Tag: ಕಿತ್ತೂರು ರಾಣಿ ಚೆನ್ನಮ್ಮ

  • ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ

    ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಜಯಂತ್ಯೋತ್ಸವ ಆಚರಣೆ

    – ಚೆನ್ಮಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಿ: ಸೋಮಣ್ಣ

    ನವದೆಹಲಿ: ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮನವರ (Kittur Rani Chennamma) 201ನೇ ವಿಜಯೋತ್ಸವ ಹಾಗೂ ಜನ್ಮದಿನೋತ್ಸವವನ್ನು ಸಂಸತ್ ಆವರಣದಲ್ಲಿ ಆಚರಿಸಲಾಯಿತು. ಸಂಸತ್ (Parliament) ಆವರಣದ ಪ್ರೇರಣಾ ಸ್ಥಳದಲ್ಲಿರುವ ಚೆನ್ನಮ್ಮ ಪ್ರತಿಮೆಗೆ ತುಮಕೂರು ಲೋಕಸಭಾ ಸದಸ್ಯ ಹಾಗೂ ಕೇಂದ್ರ ಸಚಿವ ವಿ. ಸೋಮಣ್ಣ (V Somanna) ಪುಷ್ಪನಮನ ಸಲ್ಲಿಸಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಸೋಮಣ್ಣ, ರಾಣಿ ಚೆನ್ನಮ್ಮನವರ ಪುತ್ಥಳಿಯನ್ನು ಸಂಸತ್ತಿನ ಆವರಣದಲ್ಲಿ 2007ರಲ್ಲಿ ಸ್ಥಾಪಿಸಲಾಗಿದೆ. ಕಳೆದ ವರ್ಷ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಬೆಂಬಲ ಮತ್ತು ಲೋಕಸಭಾ ಅಧ್ಯಕ್ಷ ಓಂ ಬಿರ್ಲಾ ಅವರ ಸಹಕಾರದಿಂದ 200ನೇ ರಾಣಿ ಚೆನ್ನಮ್ಮನವರ ವಿಜಯೋತ್ಸವ ಮತ್ತು ಜನ್ಮದಿನೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಗಿತ್ತು. ಅದೇ ರೀತಿ ಈ ವರ್ಷವೂ ಸಹ ರಾಣಿ ಚೆನ್ಮಮ್ಮನವರ 201ನೇ ವಿಜಯೋತ್ಸವ ಮತ್ತು ಜನ್ಮದಿನೋತ್ಸವ ಆಚರಣೆಯನ್ನು ಸಂಸತ್ತಿನ ಅವರಣದ ಪ್ರೇರಣಾ ಸ್ಥಳದಲ್ಲಿ ಮಾಡಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: 17 ವರ್ಷಗಳ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಕೆಟ್ಟ ಸಾಧನೆ ಬರೆದ ಕೊಹ್ಲಿ

    ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕರ್ನಾಟಕದ ಸಂಸ್ಕೃತಿ, ಈ ದೇಶಕ್ಕೆ ಕೊಡುಗೆ ನೀಡಿದ ಕನ್ನಡದ ಮಹನೀಯರನ್ನು, ಸ್ವಾತಂತ್ರ‍್ಯ ಹೋರಾಟಗಾರರನ್ನು, ವೀರವನಿತೆಯರನ್ನು ನೆನಪಿಸುವ ಮತ್ತು ಅವರನ್ನು ಗೌರವಿಸುವ ಕೆಲಸ ಮಾಡುವಲ್ಲಿ ಸದಾ ಸನ್ನದ್ಧವಾಗಿದೆ. ಇದಕ್ಕೆ ಪೂರಕವಾಗಿಯೇ ನಾಳೆ ಸಿರಿಪೋರ್ಟ ಆಡಿಟೋರಿಯಂನಲ್ಲಿ ನಡೆಯಲಿರುವ ಕಿತ್ತೂರು ರಾಣಿ ಚೆನ್ನಮ್ಮನವರ 201ನೇ ವಿಜಯೋತ್ಸವ ಕಾರ್ಯಕ್ರಮದಲ್ಲಿ ಕೇಂದ್ರ ಸರ್ಕಾರದ ಸಂಸ್ಕೃತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರು ವೀರರಾಣಿ ಚೆನ್ಮಮ್ಮನವರ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ ಎಂದರು. ಇದನ್ನೂ ಓದಿ: ಸಾಲುಸಾಲು ರಜೆ ಮುಗಿಸಿ ಬೆಂಗಳೂರಿಗೆ ವಾಪಸ್ – ಮೆಜೆಸ್ಟಿಕ್ ಮೆಟ್ರೋ ನಿಲ್ದಾಣದಲ್ಲಿ ಪ್ರಯಾಣಿಕರ ದಟ್ಟಣೆ

    ಸ್ವಾತಂತ್ರ‍್ಯ ಹೋರಾಟಗಾರ್ತಿ ರಾಣಿ ಚೆನ್ನಮ್ಮನವರ ಸಾಧನೆ ಮತ್ತು ಕಿತ್ತೂರಿನ ಇತಿಹಾಸವನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಕೆಲಸವನ್ನು ಕರ್ನಾಟಕ ರಾಜ್ಯ ಸರ್ಕಾರ ಹೆಚ್ಚಿನ ಮುತುವರ್ಜಿಯಿಂದ ನಿರ್ವಹಿಸಬೇಕಾದ ಅವಶ್ಯಕತೆ ಇದೆ. ಇದಕ್ಕೆ ಪೂರಕವಾಗಿ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಕಿತ್ತೂರು ಸಂಸ್ಥಾನದ ಕೋಟೆ ಕೊತ್ತಲೆಗಳಲ್ಲಿ ಸಮರ್ಪಕ ನಿರ್ವಹಣೆ ಇಲ್ಲದಿರುವುದನ್ನು ಸಾರ್ವಜನಿಕರು ಮನಗಂಡಿದ್ದು, ಈ ಬಗ್ಗೆ ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಹೆಚ್ಚಿನ ಅಧಿಕಾರ ನೀಡಬೇಕಾಗಿದೆ. ಬೈಲಹೊಂಗಲದಲ್ಲಿರುವ ರಾಣಿ ಚೆನ್ಮಮ್ಮನವರ ಸಮಾಧಿಯನ್ನು ಅಭಿವೃದ್ಧಿಗೊಳಿಸಿ, ಅದನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಬೇಕು. ವೀರ ರಾಣಿ ಚೆನ್ಮಮ್ಮನವರ ಜೀವನ ಮತ್ತು ಸಾಧನೆ ಕುರಿತು ಭಾರತೀಯ ಎಲ್ಲಾ ಭಾಷೆಗಳಲ್ಲೂ ಪುಸ್ತಕವನ್ನು ಹೊರತರಬೇಕೆಂದು ಮನವಿ ಮಾಡಿದೆ ಎಂದು ನುಡಿದರು. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಚುರುಕು – ನದಿ ಪಾತ್ರದ ಜನರಿಗೆ ಅಲರ್ಟ್

    ಈ ಸಂದರ್ಭದಲ್ಲಿ ಬೆಳಗಾವಿ ಸಂಸದರು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ರಾಜ್ಯ ಸಭಾ ಸದಸ್ಯೆ ಡಾ. ಸುಧಾಮೂರ್ತಿಯವರು, ಜಯಮೃತ್ಯುಂಜಯ ಸ್ವಾಮಿಜೀ, ಶ್ರೀ ವಚನಾನಂದ ಸ್ವಾಮಿಗಳು, ಜನಪ್ರತಿನಿಧಿಗಳು, ದೆಹಲಿ ಕನ್ನಡ ಸಂಘದ ಅಧ್ಯಕ್ಷ ಸಿಎಂ ನಾಗರಾಜ್ ಹಾಗೂ ದೆಹಲಿ ಕನ್ನಡಿಗರು ಉಪಸ್ಥಿತರಿದ್ದರು. ಇದನ್ನೂ ಓದಿ: ನಮ್ದೇನಿದ್ದರೂ 2028ಕ್ಕೆ ಸಿಎಂ ಕ್ಲೈಮ್‌, ಯತೀಂದ್ರ ಹೇಳಿಕೆ ಅದು ವೈಯಕ್ತಿಕ: ಸತೀಶ್‌ ಜಾರಕಿಹೊಳಿ

