Tag: ಕುಕ್ಕರ್ ಬ್ಲಾಸ್ಟ್

  • ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಉಗ್ರನಿಗೆ ಜೈಲಲ್ಲಿ ಇಡಿ ಡ್ರಿಲ್

    ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಉಗ್ರನಿಗೆ ಜೈಲಲ್ಲಿ ಇಡಿ ಡ್ರಿಲ್

    ಬೆಂಗಳೂರು: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ (Mangaluru Cooker Blast) ಪ್ರಕರಣದ ರೂವಾರಿ, ತುಂಗಾ ತೀರದಲ್ಲಿ ಬಾಂಬ್ ಟ್ರಯಲ್ ಪ್ರಕರಣದ ರೂವಾರಿ ಶಾರಿಕ್‌ನನ್ನ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಡ್ರಿಲ್ ಮಾಡಿದ್ದಾರೆ.

    ಪರಪ್ಪನ ಅಗ್ರಹಾರ (Parappana Agrahara) ಜೈಲಲ್ಲಿ ಶಾರಿಕ್‌ನನ್ನು ಇ.ಡಿ ಅಧಿಕಾರಿಗಳು ವಿಚಾರಣೆ ನಡೆಸಿದ್ದು, ಉಗ್ರರಿಗೆ ಅಕ್ರಮ ಹಣ ಸಂದಾಯ ಆಗಿರುವ ಬಗ್ಗೆ ತನಿಖೆಯಲ್ಲಿ ಗೊತ್ತಾಗಿದೆ. ಕೆಲ ಮುಸ್ಲಿಂ ರಾಷ್ಟ್ರಗಳಿಂದ ಆರೋಪಿಗಳಿಗೆ ಹಣ ಸಂದಾಯ ಆಗಿರೋದು ಎನ್‌ಐಎ ಹಾಗೂ ಇ.ಡಿ ತನಿಖೆ ವೇಳೆ ಅಕ್ರಮ ಹಣದ ವ್ಯವಹಾರ ಬಗ್ಗೆ ಮಾಹಿತಿ ಸಿಕ್ಕಿತ್ತು. ಇದನ್ನೂ ಓದಿ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ಆ.30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

    ಈ ಸಂಬಂಧ ಶಂಕಿತ ಉಗ್ರ ಶಾರಿಕ್ ಹಾಗೂ ಪ್ರಕರಣದ ಇತರ ಆರೋಪಿಗಳ ವಿಚಾರಣೆ ನಡೆಸಲಾಗಿದೆ. ನ್ಯಾಯಾಲಯದ ಅನುಮತಿ ಪಡೆದು ಜೈಲಿಗೆ ಭೇಟಿ ನೀಡಿದ ಇಡಿ ಅಧಿಕಾರಿಗಳು ಜೈಲಿನಲ್ಲಿ ಶಂಕಿತ ಉಗ್ರರ ವಿಚಾರಣೆ ನಡೆಸಿ ಹೋಗಿದ್ದಾರೆ. ಇದನ್ನೂ ಓದಿ: ಪ್ರವಾಹದಲ್ಲಿ ಸಿಲುಕಿದ್ದ 22 ಸಿಆರ್‌ಪಿಎಫ್‌ ಸಿಬ್ಬಂದಿ ರಕ್ಷಿಸಿದ ಸೇನಾ ಹೆಲಿಕಾಪ್ಟರ್‌

  • ಶಾಸಕ ಟಿ.ಡಿ ರಾಜೇಗೌಡ ಹಂಚಿದ್ದ ಕುಕ್ಕರ್ ಬ್ಲಾಸ್ಟ್- ರೊಚ್ಚಿಗೆದ್ದ ಹಳ್ಳಿಗರು

    ಶಾಸಕ ಟಿ.ಡಿ ರಾಜೇಗೌಡ ಹಂಚಿದ್ದ ಕುಕ್ಕರ್ ಬ್ಲಾಸ್ಟ್- ರೊಚ್ಚಿಗೆದ್ದ ಹಳ್ಳಿಗರು

    ಚಿಕ್ಕಮಗಳೂರು: ವಿಧಾನಸಭಾ ಚುನಾವಣಾ (Vidhanasabha Election) ದಿನಾಂಕ ಈಗಾಗಲೇ ಘೊಷಣೆಯಾಗಿದೆ. ಇದಕ್ಕೂ ಮೊದಲು ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರದ ಮತದಾರರನ್ನು ಸೆಳೆಯಲು ಗಿಫ್ಟ್ ಗಳನ್ನು ಹಂಚಿದ್ದಾರೆ. ಆದರೆ ಇದೀಗ ಶೃಂಗೇರಿ ಶಾಸಕ (Sringeri MLA)ರೊಬ್ಬರು ಕೊಟ್ಟ ಗಿಫ್ಟ್ ನಿಂದ ಎಡವಟ್ಟಾಗಿದ್ದು, ಹಳ್ಳಿ ಮಂದಿ ರೊಚ್ಚಿಗೆದ್ದಿದ್ದಾರೆ.

    ಹೌದು. ಶೃಂಗೇರಿ ಶಾಸಕ ಟಿ.ಡಿ. ರಾಜೇಗೌಡ (T.D Rajegowda) ತಮ್ಮ ಕ್ಷೇತ್ರದ ಮತದಾರರಿಗೆ ಕುಕ್ಕರ್ ಹಂಚಿದ್ದರು. ಅಂತೆಯೇ ಕೊಪ್ಪ ತಾಲೂಕಿನ ಶಾನುವಳ್ಳಿಯ ದೇವರಾಜ್ ಎಂಬವರ ಮನೆಯಲ್ಲಿ ಶಾಸಕರು ಕೊಟ್ಟ ಕುಕ್ಕರ್ ನಲ್ಲಿ ತರಕಾರಿ ಬೇಯಿಸಲು ಇಟ್ಟಿದ್ದಾರೆ. ಆದರೆ ಅದು ಬ್ಲಾಸ್ಟ್ ಆಗಿದೆ. ತಾಯಿ-ಮಗು ಹೊರಗಡೆ ಇದ್ದಿದ್ದರಿಂದ ಭಾರೀ ಅನಾಹುತವೊಂದು ತಪ್ಪಿದೆ.

