Tag: ಕಾಲ್

  • ರಿಷಬ್ ಶೆಟ್ಟಿಯನ್ನು ತಮ್ಮ ಮನೆಗೆ ಕರೆಯಿಸಿಕೊಂಡ ಸೂಪರ್ ಸ್ಟಾರ್ ರಜನಿ

    ರಿಷಬ್ ಶೆಟ್ಟಿಯನ್ನು ತಮ್ಮ ಮನೆಗೆ ಕರೆಯಿಸಿಕೊಂಡ ಸೂಪರ್ ಸ್ಟಾರ್ ರಜನಿ

    ಕಾಂತಾರ ಸಿನಿಮಾ ನೋಡಿ ಅಚ್ಚರಿ ಎನ್ನುವಂತೆ ನಿರ್ದೇಶಕ, ನಟ ರಿಷಬ್ ಶೆಟ್ಟಿ (Rishabh Shetty) ಅವರಿಗೆ ಕರೆ ಮಾಡಿದ್ದರು ಸೂಪರ್ ಸ್ಟಾರ್ ರಜನಿಕಾಂತ್ (Rajinikanth). ಅದೊಂದು ಅನಿರೀಕ್ಷಿತ ಕರೆ ಆಗಿದ್ದರಿಂದ ರಿಷಬ್ ಕೂಡ ಅಚ್ಚರಿ ಪಟ್ಟಿದ್ದರು. ಸೂಪರ್ ಸ್ಟಾರ್ ಒಬ್ಬರು ಸಿನಿಮಾ ನೋಡಿ, ಕರೆ ಮಾಡಿದ್ದರಿಂದ ಅವರಿಗೆ ಕೃತಜ್ಞತೆ ಹೇಳುವುದಕ್ಕಾಗಿ ರಿಷಬ್ ರೆಡಿಯಾಗಿದ್ದರು. ಅಷ್ಟರಲ್ಲೇ ಮತ್ತೊಂದು ಸರ್ ಪ್ರೈಸ್ ನೀಡಿದ್ದಾರೆ ರಜನಿ. ಸ್ವತಃ ರಿಷಬ್ ಅವರನ್ನು ತಮ್ಮ ಮನೆಗೆ ಕರೆದು ಸನ್ಮಾನ ಮಾಡಿದ್ದಾರೆ.

    ಕಾಂತಾರ (Kantara) ಮೂಲಕ ನ್ಯಾಷಿನಲ್ ಸ್ಟಾರ್ ಆಗಿರುವ ರಿಷಬ್ ಶೆಟ್ಟಿ, ಕೆಲ ಹೊತ್ತು ರಜನಿಕಾಂತ್ ಅವರ ಜೊತೆ ಮಾತನಾಡಿ ತಮ್ಮ ಕನಸುಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ಕೃತಜ್ಞತೆಯನ್ನೂ ಹೇಳಿದ್ದಾರೆ. ಕಾಂತಾರ ಮೇಕಿಂಗ್, ಅದನ್ನು ಹೇಳಿದ ರೀತಿ, ತೋರಿಸಿದ ಕ್ರಮದ ಬಗ್ಗೆ ರಜನಿಕಾಂತ್ ಮೆಚ್ಚುಗೆಯನ್ನು ಈ ಸಂದರ್ಭದಲ್ಲಿ ವ್ಯಕ್ತ ಪಡಿಸಿದ್ದಾರೆ. ರಜನಿ ಮಾತು ಕೇಳಿ ರಿಷಬ್ ಕೂಡ ಖುಷ್ ಆಗಿದ್ದಾರೆ.

