Tag: ಕಾವೇರಿ ನದಿ

  • ಭರ್ತಿಯಾಗಿಲ್ಲ KRS – ಈ ಬಾರಿ ಎದುರಾಗಲಿದೆ ನೀರಿಗೆ ಸಮಸ್ಯೆ

    ಭರ್ತಿಯಾಗಿಲ್ಲ KRS – ಈ ಬಾರಿ ಎದುರಾಗಲಿದೆ ನೀರಿಗೆ ಸಮಸ್ಯೆ

    -ಬಸವರಾಜ ಬೊಮ್ಮಯಿ ಅವರಿಗಿಲ್ಲ ಬಾಗಿನ ಬಿಡುವ ಭಾಗ್ಯ

    ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಹಿಂಗಾರು ಹಾಗೂ ಮುಂಗಾರು ಮಳೆ ಬೀಳದ ಕಾರಣ ಹಳೇ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್​ಎಸ್ ಜಲಾಶಯ ಈ ಬಾರಿ ಭರ್ತಿಯಾಗಿಲ್ಲ. ಹೀಗಾಗಿ ಬೇಸಿಗೆಗಾಲದಲ್ಲಿ ಬೆಂಗಳೂರು, ಮೈಸೂರು, ಮಂಡ್ಯ ಭಾಗದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ನೀರನ್ನು ಹಿತ-ಮಿತವಾಗಿ ಬಳಕೆ ಮಾಡಬೇಕಾಗಿದೆ.

    KRS Dam

    ಪ್ರತಿ ವರ್ಷ ಹಳೆ ಮೈಸೂರು ಭಾಗದ ಜೀವನಾಡಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿರುವ ಕೆಆರ್​ಎಸ್ ಜಲಾಶಯ ಭರ್ತಿಯಾಗಿ, ರೈತರಲ್ಲಿ ಹಾಗೂ ಜನರಲ್ಲಿ ನೆಮ್ಮದಿಯನ್ನುಂಟು ಮಾಡುತ್ತಿತ್ತು. ಆದರೆ ಈ ಬಾರಿ ನಿರೀಕ್ಷಿತ ಪ್ರಮಾಣದಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಹಾಗೂ ಮುಂಗಾರು ಮಳೆಯಾಗದ ಕಾರಣ ಸದ್ಯ ಕೆಆರ್​ಎಸ್ ಜಲಾಶಯ ಭರ್ತಿಯಾಗಿಲ್ಲ. ಅಲ್ಲದೇ ಪ್ರತಿವರ್ಷ ತಮಿಳುನಾಡಿಗೆ 177 ಟಿಎಂಸಿ ಅಷ್ಟು ನೀರನ್ನು ಹರಿಸಬೇಕು, ಸದ್ಯ ಇಲ್ಲಿಯವರೆಗೆ ತಮಿಳುನಾಡಿಗೆ 80 ಟಿಎಂಸಿ ನೀರನ್ನು ಮಾತ್ರ ಬಿಡಲಾಗಿದೆ. ಸದ್ಯ 124.80 ಅಡಿ ಇರುವ ಕೆಆರ್​ಎಸ್ ಜಲಾಶಯದಲ್ಲಿ 115.92 ಅಡಿ ಮಾತ್ರ ನೀರಿದೆ. ಟಿಎಂಸಿ ಲೆಕ್ಕಾಚಾರದಲ್ಲಿ ಹೇಳುವುದಾದರೆ ಕೆಆರ್​ಎಸ್ ಜಲಾಶಯ ಸಾಮರ್ಥ್ಯ 49.452 ಟಿಎಂಸಿಯಷ್ಟು ಇದ್ದರೆ, ಈಗ 38.107 ಟಿಎಂಸಿಯಷ್ಟು ಮಾತ್ರ ನೀರು ಸಂಗ್ರಹವಾಗಿದೆ. ಈಗ ಇರುವ 38.107 ಟಿಎಂಸಿ ನೀರಿನಲ್ಲಿ ಬೆಳೆಗಳಿಗೆ ನೀರು, ಕುಡಿಯುವ ನೀರು ಹಾಗೂ ತಮಿಳುನಾಡಿಗೆ ಬಿಡಬೇಕಾದ ಕೋಟಾವನ್ನು ಮ್ಯಾನೇಜ್ ಮಾಡಬೇಕಿದೆ. ಸದ್ಯ ಕೆಆರ್‌ಎಸ್‌ಗೆ ಒಳನೀರಿನ ಪ್ರಮಾಣ 5,097 ಕ್ಯೂಸೆಕ್ ಇದ್ದು, ನಿತ್ಯ 10 ಸಾವಿರಕ್ಕೂ ಹೆಚ್ಚು ಕ್ಯೂಸೆಕ್ ನೀರನ್ನು ಹರಿ ಬಿಡಲಾಗುತ್ತಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಛತ್ತೀಸ್‍ಗಢದ ಬಿಜೆಪಿ ಮಾಜಿ MLA ನಿಧನ

    KRS Dam

    ಪ್ರತಿ ವರ್ಷ ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದ ಕಾರಣ, ಮುಂಗಾರು ಮಳೆ ಮುಗಿಯುವ ಹೊತ್ತಿಗೆ ತಮಿಳುನಾಡಿನ ಮುಕ್ಕಾಲು ಭಾಗದ ಕೋಟಾವನ್ನು ಮುಗಿಸಲಾಗುತ್ತಿತ್ತು. ಆದರೆ ಈ ಬಾರಿ ಡ್ಯಾಂ ತುಂಬದ ಕಾರಣ ಇನ್ನೂ ಅರ್ಧದಷ್ಟು ಕೋಟಾವನ್ನು ಮುಗಿಸಲು ಸಾಧ್ಯವಾಗಿಲ್ಲ. ಒಂದು ವೇಳೆ ಮುಂದಿನ ದಿನಗಳಲ್ಲಿ ಮಳೆಯಾಗದೇ ಇದ್ದರೆ, ಡ್ಯಾಂನಲ್ಲಿ ತಮಿಳುನಾಡಿಗೆ ನೀರು ಬಿಡಲು ಸಂಕಷ್ಟ ಸೂತ್ರವನ್ನು ಅನುಸರಿಸಬೇಕಾಗುತ್ತದೆ. ಅಷ್ಟೋತ್ತಿಗೆ ಬೇಸಿಗೆ ಕಾಲ ಆರಂಭವಾಗಲಿದ್ದು, ಆ ವೇಳೆಗೆ ಬೆಂಗಳೂರು, ಮೈಸೂರು, ಮಂಡ್ಯ ಭಾಗಗಳಲ್ಲಿ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ಹೀಗಿನಿಂದಲೇ ಎಚ್ಚೆತ್ತುಕೊಂಡು ನೀರನ್ನು ಹಿತ-ಮಿತವಾಗಿ ಬಳಸುವುದು ಸೂಕ್ತವಾಗಿದೆ. ಇದನ್ನೂ ಓದಿ: ವಿಸರ್ಜನೆ ಸಂಬಂಧ ಜಿಲ್ಲಾಡಳಿತ, ಗಣಪತಿ ಮಂಡಳಿ ನಡುವೆ ಜಟಾಪಟಿ

    KRS Dam

    ಈ ಬಾರಿ ಕೆಆರ್​ಎಸ್ ಜಲಾಶಯ ಭರ್ತಿಯಾಗದ ಕಾರಣ ಕಾವೇರಿ ಮಾತೇಗೆ ಪ್ರತಿವರ್ಷ ಸಿಎಂ ಬಾಗಿನ ನೀಡುವ ಸಂಪ್ರದಾಯ ಏನು ಇತ್ತು ಅದು ಕೂಡ ನೇರವೇರಿಲ್ಲ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಾವೇರಿಗೆ ಬಾಗಿನ ಬಿಡುವ ಭಾಗ್ಯವು ಸಹ ಇಲ್ಲದಂತೆ ಆಗಿದೆ. ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದ ವೇಳೆ 2015 – 2017 ರವರೆಗೆ ಸತತ ಮೂರು ವರ್ಷಗಳ ಕಾಲ ಕೆಆರ್​ಎಸ್ ಜಲಾಶಯ ಭರ್ತಿಯಾಗಿರಲಿಲ್ಲ, ಹೀಗಾಗಿ ಅವರು ಸಹ ಮೂರು ಬಾರಿ ಬಾಗಿನ ನೀಡುವ ಭಾಗ್ಯವನ್ನು ಕಳೆದುಕೊಂಡಿದ್ದರು. ಯಡಿಯೂರಪ್ಪ ಅವರು ಸಿಎಂ ಆಗಿದ್ದ ಅವಧಿಗಳಲ್ಲಿ ಕೆಆರ್​ಎಸ್ ಭರ್ತಿಯಾಗಿದ್ದ ಕಾರಣ ಐದು ಬಾರಿ ಕಾವೇರಿ ಮಾತೆಗೆ ಬಾಗಿನ ನೀಡಿ ಅತೀ ಹೆಚ್ಚು ಬಾರಿ ಕೆಆರ್‌ಎಸ್‌ಗೆ ಬಾಗಿನ ಸಲ್ಲಿಸದ ಅದೃಷ್ಟ ಅವರದ್ದಾಗಿದೆ. ಇದನ್ನೂ ಓದಿ: ಮೊದಲ ಅವಾರ್ಡ್ ಅಪ್ಪನ ಫೋಟೋ ಮುಂದೆ ಇರಿಸಿದ ಅಭಿಷೇಕ್ ಅಂಬರೀಷ್

    ಈ ಬಾರಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಮತ್ತು ಮುಂಗಾರು ನಿರೀಕ್ಷಿತ ಮಟ್ಟದಲ್ಲಿ ಬೀಳದ ಕಾರಣ ಕೆಆರ್​ಎಸ್ ಭರ್ತಿಯಾಗಿಲ್ಲ. ಇದರಿಂದ ತಮಿಳುನಾಡಿನ ಕೋಟಾ ಮುಗಿಯದೇ ಇರುವುದರಿಂದ ಬೇಸಿಗೆಯಲ್ಲಿ ನೀರಿಗಾಗಿ ಹಾಹಾಕಾರ ಪಡಬೇಕಾದಂತಹ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಹೀಗಾಗಿ ಜನರು ಈ ಬಗ್ಗೆ ಎಚ್ಚೆತ್ತುಕೊಂಡು ಜನರು ನೀರನ್ನು ಹಿತ-ಮಿತವಾಗಿ ಬಳಕೆ ಮಾಡಬೇಕಾಗಿದೆ.

  • ನದಿಯಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

    ನದಿಯಲ್ಲಿ ಮುಳುಗುತ್ತಿದ್ದ ಮಹಿಳೆಯನ್ನು ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ

    ಹಾಸನ: ಕಾವೇರಿ ನದಿಯಲ್ಲಿ ಮುಳುಗಿ ಪ್ರಾಣ ಕಳೆದುಕೊಳ್ಳುವುದರಲ್ಲಿದ್ದ ಮಹಿಳೆಯನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಣೆ ಮಾಡಿದ ಘಟನೆ ಹಾಸನ ಜಿಲ್ಲೆ ಅರಕಲಗೂಡು ತಾಲೂಕಿನ ರಾಮನಾಥಪುರ ಸೇತುವೆ ಬಳಿ ನಡೆದಿದೆ.

    ಮೈಸೂರಿ ಮೂಲದ ಚಲುವಮ್ಮ(36) ಪ್ರಾಣ ಕಳೆದುಕೊಳ್ಳಲು ಹೋಗಿದ್ದ ಮಹಿಳೆ. ಚಲುವಮ್ಮ ಕಾವೇರಿ ನದಿ ನೀರಿಗೆ ಬಿದ್ದು ಒದ್ದಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು, ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ಮುಟ್ಟಿಸಿದ್ದಾರೆ. ಕೂಡಲೇ ಸ್ಥಳಕ್ಕೆ ಬಂದ ಅರಕಲಗೂಡು ಅಗ್ನಿಶಾಮಕ ಸಿಬ್ಬಂದಿ ಚಲುವಮ್ಮನನ್ನು ರಕ್ಷಣೆ ಮಾಡಿದ್ದಾರೆ. ಇದನ್ನೂ ಓದಿ:  ಫೋನಿನಲ್ಲಿ ಮಾತಾಡ್ಕೊಂಡು ಒನ್ ವೇನಲ್ಲಿ ಬಂದು ಮತ್ತೊಬ್ಬನ ಕೈ ಕಟ್ ಮಾಡಿದ!

    ಚಲುವಮ್ಮ ಕಾಲುಜಾರಿ ನೀರಿಗೆ ಬಿದ್ದರೋ ಅಥವಾ ಆತ್ಮಹತ್ಯೆಗೆ ಯತ್ನಿಸಿ ನೀರಿಗೆ ಬಿದ್ದರೋ ಎಂಬುದು ಇನ್ನೂ ತಿಳಿದುಬಂದಿಲ್ಲ. ಕೊಣನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ:  ಬಾಳೆಎಲೆಯಲ್ಲಿ ಮೂಡಿದ ಮೋದಿ ಚಿತ್ರ

  • ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ ಯತ್ನ- ಯುವಕನಿಂದ ರಕ್ಷಣೆ

    ನದಿಗೆ ಹಾರಿ ವೃದ್ಧೆ ಆತ್ಮಹತ್ಯೆ ಯತ್ನ- ಯುವಕನಿಂದ ರಕ್ಷಣೆ

    ಮಂಡ್ಯ: ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ವೃದ್ಧೆಯನ್ನು ಯುವಕ ಕಾಪಾಡಿರುವ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಬಳಿ ಜರುಗಿದೆ. ಇದನ್ನೂ ಓದಿ: ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ಸ್ವಸಹಾಯ ಗುಂಪುಗಳಿಗೆ 600 ಕೋಟಿ ರೂ. ಸಮುದಾಯ ನಿಧಿ

    ಆಂಧ್ರಪ್ರದೇಶ ಮೂಲದ 64 ವರ್ಷದ ವೃದ್ಧೆ ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಇಂದು ಬೆಳಗ್ಗೆ ವೃದ್ಧೆ ಕಾವೇರಿ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ದೃಶ್ಯ ಕಂಡ ಸ್ಥಳೀಯ ಯುವಕ ವೇಣುಗೋಪಾಲ್ ನೀರಿಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ ವೃದ್ಧೆಯನ್ನು ಕಾಪಾಡಿದ್ದಾರೆ. ಇದನ್ನೂ ಓದಿ:ಮನೆ ಮೇಲ್ಛಾವಣಿ, ಗೋಡೆ ಕುಸಿತ- ಮನೆಯಲ್ಲಿದ್ದವರು ಪ್ರಾಣಾಪಾಯದಿಂದ ಪಾರು

    ನಂತರ ರಕ್ಷಣೆಗೆ ಒಳಗೊಂಡ ವೃದ್ಧೆಯನ್ನು ಯುವಕ ಹಾಗೂ ಸ್ಥಳೀಯರು ಪೊಲೀಸರ ವಶಕ್ಕೆ ನೀಡಿದ್ದಾರೆ. ನಂತರ ವೃದ್ಧೆಯನ್ನು ವಿಚಾರಣೆ ಒಳಪಡಿಸಿದಾಗ ವೃದ್ಧೆ ಆಂಧ್ರಪ್ರದೇಶದ ಮೂಲದವರಾಗಿದ್ದು, ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾರೆ. ನಂತರ ಪೊಲೀಸರು ವೃದ್ಧೆಗೆ ಬುದ್ಧಿವಾದ ಹೇಳಿ ಪಂಪ್‍ಹೌಸ್ ಬಳಿಯ ವೃದ್ಧಾಶ್ರಮಕ್ಕೆ ಬಿಟ್ಟಿದ್ದಾರೆ. ಇನ್ನೂ ವೃದ್ಧೆಯನ್ನು ರಕ್ಷಣೆ ಮಾಡಿದ ಯುವಕನಿಗೆ ಪೊಲೀಸರು ಹಾಗೂ ಸ್ಥಳೀಯರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

  • ಕೊಡಗಿನಲ್ಲಿ ಪ್ರಾಕೃತಿಕ ವಿಕೋಪಕ್ಕೆ ಜೂನ್‍ನಿಂದ 5,239 ಕೋಟಿ ರೂ. ನಷ್ಟ

    ಕೊಡಗಿನಲ್ಲಿ ಪ್ರಾಕೃತಿಕ ವಿಕೋಪಕ್ಕೆ ಜೂನ್‍ನಿಂದ 5,239 ಕೋಟಿ ರೂ. ನಷ್ಟ

    – ಅಪಾಯ ಮಟ್ಟ ಮೀರಿ ಹರಿಯುತ್ತಿರುವ ಕಾವೇರಿ ನದಿ
    – ನಿರಂತರ ಮಳೆಗೆ ವಿರಾಜಪೇಟೆ ಮಾರುಕಟ್ಟೆಯ ಕಟ್ಟಡ ಕುಸಿತ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಂಭವಿಸಿರುವ ಪ್ರಾಕೃತಿಕ ವಿಕೋಪದಿಂದ ಕೋಟ್ಯಾಂತರ ರೂಪಾಯಿ ನಷ್ಟವಾಗಿದೆ. ಅಲ್ಲದೇ ಭಾಗಮಂಡಲ ಮತ್ತು ತಲಕಾವೇರಿ ಭಾಗದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಕಾವೇರಿ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜೊತೆಗೆ ರಣ ಮಳೆಗೆ ವಿರಾಜಪೇಟೆ ಪಟ್ಟಣದ ಮಾರುಕಟ್ಟೆ ಕಟ್ಟಡ ಕುಸಿದು ಬಿದ್ದಿದೆ.

    ಕೊಡಗು ಜಿಲ್ಲೆಯಲ್ಲಿ ಪ್ರಸಕ್ತ ವರ್ಷದ ಜೂನ್ ತಿಂಗಳಿನಿಂದ ಸಂಭವಿಸಿರುವ ಮಳೆ-ಗಾಳಿಯ ತೀವ್ರತೆಯ ಪ್ರಾಕೃತಿಕ ವಿಕೋಪದಿಂದಾಗಿ ಇಲ್ಲಿಯವರೆಗೂ 52.39 ಕೋಟಿ ರೂ. ನಷ್ಟ ಉಂಟಾಗಿದೆ. ಗಾಳಿ, ಮಳೆಯಿಂದ ವಿವಿಧ ಮೂಲಭೂತ ಸೌಕರ್ಯಗಳು ಸೇರಿದಂತೆ ಸಾರ್ವಜನಿಕ ಆಸ್ತಿ-ಪಾಸ್ತಿ ನಷ್ಟದ ಪರಿಣಾಮವಾಗಿ ರೂ. 52.39 ಕೋಟಿಯಷ್ಟು ಹಾನಿ ಸಂಭವಿಸಿರುವ ಕುರಿತು ಜಿಲ್ಲಾಡಳಿತ ವರದಿ ಸಂಗ್ರಹಿಸಿದೆ. ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ ರೂ. 17.61 ಕೋಟಿ, ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗಕ್ಕೆ ಸೇರಿದಂತೆ ರೂ. 2.79 ಕೋಟಿ, ವಿದ್ಯುತ್ ಇಲಾಖೆಯ ಹಾನಿಗೆ ಸಂಬಂಧಿಸಿದಂತೆ ರೂ. 2.29 ಕೋಟಿಗಳಷ್ಟು ನಷ್ಟ ಉಂಟಾಗಿದೆ.

