Tag: ಕಿರುತೆರೆ

  • ತನ್ನನ್ನು ತಾನೇ ಮದುವೆಯಾದ ಕಿರುತೆರೆ ನಟಿ ಕಾನಿಷ್ಕಾ ಸೋನಿ

    ತನ್ನನ್ನು ತಾನೇ ಮದುವೆಯಾದ ಕಿರುತೆರೆ ನಟಿ ಕಾನಿಷ್ಕಾ ಸೋನಿ

    ಕಿರುತೆರೆಯಲ್ಲಿ ಸಾಕಷ್ಟು ಶೋ ಮತ್ತು ಸೀರಿಯಲ್ ಮೂಲಕ ಕಮಾಲ್ ಮಾಡಿರುವ ಕಾನಿಷ್ಕಾ ಸೋನಿ ಅವರ ಮದುವೆಯ ಪ್ರಸಂಗ ಸಿಕ್ಕಾಪಟ್ಟೆ ಸುದ್ದಿ ಮಾಡುತ್ತಿದೆ. ತನ್ನನ್ನು ತಾನೇ ಮದುವೆಯಾಗಿರುವ ನಟಿ ಕಾನಿಷ್ಕಾ ವಿಚಾರ ಕೇಳಿ ಅಭಿಮಾನಿಗಳು ಶಾಕ್ ಆಗಿದ್ದಾರೆ.

     

    View this post on Instagram

     

    A post shared by Kanishka Soni (@itskanishkasoni)

    ಕಿರುತೆರೆ ಜನಪ್ರಿಯ ಸೀರಿಯಲ್ `ದಿಯಾ ಔರ್ ಬಾತಿ ಹಮ್’ ಖ್ಯಾತಿಯ ನಟಿ ಕಾನಿಷ್ಕಾ ಸೋನಿ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸದ್ದು ಮಾಡುತ್ತಿದ್ದಾರೆ. ಆಕೆಯ ಕೆಲವು ಚಿತ್ರಗಳು ಸೋಷಿಯಲ್ ಮೀಡಿಯಾದಲ್ಲಿ ಹೈಪ್ ಕ್ರಿಯೇಟ್ ಮಾಡುತ್ತಿದೆ. ಅದರಲ್ಲಿ ಅವರು ಹಣೆಗೆ ಸಿಂಧೂರವಿಟ್ಟು ಮತ್ತು ಕತ್ತಿಗೆ ಮಂಗಳಸೂತ್ರವನ್ನು ಧರಿಸಿದ್ದಾರೆ. ಕಾನಿಷ್ಕಾ ತನ್ನ ಇನ್ಸ್ಟಾಗ್ರಾಂ ಮೂಲಕ ತಾನು ಮದುವೆಯಾಗಿದ್ದೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ದುಬಾರಿ ಮೊತ್ತದ ಕಾರು ಖರೀದಿಸಿದ `ಬಿಗ್ ಬಾಸ್’ ಖ್ಯಾತಿಯ ಅನುಪಮಾ ಗೌಡ

     

    View this post on Instagram

     

    A post shared by Kanishka Soni (@itskanishkasoni)

    ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿರುವ ಫೋಟೋ, ಕಾನಿಷ್ಕಾ ಹಣೆಯಲ್ಲಿ ಸಿಂಧೂರವೂ ಕಾಣುತ್ತದೆ ಅಲ್ಲದೇ ಆಕೆ ಕತ್ತಿನಲ್ಲಿ ಮಂಗಳಸೂತ್ರವನ್ನು ಧರಿಸಿದ್ದಾರೆ. ಈಗ ಕನಿಷ್ಕಾ ತಮ್ಮ ಪೋಸ್ಟ್‌ನಲ್ಲಿ, ನನ್ನನ್ನೇ ಮದುವೆಯಾಗಿದ್ದೇನೆ ಏಕೆಂದರೆ ನಾನು ನನ್ನ ಎಲ್ಲಾ ಕನಸುಗಳನ್ನು ಪೂರೈಸಿದ್ದೇನೆ ಮತ್ತು ನನ್ನನ್ನು ಪ್ರೀತಿಸುವ ಏಕೈಕ ವ್ಯಕ್ತಿ ನಾನೇ ಆಗಿದ್ದೇನೆ ಎಂದಿದ್ದಾರೆ. ಒಟ್ನಲ್ಲಿ ನಟಿಯ ನಡೆ ನೋಡಿ ಅಭಿಮಾನಿಗಳು ಅಚ್ಚರಿ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಸಾವಿರಾರು ಕೋಟಿ ಬಾಚಿದ ‘ಕೆಜಿಎಫ್ 2’ ಸಿನಿಮಾ ಆಗಸ್ಟ್ 20ರಂದು ಜೀ  ಕನ್ನಡದಲ್ಲಿ ಪ್ರಸಾರ

    ಸಾವಿರಾರು ಕೋಟಿ ಬಾಚಿದ ‘ಕೆಜಿಎಫ್ 2’ ಸಿನಿಮಾ ಆಗಸ್ಟ್ 20ರಂದು ಜೀ ಕನ್ನಡದಲ್ಲಿ ಪ್ರಸಾರ

    ಕೆಜಿಎಫ್ ಚಾಪ್ಟರ್ 2, ಇಡೀ ಜಗತ್ತು ಒಮ್ಮೆಲೇ ಕನ್ನಡ ಚಿತ್ರರಂಗದತ್ತ ತಿರುಗಿ ನೋಡುವಂತೆ ಮಾಡಿದ ಹೆಮ್ಮೆಯ ಇಂಡಿಯಾದ ಬ್ಲಾಕ್ ಬಸ್ಟರ್  ಸಿನಿಮಾ. ಕಥೆ, ತಾಂತ್ರಿಕತೆ ,ಶ್ರೀಮಂತಿಕೆ ಮತ್ತು ಕಲಾವಿದರ ಆಯ್ಕೆಯಲ್ಲಿ ಚಾಪ್ಟರ್ 1ನ್ನೇ ಮೀರಿಸುವಂತೆ ತೆರೆಗೆ ಅಪ್ಪಳಿಸಿದ ಈ ಚಿತ್ರ ಬಿಡುಗಡೆಗೊಂಡ ಎಲ್ಲಾ ಭಾಷೆಗಳಲ್ಲೂ ಯಶಸ್ವಿಯಾಗಿದ್ದು ಈಗ ಇತಿಹಾಸ . ಇದೀಗ ಈ ಸಿನಿಮಾ ಕನ್ನಡ ಕಿರುತೆರೆಗೆ ಸಿರಿತನವನ್ನು ಪರಿಚಯಿಸಿದ ಕನ್ನಡಿಗರ ನೆಚ್ಚಿನ ನಂಬರ್ 1 ಮನರಂಜನಾ ವಾಹಿನಿ  ಜೀ ಕನ್ನಡದಲ್ಲಿ ಇದೇ ಆಗಸ್ಟ್ 20 ರಂದು ಶನಿವಾರ ಸಂಜೆ 7 ಗಂಟೆಗೆ ಪ್ರಸಾರವಾಗುತ್ತಿದೆ .

