Tag: ಕಿಚ್ಚ ಸುದೀಪ್

  • Photo Album:ಕಿಚ್ಚ@50: ಹುಟ್ಟುಹಬ್ಬದ ಫೋಟೋ ಆಲ್ಬಂ

    Photo Album:ಕಿಚ್ಚ@50: ಹುಟ್ಟುಹಬ್ಬದ ಫೋಟೋ ಆಲ್ಬಂ

    ನಿನ್ನೆ ಮಧ್ಯರಾತ್ರಿಯಿಂದಲೇ ಕಿಚ್ಚ ಸುದೀಪ್ ಹುಟ್ಟು ಹಬ್ಬವನ್ನು ಅಭಿಮಾನಿಗಳ ಸಮ್ಮುಖದಲ್ಲಿ ಆಚರಿಸಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು.

    ಕರ್ನಾಟಕದ ನಾನಾ ಜಿಲ್ಲೆಗಳಿಂದ ಕಿಚ್ಚನ ಅಭಿಮಾನಿಗಳು ಬೆಂಗಳೂರಿಗೆ ಆಗಮಿಸಿದ್ದರು. ನೆಚ್ಚಿನ ನಟನಿಗೆ ಶುಭಾಶಯ ಹೇಳುವ ಮೂಲಕ ಹುಟ್ಟು ಹಬ್ಬ ಆಚರಣೆ ಮಾಡಿದರು.

    ಶುಕ್ರವಾರ ರಾತ್ರಿ ನಂದಿ ಲಿಂಕ್ ಗ್ರೌಂಡ್‍ನಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬವನ್ನು ಸಂಭ್ರಮಿಸಿದರು. ಸಾವಿರಾರು ಅಭಿಮಾನಿಗಳು ಸಂಭ್ರಮದಲ್ಲಿ ಭಾಗಿಯಾಗಿದರು. ಸುದೀಪ್ ಪತ್ನಿ ಪ್ರಿಯಾ, ಪುತ್ರಿ ಸೇರಿದಂತೆ ಕುಟುಂಬಸ್ಥರು, ಸ್ನೇಹಿತರು ಭಾಗಿಯಾಗಿ ಕೇಕ್ ತಿನ್ನಿಸಿ, ಶುಭಕೋರಿದ್ರು.

    ಅಭಿಮಾನಿಗಳಿಗೆ ಸರ್ ಪ್ರೈಸ್ ಕಾದಿದೆ ಎಂದಿದ್ದ ಪತ್ನಿ ಡ್ರೋಣ್ ಲೈಟಿಂಗ್ ಮೂಲಕ ಪತಿಗೆ ಪ್ರಿಯಾ ಸ್ಪೆಷಲ್ ವಿಶ್ ಮಾಡಿದರು. ಇಂದು ಜೆಪಿ ನಗರದ ನಿವಾಸದಲ್ಲಿ ಅಭಿಮಾನಿಗಳ ಜೊತೆ ಕಿಚ್ಚ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.

    ಸ್ಯಾಂಡಲ್‌ವುಡ್ (Sandalwood) ಹೀರೋ ಕಿಚ್ಚ ಸುದೀಪ್ (Kichcha Sudeep) ಅಭಿಮಾನಿಗಳಿಗೆ ಗುಡ್ ನ್ಯೂಸ್ ಸಿಕ್ಕಿದೆ. ಕಿಚ್ಚನ ಹುಟ್ಟುಹಬ್ಬಕ್ಕೆ ಒಂದು ದಿನ ಮುಂಚಿತವಾಗಿ ಅವರ ಚಿತ್ರದ ಬಗ್ಗೆ ಬಿಗ್ ಅಪ್‌ಡೇಟ್ ಸಿಕ್ಕಿದೆ. ಸುದೀಪ್ ಮುಂದಿನ ಚಿತ್ರಕ್ಕೆ ಕೆಆರ್‌ಜಿ ನಿರ್ಮಾಣ ಸಂಸ್ಥೆ ಕೈಜೋಡಿಸಿದ್ದಾರೆ.

    ಹಲವು ದಿನಗಳಿಂದ ಕಿಚ್ಚನ ಅಭಿಮಾನಿಗಳು ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. ಸುದೀಪ್ ಅವರ 46ನೇ ಚಿತ್ರಕ್ಕೆ ಹೊಸ ಬಗೆಯ ಟೈಟಲ್ ಇಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಟೈಟಲ್ ಅನಾವರಣಕ್ಕಾಗಿಯೇ ಟೀಸರ್ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು. ಇದೀಗ ಆ ಕೆಲಸವನ್ನು ಚಿತ್ರತಂಡ ಮಾಡಿದೆ. ಕಿಚ್ಚ 46 ಚಿತ್ರಕ್ಕೆ ಮ್ಯಾಕ್ಸ್ ಎಂದು ಹೆಸರಿಡಲಾಗಿದೆ.

    ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

    ಸುದೀಪ್ ಅವರು ಬೆಸ್ಟ್ ನಟ ಮಾತ್ರವಲ್ಲ, ದಿ ಬೆಸ್ಟ್ ಡೈರೆಕ್ಟರ್ ಅನ್ನೋದನ್ನ ಈಗಾಗಲೇ ಪ್ರೂವ್ ಮಾಡಿದ್ದಾರೆ. ಕೆಂಪೇಗೌಡ, ಮಾಣಿಕ್ಯ, ಮೈ ಆಟೋಗ್ರಾಫ್ ಸೇರಿದಂತೆ ಹಲವು ಸಿನಿಮಾಗಳ ನಿರ್ದೇಶನ ಮಾಡಿ ಸೈ ಎನಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಒಂದು ದಿನ ಮುಂಚಿತವಾಗಿ ಸಿಹಿಸುದ್ದಿ ನೀಡಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿಚ್ಚ 46 ಚಿತ್ರಕ್ಕೆ ಟೈಟಲ್ ಘೋಷಣೆ : ಯಾರಿದು ಮ್ಯಾಕ್ಸ್?

    ಕಿಚ್ಚ 46 ಚಿತ್ರಕ್ಕೆ ಟೈಟಲ್ ಘೋಷಣೆ : ಯಾರಿದು ಮ್ಯಾಕ್ಸ್?

    ಲವು ದಿನಗಳಿಂದ ಕಿಚ್ಚನ ಅಭಿಮಾನಿಗಳು ಕಾಯುತ್ತಿದ್ದ ದಿನ ಬಂದೇ ಬಿಟ್ಟಿದೆ. ಸುದೀಪ್ (Kichcha Sudeep) ಅವರ 46ನೇ ಚಿತ್ರಕ್ಕೆ ಹೊಸ ಬಗೆಯ ಟೈಟಲ್ ಇಡುವುದಾಗಿ ಚಿತ್ರತಂಡ ಘೋಷಣೆ ಮಾಡಿತ್ತು. ಟೈಟಲ್ ಅನಾವರಣಕ್ಕಾಗಿಯೇ ಟೀಸರ್ ಬಿಡುಗಡೆ ಮಾಡುವುದಾಗಿ ಹೇಳಿಕೊಂಡಿತ್ತು. ಇದೀಗ ಆ ಕೆಲಸವನ್ನು ಚಿತ್ರತಂಡ ಮಾಡಿದೆ. ಕಿಚ್ಚ 46 ಚಿತ್ರಕ್ಕೆ ‘ಮ್ಯಾಕ್ಸ್’ (Max) ಎಂದು ಹೆಸರಿಡಲಾಗಿದೆ. ಈ ಮ್ಯಾಕ್ಸ್ ಯಾರು? ಅವನು ಹಿನ್ನೆಲೆ ಏನು ಎನ್ನುವ ಕುತೂಹಲ ಮತ್ತೆ ಮೂಡಿದೆ.

