Tag: ಕಿರುಚಿತ್ರ

  • ‘ಕಾಲ್ ಮೀ’ ಕಿರುಚಿತ್ರ – ಗ್ರಾಮೀಣ ಯುವಕರ ಶ್ರಮಕ್ಕೆ ಮೆಚ್ಚುಗೆ

    ‘ಕಾಲ್ ಮೀ’ ಕಿರುಚಿತ್ರ – ಗ್ರಾಮೀಣ ಯುವಕರ ಶ್ರಮಕ್ಕೆ ಮೆಚ್ಚುಗೆ

    ಮಂಗಳೂರು: ರಾಜ್ಯದ ಕರಾವಳಿಯ ಪುತ್ತೂರಿನ ಯುವಕರ ತಂಡವೊಂದು ತಯಾರಿಸಿದ ಕಿರುಚಿತ್ರವೊಂದು ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ಪಡೆದಿದ್ದು, 2 ದಿನದಲ್ಲಿ 4 ಸಾವಿರ ಜನ ಕಿರುಚಿತ್ರವನ್ನು ಯೂಟ್ಯೂಬ್ ಮೂಲಕ ವೀಕ್ಷಿಸಿದ್ದಾರೆ.

    ಗ್ರಾಮೀಣ ಭಾಗದ ಯುವಕರ ಈ ಪ್ರಯತ್ನಕ್ಕೆ ಇದೀಗ ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಪುತ್ತೂರಿನ ಹುಡುಗರು ಹೊಸ ವರ್ಷಕ್ಕಾಗಿ ಹೊಸ ತರಹದ ಕಲ್ಪನೆಯೊಂದಿಗೆ ಸಮಾಜದಲ್ಲಿ ಮದ್ಯವ್ಯಸನಿಗಳಿಂದ ಹಾಗೂ ಮಾದಕ ವಸ್ತುಗಳಿಂದ ದೂರ ಇರಬೇಕೆಂಬ ಅರ್ಥಪೂರ್ಣ ಸಂದೇಶವನ್ನು ನೀಡಿದ್ದು, ಸಸ್ಷೆನ್ಸ್ ಮತ್ತು ಥ್ರಿಲ್ಲರ್ ಇರುವ ಕಿರುಚಿತ್ರ ತಯಾರಿಸಿ ಜನರ ಮುಂದಿಟ್ಟಿದ್ದಾರೆ.

    ಹೊಸ ಪ್ರಯತ್ನ ಆದರೂ ಉತ್ತಮ ಸಂದೇಶ ಇರುವ ಕಿರುಚಿತ್ರವನ್ನು ಜನರು ಬಹಳ ಆಸಕ್ತಿಯಿಂದ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪುತ್ತೂರಿನವರೇ ಆದ ಪ್ರವೀಣ್ ಕುಮಾರ್ ಅವರ ನಿರ್ದೇಶನದಲ್ಲಿ ಮೂಡಿಬಂದ ಈ ಕಿರುಚಿತ್ರದಲ್ಲಿ ವಿಜೇತ್ ಮುಂಡಾಳ, ಸಂತೋಷ್ ಸುವರ್ಣ ಮೇರ್ಲ, ರಾಜೇಶ್ ಪ್ರಸಾದ್ (ಆರ್.ಪಿ)ಕೌಡಿಚ್ಚಾರ್, ನವೀನ್ ಎಕ್ಕಾರು, ದರ್ಶಿತಾ, ಶೃತಿ ದಾಸ್, ಶ್ರಾವ್ಯ, ಮಹೇಶ್ ಓಟೆ, ಗಂಗಾಧರ ಓಟೆ ಮತ್ತು ಸ್ನೇಹಾ ಕರ್ಕೇರಾ ನಟಿಸಿದ್ದು, ಮೊಟ್ಟ ಮೊದಲ ಪ್ರಯತ್ನದಲ್ಲೇ ಕಿರುಚಿತ್ರದಲ್ಲಿ ಅಭಿನಯಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ವಿಭಿನ್ನ ಪ್ರಯತ್ನಕ್ಕೆ ಕೈ ತಂಡಕ್ಕೆ ಮತ್ತಷ್ಟು ಯಶಸ್ಸು ಸಿಗಲಿ ಎಂದು ಜನರು ಹಾರೈಸಿದ್ದಾರೆ.

  • ಸಾಫ್ಟ್‌ವೇರ್ ಕ್ಷೇತ್ರದಿಂದ ಬಂದ ಪ್ರತಿಭಾವಂತ ನಟ ಹರೀಶ್ ಅರಸು!

    ಸಾಫ್ಟ್‌ವೇರ್ ಕ್ಷೇತ್ರದಿಂದ ಬಂದ ಪ್ರತಿಭಾವಂತ ನಟ ಹರೀಶ್ ಅರಸು!

    ಬದುಕಿನ ಅನಿವಾರ್ಯತೆಗಳು ಅದೆತ್ತೆತ್ತ ಅಲೆಸಿದರೂ ಕಲಾಸಕ್ತಿ ಎಂಬುದು ಯಾವ ಮಾಯಕದಲ್ಲಾದರೂ ತನ್ನ ತಕ್ಕೆಗೆ ಸೆಳೆದುಕೊಂಡು ಬಿಡುತ್ತದೆ. ಈ ಮಾತಿಗೆ ಉದಾಹರಣೆಯಂಥಾ ನೂರಾರು ಮಂದಿ ಚಿತ್ರರಂಗದಲ್ಲಿ ಸಿಗುತ್ತಾರೆ. ಅಂಥಾ ತೀವ್ರವಾದ ಸಿನಿಮಾಸಕ್ತಿಯೇ ಅಂಥವರನ್ನೆಲ್ಲ ನಟ ನಟಿಯರಾಗಿ, ಇತರೇ ವಿಭಾಗಗಳ ಪರಿಣಿತರನ್ನಾಗಿ, ಸಾಧಕರನ್ನಾಗಿ ನೆಲೆಗಾಣಿಸಿರುತ್ತದೆ. ಆ ಸಾಲಿನಲ್ಲಿ ಸೇರ್ಪಡೆಗೊಳ್ಳುವ ಹಾದಿಯಲ್ಲಿರುವವರು ಉದಯೋನ್ಮುಖ ನಟ ಹರೀಶ್ ಅರಸು.

    ಹರೀಶ್ ಅವರದ್ದು ಬಹುಮುಖ ಪ್ರತಿಭೆ. ಸೋಶಿಯಲ್ ಮೀಡಿಯಾದಲ್ಲಿ ಸಿನಿಮಾ ಬರಹಗಾರರಾಗಿಯೂ ಗುರುತಿಸಿಕೊಂಡಿರುವ ಹರೀಶ್ ಬದುಕಿನ ಅನಿವಾರ್ಯತೆಗೆ ಬಿದ್ದು ನಾನಾ ಕೆಲಸ ಕಾರ್ಯಗಳನ್ನು ಮಾಡಿದ್ದಾರೆ. ಸದ್ಯಕ್ಕೆ ಡಿಜಿಟಲ್ ಮಾರ್ಕೆಟಿಂಗ್ ಕ್ಷೇತ್ರದಲ್ಲಿ ಸಿನಿಮಾ ಪ್ರಮೋಶನ್ ಕಾರ್ಯದಲ್ಲಿ ಗುರುತಿಸಿಕೊಂಡಿರೋ ಹರೀಶ್ ಪಾಲಿಗೆ ಸಿನಿಮಾ ಎಂಬುದೇ ತನ್ನ ಐಡೆಂಟಿಟಿಯಾಗಬೇಕೆಂಬ ಆಳದ ಬಯಕೆಯಿದೆ. ಬಹುಶಃ ಅದಿಲ್ಲದೇ ಹೋಗಿದ್ದರೆ ನಟನೆಯ ಗುಂಗು ಹತ್ತಿಸಿಕೊಂಡು ಐಟಿ ಕ್ಷೇತ್ರದಿಂದ ಸಿನಿಮಾ ಕ್ಷೇತ್ರದತ್ತ ವಾಲಿಕೊಳ್ಳುವುದು ಸಾಧ್ಯವಾಗುತ್ತಿರಲಿಲ್ಲವೇನೋ…