    ಶಾಸಕರು ಕೊಟ್ಟ ಕುಕ್ಕರ್ ಬ್ಲಾಸ್ಟ್ ಆಗಿರುವುದು ಸುದ್ದಿಯಾಗುತ್ತಿದ್ದಂತೆಯೇ ಹಳ್ಳಿ ಮಂದಿ ರೊಚ್ಚಿಗೆದ್ದಿದ್ದಾರೆ. ಕಳಪೆ ಕುಕ್ಕರ್ ನೀಡಿ ಕಾಂಗ್ರೆಸ್ ಜನರ ಜೀವಕ್ಕೆ ಅಪಾಯ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. 450 ರೂ. ಕುಕ್ಕರ್ ಗೆ 1,399 ಲೇಬಲ್ ಅಂಟಿಸಿ ಕಾಂಗ್ರೆಸ್ ಕೊಟ್ಟಿದೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಡಿಜೆ ಸೌಂಡ್ ನಿಲ್ಲಿಸಲು ಹೇಳಿದ್ದಕ್ಕೆ ಗರ್ಭಿಣಿ ಮೇಲೆ ಗುಂಡು ಹಾರಿಸಿದ ನೆರೆಮನೆಯಾತ

  • ಗುಬ್ಬಿಯಲ್ಲಿ ಶಾಸಕರು ಕೊಟ್ಟ ಕುಕ್ಕರ್ ಬ್ಲಾಸ್ಟ್ ಆಗುತ್ತಿವೆ: ಬಿ.ಎಸ್.ನಾಗರಾಜು

    ಗುಬ್ಬಿಯಲ್ಲಿ ಶಾಸಕರು ಕೊಟ್ಟ ಕುಕ್ಕರ್ ಬ್ಲಾಸ್ಟ್ ಆಗುತ್ತಿವೆ: ಬಿ.ಎಸ್.ನಾಗರಾಜು

    ತುಮಕೂರು: ಗುಬ್ಬಿ (Gubbi) ಕ್ಷೇತ್ರದಲ್ಲಿ ಜೆಡಿಎಸ್ (JDS) ಉಚ್ಛಾಟಿತ ಶಾಸಕ ಎಸ್.ಆರ್ ಶ್ರೀನಿವಾಸ್ ಹಂಚುತ್ತಿದ್ದ ಕುಕ್ಕರ್‍ಗಳು ಬ್ಲಾಸ್ಟ್ (Cooker blast) ಆಗುತ್ತಿವೆ. ಈಗಾಗಲೇ ಹಲವರ ಜೀವಕ್ಕೆ ಅಪಾಯ ತಂದಿದೆ. ಅವುಗಳನ್ನು ಯಾರೂ ಬಳಸಬೇಡಿ ಎಂದು ಹೇಳುವ ಮೂಲಕ ಜೆಡಿಎಸ್ ಅಭ್ಯರ್ಥಿ ಬಿ.ಎಸ್.ನಾಗರಾಜು (B.S Nagaraju) ಹೊಸ ಬಾಂಬ್ ಸಿಡಿಸಿದ್ದಾರೆ.

    ಗುಬ್ಬಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಕುಕ್ಕರ್ ಹಂಚುತ್ತಿದ್ದ ಶಾಸಕರನ್ನು ನೋಡಿ ಜನ ನಗುತ್ತಿದ್ದಾರೆ. ನಮ್ಮ ಬಳಿ ಈಗಾಗಲೇ ನಾಲ್ಕೈದು ಕುಕ್ಕರ್‌ಗಳಿವೆ, ಮತ್ತೆ ಇವರು ಹಂಚುತ್ತಿದ್ದಾರೆ ಎಂದು ಜನ ಮಾತಾಡಿಕೊಳ್ಳುತ್ತಿದ್ದಾರೆ. ಈಗಾಗಲೇ ಸೇಫ್ಟಿ ಹೋಲ್ ಸಿಡಿದು ಕೆಲವೆಡೆ ಅನಾಹುತಗಳು ಸಂಭವಿಸಿವೆ. ಜನರ ಸುರಕ್ಷತೆ ಮುಖ್ಯ ಅನ್ನೋದನ್ನು ಮರೆತ ಶಾಸಕರು ನಕಲಿ ಐಎಸ್‍ಐ ಮುದ್ರೆಯಿರುವ 150-200 ರೂ.ಗಳ ಕುಕ್ಕರ್ ಕೊಟ್ಟು ಜನರನ್ನು ಮೂರ್ಖರನ್ನಾಗಿ ಮಾಡುತ್ತಿದ್ದಾರೆ ಎಂದು ದೂರಿದರು. ಇದನ್ನೂ ಓದಿ: ನನ್ನ ವಿರುದ್ಧ ಮಾತನಾಡಿದ ಮಠಾಧೀಶರು ಮೌನವಹಿಸಿದ್ದು ಯಾಕೆ: ಸಿದ್ದು ಪ್ರಶ್ನೆ

    ಮಾರ್ಚ್ 25ರಂದು ನಗರದಲ್ಲಿ ಬೃಹತ್ ಉದ್ಯೋಗಮೇಳ ನಡೆಯಲಿದೆ. 70ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಳ್ಳಲಿವೆ. ಇದರಿಂದಾಗಿ ಜಿಲ್ಲೆಯ ಮೂರರಿಂದ ನಾಲ್ಕು ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ಅನುಕೂಲವಾಗಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಮದ್ಯ ಮಾರಾಟದಿಂದ ಚಿನ್ನದ ಬೆಳೆ ತೆಗೆದ ಸರ್ಕಾರ – 5 ವರ್ಷಗಳಲ್ಲಿ 1 ಲಕ್ಷ ಕೋಟಿ ಆದಾಯ

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಐಸಿಸ್‌ ಜೊತೆ ಲಿಂಕ್‌ – ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನಾಯಕನ ಮಗ ಅರೆಸ್ಟ್‌

    ಐಸಿಸ್‌ ಜೊತೆ ಲಿಂಕ್‌ – ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ನಾಯಕನ ಮಗ ಅರೆಸ್ಟ್‌

    – ರಾಜ್ಯ ನಾಯಕರ ಸ್ಪಷ್ಟನೆ ಕೇಳಿದ ಶಾಸಕ ರಘುಪತಿ ಭಟ್

    ಉಡುಪಿ: ಶಿವಮೊಗ್ಗದಲ್ಲಿ ನಡೆಸಿದ ಟ್ರಯಲ್‌ ಬಾಂಬ್ ಬ್ಲಾಸ್ಟ್ (Shivamogga Trial Blast Case),  ಮಂಗಳೂರಿನ ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣ (Cooker Bomb Blast Case) ಮತ್ತು ಐಸಿಸ್‌ ಜೊತೆ ಸಂಪರ್ಕ ಆರೋಪಕ್ಕೆ ಸಂಬಂಧಪಟ್ಟಂತೆ ರಾಷ್ಟ್ರೀಯ ತನಿಖಾ ದಳ(NIA) ತನಿಖೆಯನ್ನು ಮುಂದುವರಿಸಿದ್ದು, ಇಬ್ಬರು ಆರೋಪಿಗಳ ಹೇಳಿಕೆಯ ಆಧಾರದ ಮೇಲೆ ಉಡುಪಿ ಮೂಲದ ಎಂಜಿನಿಯರಿಂಗ್ ವಿದ್ಯಾರ್ಥಿ ರೇಶಾನ್‌ನನ್ನು(Reshaan) ಬಂಧಿಸಿದೆ.

    ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಮುಖಂಡ(Brahmavara Block Congress Leader) ತಾಜುದ್ದೀನ್ ಶೇಖ್ (Thajuddin Sheikh) ಅವರ ಮಗನನ್ನು ಎನ್‌ಐಎ ಪೊಲೀಸರು ಗುರುವಾರ ಬಂಧಿಸಿದ್ದಾರೆ.  ತಾಜುದ್ದೀನ್ ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿಯಾಗಿದ್ದು, ಮಸೀದಿಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದರು.

    ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌, ಶಾಸಕ ಯುಟಿ ಖಾದರ್ ಜೊತೆಗಿರುವ ಫೋಟೋಗಳು ಸಮಾಜಿಕ ಜಾಲತಾಣದಲ್ಲಿ ವೈರಲಾಗುತ್ತಿದೆ. ಶಿವಮೊಗ್ಗದ ಶಂಕಿತ ಉಗ್ರ ಮಾಝ್ ಮುನೀರ್ ಮತ್ತು ರಿಶಾನ್ ಒಂದೇ ಬ್ಯಾಚ್ ಮತ್ತು ರೂಮ್ ಮೇಟ್ ಆಗಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕ-ಕೇರಳ ಗಡಿಯಲ್ಲಿ ರಿಂಗಣಿಸಿ ಆತಂಕ ಸೃಷ್ಟಿಸಿದ ಸ್ಯಾಟಲೈಟ್ ಫೋನ್

    ಈ ಕುರಿತಂತೆ ಉಡುಪಿಯಲ್ಲಿ ಶಾಸಕ ರಘುಪತಿ ಭಟ್ ಪ್ರತಿಕ್ರಿಯೆ ನೀಡಿದ್ದು, ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಗನ ಬಂಧನವಾಗಿದೆ. ಒಂದೊಂದೇ ಆತಂಕಕಾರಿ ವಿಚಾರಗಳು ತನಿಖೆಯಲ್ಲಿ ಹೊರಗೆ ಬರುತ್ತಿದೆ. ತನಿಖೆಯನ್ನು ಇನ್ನಷ್ಟು ತೀವ್ರಗೊಳಿಸಬೇಕು. ಕರಾವಳಿಯಲ್ಲಿ ಇಂತಹ ನಿಗೂಢ ಚಟುವಟಿಕೆಗಳ ಬಗ್ಗೆ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

    ಹಿಜಬ್‌ (Hijab) ವಿವಾದ ಆದಾಗಲೇ ನಾನು ಇಂತಹ ಆತಂಕ ವ್ಯಕ್ತಪಡಿಸಿದ್ದೆ. ಕರಾವಳಿ ಭಾಗದ ಮೇಲೆ ಎನ್‌ಐಎ ಹೆಚ್ಚಿನ ನಿಗಾ ಇರಿಸಬೇಕು‌. ಬ್ಲಾಕ್ ಕಾಂಗ್ರೆಸ್‌ನಲ್ಲಿ ತಾಜುದ್ದೀನ್ ಸಕ್ರಿಯ ಕಾರ್ಯಕರ್ತ. ಸಿದ್ದರಾಮಯ್ಯ, ಡಿಕೆಶಿ, ಯು ಟಿ ಖಾದರ್ ಪರಮಾಪ್ತ. ರಾಜ್ಯ ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟನೆ ಕೊಡಬೇಕು. ಕಾಂಗ್ರೆಸ್ ಪಕ್ಷ ಇದರ ಜವಾಬ್ದಾರಿಯನ್ನು ಹೊರಬೇಕು. ಕಾಂಗ್ರೆಸ್ ಪ್ರಮೋಷನ್ ಕೊಟ್ಟು ಬ್ಲಾಕ್ ಅಧ್ಯಕ್ಷನನ್ನಾಗಿ ಮಾಡುತ್ತಾ? ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡುತ್ತಾರಾ ಎಂದು ಪ್ರಶ್ನೆ ಮಾಡಿದರು.

    ಕುಟುಂಬದ ಬಗ್ಗೆ ತನಿಖೆ ನಡೆಸಬೇಕು:
    ಕಾಂಗ್ರೆಸ್ ನಾಯಕರ ಜೊತೆಗಿರುವ ಫೋಟೋವನ್ನು ಬಿಡುಗಡೆ ಮಾಡಿದ್ದೇನೆ. ರೇಶಾನ್ ಕುಟುಂಬದ ಬಗ್ಗೆ ಕೂಡಾ ತನಿಖೆ ಮಾಡಬೇಕು. ರೀಶಾನ್‌ ತಾಯಿ ಸರ್ಕಾರಿ ಕಾಲೇಜಿನಲ್ಲಿ ಉಪನ್ಯಾಸಕಿ. ಆಕೆಯ ಮೇಲೆ ಲಿಖಿತ ದೂರನ್ನು ಕೆಲ ತಿಂಗಳ ಹಿಂದೆಯೇ ಶಿಕ್ಷಣ ಸಚಿವ ನಾಗೇಶ್ ಗೆ ನೀಡಲಾಗಿದೆ. ರಾಷ್ಟ್ರೀಯತೆ, ಪ್ರಧಾನಿ ಮೋದಿ ವಿರುದ್ಧ ಕೆಲಸ ಮಾಡುತ್ತಿದ್ದರು. ಕಾಲೇಜು ವಿರುದ್ಧವಾಗಿ ಹೇಳಿಕೆ ಕೊಡುವ ಆಡಿಯೋಗಳನ್ನು ಸಚಿವರಿಗೆ ಕೊಡಲಾಗಿದೆ. ತಾಜುದ್ದೀನ್ ಆರ್ಥಿಕ ಪರಿಸ್ಥಿತಿ ಈ ಹಿಂದೆ ಹದಗೆಟ್ಟಿತ್ತು. ಏಕಾಏಕಿ ಇತ್ತೀಚೆಗೆ ಶ್ರೀಮಂತನಾದ ಬಗ್ಗೆ ಸ್ಥಳೀಯರು ಗುಮಾನಿ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕೂಡಾ ತನಿಖೆ ಆಗಬೇಕು ಎಂದು ಶಾಸಕ ರಘುಪತಿ ಭಟ್ ಆಗ್ರಹಿಸಿದ್ದಾರೆ.

