Tag: ಕುಕ್ಕರ್‌ ಬಾಂಬ್‌

  • ಶಾರೀಕ್‌ ಬಳಿಯಿದ್ದ ಕುಕ್ಕರ್‌ ಬಾಂಬ್‌ಗೆ ಬಸ್ಸನ್ನೇ ಸ್ಫೋಟಿಸುವ ಸಾಮರ್ಥ್ಯ ಇತ್ತು

    ಶಾರೀಕ್‌ ಬಳಿಯಿದ್ದ ಕುಕ್ಕರ್‌ ಬಾಂಬ್‌ಗೆ ಬಸ್ಸನ್ನೇ ಸ್ಫೋಟಿಸುವ ಸಾಮರ್ಥ್ಯ ಇತ್ತು

    ಮಂಗಳೂರು: ಶಾರೀಕ್‌(Shariq) ಬಳಿ ಇದ್ದಿದ್ದು ಅಂತಿಂಥ ಕುಕ್ಕರ್‌ ಬಾಂಬ್‌(Cooker Bomb) ಅಲ್ಲ. ಆ ಕುಕ್ಕರ್ ಬಾಂಬ್‌ಗೆ  ಇಡೀ ಬಸ್ಸನ್ನೇ(Bus) ಸ್ಪೋಟಿಸುವ ಶಕ್ತಿ ಇತ್ತು ಎಂಬ ಸ್ಫೋಟಕ ವಿಚಾರ ಈಗ ಲಭ್ಯವಾಗಿದೆ.

    ಹೌದು. ರಿಕ್ಷಾದಲ್ಲಿ ಸ್ಫೋಟ(Mangaluru Cooker Bomb Blast Case) ನಡೆದ ಬಳಿಕ ಮಂಗಳೂರಿಗೆ ವಿಧಿ ವಿಜ್ಞಾನ ಪ್ರಯೋಗಾಲಯದ(FSL) ತಜ್ಞರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಪರಿಶೀಲನೆ ನಡೆಸಿದ ತಂಡ ಈ ಬಾಂಬ್‌ ಸಾಮರ್ಥ್ಯದ ಬಗ್ಗೆ ಪ್ರಾಥಮಿಕ ವರದಿಯನ್ನು ಸಲ್ಲಿಸಿದೆ. ಇದನ್ನೂ ಓದಿ: ದೊಡ್ಡ ಅನಾಹುತ ತಪ್ಪಿಸಿದ್ದಕ್ಕೆ ದೇವರಿಗೆ ಧನ್ಯವಾದ: ADGP ಅಲೋಕ್ ಕುಮಾರ್

    ಎಫ್‌ಎಸ್‌ಎಲ್‌ ತಂಡ ನೀಡಿದ ವರದಿಯಲ್ಲಿರುವ ಅಂಶಗಳ ಬಗ್ಗೆ ಪೊಲೀಸ್‌ ಮೂಲಗಳು ಪಬ್ಲಿಕ್‌ ಟಿವಿ ಮಾಹಿತಿ ನೀಡಿವೆ. 3 ಲೀಟರ್ ಕುಕ್ಕರ್ ಒಳಗಡೆ ಸ್ಪೋಟಕದ ಜೆಲ್‌ ಇತ್ತು. ಇದರ ಜೊತೆ ಒಂದು ಡಿಟೋನೇಟರ್, ಪ್ಲಸ್ ಮತ್ತು ಮೈನಸ್ ಕನೆಕ್ಟಿಂಗ್ ಕೂಡ ಇತ್ತು. ಪ್ಲಸ್ ಮತ್ತು ಮೈನಸ್ ಕನೆಕ್ಟ್ ಆಗದೇ ಶಾರ್ಟ್ ಸರ್ಕ್ಯೂಟ್ ಆಗಿದೆ. ಡಿಟೋನೇಟರ್‌ಗೆ ಪವರ್ ಹೋಗದೇ ಕೇವಲ ಜೆಲ್‌ಗೆ ಮಾತ್ರ ಬೆಂಕಿ ತಗುಲಿದೆ. ಜೆಲ್‌ ಹೊತ್ತಿಕೊಂಡು ಉರಿದ ಪರಿಣಾಮ ಸಣ್ಣ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿ ದಟ್ಟವಾದ ಹೊಗೆ ಬಂದಿದೆ. ಇದನ್ನೂ ಓದಿ: ವಾಟ್ಸಪ್‌ ಡಿಪಿಯಲ್ಲಿ ಈಶ್ವರನ ಫೋಟೋ ಹಾಕಿದ್ದ ಉಗ್ರ ಶಾರೀಕ್‌

