Tag: ಕಾಶೀರ ಪಂಡಿತರು

  • ಕಾಶ್ಮೀರ್ ಫೈಲ್ಸ್‌ ಸಿನಿಮಾ ವೀಕ್ಷಣೆಗೆ ಜೆಡಿಎಸ್‌ ಶಾಸಕರ ನಿರಾಸಕ್ತಿ

    ಕಾಶ್ಮೀರ್ ಫೈಲ್ಸ್‌ ಸಿನಿಮಾ ವೀಕ್ಷಣೆಗೆ ಜೆಡಿಎಸ್‌ ಶಾಸಕರ ನಿರಾಸಕ್ತಿ

    ಬೆಂಗಳೂರು: ದಿ ಕಾಶ್ಮೀ‌ರ್‌ ಫೈಲ್ಸ್ ಸಿನಿಮಾ ನೋಡಲು ಜೆಡಿಎಸ್ ಬಹುತೇಕ ಶಾಸಕರು ನಿರಾಸಕ್ತಿ ತೋರಿಸಿದ್ದಾರೆ.

    ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಬಹುತೇಕ ಜೆಡಿಎಸ್ ಶಾಸಕರಿಂದ ಕಾಶ್ಮೀರಿ ಫೈಲ್ಸ್ ಸಿನಿಮಾ ವೀಕ್ಷಣೆಗೆ ನಿರಾಸಕ್ತಿ ತೋರಿದ್ದಾರೆ.

    ಕಾಶ್ಮೀರಿ ಪಂಡಿತರ ವಲಸೆ ಮತ್ತು ಹತ್ಯಾಕಾಂಡ ಕುರಿತ ಚಿತ್ರ ʼದಿ ಕಾಶ್ಮೀರ್ ಫೈಲ್ಸ್’ ವೀಕ್ಷಣೆಗೆ ಮಂಗಳವಾರ ವಿಧಾನಸಭೆ ಸದಸ್ಯರಿಗೆ ಅವಕಾಶ ಮಾಡಿಕೊಡಲಾಗಿದೆ. ಈ ಸಂಬಂಧ ವಿಧಾನಸಭೆ ಕಲಾಪದಲ್ಲಿಂದು ವಿಶ್ವೇಶ್ವರ ಹೆಗಡೆ ಕಾಗೇರಿ ಘೋಷಣೆ ಮಾಡಿದರು. ಆಡಳಿತ ಮತ್ತು ವಿಪಕ್ಷಗಳ ಸದಸ್ಯರಿಗೆ ಚಿತ್ರ ವೀಕ್ಷಣೆಗೆ ಆಹ್ವಾನ ನೀಡಿದರು. ಇದನ್ನೂ ಓದಿ: ಕಾಶ್ಮೀರದಲ್ಲಿದ್ದ ನನ್ನ ಪೂರ್ವಜರು ನೋವು ತಿಂದೆ ಕಾಶ್ಮೀರ ಬಿಟ್ಟರು : ಅನಂತ್ ನಾಗ್ ಬಿಚ್ಚಿಟ್ಟ ಕಾಶ್ಮೀರಿ ಕ್ರೌರ್ಯ

    ಸಂಜೆ 6:45 ಕ್ಕೆ ಮಂತ್ರಿ ಮಾಲ್‍ನಲ್ಲಿ ಶಾಸಕರಿಗೆ ಸಿನಿಮಾ ವೀಕ್ಷಣೆಗೆ ವಿಧಾನಸಭೆ ಸಚಿವಾಲಯದಿಂದ ವ್ಯವಸ್ಥೆ ಮಾಡಲಾಗಿದೆ. ಸಿನಿಮಾಗೆ ಸರ್ಕಾರ ತೆರಿಗೆ ವಿನಾಯಿತಿ ನೀಡಿದ್ದಕ್ಕೆ ಸ್ಪೀಕರ್ ಕಾಗೇರಿ ಇದೇ ಸಂದರ್ಭದಲ್ಲಿ ಅಭಿನಂದನೆ ಸಲ್ಲಿಸಿದರು.ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಅಂಥದ್ದೇನಿದೆ ಸಿನಿಮಾದಲ್ಲಿ? ದಳ್ಳುರಿಯಲ್ಲಿ ದಹನದ ಕಥನ!