    ಆರೋಪ ಏನು?
    ಐಸಿಸ್ ಸಂಪರ್ಕಿತರಿಂದ ಕ್ರಿಪ್ಟೋ ವ್ಯಾಲೆಟ್‌ ಹಣ ಪಡೆದು ದೊಡ್ಡ ಮಟ್ಟದ ದುಷ್ಕೃತ್ಯ ಮತ್ತು ಚಟುವಟಿಕೆ ನಡೆಸುವವರಿಗೆ ಹಣ ಒದಗಿಸಿದ ಆರೋಪ ರೇಶಾನ್‌ ಮೇಲಿದೆ. ದಾಳಿ ವೇಳೆ ಡಿಜಿಟಲ್ ಸಾಧನ ಮತ್ತು ಹಲವು ದಾಖಲೆಗಳು ಸಿಕ್ಕಿದ್ದು, ದೊಡ್ಡ ದೊಡ್ಡ ಲಿಕ್ಕರ್ ಶಾಪ್, ಗೋಡಾನ್ ಹಾಗೂ ಟ್ರಾನ್ಸ್ ಫರ್ಮರ್‌ಗಳಿಗೆ ಬೆಂಕಿ ಹಚ್ಚಲು ಟಾರ್ಗೆಟ್ ಮಾಡಿದ್ದ ವಿಚಾರ ಬೆಳಕಿಗೆ ಬಂದಿದೆ. ದೇಶದ ಏಕತೆ, ಸಾರ್ವಭೌಮತೆ ಮತ್ತು ಭದ್ರತೆಗೆ ದಕ್ಕೆ ಉಂಟು ಮಾಡಲು ಸಂಚು ರೂಪಿಸಿದ ಆರೋಪಿಗಳನ್ನ ಸದ್ಯ ಎನ್‌ಐಎ ಬಂಧಿಸಿ ವಿಚಾರಣೆ ನಡೆಸುತ್ತಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕುಕ್ಕರ್ ಸ್ಫೋಟ ಕೇಸ್ – ಮಂಗಳೂರಿನ ಎಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ, ಓರ್ವ ವಶ

    ಕುಕ್ಕರ್ ಸ್ಫೋಟ ಕೇಸ್ – ಮಂಗಳೂರಿನ ಎಂಜಿನಿಯರಿಂಗ್ ಕಾಲೇಜ್ ಮೇಲೆ NIA ದಾಳಿ, ಓರ್ವ ವಶ

    ಮಂಗಳೂರು: ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆ ಚುರಕುಕೊಂಡಿದ್ದು, ಎನ್‍ಎಐ (NIA) ಅಧಿಕಾರಿಗಳು ಗುರುವಾರ ಮಂಗಳೂರು (Mangaluru) ಹೊರವಲಯದ ಕೊಣಾಜೆ ಬಳಿಯಿರುವ ಪಿ.ಎ. ಎಂಜಿನಿಯರಿಂಗ್ ಕಾಲೇಜಿನ (PA Engineering College) ಮೇಲೆ ದಾಳಿ ನಡೆಸಿದ್ದಾರೆ.

    ಮಂಗಳೂರಿನ ಕುಕ್ಕರ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಿರುವ ಶಂಕಿತ ಉಗ್ರ ಶಾರೀಕ್‍ನನ್ನು (Shariq) ವಿಚಾರಣೆಗೆ ಒಳಪಡಿಸಿದ್ದ ವೇಳೆ ಸಾಕಷ್ಟು ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಪಿಎ ಎಂಜಿನಿಯರಿಂಗ್ ಕಾಲೇಜ್ ಮೇಲೆ 7 ಮಂದಿ ಎನ್‍ಐಎ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

    ದಾಳಿಯ ಬಳಿಕ ಅಂತಿಮ ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಎನ್‍ಐಎ ವಶಕ್ಕೆ ಪಡೆದುಕೊಂಡಿದೆ. ಈ ವೇಳೆ ವಶಕ್ಕೆ ಪಡೆದ ವಿದ್ಯಾರ್ಥಿಯನ್ನು ಉಡುಪಿ ಮೂಲದ ರಿಹಾನ್ ಶೇಖ್ ಎಂದು ಗುರುತಿಸಲಾಗಿದೆ.

    ದಾಳಿ ಯಾಕೆ?: ಈ ಕಾಲೇಜಿನಲ್ಲಿ ಶಿವಮೊಗ್ಗ ಟ್ರಯಲ್ ಬ್ಲಾಸ್ಟ್‌ನ ಆರೋಪಿ ಮಾಝ್ ಮುನೀರ್ ಶಿಕ್ಷಣ ಪಡೆದಿದ್ದು, ಈ ವೇಳೆ ಕಾಲೇಜಿನಲ್ಲಿ ಉಗ್ರ ಚಟುವಟಿಕೆಯ ಪ್ಲಾನ್ ನಡೆಸಿರುವ ಮಾಹಿತಿ ದೊರೆತಿದೆ. ಶಂಕಿತ ಉಗ್ರ ಮಾಝ್ ಮುನೀರ್ ಮಂಗಳೂರು ನಗರದ ಬಲ್ಮಠದಲ್ಲಿ ವಾಸವಾಗಿದ್ದುಕೊಂಡು ಪಿ.ಎ ಕಾಲೇಜಿನಲ್ಲಿ ಇಂಜಿನಿಯರಿಂಗ್ ಮಾಡುತ್ತಿದ್ದ. ಇದನ್ನೂ ಓದಿ: ನನ್ನನ್ನ `ಟಗರು’ ಅಂತಾರೆ, ನಾನು ಯಾರಿಗೆ ಗುಮ್ಮಿದ್ದೇನೆ – ಸಿದ್ದು ಪ್ರಶ್ನೆ

    ಮಾಝ್ ಜೊತೆ ಉಗ್ರ ಚಟುವಟಿಕೆಯಲ್ಲಿ ರಿಹಾನ್ ಶೇಖ್ ಕೂಡ ಭಾಗಿಯಾಗಿದ್ದರ ಹಿನ್ನೆಲೆಯಲ್ಲಿ ಆತನನ್ನು ವಶಕ್ಕೆ ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಲೇಜಿನಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟಕ್ಕೂ ನಂಟು ಸಾಧ್ಯತೆಯಿದ್ದು, ಸದ್ಯ ಶಿವಮೊಗ್ಗ ಕೇಸ್ ಸಂಬಂಧಿಸಿದಂತೆ ಪಿ.ಎ ಕಾಲೇಜಿನಲ್ಲಿ ತನಿಖೆ ನಡೆಯುತ್ತಿದೆ. ಇದನ್ನೂ ಓದಿ: ಜೋಶಿಮಠದಲ್ಲಿ ಬಿರುಕು ಬಿಟ್ಟ 500ಕ್ಕೂ ಹೆಚ್ಚು ಮನೆಗಳು – ನಗರ ಮುಳುಗುವ ಆತಂಕದಲ್ಲಿ ಜನರು

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಶಾರಿಕ್‌ನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು

    ಶಾರಿಕ್‌ನನ್ನು ವಶಕ್ಕೆ ಪಡೆದ NIA ಅಧಿಕಾರಿಗಳು

    ಮಂಗಳೂರು : ಮಂಗಳೂರಿನ (Mangaluru) ಕುಕ್ಕರ್ ಬ್ಲಾಸ್ಟ್ ಪ್ರಕರಣದ ಪ್ರಮುಖ ಆರೋಪಿ ಆಗಿರುವ ಶಂಕಿತ ಉಗ್ರ ಶಾರಿಕ್‌ನನ್ನು NIA ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangaluru Cooker Bomb Blast) ಬಳಿಕ ಶಾರಿಕ್‌ ಗಂಭೀರವಾಗಿ ಗಾಯಗೊಂಡಿದ್ದ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಕಮಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಉಗ್ರ ಶಾರಿಕ್ (Shariq) ಚಿಕಿತ್ಸೆ ಪಡೆಯುತ್ತಿದ್ದ. ಅಷ್ಟೇ ಅಲ್ಲದೇ ಆತನಿಗೆ NIA ಅಧಿಕಾರಿಗಳು ಭದ್ರತೆಯನ್ನು ನೀಡಿದ್ದರು. ಮೊನ್ನೆಯಷ್ಟೇ ಶಾರಿಕ್‌ ನಡೆಯುವ ಸ್ಥಿತಿಗೆ ತಲುಪಿದ್ದ. ಈ ವೇಳೆ ಆಸ್ಪತ್ರೆಯಲ್ಲೇ NIA ಅಧಿಕಾರಿಗಳು ಶಾರಿಕ್‌ನನ್ನು ವಿಚಾರಣೆ ನಡೆಸಿದ್ದರು.

