Tag: ಕಿರುತೆರೆ

  • ಕಿರುತೆರೆ ಕ್ರಿಕೆಟ್ ಗುಂಗು ಡಿಸೆಂಬರ್ ಎರಡನೇ ವಾರದಿಂದ  TCL ಕಿಕ್ ಸ್ಟಾರ್ಟ್

    ಕಿರುತೆರೆ ಕ್ರಿಕೆಟ್ ಗುಂಗು ಡಿಸೆಂಬರ್ ಎರಡನೇ ವಾರದಿಂದ TCL ಕಿಕ್ ಸ್ಟಾರ್ಟ್

    ಬೆಂಗಳೂರು: ಈಗ ಎಲ್ಲಿ ನೋಡಿದ್ರೂ ಟಿ20 ಕ್ರಿಕೆಟ್‍ನದ್ದೇ ಹಂಗಾಮ. ಇದೀಗ ಕಿರುತೆರೆಯ ಕಲಾವಿದರು ಕೂಡ ಬ್ಯಾಟ್, ಬಾಲ್ ಹಿಡಿದು ಕ್ರಿಕೆಟ್ ಅಖಾಡಕ್ಕೆ ಧುಮುಕಲು ಸಜ್ಜಾಗಿದ್ದಾರೆ.

    ವಾಸವಿ ವೆಂಚರ್ಸ್ ಸಂಸ್ಥೆ ವತಿಯಿಂದ ದೀಪಕ್ ಹಾಗೂ ಮಂಜೇಶ್ ಪ್ರಯತ್ನದ ಟೆಲಿವಿಷನ್ ಕ್ರಿಕೆಟ್ ಲೀಗ್ ಈಗಾಗಲೇ ಯಶಸ್ವಿಯಾಗಿ 2 ಸೀಸನ್‍ಗಳನ್ನು ಪೂರೈಸಿ ಮೂರನೇ ಸೀಸನ್‍ಗೆ ಸಿದ್ಧವಾಗಿದೆ. ಈ TCLನಲ್ಲಿ ಕಿರುತೆರೆ ಕಲಾವಿದರ ದಂಡೇ ಭಾಗಿಯಾಗಲಿದೆ. ಬರುವ ಡಿಸೆಂಬರ್ ಎರಡನೇ ವಾರದಿಂದ ಟಿಸಿಎಲ್ ಗೆ ಕಿಕ್ ಸ್ಟಾರ್ಟ್ ಸಿಗಲಿದೆ. ಇದನ್ನೂ ಓದಿ: ಅಪ್ಪು ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋದ್ರು: ಜಯಪ್ರದಾ

    ಈ ಬಗ್ಗೆ ಟಿಸಿಎಲ್ ಟೀಮ್ ಸುದ್ದಿಗೋಷ್ಠಿ ನಡೆದಿದ್ದು, ಸೀಸನ್ 3ರ ಲೋಗೋ ಅದ್ಧೂರಿಯಾಗಿ ಲಾಂಚ್ ಮಾಡಿದೆ. ಒಟ್ಟು 6 ತಂಡಗಳ ನಾಯಕರು ಹಾಗೂ ಆಯಾ ತಂಡದ ಸ್ಪರ್ಧಿಗಳು ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದರು. ಇದರ ಜೊತೆಗೆ ಪ್ರತಿ ಟೀಂನ ಅಂಬಾಸಿಡರ್ಸ್ ಆಗಿರುವ ಕಿರುತೆರೆ ನಟಿಯರಾದ ಸುಕೃತಾ ನಾಗ್, ರಶ್ಮಿ ಪ್ರಭಾಕರ್, ಪಲ್ಲವಿ ಗೌಡ, ಶೃತಿ ಸೇರಿದಂತೆ ಕೆಲ ನಟಿಯರು ಪಾಲ್ಗೊಂಡಿದ್ದರು.

    ಈ ಬಾರಿಯ ಟೆಲಿವಿಷನ್ ಕ್ರಿಕೆಟ್ ಲೀಗ್ 3ನಲ್ಲಿ ಬರೋಬ್ಬರಿ 102 ಸೆಲೆಬ್ರಿಟಿಗಳು ಭಾಗಿಯಾಗಲಿದ್ದು, ಈ ಪೈಕಿ ಮಾಸ್ಟರ್ ಆನಂದ್, ಬಿಗ್ ಬಾಸ್ ಮಂಜು ಪಾವಗಡ, ರಾಜೀವ್, ಚಂದು ಗೌಡ, ದಿಯಾ ಖ್ಯಾತಿಯ ದೀಕ್ಷಿತ್ ಸೇರಿದಂತೆ ಪ್ರಮುಖ ಕಿರುತೆರೆ ಕಲಾವಿದರು ಈ ಬಾರಿಯ ಟಿಸಿಎಲ್‍ಗೆ ಸಾಥ್ ನೀಡಲಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ಬಳಿಯೇ ಮದುವೆಯಾಗಲು ಆಗಮಿಸಿದ ಪ್ರೇಮಿಗಳು

    ಟಿಸಿಎಲ್‍ನಲ್ಲಿ ಒಟ್ಟು ಆರು ತಂಡಗಳು ಭಾಗಿಯಾಗಲಿವೆ. ಕ್ರೇಜ್ ಕಿಲ್ಲರ್, ಗ್ಯಾಂಗ್ ಗರುಡಸ್, ಗ್ರೌಂಡ್ ಹಂಟರ್, ಜಟಾಯು ಜೈಂಟ್ಸ್, ಕಿಂಗ್ ಕೇಸರಿಸ್ ಮತ್ತು ಶಾರ್ಪ್ ಸ್ಟ್ರೈಕರ್ಸ್ ಪಾಲ್ಗೊಳ್ಳಲಿದ್ದು, ಕಳೆದ ಎರಡು ವರ್ಷಗಳಿಂದ ರೋಚಕ ಹಣಾಹಣಿ ನೀಡಿರುವ ತಂಡಗಳು ಈ ಬಾರಿ ಮತ್ತಷ್ಟು ತಯಾರಿಯೊಂದಿಗೆ ರಗಡ್ ಆಗಿ ಎಂಟ್ರಿ ಕೊಡಲಿದ್ದಾರೆ. ಇದನ್ನೂ ಓದಿ: ಅಪ್ಪು ಸಾವಿಗೆ ಜಿಮ್‌, ವರ್ಕೌಟ್‌ ಕಾರಣ ಅಲ್ಲ: ನಟ ಪ್ರೇಮ್‌

    ಎಲ್ಲಾ ಕಿರುತೆರೆ ಕಲಾವಿದರನ್ನು ಒಂದು ಕಡೆ ಸೇರಿಸುವುದು ಒಂದು ದೊಡ್ಡ ಚಾಲೆಂಜ್ ಸರಿ. ಈ ಚಾಲೆಂಜ್ ಈಗಾಗಲೇ ಎರಡು ಬಾರಿ ಗೆದ್ದಿರುವ ದೀಪಕ್-ಮಂಜೇಶ್ ಈ ಬಾರಿ ಕೂಡ ಸಕ್ಸಸ್ ಕಾಣುವ ನಿರೀಕ್ಷೆಯಲಿದ್ದಾರೆ. ಒಟ್ನಲ್ಲಿ ಅದ್ಧೂರಿಯಾಗಿ ನಡೆಯಲಿರುವ ಟಿಸಿಎಲ್ ಸೀಸನ್-3 ಮನರಂಜನೆಯ ಜೊತೆಗೆ ಎಲ್ಲ ಕಿರುತೆರೆಯ ಕಲಾವಿದರ ನಡುವೆ ಸ್ನೇಹ ಸಂಬಂಧ ಬೆಳೆಯುವುದಕ್ಕೆ ವೇದಿಕೆಯಾಗಲಿದೆ.