    ಇದುವರೆಗೂ ಹಲವಾರು ಕಿರುಚಿತ್ರಗಳಲ್ಲಿ ನಟಿಸಿ ಅನುಭವ ಹೊಂದಿರುವ ಹರೀಶ್ ಅರಸು ಪೂರ್ಣಪ್ರಮಾಣದಲ್ಲಿ ನಟನಾಗಿ ಗುರುತಿಸಿಕೊಂಡಿದ್ದು ‘ಕನ್ನಡ ದೇಶದೊಳ್’ ಎಂಬ ಸಿನಿಮಾ ಮೂಲಕ. ಅದರಲ್ಲಿ ಅಪ್ಪಟ ಕನ್ನಡಪ್ರೇಮಿ ಹುಡುಗನಾಗಿ ನಟಿಸಿದ್ದ ಅವರು ಪ್ರೇಕ್ಷಕರ ಮೆಚ್ಚುಗೆ ಗಳಿಸಿಕೊಂಡಿದ್ದರು. ನಟನಾಗಿ ಸಿನಿಮಾದಲ್ಲಿ ಅದು ಅವರ ಪಾಲಿಗೆ ಮೊದಲ ಅನುಭವ. ಅದಕ್ಕೆ ಸಿಕ್ಕ ಪ್ರತಿಕ್ರಿಯೆಗಳಿಂದ ಭರವಸೆ ತುಂಬಿಕೊಂಡಿರುವ ಅವರೀಗ ‘ಧೀರ ಸಾಮ್ರಾಟ್’ ಎಂಬ ಸಿನಿಮಾದಲ್ಲಿ ಮಹತ್ವದ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಒಂದೊಳ್ಳೆ ಕಥೆ ಹೊಂದಿರುವ ಈ ಸಿನಿಮಾದಲ್ಲಿ ಅವರಿಗೆ ಅದಕ್ಕೆ ತಕ್ಕುದಾದ ಪಾತ್ರವೇ ಸಿಕ್ಕಿದೆಯಂತೆ. ಇದರ ಜೊತೆಗೆ ಮತ್ತೊಂದು ಸಿನಿಮಾ ಅವಕಾಶವೂ ಅವರ ಕೈಲಿದೆ. ಅದರ ಬಗ್ಗೆ ಇಷ್ಟರಲ್ಲಿಯೇ ಮಾಹಿತಿಗಳು ಜಾಹೀರಾಗಲಿವೆ.

    ಹೀಗೆ ಸಾಫ್ಟ್‍ವೇರ್ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಲೇ ಸಿನಿಮಾ ರಂಗವನ್ನೇ ಪ್ರಧಾನವಾಗಿ ಆಯ್ಕೆ ಮಾಡಿಕೊಂಡಿರುವ ಹರೀಶ್ ಮೂಲತಃ ಕಡೂರಿನ ವಡೆಯರಳ್ಳಿಯವರು. ಮಧ್ಯಮ ವರ್ಗದ ರೈತಾಪಿ ಕುಟುಂಬದಿಂದ ಬಂದಿರುವ ಅವರಿಗೆ ಹಳ್ಳಿಯ ಸಹಜ ವಾತಾವರಣವೇ ಕಲೆಗಳ ಗುಂಗು ಹತ್ತುವಂತೆ ಮಾಡಿತ್ತು. ಆ ಕಾಲಕ್ಕೆ ಹರೀಶ್ ಅವರನ್ನು ಬಹುವಾಗಿ ಸೆಳೆದುಕೊಂಡಿದ್ದದ್ದು ನೃತ್ಯ. ಹಳ್ಳಿ ಕಾರ್ಯಕ್ರಮಗಳಲ್ಲಿ ಮೈಮರೆತು ಎಲ್ಲರೂ ಮೆಚ್ಚುವಂತೆ ನೃತ್ಯ ಮಾಡುತ್ತಿದ್ದ ಹರೀಶ್ ಆ ಕಾಲದಲ್ಲಿಯೇ ತಮ್ಮ ಹಳ್ಳಿಯಲ್ಲಿ ಪ್ರತಿಭಾವಂತರಾಗಿ ಗುರುತಿಸಿಕೊಂಡಿದ್ದವರು.

    ಇವರ ತಾತ ಗಂಗಯ್ಯ ಕಡೂರು ಸೀಮೆಯಲ್ಲಿ ನಾಟಕಗಳಲ್ಲಿ ಅಭಿನಯಿಸುತ್ತಾ ನಟನಾಗಿ ಪ್ರಸಿದ್ಧರಾಗಿದ್ದರಂತೆ. ಅವರು ಸುತ್ತಲ ಹತ್ತೂರುಗಳಲ್ಲಿಯೂ ಪ್ರಸಿದ್ಧಿ ಪಡೆದುಕೊಂಡಿರುವವರು. ಬಹುಶಃ ತಾತನ ಕಲಾಸಕ್ತಿಯ ಒಂದಂಶ ಹರೀಶ್ ಅವರೊಳಗೂ ಪ್ರವಹಿಸಿದ್ದರಿಂದಲೇ ಅವರೊಳಗೆ ಕಲಾಸಕ್ತಿ ಹುಟ್ಟಿಕೊಂಡಿದ್ದರೂ ಅಚ್ಚರಿಯೇನಿಲ್ಲ. ಶಾಲಾ ಕಾಲೇಜು ಹಂತದಲ್ಲಿ ಸಿನಿಮಾಸಕ್ತಿ ಇದ್ದರೂ ಆ ಕ್ಷಣದಲ್ಲಿ ಹರೀಶ್ ಅವರಿಗೆ ಬದುಕು ಕಟ್ಟಿಕೊಳ್ಳುವುದೇ ಮುಖ್ಯವಾಗಿತ್ತು. ಇದರಿಂದಾಗಿಯೇ ಸಾಫ್ಟ್‍ವೇರ್ ವಲಯದಲ್ಲಿ ಟ್ರಾನ್ಸ್‍ಪೋರ್ಟ್ ವಿಭಾಗದಲ್ಲಿ ಕಾರ್ಯ ನಿರ್ವಹಿಸಲಾರಂಭಿಸಿದ್ದರು.