    ಡಿಟೋನೇಟರ್ ಮತ್ತು ಜೆಲ್ ಎರಡಕ್ಕೇ ಏಕಕಾಲದಲ್ಲಿ ಬೆಂಕಿ ತಗುಲಿದ್ದರೆ ಊಹಿಸಲಾಗದ ಪ್ರಮಾಣದ ಅನಾಹುತ ಸಂಭವಿಸುತ್ತಿತ್ತು. ಒಂದು ವೇಳೆ ಸರಿಯಾಗಿ ಸ್ಫೋಟವಾಗಿದ್ದರೆ ರಿಕ್ಷಾ ರಿಕ್ಷಾವಾಗಿ ಇರುತ್ತಿರಲಿಲ್ಲ. ಸುತ್ತಮುತ್ತಲಿನ ವಾಹನಗಳು ಜಖಂ ಆಗಿ ಬಹಳ ಸಾವು ನೋವು ಸಂಭವಿಸುತ್ತಿತ್ತು. ಒಂದು ಬಸ್‌ ಅನ್ನೇ ಸ್ಫೋಟಿಸುವ ಸಾಮರ್ಥ್ಯ ಆ ಕುಕ್ಕರ್‌ ಬಾಂಬ್‌ಗೆ ಇತ್ತು ಎಂಬ ವಿಚಾರವನ್ನು ಎಫ್‌ಎಸ್‌ಲ್‌ ಉಲ್ಲೇಖಿಸಿದೆ ಎಂದು ಮೂಲಗಳು ತಿಳಿಸಿವೆ.

    Live Tv
    [brid partner=56869869 player=32851 video=960834 autoplay=true]

  • ಉಗ್ರರ ಅಡಗುತಾಣವಾಗ್ತಿದ್ಯಾ ಮಂಗಳೂರು – ಕರಾವಳಿ ಜಿಲ್ಲೆಯಾದ್ಯಂತ ಹೈ ಅಲರ್ಟ್

    ಉಗ್ರರ ಅಡಗುತಾಣವಾಗ್ತಿದ್ಯಾ ಮಂಗಳೂರು – ಕರಾವಳಿ ಜಿಲ್ಲೆಯಾದ್ಯಂತ ಹೈ ಅಲರ್ಟ್

    ಮಂಗಳೂರು: ಆರ್ಥಿಕ ಮತ್ತು ಶೈಕ್ಷಣಿಕವಾಗಿ ಸಮೃದ್ಧವಾಗಿರುವ ದಕ್ಷಿಣ ಕನ್ನಡ ಜಿಲ್ಲೆ ಉಗ್ರರ ಚಟುವಟಿಕೆಗಳ ಕೇಂದ್ರವಾಗಿ ಮಾರ್ಪಾಡಾಗಿದೆ. ಜಲಮಾರ್ಗ, ವಾಯು ಮಾರ್ಗ, ರೈಲ್ವೇ ಬಳಸಿ ಉಗ್ರರು (Terrorist)  ವಿಧ್ವಂಸಕ ಕೃತ್ಯ ನಡೆಸಲು ಮಂಗಳೂರನ್ನು (Mangaluru) ಪ್ರಸಕ್ತ ಜಾಗ ಮಾಡಿಕೊಂಡಿದ್ದಾರೆ. ಬಂದರು ನಗರಿಯ ಮೇಲೆ ಉಗ್ರ ಚಟುವಟಿಕೆ ಕರಿನೆರಳು ಆವರಿಸಿಕೊಳ್ಳಲು ಒಂದು ಕಾರಣವಿದೆ.

    ಕಡಲತಡಿ, ಬಂದರು ನಗರಿ ಪ್ರವಾಸೋದ್ಯಮದ ಜಿಲ್ಲೆ ಎಂಬ ಖ್ಯಾತಿ ಪಡೆದಿತ್ತು. ಏರ್‌ಪೋರ್ಟ್‌, ರೈಲು ಸಂಪರ್ಕ ಮತ್ತು ಬಂದರನ್ನು ಒಳಗೊಂಡಂತೆ ವಾಣಿಜ್ಯ ನಗರಿಯಾಗಿ ಮಂಗಳೂರು ಅಗಾಧವಾಗಿ ಬೆಳೆದಿತ್ತು. ಇಂತಹ ಮಂಗಳೂರಿಗೆ ಈಗ ಉಗ್ರರ ಕರಿ ನೆರಳು ಚಾಚಿದೆ. ಕಳೆದ ಹಲವಾರು ವರ್ಷಗಳಿಂದ ದೇಶದ್ರೋಹಿ ಚಟುವಟಿಕೆಗಳು ರಾಜ್ಯದ ಕರಾವಳಿ ಜಿಲ್ಲೆಯಲ್ಲಿ ಶುರುವಾಗಿದೆ. ಅರಬ್ಬಿ ಸಮುದ್ರದ ತಟದ ನಗರವನ್ನು ವಿದ್ವಂಸಕ ಕೃತ್ಯಗಳಿಗೆ ಬಳಸಲು ಶುರು ಮಾಡಿದ್ದಾರೆ. ಪಕ್ಕದಲ್ಲಿ ಕೇರಳ (Kerala) ರಾಜ್ಯ ಇರುವುದರಿಂದ ದುಷ್ಕೃತ್ಯಗಳನ್ನು ಕರ್ನಾಟಕದ ಗಡಿ ಜಿಲ್ಲೆಗೂ ವಿಸ್ತರಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆ ಕೋಮು ಸೂಕ್ಷ್ಮ ಜಿಲ್ಲೆಯಾಗಿರುವ ಕಾರಣ ಇಲ್ಲಿ ವಿದ್ವಂಸಕ ಕೃತ್ಯಗಳಿಗೆ ಬೆಂಬಲದ ಜೊತೆ ಆರ್ಥಿಕ ಸಹಾಯ ಕೂಡ ಸಿಗುತ್ತಿದೆ. ಇದನ್ನೂ ಓದಿ: ಮಂಗ್ಳೂರು ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿಯ ದೇಹ 45% ಸುಟ್ಟಿದೆ – ಮಾತನಾಡುವ ಪರಿಸ್ಥಿತಿಯಲ್ಲಿಲ್ಲ: ಅಲೋಕ್ ಕುಮಾರ್