    ಈ ಹಿಂದೆ ರಜನಿ ಕರೆ ಮಾಡಿದಾಗ ಥ್ರಿಲ್ ಆಗಿದ್ದ ರಿಷಬ್, ಮಾತಿನ ಮಧ್ಯೆ ರಜನಿ ಸ್ಟೈಲ್ ನಲ್ಲೇ ಸಿಗರೇಟು ತಿರುಗಿಸಿ ಬಾಯಿಗೆ ಹಾಕಿಕೊಂಡ ದೃಶ್ಯವನ್ನು ನೆನಪಿಸಿದ್ದಾರೆ. ಈ ದೃಶ್ಯ ಮಾಡುವಾಗ ನಿಮ್ಮನ್ನೇ ನೆನಪಿಸಿಕೊಂಡು, ನಿಮ್ಮದೇ ಸ್ಟೈಲ್ ನಲ್ಲೇ ಅದನ್ನು ಮಾಡಲು ಪ್ರಯತ್ನಿಸಿದ್ದೇನೆ ಎಂದು ರಿಷಬ್ ಹೇಳಿದ್ದಾರೆ. ಸಿನಿಮಾ, ಮೇಕಿಂಗ್, ಕಥೆ, ನಟನೆ, ಸಂಗೀತ ಸೇರಿದಂತೆ ಹಲವು ವಿಚಾರಗಳನ್ನು ರಜನಿ ಮುಕ್ತವಾಗಿ ರಿಷಬ್ ಜೊತೆ ಮಾತನಾಡಿದ್ದಾರೆ. ಎಲ್ಲಾ ವಿಭಾಗದ ಕೆಲಸವನ್ನೂ ರಜನಿ ಮೆಚ್ಚಿಕೊಂಡಿದ್ದಾರೆ.

    ರಿಷಬ್ ಶೆಟ್ಟಿ ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಮೊದಲ ದಿನದಂದು ಈವರೆಗೂ ಹಣ ಗಳಿಕೆಯಲ್ಲಿ ಅದು ಯಾವತ್ತೂ ಹಿಂದೆ ಬಿದ್ದಿಲ್ಲ. 200 ಕೋಟಿಗೂ ಅಧಿಕ ಹಣವನ್ನು ಕಾಂತಾರ ಗಳಿಸಿದೆ ಎಂದು ಅಂದಾಜಿಸಲಾಗಿದೆ. ಈವರೆಗೂ ಕರ್ನಾಟಕವೊಂದರಲ್ಲೇ 100 ಕೋಟಿಗೂ ಅಧಿಕ ಹಣ ತಂದುಕೊಟ್ಟಿರುವ ಕಾಂತಾರ, ತೆಲಂಗಾಣ, ಉತ್ತರ ಭಾರತ, ಕೇರಳ, ವಿದೇಶದಿಂದ ಬಂದ ಒಟ್ಟು ಹಣ 80 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ.

    ದೇಶಾದ್ಯಂತ ಕಾಂತಾರ ಸಿನಿಮಾ ಗೆಲುವಿನ ಓಟವನ್ನು ಮುಂದುವರೆಸಿದೆ. ದೀಪಾವಳಿ ಹಬ್ಬದ ರಜೆಯ ಕಾರಣದಿಂದಾಗಿ ಬಾಕ್ಸ್ ಆಫೀಸ್ ಭರ್ತಿ ಭರ್ತಿ ಆಗಿದೆ. ಇದೊಂದು ಐತಿಹಾಸಿಕ, ಮಹಾ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಈ ಗೆಲುವನ್ನು ರಿಷಬ್ ಶೆಟ್ಟಿ ದೈವಕ್ಕೆ ಅರ್ಪಿಸಿದ್ದಾರೆ. ಈ ಸಿನಿಮಾ ಗೆಲ್ಲಲು ದೈವ ಕಾರಣ, ಜನರಲ್ಲಿ ನಾನು ದೇವರನ್ನು ಕಾಣುತ್ತೇನೆ ಎಂದು ಹೇಳಿದ್ದಾರೆ ರಿಷಬ್.

    Live Tv
    [brid partner=56869869 player=32851 video=960834 autoplay=true]