    ರಾಷ್ಟ್ರೀಯ ಹೆದ್ದಾರಿ ಹಾನಿಯಿಂದ ರೂ. 1.75 ಕೋಟಿ, ಸಣ್ಣ ನೀರಾವರಿ ಅಂರ್ತಜಲ ಅಭಿವೃದ್ಧಿ ಇಲಾಖೆಯ ವ್ಯಾಪ್ತಿಯಲ್ಲಿ ರೂ. 21.40 ಕೋಟಿ, ಪಿ.ಎಂ.ಜಿ.ಎಸ್.ವೈ.ಯಲ್ಲಿ ರೂ. 5 ಲಕ್ಷ ಹಾಗೂ ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದಂತೆ ರೂ. 6.50 ಕೋಟಿ ಸೇರಿದಂತೆ ಈ ತನಕದ ಗಾಳಿ – ಮಳೆಗೆ ಒಟ್ಟು ರೂ. 52.39 ಕೋಟಿಗಳಷ್ಟು ನಷ್ಟ ಜಿಲ್ಲೆಯಲ್ಲಿ ಉಂಟಾಗಿದೆ.

    ವಿವರಗಳು: ಲೋಕೋಪಯೋಗಿ ಇಲಾಖೆಗೆ ಸಂಬಂಧಿಸಿದಂತೆ 16.55 ಕಿ.ಮೀ.ನಷ್ಟು ರಾಜ್ಯ ಹೆದ್ದಾರಿ, 9.89 ಕಿ.ಮೀ. ಹಾಗೂ ಜಿಲ್ಲಾ ಮುಖ್ಯ ರಸ್ತೆ ಹಾನಿಯಿಂದ ರೂ. 15.71 ಕೋಟಿ, ಸೇತುವೆ ಮೋರಿ (4) ಹಾನಿಯಿಂದ ರೂ. 1.74 ಕೋಟಿ ಹಾಗೂ ಕಟ್ಟಡ ಹಾನಿಯಿಂದ ರೂ. 15.50 ಲಕ್ಷದಷ್ಟು ನಷ್ಟ ಸಂಭವಿಸಿದೆ.

    ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗದಲ್ಲಿ 215: ಕಿ.ಮೀ. ರಸ್ತೆ 4 ಸೇತುವೆ, 2 ಮೋರಿ, 9 ತಡೆಗೋಡೆ ಹಾನಿಯಿಂದ ರೂ. 2.79 ಕೋಟಿ ನಷ್ಟದ ಅಂದಾಜು ಮಾಡಲಾಗಿದೆ.

    ವಿದ್ಯುತ್ ಇಲಾಖೆ: ವಿದ್ಯುತ್ ಇಲಾಖೆಯಲ್ಲಿ 1,358 ಕಂಬಗಳು, 85 ಟ್ರಾನ್ಸ್ ಫಾರ್ಮ್‍ಗಳು, 20.26 ಕಿ.ಮೀ.ನಷ್ಟು ವಿದ್ಯುತ್ ವಾಹಕಗಳ ಹಾನಿಯಿಂದ ರೂ. 2.29 ಕೋಟಿ ನಷ್ಟವಾಗಿದೆ. ಎರಡು ಕಿ.ಮೀ.ನಷ್ಟು ರಾಷ್ಟ್ರೀಯ ಹೆದ್ದಾರಿ ಹಾನಿಯಿಂದ ರೂ. 1.75 ಕೋಟಿ, ಸಣ್ಣ ನೀರಾವರಿ ಮತ್ತು ಅಂತರ್‍ಜಲ ಅಭಿವೃದ್ಧಿ ವಿಭಾಗದಲ್ಲಿ ಒಟ್ಟು 53, ನಾಲೆ, ಏರಿ, ಕೆರೆ ಹಾನಿಯಿಂದ ರೂ. 21.40 ಕೋಟಿ, ಪಿ.ಎಂ.ಜಿ.ಎಸ್.ವೈ ರಸ್ತೆ ಹಾನಿ (0-10 ಕಿ.ಮೀ.) ರೂ. 5 ಲಕ್ಷ ಹಾನಿಯಾಗಿದೆ.

    ನಗರಾಭಿವೃದ್ಧಿ ಇಲಾಖೆ: ನಗರಾಭಿವೃದ್ಧಿ ಇಲಾಖೆ ವ್ಯಾಪ್ತಿಯಲ್ಲಿ ಮಡಿಕೇರಿ ನಗರಸಭೆ, ಕುಶಾಲನಗರ, ಸೋಮವಾರಪೇಟೆ, ವೀರಾಜಪೇಟೆ ಪಟ್ಟಣ ಪಂಚಾಯಿತಿಗಳಲ್ಲಿ ಒಟ್ಟು ರೂ. 6.50 ಕೋಟಿಯಷ್ಟು ನಷ್ಟ ಉಂಟಾಗಿದೆ.

    ಒಬ್ಬರು ಬಲಿ: ಮಡಿಕೇರಿ ತಾಲೂಕಿನಲ್ಲಿ ಪ್ರವಾಹದಿಂದ ಒಬ್ಬರು ಬಲಿಯಾಗಿದ್ದು, ಇವರ ಕುಟುಂಬದವರಿಗೆ ರೂ. 7 ಲಕ್ಷ ನೀಡಲಾಗಿದೆ. ಒಟ್ಟು 5 ಜಾನುವಾರುಗಳು ಸಾವಿಗೀಡಾಗಿವೆ. 2 ಮನೆಗಳು ಪೂರ್ಣ ಜಖಂ 11 ಮನೆಗಳಿಗೆ ಭಾಗಶಃ ಹಾನಿ ಹಾಗೂ 34 ಮನೆಗಳಿಗೆ ಅಲ್ಪಸ್ವಲ್ಪ ಹಾನಿಯಾಗಿದ್ದು, ಇದರಿಂದ ರೂ. 13.50 ಲಕ್ಷ ನಷ್ಟವಾಗಿದೆ.

    ಅಪಾಯ ಮಟ್ಟದಲ್ಲಿ ಕಾವೇರಿ ನದಿ: ಕೊಡಗು ಜಿಲ್ಲೆಯಲ್ಲಿ ನಿನ್ನೆಯಿಂದ ಸ್ವಲ್ಪ ಮಟ್ಟಿಗೆ ಮಳೆ ಆರ್ಭಟ ತಗ್ಗಿದ್ದರೂ ಪ್ರವಾಹದ ಆತಂಕ ಮಾತ್ರ ತಪ್ಪಿಲ್ಲ. ಭಾಗಮಂಡಲ ಮತ್ತು ತಲಕಾವೇರಿ ಭಾಗದಲ್ಲಿ ಕಳೆದ ಒಂದು ವಾರದಿಂದ ನಿರಂತರವಾಗಿ ಮಳೆ ಸುರಿದ ಪರಿಣಾಮ ಕಾವೇರಿ ನದಿ ಈಗಲೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಹೀಗಾಗಿ ನದಿ ತಟದಲ್ಲಿರುವ ವಿರಾಜಪೇಟೆ ತಾಲ್ಲೂಕಿನ ಕರಡಿಗೋಡು ಗ್ರಾಮದಲ್ಲಿ ಇನ್ನೂ ಪ್ರವಾಹದ ಆತಂಕ ತಪ್ಪಿಲ್ಲ. ಅಲ್ಲಿನ ನೂರಾರು ಕುಟುಂಬಗಳು ಆತಂಕದಲ್ಲೇ ಬದುಕು ದೂಡುತ್ತಿದ್ದು ಯಾವುದೇ ಕ್ಷಣದಲ್ಲಿ ಅಪಾಯ ಎದುರಾಗಬಹುದೆಂದು ತೆಪ್ಪವನ್ನು ಸ್ಥಳದಲ್ಲಿಯೇ ಇರಿಸಿಕೊಂಡು ಕಾಲ ಕಳೆಯುವಂತಾಗಿದೆ. ಕಳೆದ ಮೂರು ವರ್ಷಗಳಿಂದಲೂ ಈ ಭಾಗದ ಜನರು ಪ್ರವಾಹದಲ್ಲೇ ಮುಳುಗಿ ಬದುಕು ದೂಡುತಿದ್ದರೂ ಸರ್ಕಾರ ಮಾತ್ರ ಇತ್ತ ಗಮನಹರಿಸಿಲ್ಲ. ಶಾಶ್ವತ ಪರಿಹಾರ ದೊರಕಿಸಿ ಕೊಡುವುದಾಗಿ ನೀಡಿದ್ದ ಭರವಸೆ ಕೇವಲ ಭರವಸೆಯಾಗಿ ಉಳಿದಿದೆ. ಹಲವು ಕುಟುಂಬಗಳು ಕಳೆದ ವರ್ಷದ ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದರು. ಇಂದಿಗೂ ಪರಿಹಾರ ಅಥವಾ ಬದಲಿ ವ್ಯವಸ್ಥೆ ಸಿಗದೆ ಮತ್ತೆ ಅದೇ ಸ್ಥಳದಲ್ಲಿ ಗುಡಿಸಲು ನಿರ್ಮಿಸಿಕೊಂಡು ಜೀವನ ಸಾಗಿಸುತ್ತಿದ್ದಾರೆ. ಸದ್ಯ ಪ್ರವಾಹದ ಭೀತಿ ಕ್ಷಣ ಕ್ಷಣಕ್ಕೂ ತೀವ್ರಗೊಳ್ಳುತ್ತಿದ್ದು ಜನರ ಸ್ಥಳಾಂತರ ಮಾಡಲು ಜಿಲ್ಲಾಡಳಿತ ಕಾಳಜಿ ಕೇಂದ್ರಗಳನ್ನು ತೆರೆದಿದೆ.

