Tag: ಕಿರುತೆರೆ

  • ಹೃದಯಾಘಾತದಿಂದ ಫೇಮಸ್ ನಟ ನಿತೇಶ್ ಪಾಂಡೆ ನಿಧನ

    ಹೃದಯಾಘಾತದಿಂದ ಫೇಮಸ್ ನಟ ನಿತೇಶ್ ಪಾಂಡೆ ನಿಧನ

    ರಡು ದಿನಗಳ ಹಿಂದೆಯಷ್ಟೇ ಹಿಂದಿ (Hindi) ಕಿರುತೆರೆಯು ನಟ, ಮಾಡೆಲ್ ಆದಿತ್ಯ ಸಿಂಗ್ ರಜಪೂತ್ ರನ್ನು ಕಳೆದುಕೊಂಡಿದೆ. ಅಗಲಿಕೆಯ ನೋವು ಇನ್ನೂ ಆರದ ಮುನ್ನವೇ ಮತ್ತೋರ್ವ ನಟನನ್ನು ಹಿಂದಿ ಕಿರುತೆರೆ ಕಳೆದುಕೊಂಡಿದೆ. ಹಲವಾರು ಧಾರಾವಾಹಿಗಳ ಮೂಲಕ ಫೇಮಸ್ ಆಗಿದ್ದ ನಿತೇಶ್ ಪಾಂಡೆ (Nitesh Pandey) ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ (Death). ಕಿರುತೆರೆ ಮಾತ್ರವಲ್ಲ, ಹಿರಿತೆರೆಯಲ್ಲೂ ನಿತೇಶ್ ಕೆಲಸ ಮಾಡಿದ್ದರು.

    ಪ್ಯಾರ್ ಕ ದರ್ದ್ ಹೈ ಮೀಟಾ ಮೀಟಾ ಪ್ಯಾರಾ ಪ್ಯಾರಾ ಧಾರಾವಾಹಿಯ ಮೂಲಕ ಫೇಮಸ್ ಆಗಿದ್ದ ನೀತೇಶ್ ಸದ್ಯ ಅನುಪಮಾ ಹೆಸರಿನ ಹಿಂದಿ ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಈ ಧಾರಾವಾಹಿಯಲ್ಲಿ ಅವರು ಧೀರಜ್ ಕಪೂರ್ ಹೆಸರಿನ ಪಾತ್ರವನ್ನು ನಿರ್ವಹಿಸುತ್ತಿದ್ದರು. 1995ರಲ್ಲಿ ಬಣ್ಣದ ಲೋಕಕ್ಕೆ ಕಾಲಿಟ್ಟ ಇವರು, ಅಲ್ಲಿಂದ ಈವರೆಗೂ ಸತತ ಒಂದಿಲ್ಲೊಂದು ಧಾರಾವಾಹಿಯಲ್ಲಿ ನಟಿಸುತ್ತಲೇ ಬಂದಿದ್ದಾರೆ. ಇದನ್ನೂ ಓದಿ:‘ರಾನಿ’ ಸಿನಿಮಾ ಸೆಟ್ ನಲ್ಲಿ ನಿರ್ದೇಶಕರ ಹುಟ್ಟುಹಬ್ಬ

    51ರ ವಯಸ್ಸಿನ ನಿತೇಶ್ ಗೆ ಪತ್ನಿ, ಒಬ್ಬರು ಸಹೋದರಿ ಹಾಗೂ ತಂದೆ ತಾಯಿಯನ್ನು ಅಗಲಿದ್ದಾರೆ. ಮೃತದೇಹವನ್ನು ತರಲು ನಿರ್ಮಾಪಕ ಹಾಗೂ ನಿತೇಶ್ ಭಾವ ಸಿದ್ಧಾರ್ಥ್ ನಗರ್ ಆಸ್ಪತ್ರೆಗೆ ತೆರಳಿದ್ದಾರೆ. ಎರಡು ದಿನಗಳ ಹಿಂದೆ ಆದಿತ್ಯ ಸಿಂಗ್ ರಜಪೂತ್, ನಿನ್ನೆಯಷ್ಟೇ ರಸ್ತೆ ಅಪಘಾತದಲ್ಲಿ ವೈಭವಿ ಉಪಾಧ್ಯಾಯ, ಇಂದು ನಿತೇಶ್ ಕಿರುತೆರೆಯನ್ನು (Television) ಅಗಲಿದ್ದಾರೆ.

  • ‘ಅಗ್ನಿಸಾಕ್ಷಿ’ ಸೀರಿಯಲ್‌ ನಟ ಸಂಪತ್‌ ಜಯರಾಮ್‌ ಆತ್ಮಹತ್ಯೆ

    ‘ಅಗ್ನಿಸಾಕ್ಷಿ’ ಸೀರಿಯಲ್‌ ನಟ ಸಂಪತ್‌ ಜಯರಾಮ್‌ ಆತ್ಮಹತ್ಯೆ

    ಕಿರುತೆರೆಯ ಜನಪ್ರಿಯ ಧಾರಾವಾಹಿ ‘ಅಗ್ನಿಸಾಕ್ಷಿ’ (Agnisakshi) ಸೇರಿದಂತೆ ಹಲವು ಸೀರಿಯಲ್‌ನಲ್ಲಿ ನಟಿಸಿದ್ದ ಸಂಪತ್ ಜಯರಾಮ್ (35) ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಏಪ್ರಿಲ್‌ 22ರಂದು ನೆಲಮಂಗಲದಲ್ಲಿ ನಟ ಸಂಪತ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ:ಗಡೀಪಾರು ಭೀತಿಯಲ್ಲಿದ್ದ ಚೇತನ್‍ಗೆ ಹೈಕೋರ್ಟ್ ರಿಲೀಫ್

    ಕಿರುತೆರೆ- ಹಿರಿತೆರೆಯಲ್ಲಿ ನಟ ಸಂಪತ್ ಜಯರಾಮ್ (Sampath Jayram) ಆಕ್ಟೀವ್ ಆಗಿದ್ದರು. ಇತ್ತೀಚಿಗೆ `ಬಾಲಾಜಿ ಫೋಟೋ ಸ್ಟುಡಿಯೋ’ ಸಿನಿಮಾದಲ್ಲಿ ಸಂಪತ್ ಗಮನ ಸೆಳೆದಿದ್ದರು. ಆದರೆ ಚಿತ್ರರಂಗದಲ್ಲಿ ಸೂಕ್ತ ಅವಕಾಶ ಸಿಗದೇ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

    ನಟ ಸಂಪತ್ ಅವರು ಇತ್ತೀಚಿಗೆಷ್ಟೇ ಮದುವೆಯಾಗಿದ್ದರು. ಒಂದು ವರ್ಷದ ಹಿಂದೆ ಮದುವೆಯಾಗಿದ್ದ ನಟ ಇದೀಗ ಇಹಲೋಕ ತ್ಯಜಿಸಿರುವುದು ಚಿತ್ರರಂಗದ ಸ್ನೇಹಿತರು, ಆಪ್ತರು ಕಂಬನಿ ಮಿಡಿದಿದ್ದಾರೆ.

