Tag: ಕಾಶ್ಮೀರ್

  • ಆರ್ಟಿಕಲ್ 370 ಟ್ರೈಲರ್ ನಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ

    ಆರ್ಟಿಕಲ್ 370 ಟ್ರೈಲರ್ ನಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ

    ಬಾಲಿವುಡ್ ನಲ್ಲಿ ಮತ್ತೊಂದು ಭರವಸೆಯ ಸಿನಿಮಾ ಮೂಡಿ ಬಂದಿದೆ. ಕನ್ನಡತಿ ಪ್ರಿಯಾ ಮಣಿ ಹಾಗೂ ಬಾಲಿವುಡ್ ಹೆಸರಾಂತ ನಟಿ ಯಾಮಿನಿ ಗೌತಮ್ ಕಾಂಬಿನೇಷನ್ ನ ‘ಆರ್ಟಿಕಲ್ 370’ (Article 370)ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ನೋಡುಗರಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈ ಟ್ರೈಲರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಪಾತ್ರಗಳು ಇವೆ.

    ರಿಲೀಸ್ ಆದ ಟ್ರೈಲರ್ (Trailer)ನಲ್ಲಿ ‘ಪೂರಾ ಕಾ ಪೂರಾ ಕಾಶ್ಮೀರ್ (Kashmir), ಭಾರತ್ ದೇಶ್ ಕಾ ಹಿಸ್ಸಾ ಥಾ. ಹೇ ಔರ್ ರೆಹೇಗಾ’ ಎನ್ನುವ ಮಾತು ಮತ್ತೆ ಮತ್ತೆ ಪ್ರೇರೇಪಿಸುತ್ತಿದೆ. ಅಂದಹಾಗೆ ಜಮ್ಮು ಕಾಶ್ಮೀರದ ವಿಶೇಷಾಧಿಕಾರವಾದ ಆರ್ಟಿಕಲ್ 370 ಅನ್ನು ತೆಗೆದು ಹಾಕಲಾದ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ. ಫೆಬ್ರವರಿ 23 ರಂದು ಈ ಸಿನಿಮಾ ತೆರೆಗೆ ಬರಲಿದ್ದು, ಯಾಮಿ ಗೌತಮ್ ಖಡಕ್ ಎನ್.ಐ.ಎ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ.

    ಟ್ರೈಲರ್ ನಲ್ಲಿ ಕಾಶ್ಮೀರ ಭಯೋತ್ಪಾದನೆ, ಸೇನಾಧಿಕಾರಿಗಳ ಹೋರಾಟ, ಆರ್ಟಿಕಲ್ 370 ತೆಗೆದರೆ ಏನೆಲ್ಲ ಆಗಲಿದೆ ಎನ್ನುವ ಚರ್ಚೆ. ಭಯೋತ್ಪಾದಕರ ಕುತಂತ್ರ ಹೀಗೆ ಸಾಕಷ್ಟು ವಿಷಯಗಳನ್ನು 2 ನಿಮಿಷ 40 ಸೆಕೆಂಡ್ ನ ಟ್ರೈಲರ್ ನಲ್ಲಿ ತೋರಿಸಲಾಗಿದೆ. ಶಾಶ್ವತ್ ಸಚ್ ದೇವ್ ಅವರ ಹಿನ್ನೆಲೆ ಸಂಗೀತ ಸೂಪರ್.

     

    ಕಾಶ್ಮೀರ ಕುರಿತಂತೆ ಈವರೆಗೂ ಬಂದಿರುವ ಯಾವುದೇ ಸಿನಿಮಾ ಸೋತಿಲ್ಲ. ಬಾಕ್ಸ್ ಆಫೀಸಿನಲ್ಲಿ ಕೋಟಿ ಕೋಟಿ ಹಣ ಬಾಚಿವೆ. ಜೊತೆಗೆ ಅತ್ಯುತ್ತಮ ಪ್ರತಿಕ್ರಿಯೆಯನ್ನೂ ನೋಡುಗರು ಕೊಟ್ಟಿದ್ದಾರೆ. ಆರ್ಟಿಕಲ್ 370 ಚಿತ್ರದ ಕುರಿತು ಈಗಾಗಲೇ ನಿರೀಕ್ಷೆ ಹೆಚ್ಚಿವೆ. ಅದರಲ್ಲೂ ಟ್ರೈಲರ್ ರಿಲೀಸ್ ನಂತರ ಈ ಕಾಯುವಿಕೆ ಇಮ್ಮಡಿಯಾಗಿದೆ.

  • ಕಾಶ್ಮೀರದಿಂದ ಶುರುವಾಯ್ತು ಶಾರುಖ್ ನಟನೆಯ ‘ಡಂಕಿ’ ಚಿತ್ರ

    ಕಾಶ್ಮೀರದಿಂದ ಶುರುವಾಯ್ತು ಶಾರುಖ್ ನಟನೆಯ ‘ಡಂಕಿ’ ಚಿತ್ರ

    ಬಾಲಿವುಡ್ ಖ್ಯಾತ ನಟ ಶಾರುಖ್ ಖಾನ್ (Shah Rukh Khan) ನಟನೆಯ ‘ಜವಾನ್’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಈ ನಡುವೆ ಶಾರುಖ್ ಮತ್ತೊಂದು ಸಿನಿಮಾ ಒಪ್ಪಿಕೊಂಡಿದ್ದಾರೆ. ಹೆಸರಾಂತ ನಿರ್ದೇಶಕ ರಾಜ್ ಕುಮಾರ್ ಹಿರಾನಿ (Raj Kumar Hirani) ನಿರ್ದೇಶನದಲ್ಲಿ ತಯಾರಾಗುತ್ತಿರುವ ಡಂಕಿ ಚಿತ್ರದಲ್ಲಿ ಅವರು ನಟಿಸುತ್ತಿದ್ದು, ಈ ಸಿನಿಮಾದ ಶೂಟಿಂಗ್ ಸದ್ದಿಲ್ಲದೇ ಶುರುವಾಗಿದೆ.

    ಡಂಕಿ ಸಿನಿಮಾವನ್ನು ನಿರ್ದೇಶಕರು ಕಾಶ್ಮೀರದಿಂದ (Kashmir) ಶುರು ಮಾಡಿದ್ದಾರೆ. ಈ ಭಾಗದ ಚಿತ್ರೀಕರಣಕ್ಕಾಗಿ ಶಾರುಖ್ ಕಾಶ್ಮೀರದಲ್ಲಿ ಬೀಡುಬಿಟ್ಟಿದ್ದಾರೆ. ಕಾಶ್ಮೀರದಲ್ಲಿ ತಮ್ಮ ನೆಚ್ಚಿನ ನಟ ಶಾರುಖ್ ಶೂಟಿಂಗ್ ನಲ್ಲಿ ಪಾಲ್ಗೊಂಡ ವಿಡಿಯೋವನ್ನು ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಂಡಿದ್ದಾರೆ.