    ಕುಸಿದು ಬಿದ್ದ ಮಾರುಕಟ್ಟೆ ಕಟ್ಟಡ: ಕಳೆದ ಒಂದು ವಾರದಿಂದ ಸುರಿದ ಮಹಾಮಳೆಗೆ ವಿರಾಜಪೇಟೆ ಪಟ್ಟಣದ ಮಾರುಕಟ್ಟೆ ಕಟ್ಟಡ ಕುಸಿದು ಬಿದ್ದಿದೆ. ಮಾರುಕಟ್ಟೆ ಕಟ್ಟಡ ಸಾಕಷ್ಟು ಶಿಥಿಲವಾಗಿತ್ತು. ಹೀಗಾಗಿ ವಿರಾಜಪೇಟೆ ಪಟ್ಟಣ ಪಂಚಾಯಿತಿ ಅಧಿಕಾರಿಗಳು ನಿನ್ನೆಯಷ್ಟೇ ಕಟ್ಟಡದಿಂದ ವ್ಯಾಪಾರಿಗಳನ್ನು ಖಾಲಿ ಮಾಡಿಸಿದ್ದರು. ಇಂದು ಇದ್ದಕ್ಕಿದ್ದಂತೆ ಎರಡು ಮಳಿಗೆಗಳು ಕುಸಿದು ಬಿದ್ದಿವೆ. ಒಂದು ವೇಳೆ ಮಳಿಗೆಗಳಿಂದ ಅಂಗಡಿಗಳನ್ನು ಖಾಲಿ ಮಾಡಿಸಿ ವ್ಯಾಪಾರಿಗಳ ತೆರವು ಮಾಡದಿದ್ದಲ್ಲಿ ಇಂದು ಅನಾಹುತವೇ ಸಂಭವಿಸುತ್ತಿತ್ತು. ಕಟ್ಟಡ ಸಾಕಷ್ಟು ಶಿಥಿಲವಾಗಿದ್ದರೂ ಯಾವುದೇ ಮೂಲಸೌಲಭ್ಯ ನೀಡದೆ ಪಟ್ಟಣ ಪಂಚಾಯಿತಿ ನಿರ್ಲಕ್ಷ್ಯ ವಹಿಸಿದ್ದೇ ಕಟ್ಟಡ ಕುಸಿದು ಬೀಳಲು ಮುಖ್ಯ ಕಾರಣ ಎಂದು ಸ್ಥಳೀಯ ವ್ಯಾಪಾರಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಮನೆ ಮಹಡಿ ಹತ್ತಿ ಜೀವ ಉಳಿಸಿಕೊಂಡ ಕುಟುಂಬ – ಮೈ ಝಲ್ ಎನಿಸುವ ಕಾರ್ಯಾಚರಣೆ ದೃಶ್ಯ ಸೆರೆ

  • ಭರ್ತಿಯಾಗುತ್ತಿರುವ ಕನ್ನಂಬಾಡಿ- ಸೋಮವಾರದಿಂದ ವಿಸಿ ನಾಲೆಗೆ ನೀರು ಹರಿಸಲು ಸಚಿವ ನಾರಾಯಣಗೌಡ ಸೂಚನೆ

    ಭರ್ತಿಯಾಗುತ್ತಿರುವ ಕನ್ನಂಬಾಡಿ- ಸೋಮವಾರದಿಂದ ವಿಸಿ ನಾಲೆಗೆ ನೀರು ಹರಿಸಲು ಸಚಿವ ನಾರಾಯಣಗೌಡ ಸೂಚನೆ

    ಮಂಡ್ಯ: ಕಾವೇರಿ ಕಣಿವೆ ಸುತ್ತ ಸಾಕಷ್ಟು ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಜಲಾಶಯ ಭರ್ತಿಯಾಗುತ್ತಿದೆ. ಈಗಾಗಲೇ 106 ಅಡಿಗೂ ಹೆಚ್ಚು ನೀರು ಜಲಾಶಯಕ್ಕೆ ಹರಿದು ಬಂದಿದೆ. ಹೀಗಾಗಿ ಕೃಷಿ ಚಟುವಟಿಕೆಗೆ ಅನುಕೂಲವಾಗುವಂತೆ ನಾಲೆಗಳಿಗೆ ನೀರು ಹರಿಸುವಂತೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

    ಕಾವೇರಿ ನೀರನ್ನು ಅವಲಂಬಿಸಿ ಕೃಷಿ ಚಟುವಟಿಕೆ ನಡೆಸುವ ರೈತರಿಗೆ ಸಂತಸದ ಸುದ್ದಿ ಇದು. ಕೆಆರ್ ಸ್ ಅಣೆಕಟ್ಟಿನ 124 ಅಡಿಗಳ ಪೈಕಿ 106 ಅಡಿ ನೀರು ತುಂಬಿದೆ. 35 ಸಾವಿರ ಕ್ಯೂಸೆಕ್ಸ್ ಒಳ ಹರಿವಿನ ಪ್ರಮಾಣ ಇದೆ. ಕೇವಲ 24 ಗಂಟೆಯಲ್ಲಿ ಎರಡು ಅಡಿಯಷ್ಟು ನೀರು ಭರ್ತಿಯಾಗಿದೆ. 6 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರಗಡೆ ಬಿಡಲಾಗುತ್ತಿದೆ. ಈಗಾಗಲೇ ಹೇಮಾವತಿ ನಾಲೆಗೆ ನೀರು ಬಿಡಲಾಗಿದ್ದು, ಸೋಮವಾರಿಂದ ವಿಸಿ ನಾಲೆಗೆ ನೀರು ಹರಿಸುವ ಮೂಲಕ ಮುಂಗಾರು ಕೃಷಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ.

    ಸಬ್ಸಿಡಿಯಲ್ಲಿ ಭತ್ತದ ಬೀಜ ವಿತರಣೆ ಪ್ರಾರಂಭ:
    ಸಕ್ಕರೆ ನಾಡು ಎಂದು ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯಲ್ಲಿ ಕಬ್ಬಿಗಿಂತಲೂ ಹೆಚ್ಚಿನ ಪ್ರದೇಶದಲ್ಲಿ ಭತ್ತ ಬೆಳೆಯಲಾಗುತ್ತದೆ. 40 ಸಾವಿರ ಹೆಕ್ಟೇರ್ ನಲ್ಲಿ ಕಬ್ಬು ಬೆಳೆದರೆ 65 ಸಾವಿರ ಹೆಕ್ಟೇರ್ ನಲ್ಲಿ ಭತ್ತ ಬೆಳೆಯಲಾಗುತ್ತದೆ. ಮುಂಗಾರು ಕೃಷಿ ಆರಂಭಿಸಲು ನಾಲೆಗಳಿಗೆ ನೀರು ಬಿಡುವ ಸಮಯವನ್ನೇ ಎದುರು ನೋಡಲಾಗುತ್ತಿತ್ತು. ಕೆಆರ್ ಎಸ್ ಭರ್ತಿಯಾಗುತ್ತಿರುವ ಹಿನ್ನೆಲೆಯಲ್ಲಿ ಈಗ ನೀರು ಹರಿಸಲಾಗುತ್ತಿದೆ. ಹೀಗಾಗಿ ಕೃಷಿ ಇಲಾಖೆ ಸಹ ಸಬ್ಸಿಡಿಯಲ್ಲಿ ಭತ್ತದ ಬೀಜವನ್ನು ವಿತರಿಸುವ ಕಾರ್ಯ ಆರಂಭಿಸಲಿದೆ. ಮುಂದಿನ ಬುಧವಾರದಿಂದ ರೈತರಿಗೆ ಭತ್ತದ ಬೀಜ ವಿತರಣೆ ಶುರುವಾಗಲಿದೆ. ಸುಮಾರು 4 ಸಾವಿರ ಹೆಕ್ಟೇರ್ನಲ್ಲಿ ನೀರಾವರಿ ರಾಗಿ ಹಾಗೂ 500 ಹೆಕ್ಟೇರ್ ನಲ್ಲಿ ಅಲಸಂದೆ ಕೂಡ ಬೆಳೆಯಲಾಗುತ್ತದೆ. ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗೆ ಅಗತ್ಯವಿರುವ ಗೊಬ್ಬರ ಸಹ ದಾಸ್ತಾನು ಇದ್ದು, ಪ್ರತಿ ತಿಂಗಳು ನಿಗದಿತ ಪ್ರಮಾಣದಲ್ಲಿ ಸರಬರಾಜು ಆಗಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಉಳಿಸಬೇಕಾದರೆ ಕಾಂಗ್ರೆಸ್ ಕಿತ್ತೊಗೆಯಬೇಕೆಂದ ಸಿದ್ದರಾಮಯ್ಯ- ಮತ್ತೆ ಎಡವಟ್ಟು

