Tag: ಕಿರಣ್

  • ಕೆಂಪೇಗೌಡ ಪ್ಯಾನ್ ವರ್ಲ್ಡ್ ಸಿನಿಮಾ, ಯಾರಿಂದಲೂ ತಡೆಯೋಕೆ ಸಾಧ್ಯವಿಲ್ಲ: ನಿರ್ಮಾಪಕ ಕಿರಣ್

    ಕೆಂಪೇಗೌಡ ಪ್ಯಾನ್ ವರ್ಲ್ಡ್ ಸಿನಿಮಾ, ಯಾರಿಂದಲೂ ತಡೆಯೋಕೆ ಸಾಧ್ಯವಿಲ್ಲ: ನಿರ್ಮಾಪಕ ಕಿರಣ್

    ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಕುರಿತಂತೆ ಖ್ಯಾತ ನಿರ್ದೇಶಕ ಟಿ.ಎಸ್.ನಾಗಾಭರಣ ಅವರು ತಾತ್ಕಾಲಿಕ ತಡೆಯಾಜ್ಞೆ ತಂದಿದ್ದಾರೆ. ದಿನೇಶ್ ಬಾಬು ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ (Dharmabeeru Nadaprabhu Kempegowda) ಚಿತ್ರಕ್ಕೆ ಅನುಮತಿ ನೀಡಬಾರದು ಎಂದು ಅವರು ಕೋರ್ಟಿಗೆ ಮೊರೆ ಹೋಗಿದ್ದರು. ಈ ಕುರಿತಂತೆ ಧರ್ಮಭೀರು ನಾಡಪ್ರಭು ಕೆಂಪೇಗೌಡ ಚಿತ್ರದ ನಿರ್ಮಾಪಕ ಕಿರಣ್ (Kiran), ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದು, ತಮ್ಮ ಪ್ಯಾನ್ ವರ್ಲ್ಡ್ ಸಿನಿಮಾ. ಅದು ಮೊದಲು ಇಂಗ್ಲಿಷ್ (English) , ನಂತರದಲ್ಲಿ ಕನ್ನಡ ಚಿತ್ರವಾಗಿ ಬರಲಿದೆ. ಯುಕೆಯಲ್ಲಿ ನಾವು ಟೈಟಲ್ ಸೇರಿದಂತೆ ಹಕ್ಕು ಸ್ವಾಮ್ಯವನ್ನು ಅಲ್ಲಿಯೇ ಮಾಡುತ್ತೇವೆ ಎಂದಿದ್ದಾರೆ.

    ಏನಿದು ಪ್ರಕರಣ?

    ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಟಿ. ಎಸ್. ನಾಗಾಭರಣ ಅವರ ನಿರ್ದೇಶನದಲ್ಲಿ ಮೂಡಿ ಬರಬೇಕಿರುವ, ಕೆಂಪೇಗೌಡರ ಪಾತ್ರಕ್ಕೆ ಡಾಲಿ ಧನಂಜಯ್ ಆಯ್ಕೆಯಾಗಿರುವ ಸಿನಿಮಾದ ಚಿತ್ರೀಕರಣದ ಪೂರ್ವಸಿದ್ಧತೆಗಳು ಭರದಿಂದ ಸಾಗಿವೆ. ಈ ನಡುವೆಯೇ ಧರ್ಮಭೀರು ನಾಡಪ್ರಭು ಕೆಂಪೇಗೌಡ ಹೆಸರಿನಲ್ಲಿ ಸಿನಿಮಾವೊಂದು ಘೋಷಣೆ ಆಗಿತ್ತು. ಈ ಸಿನಿಮಾವನ್ನು ನಿಲ್ಲಿಸುವಂತೆ ನಾಗಾಭರಣ ಕೋರ್ಟ್ ಮೆಟ್ಟಿಲು ಏರಿದ್ದರು.

    ಬೆಂಗಳೂರಿನ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು (Court)  ಮಧ್ಯಂತರ ಆದೇಶದ ಅನುಸಾರ, ನಿರ್ಮಾಪಕ ಕಿರಣ್ ತೋಟಂಬೈಲ್, ಚೇತನ್ ರಾಜ್, ಧರ್ಮೇಂದ್ರ ಕುಮಾರ್ ಅರೇಹಳ್ಳಿ ಮತ್ತು ದಿನೇಶ್ ಬಾಬೂ, ಅವರ ಉದ್ಯೋಗಿಗಳು, ಏಜೆಂಟರು, ಪಾಲುದಾರರು, ಸಹವರ್ತಿ, ಅಧಿಕಾರಿ, ಪ್ರತಿನಿಧಿ ಮತ್ತು ಅವರ ಪರವಾಗಿ ವರ್ತಿಸುವ ಇತರ ಎಲ್ಲ ವ್ಯಕ್ತಿಗಳ ವಿರುದ್ಧ  ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಶೀರ್ಷಿಕೆಯ ಚಲನಚಿತ್ರವನ್ನು ಅಥವಾ ಆ ವಿಷಯವನ್ನು ಹೊಂದಿರುವ ಯಾವುದೇ ಚಲನಚಿತ್ರವನ್ನು ನಿರ್ಮಾಣ, ಪ್ರಸಾರ, ಸಾರ್ವಜನಿಕರಿಗೆ ಸಂವಹನ, ಪುನರುತ್ಪಾದನೆ, ಧ್ವನಿಮುದ್ರಣ, ವಿತರಣೆ, ಪ್ರಸಾರ, ಜಾಹೀರಾತು, ನಿರ್ದೇಶನ ಅಥವಾ ಇತರ ಯಾವುದೇ ರೀತಿಯಲ್ಲಿ ಪ್ರಕಟಿಸುವುದನ್ನು ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.

    ನಾಡಪ್ರಭು ಕೆಂಪೇಗೌಡ ಶೀರ್ಷಿಕೆಯ ಹಕ್ಕುಸ್ವಾಮ್ಯ ಹೊಂದಿರುವ ಈಶ್ವರ ಎಂಟರ್‌ಟೈನ್‌ಮೆಂಟ್ ಪ್ರೈವೇಟ್‌ ಲಿಮಿಟೆಡ್ ಪ್ರತಿನಿಧಿಗಳಾದ ನಿರ್ಮಾಪಕರಾದ ಎಂ. ಎನ್. ಶಿವರುದ್ರಪ್ಪ  ಮತ್ತು ರಾಹುಲ್ ಗುಂಡಾಲ, ನಿರ್ದೇಶಕ ಟಿ.ಎಸ್. ನಾಗಾಭರಣ, ಸಹಲೇಖಕಿ ಪ್ರತಿಭಾ ನಂದಕುಮಾರ್ ಇವರ “ನಾಡಪ್ರಭು ಕೆಂಪೇಗೌಡ” ಚಿತ್ರದ ಚಿತ್ರಕಥೆಯ ಟ್ರೇಡ್‌ಮಾರ್ಕ್, ಶೀರ್ಷಿಕೆ, ಬ್ರಾಂಡ್, ಪೂರ್ವಪ್ರತ್ಯಯ ಮತ್ತು ಪ್ರತ್ಯಯ ಸೇರಿಕೆ,  ರಿಮೇಕ್, ಅಳವಡಿಕೆ ಕುರಿತ ಬೌದ್ಧಿಕ ಆಸ್ತಿ ಹಕ್ಕುಗಳನ್ನು ಉಲ್ಲಂಘಿಸಿ ಯಾವುದೇ ರೀತಿಯಲ್ಲಿ ಪ್ರಸ್ತಾವಿತ  ‘ಧರ್ಮಭೀರು ನಾಡಪ್ರಭು ಕೆಂಪೇಗೌಡ’ ಚಲನಚಿತ್ರ ಕುರಿತ ನಿರ್ಮಾಣ, ನಿರ್ದೇಶನ, ಜಾಹೀರಾತು, ವಿತರಣೆ ಅಥವಾ ಸಾರ್ವಜನಿಕರಿಗೆ ಸಂವಹನಗಳನ್ನು ಮಾಡದಂತೆ ತಾತ್ಕಾಲಿಕವಾಗಿ ತಡೆಯಾಜ್ಞೆ ವಿಧಿಸಲಾಗಿದೆ.