  • Exclusive -‘ಕಾಂತಾರ’ ನೋಡಿದ ರಜನಿಕಾಂತ್: ಕಾಲ್ ಮಾಡಿ ಸರ್ ಪ್ರೈಸ್ ಕೊಟ್ಟ ತಲೈವ

    Exclusive -‘ಕಾಂತಾರ’ ನೋಡಿದ ರಜನಿಕಾಂತ್: ಕಾಲ್ ಮಾಡಿ ಸರ್ ಪ್ರೈಸ್ ಕೊಟ್ಟ ತಲೈವ

    ಕಾಂತಾರ (Kantara) ಸಿನಿಮಾದ ಗೆಲುವು ರಿಷಬ್ ಶೆಟ್ಟಿ ಅವರಿಗೆ ಅಚ್ಚರಿ ಮೇಲೆ ಅಚ್ಚರಿ ನೀಡುತ್ತಿದೆ. ಭಾರತೀಯ ಸಿನಿಮಾ ರಂಗದ ಅನೇಕ ಕಲಾವಿದರು ಈ ಸಿನಿಮಾ ನೋಡಿ, ಮೆಚ್ಚಿಕೊಂಡಿದ್ದಾರೆ. ಅನೇಕ ತಾರೆಯರು ಸ್ವತಃ ರಿಷಬ್ ಶೆಟ್ಟಿಗೆ ಕರೆ ಮಾಡಿ ಮಾತನಾಡಿದ್ದಾರೆ. ಅಂಥದ್ದೇ ಒಂದು ಸರ್ ಪ್ರೈಸ್ ನೀಡಿದ್ದಾರೆ ಸೂಪರ್ ಸ್ಟಾರ್ ರಜನಿಕಾಂತ್. ಕಾಂತಾರ ಸಿನಿಮಾ ನೋಡಿದ ಮೇಲೆ ರಿಷಬ್ ಜೊತೆ ಮಾತನಾಡಿದ ರಜನಿ, ಸಿನಿಮಾದ ಬಗ್ಗೆ ಹಾಡಿ ಹೊಗಳಿದ್ದಾರೆ.

    ರಜನಿ (Rajinikanth) ಕರೆ ಮಾಡಿದಾಗ ಥ್ರಿಲ್ ಆಗಿದ್ದ ರಿಷಬ್, ಮಾತಿನ ಮಧ್ಯೆ ರಜನಿ ಸ್ಟೈಲ್ ನಲ್ಲೇ ಸಿಗರೇಟು ತಿರುಗಿಸಿ ಬಾಯಿಗೆ ಹಾಕಿಕೊಂಡ ದೃಶ್ಯವನ್ನು ನೆನಪಿಸಿದ್ದಾರೆ. ಈ ದೃಶ್ಯ ಮಾಡುವಾಗ ನಿಮ್ಮನ್ನೇ ನೆನಪಿಸಿಕೊಂಡು, ನಿಮ್ಮದೇ ಸ್ಟೈಲ್ ನಲ್ಲೇ ಅದನ್ನು ಮಾಡಲು ಪ್ರಯತ್ನಿಸಿದ್ದೇನೆ ಎಂದು ರಿಷಬ್ ಹೇಳಿದ್ದಾರೆ. ಸಿನಿಮಾ, ಮೇಕಿಂಗ್, ಕಥೆ, ನಟನೆ, ಸಂಗೀತ ಸೇರಿದಂತೆ ಹಲವು ವಿಚಾರಗಳನ್ನು ರಜನಿ ಮುಕ್ತವಾಗಿ ರಿಷಬ್ ಜೊತೆ ಮಾತನಾಡಿದ್ದಾರೆ. ಎಲ್ಲಾ ವಿಭಾಗದ ಕೆಲಸವನ್ನೂ ರಜನಿ ಮೆಚ್ಚಿಕೊಂಡಿದ್ದಾರೆ. ಇದನ್ನೂ ಓದಿ:ದೇಶ-ವಿದೇಶದಲ್ಲಿ ಮಾರ್ದನಿಸ್ತಿರೋ ಗಗ್ಗರ ಶಬ್ಧ- ಅಮೆರಿಕಾದಲ್ಲಿ ಎಂಟೂವರೆ ಕೋಟಿ ಬಾಚಿದ ಕಾಂತಾರ

    ರಿಷಬ್ ಶೆಟ್ಟಿ (Rishabh Shetty) ನಿರ್ದೇಶಿಸಿ, ನಟಿಸಿರುವ ಕಾಂತಾರ ಸಿನಿಮಾ ಬಾಕ್ಸ್ ಆಫೀಸಿನಲ್ಲಿ ದಿನದಿಂದ ದಿನಕ್ಕೆ ತನ್ನ ಪ್ರಭಾವವನ್ನು ಹೆಚ್ಚಿಸಿಕೊಳ್ಳುತ್ತಲೇ ಇದೆ. ಮೊದಲ ದಿನದಂದು ಈವರೆಗೂ ಹಣ ಗಳಿಕೆಯಲ್ಲಿ ಅದು ಯಾವತ್ತೂ ಹಿಂದೆ ಬಿದ್ದಿಲ್ಲ. ನಿನ್ನೆವರೆಗೂ 180 ಕೋಟಿಗೂ ಅಧಿಕ ಹಣವನ್ನು ಕಾಂತಾರ ಗಳಿಸಿದೆ ಎಂದು ಅಂದಾಜಿಸಲಾಗಿದೆ. ಈ ವಾರದ ಕೊನೆಯಲ್ಲಿ ಸಿನಿಮಾ 200 ಕೋಟಿ ಕ್ಲಬ್ ಸೇರಲಿದೆ ಎನ್ನುತ್ತಾರೆ ಟ್ರೇಡ್ ಅನಾಲಿಸಿಸ್.