    ಸ್ಯಾಂಡಲ್ ವುಡ್ ಜೊತೆಗೆ ಅತ್ಯುತ್ತಮ ನಂಟು ಹೊಂದಿರುವ ಜೀ ಕನ್ನಡ ವಾಹಿನಿ ತಮ್ಮ ವಿವಿಧ ಕಾರ್ಯಕ್ರಮಗಳ ಮೂಲಕ ಉದ್ಯಮಕ್ಕೆ ಶ್ರೇಷ್ಟ ಕಲಾವಿದರನ್ನು ಕೊಡುಗೆಯಾಗಿ ನೀಡಿರುವ ಹೆಗ್ಗಳಿಕೆ ಹೊಂದಿದೆ. ಕೆಜಿಎಫ್ 2 ಚಿತ್ರದಲ್ಲೂ ಹಲವಾರು ಜೀ ಕುಟುಂಬದ ಕಲಾವಿದರು ನಟಿಸಿರುವುದು ಇದಕ್ಕೆ ಸಾಕ್ಷಿಯಾಗಿದೆ. ಗೆಲುವಿನ ಸರದಾರ ರಾಕಿಂಗ್ ಸ್ಟಾರ್ ಯಶ್ , ಶ್ರೀನಿಧಿ ಶೆಟ್ಟಿ , ಸಂಜಯ್ ದತ್ ,ರವೀನಾ ಟಂಡನ್ , ಮಾಳವಿಕಾ ,ವಸಿಷ್ಠ ಸಿಂಹ ,ಪ್ರಕಾಶ್ ರಾಜ್  ಹೀಗೆ ದೇಶ ಕಂಡ ಅದ್ಭುತ ಕಲಾವಿದರ ದಂಡೇ ಈ ಚಿತ್ರದಲ್ಲಿದ್ದು ಪ್ರಶಾಂತ್ ನೀಲ್ ಅವರ ಅತ್ಯದ್ಭುತ ನಿರ್ದೇಶನವಿದೆ. ಚಂದನವನದ ಹೆಮ್ಮೆಯ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್  ಇದಕ್ಕೆ ಹಣ ಹೂಡಿಕೆ ಮಾಡಿದ್ದಾರೆ. ಭುವನ್ ಗೌಡ ಛಾಯಾಗ್ರಹಣದ ಜವಾಬ್ಧಾರಿ ಹೊತ್ತಿದ್ದರೇ  ರವಿ ಬಸ್ರೂರು ಸಂಗೀತ ಸಂಯೋಜನೆ ಮಾಡಿದ್ದಾರೆ . ಇದನ್ನೂ ಓದಿ:ಬಿಗ್ ಬಾಸ್ ಮನೆಯಲ್ಲಿ ಬಿಕ್ಕಿ ಬಿಕ್ಕಿ ಅತ್ತ ಆರ್ಯವರ್ಧನ್ ಗುರೂಜಿ

    ಚಾಪ್ಟರ್ 1 ನಿಂದಲೇ ಕನ್ನಡ ಚಿತ್ರರಂಗದ ದಿಕ್ಕು ಬದಲಿಸುವ ಸೂಚನೆ ನೀಡಿದ್ದ ಕೆಜಿಎಫ್ ಇದೀಗ ಚಾಪ್ಟರ್ 2 ನಿಂದ ಅದನ್ನು ನಿಜವಾಗಿಸಿದೆ. ಬಿಡುಗಡೆಯಾದ ಮೊದಲ ದಿನದಿಂದಲೇ ಯಶಸ್ಸಿನ ಸವಾರಿ ಮಾಡಲು ಶುರುಮಾಡಿ 1000 ಕೋಟಿಗೂ ಹೆಚ್ಚು ಆದಾಯ ಗಳಿಸಿ ದಾಖಲೆ ಸೃಷ್ಟಿಸಿದ್ದಷ್ಟೇ  ಅಲ್ಲದೇ ಶತದಿನೋತ್ಸವವನ್ನು ಆಚರಿಸಿ ಬಾಕ್ಸ್ ಆಫೀಸ್ ಧೂಳಿಪಟ ಮಾಡಿದೆ.

    ಹಬ್ಬಗಳ ಮಾಸ ಶ್ರಾವಣದಲ್ಲಿ ಕಿರು ಪರದೆಯ ಮೇಲೆ ಕೆಜಿಎಫ್ 2 ಅಬ್ಬರ ಆರಂಭವಾಗುತ್ತಿದ್ದು ಈಗಾಗಲೇ ಬಿಡುಗಡೆಯಾಗಿರುವ ವಿಶಿಷ್ಟ ಶೈಲಿಯ ಪ್ರೋಮೋಗಳು ವೀಕ್ಷಕರು ಈ ಸಿನಿಮಾ ಹಬ್ಬವನ್ನು ಕಣ್ತುಂಬಿಕೊಳ್ಳಲು ತುದಿಗಾಲಿನಲ್ಲಿ ಕಾಯುವಂತೆ ಮಾಡಿದೆ.  ಇದೇ ಆಗಸ್ಟ್ 20 ರಂದು ಶನಿವಾರ ಸಂಜೆ 7 ಗಂಟೆಗೆ ಪ್ರಸಾರವಾಗುತ್ತಿರುವ ಕೆಜಿಎಫ್ ಚಾಪ್ಟರ್ 2 ಅನ್ನು ಮನೆಮಂದಿಯೆಲ್ಲಾ ಕೂತು ನೋಡಿ ಈ ಸಿನಿಮೋತ್ಸವವನ್ನು ಆಚರಿಸಿ , ಆನಂದಿಸಿ. ಜೀ ಕನ್ನಡದ ಇತರೆ ಕಾರ್ಯಕ್ರಮಗಳಿಗೆ ನೀಡುವ ಪ್ರೋತ್ಸಾಹವನ್ನು ಮುಂದುವರೆಸಿ.