  • ಗುರುವಾರದಿಂದ ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನ – ಹೂವಲ್ಲೇ ಕಿತ್ತೂರಿನ ಕೋಟೆ ಸೃಷ್ಟಿ

    ಗುರುವಾರದಿಂದ ಲಾಲ್‌ಬಾಗ್‌ನಲ್ಲಿ 218ನೇ ಫಲಪುಷ್ಪ ಪ್ರದರ್ಶನ – ಹೂವಲ್ಲೇ ಕಿತ್ತೂರಿನ ಕೋಟೆ ಸೃಷ್ಟಿ

    -ಆ.7ರಿಂದ 18ರವರೆಗೆ ನಡೆಯಲಿರುವ ಪ್ರದರ್ಶನ

    ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಗುರುವಾರದಿಂದ (ಆ.7) ನಗರದ ಲಾಲ್‌ಬಾಗ್‌ನಲ್ಲಿ (Lalbhag) 218ನೇ ಫಲಪುಷ್ಪ ಪ್ರದರ್ಶನ ನಡೆಯಲಿದೆ.

    ನಾಳೆ (ಗುರುವಾರ) ಬೆಳಿಗ್ಗೆ 10 ಗಂಟೆಗೆ ಸಿಎಂ ಸಿದ್ದರಾಮಯ್ಯ (CM Siddaramaiah) 218ನೇ ಫಲಪುಷ್ಪ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಪ್ರದರ್ಶನ ಸಂಪೂರ್ಣವಾಗಿ ಕಿತ್ತೂರು ರಾಣಿ ಚೆನ್ನಮ್ಮನ (Kitturu Chennamma) ಆಸ್ಥಾನದ ಪರಿಕಲ್ಪನೆಯಲ್ಲಿ ಆಯೋಜನೆಯಾಗಲಿದೆ.ಇದನ್ನೂ ಓದಿ: ಗಂಗೆ ನಿಮ್ಮ ಪಾದವನ್ನು ಸ್ಪರ್ಶಿಸುತ್ತಿದ್ದಾಳೆ, ಇದು ನಿಮ್ಮನ್ನು ನೇರವಾಗಿ ಸ್ವರ್ಗಕ್ಕೆ ಕರೆದೊಯ್ಯುತ್ತೆ – ಯುಪಿ ಸಚಿವ ವಿವಾದಾತ್ಮಕ ಹೇಳಿಕೆ

    ಆಂಧ್ರಪ್ರದೇಶ, ತಮಿಳುನಾಡು, ಪುಣೆ, ಕೇರಳದಿಂದ ಹೂವುಗಳಿಂದ ತರಿಸಲಾಗಿದ್ದು, 18 ಅಡಿ ಎತ್ತರ ಮತ್ತು 32 ಅಡಿ ಅಗಲದ ಕಿತ್ತೂರು ಕೋಟೆ, ಕಿತ್ತೂರು ರಾಣಿ ಚೆನ್ನಮ್ಮನವರ ಐಕ್ಯ ಮಂಟಪಗಳು ಸಿದ್ಧಗೊಳ್ಳುತ್ತಿವೆ. 600ಕ್ಕೂ ಹೆಚ್ಚು ಕಾರ್ಮಿಕರು, ಸಿಬ್ಬಂದಿ ಕೆಲಸ ಮಾಡುತ್ತಿದ್ದು, ಭರ್ಜರಿಯಿಂದ ತಯಾರಿ ನಡೆಯುತ್ತಿದೆ.

    ಇನ್ನೂ ಪ್ರದರ್ಶನದಲ್ಲಿ ಹೈಡ್ರಾಂಜಿ, ಕ್ಯಾಲಲಿಲಿ, ಆರ್ಕಿಟ್ಸ್, ಟ್ಯೂಬ್ರೆಟ್ಸ್ ಬೆಗೆನಿಯಾ ಸೇರಿದಂತೆ 105ಕ್ಕೂ ವಿಶೇಷವಾದ ವಾರ್ಷಿಕ ಹೂವುಗಳ ಬಳಕೆ ಮಾಡಲಾಗಿದೆ. ಆ.7ರಿಂದ 18ರವರೆಗೆ ಫಲಪುಷ್ಪ ಪ್ರದರ್ಶನ ನಡೆಯಲಿದ್ದು, ಸಾಮಾನ್ಯ ದಿನಗಳಲ್ಲಿ ವಯಸ್ಕರಿಗೆ 80 ರೂ. ಹಾಗೂ ರಜಾ ದಿನಗಳಲ್ಲಿ ವಯಸ್ಕರಿಗೆ 100 ರೂ., ಮಕ್ಕಳಿಗೆ 30 ರೂ. ದರ ನಿಗದಿ ಮಾಡಲಾಗಿದೆ. ಶಾಲಾ ಮಕ್ಕಳಿಗೆ ಉಚಿತ ಪ್ರವೇಶವಿರುತ್ತದೆ.ಇದನ್ನೂ ಓದಿ: ಕಾಂಗ್ರೆಸ್ ಸಂಸದೆ ಸರ ಕಳವು ಪ್ರಕರಣ – ಆರೋಪಿಯನ್ನು ಬಂಧಿಸಿದ ದೆಹಲಿ ಪೊಲೀಸ್

  • ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷ – ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ

    ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷ – ಸಂಸತ್ ಆವರಣದಲ್ಲಿ ರಾಣಿ ಚೆನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ

    ನವದೆಹಲಿ: ಬ್ರಿಟಿಷರ ವಿರುದ್ಧ ಕಿತ್ತೂರು ರಾಣಿ ಚೆನ್ನಮ್ಮ (Kittur Rani Chennamma) ನಡೆಸಿದ ಹೋರಾಟದ ವಿಜಯೋತ್ಸವಕ್ಕೆ 200 ವರ್ಷ ಪೂರ್ಣಗೊಂಡ ಹಿನ್ನೆಲೆ ಸಂಸತ್ ಆವರಣದಲ್ಲಿರುವ ರಾಣಿ ಚೆನ್ನಮ್ಮ ಪ್ರತಿಮೆಗೆ ಲೋಕಸಭೆ ಸ್ಪೀಕರ್ ಓಂಬಿರ್ಲಾ (Om Birla) ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು.

    ಐತಿಹಾಸಿಕ ದಿನದ ಹಿನ್ನೆಲೆ ಸಂಸತ್ ಆವರಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಗಣ್ಯರು ಮತ್ತು ದೆಹಲಿ ಕನ್ನಡಿಗರು ಭಾಗಿಯಾಗಿ ರಾಣಿ ಚೆನ್ನಮ್ಮ ಪ್ರತಿಮೆಗೆ ಪುಷ್ಪಾರ್ಚನೆ ಮಾಡಿದರು.ಇದನ್ನೂ ಓದಿ: ವಯನಾಡ್ ಉಪಚುನಾವಣೆ | ನಾಮಪತ್ರ ಸಲ್ಲಿಸಿದ ಪ್ರಿಯಾಂಕಾ ಗಾಂಧಿ

    ಕಾರ್ಯಕ್ರಮದಲ್ಲಿ ಮಾತನಾಡಿದ ವಿ.ಸೋಮಣ್ಣ (V.Sommanna), ಈ ದೇಶದ ಸ್ವತಂತ್ರ ಪೂರ್ವ ಇತಿಹಾಸದಲ್ಲಿ ಬ್ರಿಟಿಷರ ವಿರುದ್ಧ ಬಂಡಾಯ ಸಾರಿದ ಮೊದಲ ಧೀರ ಮಹಿಳೆ ಚೆನ್ನಮ್ಮ, ಬ್ರಿಟಿಷರನ್ನು ಸೋಲಿಸಿದ ದಿನಕ್ಕೆ 200 ವರ್ಷಗಳಾಗಿದೆ. ಬ್ರಿಟಿಷರ ವಿರುದ್ಧ ಹೋರಾಟದ ಮೂಲಕ ದೇಶದಲ್ಲಿ ಸಂಚಲನ ಮೂಡಿಸಿ, ಸ್ವಾತಂತ್ರ‍್ಯ ಹೋರಾಟಕ್ಕೆ ಪ್ರೇರಣೆ ನೀಡಿದರು. ಕಿತ್ತೂರು ರಾಣಿ ಚೆನ್ನಮ್ಮ ಅವರ ಇತಿಹಾಸವನ್ನು ದೇಶಕ್ಕೆ ಸಮರ್ಪಣೆ ಮಾಡುವ ಪ್ರಯತ್ನವೂ ಮಾಡಿದೆ ಎಂದು ಹೇಳಿದರು.

