Tag: ಕಿಂಗ್ಸ್ ಇಲೆವೆನ್ ಪಂಜಾಬ್

  • ಒಂದೇ ಪದದಲ್ಲಿ ಕೊಹ್ಲಿಯನ್ನು ವ್ಯಾಖ್ಯಾನಿಸಿದ ಪ್ರೀತಿ ಜಿಂಟಾ

    ಒಂದೇ ಪದದಲ್ಲಿ ಕೊಹ್ಲಿಯನ್ನು ವ್ಯಾಖ್ಯಾನಿಸಿದ ಪ್ರೀತಿ ಜಿಂಟಾ

    ಬೆಂಗಳೂರು: ಕೊಹ್ಲಿ ಕುರಿತು ನಿಮ್ಮ ಅಭಿಪ್ರಾಯವೇನು ಎಂಬ ಪ್ರಶ್ನೆಗೆ ಉತ್ತರಿಸಿದ ಪಂಜಾಬ್ ತಂಡದ ಕೋ-ಒನರ್ ಪ್ರೀತಿ ಜಿಂಟಾ ಕೊಹ್ಲಿ ಅದ್ಭುತ ವ್ಯಕ್ತಿ ಎಂದು ಹೇಳಿದ್ದಾರೆ.

    ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಅಭಿಮಾನಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಬಾಲಿವುಡ್ ನಟಿ ಪ್ರೀತಿ ಜಿಂಟಾ ಕೊಹ್ಲಿ ಕುರಿತು ತಮ್ಮ ಅಭಿಪ್ರಾಯವನ್ನು ಟ್ವೀಟ್ ಮಾಡಿದ್ದಾರೆ.

    ಪಂಜಾಬ್ ತಂಡ ಈ ಬಾರಿಯ ಐಪಿಎಲ್ ಟೂರ್ನಿಯಲ್ಲಿ ಪ್ಲೇ ಆಫ್ ಪ್ರವೇಶಿಸಲು ವಿಫಲವಾಗಿತ್ತು. ಇದೇ ವೇಳೆ ಮುಂಬೈ ಇಂಡಿಯನ್ಸ್ ಪ್ಲೇ ಆಫ್ ಪ್ರವೇಶ ಪಡೆಯದ ಕುರಿತ ಪ್ರೀತಿ ಜಿಂಟಾರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

    ಈ ಕುರಿತು ಸ್ಪಷ್ಟನೆ ನೀಡಿ ಟ್ವೀಟ್ ಮಾಡಿದ್ದ ಜಿಂಟಾ, ಮುಂಬೈ ಪ್ಲೇ ಆಫ್ ಪ್ರವೇಶಿಸದಿದ್ದರೆ ಪಂಜಾಬ್‍ಗೆ ಪ್ಲೇ ಆಫ್‍ಗೆ ಪ್ರವೇಶ ಪಡೆಯುವ ಅವಕಾಶವಿತ್ತು. ಈ ಕುರಿತು ತಾನು ಆ ಮಾತು ಹೇಳಿದ್ದು. ಆದರೆ ರಾಜಸ್ಥಾನ ಗೆಲುವು ಪಡೆಯಿತು ಮತ್ತು ಚೆನ್ನೈ ವಿರುದ್ಧ ನಮ್ಮ ಸೋಲು ಪ್ಲೇ ಆಫ್ ನಿಂದ ದೂರ ಉಳಿಯುವಂತೆ ಮಾಡಿತು. ಯಾವುದೇ ತಂಡ ಕೇವಲ ಗೆಲುವುಗಳನ್ನು ಮಾತ್ರ ಕಾಣಲು ಸಾಧ್ಯವಿಲ್ಲ, ಸೋಲು ಸಮನಾಗಿರುತ್ತದೆ ಎಂದು ಹೇಳಿದ್ದಾರೆ.

    ಟೂರ್ನಿಯ ಆರಂಭದಲ್ಲಿ 6 ಪಂದ್ಯಗಳಿಂದ 5 ಪಂದ್ಯಗಳನ್ನು ಗೆದ್ದ ಪಂಜಾಬ್ ಈಗ ಟೂರ್ನಿಯಿಂದ ಹೊರನಡೆದಿದೆ. ಈ ಕುರಿತು ತಮ್ಮ ತಂಡದ ಅಭಿಮಾನಿಗಳಲ್ಲಿ ಕ್ಷಮೆ ಕೇಳುತ್ತೇನೆ. ಮುಂದಿನ ವರ್ಷ ನಾವು ನಿಮ್ಮನ್ನು ನಿರಾಸೆ ಮಾಡುವುದಿಲ್ಲ ಎಂದು ಮತ್ತೊಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.

  • ಪಂಜಾಬ್ ಪ್ಲೇ ಆಫ್ ಪ್ರವೇಶಿಸದಿದ್ದರೂ ಪ್ರೀತಿ ಜಿಂಟಾ ಖುಷಿಯಾಗಿದ್ದು ಏಕೆ ಗೊತ್ತಾ? ವೈರಲ್ ವಿಡಿಯೋ

    ಪಂಜಾಬ್ ಪ್ಲೇ ಆಫ್ ಪ್ರವೇಶಿಸದಿದ್ದರೂ ಪ್ರೀತಿ ಜಿಂಟಾ ಖುಷಿಯಾಗಿದ್ದು ಏಕೆ ಗೊತ್ತಾ? ವೈರಲ್ ವಿಡಿಯೋ

    ಪುಣೆ: ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಭಾನುವಾರ ನಡೆದ ಪಂದ್ಯದಲ್ಲಿ ಪಂಜಾಬ್ ಸೋತು ಟೂರ್ನಿಯಿಂದ ಹೊರಬಿದ್ದರೂ, ತಂಡದ ಸಹ ಮಾಲೀಕರಾಗಿರುವ ಪ್ರೀತಿ ಜಿಂಟಾ ಮಾತ್ರ ಸಂತಸ ವ್ಯಕ್ತಪಡಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವಿಡಿಯೋದಲ್ಲಿ ಬಾಲಿವುಡ್ ನಟಿ ಪ್ರೀತಿ ಜಿಂಟಾ ತಂಡದ ಸಿಬ್ಬಂದಿಯೊಬ್ಬರ ಜೊತೆ ಮಾತುಕತೆ ನಡೆಸುತ್ತಿರುವ ದೃಶ್ಯಗಳು ಸೆರೆಯಾಗಿದೆ. ಆದರೆ ಈ ವಿಡಿಯೋದಲ್ಲಿ ಧ್ವನಿ ದಾಖಲಾಗದೇ ಇದ್ದರೂ ಮುಂಬೈ ಇಂಡಿಯನ್ಸ್ ತಂಡ ಪ್ಲೇ ಆಫ್ ಗೆ ಪ್ರವೇಶಿಸದೇ ಹೊರಬಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ ಸಂತಸ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