  • ಟೆಲಿವಿಷನ್ ಅಸೋಷಿಯೇಷನ್ : ರವಿ ಗರಣಿ ಅಧ್ಯಕ್ಷ, ಸೃಜನ್ ಲೋಕೇಶ್ ಕಾರ್ಯದರ್ಶಿ

    ಟೆಲಿವಿಷನ್ ಅಸೋಷಿಯೇಷನ್ : ರವಿ ಗರಣಿ ಅಧ್ಯಕ್ಷ, ಸೃಜನ್ ಲೋಕೇಶ್ ಕಾರ್ಯದರ್ಶಿ

    ರ್ನಾಟಕ ಕಿರುತೆರೆಯ ಕಲಾವಿದರು ಹಾಗೂ ತಂತ್ರಜ್ಞರ ಮಾತೃಸಂಸ್ಥೆ ಕರ್ನಾಟಕ ಟೆಲಿವಿಷನ್ (Television) ಅಸೋಷಿಯೇಷನ್ (Association) (KTVA) ಮೊನ್ನೆಯಷ್ಟೇ ಚುನಾವಣೆ ನಡೆದಿದ್ದು, ಕನ್ನಡದ ಹೆಸರಾಂತ ನಿರ್ದೇಶಕ ಹಾಗೂ ನಿರ್ಮಾಪಕ ರವಿ ಆರ್ ಗರಣಿ (Ravi Garani) ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಖ್ಯಾತ ನಟ ಸೃಜನ್ ಲೋಕೇಶ್ (Srujan Lokesh) ಕಾರ್ಯದರ್ಶಿ, ನಿರ್ಮಾಪಕ ಭಾಸ್ಕರ್ ಎಸ್.ಎಸ್. ಖಜಾಂಚಿಯಾಗಿ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ಧನಂಜಯ ನಟನೆಯ 25ನೇ ಸಿನಿಮಾ ಟ್ರೈಲರ್ ರಿಲೀಸ್ ಡೇಟ್ ಫಿಕ್ಸ್

    ಕಾರ್ಯಕಾರಿ ಸಮಿತಿಗೆ ಕಲಾವಿದರಾದ ಗಿರಿಜಾ ಲೋಕೇಶ್, ವೀಣಾ ಸುಂದರ್, ಗಣೇಶ್ ರಾವ್ ಕೆಸರ್ಕರ್, ಸುನೇತ್ರಾ ಪಂಡಿತ್, ರಾಮಸ್ವಾಮಿ ಗೌಡ ಎನ್.ಟಿ, ವಸಂತ್ ಕುಮಾರ್ ವಿ, ನಿರ್ಮಾಪಕಿ ಭಾವನಾ ಬೆಳಗೆರೆ, ನಿರ್ದೇಶಕ ಸತೀಶ್ ಕೃಷ್ಣ, ಬರಹಗಾರ ಕೇಶವಚಂದ್ರ, ಛಾಯಾಗ್ರಾಹಕರಾದ ಬೆಟ್ಟೇ ಗೌಡ ಕೆ.ಟಿ. ನಿರ್ಮಾಣ ನಿರ್ವಾಹಕ ಪರಯ್ಯ ಆರ್ ಮತ್ತು ಹರ್ಷ ವಿಶ್ವನಾಥ್, ಯೂನಿಟ್ ಮಾಲೀಕ ಸೆಲ್ವಂ, ಸಂಕಲನಕಾರ ಕೃಷ್ಣ ಅರಸ್ ಕೆ.ಸಿ, ಪ್ರಸಾಧನ ಕಲಾವಿದ ನಾಗರಾಜು ಪಿ. ಧ್ವನಿಗ್ರಾಹಕ ಕಲಾವಿದ ಸಾಗರ್ ಬಿ.ಕೆ, ಬೆಳಕು ಸಹಾಯಕರಾದ ಶ್ರೀನಿವಾಸ್ ಪಿ.ವಿ, ವಸ್ತ್ರವಿನ್ಯಾಸ ಮತ್ತು ಕಲಾವಿನ್ಯಾಸ ವೀರೇಂದ್ರ ಡಿ.ಸಿ , ವಾಹನ ಚಾಲಕರಾದ ತಿಮ್ಮರಾಜು, ನಿರ್ಮಾಣ ಸಹಾಯಕರಾದ ವೀರೇಂದ್ರ ಪಿಕೆ. ಈ ಬಾರಿ ಆಯ್ಕೆಯಾಗಿರುತ್ತಾರೆ. ಇದನ್ನೂ ಓದಿ:  ಕ್ರಿಕೆಟರ್ ಶುಭಮನ್ ಗಿಲ್ ಬಗ್ಗೆ ಕೇಳಿದ್ದಕ್ಕೆ ನಾಚಿ ನೀರಾದ ರಶ್ಮಿಕಾ ಮಂದಣ್ಣ

    ಆಯ್ಕೆಯಾದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಅವಧಿ ಮೂರು ವರ್ಷಗಳದ್ದಾಗಿದ್ದು 2023 ರಿಂದ 2025 ರವರೆಗೂ ಕಾಲಾವಧಿಯದ್ದಾಗಿದೆ. ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ ಕಟ್ಟುವಲ್ಲಿ ರವಿ ಆರ್ ಗರಣಿ ಅವರದ್ದು ಸಾಕಷ್ಟು ಶ್ರಮವಿದೆ. ಹಲವು ವರ್ಷಗಳಿಂದ ಅವರು ಈ ಸಂಘಟನೆಯೊಂದಿಗೆ ಸಕ್ರಿಯರಾಗಿದ್ದಾರೆ. ಇದೀಗ ಅಧ್ಯಕ್ಷರಾಗುವ ಮೂಲಕ ಸಂಘದ ಸಾರಥ್ಯವಹಿಸಿದ್ದಾರೆ. ಇದನ್ನೂ ಓದಿ: ʻಒಲವ ಘಮವುʼ ಆಲ್ಬಂ ಸಾಂಗ್‌ಗೆ ಧ್ರುವ ಸರ್ಜಾ ಮೆಚ್ಚುಗೆ

    ಈ ಹಿಂದೆ ಬಿ.ಸುರೇಶ್, ಎಸ್.ವಿ.ಶಿವಕುಮಾರ್, ರವಿಕಿರಣ್ ಸೇರಿದಂತೆ ಕಿರುತೆರೆಯ ಖ್ಯಾತನಾಮರು ಅಸೋಷಿಯೇಷನ್ ಅಧ್ಯಕ್ಷರಾಗಿ ಉದ್ಯಮಕ್ಕೆ ಸಂಬಂಧಿಸಿದಂತೆ ಸಾಕಷ್ಟು ಕೆಲಸ ಮಾಡಿದ್ದಾರೆ. ಉದ್ಯಮದ ಅನೇಕ ಬಿಕ್ಕಟ್ಟುಗಳನ್ನು ಪರಿಹರಿಸಿದ್ದಾರೆ. ಕಲಾವಿದರ, ತಂತ್ರಜ್ಞರ ಕಷ್ಟಕ್ಕೂ ಸ್ಪಂದಿಸಿದ್ದಾರೆ. ಹೀಗಾಗಿ ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ ಕಿರುತೆರೆಯ ಜಗತ್ತಿನ ಪ್ರತಿಷ್ಠಿತ ಸಂಸ್ಥೆಯಾಗಿದೆ.

  • ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಕಿರುತೆರೆ ಸುಂದರಿ ಅಮೂಲ್ಯ ಗೌಡ

    ಸ್ಯಾಂಡಲ್‌ವುಡ್‌ಗೆ ಎಂಟ್ರಿ ಕೊಟ್ಟ ಕಿರುತೆರೆ ಸುಂದರಿ ಅಮೂಲ್ಯ ಗೌಡ

    ಸುಂದರಿ’ (Sundari) ಸೀರಿಯಲ್ ‌ಮೂಲಕ‌ ಕಿರುತೆರೆಗೆ ಲಗ್ಗೆಯಿಟ್ಟ ಚೆಲುವೆ ಅಮೂಲ್ಯ ಗೌಡ (Amoolya Gowda) ಇದೀಗ ಸ್ಯಾಂಡಲ್‌ವುಡ್‌ನಲ್ಲಿ (Sandalwood) ನಾಯಕಿಯಾಗಿ ಮಿಂಚಲು ರೆಡಿಯಾಗಿದ್ದಾರೆ. ‘ಕುರುಡು ಕಾಂಚಣ’ (Kurudu Kanchana) ಸಿನಿಮಾ‌ ಮೂಲಕ ಅದೃಷ್ಟ ಪರೀಕ್ಷೆಗಿಳಿದಿದ್ದಾರೆ.

    2016 ‘ಸುಂದರಿ’ ಧಾರಾವಾಹಿ ಮೂಲಕ ಬಣ್ಣದ ಬದುಕಿಗೆ ಕಾಲಿಟ್ಟ ನಟಿ ಅಮೂಲ್ಯ ಅವರು ಅಪರಂಜಿ, ಅಗ್ನಿಸಾಕ್ಷಿ, ನನ್ನರಸಿ ರಾಧೆ ಸೀರಿಯಲ್ ಗಳ ಮೂಲಕ ನಟಿ ಗಮನ ಸೆಳೆದರು. 2016ರ `Princess Karnataka’ ವಿನ್ನರ್ ಕೂಡ ಆಗಿದ್ದಾರೆ. 2020ರಲ್ಲಿ ಶಮಂತ್ ಗೌಡ (Shamanth Gowda) ಜೊತೆ ‘ಮರೆಯಲಾರೆ’ (Mareyalaare) ಎಂಬ ಬ್ರೇಕಪ್ ಸಾಂಗ್ ನಲ್ಲಿ ನಟಿಸಿದ್ದರು. ಸಾಕಷ್ಟು ಜಾಹಿರಾತಿನಲ್ಲಿ ಮಾಡೆಲ್ ಆಗಿ ಕಾಣಿಕೊಂಡಿದ್ದಾರೆ.

    ‘ಒನ್ ವೇ’ ಚಿತ್ರದ‌ ನಟ ಕಿರಣ್‌ ರಾಜ್‌ಗೆ ‘ಕುರುಡು ಕಾಂಚಾಣ’ (Kurudu Kanchana) ಎಂಬ ಚಿತ್ರದಲ್ಲಿ ನಾಯಕಿಯಾಗಿ ಅಮೂಲ್ಯ ನಟಿಸಿದ್ದಾರೆ. ಜೆನ್ನಿ ಎನ್ನುವ ಪಾತ್ರಕ್ಕೆ ಅಮೂಲ್ಯ (Amoolya Gowda) ಜೀವತುಂಬಿದ್ದಾರೆ. ನಟನೆಗೆ ಒತ್ತಿರುವ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಎಸ್.ಪ್ರದೀಪ್ ವರ್ಮಾ ಈ‌ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಒಟಿಟಿಯಲ್ಲಿ ರಿಲೀಸ್ ಆಗಲಿದೆ. ಕನ್ನಡ, ತೆಲುಗು, ತಮಿಳು, ಮತ್ತು ಹಿಂದಿ ಭಾಷೆಗಳಲ್ಲಿ ಮೂಡಿ ‌ಬರಲಿದೆ. ಇದನ್ನೂ ಓದಿ: Exclusive: ʻಯುವ’ ಚಿತ್ರಕ್ಕೆ ಸಪ್ತಮಿ ಗೌಡ ಸೆಲೆಕ್ಟ್ ಆಗಿದ್ದು ಹೇಗೆ?

    ‘ಕುರುಡು ಕಾಂಚಾಣ’ ಎಂಬ ಭಿನ್ನ ಕಥೆಯಲ್ಲಿ ನಟಿಸಿರುವ ಅಮೂಲ್ಯ, ಹೊಸ ಬಗೆಯ ಕಥೆಗಳನ್ನ ಕೇಳುತ್ತಿದ್ದಾರೆ. ಸದ್ಯದಲ್ಲಿಯೇ ಹೊಸ ಪ್ರಾಜೆಕ್ಟ್‌ಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಈಗಾಗಲೇ ಸಾಕಷ್ಟು ಕಥೆಗಳನ್ನ ಬರೆದಿಟ್ಟುಕೊಂಡಿರುವ ಅಮೂಲ್ಯ, ಮುಂದಿನ ದಿನಗಳಲ್ಲಿ ನಿರ್ದೇಶಕಿಯಾಗಿ ಕೂಡ ಬರಲಿದ್ದಾರೆ. ಅದಕ್ಕಾಗಿ ತೆರೆಮರೆಯಲ್ಲಿ ಸಕಲ ತಯಾರಿಯನ್ನ ನಡೆಸುತ್ತಿದ್ದಾರೆ.

    ಕಿರುತೆರೆಯಲ್ಲಿ ಅಭಿಮಾನಿಗಳ ಗಮನ‌ ಸೆಳೆದಿರುವ ನಟಿ ಅಮೂಲ್ಯ, ಬೆಳ್ಳಿತೆರೆಯಲ್ಲಿ ಕೂಡ ಬೆಳಗಲಿ ಎಂಬುದೇ ಅಭಿಮಾನಿಗಳ ‌ಆಶಯ.