    ಹನ್ನೊಂದು ವರ್ಷದ ನಂತರ ಶಾರುಖ್ ಸಿನಿಮಾ ಕಾಶ್ಮೀರದಲ್ಲಿ ಚಿತ್ರೀಕರಣವಾಗುತ್ತಿದ್ದು,  ಈ ಹಿಂದೆ ಜಬ್ ತಕ್ ಹೈ ಜಾನ್ ಸಿನಿಮಾದ ಶೂಟಿಂಗ್ ಅದೇ ಸ್ಥಳದಲ್ಲೇ ನಡೆದಿತ್ತು ಎಂದು ಅಭಿಮಾನಿಗಳು ನೆನಪಿಸಿಕೊಂಡಿದ್ದಾರೆ. ಬರೋಬ್ಬರಿ 11 ವರ್ಷಗಳ ಬಳಿಕ ಆ ನೆಲದಲ್ಲಿ ಶಾರುಖ್ ಕಾಲಿಟ್ಟಿರುವುದು ಅಭಿಮಾನಿಗಳಿಗೆ ಸಹಜವಾಗಿಯೇ ಸಂಭ್ರಮ ತಂದಿದೆ. ಇದನ್ನೂ ಓದಿ:ನಾನು ಮಾತಾಡಿದರೆ ಸಮಂತಾ ಕಥೆ ಅಷ್ಟೆ: ಮತ್ತೆ ಗುಡುಗಿದ ಚಿಟ್ಟಿ ಬಾಬು

    ಡಂಕಿ ಸಿನಿಮಾದಲ್ಲಿ ಶಾರುಖ್ ಜೊತೆ ತಾಪ್ಸಿ ಪನ್ನು(Taapsee Pannu) ಮತ್ತು ವಿಕ್ಕಿ ಕೌಶಲ್ (Vicky Kaushal) ನಟಿಸಿದ್ದು, ಸದ್ಯ ಕಾಶ್ಮೀರದ ಸೋನ್ ಮಾರ್ಗ್ ಪ್ರದೇಶದಲ್ಲಿ ಮಾತಿನ ಭಾಗದ ಚಿತ್ರೀಕರಣವನ್ನು ಮಾಡುತ್ತಿದ್ದಾರಂತೆ ನಿರ್ದೇಶಕ ರಾಜಕುಮಾರ್ ಹಿರಾನಿ.

  • ಕಾಶ್ಮೀರದಲ್ಲಿ ಕಲ್ಲೆಸೆದಿಲ್ಲ ಎಂದು ಉಲ್ಟಾ ಹೊಡೆದ್ರಾ ಬಾಲಿವುಡ್ ನಟ ಇಮ್ರಾನ್ ಹಶ್ಮಿ?: ನೆಟ್ಟಿಗರ ಅನುಮಾನ

    ಕಾಶ್ಮೀರದಲ್ಲಿ ಕಲ್ಲೆಸೆದಿಲ್ಲ ಎಂದು ಉಲ್ಟಾ ಹೊಡೆದ್ರಾ ಬಾಲಿವುಡ್ ನಟ ಇಮ್ರಾನ್ ಹಶ್ಮಿ?: ನೆಟ್ಟಿಗರ ಅನುಮಾನ

    ಕಾಶ್ಮೀರದಲ್ಲಿ ಬಾಲಿವುಡ್ ನಟ ಇಮ್ರಾನ್ ಹಶ್ಮಿ (Emraan Hashmi) ಮೇಲೆ ಕಲ್ಲು ತೂರಲಾಗಿದೆ ಎಂದು ಹೇಳಲಾಗಿತ್ತು. ಏಕಾಏಕಿ ನಡೆದ ದಾಳಿಯಿಂದ ಇಮ್ರಾನ್ ವಿಚಲಿತರಾಗಿದ್ದರು ಎನ್ನುವ ಮಾಹಿತಿಯೂ ಹೊರ ಬಿದ್ದಿತ್ತು. ಅವರ ಸಿನಿಮಾದ ಶೂಟಿಂಗ್ ಕಾಶ್ಮೀರದಲ್ಲಿ ನಡೆಯುತ್ತಿರುವುದರಿಂದ, ಅವರು ಅಲ್ಲಿಯೇ ಇದ್ದಾರೆ ಎಂದು, ಅವರಿಗೆ ಪೊಲೀಸ್ ರಕ್ಷಣೆ ಒದಗಿಸಲಾಗಿದೆ ಎಂದು ಹೇಳಲಾಗಿತ್ತು. ಆದರೆ, ಇದ್ಯಾವುದೂ ಸುಳ್ಳು ಎಂದಿದ್ದಾರೆ ಇಮ್ರಾನ್.

    ತಮ್ಮ ಮೇಲೆ ಯಾವುದೇ ದಾಳಿ ಆಗಿಲ್ಲ. ಯಾರೂ ಕಲ್ಲು ತೂರಿಲ್ಲ. ಹರಡಿರುವ ಸುದ್ದಿ ಸುಳ್ಳು. ಗಾಸಿಪ್ ಹರಡಿಸಿದ್ದಾರೆ. ನಾನು ಕಾಶ್ಮೀರದಲ್ಲಿ ಸೇಫ್ ಆಗಿದ್ದೇನೆ. ಚಿತ್ರೀಕರಣದಲ್ಲಿ ಭಾಗಿ ಆಗಿದ್ದೇನೆ ಎಂದು ಹಶ್ಮಿ ತಿಳಿಸಿದ್ದಾರೆ. ಈ ವಿಷಯದಲ್ಲಿ ಇಮ್ರಾನ್ ಸುಳ್ಳು ಹೇಳಿದ್ದಾರೆ ಎಂದು ಹಲವರು ಆಕ್ಷೇಪ ವ್ಯಕ್ತ ಪಡಿಸಿದ್ದಾರೆ. ತಮ್ಮ ರಕ್ಷಣೆಗಾಗಿ ನಡೆದಿರುವ ಘಟನೆಯನ್ನೂ ನಡೆದಿಲ್ಲ ಎಂದು ಹೇಳುತ್ತಿದ್ದಾರೆ ಎಂದು ಕೆಲವರು ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ:‘ಸೈಮಾ ಅವಾರ್ಡ್’ ಐಷಾರಾಮಿ ಹೋಟೆಲ್‌ನಲ್ಲಿ ಸೆಲೆಬ್ರಿಟಿಗಳ ತಡರಾತ್ರಿ ಪಾರ್ಟಿ : FIR ದಾಖಲು

    ಬಾಲಿವುಡ್ ನ ಹೆಸರಾಂತ ನಟ ಇಮ್ರಾನ್ ಹಶ್ಮಿ, ಮೂರು ದಿನಗಳಿಂದ ಕಾಶ್ಮೀರದಲ್ಲಿ (Kashmir) ಬೀಡು ಬಿಟ್ಟಿದ್ದರು. ‘ಗ್ರೌಂಡ್ ಜೀರೊ’ (Ground Zero) ಸಿನಿಮಾದ ಶೂಟಿಂಗ್ ಗಾಗಿ ಅವರು ಅಲ್ಲಿದ್ದರು. ಎರಡು ದಿನಗಳಿಂದ ಸತತ ಈ ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಏಕಾಏಕಿಯಾದ ಈ ದಾಳಿ ಕಂಡು ಇಮ್ರಾನ್ ಆಘಾತಗೊಂಡಿದ್ದಾರೆ ಎಂದು ಹೇಳಲಾಗಿತ್ತು.

    ಕಾಶ್ಮೀರದ ಪಹಲ್ಗಾಂನಲ್ಲಿ ಇಮ್ರಾನ್ ಹಶ್ಮಿ ನಟನೆಯ ಗ್ರೌಂಡ್ ಜೀರೊ ಸಿನಿಮಾದ ಚಿತ್ರೀಕರಣ (Shooting) ನಡೆಯುತ್ತಿತ್ತು. ಈ ಸಿನಿಮಾದ ಶೂಟಿಂಗ್ ಮುಗಿಸಿಕೊಂಡು ಪಹಲ್ಗಾಂ ಮಾರುಕಟ್ಟೆಗೆ ಇಮ್ರಾನ್ ಬಂದಿದ್ದರು. ಈ ವೇಳೆ ಅವರ ಮೇಲೆ ಕಲ್ಲು ತೂರಾಟ (Stone pelting)  ಮಾಡಲಾಗಿದೆ. ಏಕಾಏಕಿ ನಡೆದ ಈ ದಾಳಿಗೆ ಇಮ್ರಾನ್  ಶಾಕ್ ಗೆ ಒಳಗಾಗಿದ್ದಾರೆ. ಯಾರು ಇದನ್ನು ಮಾಡಿದ್ದು, ಯಾಕೆ ಕಲ್ಲು ತೂರಾಟ ಮಾಡಿದರು ಎನ್ನುವ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎನ್ನಲಾಗಿತ್ತು.

