Tag: ಕಿರಣ್ ರಿಜಿಜು

  • ಜಸ್ಟಿಸ್ ವರ್ಮಾ ಪದಚ್ಯುತಿಗೆ 100 ಸಂಸದರ ಸಹಿ: ಕಿರಣ್ ರಿಜಿಜು

    ಜಸ್ಟಿಸ್ ವರ್ಮಾ ಪದಚ್ಯುತಿಗೆ 100 ಸಂಸದರ ಸಹಿ: ಕಿರಣ್ ರಿಜಿಜು

    ನವದೆಹಲಿ: ಕಂತೆ ಕಂತೆ ನೋಟ್ ಸಿಕ್ಕ ನ್ಯಾ.ಯಶವಂತ್ ವರ್ಮಾ (Justice Yashwant Varma) ಪದಚ್ಯುತಿಗೆ ಸಂಸತ್ತಿನಲ್ಲಿ ನಿರ್ಣಯ ಮಂಡಿಸುವ ನೋಟಿಸ್‌ಗೆ ಈಗಾಗಲೇ 100 ಸಂಸದರು ಸಹಿ ಮಾಡಿದ್ದಾರೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು (Kiren Rijiju) ತಿಳಿಸಿದ್ದಾರೆ.

    ಸುಪ್ರೀಂ ಕೋರ್ಟ್ ಅಥವಾ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಪದಚ್ಯುತಗೊಳಿಸುವ ಅಧಿಕಾರ ಸಂಸತ್ತಿಗೆ ಇದೆ. ನ್ಯಾಯಾಧೀಶರ ಪದಚ್ಯುತಿಗೆ ಲೋಕಸಭೆಯಲ್ಲಿ ಕನಿಷ್ಠ 100 ಸಂಸದರು ಮತ್ತು ರಾಜ್ಯಸಭೆಯಲ್ಲಿ 50 ಸಂಸದರು ಸಹಿ ಹಾಕಬೇಕು. ಸೋಮವಾರ ಆರಂಭವಾಗಲಿರುವ ಸಂಸತ್‌ನ ಮುಂಗಾರು ಅಧಿವೇಶನದಲ್ಲಿ (Monsoon Session) ನಿರ್ಣಯ ಮಂಡಿಸುವುದಾಗಿ ಈಗಾಗಲೇ ಸರ್ಕಾರ ಸ್ಪಷ್ಟಪಡಿಸಿದೆ. ಇದನ್ನೂ ಓದಿ: Belagavi | ಕೃಷಿ ಹೊಂಡದಲ್ಲಿ ಮುಳುಗಿ ತಂದೆ-ಮಗ ಸಾವು

    ನಿರ್ಣಯವನ್ನು ಯಾವಾಗ ಮಂಡಿಸಬೇಕು ಎಂಬುದನ್ನು ನಿರ್ಧರಿಸುವುದು ಸದನಗಳ ಕಾರ್ಯಸೂಚಿಗಳನ್ನು ಅಂತಿಮಗೊಳಿಸುವ ಕಲಾಪ ಸಲಹಾ ಸಮಿತಿಯ ಜವಾಬ್ದಾರಿಯಾಗಿದೆ. ಆದ್ದರಿಂದ ನಿರ್ಣಯ ಮಂಡಿಸುವ ದಿನಾಂಕದ ಬಗ್ಗೆ ಯಾವುದೇ ಘೋಷಣೆ ಮಾಡುವುದಿಲ್ಲ ಎಂದು ಕಿರಣ್ ರಿಜಿಜು ಹೇಳಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ಭಾರೀ ಮಳೆ – 9 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

  • ಮುಂಗಾರು ಅಧಿವೇಶನದಲ್ಲಿ ಆಪರೇಷನ್‌ ಸಿಂಧೂರ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧ: ಕಿರಣ್‌ ರಿಜಿಜು

    ಮುಂಗಾರು ಅಧಿವೇಶನದಲ್ಲಿ ಆಪರೇಷನ್‌ ಸಿಂಧೂರ ಬಗ್ಗೆ ಚರ್ಚಿಸಲು ಸರ್ಕಾರ ಸಿದ್ಧ: ಕಿರಣ್‌ ರಿಜಿಜು

    ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ (Monsoon Session) ಆಪರೇಷನ್‌ ಸಿಂಧೂರ (Operation Sindoor) ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ಸರ್ಕಾರ ಮುಕ್ತವಾಗಿದೆ ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು (Kiren Rijiju) ತಿಳಿಸಿದ್ದಾರೆ.

    ಅಧಿವೇಶನಕ್ಕೆ ಮುಂಚಿತವಾಗಿ ಕರೆಯಲ್ಪಟ್ಟ ಎಲ್ಲಾ ಪಕ್ಷದ ಸಭೆಯಲ್ಲಿ ಮಾತನಾಡಿದ ರಿಜಿಜು, ಸದನದ ಸುಗಮ ಕಾರ್ಯವನ್ನು ಖಚಿತಪಡಿಸಿಕೊಳ್ಳಲು ಸರ್ಕಾರ ಮತ್ತು ಪ್ರತಿಪಕ್ಷಗಳ ನಡುವೆ ಹೆಚ್ಚಿನ ಸಮನ್ವಯ ಸಾಧಿಸಬೇಕೆಂದು ಹೇಳಿದ್ದಾರೆ. ಇದನ್ನೂ ಓದಿ: ಅಹಮದಾಬಾದ್ | ಒಂದೇ ಕುಟುಂಬದ ಐವರು ವಿಷ ಸೇವಿಸಿ ಆತ್ಮಹತ್ಯೆ

    ಸಂಸತ್ತಿನಲ್ಲಿ ಆಪರೇಷನ್ ಸಿಂಧೂರದಂತಹ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲು ನಾವು ತುಂಬಾ ಮುಕ್ತರಾಗಿದ್ದೇವೆ. ಸಂಸತ್ತನ್ನು ಸರಾಗವಾಗಿ ನಡೆಸುವಲ್ಲಿ ಸರ್ಕಾರಿ-ಆಪರೀಟಿ ಸಮನ್ವಯ ಇರಬೇಕು ಎಂದಿದ್ದಾರೆ.

    ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಭಾರತ ಮತ್ತು ಪಾಕಿಸ್ತಾನದ ನಡುವೆ ಮಧ್ಯಸ್ಥಿಕೆ ವಹಿಸಿದ್ದೇನೆಂದು ನೀಡಿರುವ ಹೇಳಿಕೆಯು ಸಹ ಸಾಕಷ್ಟು ವಿವಾದ ಹುಟ್ಟುಹಾಕಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ರಿಜಿಜು, ಸರ್ಕಾರವು ಸದನದಲ್ಲಿ ಎಲ್ಲದಕ್ಕೂ ಉತ್ತರಿಸಲಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೋಲ್ಕತ್ತಾ | ಬಾಯ್ಸ್ ಹಾಸ್ಟೆಲ್‌ನಲ್ಲಿ ಯುವತಿಯ ರೇಪ್ ಕೇಸ್ – ಬಾಗಲಕೋಟೆ ಆರೋಪಿಗೆ ಜಾಮೀನು

    ಸರ್ವಪಕ್ಷೀಯ ಸಭೆಯಲ್ಲಿ ವಿರೋಧ ಪಕ್ಷದ ನಾಯಕರು ಸಂಸತ್ತಿನಲ್ಲಿ ಹೈಲೈಟ್ ಮಾಡಲು ಯೋಜಿಸಿರುವ ಹಲವಾರು ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸಿದ್ದಾರೆ.

