Tag: ಕಿತ್ತಾಟ

  • ವಿಚಾರಣೆ ಮಾಡಿ ಅಂದ್ರೆ ಕಿತ್ತಾಡಿಕೊಂಡ ವಿವಿ ಸಮಿತಿ ಸದಸ್ಯರು

    ವಿಚಾರಣೆ ಮಾಡಿ ಅಂದ್ರೆ ಕಿತ್ತಾಡಿಕೊಂಡ ವಿವಿ ಸಮಿತಿ ಸದಸ್ಯರು

    ಹಾವೇರಿ: ಸಹಾಯಕ ಪ್ರಾಧ್ಯಾಪಕಿಯೊಬ್ಬರ ಮೇಲೆ ಮೌಲ್ಯಮಾಪನ ಕುಲಸಚಿವ ಲೈಂಗಿಕ ಕಿರುಕುಳ ಮತ್ತು ಅತ್ಯಾಚಾರಕ್ಕೆ ಯತ್ನಿಸಿದ ಪ್ರಕರಣದ ವಿಚಾರಣೆ ನಡೆಸಬೇಕಿದ್ದ ಮಹಿಳಾ ದೌರ್ಜನ್ಯ ತಡೆ ಸಮಿತಿ ಸದಸ್ಯರು ಕಿತ್ತಾಡಿಕೊಂಡಿರುವ ಘಟನೆ ಜಿಲ್ಲೆಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

    ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗೊಟಗೋಡಿ ಗ್ರಾಮದ ಬಳಿಯ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ. ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿಗೆ ಮೌಲ್ಯಮಾಪನ ಕುಲಸಚಿವ ಡಾ.ಎಂ.ಎನ್.ವೆಂಕಟೇಶ ಲೈಂಗಿಕ ಕಿರುಕುಳ ನೀಡಿ, ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಕುರಿತಾಗಿ ಜನವರಿ 26ರಂದು ವಿಚಾರಣೆ ನಡೆಸಲು ವಿವಿಯ ಮಹಿಳಾ ದೌರ್ಜನ್ಯ ತಡೆ ಸಮಿತಿ ಸದಸ್ಯರು ಸೇರಿದ್ದರು. ಈ ವೇಳೆ ಸಭೆಗೆ ವಿಶ್ವವಿದ್ಯಾಲಯ ಸದಸ್ಯರನ್ನು ಹೊರತುಪಡಿಸಿ ಎನ್.ಜಿ.ಓ ದ ಸದಸ್ಯೆಯೊಬ್ಬರು ಬಂದಿದ್ದರು. ಆಗ ಎನ್.ಜಿ.ಓ ದ ಸದಸ್ಯೆ ಹಾಜರಿಗೆ ಸಮಿತಿ ಸದಸ್ಯರು ಹಾಗೂ ವಿವಿಯ ಸಹಾಯಕ ಪ್ರಾಧ್ಯಾಪಕಿ ಡಾ.ವಿಜಯಲಕ್ಷ್ಮೀ ಆಕ್ಷೇಪ ವ್ಯಕ್ತಪಡಿಸಿ ಪರಸ್ಪರ ಕಿತ್ತಾಟ ಮಾಡಿದ್ದಾರೆ.

    ಸಭೆ ನಡೆಸಲು ಬಂದಿದ್ದ ಸದಸ್ಯರಿಗೆ ಇಂದು ರಜಾ ದಿನ, ಅಧಿಕಾರಿಗಳು ಇದ್ದಾಗ ಬನ್ನಿ ಎಂದು ಸಹಾಯಕ ಕುಲಸಚಿವ ಶಹಜಹಾನ್ ಮುದಕವಿ ಕೊಠಡಿಯಿಂದ ಹೊರಗೆ ಕಳಿಸಿದ್ದರು. ಈ ವೇಳೆ ಡಾ.ವಿಜಯಲಕ್ಷ್ಮಿ ಮತ್ತು ಸಮಿತಿಯ ಸದಸ್ಯರ ನಡುವೆ ಮಾತಿನ ಚಕಮಕಿ ನಡೆದಿದ್ದು, ಪೊಲೀಸ್ ಠಾಣೆಯ ಮೆಟ್ಟಿಲೇರುವವರೆಗೆ ಸದಸ್ಯೆಯರ ಕಿತ್ತಾಟ ಮುಂದುವರಿದಿತ್ತು. ಪ್ರಕರಣದ ಬಗ್ಗೆ ಮಾತನಾಡುವಾಗ ಅವಾಚ್ಯ ಪದಗಳಿಂದ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆಂದು ಡಾ.ವಿಜಯಲಕ್ಷ್ಮಿ ಸಮಿತಿ ಅಧ್ಯಕ್ಷೆ ಡಾ.ಭಾರತಿ ಮರವಂತೆ ಮತ್ತು ಎನ್.ಜಿ.ಓ ದ ಅನಸೂಯಾ ಬಳಿಗಾರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

