Tag: ಕಾಳಜಿ

  • ಸೋಂಕಿತೆಯ ತಲೆ ಬಾಚಿ ಜಡೆ ಹಾಕಿದ ಕಿಮ್ಸ್ ಸಿಬ್ಬಂದಿ – ನರ್ಸ್, ದಾದಿಯರ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ

    ಸೋಂಕಿತೆಯ ತಲೆ ಬಾಚಿ ಜಡೆ ಹಾಕಿದ ಕಿಮ್ಸ್ ಸಿಬ್ಬಂದಿ – ನರ್ಸ್, ದಾದಿಯರ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ

    ಹುಬ್ಬಳ್ಳಿ: ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರಿಗೆ ಬೆಡ್ ಸಿಕ್ತಾ ಇಲ್ಲ. ಬೆಡ್ ಸಿಕ್ಕವರಿಗೆ ಆಕ್ಸಿಜನ್ ಪೊರೈಕೆ ಇಲ್ಲ. ಸೋಂಕಿತರಿಗೆ ಬೆಡ್ ಆಕ್ಸಿಜನ್ ಸಿಕ್ಕರೂ ಆಸ್ಪತ್ರೆಯಲ್ಲಿ ಚಿಕಿತ್ಸೆ ಸರಿಯಿಲ್ಲ ಅನ್ನೋ ಆರೋಪಗಳನ್ನ ಕೇಳ್ತಾನೇ ಇದ್ದೇವೆ. ಆದರೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಮಹಿಳೆಯರ ಆರೈಕೆ ಮಾಡ್ತಾ ಇರೋ ನರ್ಸಗಳ ಕಾರ್ಯಕ್ಕೆ ಇದೀಗ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡನಲ್ಲಿ ನೂರಾರು ಕೋವಿಡ್ ಸೊಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿನ ಸೋಂಕಿತರನ್ನ ಇದೀಗ ನರ್ಸಗಳು, ದಾದಿಯರು ವಿಶೇಷ ಕಾಳಜಿ ವಹಿಸಿ ಆರೈಕೆ ಮಾಡುತ್ತಿದ್ದಾರೆ.

    ಸೋಂಕಿತ ಮಹಿಳೆಗೆ ಬರೀ ಮಾತ್ರೆ, ಇಂಜೆಕ್ಷನ್, ಊಟ ಕೊಡುವ ಜೊತೆ ಜೊತೆಗೆ ಇಲ್ಲಿನ ದಾದಿಯರು, ನರ್ಸ್ ಗಳು ಸೋಂಕಿತರಿಗೆ ವಿಶೇಷ ಕಾಳಜಿ ವಹಿಸಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಡ್ ಮೇಲೆ ಆಕ್ಸಿಜನ್ ಪಡೆಯುತ್ತಿದ್ದ ಸೋಂಕಿತ ಹಿಳೆಗೆ ನರ್ಸ್ ಒಬ್ಬರು ತಮ್ಮ ಮನೆಯ ಹಿರಿಯ ಸದಸ್ಯರಿಗೆ ಸೇವೆ ಮಾಡುವಂತೆ ಅವರ ತಲೆ ಬಾಚಿ ಜಡೆ ಹಾಕಿ ಆರೈಕೆ ಮಾಡುತ್ತಿರುವ ಫೋಟೋ ಇದೀಗ ಬಿಡುಗಡೆಯಾಗಿರುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

    ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ಕೋವಿಡ್ ವಾರ್ಡ್ ನಲ್ಲಿ ನಲ್ಲಿ ನರ್ಸ್,  ದಾದಿಯರು ಪಿಪಿಇ ಕಿಟ್ ಹಾಕಿಕೊಂಡು ದಿನಪೂರ್ತಿ ಕೆಲಸ ಮಾಡುವುದರ ಜೊತೆಗೆ ಸೋಂಕಿತರಿಗೆ ವಿಶೇಷ ಆರೈಕೆ ಮಾಡುತ್ತಿರುವುದು ವಿಶೇಷವಾಗಿದೆ. ಅಲ್ಲದೇ 6 ಗಂಟೆಗಳ ಕಾಲ ಸತತವಾಗಿ ಪಿಪಿಇ ಕಿಟ್ ಧರಿಸಿ ಕೆಲಸ ಮಾಡುವುದೇ ದುಸ್ತರವಾಗಿರುವ ಸಮಯದಲ್ಲಿ ನರ್ಸಗಳು ವಿಶೇಷ ಕಾಳಜಿವಹಿಸಿ ಮಹಿಳೆಯೊಬ್ಬರಿಗೆ ತಲೆಬಾಚಿ ಜಡೆ ಹಾಕಿರುವುದು ನಿಜಕ್ಕೂ ಮಾನವೀಯತೆಗೆ ಸಾಕ್ಷಿಯಾಗಿದೆ.