     

    Live Tv
    [brid partner=56869869 player=32851 video=960834 autoplay=true]

  • ಸ್ವಾತಂತ್ರ್ಯ ದಿನಾಚರಣೆ : ಇಂದು ಕಿರುತೆರೆಯಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

    ಸ್ವಾತಂತ್ರ್ಯ ದಿನಾಚರಣೆ : ಇಂದು ಕಿರುತೆರೆಯಲ್ಲಿ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ

    ಬಾಲಿವುಡ್ ನಲ್ಲಿ ಸಂಚಲನ ಸೃಷ್ಟಿ ಮಾಡಿದ್ದ, ವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಇಂದು ಝೀ ವಾಹಿನಿಯಲ್ಲಿ ಪ್ರಸಾರಕಾಣಲಿದೆ. ಮಧ್ಯಾಹ್ನ ಮೂರು ಗಂಟೆಗೆ ಪ್ರಸಾರವಾಗಲಿರುವ ಈ ಸಿನಿಮಾ ದೇಶಾದ್ಯಂತ ಸಾಕಷ್ಟು ಚರ್ಚೆ ಹುಟ್ಟು ಹಾಕಿತ್ತು. ಅಲ್ಲದೇ ಬಾಕ್ಸ್ ಆಫೀಸಿನಲ್ಲಿ ಸಖತ್ ಸದ್ದು ಮಾಡಿತ್ತು.

    ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ರಿಲೀಸ್ ಆಗುತ್ತಿದ್ದಂತೆಯೇ ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ, ಈ ಸಿನಿಮಾದ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಉತ್ತರ ಪ್ರದೇಶ್, ಗುಜರಾತ್, ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಈ ಸಿನಿಮಾಗೆ ತೆರಿಗೆ ವಿನಾಯತಿ ನೀಡುವ ಮೂಲಕ, ಹೆಚ್ಚೆಚ್ಚು ಜನರಿಗೆ ತಲುಪಿಸಲಾಯಿತು. ಅಲ್ಲದೇ, ಈ ಸಿನಿಮಾದ ಕುರಿತು ಪರ ಮತ್ತು ವಿರೋಧದ ಮಾತುಗಳು ಕೂಡ ಕೇಳಿ ಬಂದವು. ಇದನ್ನೂ ಓದಿ:ಗಂಟಲು ನೋವಿನ ಔಷಧಿ ವಿಚಾರಕ್ಕೆ ಸೋನು ಕಾಲೆಳೆದ ಕಿಚ್ಚ ಸುದೀಪ್

    ಕಾಶ್ಮೀರ ಪಂಡಿತರ ಹತ್ಯೆಯನ್ನು ಪ್ರಮುಖವಾಗಿಟ್ಟುಕೊಂಡು ಬಂದಿರುವ ಈ ಸಿನಿಮಾದಲ್ಲಿ ಕನ್ನಡಿಗ ಪ್ರಕಾಶ್ ಬೆಳವಾಡಿ ಕೂಡ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ ಎನ್ನುವುದು ವಿಶೇಷ. ಥಿಯೇಟರ್ ನಲ್ಲಿ ಕೇವಲ ಹಿಂದಿಯಲ್ಲಿ ಮಾತ್ರ ಈ ಸಿನಿಮಾ ಬಿಡುಗಡೆ ಆಗಿತ್ತು. ಇದೀಗ ಕನ್ನಡವೂ ಸೇರಿದಂತೆ ಹಲವು ಭಾಷೆಗಳಿಗೆ ಈ ಚಿತ್ರ ಡಬ್ ಆಗಿದೆ. ಝೀ ಕನ್ನಡದಲ್ಲಿ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಕನ್ನಡದಲ್ಲೇ ಪ್ರಸಾರವಾಗಲಿದೆ.

    Live Tv
    [brid partner=56869869 player=32851 video=960834 autoplay=true]

  • ಮೂರು ದಿನಗಳ ಕಾಲ ಕಿರುತೆರೆ ಕಲಾವಿದರ ಟೆಲಿವಿಷನ್ ಪ್ರೀಮಿಯರ್ ಲೀಗ್

    ಮೂರು ದಿನಗಳ ಕಾಲ ಕಿರುತೆರೆ ಕಲಾವಿದರ ಟೆಲಿವಿಷನ್ ಪ್ರೀಮಿಯರ್ ಲೀಗ್

    ಎನ್ 1 ಕ್ರಿಕೆಟ್ ಅಕಾಡೆಮಿ ವತಿಯಿಂದ ಟೆಲಿವಿಷನ್ ಪ್ರೀಮಿಯರ್ ಲೀಗ್-ಟಿಪಿಎಲ್ ಶುರುವಾಗ್ತಿದ್ದು, ಇದೇ ತಿಂಗಳ 18, 19 ಹಾಗೂ 20 ಈ ಮೂರು ದಿನಗಳ ಕಾಲ ನಡೆಯಲಿರುವ ಪಂದ್ಯಾವಳಿ ಕಿರುತೆರೆ ಕಲಾವಿದರು ಭಾಗಿಯಾಗಲಿದ್ದಾರೆ. ಹಿರಿಯ ಕಲಾವಿದರ ಸಹಾಯ ಮಾಡುವುದು ಈ ಟಿಪಿಎಲ್ ನ ಮುಖ್ಯ ಧ್ಯೇಯವಾಗಿದೆ ಎನ್ನುತ್ತಾರೆ ಟಿಪಿಎಲ್ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್. ಈ ಬಗ್ಗೆ  ಟಿಪಿಎಲ್ ಬಳಗ ಮಾಧ್ಯಮದರೊಟ್ಟಿಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದೆ.

