Tag: ಕಿಚಡಿ

  • ಕಿಚಡಿಯಲ್ಲಿ ಉಪ್ಪು ಜಾಸ್ತಿಯಾಗಿದ್ದಕ್ಕೆ ಪತ್ನಿ ಕತ್ತು ಹಿಸುಕಿ ಕೊಂದ

    ಕಿಚಡಿಯಲ್ಲಿ ಉಪ್ಪು ಜಾಸ್ತಿಯಾಗಿದ್ದಕ್ಕೆ ಪತ್ನಿ ಕತ್ತು ಹಿಸುಕಿ ಕೊಂದ

    ಮುಂಬೈ: ಬೆಳಗ್ಗೆ ನೀಡಿದ್ದ ಟಿಫನ್‍ನಲ್ಲಿ ಉಪ್ಪು, ಖಾರ ಅಧಿಕವಾಗಿದೆ ಎಂಬ ಕಾರಣಕ್ಕೆ ವ್ಯಕ್ತಿಯೋರ್ವ ತನ್ನ 40 ವರ್ಷದ ಪತ್ನಿಯ ಕತ್ತು ಹಿಸುಕಿ ಕೊಂದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ.

    ಶುಕ್ರವಾರ ಬೆಳಗ್ಗೆ ಭಾಯಂದರ್ ಪೂರ್ವದ ಫಟಕ್ ರಸ್ತೆ ಪ್ರದೇಶದಲ್ಲಿ ಈ ಘಟನೆ ಜರುಗಿದ್ದು, ಮೃತ ದುರ್ದೈವಿಯನ್ನು ನಿರ್ಮಲಾ ಎಂದು ಗುರುತಿಸಲಾಗಿದೆ. 46 ವರ್ಷದ ಆರೋಪಿ ನಿಲೇಶ್ ಘಾಘ್ ಪತ್ನಿ ಕಿಚಡಿ ಮಾಡಿ ಬೆಳಗಿನ ಉಪಹಾರವಾಗಿ ನೀಡಿದ್ದರು. ಕಿಚಡಿಯಲ್ಲಿ ಹೆಚ್ಚು ಉಪ್ಪು ಇದ್ದಿದ್ದರಿಂದ ಕೋಪಗೊಂಡ ನಿಲೇಶ್ ಘಾಘ್ ಉದ್ದನೆಯ ಬಟ್ಟೆಯಿಂದ ಪತ್ನಿಯ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಘಟನೆ ಸಂಬಂಧ ಮಾಹಿತಿ ದೊರೆತ ಪೊಲೀಸರು ಸ್ಥಳಕ್ಕೆ ಆಗಮಿಸಿ ಮಹಿಳೆಯ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ ಎಂದು ಪೊಲೀಸ್ ಕಮಿಷನರೇಟ್‍ನ ಅಧಿಕಾರಿ ಮೀರಾ ಭಯಂದರ್-ವಸಾಯಿ ವಿರಾರ್ ತಿಳಿಸಿದ್ದಾರೆ. ಇದನ್ನೂ ಓದಿ: 4ರ ಬಾಲಕಿ ಮೇಲೆ 9 ವರ್ಷದ ಬಾಲಕನಿಂದ ಲೈಂಗಿಕ ದೌರ್ಜನ್ಯ

    Kichadi

    ಘಟನೆಗೆ ಬೇರೆ ಏನಾದರೂ ಕಾರಣವಿದೆಯೇ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದು, ಸದ್ಯ ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಭಯಂದರ್‌ನ ನವಘರ್ ಪೊಲೀಸ್ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದನ್ನೂ ಓದಿ: ಮಕ್ಕಾ ಮಸೀದಿ ಮೇಲೆ ಕೇಸರಿ ಧ್ವಜ ಹಾರಿಸಿ ಪೋಸ್ಟ್ – ಹುಬ್ಬಳ್ಳಿಯಲ್ಲಿ ಮುಸ್ಲಿಂ ಪುಂಡರಿಂದ ದಾಂಧಲೆ