     

    ನಾಡಪ್ರಭು ಕೆಂಪೇಗೌಡ ಕುರಿತಂತೆ ಟಿ.ಎಸ್. ನಾಗಾಭರಣ ಮತ್ತು ನಿರ್ಮಾಪಕ ಎಂ ಎನ್ ಶಿವರುದ್ರಪ್ಪ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ದೂರು ದಾಖಲಿಸಿ, ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಬೆಂಗಳೂರು, ಇಲ್ಲಿ ದಾವೆ ಹೂಡಿದ್ದರು.

  • ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಕೊಲೆ- ತಪ್ಪೊಪ್ಪಿಕೊಂಡ ಕಿರಣ್

    ಕೆಲಸದಿಂದ ತೆಗೆದು ಹಾಕಿದ್ದಕ್ಕೆ ಪ್ರತಿಮಾ ಕೊಲೆ- ತಪ್ಪೊಪ್ಪಿಕೊಂಡ ಕಿರಣ್

    ಬೆಂಗಳೂರು: ಗಣಿ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಕಾರು ಚಾಲಕನನ್ನು ಬಂಧಿಸಲಾಗಿದೆ.

    ಪ್ರತಿಮಾ ಮೇಲಿನ ಸೇಡಿನಿಂದ ಪ್ರಾಣ ತೆಗೆದು ಕಿರಣ್ ಎಸ್ಕೇಪ್ ಆಗಿ ಇವಾಗ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ. ಅಲ್ಲದೆ ವಿಚಾರಣೆಯ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.

    4 ವರ್ಷದಿಂದ ಕಾರು ಚಾಲಕನಾಗಿದ್ದ ಕಿರಣ್, ಬೇಜವಾಬ್ದಾರಿಯಿಂದ ಕಾರು ಓಡಿಸುತ್ತಿದ್ದನು. ಗುತ್ತಿಗೆ ಆಧಾರದಲ್ಲಿ ಚಾಲಕ ವೃತ್ತಿ ಮಾಡುತ್ತಿದ್ದ ಕಿರಣ್ ಕಳೆದ ತಿಂಗಳು ಹೊಸ ಸರ್ಕಾರಿ ಕಾರು ಅಪಘಾತ ಮಾಡಿದ್ದನು. ಅಪಘಾತದ ನಂತರ ಕಚೇರಿಯಲ್ಲೇ ಕಾರು ಬಿಟ್ಟು ತೆರಳಿದ್ದನು.

    ಕಿರಣ್ ನಡವಳಿಕೆಯಿಂದ ಕೋಪಗೊಂಡಿದ್ದ ಪ್ರತಿಮಾ, 10 ದಿನಗಳ ಹಿಂದೆ ಕೆಲಸದಿಂದ ತೆಗೆದು ಹಾಕಿದ್ದರು. ಈ ವೇಳೆ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ಬೇಡಿಕೊಂಡಿದ್ದನು. ಆದರೆ ಪ್ರತಿಮಾ ಅವರು ಕಿರಣ್‍ನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಲು ನಿರಾಕರಿಸಿದ್ದರು. ಇದೇ ಕಾರಣಕ್ಕೆ ಪ್ರತಿಮಾ ಮೇಲೆ ದ್ವೇಷಕಾರಿದ್ದನು.

    ಕಿರಣ್‍ಗೆ ವಾರ್ನಿಂಗ್ ಕೊಟ್ಟಿದ್ದ ಪ್ರತಿಮಾ: ಪ್ರತಿಮಾ ರೇಡ್ ಹೋಗುವ ವಿಚಾರ ಲೀಕ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಇತ್ತು. ಈ ಕಾರಣಕ್ಕೆ ಪ್ರತಿಮಾ ವಾರ್ನ್ ಕೂಡ ಮಾಡಿದ್ದರು. ಈ ವೇಳೆ ಬೈದಾಗ ತಪ್ಪಾಗಿದೆ ಕೆಲಸದಿಂದ ತೆಗೆಯಬೇಡಿ ಎಂದು ಕೇಳಿಕೊಂಡಿದ್ದನು.

    ಕೊಲೆ ದಿನವೂ ಪ್ರತಿಮಾ ಕಾಲಿಗೆ ಬಿದ್ದು ಕೆಲಸಕ್ಕೆ ಸೇರಿಸಿಕೊಳ್ಳುವಂತೆ ದುಂಬಾಲು ಬಿದ್ದಿದ್ದನು. ಆದರೆ ಆಕೆ ಅದನ್ನು ತಿರಸ್ಕರಿಸಿದ್ದರಿಂದ ಶನಿವಾರ ಮನೆ ಬಳಿಯೇ ಕಾದು ಕುಳಿತು ಹೊಂಚು ಹಾಕಿ ಕೊಲೆ ಮಾಡಿ ಕಿರಣ್ ಎಸ್ಕೇಪ್ ಆಗಿದ್ದನು. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.

  • ಸೊಲ್ಲಾಪುರದಲ್ಲಿ ಚೈತ್ರಾ ಕಾರಿದ್ದು, ತಂದು ಇಟ್ಕೊಳಿ- ಕಿರಣ್‍ಗೆ ಕರೆ ಮಾಡಿದ್ದ ಶ್ರೀಕಾಂತ್

    ಸೊಲ್ಲಾಪುರದಲ್ಲಿ ಚೈತ್ರಾ ಕಾರಿದ್ದು, ತಂದು ಇಟ್ಕೊಳಿ- ಕಿರಣ್‍ಗೆ ಕರೆ ಮಾಡಿದ್ದ ಶ್ರೀಕಾಂತ್

    – ಕಿಯಾ ಕಾರು, ಸಿಸಿಬಿ ವಶಕ್ಕೆ
    – ಕಿರಣ್ ಯಾರು..?

    ಬಾಗಲಕೋಟೆ: ವಂಚಕಿ ಚೈತ್ರಾ ಕುಂದಾಪುರ ಡೀಲ್ ಪ್ರಕರಣವು (Chaitra Kundapura Deal Case) ದಿನಕ್ಕೊಂದು ತಿರುವು ಪಡೆಯುತ್ತಿದೆ. ಚೈತ್ರಾ ಪ್ರಕರಣ ಹೊರಬೀಳುತ್ತಿದ್ದಂತೆಯೇ ಆರೋಪಿ ಶ್ರೀಕಾಂತ್, ಕಿರಣ್‍ಗೆ (Kiran) ಕರೆ ಮಾಡಿದ್ದಾನೆ. ಕಾರು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿದೆ. ಸೊಲ್ಲಾಪುರದ ಒಂದು ಬಾರ್ ಆ್ಯಂಡ್ ರೆಸ್ಟೊರೆಂಟ್ ಮುಂದೆ ಇದೆ. ಅದನ್ನು ತಂದು ನಿಮ್ಮ ಬಳಿ ಇಟ್ಕೊಳಿ ಎಂದು ಹೇಳಿರುವುದು ಇದೀಗ ಬಯಲಾಗಿದೆ.