    ಚೆನ್ನೈ ವಿರುದ್ಧದ ಪಂದ್ಯದ ಬಳಿಕ ಪ್ರೀತಿ ಜಿಂಟಾ ಟ್ವಿಟ್ಟರ್ ನಲ್ಲಿ ಪ್ಲೇ ಆಫ್ ಪ್ರವೇಶಿಸಿದ ನಾಲ್ಕು ತಂಡಗಳಿಗೆ ಶುಭಕೋರಿದ್ದಾರೆ. ಅಲ್ಲದೇ ಮುಂದಿನ ವರ್ಷ ತಾವು ಕಮ್ ಬ್ಯಾಕ್ ಮಾಡುವುದಾಗಿ ಬರೆದು ಕೊಂಡಿದ್ದಾರೆ.

    ಆರ್ ಅಶ್ವಿನ್ ನೇತೃತ್ವದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಅಂಕಪಟ್ಟಿಯಲ್ಲಿ 7ನೇ ಸ್ಥಾನ ಪಡೆದು ಟೂರ್ನಿಯಿಂದ ಹೊರಬಿದ್ದಿದೆ. ಸತತ ಗೆಲುವುಗಳ ಮೂಲಕ ಟೂರ್ನಿ ಆರಂಭಿಸಿದ ಪಂಜಾಬ್ ತಂಡ ಮೊದಲ 5 ಪಂದ್ಯಗಳಲ್ಲಿ 4 ರಲ್ಲಿ ಜಯಗಳಿಸಿತ್ತು. ಬಳಿಕ ನಡೆದ 9 ಪಂದ್ಯದಲ್ಲಿ ಸತತವಾಗಿ ಸೋಲು ಕಾಣುವ ಮೂಲಕ ಟೂರ್ನಿಯಲ್ಲಿ ನೀರಸ ಪ್ರದರ್ಶನ ನೀಡಿದೆ. ಒಟ್ಟಾರೆ ಟೂರ್ನಿಯಲ್ಲಿ ಪಂಜಾಬ್ ತಂಡ 14 ಪಂದ್ಯಗಳಲ್ಲಿ 6 ರಲ್ಲಿ ಮಾತ್ರ ಗೆಲುವು ಪಡೆದಿದೆ.

    ಇನ್ನು ಟೂರ್ನಿಯಲ್ಲಿ ರೋಹಿತ್ ನೇತೃತ್ವದ ಮುಂಬೈ ಇಂಡಿಯನ್ಸ್ ಸಹ ನೀರಸ ಪ್ರದರ್ಶನವನ್ನು ನೀಡಿ ಪ್ಲೇ ಆಫ್ ಪ್ರವೇಶಿಸದೇ ಹೊರ ನಡೆದಿದೆ. 14 ಪಂದ್ಯಗಳಲ್ಲಿ 6 ರಲ್ಲಿ ಜಯ ಗಳಿಸಿರುವ ಮುಂಬೈ 12 ಅಂಕಗಳೊಂದಿಗೆ 5ನೇ ಸ್ಥಾನ ಪಡೆದಿದೆ.

  • ಕೊಹ್ಲಿಗಾಗಿ ಫೋಟೋ ಸಮೇತ ಸ್ಪೆಷಲ್ ಸಂದೇಶ ಕಳುಹಿಸಿದ ಅನುಷ್ಕಾ ಶರ್ಮಾ

    ಕೊಹ್ಲಿಗಾಗಿ ಫೋಟೋ ಸಮೇತ ಸ್ಪೆಷಲ್ ಸಂದೇಶ ಕಳುಹಿಸಿದ ಅನುಷ್ಕಾ ಶರ್ಮಾ

    ಬೆಂಗಳೂರು: ಇಂದೋರ್ ನಲ್ಲಿ ಸೋಮವಾರದ ಆರ್ ಸಿಬಿ ಹಾಗೂ ಕಿಂಗ್ಸ್ ಇಲೆವೆನ್ ಪಂಜಾಬ್ ನಡುವಿನ ಪಂದ್ಯದ ಆರಂಭಕ್ಕೂ ಮುನ್ನ ಪತಿ ಕೊಹ್ಲಿ ಹೆಸರು ಹೊಂದಿರುವ ಟೀ ಶರ್ಟ್ ಧರಿಸಿರುವ ಫೋಟೋವನ್ನು ತಮ್ಮ ಇನ್ ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಬೆಂಬಲ ನೀಡಿದ್ದಾರೆ.

    ಇಂದೋರ್ ನಲ್ಲಿ ನಡೆಯುತ್ತಿರುವ ಪಂದ್ಯ ಆರ್ ಸಿಬಿ ತಂಡಕ್ಕೆ ಬಹುಮುಖ್ಯವಾದ ಪಂದ್ಯವಾಗಿದ್ದು, ಉತ್ತಮ ಪ್ರದರ್ಶನ ನೀಡಲು ಬೆಂಬಲ ಸೂಚಿಸಿ ಫೋಟೋ ಪೋಸ್ಟ್ ಮಾಡಿದ್ದಾರೆ.

