Tag: ಕಾಳಜಿ ಕೇಂದ್ರ

  • ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ – ಕಾಳಜಿ ಕೇಂದ್ರ ತೆರೆದ ಜಿಲ್ಲಾಡಳಿತ

    ಉತ್ತರಕನ್ನಡ ಜಿಲ್ಲೆಯಲ್ಲಿ ಮಳೆಯ ಅವಾಂತರ – ಕಾಳಜಿ ಕೇಂದ್ರ ತೆರೆದ ಜಿಲ್ಲಾಡಳಿತ

    ಕಾರವಾರ : ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಮಳೆಯ (Rain) ಅಬ್ಬರ ಇಂದು ಸಹ ಮುಂದುವರೆದಿದೆ. ಇದರಿಂದಾಗಿ ಕರಾವಳಿ (Karavali) ಭಾಗದ ತಗ್ಗು ಪ್ರದೇಶದಲ್ಲಿ ನೀರು ನುಗ್ಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ.

    ಕಾರವಾರ ತಾಲೂಕಿನ ಬಿಣಗಾ, ಅರಗಾ ಭಾಗದಲ್ಲಿ ಗುಡ್ಡದಿಂದ ಹರಿದು ಬಂದ ನೀರು ಹೆದ್ದಾರಿ ಮತ್ತು ಮನೆಗಳಿಗೆ ನುಗ್ಗಿದೆ. ಬಿಣಗಾದಲ್ಲಿ ಮೂಡಲಮಕ್ಕಿ ಗ್ರಾಮದ ಸೇತುವೆ ಮುಳುಗಿ 300 ಮನೆಗಳಿಗೆ ಸಂಪರ್ಕ ಕಡಿತವಾಗಿದೆ. ಅರಗಾದ ನೌಕಾ ನೆಲೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೀರು ತುಂಬಿ ನೌಕಾ ನೆಲೆಯ ಹೆದ್ದಾರಿ ಪ್ರದೇಶ ಸಂಪೂರ್ಣ ಜಲಾವೃತವಾಗಿ ವಾಹನ ಸವಾರರು ಪರದಾಡುವಂತಾಗಿದೆ. ಕಾರವಾರದ ನೌಕಾನೆಲೆ ಭಾಗದ ಬೈತಕೋಲಿನಲ್ಲಿ ಗುಡ್ಡ ಕುಸಿತವಾಗಿದೆ. ನಗರದ ಪದ್ಮನಾಭ ನಗರ, ಕಾಯ್ಕಿಣಿ ರಸ್ತೆಯಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿ ಲಕ್ಷಾಂತರ ಮೌಲ್ಯದ ವಸ್ತುಗಳು ನಾಶವಾಗಿದೆ. ಇದನ್ನೂ ಓದಿ: ಭಾರೀ ಮಳೆಗೆ ತುಂಗಾ ಜಲಾಶಯ ಭರ್ತಿ

    ಜಿಲ್ಲೆಯ ಕುಮಟಾದ ಹಂದಿಗೋಣ ಭಾಗದಲ್ಲಿ ಅಘನಾಶಿನಿ ನದಿಯಲ್ಲಿ ಪ್ರವಾಹವುಂಟಾಗಿದ್ದು, ಹಲವು ಮನೆಗಳಿಗೆ ನೀರು ನುಗ್ಗಿದೆ. ಈ ಹಿನ್ನಲೆಯಲ್ಲಿ ಕುಮಟಾದ ಹಂದಿಗೋಣ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಳಜಿ ಕೇಂದ್ರವನ್ನು (Care Center) ಜಿಲ್ಲಾಡಳಿತ ತೆರೆದಿದ್ದು, 6 ಜನ ಸಂತ್ರಸ್ಥರನ್ನು ಕಾಳಜಿ ಕೇಂದ್ರಕ್ಕೆ ರವಾನೆ ಮಾಡಲಾಗಿದೆ. ಇದನ್ನೂ ಓದಿ: ಹಾಸನ ಜಿಲ್ಲೆಗೆ ಮುಂಗಾರು ಆಗಮನ- ಜಿಲ್ಲೆಯ ಹಲವೆಡೆ ಹಾನಿ