  • ಕಿರುತೆರೆಯ ಖ್ಯಾತ ನಿರ್ಮಾಪಕ, ನಟ ರವಿಕಿರಣ್ ಸಹೋದರ ಭಾಸ್ಕರ್ ನಿಧನ

    ಕಿರುತೆರೆಯ ಖ್ಯಾತ ನಿರ್ಮಾಪಕ, ನಟ ರವಿಕಿರಣ್ ಸಹೋದರ ಭಾಸ್ಕರ್ ನಿಧನ

    ನ್ನಡ ಕಿರುತೆರೆಯ ಖ್ಯಾತ ನಟ, ನಿರ್ದೇಶಕ ರವಿಕಿರಣ್ (Ravikiran) ಅವರ ಸಹೋದರ ಭಾಸ್ಕರ್ ( Bhaskar) ರವಿವಾರ ತಡರಾತ್ರಿ ನಿಧನ (Passed away) ಹೊಂದಿದ್ದಾರೆ. ಬದುಕು, ಸುಕನ್ಯಾ ಸೇರಿದಂತೆ ಹಲವು ಧಾರಾವಾಹಿಗಳನ್ನು ಭಾಸ್ಕರ್ ನಿರ್ಮಿಸಿದ್ದರು. ರವಿಕಿರಣ್ ಬ್ಯಾನರ್ ನಲ್ಲಿ ಬರುತ್ತಿದ್ದ ಬಹುತೇಕ ಧಾರಾವಾಹಿಗಳಿಗೆ ಭಾಸ್ಕರ್ ನಿರ್ಮಾಪಕರಾಗಿರುತ್ತಿದ್ದರು. ಅಲ್ಲದೇ, ರವಿಕಿರಣ್ ಅವರಿಗೆ ಬೆನ್ನೆಲುಬಾಗಿ ನಿಂತವರು.

    ಭಾಸ್ಕರ್ ಕೇವಲ ನಿರ್ಮಾಪಕರು ಮಾತ್ರವಲ್ಲ, ಉದ್ಯಮಿಯೂ ಕೂಡ. ಹಲವಾರು ಉದ್ಯಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಜೊತೆಗೆ ಕರ್ನಾಟಕ ಟೆಲಿವಿಷನ್ ಕ್ಲಬ್ ನ ನಿರ್ದೇಶಕರಾಗಿಯೂ ಅವರು ಟಿವಿ ಉದ್ಯಮದಲ್ಲಿ ಕೆಲಸ ಮಾಡಿದ್ದಾರೆ. ಇವರ ನಿರ್ಮಾಣದಲ್ಲಿ ಮೂಡಿ ಬಂದ ಬದುಕು ಸಾವಿರಕ್ಕೂ ಹೆಚ್ಚು ಕಂತುಗಳಲ್ಲಿ ಪ್ರಸಾರವಾಗಿದೆ. ಸುಕನ್ಯಾ ಕೂಡ ಜನಪ್ರಿಯ ಧಾರಾವಾಹಿಗಳಲ್ಲಿ ಒಂದು.  ಇದನ್ನೂ ಓದಿ: ಪತಿ ಜೊತೆಗಿನ ರೊಮ್ಯಾಂಟಿಕ್ ಫೋಟೋ ಹಂಚಿಕೊಂಡ `ವಜ್ರಕಾಯ’ ನಟಿ ಶುಭ್ರ ಅಯ್ಯಪ್ಪ

    ಭಾಸ್ಕರ್ ಪುತ್ರ ಸಿನಿಮಾ ರಂಗದಲ್ಲಿ ಸಕ್ರೀಯರಾಗಿದ್ದಾರೆ. ತೆಲುಗು ಮತ್ತು ಕನ್ನಡದ ಹಲವು ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ. ಭಾಸ್ಕರ್ ನಿಧನಕ್ಕೆ ಕಿರುತೆರೆಯ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ. ಟೆಲಿವಿಷನ್ ಉದ್ಯಮದ ನಾನಾ ಸಂಘಟನೆಗಳು ಸಂತಾಪ ವ್ಯಕ್ತಪಡಿಸಿವೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮದುವೆ ಅನ್ನೋದು ಒಂದು ಜವಾಬ್ದಾರಿ: ಎರಡನೇ ಮದುವೆ ಬಗ್ಗೆ ನಟಿ ಅಪೂರ್ವ ಮಾತು

    ಮದುವೆ ಅನ್ನೋದು ಒಂದು ಜವಾಬ್ದಾರಿ: ಎರಡನೇ ಮದುವೆ ಬಗ್ಗೆ ನಟಿ ಅಪೂರ್ವ ಮಾತು

    ಕಿರುತೆರೆ `ಜೊತೆ ಜೊತೆಯಲಿ’ (Jothe Jotheyali) ಸೀರಿಯಲ್ ಮೂಲಕ ಮನೆ ಮಾತಾಗಿರುವ ಪುಷ್ಪ ಪಾತ್ರಧಾರಿ ಅಪೂರ್ವ ಅವರು ಸೂಪರ್ ಕ್ವೀನ್ ರಿಯಾಲಿಟಿ ಶೋನಲ್ಲಿ ಸ್ಪರ್ಧಿಸುತ್ತಿದ್ದಾರೆ. ಈ ವೇಳೆ ಅಮ್ಮ ಮತ್ತು ಮಗಳ ರೌಂಡ್ ನಡೆಯುತ್ತಿದ್ದು, ಅಪೂರ್ವ (Apoorva) ಅವರಿಗೆ ಮಗಳ ಬಿಗ್ ಸರ್ಪ್ರೈಸ್ (Surprise) ಕೊಟ್ಟಿದ್ದಾರೆ. ಮಗಳ ಗಿಫ್ಟ್ ನೋಡಿ ಅಪೂರ್ವ ಖುಷಿಯಾಗಿದ್ದಾರೆ.

    ಸೂಪರ್ ಕ್ವೀನ್ಸ್ (Super Queens) ಮೂಲಕ ತಮ್ಮ ಜೀವನದ ತೆರೆಹಿಂದಿನ ಕಥೆಯನ್ನ ಸ್ಪರ್ಧಿಗಳು ಬಿಚ್ಚಿಟ್ಟಿದ್ದಾರೆ. ಹಾಗೆಯೇ ನಟಿ ಅಪೂರ್ವ ಅವರ ಜೀವನದ ಕಥೆ ಪ್ರೇಕ್ಷಕರನ್ನು ಕೂಡ ಭಾವುಕರನ್ನಾಗಿಸಿದೆ. ಇನ್ನೂ ಅಮ್ಮ -ಮಗಳ ರೌಂಡ್‌ನಲ್ಲಿ ಮಗಳು, ಕೆಲವು ಪ್ರಶ್ನೆಗಳನ್ನ ತಾಯಿ ಅಪೂರ್ವಗೆ ಕೇಳಿದ್ದಾರೆ. ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಅರವಿಂದ್‌ಗಾಗಿ ಬೇಡಿಕೆಯಿಟ್ಟ ದಿವ್ಯಾ ಉರುಡುಗ

