Tag: ಕಿಟ್

  • ಕೇವಲ 2 ಗಂಟೆಯಲ್ಲಿ ಓಮಿಕ್ರಾನ್ ಪತ್ತೆ ಮಾಡುವ ಕಿಟ್ ಅಭಿವೃದ್ಧಿ

    ಕೇವಲ 2 ಗಂಟೆಯಲ್ಲಿ ಓಮಿಕ್ರಾನ್ ಪತ್ತೆ ಮಾಡುವ ಕಿಟ್ ಅಭಿವೃದ್ಧಿ

    ನವದೆಹಲಿ: ದೇಶದಲ್ಲಿ ಕೊರೊನಾ ವೈರಸ್ ಹೊಸ ರೂಪಾಂತರಿ ಓಮಿಕ್ರಾನ್ ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ತ್ವರಿತವಾಗಿ ಸೋಂಕು ಪತ್ತೆಗೆ ಕ್ರಮವಹಿಸಲಾಗಿದ್ದು, ಸೋಂಕಿತರ ಮಾದರಿಗಳಿಂದ ಕೇವಲ 2 ಗಂಟೆಯಲ್ಲಿ ಓಮಿಕ್ರಾನ್ ಪತ್ತೆ ಮಾಡುವ ಕಿಟ್ ಅನ್ನು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಭಿವೃದ್ಧಿಪಡಿಸಿದೆ.

    OMICRON Karnataka

    ಪ್ರಸ್ತುತ ಮಾರುಕಟ್ಟೆಯಲ್ಲಿ ಲಭ್ಯವಿರುವ ಕಿಟ್‍ಗಳಿಂದ ಓಮಿಕ್ರಾನ್ ಸೋಂಕು ಪತ್ತೆಗೆ ಕನಿಷ್ಠ 3-4 ದಿನಗಳು ಬೇಕಾಗುತ್ತದೆ. ಸೋಂಕು ಪತ್ತೆಯನ್ನು ಮತ್ತಷ್ಟು ತ್ವರಿತಗೊಳಿಸುವ ಉದ್ದೇಶದಿಂದ ಅತ್ಯಾಧುನಿಕ ಕಿಟ್ ಅಭಿವೃದ್ಧಿಪಡಿಸಲಾಗಿದೆ. ಈ ಕಿಟ್ ಅನ್ನು ವಿಜ್ಞಾನಿ ಬಿಸ್ವಜ್ಯೋತಿ ಬೊರ್ಕಕೋಟಿ ನೇತೃತ್ವದ ಐಸಿಎಂಆರ್-ಆರ್‌ಎಂಆರ್‌ಸಿ ತಂಡ ಅಭಿವೃದ್ಧಿಪಡಿಸಿದೆ. ಇದನ್ನೂ ಓದಿ: ಮಾರ್ಚ್, ಮೇ ಹೊತ್ತಿಗೆ ದೇಶದಲ್ಲಿ ಕೊರೊನಾ ಇರಲ್ಲ: ವಿನಯ್ ಗುರೂಜಿ

    ಡಿಬ್ರೂಗಡದ ಐಸಿಎಂಆರ್-ಆರ್‌ಎಂಆರ್‌ಸಿ ಓಮಿಕ್ರಾನ್ ತಳಿಯ ಪತ್ತೆಗಾಗಿ ಆರ್‍ಟಿ-ಪಿಸಿಆರ್ ಪರೀಕ್ಷೆಯ ಕಿಟ್ ಅನ್ನು ವಿನ್ಯಾಸಗೊಳಿಸಿದೆ. ಈ ಕಿಟ್ ಕೇವಲ 2 ಗಂಟೆಯಲ್ಲಿ ಹೊಸ ತಳಿಯನ್ನು ಪತ್ತೆ ಮಾಡಲಿದೆ ಎಂದು ವಿಜ್ಞಾನಿ ಡಾ.ಬಿಸ್ವಜ್ಯೋತಿ ತಿಳಿಸಿದ್ದಾರೆ.

    ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಲ್ಲಿ ಕೋಲ್ಕತ್ತಾ ಮೂಲದ ಜಿಸಿಸಿ ಬಯೋಟೆಕ್ ಕಂಪೆನಿಯು ಕಿಟ್ ಅನ್ನು ತಯಾರಿಸುತ್ತಿದೆ. ಕೊರೊನಾ ಸೋಂಕಿತರನ್ನು ಪರೀಕ್ಷೆಗೆ ಒಳಪಡಿಸಿದಾಗ ಓಮಿಕ್ರಾನ್‍ನ ನಿರ್ದಿಷ್ಟ ಸಿಂಥೆಟಿಕ್ ಜೀನ್ ತುಣುಕುಗಳಿರುವುದನ್ನು ಕಿಟ್ ಪತ್ತೆ ಮಾಡಿದೆ. ಇದರಿಂದ ಶೇ. 100ರಷ್ಟು ಫಲಿತಾಂಶವನ್ನು ಕಿಟ್ ನೀಡುತ್ತದೆ ಎಂಬುದು ಪರಿಶೀಲನೆಯಿಂದ ತಿಳಿದುಬಂದಿದೆ. ಇದನ್ನೂ ಓದಿ: ಓಮಿಕ್ರಾನ್ ಭೀತಿ: ಮುಂಬೈನಲ್ಲಿ 144 ಸೆಕ್ಷನ್ ಜಾರಿ- ರ‍್ಯಾಲಿ, ಮೆರವಣಿಗೆಗೆ ನಿಷೇಧ

    ದೇಶದಲ್ಲಿ ಈವರೆಗೆ ಒಟ್ಟು 33 ಓಮಿಕ್ರಾನ್ ಪ್ರಕರಣಗಳಿವೆ.

  • ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

    ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ಆಹಾರ ಕಿಟ್ ವಿತರಣೆ

    ಮಂಗಳೂರು: ರಾಜ್ಯ ಕಾರ್ಮಿಕ ಇಲಾಖೆಯ ವತಿಯಿಂದ ನೋಂದಾಯಿತ ಕಟ್ಟಡ ಹಾಗೂ ಇತರೆ ಕಾರ್ಮಿಕರಿಗೆ ನೀಡುವ ಆಹಾರದ ಕಿಟ್‍ನ್ನು ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಅವರ ನೇತೃತ್ವದಲ್ಲಿ ಡೊಂಗರಕೇರಿ ಭುವನೇಂದ್ರ ಸಭಾಂಗಣದಲ್ಲಿ ವಿತರಿಸಲಾಯಿತು.

    ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ್ ಕಾಮತ್, ರಾಜ್ಯ ಕಾರ್ಮಿಕ ಇಲಾಖೆಯಿಂದ ನೀಡುವ ಕಾರ್ಮಿಕ ಕಾರ್ಡಿನಿಂದ ಅನೇಕ ಉಪಯೋಗಗಳಿವೆ. ಇದನ್ನು ಅರಿತು ಪ್ರತಿಯೊಬ್ಬ ಅಸಂಘಟಿತ ಕಾರ್ಮಿಕರೂ ಕೂಡ ಕಾರ್ಡಿಗೆ ಅರ್ಜಿ ಸಲ್ಲಿಸಬೇಕೆಂದು ಹೇಳಿದರು. ಇದನ್ನೂ ಓದಿ: ಬೇವು ತಲೆಹೊಟ್ಟಿಗೆ ಮದ್ದು

    ಸರಕಾರ ನೀಡುವ ಸವಲತ್ತುಗಳು ನೇರವಾಗಿ ಜನ ಸಾಮಾನ್ಯರಿಗೆ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಪಾತ್ರ ಪ್ರಮುಖವಾಗಿರುತ್ತದೆ. ಈ ನಿಟ್ಟಿನಲ್ಲಿ ನಮ್ಮ ಪಕ್ಷದ ಚಿಂತನೆಯೂ ಇದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಾಲೆಂಜಿಂಗ್ ಸ್ಟಾರ್ ದರ್ಶನ್‍ ಹೆಸರಿನಲ್ಲಿ ವಂಚನೆಗೆ ಯತ್ನ – ಮಹಿಳೆಯ ವಿರುದ್ಧ ಯಜಮಾನ ದೂರು

    ಈ ಕಾರ್ಯಕ್ರಮದಲ್ಲಿ ಮಂಗಳೂರು ಮಹಾನಗರ ಪಾಲಿಕೆಯ ಮೇಯರ್ ಪ್ರೇಮಾನಂದ ಶೆಟ್ಟಿ, ಪಾಲಿಕೆ ಸದಸ್ಯರಾದ ಶೋಭಾ ಪೂಜಾರಿ, ರೂಪ ಶ್ರೀ ಪೂಜಾರಿ, ಪಾಲಿಕೆ ನಾಮನಿರ್ದೇಶಿತ ಸದಸ್ಯರಾದ ಭಾಸ್ಕರ್ ಚಂದ್ರ ಶೆಟ್ಟಿ, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ರೂಪಾ ಡಿ. ಬಂಗೇರ, ಸುರೇಂದ್ರ ಜಪ್ಪಿನಮೊಗರು, ಕಾರ್ಮಿಕ ಅಧಿಕಾರಿ ವಿಲ್ಮಾ, ಮೇರಿ ಡಯಾಸ್, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು. ಇದನ್ನೂ ಓದಿ: ಜ್ಯೂನಿಯರ್ ಚಿರುವಿನ ಹೊಸ ಫೋಟೋಗಳು ವೈರಲ್

  • ಅಲೆಮಾರಿಗಳಿಗೆ ಪರಿಹಾರ, ಆಹಾರ ಪದಾರ್ಥಗಳ ಕಿಟ್ ಕೊಡುವಂತೆ ಸಿಎಂಗೆ ದ್ವಾರಕನಾಥ್ ಮನವಿ

    ಅಲೆಮಾರಿಗಳಿಗೆ ಪರಿಹಾರ, ಆಹಾರ ಪದಾರ್ಥಗಳ ಕಿಟ್ ಕೊಡುವಂತೆ ಸಿಎಂಗೆ ದ್ವಾರಕನಾಥ್ ಮನವಿ

    ಬೆಂಗಳೂರು: ಕೊರೊನಾ ರೋಗವನ್ನು ಹತೋಟಿಗೆ ತರಲು ತಾವು ಮಾಡುತ್ತಿರುವ ಕೆಲಸದ ಬಗ್ಗೆ ನಮಗೆ ಗೌರವವಿದೆ. ಇಂತಹ ಸಂದರ್ಭದಲ್ಲಿ ತಮ್ಮ ಸರ್ಕಾರದಿಂದ ಸಂಕಷ್ಟದಲ್ಲಿ ಸಿಲುಕಿರುವ ಅಲೆಮಾರಿಗಳಿಗೆ ಪರಿಹಾರ, ಆಹಾರ ಪದಾರ್ಥಗಳ ಕಿಟ್ ಕೊಡುವಂತೆ ಸಿಎಂಗೆ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ದ್ವಾರಕನಾಥ್ ಮನವಿ ಮಾಡಿದ್ದಾರೆ.

    ಪತ್ರದಲ್ಲಿ ಏನಿದೆ?