    https://www.instagram.com/p/BiwpAjPAaa9/?utm_source=ig_embed

    ಕಳೆದ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆಲುವು ಪಡೆದಿದ್ದ ಆರ್ ಸಿಬಿ ತನ್ನ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿತ್ತು. ಪಂಜಾಬ್ ವಿರುದ್ಧ ಪಂದ್ಯದಲ್ಲೂ ಗೆಲ್ಲಲೇ ಬೇಕಾದ ಒತ್ತಡ ಎದುರಿಸುತ್ತಿದೆ. ಕಳೆದ ಪಂದ್ಯದಲ್ಲಿ ಆರ್ ಸಿಬಿ ಪರ ಉತ್ತಮ ಜೊತೆಯಾಟ ನೀಡಿದ ನಾಯಕ ಕೊಹ್ಲಿ ಹಾಗೂ ಸ್ಫೋಟಕ ಆಟಗಾರ ಎಬಿ ಡಿವಿಲಿಯರ್ಸ್ ಬ್ಯಾಟಿಂಗ್ ತಂಡಕ್ಕೆ ಸ್ಫೂರ್ತಿ ನೀಡಿದೆ. ಸರಣಿಯಲ್ಲಿ ಸತತ ಸೋಲುಗಳ ಮೂಲಕ ನೀರಸ ಪ್ರದರ್ಶನ ನೀಡಿದ ಆರ್ ಸಿಬಿ ತಂಡದ ಡೆಲ್ಲಿ ವಿರುದ್ಧ ಗೆಲುವಿನ ಬಳಿಕ ಆಡಿರುವ 11 ಪಂದ್ಯದಲ್ಲಿ 4 ರಲ್ಲಿ ಗೆಲುವು ಪಡೆದು 8 ಅಂಕಗಳೊಂದಿಗೆ 7ನೇ ಸ್ಥಾನ ಪಡೆದಿದೆ.

  • ಸೆಹ್ವಾಗ್ ಜೊತೆ ಮುನಿಸು – ಸ್ಪಷ್ಟನೆ ಕೊಟ್ಟ ಪ್ರೀತಿ ಜಿಂಟಾ

    ಸೆಹ್ವಾಗ್ ಜೊತೆ ಮುನಿಸು – ಸ್ಪಷ್ಟನೆ ಕೊಟ್ಟ ಪ್ರೀತಿ ಜಿಂಟಾ

    ನವದೆಹಲಿ: ನನ್ನ ಮತ್ತು ಸೆಹ್ವಾಗ್ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಕಿಂಗ್ಸ್ ಇಲೆವನ್ ಪಂಜಾಬ್ ತಂಡದ ಮಾಲಕಿ ಪ್ರೀತಿ ಜಿಂಟಾ ಹೇಳಿದ್ದಾರೆ.

    ನಮ್ಮ ಪರವಾಗಿ ಸುದ್ದಿ ಪ್ರಕಟವಾಗುವಂತೆ ನಾವು ಮಾಧ್ಯಮಗಳಿಗೆ ಹಣ ನೀಡಲ್ಲ. ಮಾಧ್ಯಮಗಳಲ್ಲಿ ಪ್ರಕಟವಾಗಿರುವ ಸುದ್ದಿಗಳು ಎಲ್ಲವೂ ಸುಳ್ಳು ಎಂದು ಪ್ರೀತಿ ಜಿಂಟಾ ಟ್ವೀಟ್ ಮಾಡಿದ್ದಾರೆ.

    ರಾಜಸ್ಥಾನದ ವಿರುದ್ಧ ಪಂದ್ಯದಲ್ಲಿ ಸುಲಭ ಮೊತ್ತವನ್ನು ಬೆನ್ನತ್ತಲು ತಂಡ ವಿಫಲವಾಗಲು ಮೆಂಟರ್ ಸೆಹ್ವಾಗ್ ಅವರ ನಿರ್ಧಾರವೇ ಕಾರಣ ಎಂದು ಪ್ರೀತಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿತ್ತು.

    ರಾಜಸ್ಥಾನ ಪಂದ್ಯದಲ್ಲಿ ನಾಯಕ ಆಶ್ವಿನ್‍ಗೆ ಬ್ಯಾಟಿಂಗ್ ನಲ್ಲಿ ಮುಂಬಡ್ತಿ ನೀಡಿ ನಂಬರ್ 3 ಸ್ಥಾನದಲ್ಲಿ ಕಳಿಸಲಾಗಿತ್ತು. ಆದರೆ ಪಂದ್ಯದಲ್ಲಿ ಅಶ್ವಿನ್ ಶೂನ್ಯ ಸುತ್ತುವ ಮೂಲಕ ಎಲ್ಲ ಲೆಕ್ಕಾಚಾರನ್ನು ತಲೆ ಕೆಳಗೆ ಮಾಡಿದ್ದರು. ಸದ್ಯ ಪಂದ್ಯದ ಫಲಿತಾಂಶದಿಂದ ಪ್ರೀತಿ ಅಸಮಾಧಾನಗೊಂಡಿದ್ದರು ಎಂದು ಬರೆಯಲಾಗಿತ್ತು.

    ಪಂದ್ಯದ ಬಳಿಕ ಆಟಗಾರರು ಮೈದಾನದಿಂದ ಮರಳುವ ಮುನ್ನವೇ ಪ್ರೀತಿ ಜಿಂಟಾ ಈ ಕುರಿತು ಪ್ರಶ್ನೆ ಮಾಡಿದ್ದರು. ಆದ್ರೆ ಸೆಹ್ವಾಗ್ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಪ್ಲೇಆಫ್ ಗೆ ಆಯ್ಕೆ ಆಗುವ ಎಲ್ಲಾ ಅವಕಾಶ ಇರುವ ವೇಳೆ ಈ ರೀತಿಯ ಗೊಂದಲಗಳಿಗೆ ಅವಕಾಶ ನೀಡಬಾರದು. ಇದು ಆಟಗಾರ ಮೇಲೆ ಪರಿಣಾಮ ಉಂಟಾಗಬಹುದು ಎಂದು ಸೆಹ್ವಾಗ್ ಪ್ರತಿಕ್ರಿಯೇ ನೀಡಿಲ್ಲ ಎಂದು ವರದಿ ತಿಳಿಸಿತ್ತು.

  • ಪ್ರೀತಿ ಜಿಂಟಾ ಮುನಿಸು, ಕಿಂಗ್ಸ್ ಇಲೆವೆನ್ ತಂಡದಲ್ಲಿ ಬಿರುಕು?

    ಪ್ರೀತಿ ಜಿಂಟಾ ಮುನಿಸು, ಕಿಂಗ್ಸ್ ಇಲೆವೆನ್ ತಂಡದಲ್ಲಿ ಬಿರುಕು?

    ಮುಂಬೈ: ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸೋಲುಂಡ ಬಳಿಕ ತಂಡದ ಮೆಂಟರ್ ಸೆಹ್ವಾಗ್ ಹಾಗೂ ಕೋ-ಓನರ್ ಪ್ರೀತಿ ಜಿಂಟಾ ನಡುವೆ ಎಲ್ಲವೂ ಸರಿ ಇಲ್ಲವೇ ಎನ್ನುವ ಪ್ರಶ್ನೆ ಎದ್ದಿದೆ.