    ನನ್ನ ಮೊದಲ ಪ್ರಶ್ನೆ ಇದು. ಯಾವತ್ತಾದ್ದರೂ ಅನಿಸಿದ್ಯಾ ನನ್ನ ಮಗಳು ಇಲ್ಲದಿದ್ದರೆ ನಾನು ಖುಷಿಯಾಗಿರುತ್ತಿದ್ದೆ ಅಥವಾ ಗಂಡು ಮಗು ಆಗಿದ್ದರೆ ಇನ್ನೂ ಖುಷಿಯಾಗಿರುತ್ತಿದ್ದೆ ಕಷ್ಟ ಪಡುತ್ತಿರಲಿಲ್ಲ ಅನಿಸಿದ್ಯಾ ಎಮದು. ಆಗ 100ರಲ್ಲಿ 1% ನನಗೆ ಈ ರೀತಿ ಅನಿಸಿಲ್ಲ. ಎಷ್ಟೋ ದೇವರಲ್ಲಿ ಹರಿಕೆ ಕಟ್ಟಿಕೊಂಡು ಮೊದಲು ಹೆಣ್ಣು ಮಗು ಆಗಬೇಕು ಎಂದು ಹುಟ್ಟಿರುವ ಮಗು ನೀನು ಎಂದು ಅಪೂರ್ವ ಉತ್ತರಿಸಿದ್ದಾರೆ.

    ಮತ್ತೆ ಮದುವೆ ಆಗಬೇಕು ಎಂದು ಯೋಚನೆ ಕೂಡ ಮಾಡಿಲ್ಲ ಯಾಕೆ ಎಂದು ಅಮ್ಮನಿಗೆ ಕೇಳಿದ್ದಾರೆ. ಮದುವೆ ಅಂದ್ರೆ ಏನು ಅದರ ಮಹತ್ವ ಎಲ್ಲ ಅರ್ಥ ಆಗೋಕು ಮುಂಚೆ ಮದುವೆ ಆಗಿದ್ದು ಎಷ್ಟೊಂದು ಸಮಸ್ಯೆ ನೋಡ್ಬಿಟ್ಟು ಮದುವೆ ಆಗಬೇಕು ಅನಿಸಲಿಲ್ಲ. ಕೈಯಲ್ಲಿ ಒಂದು ಹೆಣ್ಣು ಮಗುವಿಗೆ ಬರುವ ಜನರ ಮೆಂಟಾಲಿಟಿ ಹೇಗೆ ಇರುತ್ತೆ. ಏನೇ ಆಗಲಿ ಫಸ್ಟ್ ತಪ್ಪು ಎಂದು ಹೇಳುವುದು ಹೆಣ್ಣು ಮಕ್ಕಳ ಮೇಲೆ ಹೀಗಾಗಿ ಯೋಚನೆ ಮಾಡಿಲ್ಲ ಮಾಡುವ ಯೋಚನೆ ಮಾಡಲ್ಲ. ಮದುವೆ ಅನ್ನೋದು ಒಂದು ಜವಾಬ್ದಾರಿ ರೀತಿ ಬಂದವರನ್ನು ನಾವು ಚೆನ್ನಾಗಿ ನೋಡಿಕೊಂಡಿಲ್ಲ ಅಂದ್ರೆ ಹೇಗೆ ಎಂದು ನಟಿ ಅಪೂರ್ವ ಮಾತನಾಡಿದ್ದಾರೆ.

    ಇನ್ನೂ ಈ ವೇಳೆ ಅಮ್ಮನಿಗೆ ಚಿನ್ನದ ಮಾಂಗಲ್ಯ ಗಿಫ್ಟ್ ಮಾಡಿದ್ದಾರೆ. ತನಗೆ ಕಾರು ಖರಿದೀಸಲು ಎಂದು ಇಟ್ಟ ಹಣದಲ್ಲಿ ತಾಯಿಗೆ ಚಿನ್ನದ ಮಾಂಗಲ್ಯ ಕಾಣಿಕೆಯಾಗಿ ನೀಡಿದ್ದಾರೆ. ಮಗಳ ಪ್ರೀತಿಗೆ ನಟಿ ಅಪೂರ್ವ ಭಾವುಕರಾಗಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬಿಗ್ ಬಾಸ್ ಮನೆಯಿಂದ ಅಮೂಲ್ಯ ಗೌಡ ಔಟ್

    ಬಿಗ್ ಬಾಸ್ ಮನೆಯಿಂದ ಅಮೂಲ್ಯ ಗೌಡ ಔಟ್

    ಕಿರುತೆರೆಯ ‘ಕಮಲಿ’ ಸೀರಿಯಲ್ ಮೂಲಕ ಮನೆಮಾತಾದ ನಟಿ ಅಮೂಲ್ಯ ಗೌಡ (Amulya Gowda), ಬಿಗ್‌ಬಾಸ್ ಸೀಸನ್ 9ಕ್ಕೆ (Bigg Boss) ಎಂಟ್ರಿ ಕೊಟ್ಟಿದ್ದರು. ಈ‌ ಶೋ ಮುಖಾಂತರ ಅಪಾರ ಅಭಿಮಾನಿಗಳ ಮನಗೆದ್ದಿದ್ದರು. ಈಗ ಅಮೂಲ್ಯ ಆಟಕ್ಕೆ ಬಿಗ್ ಬಾಸ್‌ ಬ್ರೇಕ್ ಹಾಕಿದ್ದಾರೆ.

    ಟಿವಿ ಪರದೆಯಲ್ಲಿ ರಿಷಿ‌‌ ಮನದರಸಿ ಕಮಲಿಯಾಗಿ‌ ಮನಗೆದ್ದ ನಟಿ ಅಮೂಲ್ಯ ಅಭಿನಯಕ್ಕೆ ಕನ್ನಡಿಗರು ಫಿದಾ ಆಗಿದ್ದರು. ಬಳಿಕ ದೊಡ್ಮನೆಗೆ ಕಾಲಿಟ್ಟ ಅಮೂಲ್ಯ, ಅಡುಗೆ, ಟಾಸ್ಕ್, ಮನರಂಜನೆ ಹೀಗೆ ಪ್ರತಿಯೊಂದರಲ್ಲೂ ಗಟ್ಟಿ ಸ್ಪರ್ಧಿಯಾಗಿ ಹೈಲೈಟ್ ಆಗಿದ್ದರು. ರಾಕೇಶ್ ಜೊತೆಗಿನ ಒಡನಾಟದ ವಿಷ್ಯವಾಗಿಯೂ ಸದ್ದು ಮಾಡಿದ್ದರು. ಈಗ 14ನೇ ವಾರದ ಮೊದಲ ಸ್ಪರ್ಧಿಯಾಗಿ ಅಮೂಲ್ಯ ಹೊರಬಂದಿದ್ದಾರೆ. ಇದನ್ನೂ ಓದಿ: ‘ಬಿಗ್ ಬಾಸ್’ ಮನೆಯಲ್ಲಿ ದಿವ್ಯಾಗೆ ಕ್ಲಾಸ್ ತಗೆದುಕೊಂಡು ಆರ್ಯವರ್ಧನ್ ಗುರೂಜಿ