    ಶ್ರೀಕಾಂತ್ ಹೇಳಿದಂತೆ ಕಿರಣ್ ಅವರು ಸೆಪ್ಟೆಂಬರ್ 9 ರಂದು ಸೊಲ್ಲಾಪುರಕ್ಕೆ ಹೋಗಿ ಕಿಯಾ ಕಾರೆನ್ಸ್ (Kia Carens) ತಂದು ತನ್ನ ಡ್ರೈವಿಂಗ್ ಸ್ಕೂಲ್‍ನಲ್ಲಿಟ್ಟುಕೊಂಡಿದ್ದರು. ಚೈತ್ರಾ ಕುಂದಾಪುರ, ಪಿಎ ಶ್ರೀಕಾಂತ್, ಕಿರಣ್ ಕರೆಯನ್ನು ಸಿಸಿಬಿ ಪೊಲೀಸರು ಟ್ರೇಸೌಟ್ ಮಾಡಿದ್ದಾರೆ. ಈ ಆಧಾರದ ಮೇಲೆ ಕಿರಣ್ ವಶಕ್ಕೆ ಪಡೆದು ಕಾರು ಜಪ್ತಿ ಮಾಡಿ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಅಂದರ್‌ಗೂ ಮುನ್ನ ಬಚಾವ್ ಆಗಲು ಕಾರನ್ನೇ ಮುಚ್ಚಿಟ್ಟಿದ್ದ ಚೈತ್ರಾ ಕುಂದಾಪುರ!

    ಕಿರಣ್ ಯಾರು..?: 32 ವರ್ಷದ ಕಿರಣ್ ಗಣಪ್ಪಗೊಳ ಹಿಂದೂ ಕಾರ್ಯಕರ್ತ. ಇವರು 26 ವರ್ಷದಿಂದ ರನ್ನ ಡ್ರೈವಿಂಗ್ ಸ್ಕೂಲ್ ಇಟ್ಟುಕೊಂಡಿದ್ದಾರೆ. ಮೊದಲು ಕಿರಣ್ ತಂದೆ ಭೀಮಶಿ ಡ್ರೈವಿಂಗ್ ಸ್ಕೂಲ್ ನಡೆಸುತ್ತಿದ್ದರು. ಕಳೆದ ಹಲವಾರು ವರ್ಷಗಳಿಂದ ಮಗ ಕಿರಣ್ ಸ್ಕೂಲ್ ನೋಡಿಕೊಳ್ಳುತ್ತಿದ್ದಾರೆ. ಹಿಂದೂಪರ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಕಾರಣ ಮೂರು ಬಾರಿ ಮುಧೋಳ ನಗರಕ್ಕೆ ಚೈತ್ರಾ ಕುಂದಾಪುರ ಅವರನ್ನು ಭಾಷಣಕ್ಕೆ ಕರೆಸಿದ್ದರು. ಈ ವೇಳೆ ಇಬ್ಬರ ಮಧ್ಯೆ ಪರಿಚಯ ಆಗಿತ್ತು.

    ಕಾರು ಪತ್ತೆ: ಸದ್ಯ ಕಿರಣ್ ಡ್ರೈವಿಂಗ್ ಸ್ಕೂಲ್‍ನಲ್ಲಿದ್ದ ಕಾರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಕಿಯಾ ಕಾರು ಚೈತ್ರಾ ಬಾಲಕೃಷ್ಣ ಕುಂದಾಪುರ ಹೆಸರಲ್ಲಿದೆ. ಇದನ್ನು 2023 ರಲ್ಲಿ ಚೈತ್ರಾ ಖರೀದಿ ಮಾಡಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ‘ಅಭಿರಾಮಚಂದ್ರ’ ಚಿತ್ರಕ್ಕೆ ಸಾಥ್ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

    ‘ಅಭಿರಾಮಚಂದ್ರ’ ಚಿತ್ರಕ್ಕೆ ಸಾಥ್ ನೀಡಿದ ಅಶ್ವಿನಿ ಪುನೀತ್ ರಾಜ್ ಕುಮಾರ್

    ‘ಅಲೆಯಾಗಿ ಬಾ’ ಆಲ್ಬಂ ಸಾಂಗ್ ಮೂಲಕ ಗಮನ ಸೆಳೆದ ರಥ ಕಿರಣ (Kiran) ನಾಯಕ ನಟನಾಗಿ ಸ್ಯಾಂಡಲ್ ವುಡ್ ಅಂಗಳಕ್ಕೆ ಎಂಟ್ರಿ ಕೊಡ್ತಿದ್ದಾರೆ. ನಾಗೇಂದ್ರ ಗಾಣಿಗ (Nagendra Ganiga) ಚೊಚ್ಚಲ ನಿರ್ದೇಶನದಲ್ಲಿ ಮೂಡಿ ಬರ್ತಿರುವ ‘ಅಭಿರಾಮಚಂದ್ರ’ (Abhiramchandra) ಸಿನಿಮಾ ಮೂಲಕ ಚಂದನವನದಲ್ಲಿ ಸಿನಿ ಜರ್ನಿ ಆರಂಭಿಸಿದ್ದಾರೆ ರಥ ಕಿರಣ. ಚಿತ್ರದ ಫಸ್ಟ್ ಲುಕ್ ರಿಲೀಸ್ ಆಗಿದ್ದು, ಅಶ್ವಿನಿ ಪುನೀತ್ ರಾಜ್ ಕುಮಾರ್ (Ashwini Puneeth Rajkumar) ಫಸ್ಟ್ ಲುಕ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

    ಟೈಟಲ್ ಮೂಲಕವೇ ಗಮನ ಸೆಳೆಯುತ್ತಿರುವ ‘ಅಭಿರಾಮಚಂದ್ರ’ ಸಿನಿಮಾಗೆ ನಾಗೇಂದ್ರ ಗಾಣಿಗ ಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಕಿರಿಕ್ ಪಾರ್ಟಿ ಚಿತ್ರಕ್ಕೆ ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿರುವ ನಾಗೇಂದ್ರ ಗಾಣಿಗ ‘ಅಭಿರಾಮಚಂದ್ರ’ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ. ಚೈಲ್ಡ್ ವುಡ್ ಸ್ನೇಹ, ಪ್ರೀತಿ ಹಾಗೂ ತ್ರಿಕೊನ ಪ್ರೇಮಕಥೆ ಹೊತ್ತ ಚಿತ್ರದಲ್ಲಿ ರಥ ಕಿರಣ ನಾಯಕ ನಟನಾಗಿ ಬಣ್ಣ ಹಚ್ಚಿದ್ದು, ಸಿದ್ದು ಮೂಲಿಮನಿ, ನಾಟ್ಯರಂಗ ಕೂಡ ಚಿತ್ರದ ಮುಖ್ಯ ಭೂಮಿಕೆಯಲ್ಲಿದ್ದಾರೆ. ನಾಯಕಿಯಾಗಿ ಶಿವಾನಿ ರೈ ನಟಿಸಿದ್ದಾರೆ. ಇದನ್ನೂ ಓದಿ: ಬಾಡಿಗೆ ತಾಯ್ತನ ಆಯ್ಕೆ ಮಾಡಿಕೊಂಡಿದ್ದಕ್ಕೆ ಕಾರಣ ಬಿಚ್ಚಿಟ್ಟ ನಟಿ ಪ್ರಿಯಾಂಕಾ ಚೋಪ್ರಾ

