ಧಾರವಾಡ: ದೇಶಕ್ಕೆ ಸುರಕ್ಷತೆ ಮುಖ್ಯ, ನಿಮ್ಮ ರಾಜಕಾರಣವಲ್ಲ. ನಿಮ್ಮ ತುಷ್ಟಿಕರಣದಿಂದಲೇ ಕಾಂಗ್ರೆಸ್ (Congress) ಇವತ್ತು ಈ ಸ್ಥಿತಿಗೆ ಬಂದಿದೆ. ಇನ್ನೂ ಅರ್ಥ ಮಾಡಿಕೊಂಡಿಲ್ಲ ಅಂದ್ರೆ, ನೀವು ಸರ್ವನಾಶ ಆಗಿ ಹೋಗ್ತಿರಾ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಡಿ.ಕೆ ಶಿವಕುಮಾರ್ (DK Shivakumar) ವಿರುದ್ಧ ಕಿಡಿ ಕಾರಿದ್ದಾರೆ.
ಡಿಕೆಶಿ ಟೆರರಿಸ್ಟ್ಗಳಿಗೆ (Terrorist) ಪೂರಕವಾಗಿ ಹೇಳಿಕೆ ಕೊಟ್ಟಿದ್ದು ಅಕ್ಷಮ್ಯ ಅಪರಾಧ. ಮುಸ್ಲಿಂ ವೋಟಿಗಾಗಿ (Muslims Vote) ಕಾಂಗ್ರೆಸ್ ತುಷ್ಟೀಕರಣ ಮಾಡಿದ ಪರಿಣಾಮ ಇಡೀ ದೇಶದಲ್ಲಿ ಕಾಂಗ್ರೆಸ್ ಕಸದ ಬುಟ್ಟಿಗೆ ಸೇರಿದೆ. ಆದ್ರೂ ಅವರಿಗೆ ಬುದ್ಧಿ ಬಂದಿಲ್ಲ. ಕಾಂಗ್ರೆಸ್ ಅಧ್ಯಕ್ಷರಾಗಿ ಬೇಜವಾಬ್ದಾರಿ ಹೇಳಿಕೆ ಕೋಡೊದು ಸರಿಯಲ್ಲ. ನಾನು ಇದನ್ನು ವಿರೋಧಿಸುತ್ತೇನೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ತಿಂಡಿ ಪ್ಯಾಕೆಟ್ನಲ್ಲಿ 500 ರೂ. ನೋಟುಗಳು – ಕಿರಾಣಿ ಅಂಗಡಿಗಳಿಗೆ ಮುಗಿಬಿದ್ದ ಜನ
ಟೆರರಿಸ್ಟ್ಗಳ ಬಗ್ಗೆ ಒಲವು ತೋರುವಂತೆ ಡಿಕೆಶಿ ಮಾತನಾಡಿದ್ದಾರೆ. ದೇಶದಲ್ಲಿ ಮತ್ತೆ ಮುಂಬೈ ಹಾಗೂ ಪುಲ್ವಾಮಾ ದಾಳಿಯಂತೆ ರಕ್ತ ಹರಿಯಬೇಕಿತ್ತಾ? ಹೆಣಗಳು ಬಿಳಬೇಕಾ? ಪೊಲೀಸ್ ಇಲಾಖೆ ಆರೋಪಿಯನ್ನ ಪತ್ತೆಹಚ್ಚಿ ಅನಾಹುತ ತಪ್ಪಿಸಿದ್ದಾರೆ. ಆದ್ರೆ ಕೇವಲ ವೋಟಿಗಾಗಿ ಟೆರರಿಸ್ಟ್ಗಳ ಪರ ಮಾತನಾಡುವುದು ದೇಶಕ್ಕೆ ಅಪಾಯಕಾರಿ. ಡಿಕೆಶಿ ತಮ್ಮ ಹೇಳಿಕೆಯನ್ನು ವಾಪಸ್ ಪಡೆಯದೇ ಇದ್ದರೆ ನಾವು ರಾಜ್ಯಾದ್ಯಂತ ಹೋರಾಟ ಮಾಡ್ತೇವೆ ಎಂದು ಮುತಾಲಿಕ್ ಎಚ್ಚರಿಕೆ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕಾಂಗ್ರೆಸ್ (Congress) ಭಯೋತ್ಪಾದಕರ ಪರವೋ ಅಥವಾ ದೇಶವನ್ನ ಉಳಿಸೋ ದೇಶಭಕ್ತರ ಪರವಾಗಿ ಇದ್ದಾರೋ ಎಂಬುದನ್ನು ಸ್ಪಷ್ಟವಾಗಿ ಹೇಳಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಖಾರವಾಗಿ ಪ್ರಶ್ನಿಸಿದರು.
ವಿಜಯ್ ದಿವಸ್ ಹಿನ್ನೆಲೆಯಲ್ಲಿ ರಾಷ್ಟ್ರೀಯ ಸೈನಿಕ ಸ್ಮಾರಕಕ್ಕೆ ಸಿಎಂ ಗೌರವ ಸಲ್ಲಿಸಿದರು. ಬಳಿಕ ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (D.K.Shivakumar) ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಟ್ರಬಲ್ ಶೂಟರ್ಗೆ ಈಗ ಟ್ರಬಲ್ – `ಕುಕ್ಕರ್ ಬ್ಲಾಸ್ಟ್’ ವಿವಾದದಲ್ಲಿ ಡಿಕೆಶಿ ಏಕಾಂಗಿ?
ಭ್ರಷ್ಟಾಚಾರ ಪ್ರಾರಂಭ ಆಗಿದ್ದೇ ಕಾಂಗ್ರೆಸ್ನಿಂದ. ಶಾರಿಕ್ಗೆ (Shariq) ಮಂಗಳೂರಿನಲ್ಲಿ ಬ್ಲಾಸ್ಟ್ ಮಾಡೋ ಉದ್ದೇಶ ಪಕ್ಕಾ ಇತ್ತು. ಅದಕ್ಕೆ ಎಲ್ಲಾ ತಯಾರಿ ಮಾಡಿದ್ರು. ಡಿ.ಕೆ.ಶಿವಕುಮಾರ್ ಆಕಸ್ಮಿಕ ಅಂತಾರೆ. ಇದು ಅವರಿಗೆ ಶೋಭೆ ತರೋದಿಲ್ಲ. ಚುನಾವಣೆಯ ತುಷ್ಠೀಕರಣದ ತಂತ್ರ ಇದು. ಇದು ಕಾಂಗ್ರೆಸ್ನ ಹಳೆಯ ತಂತ್ರ. ಈಗ ಇದೆಲ್ಲ ನಡೆಯೋದಿಲ್ಲ ಎಂದು ವಾಗ್ದಾಳಿ ನಡೆಸಿದರು.