    ಹುಟ್ಟುಹಬ್ಬಕ್ಕೆ ಕಿಚ್ಚನ ಮತ್ತೊಂದು ಸರ್ ‍ಪ್ರೈಸ್

    ಕಿಚ್ಚ ಸುದೀಪ್ ನಿರ್ದೇಶನಕ್ಕೆ ಯಾವಾಗ ಮರಳುತ್ತಾರೆ ಎಂಬ ಪ್ರಶ್ನೆ ಅವರ ಅಭಿಮಾನಿಗಳ ವಲಯದಲ್ಲಿ ಇದ್ದೇ ಇತ್ತು. ಆ ಪ್ರಶ್ನೆಗೆ ಕೊನೆಗೂ ಉತ್ತರ ಸಿಕ್ಕಿದೆ. ‘ಮಾಣಿಕ್ಯ’ ಬಿಡುಗಡೆಯಾಗಿ 10 ವರ್ಷಗಳ ನಂತರ ಸುದೀಪ್ ‘ಕೆಕೆ’ ಎಂಬ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದು, ಈ ಚಿತ್ರವನ್ನು ಕೆ ಆರ್ ಜಿ ಸ್ಟುಡಿಯೋಸ್ ನಡಿ ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್ ನಿರ್ಮಿಸುತ್ತಿದ್ದಾರೆ.

    ಸುದೀಪ್ ಅವರ ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿರುವ ಈ ಸಂದರ್ಭದಲ್ಲಿ ಅವರು ನಿರ್ದೇಶನಕ್ಕೆ ಮರಳಿರುವ ವಿಷಯ ಅವರ ಅಭಿಮಾನಿಗಳ ಸಂತಸವನ್ನು ಇನ್ನಷ್ಟು ಹೆಚ್ಚಿಸಿದೆ. ಈ ಚಿತ್ರಕ್ಕೆ ‘God Forgives, I don’t – King Kichcha’ ಎಂಬ ಅಡಿಬರಹವಿದ್ದು, ಈ ಚಿತ್ರು ಪ್ಯಾನ್ ಇಂಡಿಯಾ ಮಟ್ಟದಲ್ಲಿ ಹಲವು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ.

    ‘ಮೈ ಆಟೋಗ್ರಾಫ್’ ಚಿತ್ರದ ಮೂಲಕ ನಿರ್ದೇಶಕರಾದ ಸುದೀಪ್, ಇದುವರೆಗೂ ಆರು ಚಿತ್ರಗಳನ್ನು ನಿರ್ದೇಶನ ಮಾಡಿದ್ದು, ‘ಕೆಕೆ’ ಅವರ ನಿರ್ದೇಶನದ ಏಳನೇ ಚಿತ್ರವಾಗಿದೆ. ಹಾಗೆಯೇ, ಇದು ಕೆ ಆರ್ ಜಿ ಸ್ಟುಡಿಯೋಸ್ ನಿರ್ಮಾಣದ ಆರನೇ ಚಿತ್ರವಾಗಿದೆ . ‘ರತ್ನನ್ ಪ್ರಪಂಚ’ ಚಿತ್ರದ ಮೂಲಕ ಪ್ರಾರಂಭವಾದ ಕೆ ಆರ್ ಜಿ ಸ್ಟುಡಿಯೋಸ್ ಚಿತ್ರ ಪಯಣ, ಸತತವಾಗಿ ಮುಂದುವರೆಯುತ್ತಿದ್ದು, ಮುಂಬರುವ ದಿನಗಳಲ್ಲಿ ಹಲವು ಗುಣಮಟ್ಟದ ಚಿತ್ರಗಳು ಬಿಡುಗಡೆಯಾಗಲಿಕ್ಕೆ ಸಜ್ಜಾಗಿವೆ.

    ಸುದೀಪ್ ನಿರ್ದೇಶನದಲ್ಲಿ ಚಿತ್ರ ನಿರ್ಮಿಸುತ್ತಿರುವ ಕುರಿತು ಮಾತನಾಡುವ ಕಾರ್ತಿಕ್ ಗೌಡ, ‘ಹುಚ್ಚ’ ಚಿತ್ರದಿಂದ ನಾನು ಸುದೀಪ್ ಅವರ ದೊಡ್ಡ ಅಭಿಮಾನಿಯಾಗಿದ್ದು, ಅವರ ಜೊತೆಗೆ ಕೆಲಸ ಮಾಡುವುದು ನನ್ನ ಕನಸಾಗಿತ್ತು. ಆ ಕನಸು ಇದೀಗ ನನಸಾಗುತ್ತಿದ್ದು, ಅವರು ನಟನೆಯ ಜೊತೆಗೆ ನಿರ್ದೇಶನ ಸಹ ಮಾಡುತ್ತಿರುವುದು ನಮ್ಮ ಸಂಭ್ರಮವನ್ನು ಇಮ್ಮಡಿಗೊಳಿಸಿದೆ’ ಎನ್ನುತ್ತಾರೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಗ್ಲೋಬಲ್ ಚಿತ್ರಕ್ಕಾಗಿ ಒಂದಾದ ಸುದೀಪ್, ಆರ್.ಚಂದ್ರು ಮತ್ತು ರಾಜಮೌಳಿ ತಂದೆ

    ಗ್ಲೋಬಲ್ ಚಿತ್ರಕ್ಕಾಗಿ ಒಂದಾದ ಸುದೀಪ್, ಆರ್.ಚಂದ್ರು ಮತ್ತು ರಾಜಮೌಳಿ ತಂದೆ

    ಖ್ಯಾತ ನಿರ್ದೇಶಕ ಆರ್.ಚಂದ್ರು (R. Chandru) ಅಭಿಮಾನಿಗಳಿಗೆ ಅಚ್ಚರಿಯ ಸುದ್ದಿಯೊಂದನ್ನು ನೀಡಿದ್ದಾರೆ. ಸ್ಕ್ರಿಪ್ಟ್ ಗಾಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ರಾಜಮೌಳಿ ತಂದೆ ವಿಜಯ್ ಪ್ರಸಾದ್ (Vijayendra Prasad) ಮತ್ತು ಪ್ಯಾನ್ ಇಂಡಿಯಾ ಸ್ಟಾರ್ ಸುದೀಪ್ (Kiccha Sudeep) ಅವರನ್ನು ಒಟ್ಟಾಗಿಸಿ ಸಿನಿಮಾವೊಂದನ್ನು ಮಾಡುತ್ತಿದ್ದಾರೆ. ಈ ಸಿನಿಮಾದ ಮೂಲಕ ಚಂದ್ರ ಮತ್ತೊಂದು ಹಂತವನ್ನು ದಾಟುತ್ತಿದ್ದಾರೆ.

