವನ್ನು ನೋಡಿ ನನಗೆ ಅಳು ತಡೆದುಕೊಳ್ಳಲು ಸಾಧ್ಯವಾಗಲಿಲ್ಲ ಎಂದು ಬರೆದುಕೊಂಡು ಬಾಲಕಿಯ ವಿಡಿಯೋವನ್ನು ಶೇರ್ ಮಾಡಿಕೊಂಡಿದ್ದಾರೆ. ವಿಡಿಯೋ ನೋಡಿ ಬೇಸರಗೊಂಡಿರುವ ಆನಂದ್ ಅವರು, ನ್ಯೂನ್ಯತೆ, ಸವಾಲುಗಳು ಕೆಲವರ ಜೀವನಕ್ಕೆ ಸಿಕ್ಕ ಗಿಫ್ಟ್ ಆಗಿವೆ. ಆದರೆ ಇವುಗಳನ್ನೆಲ್ಲ ಹೇಗೆ ಮೆಟ್ಟಿ ನಿಲ್ಲುತ್ತೇವೆ ಎಂಬುದು ಎಲ್ಲವನ್ನೂ ನಿರ್ಧರಿಸುತ್ತದೆ ಎಂದು ಬರೆದುಕೊಂಡಿದ್ದಾರೆ.

    ಆನಂದ್ ಮಹೀಂದ್ರಾ ಶೇರ್ ಮಾಡಿಕೊಂಡ ಈ ವಿಡಿಯೋಗೆ 50 ಸಾವಿರಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ಅಲ್ಲದೆ 10 ಸಾವಿರಕ್ಕೂ ಹೆಚ್ಚು ರಿಟ್ವೀಟ್ ಆಗಿದೆ. ಹಲವರು ಮಗುವಿನ ಸ್ಥಿತಿಯ ಬಗ್ಗೆ ಮರುಕ ವ್ಯಕ್ತಪಡಿಸಿದ್ದಾರೆ. ಕೆಲವರು ವಿಶೇಷಚೇತನ ಮಕ್ಕಳ ವಿಡಿಯೋಗಳನ್ನು ಹಾಕಿದ್ದಾರೆ. ಅದರಲ್ಲೊಬ್ಬರು ಇಂಥವರು ನಮ್ಮ ಭಾರತದಲ್ಲಿಯೂ ಇದ್ದಾರೆ ಎಂದು ಬರೆದುಕೊಂಡು ಕರ್ನಾಟಕದ ಶಾಲಾ ವಿದ್ಯಾರ್ಥಿಯೊಬ್ಬ ಊಟ ತೆಗೆದುಕೊಂಡು ಹೋಗಿ ಬಳಿಕ ಎಲ್ಲರೊಂದಿಗೆ ಕುಳಿತು ಊಟ ಮಾಡುತ್ತಿರುವ ವಿಡಿಯೋವನ್ನು ರಿಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಸಿಂಧು ಜಿಮ್ ಟ್ರೈನಿಂಗ್ ವಿಡಿಯೋ ನೋಡಿ ಆಯಾಸಗೊಂಡೆ ಎಂದ ಆನಂದ್ ಮಹೀಂದ್ರಾ

    https://twitter.com/Gkyadav11590/status/1175272793266503686

  • ಕೃತಕ ಕಾಲು ಹಾಕಿದ ಕೂಡಲೇ ಕುಣಿದು ಕುಪ್ಪಳಿಸಿದ ಬಾಲಕ: ವಿಡಿಯೋ ವೈರಲ್

    ಕೃತಕ ಕಾಲು ಹಾಕಿದ ಕೂಡಲೇ ಕುಣಿದು ಕುಪ್ಪಳಿಸಿದ ಬಾಲಕ: ವಿಡಿಯೋ ವೈರಲ್

    ಕಾಬುಲ್: ಕಾಲು ಕಳೆದುಕೊಂಡ ಬಾಲಕನಿಗೆ ವೈದ್ಯರು ಪ್ರಾಸ್ಥೆಟಿಕ್ ಕಾಲು ಜೋಡಣೆ ಮಾಡಿದ್ದಾರೆ. ಕೃತಕ ಕಾಲು ಜೋಡಣೆ ಮಾಡಿದ ತಕ್ಷಣವೇ ಬಾಲಕ ಖುಷಿಯಿಂದ ಕುಣಿದಾಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