  • `ಆಪರೇಷನ್ ಸಿಂಧೂರ’ ಇದು ನಿರಂತರ ಕಾರ್ಯಾಚರಣೆ – ಕಿರಣ್ ರಿಜಿಜು

    `ಆಪರೇಷನ್ ಸಿಂಧೂರ’ ಇದು ನಿರಂತರ ಕಾರ್ಯಾಚರಣೆ – ಕಿರಣ್ ರಿಜಿಜು

    ನವದೆಹಲಿ: ಪಾಕ್ (Pakistan) ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ (Indian Army) ನಡೆಸಿದ `ಆಪರೇಷನ್ ಸಿಂಧೂರ’ ಕಾರ್ಯಾಚರಣೆ ನಿರಂತರವಾದದ್ದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiren Rijiju) ಹೇಳಿದರು.

    ಪಹಲ್ಗಾಮ್ ದಾಳಿಯಲ್ಲಿ (Pahalgam Terrorist Attack) ಪ್ರಾಣಬಿಟ್ಟ 26 ಜನರ ಸಾವಿಗೆ ಪ್ರತೀಕಾರವಾಗಿ ಭಾರತೀಯ ಸೇನೆ `ಆಪರೇಷನ್ ಸಿಂಧೂರ’ (Operation Sindoor) ಹೆಸರಿನಲ್ಲಿ ಮಂಗಳವಾರ ತಡರಾತ್ರಿ ಪಾಕ್‌ನ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿದೆ.ಇದನ್ನೂ ಓದಿ: ʻಆಪರೇಷನ್‌ ಸಿಂಧೂರʼದಲ್ಲಿ 100 ಉಗ್ರರ ಹತ್ಯೆ – ಸರ್ವಪಕ್ಷ ಸಭೆಯಲ್ಲಿ ಕೇಂದ್ರ ಸರ್ಕಾರದಿಂದ ಮಾಹಿತಿ

    ಇಂದು ನಡೆದ ಸರ್ವಪಕ್ಷ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, `ಆpಪರೇಷನ್ ಸಿಂಧೂರ’ದಲ್ಲಿ ಕನಿಷ್ಠ 100 ಭಯೋತ್ಪಾದಕರ ಹತ್ಯೆಯಾಗಿದೆ. ಈ ಕಾರ್ಯಾಚರಣೆ ಹೀಗೆ ಮುಂದುವರಿಯಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ತಿಳಿಸಿದ್ದು, ಅವರು ಹೇಳಿದಂತೆ ಇದು ಒಂದು ನಿರಂತರ ಕಾರ್ಯಾಚರಣೆಯಾಗಿದೆ. ಸಶಸ್ತ್ರ ಪಡೆಗಳು ನಡೆಸಿದ ದಾಳಿಯಲ್ಲಿ ಪಾಕಿಸ್ತಾನದ 9 ಭಯೋತ್ಪಾದಕ ಅಡಗುತಾಣಗಳು ಧ್ವಂಸಗೊಂಡಿವೆ. ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಸರ್ಕಾರಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಪ್ರತಿಪಕ್ಷಗಳು ಭರವಸೆ ನೀಡಿವೆ. `ಆಪರೇಷನ್ ಸಿಂಧೂರ’ ಯಶಸ್ಸಿಗೆ ಪಕ್ಷಾತೀತವಾಗಿ ಎಲ್ಲರೂ ಭಾರತೀಯ ಸೇನೆಯನ್ನು ಅಭಿನಂದಿಸಿದರು ಎಂದು ತಿಳಿಸಿದರು.

    ಸದ್ಯ ದೇಶವು ಎದುರಿಸುತ್ತಿರುವ ಪ್ರಮುಖ ಸವಾಲನ್ನು ಗುರುತಿಸಿ ಪ್ರತಿಯೊಬ್ಬ ನಾಯಕರು ಜವಾಬ್ದಾರಿ ಮತ್ತು ಪ್ರಬುದ್ಧತೆಯಿಂದ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದಾರೆ. ಇದಕ್ಕೆ ಪ್ರತಿಯಾಗಿ ಪಾಕಿಸ್ತಾನ ಪ್ರತೀಕಾರ ತೀರಿಸಿಕೊಂಡರೆ ಭಾರತ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ. ಆದರೆ ಈಗಾಗಲೇ ಆಪರೇಷನ್ ಸಿಂಧೂರಕ್ಕೆ ಪ್ರತಿಯಾಗಿ, ಪಾಕಿಸ್ತಾನಿ ಸೇನೆಯು ಪೂಂಚ್-ರಾಜೌರಿ ಪ್ರದೇಶದ ನಿಯಂತ್ರಣ ರೇಖೆಯುದ್ದಕ್ಕೂ ಫಿರಂಗಿ ದಾಳಿ ನಡೆಸಿ 15 ನಾಗರಿಕರನ್ನು ಬಲಿಪಡೆದುಕೊಂಡಿದೆ ಎಂದರು.ಇದನ್ನೂ ಓದಿ: ಸರ್ವಪಕ್ಷ ಸಭೆಗೆ ಪ್ರಧಾನಿ ಮೋದಿ ಗೈರು – ಖರ್ಗೆ ಅಸಮಾಧಾನ

  • ರಾಜ್ಯಸಭೆಯಲ್ಲೂ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

    ರಾಜ್ಯಸಭೆಯಲ್ಲೂ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

    ನವದೆಹಲಿ: ಲೋಕಸಭೆ ಅಂಗೀಕಾರದ ನಂತರ ಕೇಂದ್ರ ಸಚಿವ ಕಿರಣ್ ರಿಜಿಜು (Kiran Rijiju) ಅವರು ಗುರುವಾರ ರಾಜ್ಯಸಭೆಯಲ್ಲಿ ವಕ್ಫ್ ತಿದ್ದುಪಡಿ ಮಸೂದೆ (Waqf Amendment Bill) ಮಂಡಿಸಿದರು.