  • ಸ್ಟೈಲಿಶ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡ ಮೌನಿ ರಾಯ್

    ಸ್ಟೈಲಿಶ್ ಆಗಿ ಹುಟ್ಟುಹಬ್ಬ ಆಚರಿಸಿಕೊಂಡ ಮೌನಿ ರಾಯ್

    ಮುಂಬೈ: ಬಾಲಿವುಡ್ ಕಿರುತೆರೆಯಲ್ಲಿ ನಾಗಿನ್ ಎಂದೇ ಖ್ಯಾತಿ ಪಡೆದಿರುವ ಮೌನಿ ರಾಯ್ ನಿನ್ನೆ ತಮ್ಮ ಹುಟ್ಟುಹಬ್ಬವನ್ನು ಫುಲ್ ಸ್ಟೈಲಿಶ್ ಆಗಿ ಆಚರಿಸಿಕೊಂಡಿದ್ದಾರೆ.

    ಮೌನಿ ಬುಧವಾರ 36ನೇ ವರ್ಷಕ್ಕೆ ಕಾಲಿಟ್ಟಿದ್ದು, ಹಾಟ್ ಬ್ಯೂಟಿಯಾಗಿರುವ ಇವರು ತಮ್ಮ ಹುಟ್ಟುಹಬ್ಬವನ್ನು ಇನ್ನಷ್ಟು ಸ್ಟೈಲಿಶ್ ಆಗಿ ಆಚರಿಸಿಕೊಂಡಿದ್ದು ಇನ್‍ಸ್ಟಾಗ್ರಾಮ್ ನಲ್ಲಿ, ಹುಟ್ಟುಹಬ್ಬ ಎಂದು ಬರೆದು ಪೋಸ್ಟ್ ಮಾಡಿದ್ದಾರೆ.

     

    View this post on Instagram

     

    A post shared by mon (@imouniroy)

    ಈ ಪೋಸ್ಟ್ ನಲ್ಲಿ ಮೌನಿ ಪೂಲ್ ಬಳಿ ಸ್ಟೈಲಿಶ್ ಆಗಿ ಕುಳಿತ ಫೋಟೋವನ್ನು ಶೇರ್ ಮಾಡಿದ್ದು, ಅದು ಅಲ್ಲದೇ ಅವರ ಹುಟ್ಟುಹಬ್ಬಕ್ಕೆ ತಯಾರಿ ಮಾಡಿದ್ದ ಆಲಂಕಾರವನ್ನು ಬೂಮರಾಂಗ್ ಮಾಡಿ ಪೊಸ್ಟ್ ಮಾಡಿದ್ದಾರೆ. ಇದನ್ನು ನೋಡಿದ ಅಭಿಮಾನಿಗಳು ಮತ್ತು ಬಾಲಿವುಡ್ ತಾರೆಯರು ಇವರಿಗೆ ವಿಶ್ ಮಾಡಿದ್ದಾರೆ.

    ಮೌನಿ ಬೆಸ್ಟ್ ಫ್ರೆಂಡ್ ಮತ್ತು ನಟಿ ಮಂದಿರಾ ಬೇಡಿ ಹುಟ್ಟುಹಬ್ಬಕ್ಕೆ ಇನ್‍ಸ್ಟಾಗ್ರಾಮ್ ನಲ್ಲಿ ಕವಿತೆ ಬರೆದು ಪೋಸ್ಟ್ ಮಾಡುವ ಮೂಲಕ ಶುಭಕೋರಿದ್ದಾರೆ. ಆ ಪೋಸ್ಟ್ ನಲ್ಲಿ, ಜನ್ಮದಿನದ ಶುಭಾಶಯಗಳು ಮೊನ್. ನಿಮ್ಮನ್ನು ತಿಳಿದುಕೊಳ್ಳುವವರು, ನಿಮ್ಮನ್ನು ಪ್ರೀತಿಸುತ್ತಾರೆ ಎಂದು ಬರೆದು ವಿಶೇಷವಾಗಿ ವಿಶ್ ಮಾಡಿದ್ದಾರೆ. ಇದನ್ನೂ ಓದಿ: ನಾಯಕ ದೇವರಕೊಂಡಗಿಂತಲೂ ದುಬಾರಿ ಸಂಭಾವನೆ ಪಡೆಯಲಿದ್ದಾರೆ ಮೈಕ್ ಟೈಸನ್

     

    View this post on Instagram

     

    A post shared by Mandira Bedi (@mandirabedi)

    ಅದ್ಭುತವಾದ ಡ್ಯಾನ್ಸರ್ ಆಗಿರುವ ಮೌನಿ ಹಿಂದಿ ಕಿರುತೆರೆಯಲ್ಲಿ ಫುಲ್ ಫೇಮಸ್ ಆಗಿದ್ದು, ದೇವೊನ್ ಕೆ ದೇವ್ ಮಹಾದೇವ್, ಕಸ್ತೂರಿ, ಮತ್ತು ನಾಗಿನ್ ಸೀರಿಯಲ್ ಮೂಲಕ ಖ್ಯಾತಿಯನ್ನು ಪಡೆದುಕೊಂಡಿದ್ದರು. ಅದು ಅಲ್ಲದೇ ಅವರು ರಿಯಾಲಿಟಿ ಶೋ ಗಳಲ್ಲಿಯೂ ಭಾಗವಹಿಸಿದ್ದರು. ಇದನ್ನೂ ಓದಿ:  ಡಿ ಗ್ಲಾಮ್ ಲುಕ್‍ನಲ್ಲಿ ರಶ್ಮಿಕಾ ಮಿಂಚು

    ಸಿನಿಮಾದಲ್ಲಿಯೂ ನಟಿಸಿರುವ ಇವರು, 2018ರ ಕ್ರೀಡೆಗೆ ಸಂಬಂಧಿಸಿದ ಸಿನಿಮಾ ‘ಗೋಲ್ಡ್’ ನಲ್ಲಿ ಅಕ್ಷಯ್ ಕುಮಾರ್ ಗೆ ಜೋಡಿಯಾಗಿ ನಟಿಸಿದ್ದಾರೆ. ‘ಮೇಡ್ ಇನ್ ಚೈನಾ’ ಸಿನಿಮಾದಲ್ಲಿ ರಾಜಕುಮರ್ ರಾವ್ ಜೊತೆ ನಟಿಸಿದ್ದಾರೆ.

  • ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್‍ಬಾಸ್ ಸ್ಪರ್ಧಿ ಆಶಿತಾ ಚಂದ್ರಪ್ಪ

    ವೈವಾಹಿಕ ಜೀವನಕ್ಕೆ ಕಾಲಿಟ್ಟ ಬಿಗ್‍ಬಾಸ್ ಸ್ಪರ್ಧಿ ಆಶಿತಾ ಚಂದ್ರಪ್ಪ

    ಬೆಂಗಳೂರು: ಬಿಗ್‍ಬಾಸ್ ಸೀಸನ್-5ರ ಸ್ಪರ್ಧಿ, ನಟಿ ಆಶಿತಾ ಚಂದ್ರಪ್ಪ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ರೋಹನ್ ಗೌಡ ಜೊತೆ ಹೊಸ ಜೀವನ ಆರಂಭಿಸುತ್ತಿರುವ ಆಶಿತಾ ಚಂದ್ರಪ್ಪಗೆ ಸ್ನೇಹಿತರು, ಸೆಲೆಬ್ರೆಟಿಗಳು ಹಾಗೂ ಅಭಿಮಾನಿಗಳು ವಿಶ್ ಮಾಡಿದ್ದಾರೆ.

    ಪ್ರಸ್ತುತ ಕೋವಿಡ್-19 ಭೀತಿಯಿರುವುದರಿಂದ ಈ ಜೋಡಿ ಕೇವಲ ಕುಟುಂಬಸ್ಥರು, ಆಪ್ತರನಷ್ಟೇ ವಿವಾಹ ಸಮಾರಂಭಕ್ಕೆ ಆಹ್ವಾನಿಸಿದ್ದು, ಮಾರ್ಚ್ 31ರಂದು ಬೆಂಗಳೂರಿನಲ್ಲಿ ಸರಳವಾಗಿ ವಿವಾಹವಾಗಿದ್ದಾರೆ.