    ಅಹ್ಮದ್ ಕಾಲು ಕಳೆದುಕೊಂಡ ಬಾಲಕ. ಅಪ್ಘಾನ್‍ನ ಲೋಗರ್ ನಲ್ಲಿ ಆದ ಗಣಿಗಾರಿಕೆಯಲ್ಲಿನ ಸ್ಫೋಟದಿಂದಾದ ಭೂ ಕುಸಿತದಿಂದಾಗಿ ಅಹ್ಮದ್ ತನ್ನ ಕಾಲನ್ನು ಕಳೆದುಕೊಂಡಿದ್ದನು. ಈಗ ಆತನಿಗೆ ಪ್ರಾಸ್ಥೆಟಿಕ್ ಕಾಲು ಹಾಕಿದ್ದು, ಆತ ಖುಷಿಯಿಂದ ಡ್ಯಾನ್ಸ್ ಮಾಡಿದ್ದಾನೆ.

    ಈ ವಿಡಿಯೋದಲ್ಲಿ ಬಾಲಕ ಅಹ್ಮದ್ ತನ್ನ ಪ್ರಾಸ್ಥೆಟಿಕ್ ಕಾಲು ಜೋಡಣೆ ಆಗುತ್ತಿದ್ದಂತೆ ಎದ್ದು ಖುಷಿಯಿಂದ ಕುಣಿದಾಡಿದ್ದಾನೆ. ಅಲ್ಲಿದ್ದ ರೋಗಿಗಳು ಹಾಗೂ ಆಸ್ಪತ್ರೆ ಸಿಬ್ಬಂದಿ ಅಹ್ಮದ್‍ನ ಖುಷಿ ನೋಡಿ ತಾವು ಕೂಡ ಸಂತೋಷಪಟ್ಟಿದ್ದಾರೆ.

    ವೈರಲ್ ಆಗಿರುವ ಈ ವಿಡಿಯೋವನ್ನು ಆಫ್ಘಾನಿಸ್ತಾನದ ಅಂತರಾಷ್ಟ್ರೀಯ ರೆಡ್ ಕ್ರಾಸ್ ಆರ್ಥೋಪೇಡಿಕ್ ಸೆಂಟರ್ ನಲ್ಲಿ ಸೆರೆ ಹಿಡಿಯಲಾಗಿದೆ. ಈ ವಿಡಿಯೋಗೆ ಇದುವರೆಗೂ ಒಟ್ಟು 3 ಲಕ್ಷಕ್ಕೂ ಹೆಚ್ಚು ವ್ಯೂ ಹಾಗೂ ಶೇರ್ ಬಂದಿದೆ. ಅಲ್ಲದೆ 16,000ಕ್ಕೂ ಹೆಚ್ಚು ಲೈಕ್ಸ್ ಗಳು ಈ ವಿಡಿಯೋಗೆ ಬಂದಿದೆ.

    ಈ ವಿಡಿಯೋ ನೋಡಿದ ಹಲವರು ರೆಡ್ ಕ್ರಾಸ್ ಆಸ್ಪತ್ರೆಗೆ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ ಕೆಲವರು ಬಾಲಕನ ಖುಷಿ ನೋಡಿ ಆತನನ್ನು ತಬ್ಬಿಕೊಂಡು ಒಂದು ಕೋಣೆಯಲ್ಲಿ ಜೋರಾಗಿ ಅಳಬೇಕು ಎಂದು ಅನಿಸುತ್ತಿದೆ ಎಂದು ಕಮೆಂಟ್ ಮಾಡಿದ್ದಾರೆ.

  • ನಿನ್ನ ಕಾಲು ಮುರಿತೀನಿ ನೋಡು: ಕೇಂದ್ರ ಸಚಿವನ ಧಮ್ಕಿ ವಿಡಿಯೋ ವೈರಲ್!

    ನಿನ್ನ ಕಾಲು ಮುರಿತೀನಿ ನೋಡು: ಕೇಂದ್ರ ಸಚಿವನ ಧಮ್ಕಿ ವಿಡಿಯೋ ವೈರಲ್!