    ಆ ನಂತರದಲ್ಲಿ ಸಮಾನ ಮನಸ್ಕರೊಂದಿಗೆ ಸೇರಿಕೊಂಡು ಫೇಸ್‍ಬುಕ್‍ನಲ್ಲಿ ವಾರಕ್ಕೊಂದರಂತೆ ಪ್ರಸಾರವಾಗುತ್ತಿದ್ದ ಸೀರೀಸ್‍ನಲ್ಲಿ ನಟಿಸಲಾರಂಭಿಸಿದ್ದರು. ಆ ನಂತರ ಒಂದಷ್ಟು ಕಿರುಚಿತ್ರಗಳಲ್ಲಿಯೂ ಹರೀಶ್ ನಟಿಸಿದ್ದರು. ಹೀಗೆ ಹಂತ ಹಂತವಾಗಿ ತಮ್ಮ ಪ್ರತಿಭೆಯನ್ನು ಒರೆಗೆ ಹಚ್ಚಿಕೊಂಡು ಸಾಗಿ ಬಂದ ಹರೀಶ್ ಇದೀಗ ನಟನಾಗಿ ಗುರುತಿಸಿಕೊಂಡಿದ್ದಾರೆ. ಮುಂದೆಯೂ ನಟನಾಗಿಯೇ ನೆಲೆ ಕಂಡುಕೊಳ್ಳುವ ಇರಾದೆಯನ್ನೂ ಹೊಂದಿದ್ದಾರೆ. ಯಾವ ಪಾತ್ರವಾದರೂ ಮಾಡುವ ಛಾತಿ ಹೊಂದಿರೋ ಹರೀಶ್ ಅರಸು ಮತ್ತೊಂದಷ್ಟು ಅವಕಾಶ ಗಿಟ್ಟಿಸಿಕೊಂಡು ನಟನಾಗಿ ನೆಲೆ ಕಂಡುಕೊಳ್ಳುವ ಲಕ್ಷಣಗಳೇ ದಟ್ಟವಾಗಿವೆ.

  • ಉಗುರಿನ ಮೇಲೆ ಚಂದ್ರಯಾನ-2 ಲ್ಯಾಂಡ್ ಮಾಡಿಸಿದ ಮೈಕ್ರೋ ಆರ್ಟಿಸ್ಟ್

    ಉಗುರಿನ ಮೇಲೆ ಚಂದ್ರಯಾನ-2 ಲ್ಯಾಂಡ್ ಮಾಡಿಸಿದ ಮೈಕ್ರೋ ಆರ್ಟಿಸ್ಟ್

    ಕೋಲ್ಕತ್ತಾ: ಪಶ್ಚಿಮ ಬಂಗಾಳದ ಸಿಲಿಗುರಿಯ ಮೈಕ್ರೋ ಆರ್ಟಿಸ್ಟ್ ರಮೇಶ್ ಶಾ, ಚಂದ್ರಯಾನ-2 ರ ಚಂದ್ರನ ಮೇಲೆ ಇಳಿಯುವ ಕಿರುಚಿತ್ರವನ್ನು ತಮ್ಮ ಉಗುರಿನ ಮೇಲೆ ಬರೆಯುವ ಮೂಲಕ ಪರಿಶ್ರಮ ಮತ್ತು ತಾಳ್ಮೆ ತೋರಿಸಿದ್ದಾರೆ.

    ರಮೇಶ್ ಶಾ ಅವರು ಈ ರೀತಿಯ ಚಿತ್ರ ಬಿಡಿಸುವವರ ಪೈಕಿ ವಿಶ್ವದದ್ಯಾಂತ ಮುಂಚೂಣಿಯಲ್ಲಿದ್ದಾರೆ. ಅವರು ಈ ರೀತಿಯ ತಮ್ಮ ಸಣ್ಣ ಪ್ರಮಾಣದ ಕಲಾತ್ಮಕ ಚಿತ್ರಗಳಿಂದ ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್‍ನ ಅತ್ಯಂತ ಮಹತ್ವದ ಪ್ರಶಸ್ತಿಯನ್ನು ಪಡೆದಿದ್ದಾರೆ.

    ಮೈಕ್ರೋ ಆರ್ಟಿಸ್ಟ್ ಆಗಿರುವ ರಮೇಶ್ ಶಾ, 15 ರಿಂದ 20 ಎಂಎಂ ಉಗುರಿನ ಜಾಗವನ್ನು ಬಳಸಿಕೊಂಡು ಚಂದ್ರಯಾನ್ -2 ರ ಲ್ಯಾಂಡಿಂಗ್ ಪೇಂಟಿಂಗ್ ಅನ್ನು ತಮ್ಮ ಬಲಗೈನ ಉಗುರಿನ ಮೇಲೆ ಚಿತ್ರಿಸಿದ್ದಾರೆ. ಈ ವರ್ಣಚಿತ್ರವನ್ನು ಪೂರ್ಣಗೊಳಿಸಲು ಅವರು ಮೂರು ದಿನಗಳ ಕಲವಾಕಾಶವನ್ನು ತೆಗೆದುಕೊಂಡಿದ್ದಾರೆ.

    ಈ ವಿಚಾರದ ಬಗ್ಗೆ ಮಾತನಾಡಿದ ಅವರು, ಬಾಹ್ಯಾಕಾಶ ನೌಕೆ ಚಂದ್ರನ ಮೇಲೆ ಸೇಫ್ ಲ್ಯಾಂಡ್ ಆದರೆ ಅದು ಭಾರತಕ್ಕೆ ಒಂದು ಐತಿಹಾಸಿಕ ಕ್ಷಣವಾಗಲಿದೆ. ಶನಿವಾರ ಚಂದ್ರನ ಮೇಲ್ಮೈಯ ದಕ್ಷಿಣ ಧ್ರುವದ ಬಳಿ ಚಂದ್ರಯಾನ್-2ನ ವಿಕ್ರಮ್ ಲ್ಯಾಂಡರ್ ಲ್ಯಾಂಡ್ ಆಗಲಿದೆ. ಈ ಮೂಲಕ ಈ ಸಾಧನೆ ಮಾಡಿದ ಭಾರತವು ಚಂದ್ರನ ಮೇಲೆ ರಾಕೆಟ್ ಇಳಿಸಿದ ವಿಶ್ವದ ನಾಲ್ಕನೇ ಶಕ್ತಿಶಾಲಿ ದೇಶವಾಗಲಿದೆ ಎಂದು ಹೇಳಿದರು.

    ನಾನು ಸೂಕ್ಷ್ಮ ಕಲೆಗಳನ್ನು ಚಿತ್ರಿಸುವ ಮೂಲಕ ಐದು ವಿಶ್ವ ದಾಖಲೆಗಳನ್ನು ಮಾಡಿದ್ದೇನೆ. ಚಾಲ್ತಿಯಲ್ಲಿರುವ ವಿಶ್ವ ಸಮಸ್ಯೆಗಳಿಗೆ ಸಂಬಂಧಿಸಿದ ವರ್ಣಚಿತ್ರಗಳನ್ನು ನಾನು ಬರೆಯುತ್ತೇನೆ. ಈ ರೀತಿಯ ಚಿತ್ರಗಳನ್ನು ಬರೆಯುವಾಗ ನನಗೆ ಒಳ್ಳೆಯ ಕೆಲಸ ಮಾಡಿದ ಅನುಭವವಾಗುತ್ತದೆ ಎಂದ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ಬಾಹ್ಯಾಕಾಶ ವಿಜ್ಞಾನಿಗಳನ್ನು ಚಂದ್ರಯಾನ-2 ಇಳಿಯುವ ಮುನ್ನ ಅಭಿನಂದನೆಗಳು ಎಂದು ಹೇಳಿದ್ದಾರೆ.

  • ಹಿಂದಿ ಕಿರುಚಿತ್ರದಲ್ಲಿ ಅನುಪಮಾ ಗೌಡ

    ಹಿಂದಿ ಕಿರುಚಿತ್ರದಲ್ಲಿ ಅನುಪಮಾ ಗೌಡ

    ಬೆಂಗಳೂರು: ಕಿರುತೆರೆಯ ನಟಿ ಮತ್ತು ಬಿಗ್ ಬಾಸ್ ಖ್ಯಾತಿಯ ಅನುಪಮಾ ಗೌಡ ಈಗ ಸಖತ್ ಬ್ಯುಸಿಯಾಗಿದ್ದು, ಇದೀಗ ಅವರಿಗೆ ಹಿಂದಿಯಲ್ಲಿ ಅಭಿನಯಿಸುವ ಬಂಪರ್ ಆಫರ್ ಬಂದಿದೆ.

