Tag: ಕಾಲೇಜ್

  • ಶಿಕ್ಷಣ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್

    ಶಿಕ್ಷಣ ಸಂಸ್ಥೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಪ್ರತಿಭಟನೆಗೆ ನಿಷೇಧ: ಕಮಲ್ ಪಂತ್

    ಬೆಂಗಳೂರು: ಶಾಲಾ ಕಾಲೇಜ್, ಶಿಕ್ಷಣ ಸಂಸ್ಥೆಗಳ ಗೇಟ್‍ನಿಂದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಭೆ ಸಮಾರಂಭ, ಪ್ರತಿಭಟನೆ ಮಾಡದಂತೆ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇ ದಿನೇ ಕಾಲೇಜುಗಳಲ್ಲಿ ಹಿಜಬ್ ಹಾಗೂ ಕೇಸರಿ ಶಾಲು ಗಲಾಟೆ ಹೆಚ್ಚುತ್ತಿರುವುದರ ಹಿನ್ನೆಲೆಯಲ್ಲಿ ಎರಡು ವಾರಗಳ ಕಾಲ ಈ ಮಹತ್ವದ ಆದೇಶ ಹೊರಡಿಸಲಾಗಿದೆ. ಬೆಂಗಳೂರು ನಗರದ ಶಾಲೆಗಳು, ಪಿಯು ಕಾಲೇಜುಗಳು, ಪದವಿ ಕಾಲೇಜುಗಳಲ್ಲಿ ಈ ನಿಯಮ ಅನ್ವಯವಾಗುತ್ತದೆ ಎಂದು ತಿಳಿಸಿದರು.

    ಶಿಕ್ಷಣ ಸಂಸ್ಥೆಗಳ ಗೇಟ್‍ನಿಂದ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಸಭೆಗಳನ್ನು ಮಾಡುವುದನ್ನು ನಿಷೇಧಿಸಲಾಗಿದೆ. ಅಷ್ಟೇ ಅಲ್ಲದೇ ಆಂದೋಲನಗಳು ಅಥವಾ ಪ್ರತಿಭಟನೆಗಳನ್ನು ತಕ್ಷಣವೇ ಜಾರಿಗೆ ಬರುವಂತೆ ಎರಡು ವಾರಗಳವರೆಗೆ ನಿಷೇಧಿಸಲಾಗಿದೆ ಎಂದು ಸೂಚನೆ ನೀಡಿದರು.  ಇದನ್ನೂ ಓದಿ: ನಾನು ಭಯ ಯಾಕೆ ಪಡಬೇಕು, ಧರ್ಮ ಪಾಲನೆ ಮಾಡಿದ್ದೇನೆ: ಮಂಡ್ಯ ವಿದ್ಯಾರ್ಥಿನಿ

  • ರಾಜ್ಯದಲ್ಲಿ ಒಂದು ಕಡೆ ಹಿಜಬ್ ಕಿಡಿ ಇನ್ನೊಂದೆಡೆ ಕೇಸರಿ, ನೀಲಿ ಶಾಲು ಸಂಘರ್ಷ!

    ರಾಜ್ಯದಲ್ಲಿ ಒಂದು ಕಡೆ ಹಿಜಬ್ ಕಿಡಿ ಇನ್ನೊಂದೆಡೆ ಕೇಸರಿ, ನೀಲಿ ಶಾಲು ಸಂಘರ್ಷ!

    ರಾಯಚೂರು: ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಹಿಜಬ್ ವಿವಾದ ಜೋರಾಗುತ್ತಿದೆ. ಈ ನಡುವೆ ಹಿಜಬ್ ಹೆಸರಿನಲ್ಲಿ ಕೇಸರಿ ಹಾಗೂ ನೀಲಿ ಶಾಲು ವಿವಾದ ಶುರುವಾಗಿದೆ.

    ಸಿಂಧನೂರು ಪಟ್ಟಣದ ಸರ್ಕಾರಿ ಡಿಗ್ರಿ ಕಾಲೇಜ್‍ನಲ್ಲಿ ಕೇಸರಿ ಹಾಗೂ ನೀಲಿ ಶಾಲು ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಪರಸ್ಪರ ಘೋಷಣೆಗಳನ್ನು ಕೂಗಿ ಸಂಘರ್ಷ ಆರಂಭವಾಗಿದೆ. ವಿದ್ಯಾರ್ಥಿಗಳ ಗುಂಪು ಜೈ ಶ್ರೀರಾಮ್ ಮತ್ತು ಜೈ ಭೀಮ್ ಎಂದು ಘೋಷಣೆ ಕೂಗಿದ ಬಳಿಕ ವಾಗ್ವಾದ ಆರಂಭವಾಗಿದೆ. ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದಂತೆ 20ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ತಾರಕಕ್ಕೇರಿದ ಹಿಜಬ್ ವಿವಾದ – ಶಿಕ್ಷಕರೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ

    ಇತ್ತ ರಾಯಚೂರು ನಗರದಲ್ಲಿ ಹಿಜಬ್ ಪರ ವಿದ್ಯಾರ್ಥಿನಿಯರು ಧ್ವನಿ ಎತ್ತಿದ್ದು ಕೇಸರಿ, ಬಿಳಿ, ಹಸಿರು ಬಣ್ಣದ ಹಿಜಬ್ ಧರಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಮಗೆ ಹಿಜಬ್ ಬೇಕೇ ಬೇಕು, ಇದು ನಮ್ಮ ಮೂಲಭೂತ ಹಕ್ಕು. ಕೇಸರಿ ಶಾಲಿಗೆ ನಮ್ಮ ವಿರೋಧವಿಲ್ಲ ನಮಗೆ ಹಿಜಬ್‍ಗೆ ಅವಕಾಶ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ.  ಇದನ್ನೂ ಓದಿ: ಶಿವಮೊಗ್ಗ ಕಾಲೇಜಿನಲ್ಲಿ ಕೇಸರಿ ಧ್ವಜ ಹಾರಾಟ, ಕಲ್ಲು ತೂರಾಟ – ನಿಷೇಧಾಜ್ಞೆ ಜಾರಿ

  • Karnataka Hijab Row: ಹೈಸ್ಕೂಲ್‌, ಕಾಲೇಜುಗಳಿಗೆ 3 ದಿನ ರಜೆ

    Karnataka Hijab Row: ಹೈಸ್ಕೂಲ್‌, ಕಾಲೇಜುಗಳಿಗೆ 3 ದಿನ ರಜೆ

    ಬೆಂಗಳೂರು: ರಾಜ್ಯದಲ್ಲಿ ಹಿಜಬ್‌- ಕೇಸರಿ ಗಲಾಟೆ ಜೋರಾಗುತ್ತಿದ್ದಂತೆ ಸರ್ಕಾರ ಮೂರು ದಿನ ಶಾಲಾ, ಕಾಲೇಜುಗಳಿಗೆ  ಮೂರು ದಿನ ರಜೆ ಘೋಷಿಸಿದೆ.

    ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿರುವ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು, ಶಾಲೆ, ಕಾಲೇಜುಗಳ ಆಡಳಿತ ಮಂಡಳಿಗಳು ಹಾಗೂ ನಾಡಿನ ಸಮಸ್ತ ಜನತೆಯಲ್ಲಿ ಶಾಂತಿ ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡುತ್ತೇನೆ. ಮುಂದಿನ ಮೂರು ದಿನಗಳ ಅವಧಿಗೆ ಶಾಲೆ ಕಾಲೇಜುಗಳಿಗೆ ರಜೆ ಘೋಷಿಸುವಂತೆ ಆದೇಶಿಸಲಾಗಿದ್ದು, ಸಂಬಂಧಿಸಿದ ಎಲ್ಲರೂ ಸಹಕರಿಸಲು ಕೋರುತ್ತೇನೆ. ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ಮೂರುದಿನಗಳ ರಜೆ ಘೋಷಿಸಿಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಕಾಲೇಜಿನಲ್ಲಿ ಕೇಸರಿ ಧ್ವಜ ಹಾರಾಟ, ಕಲ್ಲು ತೂರಾಟ – ನಿಷೇಧಾಜ್ಞೆ ಜಾರಿ

    ಹೈಸ್ಕೂಲ್‌ ಮತ್ತು  ಕಾಲೇಜಗಳಿಗೆ ರಜೆ ಘೋಷಿಸಿದ್ದರೂ ಪ್ರಾಥಮಿಕ ಶಾಲೆಗಳು ಎಂದಿನಂತೆ ನಡೆಯುತ್ತದೆ.  ಕರ್ನಾಟಕ ಹೈಕೋರ್ಟ್‌ನಲ್ಲಿ ಹಿಜಬ್‌ ಧರಿಸಲು ಅವಕಾಶ ಕೋರಿ ಉಡುಪಿಯ ವಿದ್ಯಾರ್ಥಿಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ಬುಧವಾರ ಮಧ್ಯಾಹ್ನಕ್ಕೆ ಮುಂದೂಡಿಕೆಯಾಗಿದೆ.

  • ಮಹಿಳಾ ಜಟ್ಟಿಗಳಿಂದ ಮಲ್ಲಯುದ್ದ – ಕಾಲೇಜ್ ಯುವತಿಯರ ಮಧ್ಯೆ ರೋಚಕ ಕುಸ್ತಿ

    ಮಹಿಳಾ ಜಟ್ಟಿಗಳಿಂದ ಮಲ್ಲಯುದ್ದ – ಕಾಲೇಜ್ ಯುವತಿಯರ ಮಧ್ಯೆ ರೋಚಕ ಕುಸ್ತಿ

    ಕೋಲಾರ: ಹೇ ಎತ್ತಾಕು, ಅಂತ ಕೂಗುತ್ತಾ, ಶಿಳ್ಳೆ ಚಪ್ಪಾಳೆ ಹೊಡೆಯುತ್ತಾ ಹುರಿದುಂಬಿಸುತ್ತಿರುವ ವಿದ್ಯಾರ್ಥಿಗಳು. ಹಣಾಹಣಿಯಲ್ಲಿ ಮಲ್ಲಯುದ್ಧ ಮಾಡುತ್ತಾ ಥೇಟ್ ಪೈಲ್ವಾನ್‍ಗಳಾಗಿರುವ ವಿದ್ಯಾರ್ಥಿನಿಯರು. ಕ್ಷಣ ಕ್ಷಣಕ್ಕೂ ರೋಮಾಂಚನ ಸೃಷ್ಟಿಸುತ್ತಿದ್ದ ಯುವತಿಯರ ಜಟ್ಟಿ ಕಾಳಗ ಇಂದು ಕೋಲಾರದ ಮಹಿಳಾ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ನೋಡಗರ ಕಣ್ಮನ ಸೆಳೆಯಿತು.

    ಹೇ ಹಿಡಿ ಹಿಡಿ, ಸರಿಯಾಗಿ ನೋಡಿ ಪಟ್ಟು ಹಾಕು, ಸರಿಯಾಗಿ ಲಾಕ್ ಮಾಡಿ ಎತ್ತಾಕು, ಹೀಗೆ ರಿಂಗ್‍ನಲ್ಲಿ ಕುಸ್ತಿ ಮಾಡುತ್ತಿರುವ ಕ್ರೀಡಾಳುಗಳಿಗೆ ಹೊರಗೆ ನಿಂತ ಕೋಚ್‍ನಿಂದ ಡೈರೆಕ್ಷನ್ ಮತ್ತೊಂದೆಡೆ ಪಂದ್ಯಾವಳಿ ನೋಡಲು ಜಮಾಯಿಸಿರುವ ನೂರಾರು ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಜೋರಾದ ಕೂಗಾಟ, ಶಿಳ್ಳೆ, ಚಪ್ಪಾಳೆ ರಣ ರೋಚಕವಾಗಿ ಒಬ್ಬರನ್ನು ಒಬ್ಬರು ಸೋಲಿಸಿ ಪಂದ್ಯ ಗೆಲ್ಲುಲು ಕುಸ್ತಿ ಪಟುಗಳ ಹೋರಾಟ ಕಂಡು ಬಂದಿದ್ದು ಕೋಲಾರದ ಮಹಿಳಾ ಪದವಿ ಪೂರ್ವ ಕಾಲೇಜು ಆವರಣದಲ್ಲಿ. ಹೌದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಎರಡು ದಿನಗಳ ಕಾಲ ಈ ವರ್ಷದ ಅಂತರ ಕಾಲೇಜು ಕುಸ್ತಿ ಪಂದ್ಯಾವಳಿ ಆಯೋಜನೆ ಮಾಡಲಾಗಿತ್ತು. ಇದನ್ನೂ ಓದಿ: 12,000 ಕೆಜಿ ತೂಕದ ಬಸ್ಸನ್ನು ಕೂದಲಿನಿಂದ ಎಳೆದ ಭಾರತೀಯ ಮಹಿಳೆ- Video Viral