    ಇಮ್ರಾನ್ ಮೇಲೆ ದಾಳಿ ಆಗುತ್ತಿದ್ದಂತೆಯೇ ಕೂಡಲೇ ಪೊಲೀಸರು (Police) ಸ್ಥಳಕ್ಕೆ ಬಂದಿದ್ದಾರೆ. ಆಮೇಲೆ ಪಹಲ್ಗಾಂ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಯಾರನ್ನೂ ಬಂಧಿಸಿಲ್ಲ. ಆದರೆ, ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇಮ್ರಾನ್ ಹಶ್ಮಿ ತಮ್ಮ ಮೇಲೆ ಈ ರೀತಿಯಲ್ಲಿ ಯಾವುದೇ ದಾಳಿ ಆಗಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಕಾಶ್ಮೀರದಲ್ಲಿ ಕಲ್ಲು ತೂರಾಟ

    ಬಾಲಿವುಡ್ ನಟ ಇಮ್ರಾನ್ ಹಶ್ಮಿ ಮೇಲೆ ಕಾಶ್ಮೀರದಲ್ಲಿ ಕಲ್ಲು ತೂರಾಟ

    ಬಾಲಿವುಡ್ ನ ಹೆಸರಾಂತ ನಟ ಇಮ್ರಾನ್ ಹಶ್ಮಿ (Emraan Hashmi), ಮೂರು ದಿನಗಳಿಂದ ಕಾಶ್ಮೀರದಲ್ಲಿ ಬೀಡು ಬಿಟ್ಟಿದ್ದರು. ‘ಗ್ರೌಂಡ್ ಜೀರೊ’ ಸಿನಿಮಾದ ಶೂಟಿಂಗ್ ಗಾಗಿ ಅವರು ಅಲ್ಲಿದ್ದರು. ಎರಡು ದಿನಗಳಿಂದ ಸತತ ಈ ಸಿನಿಮಾದ ಚಿತ್ರೀಕರಣ ನಡೆಯಿತ್ತು. ಈ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ಏಕಾಏಕಿಯಾದ ಈ ದಾಳಿ ಕಂಡು ಇಮ್ರಾನ್ ಆಘಾತಗೊಂಡಿದ್ದಾರೆ.

    ಕಾಶ್ಮೀರದ (Kashmir) ಪಹಲ್ಗಾಂನಲ್ಲಿ ಇಮ್ರಾನ್ ಹಶ್ಮಿ ನಟನೆಯ ಗ್ರೌಂಡ್ ಜೀರೊ (Ground Zero) ಸಿನಿಮಾದ ಚಿತ್ರೀಕರಣ ನಡೆಯುತ್ತಿತ್ತು. ಈ ಸಿನಿಮಾದ ಶೂಟಿಂಗ್ (Shooting) ಮುಗಿಸಿಕೊಂಡು ಪಹಲ್ಗಾಂ ಮಾರುಕಟ್ಟೆಗೆ ಇಮ್ರಾನ್ ಬಂದಿದ್ದರು. ಈ ವೇಳೆ ಅವರ ಮೇಲೆ ಕಲ್ಲು ತೂರಾಟ (Stone pelting) ಮಾಡಲಾಗಿದೆ. ಏಕಾಏಕಿ ನಡೆದ ಈ ದಾಳಿಗೆ ಇಮ್ರಾನ್  ಶಾಕ್ ಗೆ ಒಳಗಾಗಿದ್ದಾರೆ. ಯಾರು ಇದನ್ನು ಮಾಡಿದ್ದು, ಯಾಕೆ ಕಲ್ಲು ತೂರಾಟ ಮಾಡಿದರು ಎನ್ನುವ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ:`ಗಿಚ್ಚಿ ಗಿಲಿಗಿಲಿ’ ವಿನ್ನರ್ ಆದ ವನ್ಷಿಕಾ, ರನ್ನರ್ ಅಪ್ ಆಗಿ ನಿವೇದಿತಾ ಗೌಡ

    ಇಮ್ರಾನ್ ಮೇಲೆ ದಾಳಿ ಆಗುತ್ತಿದ್ದಂತೆಯೇ ಕೂಡಲೇ ಪೊಲೀಸರು ಸ್ಥಳಕ್ಕೆ ಬಂದಿದ್ದಾರೆ. ಆಮೇಲೆ ಪಹಲ್ಗಾಂ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಈವರೆಗೂ ಯಾರನ್ನೂ ಬಂಧಿಸಿಲ್ಲ. ಆದರೆ, ಕಿಡಿಗೇಡಿಗಳ ಬಂಧನಕ್ಕೆ ಪೊಲೀಸರು (Police) ಬಲೆ ಬೀಸಿದ್ದಾರೆ ಎಂದು ಹೇಳಲಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ವಿಜಯ್ ದೇವರಕೊಂಡ, ಸಮಂತಾ?

    ಆಸ್ಪತ್ರೆಯಲ್ಲಿ ದಾಖಲಾಗಿಲ್ಲ ವಿಜಯ್ ದೇವರಕೊಂಡ, ಸಮಂತಾ?

    ಮಿಳಿನ ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನಟಿ ಸಮಂತಾ ಇದೀಗ ‘ಖುಷಿ’ ಸಿನಿಮಾದ ಶೂಟಿಂಗ್‌ನಲ್ಲಿ ಬ್ಯುಸಿಯಾಗಿದ್ದಾರೆ. ಕಳೆದ ಎರಡು ವಾರಗಳಿಂದ ಅವರು ಶೂಟಿಂಗ್‌ಗಾಗಿ ಕಾಶ್ಮೀರದಲ್ಲಿ ಬೀಡು ಬಿಟ್ಟಿದ್ದರು. ಚಿತ್ರೀಕರಣದ ಸಂದರ್ಭದಲ್ಲಿ ಅಪಘಾತವಾಗಿದ್ದು, ಇಬ್ಬರೂ ಗಾಯಗೊಂಡಿದ್ದಾರೆ ಎನ್ನುವ ಸುದ್ದಿ ಇತ್ತು. ಚಿಕಿತ್ಸೆಗಾಗಿ ಆಸ್ಪತ್ರೆ ಸೇರಿಕೊಂಡಿದ್ದಾರೆ ಎಂದು ಹೇಳಲಾಗಿತ್ತು. ಇದನ್ನೂ ಓದಿ : ತೆರೆಯ ಮೇಲೂ ನಿರ್ದೇಶಕನಾಗಿ ನಟಿಸಿದ ಯೋಗರಾಜ್ ಭಟ್

    ವಿಜಯ್ ದೇವರಕೊಂಡ ಮತ್ತು ಸಮಂತಾ ಅವರಿದ್ದ ಜೀಪ್ ನದಿಗೆ ಉರುಳಿ, ಭಾರೀ ಅಪಘಾತವಾಗಿದೆ ಎನ್ನುವ ಸುದ್ದಿ ಎರಡ್ಮೂರು ದಿನಗಳಿಂದ ಭಾರೀ ಸದ್ದು ಮಾಡಿತ್ತು. ಇಬ್ಬರೂ ಅಭಿಮಾನಿಗಳು ಇದರಿಂದಾಗಿ ಸಹಜವಾಗಿಯೇ ಆತಂಕಕ್ಕೀಡಾಗಿದ್ದರು. ಆದರೆ ಈ ಸುದ್ದಿಯ ಅಸಲಿ ಕಥೆಯೇ ಬೇರೆ ಇದೆ ಎನ್ನುತ್ತಾರೆ ಇವರ ಆಪ್ತರು. ಇದನ್ನೂ ಓದಿ : ಪೊಲೀಸ್ ಪೇದೆ ನನ್ನನ್ನು ಸೆಕ್ಸ್ ವರ್ಕರ್ ರೀತಿ ನೋಡಿದ : ಮಲಯಾಳಿ ನಟಿ ಅರ್ಚನಾ ಆರೋಪ