    ಜಯಮೃತಂಜ್ಯಯ ಸ್ವಾಮೀಜಿ ಮಾತನಾಡಿ, ಕಿತ್ತೂರು ರಾಣಿ ಚೆನ್ನಮ್ಮ ಭಾರತ ಸ್ವಾತಂತ್ರ‍್ಯ ಸಂಗ್ರಾಮದ ಬೆಳ್ಳಿ ಚುಕ್ಕಿ, ಮೊದಲ ಬಾರಿಗೆ ಸಂಸತ್‌ನಲ್ಲಿ ಈ ಕಾರ್ಯಕ್ರಮ ನಡೆಯುತ್ತಿರುವುದು ಸಂತೋಷಗೊಳಿಸಿದೆ. ಈ ವರ್ಷ ಮಾಡಿದರೆ ಸಾಲದು ಪ್ರತಿ ವರ್ಷವೂ ಈ ಕಾರ್ಯಕ್ರಮ ಸಂಸತ್‌ನಲ್ಲಿ ನಡೆಯಬೇಕು. ಈ ಮೂಲಕ ಉತ್ತರ ಭಾರತದ ಜನರಿಗೆ ಝಾನ್ಸಿ ರಾಣಿ ಲಕ್ಷ್ಮೀಬಾಯಿ ರೀತಿಯಲ್ಲಿ ರಾಣಿ ಚೆನ್ನಮ್ಮ ಅವರ ಶೌರ್ಯ ತಿಳಿಯಬೇಕಿದೆ ಎಂದರು.

    ಪರಿಷತ್ ಸದಸ್ಯ ಅರವಿಂದ್ ಬೆಲ್ಲದ್ (Arvind Bellad) ಮಾತನಾಡಿ, ಎರಡು ನೂರು ವರ್ಷಗಳ ಹಿಂದೆ ಇದೇ ದಿನ ಠಾಕ್ರೆಯನ್ನು ಚೆನ್ನಮ್ಮ ಸೋಲಿಸಿ ಭಾರತ ದೇಶದ ಸಂಸ್ಕೃತಿಯನ್ನು ಎತ್ತಿ ಹಿಡಿದರು. ಚೆನ್ನಮ್ಮನ ಗಂಡ ತೀರಿದ ಬಳಿಕ ಮಗುವನ್ನು ದತ್ತು ಪಡೆಯಲು ಸಾಧ್ಯವಿಲ್ಲ ಎಂದು ಬ್ರಿಟಿಷರು ಹೇಳಿದಾಗ ಅವರು ವಿರುದ್ಧ ಯುದ್ಧ ಸಾರಿದರು. ಇಂದು ಸಂಸತ್‌ನಲ್ಲಿ ಸನ್ಮಾನ ಮಾಡಲು ಅವಕಾಶ ನೀಡಿರುವ ಕಾರಣ ನಾನು ಸ್ಪೀಕರ್ ಓಂಬಿರ್ಲಾ ಅವರಿಗೆ ಧನ್ಯವಾದ ಹೇಳುತ್ತೇನೆ ಎಂದರು.

    ಕಾರ್ಯಕ್ರಮದಲ್ಲಿ ಕೂಡಲ ಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಹರಿಹರದ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ವಿ.ಸೋಮಣ್ಣ, ಶಾಸಕರಾದ ಬಸನಗೌಡ ಪಾಟೀಲ್ ಯತ್ನಾಳ್, ಅರವಿಂದ್ ಬೆಲ್ಲದ್, ರಾಜ್ಯಸಭೆ ಸಂಸದ ಈರಣ್ಣ ಕಡಾಡಿ ಭಾಗಿಯಾಗಿದ್ದರು.ಇದನ್ನೂ ಓದಿ: ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ- ಅಕ್ರಮ ಕಟ್ಟಡ ಮಾಲಿಕರಿಗೆ ಶಾಕ್ ನೀಡಿದ ಅಧಿಕಾರಿಗಳು

  • ರಾಣಿ ಚೆನ್ನಮ್ಮ ವಿಜಯೋತ್ಸವಕ್ಕೆ 200 ವರ್ಷ – ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಮನವಿ

    ರಾಣಿ ಚೆನ್ನಮ್ಮ ವಿಜಯೋತ್ಸವಕ್ಕೆ 200 ವರ್ಷ – ಬೆಳಗಾವಿ ವಿಮಾನ ನಿಲ್ದಾಣಕ್ಕೆ ಹೆಸರಿಡುವಂತೆ ಮನವಿ

    – ಜೊತೆಗೆ ಅಂಚೆ ಚೀಟಿ ಬಿಡುಗಡೆಗೆ ಮನವಿ

    ನವದೆಹಲಿ: ಬ್ರಿಟಿಷರ ವಿರುದ್ಧ ಹೋರಾಡಿ ಜಯ ಸಾಧಿಸಿದ ಕಿತ್ತೂರು ರಾಣಿ ಚೆನ್ನಮ್ಮ (Kitturu Rani Chennamma) ವಿಜಯೋತ್ಸವಕ್ಕೆ 200 ವರ್ಷ ಪೂರ್ಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿ ವಿಮಾನ ನಿಲ್ದಾಣಕ್ಕೆ (Belagavi Airport) ರಾಣಿ ಚೆನ್ನಮ್ಮ ಹೆಸರಿಡಬೇಕು ಹಾಗೂ ಅಂಚೆ ಚೀಟಿ ಬಿಡುಗಡೆ ಮಾಡಬೇಕು ಎಂದು ಕಿತ್ತೂರು ಕರ್ನಾಟಕದ ನಾಯಕರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

    ದೆಹಲಿಯಲ್ಲಿ (Delhi) ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ, ಕಿತ್ತೂರು ರಾಣಿ ಚೆನ್ನಮ್ಮ ಅವರ ವಿಜಯೋತ್ಸವಕ್ಕೆ 200 ವರ್ಷ ಪೂರ್ಣವಾಗಲಿದೆ. ಸ್ವಾತಂತ್ರ‍್ಯ ಸಂಗ್ರಾಮದಲ್ಲಿ ವೀರ ಮಹಿಳೆಯಾಗಿ ಬ್ರಿಟಿಷರ ವಿರುದ್ಧ ಯುದ್ಧ ಸಾರಿ ಗೆಲುವು ಸಾಧಿಸಿದರು. ಅವರ ತ್ಯಾಗ, ಬಲಿದಾನವನ್ನು ನಾವು ಮರೆಯಬಾರದು. ಇದಕ್ಕಾಗಿ ಅ.23ರಂದು ವಿಜಯೋತ್ಸವದ ದಿನವಾಗಿ ಆಚರಿಸಿಕೊಂಡು ಬರುತ್ತಿದ್ದೇವೆ.ಇದನ್ನೂ ಓದಿ: ಹಾಸನ | ಆಹಾರ ಅರಸಿ ಬಂದಿದ್ದ ಕಾಡಾನೆ ವಿದ್ಯುತ್ ಸ್ಪರ್ಶದಿಂದ ಸಾವು

    ಈ ಬಾರಿ ಅ.23ಕ್ಕೆ 200 ವರ್ಷ ಪೂರ್ಣವಾಗುತ್ತಿರುವ ಹಿನ್ನೆಲೆ ವಿಶೇಷವಾಗಿ ಆಚರಿಸಲು ಚಿಂತನೆ ನಡೆಸಿದ್ದೇವೆ. ಬೆಳಗಾವಿ ವಿಮಾನ ನಿಲ್ದಾಣಕ್ಕೆ ರಾಣಿ ಚೆನ್ನಮ್ಮನ ಹೆಸರಿಡಬೇಕು ಹಾಗೂ ವಿಮಾನ ನಿಲ್ದಾಣದ ಆವರಣದಲ್ಲಿ ಅವರ ಮೂರ್ತಿ ಸ್ಥಾಪಿಸಬೇಕು. ಜೊತೆಗೆ ರಾಣಿ ಚೆನ್ನಮ್ಮನ ಒಂದು ಅಂಚೆ ಚೀಟಿ ಬಿಡುಗಡೆ ಮಾಡಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ನೇತೃತ್ವದಲ್ಲಿ ಕಿತ್ತೂರು ಕರ್ನಾಟಕದ ಜನಪ್ರತಿನಿಧಿಗಳು, ಮುಖಂಡರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದರು.