    ಕ್ರೀಡೆಯಲ್ಲಿ ಅದರಲ್ಲೂ ಕುಸ್ತಿಯಲ್ಲಿ ಮಹಿಳೆಯರ ಭಾಗವಹಿಸುವಿಕೆ ತುಸು ಕಡಿಮೆಯೇ ಎಂಬ ಮಾತು ಸುಳ್ಳು ಮತ್ತು ವನಿತೆಯರು ಕುಸ್ತಿಯಲ್ಲಿ ಪಾಲ್ಗೊಳ್ಳುವುದಕ್ಕೆ ಹಿಂಜರಿಯುವುದಿಲ್ಲ ಎಂಬುದಕ್ಕೆ ಈ ವೇದಿಕೆ ಸಾಕ್ಷಿಯಾಗಿ ಕಂಡು ಬಂದಿತ್ತು. ಪುರುಷರಷ್ಟೇ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಈ ಕುಸ್ತಿ ಪಂದ್ಯಾವಳಿಯಲ್ಲಿ ಭಾಗವಹಿಸಿದ್ದು ವಿಶೇಷವಾಗಿತ್ತು. ಎರಡು ವರ್ಷಗಳಿಂದ ಕೊರೊನಾದಿಂದ ಕ್ರೀಡೆಯೇ ಇಲ್ಲದೆ ಮಂಕಾಗಿದ್ದ ಕಾಲೇಜು ವಿದ್ಯಾರ್ಥಿಗಳಂತು ಕುಸ್ತಿ ಪಂದ್ಯಾವಳಿಯನ್ನು ನೋಡಿ ಫುಲ್ ಖುಷಿಯಾದ್ರು. ಇಂಡಿಯಾ-ಪಾಕಿಸ್ತಾನ ಕ್ರಿಕೆಟ್ ಮ್ಯಾಚ್ ರೀತಿ ಎಂಜಾಯ್ ಮಾಡಿದ್ರೆ, ಕುಸ್ತಿ ಪಟುಗಳು ಕೂಡಾ ಅಖಾಡದಲ್ಲಿ ಸೆಣಸಾಡಿ ಖುಷಿ ಪಟ್ಟರು. ಇದನ್ನೂ ಓದಿ: ಕೊರೊನಾ ಸೋಂಕಿತರು 7 ದಿನದಲ್ಲಿ ರಿಕವರಿ ಹೊಂದಿದ್ರೂ, 14 ದಿನ ಕ್ವಾರಂಟೈನ್ ಕಡ್ಡಾಯ: WHO

    ಕುಸ್ತಿ ಅಥವಾ ಮಲ್ಲ ಯುದ್ದ ಕೇವಲ ಪುರುಷರಿಗಷ್ಟೇ ಎನ್ನುವ ಕಾಲವೊಂದಿತ್ತು ಆದರೆ ಈಗ ನಾವು ಪುರುಷರಿಗೇನು ಕಡಿಮೆ ಇಲ್ಲಾ ಎನ್ನುವಂತೆ  ಮಹಿಳೆಯರು ಹುಮ್ಮಸ್ಸಿನಿಂದಲೇ ಭಾಗವಹಿಸಿದ್ದರು. ಕುಸ್ತಿ ಅಖಾಡದಲ್ಲಿ ಯಾವು ಪುರುಷರಿಗೂ ಕಡಿಮೆ ಇಲ್ಲದಂತೆ ಪಟ್ಟುಗಳನ್ನು ಹಾಕಿ ಎದುರಾಳಿಯನ್ನು ಕೆಡುವುತ್ತಾ ನೋಡುಗರಿಗೆ ರೋಮಾಂಚನ ಹಾಗೂ ಎದೆ ಬಡಿತವನ್ನು ಹೆಚ್ಚಿಸುವಂತೆ ಮಾಡಿತು.

    ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ ಸುಮಾರು 200-250 ಕಾಲೇಜ್‍ಗಳಿದ್ದು, ಅದರಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ವ್ಯಾಪ್ತಿಯ ಸುಮಾರು 30 ಕ್ಕೂ ಹೆಚ್ಚು ಕಾಲೇಜ್‍ನ ವಿದ್ಯಾರ್ಥಿನಿಯರು ಈ ಕುಸ್ತಿ ಪಂದ್ಯಾವಳಿಗಳಲ್ಲಿ ಪಾಲ್ಗೊಂಡಿದ್ದರು. ಎರಡು ದಿನಗಳ ಕಾಲ ನಡೆಯುವ ಅಂತರ ಕಾಲೇಜು ಕುಸ್ತಿ ಪಂದ್ಯಾವಳಿಯಲ್ಲಿ 80 ಹೆಚ್ಚು ಮಹಿಳಾ ಕುಸ್ತಿ ಪಟುಗಳು ಅಖಾಡದಲ್ಲಿ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

    ಪುರುಷರಷ್ಟೇ ತೊಡೆ ತಟ್ಟಿ ಅಖಾಡಕ್ಕಿಳಿದು ಪೈಲ್ವಾನ್ ರೀತಿಯಲ್ಲಿ ಬಿಲ್ಡಪ್ ಕೊಡುತ್ತಿದ್ದ ಕಾಲದಲ್ಲಿ ಯುವತಿಯರು ನಾವೇನು ಕಡಿಮೆ ಇಲ್ಲ ಎನ್ನುವಂತೆ ಮಹಿಳಾ ಕುಸ್ತಿ ಜಟ್ಟಿಗಳು ಕೂಡಾ ಅಖಾಡದಲ್ಲಿ ಸದ್ದು ಮಾಡಿದ್ರು. ನಿರೀಕ್ಷಿತ ಪ್ರೋತ್ಸಾಹ ಮುಂದೆ ಸಿಕ್ಕರೆ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರು ಮಾಡೋದ್ರಲ್ಲಿ ಅನುಮಾನವಿಲ್ಲ.