    POLICE JEEP

    ಗುರುವಾರ ಕೂಡ ಇದೇ ರೀತಿ ಮಹಿಳೆಯೊಬ್ಬಳು ಚಹಾದ ಜೊತೆಗೆ ಟಿಫನ್ ನೀಡಲಿಲ್ಲ ಎಂಬ ಕಾರಣಕ್ಕೆ ಆಕೆಯ ಮಾವ ಮಹಿಳೆ ಮೇಲೆ ಪಿಸ್ತೂಲ್‍ನಿಂದ ಗುಂಡು ಹಾರಿಸಿ ಹತ್ಯೆಗೈದಿದ್ದನು. ರಾಬೋಡಿ ಪ್ರದೇಶದ ನಿವಾಸಿಯಾಗಿದ್ದ 42 ವರ್ಷದ ಮಹಿಳೆಯ ಹೊಟ್ಟೆಗೆ ಗುಂಡು ತಗುಲಿ ಶುಕ್ರವಾರ ಬೆಳಗ್ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದರು.

  • ದರೋಡೆ ಸಮಯದಲ್ಲಿ ಕಿಚಡಿ ಮಾಡಿ ಸಿಕ್ಕಿಬಿದ್ದ ಕಳ್ಳ

    ದರೋಡೆ ಸಮಯದಲ್ಲಿ ಕಿಚಡಿ ಮಾಡಿ ಸಿಕ್ಕಿಬಿದ್ದ ಕಳ್ಳ

    ದಿಸ್ಪುರ್: ಮನೆಯೊಂದರಲ್ಲಿ ದರೋಡೆ ನಡೆಸಲು ಹೋಗಿದ್ದ ಕಳ್ಳನಿಗೆ ಹಸಿವೆಯಾಗಿದ್ದ ಕಾರಣ ಅಡುಗೆ ಮನೆಯಲ್ಲಿ ಕಿಚಡಿ ಬೇಯಿಸಲು ಹೋಗಿ ಸಿಕ್ಕಿ ಬಿದ್ದಿರುವ ಹಾಸ್ಯಕರ ಘಟನೆ ಗುವಾಹಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

    ವರದಿಗಳ ಪ್ರಕಾರ ಕಳ್ಳ ರಾತ್ರಿ ಹೊತ್ತು ಮನೆಯೊಂದಕ್ಕೆ ನುಗ್ಗಿದ್ದಾನೆ. ಈ ಸಂದರ್ಭದಲ್ಲಿ ಹಸಿದಿದ್ದ ಆತ ಮನೆಯ ಅಡುಗೆ ಮನೆಗೆ ಹೋಗಿ ಕಿಚಡಿ ಬೇಯಿಸಲು ಪ್ರಾರಂಭಿಸಿದ್ದಾನೆ. ಅಡುಗೆ ಮನೆಯಿಂದ ಬರುತ್ತಿದ್ದ ಶಬ್ಧವನ್ನು ಆಲಿಸಿದ ಮನೆಯವರು ತಕ್ಷಣ ಎಚ್ಚೆತ್ತುಕೊಂಡು ಆತನನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. ಇದನ್ನೂ ಓದಿ: ವಿಶ್ವದಲ್ಲೇ ಎತ್ತರದ ಆದಿಗುರು ಶಂಕರಚಾರ್ಯರ ಪ್ರತಿಮೆ ಸ್ಥಾಪನೆ!

    ಸ್ಥಳೀಯರು ಪೊಲೀಸರಿಗೆ ಇದರ ಬಗ್ಗೆ ಮಾಹಿತಿ ನೀಡಿದ್ದು, ಆತನನ್ನು ಬಂಧಿಸಲಾಗಿದೆ. ಈ ಹಾಸ್ಯಕರ ದರೋಡೆಯ ಘಟನೆಯನ್ನು ಅಸ್ಸಾಂ ಪೊಲೀಸರು ಟ್ಟಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