    ವಕ್ಫ್ ಮಂಡಳಿಗಳನ್ನು ಬಲಪಡಿಸುವ, ಮಹಿಳೆಯರು, ಮಕ್ಕಳು ಮತ್ತು ವಂಚಿತ ವರ್ಗಗಳ ಹಕ್ಕುಗಳನ್ನು ರಕ್ಷಿಸುವುದನ್ನು ಖಚಿತಪಡಿಸಿಕೊಳ್ಳುವ ಉದ್ದೇಶದಿಂದ ವಕ್ಫ್ (ತಿದ್ದುಪಡಿ) ಮಸೂದೆಯನ್ನು ರಚಿಸಲಾಗಿದೆ ಎಂದು ಕಿರಣ್ ರಿಜಿಜು ಮಸೂದೆ ಮಂಡಿಸಿ ಹೇಳಿದರು. ಇದನ್ನೂ ಓದಿ: ವಕ್ಫ್ ಫೈಟ್: ಏನಿದು ವಿವಾದ?- ಹೊಸ ತಿದ್ದುಪಡಿ ಮಸೂದೆಯಿಂದ ಆಗುವ ಬದಲಾವಣೆ ಏನು?

    ಬುಧವಾರ ತಡರಾತ್ರಿ ಲೋಕಸಭೆಯಲ್ಲಿ ಮಸೂದೆ ಅಂಗೀಕಾರವಾಗಿದ್ದು, 288 ಸದಸ್ಯರು ಇದರ ಪರವಾಗಿ ಮತ್ತು 232 ಸದಸ್ಯರು ವಿರುದ್ಧವಾಗಿ ಮತ ಚಲಾಯಿಸಿದ್ದಾರೆ.

    ಹೊಸ ಮಸೂದೆಯನ್ನು UMEED (ಏಕೀಕೃತ ವಕ್ಫ್ ನಿರ್ವಹಣೆ, ಮೌಲ್ಯವರ್ಧನೆ, ಕಾರ್ಯದಕ್ಷತೆ ಮತ್ತು ಅಭಿವೃದ್ಧಿ ಕಾಯ್ದೆ) ಎಂದು ಕರೆಯಲಾಗುವುದು ಎಂದು ಹೇಳಿದ್ದ ಕಿರಣ್‌ ರಿಜಿಜು ತಿಳಿಸಿದ್ದಾರೆ. ಇದನ್ನು ಒಳ್ಳೆಯ ಉದ್ದೇಶಕ್ಕೆ ಜಾರಿಗೆ ತರಲಾಗಿದೆ. ಯಾರಿಗೂ ಇದರಿಂದ ಸಮಸ್ಯೆ ಆಗಬಾರದು ಎಂದು ತಿಳಿಸಿದರು. ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಮಸೂದೆಗೆ ಲೋಕಸಭೆ ಅಸ್ತು – ತಡರಾತ್ರಿ 2 ಗಂಟೆಗೆ ಅಂಗೀಕಾರ

  • Waqf Debate |ವರ್ಷಕ್ಕೆ 12 ಸಾವಿರ ಕೋಟಿ ಆದಾಯ ಸಿಗ್ಬೇಕು, ಆದ್ರೆ ಸಿಕ್ಕಿದ್ದು 166 ಕೋಟಿ: ಕಾಂಗ್ರೆಸ್‌ ವಿರುದ್ಧ ರಿಜಿಜು ಕಿಡಿ

    Waqf Debate |ವರ್ಷಕ್ಕೆ 12 ಸಾವಿರ ಕೋಟಿ ಆದಾಯ ಸಿಗ್ಬೇಕು, ಆದ್ರೆ ಸಿಕ್ಕಿದ್ದು 166 ಕೋಟಿ: ಕಾಂಗ್ರೆಸ್‌ ವಿರುದ್ಧ ರಿಜಿಜು ಕಿಡಿ

    ನವದೆಹಲಿ: “ದೇಶದ ವಕ್ಫ್‌ ಬೋರ್ಡ್‌ಗಳಿಂದ (Waqf Board) ಕನಿಷ್ಟ ವರ್ಷಕ್ಕೆ 12 ಸಾವಿರ ಕೋಟಿ ರೂ. ಆದಾಯ ಸಿಗಬೇಕು. ಆದರೆ ವಕ್ಫ್‌ನಿಂದ ಸಿಕ್ಕಿದ್ದು ಕೇವಲ 166 ಕೋಟಿ ರೂ. ಆದಾಯ”

    ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ (Waqf Bill) ಮಂಡಿಸಿ ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆಯ ಸಚಿವ ಕಿರಣ್‌ ರಿಜಿಜು (Kiren Rijiju) ಕಾಂಗ್ರೆಸ್‌ ನೇತೃತ್ವದ ಯುಪಿಎ (UPA) ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

    2004 ರ ಹೊತ್ತಿಗೆ ವಕ್ಫ್ ಬಳಿ ಒಟ್ಟು 4.9 ಲಕ್ಷ ರೂ. ಮೌಲ್ಯದ ಆಸ್ತಿ ಇತ್ತು ಮತ್ತು ಆದಾಯ ಕೇವಲ 163 ಕೋಟಿ ರೂ.ಗಳಷ್ಟಿತ್ತು. ಆದರೆ 2013 ರ ತಿದ್ದುಪಡಿಯ ನಂತರ ಆದಾಯವು 166 ಕೋಟಿ ರೂ.ಗೆ ಏರಿಕೆಯಾಯಿತು. ಕೇವಲ 3 ಕೋಟಿ ಮಾತ್ರ ಏರಿಕೆ ಹೇಗಾಯ್ತು ಎಂದು ಪ್ರಶ್ನಿಸಿದರು. ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಮಸೂದೆಗೆ ಮುಸ್ಲಿಂ ಮಹಿಳೆಯರ ಬೆಂಬಲ – ‘ಥ್ಯಾಂಕ್ಯು ಮೋದಿ ಜೀ’ ಎಂದು ಕೃತಜ್ಞತೆ

    ಇಷ್ಟು ದೊಡ್ಡ ಪ್ರಮಾಣದಲ್ಲಿ ಆಸ್ತಿ ಇರುವ ವಕ್ಫ್‌ನಿಂದ ಅಲ್ಪ ಆದಾಯವನ್ನು ಸ್ವೀಕರಿಸಲು ಸಾಧ್ಯವಿಲ್ಲ. ಆದಾಯ ಕನಿಷ್ಠವಾದರೂ 12 ಸಾವಿರ ಕೋಟಿ ರೂ.ಗಳಾಗಿರಬೇಕು. ವಕ್ಫ್ ಆಸ್ತಿಯ ಲಾಭ ಬಡ ಮುಸ್ಲಿಮರಿಗೆ ಆಗಬೇಕು. ಈ ಉದ್ದೇಶ ಈಡೇರಿಕೆಗೆ ವಕ್ಫ್ ಮಸೂದೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು. ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೆ ಬಾರದೇ ಇದ್ದರೆ ಈ ಸಂಸತ್ತನ್ನೇ ಕಾಂಗ್ರೆಸ್‌ ವಕ್ಫ್‌ಗೆ ನೀಡ್ತಿತ್ತು: ಕಿರಣ್‌ ರಿಜಿಜು

    ವಕ್ಫ್ ಆಸ್ತಿಯನ್ನು ಸರಿಯಾಗಿ ಬಳಸಿಕೊಂಡರೆ ವರ್ಷಕ್ಕೆ 12,000 ಕೋಟಿ ರೂ. ಆದಾಯ ಗಳಿಸಬಹುದು ಎಂದು ಸಾಚಾರ್ ಸಮಿತಿ ಹೇಳಿತ್ತು. 2006 ರಲ್ಲಿ ತನ್ನ ವರದಿಯನ್ನು ಸಲ್ಲಿಸಿದ ಸಾಚಾರ್ ಸಮಿತಿಯು, ಈ ಆಸ್ತಿಗಳನ್ನು ಸಮರ್ಥ ಮತ್ತು ಮಾರುಕಟ್ಟೆ ಬಳಕೆಗೆ ಒಳಪಡಿಸಿ ಕನಿಷ್ಟ 10% ರಷ್ಟು ಬಳಕೆ ಮಾಡಿದರೆ ವರ್ಷಕ್ಕೆ ಸುಮಾರು 12,000 ಕೋಟಿ ರೂಪಾಯಿಗಳ ಆದಾಯವನ್ನು ಗಳಿಸಬಹುದು ಎಂದು ಉಲ್ಲೇಖಿಸಿತ್ತು.