  • ಸ್ಕಾರ್ಫ್ ವಿವಾದ, ಕಾಲೇಜಿಗೆ ಕೇಸರಿ ಶಲ್ಯ ಹಾಕಿಕೊಂಡು ಬಂದ ವಿದ್ಯಾರ್ಥಿಗಳು

    ಸ್ಕಾರ್ಫ್ ವಿವಾದ, ಕಾಲೇಜಿಗೆ ಕೇಸರಿ ಶಲ್ಯ ಹಾಕಿಕೊಂಡು ಬಂದ ವಿದ್ಯಾರ್ಥಿಗಳು

    ಚಿಕ್ಕಮಗಳೂರು: ಅನ್ಯ ಕೋಮಿನ ವಿದ್ಯಾರ್ಥಿಗಳು ಕಾಲೇಜಿಗೆ ಸ್ಕಾರ್ಫ್ ಧರಿಸಿ ಬರುವುದನ್ನು ವಿರೋಧಿಸಿದ ಮತ್ತೊಂದು ಕೋಮಿನ ವಿದ್ಯಾರ್ಥಿಗಳು ಕಾಲೇಜಿಗೆ ಕೇಸರಿ ಶಲ್ಯ ಹಾಕಿಕೊಂಡು ಬಂದ ಘಟನೆ ಜಿಲ್ಲೆಯ ಕೊಪ್ಪ ತಾಲೂಕಿನ ಬಾಳಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ.

    ಈ ಕಾಲೇಜಿನಲ್ಲಿ ಈ ರೀತಿ ಶಲ್ಯ-ಸ್ಕಾರ್ಫ್ ವಿವಾದ ಇದೇ ಮೊದಲಲ್ಲ. ಕಳೆದ ಮೂರು ವರ್ಷಗಳ ಹಿಂದೆಯೂ ಬಾಳಗಡಿ ಕಾಲೇಜಿನಲ್ಲಿ ಸ್ಕಾರ್ಫ್ ವರ್ಸಸ್ ಕೇಸರಿ ಶಲ್ಯ ವಿವಾದ ತಲೆದೂರಿತ್ತು. ಆಗ ಪೋಷಕರು ಹಾಗೂ ಪ್ರಾಂಶುಪಾಲರು ಸಭೆ ನಡೆಸಿ ವಿವಾದವನ್ನು ತಿಳಿಗೊಳಿಸಿದ್ದರು. ಆದರೆ, ಈಗ ಮತ್ತೆ ಕಾಲೇಜಿನಲ್ಲಿ ಸ್ಕಾರ್ಫ್ ವಿರುದ್ಧ ಕೇಸರಿ ಶಲ್ಯದ ಅಭಿಯಾನ ಆರಂಭವಾಗಿದೆ. ಈ ವಿವಾದ ಮತ್ತೆ ಇನ್ನೆಲಿಗೆ ಹೋಗಿ ಮುಟ್ಟುತ್ತೋ ಗೊತ್ತಿಲ್ಲ. ಇದನ್ನೂ ಓದಿ: ಹಿಜಬ್ ಹೋರಾಟ ನಿಲ್ಲಿಸಿ – ಕೇಸರಿ ರುಮಾಲು, ಸ್ಲೀವ್ ಲೆಸ್, ಜೀನ್ಸ್ ಬಂದ್ರೆ ನಾವು ಜವಾಬ್ದಾರರಲ್ಲ: ರಘುಪತಿ ಭಟ್

    ವಿದ್ಯಾರ್ಥಿಗಳ ಈ ನಡೆ ದೊಡ್ಡದಾಗುವ ಮುನ್ನ ಬಗೆಹರಿಸಬೇಕಾದ ಜವಾಬ್ದಾರಿ ಕಾಲೇಜು ಆಡಳಿತ ವರ್ಗದ್ದಾಗಿದೆ. ಆದರೆ, ಕಾಲೇಜು ಆಡಳಿತ ಮಂಡಳಿ ಏನು ಮಾಡುತ್ತೋ ಕಾದು ನೋಡಬೇಕು. ಆದರೆ, ಓದಿ ಭವಿಷ್ಯ ರೂಪಿಸಿಕೊಳ್ಳಬೇಕಾದ ವಯಸ್ಸಲ್ಲಿ ವಿದ್ಯಾರ್ಥಿಗಳ ನಡೆ ಸರಿಯಲ್ಲ ಎಂಬ ಸಾರ್ವಜನಿಕ ವಲಯದಲ್ಲಿ ಕೇಳಿ ಬಂದಿದೆ. ಈ ಮಧ್ಯೆ ಶಾಲಾ-ಕಾಲೇಜುಗಲು ಜ್ಞಾನದ ದೇಗುಲ. ಇಲ್ಲಿ ಜಾತಿ-ಧರ್ಮ ಇರುವುದಿಲ್ಲ. ಎಲ್ಲರೂ ಒಂದೇ ಎಂಬ ಮಾತುಗಳು ಕೇಳಿ ಬಂದಿದೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಸುಳ್ಳಿನ ದೆವ್ವ ಮೆಟ್ಟಿಕೊಂಡಿದೆ: ಸಿ.ಟಿ ರವಿ ವ್ಯಂಗ್ಯ

  • ಹಿಜಬ್ ಹೋರಾಟ ನಿಲ್ಲಿಸಿ – ಕೇಸರಿ ರುಮಾಲು, ಸ್ಲೀವ್ ಲೆಸ್, ಜೀನ್ಸ್ ಬಂದ್ರೆ ನಾವು ಜವಾಬ್ದಾರರಲ್ಲ: ರಘುಪತಿ ಭಟ್