    ಆಹಾರ ಕಳ್ಳನ ಕುತೂಹಲಕಾರಿ ಪ್ರಕರಣ! ಆಹಾರ ನಿಮ್ಮ ಆರೋಗ್ಯಕ್ಕೆ ಪ್ರಯೋಜನ ಉಂಟುಮಾಡುತ್ತದೆಯಾದರೂ ಕಳ್ಳತನದ ಸಮಯದಲ್ಲಿ ಕಿಚಡಿ ಬೇಯಿಸುವುದು ನಿಮ್ಮ ಯೋಗಕ್ಷೇಮಕ್ಕೆ ಹಾನಿಯುಂಟುಮಾಡುತ್ತದೆ. ಕಳ್ಳನನ್ನು ಬಂಧಿಸಲಾಗಿದೆ. ಹಾಗೂ ಗುವಾಹಟಿ ಪೊಲೀಸರು ಅವನಿಗೆ ಬಿಸಿ ಊಟವನ್ನು ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಗಿ ಟ್ಟಿಟ್ಟರ್‌ನಲ್ಲಿ ಬರೆದಿದ್ದಾರೆ. ಇದನ್ನೂ ಓದಿ: ಪ್ರತಿಯೊಬ್ಬರಿಗೂ ಓಮಿಕ್ರಾನ್‌ ಹರಡುತ್ತೆ, ಬೂಸ್ಟರ್‌ನಿಂದಲೂ ಅದನ್ನು ತಡೆಯಲು ಸಾಧ್ಯವಿಲ್ಲ: ICMR ವೈದ್ಯ

  • ಸಖತ್ ಟೇಸ್ಟ್ ಆಗಿರುವ ಬಿಸಿ ಬಿಸಿಯಾದ ಕಿಚಡಿ ಮಾಡಿ

    ಸಖತ್ ಟೇಸ್ಟ್ ಆಗಿರುವ ಬಿಸಿ ಬಿಸಿಯಾದ ಕಿಚಡಿ ಮಾಡಿ

    ಬೆಳಗ್ಗೆ, ಸಂಜೆ ಯಾವ ಹೊತ್ತಿನಲ್ಲಿ ಬೇಕಾದರೂ ಸವಿಯಬಹುದಾದ ರೆಸಿಪಿ ಹುಡುಕುತ್ತಿದ್ದೀರಾ? ಪೌಷ್ಠಿಕಾಂಶದ ಆಹಾರ, ತಿನ್ನಲು ರುಚಿಕರವಾಗಿರುವ ಮತ್ತು ಮಕ್ಕಳಿಗೆ ತುಂಬಾನೇ ಇಷ್ಟವಾಗುವುದು ಕಿಚಡಿಯಾಗಿದೆ. ಈ ಅಡುಗೆಯನ್ನು ಮಾಡುವುದು ತುಂಬಾ ಸುಲಭ ಮತ್ತು ನಾಲಿಗೆಗೆ ರುಚಿ ನೀಡುವ ಅಡುಗೆಯಾಗಿದೆ.

    ಬೇಕಾಗುವ ಸಾಮಗ್ರಿಗಳು:
    * ಹೆಸರು ಬೇಳೆ- ಅರ್ಧ ಕಪ್
    * ತೋಗರಿ ಬೇಳೆ- ಅರ್ಧ ಕಪ್
    * ಅಕ್ಕಿ – 2 ಕಪ್
    * ಕಾಳು ಮೆಣಸು- ಸ್ವಲ್ಪ
    * ಈರುಳ್ಳಿ 2
    * ಟೊಮೆಟೋ- 2
    * ಒಣ ಮೆಣಸು- 3
    * ಬಾದಾಮಿ/ಪಿಸ್ತಾ ಪುಡಿ- 1 ಚಮಚ
    * ಜೀರಿಗೆ ಪುಡಿ- 1 ಚಮಚ
    * ದನಿಯಾ ಪುಡಿ- 1 ಚಮಚ
    * ಅರಿಶಿಣ ಪುಡಿ- 1 ಚಮಚ
    * ಲವಂಗ- 2
    * ತುಪ್ಪ- 3
    * ಕರಿಬೇವು-
    * ಪಲಾವ್ ಎಲೆ
    * ರುಚಿಗೆ ತಕ್ಕಷ್ಟು ಉಪ್ಪು