    ವಕ್ಫ್‌ ಆಸ್ತಿ ಎಷ್ಟಿದೆ?
    ಸರ್ಕಾರಿ ಮಾಹಿತಿಯ ಪ್ರಕಾರ, ವಕ್ಫ್ ಮಂಡಳಿಗಳು ಪ್ರಸ್ತುತ ಭಾರತದಾದ್ಯಂತ 9.4 ಲಕ್ಷ ಎಕರೆಗಳಷ್ಟು ವಿಸ್ತೀರ್ಣ ಹೊಂದಿರುವ 8.7 ಲಕ್ಷ ಆಸ್ತಿಗಳ ನಿಯಂತ್ರಣ ಹೊಂದಿದೆ. ಈ ಎಲ್ಲಾ ಆಸ್ತಿಗಳ ಮೌಲ್ಯ 1.2 ಲಕ್ಷ ಕೋಟಿ ರೂ. ಸಶಸ್ತ್ರ ಪಡೆಗಳು ಮತ್ತು ಭಾರತೀಯ ರೈಲ್ವೆಯ ನಂತರ, ವಕ್ಫ್ ಮಂಡಳಿಯು ಭಾರತದಲ್ಲಿ ಅತಿಹೆಚ್ಚು ಭೂಮಿಯನ್ನು ಹೊಂದಿದ ಸಂಸ್ಥೆಯಾಗಿದೆ.

    ವಕ್ಫ್ ಮಂಡಳಿಯ ಅಡಿಯಲ್ಲಿ 8,72,328 ಸ್ಥಿರ ಮತ್ತು 16,713 ಚರ ಆಸ್ತಿಗಳನ್ನು ನೋಂದಣಿ ಮಾಡಲಾಗಿದೆ. ವಕ್ಫ್ ಮಂಡಳಿಯ ಅಡಿಯಲ್ಲಿ 3,56, 051 ವಕ್ಫ್ ಎಸ್ಟೇಟ್‌ಗಳು ನೋಂದಾಯಿಸಲ್ಪಟ್ಟಿದೆ. ಅತಿ ಹೆಚ್ಚು ವಕ್ಫ್‌ ಆಸ್ತಿ ಇರುವ ರಾಜ್ಯಗಳ ಪೈಕಿ ಉತ್ತರ ಪ್ರದೇಶ (2,32,547) ಮೊದಲ ಸ್ಥಾನದಲ್ಲಿದ್ದರೆ ಪಶ್ಚಿಮ ಬಂಗಾಳ (80,480) ಎರಡನೇ ಸ್ಥಾನ ಹೊಂದಿದೆ.

     

  • ಬಿಜೆಪಿ ಅಧಿಕಾರಕ್ಕೆ ಬಾರದೇ ಇದ್ದರೆ ಈ ಸಂಸತ್ತನ್ನೇ ಕಾಂಗ್ರೆಸ್‌ ವಕ್ಫ್‌ಗೆ ನೀಡ್ತಿತ್ತು: ಕಿರಣ್‌ ರಿಜಿಜು

    ಬಿಜೆಪಿ ಅಧಿಕಾರಕ್ಕೆ ಬಾರದೇ ಇದ್ದರೆ ಈ ಸಂಸತ್ತನ್ನೇ ಕಾಂಗ್ರೆಸ್‌ ವಕ್ಫ್‌ಗೆ ನೀಡ್ತಿತ್ತು: ಕಿರಣ್‌ ರಿಜಿಜು

    ನವದೆಹಲಿ: 2014ರಲ್ಲಿ ಬಿಜೆಪಿ ಸರ್ಕಾರ (BJP Government) ಅಧಿಕಾರಕ್ಕೆ ಬಾರದೇ ಇದ್ದರೆ ಸಂಸತ್ತು, ವಿಮಾನ ನಿಲ್ದಾಣವನ್ನು (Airtport) ಕಾಂಗ್ರೆಸ್‌ ವಕ್ಫ್‌ಗೆ ನೀಡುತ್ತಿತ್ತು ಎಂದು ಕೇಂದ್ರ ಸಂಸದೀಯ ಖಾತೆ ಮತ್ತು ಅಲ್ಪಸಂಖ್ಯಾತ ಖಾತೆಯ ಸಚಿವ ಕಿರಣ್‌ ರಿಜಿಜು (Kiren Rijiju) ಹೇಳಿದರು.

    ವಕ್ಫ್‌ ತಿದ್ದುಪಡಿ ಮಸೂದೆಯನ್ನು (Waqf Amendment Bill) ಲೋಕಸಭೆಯಲ್ಲಿ ಮಂಡಿಸಿದ ಬಳಿಕ ಮಾತನಾಡಿದ ಅವರು, ಹಿಂದಿನ ಕಾಂಗ್ರೆಸ್ ಸರ್ಕಾರವು ಶಾಸನಕ್ಕೆ ಮಾಡಿದ ಬದಲಾವಣೆಗಳು ಇತರ ಕಾನೂನುಗಳಿಗಿಂತ ಹೆಚ್ಚಿನ ಪರಿಣಾಮವನ್ನು ನೀಡಿದ್ದರಿಂದ ಹೊಸ ತಿದ್ದುಪಡಿಗಳು ಅಗತ್ಯವಾಗಿವೆ ಎಂದು ಸಮರ್ಥಿಸಿಕೊಂಡರು.