    ಹೌದು..ಅನುಪಮಾ ಕಿರುಚಿತ್ರದಲ್ಲಿ ಅಭಿನಯಿಸಲು ಸಜ್ಜಾಗಿದ್ದು, ಕಿರುಚಿತ್ರಕ್ಕೆ ‘ದಿ ಫಾಲನ್’ ಎಂದು ಟೈಟಲ್ ಇರಿಸಲಾಗಿದೆ. ವಿಶೇಷವೆಂದರೆ ಈ ಕಿರುಚಿತ್ರ ಹಿಂದಿಯಲ್ಲಿ ತಯಾರಾಗುತ್ತಿದೆ. ಸ್ಯಾಂಡಲ್‍ವುಡ್‍ನ ‘ಊರ್ವಿ’ ಖ್ಯಾತಿಯ ನಿರ್ದೇಶಕ ಪ್ರದೀಪ್ ವರ್ಮಾ ಈ ಕಿರುಚಿತ್ರಕ್ಕೆ ನಿರ್ದೇಶನ ಮಾಡುತ್ತಿದ್ದಾರೆ.

    ‘ದಿ ಫಾಲನ್’ ಕಿರುಚಿತ್ರ ಬರೋಬ್ಬರಿ 4 ಸಾವಿರ ವರ್ಷಗಳ ಹಿಂದಿನ ಕಥೆಯನ್ನು ಹೊಂದಿದೆಯಂತೆ. ಸದ್ಯಕ್ಕೆ ಅದ್ಧೂರಿಯಾಗಿ ತಯಾರಾಗುತ್ತಿರುವ ಕಿರುಚಿತ್ರಕ್ಕೆ ಫೋಟೋಶೂಟ್ ಮಾಡಿಸುವ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

    ‘ದಿ ಫಾಲನ್’ ಕಿರುಚಿತ್ರಕ್ಕೆ ಲೇಹ್, ಲದಾಕ್, ಮನಾಲಿ ಸುತ್ತಮುತ್ತ ಫೋಟೋಶೂಟ್ ಮಾಡಲು ಚಿತ್ರತಂಡ ತಯಾರಿ ಮಾಡುತ್ತಿದೆ. ಜೊತೆಗೆ 30 ದಿನಗಳ ಕಾಲ ಶೂಟಿಂಗ್‍ಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.

    ನಟಿ ಅನುಪಮಾ ಗೌಡ ಮೊದಲಿಗೆ ಕಿರುತೆಯಲ್ಲಿ ನಟಿಸುವ ಮೂಲಕ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟಿದ್ದರು. ಬಳಿಕ ಕೆಲವು ಸಿನಿಮಾಗಳಲ್ಲಿ ಅಭಿನಯಿಸಿದ್ದರು. ನಂತರ ಬಿಗ್‍ಬಾಸ್‍ ಮನೆಗೆ ಹೋಗಿ ಖ್ಯಾತಿ ಪಡೆದಿದ್ದು, ಇದೀಗ ನಿರೂಪಕಿಯಾಗಿ ಮಿಂಚುತ್ತಿದ್ದಾರೆ. ಇದೆಲ್ಲದರ ಜೊತೆಗೆ ಕಿರುಚಿತ್ರದಲ್ಲಿ ನಟಿಸುತ್ತಿದ್ದಾರೆ.

  • ಪತ್ನಿಯನ್ನ ಕೊಲೆಗೈದು, ತುಂಡು ಮಾಡಿ ಕಸದಬುಟ್ಟಿಗೆ ಎಸೆದಿದ್ದ ನಿರ್ಮಾಪಕ ಅರೆಸ್ಟ್

    ಪತ್ನಿಯನ್ನ ಕೊಲೆಗೈದು, ತುಂಡು ಮಾಡಿ ಕಸದಬುಟ್ಟಿಗೆ ಎಸೆದಿದ್ದ ನಿರ್ಮಾಪಕ ಅರೆಸ್ಟ್

    – ತುಂಡಾಗಿ ಬಿದ್ದಿದ್ದ ದೇಹದ ಮೇಲಿದ್ದ ಟ್ಯಾಟೂನಿಂದ ಆರೋಪಿ ಸಿಕ್ಕಿಬಿದ್ದ

    ಚೆನ್ನೈ: ಪತ್ನಿಯನ್ನು ಕೊಲೆ ಮಾಡಿ, ಮೃತ ದೇಹವನ್ನು ತುಂಡು ತುಂಡು ಮಾಡಿ ಕಸದ ತೊಟ್ಟಿಗೆ ಎಸೆದಿದ್ದ ಕಿರುಚಿತ್ರ ನಿರ್ದೇಶಕ, ನಿರ್ಮಾಪಕನನ್ನು ಚೆನ್ನೈ ಪೊಲೀಸರು ಬಂಧಿಸಿದ್ದಾರೆ.

    ಸಂಧ್ಯಾ (35) ಕೊಲೆಯಾದ ಪತ್ನಿ. ಚೆನ್ನೈನ ಬಾಲಕೃಷ್ಣ (51) ಬಂಧಿತ ನಿರ್ದೇಶಕ, ನಿರ್ಮಾಪಕ. ಸಂಧ್ಯಾ ಕೊಲೆಯಾದ ಹದಿನೈದು ದಿನಗಳ ಬಳಿಕ ಮೃತದೇಹ ಪತ್ತೆಯಾಗಿದ್ದು, ಇದು ತನಿಖೆಗೆ ಹೊಸ ಟ್ವಿಸ್ಟ್ ನೀಡಿತ್ತು.

    ಆರೋಪಿ ಬಾಲಕೃಷ್ಣ ಜನವರಿ 19ರಂದು ಸಂಧ್ಯಾಳನ್ನು ಕೊಲೆ ಮಾಡಿದ್ದ. ಮಾರನೇ ದಿನ ಮೃತ ದೇಹವನ್ನು ತುಂಡು ತುಂಡು ಮಾಡಿ, ಪ್ರತ್ಯೇಕ ಪ್ಲಾಸ್ಟಿಕ್ ಬ್ಯಾಗ್‍ಗಳಿಗೆ ತುಂಬಿದ್ದ. ಬಳಿಕ ಅದನ್ನು ಯಾರಿಗೂ ತಿಳಿಯದಂತೆ ನಗರದ ಕಸದ ಬುಟ್ಟಿಗಳಲ್ಲಿ ಎಸೆದು ಪರಾರಿಯಾಗಿದ್ದ.

    ಸಂಧ್ಯಾ ನಾಪತ್ತೆಯಾಗಿರುವ ಕುರಿತು ಪೋಷಕರು ಚೆನ್ನೈ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರಿಗೆ ಕಸದಬುಟ್ಟಿಯಲ್ಲಿ ಮೃತ ದೇಹದ ಅಂಗಾಂಗಗಳು ಸಿಕ್ಕಿವೆ. ಅವುಗಳನ್ನು ಮರಣೋತ್ತರ ಪರೀಕ್ಷೆಗೆ ಒಳಪಡಿಸಿದಾಗ ಟ್ಯಾಟೂ ಇರುವುದು ಕಂಡು ಬಂದಿದೆ.