    ವರುಣನ ಕೃಪೆಯಿಂದ ರೈತರ ಬದುಕು ಹಸನಾಗಲಿ:
    ಮಂಡ್ಯ ಜಿಲ್ಲೆಯಲ್ಲಿ ವ್ಯವಸಾಯವೇ ಪ್ರಧಾನ ಕಸುಬು. ಸಂಪೂರ್ಣ ಜಿಲ್ಲೆ ಕೃಷಿಯಿಂದ ಆವೃತವಾಗಿದೆ. ರೈತನ ಬದುಕಿಗೆ ನೀರೇ ಪ್ರಧಾನ. ಕಳೆದ ಮೂರು ವರ್ಷಗಳಿಂದ ಸತತವಾಗಿ ಕೆ.ಆರ್.ಎಸ್. ಜಲಾಶಯ ಭರ್ತಿಯಾಗುತ್ತಿರುವುದು ನನಗೆ ಅತೀವ ಸಂತಸ ತಂದಿದೆ. ಕಾವೇರಿ ನದಿ ತುಂಬಿ ಹರಿದರೆ ರೈತರ ಜೀವನ ಕೂಡ ಸಂತಸದಿಂದ ತುಂಬಿರುತ್ತದೆ. ಸಾಕಷ್ಟು ಮಳೆಯಾಗಿ, ಜಲಾಶಯ ತುಂಬುತ್ತಿರುವ ಕಾರಣ ನಾಲೆಗಳಿಗೆ ನೀರು ಹರಿಸಲಾಗುತ್ತಿದೆ. ರೈತರು ನೀರನ್ನು ಪೋಲು ಮಾಡದೆ ಸದುಪಯೋಗಪಡಿಸಿಕೊಳ್ಳಬೇಕು. ರೈತರು ಅಂದುಕೊಂಡಂತೆ ಉತ್ತಮ ಬೆಳೆಯಾಗಲಿ. ವರುಣ ಕೃಪೆಯಿಂದ ನೀರಿನ ಕೊರತೆಯಾಗದೆ ಯಥೇಚ್ಚ ಫಸಲು ಬರಲಿ. ಆ ಮೂಲಕ ರೈತರ ಬದುಕು ಹಸನಾಗಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ. ನಾರಾಯಣಗೌಡ ಹಾರೈಸಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್ ವೇಳೆಗೆ ಮಕ್ಕಳಿಗೆ ಕೋವಿಡ್ ಲಸಿಕೆ – ಏಮ್ಸ್ ನಿರ್ದೇಶಕ ರಣದೀಪ್ ಗುಲೇರಿಯಾ

  • ಸ್ವರ್ಗ ಸೃಷ್ಟಿಸುವ ಬಿಜೆಪಿ ಮಾತು ಸುಳ್ಳಾಗಿದೆ-  ಎಚ್ಡಿಕೆ ಕಿಡಿ

    ಸ್ವರ್ಗ ಸೃಷ್ಟಿಸುವ ಬಿಜೆಪಿ ಮಾತು ಸುಳ್ಳಾಗಿದೆ- ಎಚ್ಡಿಕೆ ಕಿಡಿ

    ಬೆಂಗಳೂರು: ಮೇಕೆದಾಟು ಮತ್ತು ಕಾವೇರಿ ನದಿ ವಿವಾದವನ್ನ ಸರಿಯಾಗಿ ಬಗೆಹರಿಸದ ಬಿಜೆಪಿ ಸರ್ಕಾರದ ವಿರುದ್ದ ಮಾಜಿ ಸಿಎಂ ಕುಮಾರಸ್ವಾಮಿ ಸರಣಿ ಟ್ವೀಟ್ ಮಾಡುವ ಮೂಲಕವಾಗಿ ಕಿಡಿಕಾರಿದ್ದಾರೆ. ರಾಜ್ಯ, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ದ ಆಕ್ರೋಶ ಹೊರ ಹಾಕಿದ್ದಾರೆ. ಅಷ್ಟೇ ಅಲ್ಲ ಸಮಸ್ಯೆಯನ್ನ ಅಣ್ಣ ತಮ್ಮಂದಿರಂತೆ ಬಗೆಹರಿಸಿಕೊಳ್ಳೋಣ ಅಂತ ತಮಿಳುನಾಡು ಸಿಎಂ ಸ್ಟಾಲಿನ್‍ಗೆ ಮನವಿ ಮಾಡಿದ್ದಾರೆ.

    ತಮಿಳುನಾಡು ಸರ್ಕಾರ ಮೇಕೆದಾಟು ಜಲಾಶಯ ಕಾವೇರಿ ನದಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ಪ್ರತಿಕೂಲವಾಗುವಂಥ ಹೆಜ್ಜೆ ಇಟ್ಟಿದೆ.ಇದರ ಬಗ್ಗೆ ಗಮನಹರಿಸಬೇಕಿದ್ದ ರಾಜ್ಯದ ಬಿಜೆಪಿ ಸರ್ಕಾರ ಆಂತರಿಕ ಕಲಹದಿಂದ ಶರಶಯ್ಯೆಯಲ್ಲಿದೆ. ಸರ್ಕಾರವನ್ನೇ ನಡೆಸಲಾಗದೇ ನಲುಗಿ ಹೋಗಿರುವ ಬಿಜೆಪಿಗೆ ಇನ್ನು ನೆಲಜಲ, ಭಾಷೆನುಡಿಯ ಬಗ್ಗೆ ಅಕ್ಕರೆ ಇದ್ದೀತೆ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ:  ಟಾಪ್‍ಲೆಸ್ ಫೋಟೋ ಶೂಟ್‍ನಲ್ಲಿ ನಟಿ ಕಿಯಾರಾ ಅಡ್ವಾಣಿ ಸಖತ್ ಹಾಟ್

    ಇತ್ತೀಚೆಗೆ ನರೇಂದ್ರ ಮೋದಿ ಅವರನ್ನು ಭೇಟಿಯಾಗಿರುವ ತಮಿಳುನಾಡು ಸಿಎಂ ಸ್ಟಾಲಿನ್ ಅವರು ಮೇಕೆದಾಟು ಜಲಾಶಯ ನಿರ್ಮಾಣಕ್ಕೆ ಅನುಮತಿ ನೀಡದಂತೆಯೂ, ಈ ವರ್ಷ ತಮಿಳುನಾಡಿಗೆ ಸಿಗಬೇಕಾದ ನೀರಿನ ವಿಚಾರದಲ್ಲಿ ಕ್ರಮ ಕೈಗೊಳ್ಳುವಂತೆಯೂ ಮನವಿ ಮಾಡಿದ್ದಾರೆ.ಈ ಬಗ್ಗೆ ಕ್ಷಿಪ್ರವಾಗಿ ಪ್ರತಿಕ್ರಿಯಿಸಬೇಕಿದ್ದ ಆಡಳಿತಾರೂಢ ಬಿಜೆಪಿ ಮೈಮರೆತು ಕುಳಿತಿದೆ. ಮೇಕೆದಾಟು ಅಣೆಕಟ್ಟು ಯೋಜನೆ ರೂಪಿಸಲೂ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಆಗಿರಲಿಲ್ಲ. ನನ್ನ ಸರ್ಕಾರ ಅದನ್ನು ಜಾರಿಗೆ ತಂದು ಧೈರ್ಯ ತೋರಿತು.ಆದರೆ, ಅದನ್ನು ಉಳಿಸಿಕೊಳ್ಳಲೂ ಬಿಜೆಪಿಗೆ ಆಗುತ್ತಿಲ್ಲ. ರಾಜ್ಯ ಕೇಂದ್ರದಲ್ಲಿ ಬಿಜೆಪಿಯೇ ಅಧಿಕಾರದಲ್ಲಿದ್ದರೂ ಯೋಜನೆ ಅನಿಶ್ಚಿತತೆ ಎದುರಿಸುತ್ತಿದೆ. ಸ್ವರ್ಗ ಸೃಷ್ಟಿಸುವ ಬಿಜೆಪಿ ಮಾತು ಸುಳ್ಳಾಗಿದೆ ಎಂದು ಆಕ್ರೋಶವ್ಯಕ್ತ ಪಡಿಸಿದ್ದಾರೆ. ಇದನ್ನೂ ಓದಿ:  ಅತಿ ಹೆಚ್ಚು, ಅತಿ ಕಡಿಮೆ ಅನುದಾನ ಯಾರಿಗೆ ಸಿಕ್ಕಿದೆ? – ರಹಸ್ಯ ರಿಪೋರ್ಟ್ ಔಟ್

    ರಾಜ್ಯದ ಜನ ಗಮನಿಸಬೇಕು. ತಮಿಳುನಾಡಿನಲ್ಲಿ ಅಧಿಕಾರದಲ್ಲಿರುವುದು ಪ್ರಾದೇಶಿಕ ಪಕ್ಷ. ಪ್ರಾದೇಶಿಕತೆ, ಅಸ್ಮಿತೆ ವಿಚಾರದಲ್ಲಿ ತಮಿಳುನಾಡು ಪ್ರಬಲವಾಗಿದೆ.ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳೇ ಹೆಚ್ಚು ಅಧಿಕಾರದಲ್ಲಿದ್ದರೂ ರಾಜ್ಯದ ಅಸ್ಮಿತೆ, ಪ್ರಾದೇಶಿಕತೆ ರಕ್ಷಣೆ ಸಾಧ್ಯವಾಗುತ್ತಿಲ್ಲ.ರಾಜ್ಯದ ಹಿತರಕ್ಷಣೆಗೆ ಪ್ರಾದೇಶಿಕ ಪಕ್ಷವೇ ಅಗತ್ಯ. ಸ್ಟಾಲಿನ್ ಒಂದು ಮಾತು ಹೇಳಿದ್ದರು. ಸಂವಿಧಾನದ 8ನೇ ಪರಿಚ್ಛೇದದಡಿ ಮಾನ್ಯತೆ ನೀಡಲಾಗಿರುವ ಎಲ್ಲ ಭಾಷೆಗಳಿಗೆ ಅಧಿಕೃತ ಭಾಷೆ ಸ್ಥಾನ ಪಡೆಯುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ತಿಳಿಸಿದ್ದರು.ಈ ಪ್ರಯತ್ನದಲ್ಲಿ ನಾನೂ ಕೈಜೋಡಿಸುತ್ತೇನೆ. ಆದರೆ, ಅಣ್ಣತಮ್ಮಂದಿರಂತೆ ಇರಬೇಕಾದ ನಾವು ಕಾವೇರಿ ವಿಚಾರದಲ್ಲಿ ಕಲಹಕ್ಕಿಳಿಯುವುದರಲ್ಲಿ ಲಾಭವಿಲ್ಲ.ದಕ್ಷಿಣ ಭಾರತದ ರಾಜ್ಯಗಳು, ಭಾಷೆ, ಸಂಸ್ಕøತಿ ವಿಚಾರದಲ್ಲಿ ಈಗಿನ ಕೇಂದ್ರ ಸರ್ಕಾರ ಅತ್ಯಂತ ಆಕ್ರಮಣಕಾರಿಯಾಗಿ ನಡೆದುಕೊಳ್ಳುತ್ತಿದೆ ಎಂದಿದ್ದಾರೆ.