    ಕಾಂಗ್ರೆಸ್ ಸರ್ಕಾರ 123 ಆಸ್ತಿಗಳನ್ನು ಡಿನೋಟಿಫೈ ಮಾಡಿ ವಕ್ಫ್ ಮಂಡಳಿಗೆ ಹಸ್ತಾಂತರಿಸಿತ್ತು. ನಾವು ಈ ತಿದ್ದುಪಡಿಯನ್ನು ಪರಿಚಯಿಸದಿದ್ದರೆ, ಸಂಸತ್ತಿನ ಕಟ್ಟಡವನ್ನು ಸಹ ವಕ್ಫ್ ಆಸ್ತಿ ಎಂದು ಹೇಳಿಕೊಳ್ಳಬಹುದಿತ್ತು ಎಂದು ತಿಳಿಸಿದರು.  ಇದನ್ನೂ ಓದಿ: ವಕ್ಫ್‌ ತಿದ್ದುಪಡಿ ಮಸೂದೆಗೆ ಮುಸ್ಲಿಂ ಮಹಿಳೆಯರ ಬೆಂಬಲ – ‘ಥ್ಯಾಂಕ್ಯು ಮೋದಿ ಜೀ’ ಎಂದು ಕೃತಜ್ಞತೆ

    ಈ ಮಸೂದೆಯು ಬಡ ಮುಸ್ಲಿಮರು ಮತ್ತು ಮಹಿಳೆಯರ ಹಿತಾಸಕ್ತಿಗಾಗಿ ಮತ್ತು ಆಸ್ತಿಗಳನ್ನು ನಿರ್ವಹಿಸುವಲ್ಲಿ ಹೊಣೆಗಾರಿಕೆ ಮತ್ತು ಪಾರದರ್ಶಕತೆಯನ್ನು ಖಚಿತಪಡಿಸುತ್ತದೆ. ವಿರೋಧ ಪಕ್ಷಗಳು ಹೇಳುತ್ತಿರುವಂತೆ ಮುಸ್ಲಿಂ ಸಮುದಾಯದ ಭೂಮಿ ಅಥವಾ ಮಸೀದಿಗಳನ್ನು ಕಿತ್ತುಕೊಳ್ಳುವ ಗುರಿಯನ್ನು ಮಸೂದೆ ಹೊಂದಿಲ್ಲ. ಆ ಜಾಗಗಳನ್ನು ರಕ್ಷಿಸುತ್ತದೆ ಎಂದು ಹೇಳಿದರು.

    ರಿಜಿಜು ವಿರುದ್ಧ ಕಾಂಗ್ರೆಸ್ ಆರೋಪವನ್ನು ಮುಂದಿಟ್ಟ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್, ಈ ಶಾಸನವು ಸಂವಿಧಾನವನ್ನು ದುರ್ಬಲಗೊಳಿಸುತ್ತದೆ, ಅಲ್ಪಸಂಖ್ಯಾತ ಸಮುದಾಯವನ್ನು ಮಾನಹಾನಿಗೊಳಿಸುತ್ತದೆ ಮತ್ತು ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ಸಮಾಜವನ್ನು ವಿಭಜಿಸುತ್ತದೆ ಎಂದು ದೂರಿದರು. ಇದನ್ನೂ ಓದಿ: ವಕ್ಫ್ ಮಸೂದೆಯ ಪರ ಮತ ಹಾಕಿ – ಸಂಸದರಿಗೆ ಕೇರಳ ಕ್ಯಾಥೋಲಿಕ್ ಬಿಷಪ್ ಸಂಘಟನೆ ಕರೆ

     ಗೃಹ ಸಚಿವ ಅಮಿತ್‌ ಶಾ ಮಾತನಾಡಿ, ವಕ್ಫ್ ಮಸೂದೆಯ ಎಲ್ಲಾ ಅಂಶಗಳನ್ನು ಜೆಪಿಸಿಯಲ್ಲಿ ಚರ್ಚಿಸಲಾಗಿದೆ. ಈ ಹಿಂದೆ ಕಾಂಗ್ರೆಸ್‌ ಚರ್ಚೆ ಮಾಡದೇ ಕಾನೂನುಗಳನ್ನು ಅಂಗೀಕರಿಸಿತ್ತು. ನಮ್ಮ ಸಮಿತಿಯು ಚರ್ಚಿಸುತ್ತದೆ ಮತ್ತು ಬದಲಾವಣೆಗಳನ್ನು ಮಾಡುತ್ತದೆ ಎಂದರು.

    543 ಸದಸ್ಯರ ಲೋಕಸಭೆಯಲ್ಲಿ, ಬಿಜೆಪಿ ನೇತೃತ್ವದ ಎನ್‌ಡಿಎ 293 ಸದಸ್ಯರನ್ನು ಹೊಂದಿದೆ. ಮಸೂದೆ ಅಂಗೀಕಾರಕ್ಕೆ ಪರವಾಗಿ 272 ಮತಗಳು ಬೇಕಾಗುತ್ತವೆ. ರಾಜ್ಯಸಭೆಯಲ್ಲಿ ಎನ್‌ಡಿಎ 125 ಸಂಸದರ ಬೆಂಬಲವನ್ನು ಹೊಂದಿದೆ. ರಾಜ್ಯಸಭೆಯಲ್ಲಿ ಬಹುಮತಕ್ಕೆ 118 ಸದಸ್ಯರ ಬೆಂಬಲ ಬೇಕು.

  • ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

    ಲೋಕಸಭೆಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಮಂಡನೆ

    ನವದೆಹಲಿ: ವಿಪಕ್ಷಗಳ ವ್ಯಾಪಕ ವಿರೋಧದ ನಡುವೆಯೂ ಲೋಕಸಭೆಯಲ್ಲಿ ಇಂದು ವಕ್ಫ್‌ ತಿದ್ದುಪಡಿ ಮಸೂದೆಯನ್ನು (Waqf Amendment Bill tak) ಮಂಡಿಸಲಾಯಿತು.

    ಕೇಂದ್ರ ಸಂಸದೀಯ ವ್ಯವಹಾರ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್‌ ರಿಜಿಜು ಮಸೂದೆಯನ್ನು ಮಂಡಿಸಿದರು.

    ಎರಡೂ ಮನೆಗಳ ಜಂಟಿ ಸಮಿತಿಯಲ್ಲಿ ವಕ್ಫ್‌ ತಿದ್ದುಪಡಿ ಮಸೂದೆ ಬಗ್ಗೆ ನಡೆದ ಚರ್ಚೆಯನ್ನು ಭಾರತದ ಸಂಸತ್ತಿನ ಇತಿಹಾಸದಲ್ಲಿ ಇಲ್ಲಿಯವರೆಗೆ ಮಾಡಲಾಗಿಲ್ಲ ಎಂದು ನಾನು ಹೇಳಲು ಬಯಸುತ್ತೇನೆ. ಜಂಟಿ ಸಮಿತಿಯ ಎಲ್ಲ ಸದಸ್ಯರಿಗೆ ನಾನು ಧನ್ಯವಾದ ಮತ್ತು ಅಭಿನಂದಿಸುತ್ತೇನೆ. ಇಲ್ಲಿಯವರೆಗೆ, ವಿವಿಧ ಸಮುದಾಯಗಳ ರಾಜ್ಯ ಹೊಂದಿರುವವರ ಒಟ್ಟು 284 ನಿಯೋಗಗಳು ತಮ್ಮ ಅಭಿಪ್ರಾಯಗಳನ್ನು ಮತ್ತು ಸಲಹೆಗಳನ್ನು ಸಮಿತಿಯ ಮುಂದೆ ಮಂಡಿಸಿವೆ. 25 ರಾಜ್ಯ ಸರ್ಕಾರಗಳು ಮತ್ತು ಕೇಂದ್ರ ಪ್ರಾಂತ್ಯಗಳ ವಕ್ಫ್‌ ಮಂಡಳಿಗಳು ಸಹ ತಮ್ಮ ಸಲ್ಲಿಕೆಗಳನ್ನು ಪ್ರಸ್ತುತಪಡಿಸಿವೆ ಎಂದು ರಿಜಿಜು ತಿಳಿಸಿದ್ದಾರೆ.