    ಸಂಧ್ಯಾ ಪೋಷಕರು ನೀಡಿದ್ದ ದೂರಿನಲ್ಲಿ ಮಗಳ ದೇಹದ ಮೇಲೆ ಟ್ಯಾಟೂ ಗುರುತು ತಿಳಿಸಿದ್ದರು. ಇದರಿಂದಾಗಿ ಮೃತದೇಹ ಸಂಧ್ಯಾಳದ್ದೇ ಎನ್ನುವ ಶಂಕೆ ವ್ಯಕ್ತವಾಗಿತ್ತು. ಪ್ರಕರಣದ ಸಂಬಂಧ ಬಾಲಕೃಷ್ಣನನ್ನು ಬುಧವಾರ ಬಂಧಿಸಿ ವಿಚಾರಣೆ ನಡೆದಿದಾಗ ತಪ್ಪು ಒಪ್ಪಿಕೊಂಡಿದ್ದಾನೆ ಎಂದು ಚೆನ್ನೈ ಪೊಲೀಸ್ ಆಯುಕ್ತ ಎಕೆ ವಿಶ್ವನಾಥನ್ ತಿಳಿಸಿದ್ದಾರೆ.

    ಬಾಲಕೃಷ್ಣ ನೀಡಿದ ಮಾಹಿತಿ ಆಧಾರದ ಮೇಲೆ ಪರಿಶೀಲನೆ ನಡೆಸಿದಾಗ ಬುಧವಾರ ಸಂಧ್ಯಾ ಮೃತದೇಹದ ಮತ್ತೊಂದು ಭಾಗ ಪತ್ತೆಯಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಮತ್ತೊಂದು ಕಿರುಚಿತ್ರ ನಿರ್ದೇಶನ ಮಾಡಲಿದ್ದಾರೆ ಶೀತಲ್ ಶೆಟ್ಟಿ!

    ಮತ್ತೊಂದು ಕಿರುಚಿತ್ರ ನಿರ್ದೇಶನ ಮಾಡಲಿದ್ದಾರೆ ಶೀತಲ್ ಶೆಟ್ಟಿ!

    ಶೀತಲ್ ಶೆಟ್ಟಿ ಮತ್ತೊಂದು ಕನಸಿನ ಬೆನ್ನತ್ತಿದ್ದಾರೆ. ಪತಿಬೇಕು ಡಾಟ್ ಕಾಮ್ ಚಿತ್ರದ ಮೂಲಕ ಹೀರೋಯಿನ್ನಾಗಿಯೂ ಕಾಣಿಸಿಕೊಂಡಿರೋ ಅವರು ಅದರ ಬೆನ್ನಲ್ಲೇ ಕಿರುಚಿತ್ರವೊಂದರ ಮೂಲಕ ಗಮನ ಸೆಳೆದಿದ್ದರು. ಸಂಗಾತಿಯೆಂಬ ಕಿರುಚಿತ್ರದ ಮೂಲಕ ಗಹನವಾದೊಂದು ಸಂಗತಿಯನ್ನು ಹೇಳಿದ್ದ ಶೀತಲ್ ಇದೀಗ ಮತ್ತೊಂದು ಕಿರುಚಿತ್ರ ನಿರ್ದೇಶನ ಮಾಡಲು ತಯಾರಿ ನಡೆಸುತ್ತಿದ್ದಾರೆ!

    ಸಂಗಾತಿ ಚಿತ್ರದ ಮೂಲಕವೇ ಸೂಕ್ಷ್ಮವಾಗಿ ಕಥೆ ಹೇಳೋ ಶೀತಲ್ ಶೆಟ್ಟಿ ಇದೀಗ ಬೇರೆಯದ್ದೇ ಬಗೆಯ ಕಥೆಯೊಂದನ್ನು `ಕಾರು’ ಎಂಬ ಕಿರು ಚಿತ್ರದ ಮೂಲಕ ಹೇಳ ಹೊರಟಿದ್ದಾರೆ.

    ಯಾವುದೇ ಕೆಲಸವನ್ನಾದರೂ ನೀಟಾಗಿ ಮಾಡಬೇಕೆಂಬ ಮನಸ್ಥಿತಿಯ ಶೀತಲ್ ಸಂಪೂರ್ಣ ತಯಾರಿ ಮಾಡಿಕೊಂಡೇ ಈ ಕಿರು ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರೆ. ಇದರ ಕಥೆ, ಚಿತ್ರಕಥೆ ಮತ್ತು ಸಂಭಾಷಣೆಯನ್ನೂ ಅವರೇ ವಹಿಸಿಕೊಂಡಿದ್ದಾರೆ. ನಡುವೆ ಅಂತರವಿರಲಿ ಚಿತ್ರಕ್ಕೆ ಛಾಯಾಗ್ರಾಹಕರಾಗಿದ್ದ ಯೋಗೀಶ್ವರ್ ಈ ಚಿತ್ರಕ್ಕೆ ಕ್ಯಾಮೆರಾ ಕಣ್ಣಾಗಲಿದ್ದಾರೆ. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರಕ್ಕೂ ಸಂಕಲನಕಾರರಾಗಿದ್ದ ಪ್ರದೀಪ್ ರಾವ್ ಈ ಚಿತ್ರದ ಸಂಕಲನ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಭಿಷೇಕ್ ಪೋಸ್ಟರ್ ಡಿಸೈನ್ ಕಾರ್ಯ ನೋಡಿಕೊಂಡರೆ, ಅನಂತ್ ಕಾಮತ್ ಮ್ಯೂಸಿಕ್ ಈ ಕಿರುಚಿತ್ರಕ್ಕಿರಲಿದೆ.

    `ಕಾರು’ ಹನ್ನೆರಡದಿಂದ ಹದಿನೈದು ನಿಮಿಷದ ಕಿರುಚಿತ್ರ. ಒಳ್ಳೆ ಫೀಲ್ ಕೊಡೋದರ ಜೊತೆಗೆ, ಈ ಕಿರುಚಿತ್ರ ನೋಡಿದವರೆಲ್ಲರ ಮುಖದಲ್ಲಿಯೂ ತೃಪ್ತಿಯ ಮಂದಹಾಸ ಮೂಡುವಂತಾಗಬೇಕು ಎಂಬ ಉದ್ದೇಶದಿಂದಲೇ ಶೀತಲ್ ಈ ಚಿತ್ರಕ್ಕೆ ತಯಾರಾಗುತ್ತಿದ್ದಾರೆ. ಪುಟ್ಟ ವಯಸ್ಸಿನಲ್ಲಿ ಪ್ರತಿಯೊಬ್ಬರಿಗೂ ಏನೇನೋ ಕನಸಿರುತ್ತೆ. ಯಾವುದೋ ವಸ್ತು ಕನಸಾಗಿರುತ್ತೆ. ಅದರಲ್ಲಿ ಕೆಲವು ನಿಜವಾಗಿ ಮತ್ತೆ ಕೆಲವು ಸುಳ್ಳಾಗಲೂ ಬಹುದು. ಮತ್ತೆ ಕೆಲ ಕನಸುಗಳು ಭ್ರಮೆಯ ಕೂಸಾಗಿರಲೂಬಹುದು. ಇಂಥಾದ್ದೊಂದು ಹೊಳಹಿನೊಂದಿಗೇ ಸಿದ್ಧಗೊಂಡಿರೋ ಈ ಕಿರುಚಿತ್ರ ಪುಟ್ಟ ಹುಡುಗಿಯೊಬ್ಬಳ ಸುತ್ತ ತಿರುಗೋ ಕಥೆ.

