Tag: ಕಾಳಿ ದೇವಿ

  • ಕಾಳಿ ದೇವಿಗೆ ಅವಮಾನ – ಭಾರೀ ಆಕ್ರೋಶದ ಬಳಿಕ ಕ್ಷಮೆ ಕೇಳಿದ ಉಕ್ರೇನ್

    ಕಾಳಿ ದೇವಿಗೆ ಅವಮಾನ – ಭಾರೀ ಆಕ್ರೋಶದ ಬಳಿಕ ಕ್ಷಮೆ ಕೇಳಿದ ಉಕ್ರೇನ್

    ಕೀವ್: ಉಕ್ರೇನ್‌ನ ರಕ್ಷಣಾ ಸಚಿವಾಲಯ (Ukraine Defense Ministry) ಹಿಂದೂ ದೇವತೆ ಕಾಳಿಯನ್ನು (Kali) ವಿಕೃತವಾಗಿ ಚಿತ್ರಿಸಿ ಅದನ್ನು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಕ್ಕೆ ಭಾರತ (India) ಹಾಗೂ ಹಿಂದೂ (Hindu) ಸಮುದಾಯದಿಂದ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ವಿವಾದಿತ ಕಾಳಿ ದೇವಿಯ ಚಿತ್ರವನ್ನು ಹಂಚಿಕೊಂಡಿದ್ದಕ್ಕೆ ಉಕ್ರೇನ್‌ನ ಉಪ ವಿದೇಶಾಂಗ ಸಚಿವೆ ಎಮಿನ್ ಝಾಪರೋವಾ (Emine Dzhaparova) ಕ್ಷಮೆ ಕೇಳಿದ್ದಾರೆ.

    ಕಾಳಿ ದೇವಿಯನ್ನು ಈ ರೀತಿಯಾಗಿ ಚಿತ್ರಿಸಿರುವುದಕ್ಕೆ ಉಕ್ರೇನ್ ವಿಷಾದಿಸುತ್ತದೆ. ಯುರೋಪಿಯನ್ ದೇಶ ಭಾರತದ ವಿಶಿಷ್ಟ ಸಂಸ್ಕೃತಿಯನ್ನು ಗೌರವಿಸುತ್ತದೆ. ಭಾರತದ ಸಹಾಯವನ್ನು ಪ್ರಶಂಸಿಸುತ್ತದೆ ಎಂದು ತಿಳಿಸಿದ್ದಾರೆ.

    ಏಪ್ರಿಲ್ 30 ರಂದು ಉಕ್ರೇನ್‌ನ ರಕ್ಷಣಾ ಸಚಿವಾಲಯ ‘ವರ್ಕ್ ಆಫ್ ಆರ್ಟ್’ ಎಂಬ ಶೀರ್ಷಿಕೆಯೊಂದಿಗೆ ಕಾಳಿ ದೇವಿಯನ್ನು ಹೋಲುವ ಚಿತ್ರವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿತ್ತು. ಸ್ಫೋಟದ ಹೊಗೆಯಲ್ಲಿ ಹಾಗೂ ಅಮೆರಿಕದ ನಟಿ ಮರ್ಲಿನ್ ಮನ್ರೋ ಅವರ ‘ಫ್ಲೈಯಿಂಗ್ ಸ್ಕರ್ಟ್’ ಭಂಗಿಯಲ್ಲಿ ದೇವಿಯನ್ನು ಹೋಲುವ ಚಿತ್ರವನ್ನು ಬರೆಯಲಾಗಿತ್ತು. ಈ ಚಿತ್ರವನ್ನು ಉಕ್ರೇನ್‌ನ ಕಲಾವಿದ ಮ್ಯಾಕ್ಸಿಮ್ ಪಲೆಂಕೊ ಅವರು ರಚಿಸಿದ್ದರು. ಇದನ್ನೂ ಓದಿ: ಎಆರ್ ರೆಹಮಾನ್ ಸಂಗೀತ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಿದ ಪುಣೆ ಪೊಲೀಸರು