ಸೋನಿಯಾ, ರಾಹುಲ್, ಖರ್ಗೆ ಅವರು ಉತ್ತರ ಕೊಡಬೇಕು. ಕಾಂಗ್ರೆಸ್ ಯಾರ ಪರ ಅಂತ ಮೊದಲು ಹೇಳಲಿ. ಭಯೋತ್ಪಾದಕರು ಸಾಕ್ಷಿ ಸಮೇತ ಸಿಕ್ಕಾಗ ಆ ಪ್ರಕ್ರಿಯೆಯನ್ನ ಪ್ರಶ್ನೆ ಮಾಡೋದು ಸರಿಯಲ್ಲ. ಡಿ.ಕೆ.ಶಿವಕುಮಾರ್ ಹೇಳಿಕೆ ಬಗ್ಗೆ ಸೋನಿಯಾ ಗಾಂಧಿ, ರಾಹುಲ್, ಖರ್ಗೆ ಮಾತಾಡಲಿ. ಕಾಂಗ್ರೆಸ್ ಪಕ್ಷ ಭಯೋತ್ಪಾದಕರ ಪರವೇ ಎಂಬುದಕ್ಕೆ ಮೊದಲು ಅವರು ಉತ್ತರ ಕೊಡಲಿ ಎಂದು ಹೇಳಿದರು. ಇದನ್ನೂ ಓದಿ: ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇ – ಬಿಜೆಪಿ
ಒಬ್ಬ ವ್ಯಕ್ತಿ ಬಾಂಬ್ಗೆ ಬೇಕಾದ ವಸ್ತುಗಳನ್ನು ಕುಕ್ಕರ್ನಲ್ಲಿ ಹಾಕಿಕೊಂಡು ಹೋಗುವಾಗ ಸ್ಪೋಟವಾಗಿದೆ. ಮಂಗಳೂರಿನಲ್ಲಿ ಸ್ಪೋಟ ಮಾಡೋ ಉದ್ದೇಶ ಸ್ಪಷ್ಟವಾಗಿದೆ. ಅವನು ಹತ್ತು ಹಲವು ಹೆಸರು ಬದಲಾವಣೆ ಮಾಡಿದ್ದ. ಹಿಂದೆ 2-3 ಕೇಸ್ನಲ್ಲಿ ಸಿಕ್ಕಿ ಹಾಕಿಕೊಂಡಿದ್ದಾನೆ. ಅವನು ಭಯೋತ್ಪಾದಕ ಸಂಪರ್ಕ ಇರೋದು ಸಾಬೀತಾಗಿದೆ. ಭಯೋತ್ಪಾದಕರ ಜೊತೆ ಲಿಂಕ್ ಇರೋದು ಸ್ಪಷ್ಟವಾಗಿದೆ. ಕೆಪಿಸಿಸಿ ಅಧ್ಯಕ್ಷರು ಆಕಸ್ಮಿಕ, ಭ್ರಷ್ಟಾಚಾರ ಪ್ರಕರಣ ಮುಚ್ಚಿ ಹಾಕಲು ಹೀಗೆ ಮಾಡಿದ್ದಾರೆ ಅನ್ನೋದು ಸರಿಯಲ್ಲ. ಇದು ಅವರಿಗೆ ಶೋಭೆ ತರಲ್ಲ. ಇದು ಕಾಂಗ್ರೆಸ್ನ ನೀತಿ ಆಗಿದೆ. ಭಯೋತ್ಪಾದಕ ಪ್ರಕರಣಗಳನ್ನು ಕ್ಷುಲ್ಲಕವಾಗಿ ನೋಡೋದು, ಅದಕ್ಕೆ ಬೆಂಬಲ ಕೊಡೋದು ಕಾಂಗ್ರೆಸ್ ಪ್ರವೃತ್ತಿ. ಚುನಾವಣೆಯ ತುಷ್ಠೀಕರಣ ತಂತ್ರ ಇದು. ಹೀಗೆ ಮಾತನಾಡಿದರೆ ಅವರಿಗೆ ಅಲ್ಪಸಂಖ್ಯಾತರ ಮತ ಬರುತ್ತೆ ಅನ್ನೋ ಹಳೆ ತಂತ್ರ ಇದು. ಅದನ್ನ ಬಳಕೆ ಮಾಡಿದ್ದಾರೆ. ಆದರೆ ಜನ ಜಾಗೃತರಾಗಿದ್ದಾರೆ, ಇದನ್ನ ನಂಬೋದಿಲ್ಲ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.
ದೇಶದ ನೈತಿಕತೆ ಕಡಿಮೆ ಮಾಡೋದು, ಪೊಲೀಸರ ನೈತಿಕತೆ ಕಡಿಮೆ ಮಾಡೋದು, ಹೀಗೆ ಮಾತಾಡೋದು ದೇಶಭಕ್ತನ ಕೆಲಸ ಅಲ್ಲ. ಕಾಂಗ್ರೆಸ್ ಪಕ್ಷ ತನ್ನ ನಿಲುವು ಸ್ಪಷ್ಟವಾಗಿ ಹೇಳಲಿ. ಜನರು ಅವರ ಬಗ್ಗೆ ತೀರ್ಮಾನ ಮಾಡ್ತಾರೆ. ಒಂದು ಸಮುದಾಯವನ್ನ ಒಲೈಕೆ ಮಾಡುವ ಕೆಲಸ ಮಾಡ್ತಿದ್ದಾರೆ. ಸಾಕ್ಷಿ ಸಮೇತ ಸಿಕ್ಕಾಗ ತನಿಖೆಯನ್ನ ಪ್ರಶ್ನೆ ಮಾಡೋದು, ಭಯೋತ್ಪಾದಕ ಸಂಘಟನೆಗಳಿಗೆ ಶಕ್ತಿ ತುಂಬುವ ಕೆಲಸ ಮಾಡಿದ ಹಾಗೆ ಆಗುತ್ತೆ. ಕಾಂಗ್ರೆಸ್ ಈ ಬಗ್ಗೆ ತನ್ನ ನಿಲುವು ಹೇಳಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ: ಡಿಕೆಶಿ ಪ್ರಶ್ನೆ
Live Tv
[brid partner=56869869 player=32851 video=960834 autoplay=true]
ವಿವಾದ ಆದ ಕೂಡಲೇ ಡಿಕೆಶಿ ಪರ ಬ್ಯಾಟಿಂಗ್ ಮಾಡಬೇಕಿದ್ದ ಕಾಂಗ್ರೆಸ್ ನಾಯಕರು (Congress Leader) ಸೈಲೆಂಟ್ ಆಗಿದ್ದಾರೆ. ಸಿದ್ದರಾಮಯ್ಯ (Siddaramaiah) ಅವರು ಟ್ವೀಟ್ನಲ್ಲೂ ಉತ್ತರಿಸಿಲ್ಲ. ಜಮೀರ್ ಅಹಮದ್ ಖಾನ್ ನೋ ಕಾಮೆಂಟ್ಸ್ ಎಂದು ಸೈಲೆಂಟ್ ಆಗಿದ್ದಾರೆ. ಡಿಕೆಶಿ ಬಣದ ಸ್ನೇಹಿತರಂತೂ ಏನೂ ಮಾತನಾಡದೇ ಸುಮ್ಮನಿದ್ದಾರೆ. ಇದನ್ನೂ ಓದಿ: ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇ – ಬಿಜೆಪಿ
ಡಿಕೆಶಿ ಏಕಾಂಗಿ ಆಗಿದ್ದೇಕೆ?
ಚುನಾವಣೆ (Election) ಹತ್ತಿರ ಇರೋದ್ರಿಂದ ಉಗ್ರ ಶಾರಿಕ್ ವಿಚಾರದಲ್ಲಿ ಡಿಕೆಶಿ ಪರ ಮಾತನಾಡಿದ್ರೆ ನಮಗೆ ಡ್ಯಾಮೇಜ್ ಆಗುತ್ತೆ ಎಂಬ ಆತಂಕ ಶುರುವಾಗಿದೆ. ಅಲ್ಪಸಂಖ್ಯಾತ ಪರ ಇದ್ದಾರೆ ಎಂಬ ಹಣೆಪಟ್ಟಿ ಸಿಗಬಹುದು ಎಂಬ ಭಯ ಕಾಡುತ್ತಿದೆ. ಆದ್ರೆ ಸಿದ್ದರಾಮಯ್ಯ ಬಣಕ್ಕೆ ಡಿಕೆಶಿ ಇಕ್ಕಟ್ಟಿಗೆ ಸಿಲುಕೋದು ಕೊಂಚ ಸಮಾಧಾನವೇ ತರಿಸಿದೆ. ಹೀಗಾಗಿ ಅವರ ವಿವಾದ ಅವರಿಗೆ ಇರಲಿ ಅಂತ ಸುಮ್ಮನಾಗಿದೆ.