    ಆದರೆ ಇಂದು ಬೆಳ್ಳಂ ಬೆಳಿಗ್ಗೆ ಶಾರಿಕ್‌ನನ್ನು NIA ಅಧಿಕಾರಿಗಳು ವಶಕ್ಕೆ ಪಡೆದು ಬೆಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಇನ್ನೂ ಮಂಗಳೂರಿನಲ್ಲಿ ನಡೆದ ಕುಕ್ಕರ್‌ ಬ್ಲಾಸ್ಟ್‌ಗೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ NIA ಅಧಿಕಾರಿಗಳು ವಿಚಾರಣೆ ಮುಂದುವರಿಸಲಿದ್ದಾರೆ.

    ಘಟನೆಯೇನು?: ಇತ್ತೀಚೆಗೆ ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡು ಕುಕ್ಕರ್‌ ಮುಚ್ಚಳ ಶಾರಿಕ್‌ ಕುತ್ತಿಗೆಗೆ ಬಡಿದಿತ್ತು. ಇದರಿಂದಾಗಿ ಶಾರಿಕ್‌ನ ಕೈ, ದೇಹಕ್ಕೆ ಬೆಂಕಿ ಬಿದ್ದರಿಂದ ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಸಾಧ್ಯತೆಯಿತ್ತು. ಇನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿತ್ತು. ಇದನ್ನೂ ಓದಿ: ಉಗ್ರನನ್ನು ಉಗ್ರ ಎನ್ನದೇ ಡಿಕೆಶಿಯವರ ಹಾಗೆ ʼನಮ್ಮ ಬ್ರದರ್ಸ್ʼ ಎನ್ನಬೇಕಿತ್ತೇ – ಬಿಜೆಪಿ

    ಶಾರಿಕ್ ತಂದಿದ್ದು ಅಂತಿಂಥ ಬಾಂಬ್ ಅಲ್ಲ. ಆ ಕುಕ್ಕರ್ ಬಾಂಬ್‍ಗೆ ಇಡೀ ಬಸ್ಸನ್ನೇ ಸ್ಫೋಟಿಸುವ ಪವರ್ ಇತ್ತಂತೆ. 3 ಲೀಟರ್ ಕುಕ್ಕರ್ ತುಂಬಾ ಸ್ಫೋಟಕದ ಜೆಲ್ ತಂದಿದ್ದ. ಡಿಟೋನೆಟರ್ ಕೂಡ ಇದ್ದು ಪ್ಲಸ್ ಮತ್ತು ಮೈನಸ್ ಕನೆಕ್ಟಿಂಗ್ ಕೂಡ ಇತ್ತಂತೆ, ಪ್ಲಸ್ ಮತ್ತು ಮೈನಸ್ ಕನೆಕ್ಟ್ ಆಗದೆ ಶಾರ್ಟ್ ಸರ್ಕ್ಯೂಟ್ ಆಗಿ ಜೆಲ್‍ಗೆ ಬೆಂಕಿ ಹೊತ್ತಿಕೊಂಡು ಘಟನೆ ಸಂಭವಿಸಿದೆ. ಒಂದ್ವೇಳೆ ಡಿಟೊನೇಟರ್ ಮತ್ತು ಜೆಲ್ ಎರಡೂ ಒಂದೇ ಬಾರಿಗೆ ಸ್ಫೋಟಿಸಿದರೆ ಭಯಾನಕ ಘಟನೆಯೇ ನಡೆದು ಹೋಗ್ತಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಶಾರೀಕ್ ಆರೋಗ್ಯದಲ್ಲಿ ಶೇ.80ರಷ್ಟು ಚೇತರಿಕೆ – ನಡೆದಾಡುವ ಸ್ಥಿತಿಗೆ ಬಂದ ಉಗ್ರ

    Live Tv
    [brid partner=56869869 player=32851 video=960834 autoplay=true]

  • ಶಾರೀಕ್ ಆರೋಗ್ಯದಲ್ಲಿ ಶೇ.80ರಷ್ಟು ಚೇತರಿಕೆ – ನಡೆದಾಡುವ ಸ್ಥಿತಿಗೆ ಬಂದ ಉಗ್ರ

    ಶಾರೀಕ್ ಆರೋಗ್ಯದಲ್ಲಿ ಶೇ.80ರಷ್ಟು ಚೇತರಿಕೆ – ನಡೆದಾಡುವ ಸ್ಥಿತಿಗೆ ಬಂದ ಉಗ್ರ

    ಮಂಗಳೂರು: ಮಂಗಳೂರು (Mangaluru) ಕುಕ್ಕರ್ ಬಾಂಬ್ ಬ್ಲಾಸ್ಟ್ ಪ್ರಕರಣದ ಆರೋಪಿ ಶಾರೀಕ್ (Shariq) ಆರೋಗ್ಯದಲ್ಲಿ ಶೇ. 80ರಷ್ಟು ಚೇತರಿಕೆ ಕಂಡಿದೆ.

    ಮಂಗಳೂರಿನ ಕಮಕನಾಡಿಯ ಖಾಸಗಿ ಆಸ್ಪತ್ರೆಯಲ್ಲಿ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ (Mangaluru Cooker Bomb Blast) ದ ರೂವಾರಿ ಉಗ್ರ ಶಾರೀಕ್ ಚಿಕಿತ್ಸೆ ಪಡೆಯುತ್ತಿದ್ದು, ನಡೆಯುವ ಸ್ಥಿತಿಗೆ ತಲುಪಿದ್ದಾನೆ. ಈ ಹಿನ್ನೆಲೆಯಲ್ಲಿ ಎನ್‍ಐಎ (NIA) ಅಧಿಕಾರಿಗಳು ಇಂದು ವೈದ್ಯರ ಸಮ್ಮತಿಯ ಮೇರೆಗೆ ಶಾರೀಕ್‍ನನ್ನು ವಶಕ್ಕೆ ಪಡೆಯುವ ಸಾಧ್ಯತೆಯಿದೆ. ಅಷ್ಟೇ ಅಲ್ಲದೇ ಪೊಲೀಸ್ ಬಿಗಿ ಭದ್ರತೆಯನ್ನು ಒದಗಿಸಲಾಗಿದೆ.