    ಶೈಕ್ಷಣಿಕವಾಗಿ ಮುಂದಿರುವ ಬುದ್ಧಿವಂತರ ಜಿಲ್ಲೆಯನ್ನೇ ಟಾರ್ಗೆಟ್‌ ಮಾಡಿ ಉಗ್ರಗಾಮಿ ಚಟುವಟಿಕೆಗಳನ್ನು ಮಾಡುತ್ತಿರುವ ಟೆರರಿಸ್ಟ್‌ಗಳು ತಮ್ಮ ಎಲ್ಲಾ ಕೃತ್ಯಗಳನ್ನು ನಡೆಸಲು ಬೇಕಾದ ವಾತಾವರಣವನ್ನು ಮಂಗಳೂರಿನಲ್ಲಿ ನಿರ್ಮಾಣ ಮಾಡಿಕೊಂಡಿದ್ದಾರೆ. ಆರ್ಥಿಕ ಸಹಾಯದ ಜೊತೆ ಸೂಕ್ತ ಅಡಗು ತಾಣಗಳು ಕೂಡ ಉಗ್ರರಿಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಿಗುತ್ತಿದೆ. ವಿಮಾನ, ರೈಲು, ರಸ್ತೆ ಮತ್ತು ಸಮುದ್ರ ಮೂಲಕ ಸುಲಭವಾಗಿ ತಮ್ಮ ದುಷ್ಟ ಚಟುವಟಿಕೆಗಳನ್ನು ಮಾಡಲು ಸುಲಭ ಮಾರ್ಗಗಳು ಸಿಗುತ್ತಿದೆ. ಇದೀಗ ಮಂಗಳೂರಿನಲ್ಲಿ ನಡೆದ ಮೊದಲ ಸ್ಫೋಟಕ್ಕೆ ಜಿಲ್ಲೆಯ ಜನ ಬೆಚ್ಚಿ ಬಿದ್ದಿದ್ದಾರೆ. ಉತ್ತರ ಭಾರತದ ನಗರಗಳಲ್ಲಿ ನಡೆಯುತ್ತಿದ್ದ ಬ್ಲಾಸ್ಟ್ ನಮ್ಮೂರಿಗೂ ವಕ್ಕರಿಸಿತಾ ಎಂಬ ಆತಂಕದಲ್ಲಿದ್ದಾರೆ. ಇದನ್ನೂ ಓದಿ: ಬೇರೆಲ್ಲೋ ಸ್ಫೋಟವಾಗಬೇಕಿದ್ದ ಕುಕ್ಕರ್ ಬಾಂಬ್ ಹಂಪ್ಸ್ ಕಾರಣದಿಂದ ಆಟೋದಲ್ಲೇ ಬ್ಲಾಸ್ಟ್!

    ಉಗ್ರರನ್ನು ಬೆಂಬಲಿಸಿ ಗೋಡೆ ಬರಹ, ಐಸಿಸ್ ಜೊತೆ ಲಿಂಕ್ ಇದೆ ಎಂಬ ಕಾರಣಕ್ಕೆ ಅನುಮಾನಾಸ್ಪದ ವ್ಯಕ್ತಿಗಳ ಬಂಧನ ವಿಚಾರಣೆ ನಡೆದು, ಮಂಗಳೂರು ಚರ್ಚೆಯಲ್ಲಿದೆ. ಮಂಗಳೂರಲ್ಲಿ ಸ್ಫೋಟ ನಡೆಯುತ್ತಿದ್ದಂತೆ ಕಮಿಷನರೇಟ್ ವ್ಯಾಪ್ತಿ ಮತ್ತು ಕರಾವಳಿ ಜಿಲ್ಲೆಗಳಲ್ಲಿ ಪೊಲೀಸರು ಅಲರ್ಟ್ ಘೋಷಿಸಿದ್ದಾರೆ. ದುಷ್ಕೃತ್ಯ ಮಾಡುವವರನ್ನು ಬುಡಸಮೇತ ಕಿತ್ತು ಹಾಕಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬಂದಿದೆ.