ಡಿಕೆಶಿ ಪರ ಮಾತಾಡಿದ್ರೆ ಕ್ಷೇತ್ರದಲ್ಲಿ ನಮಗೂ ಡ್ಯಾಮೇಜ್ ಆಗಬಹುದು ಎಂಬ ಆತಂಕವಾಗಿದೆ. ಡಿಕೆಶಿ ಹೇಳಿಕೆ ರಾಷ್ಟ್ರಮಟ್ಟದ ವಿವಾದವಾಗಿದ್ದರಿಂದ ಆ ವಿಷಯದಲ್ಲಿ ತಲೆ ಹಾಕೋದು ಬೇಡವೆಂದು ನಾಯಕರು ತಟಸ್ಥತೆ ಕಾಯ್ದುಕೊಂಡಿರುವುದಾಗಿ ಕಾಂಗ್ರೆಸ್ನ ಉನ್ನತ ಮೂಲಗಳು ತಿಳಿಸಿವೆ. ಇದನ್ನೂ ಓದಿ: ತನಿಖೆ ಮಾಡದೇ ಉಗ್ರ ಅಂತ ಹೇಗೆ ಘೋಷಣೆ ಮಾಡಿದ್ರಿ: ಡಿಕೆಶಿ ಪ್ರಶ್ನೆ
ಡಿಕೆಶಿ ಹೇಳಿದ್ದೇನು?
ನಿನ್ನೆ ಪತ್ರಕರ್ತರ ಭವನದಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಮಂಗಳೂರಿನಲ್ಲಿ ನಡೆದ ಕುಕ್ಕರ್ ಸ್ಫೋಟ (Cooker Bomb Blast) ಪ್ರಕರಣದ ಆರೋಪಿ ಶಾರೀಕ್ನನ್ನು ಟೆರರಿಸ್ಟ್ ಎಂದು ಯಾವ ತನಿಖೆಯನ್ನೂ ನಡೆಸದೇ ಹೇಗೆ ಘೋಷಣೆ ಮಾಡಿದ್ದೀರಿ? ಮಂಗಳೂರಿನಲ್ಲಿ ನಡೆದ ಸ್ಫೋಟ ಮುಂಬೈ ಆಟ್ಯಾಕ್ (Mumbai Attack) ಅಥವಾ ಪುಲ್ವಾಮಾ (Polwama), ಕಾಶ್ಮೀರದಲ್ಲಿ ಆದಂತೆ ಆಗಲಿಲ್ಲ. ಅದೇನೋ ಕುಕ್ಕರ್ ಟೆರರಿಸ್ಟ್ ಅಂದುಕೊಂಡು ವೋಟರ್ ಐಡಿ ಹಗರಣವನ್ನು (Voter Id Scam) ಮುಚ್ಚಿ ಹಾಕಿದರು. ತನಿಖೆ ನಡೆಸದೇ ಇದು ಉಗ್ರ ಕೃತ್ಯ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕರು (ADGP) ಅಷ್ಟು ಸ್ಪೀಡ್ ಆಗಿ ಹೇಗೆ ಹೇಳಿದರು ಎಂದು ಪ್ರಶ್ನಿಸಿದ್ದರು.
ಬೆಂಗಳೂರಿನ ವೋಟರ್ ಐಡಿ ಹಗರಣ (Voter ID Scam) ವಿಷಯವನ್ನು ಬಿಜೆಪಿ ಡೈವರ್ಟ್ ಮಾಡಿದೆ. ಶಿವಮೊಗ್ಗಕ್ಕೆ, ಮಂಗಳೂರು, ಮಲೆನಾಡು ಭಾಗಕ್ಕೆ ಯಾಕೆ ತನಿಖೆ ಹೋಗಲ್ಲ. ಎಲ್ಲಾ ಬೆಂಗಳೂರಿನಲ್ಲೇ ತನಿಖೆ ಆಗುತ್ತಿದೆ. ಜನರು ದಡ್ಡರಾ? ಜನರ ಭಾವನೆಗಳ ಮೇಲೆ ಆಟ ಆಡುತ್ತಿದೆ. ಬಿಜೆಪಿ ಸರ್ಕಾರದ ಕೊನೆ ದಿನಗಳು ಬಂದಿದೆ ಇನ್ನೇನು 100 ದಿನ ಇದೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಭೆ ಮಾಡುತ್ತೀರಿ. ಶಿವಮೊಗ್ಗ, ಮಂಗಳೂರು, ಉಡುಪಿ ಕಡೆ ಯಾಕೆ ಯಾರೂ ಬಂಡವಾಳ ಹೂಡಿಕೆ ಮಾಡುತ್ತಿಲ್ಲ. ಶಿವಮೊಗ್ಗದಲ್ಲಿ ಕಮಲದ ರೂಪದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಆಗುತ್ತಿದೆ. ಯಾಕೆ ಆ ಭಾಗದಲ್ಲಿ ಹೂಡಿಕೆ ಆಗುತ್ತಿಲ್ಲ. ಯಾರು ಎಲ್ಲಿ ಹೂಡಿಕೆ ಮಾಡಿದ್ದಾರೆ? ಪಟ್ಟಿಯನ್ನು ಬಿಡುಗಡೆ ಮಾಡಲಿ ಎಂದು ಡಿಕೆಶಿ ಸರ್ಕಾರಕ್ಕೆ ಸವಾಲು ಎಸೆದರು.
Live Tv
[brid partner=56869869 player=32851 video=960834 autoplay=true]
ಮಂಗಳೂರು: ಕುಕ್ಕರ್ ಬಾಂಬ್ ಸ್ಫೋಟ (Cooker Bomb Blast) ದ ಉಗ್ರ ಶಾರೀಕ್ನ ತನಿಖೆ ಮುಂದುವರಿಸಿದ ಎನ್ಐಎ ಅಧಿಕಾರಿಗಳಿಗೆ ಸ್ಫೋಟಕ ಮಾಹಿತಿಗಳು ಸಿಕ್ತಿದೆ. ಆತನ ಹಣದ ಮೂಲ ಜಾಲಾಡಿದ ಅಧಿಕಾರಿಗಳಿಗೆ ಶಾಕ್ ಆಗಿದ್ದು, ಹೆಚ್ಚಿನ ಹಣ (Money) ಡಾಲರ್ ಮೂಲಕ ಅಕೌಂಟ್ಗೆ ಬರುತ್ತಿದ್ದ ದಾಖಲೆ ಸಿಕ್ಕಿದೆ.
ಉಗ್ರ ಮಹಮ್ಮದ್ ಶಾರೀಕ್ (Shariq) ನ ಒಂದೊಂದೇ ಉಗ್ರ ಕೃತ್ಯಗಳು ಬೆಳಕಿಗೆ ಬರುತ್ತಿದೆ. ಆತನ ಉಗ್ರ ಕೃತ್ಯಕ್ಕೆ ವಿದೇಶದಿಂದ ಸಹಕಾರ ಮಾಡುತ್ತಿದ್ದವರು ಡಾಲರ್ ಮೂಲಕ ಆರ್ಥಿಕ ಸಹಾಯ ನೀಡುತ್ತಿರುವ ಬಗ್ಗೆ ಎನ್ಐಎ (NIA) ಅಧಿಕಾರಿಗಳಿಗೆ ಮಾಹಿತಿ ಸಿಕ್ಕಿದೆ. ಮಂಗಳೂರಿನ ಆಸ್ಪತ್ರೆಯಲ್ಲಿ ಇನ್ನೂ ಚಿಕಿತ್ಸೆ ಪಡೆಯುತ್ತಿರುವ ಶಾರೀಕ್ ನನ್ನು ಎನ್ಐಎ ಅಧಿಕಾರಿಗಳು ನಿರಂತರ ವಿಚಾರಣೆ ನಡೆಸುತ್ತಿದ್ದು, ಈ ವೇಳೆ ಆತನ ಹಣದ ಮೂಲವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಆತನ ಡಾರ್ಕ್ ವೆಬ್ನಲ್ಲಿರುವ ಅಕೌಂಟ್ಗೆ ಡಾಲರ್ ನಲ್ಲಿ ಸಾಕಷ್ಟು ಹಣ ಬಂದಿರೋ ದಾಖಲೆ ಲಭ್ಯವಾಗಿದ್ದು, ಅಧಿಕಾರಿಗಳು ಅದರ ಜಾಡು ಹಿಡಿದು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ – ಅಧಿಕೃತವಾಗಿ ಎನ್ಐಎ ತನಿಖೆಗೆ ಹಸ್ತಾಂತರ
ಡಾರ್ಕ್ ವೆಬ್ನಲ್ಲಿರುವ ಶಾರೀಕ್ ಅಕೌಂಟ್ಗೆ ಲಕ್ಷಾಂತರ ಮೌಲ್ಯದ ಡಾಲರ್ ಡೆಪೋಸಿಟ್ ಆಗಿದೆ. ಬಳಿಕ ಅದನ್ನು ಆತ ಭಾರತೀಯ ಕರೆನ್ಸಿಯಾಗಿ ವರ್ಗಾಯಿಸುತ್ತಿದ್ದ. ಆ ಭಾರತೀಯ ಕರೆನ್ಸಿಯನ್ನು ತನ್ನ ಪರಿಚಯಿಸ್ಥರ ಅಕೌಂಟ್ಗೆ ಹಾಕಿಸಿ ಅದನ್ನು ಉಪಯೋಗಿಸುತ್ತಿದ್ದ. ಮೈಸೂರಿನಲ್ಲಿ ತಾನೊಬ್ಬ ಹಿಂದೂ ಎಂದು ಹೇಳಿಕೊಂಡು ಸಾಕಷ್ಟು ಜನರನ್ನು ಪರಿಚಯ ಮಾಡಿಕೊಂಡಿದ್ದು ಅವರ ಅಕೌಂಟ್ಗೆ ಹಣ ವರ್ಗಾವಣೆ ಮಾಡುತ್ತಿದ್ದ. ಸುಮಾರು 100ಕ್ಕೂ ಅಧಿಕ ಮೈಸೂರಿಗರ ಅಕೌಂಟ್ ಹಣ ವರ್ಗಾವಣೆಯಾಗಿದ್ದು, ಎನ್ಐಎ ಅಧಿಕಾರಿಗಳು 40 ಹೆಚ್ಚು ಜನರನ್ನು ವಿಚಾರಣೆ ನಡೆಸಿದ್ದಾರೆ. ಈತನ ಕೃತ್ಯ ತಿಳಿಯದೇ ಇದ್ದ ಸಾಕಷ್ಟು ಜನ ಈತನ ಸ್ನೇಹವನ್ನು ನಂಬಿ ಅಕೌಂಟ್ಗೆ ಹಣ ಹಾಕಿ ಶಾರೀಕ್ ಹೇಳಿದ ಬೇರೆ ಬೇರೆ ಅಕೌಂಟ್ಗೆ ವರ್ಗಾಯಿಸುತ್ತಿದ್ದರು.