    ಮದುವೆ ದಿನ ಆಶಿತಾ ರೇಷ್ಮೆ ಸೀರೆ ಉಟ್ಟಿದ್ದರೆ, ರೋಹನ್ ಸಂಪ್ರದಾಯಿಕ ಉಡುಗೆ ತೊಟ್ಟು ಮಿಂಚಿದ್ದಾರೆ. ಈ ವಿವಾಹ ಮಹೋತ್ಸವಕ್ಕೆ ಕಿರುತರೆ ನಟ ಹಾಗೂ ಬಿಗ್‍ಬಾಸ್ ಸೀಸನ್-5ರ ಸ್ಪರ್ಧಿ ಜಯಂ ರಾಮ್ ಕಾರ್ತಿಕ್, ನಟಿ ತೇಜಸ್ವಿನಿ ಪ್ರಕಾಶ್, ಜಗನ್ನಾಥ್ ಚಂದ್ರಶೇಖರ್ ಸೇರಿದಂತೆ ಕೆಲವರು ಭಾಗವಹಿಸಿದ್ದರು.

    ಈ ವೇಳೆ ಆಶಿತಾ ಜೊತೆಗಿರುವ ಫೋಟೋವನ್ನು ಕ್ಲಿಕ್ಕಿಸಿಕೊಂಡಿರುವ ಜೆಕೆ, ತಮ್ಮ ಇನ್‍ಸ್ಟಾಗ್ರಾಮ್ ಖಾತೆಯಲ್ಲಿ ‘ನಿನ್ನ ದಾಂಪತ್ಯ ಜೀವನ ಸಂತಸದಿಂದ ಕೂಡಿರಲಿ’ ಎಂದು ಕ್ಯಾಪ್ಷನ್ ಹಾಕಿ ವಿಶ್ ಮಾಡುವ ಮೂಲಕ ಫೋಟೋವನ್ನು ಶೇರ್ ಮಾಡಿಕೊಂಡಿದ್ದಾರೆ.

     

    View this post on Instagram

     

    A post shared by Karthik Jayaram (@karthik.jayaram)

    ಖಾಸಗಿ ವಾಹಿನಿಯ ನೀಲಿ, ಜೊತೆ ಜೊತೆಯಲಿ, ರಾಧಾ ರಮಣ ಸೀರಿಯಲ್‍ನಲ್ಲಿ ಆಶಿತಾ ನಟಿಸಿದ್ದರು. ಅಲ್ಲದೆ ಇತ್ತೀಚೆಗೆ ರಾಧಾ ರಮಣ ಸಿರಿಯಲ್‍ನಲ್ಲಿ ಅವನಿ ಎಂಬ ಪಾತ್ರದಲ್ಲಿ ಪಾತ್ರದಲ್ಲಿ ಅಭಿನಯಿಸುವ ಮೂಲಕ ಖ್ಯಾತಿ ಪಡೆದು ಮನೆಮಾತಾಗಿದ್ದರು.

  • ಕಿಡ್ನಾಪ್‍ಗೆ ಕಾರಣವಾಯ್ತು ಪ್ರಸಿದ್ಧ ಕ್ರೈಂ ಶೋ – ಆರೋಪಿಗಳ ಬಂಧನ

    ಕಿಡ್ನಾಪ್‍ಗೆ ಕಾರಣವಾಯ್ತು ಪ್ರಸಿದ್ಧ ಕ್ರೈಂ ಶೋ – ಆರೋಪಿಗಳ ಬಂಧನ

    ಮುಂಬೈ: ಕಿರುತೆರೆಯಲ್ಲಿ ಪ್ರಸಾರವಾಗುವ ಕ್ರೈಂ ಶೋದಿಂದ ಪ್ರೇರಿತರಾಗಿ 13 ವರ್ಷದ ಬಾಲಕನನ್ನು ಇಬ್ಬರು ವ್ಯಕ್ತಿಗಳು ಅಪಹರಿಸಿರುವ ಘಟನೆ ಭಾನುವಾರ ಮುಂಬೈ ಉಪನಗರ ಮಲಾಡ್ ನಲ್ಲಿ ನಡೆದಿದೆ. ಅಲ್ಲದೆ ಮಗು ಹಿಂದಿರುಗಿಸಲು 10 ಲಕ್ಷ ರೂ. ನೀಡಬೇಕೆಂದು ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು ಪೊಲೀಸರು ಇದೀಗ ಬಂಧಿಸಿದ್ದಾರೆ.

     

    ಶೇಖರ್ ವಿಶ್ವಕರ್ಮ(35) ಮತ್ತು ದಿವ್ಯಾಂಶು ವಿಶ್ವಕರ್ಮ(21) ಎಂದು ಆರೋಪಿಗಳನ್ನು ಗುರುತಿಸಲಾಗಿದೆ. ಮನೆಯಿಂದ ಹೊರಗೆ ಆಟೋ ರಿಕ್ಷಾದಲ್ಲಿ ಆಟವಾಡುತ್ತಿರುವ ಬಾಲಕನನ್ನು 2.30 ಗಂಟೆಗಳ ನಂತರ ಆರೋಪಿಗಳು ಅಪಹರಿಸಿದ್ದಾರೆ. ನಂತರ ಬಾಲಕನ ತಂದೆ ಮೊಬೈಲ್‍ಗೆ ಕರೆ ಮಾಡಿ ಹತ್ತು ಲಕ್ಷ ರೂ ನೀಡಿದರೆ ಬಾಲಕನನ್ನು ವಾಪಸ್ ಕಳುಹಿಸುವುದಾಗಿ ಆರೋಪಿ ಬೇಡಿಕೆ ಇಟ್ಟಿದ್ದಾನೆ.

    ಈ ಕುರಿತಂತೆ ಬಾಲಕನ ತಂದೆ ಪೊಲೀಸರ ಮೊರೆ ಹೋಗಿದ್ದಾರೆ. ನಂತರ ಮಲಾಡ್ (ಪಶ್ಚಿಮ)ದ ವಾಲ್ನಾಯ್ ಕಾಲೋನಿಯಲ್ಲಿದ್ದ ಆರೋಪಿಗಳ ಫೋನ್ ಕರೆಯನ್ನು ಟ್ರ್ಯಾಕ್ ಮಾಡಿ ಪತ್ತೆ ಹಚ್ಚಿ ಸುಮಾರು 7.30ಕ್ಕೆ ಬಂಧಿಸಿದ್ದಾರೆ. ಬಾಲಕನಿಗೆ ಯಾವುದೇ ತೊಂದರೆಯಾಗದಂತೆ ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ.

    ವಿಚಾರಣೆ ವೇಳೆ ಆರೋಪಿಗಳು ಕಿರುತೆರೆಯಲ್ಲಿ ಪ್ರಸಾರವಾಗುತ್ತಿರುವ ಪ್ರಸಿದ್ಧ ಕ್ರೈಂ ಶೋದಿಂದ ಪ್ರೇರಿತರಾಗಿ ಬಾಲಕನನ್ನು ಅಪಹರಣ ಮಾಡಲು ಯೋಜಿಸಿದೆವು ಎಂದು ತಿಳಿಸಿದ್ದಾರೆ. ಇದೀಗ ಭಾರತೀಯ ದಂಡ ಸಂಹಿತೆಯ ವಿವಿಧ ಅಡಿಯಲ್ಲಿ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

  • ನಿಶ್ಚಿತಾರ್ಥ ಮಾಡಿಕೊಂಡ ಅವನು ಮತ್ತೆ ಶ್ರಾವಣಿ ಧಾರಾವಾಹಿ ನಟಿ

    ನಿಶ್ಚಿತಾರ್ಥ ಮಾಡಿಕೊಂಡ ಅವನು ಮತ್ತೆ ಶ್ರಾವಣಿ ಧಾರಾವಾಹಿ ನಟಿ

    ಬೆಂಗಳೂರು: ಅವನು ಮತ್ತೆ ಶ್ರಾವಣಿ ಧಾರಾವಾಹಿ ಮೂಲಕ ಸೆನ್ಸೇಷನ್ ಕ್ರಿಯೇಟ್ ಮಾಡಿದ್ದ ಕಿರುತೆರೆಯ ನಟಿ ಚೈತ್ರಾ ರೆಡ್ಡಿ ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದು, ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ.

    ತಮ್ಮ ಬಹುಕಾಲದ ಗೆಳೆಯ ಹಾಗೂ ಛಾಯಾಗ್ರಾಹಕ ರಾಕೇಶ್ ಸುಮಲ ಅವರ ಜೊತೆ ಚೈತ್ರಾ ವಿವಾಹವಾಗುತ್ತಿದ್ದು ಸದ್ಯ ಸರಳವಾಗಿ ಮನೆಯವರು ಹಾಗೂ ಆಪ್ತರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ನಿಶ್ಚಿತಾರ್ಥ ಕಾರ್ಯಕ್ರಮದಲ್ಲಿ ಕೆಲ ಕಿರುತೆರೆಯ ನಟರು ಸಹ ಭಾಗಿಯಾಗಿದ್ದು, ಈ ಪೋಟೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿವೆ.

    ಬೆಂಗಳೂರಿನ ಹುಡುಗಿಯಾಗಿರುವ ಚೈತ್ರಾ ರೆಡ್ಡಿ, ಕನ್ನಡದ ಅವನು ಮತ್ತೆ ಶ್ರಾವಣಿ ಧಾರಾವಾಹಿ ಮೂಲಕ ಬಣ್ಣದ ಲೋಕಕ್ಕೆ ಕಾಲಿಟ್ಟಿದ್ದು, ವಿವಿಧ ಭಾಷೆಗಳ ಧಾರಾವಾಹಿ ಮಾತ್ರವಲ್ಲದೆ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ತಮಿಳಿನ ಎರಡು ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೆ ಇನ್ನೂ ಹಲವು ಭಾಷೆಗಳಲ್ಲಿ ಚೈತ್ರಾ ನಟಿಸುವ ಮೂಲಕ ಖ್ಯಾತಿ ಗಳಿಸಿದ್ದಾರೆ. ಕಿರುತೆರೆಯಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿದ್ದು, ತಮಿಳಿನಲ್ಲಿ ಹೆಚ್ಚು ಗುರುತಿಸಿಕೊಂಡಿದ್ದಾರೆ.

    ಕನ್ನಡದಲ್ಲಿ ಸಹ ಅವನು ಮತ್ತೆ ಶ್ರಾವಣಿ ಧಾರಾವಾಹಿ ಮಾತ್ರವಲ್ಲದೆ ನಟ ವಿನೋದ್ ಪ್ರಭಾಕರ್ ಅಭಿನಯದ ರಗಡ್ ಸಿನಿಮಾದಲ್ಲಿ ಸಹ ಚೈತ್ರಾ ಮಿಂಚಿದ್ದಾರೆ. ರಾಕೇಶ್ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದು, ಜಾಹೀರಾತುಗಳನ್ನೂ ನಿರ್ದೇಶನ ಮಾಡುತ್ತಿದ್ದಾರೆ. ಬಹುಕಾಲದಿಂದ ಇವರಿಬ್ಬರು ಪ್ರೀತಿಸುತ್ತಿದ್ದರು. ಇದೀಗ ನಿಶ್ಚಿತಾರ್ಥ ಮಾಡಿಕೊಳ್ಳುವ ಮೂಲಕ ವಿವಾಹವಾಗುವ ಮುನ್ಸೂಚನೆಯನ್ನು ನೀಡಿದ್ದಾರೆ.

    ಚೈತ್ರ ಹಾಗೂ ರಾಕೇಶ್ ಪ್ರೀತಿಸುತ್ತಿರುವ ವಿಚಾರವನ್ನು ಈ ಹಿಂದೆಯೇ ಬಹಿರಂಗಪಡಿಸಿದ್ದರು. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಗಾಗ ಪೋಸ್ಟ್ ಮಾಡುತ್ತಿದ್ದರು. ರಾಕೇಶ್ ಜೊತೆಗಿನ ಫೋಟೋಗಳನ್ನು ಹಂಚಿಕೊಂಡು ಸಾಲುಗಳನ್ನು ಬರೆಯುತ್ತಿದ್ದರು. ಈ ಮೂಲಕ ಪ್ರೀತಿಯ ಸುಳಿವು ನೀಡಿದ್ದರು. ಲಾಕ್ ಡೌನ್ ವೇಳೆ ಸಹ ಮನೆಯಲ್ಲೇ ಕಾಲ ಕಳೆಯುತ್ತಿದ್ದ ಚೈತ್ರಾ, ರಾಕೇಶ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದರು.

  • ನಿರೂಪಕನಾಗಿ ಸಂಗೀತ ಪ್ರತಿಭೆಗಳನ್ನು ಬೆಳಕಿಗೆ ತಂದ ಎಸ್‍ಪಿಬಿ

    ನಿರೂಪಕನಾಗಿ ಸಂಗೀತ ಪ್ರತಿಭೆಗಳನ್ನು ಬೆಳಕಿಗೆ ತಂದ ಎಸ್‍ಪಿಬಿ

    ಬೆಂಗಳೂರು: ಎಸ್.ಪಿ.ಬಾಲಸುಬ್ರಹ್ಮಣ್ಯಂ ಗಾಯಕ ಮಾತ್ರವಲ್ಲದೆ ನಟ, ಡಬ್ಬಿಂಗ್ ಆರ್ಟಿಸ್ಟ್ ಹೀಗೆ ಬೆಳ್ಳಿ ತೆರೆಯಲ್ಲಿ ಮಿಂಚಿ ನಂತರ ಕಿರುತೆರೆಗೂ ಕಾಲಿಟ್ಟು ಪ್ರಸಿದ್ಧಿ ಪಡೆದಿದ್ದರು. ಎದೆ ತುಂಬಿ ಹಾಡಿದೆನು ಮೂಲಕ ಕನ್ನಡಿಗರ ಮನೆ ಮಾತಾಗಿದ್ದರು.

    90ರ ದಶಕದಲ್ಲಿ ಎಸ್.ಪಿ.ಬಾಲಸುಬ್ರಹ್ಮಣ್ಯಂ ಕಿರುತೆರೆಗೂ ಎಂಟ್ರಿ ಕೊಟ್ಟರು. ತೆಲುಗಿನ ಪಾಡುತಾ ತಿಯಗಾ ಕಾರ್ಯಕ್ರಮದಲ್ಲಿ ನಿರೂಪಕನಾಗಿ ಮನೆಮಾತಾದರು. ಕನ್ನಡದಲ್ಲಿ ಸಹ ಎದೆ ತುಂಬಿ ಹಾಡುವೆನು ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಆಗಿ ನಿರೂಪಕನಾಗಿ ಗಮನ ಸೆಳೆದರು. ಈ ಕಾರ್ಯಕ್ರಮಗಳಿಂದ ಅದೆಷ್ಟೋ ಸಂಗೀತ ಪ್ರತಿಭೆಗಳು ಬೆಳಕಿಗೆ ಬಂದವು. ಅಲ್ಲದೆ ಈ ಕಾರ್ಯಕ್ರಮದಿಂದ ಎಸ್‍ಪಿಬಿ ಕನ್ನಡಿಗರ ಮನೆ ಮಾತಾದರು.