    ಈವರೆಗೂ ಕರ್ನಾಟಕವೊಂದರಲ್ಲೇ 100 ಕೋಟಿಗೂ ಅಧಿಕ ಹಣ ತಂದುಕೊಟ್ಟಿರುವ ಕಾಂತಾರ, ತೆಲಂಗಾಣ, ಉತ್ತರ ಭಾರತ, ಕೇರಳ, ವಿದೇಶದಿಂದ ಬಂದ ಒಟ್ಟು ಹಣ 80 ಕೋಟಿಗೂ ಅಧಿಕ ಎಂದು ಅಂದಾಜಿಸಲಾಗಿದೆ. ಈ ವಾರದ ಒಳಗೆ ಸಲೀಸಾಗಿ ಕಾಂತಾರ ಸಿನಿಮಾ 200 ಕೋಟಿ ಕ್ಲಬ್ ಸೇರಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ.

    ದೇಶಾದ್ಯಂತ ಕಾಂತಾರ ಸಿನಿಮಾ ಗೆಲುವಿನ ಓಟವನ್ನು ಮುಂದುವರೆಸಿದೆ. ದೀಪಾವಳಿ ಹಬ್ಬದ ರಜೆಯ ಕಾರಣದಿಂದಾಗಿ ಬಾಕ್ಸ್ ಆಫೀಸ್ (Box Office) ಭರ್ತಿ ಆಗುತ್ತಿದೆ. ಇದೊಂದು ಐತಿಹಾಸಿಕ, ಮಹಾ ಗೆಲುವು ಎಂದು ಬಣ್ಣಿಸಲಾಗುತ್ತಿದೆ. ಈ ಗೆಲುವನ್ನು ರಿಷಬ್ ಶೆಟ್ಟಿ ದೈವಕ್ಕೆ ಅರ್ಪಿಸಿದ್ದಾರೆ. ಈ ಸಿನಿಮಾ ಗೆಲ್ಲಲು ದೈವ ಕಾರಣ, ಜನರಲ್ಲಿ ನಾನು ದೇವರನ್ನು ಕಾಣುತ್ತೇನೆ ಎಂದು ಹೇಳಿದ್ದಾರೆ ರಿಷಬ್.

    Live Tv
    [brid partner=56869869 player=32851 video=960834 autoplay=true]

  • ಅಭಿಮಾನಿ ಕಣ್ಣೀರಿಗೆ ಕರಗಿ ವಿಡಿಯೋ ಕಾಲ್ ಮಾಡಿ ಮಾತಾಡಿದ ಕಿಚ್ಚ

    ಅಭಿಮಾನಿ ಕಣ್ಣೀರಿಗೆ ಕರಗಿ ವಿಡಿಯೋ ಕಾಲ್ ಮಾಡಿ ಮಾತಾಡಿದ ಕಿಚ್ಚ

    ಬೆಂಗಳೂರು: ಸಾಮಾನ್ಯವಾಗಿ ಅಭಿಮಾನಿಗಳು ತಮ್ಮ ನೆಚ್ಚಿನ ನಟ-ನಟಿಯರನ್ನು ನೋಡಬೇಕು, ಮಾತನಾಡಿಸಬೇಕು ಎಂದು ಬಯಸುತ್ತಾರೆ. ಅದೇ ರೀತಿ ನಟ ಕಿಚ್ಚ ಸುದೀಪ್ ಅವರ ಅಭಿಮಾನಿಯೊಬ್ಬ ಅವರನ್ನು ನೋಡಲೇಬೇಕು ಎಂದು ಕಣ್ಣೀರು ಹಾಕಿದ್ದ. ಈ ಬಗ್ಗೆ ತಿಳಿದ ಸುದೀಪ್ ವಿಡಿಯೋ ಕಾಲ್ ಮೂಲಕ ಅಭಿಮಾನಿಯ ಜೊತೆ ಮಾತನಾಡಿದ್ದಾರೆ.