    ಶಾಸಕರು ಹಾಗೂ ಸಚಿವರು ಸಿನಿಮಾ ವೀಕ್ಷಿಸಲು ಬರಬೇಕು. ಎಲ್ಲರೂ ಜೊತೆಗೂಡಿ ನೋಡೋಣ. ವಿರೋಧ ಪಕ್ಷಗಳ ಸದಸ್ಯರೂ ಸಿನಿಮಾ ನೋಡಲು ಬರಬೇಕು ಎಂದು ಸ್ಪೀಕರ್ ಆಹ್ವಾನ ನೀಡಿದರು. ಭಾನುವಾರ ಸಿಎಂ ಬೊಮ್ಮಾಯಿ ಹಾಗೂ ಸಚಿವ ಮುನಿರತ್ನ ಸಹ ಸಿನಿಮಾ ವೀಕ್ಷಣೆ ಮಾಡಿದರು. ಬಳಿಕ ಸಿಎಂ ಈ ಚಿತ್ರಕ್ಕೆ ಶೇ.100 ತೆರಿಗೆ ವಿನಾಯಿತಿ ಘೋಷಣೆ ಮಾಡಿದರು. ಇದನ್ನೂ ಓದಿ: ಏನದು ಸಿನಿಮಾ? ನಾನು ಹೋಗಲ್ಲ: ಸ್ಪೀಕರ್‌ ಆಹ್ವಾನ ತಿರಸ್ಕರಿಸಿದ ಸಿದ್ದು

  • ಪಂಡಿತರಿಗಿಂತ ಹೆಚ್ಚಾಗಿ ಮುಸ್ಲಿಮರು ಕಾಶ್ಮೀರದಲ್ಲಿ ಹತ್ಯೆಯಾಗಿದ್ದಾರೆ: ಕೇರಳ ಕಾಂಗ್ರೆಸ್‌

    ಪಂಡಿತರಿಗಿಂತ ಹೆಚ್ಚಾಗಿ ಮುಸ್ಲಿಮರು ಕಾಶ್ಮೀರದಲ್ಲಿ ಹತ್ಯೆಯಾಗಿದ್ದಾರೆ: ಕೇರಳ ಕಾಂಗ್ರೆಸ್‌

    ತಿರುವನಂತಪುರಂ: ವಿವೇಕ್‌ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ ಫೈಲ್ಸ್‌ ಚಿತ್ರ ಈಗ ಬಾಕ್ಸ್‌ ಆಫೀಸ್‌ನಲ್ಲಿ ದೂಳು ಎಬ್ಬಿಸುತ್ತಿದ್ದಂತೆ ಕಾಶ್ಮೀರ ಪಂಡಿತರಿಗೆ ಸಂಬಂಧಿಸಿದಂತೆ ಕೇರಳ ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಈಗ ಸಾಮಾಜಿಕ ಜಾಲತಾಣದಲ್ಲಿ ಬಿರುಗಾಳಿ ಎಬ್ಬಿಸಿದೆ.

    ಕೇರಳ ಕಾಂಗ್ರೆಸ್‌ ಆರೋಪ ಏನು?
    1990 ರಿಂದ 2007ರವರೆಗೆ 399 ಪಂಡಿತರನ್ನು ಉಗ್ರರು ಕೊಂದಿದ್ದಾರೆ. ಈ 17 ವರ್ಷಗಳಲ್ಲಿ ಉಗ್ರರಿಂದ ಹತ್ಯೆಯಾದ ಮುಸ್ಲಿಮರ ಸಂಖ್ಯೆ 15,000

    ಕಾಶ್ಮೀರಿ ಪಂಡಿತರ ವಲಸೆಗೆ ಕಾರಣವಾಗಿದ್ದು ಅಂದಿನ ಗೌರ್ನರ್ ಜಗ್‍ಮೋಹನ್. ಆರ್‌ಎಸ್‍ಎಸ್ ಮೂಲದ ಜಗ್‍ಮೋಹನ್ ಸೂಚನೆ ಮೇಲೆ ಪಂಡಿತರು ಕಾಶ್ಮೀರ ತ್ಯಜಿಸಿದ್ದರು.