    ಈ ಬಗ್ಗೆ ಸಮಿತಿ ಸದಸ್ಯರಲ್ಲವಾದರೂ ವಿವಿಯಲ್ಲಿ ಸಭೆಗೆ ಬಂದಿದ್ದಕ್ಕೆ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆಂದು ಸಹಾಯಕ ಪ್ರಾಧ್ಯಾಪಕಿ ಡಾ.ವಿಜಯಲಕ್ಷ್ಮಿ ಮತ್ತು ಸಹಾಯಕ ಕುಲಸಚಿವ ಶಹಜಹಾನ್ ವಿರುದ್ಧ ಪ್ರತಿದೂರನ್ನು ಅನಸೂಯಾ ಅವರು ಶಿಗ್ಗಾಂವಿ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ನೇರಪ್ರಸಾದಲ್ಲೇ ಕೈ ಕೈ ಮಿಲಾಯಿಸಿದ ಬಿಜೆಪಿ ಎಸ್‍ಪಿ ಮುಖಂಡರು

    ನೇರಪ್ರಸಾದಲ್ಲೇ ಕೈ ಕೈ ಮಿಲಾಯಿಸಿದ ಬಿಜೆಪಿ ಎಸ್‍ಪಿ ಮುಖಂಡರು

    ನವದೆಹಲಿ: ಖಾಸಗಿ ನ್ಯೂಸ್ ಚಾನೆಲ್‍ವೊಂದರ ನೇರಪ್ರಸಾರ ಕಾರ್ಯಕ್ರಮದಲ್ಲಿ ರಾಜಕೀಯ ಚರ್ಚೆ ವೇಳೆ ಬಿಜೆಪಿ ಹಾಗೂ ಸಮಾಜವಾದಿ ಪಾರ್ಟಿ(ಎಸ್‍ಪಿ) ನಾಯಕರು ಕಿತ್ತಾಡಿಕೊಂಡಿದ್ದಾರೆ.

    ಶನಿವಾರ ದೆಹಲಿಯ ಖಾಸಗಿ ನ್ಯೂಸ್ ಚಾನೆಲ್ ವೊಂದರ ಸ್ಟುಡಿಯೋದಲ್ಲಿ ಬಿಜೆಪಿ ಹಾಗೂ ಎಸ್‍ಪಿ ನಾಯಕರು ಸೇರಿದಂತೆ ಸಾರ್ವಜನಿಕರೊಂದಿಗೆ ಚರ್ಚಾ ಕಾರ್ಯಕ್ರಮವನ್ನು ನೇರ ಪ್ರಸಾರ ಮಾಡಲಾಗುತ್ತಿತ್ತು. ಈ ವೇಳೆ ಬಿಜೆಪಿಯ ಗೌರವ್ ಭಾಟಿಯಾ ಹಾಗೂ ಎಸ್‍ಪಿಯ ಅನುರಾಗ್ ಭದೋರಿಯಾ ನಡುವೆ ತೀವ್ರ ವಾಕ್ ಸಮರ ಏರ್ಪಟ್ಟಿತ್ತು.

    https://twitter.com/NaaPaak/status/1071439783027589120

    ಈ ವೇಳೆ ಚರ್ಚೆ ವಿಕೋಪಕ್ಕೆ ತಿರುಗಿ ನೇರಪ್ರಸಾರದಲ್ಲಿಯೇ ಅನುರಾಗ್ ಗೌರವ್‍ರನ್ನು ತಳ್ಳಿದ್ದಾರೆ. ನಂತರ ಸಿಟ್ಟಿಗೆದ್ದ ಇಬ್ಬರೂ ಪರಸ್ಪರ ಕೈ ಮಿಲಾಯಿಸಿದ್ದಾರೆ. ಕೂಡಲೇ ಎಚ್ಚೆತ್ತ ಚಾನೆಲ್ ಸಿಬ್ಬಂದಿ ಇಬ್ಬರನ್ನು ಸಮಾಧಾನ ಪಡಿಸಿದ್ದರು.