    ಕೋಲ್ಕತ್ತ: ಪಶ್ಚಿಮ ಬಂಗಾಳದ ಅಸನ್ಸೋಲ್ ಪ್ರದೇಶದಲ್ಲಿ ನಡೆದ ಅಂಗವಿಕಲರ ಸಮಾವೇಶದಲ್ಲಿ ಕೇಂದ್ರ ಸಚಿವ ಬಬುಲ್ ಸುಪ್ರಿಯೊ ವ್ಯಕ್ತಿಯೊಬ್ಬರಿಗೆ ನಿನ್ನ ಕಾಲನ್ನು ಮುರಿಯುತ್ತೇನೆ ಎಂದು ಧಮ್ಕಿ ಹಾಕಿರುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

    ಅಸನ್ಸೋಲ್ ಜಿಲ್ಲೆಯಲ್ಲಿ ಅಂಗವಿಕಲರಿಗಾಗಿ ಗಾಲಿಕುರ್ಚಿ ಮತ್ತು ಪರಿಕರಗಳನ್ನು ವಿತರಿಸುವ ‘ಸಾಮಾಜಿಕ ಅಧಿಕಾರಿತಾ ಶಿವಾರ್’ ಸಮಾರಂಭಕ್ಕೆ ಕೇಂದ್ರದ ಭಾರೀ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಗಳ ಇಲಾಖೆ ರಾಜ್ಯ ಸಚಿವ ಬಬುಲ್ ಸುಪ್ರಿಯೋರನ್ನು ಆಹ್ವಾನಿಸಲಾಗಿತ್ತು. ಸಭೆಯಲ್ಲಿ ಸಚಿವರು ಭಾಷಣ ಮಾಡುತ್ತಿರುವಾಗ ಓರ್ವ ವ್ಯಕ್ತಿ ಅಡ್ಡಾ-ದಿಡ್ಡಿಯಾಗಿ ಓಡಾಡುತ್ತಿದ್ದನು. ಇದನ್ನು ಪ್ರಶ್ನಿಸಿದ ಅವರು ಏಕೆ ಓಡಾಡುತ್ತಿದ್ದೀಯಾ? ಸುಮ್ಮನೇ ಕುಳಿತುಕೋ ಎಂದು ಹೇಳಿದರು.

    ಸಚಿವರ ಮಾತಿಗೂ ಬೆಲೆಕೊಡದ ಆತ ಪುನಃ ಅದೇ ರೀತಿ ಮಾಡುತ್ತಿದ್ದ. ಇದರಿಂದ ಸಿಟ್ಟಿಗೆದ್ದ ಸಚಿವರು ನಿನಗೇನಾಗಿದೆ? ಏನಾದರೂ ಸಮಸ್ಯೆ ಇದೆಯಾ? ನೀನು ಸುಮ್ಮನೆ ಕುಳಿತುಕೊಳ್ಳದಿದ್ದರೆ, ನಿನ್ನ ಕಾಲನ್ನು ಮುರಿಯುತ್ತೇನೆ ನೋಡು ಎಂದು ಹೇಳಿದ್ದಲ್ಲದೇ, ಸ್ಥಳದಲ್ಲಿದ್ದ ಭದ್ರತಾ ಸಿಬ್ಬಂದಿಗಳಿಗೆ ಆ ವ್ಯಕ್ತಿ ಪುನಃ ಸಭೆಯಲ್ಲಿ ಓಡಾಡಿದರೆ ಅವನ ಕಾಲನ್ನು ಮುರಿದು ಊರುಗೋಲು ಕೊಡಿ ಎಂದು ಸೂಚಿಸಿದ್ದಾರೆ.

    ಬಹಿರಂಗ ಸಭೆಯಲ್ಲಿ ವ್ಯಕ್ತಿಯೊಬ್ಬರಿಗೆ ಕಾಲು ಮುರಿಯುತ್ತೇನೆ ನೋಡು ಎಂದ ಸಚಿವರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸಾಕಷ್ಟು ಜನ ವಿರೋಧ ವ್ಯಕ್ತಪಡಿಸಿ ಕೇಂದ್ರ ಸಚಿವರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಯಾವಾಗಲೂ ಸದಾ ವಿವಾದಾತ್ಮಕ ಹೇಳಿಕೆಗಳಿಂದ ಸುದ್ದಿಯಲ್ಲಿರುವ ಸಚಿವರು ಮತ್ತೊಮ್ಮೆ ತಮ್ಮ ನಾಲಿಗೆ ಹರಿಬಿಟ್ಟು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ಮೊದಲು ಬಹಿರಂಗ ಸಭೆಯಲ್ಲಿ ವ್ಯಕ್ತಿಯೊಬ್ಬರ ಚರ್ಮ ಸುಲಿಯುತ್ತೇನೆ ನೋಡಿ ಎನ್ನುವ ಮೂಲಕ ವಿವಾದಕ್ಕೆ ಗುರಿಯಾಗಿದ್ದರು.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಬಸ್ ಚಾಲಕನ ಬೇಜವಾಬ್ದಾರಿತನಕ್ಕೆ ವ್ಯಕ್ತಿಯ 2 ಕಾಲುಗಳೇ ಮುರಿಯಿತು!