    ಆಟೋ ಚಾಲಕರು, ವಾಹನ ಚಾಲಕರು, ಕಟ್ಟಡ ಕಾರ್ಮಿಕರಿಗೆ, ಕ್ಷೌರಿಕರು, ಮಡಿವಾಳರು, ನೇಕಾರರು ಮುಂತಾದ ಹಿಂದುಳಿದ ಸಮುದಾಯಗಳಿಗೆ, ಹಾಗೂ ಹಲವಾರು ಕಾರ್ಮಿಕ ವರ್ಗದ ಪ್ರತಿ ಕುಟುಂಬಕ್ಕೂ ನೆರವನ್ನು ಘೋಷಣೆ ಮಾಡಿರುವ ತಮ್ಮ ಕಾಳಜಿಗಾಗಿ ತಮಗೆ ವೈಯಕ್ತಿಕವಾಗಿ ರಾಜ್ಯ ಅಲೆಮಾರಿ ಬುಡಕಟ್ಟು ಮಹಾ ಸಭಾದ ವತಿಯಿಂದ ಕೃತಜ್ಞತೆಯನ್ನು ತಿಳಿಸುತ್ತೇವೆ.

    ಈ ಹಿಂದಿನ ಉಲ್ಲೇಖಿತ ಪತ್ರಗಳಲ್ಲಿ ತಿಳಿಸಿದಂತೆ ಕರ್ನಾಟಕದ ಎಲ್ಲಾ ಅಸಹಾಯಕ ಅಲೆಮಾರಿ ಸಮುದಾಯಗಳ ಪ್ರತಿನಿಧಿಯಾಗಿ ನಮ್ಮ ಅಲೆಮಾರಿಗಳ ಆಕ್ರಂದನವನ್ನು ಮತ್ತೊಮ್ಮೆ ನಿಮ್ಮ ಗಮನಕ್ಕೆ ತರುತ್ತಿದ್ದೇನೆ. ಅಲೆಮಾರಿಗಳು ಊರಾಚೆಯ ಸ್ಮಶಾನದಲ್ಲಿ, ಪಾಳುಮಂಟಪಗಳಲ್ಲಿ, ರೈಲ್ವೆ ಹಳಿಗಳ ಪಕ್ಕದಲ್ಲಿ, ಹಳೆಯ ಬಟ್ಟೆಗಳಿಂದ ಜೋಪಡಿಗಳನ್ನು ಹಾಕಿಕೊಂಡು ಊರಾಚೆ ಬದುಕುವುದರಿಂದ ಸದರಿ ಅಲೆಮಾರಿಗಳು ಯಾವ ಸರ್ಕಾರಿ ಅಧಿಕಾರಿಗಳಿಗಾಗಲಿ, ಅಥವಾ ಜನ ಪ್ರತಿನಿಧಿಗಳಿಗಾಗಲಿ ಸಾಮಾನ್ಯವಾಗಿ ಕಾಣುಸಿಗುವುದಿಲ್ಲ.

    ನಮ್ಮ ಅಲೆಮಾರಿಗಳು ಊರೂರು ಅಲೆಯುತ್ತಾ ತಮ್ಮ ಕುಲ ಕಸುಬುಗಳಾದ ತೊಗಲುಗೊಂಬೆಯಾಟ, ಬೀಗ ರಿಪೇರಿ, ಛತ್ರಿ ರಿಪೇರಿ, ಗಾರುಡಿ, ಕಸರತ್ತಿನ ಕಲೆ, ದೊಂಬರಾಟ, ನಾಟಿಮದ್ದು ಮಾರುವುದು, ಸೂಜಿದಾರ, ಪಿನ್ನಮಾರುವುದು, ಕೂದಲು ಆರಿಸುವುದು, ಹಚ್ಚೆ ಹಾಕುವುದು, ಪ್ಲಾಸ್ಟಿಕ್ ವಸ್ತುಗಳ ಮಾರಾಟ, ದೇವರ ಪೆÇೀಟೋ ಮಾರುವುದು, ಶಾಸ್ತ್ರ ಹೇಳುವುದು, ಮೋಡಿ ಆಟ ಇತ್ಯಾದಿ ಪ್ರದರ್ಶನ ಕಲೆಗಳ ಸೇವೆ ಮಾಡುತ್ತಾ ಗ್ರಾಮಾಂತರ ಪ್ರದೇಶಗಳಲ್ಲಿ ಅಲೆಮಾರಿ ಜೀವನ ನಡೆಸುತ್ತಿರುತ್ತಾರೆ. ಹೀಗೆ ಅಲೆಮಾರಿಗಳಾಗಿರುವುದರಿಂದ ಇವರಿಗಾಗಲಿ, ಇವರ ಮಕ್ಕಳಿಗಾಗಲಿ ಶಿಕ್ಷಣವೆಂಬುದು ಮರೀಚಿಕೆಯಾಗಿದೆ. ಇವರಿಗೆ ರೇಷನ್ ಕಾರ್ಡ್, ಆಧಾರ್ ಕಾರ್ಡ್, ಗುರುತಿನ ಚೀಟಿಯಾಗಲಿ, ಯಾವುದೇ ದಾಖಲೆಗಳಿಲ್ಲದೆ ಇರುವುದರಿಂದ ಸರ್ಕಾರ ನೀಡುವ ಏಲ್ಲಾ ನೆರವಿನಿಂದ ಅಪಾರವಾಗಿ ವಂಚಿತರಾಗುತ್ತಿದ್ದಾರೆ.