    ಇಬ್ಬರು ನಾಯಕರು ನೇರಪ್ರಸಾರದಲ್ಲೇ ಕಿತ್ತಾಡಿಕೊಂಡ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕೂಡಲೇ ಗೌರವ್ ಎಸ್‍ಪಿ ಮುಖಂಡ ಅನುರಾಗ್ ಮೇಲೆ ದೂರನ್ನು ನೀಡಿದ್ದಾರೆ. ಘಟನೆ ಸಂಬಂಧ ಪೊಲೀಸರು ಅನುರಾಗ್ ರನ್ನು ವಶಕ್ಕೆಪಡೆದುಕೊಂಡಿದ್ದಾರೆ.

    ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್ ಅಧಿಕಾರಿ ಅಜಯ್ ಪಾಲ್ ಶರ್ಮಾ, ನೋಲ್ಡಾದ ಸೆಕ್ಟರ್ 16-ಎ ದಲ್ಲಿರುವ ಖಾಸಗಿ ಸುದ್ದಿ ವಾಹಿನಿಯ ಸ್ಟುಡಿಯೋದಲ್ಲಿ ರಾಜಕೀಯ ನಾಯಕರು ಜಗಳವಾಡಿಕೊಂಡಿದ್ದರು. ಈ ಸಂಬಂಧ ಬಿಜೆಪಿ ವಕ್ತಾರ ಸೆಕ್ಟರ್ 20 ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಹಿನ್ನೆಲೆ ಅನುರಾಗ್‍ರನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಅಲ್ಲದೇ ಸ್ಟುಡಿಯೋದಲ್ಲಾದ ಜಗಳದ ವಿಡಿಯೋವನ್ನು ನೀಡುವಂತೆ ಸುದ್ದಿವಾಹಿನಿಗೆ ಆದೇಶಿದ್ದೇವೆಂದು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಬಿಬಿಎಂಪಿ ಸಭಾಂಗಣದ ಒಳಗೆಯೇ ಕಿತ್ತಾಡಿಕೊಂಡ ಕಾಂಗ್ರೆಸ್, ಬಿಜೆಪಿ ಸದಸ್ಯರು! ವಿಡಿಯೋ ನೋಡಿ

    ಬಿಬಿಎಂಪಿ ಸಭಾಂಗಣದ ಒಳಗೆಯೇ ಕಿತ್ತಾಡಿಕೊಂಡ ಕಾಂಗ್ರೆಸ್, ಬಿಜೆಪಿ ಸದಸ್ಯರು! ವಿಡಿಯೋ ನೋಡಿ

    ಬೆಂಗಳೂರು: ಬಿಬಿಎಂಪಿ ಮೇಯರ್ ಸ್ಥಾನಕ್ಕೆ ಭಾರೀ ಪೈಪೋಟಿ ನಡೆದಿದ್ದು, ಬಿಬಿಎಂಪಿ ಪದ್ಮನಾಭ ರೆಡ್ಡಿ ಕಚೇರಿ ಮುಂದೆ ಹಾಗೂ ಸಭಾಂಗಣದ ಒಳಗೆ ಸದಸ್ಯರು ಕಿತ್ತಾಡಿದ್ದರು.

    ಕಚೇರಿ ಒಳಗೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಪರಸ್ಪರ ಕಿತ್ತಾಡಿಕೊಳ್ಳುವ ಮೂಲಕ ರೌಡಿಗಳಂತೆ ವರ್ತಿಸಿದ್ದರು. ಸತೀಶ್ ರೆಡ್ಡಿ ಹಾಗೂ ವಿಶ್ವನಾಥ್ ನಡುವೆ ತಳ್ಳಾಟ ಜೋರಾಗಿ ನಡೆದಿದ್ದು, ಬಿಜೆಪಿ ಸದಸ್ಯರನ್ನು ಹೈಜಾಕ್ ಮಾಡಿದ್ದಾರೆ ಎಂದು ಗಂಭೀರವಾದ ಆರೋಪ ಕೇಳಿಬಂದಿದೆ. ಈ ವೇಳೆ ಭೈರತಿ ಸುರೇಶ್ ಹಾಗೂ ಸತೀಶ್ ರೆಡ್ಡಿ ನಡುವೆ ನೂಕಾಟ ಏರ್ಪಟ್ಟಿತ್ತು.