    Live Tv
    [brid partner=56869869 player=32851 video=960834 autoplay=true]

  • ತುಂಗಾ ನದಿಯಲ್ಲಿ ಸ್ಫೋಟ ಮಾಡಿ ಪರಾರಿಯಾದವನು ಮಂಗ್ಳೂರಲ್ಲಿ ಕುಕ್ಕರ್‌ ಬಾಂಬ್‌ ಸಿಡಿಸಿ ಸಿಕ್ಕಿಬಿದ್ದ

    ತುಂಗಾ ನದಿಯಲ್ಲಿ ಸ್ಫೋಟ ಮಾಡಿ ಪರಾರಿಯಾದವನು ಮಂಗ್ಳೂರಲ್ಲಿ ಕುಕ್ಕರ್‌ ಬಾಂಬ್‌ ಸಿಡಿಸಿ ಸಿಕ್ಕಿಬಿದ್ದ

    – ಮಂಗಳೂರು ಸ್ಫೋಟಕ್ಕೆ ಇದೆ ಶಿವಮೊಗ್ಗ ಲಿಂಕ್‌
    – ಪರಾರಿಯಾಗಿದ್ದ ಎ1 ಆರೋಪಿ ಕೊನೆಗೂ ಸಿಕ್ಕಿಬಿದ್ದ

    ಬೆಂಗಳೂರು: ಶಿವಮೊಗ್ಗ ತುಂಗಾ ನದಿ ದಡದಲ್ಲಿ ಬಾಂಬ್‌ ಸ್ಫೋಟ ಪ್ರಕರಣದಲ್ಲಿ ನಾಪತ್ತೆಯಾಗಿದ್ದ ನಟೋರಿಯಸ್‌ ಕ್ರಿಮಿನಲ್‌ ಮಂಗಳೂರಿನಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟ(Mangaluru Cooker Blast) ಮಾಡಿ ಸಿಕ್ಕಿ ಬಿದ್ದಿದ್ದಾನೆ.

    ಹೌದು. ಮಂಗಳೂರಿನಲ್ಲಿ ಬಾಂಬ್‌ ಸ್ಫೋಟ ಮಾಡಿದ್ದ ವ್ಯಕ್ತಿ ನಕಲಿ ಆಧಾರ್‌ ವಿಳಾಸ ನೀಡಿದ್ದ ಬೆನ್ನಲ್ಲೇ ಆತ ಯಾರು? ಆತನ ಮೂಲ ಯಾವುದು ಎನ್ನುವುದರ ಬೆನ್ನು ಬಿದ್ದಿದ್ದ ಪೊಲೀಸರು ಕೊನೆಗೂ ಆತ ಯಾರು ಎಂಬುದನ್ನು ಪತ್ತೆ ಹಚ್ಚಿದ್ದಾರೆ.

    ತುಂಗಾ ನದಿಯ(Tunga River) ತಟದಲ್ಲಿ ಬಾಂಬ್‌ ಸ್ಫೋಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ ಪೊಲೀಸರು ಸೆಪ್ಟೆಂಬರ್‌ 19 ರಂದು ಸಿದ್ದೇಶ್ವರ ನಗರ ನಿವಾಸಿಯಾದ ಸೈಯದ್ ಯಾಸಿನ್‌(21) ಮತ್ತು ಮಂಗಳೂರಿನ ಮಾಜ್‌ ಮುನೀರ್‌ನನ್ನು(22) ಬಂಧಿಸಿದ್ದರು. ಆದರೆ ಈ ಪ್ರಕರಣದ ಪ್ರಮುಖ ಎ1 ಆರೋಪಿಯಾಗಿದ್ದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ಶಾರೀಕ್‌ ನಾಪತ್ತೆಯಾಗಿದ್ದ. ನಾಪತ್ತೆಯಾಗಿದ್ದ ಈತನ ಬಂಧನಕ್ಕೆ ಪೊಲೀಸರು ಸಾಕಷ್ಟು ಬಲೆ ಬೀಸಿದ್ದರೂ ಸಿಕ್ಕಿ ಬಿದ್ದಿರಲಿಲ್ಲ. ಆದರೆ ಈಗ ಮಂಗಳೂರಿನಲ್ಲಿ ಕುಕ್ಕರ್‌ ಬ್ಲಾಸ್ಟ್‌ ಮಾಡಿ ಸಿಕ್ಕಿಬಿದ್ದಿದ್ದಾನೆ.