    ಈ ಎಲ್ಲಾ ಕಾರಣಗಳಿಂದಾಗಿ ನಮ್ಮ ಅಲೆಮಾರಿಗಳಿಗೆ ಸರ್ಕಾರದಿಂದ ನೀಡುವ ಯಾವುದೇ ಹಣಕಾಸಿನ ನೆರವಾವಾಗಲಿ, ಹಾಗು ಸರ್ಕಾರದಿಂದ ವಿತರಿಸಿದ ಪಡಿತರವಾಗಲಿ ಸಿಗದೆ ಏಲ್ಲಾ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. ಇಂತಹ ಸೌಲಭ್ಯ ವಂಚಿತ ಅಲೆಮಾರಿಗಳು ಹಸಿವಿನಿಂದ ನರಳುತ್ತಾ ಅನ್ನಕ್ಕಾಗಿ ಪರಿತಪಿಸುತ್ತಿದ್ದಾರೆ. ಈ ಸಂಕಷ್ಟದ ಸಮಯದಲ್ಲಿ ಅಲೆಮಾರಿಗಳ ಜೀವನ ತುಂಬಾ ದುಸ್ಥಿತಿಯಲ್ಲಿದೆ ಹಾಗೂ ತುಂಬಾ ಶೋಚನೀಯ ಸ್ಥಿತಿಯಲ್ಲಿದ್ದು, ಅನೇಕ ಅಲೆಮಾರಿಗಳಿಗೆ ಒಪ್ಪತ್ತಿನ ಊಟಕ್ಕೂ ಗತಿಯಿಲ್ಲದೆ ಕೊರೊನಾದಿಂದ ಸಾಯುವುದು ಒಂದುಕಡೆಯಾದರೆ ಹಸಿವಿನಿಂದ ಕೆಲವೇ ದಿನಗಳಲ್ಲಿ ಅನೇಕರು ಸಾಯುವುದರಲ್ಲಿ ಯಾವುದೇ ಸಂಶಯವಿಲ್ಲ.

    ರಾಜ್ಯದ ಕೆಲವು ಕಡೆ ಈ ಅಲೆಮಾರಿಗಳಿಗೆ ಸಂಘ ಸಂಸ್ಥೆಗಳು ಅಲ್ಪ ಸ್ವಲ್ಪ ಸಹಾಯ ಮಾಡಿರುವುದನ್ನು ಬಿಟ್ಟರೆ ಬೇರೆ ಯಾವುದೇ ಜಿಲ್ಲಾಡಳಿತಗಳಾಗಲಿ, ತಾಲ್ಲೂಕು ಆಡಳಿತಗಳಾಗಲಿ ನೆರವು ನೀಡದೇ ಮೌನವಹಿಸಿವೆ. ಅಲೆಮಾರಿಗಳ ಅಭಿವೃದ್ಧಿಗಾಗಿಯೇ ಸ್ಥಾಪನೆಯಾದ ರಾಜ್ಯ ಪ.ಜಾತಿ, ಪ.ವರ್ಗದ ಅಲೆಮಾರಿ ಅಭಿವೃದ್ಧಿ ಕೋಶದಿಂದಾಗಲಿ, ಡಾ.ಅಂಬೇಡ್ಕರ್ ಅಭಿವೃದ್ಧಿ ನಿಗಮ ಮತ್ತು ರಾಜ್ಯ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದಾಗಲಿ ಯಾವುದೇ ನೆರವನ್ನೂ ಸಹ ಈವರೆಗೂ ನೀಡಿಲ್ಲ. ಕೊರೊನಾದಿಂದಾಗಿ ಕಳೆದ ಒಂದು ವರ್ಷದಿಂದ ಯಾವುದೇ ಬೀದಿ ಬದಿಯ ಹಾಗು ಹಳ್ಳಿ ಹಳ್ಳಿ ಸುತ್ತಿ ಸಣ್ಣಪುಟ್ಟ ವ್ಯಾಪಾರ ಗಳನ್ನು ಮಾಡಲು ಸಾಧ್ಯವಾಗದೇ ಇರುವುದರಿಂದ ಈಗ ಮನೆಗೆ ಒಂದು ಬೆಂಕಿಪೊಟ್ಟಣವನ್ನು ಸಹ ತರಲು ಸಾಧ್ಯವಾಗದ ಸ್ಥಿತಿಯಲ್ಲಿ ತುಂಬಾ ಸಂಕಷ್ಟದಲ್ಲಿ ನರಳುತ್ತಿದ್ದಾರೆ.

    ಈ ಹಿನ್ನೆಲೆಯಲ್ಲಿ ತಾವುಗಳು ನಮ್ಮ ರಾಜ್ಯದಲ್ಲಿ ಇರುವ ಏಲ್ಲಾ SC/ST, ಹಾಗು OBC ಹಾಗೂ ಅಲ್ಪಸಂಖ್ಯಾತ ಅಲೆಮಾರಿಗಳನ್ನು ಮೊನ್ನೆ ಘೋಷಿಸಿದ ವಿಶೇಷ ಪ್ಯಾಕೇಜ್ ನಲ್ಲಿ ಸೇರಿಸದಿರುವುದು ತೀರಾ ನೋವನ್ನುಂಟು ಮಾಡಿದೆ. ತಾವುಗಳು ನಮ್ಮ ಈ ಕೋರಿಕೆ ಪತ್ರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ನಮಗೆ ಈ ಕೆಳಗಿನಂತೆ ನೆರವು ನೀಡಬೇಕೆಂದು ಕೋರುತಿದ್ದೇವೆ.