    ಕರ್ನಾಟಕ ಮತ್ತು ತಮಿಳುನಾಡು ಕಾವೇರಿ ವಿಚಾರದ ಮೂಲಕ ಒಡೆದುಹೋಗಬಾರದು.ನಮ್ಮ ಅಸ್ಮಿತೆಗಳ ರಕ್ಷಣೆಗಾಗಿ ನಾವು ಈಗ ಒಗ್ಗಟ್ಟಿನಿಂದ ಇರಬೇಕಾದ ಕಾಲ ಎಂಬುದನ್ನು ಸ್ಟಾಲಿನ್ ಗಮನಿಸಬೇಕು. ತಮಿಳುನಾಡು ಸರ್ಕಾರ ಮೇಕೆದಾಟು ಜಲಾಶಯವನ್ನು ಆಗಲು ಬಿಡಲಿ.ಇದರಿಂದ ತಮಿಳುನಾಡಿಗೆ ಯಾವ ತೊಂದರೆಯೂ ಇಲ್ಲ ಎಂಬುದನ್ನು ಈಗಾಗಲೇ ವಿವರಿಸಲಾಗಿದೆ.ಇದು ನೀರಾವರಿ ಉದ್ದೇಶದ ಯೋಜನೆಯಲ್ಲ.ಬದಲಿಗೆ ಕುಡಿಯುವ ನೀರಿನ ಉದ್ದೇಶದ ಯೋಜನೆಯಾಗಿದೆ.ಈ ವಿಚಾರವನ್ನು ಸ್ಟಾಲಿನ್ ಅವರು ಗಮನಿಸಬೇಕು ಎಂದು ಹೇಳಿದ್ದಾರೆ.

    ಜಲಾಶಯದ ವಿಚಾರದಲ್ಲಿ ಕರ್ನಾಟಕದೊಂದಿಗೆ ಸಹಕರಿಸಬೇಕು. ಕಳೆದ ಮೂರ್ನಾಲ್ಕು ವರ್ಷಗಳಿಂದ ಕರ್ನಾಟಕ ತಮಿಳುನಾಡಿಗೆ ನಿಗದಿಗಿಂತಲೂ ಹೆಚ್ಚಿನ ಪ್ರಮಾಣದ ನೀರು ಕೊಟ್ಟಿದೆ. ಪಕೃತಿ ಸಹಕರಿಸಿದಾಗ ಹೆಚ್ಚಿನ ನೀರನ್ನು ಹರಿಸಿದೆ. ಬರಗಾಲದಂಥ ಸಂದರ್ಭದಲ್ಲೂ ಕರ್ನಾಟಕವು ತಮಿಳುನಾಡಿಗೆ ಎಂದೂ ದ್ರೋಹ ಬಗೆದಿಲ್ಲ. ಹೀಗಾಗಿ ನೀರಿನ ಹಂಚಿಕೆ ವಿಚಾರದಲ್ಲಿ ಸೋದರ ಸ್ಟಾಲಿನ್ ಅವರಿಗೆ ಯಾವ ಅನುಮಾನಗಳೂ, ಆತಂಕಗಳೂ ಬೇಡ ಎಂದಿದ್ದಾರೆ.

    ತಮಿಳುನಾಡು ರೈತರನ್ನು ವಂಚಿಸಿ ಕರ್ನಾಟಕ ತನ್ನ ರೈತರನ್ನು ರಕ್ಷಿಸಿದ ಉದಾಹರಣೆ ಇಲ್ಲ. ರೈತರೆಂದರೆ ರೈತರೇ, ಭೂಮಿತಾಯಿಯ ಮಕ್ಕಳು. ನಮ್ಮ ಅಣ್ಣ ತಮ್ಮಂದಿರು.ಕಾವೇರಿ ವಿಚಾರದಲ್ಲಿ ಈಗ ನಾವಿಬ್ಬರು. ಅಂದರೆ ರಾಜಕಾರಣಿಗಳೂ ಅಣ್ಣತಮ್ಮಂದಿರಾಗೋಣ.ಸೋದರ ಭಾವನೆಯೊಂದಿಗೆ ಸ್ಟಾಲಿನ್ ಒಂದು ಹೆಜ್ಜೆ ಮುಂದೆ ಬಂದರೆ ನಾನಂತೂ ಎರಡು ಹೆಜ್ಜೆ ಮುಂದಿಡುವೆ.ಕಾವೇರಿಗಾಗಿ ಎರಡೂ ರಾಜ್ಯಗಳು ಕಲಹಕ್ಕಿಳಿದಿದ್ದು ಸಾಕು. ದಕ್ಷಿಣ ಭಾರತೀಯರಾಗಿ ಈಗ ನಾವು ಕಲಹ ಮಾಡುವ ಸಂದರ್ಭವಿಲ್ಲ. ಸೋದರತೆ ಮೂಲಕ ಇದನ್ನು ಬಗೆಹರಿಸಿಕೊಳ್ಳಬೇಕು.ಈ ಮೂಲಕ ನಾವು ಒಗ್ಗಟ್ಟಾಗೇ ಉಳಿಯಬೇಕು.ಸ್ಟಾಲಿನ್ ಅವರ ಅಧಿಕಾರವಧಿಯಲ್ಲಿ ಈ ಪ್ರಯತ್ನ ಆಗಲಿ.ಅದಕ್ಕೆ ನನ್ನ ಬೆಂಬಲ ಇರಲಿದೆ. ಈ ರಾಜ್ಯಗಳ ಸೋದರತೆ ರಕ್ಷಣೆ ಈಗಿನ ಅಗತ್ಯ ಎಂದು ಕುಮಾರಸ್ವಾಮಿ ಟ್ವೀಟ್ ಮಾಡುವ ಮೂಲಕವಾಗಿ ತಿಳಿಸಿದ್ದಾರೆ.

  • ಕಾವೇರಿ ನದಿಯಲ್ಲಿ ಸ್ನಾನಕ್ಕೆ ಇಳಿದ ವ್ಯಕ್ತಿ ನಾಪತ್ತೆ

    ಕಾವೇರಿ ನದಿಯಲ್ಲಿ ಸ್ನಾನಕ್ಕೆ ಇಳಿದ ವ್ಯಕ್ತಿ ನಾಪತ್ತೆ

    ಮಡಿಕೇರಿ: ಸ್ನಾನಕ್ಕೆಂದು ಕಾವೇರಿ ನದಿಗೆ ಇಳಿದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಣಿವೆ ಗ್ರಾಮದಲ್ಲಿ ನಡೆದಿದೆ.

    ಹೆಬ್ಬಾಲೆ ಗ್ರಾಮದ ರಮೇಶ್ ರೆಡ್ಡಿ(56) ಕಾಣೆಯಾಗಿರುವ ದುರ್ದೈವಿ. ಹೆಬ್ಬಾಲೆ ಗ್ರಾಮದ ಸಮೀಪದ ಕಣಿವೆಯ ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಾಲಯದ ಎದುರು ಹರಿಯುವ ಕಾವೇರಿ ನದಿಯಲ್ಲಿ ಸ್ನಾನಕ್ಕೆಂದು ತೆರಳಿದ್ದನ್ನು ಸ್ಥಳೀಯರು ಗಮನಿಸಿದ್ದು, ನೀರಿನಲ್ಲಿ ಮುಳುಗಿ ಸಾವಿಗೀಡಾಗಿರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ.

    ನಾಪತ್ತೆಯಾದ ವಿಷಯ ತಿಳಿದ ಗ್ರಾಮಸ್ಥರು ಹಾಗೂ ಈಜು ತಜ್ಞರು, ಸಂಜೆವರೆಗೂ ಮೃತದೇಹದ ಶೋಧ ಕಾರ್ಯ ನಡೆಸಿದರು. ಆದರೂ ಮೃತ ದೇಹ ಪತ್ತೆಯಾಗಿಲ್ಲ. ರಮೇಶ್ ರೆಡ್ಡಿ ಅವರಿಗೆ ಪತ್ನಿ, ಎರಡು ಹೆಣ್ಣು ಹಾಗೂ ಒಂದು ಗಂಡು ಮಗನಿದ್ದು, ಕುಟುಂಬ ದುಃಖದಲ್ಲಿ ಮುಳುಗಿದೆ. ಕುಶಾಲನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಜೀವ ನದಿಯ ತವರಿನಲ್ಲೇ ಬತ್ತುತ್ತಿದೆ ಕಾವೇರಿಯ ಒಡಲು

    ಜೀವ ನದಿಯ ತವರಿನಲ್ಲೇ ಬತ್ತುತ್ತಿದೆ ಕಾವೇರಿಯ ಒಡಲು

    ಮಡಿಕೇರಿ: ನಾಡಿನ ಜೀವ ನದಿ ಕಾವೇರಿ ಬತ್ತುತ್ತಿದ್ದು, ಕಾವೇರಿ ನೀರನ್ನೇ ಆಶ್ರಯಿಸಿರುವ ಜಿಲ್ಲೆಗಳು ಕುಡಿಯುವ ನೀರಿನ ಹಾಹಾಕಾರ ಎದುರಿಸುವ ಸ್ಥಿತಿ ಎದುರಾಗಿದೆ.