    ರಾಣಿ ಚೆನ್ನಮ್ಮನ ಬಲಗೈ ಬಂಟ ಸಂಗೊಳ್ಳಿ ರಾಯಣ್ಣನ (Sangolli Rayanna) ಹೆಸರನ್ನು ಹುಬ್ಬಳ್ಳಿ (Hubballi) ವಿಮಾನ ನಿಲ್ದಾಣಕ್ಕೆ, ಜಗಜ್ಯೋತಿ ಬಸವಣ್ಣನ ಹೆಸರನ್ನು ವಿಜಯಪುರಕ್ಕೆ (Vijayapura), ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ಶಿವಮೊಗ್ಗ (Shivamogga) ವಿಮಾನ ನಿಲ್ದಾಣಕ್ಕೆ ಇಡಲು ಮನವಿ ಮಾಡಿದ್ದೇವೆ ಎಂದು ಹೇಳಿದರು.

    ಬೆಳಗಾವಿ ಜಿಲ್ಲೆಯಲ್ಲಿ ಸಾಕಷ್ಟು ಕೈಗಾರಿಕೆ, ಶಿಕ್ಷಣ ಸಂಸ್ಥೆಗಳು, ಕೇಂದ್ರ ಸರ್ಕಾರದ ವಿವಿಧ ತರಬೇತಿ ಕೇಂದ್ರಗಳಿದ್ದು, ಆರ್ಥಿಕ ನಗರವಾಗಿ ಬೆಳೆಯುತ್ತಿದೆ. ಬೆಳಗಾವಿ ವಿಮಾನ ನಿಲ್ದಾಣದಿಂದ ಇನ್ನಷ್ಟು ಸಂಪರ್ಕ ಹೆಚ್ಚಿಸಬೇಕಿದೆ. ಹೀಗಾಗಿ ಇನ್ನು ಅನೇಕ ನಗರಗಳಿಗೆ ವಿಮಾನ ಸಂಪರ್ಕ ಬೇಕು ಎಂದು ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರ ಶೀಘ್ರದಲ್ಲಿ ನಮ್ಮ ಮನವಿಗೆ ಸ್ಪಂದಿಸುವ ಭರವಸೆ ನೀಡಿದೆ ಎಂದು ತಿಳಿಸಿದರು.ಇದನ್ನೂ ಓದಿ: ಶಿಗ್ಗಾಂವಿ ಕ್ಷೇತ್ರಕ್ಕೆ ನಾನು ಆಕಾಂಕ್ಷಿಯಲ್ಲ – ಮುರುಗೇಶ್ ನಿರಾಣಿ

  • ಕಿತ್ತೂರು ಉತ್ಸವ ಆಮಂತ್ರಣ ಪತ್ರಿಕೆಯಲ್ಲಿ ರಾಯಣ್ಣನ ಭಾವಚಿತ್ರ ಮಾಯ- ಅಭಿಮಾನಿಗಳು ಗರಂ

    ಕಿತ್ತೂರು ಉತ್ಸವ ಆಮಂತ್ರಣ ಪತ್ರಿಕೆಯಲ್ಲಿ ರಾಯಣ್ಣನ ಭಾವಚಿತ್ರ ಮಾಯ- ಅಭಿಮಾನಿಗಳು ಗರಂ

    ಬೆಳಗಾವಿ: ಕಿತ್ತೂರು ಉತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ (Sangolli Rayanna) ಭಾವಚಿತ್ರವೇ ಮಾಯವಾಗಿದ್ದು, ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟ ರಾಯಣ್ಣನ ಫೋಟೋ (Photo) ಹಾಕದಿದ್ದಕ್ಕೆ ರಾಯಣ್ಣನ ಅಭಿಮಾನಿಗಳು ಅಸಮಾಧಾನ ಹೊರಹಾಕಿದರು.

    ಬೆಳಗಾವಿ ಜಿಲ್ಲೆಯ ಕಿತ್ತೂರು ವೀರರಾಣಿ ಚೆನ್ನಮ್ಮನ (Kittur Rani Chennamma) ಉತ್ಸವವನ್ನು ಇದೇ ಮೊದಲ ಬಾರಿಗೆ ಸರ್ಕಾರ ರಾಜ್ಯಮಟ್ಟದ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಭರದ ಸಿದ್ಧತೆ ಮಾಡಿಕೊಂಡಿದೆ. ಆದರೆ, ರಾಜ್ಯಮಟ್ಟದ ಕಿತ್ತೂರು ಉತ್ಸವ ಆಮಂತ್ರಣ ಪತ್ರಿಕೆಯಲ್ಲಿ ಸಾಲು ಸಾಲು ಅದ್ವಾನ ಆರೋಪ ಕೇಳಿಬಂದಿದೆ.

    ಕಿತ್ತೂರು ಉತ್ಸವದ ಆಮಂತ್ರಣ ಪತ್ರಿಕೆಯಲ್ಲಿ ಕಿತ್ತೂರು ರಾಣಿ ಚೆನ್ನಮ್ಮ ಬಲಗೈ ಬಂಟ ರಾಯಣ್ಣನ ಫೋಟೋ ಹಾಕದಿದ್ದಕ್ಕೆ ಬೆಳಗಾವಿ (Belagavi) ಜಿಲ್ಲಾಡಳಿತದ ವಿರುದ್ಧ ರಾಯಣ್ಣನ ಅಭಿಮಾನಿಗಳು ಅಸಮಾಧಾನ ಹೊರಹಾಕಿದ್ದಾರೆ. ಅ. 23 ರಿಂದ 3 ದಿನಗಳ ಕಾಲ ರಾಜ್ಯಮಟ್ಟದ ಕಿತ್ತೂರು ಉತ್ಸವ ನಡೆಯುತ್ತಿದ್ದು, ಇದೇ ಮೊದಲ ಬಾರಿಗೆ ಕಿತ್ತೂರು ಉತ್ಸವ ರಾಜ್ಯಮಟ್ಟದ ಉತ್ಸವವಾಗಿ ಪರಿವರ್ತನೆಗೊಂಡಿದೆ. ಆದರೆ, ಆಮಂತ್ರಣ ಪತ್ರಿಕೆಯಲ್ಲಿ ಸ್ಥಳೀಯ ಶಾಸಕ ಮಹಾಂತೇಶ್ ದೊಡ್ಡಗೌಡರ ಪತ್ನಿಯ ಹೆಸರು ಆಹ್ವಾನ ಪತ್ರಿಕೆಯಲ್ಲಿ ಹಾಕಿದ್ದಾರೆ.