    ಹಳ್ಳಿಯೊಂದರಲ್ಲಿ ಘಟಿಸೋ ಈ ಕಥೆಯನ್ನು ಮಧುಗಿರಿಯ ಸುತ್ತಲ ವಾತಾವರಣದಲ್ಲಿ ಚಿತ್ರೀಕರಿಸಲು ಶೀತಲ್ ಯೋಜನೆ ಹಾಕಿಕೊಂಡಿದ್ದಾರೆ. ಈಗಾಗಲೇ ಸಾಮಾಜಿಕ ಜಾಲತಾಣದ ಮೂಲಕ ಈ ಚಿತ್ರಕ್ಕೆ ಬೇಕಾದ ಪುಟಾಣಿಗಾಗಿ ಶೀತಲ್ ಆಡಿಷನ್ ಕರೆದಿದ್ದರು. ಇದಕ್ಕೆ ವ್ಯಾಪಕ ಪ್ರತಿಕ್ರಿಯೆ ಸಿಕ್ಕಿದೆ. ಇನ್ನೂರಕ್ಕೂ ಹೆಚ್ಚು ಮಕ್ಕಳು ಸಂಪರ್ಕಿಸಿದ್ದಾರೆ. ಇದರಲ್ಲಿಬ್ಬರನ್ನು ಆರಿಸಿಕೊಂಡಿರೋ ಶೀತಲ್ ಇಷ್ಟರಲ್ಲೇ ಅದರಲ್ಲೊಬ್ಬರನ್ನು ಫೈನಲ್ ಮಾಡಲಿದ್ದಾರಂತೆ.

    ಇದೀಗ ಈ ಕಿರುಚಿತ್ರದ ತಯಾರಿ ಚಾಲ್ತಿಯಲ್ಲಿದೆ. ಸಂಗಾತಿ ಚಿತ್ರದಲ್ಲಿ ಗಹನವಾದೊಂದು ವಿಚಾರವನ್ನು ಹೇಳಿದ ಕಲಾತ್ಮಕ ಶೈಲಿಯಿಂದ ಗಮನ ಸೆಳೆದಿದ್ದ ಶೀತಲ್ ಅದರ ಕಾರಣದಿಂದಲೇ ತಾಂತ್ರಿಕವಾಗಿಯೂ ಅನುಭವ ಪಡೆದುಕೊಂಡಿದ್ದಾರೆ. ಆ ಕಿರುಚಿತ್ರದ ಫಲವಾಗಿಯೇ ಕಾರು ಚಿತ್ರಕ್ಕೂ ಹಣ ಹೂಡುವವರೂ ಸಿಕ್ಕಿದ್ದಾರೆ. ಇನ್ನೇನು ನವೆಂಬರ್ ತಿಂಗಳಲ್ಲಿ ಚಿತ್ರೀಕರಣ ನಡೆಸಿ, ಡಿಸೆಂಬರಿನಲ್ಲಿ ನಡೆಯಲಿರೋ ಗೋವಾ ಶಾರ್ಟ್ ಫಿಲಂ ಫೆಸ್ಟಿವಲ್‍ನಲ್ಲಿ ಈ ಕಿರುಚಿತ್ರವನ್ನು ಪ್ರದರ್ಶನ ಮಾಡಲು ಶೀತಲ್ ಯೋಜನೆ ಹಾಕಿಕೊಂಡಿದ್ದಾರೆ.

    ಈ ಮೂಲಕ ಶೀತಲ್ ಶೆಟ್ಟಿ ನಿರ್ದೇಶಕಿಯಾಗಿ ನೆಲೆಗೊಳ್ಳುವ ಸೂಚನೆ ನೀಡಿದ್ದಾರೆ. ಕಾರು ಚಿತ್ರ ಪೂರ್ಣಗೊಂಡು ಬಿಡುಗಡೆಯಾದ ನಂತರ ಶೀತಲ್ ಮುಂದಿನ ನಡೆ ನಿಖರವಾಗಿ ಜಾಹೀರಾಗಬಹುದೇನೋ..?

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಟ್ರೈನಲ್ಲಿ Love at First Sight- ಯುವತಿಯನ್ನು ಹುಡುಕಲು ಹಾಕಿದ 4 ಸಾವಿರ ಪೋಸ್ಟರ್

    ಟ್ರೈನಲ್ಲಿ Love at First Sight- ಯುವತಿಯನ್ನು ಹುಡುಕಲು ಹಾಕಿದ 4 ಸಾವಿರ ಪೋಸ್ಟರ್

    ಕೋಲ್ಕತ್ತಾ: ಟ್ರೈನಿನಲ್ಲಿ ಯುವತಿಯನ್ನು ನೋಡಿ ಲವ್ ಅಟ್ ಫಸ್ಟ್ ಸೈಟ್ ಆದ ಯುವಕನೊಬ್ಬ ಆಕೆಯನ್ನು ಹುಡುಕಲು ಒಂದು ಸಿನಿಮಾ ಮಾಡಿ 4,000 ಪೋಸ್ಟರ್ ಅಂಟಿಸಿದ ಪ್ರಕರಣವೊಂದು ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಬೆಳಕಿಗೆ ಬಂದಿದೆ.

    ಬಿಸ್ವಜಿತ್ ಪೊದಾರ್(29) ಕೋಲ್ಕತ್ತಾದಲ್ಲಿ ಸರ್ಕಾರಿ ಕೆಲಸ ಮಾಡುತ್ತಿದ್ದಾರೆ. ಬುಸ್ವಜಿತ್ ಜುಲೈ ತಿಂಗಳಿನಲ್ಲಿ ಕೆಲಸದಿಂದ ಮನೆಗೆ ಹಿಂತಿರುಗುವ ವೇಳೆ ರೈಲಿನಲ್ಲಿ ತನ್ನ ಮುಂದೆ ಯುವತಿ ಪೋಷಕರ ಜೊತೆ ಕುಳಿತ್ತಿದ್ದಳು. ಆ ಯುವತಿಯನ್ನು ನೋಡಿದ ಮೊದಲ ನೋಟದಲ್ಲೇ ಬಿಸ್ವಜಿತ್‍ಗೆ ಆಕೆಯ ಮೇಲೆ ಪ್ರೀತಿಯಾಗಿದೆ.

    ಬಿಸ್ವಜಿತ್‍ಗೆ ಆ ಯುವತಿ ಮೇಲೆ ಮೊದಲ ನೋಟದಲ್ಲೇ ಪ್ರೀತಿಯಾಗಿದ್ದು, ಈಗ ಆ ಯುವತಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಯುವತಿಯನ್ನು ಹುಡುಕಲು ಬಿಸ್ವಜಿತ್ 4,000 ಪೋಸ್ಟರ್ ಗಳನ್ನು ಅಂಟಿಸಿದ್ದಾರೆ. ಆ ಪೋಸ್ಟರ್ ನಲ್ಲಿ ಬಿಸ್ವಜಿತ್ ತನ್ನ ಮೊಬೈಲ್ ನಂಬರ್ ಹಾಗೂ ತನ್ನ ಸಿನಿಮಾದ ಯೂಟ್ಯೂಬ್ ಲಿಂಕ್ ಕೂಡ ಹಾಕಿದ್ದಾನೆ.

    ಯುವತಿ ಈ ಪೋಸ್ಟರ್ ನೋಡಿ ನಾನು ಆಕೆಯನ್ನು ಹುಡುಕುತ್ತಿದ್ದೇನೆ ಎಂಬುದು ಗೊತ್ತಾಗಲಿ ಎಂಬ ಉದ್ದೇಶದಿಂದ ನಾನು ಈ ರೀತಿ ಮಾಡುತ್ತಿದ್ದೇನೆ. ನಾನು ಆಕೆಯನ್ನು ಹುಡುಕುತ್ತಿದ್ದೇನೆ ಹಾಗೂ ಆಕೆಗೆ ಇಷ್ಟವಿದ್ದರೆ ಆಕೆ ನನ್ನನ್ನು ಸಂರ್ಪಕಿಸಲಿ ಎಂದು ಬಿಸ್ವಜಿತ್ ಪ್ರತಿಕ್ರಿಯಿಸಿದ್ದಾರೆ.