    * ನಮ್ಮ ರಾಜ್ಯದಲ್ಲಿ ಇರುವ ಅಲೆಮಾರಿಗಳ ಪ್ರತಿ ಕುಟುಂಬಕ್ಕೂ ಸಹ 5000 ರೂ. ಗಳ ನೆರವಿನ ಹಣವನ್ನು ಅತ್ಯಂತ ತುರ್ತಾಗಿ ಬಿಡುಗಡೆ ಮಾಡಬೇಕು.
    *ಸಂಪೂರ್ಣ ಅಡುಗೆ ಪದಾರ್ಥಗಳಿರುವ ಆಹಾರ ಸಾಮಗ್ರಿಗಳ ಕಿಟ್‍ಗಳನ್ನು ಕೂಡಲೆ ವಿತರಿಸಲು ತಾವುಗಳು ಕ್ರಮ ಕೈಗೊಂಡು ನೊಂದ ಅಲೆಮಾರಿಗಳಿಗೆ ನೆರವಾಗಬೇಕೆಂದು ರಾಜ್ಯ ಅಲೆಮಾರಿ ಬುಡಕಟ್ಟು ಮಹಾ ಸಭಾ( ರಿ)ದ ವತಿಯಿಂದ ನಿವೇದಿಸುತ್ತೇನೆ.

  • ಕೊರೊನಾ ಬಂದಿರೋ ಕಾರಣ ಬಿಚ್ಚಿಟ್ಟ ಮೆಗಾಸ್ಟಾರ್ ಚಿರಂಜೀವಿ

    ಕೊರೊನಾ ಬಂದಿರೋ ಕಾರಣ ಬಿಚ್ಚಿಟ್ಟ ಮೆಗಾಸ್ಟಾರ್ ಚಿರಂಜೀವಿ

    – ಮೊದ್ಲು ಕೊರೊನಾ ಪಾಸಿಟಿವ್, 3 ಬಾರಿ ನೆಗೆಟಿವ್

    ಹೈದರಾಬಾದ್: ಇತ್ತೀಚೆಗೆ ಮೆಗಾಸ್ಟಾರ್ ಜಿರಂಜೀವಿಯವರಿಗೆ ಕೊರೊನಾ ಪಾಸಿಟಿವ್ ಬಂದಿದೆ ಎಂಬ ಸುದ್ದಿ ಸಖತ್ ಸದ್ದು ಮಾಡಿತ್ತು. ಆದರೆ ನನಗೆ ಕೊರೊನಾ ಸೋಂಕು ತಗುಲಿಲ್ಲ ಎಂದು ಜಿರಂಜೀವಿಯವರೇ ಸ್ಪಷ್ಟಪಡಿಸಿದ್ದಾರೆ.

    ಕಳೆದ ನಾಲ್ಕು ದಿನಗಳ ಹಿಂದೆ ಮೆಗಾಸ್ಟಾರ್ ಜಿರಂಜೀವಿಯವರಿಗೆ ಕೊರೊನಾ ಸೋಂಕು ಬಂದಿದೆ ಎಂದು ಹೇಳಲಾಗಿತ್ತು. ಆದರೆ ಈ ಸುದ್ದಿಯ ಹಿಂದಿನ ಕಾರಣವನ್ನು ಸ್ವತಃ ಜಿರಂಜೀವಿಯವರೇ ರೀವಿಲ್ ಮಾಡಿದ್ದು, ದೋಷಪೂರಿತ ಆರ್.ಟಿ-ಪಿ.ಸಿ.ಆರ್ ಕಿಟ್‍ನಿಂದ ನನ್ನ ಕೊರೊನಾ ವರದಿ ತಪ್ಪಾಗಿ ಬಂದಿತ್ತು ಎಂದು ಟ್ವೀಟ್ ಮಾಡಿದ್ದಾರೆ.

    ಈ ವಿಚಾರವಾಗಿ ಟ್ವೀಟ್ ಮಾಡಿರುವ ಜಿರಂಜೀವಿಯವರು, ನನಗೆ ವೈದ್ಯರ ತಂಡ ಮೂರು ಬಗೆಯ ಕೊರೊನಾ ಟೆಸ್ಟ್ ಮಾಡಿದ್ದು, ಈ ವೇಳೆ ನನಗೆ ಕೊರೊನಾ ನೆಗೆಟಿವ್ ಇದೆ ಎಂದು ಖಚಿತವಾಗಿದೆ. ಇದಕ್ಕೂ ಮೊದಲು ಬಂದ ವರದಿ ಸುಳ್ಳಾಗಿದ್ದು, ದೋಷಪೂರಿತ ಆರ್.ಟಿ-ಪಿ.ಸಿ.ಆರ್ ಕಿಟ್ ಬಳಕೆಯಿಂದ ನನಗೆ ಕೊರೊನಾ ಪಾಸಿಟಿವ್ ಎಂದು ಬಂದಿತ್ತು. ಈ ಕಠಿಣ ಸಮಯದಲ್ಲಿ ನನ್ನ ಆರೋಗ್ಯದ ಮೇಲೆ ಕಾಳಜಿ ಮತ್ತು ಪ್ರೀತಿ ತೋರಿದ ಎಲ್ಲರಿಗೂ ಧನ್ಯವಾದ ಎಂದು ಬರೆದುಕೊಂಡಿದ್ದಾರೆ.