    ಮಗಧೀರ, ಬಾಹುಬಲಿ, ಆರ್ ಆರ್ ಆರ್ ದಂತಹ ಹಿಟ್ ಚಿತ್ರಗಳ ಕಥೆಗಾರ ವಿ .ವಿಜಯೇಂದ್ರ ಪ್ರಸಾದ್, ಪ್ಯಾನ್ ಇಂಡಿಯಾ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಎಸ್ .ಎಸ್. ರಾಜಮೌಳಿಯ ಎಲ್ಲಾ ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆದವರು. ಇದೀಗ ವಿಜಯೇಂದ್ರ ಪ್ರಸಾದ್ ಅವರು ಕನ್ನಡದ ಪ್ರತಿಷ್ಠಿತ ಆರ್.ಸಿ ಸ್ಟುಡಿಯೋಸ್ ಸಂಸ್ಥೆಯ ಚೊಚ್ಚಲ ಚಿತ್ರಕ್ಕೆ ಸ್ಕ್ರಿಪ್ಟ್ ಸೂಪರ್ ವೈಸ್ ಮಾಡಿದ್ದು, ಈ ಚಿತ್ರದಲ್ಲಿ ಪ್ಯಾನ್ ಇಂಡಿಯಾ ಸ್ಟಾರ್ ಕಿಚ್ಚ ಸುದೀಪ್ ಅವರು ನಟಿಸುತ್ತಿದ್ದಾರೆ. ಆರ್.ಚಂದ್ರು ಅವರು ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳಲಿದ್ದಾರೆ.

    ಈ ಮೂವರು ದಿಗ್ಗಜರು ಒಂದಾಗಿ ಮಾಡುತ್ತಿರುವ ಈ ಚಿತ್ರಕ್ಕೆ ಇಡೀ ಭಾರತವೇ ಕಾತುರದಿಂದ ಎದುರು ನೋಡುತ್ತಿದ್ದು, ಈ ವರ್ಷದ ಮೆಗಾ ಹಿಟ್ ಚಿತ್ರವಾಗಲಿದೆ.  ಆರ್ .ಸಿ  ಸ್ಟುಡಿಯೋಸ್ (RC Studios) ಕರ್ನಾಟಕದ ಪ್ರತಿಷ್ಠಿತ ಸಂಸ್ಥೆಯಾಗಿದ್ದು, 5 ದೊಡ್ಡ ದೊಡ್ಡ ಚಿತ್ರಗಳಿಗೆ ಈ ವರ್ಷ ಚಾಲನೆ ದೊರೆಯಲಿದೆ. ಆರ್.ಚಂದ್ರು ಅವರು ಏನೇ ಮಾಡಿದರು ವಿಶೇಷವಾಗಿರಲಿದ್ದು ಈ ಚಿತ್ರವೂ ಕೂಡ ಹಲವು ವಿಶೇಷತೆಗಳಿಂದ ಕೂಡಿರಲಿದೆ. ಆ ವಿಶೇಷತೆಗಳಿಗೆ ಚಿತ್ರರಂಗ ಕಾಯುತ್ತಿದೆ.

    ಆರ್.ಸಿ ಸ್ಟುಡಿಯೋಸ್ ಈ ಚಿತ್ರದ ಶೀರ್ಷಿಕೆ ಬಿಡುಗಡೆಗೊಳಿಸಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕಿಚ್ಚನ ಹುಟ್ಟುಹಬ್ಬವಾದ ಸೆಪ್ಟೆಂಬರ್ 2 ರಂದು ಅಧಿಕೃತವಾಗಿ ಘೋಷಣೆಯಾಗಲಿದೆ. ವಿಜಯೇಂದ್ರ ಪ್ರಸಾದ್ ಸ್ಕ್ರಿಪ್ಟ್ ಸೂಪರ್ ವೈಸಿಂಗ್, ಕಿಚ್ಚ ಸುದೀಪ್ ಅವರ ನಟನೆ ಮತ್ತು ಆರ್.ಚಂದ್ರು ಅವರ ನಿರ್ದೇಶನಕ್ಕೆ ಇಡೀ ಚಿತ್ರರಂಗವೇ ಕಾಯುತ್ತಿದ್ದು, ಭಾರತೀಯ ಚಿತ್ರರಂಗದ ಮೋಸ್ಟ್ ಎಕ್ಸಪೆಕ್ಟೆಡ್ ಚಿತ್ರವಾಗಿದೆ.

    ವಿಜಯೇಂದ್ರ ಪ್ರಸಾದ್ ಅವರು 25ಕ್ಕೂ ಹೆಚ್ಚು ಚಿತ್ರಗಳಿಗೆ ಕಥೆ ಬರೆದಿದ್ದು, ಎಲ್ಲಾ ಚಿತ್ರಗಳು ಕೂಡ ಕಮರ್ಷಿಯಲ್ ಸಕ್ಸಸ್ ಕಂಡಿವೆ. ಆಂಧ್ರದ ಪ್ರತಿಷ್ಠಿತ ನಂದಿ ಮತ್ತು ಫಿಲಂ ಫೇರ್ ಪ್ರಶಸ್ತಿಗೂ ಭಾಜನರಾಗಿದ್ದಾರೆ.  ಆರ್ .ಸಿ ಸ್ಟುಡಿಯೋಸ್ ಸಂಸ್ಥೆಯು ಬಹುಕೋಟಿ ವೆಚ್ಚದಲ್ಲಿ ಈ ಚಿತ್ರಕ್ಕೆ ಬಂಡವಾಳ ಹೂಡಲಿದ್ದು, ಪ್ಯಾನ್ ಇಂಡಿಯಾ ಕಾನ್ಸೆಪ್ಟ್ ಮುರಿದು ಗ್ಲೋಬಲ್ ಮೂವಿ ಕಾನ್ಸೆಪ್ಟ್ ನೊಂದಿಗೆ ಇಂಡಿಯನ್ ಹ್ಯೂಜ್ ಬಜೆಟ್ ಚಿತ್ರವಾಗಲಿದೆ.