    ಚಿತ್ರೀಕರಣ ಕಂಪ್ಲೀಟ್ ಮಾಡಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ನಿರತವಾಗಿದೆ. ಸದ್ಯದಲ್ಲೇ ಸಿನಿಮಾ ಟೀಸರ್ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿಕೊಂಡಿದೆ. ಕುಂದಾಪುರ, ಬೆಂಗಳೂರು, ಮೈಸೂರಿನಲ್ಲಿ ಸಿನಿಮಾವನ್ನು ಸೆರೆ ಹಿಡಿಯಲಾಗಿದೆ. ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ‘ಅಭಿರಾಮಚಂದ್ರ’ ಸಿನಿಮಾ ಮೂಡಿ ಬರ್ತಿದ್ದು, ರವಿ ಬಸ್ರೂರು ಮೂವೀಸ್ ನಡಿ ಸಿನಿಮಾವನ್ನು ಪ್ರಸ್ತುತ ಪಡಿಸಲಾಗುತ್ತಿದೆ. ರವಿ ಬಸ್ರೂರು ಪುತ್ರ ಪವನ್ ಕೂಡ ಈ ಚಿತ್ರದಲ್ಲಿ ಬಣ್ಣ ಹಚ್ಚಿದ್ದು, ವೀಣಾ ಸುಂದರ್, ಸುಂದರ್ ವೀಣಾ, ಎಸ್.ನಾರಾಯಣ್, ಪ್ರಕಾಶ್ ತೂಮಿನಾಡು ಸೇರಿದಂತೆ ಹಲವು ಕಲಾವಿದರು ಚಿತ್ರದ ತಾರಾಬಳಗದಲ್ಲಿದ್ದಾರೆ.

    ಎ.ಜಿ. ಎಸ್ ಎಂಟಟೈನ್ಮೆಂಟ್ ಹಾಗೂ ರವಿ ಬಸ್ರೂರು ಮ್ಯೂಸಿಕ್ ಮತ್ತು ಮೂವೀಸ್ ಬ್ಯಾನರ್ ನಡಿ ಎ.ಜಿ.ಸುರೇಶ್ ಹಾಗೂ ಮಲ್ಲೇಶ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನ, ಸಂದೀಪ್ ವಲ್ಲೂರಿ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನ  ಚಿತ್ರಕ್ಕಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕಾರಾಗೃಹದಲ್ಲಿ ಬರ್ತ್ ಡೇ ಸೆಲೆಬ್ರೇಷನ್ – ಬಿಡುಗಡೆಯಾಗ್ತಿದಂತೆ ಮತ್ತೆ ರೌಡಿಶೀಟರ್ ಬಂಧನ

    ಕಾರಾಗೃಹದಲ್ಲಿ ಬರ್ತ್ ಡೇ ಸೆಲೆಬ್ರೇಷನ್ – ಬಿಡುಗಡೆಯಾಗ್ತಿದಂತೆ ಮತ್ತೆ ರೌಡಿಶೀಟರ್ ಬಂಧನ

    ರಾಮನಗರ: ಜಿಲ್ಲಾ ಕಾರಾಗೃಹದಲ್ಲಿ (Jail) ಬರ್ತ್ ಡೇ ಸೆಲೆಬ್ರೇಷನ್ (Birthday Celebration) ಪ್ರಕರಣ ಸಂಬಂಧ ಹುಟ್ಟುಹಬ್ಬ ಆಚರಿಸಿಕೊಂಡಿದ್ದ ರೌಡಿಶೀಟರ್ ಕಿರಣ್ ಅಲಿಯಾಸ್ ತಮಟೆ ಸೇರಿ ಐವರ ಮೇಲೆ ಎಫ್‌ಐಆರ್ ದಾಖಲಾಗಿತ್ತು. ಈ ಹಿನ್ನೆಲೆ ಬುಧವಾರ ಸಂಜೆ ಶಿಕ್ಷೆ ಅವಧಿ ಮುಗಿದು ಜೈಲಿನಿಂದ ಬಿಡುಗಡೆಯಾಗಿದ್ದ ಕಿರಣ್‌ನನ್ನು ಮತ್ತೆ ರಾಮನಗರ ಟೌನ್ ಪೊಲೀಸರು (Ramanagara Police) ಬಂಧಿಸಿದ್ದಾರೆ.

    ಜೈಲಿನಿಂದ ಕಿರಣ್ ಹೊರಬರುತ್ತಿದ್ದಂತೆಯೇ ಪೊಲೀಸರು ಆತನನ್ನು ಬಂಧಿಸಿ ಠಾಣೆಗೆ ಕರೆದೊಯ್ದಿದ್ದಾರೆ. ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕಿರಣ್ ರಾಬರಿ ಕೇಸ್‌ನಲ್ಲಿ ಜೈಲು ಸೇರಿದ್ದ. ಬುಧವಾರ ಶಿಕ್ಷೆ ಅವಧಿ ಮುಕ್ತಾಯವಾಗಿತ್ತು. ಆದರೆ ಜೈಲಿನಲ್ಲೇ ಹುಟ್ಟುಹಬ್ಬ ಆಚರಿಸಿಕೊಂಡು ಸಾಮಾಜಿಕ ಜಾಲತಾಣದಲ್ಲಿ ಫೋಟೋ ಹಂಚಿಕೊಂಡಿದ್ದ ಕಿರಣ್ ಇದೀಗ ಮತ್ತೆ ಪೊಲೀಸರ ಅತಿಥಿಯಾಗಿದ್ದಾನೆ. ಇದನ್ನೂ ಓದಿ: ಕಪ್ಪು ಬಟ್ಟೆ ಧರಿಸಿ ಬಂದವ್ರಿಗೆ ನಮೋ ಕಾರ್ಯಕ್ರಮಕ್ಕೆ ನೋ ಎಂಟ್ರಿ- ಯುವತಿಯರಿಗೆ ಅಸಮಾಧಾನ

    ರೌಡಿಶೀಟರ್ ಕಿರಣ್‌ನ ಹುಟ್ಟುಹಬ್ಬವನ್ನು ಜೈಲಿನಲ್ಲಿಯೇ ಆಚರಿಸಿ ಕೇಕ್ ಕತ್ತರಿಸಲಾಗಿತ್ತು. ಕೈದಿಗಳು ಹುಟ್ಟುಹಬ್ಬವನ್ನು ಆಚರಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದರು. ಹ್ಯಾಪಿ ಬರ್ತ್ ಡೇ ಕಿರಣ್ ಅಣ್ಣ ಎಂದು ಹೂವಿನಲ್ಲಿ ಬರೆದು ಗ್ರೂಪ್ ಫೋಟೋ ತೆಗೆದುಕೊಂಡಿದ್ದ 2 ಫೋಟೋಗಳು ವೈರಲ್ ಆಗಿದ್ದವು.