    ಟೈಮ್ ಮತ್ತು ಕೊರೊನಾ ವೈರಸ್ ಕಳೆದ ನಾಲ್ಕು ದಿನದಿಂದ ನನ್ನ ಜೊತೆ ಆಟವಾಡುತ್ತಿದೆ. ಕಳೆದ ಭಾನುವಾರ ಕೊರೊನಾ ಪಾಸಿಟಿವ್ ಎಂದು ತಿಳಿದು ನಾನು ಕ್ವಾರಂಟೈನ್ ಆಗಿದ್ದೆ. ಆದರೆ ಎರಡು ದಿನವಾದರೂ ಕೊರೊನಾದ ಯಾವುದೇ ಗುಣಲಕ್ಷಣ ಕಾಣಿಸಿಕೊಳ್ಳಲಿಲ್ಲ. ಈ ವೇಳೆ ಮತ್ತೆ ಪರೀಕ್ಷೆ ಮಾಡಿಸೋಣ ಎಂದು ಅಪೋಲೋ ಆಸ್ಪತ್ರೆ ವೈದ್ಯರನ್ನು ಭೇಟಿ ಮಾಡಿದೆ. ಅಲ್ಲಿ ಸಿಟಿ ಸ್ಕ್ಯಾನ್ ಮಾಡಿಸಿದಾಗ ಕೊರೊನಾ ಸೋಂಕು ಇಲ್ಲ ಎಂಬುದು ತಿಳಿಯಿತು. ನಂತರ ಮತ್ತೆ ಮೂರು ಬಾರಿ ಕೊರೊನಾ ಟೆಸ್ಟ್ ಮಾಡಿಸಿದ್ದು, ಅಲ್ಲಿಯೂ ಕೂಡ ನನಗೆ ಕೊರೊನಾ ನೆಗೆಟಿವ್ ಬಂದಿದೆ ಎಂದು ಚಿರಂಜೀವಿ ಟ್ವಿಟ್ಟರಿನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ಸದ್ಯ ಚಿರಂಜೀವಿಯವರು ತಮ್ಮ ಪುತ್ರ ರಾಮ್‍ಚರಣ್ ನಿರ್ಮಾಣ ಮಾಡುತ್ತಿರುವ ಆಚಾರ್ಯ ಎಂಬ ಸಿನಿಮಾದಲ್ಲಿ ನಾಯಕನಾಗಿ ನಟಿಸುತ್ತಿದ್ದಾರೆ. ಈ ಸಿನಿಮಾದ ಶೂಟಿಂಗ್‍ಗೆ ಹೋಗುವ ಮುನ್ನ ಚಿರಂಜೀವಿಯವರು ಕೊರೊನಾ ಟೆಸ್ಟ್ ಮಾಡಿಸಿದ್ದು, ಈ ವರದಿಯಲ್ಲಿ ಅವರಿಗೆ ಮೊದಲ ಬಾರಿ ಪಾಸಿಟಿವ್ ಬಂದಿತ್ತು. ಈ ಕಾರಣದಿಂದ ಆಚಾರ್ಯ ಸಿನಿಮಾದ ಶೂಟಿಂಗ್ ಅನ್ನು ಮುಂದೂಡಲಾಗಿತ್ತು.

  • ತುಂಬು ಗರ್ಭಿಣಿಯಾದ್ರೂ ಕೊರೊನಾ ಕಿಟ್ ತಯಾರಿಕೆ – ಮರುದಿನ ಮಗುವಿಗೆ ಜನ್ಮ

    ತುಂಬು ಗರ್ಭಿಣಿಯಾದ್ರೂ ಕೊರೊನಾ ಕಿಟ್ ತಯಾರಿಕೆ – ಮರುದಿನ ಮಗುವಿಗೆ ಜನ್ಮ

    – 2-3 ಗಂಟೆಗಳಲ್ಲಿ ಕೋವಿಡ್ -19 ಪರೀಕ್ಷೆ
    – ನನ್ನ ದೇಶಕ್ಕೆ ಸೇವೆ ಮಾಡಿದೆ ಎಂದ ವೈದ್ಯೆ

    ಮುಂಬೈ: ಮಾಹಾಮಾರಿ ಕೊರೊನಾ ವೈರಸ್ ಜಗತ್ತಿನಾದ್ಯಂತ ವ್ಯಾಪಿಸುತ್ತಿದೆ. ಇದನ್ನು ಹರಡದಂತೆ ತಡೆಯಲು ವೈದ್ಯರು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಅದರಲ್ಲೂ ಭಾರತ ಕೊರೊನಾ ವೈರಸ್ ಪರೀಕ್ಷೆಗೆ ಮೊದಲ ಮೇಡ್ ಇನ್ ಇಂಡಿಯಾ ಕಿಟ್ ತಯಾರಿಸಿದೆ. ಇದನ್ನು ತಯಾರಿಸಿದ್ದು ಓರ್ವ ಗರ್ಭಿಣಿ ಮಹಿಳಾ ವೈದ್ಯೆ. ಇದೀಗ ವೈದ್ಯೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಹೀಗಾಗಿ ಗರ್ಭಿಣಿಯಾಗಿದ್ದರೂ ನಿರಂತರವಾಗಿ ಕೆಲಸ ಮಾಡಿದ್ದಕ್ಕೆ ಅವರಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗುತ್ತಿದೆ.

    ದೇಶದ ಮೊದಲ ಕೋವಿಡ್-19 ಕಿಟ್ ತಯಾರಕಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮಿನಾಲ್ ಬೋಸ್ಲೆ ಅವರು ಹೆಣ್ಣು ಮಗವಿಗೆ ಜನ್ಮ ನೀಡಿದ್ದಾರೆ. ಇದೀಗ ಇವರ ಕರ್ತವ್ಯ ನಿಷ್ಠೆಗೆ ಅನೇಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

    ಭೋಸ್ಲೆ ಅವರು ಪುಣೆಯ ಮೈಲಾಬ್ ಡಿಸ್ಕವರಿಯ ಸಂಸ್ಥೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದ ಮುಖ್ಯಸ್ಥೆಯಾಗಿದ್ದಾರೆ. ಇವರು ನೇತೃತ್ವವಹಿಸಿದ್ದ ತಂಡ ಮೊಟ್ಟ ಮೊದಲ ಮೇಡ್ ಇನ್ ಇಂಡಿಯಾ ಕಿಟ್ ತಯಾರಿಸಿತ್ತು. ಈ ಮೂಲಕ ಇದು ಕೋವಿಡ್-19 ಪರೀಕ್ಷಾ ಕಿಟ್‍ಗಳನ್ನು ತಯಾರಿಸಿ ಮಾರಾಟ ಮಾಡಿದ ಮೊದಲ ಭಾರತೀಯ ಕಂಪನಿ ಎಂಬ ಹೆಗ್ಗಳಿಕೆ ಪಡೆದಿದೆ.