    ಬೈರಸಂದ್ರ ವಾರ್ಡ್ ಕಾರ್ಪೋರೇಟರ್ ನಾಗರಾಜನನ್ನು ಬಲವಂತವಾಗಿ ಬಿಜೆಪಿ ಸದಸ್ಯರು ಎಳೆದುಕೊಂಡು ಹೋಗಿದ್ದರು. ಈ ವೇಳೆ ಶಾಸಕರು ಹಾಗೂ ಬಿಬಿಎಂಪಿ ಸದಸ್ಯರ ನಡುವೆ ಭಾರೀ ಗದ್ದಲ ಏರ್ಪಟ್ಟಿತ್ತು. ಅಲ್ಲದೇ ಸತೀಶ್ ರೆಡ್ಡಿ ಬೆಂಬಲಿಗನ್ನು ಕಾಂಗ್ರೆಸ್ ನಾಯಕರು ಹೈಜಾಕ್ ಮಾಡಿಕೊಂಡಿದ್ದಾರೆ ಅಂತ ತಮ್ಮ ಬೆಂಬಲಿಗನನ್ನು ಹೊರ ತರಲು ಮುಂದಾದ ಸತೀಶ್ ರೆಡ್ಡಿ ವಿರುದ್ಧ ಕಾಂಗ್ರೆಸ್ ಸದಸ್ಯರು ಅಡ್ಡಹಾಕಿ ಗೊಂದಲ ಸೃಷ್ಟಿಸಿದ್ದರು.

    ಈ ಮೊದಲು ಬಿಜೆಪಿ ಜೊತೆ ಇದ್ದ ಪಕ್ಷೇತರ ಶಾಸಕ ಆನಂದ್, ಸಭಾಂಗಣದಲ್ಲಾದ ರಾಜಕೀಯ ಬೆಳವಣಿಗೆಗಳಿಂದ ಕಾಂಗ್ರೆಸ್ ಪಾಲಾಗಿದ್ದರು. ಅಲ್ಲದೇ ತಮ್ಮ ಬೆಂಬಲಿಗನ್ನು ಪಡೆಯಲು ಮುಂದಾದ ಸತೀಶ್ ರೆಡ್ಡಿಯನ್ನು ಶಾಸಕ ಮುನಿರತ್ನ ಹಾಗೂ ಭೈರತಿ ಸುರೇಶ್ ತಡೆದಿದ್ದರು. ಶಾಸಕರು ಹಾಗೂ ಸದಸ್ಯರ ಕಿತ್ತಾಟವನ್ನು ಕಂಡ ಕೇಂದ್ರ ಸಚಿವ ಸದಾನಂದಗೌಡ ಮೂಕ ಪ್ರೇಕ್ಷಕರಂತೆ ನಿಂತಿದ್ದರು.

    ಇವರ ಗಲಾಟೆಯ ನಡುವೆ ಸಭೆಯ ಪ್ರಾರಂಭಕ್ಕೂ ಮುನ್ನ ರಾಷ್ಟ್ರಗೀತೆಯನ್ನು ಹಾಕಲಾಗಿತ್ತು. ಆದರೆ ರಾಷ್ಟ್ರಗೀತೆಯ ನಡುವೆಯೇ ಸದಸ್ಯರು ತಮ್ಮ ಕಿತ್ತಾಟ ಮುಂದುವರಿದಿತ್ತು. ಬಿಬಿಎಂಪಿಯ ಎಲ್ಲಾ ವಿದ್ಯಮಾನಗಳನ್ನು ಸಚಿವ ಶಾಸಕ ರಾಮಲಿಂಗಾರೆಡ್ಡಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕರೆ ಮಾಡಿ ಮಾಹಿತಿ ನೀಡುತ್ತಿದ್ದರು.