    ಬಸ್ ಚಾಲಕನ ಬೇಜವಾಬ್ದಾರಿತನಕ್ಕೆ ವ್ಯಕ್ತಿಯ 2 ಕಾಲುಗಳೇ ಮುರಿಯಿತು!

    ಮಡಿಕೇರಿ: ಬಸ್ ಇಳಿದು ನಿಂತಿದ್ದ ವ್ಯಕ್ತಿ ಮೇಲೆ ಅದೇ ಬಸ್ ಚಕ್ರ ಹರಿದು ಗಂಭೀರ ಗಾಯಗೊಂಡ ಘಟನೆ ವಿರಾಜಪೇಟೆಯ ಕಡಂಗದಲ್ಲಿ ನಡೆದಿದೆ. ಮೈಜುಂ ಎನಿಸೋ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

    39 ವರ್ಷದ ಬಿಶಾಲ್ ಗಂಭೀರ ಗಾಯಗೊಂಡ ವ್ಯಕ್ತಿ. ಬಿಶಾಲ್ ಬಸ್ಸಿನಲ್ಲಿ ಬಂದು ಇಳಿದು ನಿಂತಿದ್ದರು. ಈ ವೇಳೆ ಅದೇ ಬಸ್ ಅವರ ಮೇಲೆ ಹರಿದಿದೆ. ಪರಿಣಾಮ ಬಿಶಾಲ್ 2 ಕಾಲುಗಳ ಮೇಲೆ ಬಸ್ ಚಕ್ರ ಹರಿದಿದ್ದು, ಕಾಲುಗಳು ಮುರಿದಿವೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಬಿಶಾಲ್ ಅವರನ್ನು ಕೂಡಲೇ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ.


    ಹಿಂದಕ್ಕೆ ನೋಡದೆ ರಿವರ್ಸ್ ತೆಗೆದ ಬಸ್ ಚಾಲಕನ ಬೇಜವಾಬ್ದಾರಿತನವೇ ಘಟನೆಗೆ ಕಾರಣ ಅಂತ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕಳ್ಳತನ ಒಪ್ಪಿಕೊಳ್ಳುವಂತೆ ಎದೆಗೆ ಒದ್ದ ಪೊಲೀಸ್- ರೈತನ ಸ್ಥಿತಿ ಗಂಭೀರ

    ಕಳ್ಳತನ ಒಪ್ಪಿಕೊಳ್ಳುವಂತೆ ಎದೆಗೆ ಒದ್ದ ಪೊಲೀಸ್- ರೈತನ ಸ್ಥಿತಿ ಗಂಭೀರ

    ಗದಗ: ಬೈಕ್ ಕಳ್ಳತನ ಮಾಡಿರೋದಾಗಿ ಒಪ್ಪಿಕೊಳ್ಳುವಂತೆ ಒತ್ತಾಯಿಸಿ ಪೊಲೀಸರು ಅಮಾಯಕ ರೈತನ ಮೇಲೆ ದೌರ್ಜನ್ಯ ನಡೆಸಿರೋ ಆರೋಪವೊಂದು ಜಿಲ್ಲೆಯಲ್ಲಿ ಕೇಳಿಬಂದಿದೆ.

    ನಗರ ಠಾಣೆಯ ಪೊಲೀಸ್ ಪೇದೆ ಯಲ್ಲಪ್ಪ ಎಂಬವರ ಮೇಲೆ ಈ ಆರೋಪ ಕೇಳಿಬಂದಿದೆ. ಹುಯಿಲಗೋಳ ಗ್ರಾಮದ ರೈತ ಈರಪ್ಪ ಹೊಸಳ್ಳಿಗೆ ಎದೆಗೆ ಯಲ್ಲಪ್ಪ ಬೂಟುಗಾಲಿನಿಂದ ಒದ್ದಿದ್ದಾರೆ ಅಂತ ಗಾಯಾಳು ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ.