    ಭರವಸೆ ಮಾತ್ರವಲ್ಲ, ಈ ಮಸೂದೆಯನ್ನು ವಿರೋಧಿಸುವವರು ಸಹ ತಮ್ಮ ಹೃದಯದಲ್ಲಿ ಬದಲಾವಣೆಯನ್ನು ಹೊಂದಿರುತ್ತಾರೆ ಎಂದು ನನಗೆ ಖಾತ್ರಿಯಿದೆ. ಪ್ರತಿಯೊಬ್ಬರೂ ಈ ಮಸೂದೆಯನ್ನು ಸಕಾರಾತ್ಮಕ ಮನೋಭಾವದಿಂದ ಬೆಂಬಲಿಸುತ್ತಾರೆ ಎಂದು ರಿಜಿಜು ಆಶಯ ವ್ಯಕ್ತಪಡಿಸಿದ್ದಾರೆ.

  • RSS ಹೊಗಳೋದ್ರಲ್ಲಿ ತಪ್ಪೇನು?, ಅವಿಶ್ವಾಸ ನಿರ್ಣಯ ಮಂಡಿಸಿರುವುದು ವಿಷಾದನೀಯ: ಕಿರಣ್ ರಿಜಿಜು

    RSS ಹೊಗಳೋದ್ರಲ್ಲಿ ತಪ್ಪೇನು?, ಅವಿಶ್ವಾಸ ನಿರ್ಣಯ ಮಂಡಿಸಿರುವುದು ವಿಷಾದನೀಯ: ಕಿರಣ್ ರಿಜಿಜು

    ನವದೆಹಲಿ: ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರ ಪದಚ್ಯುತಿಗೆ ಒತ್ತಾಯಿಸಿ ವಿಪಕ್ಷಗಳು ಅವಿಶ್ವಾಸ ನಿರ್ಣಯ ಮಂಡಿಸಿರುವುದು ಅತ್ಯಂತ ವಿಷಾದನೀಯ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು (Kiren Rijiju) ಹೇಳಿದ್ದಾರೆ.

    ಮೇಲ್ಮನೆಯ ಸಭಾಪತಿಯಾಗಿ ಪಕ್ಷಪಾತ ಧೋರಣೆ ಪ್ರದರ್ಶಿಸಿದ್ದಾರೆ ಎಂದು ಆರೋಪಿಸಿ, ಧನಕ‌ರ್ (Jagdeep Dhankhar) ಅವರನ್ನು ಪದಚ್ಯುತಿಗೊಳಿಸಲು ರಾಜ್ಯಸಭೆಯಲ್ಲಿ ಗೊತ್ತುವಳಿ ಮಂಡಿಸಲು ಇಂಡಿಯಾ ಬಣದ ಪಕ್ಷಗಳ ಸದಸ್ಯರು ಮಂಗಳವಾರ ನೋಟಿಸ್‌ ನೀಡಿದ್ದಾರೆ. ಈ ಕುರಿತು ರಿಜಿಜು ಮಾತನಾಡಿದ್ದಾರೆ. ರಾಜ್ಯ ಪ್ರಧಾನ ಕಾರ್ಯದರ್ಶಿಗಳಿಗೆ ಸಲ್ಲಿಸಿದ ನೋಟಿಸ್‌ನಲ್ಲಿ ಈ ಹಿಂದೆ ಧನಕರ್‌ ಅವರು ಆರ್‌ಎಸ್‌ಎಸ್‌ ಅನ್ನು ಹೇಗೆ ಹೊಗಳಿದ್ದರು ಎಂಬ ಅಂಶವನ್ನು ಕಾಂಗ್ರೆಸ್‌ ಉಲ್ಲೇಖಿಸಿದೆ. ಅಲ್ಲದೇ ಧನಕರ್‌ ಆರ್‌ಎಸ್‌ಎಸ್‌ನ ಏಕಲವ್ಯ ಎಂದು ಬಣ್ಣಿಸಿದೆ. ಆರ್‌ಎಸ್‌ಎಸ್‌ ನಮ್ಮ ದೇಶದ ಹೆಮ್ಮೆಯ ಸಂಘಟನೆಯಾಗಿದೆ. ಆರ್‌ಎಸ್‌ಎಸ್‌ ಹೊಗಳೋದ್ರಲ್ಲಿ ತಪ್ಪೇನಿದೆ ಎಂದು ಪ್ರಶ್ನೆ ಮಾಡಿದ್ದಾರೆ.

    ಭಾರತ ದೇಶದ ಯಾವುದೇ ಸಂಘಟನೆಯನ್ನು ಹೊಗಳುವುದು ಕಾನೂನು ಬಾಹಿರ ಆಗುವುದಿಲ್ಲ. ಉಪರಾಷ್ಟ್ರಪತಿಗಳು ಆರ್‌ಎಸ್‌ಎಸ್ ಬಗ್ಗೆ ಒಳ್ಳೆಯ ಮಾತು ಆಡಿರುವುದನ್ನ ಅಪರಾಧ ಅಂತ ಹೇಗೆ ಪರಿಗಣಿಸಿದೆ ಎಂಬುದೇ ಆಶ್ಚರ್ಯವಾಗಿದೆ. ಗಾಂಧಿ ಕುಟುಂಬದೊಂದಿಗೆ ಜಾರ್ಜ್ ಸೊರೊಸ್ ಸಂಪರ್ಕದ ವಿಚಾರವನ್ನು ದಿಕ್ಕುತಪ್ಪಿಸಲು ಕಾಂಗ್ರೆಸ್‌ ತಂತ್ರ ಮಾಡಿದೆ ಎಂದು ರಿಜಿಜು ಹೇಳಿದ್ದಾರೆ.