ಮೈಸೂರು ಮಾತ್ರವಲ್ಲದೆ ನೆರೆಯ ತಮಿಳುನಾಡು, ಕೇರಳ, ಮಧ್ಯ ಪ್ರದೇಶ, ಜಾರ್ಖಂಡ್ ಸೇರಿದಂತೆ ವಿವಿಧ ರಾಜ್ಯಗಳ ಅಕೌಂಟ್ಗೂ ಈತನ ಹಣ ವರ್ಗಾವಣೆ ಆಗಿದೆ. ಹೀಗಾಗಿ ಎನ್ಐಎ ಅಧಿಕಾರಿಗಳು ಈ ಎಲ್ಲಾ ರಾಜ್ಯದಲ್ಲೂ ತನಿಖೆ ಆರಂಭಿಸಿದ್ದು ಉಗ್ರನ ಜಾಲ ಇಡೀ ದೇಶದಲ್ಲೇ ಪಸರಿಸಿದ ಆತಂಕ ಎದುರಾಗಿದೆ.
Live Tv
[brid partner=56869869 player=32851 video=960834 autoplay=true]
ಮಂಗಳೂರು: ಸೂಸೈಡ್ ಬಾಂಬರ್ ಶಾರೀಕ್ (Cooker Bomb Blast) ಹತ್ಯೆಗೆ ಸಂಚು ನಡೆಯುತ್ತಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಐಸಿಆರ್ ಮಾಡಿದ ಪೋಸ್ಟ್ ನಲ್ಲೇ ಉಗ್ರರು ಈ ಹತ್ಯೆಯ ಸುಳಿವು ನೀಡಿದ್ದಾರೆ. ಇದೇ ಕಾರಣಕ್ಕೆ ಶಾರೀಕ್ ಚಿಕಿತ್ಸೆ ಪಡೆಯಿತ್ತಿರೋ ಆಸ್ಪತ್ರೆಗೆ ಪೊಲೀಸರು ಭಾರೀ ಬಂದೋಬಸ್ತ್ ನೀಡಿದ್ದಾರೆ.
ಕರಾವಳಿಯಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ಆತ್ಮಾಹುತಿ ದಾಳಿಕೋರ ಶಾರೀಕ್ನ ಒಂದೊಂದೇ ಉಗ್ರ ಸತ್ಯಗಳು ಬಯಲಾಗ್ತಿದೆ. ಇದರ ಮಧ್ಯೆ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೀತಿರುವ ಉಗ್ರ ಶಾರೀಕ್ನನ್ನೂ ಹತ್ಯೆಗೆ ಸಂಚಿನ ಬಗ್ಗೆ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ತುಂಗಾತೀರದಲ್ಲಿ ಮಾತ್ರವಲ್ಲ, ಚಾರ್ಮಾಡಿ ತಪ್ಪಲಿನಲ್ಲೂ ನಡೀತಾ ಟ್ರಯಲ್ ಬ್ಲಾಸ್ಟ್?
ಹ್ಯಾಂಡ್ಲರ್ ಗಳು ಸ್ಲೀಪರ್ ಸೆಲ್ಗಳನ್ನು ಆಕ್ಟೀವ್ ಮಾಡಿಸಿ ದಾಳಿ ನಡೆಸೋ ಸಾಧ್ಯತೆ ಇದೆ. ಶಾರೀಕ್ನೊಂದಿಗೆ ಬ್ಯಾಗ್ ಹಾಕಿಕೊಂಡು ಬಂದವನೂ ನಾಪತ್ತೆ ಆಗಿರೋದ್ರಿಂದ ಆತಂಕ ಹೆಚ್ಚಿದೆ. ಹೀಗಾಗಿ ಶಾರೀಕ್ ಚಿಕಿತ್ಸೆ ಪಡೀತಿರೋ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಭದ್ರತೆ ಕಲ್ಪಿಸಲಾಗಿದೆ. ಶಾರೀಕ್ ಕೊಠಡಿ ಪ್ರವೇಶದ ಬಳಿ ಮೆಟಲ್ ಡಿಟೆಕ್ಟರ್ ಅಳವಡಿಸಿದ್ದು, ಉಗ್ರ ಶಾರೀಕ್ ಚಿಕಿತ್ಸೆಗೆ ಸ್ಪಂದಿಸುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಇವಿಷ್ಟೇ ಅಲ್ಲದೇ ಶಾರಿಕ್ ಮೊಬೈಲ್ (Shariq Mobile) ನಲ್ಲಿ ಪತ್ತೆಯಾದ 1,200 ವೀಡಿಯೋಗಳು, ಬಾಂಬ್ ತಯಾರಿಕೆ, ಪ್ರಚೋದನೆ, ಐಸಿಸ್, ಅಲ್ಖೈದಾ ವಿಡಿಯೋ ಬಗ್ಗೆ ಪೊಲೀಸರು ತನಿಖೆ ನಡೆಸ್ತಿದ್ದಾರೆ. ಬಹುತೇಕ ಕ್ಯಾಶ್ ವ್ಯವಹಾರವೇ ಮಾಡುತ್ತಿದ್ದ ಶಾರೀಕ್ ದಿನವಿಡೀ ಮೊಬೈಲ್ನಲ್ಲೇ ವೀಡಿಯೋಗಳನ್ನು ನೋಡ್ತಿದ್ದ. ಮನೆಯವ್ರಿಗೆ ಟಿವಿ ನೋಡಲೂ ಬಿಡುತ್ತಿರಲಿಲ್ವಂತೆ. 4 ವರ್ಷಗಳಿಂದ ಈ ರೀತಿ ವಿಚಿತ್ರವಾಗಿ ವರ್ತಿಸುತ್ತಿದ್ದ ಅಂತ ಶಾರೀಕ್ ಕುಟುಂಬಸ್ಥರು ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾರೆ. ಇದನ್ನೂ ಓದಿ: ಬಾಂಬ್ ತಂದಿದ್ದು ಒಬ್ಬನ್ನಲ್ಲ, ಇಬ್ಬರು- ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು
ಒಟ್ಟಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಅತೀ ಮುಖ್ಯ ಸಾಕ್ಷಿ ಶಾರೀಕ್ನನ್ನು ಜೀವಂತವಾಗಿ ಉಳಿಸಲು ಪೊಲೀಸರು ಮತ್ತು ವೈದ್ಯರು ಶತಾಯಗತಾಯ ಪ್ರಯತ್ನ ಮಾಡುತ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
ಉಡುಪಿ: ಮಂಗಳೂರಿನ ಕುಕ್ಕರ್ (Mangaluru Cooker Bomb Blast) ಬಾಂಬರ್ ಶಾರೀಕ್ನ ಹೆಜ್ಜೆ ಗುರುತು ಕೃಷ್ಣ ನಗರಿಯಲ್ಲೂ ಕಂಡುಬಂದಿದೆ. ಉಡುಪಿಯ ಶ್ರೀಕೃಷ್ಣ ಮಠ (Udupi Sri Krishna Matha) ದ ಆಸು-ಪಾಸು ಓಡಾಡಿದ್ದ ಶಾರೀಕ್, ರಥಬೀದಿಯಲ್ಲಿ, ನಗರದ ಬಸ್ ನಿಲ್ದಾಣದಲ್ಲೆಲ್ಲಾ ಅಡ್ಡಾಡಿದ್ದ. ಅಷ್ಟಕ್ಕೂ ದುಷ್ಕರ್ಮಿ ಶಾರೀಕ್ ಉಡುಪಿಗೆ ಬಂದಿದ್ಯಾಕೆ..? ಕೃಷ್ಣನಗರಿಯಲ್ಲೂ ಶಾರೀಕ್ ಬಾಂಬ್ ಸ್ಕೆಚ್ ಹಾಕಿದ್ನಾ.. ಅನ್ನೋ ಇಂಟ್ರೆಸ್ಟಿಂಗ್ ಸ್ಟೋರಿ ಇಲ್ಲಿದೆ.