    ಘಟನೆಯೇನು?: ಇತ್ತೀಚೆಗೆ ಮಂಗಳೂರಿನಲ್ಲಿ ರಿಕ್ಷಾದಲ್ಲಿ ಸ್ಫೋಟಗೊಂಡು ಕುಕ್ಕರ್‌ ಮುಚ್ಚಳ ಶಾರೀಕ್‌ ಕುತ್ತಿಗೆಗೆ ಬಡಿದಿತ್ತು. ಇದರಿಂದಾಗಿ ಶಾರೀಕ್‌ನ ಕೈ, ದೇಹಕ್ಕೆ ಬೆಂಕಿ ಬಿದ್ದರಿಂದ ಯಾವುದೇ ಕ್ಷಣದಲ್ಲಿ ಸೋಂಕು ತಗುಲಿ ಆರೋಗ್ಯ ಏರುಪೇರಾಗುವ ಸಾಧ್ಯತೆಯಿತ್ತು. ಇದನ್ನೂ ಓದಿ: ಭಾರತ್‌ ಜೋಡೋ ಯಾತ್ರೆಯಲ್ಲಿ RBI ಮಾಜಿ ಗವರ್ನರ್‌ ಭಾಗಿ

    ಇನ್ನು ವಿಧಿ ವಿಜ್ಞಾನ ಪ್ರಯೋಗಾಲಯ (FSL) ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿತ್ತು. ಶಾರಿಕ್ ತಂದಿದ್ದು ಅಂತಿಂಥ ಬಾಂಬ್ ಅಲ್ಲ. ಆ ಕುಕ್ಕರ್ ಬಾಂಬ್‍ಗೆ ಇಡೀ ಬಸ್ಸನ್ನೇ ಸ್ಫೋಟಿಸುವ ಪವರ್ ಇತ್ತಂತೆ. 3 ಲೀಟರ್ ಕುಕ್ಕರ್ ತುಂಬಾ ಸ್ಫೋಟಕದ ಜೆಲ್ ತಂದಿದ್ದ. ಡಿಟೋನೇಟರ್ ಕೂಡ ಇದ್ದು ಪ್ಲಸ್ ಮತ್ತು ಮೈನಸ್ ಕನೆಕ್ಟಿಂಗ್ ಕೂಡ ಇತ್ತಂತೆ, ಪ್ಲಸ್ ಮತ್ತು ಮೈನಸ್ ಕನೆಕ್ಟ್ ಆಗದೆ ಶಾರ್ಟ್ ಸರ್ಕ್ಯೂಟ್ ಆಗಿ ಜೆಲ್‍ಗೆ ಬೆಂಕಿ ಹೊತ್ತಿಕೊಂಡು ಘಟನೆ ಸಂಭವಿಸಿದೆ. ಒಂದ್ವೇಳೆ ಡಿಟೊನೇಟರ್ ಮತ್ತು ಜೆಲ್ ಎರಡೂ ಒಂದೇ ಬಾರಿಗೆ ಸ್ಫೋಟಿಸಿದರೆ ಭಯಾನಕ ಘಟನೆಯೇ ನಡೆದು ಹೋಗ್ತಿತ್ತು ಎಂಬ ಮಾಹಿತಿ ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಉಗ್ರ ಶಾರೀಕ್‍ಗೆ ಹರಿದು ಬರುತ್ತಿತ್ತು ಡಾಲರ್ ಮನಿ – ಕರೆನ್ಸಿ ವರ್ಗಾಯಿಸಿದ 40ಕ್ಕೂ ಅಧಿಕ ಜನರ ವಿಚಾರಣೆ

    Live Tv
    [brid partner=56869869 player=32851 video=960834 autoplay=true]

  • ಹಿಂದೂಗಳನ್ನ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ: ಕಲ್ಲಡ್ಕ ಪ್ರಭಾಕರ್

    ಹಿಂದೂಗಳನ್ನ ನಾಶ ಮಾಡುವ ಪ್ರಯತ್ನ ನಡೆಯುತ್ತಿದೆ: ಕಲ್ಲಡ್ಕ ಪ್ರಭಾಕರ್

    ರಾಮನಗರ: ಹಿಂದೂಗಳನ್ನು ನಾಶ ಮಾಡುವ ಪ್ರಯತ್ನ ದೊಡ್ಡ ಮಟ್ಟದಲ್ಲಿ ನಡೆಯುತ್ತಿದೆ ಎಂದು ಆರ್‌ಎಸ್ಎಸ್ (RSS) ಮುಖಂಡ ಕಲ್ಲಡ್ಕ ಪ್ರಭಾಕರ್ (Kalladka Prabhakar Bhat) ಕಳವಳ ವ್ಯಕ್ತಪಡಿಸಿದರು.

    ಮಂಗಳೂರಿನಲ್ಲಿ (Mangaluru) ನಡೆದ ಕುಕ್ಕರ್ ಬ್ಲ್ಯಾಸ್ಟ್ (Cooker Blast) ವಿಚಾರ ಕುರಿತು ಮಾತನಾಡಿದ ಅವರು, ಇಂತಹ ಕೃತ್ಯಗಳನ್ನ ತಡೆಯದಿದ್ದರೆ ಸಮಾಜದಲ್ಲಿ ಬದುಕು ಕಷ್ಟವಾಗಲಿದೆ‌. ಎಲ್ಲಾ ಮುಸ್ಲಿಮರು ಭಯೋತ್ಪಾದಕರಲ್ಲ. ಆದರೆ ಭಯೋತ್ಪಾದಕರೆಲ್ಲರೂ ಮುಸ್ಲಿಮರಾಗಿದ್ದಾರೆ. ಅಬ್ದುಲ್ ಕಲಾಂ ನಂತವರನ್ನು ಇವರು ಆದರ್ಶವಾಗಿಟ್ಟುಕೊಂಡಿಲ್ಲ. ಸಮಾಜದಲ್ಲಿ ಒಳ್ಳೆಯ ಮುಸ್ಲಿಂಮರು ಸಹ ಇದ್ದಾರೆ. ಇಂತಹ ಕೃತ್ಯಗಳ ಬಗ್ಗೆ ಅವರು ಜಾಗೃತಿ ಮೂಡಿಸಬೇಕು. ಆಗ ದೇಶ, ಈ ಸಮಾಜ‌ ಉಳಿಯುತ್ತದೆ ಎಂದರು. ಇದನ್ನೂ ಓದಿ: ಕುಕ್ಕರ್‌ ಬಾಂಬರ್‌ ಶಾರೀಕ್‌ ಗುಣಮುಖನಾಗಲು 25 ದಿನ ಬೇಕು