    ಭಟ್ಕಳದ ರಂಗಿನಕಟ್ಟಾ ಸರ್ಕಲ್ ಬಳಿ ರಾಷ್ಟ್ರೀಯ ಹೆದ್ದಾರಿ 66 ಜಲಾವೃತವಾಗಿದ್ದು, ವಾಹನ ಸಂಚಾರ ಸ್ತಬ್ದವಾಗಿದೆ. ಇನ್ನು ಗಾಳಿ ಮಳೆಗೆ ಭಟ್ಕಳದ ಶಿರಾಲಿಯ ಬೇಳೂರ್ ಬಾಯರ್ ಫ್ಯಾಕ್ಟರಿಯ ಮೇಲ್ಚಾವಣಿಯ ಶೀಟುಗಳು ಹಾರಿಹೋಗಿ ಮಳೆ ನೀರು ಯಂತ್ರೋಪಕರಣಗಳ ಮೇಲೆ ಬಿದ್ದು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಇದಲ್ಲದೇ ಭಟ್ಕಳ ತಾಲೂಕಿನ ಹೆದ್ದಾರಿ ಭಾಗದ ತಗ್ಗು ಪ್ರದೇಶಕ್ಕೆ ನೀರು ನುಗ್ಗಿದ್ದು, ಹಲವು ಮನೆಗಳು ಜಲಾವೃತವಾಗಿ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದನ್ನೂ ಓದಿ: ದೆಹಲಿಗೆ ಮಾನ್ಸೂನ್ ಎಂಟ್ರಿ- ರಾಷ್ಟ್ರ ರಾಜಧಾನಿ ಕೂಲ್ ಕೂಲ್

    ಇನ್ನು ಹೊನ್ನಾವರದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಶರಾವತಿ ತೀರದಲ್ಲಿ ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ. ಗುಂಡ್ಲಬಾಳದ ತಗ್ಗು ಪ್ರದೇಶದಲ್ಲಿ ನೀರು ನುಗ್ಗಿದ್ದು, ತೋಟಗಳು ಜಲಾವೃತವಾಗಿದೆ. ಭಾರೀ ಮಳೆಯ ಹಿನ್ನೆಲೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ನೀಡಲಾಗಿದ್ದು, ಶಾಲಾ ಕಾಲೇಜುಗಳಿಗೆ ರಜೆ (Holiday) ನೀಡಲಾಗಿದೆ. ಇನ್ನೂ ಮೂರು ದಿನ ಕರಾವಳಿ ಭಾಗದಲ್ಲಿ ಮಳೆ ಮುಂದುವರೆಯಲಿದ್ದು, ನದಿ ಪಾತ್ರದ ಜನರು ಬೇರಡೆ ಸ್ಥಳಾಂತರಗೊಳ್ಳಲು ಜಿಲ್ಲಾಡಳಿತ ಸೂಚನೆ ನೀಡಿದೆ. ಇದನ್ನೂ ಓದಿ: ಇಂದಿನಿಂದ 4 ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಳೆ ಹೆಚ್ಚಾದ್ರೆ ಸೂಕ್ಷ್ಮ ಪ್ರದೇಶದ ಸಾವಿರಾರು ಜನ ಕಾಳಜಿ ಕೇಂದ್ರಕ್ಕೆ ಶಿಫ್ಟ್- ಎಲ್ಲರಿಗೂ ವ್ಯಾಕ್ಸಿನ್

    ಮಳೆ ಹೆಚ್ಚಾದ್ರೆ ಸೂಕ್ಷ್ಮ ಪ್ರದೇಶದ ಸಾವಿರಾರು ಜನ ಕಾಳಜಿ ಕೇಂದ್ರಕ್ಕೆ ಶಿಫ್ಟ್- ಎಲ್ಲರಿಗೂ ವ್ಯಾಕ್ಸಿನ್