ಹೌದು. ಶಂಕಿತ ಉಗ್ರ ಶಾರೀಕ್ (Shariq) ನ ಬಂಡವಾಳ ಬಗೆದಷ್ಟು ಬಯಲಾಗ್ತಿದೆ. ಸದ್ಯ ಆಸ್ಪತ್ರೆ ಬೆಡ್ ಮೇಲೆ ಬಿದ್ದಿರೋ ಪಾಪಿ ವಿಚಾರಣೆಗೆ ಸಹಕರಿಸೋ ಸ್ಥಿತಿಯಲ್ಲಂತೂ ಇಲ್ಲ. ಹೀಗಾಗಿ ಖಾಕಿ ಪಡೆ ಸಿಕ್ಕ ಸಾಕ್ಷ್ಯಗಳ ಭೇದಿಸಿ ಕುಕ್ಕರ್ ಬಾಂಬರ್ ನ ಹಿಸ್ಟರಿ ಹೊರತೆಗೆಯುತ್ತಿದೆ. ಅದರಂತೆ ಶಾರೀಕ್ನ ಮೊಬೈಲ್ ಹಿಡಿದು ಹೊರಟ ಪೊಲೀಸರಿಗೆ ಕೃಷ್ಣ ನಗರಿಯ ಅಡ್ರೆಸ್ ಸಿಕ್ಕಿದೆ. ಇದನ್ನೂ ಓದಿ: ಬಾಂಬ್ ತಂದಿದ್ದು ಒಬ್ಬನ್ನಲ್ಲ, ಇಬ್ಬರು- ತನಿಖೆ ವೇಳೆ ಸ್ಫೋಟಕ ಮಾಹಿತಿ ಬಯಲು
ಮಂಗಳೂರು ಸ್ಪೋಟದ ರೂವಾರಿ ಶಾರೀಕ್, 2022ರ ಅಕ್ಟೋಬರ್ 11ರಂದು ಶ್ರೀಕೃಷ್ಣ ಮಠ ಹಾಗೂ ಉಡುಪಿಯ ರಥಬೀದಿಯಲ್ಲಿ ಸುತ್ತಾಡಿರೋ ಬಗ್ಗೆ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಆಧಾರದಲ್ಲಿ ಮಂಗಳೂರು ಪೋಲಿಸರ ತಂಡ ಉಡುಪಿ ಶ್ರೀ ಕೃಷ್ಣ ಮಠ, ರಥಬೀದಿ ಪರಿಸರದಲ್ಲಿ ತಪಾಸಣೆ ನಡೆಸಿದ್ದಾರೆ. ಉಡುಪಿ ರಥಬೀದಿಯಲ್ಲಿ ಶಾರೀಕ್ ಸುತ್ತಾಡುತ್ತಿದ್ದ ವೇಳೆ ಇಲ್ಲಿಂದಲೇ ಕೆಲವರಿಗೆ ಫೋನ್ ಮಾಡಿದ್ದಾನೆ ಅನ್ನೋದು ಗೊತ್ತಾಗಿದೆ.
ಅದ್ಯಾವಾಗ ಶ್ರೀಕೃಷ್ಣ ಮಠಕ್ಕೂ ಉಗ್ರ ಶಾರೀಕ್ ಭೇಟಿ ನೀಡಿದ್ದ ಎಂಬ ವಿಚಾರ ತಿಳಿಯಿತೋ ಉಡುಪಿಯ ರಥಬೀದಿ ಹಾಗೂ ಉಡುಪಿ ನಾಗರಿಕರಲ್ಲಿ ಆತಂಕ ಮೂಡಿದೆ. ಹಾಗೆ ಶ್ರೀಕೃಷ್ಣ ಮಠಕ್ಕೆ ಭದ್ರತೆಯನ್ನು ಹೆಚ್ಚಿಸಬೇಕು, ಸರ್ಕಾರವೂ ಉನ್ನತ ತಂಡದಿಂದ ಭದ್ರತಾ ಸರ್ವೆ ನಡೆಸಿ ಸೂಕ್ತ ಭದ್ರತೆ ಒದಗಿಸಬೇಕೆಂದು ಉಡುಪಿ ಮಂದಿ ಆಗ್ರಹಿಸಿದ್ದಾರೆ.
ಶಾರೀಕ್ ಉಡುಪಿಗೆ ಬಂದಿದ್ದರ ಜಾಡು ಹಿಡಿದು ಹೊರಟಿರೋ ಪೊಲೀಸರಿಗೆ ಶ್ರೀಕೃಷ್ಣ ಮಠದಲ್ಲಿ ತಿಂಗಳ ಹಿಂದಿನ ಸಿಸಿಟಿವಿ ದೃಶ್ಯಗಳು ಲಭಿಸಿಲ್ಲ. ಹೀಗಾಗಿ ರಥಬೀದಿ ಸುತ್ತಲಿನ, ಅಂಗಡಿ, ಹೊಟೇಲ್ ಲಾಡ್ಜ್ ಗಳ ಸಿಸಿಟಿವಿ ದೃಶ್ಯವಳಿಗಳನ್ನು ಪರಿಶೀಲನೆ ನಡೆಸುತ್ತಿದ್ದು, ಶಾರೀಕ್ಗೂ ಉಡುಪಿಗೂ ಲಿಂಕ್ ಏನು ಅನ್ನೋದರ ಬಗ್ಗೆ ವಿಚಾರಣೆ ಮಾಡ್ತಿದ್ದಾರೆ.
Live Tv
[brid partner=56869869 player=32851 video=960834 autoplay=true]
ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಘಟನೆಯಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕನ ಕುಟುಂಬಕ್ಕೆ ಸರ್ಕಾರದಿಂದ ಸೂಕ್ತ ಪರಿಹಾರ ಕೊಡಲಾಗುವುದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ (Sunil Kumar) ಹೇಳಿದರು.