    ಜೈಲಿನ ಒಳಗಡೆ ಕೇಕ್ ತೆಗೆದುಕೊಂಡು ಹೋಗಲು ಅಧಿಕಾರಿ, ಸಿಬ್ಬಂದಿಯೇ ಸಾಥ್ ನೀಡಿದ್ದಾರೆ. ಕೈದಿಗಳು ಹುಟ್ಟುಹಬ್ಬ ಆಚರಿಸಿಕೊಳ್ಳಲು ಜೈಲಿನ ಅಧಿಕಾರಿಗಳೇ ಸಾಥ್ ನೀಡಿದ್ದಾರೆ ಎಂಬ ಆರೋಪ ಬಂದಿದೆ. ಇದನ್ನೂ ಓದಿ: ಚಿಕ್ಕಮಗಳೂರು, ಕೊಡಗನ್ನು ಸ್ವಿಜರ್ಲ್ಯಾಂಡ್ ರೀತಿ ಬೆಳೆಸಿ – ಎಷ್ಟು ಬೇಕಾದ್ರೂ ಹಣ ಕೊಡ್ತೀವಿ: ಬೊಮ್ಮಾಯಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮಗು ಕೊಂದ ಪ್ರಕರಣ – ನನ್ನ ಅಪ್ಪ ಅಂದಿದ್ರೆ ಸಾಕಾಗಿತ್ತು ಅಂತ ಕಿರಣ್ ಕಣ್ಣೀರು

    ಮಗು ಕೊಂದ ಪ್ರಕರಣ – ನನ್ನ ಅಪ್ಪ ಅಂದಿದ್ರೆ ಸಾಕಾಗಿತ್ತು ಅಂತ ಕಿರಣ್ ಕಣ್ಣೀರು

    ಬೆಂಗಳೂರು: ಮುದ್ದು ಮಗುವನ್ನ ಕಳೆದುಕೊಂಡ ತಂದೆಯ ಕಣ್ಣಲ್ಲಿ ಬತ್ತಿಲ್ಲ ಕಣ್ಣೀರು. ಹೆಂಡತಿ ಮಾಡಿದ ಕೃತ್ಯದಿಂದ ಹೊರ ಬಾರದ ತಂದೆ ಮಗುವಿನ ಬಗ್ಗೆ ಮನದಾಳದ ಮಾತು ಹಂಚಿಕೊಂಡಿದ್ದಾರೆ.

    ಹೆತ್ತವರಿಗೆ ಹೆಗ್ಣ ಮುದ್ದು ಅನ್ನೋ ಹಾಗೆ ತಂದೆಗೆ ಪ್ರೀತಿ ಪಾತ್ರನಾಗಿದ್ದ ಮುದ್ದು ಮಗಳನ್ನ ಕಳೆದುಕೊಂಡ ಹೆತ್ತಪ್ಪನ ಕಣ್ಣಿನಲ್ಲಿ ವಾರ ಕಳೆದರೂ ಕಣ್ಣೀರು ಬತ್ತಿಲ್ಲ. ಮಗಳ ಬಗ್ಗೆ ಮಾತು ಆರಂಭಿಸುತ್ತಿದ್ದಂತೆ ಭಾವುಕರಾಗಿ ಕಿರಣ್ ಪಬ್ಲಿಕ್ ಟಿವಿ ಜೊತೆ ಅಳಲು ತೋಡಿಕೊಂಡಿದ್ದಾರೆ. ಮಗು ನಾಯಿ ರೀತಿ ಅವಳ ಹಿಂದೆ ಹಿಂದೆಯೇ ಸುತ್ತಾಡ್ತಾ ಇತ್ತು. ನನಗೆ ನನ್ನ ಮಗು ದೊಡ್ಡ ಡಾಕ್ಟರ್ ಆಗೋದಾಗ್ಲಿ, ಎಂಜಿನಿಯರ್ ಆಗೋ ಆಸೆ ಇರಲಿಲ್ಲ. ನನ್ನ ಮಗು ನನ್ನ ಅಪ್ಪ ಅಂದಿದ್ರೆ ಸಾಕಾಗಿತ್ತು ಬೇಸರ ವ್ಯಕ್ತಪಡಿಸಿದರು. ಇದನ್ನೂ ಓದಿ: ಊಟ ಬೇಕಂದ್ರೆ ಕೇಳಿ ಹಾಕಿಸ್ಕೋತಿನಿ ಬಿಡು ಗುರು – ನಟ ಕೋಮಲ್ ಶೈಲಿ ಕಾಪಿ ಹೊಡೆದ್ರಾ ಶಿಖರ್ ಧವನ್?

    ಹತ್ತು ವರ್ಷದಿಂದ ಕಾಯುತ್ತಾ ಇದ್ದೆ ಅಪ್ಪ ಅನ್ನೋದಕ್ಕೆ. ನಾನು ಏನೆಲ್ಲಾ ಟ್ರೈ ಮಾಡಿದ್ದೆ ಅಂದರೆ ಎಲ್ಲವನ್ನೂ ಮಾಡಿದ್ದೆ. ಅವಳು ಕೂಡ ಮಗುವನ್ನು ಚೆನ್ನಾಗಿ ನೋಡಿಕೊಳ್ತಾ ಇದ್ದಳು. ಇದ್ದಕ್ಕಿದ್ದಂತೆ ಯಾಕೆ ಹೀಗೆ ಮಾಡಿದ್ಲು ಅನ್ನೋದು ಗೊತ್ತಿಲ್ಲ. ಮಗು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರತಿ ಭಾನುವಾರ ಹೊರಗೆ ಕರೆದುಕೊಂಡು ಹೋಗ್ತಾ ಇದ್ದೆವು. ಡೇ ಕೇರ್ ಮಾಡ್ತಾ ಇದ್ವಿ. ಅದಕ್ಕೆ ಏನೇನೂ ಬೇಕು ಎಲ್ಲಾ ಮನೆಯಲ್ಲೆ ಸಿದ್ಧತೆ ಮಾಡಿಕೊಂಡಿದ್ವಿ. ಇದ್ದಕ್ಕಿದ್ದಂತೆ ಯಾಕೆ ಈ ತೀರ್ಮಾನ ಮಾಡಿದ್ಲು ಅನ್ನೋದು ತಿಳಿಯುತ್ತಿಲ್ಲ. ಮಗು ಸ್ವಲ್ಪ ಹಠ ಮಾಡುತ್ತಿತ್ತು. ಯಾವ ಮಗು ಹಠ ಮಾಡೊಲ್ಲ ಹೇಳಿ ಎಲ್ಲಾ ಮಕ್ಕಳು ಹಠ ಮಾಡ್ತಾರೆ. ಇದಕ್ಕೆ ಬುದ್ಧಿ ಬೆಳವಣಿಗೆ ಆಗಿರಲಿಲ್ಲ. ತುಂಬಾ ಕಷ್ಟ ಪಡುತ್ತಾ ಇತ್ತು ಎಂದರು.

    ಆ ಮಗು ಬಿಸಾಡಿದಾಗ ಮನೆಯಲ್ಲಿಯೇ ಇದ್ದೆ. ನಾನೇ ಆಸ್ಪತ್ರೆಗೆ ಕರೆದುಕೊಂಡು ಓಡಿ ಹೋದೆ ಮಗು ಬದುಕಲಿಲ್ಲ. ಆದರೆ ಅವಳ ಮನಸ್ಥಿತಿ ಏನಿತ್ತು ಅನ್ನೋದು ಗೊತ್ತಿಲ್ಲ.ನನ್ನ ಮಗು ನಾರ್ಮಲ್ ಆಗಿದ್ರೆ ಅಷ್ಟೇ ಸಾಕಾಗಿತ್ತು ಮಗುವನ್ನು ದೊಡ್ಡವಳು ಮಾಡಿ ಮದುವೆ ಮಾಡಬೇಕು ಅನ್ನೋ ಆಸೆ ಇರಲಿಲ್ಲ ಜೀವಂತವಾಗಿ ಕೊನೆಯ ತನಕ ನನ್ನ ಜೊತೆಯಲ್ಲಿ ಇದ್ದಿದ್ರೆ ಸಾಕಾಗಿತ್ತು ಕಣ್ಣಿರು ಹಾಕಿದ ತಂದೆ ಕಿರಣ್. ಮಗಳನ್ನ ಕೊಲೆ ಮಾಡಿದ ಪತ್ನಿಯ ಬಗ್ಗೆ ಮಾತನಾಡಲು ನಿರಾಕರಣೆ ಮಾಡಿದರು.