    Kichadi

    ಮಾಡುವ ವಿಧಾನ:
    * ಕುಕ್ಕರಿನಲ್ಲಿ ಹೆಸರು ಬೇಳೆ, ತೋಗರಿ ಬೇಳೆ, ಅಕ್ಕಿ, ಟೊಮೆಟೊ, ಈರುಳ್ಳಿ, ಕಾಳು ಮೆಣಸು, ರುಚಿಗೆ ತಕ್ಕ ಉಪ್ಪು, ಅರಿಶಿಣ ಹಾಕಿ 4 ಲೋಟ ನೀರು ಹಾಕಿ ಬೇಯಿಸಿಕೊಳ್ಳಬೇಕು.  ಇದನ್ನೂ ಓದಿ: ರೈತರ ಹೋರಾಟಕ್ಕೆ ಇಂದಿಗೆ ಒಂದು ವರ್ಷ – ಸಿಂಘು, ಟ್ರಿಕ್ರಿ ಗಡಿಯಲ್ಲಿ ಅನ್ನದಾತರ ಮಹಾಪಂಚಾಯತ್

    Kichadi

    * ಈಗ ಪಾತ್ರೆಯಲ್ಲಿ ತುಪ್ಪ ಬಿಸಿ ಮಾಡಿ ಸ್ವಲ್ಪ ಜೀರಿಗೆ, ಒಣ ಮೆಣಸು ಮುರಿದು ಹಾಕಿ, ನಂತರ ಪಲಾವ್ ಎಲೆ ಅಥವಾ ಸ್ವಲ್ಪ ಕರಿಬೇವು ಹಾಕಿ ಲವಂಗ ಸೇರಿಸಿ ಫ್ರೈ ಮಾಡಬೇಕು.

    * ನಂತರ ಬೇಯಿಸಿದ ಅಕ್ಕಿ- ಬೇಳೆ ಸೇರಿಸಿ, ಅದಕ್ಕೆ ಸ್ವಲ್ಪ ಖಾರ ಪುಡಿ, ಜೀರಿಗೆ ಪುಡಿ, ಕೊತ್ತಂಬರಿ ಪುಡಿ, ಡ್ರೈಫ್ರೂಟ್ಸ್ ಪುಡಿ ಸೇರಿಸಿ ಕುದಿಸಿದರೆ ಆರೊಗ್ಯಕರವಾದ ಕಿಚಡಿ ಸಿದ್ಧವಾಗುತ್ತದೆ. ಇದನ್ನೂ ಓದಿ: ಆಫ್ರಿಕಾದಲ್ಲಿ ರೂಪಾಂತರ ಕೋವಿಡ್ ತಳಿ ಪತ್ತೆ – ಕಟ್ಟೆಚ್ಚರಕ್ಕೆ ಎಲ್ಲ ರಾಜ್ಯಗಳಿಗೆ ಕೇಂದ್ರದಿಂದ ಸೂಚನೆ

     

  • ಅಮಿತ್ ಶಾ ರ‍್ಯಾಲಿಯಲ್ಲಿ ಬರೋಬ್ಬರಿ 5000 ಕೆ.ಜಿ. ಕಿಚಡಿ ತಯಾರು

    ಅಮಿತ್ ಶಾ ರ‍್ಯಾಲಿಯಲ್ಲಿ ಬರೋಬ್ಬರಿ 5000 ಕೆ.ಜಿ. ಕಿಚಡಿ ತಯಾರು

    ನವದೆಹಲಿ: ಇಂದು ಭಾರತೀಯ ಜನತಾ ಪಾರ್ಟಿ (ಬಿಜೆಪಿ) ದೆಹಲಿಯ ರಾಮಲೀಲಾ ಮೈದಾನದಲ್ಲಿ ಆಯೋಜಿಸಿದ್ದ ರ‍್ಯಾಲಿಯಲ್ಲಿ ಬರೋಬ್ಬರಿ 5,000 ಕೆಜಿ ಕಿಚಡಿ ತಯಾರು ಮಾಡುವ ಮೂಲಕ ವರ್ಲ್ಡ್ ರೆಕಾರ್ಡ್ ಮಾಡಿದೆ.