ನಾಗುರಿ ಬಳಿಯ ಬಾಂಬ್ ಸ್ಫೋಟದ ಜಾಗಕ್ಕೆ ಭೇಟಿ ನೀಡಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಾಂಬ್ ಸ್ಫೋಟದ ಘಟನೆಯನ್ನ ಉಗ್ರವಾಗಿ ಖಂಡಿಸುತ್ತೇವೆ. ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರ ಮಾಡಲಾಗಿದೆ. ಇದರ ಹಿಂದೆ ಯಾರಿದ್ದಾರೆ ಎಂಬ ಬಗ್ಗೆ ತನಿಖೆ ನಡೆಯಲಿದೆ. ಪಿಎಫ್ಐ ನಿಷೇಧದ ಬಳಿಕ ಇಂಥ ಘಟನೆಗೆ ಸರ್ಕಾರ ಕಡಿವಾಣ ಹಾಕಿದೆ ಎಂದರು. ಇದನ್ನೂ ಓದಿ: ಝಾಕೀರ್ ನಾಯ್ಕ್ The Real Inspiration – ಐಸಿಸ್ ಉಗ್ರರಂತೆ ಪೋಸ್ ನೀಡಿ ಪ್ರತೀಕಾರದ ಪ್ರತಿಜ್ಞೆ
ಮಂಗಳೂರು ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯ ನಡೆದ ಸ್ಥಳವನ್ನು ಅಧಿಕಾರಿಗಳೊಂದಿಗೆ ಪರಿಶೀಲಿಸಲಾಯಿತು. ಹಾಗೂ ಸ್ಫೋಟದಿಂದ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಆಟೋ ಚಾಲಕರಾದ ಶ್ರೀ ಪುರುಷೋತ್ತಮ ಪೂಜಾರಿ ಅವರನ್ನು ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಲಾಯಿತು… pic.twitter.com/bo0SEDCY4m
ಸಂಚುಗಳನ್ನ ವಿಫಲಗೊಳಿಸೋ ಕೆಲಸ ಸರ್ಕಾರ ಮಾಡುತ್ತಿದೆ. ಪಿಎಫ್ ಐ (Popular Front Of India) ನಿಷೇಧ ಇದರ ಒಂದು ಭಾಗ, ಸರ್ಕಾರ ಮೃಧು ಧೋರಣೆ ತಳೆದಿಲ್ಲ. ಈ ಘಟನೆಯನ್ನ ಇಡೀ ಸಮಾಜ ನಿಂತು ಎದುರಿಸಬೇಕಿದೆ. ಕದ್ರಿ ದೇವಸ್ಥಾನ (Kadri Temple), ಕೆಲವು ಕಚೇರಿ ಹಾಗೂ ಸಾರ್ವಜನಿಕ ಜಾಗಗಳು ಅವರ ಗುರಿಯಾಗಿತ್ತು. ಹಿಂದೂ ಸಮಾಜ ಟಾರ್ಗೆಟ್ ಮಾಡುವ ಅವರ ಕೆಲಸ ವಿಫಲವಾಗಿದೆ. ಸ್ಥಳೀಯ ಮತ್ತು ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಕೈವಾಡ ಇದೆ. ಇಂಥಹ ಮಾನಸಿಕತೆ ದೂರ ಆಗಬೇಕಿದೆ, ನಾವು ಇಂಥದ್ದನ್ನ ಆಗಲು ಬಿಡಲ್ಲ ಎಂದು ಹೇಳಿದರು.
ತನಿಖೆ ದೃಷ್ಟಿಯಿಂದ ಗೃಹ ಸಚಿವರು ಮೊದಲು ಭೇಟಿ ನೀಡಿದ್ದಾರೆ. ಎನ್.ಐ.ಎ ಘಟಕ ಇಲ್ಲಿ ಇವತ್ತಲ್ಲ ನಾಳೆ ಇಲ್ಲಿ ಆಗುತ್ತೆ. ಕೇಂದ್ರ ಸರ್ಕಾರ ಅದನ್ನ ಪಾಸಿಟಿವ್ ಆಗಿ ಪರಿಶೀಲಿಸ್ತಾ ಇದೆ. ದೇಶದ ಯಾವುದೇ ಭಾಗದಲ್ಲಿ ಇಂಥಹ ವಾತಾವರಣ ಸೃಷ್ಟಿಯಾಗಬಾರದು. ಈ ಘಟನೆಯನ್ನ ಎಲ್ಲರೂ ಖಂಡಿಸಿ ಸಹಕಾರ ಕೊಡೋರ ಬಗ್ಗೆ ಎಚ್ಚರ ವಹಿಸಬೇಕು. ನೆಟ್ಟಾರು ಘಟನೆ, ಎಸ್ ಡಿಪಿಐ ಉಪಟಳ ಎಲ್ಲವನ್ನೂ ಜನ ವಿರೋಧಿಸಿದ್ದಾರೆ. ಅಟೋ ಚಾಲಕನ ಕುಟುಂಬಕ್ಕೆ ಸರ್ಕಾರದ ಕಡೆಯಿಂದ ಸೂಕ್ತ ಪರಿಹಾರ ಕೊಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಶಾರೀಕ್ಗೆ ವೆಂಟಿಲೇಟರ್ನಲ್ಲಿ ಚಿಕಿತ್ಸೆ- 8 ಮಂದಿ ವೈದ್ಯರಿಂದ ನಿಗಾ
ಸದ್ಯ ಸ್ಫೋಟವಾದ ಆಟೋ ರಿಕ್ಷಾವನ್ನು ಪೊಲೀಸರು ತೆಗೆದುಕೊಂಡು ಹೋಗಿದ್ದಾರೆ. ಸ್ಥಳಕ್ಕೆ ಆಗಮಿಸಿ ಕಂಕನಾಡಿ ಪೊಲೀಸರಿಂದ ಮಾಹಿತಿ ಪಡೆದ ಸುನೀಲ್ ಕುಮಾರ್ಗೆ ದ.ಕ ಜಿಲ್ಲಾಧಿಕಾರಿ ರವಿಕುಮಾರ್, ಮೇಯರ್ ಜಯಾನಂದ ಅಂಚನ್ ಸಾಥ್ ನೀಡಿದರು.
Live Tv
[brid partner=56869869 player=32851 video=960834 autoplay=true]
ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ಅನಾಹುತ ತಪ್ಪಿಸಿದ್ದಕ್ಕೆ ದೇವರಿಗೆ ಧನ್ಯವಾದವನ್ನು ಎಡಿಜಿಪಿ ಅಲೋಕ್ ಕುಮಾರ್ (Alok Kumar) ಸಲ್ಲಿಸಿದರು.
ಅಧರ್ಮದ ಹಾದಿಯಲ್ಲಿ ಬಂದವರಿಗೆ ಶಿಕ್ಷೆ ನೀಡಿದ ತುಳುನಾಡಿನ ಅವಳಿ ವೀರ ಪುರುಷರ ಪವಾಡ ಇದಾಗಿದೆ. ಗರೋಡಿ ಕ್ಷೇತ್ರ (Garodi Kshetra) ದ 200 ಮೀಟರ್ ದೂರ ಕುಕ್ಕರ್ ಬಾಂಬ್ ಬ್ಲಾಸ್ಟ್ ಆಗಿದೆ. ದೊಡ್ಡ ಅನಾಹುತ ತಪ್ಪಿಸಿದ್ದೇ ಗರೋಡಿ ಕ್ಷೇತ್ರದ ಕಾರಣಿಕ ಶಕ್ತಿಗಳು ಎಂದು ಭಕ್ತರು ಹೇಳಿದ್ದಾರೆ ಎಂದರು.