    ಈ ಮೂಲಕ ಆರ್ ಸಿ ಸ್ಟುಡಿಯೋಸ್ ಸಂಸ್ಥೆ ಕೂಡ ಗ್ಲೋಬಲ್ ಸಂಸ್ಥೆಯಾಗಿ ಯುವ, ಪ್ರತಿಭಾವಂತ ಮತ್ತು ಉದಯೋನ್ಮುಖ ಅವಕಾಶ ಕಲ್ಪಿಸಲಾಗುತ್ತಿದೆ. ಈ ಮೂವರು ದಿಗ್ಗಜರ ಸಮಾಗಮವು ಮುಂದಿನ ಚಿತ್ರರಂಗದ ಬೆಳವಣಿಗೆಗೆ ಸಹಕಾರಿಯಾಗಲಿದೆ.  ಕಿಚ್ಚನ ಹುಟ್ಟುಹಬ್ಬಕ್ಕೆ ಆರ್ ಸಿ ಸ್ಟುಡಿಯೋಸ್ ಸಿನಿಮಾ ನಿರ್ಮಾಣ ಮಾಡುತ್ತಿರುವುದು ಪಕ್ಕಾ ಆಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಿಚ್ಚ 46: ಮಧ್ಯರಾತ್ರಿ ಟೈಟಲ್ ಟೀಸರ್ ರಿಲೀಸ್

    ಕಿಚ್ಚ 46: ಮಧ್ಯರಾತ್ರಿ ಟೈಟಲ್ ಟೀಸರ್ ರಿಲೀಸ್

    ಕಿಚ್ಚ ಸುದೀಪ್ ಹುಟ್ಟು ಹಬ್ಬಕ್ಕಾಗಿ ಅವರ ಹೊಸ ಸಿನಿಮಾದ ಟೈಟಲ್ ಟೀಸರ್ (Title Teaser) ರೆಡಿಯಾಗಿದ್ದು, ಸೆಪ್ಟೆಂಬರ್ 2ರಂದು ಮಧ್ಯರಾತ್ರಿ 12.01ಕ್ಕೆ ಟೀಸರ್ ರಿಲೀಸ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕುರಿತಂತೆ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ ಚಿತ್ರತಂಡ. ಟೈಟಲ್ ಏನಿರಲಿದೆನ್ನುವ ಕುತೂಹಲ ಎಲ್ಲರದ್ದು.

    ನೆಚ್ಚಿನ ನಟ-ನಟಿಯರ ಬರ್ತ್‌ಡೇ ಅಂದರೆ ಅಭಿಮಾನಿಗಳ ಪಾಲಿಗೆ ವಿಶೇಷ. ಇದೀಗ ಅಭಿನಯ ಚಕ್ರವರ್ತಿ ಸುದೀಪ್(Kichcha Sudeep) ಹುಟ್ಟುಹಬ್ಬಕ್ಕೆ (Birthday) ಕೌಂಟ್ ಡೌನ್ ಶುರುವಾಗಿದೆ. ಅದಕ್ಕಾಗಿ ತೆರೆಮರೆಯಲ್ಲಿ ಸಿದ್ಧತೆ ಕೂಡ ಶುರುವಾಗಿದೆ. ಇದನ್ನೂ ಓದಿ:ಸಿನಿಮಾ ಬಿಟ್ಟು ರಾಜಕೀಯದತ್ತ ರಮ್ಯಾ ಕೃಷ್ಣನ್? ಸ್ಪಷ್ಟನೆ ನೀಡಿದ ನಟಿ

    ಕಿಚ್ಚ ಸುದೀಪ್ ಅವರು ಈ ವರ್ಷ ತಮ್ಮ ಹುಟ್ಟುಹಬ್ಬವನ್ನು ಅಭಿಮಾನಿಗಳ ಜೊತೆ ಆಚರಿಸಲು ನಿರ್ಧರಿಸಿದ್ದಾರೆ. ಸೆಪ್ಟಂಬರ್ 1ರಂದು ನಂದಿ ಲಿಂಕ್ಸ್ ಗ್ರೌಂಡ್‌ನಲ್ಲಿ ರಾತ್ರಿ 10ರಿಂದ 12ರ ತನಕ ಅದ್ಧೂರಿ ಆಚರಣೆ ಪ್ಲ್ಯಾನ್ ಮಾಡಿದ್ದು, ರಾತ್ರಿ 12 ಗಂಟೆಗೆ ಅಭಿಮಾನಿಗಳ ಜೊತೆ ಕೇಕ್ ಕತ್ತರಿಸಿ ಸಂಭ್ರಮಿಸಲಿದ್ದಾರೆ. ಈ ದಿನ ಅಭಿಮಾನಿಗಳಿಗೆ ಹಲವು ಸರ್ಪ್ರೈಸ್‌ಗಳು ಕೂಡ ಇವೆ.

     

    ಹುಟ್ಟುಹಬ್ಬದ ದಿನ ಸೆ.2ರಂದು ಜೆಪಿ ನಗರ ಮನೆಯಲ್ಲಿ ಬೆಳಗ್ಗೆ 9 ರಿಂದ ಮಧ್ಯಾಹ್ನ 1ರ ತನಕ ಅಭಿಮಾನಿಗಳನ್ನ ಮೀಟ್ ಮಾಡಲಿದ್ದಾರೆ. ಸುದೀಪ್ ಮನೆ ಬಳಿಯೂ ಅಭಿಮಾನಿಗಳು ಜಮಾಯಿಸಲಿದ್ದಾರೆ. ಕಿಚ್ಚನ ಬರ್ತ್‌ಡೇ ದಿನ (ಸೆ.2) ಮುಂದಿನ ಸಿನಿಮಾದ ಲುಕ್ ಜೊತೆ ಚಿತ್ರದ ಟೈಟಲ್ ಕೂಡ ರಿವೀಲ್ ಆಗಲಿದೆ. ಈ ಮೂಲಕ ಫ್ಯಾನ್ಸ್‌ಗೆ ಸುದೀಪ್ ಗುಡ್ ನ್ಯೂಸ್ ಕೊಡುತ್ತಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಒಂಟಿಯಾಗಿರುವುದು ಉತ್ತಮ ಎಂದ ದರ್ಶನ್- ಕಿಚ್ಚನ ಜೊತೆ ಮತ್ತೆ ಒಂದಾಗಲ್ವಾ ದಚ್ಚು?

    ಒಂಟಿಯಾಗಿರುವುದು ಉತ್ತಮ ಎಂದ ದರ್ಶನ್- ಕಿಚ್ಚನ ಜೊತೆ ಮತ್ತೆ ಒಂದಾಗಲ್ವಾ ದಚ್ಚು?

    ಸ್ಯಾಂಡಲ್‌ವುಡ್‌ನಲ್ಲಿ(Sandalwood)  ದಿಗ್ಗಜರ ದೋಸ್ತಿ ಜಪ ಜೋರಾಗಿದೆ. ದಚ್ಚು-ಕಿಚ್ಚ ಮತ್ತೆ ಒಂದಾಗಲಿ ಎಂಬ ಕೂಗು ಹೆಚ್ಚಾಗಿದೆ ಕಿಚ್ಚನ ಜೊತೆ ಸುಮಲತಾ ಬರ್ತ್‌ಡೇ ಪಾರ್ಟಿಯಲ್ಲಿ ಒಟ್ಟಿಗೆ ಕಾಣಿಸಿಕೊಂಡ ಬಳಿಕ ದರ್ಶನ್ (Darshan) ಮತ್ತೊಂದು ಹೊಸ ಪೋಸ್ಟ್ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದೆ. ಇದನ್ನೂ ಓದಿ:ವಿನೋದ್ ಪ್ರಭಾಕರ್ ಅಭಿನಯದ ‘ಫೈಟರ್’ ಟೀಸರ್ ಗೆ ಫ್ಯಾನ್ಸ್ ಫಿದಾ

    ಏಕಾಂಗಿಯಾಗಿರುವುದೇ ಒಳ್ಳೆಯದು. ಅಭಿಮಾನಿಗಳ ಜೊತೆ ಒಂಟಿಯಾಗಿರುತ್ತೀನಿ, ಅದೇ ಉತ್ತಮ ಎಂದು ಡಿ ಬಾಸ್ ದರ್ಶನ್ ಪೋಸ್ಟ್ ಮಾಡಿದ್ದಾರೆ. ಈ ಮೂಲಕ ಕಿಚ್ಚ ಸುದೀಪ್ (Sudeep) ಜೊತೆ ಒಂದಾಗಲ್ಲ ಎಂದು ಸುಳಿವು ನೀಡಿದ್ರಾ ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ದಾಸನ ಬಾಯಲ್ಲಿ ಏಕಾಂಗಿ ಪದ ಕೇಳಿದ ಅಭಿಮಾನಿಯೊಬ್ಬರು ಏನೋ ಮಿಸ್ ಹೊಡಿತ್ತಿದೆ ಎಂದು ಕಾಮೆಂಟ್ ಮಾಡಿದ್ದಾರೆ.

