Tag: ಕಿಡಂಬಿ ಶ್ರೀಕಾಂತ್

  • CWG 2022: 40ರ ಹುಮ್ಮಸ್ಸಿನಲ್ಲೂ TTಯಲ್ಲಿ ಚಿನ್ನ ಗೆದ್ದ ಅಚಂತ ಶರತ್

    CWG 2022: 40ರ ಹುಮ್ಮಸ್ಸಿನಲ್ಲೂ TTಯಲ್ಲಿ ಚಿನ್ನ ಗೆದ್ದ ಅಚಂತ ಶರತ್

    ಲಂಡನ್: ಬರ್ಮಿಂಗ್‌ಹ್ಯಾಮ್‌ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಗೇಮ್ಸ್ 2022ರಲ್ಲಿ ಭಾರತೀಯ ಕ್ರೀಡಾಪಟುಗಳು ಕೊನೆಯ ದಿನವೂ ಪದಕಗಳ ಬೇಟೆಯಾಡುತ್ತಿದ್ದಾರೆ. ಟೇಬಲ್ ಟೆನ್ನಿಸ್ ಪುರುಷರ ಸಿಂಗಲ್ಸ್ ಸ್ಪರ್ಧೆಯಲ್ಲಿ 40 ವಯಸ್ಸಿನ ಅಚಂತ್ ಶರತ್ ಕಮಲ್ ಚಿನ್ನ ಗೆದ್ದು ತೋರಿಸಿದ್ದಾರೆ.

    ಶರತ್ ಎನ್‌ಇಸಿ ಅರೇನಾದಲ್ಲಿ 11-13, 11-7, 11-2, 11-6, 11-8 ಅಂಕಗಳ ಮೂಲಕ ಇಂಗ್ಲೆಂಡ್‌ನ ಲಿಯಾಮ್ ಪಿಚ್‌ಫೋರ್ಡ್ ಅವರನ್ನು ಸೋಲಿಸಿದರು. 2006ರಲ್ಲಿ ಮೊದಲ ಬಾರಿಗೆ ಚಿನ್ನ ಗೆದ್ದಿದ್ದ ಶರತ್ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಒಟ್ಟು 13 ಪದಕಗಳನ್ನು ಗೆದ್ದುಕೊಂಡಿದ್ದಾರೆ.

    TT, ಬ್ಯಾಡ್ಮಿಂಟನ್‌ನಲ್ಲಿ ಕಂಚು:
    ಭಾರತೀಯ ಟೇಬಲ್ ಟೆನ್ನಿಸ್ ಸೆನ್ಸೇಷನ್ ಸತ್ಯನ್ ಜ್ಞಾನಶೇಖರನ್ ಅವರು ಇಂದು ಕಾಮನ್‌ವೆಲ್ತ್ ಕ್ರೀಡಾಕೂಟದ ಟೇಬಲ್ ಟೆನ್ನಿಸ್ ಪುರುಷರ ಸಿಂಗಲ್ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದಿದ್ದಾರೆ. ಸತ್ಯನ್ ಅವರು ಇಂಗ್ಲೆಂಡ್‌ನ ಪಾಲ್ ಡ್ರಿಂಕ್‌ಹಾಲ್ ಅವರನ್ನು ಸೋಲಿಸಿ, ಪಂದ್ಯವನ್ನು 4-3 ಅಂಕಗಳ ಅಂತರದಲ್ಲಿ ಗೆದ್ದಿದ್ದಾರೆ. ಇದನ್ನೂ ಓದಿ: ಕೈಜಾರಿದ ಚಿನ್ನ – ಹಾಕಿಯಲ್ಲಿ ಬೆಳ್ಳಿಗೆ ತೃಪ್ತಿಪಟ್ಟ ಭಾರತ

    ಪುರುಷರ ಸಿಂಗಲ್ಸ್ ಫೈನಲ್‌ನಲ್ಲಿ ಭಾರತದ ಷಟ್ಲರ್ ಕಿಡಂಬಿ ಶ್ರೀಕಾಂತ್ ಕಂಚಿನ ಪದಕವನ್ನು ಗೆದ್ದಿದ್ದಾರೆ. ಶ್ರೀಕಾಂತ್ ಅವರು ಸಿಂಗಾಪುರದ ಜಿಯಾ ಹೆಂಗ್ ತೆಹ್ ಅವರನ್ನು 21-15, 21-18 ರಿಂದ ಸೋಲಿಸಿ ಕಂಚಿನ ಪದಕಕ್ಕೆ ಕೊರಳೊಡ್ಡಿದ್ದಾರೆ. ಇದನ್ನೂ ಓದಿ: CWG 2022: ಬ್ಯಾಡ್ಮಿಂಟನ್‍ನಲ್ಲಿ 20ರ ಹರೆಯದ ಯುವಕನಿಗೆ ಚಿನ್ನದ ಹಾರ – ದಿಗ್ಗಜರ ಸಾಲಿಗೆ ಸೇರಿದ ಲಕ್ಷ್ಯ ಸೇನ್

    Live Tv
    [brid partner=56869869 player=32851 video=960834 autoplay=true]

  • ಶಟ್ಲರ್ ಶ್ರೀಕಾಂತ್‍ಗೆ ಕೊಟ್ಟ ಮಾತು ಉಳಿಸಿಕೊಂಡ ಧೋನಿ!