    ಕೊಡಗಿನಲ್ಲಿ ಹುಟ್ಟಿ ನಾಲ್ಕು ಜಿಲ್ಲೆಗಳಲ್ಲಿ ಹರಿದು ನಾಡಿನ ಹಲವು ಜಿಲ್ಲೆಗಳ ಜೀವಜಲವಾಗಿರುವ ಕಾವೇರಿ ಬತ್ತುತ್ತಿದೆ. ದಕ್ಷಿಣ ಕಾಶ್ಮೀರ ಎಂದೆನಿಸಿಕೊಂಡಿದ್ದ ಕೊಡಗಿನಲ್ಲಿ ವರ್ಷದ ನಾಲ್ಕೈದು ತಿಂಗಳು ನಿರಂತರ ಮಳೆ ಸುರಿಯುತ್ತದೆ. ಮೂರು ವರ್ಷಗಳಿಂದ ಆಗಸ್ಟ್ ತಿಂಗಳಲ್ಲಿ ಕಾವೇರಿ ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾಗೋದು, ಬೇಸಿಗೆ ಬಂತೆಂದರೆ ನೀರು ಕಡಿಮೆಯಾಗೋದು ಕಾಮನ್ ಆಗಿತ್ತು. ಆದರೆ ಈ ಬಾರಿ ಕಳೆದ 50 ರಿಂದ 60 ವರ್ಷಗಳಲ್ಲೇ ನೋಡಿರದಷ್ಟು ಪ್ರಮಾಣದಲ್ಲಿ ಕಾವೇರಿ ನದಿ ಬತ್ತಿದೆ. ಸಾಕಷ್ಟು ಕಡೆಗಳಲ್ಲಿ ಕಾವೇರಿ ನದಿಯಲ್ಲಿ ನೀರು ಅಲ್ಲಲ್ಲೇ ತಗ್ಗು ಪ್ರದೇಶಗಳಲ್ಲಿ ಮಾತ್ರವೇ ಸಣ್ಣ ಪ್ರಮಾಣದಲ್ಲಿ ಹರಿಯುತ್ತಿರುವುದನ್ನು ಬಿಟ್ಟರೆ ಉಳಿದೆಡೆ ನದಿಯ ಒಡಲು ಬರಿದಾಗಿದ್ದು, ಕಲ್ಲುಬಂಡೆಗಳೇ ಕಾಣುತ್ತಿವೆ. ಹೀಗಾಗಿ ಕುಡಿಯಲು ಮತ್ತು ಕೃಷಿಗೆ ಕಾವೇರಿ ನೀರನ್ನೇ ನಂಬಿಕೊಂಡಿದ್ದ ನಾಲ್ಕೈದು ಜಿಲ್ಲೆಗಳ ಲಕ್ಷಾಂತರ ಜನರು ಸಮಸ್ಯೆಗೆ ಸಿಲುಕುವ ಸ್ಥಿತಿ ಎದುರಾಗಿದೆ.

    ಬೇರೆ ಜಿಲ್ಲೆಯ ಮಾತಿರಲಿ, ಕಾವೇರಿ ತವರು ಕೊಡಗಿನಲ್ಲೇ ಕುಡಿಯುವ ನೀರಿಗೆ ಆಹಾಕಾರ ಎದುರಾಗುವ ದಿನಗಳು ಹತ್ತಿರವಾಗಿವೆ. ಕೊಡಗಿನ ಕುಶಾಲನಗರ, ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ಹುಣುಸೂರು ಸೇರಿದಂತೆ ಹಲವು ಪಟ್ಟಣಗಳಲ್ಲಿ ಈಗಾಗಲೇ ಸ್ಥಳೀಯ ಆಡಳಿತಗಳು ಕಾವೇರಿ ನದಿಗೆ ಮರಳಿನ ಮೂಟೆಗಳಿಂದ ಕಟ್ಟೆಕಟ್ಟಿ ನೀರು ಸಂಗ್ರಹಿಸಿ ಪಟ್ಟಣಗಳಿಗೆ ಪೂರೈಸುವ ಸ್ಥಿತಿ ನಿರ್ಮಾಣವಾಗಿದೆ. ಸಾಮಾನ್ಯವಾಗಿ ಕಾವೇರಿ ನದಿಯಲ್ಲಿ ನೀರು ಕಡಿಮೆಯಾಗುವುದಾದರೂ ಅದು ಏಪ್ರಿಲ್ ಅಂತ್ಯ ಅಥವಾ ಮೇ ತಿಂಗಳಲ್ಲಿ ಕಡಿಮೆಯಾಗುತಿತ್ತು. ಆದರೆ ಈ ಬಾರಿ ಏಪ್ರಿಲ್ ಆರಂಭದಲ್ಲೇ ಕಾವೇರಿ ಒಡಲು ಬಹುತೇಕ ಬರಿದಾಗಿರುವುದು ಆತಂಕ ಮೂಡಿಸಿದೆ.

    ಇದು ಕೇವಲ ಕೊಡಗಿಗೆ ಅಷ್ಟೇ ಅಲ್ಲ, ಮುಂದಿನ ದಿನಗಳಲ್ಲಿ ಮೈಸೂರು ಮಂಡ್ಯ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಿಗೂ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಮಳೆಗಾಲದಲ್ಲಿ ಉಕ್ಕಿ ಹರಿದು ಪ್ರವಾಹ ತಂದೊಡ್ಡುವ ಕಾವೇರಿ ಈ ಬಾರಿಯ ಬೇಸಿಗೆ ಆರಂಭದಲ್ಲಿ ಬಹುತೇಕ ಬತ್ತಿಹೋಗುವುದಕ್ಕೆ ಕಾರಣ ಕೊಡಗಿನ ಅಂತರ್ಜಲದಲ್ಲಿ ಕಡಿಮೆಯಾಗಿರೋದು ಪ್ರಮುಖ ಕಾರಣ ಎನ್ನಲಾಗುತ್ತಿದೆ.

    ಕೊಡಗಿನ ಅಂತರ್ಜಲ ಕಳೆದ 10 ವರ್ಷಗಳಲ್ಲಿ 2.9 ಮೀಟರ್ ಕಡಿಮೆಯಾಗಿದೆ. ಮತ್ತೊಂದೆಡೆ ಬಹುತೇಕ ಕೆರೆಗಳಲ್ಲಿ ಹೂಳು ತುಂಬಿದ್ದರೆ, ಸಾಕಷ್ಟು ಕೆರೆಗಳೇ ಇಲ್ಲದಂತೆ ಆಗಿವೆ. ಹೀಗಾಗಿ ಕೊಡಗಿನಲ್ಲಿ ಮಳೆಗಾಲದಲ್ಲಿ ಪ್ರವಾಹ ಎದುರಾಗುತ್ತಿದ್ದರೆ, ಬೇಸಿಗೆಯಲ್ಲಿ ಕಾವೇರಿ ಬತ್ತಿಹೋಗುತ್ತಿದೆ.

  • ಕಾವೇರಿ ನದಿಯಲ್ಲಿ ಅಕ್ರಮವಾಗಿ ಕಾಟೇಜ್ ನಿರ್ಮಾಣ – ಸ್ಥಳೀಯರಿಂದ ಆಕ್ರೋಶ

    ಕಾವೇರಿ ನದಿಯಲ್ಲಿ ಅಕ್ರಮವಾಗಿ ಕಾಟೇಜ್ ನಿರ್ಮಾಣ – ಸ್ಥಳೀಯರಿಂದ ಆಕ್ರೋಶ

    ಮಡಿಕೇರಿ : ಯಾವುದೇ ನದಿದಂಡೆಯಿಂದ 100 ಅಡಿ ದೂರದವರೆಗೆ ಕೃಷಿ ಚಟುವಟಿಕೆಯನ್ನೂ ಮಾಡುವಂತಿಲ್ಲ. ಆದರೆ ಕೊಡಗಿನಲ್ಲಿ ಕಾವೇರಿ ನದಿಯನ್ನೇ ಒತ್ತುವರಿ ಮಾಡಿಕೊಂಡು ರೆಸಾರ್ಟ್ ಗಳನ್ನು ನಿರ್ಮಿಸಿರುವ ಪ್ರಕರಣವೊಂದು ಜಿಲ್ಲೆಯ ಕುಶಾಲನಗರದ ಕಾವೇರಿ ನಿಸರ್ಗಧಾಮದ ಬಳಿ ಬೆಳಕಿಗೆ ಬಂದಿದೆ.

