Tag: ಕೀರಾನ್ ಪೋಲಾರ್ಡ್

  • 6 ಬಾಲ್ 6-ಸಿಕ್ಸ್ ಯುವರಾಜ್ ಸಿಂಗ್ ದಾಖಲೆ ಸರಿಗಟ್ಟಿದ ಪೋಲಾರ್ಡ್

    6 ಬಾಲ್ 6-ಸಿಕ್ಸ್ ಯುವರಾಜ್ ಸಿಂಗ್ ದಾಖಲೆ ಸರಿಗಟ್ಟಿದ ಪೋಲಾರ್ಡ್

    ಆ್ಯಂಟಿಗಾ: ವೆಸ್ಟ್ ಇಂಡೀಸ್ ನಾಯಕ ಕೀರಾನ್ ಪೋಲಾರ್ಡ್ 6 ಬಾಲ್ ಗೆ 6 ಸಿಕ್ಸರ್ ಸಿಡಿಸುವ ಮೂಲಕ ಭಾರತ ತಂಡದ ಮಾಜಿ ಆಟಗಾರ ಯುವರಾಜ್ ಸಿಂಗ್ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ.

    ವೆಸ್ಟ್ ಇಂಡೀಸ್ ಮತ್ತು ಶ್ರೀಲಂಕಾ ನಡುವಿನ ಮೊದಲ ಟಿ-20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ತಂಡದ ನಾಯಕ ಕೀರಾನ್ ಪೋಲಾರ್ಡ್ ಶ್ರೀಲಂಕಾದ ಬೌಲರ್ ಅಖಿಲ ಧನಂಜಯ್ ಬೌಲಿಂಗ್ ನಲ್ಲಿ 6 ಬಾಲ್ ಗೆ 6 ಸಿಕ್ಸರ್ ಸಿಡಿಸುವ ಮೂಲಕ, ಅಂತರಾಷ್ಟ್ರೀಯ ಪಂದ್ಯದಲ್ಲಿ ಯುವರಾಜ್ ಸಿಂಗ್ ಮತ್ತು ಹರ್ಷಲ್ ಗಿಬ್ಸ್ ನಂತರ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಬ್ಯಾಟ್ಸ್‌ಮ್ಯಾನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    2007 ರಲ್ಲಿ ಇಂಗ್ಲೆಂಡ್ ವಿರುದ್ಧದ ಟಿ-20 ವಿಶ್ವಕಪ್ ಪಂದ್ಯದಲ್ಲಿ ಭಾರತದ ಯುವರಾಜ್ ಸಿಂಗ್, ಇಂಗ್ಲೆಂಡ್ ನ ಬಾಲರ್ ಫ್ಲಿಂಟಾಪ್ ಅವರ 6 ಎಸೆತವನ್ನು ಸಿಕ್ಸರ್ ಗಟ್ಟಿ  ದಾಖಲೆ ನಿರ್ಮಿಸಿದ್ದರು, ಆ ಬಳಿಕ ಹರ್ಷಲ್ ಗಿಬ್ಸ್ ನೆದರ್ ಲ್ಯಾಂಡ್ ವಿರುದ್ಧ 6 ಸಿಕ್ಸ್ ಸಿಡಿಸಿ ದಾಖಲೆ ನಿರ್ಮಿಸಿದ್ದರು.

    ಶ್ರೀಲಂಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ನಾಯಕ ಪೋಲಾರ್ಡ್ ಮೊದಲು ಫಿಲ್ಡಿಂಗ್ ಮಾಡುವ ನಿರ್ಧಾರ ಕೈಗೊಂಡರು. ಅವರ ನಿರ್ಧಾರದಂತೆ ಉತ್ತಮ ಬೌಲಿಂಗ್ ಮಾಡಿದ ವೆಸ್ಟ್ ಇಂಡೀಸ್ ತಂಡದ ಬೌಲರ್ ಗಳು ಶ್ರೀಲಂಕಾವನ್ನು 131 ರನ್ ಗಳಿಗೆ ಕಟ್ಟಿಹಾಕಿತು.