ಮಂಗಳೂರಿನ ಗರೋಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರದಲ್ಲಿ ನೆಲೆಯೂರಿರುವ ಕೋಟಿ-ಚೆನ್ನಯ್ಯ ಅವಳಿ ಮಹಾಪುರುಷ ಶಕ್ತಿಗಳು. ದೊಡ್ಡ ಮಟ್ಟದ ಅನಾಹುತ ತಪ್ಪಿಸಿದ್ದು ಈ ಶಕ್ತಿಗಳು. ಮಾನವ ಬಲವೊಂದಿದ್ದರೆ ಸಾಲದು ದೈವಬಲವೂ ಬೇಕು ಅನ್ನೋದಕ್ಕೆ ಸಾಕ್ಷಿ ಎಂದು ತಿಳಿಸಿದರು. ಇದನ್ನೂ ಓದಿ: ಪಂಪ್ವೆಲ್ ಫ್ಲೈ ಓವರ್ ಬಳಿ ಬಾಂಬ್ ಸ್ಟೋಟಿಸಲು ಮುಂದಾಗಿದ್ದ ಶಾರೀಕ್
ಪ್ರತಿ ದಿನ ಬ್ರಹ್ಮಬೈದರ್ಕಳ ಕ್ಷೇತ್ರಕ್ಕೆ ಬಂದು ಆಟೋ ಚಾಲಕ ಪುರುಷೋತ್ತಮ್ ಕೈ ಮುಗಿಯುತ್ತಿದ್ದರು. ಪ್ರತೀ ಆಟೋ ಚಾಲಕರು ಈ ಕ್ಷೇತ್ರದಲ್ಲಿ ಕೈಮುಗಿದು ದಿನ ಆರಂಭ ಮಾಡುತ್ತಿದ್ದರು. ಹೀಗಾಗಿ ಶಕ್ತಿಯೇ ದೊಡ್ಡ ಅನಾಹುತ ತಪ್ಪಿದೆ ಅನ್ನೋದು ಭಕ್ತರ ನಂಬಿಕೆಯಾಗಿದೆ ಎಂದರು.
ಚೇತರಿಕೆ ಕಾಣದ ಶಾರಿಕ್ ಆರೋಗ್ಯ: ಬಾಂಬರ್ ಉಗ್ರ ಶಾರಿಕ್ ಆರೋಗ್ಯ ಇನ್ನೂ ಚೇತರಿಸಿಕೊಂಡಿಲ್ಲ. ಶೇ.45 ರಷ್ಟು ಸುಟ್ಟ ಗಾಯಗಳೊಂದಿಗೆ ಮಹಮ್ಮದ್ ಶಾರಿಕ್ ಚಿಕಿತ್ಸೆ ನೀಡಲಾಗುತ್ತಿದೆ. ಒಂದು ಕಣ್ಣನ್ನು ತೆರೆಯಲು ಸಾಧ್ಯವಾಗದ ಸ್ಥಿತಿಯಲ್ಲಿದ್ದು, ಮತ್ತೊಂದು ಕಣ್ಣು ಕಾಣದೇ ಶಾರಿಕ್ ನರಳಾಡುತ್ತಿದ್ದಾನೆ. ಆದ್ದರಿಂದ ಇನ್ನು ಕೂಡ ಪೊಲೀಸರು ಶಾರಿಕ್ ವಿಚಾರಣೆ ಮಾಡಿಲ್ಲ. ಕೈಗಳು ಸುಟ್ಟಿರೊದ್ರಿಂದ ಬರವಣಿಗೆ ಅಸಾಧ್ಯ. ಹೀಗಾಗಿ ಬರವಣಿಗೆ ಮೂಲಕ ಹೇಳಿಕೆ ಪಡೆಯಲು ಕೂಡ ಸಾಧ್ಯವಾಗಿಲ್ಲ ಎಂದು ಆಸ್ಪತ್ರೆ ಮತ್ತು ಪೊಲೀಸ್ ಮೂಲಗಳ ಮಾಹಿತಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
– ಕುಟುಂಬಸ್ಥರಿಂದ್ಲೇ ಗುರುತು ಪತ್ತೆ
– ಶಿವಮೊಗ್ಗದ ಪ್ರಕರಣದಲ್ಲೂ ಇದ್ದ
ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Blast) ಪ್ರಕರಣದಲ್ಲಿ ಗಾಯಗೊಂಡಿದ್ದ ವ್ಯಕ್ತಿ ತೀರ್ಥಹಳ್ಳಿಯ ಶಾರೀಕ್ (Shariq) ಜಾಗತಿಕ ನೆಟ್ ವರ್ಕ್ ಹೊಂದಿರೋ ಉಗ್ರ ಸಂಘಟನೆಯಿಂದ (Terrorist Groups) ಪ್ರಭಾವಿತನಾಗಿ ಕೃತ್ಯ ಎಸಗಿದ್ದಾನೆ ಎಂದು ಎಡಿಜಿಪಿ ಅಲೋಕ್ಕುಮಾರ್ (ADGP Alok Kumar) ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಿವಮೊಗ್ಗದಿಂದ ಪೊಲೀಸರು (Shivamogga) ಕರೆಸಿಕೊಂಡಿದ್ದ ಮಲತಾಯಿ ಶಬನಾ, ಸೋದರಿ ಆತಿಯಾ, ಚಿಕ್ಕಮ್ಮ ಯಾಸ್ಮಿನ್ ಅವರು ಶಾರೀಕ್ನನ್ನು ಗುರುತು ಹಿಡಿದಿದ್ದಾರೆ. ಈ ಹಿಂದೆ ಶಿವಮೊಗ್ಗದ ಕೇಸ್ನಲ್ಲಿ ಇವನು ಇದ್ದ. ಪೊಲೀಸರ ದಾಳಿ ವೇಳೆ ಶಾರೀಕ್ ಉಳಿದುಕೊಂಡಿದ್ದ ಮೈಸೂರಿನ ಮನೆಯಲ್ಲಿಯೂ ಸ್ಫೋಟಕ ವಸ್ತುಗಳು ಪತ್ತೆಯಾಗಿವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಗ್ರಾಮ ದೈವಗಳೇ ನಮ್ಮ ಊರನ್ನು ಕಾಪಾಡಿವೆ- ಕುಕ್ಕರ್ ಬ್ಲಾಸ್ಟ್ ಆದ ಆಟೋ ಚಾಲಕನ ಸಹೋದರನ ಮಾತು
ಕೊಯಮತ್ತೂರು, ತಮಿಳುನಾಡು (TamilNadu), ಕೇರಳ ಎಲ್ಲೆಡೆ ಸುತ್ತಾಡಿ ಮೈಸೂರಿಗೆ ಬಂದಿದ್ದ. ನಮಗೆ ಮತ್ತೆ ಅವನ ಫೋಟೋ ನೋಡಿ ಶಾರೀಕ್ ಅಂತಾ ಗೊತ್ತಾಗಿತ್ತು. ಆದರೂ ಅವರ ಮನೆಯವರನ್ನ ಕರೆಸಿ ಗುರುತು ಪತ್ತೆ ಮಾಡಿದ್ದೇವೆ. ಅವರ ಮಲತಾಯಿ ಶಬನಾ, ಸಹೋದರಿ ಆಫಿಯಾ, ತಾಯಿ ತಂಗಿ ಯಾಸ್ಮೀನ್ ಅವನ ಗುರುತು ಪತ್ತೆ ಮಾಡಿದ್ದಾರೆಂದು ತಿಳಿಸಿದ್ದಾರೆ. ಇದನ್ನೂ ಓದಿ: ಮಂಗಳೂರು ಬಾಂಬ್ ಬ್ಲಾಸ್ಟ್ಗೆ ನಿಷೇಧಿತ PFI ಲಿಂಕ್ – ಸರ್ಕಾರದ ವಿರುದ್ಧ ಸೇಡು ತೀರಿಸಿಕೊಳ್ಳಲು ಸ್ಕೆಚ್