    ನಿನ್ನೆಯಷ್ಟೇ (ಆಗಸ್ಟ್ 28) ದರ್ಶನ್ ಕಾಲಾಯ ತಸ್ಮೈ ನಮಃ ಎಂಬ ಅಡಿಬರಹ ಜೊತೆ ಜೋಡೆತ್ತುಗಳ ಜೊತೆ ನಿಂತಿರುವ ಫೋಟೋ ಶೇರ್ ಮಾಡಿದ್ದರು. ಈ ಮೂಲಕ ಒಂದಾಗುವ ಸುಳಿವು ನೀಡಿದ್ದರು. ಈಗ ನನ್ನ ಸೆಲೆಬ್ರಿಟಿಗಳ ಜೊತೆ ಒಂಟಿಯಾಗಿರುವುದೇ ಉತ್ತಮ ಎಂದು ನಯಾ ಪೋಸ್ಟ್ ಶೇರ್ ಮಾಡಿ, ಶಾಕಿಂಗ್ ಸಂದೇಶ ನೀಡಿದ್ದಾರೆ. ಇದನ್ನೂ ಓದಿ:ವಿನೋದ್ ಪ್ರಭಾಕರ್ ಅಭಿನಯದ ‘ಫೈಟರ್’ ಟೀಸರ್ ಗೆ ಫ್ಯಾನ್ಸ್ ಫಿದಾ

    ಒಂಟಿಯಾಗಿರುವುದರಲ್ಲಿ ಸಂತೋಷ ಇದೆ ಎಂಬ ಪೋಸ್ಟ್ ಸುದೀಪ್ ಜೊತೆ ಒಂದಾಗೋದಿಲ್ಲ ಎಂಬ ಅರ್ಥ ಕೊಡುತ್ತಿದೆಯಾ? ಎಂಬ ಪ್ರಶ್ನೆಗಳು ಅಭಿಮಾನಿಗಳಲ್ಲಿ ಮೂಡಿದೆ. ದಚ್ಚು- ಕಿಚ್ಚ ಒಂದಾಗುವ ಕನಸು ಕಂಡ ಅಭಿಮಾನಿಗಳಿಗೆ ನಿರಾಸೆಯಾಗಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 60ನೇ ವಸಂತಕ್ಕೆ ಕಾಲಿಟ್ಟ ಸುಮಲತಾ- ಸಂಭ್ರಮದಲ್ಲಿ ಭಾಗಿಯಾದ ಸ್ಟಾರ್ಸ್

    60ನೇ ವಸಂತಕ್ಕೆ ಕಾಲಿಟ್ಟ ಸುಮಲತಾ- ಸಂಭ್ರಮದಲ್ಲಿ ಭಾಗಿಯಾದ ಸ್ಟಾರ್ಸ್

    ಬಹುಭಾಷಾ ನಟಿ, ಸುಮಲತಾ (Sumalatha Ambareesh) ಅವರಿಗೆ ಈ ವರ್ಷ ಸಖತ್ ಸ್ಪೆಷಲ್. 60ನೇ ವರ್ಷಕ್ಕೆ ಕಾಲಿಟ್ಟಿರುವ ಅಂಬರೀಶ್ ಪತ್ನಿ ಸುಮಲತಾ ಹುಟ್ಟುಹಬ್ಬವನ್ನ ಗ್ರ್ಯಾಂಡ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಈ ಸಂಭ್ರಮಕ್ಕೆ ಸ್ಯಾಂಡಲ್‌ವುಡ್ ತಾರೆಯರು ಸಾಕ್ಷಿಯಾಗಿದ್ದಾರೆ.

    ಸುಮಲತಾ ಹುಟ್ಟುಹಬ್ಬವನ್ನು ಶನಿವಾರ (ಆಗಸ್ಟ್ 26) ರಾತ್ರಿಯೇ ಖಾಸಗಿ ಹೋಟೆಲ್‌ನಲ್ಲಿ ಪಾರ್ಟಿ ಮಾಡಲಾಗಿದೆ. ಕನ್ನಡ ಚಿತ್ರರಂಗದ ಅನೇಕರು ಇದರಲ್ಲಿ ಭಾಗಿ ಆಗಿದ್ದಾರೆ. ಎಲ್ಲರನ್ನೂ ಅಂಬರೀಷ್ ಕುಟುಂಬದವರು ಆತ್ಮೀಯವಾಗಿ ಸ್ವಾಗತಿಸಿದ್ದಾರೆ.‌ ಇದನ್ನೂ ಓದಿ:ಮುಂದಿನ ತಿಂಗಳು ಪತ್ನಿಗೆ ಡೆಲಿವರಿ ಡೇಟ್- 2ನೇ ಮಗುವಿನ ಬಗ್ಗೆ ಧ್ರುವ ಪ್ರತಿಕ್ರಿಯೆ

    ಇದು 60ನೇ ವರ್ಷದ ಬರ್ತ್‌ಡೇ ಎಂಬ ಖುಷಿ ಒಂದು ಕಡೆ. ಅಭಿಷೇಕ್-ಅವಿವಾ ಬಿಡಪ (Aviva Bidapa) ಮದುವೆ ಬಳಿಕ ಸುಮಲತಾ ಅಂಬರೀಷ್ ಆಚರಿಸಿಕೊಳ್ಳುತ್ತಿರುವ ಮೊದಲ ಹುಟ್ಟುಹಬ್ಬ ಎಂಬ ಖುಷಿ ಇನ್ನೊಂದು ಕಡೆ. ಈ ಸಂಭ್ರಮದಲ್ಲಿ ಜೋರಾಗಿ ಸೆಲೆಬ್ರೇಟ್ ಮಾಡಲಾಗಿದೆ.