    ರಾಜಸ್ಥಾನದ ವಿರುದ್ಧ ಪಂದ್ಯದಲ್ಲಿ ಸುಲಭ ಮೊತ್ತವನ್ನು ಬೆನ್ನತ್ತಲು ತಂಡ ವಿಫಲವಾಗಲು ಮೆಂಟರ್ ಸೆಹ್ವಾಗ್ ಅವರ ನಿರ್ಧಾರವೇ ಕಾರಣ ಎಂದು ಪ್ರೀತಿ ತಮ್ಮ ಅಸಮಾಧಾನವನ್ನು ಹೊರ ಹಾಕಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

    ಅಂದಹಾಗೇ ರಾಜಸ್ಥಾನ ಪಂದ್ಯದಲ್ಲಿ ನಾಯಕ ಆಶ್ವಿನ್‍ಗೆ ಬ್ಯಾಟಿಂಗ್ ನಲ್ಲಿ ಮುಂಬಡ್ತಿ ನೀಡಿ ನಂಬರ್ 3 ಸ್ಥಾನದಲ್ಲಿ ಕಳಿಸಲಾಗಿತ್ತು. ಆದರೆ ಪಂದ್ಯದಲ್ಲಿ ಅಶ್ವಿನ್ ಶೂನ್ಯ ಸುತ್ತುವ ಮೂಲಕ ಎಲ್ಲ ಲೆಕ್ಕಾಚಾರನ್ನು ತಲೆ ಕೆಳಗೆ ಮಾಡಿದ್ದರು. ಸದ್ಯ ಪಂದ್ಯದ ಫಲಿತಾಂಶದಿಂದ ಪ್ರೀತಿ ಅಸಮಾಧಾನಗೊಂಡಿದ್ದರೆ ಎನ್ನಲಾಗಿದೆ.

    ಪಂದ್ಯದ ಬಳಿಕ ಆಟಗಾರರು ಮೈದಾನದಿಂದ ಮರಳುವ ಮುನ್ನವೇ ಪ್ರೀತಿ ಜಿಂಟಾ ಈ ಕುರಿತು ಪ್ರಶ್ನೆ ಮಾಡಿದ್ದರು. ಆದ್ರೆ ಸೆಹ್ವಾಗ್ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ತಂಡ ಉತ್ತಮ ಪ್ರದರ್ಶನ ನೀಡುತ್ತಿದ್ದು, ಪ್ಲೇಆಫ್ ಗೆ ಆಯ್ಕೆ ಆಗುವ ಎಲ್ಲಾ ಅವಕಾಶ ಇರುವ ವೇಳೆ ಈ ರೀತಿಯ ಗೊಂದಲಗಳಿಗೆ ಅವಕಾಶ ನೀಡಬಾರದು. ಇದು ಆಟಗಾರ ಮೇಲೆ ಪರಿಣಾಮ ಉಂಟಾಗಬಹುದು ಎಂದು ಸೆಹ್ವಾಗ್ ಪ್ರತಿಕ್ರಿಯೇ ನೀಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

    ಈ ಕುರಿತು ಮಾಧ್ಯಮಗಳು ಸೆಹ್ವಾಗ್ ಹಾಗೂ ಪ್ರೀತಿ ಜಿಂಟಾ ಅವರ ಪ್ರತಿಕ್ರಿಯೆಗಳನ್ನು ಕೇಳಿದ್ದು, ಇಬ್ಬರು ಈ ಕುರಿತು ಮಾತನಾಡಲು ನಿರಾಕರಿಸಿದ್ದಾರೆ. ಟೂರ್ನಿಯಲ್ಲಿ ಪಂಜಾಬ್ ಇದುವರೆಗೂ ಉತ್ತಮ ಪ್ರದರ್ಶನವನ್ನು ನೀಡಿದ್ದು, ಅಂಕಪಟ್ಟಿಯಲ್ಲಿ ಮೂರನೇ ಸ್ಥಾನ ಪಡೆದಿದೆ. ಕಳೆದ ಬಾರಿ ಪಂಬಾಜ್ ಪರ ಬ್ಯಾಟ್ ಬೀಸಿದ್ದ ಸೆಹ್ವಾಗ್ ಈ ಬಾರಿ ತಂಡದ ಮೆಂಟರ್ ಆಗಿ ಕಾರ್ಯನಿರ್ವಹಿಸಿದ್ದರು. ಅಲ್ಲದೇ ತಂಡದ ನಾಯಕತ್ವ ಸ್ಥಾನಕ್ಕೆ ಆಶ್ವಿನ್ ಆಯ್ಕೆ ಹಾಗೂ ಕ್ರಿಸ್‍ಗೇಲ್ ಖರೀದಿ ವೇಳೆಯೂ ಸೆಹ್ವಾಗ್ ಸಲಹೆಯನ್ನು ಪಡೆಯಲಾಗಿತ್ತು.

  • ಕ್ಯಾನ್ಸರ್ ಪೀಡಿತ ಬಾಲಕನಿಗೆ ಧೈರ್ಯ ತುಂಬಿದ ಯುವರಾಜ್ ಸಿಂಗ್

    ಕ್ಯಾನ್ಸರ್ ಪೀಡಿತ ಬಾಲಕನಿಗೆ ಧೈರ್ಯ ತುಂಬಿದ ಯುವರಾಜ್ ಸಿಂಗ್

    ಇಂದೋರ್‌: ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸಿ ಗೆದ್ದಿರುವ ಟೀಂ ಇಂಡಿಯಾ ಆಟಗಾರ ಯುವರಾಜ್ ಸಿಂಗ್ ಎಲ್ಲರಿಗೂ ಸ್ಫೂರ್ತಿಯಾಗಿದ್ದು, ಈ ನಡುವೆ ಕ್ಯಾನ್ಸರ್ ಪೀಡಿತರಿಗೆ ಧೈರ್ಯ ತುಂಬುವ ಕಾರ್ಯವನ್ನು ಮಾಡುತ್ತಿದ್ದಾರೆ.

    ಈ ಬಾರಿಯ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ತಂಡದ ಪರ ಆಡುತ್ತಿರುವ ಯುವಿ, ಕ್ಯಾನ್ಸರ್ ಪೀಡಿದ ಬಾಲಕನನ್ನು ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ಈ ಕುರಿತ ಫೋಟೋಗಳನ್ನು ಕಿಂಗ್ಸ್ ಇಲೆವೆನ್ ಪಂಜಾಬ್ ತನ್ನ ಟ್ವಿಟ್ಟರ್ ಖಾತೆಯಲ್ಲಿ ಪ್ರಕಟಿಸಿದೆ.