    ಅಷ್ಟಕ್ಕೂ ಸಮಂತಾ ಮತ್ತು ದೇವರಕೊಂಡ ಶೂಟಿಂಗ್‌ಗಾಗಿ ಕಾಶ್ಮೀರಕ್ಕೆ ಹೋಗಿದ್ದು ನಿಜ. ಎರಡು ವಾರಗಳ ಕಾಲ ಕಾಶ್ಮೀರದಲ್ಲೇ ಚಿತ್ರೀಕರಣ ನಡೆದಿದೆ. ಆದರೆ ಯಾವುದೇ ಅವಘಡ ಸಂಭವಿಸಿಲ್ಲವಂತೆ. ಈ ಸುದ್ದಿ ಹಬ್ಬಿದ ದಿನ ಇಬ್ಬರೂ ತಮ್ಮ ತಮ್ಮ ಮನೆಯಲ್ಲೇ ಇದ್ದರಂತೆ. ಶೂಟಿಂಗ್ ಮುಗಿಸಿಕೊಂಡು ಈಗಾಗಲೇ ಅವರು ತಮ್ಮ ಮನೆ ಸೇರಿಕೊಂಡಿದ್ದಾರೆ. ಅಲ್ಲದೇ ಇಬ್ಬರೂ ಕರಣ್ ಜೋಹಾರ್ ಹುಟ್ಟುಹಬ್ಬದ ಪಾರ್ಟಿಯಲ್ಲೂ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ : ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಕಾಶ್ಮೀರದ ಶೂಟಿಂಗ್ ಮುಗಿದು ಮೂರ್ನಾಲ್ಕು ದಿನಗಳೇ ಆಗಿವೆ. ಇಬ್ಬರೂ ತಮ್ಮ ತಮ್ಮ ಮನೆಯಲ್ಲಿ ನೆಮ್ಮದಿಯಾಗಿ ಇದ್ದಾರೆ. ಈ ನಡುವೆ ಅಪಘಾತದ ಸುದ್ದಿ ಬಂದಿದೆ. ಈ ಸುದ್ದಿಯನ್ನು ಯಾರು, ಯಾಕೆ ಹಬ್ಬಿಸಿದರೋ ಗೊತ್ತಿಲ್ಲ. ಆದರೆ ಈ ಸುದ್ದಿಯು ಅವರ ಅಭಿಮಾನಿಗಳಲ್ಲಿ ಆತಂಕ ಸೃಷ್ಟಿಸಿದ್ದು ಸುಳ್ಳಲ್ಲ.

  • ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಕಾಶ್ಮೀರ ಟಿವಿ ಸ್ಟಾರ್ ನಟಿ ಹತ್ಯೆ ಮಾಡಿದ ಭಯೋತ್ಪಾದಕರು

    ಜಮ್ಮು ಮತ್ತು ಕಾಶ್ಮೀರದಲ್ಲಿ ಮತ್ತೆ ಗುಂಡಿನ ಶಬ್ದ ಕೇಳಿದೆ. ಟಿಕ್ ಟಾಕ್ ಮತ್ತು ಟಿವಿ ಕಾರ್ಯಕ್ರಮಗಳ ಮೂಲಕ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಅಮ್ರೀನ್ ಭಟ್ ಎಂಬ ತಾರೆಯರನ್ನು ಕಾಶ್ಮೀರದಲ್ಲಿ ಭಯೋತ್ಪಾದಕರು ಗುಂಡು ಹಾರಿಸಿ ಹತ್ಯೆ ಮಾಡಿದ್ದಾರೆ. ಕಾಶ್ಮೀರ ವಲಯದ ಪೊಲೀಸರು ನೀಡಿದ ಮಾಹಿತಿಯ ಪ್ರಕಾರ ಈ ಹತ್ಯೆ ಸಾಯಂಕಾಲ 7.55ಕ್ಕೆ ನಡೆದಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ : ತಮಿಳು ಖ್ಯಾತ ನಟ ಸಿಂಬು ಮನೆಮುಂದೆ ಹೈಡ್ರಾಮಾ, ಸೀರಿಯಲ್ ನಟಿ ಧರಣಿ

    ಅಮ್ರೀನ್ ಭಟ್ ಟಿಕ್ ಟಾಕ್ ವಿಡಿಯೋ ಮಾಡುವುದರಲ್ಲಿ ಫೇಮಸ್ ಆಗಿದ್ದರು. ಅಲ್ಲದೇ, ಟಿವಿಗಳಲ್ಲೂ ಅವರು ಜನಪ್ರಿಯ ಕಾರ್ಯಕ್ರಮಗಳನ್ನು ನೀಡುತ್ತಿದ್ದರು. ಹೀಗಾಗಿಯೇ ಅವರನ್ನು ಟಾರ್ಗೆಟ್ ಮಾಡಲಾಗಿದೆ ಎನ್ನಲಾಗುತ್ತಿದೆ. ಅವರ ಮನೆಗೆ ನುಗ್ಗಿರುವ ಭಯೋತ್ಪಾದಕರು ನಟಿಯ ಮೇಲೆ ಗುಂಡಿನ ದಾಳಿ ಮಾಡಿದ್ದಾರೆ. ಈ ದಾಳಿಯಲ್ಲಿ ಅಮ್ರೀನ್ ಅವರ ಸಂಬಂಧಿ ಮಗುವಿಗೂ ತೀವ್ರ ಗಾಯವಾಗಿವೆ ಎನ್ನುವ ಸುದ್ದಿ ಇದೆ. ಇದನ್ನೂ ಓದಿ : 17 ವರ್ಷ ಲವ್, 2 ಮಕ್ಕಳಾದ ನಂತರ ಮದುವೆಯಾದ ನಿರ್ದೇಶಕ ಹನ್ಸಲ್ ಮೆಹ್ತಾ, ಸಫೀನಾ ಹುಸೇನ್

    35ರ ವಯಸ್ಸಿನ ಅಮ್ರೀನ್ ಭಟ್, ಕಾಶ್ಮೀರದ ಬುದ್ಗಾಮ್ ಜಿಲ್ಲೆಯವರು ಎಂದು ಹೇಳಲಾಗುತ್ತಿದ್ದು, ಕಾಶ್ಮೀರ ಕಿರುತೆರೆ ವಲಯದಲ್ಲಿ ಸಾಕಷ್ಟು ಹೆಸರು ಮಾಡಿದ್ದರು. ಅಲ್ಲದೇ, ಕೂಡುಕುಟುಂಬದೊಂದಿಗೆ ಅವರು ವಾಸವಾಗಿದ್ದರು. ಸಂಜೆ ಭಯೋತ್ಪಾದಕರು ಅಮ್ರೀನ್ ಮನೆಗೆ ನುಗ್ಗಿದ್ದು, ಮನಸೋ ಇಚ್ಛೆ ಗುಂಡು ಹಾರಿಸಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿದರೂ, ಅವರು ಬದುಕುಳಿದಿಲ್ಲ. ಜೊತೆಗೆ ಹತ್ತು ವರ್ಷದ ಫರ್ಹಾನ್ ಜಬೇರ್ ಎನ್ನುವ ಹುಡುಗ ಕೂಡ ಈ ದಾಳಿಯಲ್ಲಿ ಗಾಯಗೊಂಡಿದ್ದಾನೆ.