    ಅಬ್ದುಲ್ ಸಲಾಂ ಎಂಬವರು ಕಾವೇರಿ ನದಿಗೆ ತಡೆಗೋಡೆಯನ್ನು ನಿರ್ಮಿಸಿ ರೆಸಾರ್ಟಿನ ಕಾಟೇಜ್ ಗಳನ್ನು ನಿರ್ಮಿಸಿದ್ದಾರೆ. ಯಾವುದೇ ನದಿಯ ಹೈಫ್ಲೆಡ್ ಲೆವೆಲ್ ನಿಂದ 100 ಅಡಿಯವರೆಗಿನ ಜಾಗ ನದಿಯ ಬಫರ್ ಝೋನ್ ಆಗಿರುತ್ತದೆ. ಆ ಜಾಗದಲ್ಲಿ ಯಾವುದೇ ಚಟುವಟಿಕೆಯನ್ನು ನಡೆಸುವಂತಿಲ್ಲ. ಆದರೆ ಅಬ್ದುಲ್ ಸಲಾಂ, ಗುಡ್ಡೆಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ತಮ್ಮ 103/3, 104/2 ಮತ್ತು 104/3 ಸರ್ವೇ ನಂಬರ್ ಜಾಗದ ಜೊತೆಗೆ ಕಾವೇರಿ ನದಿಯನ್ನು ಒತ್ತುವರಿ ಮಾಡಿ ತಡೆಗೋಡೆಗಳನ್ನು ನಿರ್ಮಿಸಿದ್ದಾರೆ. ಜೊತೆಗೆ ಅದರ ಪಕ್ಕದಲ್ಲೇ ರೆಸಾರ್ಟ್ ಕಟ್ಟಡವನ್ನು ನಿರ್ಮಿಸಿದ್ದಾರೆ. ಇನ್ನು ಕೆಲವು ಕಟ್ಟಡಗಳನ್ನು ನಿರ್ಮಿಸುತ್ತಲೇ ಇದ್ದಾರೆ. ಕಾವೇರಿ ನದಿ ನೀರು ಅಬ್ದುಲ್ ಸಲಾಂ ಅವರು ನಿರ್ಮಿಸಿರುವ ತಡೆಗೋಡೆಗೆ ಇಂದಿಗೂ ಸಂಪೂರ್ಣ ನೀರು ತಾಗಿಕೊಂಡೇ ಹರಿಯುತ್ತಿದೆ.

    ಕಾವೇರಿ ನದಿಯ ಬಫರ್ ಝೋನ್ ಜಾಗವು ಒತ್ತುವರಿಯಾಗಿದೆ ಎಂದು ದೂರು ಬಂದಿರುವುದಾಗಿ 2018 ಕ್ಕೂ ಮೊದಲೇ ಗುಡ್ಡೆಹೊಸೂರು ಗ್ರಾಮ ಪಂಚಾಯಿತಿಯ ಪಿಡಿಓ ಅಧಿಕಾರಿ ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದಾರೆ. ದೂರು ಆಧರಿಸಿ ಜೀವನ್ ಎಂಬ ಸರ್ವೇ ಅಧಿಕಾರಿ ಪರಿಶೀಲನೆ ನಡೆಸಿ ಯಾವುದೇ ಜಾಗ ಒತ್ತುವರಿಯಾಗಿಲ್ಲ. ನದಿಯ ಬಫರ್ ಝೋನ್ ಜಾಗ ಹಾಗೆಯೇ ಇದೆ ಎಂದು ಸೋಮವಾರಪೇಟೆ ತಹಶೀಲ್ದಾರ್ ಅವರಿಗೆ ವರದಿ ನೀಡಿದ್ದಾರೆ. ಬಳಿಕ ತಹಶೀಲ್ದಾರ್ ಅವರು ಕೂಡ ಸ್ಥಳ ಪರಿಶೀಲನೆ ಮಾಡದೆಯೇ ಜಾಗವು ಯಾವುದೇ ಒತ್ತುವರಿಯಾಗಿಲ್ಲ ಎಂದು ದೃಢೀಕರಿಸಿದ್ದಾರೆ. ಕಾವೇರಿ ನದಿಯ ಬಫರ್ ಝೋನ್ ಜಾಗವು ಒತ್ತುವರಿಯಾಗಿರುವುದು ಸ್ಪಷ್ಟವಾಗಿ ಗೋಚರವಾಗುತ್ತಿದ್ದರೂ, ಸರ್ವೇ ಅಧಿಕಾರಿಗಳು ಮತ್ತು ತಹಶೀಲ್ದಾರ್ ಒತ್ತುವರಿಯಾಗಿಲ್ಲ ಎಂದು ವರದಿ ನೀಡಿರುವುದರ ಹಿಂದೆ ದೊಡ್ಡ ಭ್ರಷ್ಟಾಚಾರವೇ ನಡೆದಿದೆ ಎನ್ನೋದು ಹೋರಾಟಗಾರರ ಆಕ್ರೋಶ.

    ಮತ್ತೊಂದೆಡೆ ಕುಶಾಲನಗರ ಅಭಿವೃದ್ಧಿ ಪ್ರಾಧಿಕಾರವು ರೆಸಾರ್ಟ್ ನಿರ್ಮಾಣ ಯೋಜನೆಗೂ ಒಪ್ಪಿಗೆ ನೀಡಿದೆ. ಇಲ್ಲಿಯೂ ಕೂಡ ಕೊಟ್ಟಿರುವ ಪ್ಲಾನ್ ನಲ್ಲಿ ಬಫರ್ ಝೋನ್ ಜಾಗ ಒತ್ತುವರಿಯಾಗಿಲ್ಲವೆಂದು ಒಪ್ಪಿಗೆ ನೀಡಿದೆ. ಈ ಕುರಿತು ಮತ್ತೊಮ್ಮೆ ಪರಿಶೀಲನೆ ಮಾಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳು ಕಂದಾಯ ಇಲಾಖೆ ಅಧಿಕಾರಿಗಳಿಗೆ ದೂರು ನೀಡಿದ್ದರು. ಆದರೆ ಆ ಬಳಿಕ ಅಬ್ದುಲ್ ಸಲಾಂ ಅವರು ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧವೇ ಕೋರ್ಟ್ ಮೊರೆ ಹೋಗಿ ತಮ್ಮ ಜಾಗಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಎಂಟ್ರಿ ಕೊಡದಂತೆ ಲಾಯರ್ ನೋಟಿಸ್ ಮಾಡಿದ್ದಾರೆ. ಸದ್ಯ ಪ್ರಕರಣ ಈಗಷ್ಟೇ ತಮ್ಮ ಗಮನಕ್ಕೆ ಬಂದಿದ್ದು ಸಂಬಂಧಿಸಿದ ಇಲಾಖೆ ಅಧಿಕಾರಿಗಳಿಗೆ ಕ್ರಮವಹಿಸುವಂತೆ ಸೂಚಿಸುವುದಾಗಿ ಜಿಲ್ಲಾಧಿಕಾರಿ ಹೇಳಿದ್ದಾರೆ.

  • ಕಾವೇರಿ ನದಿಯಲ್ಲಿ ಅಕ್ರಮ ಮೀನುಗಾರಿಕೆಗೆ ಪ್ರಯತ್ನ – 8 ಜನರ ಬಂಧನ

    ಕಾವೇರಿ ನದಿಯಲ್ಲಿ ಅಕ್ರಮ ಮೀನುಗಾರಿಕೆಗೆ ಪ್ರಯತ್ನ – 8 ಜನರ ಬಂಧನ

    ಚಾಮರಾಜನಗರ: ಕಾವೇರಿ ನದಿಯಲ್ಲಿ ಅಕ್ರಮವಾಗಿ ಮೀನುಗಾರಿಕೆಗೆ ತೆರಳುತ್ತಿದ್ದ 8 ಮಂದಿ ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.

    ಕೊಳ್ಳೇಗಾಲ ತಾಲೂಕಿನ ಸತ್ತೇಗಾಲದ ಜಾಗೇರಿ ಚಿನ್ನಪ್ಪ(42), ಅಮಲ್ ಅರ್ಪುದ್ ಜಯರಾಜ್(32), ಪೀಟರ್ ಪೇರಿಯನಾಯಗಂ (35), ಸ್ಟ್ಯಾನ್ಯಿ ಜಾನ್ ಬೋಸ್ಕೊ(35), ಅರುಳ್ ರಾಜ್ (35), ಪೆರಿಯನಾಯಗಮ್ಮ(34), ಜ್ಯೋತಿಪ್ರಿಯಾ(28) ಹಾಗೂ ಸುನೀತಾ(28) ಬಂಧಿತ ಆರೋಪಿಗಳು. ಕಾವೇರಿ ವನ್ಯಜೀವಿ ವ್ಯಾಪ್ತಿಯ ಅರಣ್ಯದ ಚಿಕ್ಕಲ್ಲೂರು ಬೀಟ್ ಗೆ ಸೇರಿದ ಅರಣ್ಯದ ಎಣ್ಣೆಹೊಳೆಯ ಬಳಿ ಅಕ್ರಮವಾಗಿ ಮೀನು ಹಿಡಿಯಲು ಪರಿಕರಗಳೊಂದಿಗೆ ಆರೋಪಿಗಳು ಹೊರಟಿದ್ದರು.

    ಈ ಬಗ್ಗೆ ಖಚಿತ ಮಾಹಿತಿ ಆಧರಿಸಿ ಕಾವೇರಿ ವನ್ಯಜೀವಿ ಡಿಸಿಎಫ್ ಎಸ್.ರಮೇಶ್ ಹಾಗೂ ಎಸಿಎಫ್ ಅಂಕರಾಜು ಮಾರ್ಗದರ್ಶನದಲ್ಲಿ ಇಲ್ಲಿನ ಅರಣ್ಯಾಧಿಕಾರಿಗಳು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ ಐದು ಬೋಟ್, ಐದು ಬಲೆ, ಐದು ಹುಟ್ಟು, ಮೀನು ಬೇಟೆಯ ಪರಿಕರಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.