    ಆಟೋದಲ್ಲಿ ಕುಕ್ಕರ್‌ ಸ್ಫೋಟಗೊಂಡು ಗಂಭೀರ ಗಾಯಗೊಂಡಿದ್ದ  ಶಾರೀಕ್‌ಗೆ ಈಗ ಮಂಗಳೂರಿನ ಫಾದರ್‌ ಮುಲ್ಲರ್ಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಶಿವಮೊಗ್ಗದಲ್ಲಿ ಈ ಗ್ಯಾಂಗ್‌ ಏನು ಮಾಡಿತ್ತು?
    ಬ್ರಿಟಿಷರಿಂದ ಸ್ವಾತಂತ್ರ್ಯ ಸಿಕ್ಕಿದರೂ ನಿಜವಾಗಿಯೂ ಸ್ವತಂತ್ರ ಸಿಕ್ಕಿಲ್ಲ. ನಮಗೆ ಸಂಪೂರ್ಣ ಸ್ವಾತಂತ್ರ್ಯ ಸಿಗಬೇಕಾದರೆ ಭಾರತ ಇಸ್ಲಾಮಿಕ್ ರಾಷ್ಟ್ರ ಆಗಬೇಕು. ಈ ಕಾರಣಕ್ಕೆ ಜಿಹಾದ್‌ ದಾಳಿಗೆ ಬಾಂಬ್‌ ತಯಾರಿಸಲು ಇವರು ಸಿದ್ಧತೆ ನಡೆಸಿದ್ದ ಆತಂಕಕಾರಿ ವಿಚಾರ ಶಿವಮೊಗ್ಗ(Shivamogga) ಪೊಲೀಸ್‌ ತನಿಖೆಯಿಂದ ಬಯಲಾಗಿತ್ತು.

    ಮೂವರು ಐಸಿಸ್‌(ISIS) ವಿಡಿಯೋಗಳಿಂದ ಪ್ರೇರಿತರಾಗಿ ಭಾರತದಲ್ಲೂ ದಾಳಿ ನಡೆಸಲು ಸಿದ್ದತೆ ನಡೆಸುತ್ತಿದ್ದರು. ಮೊಬೈಲ್‌, ವಾಟ್ಸಪ್‌ ಮೂಲಕ ಸಂವಹನ ನಡೆಸದೇ ಟೆಲಿಗ್ರಾಮ್‌, ಸಿಗ್ನಲ್‌ ಇತ್ಯಾದಿ ಮೆಸೆಂಜರ್‌ ಆಪ್‌ ಬಳಸುತ್ತಿದ್ದರು.

    ಐಸಿಸ್‌ ಮಾಧ್ಯಮದ ಸದಸ್ಯರು:
    ಯಾಸಿನ್‌ ಮತ್ತು ಮಾಜ್‌ ಮುನೀರ್‌ ಪಿಯುಸಿ ಸ್ನೇಹಿತರು. ಇವರ ಜೊತೆ ಶಾರೀಕ್ ಐಸಿಸ್‌ ಚಟುವಟಿಕೆಯ ಬಗ್ಗೆ ಮಾಹಿತಿ ಕಳುಹಿಸುತ್ತಿದ್ದ. ಆರೋಪಿಗಳ ಮೊಬೈಲ್‌ನಲ್ಲಿ ಬಾಂಬ್‌ ತಯಾರಿಸುವ ಪಿಡಿಎಫ್‌ ಫೈಲ್‌, ಐಸಿಸ್‌ ಉಗ್ರರು ತಲೆ ಕಡಿಯುವ ಮತ್ತು ಜೀವಂತವಾಗಿ ಸುಡುವ ವೀಡಿಯೋಗಳು ಲಭ್ಯವಾಗಿದೆ. ಇವರು ಐಸಿಸ್‌ ಜೊತೆ ನೇರವಾಗಿ ಸಂವಹನ ನಡೆಸಿರಲಿಲ್ಲ. ಆದರೆ ಐಸಿಸ್‌ ಟೆಲಿಗ್ರಾಮ್‌ ಚಾನೆಲ್‌ನ ಸದಸ್ಯರಾಗಿದ್ದರು.  ಇದನ್ನೂ ಓದಿ: ಕುಕ್ಕರ್‌ ಬಾಂಬ್‌ ಸ್ಫೋಟ – ಮೈಸೂರಿನಲ್ಲಿ ವಾಸ, ರೂಮಿನಲ್ಲಿ ಸ್ಫೋಟಕ ವಸ್ತುಗಳು ಪತ್ತೆ