    132 ರನ್‍ಗಳ ಗುರಿಯೊಂದಿಗೆ ಬ್ಯಾಟಿಂಗ್ ಇಳಿದ ವೆಸ್ಟ್ ಇಂಡೀಸ್ 3,1 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೆ 52 ಗಳಿಸಿತ್ತು ಈ ಹಂತದಲ್ಲಿ ದಾಳಿಗಿಳಿದ ಅಖಿಲ ಧನಂಜಯ ಲೂಯಿಸ್, ಗೇಲ್ ಮತ್ತು ಪೂರನ್ ಅವರ ವಿಕೆಟ್ ಕಬಳಿಸುವ ಮೂಲಕ ಹ್ಯಾಟ್ರಿಕ್ ವಿಕೆಟ್ ಪಡೆದು ಮಿಂಚಿದ್ದರು. ನಂತರ ಬ್ಯಾಟಿಂಗ್ ಇಳಿದ ಟಿ-20 ಸ್ಪೇಷಲಿಷ್ಟ್ ಬ್ಯಾಟ್ಸ್‍ಮ್ಯಾನ್ ಕೀರಾನ್ ಪೊಲಾರ್ಡ್ ಅಖಿಲ ಧನಂಜಯ ಅವರ ಆರನೇ ಓವರ್ ನ ಎಲ್ಲಾ ಆರು ಎಸೆತಗಳನ್ನು ಸಿಕ್ಸರ್‍ ಗಟ್ಟಿ ಅಬ್ಬರಿಸಿದರು. ಪೊಲಾರ್ಡ್ 38 ರನ್ (11 ಎಸೆತ, 6 ಸಿಕ್ಸ್) ಸಿಡಿಸಿ ಔಟ್ ಆದರು. ಅಂತಿಮವಾಗಿ ವೆಸ್ಟ್ ಇಂಡೀಸ್ ತಂಡ 13.1 ಓವರ್ ನಲ್ಲಿ 6 ವಿಕೆಟ್ ಕಳೆದುಕೊಂಡು 132 ರನ್ ಗಳನ್ನು ಚೆಸ್ ಮಾಡಿ ಪಂದ್ಯವನ್ನು ಗೆದ್ದುಕೊಂಡಿದೆ.

  • ‘ಈರುಳ್ಳಿ ದರ ಏರಿಕೆ ಬಗ್ಗೆ ಯೋಚಿಸಿದ ಕೊಹ್ಲಿ, ಪೋಲಾರ್ಡ್’

    ‘ಈರುಳ್ಳಿ ದರ ಏರಿಕೆ ಬಗ್ಗೆ ಯೋಚಿಸಿದ ಕೊಹ್ಲಿ, ಪೋಲಾರ್ಡ್’

    ನವದೆಹಲಿ: ಈರುಳ್ಳಿ ದರ ಬಗ್ಗೆ ಕರ್ನಾಟಕ ಅಷ್ಟೇ ಅಲ್ಲದೆ, ದೇಶದಲ್ಲಿ ಭಾರೀ ಚರ್ಚೆಯಾಗುತ್ತಿದೆ. ದರ ಏರಿಕೆ ವಿಚಾರವಾಗಿ ವಿಪಕ್ಷಗಳು ಆಡಳಿತ ಪಕ್ಷದ ವಿರುದ್ಧ ಆರೋಪ ಮಾಡುತ್ತಿವೆ. ಈ ಬೆನ್ನಲ್ಲೇ ಟಿ20 ಸರಣಿಯಲ್ಲಿ ಬ್ಯುಸಿ ಆಗಿರುವ ವೆಸ್ಟ್ ಇಂಡೀಸ್ ನಾಯಕ ಕಿರಾನ್ ಪೋಲಾರ್ಡ್ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈರುಳ್ಳಿ ದರದ ಬಗ್ಗೆ ಯೋಜಿಸಿದ್ದಾರಂತೆ.