    ಹಿಜಬ್ ಹೋರಾಟ ನಿಲ್ಲಿಸಿ – ಕೇಸರಿ ರುಮಾಲು, ಸ್ಲೀವ್ ಲೆಸ್, ಜೀನ್ಸ್ ಬಂದ್ರೆ ನಾವು ಜವಾಬ್ದಾರರಲ್ಲ: ರಘುಪತಿ ಭಟ್

    ಉಡುಪಿ: ಹಿಜಾಬ್ ಧರಿಸಿ ತರಗತಿಯಲ್ಲಿ ಕುಳಿತುಕೊಳ್ಳಲು ಅವಕಾಶ ಕೊಡಿ ಎಂದು ಉಡುಪಿಯ ಸರ್ಕಾರಿ ಪದವಿ ಪೂರ್ವ ಮಹಿಳಾ ಕಾಲೇಜಿನ 6 ವಿದ್ಯಾರ್ಥಿನಿಯರು ಹೇಳುತ್ತಿದ್ದಾರೆ. ಕಳೆದ ಒಂದು ವಾರದಿಂದ ಕ್ಲಾಸಿಗೆ ತೆರಳದೆ ಪ್ರತಿಭಟನೆ ಮಾಡುತ್ತಿರುವ ವಿದ್ಯಾರ್ಥಿನಿಯರಿಗೆ ಕೆಲ ಸಂಘಟನೆ ಬೆಂಬಲಿಸಿದೆ. ಹಿಜಬ್ ಹೋರಾಟ ನಿಲ್ಲಿಸಿ ಮತ್ತೆ ಕೇಸರಿ ರುಮಾಲು, ಸ್ಲೀವ್ ಲೆಸ್-ಜೀನ್ಸ್ ಬಂದ್ರೆ ನಾವು ಜವಾಬ್ದಾರರಲ್ಲ ಎಂದು ಉಡುಪಿ ಶಾಸಕ ರಘುಪತಿ ಭಟ್ ಸರ್ಕಾರ ಮತ್ತು ಪಿಯು ಬೋರ್ಡ್‍ಗೆ ಎಚ್ಚರಿಕೆಯೊಂದನ್ನು ನೀಡಿದ್ದಾರೆ.

    ಈ ಬಗ್ಗೆ ಪಬ್ಲಿಕ್‌ ಟಿವಿ ಜೊತೆ ಮಾತನಾಡಿದ ಅವರು, ಉಡುಪಿ ಸರ್ಕಾರಿ ಪಿಯು ಕಾಲೇಜಿನ ಆರು ವಿದ್ಯಾರ್ಥಿನೀಯರ ಹಿಜಬ್ ಹಕ್ಕಿನ ಪ್ರತಿಭಟನೆ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಟ್ವಿಟ್ಟರ್ ಮೂಲಕ ಟಾಪ್ ಟ್ರೆಂಡ್ ಮಾಡಲಾಗಿತ್ತು. ಈ ಬಗ್ಗೆ ಉಡುಪಿ ಬಿಜೆಪಿ ಶಾಸಕ, ಭರವಸೆ ಸಮಿತಿ ಅಧ್ಯಕ್ಷ ರಘುಪತಿ ಭಟ್ ಮಾತನಾಡಿದ್ದಾರೆ. ಹಿಜಬ್ ವಿಚಾರದಲ್ಲಿ ಉದ್ದೇಶಪೂರ್ವಕ ಗೊಂದಲ ಸೃಷ್ಟಿಯಾಗುತ್ತಿದೆ. ಸರ್ಕಾರಿ ಪಿಯು ಕಾಲೇಜಿನಲ್ಲಿ 1985 ರಿಂದಲೂ ಸಮವಸ್ತ್ರ ಕಡ್ಡಾಯ ಇದೆ. ಹಿಜಬ್‍ಗೆ ಒತ್ತಾಯ ಮಾಡುವವರು ಒಂದುವರೆ ವರ್ಷ ಸಮವಸ್ತ್ರದಲ್ಲಿ ಬಂದಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಸುಳ್ಳಿನ ದೆವ್ವ ಮೆಟ್ಟಿಕೊಂಡಿದೆ: ಸಿ.ಟಿ ರವಿ ವ್ಯಂಗ್ಯ

    ಯಾರದ್ದೋ ಕುಮ್ಮಕ್ಕಿನಿಂದ ಘಟನೆಯನ್ನು ರಾಜಕೀಯ ಗೊಳಿಸಲಾಗುತ್ತಿದೆ. ಯೂನಿಫಾರ್ಮ್ ಬೇಕಾ ಬೇಡ್ವಾ ಎಂಬುದನ್ನು ಸರ್ಕಾರ ತೀರ್ಮಾನಿಸಲಿ. ಪದವಿ ಪೂರ್ವ ಕಾಲೇಜಿನ ಬೋರ್ಡ್‍ಗೆ ನಾವು ಪತ್ರವನ್ನು ಬರೆದಿದ್ದೇವೆ. ಸಮವಸ್ತ್ರ ಬೇಡ ಎಂದರೆ ಯಾರಿಗೂ ಕಡ್ಡಾಯ ಮಾಡಬೇಡಿ. ಕೇಸರಿ ರುಮಾಲು, ಜೀನ್ಸ್, ಸ್ಲೀವ್ ಲೆಸ್ ಬಟ್ಟೆ ಹಾಕಿಕೊಂಡು ಬರಬಹುದೇ? ತಮಗಿಷ್ಟದ ಬಟ್ಟೆಯನ್ನು ಹಾಕಿಕೊಂಡು ಬರಲು ಅವಕಾಶ ಇದೆಯೇ? ಎಂಬ ಬಗ್ಗೆ ಸರ್ಕಾರ ತೀರ್ಮಾನಿಸಲಿ ಎಂದರು. ಇದನ್ನೂ ಓದಿ: ಜನವರಿ 25ಕ್ಕೆ ಸುಪ್ರೀಂಕೋರ್ಟ್‍ನಲ್ಲಿ ಮೇಕೆದಾಟು ಅರ್ಜಿ ವಿಚಾರಣೆ