    ಶಟ್ಲರ್ ಶ್ರೀಕಾಂತ್‍ಗೆ ಕೊಟ್ಟ ಮಾತು ಉಳಿಸಿಕೊಂಡ ಧೋನಿ!

    ಹೈದರಾಬಾದ್: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಭಾರತದ ಟಾಪ್ ಶಟ್ಲರ್ ಕಿಡಂಬಿ ಶ್ರೀಕಾಂತ್ ಅವರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದು, ತಮ್ಮ ಹಸ್ತಾಕ್ಷರ ಹೊಂದಿರುವ ಬ್ಯಾಟನ್ನು ಉಡುಗೊರೆಯಾಗಿ ನೀಡಿದ್ದಾರೆ.

    ಧೋನಿ ಹಸ್ತಾಕ್ಷರ ಹೊಂದಿರುವ ಬ್ಯಾಟನ್ನು ಟೀಂ ಇಂಡಿಯಾ ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್‍ಕೆ ಪ್ರಸಾದ್ ಅವರು ಶ್ರೀಕಾಂತ್ ಅವರಿಗೆ ಹಸ್ತಾಂತರಿಸಿದ್ದಾರೆ. ಸದ್ಯ ವಿಶ್ವ ಬ್ಯಾಡ್ಮಿಂಟನ್ ನಲ್ಲಿ ನಾಲ್ಕನೇ ಶ್ರೇಯಾಂಕ ಹೊಂದಿರುವ ಶ್ರೀಕಾಂತ್, ಧೋನಿಯವರ ಕೊಡುಗೆ ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

    ಅಂದಹಾಗೇ ಶ್ರೀಕಾಂತ್ ಈ ಹಿಂದೆ ಧೋನಿಯ ಬಳಿ ಬ್ಯಾಟ್ ಕೊಡುಗೆ ನೀಡುವಂತೆ ಕೇಳಿದ್ದರು. ಅದಕ್ಕೆ ಬ್ಯಾಡ್ಮಿಂಟನ್ ನಲ್ಲಿ ನಂ.1 ಸ್ಥಾನಕ್ಕೆ ತಲುಪಿದರೆ ಗಿಫ್ಟ್ ಕೊಡುವುದಾಗಿ ಧೋನಿ ಭರವಸೆ ನೀಡಿದ್ದರು. ಇದರಂತೆ ಕಳೆದ ಏಪ್ರಿಲ್ ನಲ್ಲಿ ಶ್ರೀಕಾಂತ್ ವಿಶ್ವ ಶ್ರೇಯಾಂಕ ಪಟ್ಟಿಯಲ್ಲಿ ನಂ.1 ಸ್ಥಾನ ಪಡೆದಿದ್ದರು. ಅಲ್ಲದೇ ಭಾರತದಿಂದ ಈ ಸಾಧನೆ ಮಾಡಿದ ಮೊದಲ ಆಟಗಾರ ಎಂಬ ಹೆಗ್ಗಳಿಕೆಯನ್ನು ಪಡೆದಿದ್ದರು. ಸದ್ಯ ಧೋನಿ ತಾವು ಕೊಟ್ಟ ಮಾತಿನಂತೆ ಶ್ರೀಕಾಂತ್ ಅವರಿಗೆ ಗಿಫ್ಟ್ ನೀಡಿದ್ದಾರೆ.

    ಈ ಕುರಿತು ಪ್ರತಿಕ್ರಿಯೆ ನೀಡಿರುವ ಶ್ರೀಕಾಂತ್, ಧೋನಿ ಅವರು ಬ್ಯಾಟ್ ಗಿಫ್ಟ್ ನೀಡಿರುವುದು ಹೆಚ್ಚು ಸಂತಸ ತಂದಿದೆ. ಇದು ತನ್ನ ಜೀವನದ ಅತ್ಯಂತ ಸ್ಮರಣೀಯ ದಿನ ಎಂದು ತಿಳಿಸಿದ್ದಾರೆ.

    ಸದ್ಯ ಹೈದರಾಬಾದ್ ನ ಗೋಪಿಚಂದ್ ಬ್ಯಾಡ್ಮಿಂಟನ್ ಆಕಾಡೆಮಿಯಲ್ಲಿ ತರಬೇತಿಯಲ್ಲಿ ನಿರತರಾಗಿರುವ ಶ್ರೀಕಾಂತ್ ಅವರಿಗೆ ಎಂಎಎಸ್‍ಕೆ ಪ್ರಸಾದ್ ಅವರು ಬ್ಯಾಟ್ ಹಸ್ತಾಂತರಿಸುವ ವೇಳೆ ಬ್ಯಾಡ್ಮಿಂಟನ್ ರಾಷ್ಟ್ರೀಯ ತಂಡದ ಕೋಚ್ ಗೋಪಿಚಂದ್, ಶ್ರೀಕಾಂತ್ ಅವರ ತಂದೆ ಕೆವಿಎಸ್ ಕೃಷ್ಣ ಸೇರಿದಂತೆ ಹಲವರು ಹಾಜರಿದ್ದರು.