    ಈ ಸಂಭ್ರಮದಲ್ಲಿ ಸುಮಲತಾ ಕುಟುಂಬದ ಜೊತೆ ರಾಕ್‌ಲೈನ್‌ ವೆಂಕಟೇಶ್‌, ಕಿಚ್ಚ ಸುದೀಪ್(Kichcha Sudeep), ದರ್ಶನ್(Darshan), ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ (Rishab Shetty) ದಂಪತಿ, ಪ್ರಮೋದ್ ಶೆಟ್ಟಿ, ಮದಗಜ ನಿರ್ದೇಶಕ ಮಹೇಶ್‌, ಮಾಲಾಶ್ರೀ ಕುಟುಂಬ ಸೇರಿದಂತೆ ಹಲವು ನಟ-ನಟಿಯರು ಭಾಗಿಯಾಗಿ ಶುಭಕೋರಿದ್ದಾರೆ.

    ಬಹುಭಾಷೆಗಳಲ್ಲಿ 200ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸುವ ಮೂಲಕ ಸಿನಿಮಾರಂಗದ ಜೊತೆ ರಾಜಕೀಯ ರಂಗದಲ್ಲಿ ಸುಮಲತಾ ಹೈಲೆಟ್ ಆಗಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  •  6 ವರ್ಷದ ಬಳಿಕ ಕಿಚ್ಚ, ದಚ್ಚು ಮುಖಾಮುಖಿ- ಮನಸ್ತಾಪಕ್ಕೆ ತೆರೆ ಎಳೆದ್ರಾ ಸುಮಲತಾ?

     6 ವರ್ಷದ ಬಳಿಕ ಕಿಚ್ಚ, ದಚ್ಚು ಮುಖಾಮುಖಿ- ಮನಸ್ತಾಪಕ್ಕೆ ತೆರೆ ಎಳೆದ್ರಾ ಸುಮಲತಾ?

    ಬೆಂಗಳೂರು: ಬರೋಬ್ಬರಿ ಆರು ವರ್ಷದ ಬಳಿಕ ಸ್ಯಾಂಡಲ್‍ವುಡ್ ಸ್ಟಾರ್ ನಟರಾದ ಕಿಚ್ಚ ಸುದೀಪ್ (Kichcha Sudeepa) ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಮುಖಾಮುಖಿಯಾಗಿದ್ದಾರೆ.

    ಹೌದು. ಶನಿವಾರ ಖಾಸಗಿ ಹೋಟೆಲ್‍ನಲ್ಲಿ ಸುಮಲತಾ (Sumalatha Ambareesh) ಹುಟ್ಟುಹುಬ್ಬದ ಪಾರ್ಟಿ (Birthday Party) ನಡೆದಿತ್ತು. ಈ ಕಾರ್ಯಕ್ರಮದಲ್ಲಿ ದರ್ಶನ್-ಸುದೀಪ್ ಕಾಣಿಸಿಕೊಂಡಿದ್ದಾರೆ. ಈ ಮೂಲಕ 6 ವರ್ಷಗಳ ಮುನಿಸಿಗೆ ಬ್ರೇಕ್ ಬೀಳುತ್ತಾ..?, ದಚ್ಚು-ಕಿಚ್ಚ ಮನಸ್ತಾಪಕ್ಕೆ ಸುಮಲತಾ ತೆರೆ ಎಳೆದ್ರಾ ಎಂಬ ಪ್ರಶ್ನೆ ಎದ್ದಿದೆ.

    ಸುದೀಪ್ ಹಾಗೂ ದರ್ಶನ್ ಮುಖಾಮುಖಿಯಾದರೂ ಮಾತುಕತೆ ನಡೆದಿಲ್ಲ ಎನ್ನಲಾಗಿದೆ. ಒಬ್ಬರನ್ನು ಒಬ್ಬರು ನೋಡಿ ಬರೀ ಮುಗುಳ್ನಕ್ಕು ಸುಮ್ಮನಾಗಿದ್ದಾರೆ. ಇಬ್ಬರನ್ನೂ ಒಂದು ಮಾಡಲು ಸುಮಲತಾ ಪ್ರಯತ್ನಿಸ್ತಿದ್ದು, ಅಂಬಿ ಬಳಿಕ ಸುಮಲತಾ ಮಾತನ್ನು ಕಿಚ್ಚ-ದಚ್ಚು ಅಲ್ಲಗಳೆಯಲಿಲ್ಲ. ತಡರಾತ್ರಿ 3 ಗಂಟೆಯವರೆಗೂ ಇಬ್ಬರೂ ನಟರು ಪಾರ್ಟಿಯಲ್ಲಿದ್ದರು. ಹೀಗಾಗಿ ಸುಮಲತಾ ಇವರಿಬ್ಬರನ್ನು ಒಂದು ಮಾಡಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ.

    6 ವರ್ಷದ ಹಿಂದೆ ಸುದೀಪ್ ನನ್ನ ಸ್ನೇಹಿತರಲ್ಲ ಎಂದು ದರ್ಶನ್ ಹೇಳಿದ್ದರು. ಇನ್ಮುಂದೆ ನಾನು ಸುದೀಪ್ ಸ್ನೇಹಿತರಲ್ಲ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದರು. ಅದಾದ ಬಳಿಕ ಒಂದು ಬಾರಿಯೂ ಇಬ್ಬರೂ ಭೆಟಿಯಾಗಿರಲಿಲ್ಲ. ಆದರೆ ದಚ್ಚು ಪೋಸ್ಟ್ ಬಳಿಕವೂ ದರ್ಶನ್ ನನ್ನ ಸ್ನೇಹಿತ ಎಂದು ಕಿಚ್ಚ ಸುದೀಪ್ ಹೇಳಿದ್ದರು. ದರ್ಶನ್ ನನ್ನ ಸ್ನೇಹಿತ, ಈಗ ಇಲ್ಲ ಅಂದ್ರೆ ಆಗ ಸ್ನೇಹಿತ ಆಗಿರೋಕೆ ಹೇಗೆ ಸಾಧ್ಯ? ಒಂದು ಸ್ಥಾನ ಕೊಟ್ಮೇಲೆ ಸ್ನೇಹ ಕೊನೆಯವರೆಗೆ ಇರುತ್ತೆ ಎಂದಿದ್ದರು. ಇದೀಗ ಇಬ್ಬರ ಚಿಕ್ಕ, ಪುಟ್ಟ ಮನಸ್ತಾಪಕ್ಕೆ ಬ್ರೇಕ್ ಬೀಳುತ್ತಾ ಎಂಬ ಪ್ರಅಶ್ನೆ ಎದ್ದಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಈ ಬಾರಿ ಟಿವಿ ಬಿಗ್ ಬಾಸ್ ಜೊತೆ ಓಟಿಟಿ ಸೀಸನ್ ಕೂಡ ಇರುತ್ತಾ?

    ಈ ಬಾರಿ ಟಿವಿ ಬಿಗ್ ಬಾಸ್ ಜೊತೆ ಓಟಿಟಿ ಸೀಸನ್ ಕೂಡ ಇರುತ್ತಾ?