    ಬಾಲು ಗಾನಕ್ಕೆ ಪ್ರಶಸ್ತಿಗಳ ಸುರಿಮಳೆ
    ಎಸ್‍ಪಿಬಿ ಗಾನಕ್ಕೆ ಮಂತ್ರಮುಗ್ಧರಾಗದೆ ಇರುವವರೇ ಇಲ್ಲ ಎನ್ನಬಹುದು. ಬಾಲು ಗಾಯನಕ್ಕೆ ಪ್ರಶಸ್ತಿಗಳ ಸುರಿಮಳೆಯೇ ಆಗಿದೆ. ಪದ್ಮ ಭೂಷಣ, ಪದ್ಮಶ್ರೀ ಪ್ರಶಸ್ತಿಗೆ ಪಾತ್ರರಾಗಿದ್ದರು. ಶಂಕರಾಭರಣಂ ಸಿನಿಮಾಗೆ ಮೊದಲ ಬಾರಿಗೆ ರಾಷ್ಟ್ರೀಯ ಪ್ರಶಸ್ತಿ ಬಂದಿತು.್ತ ಹಿಂದಿಯ ಏಕ್ ದುಜೆ ಕೇಲಿಯೇ ಸಿನಿಮಾ, ಕನ್ನಡದ ಪಂಚಾಕ್ಷರಿ ಗವಾಯಿ, ತೆಲುಗಿನ ರುದ್ರವೀಣ, ತಮಿಳಿನ ಮಿನ್ನರ ಕನ್ನವು ಸಿನಿಮಾಗಳಿಗೂ ರಾಷ್ಟ್ರೀಯ ಪ್ರಶಸ್ತಿ ಅರಸಿ ಬಂದಿತ್ತು. ಮೈನೇ ಪ್ಯಾರ್ ಕಿಯಾ ಚಿತ್ರಕ್ಕೆ ಮೊದಲ ಬಾರಿಗೆ ಫಿಲ್ಮ್ ಫೇರ್ ಪ್ರಶಸ್ತಿ ಸಿಕ್ಕಿತ್ತು. ಎನ್‍ಟಿಆರ್ ಪ್ರಶಸ್ತಿ, 8 ನಂದಿ ಪ್ರಶಸ್ತಿಗಳು ದಕ್ಕಿದ್ದವು. ಆದರೆ ಕರ್ನಾಟಕ ರಾಜ್ಯ ಸರ್ಕಾರ ಮಾತ್ರ ಅದೇಕೋ ಬಾಲು ಹೆಸರನ್ನು ಪ್ರಶಸ್ತಿಗಳಿಗೆ ಪರಿಗಣಿಸಲೇ ಇಲ್ಲ ಎನ್ನುವುದು ಬೇಸರದ ಸಂಗತಿ.

  • ಬಿಗ್‍ಬಾಸ್ ಪ್ರಿಯಕರಿಗೆ ಶಾಕ್ – ಈ ವರ್ಷ ಬಿಗ್‍ಬಾಸ್ ಇರಲ್ಲ

    ಬಿಗ್‍ಬಾಸ್ ಪ್ರಿಯಕರಿಗೆ ಶಾಕ್ – ಈ ವರ್ಷ ಬಿಗ್‍ಬಾಸ್ ಇರಲ್ಲ

    ಬೆಂಗಳೂರು: ಮಹಾಮಾರಿ ಕೊರೊನಾದಿಂದ ಈಗಾಗಲೇ ಅನೇಕ ಧಾರಾವಾಹಿ, ಸಿನಿಮಾಗಳಿಗೆ ಬ್ರೇಕ್ ಇದ್ದಿದೆ. ಇತ್ತೀಚೆಗೆ ಒಂದೊಂದೆ ಸಿನಿಮಾದ ಚಿತ್ರೀಕರಣ ಆರಂಭವಾಗುತ್ತಿದೆ. ಈ ಮಧ್ಯೆ ಕನ್ನಡ ಕಿರುತೆರೆ ಲೋಕದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್‍ಬಾಸ್ ಈ ವರ್ಷ ಪ್ರಸಾರವಾಗುವುದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.

    ಈಗಾಗಲೇ ತೆಲುಗಿನಲ್ಲಿ ಬಿಗ್‍ಬಾಸ್ ಸೀಸನ್ 4 ಆರಂಭವಾಗಿದೆ. ಹಿಂದಿಯಲ್ಲಿ ಹೊಸ ಆವೃತ್ತಿಗೆ ಎಲ್ಲ ತಯಾರಿ ನಡೆಯುತ್ತಿದ್ದು, ಅಕ್ಟೋಬರ್‌ನಲ್ಲಿ ಕಾರ್ಯಕ್ರಮ ಪ್ರಾರಂಭವಾಗಲಿದೆ. ಆದರೆ ಕನ್ನಡದಲ್ಲಿ ಈ ವರ್ಷ ಅಂದರೆ 2020ರಲ್ಲಿ ಬಿಗ್‍ಬಾಸ್ ನಡೆಯುವುದಿಲ್ಲ ಎಂಬ ಸುದ್ದಿ ಪ್ರಕಟವಾಗಿದೆ.

    ಖಾಸಗಿ ವಾಹಿನಿಯಲ್ಲಿ ಪ್ರತಿವರ್ಷ ಸೆಪ್ಟೆಂಬರ್ ತಿಂಗಳಿನಿಂದ ಬಿಗ್‍ಬಾಸ್ ಆರಂಭವಾಗುತ್ತಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಈ ತಿಂಗಳಲ್ಲಿ ಬಿಗ್‍ಬಾಸ್ ಸೀಸನ್ 8 ಆರಂಭವಾಗಬೇಕಿತ್ತು. ಆದರೆ ಕೊರೊನಾ ಕಾರಣದಿಂದ ಶೋ ಶುರು ಮಾಡಲು ಸಾಧ್ಯವಾಗಿಲ್ಲ.

    ಮಾಹಿತಿ ಪ್ರಕಾರ, ಇನ್ನು ಆರು ತಿಂಗಳು ತಡವಾಗಿ ಬಿಗ್‍ಬಾಸ್ ಶುರುವಾಗಲಿದೆ ಎನ್ನಲಾಗುತ್ತಿದೆ. ಅಂದರೆ ಮುಂದಿನ ವರ್ಷ ಮಾರ್ಚ್ ತಿಂಗಳಲ್ಲಿ ಬಿಗ್‍ಬಾಸ್ ಸೀಸನ್ 8 ಶುರುವಾಗಲಿದೆ. ಹೀಗಾಗಿ ಸದ್ಯಕ್ಕೆ 2020ರಲ್ಲಿ ಬಿಗ್‍ಬಾಸ್ ಶೋ ಪ್ರಸಾರವಾಗಲ್ಲ. ಕಿಚ್ಚ ಸುದೀಪ್ ನಿರೂಪಣೆ ಮಾಡುತ್ತಿದ್ದ ಬಿಗ್‍ಬಾಸ್ ಶೋ ತುಂಬಾ ಜನಮನ್ನಣೆ ಗಳಿಸಿತ್ತು. ಆದರೆ ಈಗ ಬಿಗ್‍ಬಾಸ್ ಪ್ರಿಯರಿಗೆ ಇದರಿಂದ ಬೇಸರವಾಗುವ ಸಾಧ್ಯತೆಯಿದೆ.

    ಸದ್ಯದ ಸಿನಿಮಾ ಶೂಟಿಂಗ್, ಧಾರಾವಾಹಿ ಚಿತ್ರೀಕರಣ, ರಿಯಾಲಿಟಿ ಶೋ ಕಾರ್ಯನಿರ್ವಹಿಸಲು ಸರ್ಕಾರ ಅನುಮತಿ ನೀಡಿದೆ. ಹಾಗಾಗಿ ಬಿಗ್‍ಬಾಸ್ ಸಹ ಆರಂಭವಾಗಬಹುದು ಎಂಬ ನಿರೀಕ್ಷೆ ಇತ್ತು. ಆದರೆ ಈ ವರ್ಷ ಬಿಗ್‍ಬಾಸ್ ನಡೆಯಲ್ಲ ಎಂಬ ಮಾಹಿತಿ ತಿಳಿದುಬಂದಿದೆ. ಇತ್ತ ಬಿಗ್ ಬಾಸ್ ಶೋ ನಿರೂಪಣೆ ಮಾಡುತ್ತಿದ್ದ ಕಿಚ್ಚ ಸುದೀಪ್ ಸಹ ಸಿನಿಮಾ ಚಿತ್ರೀಕರಣಗಳಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯಕ್ಕೆ ಹೈದರಾಬಾದ್‍ನಲ್ಲಿ ‘ಫ್ಯಾಂಟಮ್’ ಸಿನಿಮಾ ಚಿತ್ರೀಕರಣ ಮಾಡುತ್ತಿದ್ದಾರೆ. ಮತ್ತೊಂದೆಡೆ ‘ಕೋಟಿಗೊಬ್ಬ 3’ ಸಿನಿಮಾ ಕೂಡ ರಿಲೀಸ್‍ಗೆ ರೆಡಿಯಾಗಿದೆ.

    ‘ಬಿಗ್‍ಬಾಸ್ ಸೀಸನ್ 7’ರಲ್ಲಿ ನಟ ಶೈನ್ ಶೆಟ್ಟಿ ಎಲ್ಲಾ ಸ್ಪರ್ಧಿಗಳನ್ನು ಹಿಂದಿಕ್ಕಿ ಬಿಗ್‍ಬಾಸ್ ಕಿರೀಟವನ್ನು ತಮ್ಮ ಮುಡಿಗೇರಿಸಿಕೊಂಡಿದ್ದರು. ಹಾಸ್ಯ ನಟ ಕುರಿ ಪ್ರತಾಪ್ ರನ್ನರ್ ಅಪ್ ಆಗಿ ಹೊರಹೊಮ್ಮಿದ್ದರು. ಬಿಗ್‍ಬಾಸ್ ಸೀಸನ್ 7 ರಲ್ಲಿ ನಡೆದ ಗ್ರ್ಯಾಂಡ್ ಫಿನಾಲೆಯಲ್ಲಿ ಬಿಗ್‍ಬಾಸ್ ವೇದಿಕೆಯಲ್ಲಿ ನಟ ಕಿಚ್ಚ ಸುದೀಪ್ ತಮ್ಮ ಎಡಗಡೆ ನಿಂತಿದ್ದ ಶೈನ್ ಶೆಟ್ಟಿ ಕೈಯನ್ನು ಎತ್ತಿ ವಿಜೇತರೆಂದರು ಘೋಷಿಸಿದ್ದರು.

    113 ದಿನಗಳನ್ನು ಕಳೆದಿದ್ದ ವಿನ್ನರ್ ಶೈನ್ ಶೆಟ್ಟಿ ಅವರಿಗೆ ನಿಗದಿಪಡಿಸಿದ್ದ 50 ಲಕ್ಷ ರೂ. ಬಹುಮಾನ ಸಿಕ್ಕಿತ್ತು. ಜೊತೆಗೆ ಅಧಿಕವಾಗಿ 11 ಲಕ್ಷ ಸಿಕ್ಕಿತ್ತು. ಹೀಗಾಗಿ ಒಟ್ಟಾಗಿ ಶೈನ್ ಶೆಟ್ಟಿ ಜೇಬಿಗೆ 61 ಲಕ್ಷ ರೂ. ಸೇರಿತ್ತು. ಅಲ್ಲದೇ 61 ಲಕ್ಷ ಹಣದ ಜೊತೆಗೆ ‘ಬಾಸ್‍ಬಾಸ್ ಸೀಸನ್ 7’ ವಿನ್ನರ್ ಪಟ್ಟ ದೊರೆತಿತ್ತು. ಇದಲ್ಲದೇ ಹೊಸ ಮಾಡೆಲ್ ಟಾಟಾ ಆಲ್ಟ್ರೋಜ್ ಕಾರನ್ನು ವಿನ್ನರ್ ಆದ ಶೈನ್ ಶೆಟ್ಟಿಗೆ ನೀಡಲಾಗಿತ್ತು.

  • ಕಣ್ಣೊರೆಸಿ ಕನ್ನಡ ಹೇಳಿ ಕೊಟ್ಟ ಸರಸ್ವತಿ ನನ್ನಮ್ಮ- ಅನುಶ್ರೀ ಭಾವನಾತ್ಮಕ ಪೋಸ್ಟ್

    ಕಣ್ಣೊರೆಸಿ ಕನ್ನಡ ಹೇಳಿ ಕೊಟ್ಟ ಸರಸ್ವತಿ ನನ್ನಮ್ಮ- ಅನುಶ್ರೀ ಭಾವನಾತ್ಮಕ ಪೋಸ್ಟ್

    ಬೆಂಗಳೂರು: ತಮ್ಮ ವಿಭಿನ್ನ ಶೈಲಿಯ ನಿರೂಪಣೆಯಿಂದಲೇ ನಾಡಿನ ಜನತೆಗೆ ಚಿರಪರಿಚಿತರಾಗಿರುವ ಆ್ಯಂಕರ್ ಅನುಶ್ರೀ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಟಿವ್ ಆಗಿದ್ದು, ವೈಯಕ್ತಿಕ, ವೃತ್ತಿ ಬದುಕು ಹಾಗೂ ಆಗುಹೋಗುಗಳ ಕುರಿತು ಪೋಸ್ಟ್ ಮಾಡುತ್ತಿರುತ್ತಾರೆ. ಅದೇ ರೀತಿ ಅವರ ಅಮ್ಮನ ಹುಟ್ಟುಹಬ್ಬಕ್ಕೆ ಮನಮಿಡಿಯುವ ಸಾಲುಗಳನ್ನು ಬರೆಯುವ ಮೂಲಕ ವಿಶ್ ಮಾಡಿದ್ದಾರೆ.

    ಇತ್ತೀಚೆಗೆ ಚಿರು ಸರ್ಜಾ ಸಾವನ್ನಪ್ಪಿದ ವೇಳೆ ಭಾವನಾತ್ಮಕ ಸಾಲುಗಳನ್ನು ಬರೆಯುವ ಮೂಲಕ ಅನುಶ್ರೀ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಅಲ್ಲದೆ ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಕುರಿತು ಸಹ ಪೋಸ್ಟ್ ಮಾಡಿ ಜಾಗೃತಿ ಮೂಡಿಸಿದ್ದರು. ಯಾವ ನಗುವಿನ ಹಿಂದೆ ಯಾವ ನೋವಿರಿತ್ತೋ? ಯಾರು ಬಲ್ಲರು ಎಂದು ಬರೆದುಕೊಂಡಿದ್ದರು.

    ಇದೀಗ ತಮ್ಮ ತಾಯಿ ಕುರಿತು ಪೋಸ್ಟ್ ಮಾಡುವ ಮೂಲಕ ಅನುಶ್ರೀ ಮೆಚ್ಚುಗೆಗೆ ಪಾತ್ರರಾಗಿದ್ದು, ಭಾವನಾತ್ಮಕ ಸಾಲುಗಳನ್ನು ಬರೆಯುವ ಮೂಲಕ ತಾಯಿಗೆ ಹುಟ್ಟುಹಬ್ಬದ ಶುಭಾಶಯ ಕೋರಿದ್ದಾರೆ. ಅಮ್ಮ… ನನಗೆ ಜನ್ಮ ಕೊಟ್ಟ ಜನ್ಮದಾತೆ ನನ್ನ ಅಮ್ಮ, ಮಾತು ಕಲಿಸಿ ಮುತ್ತು ಕೊಟ್ಟ ಮುದ್ದು ನನ್ನ ಅಮ್ಮ, ನನ್ನ ಕಣ್ಣೊರೆಸಿ ಕನ್ನಡ ಹೇಳಿ ಕೊಟ್ಟ ಸರಸ್ವತಿ ನನ್ನ ಅಮ್ಮ. ವಿದ್ಯೆ, ವಿನಯತೆ ಕೊಟ್ಟ ಗುರು ನನ್ನಮ್ಮ ಎಂದು ಬರೆದುಕೊಂಡಿದ್ದಾರೆ.