    1200 ರೂ. ವೆಚ್ಚದ ಒಂದ ಟೆಸ್ಟ್ ಕಿಟ್‍ನಲ್ಲಿ 100 ಮಾದರಿಗಳನ್ನು ಪರೀಕ್ಷಿಸಬಹುದು. ತುಂಬು ಗರ್ಭಿಣಿಯಾಗಿದ್ದ ಭೋಸ್ಲೆ ಅವರು ಯಾವುದನ್ನು ಲೆಕ್ಕಿಸದೇ ಹಗಲು-ರಾತ್ರಿ ಕಷ್ಟಪಟ್ಟು ದೇಶಕ್ಕಾಗಿ ಕೋವಿಡ್-19 ಕಿಟ್ ತಯಾರಿಸಿದ್ದರು. ಮಾರ್ಚ್ 18 ರಂದು ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ವೈರಾಲಜಿಗೆ ಕಳುಹಿಸಿದ್ದರು. ಮರುದಿನ ಅವರು ಮಗುವಿಗೆ ಜನ್ಮ ನೀಡಿದ್ದರು.

    ಈ ಬಗ್ಗೆ ಮಾತನಾಡಿದ ಭೋಸ್ಲೆ ಅವರು, ದೇಶ ತುರ್ತು ಪರಿಸ್ಥಿತಿಯಲ್ಲಿತ್ತು. ಹೀಗಾಗಿ ಕಿಟ್ ತಯಾರಿಸುವುದನ್ನು ಸವಾಲಾಗಿ ತೆಗೆದುಕೊಂಡಿದ್ದೆ. ನನ್ನ ದೇಶಕ್ಕೆ ನಾನು ಸೇವೆ ಮಾಡಬೇಕಿತ್ತು. ಆದ್ದರಿಂದ ಶ್ರಮಪಟ್ಟು ಕಿಟ್ ತಯಾರಿಸಲಾಗಿದೆ. ಮೊದಲು 6-7 ಗಂಟೆಗಳು ಪರೀಕ್ಷೆ ಮಾಡಲು ಸಮಯಬೇಕಿತ್ತು. ಆದರೆ ನಾವು ತಯಾರಿಸಿದ ಕಿಟ್‍ನಿಂದ ಕೇವಲ 2-3 ಗಂಟೆಗಳಲ್ಲಿ ಕೋವಿಡ್-19 ಪರೀಕ್ಷೆ ಮಾಡಬಹುದು ಎಂದು ತಿಳಿಸಿದ್ದಾರೆ.

    ನಾನು ಮೊದಲು ಕಿಟ್‍ಗೆ ಜೀವ ನೀಡಿದೆ ನಂತರ ನನ್ನ ಮಗುವಿಗೆ ಜನ್ಮ ನೀಡಿದೆ. ನಾನೊಬ್ಬಳೆ ಕಷ್ಟಪಟ್ಟಿಲ್ಲ ನಮ್ಮ ತಂಡದಲ್ಲಿದ್ದವರೆಲ್ಲರೂ ಶ್ರಮಿಸಿದ್ದಾರೆ ಎಂದಿದ್ದಾರೆ.

    ಇದೀಗ ಕೇವಲ 2 ರಿಂದ 2-30 ಗಂಟೆಯಲ್ಲಿ ಕೊರೊನಾ ವೈರಸ್ ಪರೀಕ್ಷೆಯನ್ನು ನಡೆಸುವ ಈ ಕಿಟ್ ಸದ್ಯ ಅತ್ಯಂತ ವೇಗವಾಗಿ ಪರೀಕ್ಷೆ ನಡೆಸುವ ಸಾಧನ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು, ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಮತ್ತು ನಟಿ ಸೋನಿ ರಜ್ದಾನ್ ಸೇರಿದಂತೆ ಅನೇಕ ಪ್ರಸಿದ್ಧ ವ್ಯಕ್ತಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಕೊಡಗು ಸಂತ್ರಸ್ತರಿಗೆ ಸಹಾಯ ಮಾಡಿ- ಏನು ಕೊಡಬಹುದು? ಯಾರನ್ನು ಸಂಪರ್ಕಿಸಬಹುದು? ಇಲ್ಲಿದೆ ವಿವರ

    ಕೊಡಗು ಸಂತ್ರಸ್ತರಿಗೆ ಸಹಾಯ ಮಾಡಿ- ಏನು ಕೊಡಬಹುದು? ಯಾರನ್ನು ಸಂಪರ್ಕಿಸಬಹುದು? ಇಲ್ಲಿದೆ ವಿವರ

    ಮಡಿಕೇರಿ: ರಾಜ್ಯದ ವಿವಿಧೆಡೆ ಮಳೆ ಆರ್ಭಟ ಮುಂದವರಿದಿದ್ದು, ಜನಜೀವನ ಸಂಕಷ್ಟಕ್ಕೆ ಸಿಲುಕಿದೆ. ಇತ್ತ ಕೊಡಗು ಜಿಲ್ಲೆಯ ಭಾರೀ ಸಂಕಷ್ಟಕ್ಕೆ ಸಿಲುಕಿದ್ದು, ಅವರಿಗೆ ಆಶ್ರಯ ಹಾಗೂ ಆಹಾರ ಒದಗಿಸಲು ಕೊಡವ ಸಮುದಾಯವು ಮುಂದಾಗಿದೆ.

