Tag: ಕುಂದಗೋಳ ಉಪಚುನಾವಣೆ

  • ಹೆಚ್‍ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಲು ಡಿಕೆಶಿ ಹಿಂದೇಟು

    ಹೆಚ್‍ಡಿಡಿ ಹೇಳಿಕೆಗೆ ಪ್ರತಿಕ್ರಿಯಿಸಲು ಡಿಕೆಶಿ ಹಿಂದೇಟು

    ಹುಬ್ಬಳ್ಳಿ/ಧಾರವಾಡ: ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರ ಹೇಳಿಕೆಗೆ ಸಂಬಂಧಿಸಿದಂತೆ ನನಗೇನೂ ಗೊತ್ತಿಲ್ಲ, ಅದರ ಬಗ್ಗೆ ತಿಳಿದುಕೊಂಡು ಮಾತನಾಡ್ತೇನೆ ಎಂದು ಸಚಿವ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

    ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ದೇವೇಗೌಡರು ಸಮ್ಮಿಶ್ರ ಸರ್ಕಾರದ ಬಗ್ಗೆ ಮಾತನಾಡಿದ್ದು ನನಗೇನೂ ಗೊತ್ತಿಲ್ಲ, ಅದರ ಬಗ್ಗೆ ತಿಳಿದುಕೊಂಡು ಮಾತನಾಡುತ್ತೇನೆ. ಮೈತ್ರಿಯಲ್ಲಿ ಯಾವುದೇ ಅಸಮಾಧಾನವಿಲ್ಲ, ಸಿಎಂ ಅವರಿಗೆ ನೀವೇ ಮುಂದುವರೆಯಬೇಕು ಎಂದು ಹೇಳಿದ್ದೇವೆ. ಸರ್ಕಾರಕ್ಕೆ ಸಂಬಂಧಿಸಿದಂತೆ ಬಹಿರಂಗ ಹೇಳಿಕೆಗಳನ್ನು ನೀಡದಂತೆ ಪಕ್ಷದ ಹೈಕಮಾಂಡ್ ಆದೇಶವಿದೆ ಎಂದರು.

    ಉಪಚುನಾವಣಾ ಸಂದರ್ಭದಲ್ಲಿ ಕುಂದಗೋಳ ವಿಧಾನಸಭಾ ಕ್ಷೇತ್ರವನ್ನು ದತ್ತು ತೆಗದುಕೊಳ್ಳುವುದಾಗಿ ಮಾತು ನೀಡಲಾಗಿತ್ತು. ಕುಂದಗೋಳ ಅಭಿವೃದ್ದಿ ವಿಚಾರದಲ್ಲಿ ಇಂದು ವ್ಯಾಪಕ ಚರ್ಚೆ ನಡೆಸಲಿದ್ದೇವೆ. ಸಚಿವ ಆರ್.ಬಿ.ತಿಮ್ಮಾಪುರ, ಎಂಟಿಬಿ ನಾಗರಾಜ್, ಪ್ರಿಯಾಂಕ್ ಖರ್ಗೆ, ಜಯಮಾಲಾ ಸೇರಿದಂತೆ ಹಲವು ನಾಯಕರ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಕಾಮಗಾರಿ ಸಭೆ ನಡೆಸಲಿದ್ದೇವೆ. ಸಂಜೆ ಮತದಾರರಿಗೆ ಕೃತಜ್ಞತೆ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಕುಂದಗೋಳ ಕ್ಷೇತ್ರದ ಮತದಾರರ ಋಣವನ್ನು ತೀರಿಸುವ ಕಾರ್ಯವನ್ನು ನಾವು ಮಾಡಲಿದ್ದೇವೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು.

    ದೇವೇಗೌಡರು ಹೇಳಿದ್ದೇನು?
    ಮಧ್ಯಂತರ ಚುನಾವಣೆ ನಡೆಯುವ ಬಗ್ಗೆ ಸಂಶಯವಿಲ್ಲ ಎಂದು ಇಂದು ಬೆಳಗ್ಗೆ ದೇವೇಗೌಡರು ಹೊಸ ಬಾಂಬ್ ಸಿಡಿಸಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಸಿಎಂ ಆಗಬಾರದು ಎಂದು ಕಾಂಗ್ರೆಸ್ ನವರು ಬಂದು ಚರ್ಚೆ ಮಾಡದೆ ಸರ್ಕಾರ ರಚನೆಗೆ ಮುಂದಾಗಿದ್ದರು. ಕುಮಾರಸ್ವಾಮಿ ಅವರನ್ನೇ ಸಿಎಂ ಮಾಡಿ ಎಂದರು. ಈಗ ಒನ್ ಥರ್ಡ್ ನಿಯಮವೂ ಇಲ್ಲ ಏನೂ ಇಲ್ಲ. ನಮ್ಮ ಒಂದು ಮಂತ್ರಿ ಸ್ಥಾನವನ್ನೂ ಕಾಂಗ್ರೆಸ್ಸಿಗೆ ಸರೆಂಡರ್ ಮಾಡಿದ್ದೀವಿ. ಎಲ್ಲವನ್ನು ಸಹಿಸಿಕೊಂಡು ಹೋಗುತ್ತಿದ್ದೇನೆ. ನಾನೇನಾದರೂ ಮಾತಾಡಿದ್ನಾ ಎಂದು ಹೇಳುವ ಮೂಲಕ ಮಧ್ಯಂತರ ಚುನಾವಣೆಯ ಸುಳಿವು ನೀಡಿದ್ದರು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]

  • ಮಾನ ಮರ್ಯಾದೆ, ಪಂಚೇಂದ್ರಿಯ ಇಲ್ಲದ ಸರ್ಕಾರ ರಾಜ್ಯದಲ್ಲಿದೆ : ರೇಣುಕಾಚಾರ್ಯ

    ಮಾನ ಮರ್ಯಾದೆ, ಪಂಚೇಂದ್ರಿಯ ಇಲ್ಲದ ಸರ್ಕಾರ ರಾಜ್ಯದಲ್ಲಿದೆ : ರೇಣುಕಾಚಾರ್ಯ

    ಧಾರವಾಡ: ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ರೈತರ ಜೊತೆ ನಾವಿದ್ದೇವೆ ಎಂದು ಹೇಳುತ್ತಿದೆ. ಆದರೆ ರೈತರು ಸಂಕಷ್ಟದಲ್ಲಿ ಇದ್ದಾಗ ಸರ್ಕಾರದ ನಾಯಕರು ರೆಸಾರ್ಟಿನಲ್ಲಿ ಮಾಲೀಸ್ ಮಾಡಿಸಿಕೊಳ್ಳುತ್ತಾ ಇರುತ್ತಾರೆ ಎಂದು ಮಾಜಿ ಸಚಿವ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

    ಕುಂದಗೋಳ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಇರೋದು ಮಾನ ಮರ್ಯಾದೆ ಇಲ್ಲದ ಸರ್ಕಾರ. ಪಂಚೇಂದ್ರಿಯಗಳೇ ಇಲ್ಲದ ಸರ್ಕಾರ. ಇವರು ಯಾವ ರೈತರ ಸಾಲಮನ್ನಾ ಮಾಡಿಲ್ಲ. ಬರಗಾಲ ಸಮಸ್ಯೆಯನ್ನು ನಿಭಾಯಿಸುತ್ತಿಲ್ಲ. ರೈತರ ಜೊತೆ ಇದ್ದೇವೆ ಅಂತಾರೆ, ಋಣ ಮುಕ್ತ ಪತ್ರದ ಬದಲಿಗೆ ಸಾಂತ್ವನ ಪತ್ರ ಕೊಡುತ್ತಾರೆ. ರೈತರು ಸಂಕಷ್ಟದಲ್ಲಿ ಇದ್ದಾಗ ರೆಸಾರ್ಟ್ ನಲ್ಲಿ ಮಾಲೀಸ್ ಮಾಡಿಸಿಕೊಳ್ಳುತ್ತಾ ಇರುತ್ತಾರೆ ಎಂದು ಟಾಂಗ್ ಕೊಟ್ಟರು.

    ಸಿ. ಎಂ ಇಬ್ರಾಹಿಂ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮಾತನಾಡಿರುವುದಕ್ಕೆ ಪ್ರತಿಕ್ರಿಯಿಸಿ, ಮೋದಿ ಬಗ್ಗೆ ಜೋಕರ್ ಮತ್ತು ಬ್ರೋಕರ್ ಇಬ್ರಾಹಿಂ ಏನೇನೋ ಮಾತನಾಡುತ್ತಾ ಇದ್ದಾರೆ. ಭ್ರಷ್ಟಾಚಾರದ ಹಣ ತಂದು ಕುಂದಗೋಳ ಚಿಂಚೊಳಿಯಲ್ಲಿ ಹಂಚುತ್ತಿದ್ದಾರೆ ಎಂದು ಕಿಡಿಕಾರಿದರು.

    ಈಗಾಗಲೇ ಹರ್ಲಾಪುರದ ರೈತ ಈಶ್ವರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರೈತರ ಆತ್ಮಹತ್ಯೆಯಿಂದ ಸಿಎಂಗೆ ಕುಂದಗೋಳಗೆ ಸ್ವಾಗತ ಮಾಡುವಂತಾಗಿದೆ. ಈ ಸರ್ಕಾರ ನಿಜವಾಗಿಯೂ ಬದುಕಿದ್ದರೆ ರೈತರ ನೆರವಿಗೆ ಬರಬೇಕು ಎಂದು ಆಗ್ರಹಿಸಿದರು.