    ಕಿಚ್ಚ ಸುದೀಪ್ (Kichcha Sudeep) ನಿರೂಪಣೆಯ ಬಿಗ್ ಬಾಸ್ (Bigg Boss Kannada) ರಿಯಾಲಿಟಿ ಶೋ ಆರಂಭಕ್ಕೆ ಕೌಂಟ್‌ಡೌನ್ ಶುರುವಾಗಿದೆ. ಟಿವಿ ಪ್ರೇಕ್ಷಕರ ನೆಚ್ಚಿನ ಬಿಗ್ ಬಾಸ್ ಕಾರ್ಯಕ್ರಮ ಕಳೆದ ಬಾರಿ ಓಟಿಟಿ ಸೀಸನ್ ಮತ್ತು ಟಿವಿ ಬಿಗ್ ಬಾಸ್‌ನಿಂದ ರಂಗೇರಿಸಿತ್ತು. ಈ ಬಾರಿ ಕೂಡ ಓಟಿಟಿ ಸೀಸನ್ ಕೂಡ ಇರುತ್ತಾ, ಇರಲ್ವಾ? ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ.

    ಇದೇ ಅಕ್ಟೋಬರ್‌ನಿಂದ ಕನ್ನಡದ ಬಿಗ್ ಬಾಸ್ ರಿಯಾಲಿಟಿ ಶೋ ಶುರುವಾಗಲಿದೆ. ಕಹಾನಿ ಮೇ ಟಿಸ್ಟ್ ಎಂಬಂತೆ ಬಿಗ್ ಬಾಸ್ ಸೀಸನ್ 10 ಸಖತ್ ಗ್ರ್ಯಾಂಡ್ ಓಪನಿಂಗ್ ಇರುವ ಕಾರಣ, ಓಟಿಟಿ ಸೀಸನ್ ಇರೋದಿಲ್ಲ. ನೇರವಾಗಿ ಸೀಸನ್ 10ಕ್ಕೆ ಚಾಲನೆ ಸಿಗಲಿದೆ. ಅದಕ್ಕಾಗಿ ತೆರೆಮರೆಯಲ್ಲಿ ಭರ್ಜರಿ ತಯಾರಿ ಕೂಡ ನಡೆಯುತ್ತಿದೆ. ಇದನ್ನೂ ಓದಿ:ಕನ್ನಡದ ಕಂಪನ್ನು ಪಸರಿಸಲು ‘ಕಾವೇರಿ ಕನ್ನಡ ಮೀಡಿಯಂ’ಗೆ ನಟಿ ಮಹಾಲಕ್ಷ್ಮಿ ಸಾಥ್

    ಕಳೆದ ಬಾರಿ ರೂಪೇಶ್ ಶೆಟ್ಟಿ(Roopesh Shetty), ಸಾನ್ಯ ಅಯ್ಯರ್ (Saanya Iyer) ಇದ್ದ ಮೊದಲ ಬಿಗ್ ಬಾಸ್ ಓಟಿಟಿ ಸೀಸನ್ 45 ದಿನಗಳ ಕಾಲ ಮೂಡಿ ಬಂದಿತ್ತು. ಟಿವಿ ಬಿಗ್ ಬಾಸ್ ಎಂದಿನಂತೆ 100 ದಿನಗಳು ಕಿರುತೆರೆಯಲ್ಲಿ ಕಮಾಲ್ ಮಾಡಿತ್ತು. ಈಗ ಮತ್ತೆ ಬಿಗ್ ಬಾಸ್ ನಿರೂಪಕನಾಗಿ ಸುದೀಪ್ ತೆರೆಯ ಮೇಲೆ ರಂಜಿಸಲು ಸಜ್ಜಾಗಿದ್ದಾರೆ.

    10ನೇ ಸೀಸನ್ ಈ ಬಾರಿ ಸಾಕಷ್ಟು ವಿಶೇಷತೆಗಳಿಂದ ಕೂಡಿರಲಿದೆ. ಹೊಸ ಬಗೆಯ ಟಾಸ್ಕ್‌ಗಳನ್ನ ಸ್ಪರ್ಧಿಗಳಿಗೆ ಕೊಡಲಾಗುತ್ತದೆ. ಶೀಘ್ರದಲ್ಲೇ ಬಿಗ್ ಬಾಸ್ 10ರ ಪ್ರೋಮೋ ಶೂಟ್ ಮಾಡಲಾಗುತ್ತದೆ. ಹೆಚ್ಚಿನ ಅಪ್‌ಡೇಟ್‌ಗೆ ಕಾದುನೋಡಬೇಕಿದೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವೀರ ಮದಕರಿಯಲ್ಲಿ ಕಿಚ್ಚನ ಮಗಳಾಗಿ ನಟಿಸಿದ್ದ ಹುಡುಗಿ ಈಗ ಹೀರೋಯಿನ್

    ವೀರ ಮದಕರಿಯಲ್ಲಿ ಕಿಚ್ಚನ ಮಗಳಾಗಿ ನಟಿಸಿದ್ದ ಹುಡುಗಿ ಈಗ ಹೀರೋಯಿನ್

    ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ (Kiccha Sudeep) ನಟನೆಯ ‘ವೀರ ಮದಕರಿ’ (Veera Madakari) ಸಿನಿಮಾದಲ್ಲಿ ನಟಿಸಿದ್ದ ಬಾಲ ನಟಿ ಜೆರುಶಾ (Jerusha Christopher) ಈಗ ಚಿತ್ರರಂಗದಲ್ಲಿ ಹೀರೋಯಿನ್ (Heroine) ಆಗಿ ಮಿಂಚ್ತಿದ್ದಾರೆ. ಪವನ್ ಕಲ್ಯಾಣ್ ನಿರ್ದೇಶನದ ಸಿನಿಮಾದಲ್ಲಿ ನಾಯಕಿಯಾಗಿ ಜೆರುಶಾ ನಟಿಸಿದ್ದಾರೆ.

    ಸುದೀಪ್-ರಾಗಿಣಿ ನಟನೆಯ ‘ವೀರ ಮದಕರಿ’ ಸಿನಿಮಾದಲ್ಲಿ ಕಿಚ್ಚನ ಮಗಳಾಗಿ ಮುದ್ದಾಗಿ ಜೆರುಶಾ ನಟಿಸಿದ್ದರು. ಇದೀಗ 14 ವರ್ಷಗಳ ನಂತರ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚಿನ ಸಂದರ್ಶನವೊಂದರಲ್ಲಿ, ವೀರ ಮದಕರಿ ಸಿನಿಮಾದಲ್ಲಿ ಸುದೀಪ್ ಮಗಳಾಗಿ ನಟಿಸಿದ್ದೆ ಎಂದು ಜೆರುಶಾ ರಿವೀಲ್ ಮಾಡಿದ್ದಾರೆ. 50ಕ್ಕೂ ಆ್ಯಡ್ ಶೂಟ್‌ಗಳಲ್ಲಿ ನಟಿ ಕಾಣಿಸಿಕೊಂಡಿದ್ದಾರೆ. ಇದನ್ನೂ ಓದಿ:ರಾಮ್ ಚರಣ್ ಎದುರು ಅಬ್ಬರಿಸಲಿದ್ದಾರೆ ವಿಜಯ್ ಸೇತುಪತಿ

    ಜೆರುಶಾ ಈ ಚೆಲುವೆ ಮೂಲತಃ ಬೆಂಗಳೂರಿನವರೇ. ಇತ್ತೀಚಿನ ಫಹಾದ್ ಫಾಸಿಲ್ ನಟನೆಯ ‘ಧೂಮಂ’ ಸಿನಿಮಾದಲ್ಲಿ ಜೆರುಶಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದರು. ಈಗ ತಮ್ಮ ಐಡೆಂಟಿಟಿಯನ್ನು ಯುವನಟಿ ರಿವೀಲ್ ಮಾಡಿದ್ದಾರೆ.