    ಸಂತ್ರಸ್ತರಿಗೆ ಹಾಸಿಗೆ, ಆಹಾರ ಧಾನ್ಯ ಹಾಗೂ ಅಗತ್ಯ ವಸ್ತುಗಳನ್ನು ಒದಗಿಸಲು ಸಹಾಯ ಮಾಡುವಂತೆ ಸಮುದಾಯದ ಮುಖಂಡರು ಮನವಿ ಮಾಡಿಕೊಂಡಿದ್ದಾರೆ. ‘ಡೊನೆಟ್ ಕೊಡಗು’ ಎನ್ನವ ಹೆಸರಿನಲ್ಲಿ ಪರಿಹಾರ ನಿಧಿ ಸಂಗ್ರಹಿಸಲಾಗುತ್ತಿದೆ.

    ಬೆಂಗಳೂರಿನ ವಸಂತ ನಗರದ ಹಾಗೂ ಮೈಸೂರಿನ ವಿಜಯನಗರದ ಕೊಡವ ಸಮುದಾಯ ಕೇಂದ್ರಗಳು ಸಾರ್ವಜನಿಕರ ಬಳಿಗೆ ಬಂದು ವಸ್ತುಗಳ ಸಂಗ್ರಹಕ್ಕೆ ಮುಂದಾಗಿವೆ. ಆಗಸ್ಟ್ 18ರ ಒಳಗಾಗಿಯೇ ದಾನಿಗಳು ತಮ್ಮ ಕೈಲಾದ ಸಹಾಯ ಮಾಡಬಹುದು. ಬಳಕೆ ಮಾಡಿರುವ ವಸ್ತುಗಳನ್ನು ನೀಡುವಂತಿಲ್ಲ ಎಂದು ಸಮುದಾಯದ ಮುಖಂಡರು ಮನವಿ ಮಾಡಿಕೊಂಡಿದ್ದಾರೆ.

    ಏನನ್ನು ಕೊಡಬಹುದು?
    ಹಾಲಿನ ಪುಡಿ, ಗುಡ್ ಲೈಫ್ ಮಿಲ್ಕ್ ಪ್ಯಾಕ್, ಬ್ರೆಡ್, ಮ್ಯಾಗಿ, ಬಿಸ್ಕಟ್, ರಸ್ಕ್, ನೀರಿನ ಬಾಟಲ್ ಹಾಗೂ ಮಕ್ಕಳಿಗೆ, ಪುರುಷರಿಗೆ ಹಾಗೂ ಮಹಿಳೆಯರಿಗೆ ಬಟ್ಟೆ, ವಸ್ತ್ರ, ಬೆಡ್‍ಶೀಟ್, ಹಾಸಿಗೆ ನೀಡಬಹುದು. ಔಷಧೋಪಚಾರಕ್ಕೆ ಪ್ರಥಮ ಚಿಕಿತ್ಸೆ ಕಿಟ್, ಪ್ಯಾರಸಿಟಮೋಲ್ ಮಾತ್ರೆ, ಕೆಮ್ಮಿನ ಔಷಧಿ, ಓಆರ್‍ಎಸ್, ಡೈಜೆನ್,  ರ್‍ಯಾಂಟ್ಯಾಕ್ ಮಾತ್ರೆ ಹಾಗೂ ಸಾನಿಟರಿ ವಸ್ತುಗಳಾದ ಶೌಚಾಲಯ ಕಿಟ್, ಸೋಪ್, ಟೂತ್ ಪೇಸ್ಟ್, ಬ್ರಶ್ ಮತ್ತು ಸಾನಿಟರಿ ನ್ಯಾಪ್ಕಿನ್ ಕೊಡಬಹುದು.

    ಇತರೆ ಅಗತ್ಯ ವಸ್ತುಗಳಾದ ಟಾರ್ಚ್, ಬೆಂಕಿ ಪೊಟ್ಟಣ, ಮೇಣದ ಬತ್ತಿ, ಡೆಟಾಲ್, ಫಿನಾಯಿಲ್, ನೆಲ ಒರೆಸುವ ವಸ್ತು, ಶೌಚಾಲಯ ಸ್ವಚ್ಛಗೊಳಿಸುವ ವಸ್ತು, ಸೊಳ್ಳೆ ನಿವಾರಕಗಳು, ಚಮಚ ಹಾಗೂ ಪಾತ್ರೆಗಳನ್ನು ನೀಡಬಹುದಾಗಿದೆ.

    ಯಾರನ್ನು ಸಂಪರ್ಕಿಸಬೇಕು?
    ಮಾಹಿತಿಗಾಗಿ ಬೆಂಗಳೂರಿನಲ್ಲಿ ರೋಶನ್ ಸೋಮಣ್ಣ (98452 43561) ಕಿಶೋರ್ ಉತ್ತಪ್ಪ (98453 90522) ನಿರನ್ ಸೋಮಣ್ಣ (9980 990599) ಹಾಗೂ ಮೈಸೂರಿನಲ್ಲಿ ಮಲ್ಚಿರಾ ಪೊನ್ನಪ್ಪ (98441 38873), ಚಿಂದಾನಂದ ಶಮಿ (99459 99366), ಡಾ. ಅಯ್ಯಪ್ಪ (94831 10841) ಅವರನ್ನು ಸಂಪರ್ಕಿಸಬಹುದು.

    ಬೆಂಗಳೂರಿನ ವಸಂತನಗರದಲ್ಲಿರುವ ಕೊಡವ ಸಮಾಜ ಸ್ಥಳ ಗೂಗಲ್ ಮ್ಯಾಪ್ ಇಲ್ಲಿದೆ: ಕೊಡವ ಸಮಾಜ