    ಏನಿದು ಪ್ರಕರಣ?:
    ಜುಲೈ 23 ರಂದು ಈರಪ್ಪನನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಬಳಿಕ ಆತನ ಎದೆಗೆ ಪೊಲೀಸ್ ಯಲ್ಲಪ್ಪ ಒದ್ದಿದ್ದಾರೆ. ಬೂಟಿನೇಟಿನಿಂದಾಗಿ ಈರಪ್ಪ ಇದೀಗ ತೀವ್ರ ಎದೆ ನೋವಿನಿಂದ ಬಳಲುತ್ತಿದ್ದು, ಗದಗ ಜಿಮ್ಸ್ ಆಸ್ಪತ್ರೆಯ ತುರ್ತು ಚಿಕಿತ್ಸಾ ಘಟಕದಲ್ಲಿ ಚಿಕಿತ್ಸೆ ಪಡೆದಿದ್ದು, ಇದೀಗ ಸ್ಥಿತಿ ಗಂಭೀರವಾಗಿರುವುದರಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.

    ಅಮಾಯಕನನ್ನು ಕರೆತಂದು ಹೊಡೆದಿರುವುದು ಖಂಡನೀಯ. ತಪ್ಪಿತಸ್ಥ ಪೊಲೀಸ್ ಮೇಲೆ ಕ್ರಮಕೈಗೊಳ್ಳದಿದ್ದರೆ, ಕುಟುಂಬ ಸಮೇತ ಪೊಲೀಸ್ ಠಾಣೆಯ ಎದುರು ಹೋರಾಟ ಮಾಡುವುದಾಗಿ ಕುಟುಂಬಸ್ಥರು ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ತನಗೆ ಸಂಬಂಧವಿಲ್ಲದ, ಬೈಕ್ ಕಳ್ಳತನ ಒಪ್ಪಿಕೊಳ್ಳುವಂತೆ ಪೇದೆ ಥಳಿಸಿದ್ದಾನೆಂದು ಈರಪ್ಪ ಅವರ ಸಂಬಂಧಿಗಳು ಆರೋಪಿಸಿದ್ದಾರೆ.

  • ಆತ್ಮಹತ್ಯೆಗೆ ಯತ್ನಿಸಿ, ಲಾರಿಗೆ ಸಿಕ್ಕು ಎರಡೂ ಕಾಲು ಕಳೆದುಕೊಂಡ!

    ಆತ್ಮಹತ್ಯೆಗೆ ಯತ್ನಿಸಿ, ಲಾರಿಗೆ ಸಿಕ್ಕು ಎರಡೂ ಕಾಲು ಕಳೆದುಕೊಂಡ!

    ಕೊಪ್ಪಳ: ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿ ಲಾರಿಗೆ ಸಿಲುಕಿ ತನ್ನ ಎರಡೂ ಕಾಲುಗಳನ್ನು ಕಳೆದುಕೊಂಡ ಘಟನೆ ಕುಕನೂರು ಪಟ್ಟಣದ ಪ್ರವಾಸಿ ಮಂದಿರದ ಸಮೀಪದಲ್ಲಿ ನಡೆದಿದೆ.

    ಕುಕನೂರು ಪಟ್ಟಣದ ಹುಸೇನ್ ಸಾಬ್ ಕುಷ್ಟಗಿ (30) ಆತ್ಮಹತ್ಯೆಗೆ ಯತ್ನಿಸಿ ಕಾಲುಗಳನ್ನು ಕಳೆದುಕೊಂಡ ವ್ಯಕ್ತಿ. ಅಪಘಾತವನ್ನು ತಪ್ಪಿಸಲು ಚಾಲಕ ಪ್ರಯತ್ನಿಸಿದ್ದಾನೆ. ಅದೃಷ್ಟವಶಾತ್ ಹುಸೇನ್ ಬದುಕುಳಿದಿದ್ದು, ತನ್ನ ಎರಡು ಕಾಲುಗಳನ್ನು ಕಳೆದುಕೊಂಡಿದ್ದಾನೆ.