    ಮಹಿಳಾ ಉತ್ಸವ ಉದ್ಘಾಟನಾ ಸಮಾರಂಭದಲ್ಲಿ ಗೌರವ ಉಪಸ್ಥಿತಿಯಾಗಿ ಶಾಸಕ ಮಹಾಂತೇಶ್ ದೊಡ್ಡಗೌಡರ ಪತ್ನಿ ಮಂಜುಳಾ ದೊಡ್ಡಗೌಡರಿಗೆ ಸ್ಥಾನ ನೀಡಲಾಗಿದೆ. ಆಹ್ವಾನ ಪತ್ರಿಕೆಯಲ್ಲಿ ಪಂಚಮಸಾಲಿ ಎರಡೂ ಪೀಠಗಳ ಸ್ವಾಮೀಜಿಗಳ ಹೆಸರು ಹಾಕದಿದ್ದಕ್ಕೂ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಖರ್ಗೆಗೆ ಭರ್ಜರಿ ಗೆಲುವು – 24 ವರ್ಷಗಳ ಬಳಿಕ ಗಾಂಧೀಯೇತರ ವ್ಯಕ್ತಿಗೆ ಕಾಂಗ್ರೆಸ್‌ ಪಟ್ಟ

    ಸಾಮಾಜಿಕ ಜಾಲತಾಣದಲ್ಲಿ ಹೊಸ ಚರ್ಚೆ ಹುಟ್ಟು ಹಾಕಿದ್ದು ಶಾಸಕರ ಹೆಸರು ಓಕೆ, ಅವರ ಪತ್ನಿಯ ಹೆಸರು ಆಹ್ವಾನ ಪತ್ರಿಕೆಯಲ್ಲಿ ಏಕೆ ಎಂದು ಸಾಮಾಜಿಕ ಜಾಲತಾಣದಲ್ಲಿ ಜನರು ಪ್ರಶ್ನೆ ಮಾಡುತ್ತಿದ್ದಾರೆ. ಇದನ್ನೂ ಓದಿ: ಅಮ್ಮನನ್ನು ಜೈಲಿಗೆ ಹಾಕಿ ಎಂದ ಪುಟ್ಟ ಕಂದಮ್ಮನಿಗೆ ಸಚಿವರಿಂದ ದೀಪಾವಳಿ ಗಿಫ್ಟ್

    Live Tv
    [brid partner=56869869 player=32851 video=960834 autoplay=true]

  • ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ- ಬೊಮ್ಮಾಯಿ

    ಸುವರ್ಣಸೌಧದಲ್ಲಿ ಈ ವರ್ಷ ಚೆನ್ನಮ್ಮ, ರಾಯಣ್ಣ ಪ್ರತಿಮೆ ಪ್ರತಿಷ್ಠಾಪನೆ- ಬೊಮ್ಮಾಯಿ

    ಬೆಂಗಳೂರು: ಕಿತ್ತೂರು ಅಭಿವೃದ್ಧಿ ಪ್ರಾಧಿಕಾರಕ್ಕೆ 50 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಇದೇ ವರ್ಷ ಬೆಳಗಾವಿ ಸುವರ್ಣಸೌಧದಲ್ಲಿ ರಾಣಿ ಚೆನ್ನಮ್ಮ (Kittur Rani Chennamma) ಹಾಗೂ ಸಂಗೊಳ್ಳಿ ರಾಯಣ್ಣ (Sangolli Rayanna) ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದರು.

    ಬೆಳಗಾವಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ (Tourism Department) ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ (kannada and culture department) ವತಿಯಿಂದ ರವೀಂದ್ರ ಕಲಾಕ್ಷೇತ್ರ ಆವರಣದಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿಯಾಗಿ ಆಯೋಜಿಸಿದ್ದ ಕಿತ್ತೂರು ಚೆನ್ನಮ್ಮಾಜಿ ವಿಜಯ ಜ್ಯೋತಿ ಯಾತ್ರೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಇದನ್ನೂ ಓದಿ:  ಸಮಾವೇಶಕ್ಕೂ ಮುನ್ನವೇ ದೇವರ ಮೊರೆ ಹೋದ ಕಾಂಗ್ರೆಸ್‌ ನಾಯಕರು- ಬಳ್ಳಾರಿಯಲ್ಲಿ ಹೋಮ

    ಕಿತ್ತೂರು ಉತ್ಸವ ಪ್ರಾರಂಭವಾಗಿ 25-30 ವರ್ಷ ಕಳೆದಿದೆ. ಮಧ್ಯೆ-ಮಧ್ಯೆ ಕುಂಟುತ್ತಾ ಇದ್ದ ಉತ್ಸವಕ್ಕೆ ನಮ್ಮ ಸರ್ಕಾರ ಅಧಿಕೃತ ಆದೇಶದ ಮೂಲಕ ರಾಜ್ಯ ಮಟ್ಟದಲ್ಲಿ ಕಿತ್ತೂರು ಉತ್ಸವ ಆಚರಣೆ ಮಾಡುತ್ತಿದೆ. ಹಿಂದೆ ತಾವು ಬೆಳಗಾವಿ ಉಸ್ತುವಾರಿ ಸಚಿವರಾಗಿದ್ದ ಸಂದರ್ಭದಲ್ಲಿ ಹೆಚ್ಚಿನ ಅನುದಾನ ನೀಡಿ 3 ದಿನಗಳ ಕಿತ್ತೂರು ಉತ್ಸವಕ್ಕೆ ಚಾಲನೆ ನೀಡಿದ್ದನ್ನು ಸ್ಮರಿಸಿದ ಅವರು, ಅಂದು ಜ್ಯೋತಿ ಕಿತ್ತೂರಿನಿಂದ ಬೆಂಗಳೂರಿಗೆ (Bengaluru) ಚೆನ್ನಮ್ಮಳ ಸಂದೇಶ ಹೊತ್ತು ಬರುತ್ತಿತ್ತು. ಈಗ ಕರ್ನಾಟಕದ ರಾಜಧಾನಿ ಬೆಂಗಳೂರಿನಿಂದ ಕಿತ್ತೂರು ಸಂಸ್ಥಾನದ ರಾಜಧಾನಿ ಕಿತ್ತೂರಿಗೆ ಜ್ಯೋತಿ ಯಾತ್ರೆ ಬೆಳೆಸಿದೆ ಎಂದು ತಿಳಿಸಿದರು.

    ಸ್ವಾತಂತ್ರ‍್ಯ ಹೋರಾಟದ ಮೊದಲ ವೀರ ಮಹಿಳೆ ಕಿತ್ತೂರು ರಾಣಿ ಚೆನ್ನಮ್ಮ ಎಂಬುದಾಗಿ ನಮ್ಮ ಕರ್ನಾಟಕ ವಿಶ್ವವಿದ್ಯಾಲಯ ಗೆಜೆಟಿಯರ್‌ನಲ್ಲಿ ಪ್ರಕಟಗೊಂಡಿದೆ. ಇದನ್ನು ರಾಷ್ಟ್ರೀಯ ದಾಖಲೆಗಳ ಪಟ್ಟಿಗೂ ನೋಂದಣಿ ಮಾಡಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಶುರುವಾಯ್ತು ಮತ್ತೊಂದು ಧರ್ಮ ದಂಗಲ್ – ಮದರಸಾ ಬ್ಯಾನ್‍ಗೆ ಹಿಂದೂ ಸಂಘಟನೆಗಳಿಂದ ಒತ್ತಾಯ

    ಕಿತ್ತೂರಿನಲ್ಲಿ ಶಿಥಿಲಗೊಂಡಿರುವ ಪ್ರಸ್ತುತ ಅರಮನೆಯನ್ನು ಗಟ್ಟಿಗೊಳಿಸಿ, ಪಕ್ಕದಲ್ಲೇ ಹೊಸ ಅರಮನೆಯನ್ನೂ ಕಟ್ಟಿಸಲು ತೀರ್ಮಾನ ಮಾಡಲಾಗಿದೆ. ಇದರ ಜೊತೆಗೆ ಕಿತ್ತೂರನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ ಮಾಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಬೈಲಹೊಂಗಲ, ಸಂಗೊಳ್ಳಿ ಸೇರಿದಂತೆ ಕಿತ್ತೂರು ಸಂಸ್ಥಾನದ ಪ್ರಾಚೀನ ಕುರುಹುಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.