    ಸರ್ಕಾರ ಉಡುಪಿಯ ಘಟನೆಯನ್ನು ಗಂಭೀರವಾಗಿ ಪರಿಗಣಿಸಬೇಕು. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯನ್ನು ಇಟ್ಟುಕೊಂಡು ಸರ್ಕಾರ ತೀರ್ಮಾನಿಸಬೇಕು. ಸಮವಸ್ತ್ರ ಎಂದರೆ ಶಿಸ್ತು ಸಮವಸ್ತ್ರ ಎಂದರೆ ಸಮಾನತೆ. ಶಿಕ್ಷಣದಲ್ಲಿ ಸಮಾನತೆ ಬೇಕು ಎಂದು ಅಂಬೇಡ್ಕರ್ ಹೇಳಿದ್ದಾರೆ. ಹಿಜಬ್ ಧರಿಸುವುದರಿಂದ ಧರ್ಮದ ಬೇಧ ಬರುತ್ತದೆ. ರಾಜ್ಯದಲ್ಲಿ ಯೂನಿಫಾರಂ ಬೇಕಾ ಬೇಡ್ವಾ ಎಂದು ಸರ್ಕಾರ ತೀರ್ಮಾನಿಸಲಿ ಎಂದು ಖಾರವಾಗಿ ಪ್ರತಿಕ್ರಿಯೆ ನೀಡಿದರು.

    ಡೆಲ್ಲಿ ಹೈಕೋರ್ಟ್ ಯೂನಿಫಾರ್ಮ್ ಬಗ್ಗೆ ಈಗಾಗಲೇ ಆದೇಶ ನೀಡಿದೆ. ಸಾರ್ವಜನಿಕ ಸಂಸ್ಥೆಯಲ್ಲಿ ಎಲ್ಲರಿಗೂ ನಿಯಮ ಒಂದೇ ರೀತಿಯಾಗಿರಬೇಕು. ನಿಮ್ಮ ಮರ್ಜಿಗೆ ಬೇಕಾದರೆ ಧಾರ್ಮಿಕ ಸಂಸ್ಥೆಯ ಶಿಕ್ಷಣ ಕೇಂದ್ರಕ್ಕೆ ಹೋಗಿ ಎಂದಿದ್ದನ್ನು ಉಲ್ಲೇಖಿಸಿದರು. ಕಾಲೇಜಿನಲ್ಲಿ ಹಲವಾರು ಮುಸ್ಲಿಂ ಸಮುದಾಯದ ವಿದ್ಯಾರ್ಥಿಗಳಿದ್ದಾರೆ. ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಕೆಲವರು ವಿವಾದ ಸೃಷ್ಟಿ ಮಾಡಿದ್ದಾರೆ. ಇದನ್ನೂ ಓದಿ: ಕಾರ್ಯಕ್ರಮದಲ್ಲಿ ಸಿಎಂ ಎದುರೇ ಡಿಕೆ ಸುರೇಶ್‌, ಅಶ್ವಥ್‌ ನಾರಾಯಣ ನಡುವೆ ಜಟಾಪಟಿ

    ನಮ್ಮ ಜಿಲ್ಲೆಯಲ್ಲಿ ಸೌಹಾರ್ದಯುತ ವಾತಾವರಣ ಇದೆ. ಜಿಲ್ಲೆಯ ಸೌಹಾರ್ದಯುತ ವಾತಾವರಣ ಮುಂದುವರೆಯಲು ಬಿಡಿ. ಈಗಾಗಲೇ ಕಾಲೇಜಿನ ಕೆಲ ಮಕ್ಕಳಿಂದ ಮನವಿ ಬಂದಿದೆ. ಕೇಸರಿ ರುಮಾಲು ಧರಿಸಲು ಅವಕಾಶ ಕೊಡಿ ಎಂದು ಕೇಳಿಕೊಂಡಿದ್ದಾರೆ. ಸರ್ಕಾರ, ಪಿಯು ಬೋರ್ಡ್ ಸಂಘರ್ಷಕ್ಕೆ ಎಡೆ ಮಾಡಿಕೊಡಬಾರದು ಎಂದು ರಘುಪತಿ ಭಟ್ ವಿನಂತಿಸಿದ್ದಾರೆ.

  • ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ – ಇಬ್ಬರು ಕಾಲೇಜು ವಿದ್ಯಾರ್ಥಿಗಳು ಧಾರುಣ ಸಾವು

    ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ – ಇಬ್ಬರು ಕಾಲೇಜು ವಿದ್ಯಾರ್ಥಿಗಳು ಧಾರುಣ ಸಾವು

    ಆನೇಕಲ್: ದ್ವಿಚಕ್ರ ವಾಹನಕ್ಕೆ ಕ್ಯಾಂಟರ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‍ನಲ್ಲಿ ಸಂಚರಿಸುತ್ತಿದ್ದ ಕಾಲೇಜು ವಿದ್ಯಾರ್ಥಿಗಳಿಬ್ಬರು ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿರುವ ಘಟನೆ ಬನ್ನೇರುಘಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

    ಬನ್ನೇರುಘಟ್ಟದ ಕೆಂಪನಾಯಕನ ಅಕ್ವೇರಲ್ ಗಾರ್ಮೆಂಟ್ಸ್ ಬಳಿ ಕಳೆದ ರಾತ್ರಿ ಕ್ಯಾಂಟರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಕಾಲೇಜು ವಿದ್ಯಾರ್ಥಿಗಳಿಬ್ಬರು ಮೃತಪಟ್ಟಿದ್ದಾರೆ. ಬೆಂಗಳೂರಿನ ಸಾರಕ್ಕಿ ನಿವಾಸಿಗಳಾದ ಕೌಶಿಕ್ (19) ಮತ್ತು ಸುಷ್ಮಾ (19) ಮೃತ ದುರ್ದೈವಿಗಳು. ಇವರಿಬ್ಬರೂ ಕೂಡ ಬನ್ನೇರುಘಟ್ಟದ ಎಂಎಂಸಿ ಕಾಲೇಜ್‌ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ನಿನ್ನೆ ಕಾಲೇಜ್ ಮುಗಿಸಿಕೊಂಡು ಬೈಕ್ ನಲ್ಲಿ ಹೋಗುವಾಗ ಹಿಂಬದಿಯಿಂದ ಬಂದ ಕ್ಯಾಂಟರ್ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ಕೆಎಸ್‌ಆರ್‌ಟಿಸಿ ಬಸ್ ಬ್ರೇಕ್ ಫೇಲ್ – ಸರಣಿ ಅಪಘಾತ, ತಪ್ಪಿತು ದುರಂತ