    ಬಾಂಬ್‌ ತಯಾರಿ:
    ಯಾಸಿನ್‌ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಪದವೀಧರನಾಗಿದ್ದರೆ ಮಾಜ್‌ ಮುನೀರ್‌ ಮೆಕ್ಯಾನಿಕ್‌ ಓದಿದ್ದ. ಹೀಗಾಗಿ ಇವರು ಬಾಂಬ್‌ ತಯಾರಿಸುತ್ತಿದ್ದರು. ಯಾಸಿನ್‌ ರಿಲೆ ಸರ್ಕ್ಯೂಟ್‌, ಟೈಮರ್‌ ಆನ್‌ಲೈನ್‌ನಲ್ಲಿ ಖರೀದಿಸಿದ್ದ. ಅಲ್ಯೂಮಿನಿಯಂ ಪೌಡರ್‌ ಸರ್ಚ್‌ ಮಾಡಿದ್ದ ಆದರೆ ಸಿಕ್ಕಿರಲಿಲ್ಲ. ಬ್ಯಾಟರಿ, ಸ್ವಿಚ್‌ ಜೊತೆ ಸ್ಥಳೀಯವಾಗಿ ಸಿಗುವ ಸ್ಫೋಟಕವನ್ನು ಖರೀದಿ ಮಾಡಿ ಆಗಸ್ಟ್‌ 15ರ ಬಳಿಕ ಗುರುಪುರ–ಪುರಲೆ ಸಮೀಪದ ಅಡಿಕೆ ತೋಟಗಳಿಂದ ಆವೃತವಾದ ತುಂಗಾ ನದಿಯ ದಂಡೆಯಲ್ಲಿ ಪರೀಕ್ಷೆ ಮಾಡಿದ್ದರು. ದೊಡ್ಡ ಪ್ರಮಾಣದಲ್ಲಿ ಸ್ಫೋಟ ನಡೆದಿರಲಿಲ್ಲ. ಆದರೆ ಈ ಸ್ಫೋಟದ ವಿಡಿಯೋವನ್ನು ಮೊಬೈಲಿನಲ್ಲಿ ಸೆರೆ ಹಿಡಿಯಲಾಗಿತ್ತು. ಈ ಪ್ರಯೋಗ ಯಶಸ್ವಿಯಾದ ಹಿನ್ನೆಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಬಾಂಬ್‌ ಸ್ಫೋಟಿಸಲು ತಯಾರಿ ನಡೆಸುತ್ತಿದ್ದರು. ಭಾರತದ ರಾಷ್ಟ್ರ ಧ್ವಜವನ್ನು ಇವರು ಸುಟ್ಟಿದ್ದರು ಅದರ ವೀಡಿಯೋವನ್ನು ಇವರು ಚಿತ್ರೀಕರಿಸಿದ್ದರು.

    ಖಾಫೀರ್‌ ಮೇಲೆ ದಾಳಿ:
    ಇಸ್ಲಾಂ ಮೇಲೆ ದಬ್ಬಾಳಿಕೆ ನಡೆಯುತ್ತಿದೆ. ಹೀಗಾಗಿ ನಮ್ಮನ್ನು ವಿರೋಧಿಸುವ ಖಾಫೀರ್‌ ಮೇಲೆ ಜಿಹಾದ್‌ ಮಾಡಬೇಕು ಎಂಬ ಮನಸ್ಥಿತಿಯನ್ನು ಇವರು ಹೊಂದಿದ್ದರು. ಭಾರತವನ್ನು ಇಸ್ಲಾಮಿಕ್‌ ರಾಷ್ಟ್ರವನ್ನಾಗಿ ಮಾಡುವ ಕನಸು ಕಂಡಿದ್ದರು. ಬೆಂಗಳೂರು, ಬಾಂಬೆ, ಗೋವಾಗೆ ಮೂವರು ಹೋಗಿದ್ದರು. ಸೆರೆ ಸಿಕ್ಕ ಒಂದು ಪೆನ್‌ಡ್ರೈವ್‌ನಲ್ಲಿ ಮತಾಂಧತೆಯನ್ನು ಪ್ರಚೋದಿಸುವ ವೀಡಿಯೋ, ಪಠ್ಯಗಳು ಲಭ್ಯವಾಗಿತ್ತು.

    ಅಂದು ಏನು ಸಿಕ್ಕಿತ್ತು?
    ದಾಳಿ ವೇಳೆ ಒಟ್ಟು 14 ಮೊಬೈಲ್, 1 ಡಾಂಗಲ್, 2 ಲ್ಯಾಪ್‍ಟಾಪ್, 1 ಪೆನ್ ಡ್ರೈವ್, ಇತರೆ ಎಲೆಕ್ಟ್ರಾನಿಕ್ ಸಾಧನಗಳನ್ನು ಜಪ್ತಿ ಮಾಡಲಾಗಿದೆ. ಬಾಂಬ್ ಸ್ಫೋಟ ಮಾಡಿದ ಸ್ಥಳದಲ್ಲಿ ಛಿದ್ರಗೊಂಡ ಬಾಂಬ್ ಅವಶೇಷಗಳು, ಬಾಂಬ್ ತಯಾರಿಸಲು ಬೇಕಾದ ಸಾಮಾಗ್ರಿಗಳು, ರಿಲೆ ಸರ್ಕ್ಯೂಟ್‌, ಬಲ್ಬ್‌ಗಳು, ವಯರ್‌ಗಳು, ಬ್ಯಾಟರಿಗಳು, ಸ್ಫೋಟಕ ವಸ್ತುಗಳು, ಅರ್ಧ ಸುಟ್ಟಿರುವ ರಾಷ್ಟ್ರಧ್ವಜ, ಶಾರೀಕ್‌ ಕೃತ್ಯಕ್ಕೆ ಬಳಸಿದ್ದ ಒಂದು ಮಾರುತಿ ರಿಟ್ಜ್ ಕಾರನ್ನು ವಶಕ್ಕೆ ಪಡೆಯಲಾಗಿತ್ತು.