    ಈಗಾಗಲೇ ಸಂಗೊಳ್ಳಿ ರಾಯಣ್ಣ ಹೆಸರಿನಲ್ಲಿ ಸೈನಿಕ ಶಾಲೆ ಪ್ರಾರಂಭ ಮಾಡಿದ್ದೇವೆ. ಮುಂದಿನ ತಿಂಗಳು ಸೈನಿಕ ಶಾಲೆ ಉದ್ಘಾಟನೆ ಮಾಡುತ್ತೇವೆ. ಇದರೊಂದಿಗೆ ರಾಯಣ್ಣನನ್ನು ನೇಣುಗಂಬಕ್ಕೆ ಹಾಕಿದ ನಂದಗಡ ಸಮಾಧಿ ಸ್ಥಳವನ್ನೂ ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಸರ್ಕಾರಿ ಕಚೇರಿಗಳಲ್ಲಿ ಶ್ರೀಕೃಷ್ಣನ ಫೋಟೋ ಕಡ್ಡಾಯಗೊಳಿಸಿ – ಹಣಬರ ಯಾದವ ಸಮಾಜದಿಂದ ಬೈಕ್ ರ‍್ಯಾಲಿ

    ಸರ್ಕಾರಿ ಕಚೇರಿಗಳಲ್ಲಿ ಶ್ರೀಕೃಷ್ಣನ ಫೋಟೋ ಕಡ್ಡಾಯಗೊಳಿಸಿ – ಹಣಬರ ಯಾದವ ಸಮಾಜದಿಂದ ಬೈಕ್ ರ‍್ಯಾಲಿ

    ಬೆಳಗಾವಿ: ಕಿತ್ತೂರು ರಾಣಿ ಚೆನ್ನಮ್ಮನ ಬಲಗೈ ಬಂಟ ಅಮಟೂರು ಬಾಳಪ್ಪನ ಜಯಂತಿಯನ್ನು ಸರ್ಕಾರದ ವತಿಯಿಂದ ಆಚರಣೆ ಮಾಡಬೇಕು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಶ್ರೀಕೃಷ್ಣನ ಫೋಟೋ ಕಡ್ಡಾಯವಾಗಿ ಅಳವಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಹಣಬರ ಯಾದವ ಸಂಘದ ನೇತೃತ್ವದಲ್ಲಿ ಬೃಹತ್ ಬೈಕ್ ರ‍್ಯಾಲಿ ನಡೆಸಲಾಯಿತು.

    75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಜಾದಿ ಕ ಅಮೃತ್ ಮಹೋತ್ಸವ್ ಆಚರಿಸಲಾಗುತ್ತಿದೆ. ಆದರೆ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಮಟೂರು ಬಾಳಪ್ಪರ ಇತಿಹಾಸವನ್ನ ಮರೆತಿದ್ದಾರೆ. ಹೀಗಾಗಿ ಸರ್ಕಾರದಿಂದ ಅಮಟೂರು ಬಾಳಪ್ಪನ ಜಯಂತಿ ಆಚರಣೆ ಮಾಡಬೇಕು. ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಶ್ರೀಕೃಷ್ಣನ ಫೋಟೋ ಕಡ್ಡಾಯವಾಗಿ ಅಳವಡಿಸಬೇಕು ಎಂಬಿತ್ಯಾದಿ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಯಾದವ ಸಂಘದ ನೇತೃತ್ವದಲ್ಲಿ ಅಮಟೂರಿನಿಂದ ಬೆಳಗಾವಿಯವರೆಗೆ ಬೈಕ್ ರ‍್ಯಾಲಿ ನಡೆಸಲಾಯಿತು. ಇದನ್ನೂ ಓದಿ: 75ನೇ ಸ್ವಾತಂತ್ರ್ಯ ಸಂಭ್ರಮಕ್ಕೆ 75 ಮೀ. ತಿರಂಗಾದೊಂದಿಗೆ 75 ಕಿ.ಮೀ ರ‍್ಯಾಲಿ

    ರ‍್ಯಾಲಿಯಲ್ಲಿ ಬೆಳಗಾವಿ, ಬಾಗಲಕೋಟೆ, ವಿಜಯಪುರ ಜಿಲ್ಲೆಗಳಿಂದ 200ಕ್ಕೂ ಹೆಚ್ಚು ಬೈಕ್ ಸವಾರರು ಪಾಲ್ಗೊಂಡಿದ್ದರು. ನಂತರ ಬಸವನ ಕುಡಚಿಯ ಸಭಾ ಭವನದಲ್ಲಿ ಸಮಾವೇಶ ನಡೆಸಿದರು. ಇದೇ ವೇಳೆ ನಾಗರಾಜ್ ಹಣಬರ ಅಂತೂರು ಬಾಳಪ್ಪ ಅವರ ಬಗ್ಗೆ ರಚಿಸಿದ ಆಲ್ಬಮ್ ಸಾಂಗ್ ಸಮಾಜದ ಮುಖಂಡರ ಸಮ್ಮುಖದಲ್ಲಿ ಬಿಡುಗಡೆ ಮಾಡಲಾಯಿತು.  ಇದನ್ನೂ ಓದಿ: 18ರ ಯುವತಿ ಆರ್ಯ ವಾಲ್ವೇಕರ್‌ಗೆ ಮಿಸ್ ಇಂಡಿಯಾ USA-2022 ಕಿರೀಟ; ಈಕೆ ಯಾರು ಗೊತ್ತಾ?

    ನಾಗರಾಜ ಹಣಬರ, ಪ್ರಶಾಂತ ಕೌಲಗಿ, ಸಂತೋಷ್ ಕೌತ್, ನಾಗಪ್ಪ ಕಳಸನ್ನವರ್, ಬಸವರಾಜ್ ಸಂತ್ರೆ ಸೇರಿದಂತೆ ಸಮಾಜದದ ಅನೇಕ ಮುಖಂಡರು ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • ಕಿತ್ತೂರು ರಾಣಿ ಚೆನ್ನಮ್ಮಗೆ ಅಪಮಾನ ಮಾಡಿದ ಎನ್‍ಸಿಪಿ ಕಾರ್ಯಕರ್ತರು

    ಕಿತ್ತೂರು ರಾಣಿ ಚೆನ್ನಮ್ಮಗೆ ಅಪಮಾನ ಮಾಡಿದ ಎನ್‍ಸಿಪಿ ಕಾರ್ಯಕರ್ತರು

    ಬೆಳಗಾವಿ: ಎನ್‍ಸಿಪಿ ಕಾರ್ಯಕರ್ತರು ಕಿತ್ತೂರು ರಾಣಿ ಚೆನ್ನಮ್ಮಗೆ ಅಪಮಾನ ಮಾಡಿದ ಘಟನೆ ನಗರದ ಚೆನ್ನಮ್ಮ ವೃತ್ತದಲ್ಲಿ ನಡೆದಿದೆ. ಇದೀಗ ಈ ಘಟನೆ ಚೆನ್ನಮ್ಮ ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

    ಬೆಳಗಾವಿ ಪ್ರವಾಸದಲ್ಲಿರುವ ಎನ್‍ಸಿಪಿ ಮುಖ್ಯಸ್ಥ ಶರದ್ ಪವಾರ್‌ಗೆ ಚೆನ್ನಮ್ಮ ವೃತ್ತದಲ್ಲಿ ಅದ್ಧೂರಿ ಸ್ವಾಗತ ದೊರೆಯಿತು. ಚೆನ್ನಮ್ಮ ವೃತ್ತಕ್ಕೆ ಆಗಮಿಸಿದ್ದ ಎನ್‍ಸಿಪಿ ನಾಯಕ ಶರದ್ ಪವಾರ್‌ಗೆ ಬೃಹದಾಕಾರದ ಹೂವಿನ ಹಾರ ತಂದು ಪಟಾಕಿ, ಸಿಡಿಮದ್ದು ಸಿಡಿಸಿ ಅದ್ಧೂರಿ ಸ್ವಾಗತ ಕೊರಲಾಯಿತು. ಇದನ್ನೂ ಓದಿ: 2-3 ದಿನದಲ್ಲಿ ಸಂಪುಟ ವಿಸ್ತರಣೆ : ಸಿಎಂ ಬೊಮ್ಮಾಯಿ

    ಶರದ್ ಪವಾರ್ ಎದುರು ಬೃಹದಾಕಾರದ ಹಾರ ನಿಲ್ಲಿಸಿ ಫೋಟೋಗೆ ಪೋಸ್ ನೀಡಿದ್ದ ಅವರು ತೆರಳಿದ ಬಳಿಕ ಅದೇ ಬೃಹದಾಕಾರದ ಹಾರವನ್ನು ಚೆನ್ನಮ್ಮ ಮೂರ್ತಿ ಎದುರು ತಂದು ಫೋಟೋಗೆ ಕಾರ್ಯಕರ್ತರು ಫೋಸ್ ಕೊಟ್ಟರು. ಇದನ್ನೂ ಓದಿ: ಜಾತಿ ನಿಂದನೆಗೈದು ಅಪ್ರಾಪ್ತನನ್ನು ಬೆಂಕಿಗೆ ತಳ್ಳಿದ ವಿದ್ಯಾರ್ಥಿಗಳು!

  • ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

    ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು: ಸಿಎಂ

    ಬೆಳಗಾವಿ: ಶಿಕ್ಷಣ ವ್ಯವಸ್ಥೆಯ ಆಮೂಲಾಗ್ರ ಬದಲಾವಣೆ ವಿಶ್ವವಿದ್ಯಾಲಯದಿಂದಲೇ ಪ್ರಾರಂಭವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

    ಬೆಳಗಾವಿಯ ಹಿರೇಬಾಗೇವಾಡಿ ಮಲ್ಲಪ್ಪನ ಗುಡ್ಡದ ಹೊಸ ನಿವೇಶನದಲ್ಲಿ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಕಟ್ಟಡಗಳ ಭೂಮಿ ಪೂಜೆ ಹಾಗೂ ಶಿಲಾನ್ಯಾಸ ನೆರವೇರಿಸಿ ಮಾತನಾಡಿದ ಅವರು, ಇಂದಿನ ಸವಾಲುಗಳ ಹಾಗೂ ಬದಲಾವಣೆಯ ಯುಗಕ್ಕೆ ಹೊಂದಿಕೊಳ್ಳುವ ಶಿಕ್ಷಣ ವ್ಯವಸ್ಥೆ ಅತ್ಯಂತ ಅವಶ್ಯಕ ಎಂದರು.

    ಪಠ್ಯದಲ್ಲಿರುವ ವಿದ್ಯೆ ಹಾಗೂ ಜಗತ್ತಿನಲ್ಲಿ ಬಳಕೆಯಾಗುತ್ತಿರುವ ವಿದ್ಯೆಯಲ್ಲಿ ಬಹಳಷ್ಟು ಅಂತರ ಇದೆ. ಇವರೆಡರ ನಡುವೆ ಇರುವ ಅಂತರವನ್ನು ಕಡಿಮೆಗೊಳಿಸಲು ಎನ್‌ಇಪಿಯನ್ನು ಜಾರಿಗೊಳಿಸಲಾಗಿದೆ. ಇಂದಿನ ಪೀಳಿಗೆ ಯಾವುದೇ ಸವಾಲುಗಳನ್ನು ಆತ್ಮಸ್ಥೈರ್ಯ, ಧೈರ್ಯದಿಂದ ಎದುರಿಸಲು ಜ್ಞಾನದ ಬಲ ಇರಬೇಕು. ಎನ್‌ಇಪಿ ಈ ಜ್ಞಾನದ ಬಲವನ್ನು ನೀಡುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಗೂಗಲ್ ನಂತರ ಇದೀಗ ಇಂಟೆಲ್- ಲಸಿಕೆ ಹಾಕಿಸಿಕೊಳ್ಳದ ಉದ್ಯೋಗಿಗಳಿಗೆ ವೇತನ ಇಲ್ಲ

    ವಿಶ್ವವಿದ್ಯಾಲಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಲಿ: ಕಿತ್ತೂರು ರಾಣಿ ಚೆನ್ನಮ್ಮ ಆತ್ಮಸ್ಥೈರ್ಯ, ಧೈರ್ಯದಿಂದ ಹೋರಾಡಿದ ಮೊದಲನೆಯ ಮಹಿಳಾ ಸ್ವತಂತ್ರ ಹೋರಾಟಗಾರ್ತಿ. ರಾಣಿ ಚೆನ್ನಮ್ಮನೇ ಈ ವಿಶ್ವವಿದ್ಯಾಲಯದ ಸ್ಫೂರ್ತಿ. ಈ ವಿಶ್ವವಿದ್ಯಾಲಯವನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಒಯ್ಯುವ ಬದ್ಧತೆ, ಸ್ಪಷ್ಟತೆ ವಿಶ್ವವಿದ್ಯಾಲಯದ ಪ್ರತಿಯೊಬ್ಬರಿಗೂ ಇರಬೇಕು ಎಂದರು. ಇದನ್ನೂ ಓದಿ: ಅಧಿವೇಶನದಲ್ಲಿ ವಿರೋಧ ಪಕ್ಷದವರು ಚರ್ಚೆಯಿಂದ ಓಡಿ ಹೋದರು: ಜೋಶಿ ವ್ಯಂಗ್ಯ

    ವಿಭಿನ್ನ, ವಿನೂತನ ಪ್ರಯೋಗ ಕಾರ್ಯಕ್ರಮಗಳನ್ನು ರೂಪಿಸಿ, ಸಮಕಾಲೀನ ಸವಾಲುಗಳನ್ನು ಎದುರಿಸುವ ಹಾಗೂ ವೈಚಾರಿಕತೆಯಿಂದ ಸಮಾಜದಲ್ಲಿನ ಸಮಸ್ಯೆಗಳನ್ನು ನಿವಾರಿಸುವ ಕೇಂದ್ರಗಳಾಗಬೇಕು. ಕೇವಲ ಡಿಗ್ರಿ ಪಡೆಯಲು ಸೀಮಿತವಾಗಿರಬಾರದು. ಆಧುನಿಕ ತಂತ್ರಜ್ಞಾನ ಹಾಗೂ ಜ್ಞಾನ ಕ್ಷೇತ್ರದಲ್ಲಿನ ಬದಲಾವಣೆ ಹಾಗೂ ಬೆಳವಣಿಗೆಯ ವೇಗಕ್ಕೆ ಸರಿಸಮಾನವಾದ ಚಿಂತನೆಯನ್ನು ವಿಶ್ವವಿದ್ಯಾಲಯಗಳು ಮಾಡಬೇಕು. ಆವಿಷ್ಕಾರಗಳನ್ನು ಮಾಡುವ ಕೇಂದ್ರವಾಗಬೇಕು. ಸಂಶೋಧನೆಗಳಲ್ಲಿ ಸ್ವಂತಿಕೆ, ಹೊಸತನ ಹಾಗೂ ವಿಭಿನ್ನತೆ ಇರಬೇಕು ಎಂದು ತಿಳಿಸಿದರು.

    basavaraj bommai

    ತರ್ಕಬದ್ಧ ಚಿಂತನೆಗೆ ಅವಕಾಶ: ವಿಶ್ವವಿದ್ಯಾಲಯಗಳು ತರ್ಕಬದ್ಧ ಚಿಂತನೆಗೆ ಅವಕಾಶ ನೀಡುವ ಜ್ಞಾನದ ಕೇಂದ್ರವಾಗಬೇಕು. ವಿದ್ಯಾರ್ಜನೆಗೆ ಪೂರಕವಾದ ಪರಿಸರ ವಿಶ್ವವಿದ್ಯಾಲಯದಲ್ಲಿ ದೊರೆಯಬೇಕು. ವಿಶ್ವವಿದ್ಯಾಲಯದಲ್ಲಿರುವವರು ತಮ್ಮ ಸೀಮಿತ ಪ್ರಪಂಚದಿಂದ ಹೊರಗೆ ಬರಬೇಕು. ಸಂಶೋಧನೆಗಳನ್ನು ಸಮರ್ಥಿಸಿಕೊಳ್ಳದೆ ಉಳಿದವರು ಅದರ ಉಪಯುಕ್ತತೆಯನ್ನು ನಿರ್ಧರಿಸಲಿ. ವಿಶ್ವವಿದ್ಯಾಲಯಗಳಿಗೆ ಕುಲಪತಿಗಳೆ ಮುಂದಾಳತ್ವ ವಹಿಸುವ ನಾಯಕ. ಅವರು ಇತರರಿಗೆ ಉದಾಹರಣೆಯಾಗಬೇಕು. ಮಾರ್ಗದರ್ಶನ ತೋರಬೇಕು. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯನ್ನು ತರಲು ಸರ್ಕಾರ ಬೆಂಬಲಕ್ಕೆ ನಿಲ್ಲುತ್ತದೆ ಎಂದು ಭರವಸೆ ನೀಡಿದರು.