    ಹೈದರಾಬಾದ್‍ನಲ್ಲಿ ನಡೆದ ಮೊದಲ ಟಿ20 ಪಂದ್ಯದಲ್ಲಿ ಭಾರತ ಭರ್ಜರಿ ಗೆಲವು ಸಾಧಿಸಿದೆ. ಪಂದ್ಯಕ್ಕೂ ಮುನ್ನ ನಡೆದ ಟಾಸ್ ವೇಳೆ ಪೋಲಾರ್ಡ್ ಹಾಗೂ ಕೊಹ್ಲಿ ಏನನ್ನೋ ಯೋಚಿಸುತ್ತಿದ್ದಂತೆ ನಿಂತಿದ್ದರು. ನಿಂತಿದ್ದ ಫೋಟೋವನ್ನು ಐಸಿಸಿ ತನ್ನ ಟ್ವಿಟ್ಟರ್ ಖಾತೆಯಲ್ಲಿ ಟ್ವೀಟ್ ಮಾಡಿ ಇದಕ್ಕೆ ಶೀರ್ಷಿಕೆ (ಕ್ಯಾಪ್ಶನ್) ಕೊಡಿ ಎಂದು ಬರೆದುಕೊಂಡಿತ್ತು. ಇದನ್ನೂ ಓದಿ: ಮೊಬೈಲ್ ಕೊಂಡ್ರೆ 1 ಕೆ.ಜಿ ಈರುಳ್ಳಿ ಫ್ರೀ

    ಐಸಿಸಿ ಟ್ವೀಟ್‍ಗೆ ಅನೇಕ ನೆಟ್ಟಿಗರು ತಮ್ಮದೆ ರೀತಿಯಲ್ಲಿ ಕಮೆಂಟ್ ಮಾಡಿದ್ದಾರೆ. ವಿಜೇತ ತಂಡವು 25 ಕೆಜಿ ಈರುಳ್ಳಿಯನ್ನು ಪಡೆಯುತ್ತದೆ ಎಂದು ಉಭಯ ನಾಯಕರು ಯೋಚಿಸುತ್ತಿದ್ದಾರೆ ಎಂದು ನೆಟ್ಟಿಗರೊಬ್ಬರು ವ್ಯಂಗ್ಯವಾಡಿದ್ದಾರೆ. ಇದನ್ನೂ ಓದಿ: ಮತ್ತೆ ಈರುಳ್ಳಿ ದುಬಾರಿ- ಕೆ.ಜಿಗೆ 200 ರೂ. ದಾಟಲಿದೆ ಬೆಲೆ

    ಇನ್ನು ಕೆಲವರು ಹೇಗೆ ಇಷ್ಟು ರನ್ ಸಾಕೇ ಎಂದು ಪೊಲಾರ್ಡ್ ಕೇಳಿದರೆ ಇನ್ನು 6 ರನ್ ಬೇಕಿತ್ತು ಎಂದು ಕೊಹ್ಲಿ ಉತ್ತರ ನೀಡುವಂತೆ ಬರೆದುಕೊಂಡಿದ್ದಾರೆ. ಮತ್ತೆ ಕೆಲವರು, ಪಂದ್ಯದಲ್ಲಿ ವಿರಾಟ್ ಕೊಹ್ಲಿ ಸಂಭ್ರಮಿಸಿದ ವಿಡಿಯೋ ಹಾಗೂ ಫೋಟೋಗಳನ್ನು ರಿಟ್ವೀಟ್ ಮಾಡಿದ್ದಾರೆ.

  • ಬ್ಯಾಟ್ ಮೇಲಕ್ಕೆ ಎಸೆದು ವೈಡ್ ಗೆರೆಯಲ್ಲಿ ನಿಂತಿದ್ದಕ್ಕೆ ಪೋಲಾರ್ಡ್‌ಗೆ ದಂಡ!

    ಬ್ಯಾಟ್ ಮೇಲಕ್ಕೆ ಎಸೆದು ವೈಡ್ ಗೆರೆಯಲ್ಲಿ ನಿಂತಿದ್ದಕ್ಕೆ ಪೋಲಾರ್ಡ್‌ಗೆ ದಂಡ!