    11 ವರ್ಷದ ಬಾಲಕ ರಾಕಿ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಯುವರಾಜ್ ಆತನನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಯುವಿ ಬಾಲಕನೊಂದಿಗೆ ಕೆಲ ಸಮಯ ಕಳೆದಿದ್ದಾರೆ. ಬಾಲಕ ಬಹುಬೇಗ ಚೇತರಿಕೊಳ್ಳಲಿ ಎಂದು ಟ್ವೀಟ್ ನಲ್ಲಿ ಬರೆಯಲಾಗಿದೆ. ಭೇಟಿ ವೇಳೆ ಯುವಿ ಬಾಲಕನಿಗೆ ತಂಡದ ಜರ್ಸಿ ಹಾಗೂ ಕ್ಯಾಪ್ ಗಿಫ್ಟ್ ಮೇಲೆ ಸಹಿ ಮಾಡಿ ನೀಡಿದ್ದಾರೆ. ಯುವಿ ಅವರ ಈ ಫೋಟೋ ನೋಡಿರುವ ಅಭಿಮಾನಿಗಳು ಮೆಚ್ಚುಗೆ ಸೂಚಿಸಿದ್ದಾರೆ.

    ಬಹು ಸಮಯ ಕ್ಯಾನ್ಸರ್ ನಿಂದ ಬಳಿದ್ದ ಯುವಿ ಅನಾರೋಗ್ಯದ ನಡುವೆ ಭಾರತದ ಪರ ಆಡಿ ವಿಶ್ವಕಪ್ ಗೆಲುವು ಪಡೆಯಲು ಕಾರಣರಾಗಿದ್ದರು. ದಕ್ಷಿಣ ಆಫ್ರಿಕಾದಲ್ಲಿ ನಡೆದ 2007 ರ ಟಿ-20 ವಿಶ್ವಕಪ್ ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದರು. ಅಲ್ಲದೇ 2011 ವಿಶ್ವಕಪ್ ಟೂರ್ನಿಯಲ್ಲಿ ಸರಣಿ ಶ್ರೇಷ್ಟ ಪ್ರಶಸ್ತಿ ಪಡೆದಿದ್ದರು. ಬಳಿಕ ಯುವಿ ಕ್ಯಾನ್ಸರ್ ವಿರುದ್ಧ ಹೋರಾಟ ನಡೆಸಿ ಮತ್ತೆ 2012 ರಲ್ಲಿ ಟೀಂ ಇಂಡಿಯಾ ದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದರು. ಆದರೆ ಫಿಟ್‍ನೆಸ್ ಸಮಸ್ಯೆ ಎದುರಿಸುತ್ತಿರುವ ಯುವಿ ಈ ಬಾರಿಯ ಐಪಿಎಲ್ ನಲ್ಲೂ ನೀರಸ ಪ್ರದರ್ಶನ ಮುಂದುವರೆಸಿದ್ದಾರೆ. ಟೂರ್ನಿಯಲ್ಲಿ 7 ಪಂದ್ಯಗಳನ್ನು ಆಡಿರುವ ಯುವಿ 64 ರನ್ ಮಾತ್ರ ಗಳಿಸಿದ್ದಾರೆ. ಈಗ ಪಂಜಾಬ್ ತಂಡದ ಅಂತಿಮ 11 ಆಟಗಾರರ ಪಟ್ಟಿಯಲ್ಲಿ ಸ್ಥಾನಗಳಿಸುವ ವಿಶ್ವಾಸವನ್ನು ಹೊಂದಿದ್ದಾರೆ.

  • ಕೆಎಲ್ ರಾಹುಲ್‍ಗೆ ಪಾಕ್ ಮಹಿಳಾ ಆ್ಯಂಕರ್ ಕ್ಲೀನ್ ಬೌಲ್ಡ್!

    ಕೆಎಲ್ ರಾಹುಲ್‍ಗೆ ಪಾಕ್ ಮಹಿಳಾ ಆ್ಯಂಕರ್ ಕ್ಲೀನ್ ಬೌಲ್ಡ್!

    ಜೈಪುರ: ಐಪಿಎಲ್ ನಲ್ಲಿ ತಮ್ಮ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿರುವ ಕನ್ನಡಿಗ ಕೆಎಲ್ ರಾಹುಲ್ ಆಟಕ್ಕೆ ಪಾಕ್ ಮೂಲದ ನಿರೂಪಕಿ ಕ್ಲೀನ್ ಬೌಲ್ಡ್ ಆಗಿದ್ದು, ಟ್ವಿಟ್ಟರ್ ನಲ್ಲಿ ವಿಶೇಷ ಸಂದೇಶ ಕಳುಹಿಸಿದ್ದಾರೆ.

    ರಾಜಸ್ಥಾನ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಕೆಎಲ್ ರಾಹುಲ್ ಅಜೇಯ 95 ರನ್ ಗಳಿಸಿದ್ದ ಬಳಿಕ ಆರೆಂಜ್ ಕ್ಯಾಪ್ ಪಡೆದಿದ್ದು, ಈ ಟೂರ್ನಿಯಲ್ಲಿ ಅತೀ ಹೆಚ್ಚು ರನ್ ಗಳಿಸಿದ ಆಟಗಾರ ಎನಿಸಿಕೊಂಡಿದ್ದಾರೆ. ಈ ವೇಳೆಯೇ ರಾಹುಲ್ ಬ್ಯಾಟಿಂಗ್ ಗೆ ಪ್ರಶಂಸೆ ವ್ಯಕ್ತಪಡಿಸಿರುವ ಪಾಕ್ ನಿರೂಪಕಿ ಝೈನಭ್ ಅಬ್ಬಾಸ್, ಕೆಎಲ್ ರಾಹುಲ್ ಪ್ರಭಾವಶಾಲಿ, ಅತ್ಯುತ್ತಮ ಟೈಮಿಂಗ್ ಹೊಂದಿದ್ದು ಬ್ಯಾಟಿಂಗ್ ಶೈಲಿ ನನಗಿಷ್ಟ ಎಂದು ಬರೆದು ಟ್ವೀಟ್ ಮಾಡಿದ್ದಾರೆ.