    ವಿಶ್ವ ದಾಖಲೆ ಸೃಷ್ಟಿಸುವ ಉದ್ದೇಶದಿಂದ ದಲಿತರ ಮನೆಗಳಿಂದ ಅಕ್ಕಿ ಮತ್ತು ಬೇಳೆಯನ್ನು ರಾಮಲೀಲಾ ಮೈದಾನಕ್ಕೆ ತರಿಸಿ ರ‍್ಯಾಲಿಯಲ್ಲಿ ಕಿಚಡಿಯನ್ನು ತಯಾರು ಮಾಡಲಾಗಿದೆ. ‘ಬಿಮ್ ಮಹಾಸಂಗಮ್ ವಿಜಯ್ ಸಂಕಲ್ಪ’ ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದ ಬಿಜೆಪಿ ಬೆಂಬಲಿಗರು ಹಾಗೂ ಕಾರ್ಯಕರ್ತರಿಗೆ ಕಿಚಡಿಯನ್ನು ವಿತರಿಸಲಾಗಿದೆ. ಈ ರ‍್ಯಾಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ನಡೆಯುತ್ತಿದೆ.

    ನವೆಂಬರ್ 2017 ರಂದು ಖ್ಯಾತ ಬಾಣಸಿಗ ಸಂಜೀವ್ ಕಪೂರ್ ಅವರು 918 ಕೆಜಿ ಕಿಚಡಿ ತಯಾರಿಸುವ ಮೂಲಕ ವಿಶ್ವದಾಖಲೆ ಸೃಷ್ಟಿಸಿದ್ದರು. ಈ ಕಿಚಡಿಯನ್ನು ಸಂಜೀವ್ ಕಪೂರ್ ಅವರು ದೆಹಲಿಯಲ್ಲಿ ಆಹಾರ ಸಂಸ್ಕರಣಾ ಸಚಿವಾಲಯ ಆಯೋಜಿಸಿದ್ದ ಆಹಾರ ಮೇಳದಲ್ಲಿ ತಯಾರು ಮಾಡಿದ್ದರು.

    ಈ ರ‍್ಯಾಲಿಯಲ್ಲಿ ಅಮಿತ್ ಶಾ ಅವರು, ಬಿಜೆಪಿ ಸರ್ಕಾರ ದಲಿತ ಸಮುದಾಯಕ್ಕಾಗಿ ಜಾರಿಗೆ ತಂದಿರುವ ಯೋಜನೆಗಳ ಬಗ್ಗೆ ಮಾತನಾಡಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು, ಬಿಜೆಪಿ ಸರ್ಕಾರ ಸಮಾಜದಲ್ಲಿ ದಲಿತರು ಮತ್ತು ಕೆಳಹಂತದಲ್ಲಿರುವ ಜನರ ಅಭಿವೃದ್ದಿಗಾಗಿ ಯಾವುದೇ ಯೋಜನೆ ಜಾರಿಗೆ ತಂದಿಲ್ಲ ಎಂದು ನಿರಂತರವಾಗಿ ಕಾಂಗ್ರೆಸ್ ಬಗ್ಗೆ ಆರೋಪ ಮಾಡುತ್ತಿತ್ತು.

    ಈ ಹಿನ್ನೆಲೆಯಲ್ಲಿ ಅಮಿತ್ ಶಾ ದಲಿತರಿಗೆ ತಮ್ಮ ಸರ್ಕಾರ ಅವರಿಗಾಗಿ ಯಾವ ಯಾವ ಯೋಜನೆಯನ್ನು ಜಾರಿಗೆ ಮಾಡಿದೆ ಎಂಬುದನ್ನು ತಿಳಿಸಲು ಈ ರ‍್ಯಾಲಿಯನ್ನು ಆಯೋಜನೆ ಮಾಡಿದ್ದಾರೆ. ಜೊತೆಗೆ ದಲಿತರ ಮನೆಯಲ್ಲಿಯೇ ಅಕ್ಕಿ, ಬೇಳೆ ತರಿಸಿ ಕಿಚಡಿ ತಯಾರಿಸಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

    ಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv