Tag: ಕುಕ್ಕೆ ಸುಬ್ರಮಣ್ಯ

  • ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಮಿತ್ ಶಾ ವಾಸ್ತವ್ಯ- ಕೆಲವೇ ಹೊತ್ತಲ್ಲಿ ವಿಶೇಷ ಪೂಜೆ

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಮಿತ್ ಶಾ ವಾಸ್ತವ್ಯ- ಕೆಲವೇ ಹೊತ್ತಲ್ಲಿ ವಿಶೇಷ ಪೂಜೆ

    ಮಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಿದ್ದಾರೆ. ಇದು ಬೆಳಗ್ಗೆ 8.15ಕ್ಕೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಅಮಿತ್ ಶಾ ವಿಶೇಷ ಪೂಜೆ ಸಲ್ಲಿಸಿದ್ದಾರೆ.

    102 ಡಿಗ್ರಿ ಜ್ವರದಿಂದ ಬಳಲುತ್ತಿರುವ ಅಮಿತ್ ಶಾ ಆದಿಶೇಷ ವಸತಿಗೃಹಲ್ಲಿ ಆರೋಗ್ಯ ತಪಾಸಣೆ ಮಾಡಿಸಿದ್ದಾರೆ. ಇಂದಿನ ಕಾರ್ಯಕ್ರಮಗಳಲ್ಲಿ ಕುಳಿತು ಮಾತನಾಡುವಂತೆ ವೈದ್ಯರು ಸಲಹೆ ನೀಡಿದ್ದಾರೆ.

    ಬೆಳಗ್ಗೆ 8.15ಕ್ಕೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ  9.30ಕ್ಕೆ ಸುಬ್ರಹ್ಮಣ್ಯದ ನವಶಕ್ತಿ ಸಮಾವೇಶ ಮತ್ತು ಆಯ್ದ ಕಾರ್ಯಕರ್ತರ ಜೊತೆ ಸಮಾಲೋಚನೆಯಲ್ಲಿ ಅಮಿತ್ ಶಾ ಪಾಲ್ಗೊಳ್ಳಲಿದ್ದಾರೆ. 10 ಗಂಟೆಗೆ ಪುತ್ತೂರಿನ ವಿವೇಕಾನಂದ ಕಾಲೇಜಿನಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ ಬಂಟ್ವಾಳದಲ್ಲಿ ನವಶಕ್ತಿ ಸಮಾವೇಶ ನಡೆಯಲಿದೆ.

    ಮಧ್ಯಾಹ್ನ 2.30ಕ್ಕೆ ಅಮಿತ್ ಶಾ ಸುರತ್ಕಲ್‍ನ ಕಾಟಿಪಳ್ಳದಲ್ಲಿ ದೀಪಕ್ ರಾವ್ ನಿವಾಸಕ್ಕೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಸುರತ್ಕಲ್‍ನ ಖಾಸಗಿ ಹೊಟೇಲ್‍ನಲ್ಲಿ ಸುದ್ದಿಗೋಷ್ಠಿ ನಡೆಸಲಿದ್ದಾರೆ. ನಂತರ ಸಂಜೆ ನಾಲ್ಕು ಗಂಟೆ ಹೊತ್ತಿಗೆ ಮಂಗಳೂರಿನಿಂದ ಅಮಿತ್ ಶಾ ನಿರ್ಗಮಿಸಲಿದ್ದಾರೆ. ಇದನ್ನೂ ಓದಿ: ಕರಾವಳಿಯಲ್ಲಿ ನಾಲ್ಕು ದಿನ ಅಮಿತ್ ಶಾ ಟೂರ್- ಬಿಜೆಪಿಯಲ್ಲಿ ಮಿಂಚಿನ ಸಂಚಲನ

  • ಸಾಲು ಸಾಲು ರಜೆ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂತು ಭಕ್ತ ಸಾಗರ

    ಸಾಲು ಸಾಲು ರಜೆ: ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿದು ಬಂತು ಭಕ್ತ ಸಾಗರ

    ಮಂಗಳೂರು: ನಿರಂತರವಾಗಿ ಸರ್ಕಾರಿ ರಜೆ ಇರುವ ಹಿನ್ನೆಲೆಯಲ್ಲಿ ದಕ್ಷಿಣ ಭಾರತದ ಪ್ರಸಿದ್ಧ ನಾಗಕ್ಷೇತ್ರವಾದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಜನ ಸಾಗರವೇ ಹರಿದು ಬಂದಿದೆ.

    ಕ್ರಿಸ್‍ಮಸ್ ಹಬ್ಬದ ಪ್ರಯುಕ್ತ ರಜೆ ಇರುವುದರಿಂದ ಶನಿವಾರದಿಂದಲೇ ಭಕ್ತರ ದಂಡು ಕ್ಷೇತ್ರದತ್ತ ಹರಿದು ಬರುತ್ತಿದ್ದು, ಲಕ್ಷಾಂತರ ಭಕ್ತರು ದೇಶದ ನಾನಾ ಕಡೆಗಳಿಂದ ಆಗಮಿಸುತ್ತಿದ್ದಾರೆ. ಸುಬ್ರಹ್ಮಣ್ಯನ ಆಲಯದ ತುಂಬಾ ಭಕ್ತರಿಂದ ತುಂಬಿ ಹೋಗಿದೆ. ಸೋಮವಾರ ಒಂದೇ ದಿನ ಒಂದು ಲಕ್ಷಕ್ಕಿಂತ ಹೆಚ್ಚು ಭಕ್ತರು ದೇವರ ದರ್ಶನ ಪಡೆದಿದ್ದಾರೆ.

    ದೇವಾಲಯದಲ್ಲಿ ಜನಸಂದಣಿ ಜಾಸ್ತಿಯಾಗಿರುವ ಹಿನ್ನೆಲೆಯಲ್ಲಿ ದೇವಸ್ಥಾನದ ಆಡಳಿತ ಮಂಡಳಿ ಭಕ್ತರಿಗೆ ತೊಂದರೆಯಾಗದಂತೆ ಸಕಲ ಕ್ರಮ ಕೈಗೊಂಡಿದೆ. ಸುಬ್ರಹ್ಮಣ್ಯನ ಸೇವೆಗಳನ್ನು ಯಥಾಸ್ಥಿತಿಯಲ್ಲಿಯೇ ಮಾಡಲಾಗುತ್ತಿದೆ. ದೇವಾಲಯದ ಆದಾಯದಲ್ಲೂ ಗಣನೀಯ ಸೇವೆಗಳು ಏರಿಕೆಯಾಗುವ ಸಾಧ್ಯತೆಯಿದ್ದು, ಜನವರಿ ಆರಂಭದವರೆಗೂ ಜನಸಂದಣಿಯಿರುವ ಸಾಧ್ಯತೆಗಳಿವೆ.