    ಬಿಜೆಪಿ ಬೆಂಬಲಿತ ವಿಪಿ ಸಿಂಗ್ ನೇತೃತ್ವದ ಸರ್ಕಾರ ಇದ್ದಾಗ ಪಂಡಿತರ ವಲಸೆ ನಡೆದಿದ್ದು. 1989ರ ಡಿಸೆಂಬರ್‌ನಲ್ಲಿ ಬಿಜೆಪಿ ಬೆಂಬಲಿತ ವಿಪಿ ಸರ್ಕಾರ ಅಸ್ತಿತ್ವಕ್ಕೆ ಬಂತು. ಕಾಶ್ಮೀರದಿಂದ ಪಂಡಿತರ ವಲಸೆ ಶುರುವಾಗಿದ್ದು 1990ರ ಜನವರಿಯಲ್ಲಿ ಆಗ ಪಂಡಿತರಿಗೆ ಭದ್ರತೆ ಒದಗಿಸಲು ಜಗ್‍ಮೋಹನ್‍ಗೆ ಬಿಜೆಪಿ ಸೂಚನೆ ನೀಡಿರಲಿಲ್ಲ. ಇದನ್ನೂ ಓದಿ: ಶಾಸಕರಿಗೆ ‘ದಿ ಕಾಶ್ಮೀರ್ ಫೈಲ್ಸ್’ ವೀಕ್ಷಣೆಗಾಗಿ ಸದನದಲ್ಲೇ ಆಹ್ವಾನಿಸಿದ ಸ್ಪೀಕರ್ ಕಾಗೇರಿ

    ಮಹಾ ವಲಸೆಗೆ ಸೂಚನೆ ನೀಡಿದಾಗ ಬಿಜೆಪಿ ಏನು ಮಾಡುತ್ತಿತ್ತು?. ಕೇಂದ್ರದಲ್ಲಿ 2 ಬಾರಿ, ಕಾಶ್ಮೀರದಲ್ಲಿ ಒಮ್ಮೆ ಅಧಿಕಾರಕ್ಕೇರಿದ್ದ ಬಿಜೆಪಿ ಏಕೆ ಸುಮ್ಮನಿತ್ತು? ಕಾಶ್ಮೀರಿ ಪಂಡಿತರನ್ನು ಕಾಶ್ಮೀರಕ್ಕೆ ಮತ್ತೆ ಏಕೆ ಕರೆತರಲಿಲ್ಲ? ಭದ್ರತೆ ಏಕೆ ಒದಗಿಸಲಿಲ್ಲ?

    ಬಿಜೆಪಿ ದೇಶದಲ್ಲಿ ಹಿಂದೂ-ಮುಸ್ಲಿಮರನ್ನು ವಿಭಜಿಸುವ ಕೆಲಸ ಮಾಡುತ್ತಿದೆ. ಕಾಶ್ಮೀರಿ ಪಂಡಿತರ ವಲಸೆ ವೇಳೆ ಬಿಜೆಪಿ ಮಾಡಿದ್ದು ಅಯೋಧ್ಯೆ ರಥಯಾತ್ರೆ. ಪಂಡಿತರ ವಿಚಾರದಲ್ಲಿ ಬಿಜೆಪಿ ವಿಷ-ಸುಳ್ಳು ಬಿತ್ತಲು ಪ್ರಯತ್ನಿಸುತ್ತಿದೆ. ಈ ಮೂಲಕ ಮುಂದಿನ ಚುನಾವಣೆ ಗೆಲ್ಲಲು ಬಿಜೆಪಿ ಷಡ್ಯಂತ್ರ್ಯ ನಡೆಸಿದೆ.

    ಟ್ವೀಟ್‌ ಡಿಲೀಟ್‌:
    1990 ರಿಂದ 2007ರವರೆಗೆ 399 ಪಂಡಿತರನ್ನು ಉಗ್ರರು ಕೊಂದಿದ್ದಾರೆ. ಈ 17 ವರ್ಷಗಳಲ್ಲಿ ಉಗ್ರರಿಂದ ಹತ್ಯೆಯಾದ ಮುಸ್ಲಿಮರ ಸಂಖ್ಯೆ 15,000 ಎಂಬ ಟ್ವೀಟ್‌ ಅನ್ನು ಕೇರಳ ಕಾಂಗ್ರೆಸ್‌ ಡಿಲೀಟ್‌ ಮಾಡಿದೆ. ಈಗ ಟ್ವೀಟ್‌ ಡಿಲೀಟ್‌ ಮಾಡಿದ್ದರೂ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಪ್ರಶ್ನೆಗಳನ್ನು ಕೇಳಿ ನೆಟ್ಟಿಗರು ಕೇರಳ ಕಾಂಗ್ರೆಸ್‌ನ್ನು ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.