    ಟೂರ್ನಿಯಲ್ಲಿ ಇದುವರೆಗೂ ಒಟ್ಟಾರೆ 10 ಪಂದ್ಯಗಳನ್ನು ಆಡಿರುವ ಕೆಎಲ್ ರಾಹುಲ್ 58.88 ರ ಸರಾಸರಿಯಲ್ಲಿ 471 ರನ್ ಗಳಿಸಿದ್ದಾರೆ. ಅತೀ ಹೆಚ್ಚು ರನ್  ಗಳಿಸಿದ ಪಟ್ಟಿಯ ನಂತರದ ಸ್ಥಾನದಲ್ಲಿ 423 ರನ್ ಗಳೊಂದಿಗೆ ಅಂಬಟಿ ರಾಯುಡು 2ನೇ ಸ್ಥಾನಕ್ಕೆ ಪಡೆದಿದ್ದಾರೆ.

    ಮೇ 6 ರಂದು ನಡೆದ ರಾಜಸ್ಥಾನದ ವಿರುದ್ಧ ಪಂದ್ಯದಲ್ಲೂ ರಾಹುಲ್ ಕೇವಲ 54 ಎಸೆತಗಳಲ್ಲಿ 84 ರನ್ ಸಿಡಿಸಿ ಅಜೇಯರಾಗಿ ಉಳಿದಿದ್ದರು. ಸದ್ಯ ನಡೆಯುತ್ತಿರುವ ಟೂರ್ನಿಯಲ್ಲಿ ರಾಹುಲ್ ಪಂಜಾಬ್ ತಂಡದ ಕೀ ಬ್ಯಾಟ್ಸ್ ಮನ್ ಆಗಿದ್ದು, ಪ್ರತಿ ಪಂದ್ಯದಲ್ಲೂ ತಂಡದ ಗೆಲುವಿಗೆ ಕಾಣಿಕೆ ನೀಡುತ್ತಿದ್ದಾರೆ. ಟೂರ್ನಿಯ ಆರಂಭದ ಡೆಲ್ಲಿ ವಿರುದ್ಧ ಏಪ್ರಿಲ್ 8 ರಂದು ನಡೆದ ಪಂದ್ಯದಲ್ಲಿ ಕೇವಲ 14 ಎಸೆಗಳಲ್ಲಿ ಅರ್ಧ ಶತಕ ಸಿಡಿಸಿ ದಾಖಲೆ ಬರೆದಿದ್ದರು.

    https://www.instagram.com/p/BiAZygxlFyz/?taken-by=zabbasofficial

    https://www.instagram.com/p/BhHSya2lHnV/?taken-by=zabbasofficial

  • ಪಂಜಾಬ್ ವಿರುದ್ಧ ಗೆಲುವಿನೊಂದಿಗೆ ಎರಡು ದಾಖಲೆ ಮುರಿದ ರೋ`ಹಿಟ್’ ಶರ್ಮಾ

    ಪಂಜಾಬ್ ವಿರುದ್ಧ ಗೆಲುವಿನೊಂದಿಗೆ ಎರಡು ದಾಖಲೆ ಮುರಿದ ರೋ`ಹಿಟ್’ ಶರ್ಮಾ

    ಇಂದೋರ್: 2018 ಐಪಿಎಲ್ ಆವೃತ್ತಿಯಲ್ಲಿ ಮುಂಬೈ ಬಳಗ ಉತ್ತಮ ಆರಂಭ ಪಡೆದಿದ್ದರು, ಪಂಜಾಬ್ ವಿರುದ್ಧದ ಗೆಲುವಿನೊಂದಿಗೆ ತನ್ನ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿದೆ.

    ಪಂಜಾಬ್ ವಿರುದ್ಧದ ಗೆಲುವುನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮುಂಬೈ ತಂಡದ ನಾಯಕ ರೋಹಿತ್ ಶರ್ಮಾ 300 ಸಿಕ್ಸರ್ ಸಿಡಿಸಿದ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಡೆದಿದ್ದಾರೆ. ಅಲ್ಲದೇ ಐಪಿಎಲ್ ಚೇಸಿಂಗ್ ವೇಳೆ ಗೆಲುವು ಪಡೆದ ತಂಡದ ಪರ 17 ಬಾರಿ ಔಟಾಗದೆ ಉಳಿದ ಆಟಗಾರ ಎಂಬ ದಾಖಲೆಯನ್ನು ಬರೆದರು.

    ರೋಹಿತ್ ಶರ್ಮಾ ಒಟ್ಟಾರೆ ಟಿ20 ಮಾದರಿಯಲ್ಲಿ 300 ಸಿಕ್ಸರ್ ಸಿಡಿಸಿದ್ದು, ಅಂತರಾಷ್ಟ್ರೀಯ ಹಾಗೂ ದೇಶಿಯ ಟೂರ್ನಿಗಳಲ್ಲಿ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ಪಟ್ಟಿಯಲ್ಲಿ ಕ್ರಿಸ್ ಗೇಲ್ (844 ಸಿಕ್ಸರ್) ಮೊದಲ ಸ್ಥಾನದಲ್ಲಿದ್ದಾರೆ. ಇನ್ನು ಚೇಸಿಂಗ್ ವೇಳೆ 16 ಬಾರಿ ನಾಟೌಟ್ ಆಗಿ ಉಳಿದಿದ್ದ ಗೌತಮ್ ಗಂಭೀರ್ ದಾಖಲೆಯನ್ನು ರೋಹಿತ್ ಮುರಿದಿದ್ದಾರೆ.

    ಪಂಜಾಬ್ ವಿರುದ್ಧ ಗೆಲುವಿನೊಂದಿಗೆ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ 9 ಪಂದ್ಯಗಳಿಂದ 6 ಅಂಕ ಪಡೆದು 5ನೇ ಸ್ಥಾನ ಪಡೆದಿದೆ. ಪಂಜಾಬ್ ವಿರುದ್ಧ ಕಣಕ್ಕೆ ಇಳಿಯಲು ಅವಕಾಶ ಪಡೆದ ಮುಂಬೈ ಆಟಗಾರ ಸೂರ್ಯಕುಮಾರ್ ಯಾದವ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಅರ್ಧ ಶತಕ ಸಿಡಿಸಿದ್ದರು. 47 ಎಸೆತಗಳನ್ನು ಎದುರಿಸಿದ ಸೂರ್ಯಕುಮಾರ್ 6 ಬೌಂಡರಿ, 2 ಸಿಕ್ಸರ್ ನೆರವಿನಿಂದ 57 ರನ್ ಗಳಿಸಿ ಮಿಂಚಿದರು.