    ಧನಕರ್ ಅವರು ಅತ್ಯಂತ ವೃತ್ತಿಪರ ಮತ್ತು ನಿಷ್ಪಕ್ಷಪಾತ ಧೋರಣೆ ಉಳ್ಳವರು. ಈ ಅವಿಶ್ವಾಸ ನಿರ್ಣಯ ಅಂಗೀಕಾರವಾಗಬೇಕಾದರೆ ಸರಳ ಬಹುಮತ ಬೇಕು. ಆದರೆ, ವಿಪಕ್ಷಗಳಿಗೆ ಅಷ್ಟು ಸದಸ್ಯರ ಬೆಂಬಲ ಇಲ್ಲ. ಆದರೂ ಸಂಸದೀಯ ಪ್ರಜಾಪ್ರಭುತ್ವಕ್ಕಾಗಿ ಹೋರಾಡಲು ಇದೊಂದು ಅಸ್ತ್ರ ಎಂದು ವಿಪಕ್ಷಗಳ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

    ಪದಚ್ಯುತಗೊಳಿಸಲು ರಾಜ್ಯಸಭೆಯಲ್ಲಿ ಗೊತ್ತುವಳಿ ಮಂಡಿಸಲು ಇಂಡಿಯಾ ಬಣದ ಪಕ್ಷಗಳ ಸದಸ್ಯರು ಮಂಗಳವಾರ ನೋಟಿಸ್‌ ನೀಡಿದ್ದಾರೆ. ಈ ಅವಿಶ್ವಾಸ ನಿರ್ಣಯ ಅಂಗೀಕಾರವಾಗಬೇಕಾದರೆ ಸರಳ ಬಹುಮತ ಬೇಕು. ಆದರೆ, ವಿಪಕ್ಷಗಳಿಗೆ ಅಷ್ಟು ಸದಸ್ಯರ ಬೆಂಬಲ ಇಲ್ಲ. ಆದರೂ ಸಂಸದೀಯ ಪ್ರಜಾಪ್ರಭುತ್ವಕ್ಕಾಗಿ ಹೋರಾಡಲು ಇದೊಂದು ಅಸ್ತ್ರ ಎಂದು ವಿಪಕ್ಷಗಳ ಸದಸ್ಯರು ಅಭಿಪ್ರಾಯಪಟ್ಟಿದ್ದಾರೆ.

    ಕಾಂಗ್ರೆಸ್, ಆರ್‌ಜೆಡಿ, ಟಿಎಂಸಿ, ಸಿಪಿಐ, ಸಿಪಿಐ-ಎಂ, ಜೆಂಎಂ, ಎಎಪಿ, ಸಮಾಜವಾದಿ ಪಕ್ಷಗಳ 60 ಸದಸ್ಯರು ಸಹಿ ಹಾಕಿದ್ದ ನೋಟಿಸ್ ಅನ್ನು ವಿಪಕ್ಷಗಳ ಪರವಾಗಿ ಕಾಂಗ್ರೆಸ್‌ ಸದಸ್ಯರಾದ ಜೈರಾಮ್ ರಮೇಶ್, ನಾಸಿ‌ರ್ ಹುಸೇನ್‌ ಅವರು ರಾಜ್ಯಸಭಾ ಪ್ರಧಾನ ಕಾರ್ಯದರ್ಶಿಗಳಿಗೆ ಸಲ್ಲಿಸಿದ್ದಾರೆ.

  • ಭಾರತ ವಿರೋಧಿ ಸೊರೊಸ್‌ ಸಂಸ್ಥೆಯ ಜೊತೆ ಸೋನಿಯಾಗೆ ನಂಟು – ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದ ಕಿರಣ್‌ ರಿಜಿಜು

    ಭಾರತ ವಿರೋಧಿ ಸೊರೊಸ್‌ ಸಂಸ್ಥೆಯ ಜೊತೆ ಸೋನಿಯಾಗೆ ನಂಟು – ಚರ್ಚೆಗೆ ಸರ್ಕಾರ ಸಿದ್ಧವಿದೆ ಎಂದ ಕಿರಣ್‌ ರಿಜಿಜು

    ನವದೆಹಲಿ: ಹಂಗೇರಿ-ಅಮೆರಿಕನ್ ಉದ್ಯಮಿ ಜಾರ್ಜ್ ಸೊರೊಸ್ (George Soros) ಅವರ ಸಂಸ್ಥೆಯ ಜೊತೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (Sonia Gandhi) ಅವರ ನಂಟು ಬಹಳ ಗಂಭೀರ ವಿಚಾರ ಎಂದು ಕೇಂದ್ರ ಸಚಿವ ಕಿರಣ್‌ ರಿಜಿಜು (Kiren Rijiju) ಹೇಳಿದ್ದಾರೆ.

    ಈ ವಿಚಾರದ ಬಗ್ಗೆ ಚರ್ಚೆ ನಡೆಸಲು ನಾವು ಸಿದ್ಧ. ಭಾರತ ವಿರೋಧಿಗಳ ವಿರುದ್ಧ ದೇಶದ ನಾಗರಿಕರು ಒಗ್ಗಟ್ಟಿನಿಂದ ಇರಬೇಕೆಂದು ಅವರು ಮನವಿ ಮಾಡಿದರು. ಜಾರ್ಜ್‌ ಸೊರೊಸ್‌ ವಿಚಾರವನ್ನು ಈಗಾಗಲೇ ನಾವು ಸಂಸತ್ತಿನಲ್ಲಿ ಪ್ರಸ್ತಾಪ ಮಾಡಿದ್ದೇವೆ. ಸೊರೊಸ್ ಭಾರತದ ವಿರುದ್ಧ ಕೆಲಸ ಮಾಡುವ ವ್ಯಕ್ತಿ ಎಂದು ದೂರಿದರು.

     

    ಪ್ರಸ್ತುತ ದೇಶದ ಮುಂದಿರುವ ಸಮಸ್ಯೆ ಬಹಳ ಗಂಭೀರವಾಗಿದೆ. ಕೆಲವು ಸಮಸ್ಯೆಗಳನ್ನು ರಾಜಕೀಯ ದೃಷ್ಟಿಕೋನದಿಂದ ನೋಡಬಾರದು. ಜಾರ್ಜ್ ಸೊರೊಸ್ ಅವರ ಒಳಗೊಳ್ಳುವಿಕೆ ಮತ್ತು ಅವರ ಲಿಂಕ್‌ಗಳು ಅದು ರಾಹುಲ್ ಗಾಂಧಿ ಅಥವಾ ಸೋನಿಯಾ ಗಾಂಧಿ ಅಗಲಿ ನಾವು ಇದನ್ನು ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದ ವಿಷಯವಾಗಿ ನೋಡುವುದಿಲ್ಲ. ಯಾವುದೇ ಭಾರತೀಯರು ಭಾರತದ ವಿರುದ್ಧ ವಿದೇಶಿ ಶಕ್ತಿಗಳೊಂದಿಗೆ ಶಾಮೀಲಾಗಿದ್ದರೆ ಅವುಗಳನ್ನು ಪರಿಹರಿಸಬೇಕು ಎಂದರು. ಇದನ್ನೂ ಓದಿ: ಸೊರೊಸ್‌ ಜೊತೆ ಕೈಜೋಡಿಸಿರುವ ರಾಹುಲ್‌ ದೇಶದ್ರೋಹಿ: ಸಂಬಿತ್‌ ಪಾತ್ರ ಕಿಡಿ

    ಸೊರೊಸ್‌ ಸಂಸ್ಥೆಯ ಜೊತೆ ಸೋನಿಯಾ ಗಾಂಧಿ ಅವರಿಗೆ ನಂಟು ಇದೆ ಎಂದು ಬಿಜೆಪಿ ಆರೋಪಿಸಿದ್ದಕ್ಕೆ ಸೋಮವಾರದ ಕಲಾಪದಲ್ಲಿ ಕಾಂಗ್ರೆಸ್‌ ಸದಸ್ಯರು ಭಾರೀ ಪ್ರತಿಭಟನೆ ನಡೆಸಿದರು. ಎರಡು ಕಡೆಯಿಂದ ಘೋಷಣೆ ಕೂಗಿದ ಬೆನ್ನಲ್ಲೇ ಸದನವನ್ನು ಮಧ್ಯಾಹ್ನಕ್ಕೆ ಮುಂದೂಡಲಾಯಿತು.