    ಕ್ರಿಕೆಟ್ ಪಂದ್ಯಾವಳಿಯ ಆಯೋಜಕರಾದ ಸುನಿಲ್ ಕುಮಾರ್ ಬಿ ಆರ್ ಮಾತನಾಡಿ, ಒಳ್ಳೆ ಉದ್ದೇಶ ಇಟ್ಕೊಂಡು ಈ ಪಂದ್ಯಾವಳಿ ಏರ್ಪಡಿಸಲಾಗಿದ್ದು. ಆರು ಜನ ಓನರ್ಸ್ ಗೆ ಧನ್ಯವಾದ ತಿಳಿಸುತ್ತೇನೆ. 16ರಂದು ಜರ್ಸಿ ಲಾಂಚ್ ಹಾಗೂ ಟ್ರೋಫಿ ಲಾಂಚ್ ಮಾಡಲಾಗುತ್ತದೆ. 18, 19 ಹಾಗೂ 20 ಈ ಮೂರು ದಿನಗಳ ಕಾಲ ಕ್ರಿಕೆಟ್ ನಡೆಯಲಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ನಾಪತ್ತೆಯಾದ ಲೋಕೇಶ್

    ಅಶ್ವ ಸೂರ್ಯ ರೈಡರರ್ಸ್ ತಂಡದ ನಾಯಕ ಮಂಜು ಪಾವಗಡ ಮಾತನಾಡಿ, ಒಂದೊಳ್ಳೆ ತಂಡಗಳು ಸೇರಿಕೊಂಡು ಕ್ರಿಕೆಟ್ ಆಡ್ತಿದ್ದು, ಪ್ರತಿ ತಂಡಕ್ಕೂ ಓನರ್ ಗಳು ಬೆಂಬಲವಾಗಿ ನಿಂತಿದ್ದಾರೆ ಎಂದರು.  ದಿ ಬುಲ್ ಸ್ಕ್ವಾಡ್, ಭಜರಂಗಿ ಬುಲ್ಸ್, ಎಂಜೆಲ್ ಎಸ್ಐ, ವಿನ್ ಟೈಮ್ ರಾಕರ್ಸ್, ಅಶ್ವ ಸೂರ್ಯ ರೈಡರ್ಸ್, ಸ್ಯಾಂಡಲ್ ವುಡ್ ಕಿಂಗ್ಸ್ ಎಂಬ ಆರು ತಂಡಗಳು ಭಾಗಿಯಾಗಲಿದ್ದು, ಒಟ್ಟು 102 ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಸಾಥ್ ಕೊಡಲಿದ್ದಾರೆ. ಈ ಆರು ತಂಡಗಳಿಗೂ ಅಂಬಾಸಿಡರ್ ಹಾಗೂ ಓನರ್ ಗಳಿರಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಬೇಗ ಚೇತರಿಸಿಕೊಳ್ಳಿ ಅಮ್ಮ: ವಿವಾದದ ಬೆನ್ನಲ್ಲೇ ಚಂದನ್ ಕುಮಾರ್ ಹೊಸ ಪೋಸ್ಟ್

    ಬೇಗ ಚೇತರಿಸಿಕೊಳ್ಳಿ ಅಮ್ಮ: ವಿವಾದದ ಬೆನ್ನಲ್ಲೇ ಚಂದನ್ ಕುಮಾರ್ ಹೊಸ ಪೋಸ್ಟ್

    ಸ್ಯಾಂಡಲ್‌ವುಡ್ ನಟ ಚಂದನ್ ಕುಮಾರ್ ಕನ್ನಡ ಮತ್ತು ತೆಲುಗು ಕಿರುತೆರೆಯಲ್ಲಿ ಆಕ್ಟೀವ್ ಆಗಿದ್ದಾರೆ. ತೆಲುಗಿನ `ಶ್ರೀಮತಿ ಶ್ರೀನಿವಾಸ್’ ಸೀರಿಯಲ್ ಶೂಟಿಂಗ್ ವೇಳೆ ಚಂದನ್ ಕಿರಿಕ್ ಮಾಡಿಕೊಂಡಿದ್ದರು. ಬಳಿಕ ತಂತ್ರಜ್ಞರು ಕೂಡ ಚಂದನ್ ವಿರುದ್ಧ ತಿರುಗಿ ಬಿದ್ದಿದ್ದರು. ಈ ಕುರಿತ ವಿಡಿಯೋವೊಂದು ಸಖತ್ ವೈರಲ್ ಆಗುತ್ತಿದೆ. ಈ ಬೆನ್ನಲ್ಲೇ ಅಮ್ಮ ನಿಮ್ಮ ಜತೆ ನಾನು ಇರಬೇಕಿತ್ತು ಎಂದು ಚಂದನ್ ಭಾವುಕರಾಗಿದ್ದಾರೆ.

    ತೆಲುಗಿನ ಸೀರಿಯಲ್ ಶೂಟಿಂಗ್ ವೇಳೆ ಚಂದನ್ ಕ್ಯಾಮೆರಾಮೆನ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಬಳಿಕ ತಂತ್ರಜ್ಞರು ಕೂಡ ಚಂದನ್ ವಿರುದ್ಧ ಕಿಡಿಕಾರಿದ್ದರು. ಬಳಿಕ ಚಂದನ್ ಕ್ಷಮೆ ಕೂಡ ಕೇಳಿದ್ದರು. ಈ ವಿಚಾರ ಅಲ್ಲಿಗೆ ನಿಲ್ಲದೇ ಚಂದನ್‌ಗೆ ಕಪಾಳಮೋಕ್ಷ ಕೂಡ ಮಾಡಲಾಯಿತು. ಈ ಕುರಿತ ವಿಡಿಯೋ ಕೂಡ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದನ್ನೂ ಓದಿ:ಹುಲಿ ಜೊತೆ `777 ಚಾರ್ಲಿ’ ನಟಿ ಸಂಗೀತಾ ಶೃಂಗೇರಿ