  • ಆರ್‌ಸಿಬಿ ತಂಡದಿಂದ ಡ್ರಾಪ್ ಆದ ಸತ್ಯ ಬಿಚ್ಚಿಟ್ಟ ಕ್ರಿಸ್ ಗೇಲ್

    ಆರ್‌ಸಿಬಿ ತಂಡದಿಂದ ಡ್ರಾಪ್ ಆದ ಸತ್ಯ ಬಿಚ್ಚಿಟ್ಟ ಕ್ರಿಸ್ ಗೇಲ್

    ಮೊಹಾಲಿ: ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡದ ಆಯ್ಕೆಗಾರರು ಐಪಿಎಲ್ 11 ನೇ ಆವೃತ್ತಿಗೆ ತನ್ನನ್ನು ಉಳಿಸಿಕೊಳ್ಳುವ ಬಗ್ಗೆ ಮೊದಲು ಮಾಹಿತಿ ನೀಡಿದ್ದರು. ಆದ್ರೆ ಬಳಿಕ ಅವರು ತನ್ನನ್ನು ಸಂಪರ್ಕಿಸಲಿಲ್ಲ. ಇದರಿಂದ ತನಗೆ ನಿರಾಸೆ ಅನುಭವ ಉಂಟಾಗಿತ್ತು ಎಂದು ಕಿಂಗ್ಸ್ ಇಲೆವೆನ್ ತಂಡ ಹಾಗೂ ಕೆರೆಬಿಯನ್ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ಹೇಳಿದ್ದಾರೆ.

    ಈ ಕುರಿತು ಖಾಸಗಿ ವಾಹಿನಿಯ ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ಮೊದಲು ಆರ್‌ಸಿಬಿ ತಂಡದ ಆಯ್ಕೆ ಸಮಿತಿ ತನ್ನನ್ನು ಉಳಿಸಿಕೊಳ್ಳುವುದಾಗಿ ಮಾಹಿತಿ ನೀಡಿತ್ತು. ಆದರೆ ಬಳಿಕ ತಮ್ಮ ನಿರ್ಧಾರವನ್ನು ಬದಲಾಯಿಸಿದರು. ಆದರೆ ಈ ಕುರಿತು ಯಾರನ್ನು ಹೊಣೆ ಮಾಡಲು ಸಾಧ್ಯವಿಲ್ಲ. ತಾನು ಈ ಹಿಂದಿನ ಟೂರ್ನಿಗಳಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇನೆ. ಇದಕ್ಕೆ ಸಾಕ್ಷಿ ಎಂಬಂತೆ 21 ಶತಕ ಹಾಗೂ ಅತೀ ಹೆಚ್ಚು ಸಿಕ್ಸರ್ ಸಿಡಿಸಿದ ದಾಖಲೆ ಹೊಂದಿದ್ದೇನೆ ಎಂದರು.

    ಸೆಹ್ವಾಗ್ ಅಚ್ಚರಿ ಆಯ್ಕೆ: ಐಪಿಎಲ್ ಟೂರ್ನಿಯ ಹರಾಜು ಪ್ರಕ್ರಿಯೆ ವೇಳೆ ತನ್ನನ್ನು ಎರಡು ಬಾರಿಯೂ ಆಯ್ಕೆ ಮಾಡಿರಲಿಲ್ಲ. ಆದರೆ ಮೂರನೇ ಬಾರಿ ಸೆಹ್ವಾಗ್ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡುವ ಅವಕಾಶ ನೀಡಿದ್ದರು. ಇದು ತನಗೆ ಅಚ್ಚರಿ ಮೂಡಿಸಿತ್ತು. ಈ ಮೊದಲು ತಾನು ಟೂರ್ನಿಗೆ ಅಗತ್ಯವಿಲ್ಲ `ಇಟ್ಸ್ ಫೈನ್’ ಎಂದು ಸಮಾಧಾನಗೊಂಡಿದ್ದೆ ಎಂದು ಹೇಳಿದರು.

    ಕಪ್ ಗೆಲ್ಲಬೇಕು: ಈ ಬಾರಿಯ ಟೂರ್ನಿಯಲ್ಲಿ ತಾನು ಕೇವಲ ಒಂದು ಉದ್ದೇಶ ಹೊಂದಿದ್ದೇನೆ. ಅದು ಪಂಜಾಬ್ ಕಪ್ ಗೆಲ್ಲುವಂತೆ ಮಾಡುವುದು. ತಂಡದ ಮಾಲೀಕರಾದ ಪ್ರೀತಿ ಜಿಂಟಾ ಅವರಿಗೆ ಕಪ್ ಗೆದ್ದು ನೀಡುತ್ತೇವೆ. ಇದಾದ ಬಳಿಕ 2019 ರ ವಿಶ್ವಕಪ್ ಅನ್ನು ತನ್ನ ದೇಶಕ್ಕೆ ಗೆಲ್ಲಿಸಿಕೊಡ ಬೇಕಿದೆ. ಆದ್ರೆ ವಿಶ್ವಕಪ್ ಗೆ ಆಯ್ಕೆಯಾಗಲು ಸಾಕಷ್ಟು ಹೋರಾಟ ನಡೆಸಬೇಕಾಯಿತು ಎಂದು ಹೇಳಿದರು.

    ಕಳೆದ 10 ಐಪಿಎಲ್ ಟೂರ್ನಿಗಳಲ್ಲಿ ಗೇಲ್ 6 ಶತಕಗಳನ್ನು ಒಳಗೊಂಡಂತೆ 3,878 ರನ್ ಗಳಿಸಿದ್ದಾರೆ. 11 ನೇ ಆವೃತ್ತಿಯಲ್ಲಿ ಉತ್ತಮ ಆರಂಭ ಪಡೆದಿರುವ ಗೇಲ್ ಈಗಾಗಲೇ ಹೈದರಾಬಾದ್ ವಿರುದ್ಧ ಸ್ಫೋಟಕ ಶತಕ (106 ರನ್) ಸಿಡಿಸಿದ್ದು, ಇದುವರೆಗೂ ಆಡಿರುವ ಪಂದ್ಯಗಳಲ್ಲಿ 161.53 ಸ್ಟ್ರೈಕ್ ರೇಟ್ ನಲ್ಲಿ 252 ರನ್ ಸಿಡಿಸಿದ್ದಾರೆ.