    ಅಪಘಾತದಲ್ಲಿ ಗಂಭೀರ ಗಾಯಗೊಂಡು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಕೌಶಿಕ್ ಮತ್ತು ಸುಷ್ಮಾರನ್ನು ಸ್ಥಳೀಯರು ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಇಬ್ಬರು ಕೊನೆಯುಸಿರೆಳೆದಿದ್ದಾರೆ. ಅಪಘಾತ ಸಂಭವಿಸುತ್ತಿದ್ದಂತೆ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಪ್ರಕರಣ ಸಂಬಂಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದನ್ನೂ ಓದಿ: ಸೂಪರ್ ಮಾರ್ಕೆಟ್‌ನಲ್ಲಿ ಕಳ್ಳತನ – ತಾಯಿ ಮಗಳ ಕೈ ಚಳಕ ಸಿಸಿಟಿವಿಯಲ್ಲಿ ಸೆರೆ

  • ಶಾಲಾ-ಕಾಲೇಜು ಆರಂಭಕ್ಕೆ ಸೋಮವಾರ ಮಾರ್ಗಸೂಚಿ

    ಶಾಲಾ-ಕಾಲೇಜು ಆರಂಭಕ್ಕೆ ಸೋಮವಾರ ಮಾರ್ಗಸೂಚಿ

    ಬೆಂಗಳೂರು: ಆಗಸ್ಟ್ 23ರಿಂದ ಶಾಲಾ- ಕಾಲೇಜು ಆರಂಭಕ್ಕೆ ಸರ್ಕಾರ ಸಿದ್ಧತೆ ಮಾಡಿಕೊಳ್ಳುತ್ತಿದೆ. ಮೊದಲ ಹಂತದಲ್ಲಿ 9ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗೂ ತರಗತಿಗಳು ಆರಂಭಗೊಳ್ಳಲಿವೆ. ಈ ಸಂಬಂಧ ಸೋಮವಾರ ಸರ್ಕಾರ ಮಾರ್ಗಸೂಚಿಯನ್ನು ಪ್ರಕಟಿಸಲಿದೆ.

    ಶಾಲೆ ಕಾಲೇಜು ಆರಂಭವಾಗುವ ಸಮಯದಲ್ಲೇ ಕೆಲವು ತಜ್ಞರಿಂದ ಅಪಸ್ವರ ವ್ಯಕ್ತವಾಗಿದೆ. ಸರ್ಕಾರ ರಿಸ್ಕ್ ತಗೊಳ್ಳುತ್ತಿದೆ ಎಂಬ ಆತಂಕ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಜಿಲ್ಲಾಧಿಕಾರಿಗಳು, ಆರೋಗ್ಯ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಆಗಸ್ಟ್ 23ರಿಂದ ಶಾಲೆ ಓಪನ್ ಮಾಡೋಣ ಅಂತಾ ಸ್ಪಷ್ಟಪಡಿಸಿದ್ರು. ಶಾಲೆ ಕಾಲೇಜು ಆರಂಭಕ್ಕೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದು ಸೂಚನೆ ನೀಡಿದ್ರು.

    ಇದೇ ವೇಳೆ ಶಾಲೆಗಳಿಲ್ಲದೆ ಮಕ್ಕಳು ಓದುವುದನ್ನೇ ಮರೆತಿದ್ದಾರೆ. ಹಳ್ಳಿಗಳಲ್ಲಿ ಪೋಷಕರು ಮಕ್ಕಳನ್ನು ಹೊಲದ ಕೆಲಸಕ್ಕೆ ಕರೆದೊಯ್ಯುತ್ತಿದ್ದಾರೆ ಅಂತ ಮೇಲ್ಮನೆ ಸಭಾಪತಿ ಬಸವರಾಜ ಹೊರಟ್ಟಿ ಆತಂಕ ವ್ಯಕ್ತಪಡಿಸಿದ್ರು. ಕೂಡಲೇ ಶಾಲೆ ಆರಂಭಿಸಿ ಎಂದು ಒತ್ತಾಯಿಸಿದರು.

    ಶಾಲಾ-ಕಾಲೇಜು ಆರಂಭದ ಮಾರ್ಗಸೂಚಿ ಏನಿರಬಹುದು?:
    ಈ ಬಾರಿಯೂ ವಿದ್ಯಾರ್ಥಿಗಳಿಗೆ ಹಾಜರಾತಿ ಕಡ್ಡಾಯ ಅಲ್ಲ. ಆಫ್‍ಲೈನ್ ಅಥವಾ ಆನ್‍ಲೈನ್ ಕ್ಲಾಸಲ್ಲಿ ಒಂದನ್ನು ವಿದ್ಯಾರ್ಥಿಗಳು ಆಯ್ಕೆ ಮಾಡಿಕೊಳ್ಳಬಹುದು. ವಿದ್ಯಾರ್ಥಿಗಳಿಗೆ ಪೋಷಕರಿಂದ ಅನುಮತಿ ಪತ್ರ ಕಡ್ಡಾಯ ಪಡೆದು ಶಾಲೆಗೆ ಬರೋದು. ವಿದ್ಯಾರ್ಥಿಗಳ ಸಂಖ್ಯೆ ಜಾಸ್ತಿ ಇದ್ದರೆ ಪಾಳಿ ಪದ್ಧತಿ ಅನುಸರಿಸಲು ಶಾಲೆಗಳಿಗೆ ಸಲಹೆ ನೀಡಬಹುದು. ದಿನ ಬಿಟ್ಟು ದಿನ ಅಥವಾ ವಾರಕ್ಕೆ 3 ದಿನ ಶಾಲೆಗೆ ಬರಬೇಕು ಅನ್ನೋ ವಿಧಾನ ತರಬಹುದು. ಆರೋಗ್ಯ ವ್ಯತ್ಯಾಸ ಇದ್ದಲ್ಲಿ ಯಾರಿಗೂ ಪ್ರವೇಶ ಇಲ್ಲ. ಶಿಕ್ಷಕರು ಹಾಗೂ ಸಿಬ್ಬಂದಿ 1 ಡೋಸ್ ಆದ್ರೂ ಪಡೆದಿರಬೇಕು ಎಂಬ ಷರತ್ತು ವಿಧಿಸಬಹುದು. ಇದನ್ನೂ ಓದಿ: ಕೊರೊನಾ ನಿಯಂತ್ರಣಕ್ಕೆ ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಯಾಗುತ್ತಾ?