    ಅಮ್ಮನಿಗೆ ಅನಾರೋಗ್ಯದ ಟೆನ್ಷನ್‌ನಲ್ಲಿ ಇದ್ದೆ. ಅಂದು ಆಸ್ಪತ್ರೆಯಿಂದ ನೇರವಾಗಿ ಶೂಟಿಂಗ್‌ಗೆ ತೆರಳಿದ್ದೆ. ಆಗ ಕ್ಯಾಮೆರಾ ಮ್ಯಾನ್ ನನಗೆ ಸ್ವಲ್ಪ ಕಿರಿಕಿರಿ ಮಾಡಿದರು. ಹೀಗಾಗಿ ಆ ಘಟನೆ ನಡೆಯಿತು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ಈ ಬೆನ್ನಲ್ಲೇ  ಸೋಶಿಯಲ್ ಮೀಡಿಯಾದಲ್ಲಿ ಅವರು ತನ್ನ ತಾಯಿಯ ಜತೆಯಿರುವ ಫೋಟೋ ಶೇರ್ ಮಾಡಿಕೊಂಡಿದ್ದಾರೆ. ಬೇಗ ಗುಣಮುಖರಾಗಿ ಅಮ್ಮಾ. ನಿಮ್ಮನ್ನು ನೋಡಿಕೊಳ್ಳಲು ನಾನು ಅಲ್ಲಿರಬೇಕಿತ್ತು. ನಾನು ನಿಮ್ಮನ್ನು ನೋಡಲು ಬರುತ್ತಿದ್ದೇನೆ. `ಲವ್ ಯೂ ಸೋ ಮಚ್’ ಎಂದು ಚಂದನ್ ಕುಮಾರ್ ಬರೆದುಕೊಂಡಿದ್ದಾರೆ. ಇದಕ್ಕೆ ಚಂದನ್ ಫ್ಯಾನ್ಸ್ ಬೆಂಬಲ ಸೂಚಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಇಸ್ಮಾರ್ಟ್ ಜೋಡಿಗೆ ಜೊತೆಯಾಗಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್

    ಇಸ್ಮಾರ್ಟ್ ಜೋಡಿಗೆ ಜೊತೆಯಾಗಲಿದ್ದಾರೆ ಗೋಲ್ಡನ್ ಸ್ಟಾರ್ ಗಣೇಶ್

    ನ್ನಡದ ಸ್ಟಾರ್ ಸುವರ್ಣ ವಾಹಿನಿಯು ಹೊಸ ರಿಯಾಲಿಟಿ ಶೋ ಶುರು ಮಾಡುತ್ತಿದ್ದು, ಈ ಕಾರ್ಯಕ್ರಮಕ್ಕೆ ಇಸ್ಮಾರ್ಟ್ ಜೋಡಿ ಎಂದು ಹೆಸರಿಡಲಾಗಿದೆ. ಈ ಶೋ ವಿಶೇಷ ಅಂದರೆ, ಗೋಲ್ಡನ್ ಸ್ಟಾರ್ ಗಣೇಶ್ ಅವರು ನಡೆಸಿಕೊಡುತ್ತಿದ್ದಾರೆ. ತಮ್ಮ ಲವಲವಿಕೆಯ ಮಾತಿನ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ. ನೂತನ ಕಾನ್ಸೆಪ್ಟ್ ಜೊತೆ ಸಿದ್ಧವಾಗಿರುವ ಇಸ್ಮಾರ್ಟ್ ಜೋಡಿ ಶೋ ಇದೇ ಜುಲೈ 16 ರಿಂದ ವಾರಾಂತ್ಯದಲ್ಲಿ ಶನಿವಾರ ಮತ್ತು ಭಾನುವಾರ ರಾತ್ರಿ 9ಕ್ಕೆ ಪ್ರಸಾರವಾಗಲಿದೆ.

    ಈಗಾಗಲೇ ಸಿನಿಮಾಗಳ ಜೊತೆ ಕಿರುತೆರೆಯಲ್ಲೂ ಮಿಂಚುತ್ತಿರುವ ಗಣೇಶ್, ಈ ಶೋಗಾಗಿ ಬೇರೆ ರೀತಿಯಲ್ಲೇ ಸಿದ್ಧತೆ ಮಾಡಿಕೊಂಡಿದ್ದಾರಂತೆ. ಹಾಗಾಗಿ ಇಸ್ಮಾರ್ಟ್ ಜೋಡಿಯ ಶಕ್ತಿಯೇ ಗಣೇಶ್ ಎಂದಿದೆ ಸ್ಟಾರ್ ಸುವರ್ಣ ವಾಹಿನಿ. ಈ ಶೋಗಾಗಿ ಅದ್ಧೂರಿ ಸೆಟ್ ಕೂಡ ಹಾಕಲಾಗಿದ್ದು, ಆಲ್ ಓಕೆ ಅಲೋಕ್ ಸಂಯೋಜಿಸಿದ ಹಾಡು ಕೂಡ ಕಾರ್ಯಕ್ರಮಕ್ಕೆ ಸಾಥ್ ನೀಡಲಿದೆ. ಇದೊಂದು ರೊಮ್ಯಾಂಟಿಕ್ ಶೋ ಆಗಿದ್ದು, ವರ್ಣರಂಜಿತ ಸೆಟ್ ನಲ್ಲೇ ಬಹುತೇಕ ಶೂಟಿಂಗ್ ನಡೆಯಲಿದೆ. ಇದನ್ನೂ ಓದಿ:`ಮಣಿರತ್ನಂ’ ನಿರ್ದೇಶನದ ಚಿತ್ರದ ಮೂಲಕ ಕನ್ನಡಕ್ಕೆ ಬಂದ ಐಶ್ವರ್ಯ ರೈ

    ಶೋನಲ್ಲಿ ಭಾಗಿಯಾಗಲು ಈಗಾಗಲೇ ಜನಪ್ರಿಯ ಜೋಡಿಗಳು ಸಜ್ಜಾಗಿದ್ದು, ಆ ಜೋಡಿಗಳು ಯಾವವು? ಯಾರೆಲ್ಲ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿದ್ದಾರೆ ಎನ್ನುವುದನ್ನು ಜುಲೈ 16 ರಂದೇ ತೆರೆಯ ಮೇಲೆ ನೋಡಿ ಎಂದಿದೆ ಸ್ಟಾರ್ ಸುವರ್ಣ ವಾಹಿನಿ. ಈ ಜೋಡಿಗಳನ್ನು ಪರಿಚಯಿಸುವುದಕ್ಕಾಗಿಯೇ ಅಂದು ಗ್ರ್ಯಾಂಡ್ ಲಾಂಚ್ ಎಪಿಸೋಡ್ ಸಿದ್ಧ ಮಾಡಿಕೊಳ್ಳಲಾಗಿದೆ. ಈ ಜೋಡಿಯು ಪ್ರೇಕ್ಷಕರನ್ನು ರಮಿಸಿ, ಕುಣಿಸಿ, ನಗಿಸಿ, ಆಡಿಸಿ, ಬೀಳಿಸಿ ಒಟ್ಟಾರೆಯಾಗಿ ವೀಕೆಂಡ್ ಅನ್ನು ಭರಪೂರ ಮನರಂಜನೆ ನೀಡುವ ಕೆಲಸ ಮಾಡಲಿದೆಯಂತೆ.