  • ಕಾಶ್ಮೀರ ಹತ್ಯಾಕಾಂಡ – 31 ವರ್ಷದ ಬಳಿಕ ಪಾತಕಿ ಬಿಟ್ಟಾ ಕರಾಟೆ ವಿರುದ್ಧ ಅರ್ಜಿ ಸಲ್ಲಿಕೆ

    ಕಾಶ್ಮೀರ ಹತ್ಯಾಕಾಂಡ – 31 ವರ್ಷದ ಬಳಿಕ ಪಾತಕಿ ಬಿಟ್ಟಾ ಕರಾಟೆ ವಿರುದ್ಧ ಅರ್ಜಿ ಸಲ್ಲಿಕೆ

    ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಘಟನೆಗೆ ಸಂಬಂಧಿಸಿದಂತೆ ಬಿಟ್ಟಾ ಕರಾಟೆಯ ವಿರುದ್ಧ 31 ವರ್ಷದ ಹಿಂದೆ ನಡೆದ ಪ್ರಕರಣದ ವಿಚಾರಣೆ ನಡೆಸುವಂತೆ ಕೋರ್ಟ್‍ನಲ್ಲಿ ಅರ್ಜಿ ಸಲ್ಲಿಕೆಯಾಗಿದೆ.

    ಫಾರೂಕ್ ಅಹ್ಮದ್ ದಾರ್ ಅಲಿಯಾಸ್ ಬಿಟ್ಟಾ ಕರಾಟೆ ವಿರುದ್ಧ ಮೃತ ಕಾಶ್ಮೀರಿ ಪಂಡಿತ ಸತೀಶ್ ಟಿಕ್ಕೂ ಅವರ ಕುಟುಂಬವು 31 ವರ್ಷಗಳ ಬಳಿಕ ಮರು ವಿಚಾರಣೆ ನಡೆಸಲು ನ್ಯಾಯಾಲಯಕ್ಕೆ ಇಂದು ಮನವಿ ಮಾಡಿದೆ.

    ಬಿಟ್ಟಾ ಕರಾಟೆ ಆಜಾದಿ ಹೆಸರಲ್ಲಿ ಪ್ರಾರಂಭಿಸಿದ್ದ ಕಾಶ್ಮೀರಿ ಪಂಡಿತರ ಮಾರಣಹೋಮದಲ್ಲಿ ಮೊದಲು ಬಲಿಯಾಗಿದ್ದು ಸತೀಶ್ ಟಿಕ್ಕೂ. ಈತ ಬಿಟ್ಟಾನ ಬಾಲ್ಯದ ಸ್ನೇಹಿತನಾಗಿದ್ದ. ಸತೀಶ್ ಟಿಕ್ಕೂ ಅವರನ್ನು ಕೊಲೆ ಮಾಡಿರುವುದಾಗಿ ಬಿಟ್ಟಾ ಖಾಸಗಿ ಚಾನೆಲ್‍ಗೆ ಸಂದರ್ಶನ ನೀಡಿದ್ದ ವೇಳೆ ಒಪ್ಪಿಕೊಂಡಿದ್ದ. ಈ ಸಾಕ್ಷಿಯನ್ನು ಇಟ್ಟುಕೊಂಡು ಕುಟುಂಬ ಕೋರ್ಟ್ ಮೆಟ್ಟಿಲೇರಿದೆ.

    ಇಂದು ಅರ್ಜಿಯ ವಿಚಾರಣೆ ನಡೆಸಿದ ಶ್ರೀನಗರದ ಸೆಷನ್ಸ್ ನ್ಯಾಯಾಲಯವು ಏಪ್ರಿಲ್ 16ರೊಳಗೆ ಸಂದರ್ಶನದ ಹಾಡ್ ಕಾಪಿಯನ್ನು ಸಲ್ಲಿಸುವಂತೆ ಟಿಕೂ ಕುಟುಂಬದ ವಕೀಲ ಉತ್ಸವ್ ಬೈನ್ಸ್‍ಗೆ ಸೂಚಿಸಿದೆ. ಪ್ರಕರಣದ ಮುಂದಿನ ವಿಚಾರಣೆಯನ್ನು ಏಪ್ರಿಲ್ 16ಕ್ಕೆ ಮುಂದೂಡಿದೆ.

    1990ರ ದಶಕದಲ್ಲಿ ಕಾಶ್ಮೀರಿ ಪಂಡಿತರ ದುಃಸ್ಥಿತಿಯನ್ನು ತೋರಿಸಿದ್ದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ಯಶಸ್ಸಿನ ಬೆನ್ನೆಲ್ಲೇ ಈ ಅರ್ಜಿ ಸಲ್ಲಿಸಲಾಗಿದೆ. ಕಳೆದ 31 ವರ್ಷಗಳ ನಂತರದಲ್ಲಿ ಬಿಟ್ಟಾ ಕರಾಟೆ ವಿರುದ್ಧ ಮೊದಲ ಅರ್ಜಿಯಾಗಿದೆ. ಇದನ್ನೂ ಓದಿ: ‘ದಿ ಕಾಶ್ಮೀರ್ ಫೈಲ್ಸ್’ ಈವರೆಗೂ ಗಳಿಸಿದ್ದು 234.03 ಕೋಟಿ : ಹೇಗೆಲ್ಲ ಲೆಕ್ಕಾಚಾರ

    ಘಟನೆಯೇನು?: ಆಜಾದಿ ಹೆಸರಲ್ಲಿ ಬಿಟ್ಟಾ ಅಲ್ಲಿನ ಕಾಶ್ಮೀರಿ ಪಂಡಿತರ ಮಾರಣ ಹೋಮವನ್ನು ಮಾಡಲು ಪ್ರಾರಂಭಿಸಿದ. ಇವನ ಹಿಂಸಾಚಾರಕ್ಕೆ ಮೊದಲು ಬಲಿಯಾಗಿದ್ದೇ ಕಾಶ್ಮೀರಿ ಪಂಡಿತನಾಗಿದ್ದ ಆತನ ಬಾಲ್ಯದ ಗೆಳೆಯ. ಬಿಟ್ಟಾ ಆತನನ್ನು ತನ್ನ ಮನೆಯ ಮುಂದೆಯೇ ಗುಂಡಿಕ್ಕಿ ಕೊಂದಿದ್ದ.

    1980-1990ರಲ್ಲಿ ಇವರು ಪಂಡಿತರನ್ನು ಹುಡುತ್ತಾ ಶ್ರೀನಗರದ ಬೀದಿಗಳಲ್ಲಿ ಸಂಚರಿಸುತ್ತಿದ್ದ. ಪಂಡಿತರೆಂದು ತಿಳಿದ ತಕ್ಷಣ ಆತ ತನ್ನಲ್ಲಿದ್ದ ಪಿಸ್ತೂಲ್‍ನಿಂದ ಗುಂಡಿಕ್ಕಿ ಕೊಲ್ಲುತ್ತಿದ್ದ. ಕನಿಷ್ಠ 20 ಕಾಶ್ಮೀರಿ ಪಂಡಿತರನ್ನು ಕೊಂದಿದ್ದೇನೆ ಎಂದು ವಿಡಿಯೋ ಸಂದರ್ಶನದಲ್ಲಿ ಒಪ್ಪಿಕೊಂಡಿದ್ದ. ಇದನ್ನೂ ಓದಿ: ಯಾರೋ ಮಾಡುವ ತಪ್ಪಿಗೆ ಇಡೀ ಸಮಾಜವನ್ನು ದ್ವೇಷಿಸುವಂತಾಗಿದೆ: ಅಬೂಬಕರ್