  • ಕಾಲೇಜಿನ ಗೇಟ್ ಬಿದ್ದು ಬಾಲಕ ಸ್ಥಳದಲ್ಲೇ ಸಾವು

    ಕಾಲೇಜಿನ ಗೇಟ್ ಬಿದ್ದು ಬಾಲಕ ಸ್ಥಳದಲ್ಲೇ ಸಾವು

    ಚಿಕ್ಕೋಡಿ: ಕಾಲೇಜು ಕಾಂಪೌಂಡ್ಗೆ ಅಳವಡಿಸಿದ್ದ ಗೇಟ್ ಬಿದ್ದು ಬಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ.

    ನಗರದ ಆರ್.ಡಿ.ಕಾಲೇಜಿನ ಗೇಟ್ ಬಿದ್ದು 10 ವರ್ಷದ ಬಾಲಕ ಸೂಫಿಯಾನ್ ರಾಜು ಮುಲ್ಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಗೇಟ್ ದಾಟಿ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ಗೇಟ್ ಬಿದ್ದಿದೆ. ಸರಿಯಾಗಿ ಜೋಡಣೆ ಮಾಡದ ಕಾರಣ ಮಳೆಯಲ್ಲಿ ಶಿಥೀಲಗೊಂಡಿದ್ದ ಗೇಟ್ ಬಿದ್ದಿದೆ.

    ನಗರದ ಇಂದಿರಾನಗರ ನಿವಾಸಿ ಸೂಫಿಯಾನ್ ಸಾವನ್ನಪ್ಪಿದ್ದು, ಘಟನೆಯಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಕಾಲೇಜು ಆಡಳಿತ ಮಂಡಳಿ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಕಾಲೇಜುಗಳು ಆರಂಭವಾದರೂ ತರಗತಿ ಕೊಠಡಿಗಳು ಖಾಲಿ: ಪರೀಕ್ಷೆಗೆ ವಿದ್ಯಾರ್ಥಿಗಳು ತಯಾರಿ

    ಕಾಲೇಜುಗಳು ಆರಂಭವಾದರೂ ತರಗತಿ ಕೊಠಡಿಗಳು ಖಾಲಿ: ಪರೀಕ್ಷೆಗೆ ವಿದ್ಯಾರ್ಥಿಗಳು ತಯಾರಿ

    ರಾಯಚೂರು: ಕೊರೊನಾ ಪ್ರಕರಣ ಕಡಿಮೆಯಾಗುತ್ತಿರುವ ಹಿನ್ನೆಲೆ ನಿನ್ನೆಯಿಂದ ಪದವಿ, ಡಿಪ್ಲೊಮಾ, ಬಿಇ ಕಾಲೇಜುಗಳು ಆರಂಭವಾಗಿವೆ. ಆದರೆ ಜಿಲ್ಲೆಯಲ್ಲಿ ಕಾಲೇಜು ಆರಂಭಗೊಂಡರು ಪದವಿ ತರಗತಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ. ತರಗತಿ ಆರಂಭಿಸುವಂತೆ ಸರ್ಕಾರ ಆದೇಶ ಮಾಡಿದೆ. ಇದೇ ವೇಳೆ ಗುಲಬರ್ಗಾ ವಿಶ್ವವಿದ್ಯಾಲಯ ಪರೀಕ್ಷಾ ದಿನಾಂಕ ಪ್ರಕಟಿಸಿದೆ. ಪದವಿ ಪರೀಕ್ಷೆಗಳು ಇರುವುದರಿಂದ ತರಗತಿಗೆ ವಿದ್ಯಾರ್ಥಿಗಳು ಬರುತ್ತಿಲ್ಲ.

    ಇನ್ನೂ ಇಂಜಿನೀಯರಿಂಗ್ ವಿದ್ಯಾರ್ಥಿಗಳಿಗೆ ಪರೀಕ್ಷೆ ಆರಂಭವಾಗಿದೆ. ಹೀಗಾಗಿ ಸರ್ಕಾರದ ಆದೇಶದಂತೆ ಎಲ್ಲಾ ಕ್ಲಾಸ್ ರೂಂನಲ್ಲಿ ಸ್ಯಾನಿಟೈಜನರ್ ವ್ಯವಸ್ಥೆ ಸೇರಿ ಕೋವಿಡ್ ನಿಯಮ ಪಾಲನೆ ಮಾಡುವ ಮೂಲಕ ಪರೀಕ್ಷೆ ನಡೆಸಲಾಗುತ್ತಿದೆ. ಪರೀಕ್ಷೆಗೆ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಹಾಗೂ ಕೋವಿಡ್ ನಿಯಮ ಪಾಲನೆ ಮಾಡಲು ಸೂಚನೆ ನೀಡಲಾಗಿದೆ.

    ಕಾಲೇಜಿನಲ್ಲಿಯೂ ಸಹ ಸಾಮಾಜಿಕ ಅಂತರ ಕಾಪಾಡಲು ಮಾರ್ಕ್ ಮತ್ತು ಆರೋಗ್ಯ ತಪಾಸಣೆ ಕಡ್ಡಾಯ ಮಾಡಲಾಗಿದೆ. ಪರೀಕ್ಷೆ ಕೇಂದ್ರದಲ್ಲಿಯೂ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನೂ ಪದವಿ ಪರೀಕ್ಷೆಗಳು ಆಗಸ್ಟ್ 5 ರಿಂದ ಆರಂಭವಾಗಲಿವೆ.