    ಅಮ್ಮ…
    ನನಗೆ ಜನ್ಮ ಕೊಟ್ಟ ಜನ್ಮದಾತೆ ನನ್ನ ಅಮ್ಮ …
    ಮಾತು ಕಲಿಸಿ ಮುತ್ತು ಕೊಟ್ಟ ಮುದ್ದು ನನ್ನ ಅಮ್ಮ ..
    ನನ್ನ ಕಣ್ಣೊರೆಸಿ ಕನ್ನಡ ಹೇಳಿ…

    Posted by Anchor Anushree on Wednesday, August 19, 2020

    ತಾನು ನಡೆದು ನನ್ನನ್ನು ಗುರಿ ತಲುಪಿಸಿದ ಮಾರ್ಗದರ್ಶಿ ನನ್ನ ಅಮ್ಮ, ತಾನು ಹಸಿದು ನನ್ನ ಹೊಟ್ಟೆ ತುಂಬಿಸಿದ ಅನ್ನಪೂರ್ಣೆ ನನ್ನಮ್ಮ. ತಂದೆಯಾಗಿ, ಸ್ನೇಹಿತೆಯಾಗಿ ನಿಂತ ನನ್ನ ಜೀವದಾತೆ, ಎಂದೂ ನಾನು ಅನುಶ್ರೀ ಅಮ್ಮ ಎಂದು ಹೇಳದ ಸ್ವಾಭಿಮಾನಿ ನನ್ನಮ್ಮ. ಆದ್ರೆ ಅನುಶ್ರೀ ನಿಮ್ಮ ಮಗಳು ಎಂತ ಪ್ರತಿಭಾನ್ವಿತೆ ಅಲ್ವಾ ಎಂದಾಗ ಹೆಮ್ಮೆಯಿಂದ ಬೀಗುವ ನನ್ನ ಹೆಮ್ಮೆಯ ಅಮ್ಮ ಎಂಬ ಭಾವನಾತ್ಮಕ ಸಾಲುಗಳನ್ನು ಹಾಕಿದ್ದಾರೆ.

    ಸೋಲದಿರು, ಗೆಲ್ಲುವ ಪ್ರಯತ್ನ ಬಿಡದಿರು ಎಂದು ಜೀವನ ಪಾಠ ಹೇಳಿಕೊಟ್ಟ ರಿಯಲ್ ಹೀರೋ ನನ್ನಮ್ಮ. ಅಮ್ಮ ಹುಟ್ಟು ಹಬ್ಬದ ಶುಭಾಶಯಗಳು, ನನ್ನ ಆಯುಷ್ಯ ನಿಮ್ಮ ಪಾಲಾಗಲಿ ಎಂಬ ಮನ ಮಿಡಿಯುವ ಸಾಲುಗಳನ್ನು ಪೋಸ್ಟ್ ಮಾಡುವ ಮೂಲಕ ತಾಯಿಯ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ.

    ಅನುಶ್ರೀ ಪೋಸ್ಟ್‍ಗೆ ಹಲವರು ಕಮೆಂಟ್ ಮಾಡಿದ್ದು, ಇಂತಹ ಮಗಳನ್ನು ಪಡೆದ ನೀವೇ ಧನ್ಯರು ಎಂದು ಹೇಳಿದ್ದಾರೆ. ಇನ್ನೂ ಹಲವರು ತಮ್ಮ ಕಮೆಂಟ್‍ಗಳ ಮೂಲಕವೇ ಅನುಶ್ರೀಯವರ ತಾಯಿಗೆ ಶುಭ ಕೋರಿದ್ದಾರೆ.

  • ‘ನಿಮ್ಮ ಸ್ನೇಹಿತರನ್ನೂ ಕೂಡ ನಂಬಬೇಡಿ’ – ಫೇಸ್‍ಬುಕ್‍ ಲೈವ್ ಬಂದ ಮರುದಿನ ನಟಿ ಆತ್ಮಹತ್ಯೆ

    ‘ನಿಮ್ಮ ಸ್ನೇಹಿತರನ್ನೂ ಕೂಡ ನಂಬಬೇಡಿ’ – ಫೇಸ್‍ಬುಕ್‍ ಲೈವ್ ಬಂದ ಮರುದಿನ ನಟಿ ಆತ್ಮಹತ್ಯೆ

    – ನಿಮ್ಮ ಸಮಸ್ಯೆಗಳನ್ನ ಯಾರೊಂದಿಗೂ ಹಂಚಿಕೊಳ್ಳಬೇಡಿ

    ಮುಂಬೈ: ಗುರುವಾರಷ್ಟೆ ಬಾಲಿವುಡ್‍ನ ಕಿರುತೆರೆ ನಟ ಸಮೀರ್ ಶರ್ಮಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಇದೀಗ ಭೋಜ್‍ಪುರಿ ನಟಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ಅಡುಗೆ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ನಟ ಸಮೀರ್ ಶರ್ಮಾ ಮೃತದೇಹ ಪತ್ತೆ

    ನಟಿ ಅನುಪಮಾ ಪಾಠಕ್ (40) ಆತ್ಮಹತ್ಯೆ ಮಾಡಿಕೊಂಡ ನಟಿ. ಮುಂಬೈನ ದಹಿಸರ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಟಿ ಆಗಸ್ಟ್ 2 ರಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಒಂದು ದಿನ ಮೊದಲು ಅನುಪಮಾ ಫೇಸ್‍ಬುಕ್‍ನಲ್ಲಿ ಲೈವ್ ಬಂದಿದ್ದು, ನನಗೆ ಮೋಸ ಆಗಿದೆ ಮತ್ತು ಯಾರನ್ನೂ ನಂಬಲು ಸಾಧ್ಯವಾಗುತ್ತಿಲ್ಲ ಎಂಬ ಬಗ್ಗೆ ಮಾತನಾಡಿದ್ದರು.

    “ನೀವು ಕೆಲವು ಸಮಸ್ಯೆಗಳನ್ನು ಎದುರಿಸುತ್ತಿರುವಿರಿ. ಇದರಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂದು ಯಾರಿಗಾದರೂ ಹೇಳಿದರೆ, ಆ ವ್ಯಕ್ತಿ ಅಥವಾ ಸ್ನೇಹಿತ ಸಮಸ್ಯೆಗಳಿಂದ ದೂರವಿರಲು ಹೇಳುತ್ತಾರೆ. ಆದರೆ ಅವರು ನಿಮ್ಮ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಆದ್ದರಿಂದ ನೀವು ಯಾರಿಗೂ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವ ಬಗ್ಗೆ ಹೇಳಬೇಡಿ. ನಿಮ್ಮ ಸಾವಿನ ನಂತರ ಅವರಿಗೆ ತೊಂದರೆಯಾಗುತ್ತದೆ. ಹೀಗಾಗಿ ನಿಮ್ಮ ಸ್ನೇಹಿತರು ಮತ್ತು ಆತ್ಮೀಯರಿಂದ ದೂರವಿರಿ” ಎಂದು ನೋವಿನಿಂದ ಹೇಳಿದ್ದಾರೆ.

    ಅಲ್ಲದೇ, “ಜನರು ನಿಮ್ಮನ್ನು ಗೇಲಿ ಮಾಡುತ್ತಾರೆ ಮತ್ತು ಇತರರ ಮುಂದೆ ನಿಮ್ಮನ್ನು ಅಪಮಾನ ಮಾಡುತ್ತಾರೆ. ಆದ್ದರಿಂದ ನಿಮ್ಮ ಸಮಸ್ಯೆಗಳನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಯಾರನ್ನೂ ನಿಮ್ಮ ಸ್ನೇಹಿತ ಎಂದು ಕೂಡ ನಂಬಬೇಡಿ. ನಾನು ಇದನ್ನು ನನ್ನ ಜೀವನದಲ್ಲಿ ಕಲಿತಿದ್ದೇನೆ. ಜನರು ತುಂಬಾ ಸ್ವಾರ್ಥಿಗಳು ಮತ್ತು ಇತರರ ಬಗ್ಗೆ ಕಾಳಜಿ ವಹಿಸುವುದಿಲ್ಲ” ಎಂದು ಆಗಸ್ಟ್ 1 ರಂದು ಫೇಸ್‍ಬುಕ್ ಲೈವ್ ವೀಡಿಯೊದಲ್ಲಿ ಹೇಳಿದ್ದಾರೆ.

    ಫೇಸ್‍ಬುಕ್ ಲೈವ್ ಬಂದ ಮರುದಿನ ಅಂದರೆ ಆಗಸ್ಟ್ 2 ರಂದು ನಟಿ ಅನುಪಮಾ ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟಿದ್ದಾರೆ. ಮಾಹಿತಿ ತಿಳಿದು ಪೊಲೀಸ್ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಒಂದು ಡೆತ್‍ನೋಟ್ ಕೂಡ ಪತ್ತೆಯಾಗಿದೆ.