    ಆ ಯುವತಿಯನ್ನು ಹುಡುಕಲು ಬಿಸ್ವಜಿತ್ ಒಂದು ಕಿರುಚಿತ್ರವನ್ನು ಕೂಡ ಮಾಡಿದ್ದಾರೆ. ಆ ಚಿತ್ರಕ್ಕೆ ‘ಕೋನ್‍ಗರ್ ಕೋನೆ’ ಎಂದು ಹೆಸರಿಟ್ಟಿದ್ದಾರೆ. ಬೆಂಗಾಲಿಯಲ್ಲಿ ಕೋನ್‍ಗರ್ ಕೋನೆ ಎಂದರೆ ‘ಕೋನ್‍ಗರ್ ನ ವಧು’ ಎಂದರ್ಥ. ಈ ಕಿರುಚಿತ್ರ 6 ನಿಮಿಷ 23 ಸೆಕೆಂಡ್‍ಗಳಿದ್ದು, ಬಿಸ್ವಜಿತ್ ಈ ಚಿತ್ರದಲ್ಲಿ ಯುವತಿಗೆ ವಿಶೇಷ ಸಂದೇಶವನ್ನು ನೀಡಿದ್ದಾರೆ.

    ಬಿಸ್ವಜಿತ್ ಆ ಯುವತಿಯನ್ನು ಪ್ರೀತಿಸುತ್ತಿರುವುದು ಹಾಗೂ ಭೇಟಿಯಾಗಲೂ ಕಾತುರದಿಂದ ಕಾಯುತ್ತಿರುವುದನ್ನು ಈ ಕಿರುಚಿತ್ರದಲ್ಲಿ ತೋರಿಸಲಾಗಿದೆ. ಈ ಚಿತ್ರದಲ್ಲಿ ಆ ಯುವತಿಯ ಪಾತ್ರವನ್ನು ಬಿಸ್ವಜಿತ್‍ರ ಸ್ನೇಹಿತೆ ಅಭಿನಯಿಸಿದ್ದಾರೆ. ಈ ಚಿತ್ರದ ಕೊನೆಯಲ್ಲಿ “ನೀವು ಈ ಕಿರುಚಿತ್ರ ನೋಡಿದರೆ ನನಗೆ ಸಂರ್ಪಕಿಸಿ” ಎಂದು ಬಿಸ್ವಜಿತ್ ತಿಳಿಸಿದ್ದಾರೆ. ಯುವತಿ ತನ್ನನ್ನು ಗುರುತಿಸಲಿ ಎಂದು ಬಿಸ್ವಜಿತ್ ಆಕೆಯನ್ನು ಭೇಟಿ ಮಾಡಿದ ದಿನ ಧರಿಸಿದ ಟಿ-ಶರ್ಟ್ ಅನ್ನು ಇದೂವರೆಗೂ ತೆಗೆಯಲಿಲ್ಲ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

    ಈ ಹಿಂದೆ ಪುಣೆಯಲ್ಲಿ ನಿಲೇಶ್ ಖೇಡೇಕರ್ ಎಂಬಾತ ಮುನಿಸಿಕೊಂಡಿದ್ದ ಪ್ರೇಯಸಿಯನ್ನು ಒಲಿಸಿಕೊಳ್ಳಲು ಬರೋಬ್ಬರಿ 300 ಸಾರಿ ಬ್ಯಾನರ್ ಗಳನ್ನು ರಸ್ತೆಯಲ್ಲಿ ಹಾಕಿದ್ದನು. ನಿಲೇಶ್ ಓರ್ವ ಉದ್ಯಮಿ ಆಗಿದ್ದು, ಮಹಾರಾಷ್ಟ್ರದ ಪಿಂಪ್ರಿ ಚಿಂಚ್ವಾಡ್ ನಲ್ಲಿ ಪ್ರದೇಶದಲ್ಲಿ ಮುನಿಸಿಕೊಂಡಿದ್ದ ಪ್ರೇಯಸಿಯನ್ನು ಒಲಿಸಿಕೊಳ್ಳಲು ಸಾರಿ ಬ್ಯಾನರ್ ಹಾಕುವುದರ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

  • ಹೆಣ್ಣು ಮಕ್ಕಳಿಗಾಗಿ ಮಿಡಿಯಿತು ದರ್ಶನ್ ಮನ- ಮಾಡಿದ್ದಾರೆ ಮಹತ್ವದ ಕೆಲಸ!

    ಹೆಣ್ಣು ಮಕ್ಕಳಿಗಾಗಿ ಮಿಡಿಯಿತು ದರ್ಶನ್ ಮನ- ಮಾಡಿದ್ದಾರೆ ಮಹತ್ವದ ಕೆಲಸ!

    ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಸಮಾಜಮುಖಿ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಅರಣ್ಯ ಸಂರಕ್ಷಣೆ ಹಾಗೂ ಪರಿಸರ ಬಗ್ಗೆ ಕಾಳಜಿ ಮೂಡಿಸೋಕೆ ಮುಂದಾಗಿದ್ದು, ಇದೀಗ `ಹೆಣ್ಣು ಭ್ರೂಣ ಹತ್ಯೆ ಮಹಾಪಾಪ’ ಬಗ್ಗೆ ಜಾಗೃತಿ ಮೂಡಿಸೋಕೆ ತಯಾರಾಗಿದ್ದಾರೆ.

    ಹೆಣ್ಣು ಶಿಶು ಹತ್ಯೆಯನ್ನು ಖಂಡಿಸಿ ತಯಾರಾಗಿರುವ ಕಿರುಚಿತ್ರವೊಂದಕ್ಕೆ ದರ್ಶನ್ ಬೆನ್ನುಲುಬಾಗಿ ನಿಂತಿದ್ದಾರೆ. `ಮಾತೃಜನನ’ ಹೆಸರಲ್ಲಿ ನಿರ್ಮಾಣವಾಗಿರುವ ಕಿರುಚಿತ್ರವೊಂದನ್ನು ಬಿಡುಗಡೆ ಮಾಡಿಕೊಡುವುದರ ಮೂಲಕ ಹೊಸ ಪ್ರತಿಭೆಗಳಿಗೆ ಬೆಂಬಲ ಸೂಚಿಸಿದ್ದಾರೆ.

    ಸಾಮಾನ್ಯವಾಗಿ ದರ್ಶನ್ ಹೊಸಬರ ಸಿನಿಮಾಗಳಿಗೆ ಬೆಂಬಲ ಸೂಚಿಸುತ್ತಾರೆ. ಇದೀಗ ಮಾತೃಜನನ ತಂಡಕ್ಕೂ ಸಾಥ್ ಕೊಟ್ಟಿದ್ದಾರೆ. ಹೆಣ್ಣು ಶಿಶು ಹತ್ಯೆಯನ್ನು ಖಂಡಿಸಿ ಕಿರುಚಿತ್ರ ಮಾಡಿದ್ದೇವೆ ಅಂತ ಚಿತ್ರತಂಡ ಹೇಳಿದ ತಕ್ಷಣ ದರ್ಶನ್ ಏನು ಯೋಚಿಸದೇ ಮನೆಗೆ ಕರೆಸಿಕೊಂಡು ಚಿತ್ರದ ಟೀಸರ್ ರಿಲೀಸ್ ಮಾಡಿಕೊಟ್ಟಿದ್ದಾರೆ. ಅಲ್ಲದೇ ಈ ಕಿರುಚಿತ್ರ ಪ್ರದರ್ಶನಕ್ಕೆ ಕಲಾವಿದರ ಸಂಘದ ಭವನದಲ್ಲಿ ಅವಕಾಶ ಕೂಡ ಮಾಡಿಕೊಟ್ಟಿದ್ದಾರೆ. ಇದನ್ನೂ ಓದಿ: ಕುಮಾರಿ 21 ಎಫ್ ಟ್ರೇಲರ್ ರಿಲೀಸ್ ಮಾಡಿದ ಚಾಲೆಂಜಿಂಗ್ ಸ್ಟಾರ್!