ನಾವು ಅರಾಫತ್ ಆಲಿ ಮತ್ತು ಮತೀನ್ ಮನೆಯಲ್ಲಿ ಶೋಧ ನಡೆಸಿದ್ದೇವೆ. ಅವರ ಕುಟುಂಬ ಸದಸ್ಯರ ವಿಚಾರಣೆಯನ್ನೂ ನಡೆಸಿದ್ದೇವೆ. ಆದರೆ ಶಾರೀಕ್ಗೆ ಯಾರು ಫಂಡಿಂಗ್ ಮಾಡಿದ್ದಾರೆ ಅನ್ನೋದು ಗೊತ್ತಿಲ್ಲ. 2020ರಲ್ಲಿ ಮಂಗಳೂರಿನಲ್ಲಿ ಗೋಡೆ ಬರಹ ಪ್ರಕರಣ ದಾಖಲಾಗಿತ್ತು. ಅದರಲ್ಲಿ ಅವನ ಮೇಲೆ ಯುಎಪಿಎ ಆಕ್ಟ್ ನಡಿ ಕೇಸ್ ಆಗಿದೆ. ಎ1 ಆರೋಪಿ ಶಾರೀಕ್ ಆಗಿದ್ದ, ಆಗಲೇ ಮನೆಯವರು ಬುದ್ದಿ ಹೇಳಿದ್ದರಂತೆ. ಶಿವಮೊಗ್ಗದಲ್ಲಿ ಜಬೀವುಲ್ಲ ಕೇಸ್ ವಿಚಾರಣೆ ವೇಳೆ ಇವರ ಮಾಹಿತಿ ಗೊತ್ತಾಗಿತ್ತು. ಮುನೀರ್ ಬಂಧನ ಬಳಿಕ ಶಾಕೀರ್ ಟ್ರಯಲ್ ಬ್ಲಾಸ್ಟ್ ಮಾಡಿದ್ದು ಗೊತ್ತಾಗಿದೆ. ಆದರೆ ಇದ್ಯಾವ ವಿಚಾರವೂ ಮೈಸೂರು ಮನೆ ಮಾಲೀಕನಿಗೆ ಗೊತ್ತಿಲ್ಲ. ಮೊನ್ನೆ ಮೈಸೂರಿನಿಂದ ಮಡಿಕೇರಿ ಮಾರ್ಗವಾಗಿ ಬಸ್ ನಲ್ಲಿ ಮಂಗಳೂರಿಗೆ ಒಬ್ಬನೇ ಬಂದಿದ್ದಾನೆ. ನಾವು ಕೊಯಮತ್ತೂರು ಮತ್ತು ತಮಿಳುನಾಡು ಪೊಲೀಸರ ಜೊತೆ ಸಂಪರ್ಕ ಇದ್ದೇವೆ. ಕೊಯಮತ್ತೂರು ಸ್ಪೋಟಕ್ಕೆ ಸಂಪರ್ಕ ಇದೆಯಾ ಅನ್ನೋ ಬಗ್ಗೆ ಸ್ಪಷ್ಟವಾಗಿಲ್ಲ. ಆದರೆ ಕೊಯಮತ್ತೂರು ಮತ್ತು ತಮಿಳುನಾಡಿನ ಅಧಿಕಾರಿಗಳು ಇಲ್ಲಿಗೆ ಬಂದಿದ್ದಾರೆ ಆ ಸ್ಪೋಟ ಸಂಬಂಧ ಲಿಂಕ್ ಇದ್ಯಾ ಅನ್ನೋ ಬಗ್ಗೆಯೂ ತನಿಖೆ ಆಗುತ್ತೆ ಎಂದು ಹೇಳಿದ್ದಾರೆ.
ಈಗಾಗಲೇ ಶಾರೀಕ್ ಸಹೋದರಿಯ ವಿಚಾರಣೆಯೂ ಆಗಿದೆ. ಮೈಸೂರಿನಲ್ಲಿ ಅವನ ಜೊತೆ ಸಂಪರ್ಕ ಇದ್ದ ಇಬ್ಬರನ್ನ ವಶಕ್ಕೆ ಪಡೆದಿದ್ದೇವೆ. ಈ ಕೇಸ್ ನಲ್ಲಿ ಮೈನ್ ಹ್ಯಾಂಡ್ಲರ್ ಮಾಝ್ ಮುನೀರ್ ಇದ್ದಾನ ಗೊತ್ತಿಲ್ಲ, ಏಕೆಂದರೆ ಅವನು ಜೈಲ್ ನಲ್ಲಿ ಇದ್ದಾನೆ. ಅದಕ್ಕೆ ಮೊದಲು ಟ್ರಯಲ್ ಬ್ಲಾಸ್ಟ್ ಜೊತೆಯಾಗಿ ಮಾಡಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.
ಶಾರೀಕ್ ಬಾಂಬ್ ಅನ್ನ ಸರಿಯಾಗಿ ಜೋಡಿಸಿರಲಿಲ್ಲ, ಅದರಲ್ಲಿ ಅವನು ಎಕ್ಸ್ ಪರ್ಟ್ ಆಗಿರಲೂ ಇಲ್ಲ. ಅರ್ಧಂಬರ್ಧ ಬಾಂಬ್ ತಯಾರಿಸಿದ್ದ, ಸರಿಯಾಗಿ ಮಾಡಿಲ್ಲ. ಮೈಸೂರಿನಲ್ಲಿ ಮೊಬೈಲ್ ತಯಾರಿ ಸಂಸ್ಥೆಯಲ್ಲಿ ಕೆಲಸ ಮಾಡ್ತಿದ್ದ ಶಾರಿಕ್, ಪೊಟ್ಯಾಸಿಯಮ್ ನೈಟ್ರೈಟ್, ಸೋಡಿಯಂ, ಅಮೋನಿಯಂ ನಂತಹ ಸ್ಪೋಟಕ ಇತ್ತು. ಇದಕ್ಕೆ ಕೆಲವೊಂದು ಐಟಮ್ ಆನ್ ಲೈನ್ನಲ್ಲಿ, ಕೆಲ ಐಟಂ ನೇರವಾಗಿ ಶಾಪ್ ನಲ್ಲಿ ತೆಗೊಂಡಿದ್ದಾನೆ. ಸಿಮ್ ಕಾರ್ಡ್ ಖರೀದಿಗಾಗಿ ಕೊಯಮತ್ತೂರು ಮೂಲದ ಒಬ್ಬರ ಆಧಾರ್ ಕಾರ್ಡ್ ಬಳಕೆ ಮಾಡಿದ್ದ. ಸದ್ಯ ಕಸ್ಟಡಿಯಲ್ಲಿ ನಾಲ್ಕು ಜನ ಇದ್ದಾರೆ. ಮೂವರು ವಶದಲ್ಲಿದ್ದು, ಒಬ್ಬನನ್ನ ಊಟಿಯಿಂದ ಕರೆ ತರ್ತಾ ಇದೀವಿ. ಇದು ಕರ್ನಾಟಕ ಪೊಲೀಸರ ಸ್ವತಂತ್ರ ತನಿಖೆ, ಆದರೆ ಕೇಂದ್ರ ತನಿಖಾ ದಳದ ಜೊತೆ ಸಂಪರ್ಕದಲ್ಲಿ ಇದ್ದೇವೆ ಎಂದು ವಿವರಿಸಿದ್ದಾರೆ.
ಸದ್ಯ ದೇವರ ದಯೆಯಿಂದ ದೊಡ್ಡ ಅನಾಹುತ ತಪ್ಪಿದೆ. ಮೂರು ತಿಂಗಳಿನಿಂದ ಕರಾವಳಿಯಲ್ಲಿ ಶಾಂತಿ ಇದೆ, ಬಾಂಬ್ ಬ್ಲಾಸ್ಟ್ ಆಗಿದ್ರೆ ಮತ್ತೆ ಕರಾವಳಿಯಲ್ಲಿ ತೊಂದರೆಯಾಗುತ್ತಿತ್ತು. ದೇವರ ದಯೆಯಿಂದ ತೊಂದರೆಯಾಗಿಲ್ಲ ಎಂದು ನಿಟ್ಟುಸಿರು ಬಿಟ್ಟಿದ್ದಾರೆ.
ಶಾರೀಕ್ ಪೂರ್ತಿ ಗುಣಮುಖ ಆಗುವ ಹಾಗೆ ಚಿಕಿತ್ಸೆ ನೀಡಲಾಗುತ್ತಿದೆ. ಆ ಬಳಿಕ ಆತನ ಹೆಚ್ಚಿನ ಮಾಹಿತಿ ಸಿಗಬಹುದು. ಅಲ್ಲಿವರೆಗೆ ಆಟೋ ಚಾಲಕನಿಗೂ ಚೇತರಿಸಿಕೊಳ್ಳಲೂ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಪರಿಹಾರ ನೀಡಲು ಜಿಲ್ಲಾಡಳಿತಕ್ಕೆ ವಿನಂತಿಸಿದ್ದೇವೆ ಎಂದು ತಿಳಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]