    ಘಟನೆಗೆ ಸಂಬಂಧಿಸಿದಂತೆ ಭಾರತೀಯ ಸೈನಿಕರು ಬಿಟ್ಟಾನನ್ನು 1990ರ ಜೂನ್‍ನಲ್ಲಿ ಬಂಧಿಸಿದರು. 2006ರವರೆಗೆ ಅಂದರೆ 16 ವರ್ಷಗಳ ಕಾಲ ಆತ ಸೆರೆಮನೆಯಲ್ಲಿದ್ದ. 2006ರಲ್ಲಿ ಜಾಮೀನಿನ ಮೇಲೆ ಆತನನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಟಾಡಾ ಜಡ್ಜ್ ಎನ್‍ಡಿ ವಾಣಿ ಅವರು, ಆರೋಪಿ ಮಾಡಿರುವ ಅಪರಾಧಗಳು ಗಂಭೀರವಾದದ್ದು ಎಂದು ನ್ಯಾಯಾಲಯಕ್ಕೆ ತಿಳಿದಿದೆ. ಈ ಅಪರಾಧಕ್ಕೆ ಮರಣದಂಡನೆ ಅಥವಾ ಜೀವಾವಧಿ ಶಿಕ್ಷೆಯನ್ನು ನೀಡಬೇಕಿತ್ತು. ಆದರೆ ಪ್ರಾಸಿಕ್ಯೂಶನ್ ಆರೋಪ ಸಾಬೀತು ಪಡಿಸಲು ವಿಫಲವಾಗಿದೆ ಮತ್ತು ಪ್ರಕರಣ ಭೇದಿಸಲು ಸಂಪೂರ್ಣ ನಿರಾಸಕ್ತಿ ತೋರಿಸಿದೆ ಎಂದಿದ್ದರು. ಹೀಗಾಗಿ 2006ರ ಅಕ್ಟೋಬರ್‌ನಲ್ಲಿ ಬಿಟ್ಟಾಗೆ ಜಾಮೀನು ಸಿಕ್ಕಿತ್ತು.

    ಪುಲ್ವಾಮಾ ದಾಳಿಯಲ್ಲಿ ಈತನ ಕೈವಾಡ ಇರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ(ಎನ್‍ಐಎ) ಈತನನ್ನು ಬಂಧಿಸಿದ್ದು ಸದ್ಯ ಜೈಲಿನಲ್ಲಿದ್ದಾನೆ. 20 ಪಂಡಿತರ ಹತ್ಯೆ, ಕೆಎಎಸ್ ಅಧಿಕಾರಿ ಜೊತೆ ಮದುವೆ – ಕಾಶ್ಮೀರದ ರಕ್ತಪಾತದ ವಿಲನ್ ಬಿಟ್ಟಾ ಕರಾಟೆಯ ಕಥೆಯಿದು

  • ಮೆಹಬೂಬಾ ಮುಫ್ತಿ ಏನೇ ಹೇಳುತ್ತಿದ್ದರೂ ಅದಕ್ಕೆಲ್ಲಾ ಬಿಜೆಪಿಯೇ ಹೊಣೆ: ಸಂಜಯ್ ರಾವತ್

    ಮೆಹಬೂಬಾ ಮುಫ್ತಿ ಏನೇ ಹೇಳುತ್ತಿದ್ದರೂ ಅದಕ್ಕೆಲ್ಲಾ ಬಿಜೆಪಿಯೇ ಹೊಣೆ: ಸಂಜಯ್ ರಾವತ್

    ಮುಂಬೈ: ಇಂದು ಮೆಹಬೂಬಾ ಮುಫ್ತಿ ಏನೇ ಹೇಳುತ್ತಿದ್ದರೂ ನೇರವಾಗಿ ಬಿಜೆಪಿಯೇ ಹೊಣೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಕಿಡಿಕಾರಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಅವರು ಉತ್ತಮ ಸ್ನೇಹಿತರಾಗಿದ್ದರು. ಅವರು ಅಫ್ಜಲ್ ಗುರು ಮತ್ತು ಬುರ್ಹಾನ್ ವಾನಿಗೆ ಬೆಂಬಲ ನೀಡಿದ್ದರೂ ಅವರೊಂದಿಗೆ ಬಿಜೆಪಿ ಸರ್ಕಾರ ರಚಿಸಿತ್ತು ಎಂದರು.

    ಈ ಹಿಂದೆ ಮುಫ್ತಿ ಅವರೊಂದಿಗೆ ಬಿಜೆಪಿ ಸರ್ಕಾರ ರಚಿಸಿದಾಗ ಅವರ ರಾಜಕೀಯ ಸಿದ್ಧಾಂತ ಎಲ್ಲಿ ಹೋಗಿತ್ತು ಎಂದು ಕಿಡಿಕಾರಿದ್ದ ಅವರು, ಶಿವಸೇನೆ ಹಿಂದುತ್ವವಾದಿ ಪಕ್ಷವಾಗಿದೆ ಹಾಗೂ ಯಾವಾಗಲೂ ಹಾಗೇ ಇರುತ್ತದೆ ಎಂದಿದ್ದರು. ಇದನ್ನೂ ಓದಿ: ವಿವಾದದ ಹೇಳಿಕೆಯಿಂದ ಒಂಟಿಯಾದ್ರಾ..? – ಸಿದ್ದರಾಮಯ್ಯ ಆಪ್ತರ ಬಳಿ ಹೇಳಿಕೊಂಡಿದ್ದೇನು..?

    ಮುಫ್ತಿ ಅವರು 2016ರ ಏಪ್ರಿಲ್‍ನಲ್ಲಿ ಜಮ್ಮು ಮತ್ತು ಕಾಶ್ಮೀರದ ಕೊನೆಯ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಬಿಜೆಪಿಯೊಂದಿಗೆ ಸಮ್ಮಿಶ್ರ ಸರ್ಕಾರವನ್ನು ರಚಿಸಿದರು. 2018ರಲ್ಲಿ ಬಿಜೆಪಿ ತಮ್ಮ ಬೆಂಬಲವನ್ನು ಹಿಂತೆಗೆದುಕೊಂಡಾಗ ಸರ್ಕಾರ ಪತನವಾಯಿತು. ಇದನ್ನೂ ಓದಿ: ಕಾಂಗ್ರೆಸ್ ನಿರ್ನಾಮ ಮಾಡಲು ಸಿದ್ದರಾಮಯ್ಯನಂತವರು ಒಬ್ರು ಸಾಕು: ಕೆ.ಎಸ್ ಈಶ್ವರಪ್ಪ

    ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ ಗುಕ್‍ಪಾರ್ ಘೋಷಣೆಗಾಗಿ ಜನತಾದಳದ ಘಟಕಗಳಿಗೆ ಮತ ಹಾಕುವಂತೆ ಮುಫ್ತಿ ಜನರಿಗೆ ಕರೆ ನೀಡಿದ್ದರು. ಕಳೆದ 70 ವರ್ಷಗಳಿಂದ ಕಾಶ್ಮೀರ ಪರಿಹಾರಕ್ಕಾಗಿ ಕಾಯುತ್ತಿದೆಯೇ? ಕಾಶ್ಮೀರ ಸಮಸ್ಯೆ ಬಗೆಹರಿಯುವವರೆಗೂ ಈ ಪ್ರದೇಶದಲ್ಲಿ ಶಾಂತಿ ಇರುವುದಿಲ್ಲ ಮತ್ತು ಅದಕ್ಕಾಗಿ ಪಾಕಿಸ್ತಾನ ಮತ್ತು ಜಮ್ಮು ಮತ್ತು ಕಾಶ್ಮೀರದ ಜನರೊಂದಿಗೆ ಮಾತುಕತೆ ಅತ್ಯಗತ್ಯ ಎಂದು ಮೆಹಬೂಬಾ ಮುಫ್ತಿ ತಿಳಿಸಿದ್ದರು.