    ಸದಸ್ಯರ ಕಿತ್ತಾಟದ ನಡುವೆಯೆ ಚುನಾವಣಾ ಅಧಿಕಾರಿ ಚುನಾವಣೆಯನ್ನು ಘೋಷಣೆ ಮಾಡಿದ್ದಾರೆ. ಅಲ್ಲದೇ ಎಲ್ಲಾ ಸದಸ್ಯರಗೂ ನಿಗಧಿತ ಸ್ಥಳಗಳಲ್ಲಿ ಕುಳಿತುಕೊಳ್ಳಲು ಸೂಚನೆ ನೀಡಿದ್ದರು. ಸದಸ್ಯರ ಹಾಜರಾತಿಯನ್ನು ಪಡೆಯಲು ಅಧಿಕಾರಿಗಳು ಸೂಚಿಸಿದ್ದ ಮೇರೆಗೆ, ಸದಸ್ಯರ ಹಾಜರಾತಿಯನ್ನು ಸಿಬ್ಬಂದಿಗಳು ಪಡೆದುಕೊಳ್ಳುತ್ತಿದ್ದರು. ಸದ್ಯ ಬಿಬಿಎಂಪಿ ಚುನಾವಣೆ ಮುಗಿದಿದ್ದು, ಮೇಯರ್ ಆಗಿ ಗಂಗಾಂಭಿಕೆ ಹಾಗೂ ಉಪ ಮೇಯರ್ ಆಗಿ ರಮೀಳಾ ಉಮಾಶಂಕರ್ ಆಯ್ಕೆಯಾಗಿದ್ದಾರೆ.

     

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಆಪ್ತ ಸ್ನೇಹಿತನಿಗೆ ಸಚಿವ ಸ್ಥಾನ ಸಿಕ್ರೆ ಮೀಸೆ ಬೋಳಿಸ್ತೀನಿ: ಆನಂದ್ ಸಿಂಗ್

    ಆಪ್ತ ಸ್ನೇಹಿತನಿಗೆ ಸಚಿವ ಸ್ಥಾನ ಸಿಕ್ರೆ ಮೀಸೆ ಬೋಳಿಸ್ತೀನಿ: ಆನಂದ್ ಸಿಂಗ್

    ಬಳ್ಳಾರಿ: ಒಂದೆಡೆ ರಾಜ್ಯದಲ್ಲಿ ಅಧಿಕಾರಕ್ಕೇರಲು ಬಿಜೆಪಿ ಹವಣಿಸುತ್ತಿದೆ. ಮತ್ತೊಂದೆಡೆ ಸಚಿವ ಸ್ಥಾನ ಪಡೆಯಲು ಕೈ ಶಾಸಕರು ಲಾಭಿ ನಡೆಸೋ ಮೂಲಕ ಕಿತ್ತಾಟ ಶುರುಮಾಡಿದ್ದಾರೆ. ಈ ಮಧ್ಯೆ ತಮಗೆ ಸಚಿವ ಸ್ಥಾನ ನೀಡದೇ ತಮ್ಮ ಸ್ನೇಹಿತನಿಗೆ ಸಚಿವ ಸ್ಥಾನ ಕೊಟ್ಟರೆ ತಮ್ಮ ಮೀಸೆಯನ್ನೆ ಬೋಳಿಸುತ್ತೀನಿ ಎಂದು ಹೊಸಪೇಟೆ ಶಾಸಕ ಆನಂದ್ ಸಿಂಗ್ ಸವಾಲು ಹಾಕಿದ್ದಾರೆ.

    ಇತ್ತೀಚೆಗೆ ಬೆಂಗಳೂರಿನಲ್ಲಿ ಆಪ್ತರ ಜೊತೆ ಸಭೆ ನಡೆಸಿದ್ದ ಹಾಲಿ ಶಾಸಕ, ಮಾಜಿ ಸಚಿವ ಆನಂದ್ ಸಿಂಗ್, ಕಾಂಗ್ರೆಸ್ ಪಕ್ಷ ಸೇರ್ಪಡೆಗೂ ಮುನ್ನ ಹೈಕಮಾಂಡ್ ನನಗೆ ಸಚಿವ ಸ್ಥಾನದ ಭರವಸೆ ನೀಡಿದೆ. ಇದೀಗ ಬಳ್ಳಾರಿ ಶಾಸಕ ನಾಗೇಂದ್ರ ಅವರಿಗೆ ಜಾರಕಿಹೊಳಿ ಬ್ರದರ್ಸ್ ಸಚಿವ ಸ್ಥಾನ ಕೊಡಿಸಿದರೆ ತಾವೂ ಮೀಸೆ ಬೋಳಿಸುವುದಾಗಿ ಸ್ನೇಹಿತರ ಮುಂದೆ ಸವಾಲು ಎಸೆದಿದ್ದಾರೆ. ಅಲ್ಲದೇ ನಾಗೇಂದ್ರಗೆ ಸಚಿವ ಸ್ಥಾನ ನೀಡಿದರೆ ತಾವೂ ಉಳಿದ ಶಾಸಕರ ಸೇರಿ ಹೈಕಮಾಂಡ್ ಗೆ ತಮ್ಮ ಶಕ್ತಿ ಏನೆಂದು ತೋರಿಸಿ ಕೊಡುವುದಾಗಿ ಆನಂದ್ ಸಿಂಗ್ ಚಾಲೆಂಜ್ ಹಾಕಿದ್ದಾರೆ.