    ಹಿಂದೂ ಸಮಾಜ ಕೂಡಾ ಎಚ್ಚರಿಕೆಯಿಂದ ಇರಬೇಕು. ಪೊಲೀಸ್ ಇಲಾಖೆ ಇಂತಹ ಪ್ರಕರಣಗಳ ಗಂಭೀರತೆ ಅರಿತು ಕೆಲಸ ಮಾಡಬೇಕು. ಇದಕ್ಕಾಗಿಯೇ ಒಂದು ಸೆಕ್ಷನ್ ಕೆಲಸ ಮಾಡಬೇಕು. ದೇಶಾದ್ಯಂತ ಇಂತಹ ಹಲವು ಭಯೋತ್ಪಾದಕ ಜಾಲಗಳಿವೆ. ಪ್ರವೀಣ್ ನೆಟ್ಟಾರು, ಹರ್ಷ ಸೇರಿ ಹಲವರ ಸರಣಿ ಹತ್ಯೆಯಾಗಿದೆ. ಹಾಗಾಗಿ ಮಂಗಳೂರಿನಲ್ಲಿ ಎನ್ಐಎ ಕಚೇರಿ ತೆರೆಯಬೇಕಿದೆ. ಇನ್ನು ಮುಂದೆ ಇಂತಹ ಘಟನೆಗಳಿಗೆ ಕುಮ್ಮಕ್ಕು ನೀಡುವ ಎಸ್‌ಡಿಪಿಐ ಸಂಘಟನೆ ಬ್ಯಾನ್ ಮಾಡುವ ಕುರಿತು ರಾಜಕೀಯ ಪಕ್ಷಗಳು ತೀರ್ಮಾನ ಮಾಡಬೇಕು. ರಾಜಕೀಯ ಕಾರಣದಿಂದ ಇಂತಹ ಸಂಘಟನೆಗೆ ಪ್ರೋತ್ಸಾಹ ನೀಡೋದು ತಪ್ಪು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಕುಕ್ಕರ್ ಬಾಂಬ್ ಬ್ಲಾಸ್ಟ್‌ – ತಮಿಳುನಾಡು, ಕೇರಳದಲ್ಲೂ ತನಿಖೆ ಚುರುಕು : ಪ್ರವೀಣ್ ಸೂದ್

    Live Tv
    [brid partner=56869869 player=32851 video=960834 autoplay=true]

  • ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡೋದು ರೂಢಿ: ಚಕ್ರವರ್ತಿ ಸೂಲಿಬೆಲೆ

    ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡೋದು ರೂಢಿ: ಚಕ್ರವರ್ತಿ ಸೂಲಿಬೆಲೆ

    ಬೆಂಗಳೂರು: ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡುವುದು ಸಹಜ ರೂಢಿಯಾಗಿದೆ ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarthy Sulibele)  ಹೇಳಿದ್ದಾರೆ.

    ಮಂಗಳೂರು (Mangaluru) ಬಾಂಬ್ ಬ್ಲಾಸ್ಟ್ ಪ್ರಕರಣ ಸಂಬಂಧ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ಮುಸ್ಲಿಂ ನಾಯಕರಿಗೆ ದಿನನಿತ್ಯ ಊಟ ತಿಂಡಿ ತಿಂದಂತೆ ಬ್ಲಾಸ್ಟ್ ಮಾಡುವುದು ಸಹಜ ರೂಢಿ. ಅವರ ರಕ್ತದಲ್ಲಿಯೇ ಇನ್ನೊಬ್ಬರನ್ನು ಕೊಲ್ಲುವುದು ಕಾಲಘಟ್ಟದಿಂದಲೂ ಬಂದಿದೆ. ಇಡೀ ಪಿಎಫ್‍ಐ (PFI) ತಾನು ಮುಂದಿನ ಒಂದು ವರ್ಷಗಳಲ್ಲಿ ಮಾಡಬೇಕಾದಂತ ಎಲ್ಲಾ ಯೋಜನೆಗಳನ್ನು ಮಾಡಲು ಸಿದ್ಧ ಮಾಡಿದ್ದಾಗ ಬ್ಯಾನ್ ಮಾಡುವ ಮೂಲಕ ಆಘಾತ ನೀಡಿದ್ದನ್ನು ಸಹಿಸಿಕೊಳ್ಳಲು ಆಗಲಿಲ್ಲ. ಆ ಕಾರಣಕ್ಕೆ ಈ ರೀತಿ ಕೃತ್ಯಗಳಲ್ಲಿ ಭಾಗಿಯಾಗುತ್ತಿದ್ದಾರೆ. ಜೊತೆಗೆ ಇಂತಹ ಪ್ರಕರಣಗಳಲ್ಲಿ ಸಿಕ್ಕಿಬಿದ್ದವರನ್ನು ಹಿಂದೂ ಭಯೋತ್ಪಾದಕರೆಂದು ಗುರುತಿಸುವ ಷಡ್ಯಂತ್ರ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

    ಹಿಂದೂಗಳ ಮಾನಸಿಕ ಸ್ಥಿತಿಯನ್ನು ಕುಗ್ಗಿಸುವಂತಹ ನಿಟ್ಟಿನಲ್ಲಿ ಇಂತಹ ಪ್ರಯತ್ನ ಮಾಡುತ್ತಿದ್ದಾರೆ ಎನ್ನುವುದು ಆತಂಕಕಾರಿಯಾಗಿದೆ. ಪ್ರೆಶರ್ ಕುಕ್ಕರ್ ಬಾಂಬ್‍ಗಿಂತ ಈ ಮನಸ್ಥಿತಿ ಕೆಟ್ಟದು. ಈ ಹಿಂದೆ ಮುಂಬೈ ದಾಳಿ ವೇಳೆಯೂ ಕಸಾಬ್ ಕೂಡ ಕೈಗೆ ದಾರ ಕಟ್ಟಿಕೊಂಡು ಹೀಗೆ ಬಂದಿದ್ದ. ಅವನನ್ನ ಬಂಧಿಸದಿದ್ದರೆ ಅವನನ್ನು ಹಿಂದೂ ಭಯೋತ್ಪಾದಕ ಎಂದು ಬಿಂಬಿಸುತ್ತಿದ್ದರು. ಅದರಂತೆ ಇವತ್ತು ಕೂಡ ಹಾಗೇ ಬಿಂಬಿಸುವ ಕೆಲಸವಾಗುತ್ತಿದೆ. ಪಿಎಫ್‍ಐ ಸಂಘಟನೆ ಬ್ಯಾನ್‌ನಿಂದ ಹೆದರಿದ್ದಾರೆ. ಪಿಎಫ್‍ಐನವರಿಗೆ ಬ್ಯಾನ್ ಜೀರ್ಣಿಸಿಕೊಳ್ಳಲು ಸಾಧ್ಯವಾಗಿಲ್ಲ. ಆ ಕಾರಣಕ್ಕಾಗಿಯೇ ಸದ್ಯ ಇರುವಂತ ನೆಟ್‍ವರ್ಕ್ ಮೂಲಕ ಬದುಕಿದ್ದೇವೆ ಎಂದು ತೋರಿಸಿಕೊಳ್ಳುವ ಪ್ರಯತ್ನವೇ ಇದಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಮಂಗಳೂರು ಬಾಂಬ್ ಬ್ಲಾಸ್ಟ್ ಕೇಸ್ – ನಾಳೆ ಮಂಗಳೂರಿಗೆ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ

    ಪ್ರಕರಣ ಆದಾಗ ಮಾತ್ರ ಬಂದು ಪೊಲೀಸರು ಡ್ರಾಮಾ ಮಾಡುವುದನ್ನು ಬಿಟ್ಟುಬಿಡಿ. ಇತರೆ ಪ್ರಕರಣಗಳಂತೆ ನಾಲ್ಕು ದಿನ ಓಡಾಡಿ 5ನೇ ದಿನಕ್ಕೆ ಪ್ರಕರಣ ಸತ್ತು ಹೋಗುವಂತೆ ಮಾಡಬೇಡಿ. ಎಲ್ಲವನ್ನೂ ಎನ್‍ಐಎಗೆ ಕೊಟ್ಟಿದ್ದೇವೆಂದು ಕೈ ತೊಳೆದುಕೊಳ್ಳಬೇಡಿ. ಹರ್ಷನ ಕೇಸ್, ಪ್ರವೀಣ್ ನೆಟ್ಟಾರು ಕೇಸ್‍ನಲ್ಲೂ ಹೀಗೆ ಮಾಡಿದ್ದೀರಾ. ಅಂದೇ ಸರಿಯಾದ ಜಾಡು ಹಿಡಿದು ಹೋಗಿದ್ದರೆ, ಈ ಪ್ರಕರಣವನ್ನು ಭೇದಿಸಬಹುದಿತ್ತು. ಎಲ್ಲವನ್ನು ಗಮನಿಸಿದರೆ ಫೇಲ್ಯೂರ್ ಪೊಲೀಸ್ ಇಲಾಖೆಯದ್ದೆ ಅನ್ನಿಸುತ್ತದೆ. ಈಗಾಲಾದರು ಪ್ರಕರಣದ ಹಿಂದೆ ಬಿದ್ದು, ಭೇದಿಸಿ ಕರ್ನಾಟಕವನ್ನು ಕಾಪಾಡಿ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೌದಿ ಅರೇಬಿಯಾದಲ್ಲಿ ಕತ್ತಿಯಿಂದ ಜನರ ಶಿರಚ್ಛೇದ – 10 ದಿನಗಳಲ್ಲಿ 12 ಜನರಿಗೆ ಮರಣದಂಡನೆ

    Live Tv
    [brid partner=56869869 player=32851 video=960834 autoplay=true]

  • ಕುಕ್ಕರ್ ಬಾಂಬ್ ಬ್ಲಾಸ್ಟ್ – ಮೈಸೂರಿನಲ್ಲಿ ಮನೆ ಮಾಲೀಕ, ಮೊಬೈಲ್ ಕೊಟ್ಟವರು ವಶಕ್ಕೆ

    ಕುಕ್ಕರ್ ಬಾಂಬ್ ಬ್ಲಾಸ್ಟ್ – ಮೈಸೂರಿನಲ್ಲಿ ಮನೆ ಮಾಲೀಕ, ಮೊಬೈಲ್ ಕೊಟ್ಟವರು ವಶಕ್ಕೆ

    ಮೈಸೂರು: ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ (Cooker Bomb Blast) ಪ್ರಕರಣ ಸಂಬಂಧ ಪೊಲೀಸರು ತನಿಖೆ ಮುಂದುವರಿಸಿದ್ದು, ಇದೀದ ಪ್ರಮುಖ ಆರೋಪಿ ಶಾರೀಕ್ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

    ಶಂಕಿತ ಉಗ್ರನಿಗೆ ಮೈಸೂರಿ (Mysuru) ನಲ್ಲಿ ರೂಂ ಬಾಡಿಗೆ ನೀಡಿದ್ದ ಮನೆ ಮಾಲೀಕನನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಂಕಿತ ಉಗ್ರನಿಗೆ ಮೊಬೈಲ್ (Mobile) ಗಳನ್ನು ನೀಡಿದ್ದ ಮೊಬೈಲ್ ಅಂಗಡಿ ಮಾಲೀಕ ಹಾಗೂ ಅಂಗಡಿಯಲ್ಲಿದ್ದ ಇನ್ನೊಬ್ಬ ನೌಕರ ಕೂಡ ವಶಕ್ಕೆ ಪಡೆಯಲಾಗಿದೆ. ಮೈಸೂರು ಪೊಲೀಸರು ಮೂವರನ್ನು ಮಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೈಸೂರು ನಗರ ಪೋಲಿಸ್ ಆಯುಕ್ತ ರಮೇಶ್ ಮಂಗಳೂರಿಗೆ ತೆರಳಿದ್ದಾರೆ. ಇದನ್ನೂ ಓದಿ: ಗ್ರಾಮ ದೈವಗಳೇ ನಮ್ಮ ಊರನ್ನು ಕಾಪಾಡಿವೆ- ಕುಕ್ಕರ್ ಬ್ಲಾಸ್ಟ್ ಆದ ಆಟೋ ಚಾಲಕನ ಸಹೋದರನ ಮಾತು

    ಇತ್ತ ಶಾರಿಕ್ (Shariq) ಜೊತೆಗೆ ನಿರಂತರ ಸಂಪರ್ಕ ಇದ್ದ ಮೂವರು ಶಂಕಿತರು ವಶಕ್ಕೆ ಪಡೆಯಲಾಗಿದ್ದು, ಏನೆಲ್ಲಾ ಮಾತನಾಡಿದ್ರು. ಬೇರೆ ಏನಾದ್ರು ವಿಚಾರಗಳು ತಿಳಿದಿವೆಯಾ ಎಂದು ವಿಚಾರಣೆ ನಡೆಸಲಗುತ್ತಿದೆ. ಶಾರಿಕ್ ಜೊತೆಗೆ ಯಾಕೆ ನಿರಂತರ ಸಂಪರ್ಕದಲ್ಲಿ ಇದ್ದರು. ಏನಾದ್ರು ಸಹಾಯ ಮಾಡಲಾಗಿದೆಯಾ…? ಹೀಗೆ ಬೇರೆ ಬೇರೆ ಆಯಾಮದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಶಿವಮೊಗ್ಗ ಕೇಸ್ ಹಾಗೂ ಮಂಗಳೂರು ಬ್ಲಾಸ್ಟ್ ಕೇಸ್ ಎರಡೂ ಇಂಟರ್ ಲಿಂಕ್ ಆಗಿದೆ. ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಮೂರು ಕಡೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ ಎಂದು ಪಬ್ಲಿಕ್ ಟಿವಿಗೆ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]