    ಹೈದರಾಬಾದ್: ಮುಂಬೈ ಇಂಡಿಯನ್ಸ್ ತಂಡದ ಸ್ಟಾರ್ ಬ್ಯಾಟ್ಸ್ ಮನ್ ಕೀರಾನ್ ಪೋಲಾರ್ಡ್ ಆನ್ ಫೀಲ್ಡ್ ನಲ್ಲಿ ತೋರಿದ ವರ್ತನೆಗೆ ಪಂದ್ಯದ ರೆಫ್ರೀ ಪಂದ್ಯದ ಶೇ.25 ರಷ್ಟು ಶುಲ್ಕವನ್ನು ದಂಡ ವಿಧಿಸಿದ್ದಾರೆ.

    ಐಪಿಎಲ್ ಟೂರ್ನಿಯ ಫೈನಲ್ ಪಂದ್ಯದ ಮುಂಬೈ ಇನ್ನಿಂಗ್ಸ್ ನ ಅಂತಿಮ ಓವರಿನಲ್ಲಿ ಘಟನೆ ನಡೆದಿದ್ದು, ಚೆನ್ನೈ ಸೂಪರ್ ಕಿಂಗ್ಸ್ ತಂಡದ ಬ್ರಾವೋ ಬೌಲ್ ಮಾಡಿದ್ದರು. ಈ ಹಂತದಲ್ಲಿ ಮೊದಲ 2 ಎಸೆತಗಳು ಡಾಟ್ ಆಗಿದ್ದು, ಆದರೆ 3ನೇ ಎಸೆತ ವೈಡ್ ಎಂದು ಭಾವಿಸಿ ಹೊಡೆಯದೇ ಬಿಟ್ಟಿದ್ದರು. ಆದರೆ ಅಂಪೈರ್ ವೈಡ್ ಘೋಷಿಸಿರಲಿಲ್ಲ. ಇದಕ್ಕೆ ಅಸಮಾಧಾನಗೊಂಡ ಪೋಲಾರ್ಡ್ ಬ್ಯಾಟನ್ನು ಮೇಲಕ್ಕೆ ಎಸೆದು ಸಿಟ್ಟು ಹೊರ ಹಾಕಿದ್ದರು.

    4ನೇ ಎಸೆತದ ವೇಳೆ ಪೋಲಾರ್ಡ್ ಆಫ್ ಸೈಡ್ ವೈಡ್ ಗೆರೆ ಬಳಿ ಬ್ಯಾಟ್ ಹಿಡಿದು ನಿಂತಿದ್ದರು. ಬ್ರಾವೋ ಬೌಲಿಂಗ್ ಮಾಡುವ ವೇಳೆ ಬ್ಯಾಟಿಂಗ್ ತಯಾರಾಗಿ ನಿಂತು ಕೊನೆ ಕ್ಷಣದಲ್ಲಿ ಕ್ರೀಸಿನಿಂದ ಹೊರ ನಡೆದಿದ್ದರು. ಈ ವರ್ತನೆಯನ್ನು ನೋಡಿದ ಇಬ್ಬರು ಅಂಪೈರ್ ಪೊಲಾರ್ಡ್ ಬಳಿ ಬಂದು ಮಾತುಕತೆ ನಡೆಸಿದ್ದರು.

    ಅಂಪೈರ್ ನಿರ್ಧಾರದ ವಿರುದ್ಧ ನಡೆದುಕೊಂಡ ಪರಿಣಾಮ ರೆಫ್ರಿ ಪಂದ್ಯದ ಶೇ.25 ರಷ್ಟು ಸಂಭಾವನೆಯನ್ನು ದಂಡವಾಗಿ ವಿಧಿಸಿದ್ದಾರೆ. ಐಪಿಎಲ್ ಫೈನಲ್ ಪಂದ್ಯದಲ್ಲಿ ಪೋಲಾರ್ಡ್ ಲೆವಲ್ 1 ನಿಯಮವನ್ನು ಉಲ್ಲಂಘಿಸಿರುವುದು ಸ್ಪಷ್ಟವಾಗಿದೆ. ಆದ್ದರಿಂದಲೇ ಈ ದಂಡ ವಿಧಿಸಲಾಗಿದೆ ಎಂದು ಐಪಿಎಲ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.