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಎಡಬಿಡದೆ ಮಳೆ ಸುರಿಯುತ್ತಿದೆ. ಮಳೆ ಹೀಗೆ ಮುಂದುವರಿದಲ್ಲಿ ಜಿಲ್ಲೆಯಲ್ಲಿ ಅಪಾಯ ಎದುರಾಗುವ ಸಾಧ್ಯತೆ ಇದೆ. ಒಂದೆಡೆ ಪ್ರವಾಹ, ಮತ್ತೊಂದೆಡೆ ಭೂಕುಸಿತದಂತಹ ಘಟನೆಗಳು ನಡೆಯಬಹುದು. ಹೀಗಾಗಿ ಜಿಲ್ಲಾಡಳಿತ ಪ್ರವಾಹ ಮತ್ತು ಭೂಕುಸಿತ ಎದುರಾಗುವಂತಹ ಪ್ರದೇಶಗಳ ಜನರನ್ನು ಸ್ಥಳಾಂತರ ಮಾಡುವುದಕ್ಕೆ ನಿರ್ಧರಿಸಿದೆ. ಅಷ್ಟೇ ಅಲ್ಲದೇ ಕಾಳಜಿ ಕೇಂದ್ರಗಳನ್ನು ತೆರೆದಿದ್ದು, ಸೂಕ್ಷ್ಮ ಪ್ರದೇಶದ ಸಾವಿರಾರು ಜನರಿಗೆ ವ್ಯಾಕ್ಸಿನ್ ಸಹ ಹಾಕಿಸಲು ತಯಾರಿ ನಡೆಸಿದೆ.

    ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಪ್ರವಾಹ ಮತ್ತು ಭೂಕುಸಿತಕ್ಕೆ ತುತ್ತಾಗುತ್ತಿದ್ದ ಪ್ರದೇಶಗಳು ಸೇರಿದಂತೆ ಈ ಬಾರಿ ಜಿಲ್ಲೆಯಲ್ಲಿ 77 ಗ್ರಾಮಗಳು ಪ್ರವಾಹ ಮತ್ತು ಭೂಕುಸಿತಕ್ಕೆ ನಲುಗುವ ಸಾಧ್ಯತೆ ಇದೆಯಂತೆ. ಇಷ್ಟು ಗ್ರಾಮಗಳ 2,800 ಮನೆಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ ಎಂದು ಜಿಲ್ಲಾಡಳಿತ ಈಗಾಗಲೇ ಅಂದಾಜಿಸಿದೆ. ಹೀಗಾಗಿ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳ್ಳಬೇಕು ಎಂದು ಅಷ್ಟೂ ಕುಟುಂಬಗಳಿಗೆ ಜಿಲ್ಲಾಡಳಿತ ಈಗಾಗಲೇ ನೋಟಿಸ್ ಜಾರಿ ಮಾಡಿದೆ. ದೂರದ ಸ್ಥಳಗಳಲ್ಲಿ ಕಾಳಜಿ ಕೇಂದ್ರಗಳನ್ನು ತೆರೆದರೆ ಜನರು ಹೋಗಲು ಹಿಂದೇಟು ಹಾಕುತ್ತಾರೆ. ಜೊತೆಗೆ ಸ್ಥಳಾಂತರದ ಕೆಲಸವೂ ಕಷ್ಟಕರವಾಗುತ್ತದೆ. ಈ ಎಲ್ಲ ದೃಷ್ಟಿಯಿಂದ ಆಯಾ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಕಾಳಜಿ ಕೇಂದ್ರ ತೆರೆಯಲಾಗುವುದು ಎಂದು ಜಿಲ್ಲಾಡಳಿತ ಹೇಳಿದೆ.

    ಈ ಹಿನ್ನೆಲೆಯಲ್ಲಿ ವಿರಾಜಪೇಟೆ ಪಟ್ಟಣದ ಅಯ್ಯಪ್ಪ ಬೆಟ್ಟ ಮತ್ತು ನೆಹರು ನಗರದ ಒಟ್ಟು 66 ಕುಟುಂಬಗಳ ಜನರನ್ನು ಸ್ಥಳಾಂತರ ಮಾಡಬೇಕಾಗಿದ್ದು, ಅವರಿಗೂ ವಿರಾಜಪೇಟೆ ಪಟ್ಟಣ ಪಂಚಾಯಿತಿಯಿಂದ ವ್ಯಾಕ್ಸಿನ್ ವಿತರಣೆ ಮಾಡಲಾಗುತ್ತಿದೆ. ಮಳೆ ಅರ್ಭಟ ಹೆಚ್ಚಾದರೆ ಸ್ಥಳೀಯ ಶಾಲೆಗಳಲ್ಲಿ ಕಾಳಜಿ ಕೇಂದ್ರ ತೆಗೆಯಲು ಪಟ್ಟಣ ಪಂಚಾಯತಿಯ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಂಡಿದ್ದಾರೆ.