    ಸೋನಿಯಾ ಗಾಂಧಿ ಮತ್ತು ಸೊರೊಸ್‌ ಸಂಸ್ಥೆಯ ಜೊತೆ ನಂಟು ಇದೆ ಎನ್ನುವುದಕ್ಕೆ ಬಿಜೆಪಿ ಎಕ್ಸ್‌ನಲ್ಲಿ ಸರಣಿ ಪೋಸ್ಟ್‌ ಮಾಡಿ ಕಾಂಗ್ರೆಸ್‌ ವಿರುದ್ಧ ಕಿಡಿಕಾರಿದೆ.

     

    ಏನಿದು ಸೋನಿಯಾಗೆ ನಂಟು?
    ಮಾಜಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಜಾರ್ಜ್‌ ಸೊರೋಸ್‌ ಫೌಂಡೇಶನ್‌ನಿಂದ ಹಣಕಾಸು ನೆರವು ಪಡೆಯುವ ಹಾಗೂ ಕಾಶ್ಮೀರ ಪ್ರತ್ಯೇಕ ರಾಷ್ಟ್ರವಾಗುವುದನ್ನು ಬೆಂಬಲಿಸಿದ ಸಂಸ್ಥೆಯೊಂದಿಗೆ ನಂಟು ಹೊಂದಿದ್ದಾರೆ.

    ಸೊರೋಸ್‌ರಿಂದ ನೆರವು ಪಡೆಯುವ ‘ಫೋರಂ ಆಫ್‌ ಡಿ ಡೆಮಾಕ್ರಟಿಕ್‌ ಲೀಡರ್ಸ್‌ ಇನ್‌ ಏಷ್ಯಾ ಪೆಸಿಫಿಕ್‌’ (FDL-AP) ಸಂಸ್ಥೆ ಕಾಶ್ಮೀರವನ್ನು ಪ್ರತ್ಯೇಕ ರಾಷ್ಟ್ರವಾಗಿ ಪರಿಗಣಿಸುತ್ತದೆ. ಸೋನಿಯಾ ಗಾಂಧಿ ಇದರ ಸಹ ಅಧ್ಯಕ್ಷೆಯಾಗಿದ್ದಾರೆ. ಇದು ಭಾರತದ ಆಂತರಿಕ ವಿಷಯಗಳಲ್ಲಿ ವಿದೇಶಿ ಕಂಪನಿಗಳ ಪ್ರಭಾವವನ್ನು ತೋರಿಸುತ್ತದೆ. ಇದನ್ನೂ ಓದಿ: ಹಿಂಡನ್‌ಬರ್ಗ್‌ನಲ್ಲಿ ಸೊರೊಸ್ ಮುಖ್ಯ ಹೂಡಿಕೆದಾರ, ವಿದೇಶದಿಂದ ಭಾರತದ ವಿರುದ್ಧ ಪಿತೂರಿ: ರವಿಶಂಕರ್‌ ಪ್ರಸಾದ್

    ಕಾಂಗ್ರೆಸ್‌ ಸಂಸದ ಶಶಿ ತರೂರ್‌ ಅವರು ಸೊರೋಸ್‌ರನ್ನು ಹಳೆಯ ಮಿತ್ರ ಎಂದು ಕರೆದಿದ್ದ ಪೋಸ್ಟ್‌ ಅನ್ನು ಹಾಕಿದೆ. ಅದಾನಿ ಕುರಿತು ರಾಹುಲ್ ಗಾಂಧಿಯವರ ಪತ್ರಿಕಾಗೋಷ್ಠಿಯನ್ನು ಜಾರ್ಜ್ ಸೊರೊಸ್ ಅವರ ಒಸಿಸಿಆರ್‌ಪಿ (OCCRP) ನೇರ ಪ್ರಸಾರ ಮಾಡಿದೆ. ಇದು ಅವರ ಅಪಾಯಕಾರಿ ಸಂಬಂಧವನ್ನು ತಿಳಿಸುತ್ತದೆ. ಭಾರತೀಯ ಆರ್ಥಿಕತೆಯನ್ನು ಹಳಿತಪ್ಪಿಸುವ ಅವರ ಪ್ರಯತ್ನಗಳನ್ನು ಇದು ಎತ್ತಿ ತೋರಿಸುತ್ತದೆ.

     

  • ಜೂನ್‌ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ

    ಜೂನ್‌ 24 ರಂದು 18ನೇ ಲೋಕಸಭೆಯ ಅಧಿವೇಶನ ಆರಂಭ

    ನವದೆಹಲಿ: 18ನೇ ಲೋಕಸಭೆಯ (18th Lok Sabaha) ಮೊದಲ ಅಧಿವೇಶನ (Session) ಜೂನ್‌ 24 ರಂದು ಆರಂಭವಾಗಿ  ಜುಲೈ 3 ರಂದು ಮುಕ್ತಾಯಗೊಳ್ಳಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು (Kiren Rijiju) ಬುಧವಾರ ತಿಳಿಸಿದ್ದಾರೆ.

    9 ದಿನಗಳ ವಿಶೇಷ ಅಧಿವೇಶನದಲ್ಲಿ ಲೋಕಸಭೆಯ ಸ್ಪೀಕರ್ (Speaker) ಅವರನ್ನು ಆಯ್ಕೆ ಮಾಡಲಾಗುತ್ತದೆ ಮತ್ತು ಹೊಸ ಸಂಸದರು (MP) ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ರಾಜ್ಯಸಭಾ ಅಧಿವೇಶನ ಜೂನ್‌ 26 ರಂದು ಆರಂಭವಾಗಿ ಜುಲೈ 3 ರಂದು ಕೊನೆಯಾಗಲಿದೆ. ಇದನ್ನೂ ಓದಿ: ವಾರಣಾಸಿಯಿಂದ ಪ್ರಿಯಾಂಕಾ ಸ್ಪರ್ಧಿಸುತ್ತಿದ್ರೆ ಮೋದಿ 2-3 ಲಕ್ಷ ಮತಗಳಿಂದ ಸೋಲ್ತಿದ್ರು: ರಾಹುಲ್‌ ಗಾಂಧಿ

    ಅಧಿವೇಶನದ ಮೊದಲ ದಿನ ರಾಷ್ಟ್ರಪತಿ ದ್ರೌಪದಿ ಮುರ್ಮು (Droupadi Murmu) ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.