    Live Tv
    [brid partner=56869869 player=32851 video=960834 autoplay=true]

  • ಕಿರಣ್ ನಟನೆಯ ಕನ್ನಡತಿ ಹಿಂದಿಗೆ ಡಬ್

    ಕಿರಣ್ ನಟನೆಯ ಕನ್ನಡತಿ ಹಿಂದಿಗೆ ಡಬ್

    ಕಿರಣ್ ರಾಜ್ ಅಭಿನಯದ ” ಕನ್ನಡತಿ” ಕೂಡ ಒಂದು. ಇಲ್ಲಿ ಅಪಾರ ಮೆಚ್ಚುಗೆ ಪಡೆದಿರುವ ಈ ಧಾರಾವಾಹಿ ಈಗ ಹಿಂದಿಗೆ ಡಬ್ ಆಗಲಿದೆ. “ಅಜ್ನಾಬಿ ಬನೇ ಹಮ್ ಸಫರ್” ಎಂಬ ಹೆಸರಿನಲ್ಲಿ Colors rishtey uk ವಾಹಿನಿಯಲ್ಲಿ ಶೀಘ್ರದಲ್ಲೇ ಆರಂಭವಾಗಲಿದೆ. ಇದನ್ನೂ ಓದಿ : ಕೆಜಿಎಫ್ 2 : ಕಿಚ್ಚ ಸುದೀಪ್ ಮತ್ತು ಯಶ್ ಮಧ್ಯೆ ತಂದಿಡುತ್ತಿದೆ ವೈರಲ್ ವಿಡಿಯೋ

    ಲಾಕ್ ಡೌನ್ ಸಮಯದಲ್ಲಿ ಅಲ್ಲಿನ ಎಷ್ಟೋ ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳು ಇಲ್ಲಿ ಡಬ್ ಆಗಿ ಪ್ರಸಾರವಾಗಲು ಆರಂಭವಾದವು. ಆಗ ನಿಜಕ್ಕೂ ಹೀಗೆ ಆದರೆ ಮುಂದೇನು? ಎಂದು ಕೆಲವರಿಗೆ ಅನಿಸಿದು ಸಹಜ. ಈಗ ಇಲ್ಲಿನ ಜನಪ್ರಿಯ ಧಾರಾವಾಹಿ “ಕನ್ನಡತಿ” ಆ ಭಾಷೆಗೆ ಡಬ್ ಆಗಿ ಪ್ರಸಾರವಾಗುತ್ತಿರುವುದು ನಿಜಕ್ಕೂ ಹೆಮ್ಮೆ. ಮರಾಠಿಯಲ್ಲೂ ಕೂಡ ಈ ಧಾರಾವಾಹಿ ರಿಮೇಕ್ ಆಗಿದೆ. ನಟ  ಕಿರಣ್ ರಾಜ್ ಗೆ ಅಪಾರ ಅಭಿಮಾನಿಗಳನ್ನು ತಂದು ಕೊಟ್ಟ ಧಾರಾವಾಹಿ “ಕನ್ನಡತಿ”. ಅದರಲ್ಲೂ‌ ಯುವಪೀಳಿಗೆಯವರಿಗಂತೂ ಕಿರಣ್ ರಾಜ್ ಕಂಡರೆ ಅಪಾರ ಅಭಿಮಾನ. ಅಂತಹ ಮನಮೋಹಕ ನಟ ಕಿರಣ್ ರಾಜ್. ಇವರ ನಟನೆಯ ಧಾರಾವಾಹಿಯೊಂದು ಹಿಂದಿಗೆ ಡಬ್ ಆಗುತ್ತಿರುವುದು ಕಿರಣ್ ರಾಜ್ ಅವರಿಗೂ ಖುಷಿ ತಂದಿದೆಯಂತೆ. ಇದನ್ನೂ ಓದಿ : ಕೆಜಿಎಫ್-2 ಸಿನಿಮಾ ವೀಕ್ಷಣೆ ವೇಳೆ ಹಾರಿದ ಗುಂಡು- ಯುವಕನ ಹೊಟ್ಟೆಗೆ ಗಾಯ

    ಹಾಗೆ ನೋಡಿದರೆ ಕಿರಣ್ ರಾಜ್ ಅವರಿಗೆ ಹಿಂದಿ ಕಿರುತೆರೆ ಹೊಸದೇನಲ್ಲ. ಈ ಹಿಂದೆ ಕೂಡ ಹಿಂದಿ ಕಲರ್ಸ್ ವಾಹಿನಿಯ ಸಾಕಷ್ಟು ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳಲ್ಲಿ ಕಿರಣ್ ರಾಜ್ ಅಭಿನಯಿಸಿದ್ದಾರೆ. ಕಿರುತೆರೆಯಷ್ಟೇ ಹಿರಿತೆರೆಯಲ್ಲೂ ಬ್ಯುಸಿಯಾಗಿರುವ ಕಿರಣ್ ರಾಜ್ ಅಭಿನಯದ ಬಹು ನಿರೀಕ್ಷಿತ  ” ಬಡ್ಡೀಸ್” ಚಿತ್ರದ ಟೀಸರ್ ಏಪ್ರಿಲ್ 25 ರಂದು ಬಿಡುಗಡೆಯಾಗಲಿದೆ.

  • ಮಾಜಿ ಪತ್ನಿಯಿಂದ ಅಮೀರ್ ಖಾನ್ ಗೆ ಸಿಕ್ತು ಭರ್ಜರಿ ಗಿಫ್ಟ್

    ಮಾಜಿ ಪತ್ನಿಯಿಂದ ಅಮೀರ್ ಖಾನ್ ಗೆ ಸಿಕ್ತು ಭರ್ಜರಿ ಗಿಫ್ಟ್

    ಬಾಲಿವುಡ್ ಮಿಸ್ಟರ್ ಪರ್ಫೆಕ್ಟ್ ಅಮೀರ್ ಖಾನ್‍ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 57ನೇ ವಸಂತಕ್ಕೆ ಕಾಲಿಟ್ಟಿರುವ ಅಮೀರ್ ಖಾನ್‍ಗೆ ಈ ವಿಶೇಷ ದಿನದಂದು ಮಾಜಿ ಪತ್ನಿ ಕಿರಣ್ ರಾವ್ ಬೆಸ್ಟ್ ಗಿಫ್ಟ್ ನೀಡಿರುವುದಾಗಿ ಸ್ವತಃ ಅವರೇ ಬಹಿರಂಗ ಪಡಿಸಿದ್ದಾರೆ. ಆ ಗಿಫ್ಟ್ ಈವರೆಗೂ ಸಿಗದೇ ಇರದಂತಹ ದುಬಾರಿ ಉಡುಗೊರೆಯಾಗಿದೆಯಂತೆ.