    ಆರೋಪಿಗಳ ಬಂಧನ ಆಗಿದ್ದು ಹೇಗೆ?
    ಆಗಸ್ಟ್ 15ರಂದು ಸಾವರ್ಕರ್ ಫ್ಲೆಕ್ಸ್ ಹಾಕುವ ವಿಚಾರದಲ್ಲಿ ಅಮೀರ್ ಅಹಮದ್ ವೃತ್ತದಲ್ಲಿ ಘರ್ಷಣೆ ನಡೆದಿತ್ತು. ಈ ಸಂದರ್ಭದಲ್ಲಿ ಬಟ್ಟೆ ಅಂಗಡಿ ನೌಕರ ಪ್ರೇಮ್‌ಸಿಂಗ್‌ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಜಬೀಯುಲ್ಲಾನ ಬಂಧನವಾಗುತ್ತದೆ. ಆತನ ವಿಚಾರಣೆ ಮತ್ತು ಮೊಬೈಲ್‌ ದಾಖಲೆ ಪರಿಶೀಲನೆಯ ವೇಳೆ ಆತ ಹಲವರ ಜೊತೆ ಸಂವಹನ ನಡೆಸಿದ ವಿಚಾರ ತಿಳಿದು ಬರುತ್ತದೆ. ಈ ಆಧಾರದಲ್ಲಿ ತನಿಖೆ ನಡೆಸಿದಾಗ ಆರೋಪಿಗಳ ಕೃತ್ಯ ಬಯಲಾಗಿ ಬಂಧನವಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್‌ ಬಾಂಬ್‌ ಸ್ಫೋಟ – ಮೈಸೂರಿನಲ್ಲಿ ವಾಸ, ರೂಮಿನಲ್ಲಿ ಸ್ಫೋಟಕ ವಸ್ತುಗಳು ಪತ್ತೆ

    ಕುಕ್ಕರ್‌ ಬಾಂಬ್‌ ಸ್ಫೋಟ – ಮೈಸೂರಿನಲ್ಲಿ ವಾಸ, ರೂಮಿನಲ್ಲಿ ಸ್ಫೋಟಕ ವಸ್ತುಗಳು ಪತ್ತೆ

    ಬೆಂಗಳೂರು: ಮಂಗಳೂರಿನಲ್ಲಿ(Mangaluru) ಬಾಂಬ್‌ ಸ್ಫೋಟ ಮಾಡಿದ ವ್ಯಕ್ತಿ ಮೈಸೂರಿನಲ್ಲಿ(Mysuru) ರೂಮ್‌ ಮಾಡಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ.

    ಬಾಂಬ್‌ ಸ್ಫೋಟ ಮಾಡಿದ ವ್ಯಕ್ತಿಯ ಮೂಲವನ್ನು ಪತ್ತೆ ಹಚ್ಚಲು ಪೊಲೀಸರು ಆರಂಭಿಸಿದ್ದಾರೆ. ಮೈಸೂರಿನ ಲೋಕನಾಯಕ ನಗರ, ಮೇಟಗಳ್ಳಿಯಲ್ಲಿರುವ ಸಿಂಗಲ್‌ ರೂಮ್‌ನಲ್ಲಿ ಶಂಕಿತ ವಾಸವಿದ್ದ. ಪೊಲೀಸರು ಗಾಯಗೊಂಡ ವ್ಯಕ್ತಿಯ ಚಿತ್ರವನ್ನು ಮಾಲೀಕ ಮೋಹನ್‌ ಕುಮಾರ್‌ ಅವರಿಗೆ ತೋರಿಸಿದಾಗ ಅವರು, ನಾವು ನೀಡಿದ್ದ ರೂಮಿನಲ್ಲಿ ವಾಸವಿದ್ದ ವ್ಯಕ್ತಿಯೇ ಈತ ಎಂಬುದನ್ನು ಖಚಿತ ಪಡಿಸಿದ್ದಾರೆ.

    ತಿಂಗಳಿಗೆ 1,800 ಬಾಡಿಗೆ ಪಾವತಿಸುತ್ತಿದ್ದ ವ್ಯಕ್ತಿ, ಒಪ್ಪಂದ ಪ್ರತಿಯಲ್ಲಿ ಪ್ರೇಮ್‌ರಾಜ್‌ S/o ಮಾರುತಿ ಮತ್ತು ಹುಬ್ಬಳ್ಳಿಯ ವಿಳಾಸವನ್ನು ನೀಡಿದ್ದ. ಆದರೆ ಈತನಿಗೂ ವಿಳಾಸಕ್ಕೂ ಯಾವುದೇ ಸಂಬಂಧವಿಲ್ಲ. ಆತ ನಕಲಿ ದಾಖಲೆ ನೀಡಿದ್ದಾನೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

    ಈತನ ಕೊಠಡಿಯಲ್ಲಿ ತನಿಖಾ ತಂಡ ಪರಿಶೀಲಿಸಿದಾಗ, ಸ್ಫೋಟಕ ವಸ್ತುಗಳು, ಸರ್ಕ್ಯೂಟ್ ಬೋರ್ಡ್‌ಗಳು, ಸಲ್ಫ್ಯೂರಿಕ್ ಆಸಿಡ್, ಇತರ ಕೆಲವು ರಾಸಾಯನಿಕಗಳು, ಸಣ್ಣ ಬೋಲ್ಟ್‌ಗಳು, ಬ್ಯಾಟರಿಗಳು, ಮೊಬೈಲ್ ಡಿಸ್ಪ್ಲೇಗಳು, ಮರದ ಪುಡಿ, ಅಲ್ಯೂಮಿನಿಯಂ ಫಾಯಿಲ್, ಮಲ್ಟಿಮೀಟರ್, ವೈರ್‌ಗಳು, ಮಿಕ್ಸರ್ ಜಾರ್‌ಗಳು, ಪ್ರೆಶರ್ ಕುಕ್ಕರ್ ಸೀಟಿಗಳು ಇತ್ಯಾದಿಗಳು ಪತ್ತೆಯಾಗಿವೆ.

    ಅಷ್ಟೇ ಅಲ್ಲದೇ ಒಂದು ಮೊಬೈಲ್, ಎರಡು ನಕಲಿ ಆಧಾರ್ ಕಾರ್ಡ್, ಒಂದು ನಕಲಿ ಪ್ಯಾನ್ ಕಾರ್ಡ್, ಒಂದು ಡೆಬಿಟ್ ಕಾರ್ಡ್, ಬಳಕೆಯಾಗದ ಸಿಮ್ ಮತ್ತು ನೋಟ್ ಬುಕ್, ಸರ್ಕ್ಯೂಟ್ ಡ್ರಾಯಿಂಗ್‌ಗಳು ಪತ್ತೆಯಾಗಿವೆ.

    ಇಂದು ಬೆಳಗ್ಗೆ ವಿಧಿವಿಜ್ಞಾನ ತಜ್ಞರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸುತ್ತಿವೆ. ಮನೆಯ ಮಾಲೀಕರು ಏಜೆನ್ಸಿಯ ಜೊತೆ ತನಿಖೆಗೆ ಸಹಕರಿಸುತ್ತಿದ್ದಾರೆ.  ಇದನ್ನೂ ಓದಿ: ಉಗ್ರರು ಮಂಗಳೂರು, ಕೊಯಮತ್ತೂರಿನಲ್ಲಿ ಓಡಾಡಿರುವ ಶಂಕೆ – ಇದೊಂದು ವ್ಯವಸ್ಥಿತ ಜಾಲ ಎಂದ ಸಿಎಂ

    ಕುಕ್ಕರ್‌ ಬಾಂಬ್‌ ಸ್ಫೋಟದಿಂದ(Cooker Bomb Blast) ಶಂಕಿತನ ಶೇ.50ರಷ್ಟು ದೇಹದ ಭಾಗಗಳು ಸುಟ್ಟು ಹೋಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ.

    ಮಂಗಳೂರಿನಲ್ಲಿ ಸಿಕ್ಕಿದ್ದು ಏನು?
    ಆಟೋದಲ್ಲಿ ಕುಕ್ಕರ್ ಸ್ಫೋಟ(Cooker Blast) ಪ್ರಕರಣ ತನಿಖೆಯ ಚುರುಕುಗೊಂಡಿದ್ದು ಪರಿಶೀಲನೆ ವೇಳೆ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿದೆ. ನಟ್, ಬೋಲ್ಟ್‌, ಬ್ಯಾಟರಿ, ಸರ್ಕಿಟ್ ರೀತಿಯ ವೈರಿಂಗ್ ಇರುವ ವಸ್ತುಗಳು ಪತ್ತೆಯಾಗಿದೆ. ಲಘು ತೀವ್ರತೆ ಇರುವ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ. ವಿಧಿವಿಜ್ಞಾನ ಪ್ರಯೋಗಾಲಯ(FSL), ಬಾಂಬ್ ನಿಷ್ಕ್ರೀಯ ದಳದಿಂದ(Bomb Disposal Squad) ತೀವ್ರ ಪರಿಶೀಲನೆ ನಡೆಯುತ್ತಿದೆ.

    [brid partner=56869869 player=32851 video=960834 autoplay=true]