    ಫಿನಾಲೆಗೆ ಕಡೆಯ ಘಟ್ಟದಲ್ಲಿ ಇರುವ ಈ ವಾರಾಂತ್ಯ ಇಬ್ಬರು ‌ಸ್ಪರ್ಧಿಗಳು ಹೊರಬರಲಿದ್ದಾರೆ. ಅದರಲ್ಲಿ ಮೊದಲ ಸ್ಪರ್ಧಿಯಾಗಿ ಅಮೂಲ್ಯ ಗೌಡ ಔಟ್ ಆಗಿದ್ದಾರೆ.

    ನವೀನರು ಹಾಗೂ ಪ್ರವೀಣರು ಎಂಬ ಟ್ಯಾಗ್ ಲೈನ್ ನೊಂದಿಗೆ ಶುರುವಾದ ಕನ್ನಡದ ಬಿಗ್ ಬಾಸ್ ಇದೀಗ ಕೊನೆಯ ಹಂತಕ್ಕೆ ಬಂದು ನಿಂತಿದೆ. ಕೊನೆಗೂ ಬಿಗ್ ಬಾಸ್ ಫಿನಾಲೆ ದಿನಾಂಕವನ್ನು ಘೋಷಣೆ ಮಾಡಿದ್ದು ಡಿಸೆಂಬರ್ 31 ಹಾಗೂ ಜನವರಿ 1ನೇ ತಾರೀಖು ಬಿಗ್ ಬಾಸ್ ಫಿನಾಲೆ ನಡೆಯುವುದು ನಿಕ್ಕಿಯಾಗಿದೆ. ಇದನ್ನೂ ಓದಿ: ಎರಡನೇ ಬಾರಿ ಬಿಗ್ ಬಾಸ್ ಮನೆಯಲ್ಲಿ ಕಳಪೆ ಬೋರ್ಡ್ ಹಾಕಿಸಿಕೊಂಡ ರಾಕೇಶ್

    Live Tv
    [brid partner=56869869 player=32851 video=960834 autoplay=true]

  • Breaking News- ಅನಿರುದ್ಧ ಬ್ಯಾನ್ ವಿಚಾರ: ಫಿಲ್ಮ್ ಚೇಂಬರ್ ಗೆ ಬಾರದಿರಲು ನಿರ್ಮಾಪಕರ ಸಂಘ ನಿರ್ಧಾರ

    Breaking News- ಅನಿರುದ್ಧ ಬ್ಯಾನ್ ವಿಚಾರ: ಫಿಲ್ಮ್ ಚೇಂಬರ್ ಗೆ ಬಾರದಿರಲು ನಿರ್ಮಾಪಕರ ಸಂಘ ನಿರ್ಧಾರ

    ಕಿರುತೆರೆ ನಿರ್ಮಾಪಕರ ಸಂಘವು ನಟ  ಅನಿರುದ್ಧ ಮೇಲೆ ತಗೆದುಕೊಂಡು ಕ್ರಮದ ಕುರಿತಾಗಿ ಇಂದು ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಸಭೆ ಕರೆಯಲಾಗಿತ್ತು. ಈ ಸಭೆಯಲ್ಲಿ ಅನಿರುದ್ಧ, ನಿರ್ದೇಶಕ ಎಸ್.ನಾರಾಯಣ್ ಹಾಗೂ ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಹಾಗೂ ಪದಾಧಿಕಾರಿಗಳು ಬರುತ್ತಾರೆ ಎಂದು ಹೇಳಲಾಗಿತ್ತು. ಆದರೆ, ಈ ಸಭೆಯಲ್ಲಿ ತಾವು ಭಾಗಿ ಆಗುತ್ತಿಲ್ಲವೆಂದು ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.

    ಪಬ್ಲಿಕ್ ಟಿವಿ ಡಿಜಿಟಲ್ ನೊಂದಿಗೆ ಮಾತನಾಡಿದ ಭಾಸ್ಕರ್, ‘ಇದು ಕಿರುತೆರೆಗೆ ಸಂಬಂಧಿಸಿದ ವಿಚಾರ. ವಾಣಿಜ್ಯ ಮಂಡಳಿಗೂ ಈ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ಈ ಸಮಸ್ಯೆ ಬಗೆಹರಿಯಬೇಕಾಗಿದ್ದು ನಮ್ಮಲ್ಲೇ. ಹಾಗಾಗಿ ವಾಣಿಜ್ಯ ಮಂಡಳಿಗೆ ಹೋಗದಿರಲು ನಿರ್ಧರಿಸಿದ್ದೇವೆ. ಚಿತ್ರೋದ್ಯಮದ ಮಾತೃಸಂಸ್ಥೆಯ ಅಧ್ಯಕ್ಷರಾದ ಭಾ.ಮಾ ಹರೀಶ್ ಅವರು ನಮಗೆ ಕರೆ ಮಾಡಿದ್ದರು. ಜೊತೆಗೆ ಅನಿರುದ್ಧ ಬರುತ್ತಾರೆ ಅಂದರು. ಅನಿರುದ್ಧ ಬರುತ್ತಾರೆ ಅಂದರೆ, ನಾವು ಬರುವುದಿಲ್ಲ ಎಂದು ಹೇಳಿದ್ದೇವೆ’ ಎಂದರು.

    ಇಂದು ಸಂಜೆ ನಿರ್ಮಾಪಕರ ಸಂಘದಲ್ಲೇ ಮತ್ತೊಂದು ಸಭೆ ನಡೆಯಲಿದ್ದು, ಕರ್ನಾಟಕ ಟೆಲಿವಿಷನ್ ಅಸೋಸಿಯೇಷನ್ ನ ಮಾಜಿ ಅಧ್ಯಕ್ಷರು, ಹಾಲಿ ಅಧ್ಯಕ್ಷರು ಹಾಗೂ ಹಿರಿಯ ನಿರ್ದೇಶಕರು ಈ ವಿಷಯದ ಕುರಿತು ಚರ್ಚಿಸಿ ಒಂದು ತೀರ್ಮಾನಕ್ಕೆ ಬರುವುದಾಗಿಯೂ ಭಾಸ್ಕರ್ ತಿಳಿಸಿದ್ದಾರೆ. ಸಭೆಯಲ್ಲಿ ಬಿ.ಸುರೇಶ್, ಶೇಷಾದ್ರಿ, ಎಸ್.ವಿ. ಶಿವಕುಮಾರ್, ರವಿಕಿರಣ್, ರವಿ ಗರಣಿ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ.

    ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ನ ಒಂದು ಅಂಗ ಸಂಸ್ಥೆಯಾಗಿರುವ ಕಿರುತೆರೆ ನಿರ್ಮಾಪಕರ ಸಂಘವು ಯಾವುದೇ ಕಾರಣಕ್ಕೂ ಅನಿರುದ್ಧ ಅವರ ಮಾತನ್ನು ಒಪ್ಪುತ್ತಿಲ್ಲ. ಎರಡು ವರ್ಷಗಳ ಕಾಲ ಯಾವುದೇ ನಿರ್ಮಾಪಕರು ಅನಿರುದ್ಧ ಅವರಿಗೆ ಅವಕಾಶ ಕೊಡುವುದು ಬೇಡ ಎಂದು ಹೊರಡಿಸಿರುವ ಆದೇಶವನ್ನು ವಾಪಸ್ಸು ಪಡೆಯುತ್ತಿಲ್ಲ. ಸಂಧಾನಕ್ಕೂ ಸಿದ್ಧರಾಗಿಲ್ಲ. ಹಾಗಾಗಿ ಅನಿರುದ್ಧ ವಾಣಿಜ್ಯ ಮಂಡಳಿಯ ಕದ ತಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅನಿರುದ್ಧ ಬ್ಯಾನ್ ವಿಚಾರ: ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ

    ಅನಿರುದ್ಧ ಬ್ಯಾನ್ ವಿಚಾರ: ಮಧ್ಯಾಹ್ನ 3 ಗಂಟೆಗೆ ಮಹತ್ವದ ಸಭೆ

    ನ್ನಡ ಕಿರುತೆರೆ ನಿರ್ಮಾಪಕರ ಸಂಘವು ನಟ ಅನಿರುದ್ಧ ಅವರ ವಿರುದ್ಧ ಹೊರಡಿಸಿರುವ ಅಲಿಖಿತ ಬ್ಯಾನ್ ವಿಚಾರ ಇಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ಚರ್ಚೆಯಾಗಲಿದೆ. ಮಧ್ಯಾಹ್ನ 3 ಗಂಟೆಗೆ ನಿರ್ಮಾಪಕರ ಸಂಘ ಮತ್ತು ವಾಣಿಜ್ಯ ಮಂಡಳಿಯು ಜಂಟಿಯಾಗಿ ಅನಿರುದ್ಧ ಜೊತೆ ಮಾತನಾಡಲಿದೆ. ಈ ಸಂದರ್ಭದಲ್ಲಿ ಅನಿರುದ್ಧ ಮೇಲಿನ ನಿಷೇಧವನ್ನು ಹಿಂದಕ್ಕೆ ಪಡೆಯುತ್ತಾರಾ? ಅಥವಾ ಮುಂದುವರೆಸುತ್ತಾರಾ ಎನ್ನುವುದನ್ನು ಕಾದು ನೋಡಬೇಕು. ಮಧ್ಯಾಹ್ನದ ನಂತರ ಅನಿರುದ್ಧ ಭವಿಷ್ಯ ನಿರ್ಧಾರವಾಗಲಿದೆ.

    ಜೊತೆ ಜೊತೆಯಲಿ ಧಾರಾವಾಹಿ ವಿಚಾರವಾಗಿ ಅನಿರುದ‍್ಧ ಅವರ ಮೇಲೆ ಗುರುತರ ಆರೋಪಗಳನ್ನು ಮಾಡಲಾಗಿತ್ತು. ಆ ಆರೋಪಗಳನ್ನು ಅನಿರುದ್ಧ ನಿರಾಕರಿಸಿದರೂ, ನಿರ್ಮಾಪಕರ ಸಂಘವು ಅನಿರುದ್ಧ ಮೇಲೆ ನಿಷೇಧ ಹೇರಿತ್ತು. ಇದೀಗ ಅನಿರುದ್ಧ ಅವರು ಸೂರ್ಯವಂಶ ಧಾರಾವಾಹಿಯಲ್ಲಿ ಕಾಣಿಸಿಕೊಳ್ಳುತ್ತಿರುವುದರಿಂದ ಈ ವಿವಾದ ಮತ್ತೆ ಮುನ್ನೆಲೆಗೆ ಬಂದಿದೆ. ಅವರನ್ನು ಈ ಧಾರಾವಾಹಿಯಿಂದಲೂ ಕೈ ಬಿಡುವಂತೆ ಒತ್ತಡ ಹೇರಲಾಗುತ್ತಿದೆ. ಇದನ್ನೂ ಓದಿ:  ವಸಿಷ್ಠ ಸಿಂಹ- ಹರಿಪ್ರಿಯಾ ಮದುವೆ ಡೇಟ್ ಫಿಕ್ಸ್

    ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್, ‘ಗಲಾಟೆ ಆಗಿದ್ದು ಕಿರುತೆರೆ ನಿರ್ಮಾಪಕರ ಸಂಘಕ್ಕೂ ಮತ್ತು ಅನಿರುದ್ಧ ಅವರಿಗೂ ನಿಜ. ಆದರೆ, ಅನಿರುದ್ಧ ಅವರು ವಾಣಿಜ್ಯ ಮಂಡಳಿಯ ಸದಸ್ಯರು ಮತ್ತು ಈ ಧಾರಾವಾಹಿಯನ್ನು ನಿರ್ದೇಶನ ಮಾಡುತ್ತಿರುವ ಎಸ್.ನಾರಾಯಣ್ ಅವರು ಸಿನಿಮಾ ರಂಗದವರು. ಅದಕ್ಕೂ ಹೆಚ್ಚಾಗಿ ಈ ವಿಷಯವನ್ನು ಸೌಹಾರ್ದಯುತವಾಗಿ ಮುಗಿಸಿಕೊಡಿ ಎಂದು ಅನಿರುದ್ಧ ಮಂಡಳಿಗೆ ಪತ್ರ ಬರೆದಿದ್ದಾರೆ. ಹಾಗಾಗಿ ಕರೆಯಿಸಿಕೊಂಡು ಮಾತನಾಡಲಿದ್ದೇವೆ’ ಅಂದರು.

    ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ನ ಒಂದು ಅಂಗ ಸಂಸ್ಥೆಯಾಗಿರುವ ಕಿರುತೆರೆ ನಿರ್ಮಾಪಕರ ಸಂಘವು ಯಾವುದೇ ಕಾರಣಕ್ಕೂ ಅನಿರುದ್ಧ ಅವರ ಮಾತನ್ನು ಒಪ್ಪುತ್ತಿಲ್ಲ. ಎರಡು ವರ್ಷಗಳ ಕಾಲ ಯಾವುದೇ ನಿರ್ಮಾಪಕರು ಅನಿರುದ್ಧ ಅವರಿಗೆ ಅವಕಾಶ ಕೊಡುವುದು ಬೇಡ ಎಂದು ಹೊರಡಿಸಿರುವ ಆದೇಶವನ್ನು ವಾಪಸ್ಸು ಪಡೆಯುತ್ತಿಲ್ಲ. ಸಂಧಾನಕ್ಕೂ ಸಿದ್ಧರಾಗಿಲ್ಲ. ಹಾಗಾಗಿ ಅನಿರುದ್ಧ ವಾಣಿಜ್ಯ ಮಂಡಳಿಯ ಕದ ತಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಫಿಲ್ಮ್ ಚೇಂಬರ್ ನಟ ಅನಿರುದ್ಧ ಅವರನ್ನು ಕರೆದದ್ದು ಯಾಕೆ?

    ಫಿಲ್ಮ್ ಚೇಂಬರ್ ನಟ ಅನಿರುದ್ಧ ಅವರನ್ನು ಕರೆದದ್ದು ಯಾಕೆ?

    ಕೆಲವೇ ಹೊತ್ತಿನಲ್ಲಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನಟ ಅನಿರುದ್ಧ ಆಗಮಿಸಲಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಮಧ್ಯಾಹ್ನ ಮಾಧ್ಯಮಗಳ ಜೊತೆ ಮಾತನಾಡಿದ್ದ ನಿರ್ದೇಶಕ ಎಸ್.ನಾರಾಯಣ್, ಸಂಜೆ ವಾಣಿಜ್ಯ ಮಂಡಳಿಯವರು ಅನಿರುದ್ಧ ಅವರನ್ನು ಕರೆದಿದ್ದಾರೆ. ಅಲ್ಲಿ ಏನು ಆಗುತ್ತದೆಯೋ ನೋಡೋಣ ಎಂದು ಹೇಳಿದ್ದರು. ಆದರೆ, ಈ ವಿಚಾರಕ್ಕೂ ವಾಣಿಜ್ಯ ಮಂಡಳಿಗೂ ಏನು ಸಂಬಂಧ ಎನ್ನುವ ಪ್ರಶ್ನೆ ಎದುರಾಗಿದೆ. ಅನಿರುದ್ಧ ಅವರನ್ನು ದೂರ ಇಟ್ಟಿದ್ದು ಕಿರುತೆರೆ ನಿರ್ಮಾಪಕರ ಸಂಘ. ಅದಕ್ಕೂ ವಾಣಿಜ್ಯ ಮಂಡಳಿಗೂ ಯಾವುದೇ ಸಂಬಂಧವಿಲ್ಲ. ಆದರೂ, ಮಧ್ಯ ಪ್ರವೇಶ ಮಾಡಿದ್ದು ಅಚ್ಚರಿ ಮೂಡಿಸಿದೆ.

    ಈ ಕುರಿತು ಪಬ್ಲಿಕ್ ಟಿವಿ ಡಿಜಿಟಲ್ ಜೊತೆ ಮಾತನಾಡಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷ ಭಾ.ಮಾ ಹರೀಶ್, ‘ಗಲಾಟೆ ಆಗಿದ್ದು ಕಿರುತೆರೆ ನಿರ್ಮಾಪಕರ ಸಂಘಕ್ಕೂ ಮತ್ತು ಅನಿರುದ್ಧ ಅವರಿಗೂ ನಿಜ. ಆದರೆ, ಅನಿರುದ್ಧ ಅವರು ವಾಣಿಜ್ಯ ಮಂಡಳಿಯ ಸದಸ್ಯರು ಮತ್ತು ಈ ಧಾರಾವಾಹಿಯನ್ನು ನಿರ್ದೇಶನ ಮಾಡುತ್ತಿರುವ ಎಸ್.ನಾರಾಯಣ್ ಅವರು ಸಿನಿಮಾ ರಂಗದವರು. ಅದಕ್ಕೂ ಹೆಚ್ಚಾಗಿ ಈ ವಿಷಯವನ್ನು ಸೌಹಾರ್ದಯುತವಾಗಿ ಮುಗಿಸಿಕೊಡಿ ಎಂದು ಅನಿರುದ್ಧ ಮಂಡಳಿಗೆ ಪತ್ರ ಬರೆದಿದ್ದಾರೆ. ಹಾಗಾಗಿ ಕರೆಯಿಸಿಕೊಂಡು ಮಾತನಾಡಲಿದ್ದೇವೆ’ ಅಂದರು. ಇದನ್ನೂ ಓದಿ: ಕರ್ನಾಟಕದ ಹುಡುಗಿಯ ಜೊತೆ ಸಲ್ಮಾನ್ ಖಾನ್‌ಗೆ ಪ್ಯಾರ್

    ಕರ್ನಾಟಕ ಟೆಲಿವಿಷನ್ ಅಸೋಷಿಯೇಷನ್ನ ಒಂದು ಅಂಗ ಸಂಸ್ಥೆಯಾಗಿರುವ ಕಿರುತೆರೆ ನಿರ್ಮಾಪಕರ ಸಂಘವು ಯಾವುದೇ ಕಾರಣಕ್ಕೂ ಅನಿರುದ್ಧ ಅವರ ಮಾತನ್ನು ಒಪ್ಪುತ್ತಿಲ್ಲ. ಎರಡು ವರ್ಷಗಳ ಕಾಲ ಯಾವುದೇ ನಿರ್ಮಾಪಕರು ಅನಿರುದ್ಧ ಅವರಿಗೆ ಅವಕಾಶ ಕೊಡುವುದು ಬೇಡ ಎಂದು ಹೊರಡಿಸಿರುವ ಆದೇಶವನ್ನು ವಾಪಸ್ಸು ಪಡೆಯುತ್ತಿಲ್ಲ. ಸಂಧಾನಕ್ಕೂ ಸಿದ್ಧರಾಗಿಲ್ಲ. ಹಾಗಾಗಿ ಅನಿರುದ್ಧ ವಾಣಿಜ್ಯ ಮಂಡಳಿಯ ಕದ ತಟ್ಟಿದ್ದಾರೆ.

    ಇಂದು ಅನಿರುದ್ಧ ಅವರ ಜೊತೆ ಭಾ.ಮಾ ಹರೀಶ್ ಅವರು ಮಾತನಾಡುತ್ತಿದ್ದು, ನಾಳೆ ಕಿರುತೆರೆಯ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ಅವರೊಂದಿಗೆ ಮಾತನಾಡುತ್ತಿದ್ದಾರೆ. ಆಗಿರುವ ಸಮಸ್ಯೆಯನ್ನು ಕೇಳಿ ಸೌಹಾರ್ದಯುತ ವಾತಾವರಣವನ್ನು ನಿರ್ಮಿಸುವ ಭರವಸೆಯನ್ನೂ ಅವರು ನೀಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]