    ಸಚಿವ ಸ್ಥಾನದ ಪ್ರಬಲ ಆಕ್ಷಾಂಕಿಯಾಗಿದ್ದ ಆನಂದ್ ಸಿಂಗ್ ಬಳ್ಳಾರಿಗೆ ಸಚಿವ ಡಿಕೆ ಶಿವಕುಮಾರ್ ನನ್ನು ಸಚಿವರನ್ನಾಗಿ ನೇಮಿಸಿದ್ದಕ್ಕೆ ಅಸಮಾಧಾನಗೊಂಡಿದ್ದರು. ಇದೀಗ ಒಂದು ಕಾಲದಲ್ಲಿ ತಮ್ಮ ಆಪ್ತ ಸ್ನೇಹಿತರಾಗಿದ್ದ ಶಾಸಕ ನಾಗೇಂದ್ರಗೆ ಸಚಿವ ಸ್ಥಾನ ನೀಡಿದರೆ ತಾವೂ ಸುಮ್ಮನಿರಲ್ಲ ಅನ್ನೋ ಸಂದೇಶವನ್ನ ರವಾನಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಪೊಲೀಸ್ ಪೇದೆಗಳು

    ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಪೊಲೀಸ್ ಪೇದೆಗಳು

    ಗದಗ: ಕುಡಿದ ಮತ್ತಿನಲ್ಲಿ ಪೊಲೀಸ್ ಪೇದೆಗಳು ನಡುರಸ್ತೆಯಲ್ಲೇ ಕಿತ್ತಾಡಿಕೊಂಡ ಘಟನೆ ನಗರದ ಬೆಟಗೇರಿ ಬಳಿಯ ಸಹಸ್ರಾರ್ಜುನ ವೃತ್ತದ ಬಳಿ ನಡೆದಿದೆ.

    ನಗರದ ಸಹಸ್ರಾರ್ಜುನ ವೃತ್ತದ ಬಳಿ ಇಬ್ಬರು ಪೊಲೀಸ್ ಪೇದೆಗಳು ಕುಡಿದ ಮತ್ತಿನಲ್ಲೇ ಕಿತ್ತಾಡಿಕೊಂಡು ಸಾರ್ವಜನಿಕರಿಗೆ ಉಚಿತ ಮನರಂಜನೆ ನೀಡಿದ್ದಾರೆ. ಮಹಿಳಾ ಠಾಣೆಯ ಪೇದೆ ಶರಣಪ್ಪ ಬಸಾಪುರ ಹಾಗೂ ಗ್ರಾಮೀಣ ಠಾಣೆಯ ಪೇದೆ ಮಂಜುನಾಥ ಬಾರಕೇರ್ ಕಿತ್ತಾಡಿಕೊಂಡ ಪೊಲೀಸ್ ಪೇದೆಗಳಾಗಿದ್ದಾರೆ.

    ಪೇದೆಗಳು ಕುಡಿದ ಮತ್ತಿನಲ್ಲಿ ನಡುರಸ್ತೆಯಲ್ಲೇ ಕಿತ್ತಾಡಿಕೊಂಡಿರುವುದನ್ನು ಸ್ಥಳೀಯರು ವಿಡಿಯೋ ಮಾಡಿದ್ದಾರೆ. ಬಳಿದ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರಿಂದ ವಿಡಿಯೋ ಸಾಕಷ್ಟು ವೈರಲ್ ಆಗಿದೆ. ಜಾಲತಾಣಿಗರು ಹಾಗೂ ಸಾರ್ವಜನಿಕರು ಪೇದೆಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

    ವಿಡಿಯೋ ವೈರಲ್ ಆದ ಬೆನ್ನಲ್ಲೇ ಕೂಡಲೇ ಎಚ್ಚೆತ್ತ ಜಿಲ್ಲಾವರಿಷ್ಠಾಧಿಕಾರಿ ಸಂತೋಷ ಬಾಬುರವರು, ಪೊಲೀಸ್ ಪೇದೆಗಳ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

  • ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಕುಣಿಗಲ್ ತಹಶೀಲ್ದಾರ್, ಇ.ಒ ನಡುವೆ ಕಿತ್ತಾಟ

    ಸ್ವಾತಂತ್ರ್ಯ ದಿನಾಚರಣೆ ಪೂರ್ವಭಾವಿ ಸಭೆಯಲ್ಲಿ ಕುಣಿಗಲ್ ತಹಶೀಲ್ದಾರ್, ಇ.ಒ ನಡುವೆ ಕಿತ್ತಾಟ

    ತುಮಕೂರು: ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ಆಯೋಜನೆಗೊಂಡಿದ್ದ ಪೂರ್ವಭಾವಿ ಸಭೆಯಲ್ಲಿ ಕುಣಿಗಲ್ ತಹಶೀಲ್ದಾರ್ ಮತ್ತು ಇ.ಒ ಪರಸ್ಪರ ಕಿತ್ತಾಟ ಮಾಡಿಕೊಂಡಿದ್ದಾರೆ.

    ಕುಣಿಗಲ್ ಪಟ್ಟಣದ ಕಂದಾಯ ಭವನದಲ್ಲಿ ಪೂರ್ವಭಾವಿ ಸಭೆ ನಡೆಯುತಿತ್ತು. ಆ ವೇಳೆ ಕುಣಿಗಲ್ ತಹಶಿಲ್ದಾರ್ ನಾಗರಾಜು ಹಾಗೂ ಇ.ಒ. ನಾರಾಯಣಸ್ವಾಮಿ ನಡುವೆ ಕಿತ್ತಾಟ ನಡೆದಿದೆ.

    ಸಭೆ ನಡೆಯುತ್ತಿದ್ದರೂ ಈ ಸಭೆಗೂ ನನಗೂ ಸಂಬಂಧವೇ ಇಲ್ಲ ಎನ್ನುವ ಹಾಗೆ ಇ.ಒ.ನಾರಾಯಣಸ್ವಾಮಿ ಕಡತಗಳಿಗೆ ಸಹಿ ಹಾಕುವುದರಲ್ಲಿ ಮಗ್ನರಾಗಿದ್ದರು. ಈ ವರ್ತನೆಗೆ ಸಿಡಿಮಿಡಿಗೊಂಡ ತಹಶೀಲ್ದಾರ್ ನಾಗರಾಜು, ಈ ಬಾರಿ ಸ್ವಾತಂತ್ರ್ಯ ದಿನಾಚರಣೆಯ ಎಲ್ಲ ಜವಾಬ್ದಾರಿ ಇ.ಒ.ಸಾಹೇಬ್ರು ವಹಿಸಿಕೊಳ್ಳಬೇಕು ಎಂದಿದ್ದಾರೆ. ಅದಕ್ಕೆ ಇ.ಒ ನಾರಾಯಣಸ್ವಾಮಿ ನಾನೇಕೆ ಮಾಡಲಿ, ನೀವು ಸಮಿತಿ ಅಧ್ಯಕ್ಷರು ನೀವೇ ಜವಾಬ್ದಾರಿ ನಿರ್ವಹಿಸಿ ಎಂದು ಪ್ರತ್ಯುತ್ತರ ನೀಡಿದ್ದಾರೆ.

    ಪರಸ್ಪರ ಇಬ್ಬರ ನಡುವೆ ಮಾತಿನ ಚಕಮಕಿ ಉಂಟಾಗಿ ಗೊಂದಲ ವಾತಾವರಣ ಉಂಟಾಗಿದೆ. ಸಿಬ್ಬಂದಿ ಇಬ್ಬರ ಕಿತ್ತಾಟ ಕಂಡು ತಬ್ಬಿಬ್ಬಾಗಿದ್ದಾರೆ. ಬಳಿಕ ಮಧ್ಯಪ್ರವೇಶಿಸಿದ ಸಂಘಟನೆಗಳ ಮುಖಂಡರು ಇಬ್ಬರೂ ಅಧಿಕಾರಿಗಳನ್ನ ತರಾಟೆ ತೆಗೆದುಕೊಂಡು ಸಭೆ ಸುಗಮವಾಗಿ ಸಾಗಲು ಅನುವು ಮಾಡಿಕೊಟ್ಟರು.