  • ದಿ ಕಾಶ್ಮೀರ್ ಫೈಲ್ಸ್ ನನ್ನದೇ ಕುಟುಂಬದ ಕಥೆಯಂತಿತ್ತು: ಸತ್ಯ ಘಟನೆ ಹಂಚಿಕೊಂಡ ಬಾಲಿವುಡ್ ನಟಿ

    ದಿ ಕಾಶ್ಮೀರ್ ಫೈಲ್ಸ್ ನನ್ನದೇ ಕುಟುಂಬದ ಕಥೆಯಂತಿತ್ತು: ಸತ್ಯ ಘಟನೆ ಹಂಚಿಕೊಂಡ ಬಾಲಿವುಡ್ ನಟಿ

    ದಿ ಕಾಶೀರ್ ಫೈಲ್ಸ್ ಸಿನಿಮಾ ಬಂದ ನಂತರ ಕಾಶ್ಮೀರಿ ಕಣಿವೆಯ ಒಂದೊಂದೇ ದುರಂತ ಕಥೆಗಳು ಆಚೆ ಬರುತ್ತಿವೆ. ಕಾಶ್ಮೀರ ಪಂಡಿತರ ವಲಸೆ ಮತ್ತು ಮಾರಣಹೋಮದ ಕಥೆಗಳನ್ನು ಸಾಮಾನ್ಯರಲ್ಲ, ಸಿಲೆಬ್ರಿಟಿಗಳು ಕೂಡ ಹೇಳಿಕೊಳ್ಳುತ್ತಿದ್ದಾರೆ. ಅದೂ, ತಮ್ಮ ಕುಟುಂಬದಲ್ಲಿ ನಡೆದ ಘಟನೆಗಳನ್ನು ಎನ್ನುವುದು ವಿಶೇಷ. ಇದನ್ನೂ ಓದಿ : ಪಠಾಣ್ ಚಿತ್ರಕ್ಕಾಗಿ ಬಿಕಿನಿ ತೊಟ್ಟ ದೀಪಿಕಾ ಪಡುಕೋಣೆ: ಫೋಟೋ ಲೀಕ್

    ನಾಲ್ಕು ದಿನಗಳ ಹಿಂದೆಯಷ್ಟೇ ಬಾಲಿವುಡ್ ನಟಿ ಯಾಮಿ ಗೌತಮ್ ತಮ್ಮ ಕುಟುಂಬಕ್ಕೆ ಆದ ದೌರ್ಜನ್ಯವನ್ನು ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ಇದೀಗ ಮತ್ತೋರ್ವ ಬಾಲಿವುಡ್ ನಟಿ ಸಂದೀಪ ಧರ್ ಕೂಡ ತಮ್ಮ ಜೀವನದಲ್ಲಿ ನಡೆದ ಆ ದುರಂತದ ಕಥೆಯನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ಮೊದಲ ದಿನವೇ 30 ಕೋಟಿ ಕಲೆಕ್ಷನ್ – 100 ಕೋಟಿ ಕ್ಲಬ್ ಸೇರುತ್ತಾ ಜೇಮ್ಸ್..?

    ಗುಲಾಬಿ ಹೂವನ್ನು ನಾನು ಕೇಳಿದೆ

    ಎಲ್ಲಿ ನಿನ್ನ ಪರಿಮಳ ಎಂದು

    ಅದು ವಸಂತ ಮಾಸದತ್ತ ಬೆಟ್ಟು ಮಾಡಿತು…

    ನಾನು ಮತ್ತೆ ವಸಂತಕ್ಕೆ ಪ್ರಶ್ನೆ ಮಾಡಿದೆ

    ನಿನ್ನ ಹಣೆ ಮೇಲೇಕೆ ಗೆರೆಗಳು ಮೂಡಿದ್ದು? ಎಂದು

    ಅದು ದುಃಖಿಸುತ್ತಲೇ ಹೇಳಿತು

    ನನ್ನ ಗಾಯಗಳಿಗೆ ಉಪ್ಪು ಹಾಕಲಾಗಿದೆ ಎಂದು

    ನಾನು ಆ ಅರಳಿದ ತೋಟವನ್ನು ಹಾಗೆಯೇ ಬಿಟ್ಟುಬಿಟ್ಟೆ

    ಈಗ ಗುರಿ ಇಲ್ಲದೇ ಅಲೆದಾಡುತ್ತಿದ್ದೇನೆ

    ಹೀಗೆ ಭಾವನಾತ್ಮಕವಾಗಿ ಕವಿತೆಯ ಸಾಲುಗಳನ್ನು ಬರೆದುಕೊಂಡಿರುವ ಸಂದೀಪ ಧರ್, ತನ್ನ ಕುಟುಂಬಕ್ಕಾದ ತೊಂದರೆಗಳನ್ನು ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಲ್ಲದೇ, ತೊಂಬತ್ತರ ದಶಕದಲ್ಲಿ ಕಾಶ್ಮೀರದ ಶ್ರೀನಗರದಲ್ಲಿ ತಮ್ಮ ಮನೆ ಹೇಗಿತ್ತೆಂದು ಫೋಟೋವನ್ನು ಸಾಕ್ಷಿಯಾಗಿ ನೀಡಿದ್ದಾರೆ. ಇದನ್ನೂ ಓದಿ : ಅಂದು ಸುದೀಪ್ ಪುಸ್ತಕ ಬಿಡುಗಡೆ ಮಾಡಿದ್ದ ಪುನೀತ್, ಇಂದು ಪುನೀತ್ ಪುಸ್ತಕ ಬಿಡುಗಡೆ ಮಾಡಿದ ಸುದೀಪ್

    “ಅವರು ಹೇಳಿದರು, ಕುಟುಂಬದ ಸಮೇತ ಕಾಶ್ಮೀರ ತೊರೆಯಬೇಕೆಂದು. ರಾತ್ರೋರಾತ್ರಿ ಹೋಗುವುದು ಎಲ್ಲಿಗೆ? ಅದೂ ನಮ್ಮದೇ ನೆಲೆಬಿಟ್ಟು. ಹಿಂಸೆಗೆ ಹೊರಡಲೇಬೇಕಿತ್ತು. ಅದಕ್ಕಾಗಿ ಅಪ್ಪ ಟ್ರಕ್ ವೊಂದರ ಸಹಾಯ ಪಡೆದು. ಟ್ರಕ್ ನಲ್ಲಿ ಬಚ್ಚಿಟ್ಟುಕೊಂಡೇ ಹೋಗುವುದು ಅನಿವಾರ್ಯವಾಗಿತ್ತು. ನನ್ನ ತಂಗಿಯನ್ನು ಕಾಪಾಡಿಕೊಳ್ಳಲು ನನ್ನ ತಂದೆ ಟ್ರಕ್ ಸೀಟ್ ಕೆಳಗೆ ಬಚ್ಚಿಟ್ಟಿದ್ದರು. ಮಧ್ಯೆ ರಾತ್ರಿ ಹೀಗೆ ಹೋಗುವುದು ಎಷ್ಟು ಕಷ್ಟ ಎನ್ನುವುದನ್ನು ನಾನು ಬಲ್ಲೆ.  ದಿ ಕಾಶ್ಮೀರ್ ಫೈಲ್ಸ್ ನಲ್ಲೂ ಇಂತಹ ದೃಶ್ಯಗಳಿವೆ. ಅದನ್ನು ನೋಡಿ ನನಗೆ ಜೀವವೇ ಹೋದಂತಾಯಿತು. ತನ್ನ ತವರು ಮನೆ ಬಗ್ಗೆ ಸದಾ ನೆನಪಿಸಿಕೊಳ್ಳುತ್ತಿದ್ದ ನನ್ನ ಅಜ್ಜಿ ತೀರಿಹೋದರು. ಅದೊಂದು ನರಕಸದೃಶ್ಯ ಬದುಕು” ಎಂದು ಸಂದೀಪ ಇನ್ ಸ್ಟಾಗ್ರಾಮ್ ಪೇಜ್ ನಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ. ಇಂತಹ ಚಿತ್ರವನ್ನು ಮಾಡಿ, ಜಗತ್ತಿಗೆ ಸತ್ಯವನ್ನು ತೋರಿಸಿದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿಗೆ ಧನ್ಯವಾಗಳನ್ನೂ ಅವರು ತಿಳಿಸಿದ್ದಾರೆ.