    ಮಡಿಕೇರಿ ನಗರಸಭೆ ಸಹ ಕಾಳಜಿ ಕೇಂದ್ರ ತೆರೆಯಲು ಈಗಾಗಲೇ ಸ್ಥಳ ಗುರುತು ಮಾಡಿದೆ. ನಗರದ ಇಂದಿರಾ ನಗರ, ಚಾಮುಂಡೇಶ್ವರಿ ನಗರ, ಮಂಗಳಾದೇವಿ ನಗರ ಮತ್ತು ಮಲ್ಲಿಕಾರ್ಜುನ ನಗರ ಸೇರಿದಂತೆ ಒಂದು ಸಾವಿರಕ್ಕೂ ಹೆಚ್ಚು ಜನರಿಗೆ ಈ ಬಾರಿ ಮಳೆಯಿಂದ ಸಾಕಷ್ಟು ಸಮಸ್ಯೆ ಅಗಬಹುದು ಎಂದು ಅಂದಾಜಿಸಲಾಗಿದೆ. ಹೀಗಾಗಿ ಈಗಾಗಲೇ ಕಾಳಜಿ ಕೇಂದ್ರಗಳನ್ನು ತೆರೆಯಲು ನಗರದ ಅಂಬೇಡ್ಕರ್ ಭವನ ನಗರದ ಸಭೆಯ ಶಾಲೆ ಕಾಲೇಜಿನ ಹಾಸ್ಟೆಲ್ ಗಳನ್ನು ಗುರುತು ಮಾಡಿದೆ. ಕಾಳಜಿ ಕೇಂದ್ರಕ್ಕೆ ಬರುವವರಿಗೆ ವ್ಯಾಕ್ಸಿನ್ ನೀಡಲಾಗುತ್ತಿದೆ.

  • ಕಾಳಜಿ ಕೇಂದ್ರದಲ್ಲಿ ಹಸಿವು, ಜ್ವರದಿಂದ ಬಳಲಿ ಬಾಲಕ ಸಾವು?

    ಕಾಳಜಿ ಕೇಂದ್ರದಲ್ಲಿ ಹಸಿವು, ಜ್ವರದಿಂದ ಬಳಲಿ ಬಾಲಕ ಸಾವು?

    ಬೆಳಗಾವಿ: ಕಳೆದ ತಿಂಗಳು ಜಿಲ್ಲೆಯಲ್ಲಿ ಉಂಟಾದ ಪ್ರವಾಹದಿಂದ ಮನೆ ಕಳೆದುಕೊಂಡು ಪೋಷಕರೊಂದಿಗೆ ಕಾಳಜಿ ಕೇಂದ್ರದಲ್ಲಿದ್ದ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ರಾಮದುರ್ಗ ತಾಲೂಕಿನ ಸುರೇಬಾನ್ ಗ್ರಾಮದಲ್ಲಿ  ನಡೆದಿದೆ.

    ದೊಡ್ಡ ಹಂಪಿಹೊಳಿ ಗ್ರಾಮದ ಅಬ್ದುಲ್ ಸಾಬ್(5) ಮೃತಪಟ್ಟ ಬಾಲಕ. ಪ್ರವಾಹಕ್ಕೆ ದೊಡ್ಡ ಹಂಪಿಹೊಳಿ ಗ್ರಾಮದಲ್ಲಿದ್ದ ಅಬ್ದುಲ್‍ನ ಮನೆ ಬಿದ್ದಿರುವ ಹಿನ್ನೆಲೆಯಲ್ಲಿ ಬಾಲಕನ ಕುಟುಂಬ ಕಳೆದ ಒಂದು ತಿಂಗಳಿಂದ ಎಪಿಎಂಸಿ ಆವರಣದಲ್ಲಿ ಆಶ್ರಯ ಪಡೆದುಕೊಂಡಿತ್ತು. ಇಲ್ಲಿ ಸರಿಯಾದ ಆಹಾರ ಸಿಗುತ್ತಿರಲಿಲ್ಲ. ಅಲ್ಲದೆ ಬಾಲಕನಿಗೆ ಜ್ವರ ಕೂಡ ಬಂದಿತ್ತು. ಆದರೆ ಸರಿಯಾದ ಚಿಕಿತ್ಸೆ ಸಿಗದ ಪರಿಣಾಮ ಜ್ವರ ಹೆಚ್ಚಾಗಿ ಬಾಲಕ ಸಾವನ್ನಪ್ಪಿದ್ದಾನೆ ಎಂದು ಬಾಲಕನ ಪೋಷಕರು ಆರೋಪಿಸಿದ್ದಾರೆ.