  • ಪ್ರಧಾನಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಬಿಎಸ್‍ವೈ

    ಪ್ರಧಾನಿ ಭೇಟಿ ಬಳಿಕ ಭಾವುಕರಾಗಿ ಕಣ್ಣೀರಿಟ್ಟ ಸಿಎಂ ಬಿಎಸ್‍ವೈ

    ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಭೇಟಿ ಬಳಿಕ ಸಿಎಂ ಯಡಿಯೂರಪ್ಪ ಅವರು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    ಕಳೆದ ಎರಡು ದಿನಗಳಿಂದ ನವದೆಹಲಿಯಲ್ಲಿ ವಾಸ್ತವ್ಯ ಹೂಡಿರುವ ಯಡಿಯೂರಪ್ಪನವರು, ಇಂದು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಈ ನಡುವೆ ನಿನ್ನೆ ಪ್ರಧಾನಿ ಮೋದಿಯವರನ್ನು ಸಂಸತ್‍ನಲ್ಲಿ ಭೇಟಿ ಮಾಡಿದ್ದ ಯಡಿಯೂರಪ್ಪ ಭಾವುಕರಾಗಿ ಕಣ್ಣಿರಿಟ್ಟಿದ್ದಾರೆ ಎಂಬ ಸುದ್ದಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಸಿಎಂ ಭೇಟಿ ವೇಳೆ ಪ್ರಧಾನಿ ಮೋದಿಯವರು ಬಿಎಸ್‍ವೈ ಆರೋಗ್ಯದ ಬಗ್ಗೆ ಅತೀವ ಕಾಳಜಿ ತೋರಿದ್ದು, ರಾಜ್ಯಾದ್ಯಂತ ಪ್ರವಾಸ ಮಾಡುತ್ತಿರುವ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದ್ದಾರೆ. ಇದರ ಜೊತೆಗೆ ಆರೋಗ್ಯದ ಬಗ್ಗೆ ಜಾಗೃತಿ ವಹಿಸಲು ಸಲಹೆ ನೀಡಿದ್ದಾರೆ. ವಯಸ್ಸಾಗಿದೆ, ಆರೋಗ್ಯ ಸಮಸ್ಯೆಗಳ ಕಡೆ ಹೆಚ್ಚು ನಿಗಾವಹಿಸಿ. ಕೊರೊನಾ ಸಂಧರ್ಭದಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಮೋದಿ ಹೇಳಿದ್ದಾರೆ. ಇದನ್ನು ಕಂಡು ಬಿಎಸ್‍ವೈ ಭಾವುಕರಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

    ಕೊರೊನಾದಿಂದ ಸಾವನ್ನಪ್ಪಿದ ರಾಜ್ಯಸಭಾ ಸದಸ್ಯ ಅಶೋಕ್ ಗಸ್ತಿ ವಿಚಾರ ಪ್ರಸ್ತಾಪಿಸಿ ಬೇಸರ ವ್ಯಕ್ತಪಡಿಸಿರುವ ಮೋದಿ, ವಿಡಿಯೋ ಕಾನ್ಫರೆನ್ಸ್ ಮೂಲಕವೇ ಸಭೆ ನಡೆಸಲು ಸೂಚನೆ ನೀಡಿದ್ದಾರೆ. ಇವರ ಜೊತೆಗೆ ಹಲವು ಕೇಂದ್ರ ಸಚಿವರು ಕೂಡ ಫೋನ್ ಮೂಲಕವೇ ಬೇಡಿಕೆಗಳು ತಿಳಿಸಿ. ಪ್ರಯಾಣ ಮಾಡಬೇಡಿ ಎಂದು ಸಲಹೆ ನೀಡಿದ್ದಾರೆ. ಕೇಂದ್ರ ನಾಯಕರ ಕಾಳಜಿಯನ್ನು ಕಂಡು ಬಿಎಸ್‍ವೈಯವರು ಭಾವುಕರಾಗಿದ್ದಾರೆ ಎನ್ನಲಾಗಿದೆ.