    ಸುದೀಪ್ ಅಪ್ಪಟ ಅಭಿಮಾನಿಯೊಬ್ಬ ಅಪೆಂಡಿಕ್ಸ್ ಕಾಯಿಲೆಯಿಂದ ಬಳಲುತ್ತಿದ್ದಾನೆ. ಅಭಿಮಾನಿ ಅಪೆಂಡಿಕ್ಸ್ ಆಪರೇಷನ್ ಆಗಬೇಕು ಅದರೊಳಗೆ ಸುದೀಪ್ ಅವರನ್ನು ನೋಡಬೇಕು, ಆಪರೇಷನ್ ಆದಮೇಲೆ ಏನ್ ಆಗುತ್ತೊ ಗೊತ್ತಿಲ್ಲ ಎಂದು ವಿಡಿಯೋ ಮೂಲಕ ಅಳಲು ತೋಡಿಕೊಂಡಿದ್ದ. ಅಭಿಮಾನಿಯ ಈ ವಿಡಿಯೋ ವೈರಲ್ ಆಗಿದ್ದು, ಇದು ಸುದೀಪ್ ಗಮನಕ್ಕೆ ಬಂದಿದೆ.

    ನಟ ಸುದೀಪ್ ಆ ಅಭಿಮಾನಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ. ಸುದೀಪ್ ವಿಡಿಯೋ ಕಾಲ್ ಮಾಡುತ್ತಿದ್ದಂತೆ ಅಭಿಮಾನಿ ಅವರನ್ನು ನೋಡಿ ಕಣ್ಣೀರು ಹಾಕಿದ್ದಾನೆ. “ನಿಮ್ಮ ದೊಡ್ಡ ಅಭಿಮಾನಿ ನಾನು, ನನಗೆ ಆರೋಗ್ಯ ಸರಿ ಇಲ್ಲ. ಅಪೆಂಡಿಕ್ಸ್ ಆಗಿದೆ. ನನಗೆ ಯಾವಾಗ ಏನ್ ಆಗುತ್ತೊ ಗೊತ್ತಿಲ್ಲ ಆದರೊಳಗೆ ನಿಮ್ಮನ್ನು ಒಮ್ಮೆ ನೋಡಬೇಕು. ನಿಮ್ಮ ಕಾಲಿಗೆ ಬೀಳುತ್ತೇನೆ ಅವಕಾಶ ಮಾಡಿಕೊಡಿ” ಎಂದು ವಿಡಿಯೋ ಮೂಲಕ ಕೇಳಿಕೊಂಡಿದ್ದಾನೆ.

    https://twitter.com/KicchafansKKSFA/status/1281598356234493952

    ಕೊರೊನಾದಿಂದ ಎಲ್ಲರೂ ಮನೆಯಲ್ಲಿ ಲಾಕ್ ಆಗಿದ್ದಾರೆ. ಹೀಗಾಗಿ ಈ ಸಂದರ್ಭದಲ್ಲಿ ಭೇಟಿಯಾಗಲು ಸಾಧ್ಯವಿಲ್ಲ. ಆದರೆ ಖಂಡಿತವಾಗಿಯೂ ನನ್ನ ಭೇಟಿಗೆ ವ್ಯವಸ್ಥೆ ಮಾಡಿಸುತ್ತೇನೆ” ಎಂದು ಸುದೀಪ್ ಅಭಿಮಾನಿಗೆ ಸಮಾಧಾನ ಮಾಡಿದ್ದಾರೆ.

    ಅಲ್ಲದೇ ಅಭಿಮಾನಿಯ ಆರೋಗ್ಯ ಕೂಡ ವಿಚಾರಿಸಿದ್ದಾರೆ. ಸುದೀಪ್ ಅಭಿಮಾನಿಗೆ ಜೊತೆ ವಿಡಿಯೋ ಕಾಲ್‍ನಲ್ಲಿ ಮಾತನಾಡುತ್ತಿರುವ ವಿಡಿಯೋವನ್ನು ಅವರ ಫ್ಯಾನ್ಸ್ ಟ್ವಿಟ್ಟರಿನಲ್ಲಿ ಶೇರ್ ಮಾಡಿಕೊಂಡಿದ್ದಾರೆ.