  • ಕೊನೆ ಕ್ಷಣದಲ್ಲಿ ಗೇಲ್‍ರನ್ನು ಖರೀದಿಸಿದ ಸ್ವಾರಸ್ಯಕರ ಗುಟ್ಟು ಬಿಚ್ಚಿಟ್ಟ ಕಿಂಗ್ಸ್ ಇಲೆವೆನ್ 

    ಕೊನೆ ಕ್ಷಣದಲ್ಲಿ ಗೇಲ್‍ರನ್ನು ಖರೀದಿಸಿದ ಸ್ವಾರಸ್ಯಕರ ಗುಟ್ಟು ಬಿಚ್ಚಿಟ್ಟ ಕಿಂಗ್ಸ್ ಇಲೆವೆನ್ 

    ನವದೆಹಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಕೆರಿಬಿಯನ್ ಸ್ಫೋಟಕ ಆಟಗಾರ ಕ್ರಿಸ್ ಗೇಲ್ ರನ್ನು ಖರೀದಿಸಲು ಅವರ ಬಳಿ ಹಣದ ಕೊರತೆ ಎದುರಾಗಿದ್ದ ಸಂಗತಿಯನ್ನು ತಂಡದ ಸಹ ಮಾಲೀಕರಾಗಿರುವ ನೆಸ್ ವಾಡಿಯಾ ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ನಡೆದ ಆಟಗಾರರ ಹರಾಜಿನಲ್ಲಿ ಪಂಜಾಬ್ ತಂಡ ಕ್ರಿಸ್ ಗೇಲ್ ರನ್ನು ಮೂಲ ಬೆಲೆ 2 ಕೋಟಿ ರೂ.ಗೆ ಖರೀದಿಸಿದ ಸಂಗತಿ ಎಲ್ಲರಿಗೂ ತಿಳಿದ ಸಂಗತಿ. ಆದರೆ ಪಂಜಾಬ್ ತಂಡ ಗೇಲ್ ರನ್ನು ಖರೀದಿಸುವ ಮುನ್ನ ಅವರನ್ನು ಎರಡು ಬಾರಿ ಯಾವ ತಂಡವೂ ಖರೀದಿಸಲಿಲ್ಲ. ಮೂರನೇ ಬಾರಿ ಅವರ ಹೆಸರನ್ನು ಕರೆದ ವೇಳೆ ನಾವು ಖರೀದಿಸಿದ್ದಾಗಿ ಹೇಳಿದ್ದಾರೆ.

    ಇದಕ್ಕೂ ಮುನ್ನವೇ ಬೇರೆ ಯಾವುದೇ ತಂಡ ಅವರನ್ನು ಖರೀದಿಸಿದ್ದರೆ ನಮ್ಮ ತಂಡ ಸೇರುವ ಅವಕಾಶ ಕೈ ತಪ್ಪುತ್ತಿತ್ತು. ಗೇಲ್ ರ ಮೂಲ ಬೆಲೆಗೆ ಅವರನ್ನು ಖರೀದಿಸಿದ ವೇಳೆ ನಮ್ಮ ಬಳಿ ಕೇವಲ 2.1 ಕೋಟಿ ರೂ ಮಾತ್ರ ಉಳಿದಿತ್ತು ಎಂಬ ಸತ್ಯವನ್ನು ತಿಳಿಸಿದ್ದಾರೆ. ಅಂದ ಹಾಗೇ ಪಂಜಾಬ್ ತಂಡ ಈ ಬಾರಿ ನಿಗದಿಪಡಿಸಿದ್ದ ಒಟ್ಟು ಮೊತ್ತ 67.5 ಕೋಟಿ ರೂ. ಪೈಕಿ ಕೇವಲ 10 ಲಕ್ಷವನ್ನು ಮಾತ್ರ ಹಾಗೇ ಉಳಿಸಿಕೊಂಡಿದೆ.

    ಪಂಜಾಬ್ ತಂಡ ತಮ್ಮನ್ನು ಆಯ್ಕೆ ಮಾಡಿರುವುದು ಸರಿ ಎಂದು ತೋರಿಸಿಕೊಟ್ಟಿರುವ ಗೇಲ್ ಈ ಟೂರ್ನಿಯಲ್ಲಿ ಈಗಾಗಲೇ ಒಂದು ಶತಕ ಹಾಗೂ ಎರಡು ಅರ್ಧ ಶತಕಗಳನ್ನು ದಾಖಲಿಸಿದ್ದಾರೆ. ಈ ಮೂಲಕ ತಮ್ಮನ್ನು ಖರೀದಿಸಲು ಹಿಂದೇಟು ಹಾಕಿದ್ದ ಫ್ರಾಂಚೈಸಿಗಳಿಗೆ ಬ್ಯಾಟ್ ಮೂಲಕವೇ ಉತ್ತರಿಸಿದ್ದಾರೆ. ಪಂಜಾಬ್ ತಂಡಕ್ಕೆ ಆಯ್ಕೆಯಾಗಲು ಕಾರಣವಾಗಿದ್ದ ಸೆಹ್ವಾಗ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.

    ತಂಡದ ಮೊತ್ತೊಬ್ಬ ಆಟಗಾರ ಯುವರಾಜ್ ಸಿಂಗ್ ಕುರಿತು ಪ್ರತಿಕ್ರಿಯೆ ನೀಡಿರುವ ವಾಡಿಯಾ, ಇದೂವರೆಗಿನ ಪಂದ್ಯಗಳಲ್ಲಿ ಯುವಿ ಉತ್ತಮ ಪ್ರದರ್ಶನ ನೀಡದೆ ಇದ್ದರೂ, ಮುಂದಿನ ಪಂದ್ಯಗಳಲ್ಲಿ ಮಿಂಚುವ ವಿಶ್ವಾಸವಿದೆ ಎಂದು ತಿಳಿಸಿದರು. ಅಲ್ಲದೇ ತಂಡಕ್ಕೆ ಭಾರತೀಯ ಆಟಗಾರ ನಾಯಕರಾಗುವ ಇಚ್ಛೆ ಇತ್ತು, ಅಶ್ವಿನ್ ಮೂಲಕ ಇದು ಸಾಧ್ಯವಾಗಿದೆ ಎಂದರು.