    ವಿಶ್ವವಿದ್ಯಾಲಯ ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿ : ವಿಶ್ವವಿದ್ಯಾಲಯಕ್ಕೆ ಸುಂದರ ಪರಿಸರ, ರಸ್ತೆ, ಮೂಲಸೌಕರ್ಯಗಳನ್ನು ಒಳಗೊಂಡ ಕಟ್ಟಡವನ್ನು ಒಂದು ವರ್ಷದಲ್ಲಿ ಮುಗಿಸುವ ಕೆಲಸವನ್ನು ಸರ್ಕಾರ ಮಾಡಲಿದೆ. ಕಟ್ಟಡದ ಪ್ರತಿಯೊಂದು ಕೊಠಡಿಯು ಡಿಜಿಟಲೈಸ್ ಆಗಬೇಕು. ಜಗತ್ತಿಗೆ ಜ್ಞಾನದ ಸಂಪರ್ಕ ಕೊಂಡಿಯಂತಿರಬೇಕು ಎಂದು ಸಲಹೆ ನೀಡಿದರು.

    ಇದು ಜ್ಞಾನದ ಶತಮಾನ. ಜ್ಞಾನ ಇದ್ದವರು ಜಗತ್ತನ್ನು ಆಳುತ್ತಾರೆ. ವಿಶ್ವವಿದ್ಯಾಲಯಗಳ ಸಂಶೋಧನೆಯನ್ನು ಇಡೀ ವಿಶ್ವ ಒಪ್ಪಿಕೊಂಡರೆ ಅದರ ಉಪಯುಕ್ತತೆ ಹೆಚ್ಚುತ್ತದೆ. ವಿಶ್ವವಿದ್ಯಾಲಯದಲ್ಲಿ ಕಳೆದ 10 ವರ್ಷದಲ್ಲಿ ಕೈಗೊಂಡಿರುವ ಪಿಎಚ್.ಡಿ ಸಂಶೋಧನೆ ಹಾಗೂ ಅದರ ಉಪಯುಕ್ತತೆ ಬಗ್ಗೆ ವಿಶ್ಲೇಷಣೆಯನ್ನು ಕೈಗೊಳ್ಳಲು ತಿಳಿಸಿದರು. ಇದನ್ನೂ ಓದಿ: MES ಗಲಭೆಗೆ ಕಾಂಗ್ರೆಸ್, ಬಿಜೆಪಿ ಕೈವಾಡ ಇಲ್ಲ, ಇದು ಪುಂಡ ಪೋಕರಿಗಳ ಕೆಲಸ: ಪ್ರಹ್ಲಾದ್ ಜೋಶಿ

    ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಡಾಕ್ಟರ್ ಸಿಎಂ ಅಶ್ವಥ್ ನಾರಾಯಣ, ಶಶಿಕಲಾ ಜೊಲ್ಲೆ, ಶಾಸಕರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಹಾಂತೇಶ ಕವಟಗಿಮಠ, ಅರುಣ ಶಾಹಪೂರ, ಹನಮಂತ ನಿರಾಣಿ, ವಿಧಾನಪರಿಷತ್ ಚುನಾವಣೆಯಲ್ಲಿ ಜಯಶಾಲಿಯಾಗಿರುವ ಚನ್ನರಾಜ ಹಟ್ಟಿಹೊಳಿ ಉಪಸ್ಥಿತರಿದ್ದರು.

  • ಅಧಿಕಾರಿಗಳ ನಿರ್ಲಕ್ಷ್ಯ- ಚೆನ್ನಮ್ಮನ ಪುತ್ಥಳಿಗೆ ಮುತ್ತಿಕೊಂಡ ಜೇನು ಹುಳುಗಳು

    ಅಧಿಕಾರಿಗಳ ನಿರ್ಲಕ್ಷ್ಯ- ಚೆನ್ನಮ್ಮನ ಪುತ್ಥಳಿಗೆ ಮುತ್ತಿಕೊಂಡ ಜೇನು ಹುಳುಗಳು

    – ಚನ್ನಮ್ಮನ ಮುಖ ಕಾಣದ ರೀತಿ ದಟ್ಟವಾಗಿ ಆವರಿಸಿದ ಹುಳುಗಳು

    ಹುಬ್ಬಳ್ಳಿ: ಸೂಕ್ತ ನಿರ್ವಹಣೆ ಹಾಗೂ ಸ್ವಚ್ಛತೆ ಕಾಪಾಡದ ಹಿನ್ನೆಲೆ ಹುಬ್ಬಳಿಯ ಐಕಾನ್, ಸುಪ್ರಸಿದ್ಧ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದ ಪುತ್ಥಳಿಗೆ ಜೇನು ಹುಳುಗಳು ಮುತ್ತಿಕೊಂಡಿವೆ. ಚೆನ್ನಮ್ಮನ ಮುಖ ಕಾಣದಂತೆ ದಟ್ಟವಾಗಿ ಹುಳುಗಳು ಮುತ್ತಿದ್ದು, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಗರ ವಾಸಿಗಳು ಕಿಡಿಕಾರಿದ್ದಾರೆ.

    ಕಿತ್ತೂರು ರಾಣಿ ಚೆನ್ನಮ್ಮ ವೃತ್ತ ಹುಬ್ಬಳ್ಳಿಯ ಜನನಿಬೀಡ ಪ್ರದೇಶವಾಗಿದ್ದು, ಎಲ್ಲರಿಗೂ ತಿಳಿದ ವಿಚಾರ. ಹುಬ್ಬಳ್ಳಿಯನ್ನು ಇದೇ ವೃತ್ತದಿಂದಲೂ ಹಲವರು ಗುರುತಿಸುತ್ತಾರೆ. ಹುಬ್ಬಳ್ಳಿಯ ಐಕಾನ್ ಎಂದೇ ಈ ವೃತ್ತವನ್ನು ಕರೆಯಲಾಗುತ್ತದೆ. ಇಂತಹ ಸುಪ್ರಸಿದ್ಧ ಹಾಗೂ ಜನನಿಬಿಡ ಪ್ರದೇಶದಲ್ಲಿನ ರಾಣಿ ಚೆನ್ನಮ್ಮ ಪುತ್ಥಳಿಯನ್ನು ನಿರ್ವಹಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ. ಹೀಗಾಗಿ ವಿಪರೀತ ಧೂಳು ಆವರಿಸಿದೆ. ಇದೀಗ ಜೇನು ಹುಳುಗಳು ಮುತ್ತಿವೆ.

    ಕಿತ್ತೂರು ಚೆನ್ನಮ್ಮನ ಮೂರ್ತಿಯ ಮುಖಕ್ಕೆ ಜೇನು ಹುಳುಗಳು ಮುತ್ತಿಕ್ಕಿಕೊಂಡ ಪರಿಣಾಮ ಚೆನ್ನಮ್ಮನ ಮುಖ ದರ್ಶನವೇ ಕಾಣುತ್ತಿರಲಿಲ್ಲ. ಹಲವರು ಈ ಕುರಿತು ಆಕ್ರೋಶ ವ್ಯಕ್ತಪಡಿಸಿದರೆ, ಇನ್ನೂ ಹಲವರು ಆಶ್ಚರ್ಯವೆಂಬಂತೆ ನೋಡುತ್ತಿದ್ದರು. ಪಾಲಿಕೆ ಅಧಿಕಾರಿಗಳು ಜೇನು ಹುಳುಗಳನ್ನು ತೆರವುಗೊಳಿಸಿ, ಪುತ್ಥಳಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಇನ್ನಾದರೂ ಸುಪ್ರಸಿದ್ಧ ಪುತ್ಥಳಿಯನ್ನು ಸರಿಯಾಗಿ ನಿರ್ವಹಿಸಬೇಕಿದೆ ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.