  • ಮಣ್ಣಲ್ಲಿ ಮಣ್ಣಾದ ಹಾಸನದ ವೀರ ಯೋಧ ಸಂದೀಪ್ ಶೆಟ್ಟಿ

    ಹಾಸನ: ವೀರಯೋಧ ಸಂದೀಪ್ ಪಾರ್ಥಿವ ಶರೀರ ಇಂದು ಮಣ್ಣಲ್ಲಿ ಮಣ್ಣಾಗಿದೆ. ಸ್ವಗ್ರಾಮ ದೇವಿಹಳ್ಳಿಯಲ್ಲಿ ಅಗಲಿದ ವೀರ ಯೋಧನಿಗೆ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಿ ಅಂತ್ಯ ಸಂಸ್ಕಾರ ಮಾಡಲಾಯಿತು.

    ವೀರಯೋಧ ಸಂದೀಪ್ ಶೆಟ್ಟಿ 18ನೇ ಗುಜರಾತ್ ರೆಜಿಮೆಂಟ್‍ಗೆ ಸೇರಿದವರು. ಜನವರಿ 25ರಂದು ಕಾಶ್ಮೀರದ ಬಳಿಯ ಗುರೆಜ್ ಕ್ಯಾಂಪನಲ್ಲಿ ಹಿಮಪಾತಕ್ಕೆ ಸಿಲುಕಿ ಹಿಮರಾಶಿಯಲ್ಲಿ ಹುದುಗಿ ಹೋಗಿದ್ದರು. ಮೃತದೇಹವನ್ನ ಪತ್ತೆ ಮಾಡಿದ್ದರೂ ಪಾರ್ಥಿವ ಶರೀರ ಸ್ವಗ್ರಾಮಕ್ಕೆ ತರಲು ಸರಿಯಾಗಿ 7 ದಿನಗಳೇ ಬೇಕಾಯಿತು. ಇದಕ್ಕೆ ಅಲ್ಲಿಯ ಹವಾಮಾನದ ವೈಪರಿತ್ಯ ಅಡ್ಡಿಯಾಗಿತ್ತು. ಮಂಗಳವಾರ ದೆಹಲಿಯಿಂದ ಹೊರಟು ಬೆಂಗಳೂರಿನ ಮೂಲಕ ಹಾಸನಕ್ಕೆ ಮಧ್ಯರಾತ್ರಿ ಪಾರ್ಥಿವ ಶರೀರವನ್ನ ತರಲಾಗಿತ್ತು.

    ವೀರ ಯೋಧನ ಪಾರ್ಥಿವ ಶರೀರವನ್ನ ಇಂದು ಮುಂಜಾನೆ 8ಗಂಟೆಯಿಂದ 10 ಗಂಟೆಯವರೆಗೆ ಸಾರ್ವಜನಿಕರ ದರ್ಶನಕ್ಕೆ ಹಾಸನದ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿಇಡಲಾಗಿತ್ತು. ನಂತ್ರ 10.30ಕ್ಕೆ ಮೃತದೇಹವನ್ನು ಹೇಮಾವತಿ ಪ್ರತಿಮೆ ಮಾರ್ಗವಾಗಿ ಬಿ.ಎಸ್.ರಸ್ತೆಯಲ್ಲಿ ಮೆರವಣಿಗೆಯಲ್ಲಿ ಸಾಗಿ ಸ್ವಗ್ರಾಮ ದೇವಿಹಳ್ಳಿಗೆ ತರಲಾಯ್ತು. ಈ ವೇಳೆ ದಾರಿಯುದ್ದಕ್ಕೂ ಶಾಲಾ ವಿದ್ಯಾರ್ಥಿಗಳು, ಸಾರ್ವಜನಿಕರು ವೀರಯೋಧನಿಗೆ ಅಮರ್ ರಹೇ ಸಂದೀಪ್ ಶೆಟ್ಟಿ ಎನ್ನುವ ಜಯ ಘೋಷದ ಮೂಲಕ ನಮನ ಸಲ್ಲಿಸಿದ್ರೆ, ಸಾವಿರಾರು ಮಂದಿ ಅಂತ್ಯಸಂಸ್ಕಾರದ ಸಮಯದಲ್ಲಿ ಸಾಕ್ಷಿಯಾಗಿದ್ರು.

    ನಿಂತಲ್ಲೇ ಕುಸಿದ ಸಂದೀಪ್ ತಾಯಿ: ಸಂದೀಪ್ ಅಂತ್ಯ ಸಂಸ್ಕಾರದ ವೇಳೆಯಲ್ಲಿ ತಾಯಿ ಗಂಗಮ್ಮ ಕುಸಿದು ಹೋದರು. ಮಗನ ಸಾವಿನ ಸುದ್ದಿ ತಿಳಿದ ಕ್ಷಣದಿಂದ ಸರಿಯಾಗಿ ಆಹಾರ ಸೇವಿಸಿರದ ಕಾರಣ ನಿಶ್ಯಕ್ತಿಯಿಂದ ಕುಸಿದು ಬಿದ್ದರು. ಪ್ರಥಮ ಚಿಕಿತ್ಸೆಯ ನಂತರ ಗಂಗಮ ಚೇತರಿಸಿಕೊಂಡರು.

    ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು, ಸ್ಥಳೀಯ ಶಾಸಕ ಎಚ್.ಎಸ್.ಪ್ರಕಾಶ್, ಎಚ್.ಡಿ.ರೇವಣ್ಣ, ವಿಧಾನಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ ಪಾರ್ಥಿವ ಶರೀರಕ್ಕೆ ಪುಪ್ಪಗುಚ್ಚ ಅರ್ಪಿಸುವ ಮೂಲಕ ಗೌರವ ಸಲ್ಲಿಸಿದ್ರು. ಕಳೆದ ರಾತ್ರಿ ಬೆಂಗಳೂರಿನಿಂದ ಆಗಮಿಸಿದ ಪಾರ್ಥೀವ ಶರೀರದೊಂದಿಗೆ ಸೇನಾ ಅಧಿಕಾರಿಗಳ ತಂಡವೂ ಬಂದಿತ್ತು. ಆರ್ಮಿ ಸರ್ವಿಸ್ ಕೋರ್ಸ್ ನ 35 ಮಂದಿ ಯೋಧರು ಅಂತ್ಯ ಸಂಸ್ಕಾರ ಮುಗಿಯುವರೆಗೂ ತಮ್ಮ ಕಾರ್ಯವನ್ನು ನಿರ್ವಹಸಿದರು.

    ಮದ್ಯಾಹ್ನ ಸರಿಯಾಗಿ 3 ಗಂಟೆಗೆ ಸೇನೆಯ ಯೋಧರು 21 ಸುತ್ತು ಗುಂಡುಗಳನ್ನು ಗಾಳಿಯಲ್ಲಿ ಹಾರಿಸುವ ಮೂಲಕ ಅಗಲಿದ ಯೋಧನಿಗೆ ಅಂತಿಮ ಗೌರವ ಸಲ್ಲಿಸಿದರು. ನಂತರ ನಡೆದ ಅಂತಿಮ ವಿಧಿವಿಧಾನವನ್ನು ದೇವಾಂಗ ಸಂಪ್ರದಾಯದಂತೆ ನೆರವೇರಿತು.

    ದೇವಿಹಳ್ಳಿ ಗ್ರಾಮದ ಪುಟ್ಟರಾಜ್ ಮತ್ತು ಗಂಗಮ್ಮ ದಂಪತಿಯ ಏಕೈಕ ಪುತ್ರ ಸಂದೀಪ್. ತಂದೆ-ತಾಯಿ, ಬಂಧು ಬಳಗ, ಸ್ನೇಹಿತರನ್ನೆಲ್ಲ ಅಗಲಿದ ವೀರ ಯೋಧ ದೇಶಕ್ಕಾಗಿ ತನ್ನ ಪ್ರಾಣ ಅರ್ಪಿಸಿದ್ದಾನೆ. ದೇಶಕ್ಕಾಗಿ ವೀರ ಮರಣವನ್ನಪ್ಪಿದ ಹುತಾತ್ಮ ಯೋಧನಿಗೆ ಒಂದು ಸಲಾಂ.