    Live Tv
    [brid partner=56869869 player=32851 video=960834 autoplay=true]

  • ಕಿರುತೆರೆಗೆ ಮರಳಿದ ಎವರ್‌ಗ್ರೀನ್ ನಟಿ ಸುಧಾರಾಣಿ

    ಕಿರುತೆರೆಗೆ ಮರಳಿದ ಎವರ್‌ಗ್ರೀನ್ ನಟಿ ಸುಧಾರಾಣಿ

    `ಆನಂದ್’ ಚಿತ್ರದ ಮೂಲಕ ಶಿವರಾಜ್‌ಕುಮಾರ್‌ಗೆ ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದ ನಟಿ ಸುಧಾರಾಣಿ ಈಗ ಮೊದಲ ಬಾರಿಗೆ ಪೂರ್ಣ ಪ್ರಮಾಣದಲ್ಲಿ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತಮ್ಮ ಅದ್ಬುತ ನಟನೆಯಿಂದ ಇವರು ದಶಕಗಳಿಂದ ಪ್ರೇಕ್ಷಕರ ಪ್ರೀತಿಯನ್ನು ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದರು. ಈಗ ಕಿರುತೆರೆಯಲ್ಲೂ ಮನಗೆಲ್ಲಲು ರೆಡಿಯಾಗಿದ್ದಾರೆ.

    ಡಾ.ಸುಧಾರಾಣಿ ಅವರು ಖಾಸಗಿ ವಾಹಿನಿಯ ಧಾರಾವಾಹಿವೊಂದರಲ್ಲಿ ಮುಖ್ಯ ಪೋಷಕ ನಟಿಯಾಗಿ ಕಾಣಿಸಿಕೊಳ್ಳಲಿದ್ದಾರೆ. ಹೊರಗಿನ ಪ್ರಪಂಚವನ್ನು ಮರೆತು ತನ್ನ ಕುಟುಂಬವೇ ಒಂದು ಪ್ರಪಂಚ ಎಂದು ಬದುಕುತ್ತಿರುವ ಒಂದು ಹೆಣ್ಣು ತಾಯಿಯಾಗಿ, ಸೊಸೆಯಾಗಿ ಮನೆ ಹೀಗೆ ನಿಭಾಯಿಸಿಕೊಂಡು ಹೋಗುತ್ತಾಳೆ ಎಂಬ ಕಥೆಯಲ್ಲಿ ಮುಖ್ಯ ಪಾತ್ರಧಾರಿಯಾಗಿ ನಟಿಸಿದ್ದಾರೆ. ಈ ಮೂಲಕ ಕಿರುತೆರೆಯತ್ತ ಬಂದಿರುವ ಸುಧಾರಾಣಿ ಈಗ ಬೋಲ್ಡ್ ಆಗಿ ಫೋಟೋಶೂಟ್ ಕೂಡ ಮಾಡಿಸಿದ್ದಾರೆ.‌ ಇದನ್ನೂ ಓದಿ: ದುಬಾರಿ ಕಾರು ಖರೀದಿಸಿದ ನಟ ರಿಷಬ್ ಶೆಟ್ಟಿ

     

    View this post on Instagram

     

    A post shared by chythrra (@getgorgeouswithchythrra)

    ಪಿಂಕ್ ಮತ್ತು ಆರೆಂಜ್ ಕಲರ್ ಡ್ರೆಸ್‌ನಲ್ಲಿ ಸುಧಾರಾಣಿ ಮತ್ತಷ್ಟು ಗ್ಲ್ಯಾಮರಸ್ ಆಗಿ ಕ್ಯಾಮೆರಾ ಕಣ್ಣಿಗೆ ಪೋಸ್ ಮಾಡಿದ್ದಾರೆ. ಮತ್ತಷ್ಟು ಯಂಗ್ ಆಗಿ ಕಾಣಿಸಿಕೊಂಡಿರುವ ಸುಧಾರಾಣಿಯ ಅವತಾರಕ್ಕೆ ಫ್ಯಾನ್ಸ್ ಕೂಡ ಫಿದಾ ಆಗಿದ್ದಾರೆ. ಸದ್ಯ ಈ ವಿಡಿಯೋ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

    Live Tv

  • ಹೊಸ ಮನೆ ಕಟ್ಟಿಸಲು ಭೂಮಿ ಪೂಜೆ ಮಾಡಿಸಿದ ಆ್ಯಂಕರ್ ಅನುಶ್ರೀ

    ಹೊಸ ಮನೆ ಕಟ್ಟಿಸಲು ಭೂಮಿ ಪೂಜೆ ಮಾಡಿಸಿದ ಆ್ಯಂಕರ್ ಅನುಶ್ರೀ

    ಚಂದನವನದಲ್ಲಿ ನಿರೂಪಣೆ, ಅಭಿನಯದ ಮೂಲಕ ಮೋಡಿ ಮಾಡಿರುವ ಅನುಶ್ರೀ ಈಗ ಮತ್ತೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಮದುವೆ ವಿಚಾರವಾಗಿ ಸುದ್ದಿಯಲ್ಲಿದ್ದ ನಿರೂಪಕಿ ಅನುಶ್ರೀ ಈಗ ಹೊಸ ಮನೆ ಕಟ್ಟಿಸಲು ಮುಂದಾಗಿದ್ದಾರೆ. ಮನೆಯ ಭೂಮಿ ಪೂಜೆ ಮೂಲಕ ಅನುಶ್ರೀ ಸಾಮಾಜಿಕ ಜಾಲತಾಣಲದಲ್ಲಿ ಸೌಂಡ್ ಮಾಡ್ತಿದ್ದಾರೆ.