    ನನ್ನನ್ನು ಕಿರಣ್‍ಗಿಂತ ಚೆನ್ನಾಗಿ ಯಾರು ತಿಳಿದಿಲ್ಲ. ಹಾಗಾಗಿ ಈ ವರ್ಷ ಸ್ವಯಂ ಆಗಿ ಕೆಲಸ ಮಾಡಲು ಬಯಸುತ್ತಿರುವ ನನಗೆ ನನ್ನಲ್ಲಿರುವ ಒಂದಷ್ಟು ವೀಕ್‍ನೆಸ್‍ಗಳ ಬಗ್ಗೆ ಲಿಸ್ಟ್ ಮಾಡಿ ತಿಳಿಸುವಂತೆ ಕೇಳಿದ್ದೆ. ಅದಕ್ಕೆ ಕಿರಣ್ 10 ರಿಂದ 12 ಸಲಹೆಗಳನ್ನು ನೀಡಿದರು. ನಾನು ಅದೆಲ್ಲವನ್ನು ಬರೆದುಕೊಂಡೆ. ಇದು ನನ್ನ ಜೀವನದ ಅತ್ಯುತ್ತಮ ಗಿಫ್ಟ್ ಆಗಿದೆ ಎಂದರು. ಇದನ್ನೂ ಓದಿ : ದಿ ಕಾಶ್ಮೀರ್ ಫೈಲ್ಸ್ : ಬಾಲಿವುಡ್ ಮೇಲೆ ಕಿಡಿಕಾರಿದ ಕಂಗನಾ ರಣಾವತ್

     

    View this post on Instagram

     

    A post shared by Aamir Khan (@amirkhanactor_)

    ಇದೇ ವೇಳೆ ವಿಚ್ಚೇದನ ಕುರಿತಂತೆ ಮಾತನಾಡಿದ ಅವರು, ಕಿರಣ್ ಮತ್ತು ನಾನು ಒಬ್ಬರನ್ನೊಬ್ಬರು ತುಂಬಾ ಪ್ರೀತಿಸುತ್ತೇವೆ. ನಾವು ಪರಸ್ಪರ ತುಂಬಾ ಗೌರವ ಮತ್ತು ಪ್ರೀತಿಯನ್ನು ಹೊಂದಿದ್ದೇವೆ. ಆದರೆ ಜನರಿಗೆ ಇದು ಅರ್ಥವಾಗುವುದಿಲ್ಲ. ಇದನ್ನು ನಾನು ಒಪ್ಪಿಕೊಳ್ಳುತ್ತೇನೆ. ಏಕೆಂದರೆ ಸಾಮಾನ್ಯ ವಿಚಾರವಾಗಿ ಇದನ್ನು ನೋಡಲು ಸಾಧ್ಯವಾಗುವುದಿಲ್ಲ. ನಿಜ ಹೇಳಬೇಕೆಂದರೆ ನಾವು ಒಬ್ಬರನ್ನೊಬ್ಬರು ತುಂಬಾ ಇಷ್ಟಪಡುತ್ತೇವೆ ಮತ್ತು ಪರಸ್ಪರ ಕುಟುಂಬದವರನ್ನು ಅರ್ಥ ಮಾಡಿಕೊಂಡಿದ್ದೇವೆ. ವಾಸ್ತವವಾಗಿ ಕಿರಣ್ ಮತ್ತು ನನ್ನದು ಒಂದೇ ಕುಟುಂಬ. ಆದರೆ ನಮ್ಮ ಗಂಡ ಮತ್ತು ಹೆಂಡತಿಯ ಸಂಬಂಧದಲ್ಲಿ ಬದಲಾವಣೆಯಾಗಿದೆ. ನಾವು ಮದುವೆಯನ್ನು ಗೌರವಿಸುತ್ತೇವೆ. ನಾವು ಒಟ್ಟಿಗೆ ಕೆಲಸ ಮಾಡುತ್ತಿದ್ದೇವೆ. ಆದರೆ ನಾವು ಗಂಡ ಮತ್ತು ಹೆಂಡತಿಯಾಗಿ ದೀರ್ಘಕಾಲ ಮುಂದುವರಿಯಲು ಆಗಲಿಲ್ಲ. ಹಾಗಾಗಿ ವಿಚ್ಛೇದನ ಪಡೆಯಲು ನಿರ್ಧರಿಸಿದೆವು ಎಂದಿದ್ದಾರೆ.

     

    View this post on Instagram

     

    A post shared by Aamir Khan (@amirkhanactor_)

    18 ವರ್ಷದ ದಾಂಪತ್ಯ ಜೀವನಕ್ಕೆ ಅಮೀರ್ ಮತ್ತು ಕಿರಣ್ 2021ರಲ್ಲಿ ವಿಚ್ಛೇದನ ಪಡೆದರು. ಆದರೆ ಇಬ್ಬರು ಸ್ನೇಹಿತರು ಮತ್ತು ಪೋಷಕರಾಗಿ ಮುಂದುವರಿಯುವುದಾಗಿ ತಿಳಿಸಿದ್ದರು. ಅದರಂತೆ ನಡೆದುಕೊಳ್ಳುತ್ತಿದ್ದಾರೆ. ಇದನ್ನೂ ಓದಿ: ಉಪೇಂದ್ರ ಅವರ ಹೊಸ ಸಿನಿಮಾದ ಪೋಸ್ಟರ್: ಅಸಲಿನಾ..? ನಕಲಿನಾ..?

  • ಅರ್ಜುನ್ ಜನ್ಯ ಸಹೋದರ ಕೊರೊನಾಗೆ ಬಲಿ

    ಅರ್ಜುನ್ ಜನ್ಯ ಸಹೋದರ ಕೊರೊನಾಗೆ ಬಲಿ

    ಬೆಂಗಳೂರು: ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರ ಸಹೋದರ ಕೊರೊನಾ ವೈರಸ್‍ಗೆ ಬಲಿಯಾಗಿದ್ದಾರೆ.

    ಕಿರಣ್ (49) ಅವರು ಕೋವಿಡ್ ಸೊಂಕಿಗೆ ತುತ್ತಾಗಿ ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕಿರಣ್ ಇಂದು ನಿಧನರಾಗಿರುವ ವಿಚಾರವನ್ನ ಅರ್ಜುನ್ ಜನ್ಯ ತಮ್ಮ ಸೋಶಿಯಲ್ ಮಿಡಿಯಾ ಮೂಲಕ ತಿಳಿಸಿದ್ದಾರೆ.

    ಕೊರೊನಾದಿಂದ ನಾನು ನನ್ನ ಅಣ್ಣನನ್ನು ಕಳೆದುಕೊಂಡಿದ್ದೇನೆ. ನನ್ನ ನೋವನ್ನು ಹೇಗೆ ವ್ಯಕ್ತಪಡಿಸಬೇಕು ಎಂಬುದು ಗೊತ್ತಾಗುತ್ತಿಲ್ಲ. ನನ್ನ ಉಸಿರು ಇರುವವರೆಗೂ ನೀನೇ ನನ್ನ ಉಸಿರು ಎಮದು ಅರ್ಜುನ್ ಜನ್ಯ ಅವರು ಇನ್ ಸ್ಟಾದಲ್ಲಿ ಸಹೋದರನ ಜೊತೆಗಿರುವ ಫೋಟೋಗೆ ಕಂಬನಿ ಮಿಡಿದಿದ್ದಾರೆ.

    ಹದಿನೈದು ದಿನಗಳ ಹಿಂದೆ ಅರ್ಜುನ್ ಜನ್ಯಗೂ ಕೋವಿಡ್ ಸೋಂಕು ತಗುಲಿತ್ತು. ಕೂಡಲೇ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ.