    ಈ ಚಿತ್ರವನ್ನು ಉಕ್ರೇನ್‌ನ ರಕ್ಷಣಾ ಸಚಿವಾಲಯ ಪೋಸ್ಟ್ ಮಾಡಿದ ಬಳಿಕ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ಆಕ್ರೋಶ ಉಂಟಾಗಿತ್ತು. ಟ್ವಿಟ್ಟರ್ ಬಳಕೆದಾರರು ಕಾಳಿ ದೇವಿಗೆ ಅವಮಾನ ಮಾಡಲಾಗಿದೆ. ಭಾರತೀಯರು ಹಾಗೂ ಹಿಂದೂ ಭಾವನೆಗಳಿಗೆ ಧಕ್ಕೆಯುಂಟಾಗಿದೆ ಎಂದು ಕಿಡಿಕಾರಿದ್ದರು.

    ವಿವಾದಿತ ಕಾಳಿ ದೇವಿಯನ್ನು ಹೋಲುವ ಚಿತ್ರವನ್ನು ಅಳಿಸಬೇಕೆಂಬ ಒತ್ತಾಯದ ಬಳಿಕ ಸಚಿವಾಲಯ ತನ್ನ ಟ್ವೀಟ್ ಅನ್ನು ಅಳಿಸಿ ಕ್ಷಮೆ ಕೇಳಿದೆ. ಇದನ್ನೂ ಓದಿ: ಕಾಂಗ್ರೆಸ್ಸಿಗರು ವೋಟ್‌ ಕೇಳೋಕೆ ಬಂದ್ರೆ ʻನಾಯಿ ಬಿಡ್ತೀವಿʼ ಭಜರಂಗದಳ ಎಚ್ಚರಿಕೆ

  • ಕಾಳಿ ದೇವಿ ಪಾದದ ಕೆಳಗೆ ವ್ಯಕ್ತಿಯ ತಲೆ ಬುರುಡೆ!

    ಕಾಳಿ ದೇವಿ ಪಾದದ ಕೆಳಗೆ ವ್ಯಕ್ತಿಯ ತಲೆ ಬುರುಡೆ!

    ಹೈದರಾಬಾದ್: ಕಾಳಿ ದೇವಿ ವಿಗ್ರಹದ ಪಾದದ ಕೆಳಗೆ ವ್ಯಕ್ತಿಯೊಬ್ಬನ ತಲೆ ಬುರುಡೆ ಪತ್ತೆಯಾಗಿರುವ ಆಘಾತಕಾರಿ ಘಟನೆ ತೆಲಂಗಾಣದಲ್ಲಿ ನಡೆದಿದೆ.

    ನಿನ್ನೆ ತೆಲಂಗಾಣದ ರಸ್ತೆ ಬದಿಯಲ್ಲಿ ಇದ್ದ ಕಾಳಿ ದೇವಿ ವಿಗ್ರಹದ ಪಾದದ ಕೆಳಗೆ ವ್ಯಕ್ತಿಯೊಬ್ಬನ ತಲೆ ಬುರುಡೆಯನ್ನು ಮೊದಲು ಅರ್ಚಕರು ನೋಡಿದ್ದಾರೆ. ನಂತರ ಈ ಕುರಿತು ಅರ್ಚಕರು ಪೊಲೀಸರಿಗೆ ಮಾಹಿತಿ ನೀಡಿದ್ದು ತಕ್ಷಣ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಪ್ರಸ್ತುತ ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಆರೋಗ್ಯ ಇಲಾಖೆ ಸಿಬ್ಬಂದಿಗೆ ಕೂಡಲೇ ಸಂಬಳ ಬಿಡುಗಡೆ ಮಾಡಿ: ಹಾಲಪ್ಪ ಆಚಾರ್ ತರಾಟೆ