    ನಿರೂಪಕಿ ಅನುಶ್ರೀ ಸಿನಿಮಾ, ನಿರೂಪಣೆಗೆ ಕೊಂಚ ಬ್ರೇಕ್ ಕೊಟ್ಟು ಇದೀಗ ಮಹತ್ತರದ ಹೆಜ್ಜೆಯನ್ನಿಟ್ಟಿದ್ದಾರೆ. ಕನ್ನಡ ಕಿರುತೆರೆಯ ಜನಪ್ರಿಯ ನಿರೂಪಕಿ ಅನುಶ್ರೀ ಹೊಸ ಮನೆ ಕಟ್ಟಿಸಲು ತಮ್ಮ ಜಮೀನಿನಲ್ಲಿ ಭೂಮಿ ಪೂಜೆ ಮಾಡಿಸಿದ್ದಾರೆ. ಜಯನಗರದ ಹೌಸಿಂಗ್ ಸೋಸೈಟಿ ಲೇಔಟ್‌ನ ಸುಬ್ರಮಣ್ಯಪುರಂನಲ್ಲಿ ಜಾಗ ಖರೀದಿ ಮಾಡಿದ್ದಾರೆ. ಹೊಸ ಮನೆ ಹೊಸ ಶುಭಾರಂಭಕ್ಕೆ ರೆಡಿಯಾಗಿದ್ದಾರೆ. ಸದ್ಯ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ. ಇದನ್ನೂ ಓದಿ: ಚಿರಂಜೀವಿ ಸರ್ಜಾ ಕೊನೆಯ ಚಿತ್ರ `ರಾಜಮಾರ್ತಾಂಡ’ ರಿಲೀಸ್‌ ಡೇಟ್‌ ರಿವೀಲ್

    ಅನುಶ್ರೀ ಅವರ ತಾಯಿ ಮತ್ತು ಸಹೋದರ ಜತೆ ಭೂಮಿ ಪೂಜೆ ಸಲ್ಲಿಸಿದ್ದಾರೆ. ಅನುಶ್ರೀಗೆ ಆಪ್ತರಾಗಿರುವ ವಸ್ತ್ರ ವಿನ್ಯಾಸಕಿ ಅಂಜಲಿ ಕೂಡ ವೇಳೆ ಭಾಗಿಯಾಗಿದ್ದರು. ಇನ್ನು ಅನುಶ್ರೀ ಪಿಂಕ್ ಕಲರ್ ಸೆಲ್ವಾರ್‌ನಲ್ಲಿ ಮಿಂಚಿದ್ದಾರೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರೀಯರಾಗಿರುವ ಅನುಶ್ರೀಗೆ ಅಭಿಮಾನಿಗಳು ಶುಭಹಾರೈಸುತ್ತಿದ್ದಾರೆ.

    Live Tv

  • ಮಾಲ್ಡೀವ್ಸ್‌ನಲ್ಲಿ ತನ್ನ ಹುಡುಗನ ಜೊತೆ ಕಾಣಿಸಿಕೊಂಡ `ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಿನ್ನು

    ಮಾಲ್ಡೀವ್ಸ್‌ನಲ್ಲಿ ತನ್ನ ಹುಡುಗನ ಜೊತೆ ಕಾಣಿಸಿಕೊಂಡ `ಲಕ್ಷ್ಮಿ ಬಾರಮ್ಮ’ ಖ್ಯಾತಿಯ ಚಿನ್ನು

    ಕಿರುತೆರೆಯಲ್ಲಿ ಲಕ್ಷ್ಮಿ ಬಾರಮ್ಮ ಸೀರಿಯಲ್‌ನ ಚಿನ್ನು ಎಂದೇ ಖ್ಯಾತಿ ಗಳಿಸಿರುವ ರಶ್ಮಿ ಪ್ರಭಾಕರ್ ಇತ್ತೀಚೆಗಷ್ಟೇ ನಿಖಿಲ್ ಭಾರ್ಗವ್ ಜೊತೆ ಹಸೆಮಣೆ ಏರಿದ್ದರು. ಇದೀಗ ಈ ಜೋಡಿ ಮಾಲ್ಡೀವ್ಸ್‌ನಲ್ಲಿ ಸುಂದರ ತಾಣಗಳಿಗೆ ಭೇಟಿ ಕೊಡುತ್ತಾ ಸಖತ್ ಏಂಜಾಯ್ ಮಾಡುತ್ತಿದ್ದಾರೆ. ಸದ್ಯ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

    ಕನ್ನಡದ ಲಕ್ಷ್ಮಿ ಬಾರಮ್ಮ, ಮನಸೆಲ್ಲಾ ನೀನೇ, ಮಹಾಭಾರತ, ದರ್ಪಣ, ಜೀವನ ಚೈತ್ರ, ತಮಿಳಿನ ಅರುಂಧತಿ, ತೆಲುಗಿನ ಪೌರ್ಣಮಿ ಹೀಗೆ ಸಾಕಷ್ಟು ಸೀರಿಯಲ್ ಮೂಲಕ ಮನೆಮಾತಾಗಿರೋ ನಟಿ ರಶ್ಮಿ ಪ್ರಭಾಕರ್ ಇದೀಗ ತಮ್ಮ ಪತಿ ನಿಖಿಲ್ ಭಾರ್ಗವ್ ಜೊತೆ ದಾಂಪತ್ಯ ಜೀವನವನ್ನು ಏಂಜಾಯ್ ಮಾಡುತ್ತಿದ್ದಾರೆ. ಸದ್ಯ ಮಾಲ್ಡೀವ್ಸ್ನ ಸುಂದರ ತಾಣಗಳಿಗೆ ಈ ಜೋಡಿ ಭೇಟಿ ಕೊಟ್ಟಿದ್ದಾರೆ. ಇದನ್ನೂ ಓದಿ: ಕಮಲ್ ಹಾಸನ್ ‘ವಿಕ್ರಮ್’ ಚಿತ್ರಕ್ಕೆ 13 ಕಡೆ ಕತ್ತರಿ : ಸೆನ್ಸಾರ್ ಮಂಡಳಿ ಸೂಚನೆ ಏನಿತ್ತು?

    ನಟಿ ರಶ್ಮಿ ಮತ್ತು ನಿಖಿಲ್ ಒಬ್ಬರನೊಬ್ಬರು ಪ್ರೀತಿಸಿ, ಗುರು ಹಿರಿಯರ ಸಮ್ಮುಖದಲ್ಲಿ ಏಪ್ರಿಲ್ 25ರಂದು ಹಸೆಮಣೆ ಏರಿದ್ದರು. ನಿಖಿಲ್ ಭಾರ್ಗವ್ ಜಾಹಿರಾತು ಕಂಪನಿಯೊಮದರಲ್ಲಿ ಕೆಲಸ ಮಾಡುತ್ತಿದ್ದಾರೆ. ರಶ್ಮಿ ಮದುವೆಗೆ ಅನೇಕ ಕಿರುತೆರೆ ಕಲಾವಿದರು ಬಂದು ಶುಭ ಹಾರೈಸಿದ್ದರು. ಸದ್ಯ ಈ ನವಜೋಡಿ ಹನಿಮೂನ್‌ಗಾಗಿ ಮಾಲ್ಡೀವ್ಸ್ಗೆ ಹಾರಿದ್ದಾರೆ. ತಮ್ಮ ದಾಂಪತ್ಯ ಜೀವನವನ್ನು ಸುಂದರ ತಾಣಗಳಿಗೆ ಭೇಟಿ ಕೊಡುತ್ತಾ ಏಂಜಾಯ್ ಮಾಡುತ್ತಿದ್ದಾರೆ. ಸದ್ಯ ಈ ಫೋಟೋಗಳು ಸಖತ್ ವೈರಲ್ ಆಗುತ್ತಿದೆ.

  • ನಟ ಶಶಿ ಹೆಗ್ಡೆ ಜೊತೆ ಸಪ್ತಪದಿ ತುಳಿದ `ದಾಸಪುರಂದರ’ ನಟಿ ಲಾವಣ್ಯ

    ನಟ ಶಶಿ ಹೆಗ್ಡೆ ಜೊತೆ ಸಪ್ತಪದಿ ತುಳಿದ `ದಾಸಪುರಂದರ’ ನಟಿ ಲಾವಣ್ಯ

    ಕಿರುತೆರೆ ಲೋಕದಲ್ಲಿ ಸಾಲು ಸಾಲು ಕಲಾವಿದರು ಹಸೆಮಣೆ ಏರುತ್ತಿದ್ದಾರೆ. ಇತ್ತೀಚೆಗಷ್ಟೇ `ನಾಗಿಣಿ 2′ ಖ್ಯಾತಿಯ ನಿನಾದ್ ಕೂಡ ಅದ್ದೂರಿಯಾಗಿ ಮದುವೆ ಆಗಿದ್ದರು. ಈಗ `ರಾಜ ರಾಣಿ’ ಧಾರಾವಾಹಿ ಮೂಲಕ ಗುರುತಿಸಿಕೊಂಡಿದ್ದ ನಟ ಶಶಿ ಹೆಗ್ಡೆ ಮತ್ತು ಲಾವಣ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಖಾಸಗಿ ವಾಹಿನಿಯ `ದಾಸಪುರಂದರ’ ಸೀರಿಯಲ್‌ನ ಪದ್ಮಾ ಪಾತ್ರಧಾರಿ ಲಾವಣ್ಯ, ನಟ ಶಶಿ ಹೆಗ್ಡೆ ಅವರನ್ನು ವಿವಾಹವಾಗಿದ್ದಾರೆ. ಗುರುಹಿರಿಯರು ಮತ್ತು ಆಪ್ತರ ಸಮ್ಮುಖದಲ್ಲಿ ಹಸೆಮಣೆ ಏರಿದ್ದಾರೆ. ರಾಜ ರಾಣಿಯಿಂದ ಪರಿಚಯವಾದ ಸ್ನೇಹಿತರಾಗಿದ್ದ ಶಶಿ ಮತ್ತು ಲಾವಣ್ಯ ಪರಸ್ಪರ ಪ್ರೀತಿಸುತ್ತಿದ್ದರು. ನಾಲ್ಕು ವರ್ಷಗಳ ಪ್ರೀತಿಯ ಪಯಣದ ನಂತರ ಹಸೆಮಣೆ ಏರಿದ್ದಾರೆ.

    ಇಬ್ಬರ ಪ್ರಿ ವೆಡ್ಡಿಂಗ್ ಫೋಟೋಶೂಟ್ ಕೂಡ ವೈರಲ್ ಆಗಿದೆ ಫೋಟೋಗಳನ್ನು ಸೇರ್ ಮಾಡಿ ನಟ ಶಶಿ ಸಾಮಾಜಿಕ ಜಾಲತಾಣದಲ್ಲಿ `ನಾಲ್ಕು ವರ್ಷಗಳಿಂದ ಕಂಡ ಕನಸು ನನಸಾಗಿದೆ. ನಮ್ಮ ಮನೆಯ ಅರಸಿ, ನೀವೆಲ್ಲರೂ ನಮಗೆ ಹರಸಿ’ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ವಾರಕ್ಕೆ ಹತ್ತತ್ತು ಸಿನಿಮಾಗಳು ರಿಲೀಸ್ : ಥಿಯೇಟರ್ ಮಾತ್ರ ಖಾಲಿ ಖಾಲಿ

     

    View this post on Instagram

     

    A post shared by Shashi Hegde (@shashi_hegde_official)

    ಇನ್ನು ಕಿರುತೆರೆಯ ಮತ್ತೋರ್ವ ನಟ ವಿಜಯ್ ಕುಮಾರ್ ಕೂಡ ಸರಳವಾಗಿ ಮದುವೆ ಆಗಿದ್ದಾರೆ. ಟಿವಿ ಲೋಕದ ಜನಪ್ರಿಯ ಧಾರಾವಾಹಿ ಲಕ್ಷ್ಮಿ ಬಾರಮ್ಮ ಖ್ಯಾತಿಯ ರಾಮು ಕೂಡ ಹಸೆಮಣೆ ಏರಿದ್ದಾರೆ.