     

    View this post on Instagram

     

    A post shared by Arjun Janya (@arjun_janya_musician)

  • ಪೊಲೀಸರ ಮುಂದೆ ಶೃತಿ ಹರಿಹರನ್ ಆಪ್ತ ಸಹಾಯಕ ಕಿರಣ್, ಸಹ ನಿರ್ದೇಶಕಿ ಮೋನಿಕಾ ಸ್ಫೋಟಕ ಹೇಳಿಕೆ

    ಪೊಲೀಸರ ಮುಂದೆ ಶೃತಿ ಹರಿಹರನ್ ಆಪ್ತ ಸಹಾಯಕ ಕಿರಣ್, ಸಹ ನಿರ್ದೇಶಕಿ ಮೋನಿಕಾ ಸ್ಫೋಟಕ ಹೇಳಿಕೆ

    ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಮೀಟೂ ಆರೋಪ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸರು ಇಬ್ಬರು ಸಾಕ್ಷಿಗಳ ಹೇಳಿಕೆಯನ್ನು ಪಡೆದುಕೊಂಡಿದ್ದಾರೆ.

    ಶೃತಿ ಹರಿಹರನ್ ಆಪ್ತ ಸಹಾಯಕ ಕಿರಣ್ ಮತ್ತು ವಿಸ್ಮಯ ಚಿತ್ರದ ಸಹ ನಿರ್ದೇಶಕಿ ಮೋನಿಕಾ ಹೇಳಿಕೆಯನ್ನು ರಹಸ್ಯ ಸ್ಥಳದಲ್ಲಿ ಪೊಲೀಸರು ವಿಡಿಯೋ ಮಾಡಿಕೊಂಡಿದ್ದಾರೆ. ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ ಹಾಗೂ ಪಿಎಸ್‍ಐ ರೇಣುಕಾ ಸಮ್ಮುಖದಲ್ಲಿ ಸಾಕ್ಷಿಗಳ ಈ ಹೇಳಿಕೆ ದಾಖಲು ಮಾಡಿದ್ದಾರೆ. ಇಬ್ಬರು ಪೊಲೀಸರ ಮುಂದೆ ಹೇಳಿದ್ದು ಏನು ಎನ್ನುವ ವಿಚಾರ ಮೂಲಗಳಿಂದ ಪಬ್ಲಿಕ್ ಟಿವಿಗೆ ಸಿಕ್ಕಿದೆ. ಇದನ್ನೂ ಓದಿ: 6 ಮಂದಿ ಮೇಲೆ ನಿಂತಿದೆ ನಟ ಅರ್ಜುನ್ ಹಣೆಬರಹ!

    ಕಿರಣ್ ಹೇಳಿದ್ದು ಏನು?
    ಶೃತಿ ಹರಿಹರನ್ ಗೆ ಅರ್ಜುನ್ ಸರ್ಜಾ ಅವರಿಂದ ಕಿರುಕುಳ ಆಗಿದ್ದು ನಿಜ. ರಿಹರ್ಸಲ್ ವೇಳೆಯೂ ಶೃತಿ ಮನಸ್ಸಿಗೆ ಬೇಜಾರು ಮಾಡಿಕೊಂಡಿದ್ದರು. ನಾವು ದೇವನಹಳ್ಳಿಯಿಂದ ಹೊರಟಾಗ ಸಿಗ್ನಲ್ ಬಳಿ ಅರ್ಜುನ್ ಸರ್ಜಾ ಮತ್ತೊಂದು ಕಾರಿನಲ್ಲಿ ಎದುರಾದರು. ಆಗ ನಾನು ಶೃತಿ ಹರಿಹರನ್ ಪಕ್ಕದಲ್ಲಿಯೇ ಕುಳಿತ್ತಿದ್ದೆ. ಶೃತಿ ಹರಿಹರನ್ ಅವರನ್ನು ಅರ್ಜುನ್ ಸರ್ಜಾರ ಊಟಕ್ಕೆ ಕರೆದರು. ಅಷ್ಟೇ ಅಲ್ಲದೇ ರೆಸಾರ್ಟ್ ಗೆ ಹೋಗೋಣ ಬಾ ಎಂದಿದ್ದರು. ಈ ಸಂದರ್ಭದಲ್ಲಿ ಸರ್ಜಾ ಜೊತೆ ಊಟಕ್ಕೆ ಹೋಗಲು ಶೃತಿ ಹರಿಹರನ್ ನಿರಾಕರಿಸಿ ಕಣ್ಣಿರು ಹಾಕಿದರು. ಇದಕ್ಕೆ ನಾನೇ ಸಾಕ್ಷಿ, ನಾನು ಆಗ ಅವರ ಪಕ್ಕದಲ್ಲೇ ಕುಳಿತಿದ್ದೆ. ನಂತರ ಅರ್ಜುನ್ ಸರ್ಜಾ ಹೊರಟರು.

    ಮೋನಿಕಾ ಹೇಳಿದ್ದು ಏನು?
    ನನಗೇನು ಗೊತ್ತಿಲ್ಲ, ನನಗೆ ಏನೂ ನೆನಪಾಗುತ್ತಿಲ್ಲ. ವಿಸ್ಮಯ ಚಿತ್ರದ ಶೂಟಿಂಗ್ ಸೆಟ್ ನಲ್ಲಿ ಏನಾಯ್ತು ಅನ್ನೋದು ನನಗೆ ಸರಿಯಾಗಿ ಗೊತ್ತಿಲ್ಲ. ಲೈಂಗಿಕ ಕಿರುಕುಳ ಬಗ್ಗೆ ನನಗೇನೂ ಗೊತ್ತಿಲ್ಲ, ಶೃತಿಯೂ ಈ ಬಗ್ಗೆ ನನ್ನಲ್ಲಿ ಹೇಳಿಕೊಂಡಿಲ್ಲ ಎಂದು ಅಡ್ಡಗೋಡೆಯ ಮೇಲೆ ದೀಪವಿಟ್ಟಂತೆ ವಿಸ್ಮಯ ಚಿತ್ರದ ಸಹ ನಿರ್ದೇಶಕಿ ಮೋನಿಕಾ ಹೇಳಿಕೆ ನೀಡಿದ್ದಾರೆ.

    ಶೃತಿ ಹರಿಹರನ್ ಅವರ ಆಪ್ತ ಸಹಾಯಕ ಬೋರೇಗೌಡ ಮತ್ತು ವಿಸ್ಮಯ ಚಿತ್ರದ ಮತ್ತೊಬ್ಬ ಸಹ ನಿರ್ದೇಶಕ ಭರತ್ ನೀಲಕಂಠ ಅವರು ಬುಧವಾರ ಪೊಲೀಸರ ಮುಂದೆ ಹೇಳಿಕೆ ನೀಡುವ ಸಾಧ್ಯತೆಗಳಿವೆ.

    ಶುಕ್ರವಾರಕ್ಕೆ ಮುಂದೂಡಿಕೆ:
    ಅರ್ಜುನ್ ಸರ್ಜಾ ಹೂಡಿದ್ದ ಮಾನನಷ್ಟ ಕೇಸ್ ವಿಚಾರಣೆಯನ್ನು ನವೆಂಬರ್ 2ಕ್ಕೆ ಮೇಯೋ ಹಾಲ್ ಕೋರ್ಟ್ ಮುಂದೂಡಿದೆ. ನಿನ್ನೆಯಷ್ಟೇ ಶೃತಿಹರನ್ ಆಕ್ಷೇಪಣೆ ಸಲ್ಲಿಸಿದ್ದರು. ಇದಕ್ಕೆ ಉತ್ತರಿಸಲು ಸಮಯ ಬೇಕು ಎಂದು ಸರ್ಜಾ ಪರ ವಕೀಲರು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ನ್ಯಾಯಧೀಶರು ವಿಚಾರಣೆಯನ್ನ ಶುಕ್ರವಾರಕ್ಕೆ ಮುಂದೂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv