Tag: ಕುಕಿ

  • ಮೈತೇಯಿ ಸಮುದಾಯದ ನಾಯಕ ಬಂಧನ – ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಯುವಕರ ಬೆದರಿಕೆ

    ಮೈತೇಯಿ ಸಮುದಾಯದ ನಾಯಕ ಬಂಧನ – ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಯುವಕರ ಬೆದರಿಕೆ

    ಇಂಫಾಲ್: ಮಣಿಪುರದ (Manipur) ರಾಜಧಾನಿ ಇಂಫಾಲ್‌ನಲ್ಲಿ ಮೈತೇಯಿ-ಕುಕಿ ಜನಾಂಗೀಯ ಘರ್ಷಣೆ ಮತ್ತೆ ಹೆಚ್ಚಾಗಿದೆ. ಮೈತೇಯಿ ಸಮುದಾಯದ ಸ್ವಯಂಸೇವಕ ಗುಂಪಾದ ಅರಾಂಬೈ ಟೆಂಗೋಲ್ (ಎಟಿ)ನ ಪ್ರಮುಖ ನಾಯಕನ ಬಂಧನವನ್ನು ವಿರೋಧಿಸಿ ಯುವಕರ ಗುಂಪೊಂದು ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದೆ.

    ಭದ್ರತಾ ಪಡೆಗಳು ಎಟಿ ನಾಯಕ ಕಾನನ್ ಸಿಂಗ್‌ನನ್ನು ಬಂಧಿಸಿದ ನಂತರ ಇಂಫಾಲ್‌ನಲ್ಲಿ ಶನಿವಾರ ರಾತ್ರಿ ಪ್ರತಿಭಟನೆಗಳು ಭುಗಿಲೆದ್ದವು. ಪ್ರತಿಭಟನಾಕಾರರು ಟೈರ್‌ಗಳನ್ನು ಸುಟ್ಟು ರಸ್ತೆಗಳನ್ನು ತಡೆದರು. ಕೆಲವು ಇಂಫಾಲ್ ನಿವಾಸಿಗಳು ಗುಂಡಿನ ಶಬ್ದ ಕೇಳಿರುವುದಾಗಿ ವರದಿ ಮಾಡಿದ್ದಾರೆ. ಇದನ್ನೂ ಓದಿ:

    ಕಪ್ಪು ಟಿ-ಶರ್ಟ್‌ಗಳಲ್ಲಿ ಯುವಕರ ಗುಂಪೊಂದು ಪೆಟ್ರೋಲ್ ತುಂಬಿದ ಬಾಟಲಿಗಳನ್ನು ಹಿಡಿದು ಪ್ರತಿಭಟಿಸಿದೆ. ‘ನಾವು ಶಸ್ತ್ರಾಸ್ತ್ರಗಳನ್ನು ತ್ಯಜಿಸಿದ್ದೇವೆ. ಪ್ರವಾಹದ ಸಮಯದಲ್ಲಿ ನೀವು ಮಾಡಬೇಕಾದ್ದನ್ನು ನಾವು ಮಾಡಿದ್ದೇವೆ. ಈಗ ನೀವು ನಮ್ಮನ್ನು ಬಂಧಿಸುತ್ತಿದ್ದೀರಿ. ನಾವು ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’ ಎಂದು ಪೆಟ್ರೋಲ್‌ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾರೆ.

    2024ರ ಫೆಬ್ರವರಿಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮೊಯಿರಾಂಗ್ಥೆಮ್ ಅಮಿತ್ ಅವರ ಮನೆಯ ಮೇಲಿನ ದಾಳಿ ಹಾಗೂ ಹಿರಿಯ ಪೊಲೀಸ್ ಅಧಿಕಾರಿಯ ಅಪಹರಣದಲ್ಲಿ ಕಾನನ್ ಸಿಂಗ್ ಪ್ರಮುಖ ಶಂಕಿತನಾಗಿದ್ದಾನೆ.

    ಬಿಷ್ಣುಪುರ, ಇಂಫಾಲ್ ಪಶ್ಚಿಮ, ಇಂಫಾಲ್ ಪೂರ್ವ, ತೌಬಲ್ ಮತ್ತು ಕಕ್ಚಿಂಗ್ ಎಂಬ ಐದು ಜಿಲ್ಲೆಗಳಲ್ಲಿ ಐದು ದಿನಗಳವರೆಗೆ ಕರ್ಫ್ಯೂ ವಿಧಿಸಲಾಗಿದ್ದು, ಇಂಟರ್ನೆಟ್ ಸಂಪರ್ಕ ಕಡಿತಗೊಳಿಸಲಾಗಿದೆ.

  • ಮಣಿಪುರದಲ್ಲಿ ಮಿತ್ರ ಪಕ್ಷವನ್ನು ಕಳೆದುಕೊಂಡ NDA – ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್‌

    ಮಣಿಪುರದಲ್ಲಿ ಮಿತ್ರ ಪಕ್ಷವನ್ನು ಕಳೆದುಕೊಂಡ NDA – ಸರ್ಕಾರಕ್ಕೆ ನೀಡಿದ್ದ ಬೆಂಬಲ ವಾಪಸ್‌

    ಇಂಫಾಲ: ಮೂರು ತಿಂಗಳಿನಿಂದ ಈಶಾನ್ಯ ರಾಜ್ಯ ಮಣಿಪುರದಲ್ಲಿ (Manipura) ನಡೆಯುತ್ತಿರುವ ಹಿಂಸಾಚಾರದಿಂದಾಗಿ ಎನ್‌ಡಿಎ (NDA) ತನ್ನ ಮಿತ್ರ ಪಕ್ಷವನ್ನು ಕಳೆದುಕೊಂಡಿದೆ. ಸಿಎಂ ಎನ್ ಬಿರೇನ್ ಸಿಂಗ್ (N Biren Singh) ಸರ್ಕಾರಕ್ಕೆ ನೀಡಿದ ಬೆಂಬಲವನ್ನು ಕುಕಿ ಸಮುದಾಯದ ಇಬ್ಬರು ಶಾಸಕರು ಹಿಂದಕ್ಕೆ ಪಡೆದಿದ್ದಾರೆ.

    ಇಬ್ಬರು ಶಾಸಕರನ್ನು ಹೊಂದಿರುವ ಕುಕಿ ಪೀಪಲ್ಸ್ ಅಲಯನ್ಸ್ (Kuki People’s Alliance) ರಾಜ್ಯಪಾಲ ಅನುಸೂಯಾ ಉಯ್ಕೆ ಅವರಿಗೆ ಪತ್ರ ಬರೆದು ಬೆಂಬಲ ಹಿಂಪಡೆಯುವುದಾಗಿ ಘೋಷಿಸಿದೆ. ಇಬ್ಬರು ಶಾಸಕರು ಬೆಂಬಲ ಹಿಂದಕ್ಕೆ ಪಡೆದಿದ್ದರಿಂದ ಬಿರೇನ್ ಸಿಂಗ್ ಅವರ ಸರ್ಕಾರಕ್ಕೆ ಯಾವುದೇ ಸಮಸ್ಯೆ ಇಲ್ಲ.  ಇದನ್ನೂ ಓದಿ: ಟೊಮೆಟೋ ಬೆಲೆ ಭಾರೀ ಇಳಿಕೆ – ರೈತರಿಗೆ ಆತಂಕ ಶುರು

    60 ಮಂದಿ ಶಾಸಕ ಸ್ಥಾನವನ್ನು ಹೊಂದಿರುವ ಮಣಿಪುರ ವಿಧಾನಸಭೆಯಲ್ಲಿ ಪ್ರಸ್ತುತ 10 ಮಂದಿ ಕುಕಿ ಸಮುದಾಯದ ಶಾಸಕರಿದ್ದಾರೆ. ಈ ಪೈಕಿ 7 ಮಂದಿ ಬಿಜೆಪಿ, ಇಬ್ಬರು ಕುಕಿ ಪೀಪಲ್ಸ್ ಅಲಯನ್ಸ್, ಒಬ್ಬರು ಪಕ್ಷೇತರ ಶಾಸಕರಿದ್ದಾರೆ.

    ಒಟ್ಟು 32 ಬಿಜೆಪಿ ಶಾಸಕರು, 5 ಮಂದಿ ಎನ್‌ಪಿಎಫ್‌, 3 ಮಂದಿ ಪಕ್ಷೇತರ ಶಾಸಕರ ಬೆಂಬಲ ಬಿರೇನ್ ಸಿಂಗ್ ಸರ್ಕಾರಕ್ಕಿದೆ. 7 ಮಂದಿ ಎನ್‌ಪಿಪಿ, 5 ಕಾಂಗ್ರೆಸ್‌, 6 ಮಂದಿ ಜೆಡಿಯು ಶಾಸಕರಿದ್ದಾರೆ.

     

    Web Stories

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರದಲ್ಲಿ ನಿಲ್ಲದ ಸಂಘರ್ಷ – ತಂದೆ, ಮಗ ಸೇರಿ ಮೂವರು ಬಲಿ

    ಮಣಿಪುರದಲ್ಲಿ ನಿಲ್ಲದ ಸಂಘರ್ಷ – ತಂದೆ, ಮಗ ಸೇರಿ ಮೂವರು ಬಲಿ

    ಇಂಪಾಲ: ಮಣಿಪುರದ (Manipur) ಬಿಷ್ಣುಪುರ (Bishnupur) ಜಿಲ್ಲೆಯಲ್ಲಿ ಇಂದು (ಶನಿವಾರ) ಮುಂಜಾನೆ ನಡೆದ ಹಿಂಸಾಚಾರದಲ್ಲಿ (Violence) ತಂದೆ-ಮಗ ಸೇರಿದಂತೆ ಮೂವರು ಗ್ರಾಮಸ್ಥರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯ ಮೂಲಗಳು ತಿಳಿಸಿವೆ.

    ಶಂಕಿತ ದಂಗೆಕೋರರು ಮಧ್ಯರಾತ್ರಿ 2 ಗಂಟೆಯ ಸುಮಾರಿಗೆ ಬಿಷ್ಣುಪುರದ ಕ್ವಾಕ್ಟ ಬಳಿಯ ಉಖಾ ತಂಪಕ್ ಗ್ರಾಮದ ಮೇಲೆ ದಾಳಿ ನಡೆಸಿದ್ದು, ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ಫ್ರಿಡ್ಜ್‌ಗಾಗಿ 7 ತಿಂಗಳ ಗರ್ಭಿಣಿಯ ಜೀವವೇ ಹೋಯ್ತು!

    ಈ ಗುಂಡಿನ ದಾಳಿಯಲ್ಲಿ ತಮ್ಮ ಮನೆಗಳನ್ನು ಕಾಯುತ್ತಿದ್ದ ತಂದೆ – ಮಗ ಮತ್ತು ಇನ್ನೋರ್ವ ವ್ಯಕ್ತಿ ಸಾವನ್ನಪ್ಪಿದ್ದು, ಮೃತರು ಯಾವುದೇ ಶಸ್ತ್ರಾಸ್ತ್ರಗಳನ್ನು ಹೊಂದಿರಲಿಲ್ಲ. ಬಫರ್ ಝೋನ್ ದಾಟಿ ಮೈತೇಯ್ ಪ್ರದೇಶಕ್ಕೆ ನುಗ್ಗಿದ ದಂಗೆಕೋರರು ಗುಂಡಿನ ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹರಿಯಾಣ ಧಗಧಗ: ಅಕ್ರಮ ವಲಸಿಗರ 250 ಗುಡಿಸಲುಗಳು ನೆಲಸಮ, 41 ಕೇಸ್, 176 ಮಂದಿ ಅರೆಸ್ಟ್, 90 ಮಂದಿ ವಶಕ್ಕೆ

    ಮೃತರು ಮೈತೇಯ್ (Meitei) ಸಮುದಾಯದವರಾಗಿದ್ದು, ದಂಗೆಕೋರರು ಕುಕಿ (Kuki) ಸಮುದಾಯದ ಹಲವಾರು ಮನೆಗಳಿಗೆ ಬೆಂಕಿ ಹಚ್ಚಿದ್ದಾರೆ. ಸದ್ಯ ಕ್ವಾಕ್ಟ ಪ್ರದೇಶದಲ್ಲಿ ಕುಕಿ ಸಮುದಾಯ ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ. ಇದನ್ನೂ ಓದಿ: ಹಿಜಬ್‌ ಹಾಕದೇ ಶಾಲೆಗೆ ಬಂದ ಬಾಲಕಿಯರನ್ನು ತಡೆದ 10 ನೇ ತರಗತಿ ಮುಸ್ಲಿಂ ವಿದ್ಯಾರ್ಥಿ – ಗುಂಪಿನಿಂದ ಹಲ್ಲೆ

    ಗುಂಡಿನ ದಾಳಿಯಲ್ಲಿ ಮಣಿಪುರದ ಕಮಾಂಡೋ ತಲೆಗೆ ತೀವ್ರ ಗಾಯವಾಗಿದ್ದು, ಬಿಷ್ಣುಪುರದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಗಾಯಾಳು ಕಮಾಂಡೋವನ್ನು ಬಿಷ್ಣುಪುರ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೇ ಘಟನೆ ನಡೆದ ಪ್ರದೇಶದಲ್ಲಿ ಅರೆಸೇನಾ ಪಡೆಗಳನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಉಗ್ರರಿಂದ ಗುಂಡಿನ ದಾಳಿ – ಮೂವರು ಯೋಧರು ಹುತಾತ್ಮ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ಸಂಘರ್ಷ ಎಫೆಕ್ಟ್‌ – ಮೈತೇಯ್‌ ಸಮುದಾಯದ ಪತಿಯಿಂದ ಬೇರೆಯಾದ ಕುಕಿ ಮಹಿಳೆ

    ಮಣಿಪುರ ಸಂಘರ್ಷ ಎಫೆಕ್ಟ್‌ – ಮೈತೇಯ್‌ ಸಮುದಾಯದ ಪತಿಯಿಂದ ಬೇರೆಯಾದ ಕುಕಿ ಮಹಿಳೆ

    ಇಂಫಾಲ್: ಮೀಸಲಾತಿ ವಿಚಾರವಾಗಿ ಮಣಿಪುರದಲ್ಲಿ (Manipur violence) ಮೈತೇಯ್‌ (Meitei) ಮತ್ತು ಕುಕಿ ಸಮುದಾಯಗಳ (Kuki woman) ನಡುವೆ ಉಂಟಾದ ಸಂಘರ್ಷ ಈಗ ದೇಶಾದ್ಯಂತ ಸದ್ದು ಮಾಡುತ್ತಿದೆ. ಇದರ ಪರಿಣಾಮವಾಗಿ ಈ ಎರಡೂ ಸಮುದಾಯಕ್ಕೆ ಸೇರಿದ ದಂಪತಿ ಪರಸ್ಪರ ಬೇರಾಗಿದ್ದು, ಕಣ್ಣೀರಿಡುತ್ತಿದ್ದಾರೆ.

    ಕುಕಿ ಸಮುದಾಯದ ಮಹಿಳೆಯೊಬ್ಬರಿಗೆ ಮೈತೇಯ್‌ ಸಮುದಾಯದ ವ್ಯಕ್ತಿಯನ್ನು ಪ್ರೇಮಿಸಿ ಮದುವೆಯಾಗಿದ್ದರು. ಮಣಿಪುರ ಸಂಘರ್ಷಕ್ಕೂ ಹಿಂದಿನ ದಿನಗಳವರೆಗೂ ಇಬ್ಬರು ಚೆನ್ನಾಗಿಯೇ ಸಂಸಾರ ನಡೆಸುತ್ತಿದ್ದರು. ಆದರೆ ಸಂಘರ್ಷ ಉಂಟಾಗಿದ್ದು, ಇವರಿಬ್ಬರನ್ನು ಬೇರಾಗುವಂತೆ ಮಾಡಿದೆ. ಇದನ್ನೂ ಓದಿ: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆ

    ಹಿಂಸಾಚಾರ ಪೀಡಿತ ಸ್ಥಳಗಳಿಂದ ನೂರಾರು ಕುಟುಂಬಗಳು ಬೇರೆ ಕಡೆ ಹೋಗಿ ನೆಲೆಸಿವೆ. ಅದೇ ರೀತಿ ಈ ಇಬ್ಬರು ದಂಪತಿ ಪರಿಹಾರ ಶಿಬಿರದಲ್ಲಿ ಆಶ್ರಯ ಪಡೆದಿದ್ದರು. ದಂಪತಿಯು ಇಂಫಾಲ್‌ನ ಪರಿಹಾರ ಶಿಬಿರದಲ್ಲಿ ಒಟ್ಟಿಗೆ ಇದ್ದರು. ಆದರೆ ಜನರು ಆಕೆ ಕುಕಿ ಸಮುದಾಯದಿಂದ ಬಂದವಳು ಎಂದು ತಿಳಿದಾಗ, ಪರಿಹಾರ ಶಿಬಿರವನ್ನು ತೊರೆಯುವಂತೆ ಒತ್ತಾಯಿಸಲಾಯಿತು.

    ಜನರ ಒತ್ತಡದ ಕಾರಣದಿಂದಾಗಿ ದಂಪತಿ ಪರಸ್ಪರ ಬೇರಾಗಿದ್ದಾರೆ. ಈ ಬಗ್ಗೆ ಮಹಿಳೆ ಅಳಲು ತೋಡಿಕೊಂಡಿದ್ದಾರೆ. ರಾಜ್ಯದಲ್ಲಿ ತಲೆದೋರಿರುವ ಹಿಂಸಾಚಾರ ಇನ್ನೂ ಕಡಿಮೆಯಾಗಿಲ್ಲ. ಮಣಿಪುರ ಹಿಂಸಾಚಾರ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದ್ದು, ಸಂಸತ್‌ನಲ್ಲೂ ಗದ್ದಲಕ್ಕೆ ಕಾರಣವಾಗಿದೆ. ಈ ಎಲ್ಲದರ ಮಧ್ಯೆ ಮತ್ತೊಂದು ಪ್ರಕರಣ ಸುದ್ದಿಯಾಗಿದೆ. ಇದನ್ನೂ ಓದಿ: ನಿಮಗೆ ಬೇಕಾದಂತೆ ಕರೆಯಿರಿ ಮಿಸ್ಟರ್‌ ಮೋದಿ – ಪ್ರಧಾನಿಗೆ ರಾಹುಲ್‌ ಗಾಂಧಿ ತಿರುಗೇಟು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮಣಿಪುರ ಹಿಂಸಾಚಾರದಲ್ಲಿ ಮತ್ತೆ ಮೂವರ ಸಾವು

    ಮಣಿಪುರ ಹಿಂಸಾಚಾರದಲ್ಲಿ ಮತ್ತೆ ಮೂವರ ಸಾವು

    ಇಂಫಾಲ: ಜನಾಂಗೀಯ ಸಂಘರ್ಷ ಪೀಡಿತ ಮಣಿಪುರದಲ್ಲಿ ಮತ್ತೆ ಹಿಂಸಾಚಾರ (Manipur Violence) ವರದಿಯಾಗಿದ್ದು, ಘಟನೆಯಲ್ಲಿ ಭಾನುವಾರ ಮೂವರು ಸಾವನ್ನಪ್ಪಿದ್ದಾರೆ.

    ಮಣಿಪುರದ ಬಿಷ್ಣುಪುರ್ (Bishnupur) ಜಿಲ್ಲೆಯ ಖೋಯ್ಜುಮಂತಬಿ ಗ್ರಾಮದಲ್ಲಿ ಹಿಂಸಾಚಾರ ವರದಿಯಾಗಿದೆ. ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಮೂವರು ಕೂಡಾ ಗ್ರಾಮದಲ್ಲಿ ಸ್ವಯಂಸೇವಕರಾಗಿದ್ದು, ತಾತ್ಕಾಲಿಕ ಬಂಕರ್ ಪ್ರದೇಶವನ್ನು ಕಾಪಾಡುತ್ತಿದ್ದರು ಎನ್ನಲಾಗಿದೆ. ಅಪರಿಚಿತ ದುಷ್ಕರ್ಮಿಗಳು ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ವರದಿಯಾಗಿದೆ.

    ಶನಿವಾರ ರಾತ್ರಿ ನಡೆದಿರುವ ಗುಂಡಿನ ದಾಳಿಯಲ್ಲಿ ಐವರು ಗಾಯಗೊಂಡಿದ್ದಾರೆ. ಅವರ ಪೈಕಿ ಗಾಯಗೊಂಡಿರುವ ದಂಪತಿಯ ಸ್ಥಿತಿ ಗಂಭೀರವಾಗಿದೆ. ಅವರನ್ನು ಇಂಫಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

    ಈ ನಡುವೆ ಕುಕಿ (Kuki) ಸಮುದಾಯದ ಸಂಘಟನೆಗಳಾದ ಯುನೈಟೆಡ್ ಪೀಪಲ್ಸ್ ಫ್ರಂಟ್ (ಯುಪಿಎಫ್) ಹಾಗೂ ಕುಕಿ ನ್ಯಾಷನಲ್ ಆರ್ಗನೈಸೇಶನ್ 2 ತಿಂಗಳ ಬಳಿಕ ಮಣಿಪುರದ ಕಾಂಗ್ ಪೊಕ್ಪಿ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 2 ರಲ್ಲಿ ರಸ್ತೆ ತಡೆಯನ್ನು ಹಿಂತೆಗೆದುಕೊಂಡಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮನವಿ ಮೇರೆಗೆ ಈ ಕ್ರಮವನ್ನು ಕೈಗೊಳ್ಳಲಾಗಿದೆ.

    ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿಗಾಗಿ ಮಿಟೈ ಸಮುದಾಯದ ಬೇಡಿಕೆಯನ್ನು ವಿರೋಧಿಸಿ ಮೇ 3 ರಂದು ಬುಡಕಟ್ಟು ಐಕ್ಯತಾ ಮೆರವಣಿಗೆಯನ್ನು ಆಯೋಜಿಸಲಾಗಿತ್ತು. ಆದರೆ ಇದಾದ ಬಳಿಕ ಹಿಂಸಾಚಾರ ಭುಗಿಲೆದ್ದು, ಮಣಿಪುರದಾದ್ಯಂತ ಜನಾಂಗೀಯ ಘರ್ಷಣೆ ಉಂಟಾಯಿತು. ಇದನ್ನೂ ಓದಿ: KRS ನಲ್ಲಿ ನೀರಿನ ಕೊರತೆ – ಕುಡಿಯುವ ನೀರಿಗೆ ಶುರುವಾಯ್ತು ಆತಂಕ!

    ಹಿಂಸಾಚಾರದ ಬಳಿಕ ಮಣಿಪುರದ 8 ಜಿಲ್ಲೆಗಳಲ್ಲಿ ಕರ್ಫ್ಯೂ ವಿಧಿಸಲಾಯಿತು ಹಾಗೂ ಇಡೀ ರಾಜ್ಯದಲ್ಲಿ ಹಲವು ದಿನಗಳ ವರೆಗೆ ಮೊಬೈಲ್ ಇಂಟರ್‌ನೆಟ್ ಅನ್ನು ಸ್ಥಗಿತಗೊಳಿಸಲಾಯಿತು. ಕಳೆದ 2 ತಿಂಗಳಿನಲ್ಲಿ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ನೂರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಮಹಿಳಾ ಶಕ್ತಿಗೆ ಜಗ್ಗಲಿಲ್ಲ- ಫ್ರೀ ಬಸ್‍ನಲ್ಲಿ ಪುರುಷ ಪ್ರಯಾಣಿಕರ ಸಂಖ್ಯೆ 13 ಲಕ್ಷಕ್ಕೆ ಏರಿಕೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಆಸ್ಪತ್ರೆಗೆ ತೆರಳುತ್ತಿದ್ದ ಅಂಬುಲೆನ್ಸ್‌ಗೆ ಬೆಂಕಿಯಿಟ್ಟ ಜನರ ಗುಂಪು – 8ರ ಬಾಲಕ, ತಾಯಿ ದುರ್ಮರಣ

    ಆಸ್ಪತ್ರೆಗೆ ತೆರಳುತ್ತಿದ್ದ ಅಂಬುಲೆನ್ಸ್‌ಗೆ ಬೆಂಕಿಯಿಟ್ಟ ಜನರ ಗುಂಪು – 8ರ ಬಾಲಕ, ತಾಯಿ ದುರ್ಮರಣ

    – ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ

    ಗುವಾಹಟಿ: ಈಶಾನ್ಯ ರಾಜ್ಯ ಮಣಿಪುರದಲ್ಲಿ (Manipur Violence) ಜನಾಂಗೀಯ ದ್ವೇಷ, ಹಿಂಸಾಚಾರ ತೀವ್ರ ಸ್ವರೂಪ ಪಡೆದುಕೊಂಡಿದೆ. ತಲೆಗೆ ಗುಂಡೇಟು ಬಿದ್ದು ಗಾಯಗೊಂಡಿದ್ದ 8 ವರ್ಷದ ಬಾಲಕನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಜನರ ಗುಂಪೊಂದು ಅಂಬುಲೆನ್ಸ್‌ಗೆ ಬೆಂಕಿ ಹಚ್ಚಿದೆ. ಇದರಿಂದ ಬಾಲಕ ಮತ್ತು ಆತನ ತಾಯಿ ಮೃತಪಟ್ಟಿರುವ ಘಟನೆ ನಡೆದಿದೆ.

    ಲ್ಯಾಂಫೆಲ್ ಪೊಲೀಸ್ ಠಾಣಾ ವ್ಯಾಪ್ತಿಯ ಇಂಫಾಲ್ ಪಶ್ಚಿಮದ ಇರೊಸೆಂಬಾ ಪ್ರದೇಶದಲ್ಲಿ ಭಾನುವಾರ ಅಂಬುಲೆನ್ಸ್‌ಗೆ ಬೆಂಕಿ ಹಚ್ಚಲಾಗಿದೆ. 8 ವರ್ಷದ ಬಾಲಕ ಟೋನ್ಸಿಂಗ್ ಹ್ಯಾಂಗ್ಸಿಂಗ್, ಬಾಲಕನ ತಾಯಿ ಮೀನಾ ಹ್ಯಾಂಗ್ಸಿಂಗ್ ಮತ್ತು ಅವರ ಸಂಬಂಧಿ ಲಿಡಿಯಾ ಲೌರೆಂಬಮ್ ಮೃತರು ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಕುಕಿ ದಂಗೆಕೋರರೊಂದಿಗೆ ಬಿಎಸ್‌ಎಫ್ ಗುಂಡಿನ ಚಕಮಕಿ – ಓರ್ವ ಯೋಧ ಸಾವು, ಇಬ್ಬರಿಗೆ ಗಾಯ

    ಪರಿಶಿಷ್ಟ ಪಂಗಡ ಸ್ಥಾನಮಾನಕ್ಕಾಗಿ ಮೈತೇಯಿ ಸಮುದಾಯದ ಬೇಡಿಕೆ ವಿರೋಧಿಸಿ ಮೇ 3 ರಂದು ಗುಡ್ಡಗಾಡು ಜಿಲ್ಲೆಗಳಲ್ಲಿ ಮೆರವಣಿಗೆ ಆಯೋಜಿಸಲಾಗಿತ್ತು. ಇದಾದ ನಂತರ ಮಣಿಪುರದಲ್ಲಿ ಘರ್ಷಣೆ ಭುಗಿಲೆದ್ದಿದೆ. ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಘರ್ಷಣೆ ನಡೆಯುತ್ತಿದೆ.

    ಅಂಬುಲೆನ್ಸ್‌ ಬೆಂಕಿ ದುರಂತದಲ್ಲಿ ಮೃತಪಟ್ಟ ಮಹಿಳೆ ಮೈತೇಯಿ ಸಮುದಾಯಕ್ಕೆ ಸೇರಿದವರು. ಆಕೆ ಮದುವೆಯಾಗಿರುವ ವ್ಯಕ್ತಿ ಕುಕಿ ಸಮುದಾಯಕ್ಕೆ ಸೇರಿದಾತ. ಇವರಿಗೆ 8 ವರ್ಷ ವಯಸ್ಸಿನ ಮಗನಿದ್ದ. ಈ ದಂಪತಿ ಮಗ ಕಾಂಗ್‌ಚುಪ್‌ನಲ್ಲಿರುವ ಅಸ್ಸಾಂ ರೈಫಲ್ಸ್ ಪರಿಹಾರ ಶಿಬಿರದಲ್ಲಿ ವಾಸಿಸುತ್ತಿದ್ದ. ಶಿಬಿರದಲ್ಲಿ ಮತ್ತು ಸುತ್ತಮುತ್ತ ಭದ್ರತೆ ಬಲಪಡಿಸಲಾಗಿತ್ತು. ಆದರೆ ಭಾನುವಾರ ಈ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದು ಬಾಲಕನ ತಲೆಗೆ ಬುಲೆಟ್‌ ಹೊಕ್ಕಿ ಗಾಯಗೊಂಡಿದ್ದ. ಇದನ್ನೂ ಓದಿ: ಮಣಿಪುರದಲ್ಲಿ ಕೋಮು ಸಂಘರ್ಷ: ಅನಧಿಕೃತ ಶಸ್ತ್ರಾಸ್ತ್ರಗಳನ್ನು ಕೂಡಲೇ ಒಪ್ಪಿಸಿ – ದಂಗೆಕೋರರಿಗೆ ಅಮಿತ್‌ ಶಾ ವಾರ್ನಿಂಗ್‌

    ಅಸ್ಸಾಂ ರೈಫಲ್ಸ್ ಹಿರಿಯ ಅಧಿಕಾರಿಯೊಬ್ಬರು ತಕ್ಷಣವೇ ಇಂಫಾಲ್‌ನಲ್ಲಿ ಪೊಲೀಸರೊಂದಿಗೆ ಮಾತನಾಡಿ ಅಂಬುಲೆನ್ಸ್‌ ವ್ಯವಸ್ಥೆ ಮಾಡಿದರು. ತಾಯಿ ಬಹುಸಂಖ್ಯಾತ ಸಮುದಾಯದವಳಾಗಿದ್ದರಿಂದ ಬಾಲಕನನ್ನು ರಸ್ತೆಯ ಮೂಲಕ ಇಂಫಾಲ್‌ನಲ್ಲಿರುವ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದರು. ಐಸೊಸೆಂಬಾದಲ್ಲಿ ನಾಗರಿಕರು ಅಂಬುಲೆನ್ಸ್‌ನ್ನು ಸುಟ್ಟು ಹಾಕಿದರು. ವಾಹನದಲ್ಲಿದ್ದ ಮೂವರೂ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಹಿಂಸಾಚಾರ ನಿಯಂತ್ರಣಕ್ಕೆ ಸ್ಥಳೀಯ ಆಡಳಿತವು ಐದು ದಿನಗಳವರೆಗೆ ಇಂಟರ್ನೆಟ್ ನಿಷೇಧವನ್ನು ವಿಸ್ತರಿಸಿದೆ. ರಾಜ್ಯದ ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಹಿಂಸಾಚಾರ ಭುಗಿಲೆದ್ದ ನಂತರ ಮೇ 3 ರಿಂದ ಜಾರಿಯಲ್ಲಿರುವ ನಿಷೇಧಾಜ್ಞೆಯನ್ನು ವಿಸ್ತರಿಸಲಾಗಿದೆ. ಇದನ್ನೂ ಓದಿ: ಮಣಿಪುರ ಘರ್ಷಣೆ – ಮೃತರ ಕುಟುಂಬದವರಿಗೆ ಪರಿಹಾರ, ಸರ್ಕಾರಿ ಉದ್ಯೋಗ

  • ಮಣಿಪುರದಲ್ಲಿ ಕುಕಿ ದಂಗೆಕೋರರೊಂದಿಗೆ ಬಿಎಸ್‌ಎಫ್ ಗುಂಡಿನ ಚಕಮಕಿ – ಓರ್ವ ಯೋಧ ಸಾವು, ಇಬ್ಬರಿಗೆ ಗಾಯ

    ಮಣಿಪುರದಲ್ಲಿ ಕುಕಿ ದಂಗೆಕೋರರೊಂದಿಗೆ ಬಿಎಸ್‌ಎಫ್ ಗುಂಡಿನ ಚಕಮಕಿ – ಓರ್ವ ಯೋಧ ಸಾವು, ಇಬ್ಬರಿಗೆ ಗಾಯ

    ಇಂಪಾಲ: ಮಣಿಪುರದ (Manipur) ಸೆರೌ ಪ್ರದೇಶದಲ್ಲಿ ಮಂಗಳವಾರ ಮುಂಜಾನೆ ಕುಕಿ ದಂಗೆಕೋರರೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ (Encounter) ಗಡಿ ಭದ್ರತಾ ಪಡೆ (BSF) ಯೋಧರೊಬ್ಬರು ಹುತಾತ್ಮರಾಗಿದ್ದು, ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

    ಕಾಕ್ಚಿಂಗ್ (Kakching) ಜಿಲ್ಲೆಯ ಸುಗ್ನುವಿನ ಸೆರೌ (Serou) ಪ್ರದೇಶದ ಶಾಲೆಯೊಂದರಲ್ಲಿ ದಂಗೆಕೋರರು ಮತ್ತು ಭದ್ರತಾ ಪಡೆಯ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಕಾನ್‌ಸ್ಟೇಬಲ್ ರಂಜಿತ್ ಯಾದವ್ ಎಂಬ ಯೋಧನಿಗೆ ಗುಂಡು ತಗುಲಿತ್ತು. ತಕ್ಷಣ ಅವರನ್ನು ಕಾಕ್ಚಿಂಗ್ ಜೀವನ್ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಸ್ಪತ್ರೆಯಲ್ಲಿ ಅವರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದರು. ಇದನ್ನೂ ಓದಿ: ಅಮರನಾಥ ಯಾತ್ರೆಗೆ ಭಯೋತ್ಪಾದಕರ ಭೀತಿ- ಭದ್ರತಾ ಪಡೆಗಳೇ ಟಾರ್ಗೆಟ್

    ಮಂಗಳವಾರ ಮುಂಜಾನೆ 4:15ರ ಸುಮಾರಿಗೆ ಸೆರೌ ಪ್ರಾಕ್ಟಿಕಲ್ ಹೈಸ್ಕೂಲ್‌ನಲ್ಲಿ ನಿಯೋಜಿಸಲಾಗಿದ್ದ ಬಿಎಸ್‌ಎಫ್ ಪಡೆಗಳನ್ನು ಗುರಿಯಾಗಿಸಿಕೊಂಡು ಕುಕಿ ದಂಗೆಕೋರರು (Kuki Miscreants) ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಅಲ್ಲದೇ ಗಾಯಗೊಂಡಿರುವ ಇಬ್ಬರು ಅಸ್ಸಾಂ ರೈಫಲ್ಸ್ ಸಿಬ್ಬಂದಿಯನ್ನು ಮಂತ್ರಿಪುಖ್ರಿಗೆ ವಾಯು ಸ್ಥಳಾಂತರಿಸಲಾಗಿದೆ. ಶೋಧ ಕಾರ್ಯಾಚರಣೆಗಳು ಪ್ರಗತಿಯಲ್ಲಿವೆ ಎಂದು ದಿಮಾಪುರದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಭಾರತೀಯ ಸೇನೆಯ ಸ್ಪಿಯರ್‌ಕಾರ್ಪ್ಸ್ ಟ್ವಿಟ್ಟರ್‌ನಲ್ಲಿ ಹೇಳಿದೆ. ಇದನ್ನೂ ಓದಿ: ಬಾಲಸೋರ್ ರೈಲು ಅಪಘಾತ – ತನಿಖೆ ಆರಂಭಿಸಿದ ಸಿಬಿಐ

    ಸರ್ಕಾರದೊಂದಿಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ ನಂತರ ಯುನೈಟೆಡ್ ಕುಕಿ ಲಿಬರೇಶನ್ ಫ್ರಂಟ್ (UKLF) ದಂಗೆಕೋರರು ಮಣಿಪುರದ ಕಕ್ಚಿಂಗ್ ಜಿಲ್ಲೆಯ ಸುಗ್ನು ಎಂಬಲ್ಲಿ ತಂಗಿದ್ದರು. ಶನಿವಾರ ಮಧ್ಯರಾತ್ರಿ ಸೆರೌನಲ್ಲಿ ಕಾಂಗ್ರೆಸ್ ಶಾಸಕ ರಂಜಿತ್ ಮನೆ ಸೇರಿದಂತೆ 100ಕ್ಕೂ ಹೆಚ್ಚು ಮನೆಗಳನ್ನು ದಂಗೆಕೋರರು ಸುಟ್ಟುಹಾಕಿದ್ದರು. ಈ ಘಟನೆಯ ಬಳಿಕ ದಂಗೆಕೋರರು ತಂಗಿದ್ದ ಶಿಬಿರಕ್ಕೆ ಗ್ರಾಮಸ್ಥರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಇದನ್ನೂ ಓದಿ: ಸತ್ತಿದ್ದಾನೆಂದು ಹೆಣಗಳ ರಾಶಿಯಲ್ಲಿ ಇಟ್ಟಿದ್ದ ಮಗನನ್ನು ಜೀವಂತವಾಗಿ ಹೊರ ತೆಗೆದ ತಂದೆ!

    ಮಣಿಪುರ ರಾಜಧಾನಿ ಇಂಪಾಲ್‌ನಲ್ಲಿ ಭಾರತೀಯ ಸಂವಿಧಾನದಡಿಯಲ್ಲಿ ಮೀಟಿ ಸಮುದಾಯವನ್ನು ಪರಿಶಿಷ್ಟ ಪಂಗಡಗಳಲ್ಲಿ ಸೇರಿಸುವ ಕುರಿತು ಮೈತೇಯಿ ಮತ್ತು ಕುಕಿ ಸಮುದಾಯಗಳ ನಡುವೆ ಮೇ 3ರಂದು ಹಿಂಸಾತ್ಮಕ ಘರ್ಷಣೆಗಳು ಭುಗಿಲೆದ್ದಿದ್ದವು. ಇದನ್ನೂ ಓದಿ: ಒಡಿಶಾ ರೈಲು ದುರಂತವಾಗಿ 4 ದಿನ ಕಳೆದರೂ 101 ಮೃತದೇಹಗಳ ಗುರುತು ಇನ್ನೂ ಪತ್ತೆಯಾಗಿಲ್ಲ