    ಹುಸೇನ್ ಸಾಬ್ ಮನೆಯಲ್ಲಿ ಜಗಳ ಮಾಡಿಕೊಂಡು ಹೊರ ಬಂದಿದ್ದ. ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರ ಕೈಗೊಳ್ಳಲು ನಿರ್ಧರಿಸಿದ್ದ ಹುಸೇನ್ ಸಾಬ್ ಎದುರಿಗೆ ಬರುತ್ತಿದ್ದ ಲಾರಿಗೆ ಕೈ ಮುಗಿದು ಚಕ್ರಕ್ಕೆ ಬೀಳಲು ಯತ್ನಿಸಿದ್ದಾನೆ. ತಕ್ಷಣವೇ ಜಾಗೃತಗೊಂಡ ಚಾಲಕ ಎಷ್ಟೇ ಪ್ರಯತ್ನಿಸಿದರೂ ಲಾರಿ ನಿಯಂತ್ರಣಕ್ಕೆ ಸಿಗದೇ ಹುಸೇನ್ ಸಾಬ್ ಕಾಲುಗಳ ಮೇಲೆ ಹಾದು ಹೋಗಿದೆ. ಅತೀಯಾದ ರಕ್ತಸ್ರಾವದಿಂದ ಬಳಲುತ್ತಿದ್ದ ಹುಸೇಸ್ ಸಾಬ್ ಅವರನ್ನು ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ.

    ಕುಕನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

  • ವೃದ್ಧನಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ನೆಲಮಂಗಲ ಜನ

    ವೃದ್ಧನಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ನೆಲಮಂಗಲ ಜನ

    ಬೆಂಗಳೂರು: ಕಳೆದ ಮೂರು ದಿನದಿಂದ ತನ್ನ ಸ್ವಗ್ರಾಮಕ್ಕೆ ತೆರಳಲು ಹಣವಿಲ್ಲದೆ ಪರದಾಡುತ್ತಿದ್ದ ವೃದ್ಧರೊಬ್ಬರಿಗೆ ಸಾರ್ವಜನಿಕರು ಊಟ ಉಪಚಾರ ನೀಡಿ ಮಾನವೀಯತೆ ಮೆರೆದಿದ್ದಾರೆ.

    ಈ ಘಟನೆ ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಲೋಹಿತ್ ನಗರದಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಮಲ್ಲಾಪುರ ಗ್ರಾಮದ ನಿವಾಸಿ ಸಂಜೀವಪ್ಪ ಅವರು ಕಳೆದ ಮೂರು ದಿನದ ಹಿಂದೆ ನೆಲಮಂಗಲ ಬಳಿಯ ಯಂಟಗಾನಹಳ್ಳಿ ಗ್ರಾಮಕ್ಕೆ ಕಾಲಿನ ಮೂಳೆ ಮುರಿತ ಚಿಕಿತ್ಸೆಗೆಂದು ಸಂಜೀವಪ್ಪ ಅವರ ಅಣ್ಣನ ಮಗ ನರಸಿಂಹಯ್ಯ ಕರೆತಂದಿದ್ದರು. ಆದರೆ ಚಿಕಿತ್ಸೆ ಕೊಡಿಸದೆ ಇಲ್ಲೆ ಬಿಟ್ಟು ನಾಪತ್ತೆಯಾಗಿದ್ದಾರೆ.

    ವೃದ್ಧ ಸಂಜೀವಪ್ಪ ತನ್ನ ಬಳಿ ಬಿಡಿಕಾಸು ಇಲ್ಲದೆ ಊಟ ಹಾಗೂ ವಿಶ್ರಾಂತಿ ಪಡೆಯಲು ಜಾಗವಿಲ್ಲದೆ ಪರದಾಡುತಿದ್ದರು. ತಾತನ ಪರದಾಟವನ್ನ ನೋಡಿದ ಸ್ಥಳೀಯರು ಊಟ ಉಪಚಾರವನ್ನ ನೀಡಿ, ತನ್ನ ಸ್ವಗ್ರಾಮಕ್ಕೆ ತೆರಳಲು ಹಣದ ಸಹಾಯ ಮಾಡಿ ಮಾನವೀಯತೆ ಮೆರೆದಿದ್ದಾರೆ.