    ಈ ದೃಶ್ಯವನ್ನು ನೋಡಿದ ಗ್ರಾಮಸ್ಥರು ಅಚ್ಚರಿಗೊಂಡಿದ್ದು, ದೇವಿ ಪಾದದ ಬಳಿ ಇರುವ ವ್ಯಕ್ತಿ ಯಾರು ಎಂಬುದು ಇನ್ನೂ ತಿಳಿದುಬಂದಿಲ್ಲ. ಈ ಹಿನ್ನೆಲೆ ಮೃತ ವ್ಯಕ್ತಿಯ ಗುರುತನ್ನು ತಿಳಿದುಕೊಳ್ಳಲು ಪೊಲೀಸರು ಸೋಶಿಯಲ್ ಮೀಡಿಯಾದ ಫೋಟೋವನ್ನು ಶೇರ್ ಮಾಡಿದ್ದಾರೆ.

    ಪರಿಣಾಮ ಫೋಟೋ ನೋಡಿ ಸೂರ್ಯಪೇಟೆಯ ಕುಟುಂಬವೊಂದು ಪೊಲೀಸರನ್ನು ಸಂರ್ಪಕಿಸಿದೆ. ಫೋಟೋ ನೋಡಿದರೆ ನಮ್ಮ ಮನೆಯವನು ಎಂದು ಅನಿಸುತ್ತಿದೆ. ನಮ್ಮ ಕುಟುಂಬದಲ್ಲಿ 2 ವರ್ಷಗಳ ಹಿಂದೆ 30 ವರ್ಷದ ಮಾನಸಿಕ ಅಸ್ವಸ್ಥ ಕಾಣೆಯಾಗಿದ್ದನು. ಈ ಫೋಟೋ ನೋಡಿದರೆ ಇವನು ನಮ್ಮ ಕುಟುಂಬದವನಂತೆ ಕಾಣಿಸುತ್ತಿದ್ದಾನೆ ಎಂದು ಪೊಲೀಸರಿಗೆ ಕುಟುಂಬದವರು ತಿಳಿಸಿದ್ದಾರೆ.

    ಈ ಕುರಿತು ಮಾತನಾಡಿದ ದೇವರಕೊಂಡದ ಉಪ ಪೊಲೀಸ್ ವರಿಷ್ಠಾಧಿಕಾರಿ ಆನಂದರೆಡ್ಡಿ, ಸುಮಾರು 30ರ ಆಸುಪಾಸಿನ ವ್ಯಕ್ತಿಯನ್ನು ಬೇರೆಡೆ ಹತ್ಯೆಗೈದು ತಲೆಯನ್ನು ವಿಗ್ರಹದ ಪಾದದ ಕೆಳಗೆ ಹಿಟ್ಟಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ಈ ಕುರಿತು ಎಲ್ಲ ಆಯಾಮಗಳಲ್ಲಿ ನಾವು ತನಿಖೆ ಮಾಡುತ್ತೇವೆ. ಈ ಕೃತ್ಯವನ್ನು ಭೇದಿಸಲು 8 ತಂಡವನ್ನು ರಚಿಸಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.

    ಮೃತ ವ್ಯಕ್ತಿಯ ಶವವನ್ನು ಇನ್ನೂ ಪತ್ತೆ ಮಾಡಲಾಗಿಲ್ಲ. ಈ ಕುರಿತು ಹೆಚ್ಚಿನ ಮಾಹಿತಿ ತಿಳಿದುಕೊಳ್ಳಲು ಸಿಸಿಟಿವಿ ಕ್ಯಾಮೆರಾಗಳಿಂದ ದೃಶ್ಯಗಳನ್ನು ಸ್ಕ್ಯಾನ್ ಮಾಡಲಾಗುತ್ತಿದೆ ಎಂದು ಹೇಳಿದರು. ಇದನ್ನೂ ಓದಿ:  ಮತ್ತೆ ಮೇಕೆದಾಟು ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂ

    ಪ್ರಸ್ತುತ ವಿಗ್ರಹದ ಪಾದದಲ್ಲಿ ತಲೆ ಕತ್ತರಿಸಿರುವ ಭಯಾನಕ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.