    ಇದೀಗ ಜೆರುಶಾ ಸಖತ್ ಬೋಲ್ಡ್ & ಬ್ಯೂಟಿಫುಲ್ ಆಗಿದ್ದಾರೆ. ಮಾಲಿವುಡ್ ರಂಗದಲ್ಲಿ ನಾಯಕಿಯಾಗಿ ಗಮನ ಸೆಳೆಯುತ್ತಿದ್ದಾರೆ. ಸುದೀಪ್‌ಗೆ ನಾಯಕಿಯಾಗುವ ಮಟ್ಟಿಗೆ ಜೆರುಶಾ ಬೆಳೆದು ನಿಂತಿದ್ದಾರೆ. ಜೆರುಶಾ ಲುಕ್ ನೋಡಿ ಕಿಚ್ಚನ ಅಭಿಮಾನಿಗಳು ಖುಷಿಪಟ್ಟಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಪುನರ್ ವಿವಾಹ’ ನಟ ಅಥರ್ವ್‌ ಹೊಸ ಚಿತ್ರಕ್ಕೆ ಸುದೀಪ್ ಸಾಥ್

    ‘ಪುನರ್ ವಿವಾಹ’ ನಟ ಅಥರ್ವ್‌ ಹೊಸ ಚಿತ್ರಕ್ಕೆ ಸುದೀಪ್ ಸಾಥ್

    ಕಿರುತೆರೆಯ ಜನಪ್ರಿಯ ‘ಪುನರ್ ವಿವಾಹ’, ‘ಪತ್ತೇದಾರಿ ಪ್ರತಿಭಾ’ ಸೀರಿಯಲ್‌ಗಳಲ್ಲಿ ಬಣ್ಣ ಹಚ್ಚಿದ್ದ ಅಥರ್ವ್‌ ಈಗ ಸ್ಯಾಂಡಲ್‌ವುಡ್‌ಗೆ (Sandalwood) ಪದಾರ್ಪಣೆ ಮಾಡುತ್ತಿದ್ದಾರೆ. ‘ಟೇಲ್ಸ್ ಆಫ್ ಮಹಾನಗರ’ ಸಿನಿಮಾದಲ್ಲಿ ಅಥರ್ವ್‌ ನಟಿಸಿದ್ದು, ಈ ಚಿತ್ರದ ಟೀಸರ್ ರಿಲೀಸ್ ಆಗಿದೆ. ರಾಜೀವ್ ಕಿರಣ್ ವೆನಿಯಲ್ ಈ ಸಿನಿಮಾಗೆ ನಿರ್ದೇಶನ ಮಾಡಿದ್ದು, ಹೊಸ ಪ್ರತಿಭೆ ಅಥರ್ವ್‌ಗೆ ಸುದೀಪ್ ಸಾಥ್ ನೀಡಿದ್ದಾರೆ.

    ಇದೀಗ ಬಿಡುಗಡೆಯಾಗಿರುವ ಟೀಸರ್‌ಗೆ ಸುದೀಪ್ ಹಿನ್ನೆಲೆ ಧ್ವನಿ ನೀಡಿದ್ದಾರೆ. ಕಿಚ್ಚ ಹೊಸ ಪ್ರತಿಭೆಗಳಿಗೆ ಬೆಂಬಲ ನೀಡುವ ವಿಚಾರ ಇದೇನು ಮೊದಲಲ್ಲ. ಹೊಸಬರ ಪ್ರಯತ್ನಕ್ಕೆ ಸಾಥ್ ನೀಡುತ್ತಲೇ ಬಂದಿದ್ದಾರೆ. ಈ ಬಾರಿ ‘ಟೇಲ್ಸ್ ಆಫ್ ಮಹಾನಗರ’ ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಅಂದಹಾಗೆ, ಈ ಸಿನಿಮಾವು ಸದ್ಯದಲ್ಲೇ ತೆರೆಗೆ ಬರಲಿದೆ. ‘ಟೇಲ್ಸ್ ಆಫ್ ಮಹಾನಗರ’ ಚಿತ್ರಕ್ಕೆ ಅಥರ್ವ್ ಅವರೇ ಕಥೆ ಬರೆದಿದ್ದು, ನಿರ್ದೇಶಕರ ಜೊತೆಗೂಡಿ ಚಿತ್ರಕಥೆಗೆ ಸಾಥ್‌ ನೀಡಿದ್ದಾರೆ. ರಿಲೀಸ್ ಆಗಿರುವ ಟೀಸರ್‌ಗೆ ಜನರಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.

    ಗೆಜ್ಜೆನಾದ, ನಂದ ಲವ್ಸ್ ನಂದಿತಾ, ಕನ್ನಡದ ಕಂದ, ಆಟ ಮುಂತಾದ ಸಿನಿಮಾಗಳನ್ನು ನಿರ್ದೇಶಿಸಿದ್ದ ವಿಜಯ್ ಕುಮಾರ್ ಅವರ ಪುತ್ರ ಅಥರ್ವ್‌. ಇದೀಗ ‘ಟೇಲ್ಸ್ ಆಫ್ ಮಹಾನಗರ’ ಚಿತ್ರದ ಮೂಲಕ ಹೀರೋ ಆಗಿದ್ದಾರೆ. ತಮ್ಮ ಪುತ್ರ ಮೊದಲ ಸಿನಿಮಾವನ್ನು ವಿಜಯ್ ಕುಮಾರ್ ಅವರು ಧರ್ಮೇಂದ್ರ ಎಂ ರಾವ್ ಎಂಬುವವರ ಜೊತೆಗೆ ಸೇರಿ ನಿರ್ಮಾಣವನ್ನು ಮಾಡಿದ್ದಾರೆ. ಇದನ್ನೂ ಓದಿ:Kiccha 46: ಸುದೀಪ್‌ ಸಿನಿಮಾದಲ್ಲಿ ಸಂಯುಕ್ತಾ ಹೊರನಾಡ್

    ಮಹಾನಗರವೊಂದರಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾ ಒಳಗೊಂಡಿದ್ದು, ಹೆಣ್ಣು, ಅಧಿಕಾರ- ಧರ್ಮಕ್ಕೆ ಸಂಬಂಧಿಸಿದ ಹಾಗೆ ಮೂರು ವಿಭಿನ್ನ ಕಥೆಗಳು ಸಿನಿಮಾದಲ್ಲಿ ಇವೆ. ಕನ್ನಡತಿ ಧಾರಾವಾಹಿ ವಿಲನ್ ಸಾನಿಯಾ ಪಾತ್ರದ ಮೂಲಕ ಖ್ಯಾತಿ ಪಡೆದ ರಮೋಲಾ ಅವರು ಈ ಸಿನಿಮಾಗೆ ನಾಯಕಿಯಾಗಿ ನಟಿಸಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]