    ಈ ಬಗ್ಗೆ ಅಲ್ಲಿನ ತಹಶೀಲ್ದಾರ್ ಮಾತನಾಡಿ ಮಗು ಹಸಿವಿನಿಂದ ಸಾವನ್ನಪ್ಪಿಲ್ಲ ಎಂದು ಆರೋಪವನ್ನು ತಳ್ಳಿಹಾಕಿದ್ದಾರೆ. ಕಾಳಜಿ ಕೇಂದ್ರಕ್ಕೆ ಸೋಮವಾರ ಸ್ವತಃ ನಾನೇ ಭೇಟಿ ಕೊಟ್ಟಿದ್ದೆ. ರಾತ್ರಿ ಅಲ್ಲಿ ಇದ್ದ ನಿರಾಶ್ರಿತರೆಲ್ಲರೂ ಊಟ ಮಾಡಿದ ಬಳಿಕವೇ ನಾನು ವಾಪಸ್ ಹೋದೆ. ಈ ಬಾಲಕ ಸಾವನ್ನಪ್ಪಿದ್ದು ಹಸಿವಿನಿಂದ ಅಲ್ಲ. ಆತನಿಗೆ ಜ್ವರ ಬಂದಿತ್ತು, ಆತನನ್ನು ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆಯನ್ನೂ ಕೊಡಿಸಿದ್ದೆವು. ಆದರೂ ಜ್ವರ ನಿಯಂತ್ರಣಕ್ಕೆ ಬಾರದೇ, ಹೆಚ್ಚಾಗಿ ನೆತ್ತಿಗೆ ಏರಿದ್ದರಿಂದ ಬಾಲಕ ಸಾವನ್ನಪ್ಪಿದ್ದಾನೆ. ಒಂದು ವೇಳೆ ಕಾಳಜಿ ಕೇಂದ್ರದಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ, ಜಿಲ್ಲಾಧಿಕಾರಿಗಳಿಗೆ ತಿಳಿಸಿ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.

    ಪ್ರವಾಹ ಉಂಟಾಗಿ ಮನೆಮಠ ಕಳೆದುಕೊಂಡು ಜನರು ಕಳೆದ ಒಂದು ತಿಂಗಳಿನಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಸರ್ಕಾರ ನಿರಾಶ್ರಿತರಿಗೆ ಸರಿಯಾಗಿ ಮನೆಯ ವ್ಯವಸ್ಥೆ ಮಾಡಿಕೊಟ್ಟಿಲ್ಲ, ಜೊತೆಗೆ ಅವರಿಗೆ ಯಾವುದೇ ರೀತಿಯ ಸೌಲಭ್ಯವೂ ದೊರಕುತ್ತಿಲ್ಲ. ಹೀಗಿರುವಾಗ ಸಂತ್ರಸ್ತರು ಬದುಕು ಕಟ್ಟಿಕೊಳ್ಳುವುದು ಹೇಗೆ? ಹೀಗೆ ಹಸಿವು, ಜ್ವರಕ್ಕೆ ಸಂತ್ರಸ್ತರು ಬಲಿಯಾಗುತ್ತಿದ್ದರೆ ಇದಕ್ಕೆಲ್ಲಾ ಯಾರು ಹೊಣೆ? ಪರಿಹಾರ ನೀಡಬೇಕಿದ್ದ ಸರ್ಕಾರ ಯಾಕೆ ಸಂತ್ರಸ್ತರ ನೆರವಿಗೆ ಬರುತ್ತಿಲ್ಲ ಎಂದು ಜನರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

    ಸಿಎಂ ಯಡಿಯೂರಪ್ಪ ಅವರು ಬೆಳಗಾವಿ ಜಿಲ್ಲಾ ಪ್ರವಾಸದಲ್ಲಿದ್ದು, ಇಂದು ಎಪಿಎಂಸಿಯ ಕಾಳಜಿ ಕೇಂದ್ರ ಭೇಟಿ ನೀಡಲಿದ್ದಾರೆ. ಅಲ್ಲದೆ ಕಾಳಜಿ ಕೇಂದ್ರದಲ್ಲಿ ಬಾಲಕನ ಸಾವಿನ ಬಗ್ಗೆ ತಿಳಿದು ಮೃತನ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಭರವಸೆ ಕೊಟ್ಟಿದ್ದಾರೆ.

    https://www.youtube.com/watch?v=Bts1dZ54X1Q