    ನಟಿ ಮಲಾಡ್‍ನಲ್ಲಿರುವ ಕಂಪನಿಯೊಂದರಲ್ಲಿ ಹಣ ಹೂಡಿಕೆ ಮಾಡಿದ್ದರು. 2019ರ ಡಿಸೆಂಬರ್‌ನಲ್ಲಿ ಮೆಚ್ಯೂರಿಟಿ ದಿನಾಂಕದ ಮುಗಿದಿದೆ. ಆದರೂ ಅದನ್ನು ವಾಪಸ್ ಕೊಟ್ಟಿಲ್ಲ. ಅಲ್ಲದೇ ಸ್ನೇಹಿತನೊಬ್ಬ ಲಾಕ್‍ಡೌನ್ ಸಮಯದಲ್ಲಿ ಬೈಕ್ ತೆಗೆದುಕೊಂಡು ಹೋಗಿದ್ದನು. ಅದನ್ನು ವಾಪಸ್ ಕೊಟ್ಟಿಲ್ಲ ಎಂದು ಬರೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

    ಭೋಜ್‍ಪುರಿ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟಿ ಅನುಪಮಾ ನಟಿಸಿದ್ದಾರೆ. ಅನುಪಮಾ ಪಾಠಕ್ ಬಿಹಾರದ ಪೂರ್ನಿಯಾ ಜಿಲ್ಲೆಯವರಾಗಿದ್ದು, ಕೆಲಸಕ್ಕಾಗಿ ಮುಂಬೈನಲ್ಲಿ ನೆಲೆಸಿದ್ದರು. ಸದ್ಯಕ್ಕೆ ಪೊಲೀಸರಿಗೆ ಈ ಕುರಿತು ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

  • ಪ್ರಿಯತಮನ ಜೊತೆ ‘ಅರಗಿಣಿ’ ಖ್ಯಾತಿಯ ನಟಿ ಎಂಗೇಜ್

    ಪ್ರಿಯತಮನ ಜೊತೆ ‘ಅರಗಿಣಿ’ ಖ್ಯಾತಿಯ ನಟಿ ಎಂಗೇಜ್

    ಬೆಂಗಳೂರು: ಕಿರುತೆರೆ ನಟಿ ನವ್ಯಾ ರಾವ್ ಸದ್ಯದಲ್ಲೇ ತಮ್ಮ ಗೆಳೆಯನ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ.

    ನಟಿ ನವ್ಯಾ ರಾವ್ 2013ರಲ್ಲಿ ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ಅರಗಿಣಿ’ ಸೀರಿಯಲ್‍ನಲ್ಲಿ ಅಭಿನಯಿಸಿದ್ದರು. ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿ ನಟಿ ಮೇಘನಾ ಮತ್ತು ಹರೀಶ್ ನಟಿಸಿದ್ದರು. ನೆಗೆಟಿವ್ ಪಾತ್ರದಲ್ಲಿ ಹೀರೋ ಸಿದ್ದಾರ್ಥ್ ಗರ್ಲ್‍ಫ್ರೆಂಡ್ ಆಗಿ ನವ್ಯಾ ರಾವ್, ಪೂಜಾ ಸಿಂಧ್ಯಾ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಸಿದ್ದಾರ್ಥ್ ಮತ್ತು ಖುಷಿಯ ಮಧ್ಯೆ ವಿಲನ್ ಆಗಿ ಪೂಜಾ ಸಿಂಧ್ಯಾ ತೆರೆ ಮೇಲೆ ಮಿಂಚಿದ್ದರು. ಇದೀಗ ವೈವಾಹಿಕ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ.

    ನವ್ಯಾ ಸ್ನೇಹಿತರೊಬ್ಬರ ಮದುವೆಯಲ್ಲಿ ವರುಣ್ ಎಂಬುವವರನ್ನು ಭೇಟಿ ಮಾಡಿದ್ದರು. ಅಲ್ಲಿ ಇವರಿಬ್ಬರಿಗೂ ಪರಿಚಯವಾಗಿ ಸ್ನೇಹಿತರಾಗಿದ್ದರು. ನಂತರ ವರುಣ್, ನವ್ಯಾಗೆ ಪ್ರಪೋಸ್ ಮಾಡಿದ್ದಾರೆ. ಆಗ ನವ್ಯಾ ಕೂಡ ಅವರ ಪ್ರೀತಿಯನ್ನು ಒಪ್ಪಿಕೊಂಡಿದ್ದು, ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರು ತಮ್ಮ ಮನೆಯಲ್ಲಿ ಪ್ರೀತಿಯ ವಿಚಾರವನ್ನು ತಿಳಿಸಿದ್ದಾರೆ. ಎರಡು ಮನೆಯವರು ಕೂಡ ಖುಷಿಯಿಂದ ಒಪ್ಪಿಕೊಂಡು ಬೇಗ ಮದುವೆ ಮಾಡಲು ನಿರ್ಧರಿಸಿದ್ದಾರೆ.

    ಅದರಂತೆಯೇ 2020 ಮಾರ್ಚ್ 18ರಂದು ಬೆಂಗಳೂರಿನ ನಂದನಾ ಹೋಟೆಲ್‍ನಲ್ಲಿ ಅದ್ಧೂರಿಯಾಗಿ ನವ್ಯಾ ಮತ್ತು ವರುಣ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಇದೀಗ ನಿಶ್ಚಿತಾರ್ಥದ ಫೋಟೋಗಳನ್ನು ನವ್ಯಾ ಇನ್‍ಸ್ಟಾಗ್ರಾಂನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ವಿಶೇಷ ಅಂದರೆ ಇವರಿಬ್ಬರ ಪರಿಚಯ ಆಗಿ ಕೇವಲ 8 ತಿಂಗಳು ಕಳೆದಿದೆ. ಅಷ್ಟು ಬೇಗ ಮದುವೆಯಾಗುತ್ತಿದ್ದಾರೆ.

    ವರುಣ್ ಸಾಫ್ಟ್ ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ. ಸದ್ಯಕ್ಕೆ ಕೊರೊನಾ ವೈರಸ್ ಸಮಸ್ಯೆ ಮುಗಿದ ನಂತರ ಜೂನ್ 7 ಮತ್ತು 8ರಂದು ಬೆಂಗಳೂರಿನಲ್ಲಿಯೇ ಈ ಜೋಡಿ ಮದುವೆಯಾಗಲಿದೆ ಎಂದು ತಿಳಿದುಬಂದಿದೆ.

    ನಟಿ ನವ್ಯಾ ಮೊದಲಿಗೆ ‘ಪ್ಯಾಟೆ ಮಂದಿ ಕಾಡಿಗ್ ಬಂದ್ರು’ ರಿಯಾಲಿಟಿ ಶೋನಲ್ಲಿ ಭಾಗವಹಿಸಿದ್ದರು. ಇದಾದ ಬಳಿಕ ಅವರಿಗೆ ‘ಅರಗಿಣಿ’ ಧಾರಾವಾಹಿಯಲ್ಲಿ ನೆಗೆಟಿವ್ ಶೇಡ್‍ನಲ್ಲಿ ಕಾಣಿಸಿಕೊಳ್ಳಲು ಅವಕಾಶ ಬಂದಿತ್ತು. ಈ ಮೂಲಕ ನವ್ಯಾ ಕಿರುತೆರೆಗೆ ಕಾಟ್ಟಿದ್ದರು. ನವ್ಯಾ ಕನ್ನಡ ಮಾತ್ರವಲ್ಲದೇ ತೆಲುಗು ಸೀರಿಯಲ್‍ನಲ್ಲೂ ಅಭಿನಯಿಸಿದ್ದಾರೆ. ಸದ್ಯಕ್ಕೆ ನವ್ಯಾ ‘ರಾಮಸೀತಾ’ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

    https://www.instagram.com/p/B-KaDVwpa41/