    `ಮಾತೃಜನನ’ ಕಿರುಚಿತ್ರವನ್ನು ನಿಶಾಂತ್ ಮೇಗಳಮನೆ ಹಾಗೂ ಸುಮುಖ ಶರ್ಮಾ ನಿರ್ದೇಶನ ಮಾಡಿದ್ದಾರೆ. ಇಡೀ ವಿಶ್ವದಲ್ಲಿ ಅತೀ ಹೆಚ್ಚು ಹೆಣ್ಣು ಶಿಶು ಹತ್ಯೆಯಲ್ಲಿ ಭಾರತ ಮುಂಚೂಣಿಯಲ್ಲಿದೆ. ಈ ಕಳಂಕವನ್ನು ತೊಡೆದು ಹೆಣ್ಣುಭ್ರೂಣ ಹತ್ಯೆಯ ತಡೆಯ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಇದು ತಯಾರಾಗಿದ್ದಾರೆ.

  • ಪೈರಸಿ ಹೇಗೆ ಸಿನಿರಂಗದಲ್ಲಿ ಬೇರೂರಿದೆ ಎಂಬುದನ್ನು ಈ ಶಾರ್ಟ್ ಫಿಲ್ಮ್ ನಲ್ಲಿ ನೋಡಿ

    ಪೈರಸಿ ಹೇಗೆ ಸಿನಿರಂಗದಲ್ಲಿ ಬೇರೂರಿದೆ ಎಂಬುದನ್ನು ಈ ಶಾರ್ಟ್ ಫಿಲ್ಮ್ ನಲ್ಲಿ ನೋಡಿ

    ಬೆಂಗಳೂರು: ಪೈರಸಿ ಒಂದು ಚಿತ್ರವನ್ನು ಹೇಗೆ ನಾಶ ಮಾಡುತ್ತದೆ? ಪೈರಸಿಯಿಂದ ಚಿತ್ರತಂಡದ ಮೇಲಾಗುವ ಪರಿಣಾಮ ಎಂಬುದರ ಬಗ್ಗೆ ನಟಿ ಸುಮನ್ ನಗರ್ಕರ್ ಶಾರ್ಟ್ ಫಿಲ್ಮ್ ನಲ್ಲಿ ಮನಸ್ಸಿಗೆ ತಾಗುವಂತೆ ಹೇಳಿದ್ದಾರೆ.

    ಈ ಶಾರ್ಟ್ ಫಿಲ್ಮ್ ನಲ್ಲಿ ಸುಮನ್ ನಗರ್ಕರ್ ನಟನೆಯ `ಮೌನ’ ಸಿನಿಮಾ ಬಿಡುಗಡೆ ಆಗಿರುತ್ತದೆ. ಸಿನಿಮಾ ಬಿಡುಗಡೆ ವೇಳೆ ನಟಿ ಪ್ರೇಕ್ಷಕರ ಬರುವಿಕೆಗಾಗಿ ಚಿತ್ರಮಂದಿರದ ಹೊರಗಡೆಯೇ ಕುಳಿತಿರುತ್ತಾರೆ. ಈ ವೇಳೆ ಸುಮನ್ ಅವರ ಆತ್ಮಸಾಕ್ಷಿ ಎದುರಿಗೆ ಬರುತ್ತದೆ. ಆತ್ಮಸಾಕ್ಷಿಯ ಪ್ರತಿಯೊಂದು ಮಾತುಗಳು ನೋಡುಗರನ್ನು ತಲುಪುತ್ತವೆ. ಒಂದು ವಸ್ತು ಹುಟ್ಟಿದರೆ ಅದರ ಹಿಂದೆ ಕೆಲವೇ ನಿಮಿಷಗಳಲ್ಲಿ ಆ ವಸ್ತುವಿನ ನಕಲು ತಯಾರಾಗುತ್ತದೆ ಎಂಬ ಅರ್ಥಗರ್ಭಿತ ಮಾತನ್ನು ಹೇಳುತ್ತದೆ.

    ಸಿನಿಮಾ ಚಿತ್ರಮಂದಿರಗಳಿಗೆ ಲಗ್ಗೆಯಿಟ್ಟ ಕೂಡಲೇ ಕೆಲವರು ಅದರ ಪೈರಸಿ ಮಾಡುತ್ತಾರೆ. ಹಾಗೇ ಸಿನಿಮಾ ದಿನವೇ ಸುಮನ್ ನಟನೆಯ `ಮೌನ’ ಚಿತ್ರದ ಪೈರಸಿ ಆಗಿರುತ್ತದೆ. ಮೌನ ಸಿನಿಮಾ ನೋಡಲು ಬಂದವರು ಸಹ ಮೊಬೈಲ್‍ನಲ್ಲಿ ಸಿನಿಮಾದ ಲಿಂಕ್ ನೋಡಿ ಬೇರೆ ಫಿಲ್ಮ್ ನೋಡಲು ಹೋಗುತ್ತಾರೆ. ಕೊನೆಗೆ ಪ್ರೇಕ್ಷಕರ ಕೊರತೆಯಿಂದಾಗಿ ಚಿತ್ರಮಂದಿರದಿಂದ ಸಿನಿಮಾವನ್ನು ತೆಗೆಯಲಾಗುತ್ತದೆ.

    ಕೇವಲ 4 ನಿಮಿಷ 48 ಸೆಕಂಡ್ ಗಳಿರುವ `ಗ್ರೇ’ ಕಿರುಚಿತ್ರ ಅತ್ಯಂತ ಪರಿಣಾಮಕಾರಿಯಾಗಿದೆ. ಸಿನಿಮಾ ತೆರೆಗೆ ತರಲು ಕಷ್ಟಪಟ್ಟ ಚಿತ್ರತಂಡದ ಶ್ರಮವೆಲ್ಲಾ ವ್ಯರ್ಥವಾಗುತ್ತದೆ. ಗ್ರೇ ಕಿರು ಚಿತ್ರಕ್ಕೆ ಸುಜಯ್ ರಾಮಯ್ಯ ನಿರ್ದೇಶನವಿದೆ. ಕಿರುಚಿತ್ರ ಶುಕ್ರವಾರ ಯುಟ್ಯೂಬ್ ಅಪ್ಲೋಡ್ ಆಗಿದ್ದು, ನೋಡುಗರು ಮತ್ತು ವಿಮರ್ಶಕರಿಂದ ಮೆಚ್ಚುಗೆಯನ್ನು ಪಡೆದುಕೊಂಡಿದೆ.

    ಕಳೆದ ವಾರ ಬಿಡುಗಡೆಗೊಂಡು ಯಶಸ್ವಿ ಪ್ರದರ್ಶನ ಕಾಣುತ್ತಿರುವ ದೃವ ಸರ್ಜಾ ನಟನೆಯ `ಭರ್ಜರಿ’ ಸಿನಿಮಾಗೂ ಪೈರಸಿಯ ಬಿಸಿ ತಟ್ಟಿತ್ತು.